AFG vs BAN: ಆಫ್ಘನ್​ ತಂಡದ ಐತಿಹಾಸಿಕ ಸಾಧನೆಯನ್ನು ಕೊಂಡಾಡಿದ ಸಚಿನ್​ ತೆಂಡೂಲ್ಕರ್​ - Vistara News

ಕ್ರೀಡೆ

AFG vs BAN: ಆಫ್ಘನ್​ ತಂಡದ ಐತಿಹಾಸಿಕ ಸಾಧನೆಯನ್ನು ಕೊಂಡಾಡಿದ ಸಚಿನ್​ ತೆಂಡೂಲ್ಕರ್​

AFG vs BAN: ಸೆಮಿಫೈನಲ್​ ಪ್ರವೇಶಿಸುವ ಮೂಲಕ ಐತಿಹಾಸಿಕ ಸಾಧನೆ ಮಾಡಿರುವ ಅಫಘಾನಿಸ್ತಾನ(Afghanistan vs Bangladesh) ತಂಡಕ್ಕೆ ಸಚಿನ್​ ತೆಂಡೂಲ್ಕರ್(Sachin Tendulkar)​ ಅವರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

VISTARANEWS.COM


on

AFG vs BAN
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಮುಂಬಯಿ: ಬಾಂಗ್ಲಾದೇಶವನ್ನು ಮಣಿಸಿ ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಇದೇ ಮೊದಲ ಬಾರಿಗೆ ಸೆಮಿಫೈನಲ್​ ಪ್ರವೇಶಿಸುವ ಮೂಲಕ ಐತಿಹಾಸಿಕ ಸಾಧನೆ ಮಾಡಿರುವ ಅಫಘಾನಿಸ್ತಾನ(Afghanistan vs Bangladesh) ತಂಡಕ್ಕೆ ಕ್ರಿಕೆಟ್​ ದೇವರು, ಸಚಿನ್​ ತೆಂಡೂಲ್ಕರ್(Sachin Tendulkar)​ ಅವರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಟ್ವಿಟರ್​ ಎಕ್ಸ್​ನಲ್ಲಿ ಅಫಘಾನಿಸ್ತಾನ ತಂಡದ ಸಾಧನೆಯನ್ನು ಕೊಂಡಾಡಿದ ಸಚಿನ್​, ನ್ಯೂಜಿಲ್ಯಾಂಡ್​ ಮತ್ತು ಆಸ್ಟ್ರೇಲಿಯದಂತಹ ಬಲಿಷ್ಠ ತಂಡಗಳನ್ನು ಮಣಿಸಿ ಸೆಮಿಫೈನಲ್‌ ಪ್ರವೇಶಿಸಿರುವ ನಿಮ್ಮ ಗೆಲುವಿನ ಹಾದಿಯು ಅದ್ಭುತವಾಗಿದೆ. ಇಂದಿನ ಗೆಲುವು ನಿಮ್ಮ ಕಠಿಣ ಪರಿಶ್ರಮ ಮತ್ತು ಸಂಕಲ್ಪಕ್ಕೆ ಸಾಕ್ಷಿಯಾಗಿದೆ. ನಿಮ್ಮ ಪ್ರಗತಿಯ ಬಗ್ಗೆ ತುಂಬಾ ಹೆಮ್ಮೆ ಇದೆ. ಹೀಗೇ ಮುಂದುವರಿಯಿರಿ ಎಂದು ಶುಭ ಹಾರೈಸಿದ್ದಾರೆ.

ಹಲವು ಬಾರಿ ಮಳೆಯಿಂದ ಅಡಚಣೆಯಾದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್​ ನಡೆಸಿದ ಅಫಘಾನಿಸ್ತಾನ ರಹಮಾನುಲ್ಲಾ ಗುರ್ಬಾಜ್(43) ಅವರ ಏಕಾಂಗಿ ಬ್ಯಾಟಿಂಗ್​ ಹೋರಾಟದ ನೆರವಿನಿಂದ 5 ವಿಕೆಟ್​ಗೆ 115 ರನ್​ ಬಾರಿಸಿತು. ಬಾಂಗ್ಲಾ ಬ್ಯಾಟಿಂಗ್​ ಸರದಿಯ ವೇಳೆ ಹಲವು ಬಾರಿ ಮಳೆಯಿಂದಾಗಿ ಪಂದ್ಯ ಸ್ಥಗಿತಗೊಂಡಿತು. ಅಂತಿಮವಾಗಿ ಒಂದು ಓವರ್​ ಕಡಿತಗೊಳಿಸಿ 19 ಓವರ್​ಗೆ 114 ರನ್​ ಗೆಲುವಿನ ಗುರಿ ನೀಡಲಾಯಿತು. ಈ ಮೊತ್ತವನ್ನು ಬಾಂಗ್ಲಾ ಒಂದು ಹಂತದವರೆಗೆ ಯಶಸ್ವಿಯಾಗಿ ಬೆನ್ನಟ್ಟಿಕೊಂಡು ಬಂದರೂ ಕೂಡ ಅಂತಿಮ ಹಂತದಲ್ಲಿ ನಾಟಕೀಯ ಕುಸಿತ ಕಂಡು 17.5 ಓವರ್​ನಲ್ಲಿ 105 ರನ್​ಗೆ ಸರ್ವಪತನ ಕಂಡಿತು.

ಇದನ್ನೂ ಓದಿ AFG vs BAN: ‘ನಿಧಾನವಾಗಿ ಆಡಿ, ಮಳೆ ಬರುತ್ತೆ’; ಆಫ್ಘನ್​ ಆಟಗಾರರಿಗೆ ಸಲಹೆ ನೀಡಿದ ಕೋಚ್​; ವಿಡಿಯೊ ವೈರಲ್​

ಏಕದಿನ ವಿಶ್ವಕಪ್​ ವೇಳೆಯೂ ಪ್ರಶಂಸೆ ವ್ಯಕ್ತಪಡಿಸಿದ್ದ ಸಚಿನ್​

ಏಕದಿನ ವಿಶ್ವಕಪ್​ ಟೂರ್ನಿಯ ವೇಳೆಯೂ ಸಚಿನ್​ ತೆಂಡೂಲ್ಕರ್​ ಅವರು ಪಾಕಿಸ್ತಾನವನ್ನು ಮಣಿಸಿದ ಬಳಿ ಅಫಫಾನಿಸ್ತಾನ ತಂಡವನ್ನು ಹೊಗಳಿದ್ದರು. “ಈ ಬಾರಿಯ ಏಕದಿನ ವಿಶ್ವಕಪ್‌ನಲ್ಲಿ ಅಫ್ಘಾನಿಸ್ತಾನದ ಪ್ರದರ್ಶನವು ಅತ್ಯುತ್ತಮ ಗುಣಮಟ್ಟದಿಂದ ಕೂಡಿದೆ. ಆಟದಲ್ಲಿ ತೋರುತ್ತಿರುವ ಅವರ ಶಿಸ್ತು, ಮನೋಧರ್ಮ ಮತ್ತು ಬ್ಯಾಟಿಂಗ್​ ಮತ್ತು ಬೌಲಿಂಗ್​ನಲ್ಲಿರುವ ಆಕ್ರಮಣಕಾರಿ ಓಟವು ಅವರ ಕಠಿಣ ಪರಿಶ್ರಮವನ್ನು ತೋರಿಸುತ್ತಿದೆ. ಬಹುಶಃ ಇದು ಶ್ರೀ ಅಜಯ್ ಜಡೇಜಾ ಅವರ ಪ್ರಭಾವದ ಕಾರಣದಿಂದಾಗಿರಬಹುದು. ಅಸಾಧಾರಣ ಪ್ರದರ್ಶನದೊಂದಿಗೆ ಬಲಿಷ್ಠ ಇಂಗ್ಲೆಂಡ್ ಮತ್ತು ಪಾಕಿಸ್ತಾನದಂತಹ ತಂಡಗಳ ಮೇಲೆ ಸವಾರಿ ಮಾಡಿದ ನಿಮ್ಮ ಈ ಸಾಹಸ ಹೀಗೆಯೇ ಮುಂದುವರಿಯಲಿ. ಇನ್ನೂ ಕೂಡ ಅಚ್ಚರಿಯ ಫಲಿತಾಂಶವನ್ನು ನಿಮ್ಮಿಂದ ನಿರೀಕ್ಷೆ ಮಾಡಿದ್ದೇವೆ” ಎಂದು ಬರೆದುಕೊಂಡಿದ್ದರು.

ಆಫ್ಘನ್​ನಲ್ಲಿ ಸಂಭ್ರಮಾಚರಣೆ


ಅಫಘಾನಿಸ್ತಾನ ತಂಡ ಐತಿಹಾಸಿಕ ಸಾಧನೆ ಮಾಡಿದ ಸಂತಸಲ್ಲಿ ಆಫ್ಘನ್ನರು ತಮ್ಮ ದೇಶದಲ್ಲಿ , ಪಟಾಕಿ ಸಿಡಿಸಿ ಈ ಗೆಲುವನ್ನು ಸಂಭ್ರಮಿಸಿದ್ದಾರೆ. ಸಂಭ್ರಮಾಚರಣೆಯ ಫೋಟೊ ಮತ್ತು ವಿಡಿಯೊಗಳು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ. ಕೆಲವು ಕಡೆ ಪೊಲೀಸರು ಲಘು ಲಾಠಿ ಚಾರ್ಜ್​ ಮತ್ತು ನೀರು ಬಿಟ್ಟು ಗುಂಪು ಗೂಡಿದ ಜನರನ್ನು ಚದುರಿಸಲು ಹರ ಸಾಹಸ ಪಟ್ಟ ಘಟನೆಯೂ ಸಂಭವಿಸಿದೆ.

ಅಫಘಾನಿಸ್ತಾನ ಜೂನ್​ 26ರಂದು(ನಾಳೆ) ನಡೆಯುವ ಸೆಮಿ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಸೆಣಸಾಡಲಿವೆ. ಗೆದ್ದರೆ ಚೊಚ್ಚಲ ಬಾರಿಗೆ ಫೈನಲ್​ ಪ್ರವೇಶಿಸಿದ ಸಾಧನೆ ಜತೆಗೆ ಕಪ್​ ಗೆದ್ದಷ್ಟೇ ಸಂಭ್ರಮ ಆಚರಿಸಲಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

Latest

ಬ್ಯಾಟಿಂಗ್‌ನಲ್ಲಿ ಮಾತ್ರವಲ್ಲ, ಬಿಸಿನೆಸ್‌ನಲ್ಲೂ ಸಚಿನ್ ಅವರದ್ದೇ ಸಿಕ್ಸರ್! ತೆಂಡೂಲ್ಕರ್‌ ಒಟ್ಟು ಆಸ್ತಿ ಎಷ್ಟು ಗೊತ್ತಾ?

VISTARANEWS.COM


on

ಕೆಟ್ ಮೈದಾನದಲ್ಲಿ ಶತಕಗಳ ಸರದಾರನಾಗಿ ಮೆರೆದ ‘ಮಾಸ್ಟರ್ ಬ್ಲಾಸ್ಟರ್’ ಸಚಿನ್ ತೆಂಡೂಲ್ಕರ್, ಅಂತರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ ದಶಕದ ನಂತರವೂ ವ್ಯವಹಾರ ಲೋಕದ ಅಧಿಪತಿಯಾಗಿ ಮುಂದುವರಿದಿದ್ದಾರೆ. ಅಭಿಮಾನಿಗಳಿಂದ ‘ಕ್ರಿಕೆಟ್ ದೇವರು’ ಎಂದು ಆರಾಧಿಸಲ್ಪಡುವ ಸಚಿನ್, ಈಗ ಕೇವಲ ಕ್ರೀಡಾಪಟುವಾಗಿ ಉಳಿಯದೆ ಒಬ್ಬ ಚಾಣಾಕ್ಷ ಉದ್ಯಮಿ ಮತ್ತು ಹೂಡಿಕೆದಾರನಾಗಿ ಹೊರಹೊಮ್ಮಿದ್ದಾರೆ. ಏಪ್ರಿಲ್ 2026ರ ಇತ್ತೀಚಿನ ವರದಿಗಳ ಪ್ರಕಾರ, ಸಚಿನ್ ಅವರ ಒಟ್ಟು ಆಸ್ತಿ ಮೌಲ್ಯವು ಸುಮಾರು 170 ಮಿಲಿಯನ್ ಡಾಲರ್ (₹1,400 ಕೋಟಿಗೂ ಅಧಿಕ) ಎಂದು ಅಂದಾಜಿಸಲಾಗಿದೆ. 2025ರ ಸಾಲೊಂದರಲ್ಲೇ ಅವರು ಬ್ರ್ಯಾಂಡ್ ಒಪ್ಪಂದಗಳು ಮತ್ತು ಹೂಡಿಕೆಗಳ ಮೂಲಕ ಸರಿಸುಮಾರು ₹50 ಕೋಟಿ ಸಂಪಾದಿಸುವ ಮೂಲಕ ತಮ್ಮ ಆರ್ಥಿಕ ಸಾಮ್ರಾಜ್ಯವನ್ನು ಮತ್ತಷ್ಟು ವಿಸ್ತರಿಸಿದ್ದಾರೆ.

ಸಚಿನ್ ಅವರ ಈ ಬೃಹತ್ ಆದಾಯದ ಹಿಂದೆ ಅವರ ದೂರದೃಷ್ಟಿಯ ಹೂಡಿಕೆಗಳಿವೆ. ಬಳಸಿದ ಕಾರುಗಳ ವೇದಿಕೆ ‘Spinny’, ಗೇಮಿಂಗ್ ಸ್ಟಾರ್ಟ್-ಅಪ್ ‘JetSynthesys’ ಮತ್ತು ಸೋಲಾರ್ ಕ್ಷೇತ್ರದ ‘Truzon Solar’ ಸೇರಿದಂತೆ ‘Zepto’ ಮತ್ತು ‘Vahdam Teas’ ನಂತಹ ಪ್ರಮುಖ ಸಂಸ್ಥೆಗಳಲ್ಲಿ ಅವರು ಬಂಡವಾಳ ಹೂಡಿದ್ದಾರೆ. ಇಷ್ಟೇ ಅಲ್ಲದೆ, ತಮ್ಮದೇ ಆದ ‘Ten XU’ ಸ್ಪೋರ್ಟ್ಸ್‌ವೇರ್ ಬ್ರ್ಯಾಂಡ್ ಮತ್ತು ‘True Blue’ ಫ್ಯಾಷನ್ ಲೇಬಲ್ ಮೂಲಕ ಉದ್ಯಮ ರಂಗದಲ್ಲಿ ಸಕ್ರಿಯರಾಗಿದ್ದಾರೆ. ಸಚಿನ್ ಎಂಬ ಹೆಸರೇ ಒಂದು ಶಕ್ತಿಯುತ ಬ್ರ್ಯಾಂಡ್ ಆಗಿರುವುದರಿಂದ, ಅಪೋಲೋ ಟೈರ್ಸ್‌ನಿಂದ ಹಿಡಿದು ಪ್ರಮುಖ ಬ್ಯಾಂಕ್‌ಗಳವರೆಗೆ ಹಲವು ಕಂಪನಿಗಳು ಇಂದಿಗೂ ಅವರ ವಿಶ್ವಾಸಾರ್ಹ ಇಮೇಜ್ ಅನ್ನು ಬಳಸಿಕೊಳ್ಳಲು ಕೋಟಿ ಕೋಟಿ ಸಂಭಾವನೆ ನೀಡುತ್ತಿವೆ.

ಇನ್ನು ರಿಯಲ್ ಎಸ್ಟೇಟ್ ವಿಷಯಕ್ಕೆ ಬಂದರೆ, ಸಚಿನ್ ಅವರ ಆಸ್ತಿಗಳು ಯಾರಿಗೂ ಕಡಿಮೆ ಇಲ್ಲದಂತಿವೆ. ಮುಂಬೈನ ಬಾಂದ್ರಾದಲ್ಲಿರುವ ಐಷಾರಾಮಿ ಬಂಗಲೆ, ದಕ್ಷಿಣ ಮುಂಬೈನ ಫ್ಲಾಟ್ ಮತ್ತು ಅಲಿಬಾಗ್‌ನಲ್ಲಿರುವ ಆಸ್ತಿಗಳ ಒಟ್ಟು ಮೌಲ್ಯವೇ ಸುಮಾರು ₹300 ಕೋಟಿ ಮೀರಿದೆ ಎಂದು ಅಂದಾಜಿಸಲಾಗಿದೆ. ಮೈದಾನದಲ್ಲಿ ರನ್ ಮಳೆ ಸುರಿಸಿದ ಮಾದರಿಯಲ್ಲೇ, ವ್ಯವಹಾರ ಲೋಕದಲ್ಲಿ ಸರಿಯಾದ ಕಾರ್ಯತಂತ್ರ ಮತ್ತು ಹೂಡಿಕೆಯ ನಿರ್ಧಾರಗಳನ್ನು ಕೈಗೊಳ್ಳುವ ಮೂಲಕ ಸಚಿನ್ ಸಾವಿರಾರು ಕೋಟಿಗಳ ಸಾಮ್ರಾಜ್ಯವನ್ನು ಕಟ್ಟಿದ್ದಾರೆ. ಒಟ್ಟಾರೆಯಾಗಿ, ನಿವೃತ್ತಿಯ ನಂತರವೂ ಸಚಿನ್ ಅವರ ಈ ‘ಸೆಕೆಂಡ್ ಇನ್ನಿಂಗ್ಸ್’ ಯುವ ಉದ್ಯಮಿಗಳಿಗೆ ದೊಡ್ಡ ಸ್ಫೂರ್ತಿಯಾಗಿದೆ.

Continue Reading

Latest

ಹೋಮ್‌ಗ್ರೌಂಡ್‌ನಲ್ಲಿ ಆರ್‌ಸಿಬಿಗಿಂದು ಕೊನೆ ಲೀಗ್‌ ಪಂದ್ಯ! ಗುಜರಾತ್ ಟೈಟನ್ಸ್ ಸವಾಲಿಗೆ ಸಜ್ಜಾದ ವಿರಾಟ್‌ ಪಡೆ

VISTARANEWS.COM


on

ಬೆಂಗಳೂರು: ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಈ ಬಾರಿಯ ಐಪಿಎಲ್ ಸೀಸನ್‌ನಲ್ಲಿ ತನ್ನ ತವರು ಮೈದಾನವಾದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ಅಂತಿಮ ಲೀಗ್ ಪಂದ್ಯವನ್ನು ಆಡಲಿದೆ. ಶುಭ್‌ಮನ್ ಗಿಲ್ ನೇತೃತ್ವದ ಗುಜರಾತ್ ಟೈಟನ್ಸ್ ವಿರುದ್ಧ ನಡೆಯಲಿರುವ ಈ ಹಣಾಹಣಿಯಲ್ಲಿ ಗೆಲುವಿನ ಮೂಲಕ ತವರಿನ ಪ್ರೇಕ್ಷಕರಿಗೆ ಸ್ಮರಣೀಯ ವಿದಾಯ ಹೇಳಲು ಬೆಂಗಳೂರು ಪಡೆ ಸಜ್ಜಾಗಿದೆ. ಈ ಪಂದ್ಯದ ನಂತರ ಆರ್‌ಸಿಬಿ ತನ್ನ ಮುಂದಿನ ಪಂದ್ಯಗಳಿಗಾಗಿ ರಾಯ್ಪುರಕ್ಕೆ ಪ್ರಯಾಣ ಬೆಳೆಸಲಿದೆ. ಪ್ರಸ್ತುತ ಅಂಕಪಟ್ಟಿಯಲ್ಲಿ ಭದ್ರ ನೆಲೆ ಕಂಡುಕೊಳ್ಳಲು ಈ ಗೆಲುವು ಉಭಯ ತಂಡಗಳಿಗೂ ಅತ್ಯಂತ ನಿರ್ಣಾಯಕವಾಗಿದೆ.

ಆರ್‌ಸಿಬಿ ಈ ವರ್ಷ ಚಿನ್ನಸ್ವಾಮಿ ಮೈದಾನದಲ್ಲಿ ಆಡಿದ 4 ಪಂದ್ಯಗಳ ಪೈಕಿ 3ರಲ್ಲಿ ಜಯ ಸಾಧಿಸಿ ಭರ್ಜರಿ ಫಾರ್ಮ್‌ನಲ್ಲಿದೆ. ಕಳೆದ ಪಂದ್ಯದಲ್ಲಿ ಡೆಲ್ಲಿ ವಿರುದ್ಧ ಅನುಭವಿಸಿದ ಸೋಲಿನ ಆಘಾತದಿಂದ ಹೊರಬಂದು, ಮತ್ತೆ ಗೆಲುವಿನ ಹಳಿಗೆ ಮರಳುವ ವಿಶ್ವಾಸದಲ್ಲಿ ರಜತ್ ಪಾಟೀದಾರ್ ಸೈನ್ಯವಿದೆ. ಬ್ಯಾಟಿಂಗ್ ವಿಭಾಗದಲ್ಲಿ ವಿರಾಟ್ ಕೊಹ್ಲಿ, ನಾಯಕ ರಜತ್ ಪಾಟೀದಾರ್ ಮತ್ತು ಫಿಲ್ ಸಾಲ್ಟ್ ಅಬ್ಬರಿಸುತ್ತಿದ್ದು, ತಂಡಕ್ಕೆ ಬಲಿಷ್ಠ ಅಡಿಪಾಯ ಹಾಕುತ್ತಿದ್ದಾರೆ. ವಿಶೇಷವಾಗಿ ಟಿಮ್ ಡೇವಿಡ್ ಅವರ 203.52 ರ ಸ್ಟ್ರೈಕ್ ರೇಟ್ ತಂಡದ ಮಧ್ಯಮ ಕ್ರಮಾಂಕಕ್ಕೆ ಹೆಚ್ಚಿನ ಬಲ ತಂದಿದೆ. ಬೌಲಿಂಗ್‌ನಲ್ಲಿ ಹೇಜಲ್‌ವುಡ್ ಮತ್ತು ಭುವನೇಶ್ವರ್ ಕುಮಾರ್ ಜೋಡಿ ಎದುರಾಳಿಗಳನ್ನು ಕಟ್ಟಿಹಾಕಲು ಸನ್ನದ್ಧವಾಗಿದೆ.

ಇನ್ನೊಂದೆಡೆ, ಗುಜರಾತ್ ಟೈಟನ್ಸ್ ತಂಡವು ಸ್ಥಿರ ಪ್ರದರ್ಶನದ ಹುಡುಕಾಟದಲ್ಲಿದ್ದು, ಪ್ರಬಲ ಬೌಲಿಂಗ್ ಪಡೆಯನ್ನು ನೆಚ್ಚಿಕೊಂಡಿದೆ. ಕಗಿಸೊ ರಬಾಡ, ಮೊಹಮ್ಮದ್ ಸಿರಾಜ್ ಮತ್ತು ಕನ್ನಡಿಗ ಪ್ರಸಿದ್ಧ್ ಕೃಷ್ಣ ಅವರನ್ನೊಳಗೊಂಡ ವೇಗದ ಪಡೆ ಆರ್‌ಸಿಬಿಯ ಸ್ಫೋಟಕ ಬ್ಯಾಟರ್‌ಗಳಿಗೆ ಬ್ರೇಕ್ ಹಾಕಲು ಮಾಸ್ಟರ್ ಪ್ಲ್ಯಾನ್ ರೂಪಿಸಿದೆ. ಅದರಲ್ಲೂ ಪ್ರಸಿದ್ಧ್ ಕೃಷ್ಣ ತಮ್ಮ ತವರು ಮೈದಾನದಲ್ಲಿ ಹಳೆಯ ತಂಡದ ವಿರುದ್ಧ ಹೇಗೆ ಮಿಂಚಲಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ. ಉಭಯ ತಂಡಗಳ ನಡುವೆ ಇದುವರೆಗೆ ನಡೆದ 6 ಮುಖಾಮುಖಿಗಳಲ್ಲಿ ಎರಡೂ ತಂಡಗಳು ತಲಾ 3 ಪಂದ್ಯಗಳನ್ನು ಗೆದ್ದು ಸಮಬಲ ಸಾಧಿಸಿರುವುದರಿಂದ, ಇಂದಿನ ಪಂದ್ಯವು ಅಭಿಮಾನಿಗಳಿಗೆ ಭರ್ಜರಿ ಮನರಂಜನೆ ನೀಡುವುದರಲ್ಲಿ ಸಂಶಯವಿಲ್ಲ.

Continue Reading

Latest

ತಾಯಿ ನಿಧನದ ಶೋಕದಲ್ಲೂ ತಂಡಕ್ಕಾಗಿ ಕಣಕ್ಕಿಳಿದ ಮುಖೇಶ್ ಚೌಧರಿ! ಗೆಲುವನ್ನು ಅರ್ಪಿಸಿ ಮಾನವೀಯತೆ ಮೆರೆದ ನಾಯಕ ಗಾಯಕ್ವಾಡ್

VISTARANEWS.COM


on

ವಾಂಖೆಡೆ ಮೈದಾನದಲ್ಲಿ ಏಪ್ರಿಲ್ 23ರಂದು ನಡೆದ ಮುಂಬೈ ಇಂಡಿಯನ್ಸ್ ವಿರುದ್ಧದ ರೋಚಕ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ 103 ರನ್‌ಗಳ ಬೃಹತ್ ಜಯ ದಾಖಲಿಸಿದೆ. ಈ ಗೆಲುವಿಗಿಂತಲೂ ಮಿಗಿಲಾಗಿ ಅಭಿಮಾನಿಗಳ ಗಮನ ಸೆಳೆದಿದ್ದು ವೇಗಿ ಮುಖೇಶ್ ಚೌಧರಿ ಅವರ ಅಪ್ರತಿಮ ವೃತ್ತಿಧರ್ಮ. ತಮ್ಮ ತಾಯಿ ಪ್ರೇಮಾ ದೇವಿ ನಿಧನರಾದ ಕೇವಲ ಎರಡೇ ದಿನಕ್ಕೆ, ತಾಯಿಯ ಅಂತ್ಯಕ್ರಿಯೆ ಮುಗಿಸಿ ಮೈದಾನಕ್ಕಿಳಿದ ಮುಖೇಶ್, ತಂಡದ ಗೆಲುವಿಗಾಗಿ ಸರ್ವಸ್ವವನ್ನೂ ಧಾರೆ ಎರೆದರು. ಅವರ ಈ ಬದ್ಧತೆ ಕ್ರೀಡಾ ಜಗತ್ತಿನಲ್ಲಿ ಹೊಸ ಸಂಚಲನ ಮೂಡಿಸಿದೆ.

ಪಂದ್ಯದ ನಿರ್ಣಾಯಕ ಹಂತದಲ್ಲಿ ಕ್ವಿಂಟನ್ ಡಿ ಕಾಕ್ ಅವರ ವಿಕೆಟ್ ಪಡೆದ ಮುಖೇಶ್, ಯಾವುದೇ ಅಬ್ಬರದ ಸಂಭ್ರಮಾಚರಣೆ ಮಾಡದೆ ಮೌನವಾಗಿ ಆಕಾಶದತ್ತ ಕೈ ತೋರಿಸಿ “ಅಮ್ಮ ಇದು ನಿನಗಾಗಿ” ಎಂದು ತಮ್ಮ ಪ್ರದರ್ಶನವನ್ನು ಸಮರ್ಪಿಸಿದ ಕ್ಷಣ ಭಾವುಕವಾಗಿತ್ತು. ಸುಮಾರು ಒಂದು ವರ್ಷದಿಂದ ಅನಾರೋಗ್ಯದ ವಿರುದ್ಧ ಹೋರಾಡುತ್ತಿದ್ದ ತಾಯಿಯನ್ನು ಕಳೆದುಕೊಂಡ ನೋವಿನ ನಡುವೆಯೂ, ತಂಡಕ್ಕೆ ತನ್ನ ಅವಶ್ಯಕತೆ ಇದೆ ಎಂದು ಅರಿತು ಮೈದಾನಕ್ಕೆ ಮರಳಿದ ಅವರ ಸ್ಥೈರ್ಯಕ್ಕೆ ಕ್ರಿಕೆಟ್ ಲೋಕವೇ ಶರಣಾಗಿದೆ. ಮುಖೇಶ್ ಅವರ ಶಿಸ್ತುಬದ್ಧ ಬೌಲಿಂಗ್ ಮುಂಬೈ ಪಡೆಯನ್ನು ಕಟ್ಟಿಹಾಕುವಲ್ಲಿ ಪ್ರಮುಖ ಪಾತ್ರ ವಹಿಸಿತು.

ಇನ್ನು ಪಂದ್ಯ ಮುಗಿದ ಬಳಿಕ ಸಿಎಸ್‌ಕೆ ನಾಯಕ ರುತುರಾಜ್ ಗಾಯಕ್ವಾಡ್ ಅವರು ಮುಖೇಶ್ ಅವರನ್ನು ಅಪ್ಪಿಕೊಂಡು ಸಾಂತ್ವನ ಹೇಳುವ ಮೂಲಕ ಮಾನವೀಯತೆ ಮೆರೆದರು. ಇಂತಹ ಕಠಿಣ ಪರಿಸ್ಥಿತಿಯಲ್ಲೂ ತಂಡಕ್ಕಾಗಿ ಮರಳಿದ ಮುಖೇಶ್ ಅವರ ಮಾನಸಿಕ ಶಕ್ತಿಯನ್ನು ಶ್ಲಾಘಿಸಿದ ಗಾಯಕ್ವಾಡ್, ಈ ಭರ್ಜರಿ ಗೆಲುವನ್ನು ಮುಖೇಶ್ ಮತ್ತು ಅವರ ತಾಯಿಗೆ ಅರ್ಪಿಸುವುದಾಗಿ ಘೋಷಿಸಿದರು. ನಾಯಕನ ಈ ನಿರ್ಧಾರ ಮತ್ತು ಮುಖೇಶ್ ಅವರ ಕರ್ತವ್ಯ ಪ್ರಜ್ಞೆ ಸಿಎಸ್‌ಕೆ ತಂಡದ ಒಗ್ಗಟ್ಟನ್ನು ಸಾಬೀತುಪಡಿಸಿದೆ.

Continue Reading

Latest

ಹಾರ್ದಿಕ್ ವಿರುದ್ಧ ಅಸಮಾಧಾನ: ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಸಹೋದರ ಕೃನಾಲ್ ಪಾಂಡ್ಯ.

VISTARANEWS.COM


on

ಭಾರತೀಯ ಕ್ರಿಕೆಟ್ ಲೋಕದ ಫೇಮಸ್ ‘ಪಾಂಡ್ಯ ಬ್ರದರ್ಸ್’ ನಡುವೆ ಎಲ್ಲವೂ ಸರಿಯಿಲ್ಲ ಎಂಬ ವದಂತಿಗಳು ಇತ್ತೀಚಿನ ದಿನಗಳಲ್ಲಿ ಜೋರಾಗಿ ಕೇಳಿಬರುತ್ತಿವೆ. ಈ ಬಗ್ಗೆ ಮೊದಲ ಬಾರಿಗೆ ಮೌನ ಮುರಿದಿರುವ ದೊಡ್ಡಣ್ಣ ಕೃನಾಲ್ ಪಾಂಡ್ಯ, ಆರ್‌ಸಿಬಿ ಇನ್‌ಸೈಡರ್ ಮಿಸ್ಟರ್ ನ್ಯಾಗ್ಸ್ ಜೊತೆಗಿನ ಸಂದರ್ಶನದಲ್ಲಿ ಮಾರ್ಮಿಕವಾಗಿ ಉತ್ತರಿಸಿದ್ದಾರೆ. ತಮ್ಮ ಸಹೋದರ ಹಾರ್ದಿಕ್ ಪಾಂಡ್ಯ ಅವರೊಂದಿಗಿನ ಭಿನ್ನಾಭಿಪ್ರಾಯದ ಬಗ್ಗೆ ನೇರವಾದ ಉತ್ತರ ನೀಡದಿದ್ದರೂ, “ಕುಟುಂಬದಲ್ಲಿ ಹಲವು ಸದಸ್ಯರಿರುತ್ತಾರೆ, ಕೆಲವೊಮ್ಮೆ ಕೆಲವರನ್ನು ಮಿಸ್ ಮಾಡಿಕೊಳ್ಳಬೇಕಾಗುತ್ತದೆ” ಎಂದು ಹೇಳುವ ಮೂಲಕ ಇಬ್ಬರ ನಡುವೆ ಬಿರುಕು ಮೂಡಿರುವ ಸುಳಿವು ನೀಡಿದ್ದಾರೆ.

ಒಂದು ಕಾಲದಲ್ಲಿ ಮುಂಬೈ ಇಂಡಿಯನ್ಸ್ ಪರ ಒಟ್ಟಾಗಿ ಕಣಕ್ಕಿಳಿಯುತ್ತಿದ್ದ ಈ ಸಹೋದರರು ಈಗ ಬೇರೆ ಬೇರೆ ತಂಡಗಳಲ್ಲಿದ್ದಾರೆ. ಹಾರ್ದಿಕ್ ಮುಂಬೈ ತಂಡವನ್ನು ಮುನ್ನಡೆಸುತ್ತಿದ್ದರೆ, ಕೃನಾಲ್ ಬೆಂಗಳೂರು ತಂಡದ ಪರ ಆಡುತ್ತಿದ್ದಾರೆ. ಆದರೆ ಇತ್ತೀಚೆಗೆ ಹಾರ್ದಿಕ್ ಅವರು ನತಾಶಾ ಅವರಿಂದ ವಿಚ್ಛೇದನ ಪಡೆದ ಬಳಿಕ ಮಹಿಕಾ ಶರ್ಮಾ ಜೊತೆಗಿನ ಒಡನಾಟ ಬೆಳೆಸಿಕೊಂಡಿರುವುದು ಮತ್ತು ಆ ನಂತರ ಹಾರ್ದಿಕ್ ವರ್ತನೆಯಲ್ಲಿ ಬದಲಾವಣೆ ಆಗಿರುವುದು ಈ ಸಹೋದರರ ನಡುವಿನ ಕಿರಿಕ್‌ಗೆ ಮುಖ್ಯ ಕಾರಣ ಎಂಬ ಚರ್ಚೆಗಳು ನಡೆಯುತ್ತಿವೆ. ಈ ಹಿಂದೆ ಮುಂಬೈ ಮತ್ತು ಆರ್‌ಸಿಬಿ ಪಂದ್ಯದಲ್ಲಿ ಹಾರ್ದಿಕ್ ವಿಕೆಟ್ ಬಿದ್ದಾಗ ಕೃನಾಲ್ ಅತಿಯಾಗಿ ಸಂಭ್ರಮಿಸಿದ್ದು ಕೂಡ ಈ ವದಂತಿಗಳಿಗೆ ಪುಷ್ಟಿ ನೀಡುವಂತಿದೆ.

ಸಂದರ್ಶನದ ವೇಳೆ ಮಿಸ್ಟರ್ ನ್ಯಾಗ್ಸ್ ಅವರು ಡಬ್ಲ್ಯೂಡಬ್ಲ್ಯೂಇ (WWE) ಖ್ಯಾತಿಯ ಕೇನ್ ಮತ್ತು ಅಂಡರ್‌ಟೇಕರ್ ಅವರ ಉದಾಹರಣೆ ನೀಡಿ, “ನಿಮ್ಮಿಬ್ಬರ ಮಧ್ಯೆ ಫೈಟ್ ನಡೆಯುತ್ತಿದೆಯೇ?” ಎಂದು ಕೇಳಿದಾಗ ಕೃನಾಲ್ “ಆಲ್ ಓಕೆ” ಎಂದು ನಗುತ್ತಲೇ ಉತ್ತರಿಸಿದ್ದಾರೆ. ಆದರೆ ಅವರ ನಗು ಮತ್ತು ಮಾತುಗಳ ಹಿಂದೆ ಅಸಮಾಧಾನದ ಛಾಯೆ ಇರುವುದು ಅಭಿಮಾನಿಗಳ ಕಣ್ಣಿನಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗಿಲ್ಲ. ಮಾತಿಗಷ್ಟೇ ಕೃನಾಲ್ ಎಲ್ಲವೂ ಸರಿಯಿದೆ ಎಂದಿದ್ದಾರೋ ಅಥವಾ ನಿಜವಾಗಿಯೂ ಇಬ್ಬರ ನಡುವಿನ ಮನಸ್ತಾಪ ಬಗೆಹರಿದಿದೆಯೋ ಎಂಬ ಕುತೂಹಲ ಈಗ ಕ್ರಿಕೆಟ್ ವಲಯದಲ್ಲಿ ತೀವ್ರವಾಗಿದೆ.

Continue Reading
Advertisement
Latest8 hours ago

ಮಹಿಳಾ ಮೀಸಲಾತಿ ವಿರೋಧಿಸಿದ ಕಾಂಗ್ರೆಸ್‌ ವಿರುದ್ಧ ಸಚಿವೆ ಶೋಭಾ ಕರಂದ್ಲಾಜೆ ಆಕ್ರೋಶ

Latest9 hours ago

ಟೆಹರಾನ್‌ನಲ್ಲಿ ವಿಮಾನ ಹಾರಾಟ ಪುನರಾರಂಭ: ಪಾಕ್‌ಗೆ ಆಗಮಿಸಿದ ಇರಾನ್‌ ನಿಯೋಗ: ಯುದ್ಧದ ಅಂತ್ಯದ ಮುನ್ಸೂಚನೆಯೇ ?

Latest10 hours ago

ಪರಮಾಣು ಶಸ್ತ್ರಾಸ್ತ್ರಗಳು ಶಾಂತಿಯ ಉದ್ದೇಶಕ್ಕೆ ಬಳಕೆಯಾಗಲಿ: ವಿಶ್ವಸಂಸ್ಥೆ ಕಳಕಳಿ

Latest10 hours ago

ರಾಜಕುಮಾರ್‌ ಸಮಾಧಿಗೆ ಭೂಮಿ: ವಿವಾದ ಹುಟ್ಟು ಹಾಕಿದ ನಟ ಚೇತನ್‌ ವಿರುದ್ಧ ಅಭಿಮಾನಿಗಳ ಆಕ್ರೋಶ; ದೂರು ದಾಖಲು

Latest11 hours ago

ಯೋಗೇಶ್‌ ಗೌಡ ಕೊಲೆ ಪ್ರಕರಣ: ಅನರ್ಹತೆ ಭೀತಿ; ಶಿಕ್ಷೆ ರದ್ದುಕೋರಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ ಶಾಸಕ ವಿನಯ್‌ ಕುಲಕರ್ಣಿ

Latest11 hours ago

ಕಲಬುರಗಿ ಜಿಲ್ಲೆಯ ಮಕ್ಕಳನ್ನು ಅವಮಾನಿಸಬೇಡಿ, ಅವರೂ ಬುದ್ದಿವಂತರು; ಬಿಜೆಪಿ ಮುಖಂಡರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು

Latest11 hours ago

ಕಾಂತಾರ ಚಾಪ್ಟರ್‌-1 ಮಿಮಿಕ್ರಿ: ಬಾಲಿವುಡ್‌ ನಟ ರಣವೀರ್‌ ಸಿಂಗ್‌ ಮೇಲಿನ ಪ್ರಕರಣ ಇತ್ಯರ್ಥ; ಕೋರ್ಟ್‌ ಆದೇಶವೇನು?

Latest12 hours ago

ಒಳಮೀಸಲಾತಿ ಜಾರಿ: ಕೊಟ್ಟ ಮಾತು ಈಡೇರಿಸಿದ ದಲಿತರಾಮಯ್ಯ; ಸಚಿವ ಆರ್.ಬಿ. ತಿಮ್ಮಾಪುರ

Latest12 hours ago

ಒಳ ಮೀಸಲಾತಿಯಿಂದ ಅನ್ಯಾಯ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಹೋರಾಟ; ಬಿಜೆಪಿ ಘೋಷಣೆ

Latest13 hours ago

ದೆಹಲಿಯಲ್ಲಿ ಬೀಡುಬಿಟ್ಟ ಡಿಕೆ ಶಿವಕುಮಾರ್;‌ ಪ್ರತಿತಂತ್ರ ಹೆಣೆಯುತ್ತಿರುವ ಸಿದ್ದರಾಮಯ್ಯ ಟೀಂ; ಮುಂದುವರೆದ ಹಾವು ಏಣಿಯಾಟ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ2 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌