Abhinav Bindra: 'ಒಲಿಂಪಿಕ್‌ ಆರ್ಡರ್‌’ ಗೌರವ ಸ್ವೀಕರಿಸಿದ ಅಭಿನವ್‌ ಬಿಂದ್ರಾ - Vistara News

ಕ್ರೀಡೆ

Abhinav Bindra: ‘ಒಲಿಂಪಿಕ್‌ ಆರ್ಡರ್‌’ ಗೌರವ ಸ್ವೀಕರಿಸಿದ ಅಭಿನವ್‌ ಬಿಂದ್ರಾ

Abhinav Bindra: 41 ವರ್ಷ ವಯಸ್ಸಿನ ಅಭಿನವ್ ಬಿಂದ್ರಾ 2008ರ ಬೀಜಿಂಗ್ ಕ್ರೀಡೆಗಳಲ್ಲಿ ಅವರು ಪುರುಷರ 10 ಮೀ. ಏರ್‌ ರೈಫಲ್‌ ಸ್ಪರ್ಧೆಯಲ್ಲಿ ವಿಜೇತರಾಗಿದ್ದರು. ಅವರು 2010 ರಿಂದ 2020ರವರೆಗೆ ಇಂಟರ್‌ನ್ಯಾಷನಲ್ ಶೂಟಿಂಗ್ ಸ್ಪೋರ್ಟ್ಸ್‌ ಫೆಡರೇಷನ್‌ನ ಅಥ್ಲೀಟ್ಸ್ ಸಮಿತಿ ಸದಸ್ಯರಾಗಿದ್ದರು.

VISTARANEWS.COM


on

Abhinav Bindra
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: 2008ರ ಬೀಜಿಂಗ್‌ ಒಲಿಂಪಿಕ್ಸ್​ ಕ್ರೀಡಾಕೂಟದಲ್ಲಿ 10 ಮೀಟರ್‌ ಏರ್‌ ರೈಫಲ್‌ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದು, ಭಾರತಕ್ಕೆ ಮೊದಲ ವೈಯಕ್ತಿಕ ಒಲಿಂಪಿಕ್‌ ಪದಕ ಗೆದ್ದ ಅಭಿನವ್‌ ಬಿಂದ್ರಾ ಅವರು ‘ಒಲಿಂಪಿಕ್‌ ಆರ್ಡರ್‌’ (Olympic Order) ಗೌರವ ಸ್ವೀಕರಿಸಿದ್ದಾರೆ. ಶನಿವಾರ ರಾತ್ರಿ ನಡೆದಿದ್ದ ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿಯ 142 ನೇ ಅಧಿವೇಶನದಲ್ಲಿ ಬಿಂದ್ರಾಗೆ ಈ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಒಲಿಂಪಿಕ್ ಆಂದೋಲನಕ್ಕೆ ನೀಡಿದ ಗಣನೀಯ ಕೊಡುಗೆಗಾಗಿ ಅವರಿಗೆ ಈ ಗೌರವ ಸಂದಿದೆ.

41 ವರ್ಷ ವಯಸ್ಸಿನ ಅಭಿನವ್ ಬಿಂದ್ರಾ 2008ರ ಬೀಜಿಂಗ್ ಕ್ರೀಡೆಗಳಲ್ಲಿ ಅವರು ಪುರುಷರ 10 ಮೀ. ಏರ್‌ ರೈಫಲ್‌ ಸ್ಪರ್ಧೆಯಲ್ಲಿ ವಿಜೇತರಾಗಿದ್ದರು. ಅವರು 2010 ರಿಂದ 2020ರವರೆಗೆ ಇಂಟರ್‌ನ್ಯಾಷನಲ್ ಶೂಟಿಂಗ್ ಸ್ಪೋರ್ಟ್ಸ್‌ ಫೆಡರೇಷನ್‌ನ ಅಥ್ಲೀಟ್ಸ್ ಸಮಿತಿ ಸದಸ್ಯರಾಗಿದ್ದರು. 2014ರಲ್ಲಿ ಅಧ್ಯಕ್ಷರೆ ವಹಿಸಿದ್ದರು. 2018ರಿಂದ ಅವರು ಐಒಸಿ ಅಥ್ಲೀಟ್ಸ್‌ ಕಮಿಷನ್ ಸದಸ್ಯರಾಗಿದ್ದಾರೆ.

ಒಲಿಂಪಿಕ್ಸ್​ಗೆ ಇಂದು ತೆರೆ


ಪ್ಯಾರಿಸ್​ನಲ್ಲಿ ನಡೆದ 33ನೇ ಆವೃತ್ತಿಯ ಬೇಸಗೆ ಒಲಿಂಪಿಕ್ಸ್​ಗೆ ಇಂದು(ಭಾನುವಾರ) ಅಧಿಕೃತವಾಗಿ ತೆರೆ ಬೀಳಲಿದೆ. ಕಳೆದ 17 ದಿನಗಳಿಂದ ನಡೆದ ಒಲಿಂಪಿಕ್ಸ್‌ ಕ್ರೀಡಾಕೂಟದ ಸಮಾರೋಪ ಸಮಾರಂಭ ಪ್ಯಾರಿಸ್‌ನ ಹೃದಯ ಭಾಗವಾದ “ಸ್ಟೇಡ್‌ ಡೆ ಫ್ರಾನ್ಸ್‌ ಸ್ಟೇಡಿಯಂ’ನಲ್ಲಿ ನಡೆಯಲಿದೆ. ಭಾರತೀಯ ಕಾಲಮಾನದಂತೆ ರಾತ್ರಿ 12.30ಕ್ಕೆ ಈ ಕಾರ್ಯಕ್ರಮ ಆರಂಭವಾಗಲಿದೆ. ಹಾಕಿ ಆಟಗಾರ ಪಿ.ಆರ್ ಶ್ರೀಜೇಶ್(PR Sreejesh)​ ಮತ್ತು ಅವಳಿ ಕಂಚಿನ ಪದಕ ವಿಜೇತೆ ಶೂಟರ್​ ಮನು ಭಾಕರ್​(Manu Bhaker) ಭಾರದ ಧ್ವಜಧಾರಿಗಳಾಗಿ( India’s Co-Flag Bearer) ಪಥಸಂಚಲನದಲ್ಲಿ ಸಾಗಲಿದ್ದಾರೆ. ಭಾರತ ಈ ಬಾರಿ ಒಟ್ಟು 6 ಪದಕಗಳೊಂದಿಗೆ ತನ್ನ ಅಭಿಯಾನ ಮುಗಿಸಿತು. 1 ಬೆಳ್ಳಿ ಮತ್ತು 5 ಕಂಚು ಒಳಗೊಂಡಿದೆ. 

ಇದನ್ನೂ ಓದಿ Paris Olympics: ಒಂದೇ ವಾರಕ್ಕೆ ಬಣ್ಣ ಕಳೆದುಕೊಂಡ ​ಒಲಿಂಪಿಕ್ಸ್​ ಪದಕ!

ಸಮಾರೋಪ ಸಮಾರಂಭದಲ್ಲಿ ಅಮೆರಿಕದ ಖ್ಯಾತ ನಟ ಹಾಗೂ ನಿರ್ಮಾಪಕ ಟಾಮ್‌ ಕ್ರುಯಿಸ್‌ ಇದರಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ಮುಂದಿನ ಒಲಿಂಪಿಕ್ಸ್‌ ಕ್ರೀಡಾಕೂಟ ಅಮೆರಿಕದ ಲಾಸ್‌ ಏಂಜಲೀಸ್‌ನಲ್ಲಿ ನಡೆಯುವುದರಿಂದ ಹಾಲಿವುಡ್‌ ತಂಡವೊಂದು ಪಾಲ್ಗೊಳ್ಳುವುದಾಗಿ ವರದಿಯಾಗಿದೆ. ಫ್ರೆಂಚ್‌ ಮತ್ತು ಅಮೆರಿಕನ್‌ ಕಲಾವಿದರು ಜಂಟಿಯಾಗಿ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ.

ಮುಂದಿನ ಒಲಿಂಪಿಕ್‌ ಆತಿಥ್ಯ ವಹಿಸಿದ ದೇಶಕ್ಕೆ ಒಲಿಂಪಿಕ್​​ ಧ್ವಜವನ್ನು ಹಸ್ತಾಂತರಿಸುವ ಪ್ರಕ್ರಿಯೆ ನಡೆಯಲಿದೆ. ಈ ಸಂದರ್ಭದಲ್ಲಿ ಪ್ಯಾರಿಸ್‌ ಹಾಗೂ ಲಾಸ್‌ ಏಂಜಲೀಸ್‌ ನಗರಗಳ ಮೇಯರ್‌ಗಳು ಉಪಸ್ಥಿತರಿರುತ್ತಾರೆ. ಅಂತಾರಾಷ್ಟ್ರೀಯ ಒಲಿಂಪಿಕ್‌ ಸಮಿತಿಯ ಅಧ್ಯಕ್ಷ ಥಾಮಸ್‌ ಬಾಶ್‌ ಅವರು ಪ್ಯಾರಿಸ್‌ ಒಲಿಂಪಿಕ್ಸ್‌ ಮುಕ್ತಾಯವನ್ನು ಘೋಷಿಸಲಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Sarabjot Singh : ಹರಿಯಾಣ ಸರ್ಕಾರದ ಉದ್ಯೋಗದ ಆಫರ್​ ತಿರಸ್ಕರಿಸಿದ ಒಲಿಂಪಿಕ್ಸ್ ಕಂಚಿನ ಪದಕ ವಿಜೇತ ಸರಬ್ಜೋತ್​ ಸಿಂಗ್​​

Sarabjot Singh : ಸರಬ್ಜೋತ್ ಅವರು ಯೋಗ್ಯ ಕೆಲಸವನ್ನು ಪಡೆಯಬೇಕು ಎಂದು ಅವರ ಕುಟುಂಬ ಭಯಸಿದ್ದರೂ. ಈ ಸಮಯದಲ್ಲಿ ಶೂಟಿಂಗ್ ತನ್ನ ಮೊದಲ ಆದ್ಯತೆ ಎಂದು ಯುವ ಶೂಟರ್​ ಹೇಳಿದ್ದಾರೆ. “ಕೆಲಸ ಉತ್ತಮವಾಗಿದೆ, ಆದರೆ ನಾನು ಈಗ ಅದನ್ನು ತೆಗೆದುಕೊಳ್ಳುವುದಿಲ್ಲ. ನಾನು ಮೊದಲು ನನ್ನ ಶೂಟಿಂಗ್ ಮೇಲೆ ಗಮನ ಹರಿಸಲು ಬಯಸುತ್ತೇನೆ” ಎಂದು ಸರಬ್ಜೋತ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

VISTARANEWS.COM


on

Sarabjot Singh
Koo

ಬೆಂಗಳೂರು : ಪ್ಯಾರಿಸ್ ಒಲಿಂಪಿಕ್ ಕ್ರೀಡಾಕೂಟದಲ್ಲಿ ಶೂಟಿಂಗ್​ ಮಿಶ್ರ ತಂಡ 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಮನು ಭಾಕರ್ ಅವರೊಂದಿಗೆ ಕಂಚಿನ ಪದಕ ಗೆದ್ದ ಭಾರತದ ಶೂಟರ್ ಸರಬ್ಜೋತ್ ಸಿಂಗ್ (Sarabjot Singh) ಅವರು ದೇಶ ವ್ಯಾಪಿ ಖ್ಯಾತಿ ಪಡೆದುಕೊಂಡಿದ್ದಾರೆ. ತಮ್ಮ ರಾಜ್ಯದ ಕ್ರೀಡಾ ಸಾಧಕರಿಗೆ ಉದ್ಯೋಗಳನ್ನು ನೀಡುವ ಪರಿಪಾಠದಂತೆ ಹರಿಯಾಣ ಸರ್ಕಾರ ಅವರಿಗೆ ಉದ್ಯೋಗದ ಭರವಸೆ ಕೊಟ್ಟಿತ್ತು. ಆದರೆ ಅವರು ಅದನ್ನು ತಿರಸ್ಕರಿಸಲು ನಿರ್ಧರಿಸಿದ್ದಾರೆ. ಭಾರತವನ್ನು ಪ್ರತಿನಿಧಿಸುವ ಅನೇಕ ಕ್ರೀಡಾಪಟುಗಳು ತಮ್ಮ ಪ್ರಯಾಣದಲ್ಲಿ ಬೆಂಬಲ ಮತ್ತು ಆರ್ಥಿಕ ಸಹಾಯದ ಕೊರತೆಯ ಬಗ್ಗೆ ದೂರು ನೀಡುತ್ತಿರುವ ನಡುವೆ ಸರಬ್ಜೋತ್, ತಮ್ಮ ಗುರಿ ದೊಡ್ಡದಿದೆ ಎಂದು ಹೇಳುವ ಮೂಲಕ ಸರ್ಕಾರಿ ಉದ್ಯೋಗವನ್ನು ಬೇಡ ಎಂದಿದ್ದಾರೆ.

ಸರಬ್ಜೋತ್ ಅವರು ಯೋಗ್ಯ ಕೆಲಸವನ್ನು ಪಡೆಯಬೇಕು ಎಂದು ಅವರ ಕುಟುಂಬ ಭಯಸಿದ್ದರೂ. ಈ ಸಮಯದಲ್ಲಿ ಶೂಟಿಂಗ್ ತನ್ನ ಮೊದಲ ಆದ್ಯತೆ ಎಂದು ಯುವ ಶೂಟರ್​ ಹೇಳಿದ್ದಾರೆ. “ಕೆಲಸ ಉತ್ತಮವಾಗಿದೆ, ಆದರೆ ನಾನು ಈಗ ಅದನ್ನು ತೆಗೆದುಕೊಳ್ಳುವುದಿಲ್ಲ. ನಾನು ಮೊದಲು ನನ್ನ ಶೂಟಿಂಗ್ ಮೇಲೆ ಗಮನ ಹರಿಸಲು ಬಯಸುತ್ತೇನೆ” ಎಂದು ಸರಬ್ಜೋತ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

“ನನ್ನ ಕುಟುಂಬವು ನನ್ನಲ್ಲಿ ಯೋಗ್ಯ ಕೆಲಸವನ್ನು ಪಡೆಯುವಂತೆ ಹೇಳುತ್ತಿದೆ. ಆದರೆ ನಾನು ಶೂಟಿಂಗ್​ನಲ್ಲಿಯೇ ಮುಂದುವರಿಸಲು ಬಯಸುತ್ತೇನೆ. ನಾನು ತೆಗೆದುಕೊಂಡ ನಿರ್ಧಾರಗಳಿಗೆ ವಿರುದ್ಧವಾಗಿ ಹೋಗಲು ನಾನು ಬಯಸುವುದಿಲ್ಲ, ಆದ್ದರಿಂದ ನಾನು ಈಗ ಕೆಲಸ ತೆಗೆದುಕೊಳ್ಳಲು ಸಾಧ್ಯವಿಲ್ಲ” ಎಂದು ಅವರು ಸ್ಪಷ್ಟನೆ ನೀಡಿದ್ದಾರೆ.

ಪ್ಯಾರಿಸ್ ಕ್ರೀಡಾಕೂಟದಲ್ಲಿ ಸರಬ್ಜೋತ್ ಮತ್ತು ಮನು ಒಟ್ಟಾಗಿ ಒಲಿಂಪಿಕ್ಸ್ ಮಿಶ್ರ ತಂಡ ಕಂಚಿನ ಪದಕವನ್ನು ಗೆದ್ದರು ಆದರೆ ಮೂರನೇ ಸ್ಥಾನವು ಅವರಿಗೆ ಕಡಿಮೆ ಎಂದು ಎನಿಸಿದೆ.

ಇದನ್ನೂ ಓದಿ: Paris Olympics 2024 : ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಭಾರತದ ಸ್ಪರ್ಧಿಗಳ ಹೋರಾಟ ಮುಕ್ತಾಯ; ಈ ಬಾರಿ ಆರು ಪದಕಗಳು ಮಾತ್ರ

“ನಾನು ಇನ್ನೂ ನನ್ನ ಮುಖ್ಯ ಗುರಿ ಸಾಧಿಸಿಲ್ಲ. ನಾನು 2028 ರಲ್ಲಿ ನನ್ನ ಮುಖ್ಯ ಗುರಿಯನ್ನು ಪೂರ್ಣಗೊಳಿಸುತ್ತೇನೆ. ಪ್ಯಾರಿಸ್ ನಲ್ಲಿ ನನ್ನ ವೈಯಕ್ತಿಕ ಅತ್ಯುತ್ತಮವಾದುದನ್ನು ನೀಡುತ್ತೇನೆ ಎಂದು ನಾನು ನನ್ನ ವೈಯಕ್ತಿಕ ಡೈರಿಯಲ್ಲಿ ಬರೆಯುತ್ತಿದ್ದೆ. ಆದಾಗ್ಯೂ, ನಾನು ಇನ್ನೂ ನನ್ನ ವೈಯಕ್ತಿಕ ಅತ್ಯುತ್ತಮವಾದದ್ದನ್ನು ನೀಡಿಲ್ಲ. 2028ರಲ್ಲಿ ಚಿನ್ನ ಗೆಲ್ಲುವ ಗುರಿ ಹೊಂದಿದ್ದೇನೆ’ ಎಂದು ಸರಬ್ಜೋತ್ ಇಂಡಿಯಾ ಟುಡೇಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.

ಕೇವಲ 22 ವರ್ಷದ ಸರಬ್ಜೋತ್ ಈಗಾಗಲೇ 2028ರ ಲಾಸ್ ಏಂಜಲೀಸ್ ಒಲಿಂಪಿಕ್ ಕ್ರೀಡಾಕೂಟದ ಮೇಲೆ ಕಣ್ಣಿಟ್ಟಿದ್ದಾರೆ. ಪ್ಯಾರಿಸ್​​ನಲ್ಲಿ ವೈಯಕ್ತಿಕ ಪದಕ ಗೆಲ್ಲಲು ವಿಫಲವಾದ ಯುವ ಪಿಸ್ತೂಲ್ ಶೂಟರ್ ನಾಲ್ಕು ವರ್ಷಗಳ ಅವಧಿಯಲ್ಲಿ ಚಿನ್ನದ ಪದಕಕ್ಕಿಂತ ಕಡಿಮೆಯಿಲ್ಲದ ಗುರಿಯನ್ನು ಹೊಂದಿದ್ದಾರೆ.

Continue Reading

ಕ್ರೀಡೆ

Mohammed Siraj: ಕ್ರಿಕೆಟಿಗ ಸಿರಾಜ್‌, ಬಾಕ್ಸರ್​ ನಿಖತ್ ಜರೀನ್‌, ಶೂಟರ್​ ಇಶಾ ಸಿಂಗ್​ಗೆ ನಿವೇಶನ ಮಂಜೂರು ಮಾಡಿದ ತೆಲಂಗಾಣ ಸರ್ಕಾರ

Mohammed Siraj: ನಿಖತ್​ ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಮಹಿಳೆಯರ 50 ಕೆಜಿ ಬಾಕ್ಸಿಂಗ್​(Paris Olympics boxing) ವಿಭಾಗದ ಪ್ರೀ ಕ್ವಾರ್ಟರ್​ ಫೈನಲ್​ ಪಂದ್ಯದಲ್ಲಿ ಸೋಲು ಕಂಡು ತಮ್ಮ ಅಭಿಯಾನವನ್ನು ಮುಗಿಸಿದ್ದರು.

VISTARANEWS.COM


on

Mohammed Siraj
Koo

ಹೈದರಾಬಾದ್​: ಟೀಮ್​ ಇಂಡಿಯಾದ ವೇಗದ ಬೌಲರ್​ ಮೊಹಮ್ಮದ್​ ಸಿರಾಜ್​ಗೆ ತೆಲಂಗಾಣ ಸರಕಾರವು ನಿವೇಶನ ಮಂಜೂರು ಮಾಡಿದೆ. ಜುಬಿಲಿ ಹಿಲ್ಸ್‌ನ ರಸ್ತೆ ಸಂಖ್ಯೆ 78 ರಲ್ಲಿ 600 ಚದರ ಭೂಮಿಯನ್ನು ಮಂಜೂರು ಮಾಡುವ ಆದೇಶವನ್ನು ತೆಲಂಗಾಣ ಸರ್ಕಾರ ಬಿಡುಗಡೆ ಮಾಡಿದೆ.

ಸಿರಾಜ್ ಅವರೊಂದಿಗೆ, ಶೂಟರ್ ಇಶಾ ಸಿಂಗ್ ಮತ್ತು ಎರಡು ಬಾರಿ ವಿಶ್ವ ಬಾಕ್ಸಿಂಗ್ ಚಾಂಪಿಯನ್ ನಿಖತ್ ಜರೀನ್‌(Nikhat Zareen) ಅವರಿಗೂ ಹೈದರಾಬಾದ್​ನಲ್ಲಿ ತಲಾ 600 ಚದರಗಳಷ್ಟು ಮನೆ ನಿವೇಶನಗಳನ್ನು ನೀಡುವುದಾಗಿ ಸರ್ಕಾರ ಘೋಷಿಸಿದೆ. ಜುಲೈ 31 ರಂದು ಮುಖ್ಯಮಂತ್ರಿ ಎ.ರೇವಂತ್ ರೆಡ್ಡಿ(Chief Minister A. Revanth Reddy) ಅವರು ಸಿರಾಜ್ ಅವರಿಗೆ ನಗರದಲ್ಲಿ ಮನೆ ನಿವೇಶನ ಮಂಜೂರು ಮಾಡುವುದಾಗಿ ಘೋಷಿಸಿದ್ದರು. ಸಿರಾಜ್ ಮತ್ತು ನಿಖತ್​ಗೆ ಕ್ರೀಡೆಗೆ ನೀಡಿದ ಕೊಡುಗೆಗಾಗಿ ಸರ್ಕಾರವು ಈಗಾಗಲೇ ಗ್ರೂಪ್-1 ಉದ್ಯೋಗಗಳನ್ನು ನೀಡಿದೆ.

ನಿಖತ್​ ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಮಹಿಳೆಯರ 50 ಕೆಜಿ ಬಾಕ್ಸಿಂಗ್​(Paris Olympics boxing) ವಿಭಾಗದ ಪ್ರೀ ಕ್ವಾರ್ಟರ್​ ಫೈನಲ್​ ಪಂದ್ಯದಲ್ಲಿ ಸೋಲು ಕಂಡು ತಮ್ಮ ಅಭಿಯಾನವನ್ನು ಮುಗಿಸಿದ್ದರು. ಮೊಹಮ್ಮದ್ ಸಿರಾಜ್ ಟಿ20 ವಿಶ್ವಕಪ್​​ ಗೆದ್ದ ತಂಡದ ಸದಸ್ಯರಾಗಿದ್ದರು. ಒಟ್ಟು ಮೂರು ಪಂದ್ಯಗಳನ್ನು ಆಡಿದ್ದರು.

ಇದನ್ನೂ ಓದಿ Mohammed Siraj : ಲಂಕಾ ವಿರುದ್ಧದ ಪಂದ್ಯದಲ್ಲಿ ಹೊಸ ದಾಖಲೆ ಬರೆದ ಮೊಹಮ್ಮದ್​ ಸಿರಾಜ್​

ಪಂದ್ಯ ಶ್ರೇಷ್ಠ ಪ್ರಶಸ್ತಿಯ ಚೆಕ್​ ದಾನ ಮಾಡಿದ್ದ ಸಿರಾಜ್​


ಶ್ರೀಲಂಕಾ ತಂಡದ ವಿರುದ್ಧ ಕಳೆದ ವರ್ಷ ನಡೆದ ಏಷ್ಯಾ ಕಪ್ 2023 ಫೈನಲ್ ಪಂದ್ಯದಲ್ಲಿ ಅಸಾಧಾರಣ ಬೌಲಿಂಗ್ ಸಾಧನೆ ಮಾಡಿದ್ದ ಮೊಹಮ್ಮದ್ ಸಿರಾಜ್ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಅರ್ಹವಾಗಿದ್ದರು. ಅವರಿಗೆ 5000 ಡಾಲರ್ (4,15,451.75 ರೂ.) ಬಹುಮಾನ ನೀಡಲಾಗಿತ್ತು. ಆದರೆ ಅವರು ಸ್ಥಳದಲ್ಲೇ ಆ ಬಹುಮಾನವನ್ನು ಮೈದಾನದ ಸಿಬ್ಬಂದಿಗೆ (ಗ್ರೌಂಡ್​ ಸ್ಟಾಪ್​) ಅರ್ಪಿಸಿ ಮನಗೆದ್ದಿದ್ದರು.

ಮೊಹಮ್ಮದ್​ ಸಿರಾಜ್​ ಟೀಮ್​ ಇಂಡಿಯಾ ಪರ ಕೆಲ ವರ್ಷಗಳಿಂದ ಪ್ರದರ್ಶನ ನೀಡುತ್ತಲೇ ಬಂದಿದ್ದಾರೆ. ಬೌಲಿಂಗ್​ ಶ್ರೇಯಾಂಕದಲ್ಲಿಯೂ ಅಗ್ರಸ್ಥಾನ ಪಡೆದಿದ್ದಾರೆ. ಸದ್ಯ ಅವರು ತಂಡದ ಪ್ರಮುಖ ಬೌಲರ್​ಗಳಲ್ಲಿ ಒಬ್ಬರಾಗಿ ಗುರುತಿಸಿಕೊಂಡಿದ್ದಾರೆ. ಕಳೆದ ವರ್ಷ ನಡೆದ ಏಕದಿನ ವಿಶ್ವಕಪ್​ ಟೂರ್ನಿಯಲ್ಲಿಯೂ ಗಮನಾರ್ಹ ಪ್ರದರ್ಶನ ತೋರಿದ್ದರು. ಫೈನಲ್​ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋತಾಗ ಬೇಸರಲ್ಲಿ ಸಿರಾಜ್​ ಮೈದಾನದಲ್ಲೇ ಬಿಕ್ಕಿ ಬಿಕ್ಕಿ ಅತ್ತಿದ್ದರು. ಬಳಿಕ ಅವರನ್ನು ತಂಡದ ನಾಯಕ ರೋಹಿತ್​ ಶರ್ಮ ಮತ್ತು ಸಹ ಆಟಗಾರ ಜಸ್​ಪ್ರೀತ್​ ಬುಮ್ರಾ ಸಮಾಧಾನಪಡಿಸಿದ್ದರು.

Continue Reading

ಕ್ರೀಡೆ

Shakib Al Hasan: ಸೂಪರ್‌ ಓವರ್‌ ಆಡಲು ನಿರಾಕರಿಸಿದ ಶಕಿಬ್; ಟೂನಿಯಿಂದಲೇ ಹೊರಬಿದ್ದ ತಂಡ

Shakib Al Hasan: ಹಿಂದೊಮ್ಮೆ ಜಾಹೀರಾತು ಪ್ರಚಾರದ ಕಾರ್ಯಕ್ರಮವೊಂದಕ್ಕೆ ತೆರಳುತ್ತಿದ್ದ ವೇಳೆ ಶಕಿಬ್‌ ಸಾಗುವ ಮಾರ್ಗದಲ್ಲಿ ಅನೇಕ ಕ್ರೀಡಾಭಿಮಾನಿಗಳು ಅವರೊಂದಿಗೆ ಫೋಟೋ ತೆಗೆಸಿಕೊಳ್ಳಲು ಮುಂದಾಗಿದ್ದರು. ಈ ವೇಳೆ ಅಭಿಮಾನಿಯೊಬ್ಬ ಗುಂಪಿನ ಮಧ್ಯೆಯಿಂದ ಫೋಟೊ ತೆಗೆಯಲು ಮುಂದಾಗಿದ್ದ ಇದರಿಂದ ಸಿಟ್ಟಿಗೆದ್ದ ಶಕೀಬ್​ತಲೆಯಿಂದ ಕ್ಯಾಪ್​ ಎಳೆದು ಇದೇ ಕ್ಯಾಪ್‌ನಿಂದ ಒಂದೆರಡು ಬಾರಿ ಥಳಿಸಿದ್ದರು. 

VISTARANEWS.COM


on

Shakib Al Hasan
Koo

ಢಾಕಾ: ಬಾಂಗ್ಲಾದೇಶದ ಕ್ರಿಕೆಟ್​ ತಂಡದ ಹಿರಿಯ ಆಲ್​ರೌಂಡರ್​ ಶಕಿಬ್ ಅಲ್ ಹಸನ್‌(Shakib Al Hasan) ತಾಳ್ಮೆ ಕಳೆದುಕೊಂಡು, ಅಂಪೈರ್​ಗಳ ಜತೆ ಮತ್ತು ಅಭಿಮಾನಿಗಳ ನಡುವೆ ಈಗಾಗಲೇ ಹಲವು ಬಾರಿ ಕಿರಿಕ್​ ಮಾಡಿಕೊಂಡು ಸುದ್ದಿಯಾಗಿದ್ದರು. ಇದೀಗ ಗ್ಲೋಬಲ್ ಟಿ20 ಲೀಗ್ ಟೂರ್ನಿಯಲ್ಲಿ ಸೂಪರ್ ಓವರ್(Shakib Al Hasan super over) ಆಡಲು ನಿರಾಕರಿಸಿ ಸುದ್ದಿಯಾಗಿದ್ದಾರೆ. ಇವರ ಈ ಕೆಟ್ಟ ನಿರ್ಧಾರದಿಂದ ತಂಡ ಟೂರ್ನಿಯಿಂದಲೇ ಹೊರಬಿದ್ದಿದೆ.

ಎಲಿಮಿನೇಟರ್ ಪಂದ್ಯವಾದ ಬಾಂಗ್ಲಾ ಟೈಗರ್ಸ್ ಮತ್ತು ಟೊರೊಂಟೊ ನ್ಯಾಷನಲ್ಸ್ ನಡುವಣ ಪಂದ್ಯಕ್ಕೆ ಮಳೆ ಅಡ್ಡಿಪಡಿಸಿದ ಕಾರಣ ಫಲಿತಾಂಶ ನಿರ್ಧರಿಸಲು ಆಯೋಜಕರು ಸೂಪರ್ ಓವರ್ ಆಡಲು ನಿರ್ಧರಿಸಿದ್ದರು. ಆದರೆ ಬಾಂಗ್ಲಾ ಟೈಗರ್ಸ್ ತಂಡದ ನಾಯಕ ಶಕಿಬ್‌ ಇದಕ್ಕೆ ಒಪ್ಪಿಗೆ ಸೂಚಿಸಲಿಲ್ಲ. ಕನಿಷ್ಟ 5 ಓವರ್‌ ಆಡಿಸಬೇಕು ಎಂದು ಹಠ ಹಿಡಿದರು. ಇದಕ್ಕೆ ಒಪ್ಪದ ಆಯೋಜಕರು ಪಂದ್ಯವನ್ನೇ ರದ್ದುಗೊಳಿಸಿದರು. ಈ ಪರಿಣಾಮ ಬಾಂಗ್ಲಾ ಟಗರ್ಸ್‌ ತಂಡ ಟೂನಿಯಿಂದಲೇ ಹೊರಬಿದ್ದಿರು. ಟೊರೊಂಟೊ ನ್ಯಾಷನಲ್ಸ್ ತಂಡ ಕ್ವಾಲಿಫೈಯರ್-2 ಗೆ ಅರ್ಹತೆ ಪಡೆದುಕೊಂಡಿತು. ಶಕೀಬ್ ಅಲ್ ಹಸನ್ ಅವರ ಈ ಕೆಟ್ಟ ನಿರ್ಧಾರ ಅನಗತ್ಯವಾಗಿ ತಂಡದ ಹಿನ್ನಡೆಗೆ ಕಾರಣವಾಯಿತು.

ಕಳೆದ ವರ್ಷ ನಡೆದಿದ್ದ ಏಕದಿನ ವಿಶ್ವಕಪ್​ ಬಳಿಕ ಕಣ್ಣಿನ ದೃಷ್ಟಿ ಸಮಸ್ಯೆಗೆ ಒಳಗಾಗಿದ್ದ ಶಕೀಬ್​ ಶಸ್ತ್ರಚಿಕಿತ್ಸೆಗೆ ಒಳಗಾಗಿ ಬಹುದಿನಗಳ ವಿಶ್ರಾಂತಿ ಪಡೆದಿದ್ದರು. ಇದೇ ಜೂನ್​ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್​ನಲ್ಲಿ ಆಡುವ ಸಲುವಾಗಿ ಢಾಕಾ ಪ್ರೀಮಿಯರ್ ಲೀಗ್​ನಲ್ಲಿ ಆಡಲಿಳಿದು ವಿಶ್ವಕಪ್‌ ಆಡಿದ್ದರು.

ಇದನ್ನೂ ಓದಿ Shakib Al Hasan : ನಿವೃತ್ತಿಯಾಗು ಶಕಿಬ್…, ಬಾಂಗ್ಲಾ ಮಾಜಿ ನಾಯಕನ ಮೇಲೆ ಮತ್ತೆ ಗುಡುಗಿದ ಸೆಹ್ವಾಗ್​

ಹಲವು ಬಾರಿ ಅವರು ಮೈದಾನದಲ್ಲಿ ತಮ್ಮ ಕೋಪವನ್ನು ವ್ಯಕ್ತಪಡಿಸಿದ್ದಾರೆ. ಅದರಲ್ಲೂ ಅಂಪೈರ್‌ ಅವರೊಂದಿಗೆ ಶಕಿಬ್‌ ಹಲವು ಬಾರಿ ವಾಗ್ವಾದಕ್ಕೆ ಇಳಿದ ಹಲವು ನಿದರ್ಶನಗಳಿವೆ. ಕಳೆದ ಬಾರಿಯ ಬಾಂಗ್ಲಾ ಪ್ರೀಮಿಯರ್​ ಲೀಗ್​ನಲ್ಲಿ ಅಂಪೈರ್​ ಅವರು ಔಟ್​ ನೀಡಿಲ್ಲ ಎಂಬ ಕಾರಣಕ್ಕೆ ಶಬಿಕ್​ ವಿಕೆಟ್​ಗೆ ಕಾಲಿನಿಂದ ಒದ್ದು, ಅಭಿಮಾನಿಗೆ ಕ್ಯಾಪ್​ನಿಂದ ಹಲ್ಲೆ ಮಾಡಿದ ವಿಡಿಯೊಗಳು ವೈರಲ್‌ ಆಗಿತ್ತು.

ಹಿಂದೊಮ್ಮೆ ಜಾಹೀರಾತು ಪ್ರಚಾರದ ಕಾರ್ಯಕ್ರಮವೊಂದಕ್ಕೆ ತೆರಳುತ್ತಿದ್ದ ವೇಳೆ ಶಕಿಬ್‌ ಸಾಗುವ ಮಾರ್ಗದಲ್ಲಿ ಅನೇಕ ಕ್ರೀಡಾಭಿಮಾನಿಗಳು ಅವರೊಂದಿಗೆ ಫೋಟೋ ತೆಗೆಸಿಕೊಳ್ಳಲು ಮುಂದಾಗಿದ್ದರು. ಈ ವೇಳೆ ಅಭಿಮಾನಿಯೊಬ್ಬ ಗುಂಪಿನ ಮಧ್ಯೆಯಿಂದ ಫೋಟೊ ತೆಗೆಯಲು ಮುಂದಾಗಿದ್ದ ಇದರಿಂದ ಸಿಟ್ಟಿಗೆದ್ದ ಶಕೀಬ್​ತಲೆಯಿಂದ ಕ್ಯಾಪ್​ ಎಳೆದು ಇದೇ ಕ್ಯಾಪ್‌ನಿಂದ ಒಂದೆರಡು ಬಾರಿ ಥಳಿಸಿದ್ದರು. 

Continue Reading

ಕ್ರೀಡೆ

Maharaja Trophy schedule: ಮಹಾರಾಜ ಟ್ರೋಫಿಯ ವೇಳಾಪಟ್ಟಿ ಪ್ರಕಟ; ಆಗಸ್ಟ್​ 15ರಿಂದ ಟೂರ್ನಿ ಆರಂಭ

Maharaja Trophy schedule: ಹಾಲಿ ಚಾಂಪಿಯನ್ ಹುಬ್ಬಳ್ಳಿ ಟೈಗರ್ಸ್, ರನ್ನರ್ಸ್ ಅಪ್ ಮೈಸೂರು ವಾರಿಯರ್ಸ್, ಗುಲ್ಬರ್ಗ ಮಿಸ್ಟಿಕ್ಸ್, ಬೆಂಗಳೂರು ಬ್ಲಾಸ್ಟರ್ಸ್, ಮಂಗಳೂರು ಡ್ರ್ಯಾಗನ್ಸ್ ಮತ್ತು ಶಿವಮೊಗ್ಗ ಲಯನ್ಸ್ ತಂಡಗಳು ಟೂರ್ನಿಯಲ್ಲಿ ಆಡಲಿವೆ.

VISTARANEWS.COM


on

Maharaja Trophy schedule
Koo

ಬೆಂಗಳೂರು: ಇದೇ ಆಗಸ್ಟ್‌ 15ರಿಂದ ಆರಂಭವಾಗಲಿರುವ ಮೂರನೇ ಆವೃತ್ತಿಯ ಮಹಾರಾಜ ಟ್ರೋಫಿ(Maharaja Trophy) ಕ್ರಿಕೆಟ್ ಟೂರ್ನಿಯ ವೇಳಾಪಟ್ಟಿ(Maharaja Trophy schedule) ಪ್ರಕಟಗೊಂಡಿದೆ. ಎಲ್ಲ ಪಂದ್ಯಗಳು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿವೆ. ಉದ್ಘಾಟನ ಪಂದ್ಯದಲ್ಲಿ ಬೆಂಗಳೂರು ಬ್ಲಾಸ್ಟರ್ಸ್ ಮತ್ತು ಗುಲ್ಬರ್ಗ ಮಿಸ್ಟಿಕ್ಸ್ ಮುಖಾಮುಖಿಯಾಗಲಿವೆ. ಹಾಲಿ ಚಾಂಪಿಯನ್ ಹುಬ್ಬಳ್ಳಿ ಟೈಗರ್ಸ್, ರನ್ನರ್ಸ್ ಅಪ್ ಮೈಸೂರು ವಾರಿಯರ್ಸ್, ಗುಲ್ಬರ್ಗ ಮಿಸ್ಟಿಕ್ಸ್, ಬೆಂಗಳೂರು ಬ್ಲಾಸ್ಟರ್ಸ್, ಮಂಗಳೂರು ಡ್ರ್ಯಾಗನ್ಸ್ ಮತ್ತು ಶಿವಮೊಗ್ಗ ಲಯನ್ಸ್ ತಂಡಗಳು ಟೂರ್ನಿಯಲ್ಲಿ ಆಡಲಿವೆ.

ಟೀಮ್​ ಇಂಡಿಯಾ ಮಾಜಿ ಕೋಚ್​ ರಾಹುಲ್​ ದ್ರಾವಿಡ್​ ಪುತ್ರ ಸಮಿತ್​ ದ್ರಾವಿಡ್(Samit Dravid)​ ಕೂಡ ಈ ಬಾರಿ ಟೂರ್ನಿಯಲ್ಲಿ ಆಡುತ್ತಿರುವುದು ವಿಶೇಷ. ಸುಮಿತ್​ ಮೈಸೂರು ವಾರಿಯರ್ಸ್ ತಂಡದ ಪರ ಆಡಲಿದ್ದಾರೆ. ಟೂರ್ನಿಯ ವೇಳಾಪಟ್ಟಿ ಹೀಗಿದೆ. ಆಗಸ್ಟ್​ 15 ರಿಂದ ಪಂದ್ಯಾವಳಿ ಆರಂಭವಾಗಿ ಸೆಪ್ಟೆಂಬರ್​ 1ರ ತನಕ ನಡೆಯಲಿದೆ.

ಇದನ್ನೂ ಓದಿ Maharaja Trophy Squads: ಹರಾಜಿನ ಬಳಿಕ ಎಲ್ಲ ತಂಡಗಳ ಆಟಗಾರರ ಪಟ್ಟಿ ಹೀಗಿದೆ

ವೇಳಾಪಟ್ಟಿ


ಗುರುವಾರ, ಆಗಸ್ಟ್ 15, 2024 : ಬೆಂಗಳೂರು ಬ್ಲಾಸ್ಟರ್ಸ್ vs ಗುಲ್ಬರ್ಗ ಮಿಸ್ಟಿಕ್ಸ್, ಮಧ್ಯಾಹ್ನ 3:00

ಶುಕ್ರವಾರ, ಆಗಸ್ಟ್ 16, 2024 : ಶಿವಮೊಗ್ಗ ಲಯನ್ಸ್ vs ಮೈಸೂರು ವಾರಿಯರ್ಸ್, ಸಂಜೆ 7:00

ಶುಕ್ರವಾರ, ಆಗಸ್ಟ್ 16, 2024 : ಮಂಗಳೂರು ಡ್ರ್ಯಾಗನ್ vs ಹುಬ್ಬಳ್ಳಿ ಟೈಗರ್ಸ್, ಮಧ್ಯಾಹ್ನ 3:00

ಶುಕ್ರವಾರ, ಆಗಸ್ಟ್ 16, 2024 : ಬೆಂಗಳೂರು ಬ್ಲಾಸ್ಟರ್ಸ್ vs ಮೈಸೂರು ವಾರಿಯರ್ಸ್, ಸಂಜೆ 7:00

ಶನಿವಾರ, ಆಗಸ್ಟ್ 17, 2024 : ಶಿವಮೊಗ್ಗ ಲಯನ್ಸ್ vs ಮಂಗಳೂರು ಡ್ರಾಗನ್ಸ್, ಮಧ್ಯಾಹ್ನ 3:00

ಶನಿವಾರ, ಆಗಸ್ಟ್ 17, 2024 : ಗುಲ್ಬರ್ಗ ಮಿಸ್ಟಿಕ್ಸ್ vs ಹುಬ್ಬಳ್ಳಿ ಟೈಗರ್ಸ್, ಸಂಜೆ 7:00

ಭಾನುವಾರ, ಆಗಸ್ಟ್ 18, 2024 : ಗುಲ್ಬರ್ಗಾ ಮಿಸ್ಟಿಕ್ಸ್ vs ಮೈಸೂರು ವಾರಿಯರ್ಸ್, ಮಧ್ಯಾಹ್ನ 3:00

ಭಾನುವಾರ, ಆಗಸ್ಟ್ 18, 2024 : ಬೆಂಗಳೂರು ಬ್ಲಾಸ್ಟರ್ಸ್ vs ಶಿವಮೊಗ್ಗ ಲಯನ್ಸ್, ಸಂಜೆ 7:00

ಸೋಮವಾರ, ಆಗಸ್ಟ್ 19, 2024 : ಬೆಂಗಳೂರು ಬ್ಲಾಸ್ಟರ್ಸ್ vs ಹುಬ್ಬಳ್ಳಿ ಟೈಗರ್ಸ್, ಮಧ್ಯಾಹ್ನ 3:00

ಸೋಮವಾರ, ಆಗಸ್ಟ್ 19, 2024 : ಮೈಸೂರು ವಾರಿಯರ್ಸ್ vs ಮಂಗಳೂರು ಡ್ರಾಗನ್ಸ್, ಸಂಜೆ 7:00

ಮಂಗಳವಾರ, ಆಗಸ್ಟ್ 20, 2024 : ಶಿವಮೊಗ್ಗ ಲಯನ್ಸ್ vs ಹುಬ್ಬಳ್ಳಿ ಟೈಗರ್ಸ್, ಮಧ್ಯಾಹ್ನ 3:00

ಮಂಗಳವಾರ, ಆಗಸ್ಟ್ 20, 2024 : ಗುಲ್ಬರ್ಗಾ ಮಿಸ್ಟಿಕ್ಸ್ vs ಮಂಗಳೂರು ಡ್ರಾಗನ್ಸ್, ಸಂಜೆ 7:00

ಬುಧವಾರ, ಆಗಸ್ಟ್ 21, 2024 : ಗುಲ್ಬರ್ಗಾ ಮಿಸ್ಟಿಕ್ಸ್ vs ಶಿವಮೊಗ್ಗ ಲಯನ್ಸ್, 3:00

ಬುಧವಾರ, ಆಗಸ್ಟ್ 21, 2024 : ಮೈಸೂರು ವಾರಿಯರ್ಸ್ vs ಹುಬ್ಬಳ್ಳಿ ಟೈಗರ್ಸ್, ಸಂಜೆ 7:00

ಗುರುವಾರ, ಆಗಸ್ಟ್ 22, 2024 : ಮೈಸೂರು ವಾರಿಯರ್ಸ್ vs ಶಿವಮೊಗ್ಗ ಲಯನ್ಸ್, ಮಧ್ಯಾಹ್ನ 3:00

ಗುರುವಾರ, ಆಗಸ್ಟ್ 22, 2024 : ಬೆಂಗಳೂರು ಬ್ಲಾಸ್ಟರ್ಸ್ vs ಮಂಗಳೂರು ಡ್ರಾಗನ್ಸ್, ಸಂಜೆ 7:00

ಶುಕ್ರವಾರ, ಆಗಸ್ಟ್ 23, 2024 : ಬೆಂಗಳೂರು ಬ್ಲಾಸ್ಟರ್ಸ್ vs ಹುಬ್ಬಳ್ಳಿ ಟೈಗರ್ಸ್, ಮಧ್ಯಾಹ್ನ 3:00

ಶುಕ್ರವಾರ, ಆಗಸ್ಟ್ 23, 2024 : ಮಂಗಳೂರು ಡ್ರಾಗನ್ಸ್ vs ಗುಲ್ಬರ್ಗ ಮಿಸ್ಟಿಕ್ಸ್, ಸಂಜೆ 7:00

ಶನಿವಾರ, ಆಗಸ್ಟ್ 24, 2024 : ಗುಲ್ಬರ್ಗ ಮಿಸ್ಟಿಕ್ಸ್ vs ಮೈಸೂರು ವಾರಿಯರ್ಸ್, ಮಧ್ಯಾಹ್ನ 3:00

ಶನಿವಾರ, ಆಗಸ್ಟ್ 24, 2024 : ಶಿವಮೊಗ್ಗ ಲಯನ್ಸ್ vs ಹುಬ್ಬಳ್ಳಿ ಟೈಗರ್ಸ್, ಸಂಜೆ 7:00

ಭಾನುವಾರ, ಆಗಸ್ಟ್ 25, 2024 : ಬೆಂಗಳೂರು ಬ್ಲಾಸ್ಟರ್ಸ್ vs ಮೈಸೂರು ವಾರಿಯರ್ಸ್, ಮಧ್ಯಾಹ್ನ 3:00

ಭಾನುವಾರ, ಆಗಸ್ಟ್ 25, 2024 : ಮಂಗಳೂರು ಡ್ರಾಗನ್ಸ್ vs ಶಿವಮೊಗ್ಗ ಲಯನ್ಸ್, ಸಂಜೆ 7:00

ಸೋಮವಾರ, ಆಗಸ್ಟ್ 26, 2024 : ಮಂಗಳೂರು ಡ್ರಾಗನ್ಸ್ vs ಹುಬ್ಬಳ್ಳಿ ಟೈಗರ್ಸ್, ಮಧ್ಯಾಹ್ನ 3:00

ಸೋಮವಾರ, ಆಗಸ್ಟ್ 26, 2024 : ಬೆಂಗಳೂರು ಬ್ಲಾಸ್ಟರ್ಸ್ vs ಗುಲ್ಬರ್ಗ ಮಿಸ್ಟಿಕ್ಸ್, ಸಂಜೆ 7:00

ಮಂಗಳವಾರ, ಆಗಸ್ಟ್ 27, 2024 : ಗುಲ್ಬರ್ಗ ಮಿಸ್ಟಿಕ್ಸ್ vs ಶಿವಮೊಗ್ಗ ಲಯನ್ಸ್, 3:00

ಮಂಗಳವಾರ, ಆಗಸ್ಟ್ 27, 2024 : ಹುಬ್ಬಳ್ಳಿ ಟೈಗರ್ಸ್ vs ಮೈಸೂರು ವಾರಿಯರ್ಸ್, ಸಂಜೆ 7:00

ಬುಧವಾರ, ಆಗಸ್ಟ್ 28, 2024 : ಮಂಗಳೂರು ಡ್ರಾಗನ್ಸ್​ vs ಮೈಸೂರು ವಾರಿಯರ್ಸ್, ಮಧ್ಯಾಹ್ನ 3:00

ಬುಧವಾರ, ಆಗಸ್ಟ್ 28, 2024 : ಬೆಂಗಳೂರು ಬ್ಲಾಸ್ಟರ್ಸ್ vs ಶಿವಮೊಗ್ಗ ಲಯನ್ಸ್, ಸಂಜೆ 7:00

ಗುರುವಾರ, ಆಗಸ್ಟ್ 29, 2024 : ಬೆಂಗಳೂರು ಬ್ಲಾಸ್ಟರ್ಸ್ vs ಮಂಗಳೂರು ಡ್ರಾಗನ್ಸ್, ಮಧ್ಯಾಹ್ನ 3:00

ಗುರುವಾರ, ಆಗಸ್ಟ್ 29, 2024 : ಗುಲ್ಬರ್ಗ ಮಿಸ್ಟಿಕ್ಸ್ vs ಹುಬ್ಬಳ್ಳಿ ಟೈಗರ್ಸ್, ಸಂಜೆ 7:00

ಶುಕ್ರವಾರ, ಆಗಸ್ಟ್ 30, 2024 : ಸೆಮಿಫೈನಲ್ 1 (1 vs 4), ಸಂಜೆ 7:00

ಶನಿವಾರ, ಆಗಸ್ಟ್ 31, 2024 : ಸೆಮಿಫೈನಲ್ 2 (2 vs 3), ಸಂಜೆ 7:00

ಭಾನುವಾರ, ಸೆಪ್ಟೆಂಬರ್ 1, 2024 : ಫೈನಲ್, ಸಂಜೆ 7:00

Continue Reading
Advertisement
Kolkata Doctor Murder Case
ದೇಶ3 mins ago

ಕಣ್ಣು, ಬಾಯಿಯಿಂದ ರಕ್ತಸ್ರಾವ, ಕುತ್ತಿಗೆ ಮೂಳೆ ತುಂಡು: ಹತ್ಯೆಯಾದ ಟ್ರೈನಿ ವೈದ್ಯೆಯ ಮರಣೋತ್ತರ ಪರೀಕ್ಷಾ ವರದಿಯಲ್ಲಿದೆ ಬೆಚ್ಚಿ ಬೀಳಿಸುವ ಸತ್ಯ

Duniya Vijay bheema collection 2nd day
ಸ್ಯಾಂಡಲ್ ವುಡ್3 mins ago

Duniya Vijay: ಎರಡನೇ ದಿನವೂ ಅಬ್ಬರ ಮುಂದುವರಿಸಿದ ʻಭೀಮʼ: ಕಲೆಕ್ಷನ್‌ ಎಷ್ಟು?

Sarabjot Singh
ಕ್ರೀಡೆ21 mins ago

Sarabjot Singh : ಹರಿಯಾಣ ಸರ್ಕಾರದ ಉದ್ಯೋಗದ ಆಫರ್​ ತಿರಸ್ಕರಿಸಿದ ಒಲಿಂಪಿಕ್ಸ್ ಕಂಚಿನ ಪದಕ ವಿಜೇತ ಸರಬ್ಜೋತ್​ ಸಿಂಗ್​​

Hindenburg
ದೇಶ50 mins ago

Hindenburg: ಹಿಂಡನ್‌ಬರ್ಗ್‌ ಸ್ಫೋಟಕ ವರದಿ: ಆರೋಪ ತಳ್ಳಿ ಹಾಕಿದ ಅದಾನಿ ಗ್ರೂಪ್‌

Money Guide
ಮನಿ-ಗೈಡ್50 mins ago

Money Guide: ಕೃಷಿ ಸಾಲಕ್ಕೆ ಅರ್ಜಿ ಸಲ್ಲಿಸುವ ಮುನ್ನ ತಿಳಿದಿರಲೇಬೇಕಾದ ಅಂಶಗಳಿವು

Mohammed Siraj
ಕ್ರೀಡೆ51 mins ago

Mohammed Siraj: ಕ್ರಿಕೆಟಿಗ ಸಿರಾಜ್‌, ಬಾಕ್ಸರ್​ ನಿಖತ್ ಜರೀನ್‌, ಶೂಟರ್​ ಇಶಾ ಸಿಂಗ್​ಗೆ ನಿವೇಶನ ಮಂಜೂರು ಮಾಡಿದ ತೆಲಂಗಾಣ ಸರ್ಕಾರ

Tungabhadra Dam
ಕರ್ನಾಟಕ1 hour ago

Tungabhadra Dam: ಒಂದು ವಾರದಲ್ಲಿ ತುಂಗಭದ್ರಾ ಡ್ಯಾಂ ಗೇಟ್ ದುರಸ್ತಿಯಾಗಲಿದೆ ಎಂದ ಡಿ.ಕೆ.ಶಿವಕುಮಾರ್‌

Viral Video
ವೈರಲ್ ನ್ಯೂಸ್2 hours ago

Viral Video: ಹುಡುಗ ಬೇಡವೆಂದು ಗಲ್ಲ ಒರೆಸಿಕೊಳ್ಳುತ್ತಿದ್ದರೂ ಬಿಡದೆ ಚುಂಬಿಸಿದ ವಿದ್ಯಾರ್ಥಿನಿ! ತರಗತಿಯಲ್ಲೇ ಪ್ರಣಯ! ವಿಡಿಯೊ ನೋಡಿ

building collpase
ದಾವಣಗೆರೆ2 hours ago

Building Collapsed: ನಿರ್ಮಾಣ ಹಂತದ ಶಾಲಾ ಕಟ್ಟಡ ಧ್ವಂಸ ಮಾಡಿದ ಕಿಡಿಗೇಡಿಗಳು

Shakib Al Hasan
ಕ್ರೀಡೆ2 hours ago

Shakib Al Hasan: ಸೂಪರ್‌ ಓವರ್‌ ಆಡಲು ನಿರಾಕರಿಸಿದ ಶಕಿಬ್; ಟೂನಿಯಿಂದಲೇ ಹೊರಬಿದ್ದ ತಂಡ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ3 days ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ3 days ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ3 days ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು5 days ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ5 days ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ1 week ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ1 week ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ1 week ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ1 week ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ1 week ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌