Site icon Vistara News

T20 World Cup | ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ರಾಹುಲ್​ ಬದಲು ಪಂತ್​ಗೆ ಅವಕಾಶ?

t20

ಪರ್ತ್​: ಟಿ20 ವಿಶ್ವ ಕಪ್​ನಲ್ಲಿ ಆರಂಭಿಕ ಬ್ಯಾಟರ್​ ಕೆ.ಎಲ್. ರಾಹುಲ್ ಅವರ ಸತತ ಬ್ಯಾಟಿಂಗ್​ ವೈಫಲ್ಯ ತಂಡಕ್ಕೆ ಹೊಸ ತಲೆನೋವು ತಂದಿದೆ. ಸೂಪರ್ 12 ಸುತ್ತಿನಲ್ಲಿ ಆಡಿರುವ ಎರಡು ಪಂದ್ಯಗಳಲ್ಲೂ ಎರಡಂಕಿ ಮೊತ್ತ ಕಲೆಹಾಕುವಲ್ಲಿ ವಿಫಲರಾಗಿದ್ದಾರೆ. ಆದ್ದರಿಂದ ಕಳಪೆ ಫಾರ್ಮ್​ನಿಂದ ಬಳಲುತ್ತಿರುವ ರಾಹುಲ್ ಬದಲು ರಿಷಭ್ ಪಂತ್​ಗೆ ತಂಡದಲ್ಲಿ ಅವಕಾಶ ನೀಡಬೇಕು ಎಂಬ ಮಾತು ಕೇಳಿಬರುತ್ತಿವೆ. ಆದರೆ ಈ ಪ್ರಶ್ನೆಗಳಿಗೆ ಬ್ಯಾಟಿಂಗ್ ಕೋಚ್ ವಿಕ್ರಮ್ ರಾಠೋಡ್‌ ಉತ್ತರ ನೀಡಿದ್ದಾರೆ.

ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದ ಮೊದಲು ಶನಿವಾರ ನಡೆದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಭಾರತ ಕ್ರಿಕಟ್​ ತಂಡದ ಬ್ಯಾಟಿಂಗ್ ಕೋಚ್ ವಿಕ್ರಮ್ ರಾಠೋಡ್‌​, “ಇಲ್ಲ ನಾವು ಅಂತಹ ಯಾವುದೇ ಯೋಚನೆಗಳನ್ನು ಇದುವರೆಗೆ ಮಾಡಿಲ್ಲ. ಎರಡು ಪಂದ್ಯಗಳಲ್ಲಿ ವಿಫಲರಾದ ಮಾತ್ರಕ್ಕೆ ರಾಹುಲ್​ ಅವರನ್ನು ತಂಡದಿಂದ ಕೈಬಿಡುವುದು ಸೂಕ್ತವಲ್ಲ. ರಾಹುಲ್ ನಿಜವಾಗಿಯೂ ಚೆನ್ನಾಗಿ ಬ್ಯಾಟಿಂಗ್ ಮಾಡುತ್ತಿದ್ದಾರೆ. ಇದನ್ನು ಅಭ್ಯಾಸ ಪಂದ್ಯಗಳಲ್ಲಿ ಅವರು ಸಾಬೀತುಪಡಿಸಿದ್ದಾರೆ. ಹೀಗಾಗಿ ನಾವು ಸದ್ಯಕ್ಕೆ ಅಂತಹ ಯಾವುದೇ ಬದಲಾವಣೆಗಳನ್ನು ಮಾಡುತ್ತಿಲ್ಲ” ಎಂದು ಹೇಳುವ ಮೂಲಕ ಎಲ್ಲ ಅನುಮಾನಗಳಿಗೂ ಉತ್ತರ ನೀಡಿದ್ದಾರೆ.

ಇದನ್ನೂ ಓದಿ | T20 World Cup | ತಂಡದ ಆಯ್ಕೆ ವಿಚಾರದಲ್ಲಿ ಬಾಬರ್​ ಅಜಮ್‌ ಜಾಣರಲ್ಲ; ವಾಸಿಂ ಅಕ್ರಂ ಆರೋಪ

Exit mobile version