IPL 2024 : ಸಿಎಸ್​ಕೆ ತಂಡದ ಇನ್ನೊಬ್ಬ ಆಲ್​ರೌಂಡರ್​ ಗೆ ಗಾಯ; ಟೂರ್ನಿಗೆ ಮೊದಲೇ ಆಘಾತ - Vistara News

ಕ್ರೀಡೆ

IPL 2024 : ಸಿಎಸ್​ಕೆ ತಂಡದ ಇನ್ನೊಬ್ಬ ಆಲ್​ರೌಂಡರ್​ ಗೆ ಗಾಯ; ಟೂರ್ನಿಗೆ ಮೊದಲೇ ಆಘಾತ

IPL 2024 : ಸ್ಟಾರ್​ ಆಲ್​ರೌಂಡರ್​ ಶಿವಂ ದುಬೆ ಗಾಯಗೊಂಡ ಕಾರಣ ಆಘಾತಕ್ಕೆ ಒಳಗಾಗಿರುವ ಸಿಎಸ್​​ಕೆ ತಂಡಕ್ಕೆ ಇನ್ನೊಂದು ಕಳಪೆ ಸುದ್ದಿ ಎದುರಾಗಿದೆ.

VISTARANEWS.COM


on

Rachin Ravindra
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ 2024 (IPL 2024) ಪ್ರಾರಂಭವಾಗುವ ಮೊದಲೇ ಚೆನ್ನೈ ಸೂಪರ್ ಕಿಂಗ್ಸ್​​ ಗಾಯದ ಪಟ್ಟಿ ಬೆಳೆಯುತ್ತಿದೆ. ಶಿವಂ ದುಬೆ ನಂತರ, ಅವರ ಸ್ಟಾರ್ ಆಲ್​ರೌಂಡರ್​​ ರಚಿನ್ ರವೀಂದ್ರ ಮೊಣಕಾಲಿಗೆ ಗಾಯವಾಗಿದ್ದು, ನ್ಯೂಜಿಲೆಂಡ್ ಮತ್ತು ಆಸ್ಟ್ರೇಲಿಯಾ ನಡುವಿನ ಎರಡನೇ ಟಿ 20 ಪಂದ್ಯದಿಂದ ಹೊರಗುಳಿದಿದ್ದಾರೆ. ಬ್ಲ್ಯಾಕ್ ಕ್ಯಾಪ್ಸ್​​ನ ಅಧಿಕೃತ ಪೇಜ್​​ನಲ್ಲಿ ಆಟಗಾರನ ಆರೋಗ್ಯ ಸ್ಥಿತಿಯ ಬಗ್ಗೆ ಅಪ್​ಡೇಟ್​ ಮಾಡಲಾಗಿದೆ. ಐಪಿಎಲ್​ ವೇಳಾಪಟ್ಟಿ ಘೋಷಣೆಯಾಗಿದ್ದು ಅವರ ಲಭ್ಯತೆ ಬಗ್ಗೆ ಖಾತರಿ ಇಲ್ಲದಂತಾಗಿದೆ.

“ವೆಲ್ಲಿಂಗ್ಟನ್​ನಲ್ಲಿ ನಡೆದ ಮೊದಲ ಪಂದ್ಯದ ನಂತರ ಎಡ ಮೊಣಕಾಲಿನ ನೋವಿನಿಂದಾಗಿ ರಚಿನ್ ರವೀಂದ್ರ ಈಡನ್ ಪಾರ್ಕ್​ನಲ್ಲಿ ಇಂದು ರಾತ್ರಿ ನಡೆಯಲಿರುವ 2 ನೇ ಕೆಎಫ್​ಸಿ ಟಿ 20 ಪಂದ್ಯದಿಂದ ಹೊರಗುಳಿಯಲಿದ್ದಾರೆ ಎಂದು ಹೇಳಿದ್ದಾರೆ.

ಮೂರನೇ ಟಿ 20 ಐಗೆ ಅವರ ಲಭ್ಯತೆಯ ಬಗ್ಗೆ ನಿರ್ಧಾರ ತೆಗೆದುಕೊಳ್ಳುವ ಮೊದಲು ಮುಂದಿನ ದಿನಗಳಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುವುದು ಮತ್ತು ಮೇಲ್ವಿಚಾರಣೆ ಮಾಡಲಾಗುವುದು” ಎಂದು ಮಾಹಿತಿ ನೀಡಲಾಗಿದೆ.

ಇನ್ನು ಒಂದು ತಿಂಗಳಲ್ಲಿ ಐಪಿಎಲ್ ಆರಂಭವಾಗಲಿದ್ದು, ಹಾಲಿ ಚಾಂಪಿಯನ್ಸ್​ಗೆ ಇದು ದೊಡ್ಡ ಹೊಡೆತವಾಗಲಿದೆ. ಹರಾಜಿನಲ್ಲಿನ ಸಿಎಸ್ಕೆ ಅವರನ್ನು 1.8 ಕೋಟಿ ರೂ.ಗೆ ಖರೀದಿಸಿ ಅವರನ್ನು ತಂಡಕ್ಕೆ ಸೇರಿಸಿಕೊಂಡಿದೆ. ರಚಿನ್ ಆಟದ ಎರಡೂ ವಿಭಾಗಗಳಿಗೆ ಕೊಡುಗೆ ನೀಡಬಹುದು ಮತ್ತು ಭಾರತದಲ್ಲಿ ನಡೆದ ಐಸಿಸಿ ವಿಶ್ವಕಪ್ 2023ರಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದರು.

ಇದನ್ನೂ ಓದಿ : IPL 2024 : ಆರ್​ಸಿಬಿ ತಂಡದ ವೇಳಾಪಟ್ಟಿ, ಪಂದ್ಯದ ವಿವರಗಳು ಇಲ್ಲಿವೆ

ರಚಿನ್​ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟಿ 20 ಐ ನಲ್ಲಿ ಅರ್ಧಶತಕ ಗಳಿಸಿದ್ದಾರೆ. ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿಯೂ ಪ್ರಭಾವಶಾಲಿ ಆಟವನ್ನು ನೀಡಿದ್ದರು. ತಮ್ಮ ಬೌಲಿಂಗ್​ ಕೌಶಲದ ಮೂಲಕ ಅವರು ಐಪಿಎಲ್​​ನಲ್ಲಿ ಚೆನ್ನೈನ ನಿಧಾನಗತಿಯ ಮತ್ತು ತಿರುಗುವ ಪಿಚ್​ನಲ್ಲಿ ಕೊಡುಗೆ ನೀಡುವ ನಿರೀಕ್ಷೆಯಿದೆ.

ದುಬೆ 8 ವಾರಗಳ ಕಾಲ ತಂಡದಿಂ ಹೊರಗುಳಿದಿದ್ದಾರೆ. ಐಪಿಎಲ್ 2024ರ ಕೆಲವು ಪಂದ್ಯಗಳಿಂದ ಹೊರಗುಳಿಯುವ ಸಾಧ್ಯತೆಯಿದೆ. ಅವರ ಬದಲಿ ಆಟಗಾರನಾಗಿ ಸರ್ಫರಾಜ್ ಖಾನ್ ಅವರನ್ನು ಸಹಿ ಮಾಡಲು ಚಾಂಪಿಯನ್ ತಂಡ ಯೋಜನೆ ರೂಪಿಸುತ್ತಿದೆ. ಹಿಂದಿನ ಋತುವಿನಲ್ಲಿ ದುಬೆ 400 ಕ್ಕೂ ಹೆಚ್ಚು ರನ್ ಗಳಿಸಿದ್ದರು. ಸಿಎಸ್ಕೆ ಪ್ರಶಸ್ತಿ ಗೆಲುವಿನಲ್ಲಿ ದೊಡ್ಡ ಪಾತ್ರ ವಹಿಸಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Champions Trophy 2025: ನಾವು ತುಂಬಾ ಒಳ್ಳೆಯವರು, ಪಾಕಿಸ್ತಾನಕ್ಕೆ ಬನ್ನಿ; ಟೀಮ್ ಇಂಡಿಯಾಗೆ ಪಾಕ್​ ಆಟಗಾರನ ಮನವಿ

Champions Trophy 2025: ಕಳೆದ ವರ್ಷ ಪಾಕಿಸ್ತಾನದ ಆತಿಥ್ಯದಲ್ಲಿ ನಡೆದಿದ್ದ ಏಷ್ಯಾಕಪ್​ ಟೂರ್ನಿಯಲ್ಲಿ ಭಾರತ ಪಾಕ್​ಗೆ ಹೋಗಲು ಒಪ್ಪದ ಕಾರಣ ಹೈಬ್ರೀಡ್​ ಮಾದರಿಯಲ್ಲಿ ಪಾಕ್​ ಮತ್ತು ಶ್ರೀಲಂಕಾದಲ್ಲಿ ಆಡಿಸಲಾಗಿತ್ತು. ಭಾರತ ತನ್ನ ಪಂದ್ಯಗಳನ್ನು ಶ್ರೀಲಂಕಾದಲ್ಲಿ ಆಡಿತ್ತು.

VISTARANEWS.COM


on

Champions Trophy 2025
Koo

ಕರಾಚಿ: ಮುಂದಿನ ವರ್ಷ ನಡೆಯುವ ಚಾಂಪಿಯನ್ಸ್‌ ಟ್ರೋಫಿ(Champions Trophy 2025) ಕ್ರಿಕೆಟ್‌ ಪಂದ್ಯಾವಳಿ ಪಾಕಿಸ್ತಾನದಲ್ಲಿ ನಡೆಯಲಿದೆ. ಆದರೆ, ಭಾರತ ತಂಡ(India to visit Pakistan) ಪಾಕ್​ಗೆ ತೆರಳುವುದು ಅನಿಶ್ಚಿತವಾಗಿದೆ. ಈಗಾಗಲೇ ಬಿಸಿಸಿಐ ಭಾರತದ ಪಂದ್ಯಗಳನ್ನು ತಟಸ್ಥ ತಾಣದಲ್ಲಿ ನಡೆಸಬೇಕೆಂದು ಐಸಿಸಿಗೂ ಮನವಿ ಮಾಡಿದೆ. ಒಂದೊಮ್ಮೆ ಐಸಿಸಿ ಇದಕ್ಕೆ ಸಮ್ಮತಿ ಸೂಚಿಸದಿದ್ದರೆ ಟೂರ್ನಿಯಿಂದ ಭಾರತ ತಂಡ ಹಿಂದೆ ಸರಿಯಲಿದೆ ಎಂದು ದೃಢ ನಿರ್ಧಾರವನ್ನು ಕೂಡ ಪ್ರಕಟಿಸಿದೆ. ಆದರೆ, ಪಾಕಿಸ್ತಾನದ ಮಾಜಿ ಕ್ರಿಕೆಟಿಗರು ಹೇಗಾದರೂ ಮಾಡಿ ಟೀಮ್​ ಇಂಡಿಯಾವನ್ನು ಪಾಕ್​ಗೆ ಕರೆತರಲು ನಾನಾ ರೀತಿಯ ಕಸರತ್ತು ಮಾಡುತ್ತಿದ್ದಾರೆ. ಈ ಸಾಲಿಗೆ ಇದೀಗ ಶೋಯಿಬ್‌ ಮಲಿಕ್‌(Shoaib Malik) ಕೂಡ ಸೇರ್ಪಡೆಗೊಂಡಿದ್ದಾರೆ.

“ದೇಶಗಳ ನಡುವೆ ಯಾವುದೇ ಮೀಸಲಾತಿ ಇದ್ದರೂ ಅದು ಪ್ರತ್ಯೇಕ ಸಮಸ್ಯೆ ಮತ್ತು ಪ್ರತ್ಯೇಕವಾಗಿ ಪರಿಹರಿಸಬೇಕು. ಕ್ರೀಡೆಯಲ್ಲಿ ರಾಜಕೀಯ ಬರಬಾರದು. ಕಳೆದ ವರ್ಷ ಪಾಕಿಸ್ತಾನ ತಂಡ ಭಾರತಕ್ಕೆ ಹೋಗಿತ್ತು, ಮತ್ತು ಈಗ ಭಾರತ ತಂಡಕ್ಕೂ ಪಾಕ್​ಗೆ ಬರುವ ಉತ್ತಮ ಅವಕಾಶವಿದೆ. ಈಗಿನ ಭಾರತ ತಂಡದ ಸ್ಟಾರ್​ ಆಟಗಾರರಿಗೆ ಪಾಕಿಸ್ತಾನದಲ್ಲಿ ಒಮ್ಮೆಯೂ ಆಡುವ ಅವಕಾಶ ಸಿಕ್ಕಿಲ್ಲ. ವಿರಾಟ್​ ಕೊಹ್ಲಿ, ರೋಹಿತ್​ ಶರ್ಮ ಅವರಿಗೆ ಪಾಕ್​ನಲ್ಲಿ ಅಪಾರ ಸಂಖ್ಯೆಯ ಅಭಿಮಾನಿಗಳಿದ್ದಾರೆ. ಆದ್ದರಿಂದ ಭಾರತ ತಂಡವನ್ನು ಪಾಕ್​ಗೆ ಕಳುಹಿಸಿಕೊಡಿ. ‘ಹಮ್ ಬಹುತ್ ಅಚ್ಚೆ ಲೋಗ್ ಹೈ” (ನಾವು ತುಂಬಾ ಒಳ್ಳೆಯ ಜನರು), ಹಾಗಾಗಿ ಭಾರತೀಯ ತಂಡ ಖಂಡಿತವಾಗಿಯೂ ಇಲ್ಲಿಗೆ ಬರಬೇಕು. ಬಿಸಿಸಿಐ ಇದಕ್ಕೆ ಒಪ್ಪಿಗೆ ನೀಡಬೇಕು” ಎಂದು ಮಲಿಕ್ ಹೇಳಿದ್ದಾರೆ.

​ಇದಕ್ಕೂ ಮುನ್ನ ಪಾಕ್‌ ಕ್ರಿಕೆಟ್‌ ತಂಡದ ಮಾಜಿ ನಾಯಕ ಯೂನಿಸ್‌ ಖಾನ್‌ ಭಾರತದ ಸ್ಟಾರ್​ ಬ್ಯಾಟರ್‌ ವಿರಾಟ್‌ ಕೊಹ್ಲಿ ಪಾಕಿಸ್ತಾನಕ್ಕೆ ಬರಬೇಕು, ಇಲ್ಲಿ ಅವರು ಆಡಬೇಕು, ಇದು ನಮ್ಮ ಆಸೆ ಎಂದು ಹೇಳಿದ್ದರು. ಮುಂದಿನ ವರ್ಷ ನಡೆಯಲಿರುವ ಚಾಂಪಿಯನ್ಸ್‌ ಟ್ರೋಫಿ ಏಕದಿನ ಪಂದ್ಯಾವಳಿಗಾಗಿ ಭಾರತ ತಂಡವನ್ನು ಪಾಕಿಸ್ಥಾನಕ್ಕೆ ಕಳುಹಿಸಲು ಸಾಧ್ಯವಿಲ್ಲ ಎಂದು ಬಿಸಿಸಿಐ ಮೂಲ ಹೇಳಿತ್ತು. ಇದೇ ವಿಚಾರವನ್ನು ಮುಂದಿಟ್ಟಿರುವ ಯೂನಿಸ್‌ ಖಾನ್‌, ಕೊಹ್ಲಿ ಈವರೆಗೆ ಪಾಕಿಸ್ತಾನದಲ್ಲಿ ಆಡಿಲ್ಲ. ಇದಕ್ಕೆ ಬಿಸಿಸಿಐ ಅವಕಾಶ ನೀಡಬೇಕು ಎಂದು ಒತ್ತಾಯಿಸಿದ್ದಾರೆ. 2006ರಲ್ಲಿ ಪಾಕಿಸ್ತಾನಕ್ಕೆ ಪ್ರವಾಸ ಹೋಗಿದ್ದ ಭಾರತ ತಂಡ, ಇಲ್ಲಿ ಕೊನೆಯ ಸಲ ಸರಣಿಯನ್ನಾಡಿತ್ತು.

ಇದನ್ನೂ ಓದಿ ICC Champions Trophy : ಪಾಕಿಸ್ತಾನದ ಕ್ರಿಕೆಟ್​ ಮಂಡಳಿಯ ಮಾಧ್ಯಮ ಹಕ್ಕುಗಳನ್ನು ಕೇಳುವವರೇ ಇಲ್ಲ!

ನವೆಂಬರ್ 2008ರ ಮುಂಬೈ ಭಯೋತ್ಪಾದಕ ದಾಳಿಯಲ್ಲಿ 150 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ ನಂತರ ಭಾರತವು ಪಾಕಿಸ್ತಾನದೊಂದಿಗೆ ದ್ವಿಪಕ್ಷೀಯ ಕ್ರಿಕೆಟ್ ಆಡಿಲ್ಲ. ಜೂನ್-ಜುಲೈ 2008 ರಲ್ಲಿ ಏಷ್ಯಾ ಕಪ್ ಸಮಯದಲ್ಲಿ ಭಾರತೀಯ ಕ್ರಿಕೆಟ್ ತಂಡವು ಕೊನೆಯ ಬಾರಿಗೆ ಪಾಕಿಸ್ತಾನಕ್ಕೆ ಪ್ರಯಾಣಿಸಿತ್ತು. ಭಾರತದಲ್ಲಿ ಡಿಸೆಂಬರ್ 2012 ರಿಂದ ಜನವರಿ 2013 ರವರೆಗಿನ ದ್ವಿಪಕ್ಷೀಯ ಸರಣಿಯು ಎರಡು ರಾಷ್ಟ್ರಗಳ ನಡುವಿನ ಅಂತಿಮ ದ್ವಿಪಕ್ಷೀಯ ಸರಣಿಯಾಗಿದೆ. ಇದಾದ ಬಳಿಕ ಉಭಯ ತಂಡಗಳು ಕೇವಲ ಐಸಿಸಿ ಟೂರ್ನಿಗಳಲ್ಲಿ ಮಾತ್ರ ಆಡುತ್ತವೆ.

ಕಳೆದ ವರ್ಷ ಪಾಕಿಸ್ತಾನದ ಆತಿಥ್ಯದಲ್ಲಿ ನಡೆದಿದ್ದ ಏಷ್ಯಾಕಪ್​ ಟೂರ್ನಿಯಲ್ಲಿ ಭಾರತ ಪಾಕ್​ಗೆ ಹೋಗಲು ಒಪ್ಪದ ಕಾರಣ ಹೈಬ್ರೀಡ್​ ಮಾದರಿಯಲ್ಲಿ ಪಾಕ್​ ಮತ್ತು ಶ್ರೀಲಂಕಾದಲ್ಲಿ ಆಡಿಸಲಾಗಿತ್ತು. ಭಾರತ ತನ್ನ ಪಂದ್ಯಗಳನ್ನು ಶ್ರೀಲಂಕಾದಲ್ಲಿ ಆಡಿತ್ತು.

ಭಾರತ ತಂಡ ಚಾಂಪಿಯನ್ಸ್‌ ಟ್ರೋಫಿ ಟೂರ್ನಿಯಿಂದ ಹಿಂದೆ ಸರಿದರೆ, 9ನೇ ಸ್ಥಾನಿಯಾಗಿರುವ ಶ್ರೀಲಂಕಾಗೆ ಅವಕಾಶ ಸಿಗಲಿದೆ. ಯಾವುದೇ ತಂಡವು ಐಸಿಸಿ ಟೂರ್ನಿಯಿಂದ ಹಿಂದೆ ಸರಿದರೆ ಅಂಕಪಟ್ಟಿಯಲ್ಲಿ ನಂತರದ ಸ್ಥಾನ ಪಡೆದಿರುವ ತಂಡ ತಂಡಕ್ಕೆ ಅರ್ಹತೆ ನೀಡಲಾಗುತ್ತದೆ. ಪ್ರಸ್ತುತ ಭಾರತ, ಆಸ್ಟ್ರೇಲಿಯಾ, ಪಾಕಿಸ್ತಾನ, ಇಂಗ್ಲೆಂಡ್​, ಅಫಘಾನಿಸ್ತಾನ, ದಕ್ಷಿಣ ಆಫ್ರಿಕಾ, ನ್ಯೂಜಿಲ್ಯಾಂಡ್​ ಮತ್ತು ಬಾಂಗ್ಲಾದೇಶ ಅರ್ಹತೆ ಪಡೆದ ತಂಡಗಳಾಗಿವೆ.

Continue Reading

ಕ್ರೀಡೆ

Paris Olympics 2024: ಒಲಿಂಪಿಕ್ಸ್​ನಲ್ಲಿ ಇಂದು ಭಾರತದ ಕ್ರೀಡಾ ಸ್ಫರ್ಧೆಗಳು; ಶೂಟಿಂಗ್​ನಲ್ಲಿ ಪದಕ ನಿರೀಕ್ಷೆ

Paris Olympics 2024: ಇಂದು ನಡೆಯುವ 10 ಮೀ. ಏರ್​ ರೈಫಲ್​ ಮಿಶ್ರ ತಂಡ ವಿಭಾಗದಲ್ಲಿ ಸಂದೀಪ್​ ಸಿಂಗ್​-ಇಲವೆನಿಲ್​ ವಲರಿವನ್​ ಮತ್ತು ಅರ್ಜುನ್​ ಬಬುಟ-ರಮಿತಾ ಜಿಂದಾಲ್ ಕಣಕ್ಕಿಳಿಯಲಿದ್ದಾರೆ.

VISTARANEWS.COM


on

Paris Olympics 2024
Koo

ಪ್ಯಾರಿಸ್​: ಒಲಿಂಪಿಕ್ಸ್​ನಲ್ಲಿ(Paris Olympics 2024) ಪದಕ ಸ್ಪರ್ಧೆಗಳು ಇಂದಿನಿಂದ(ಶನಿವಾರ) ಆರಂಭವಾಗಲಿದೆ. ಭಾರತ ಇಂದು ಹಲವು ವಿಭಾಗದ ಸ್ಪರ್ಧೆಯಲ್ಲಿ ಕಣಕ್ಕಿಳಿಯಲಿವೆ. ಈ ಪೈಕಿ ಶೂಟಿಂಗ್​ನಲ್ಲಿ ಭಾರತ ಒಂದು ಪದಕ್ಕೆ ಸ್ಪರ್ಧಿಸಲಿದ್ದು, ಪದಕ ಗೆಲ್ಲುವ ನಿರೀಕ್ಷೆಯೊಂದನ್ನು ಇಡಲಾಗಿದೆ. 10 ಮೀ. ಏರ್​ ರೈಫಲ್​ ಮಿಶ್ರ ತಂಡ ವಿಭಾಗದಲ್ಲಿ ಸಂದೀಪ್​ ಸಿಂಗ್​-ಇಲವೆನಿಲ್​ ವಲರಿವನ್​ ಮತ್ತು ಅರ್ಜುನ್​ ಬಬುಟ-ರಮಿತಾ ಜಿಂದಾಲ್ ಕಣಕ್ಕಿಳಿಯಲಿದ್ದಾರೆ. ಗೆದ್ದರೆ, ಶೂಟಿಂಗ್​ ವಿಭಾಗದಲ್ಲಿ 12 ವರ್ಷಗಳ ಪದಕ ಬರ ನೀಗಲಿದೆ. ಶೂಟಿಂಗ್​ ಸ್ಪರ್ಧೆ ಪ್ಯಾರಿಸ್​ನಿಂದ 272 ಕಿಲೋಮೀಟರ್​ ದೂರದಲ್ಲಿರುವ ಚಟೌರೊಕ್ಸ್​ನಲ್ಲಿ ನಡೆಯಲಿದೆ. ಭಾರತದ ಇಂದಿನ ಕ್ರೀಡಾ ಸ್ಪರ್ಧೆಗಳ ವೇಳಾಪ್ಟಟಿ ಹೀಗಿದೆ.

ಬ್ಯಾಡ್ಮಿಂಟನ್

ಪುರುಷರ ಸಿಂಗಲ್ಸ್ ಗುಂಪು ಹಂತ: ಎಚ್ ಎಸ್ ಪ್ರಣಯ್, ಲಕ್ಷ್ಯ ಸೇನ್.

ಮಹಿಳೆಯರ ಸಿಂಗಲ್ಸ್ ಗುಂಪು ಹಂತ: ಪಿ.ವಿ ಸಿಂಧು.

ಪುರುಷರ ಡಬಲ್ಸ್ ಗುಂಪು ಹಂತ: ಸಾತ್ವಿಕ್ ಸಾಯಿರಾಜ್ ರಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ.

ಮಹಿಳೆಯರ ಡಬಲ್ಸ್ ಗುಂಪು ಹಂತ: ತನೀಶಾ ಕ್ರಾಸ್ಟೊ ಮತ್ತು ಅಶ್ವಿನಿ ಪೊನ್ನಪ್ಪ. (ಮಧ್ಯಾಹ್ನ 12 ಗಂಟೆಯಿಂದ)

ಇದನ್ನೂ ಓದಿ Paris Olympics Boxing Draw: ಒಲಿಂಪಿಕ್ಸ್​ ಬಾಕ್ಸಿಂಗ್​ ಡ್ರಾ ಪ್ರಕಟ; ಮೊದಲ ಸುತ್ತಿನಲ್ಲೇ ಭಾರತೀಯ ಬಾಕ್ಸರ್​ಗಳಿಗೆ ಕಠಿಣ ಸ್ಪರ್ಧಿಗಳ ಸವಾಲು

ರೋಯಿಂಗ್


ಪುರುಷರ ಸಿಂಗಲ್ ಸ್ಕಲ್ಸ್ ಹೀಟ್ಸ್: ಬಾಲರಾಜ್ ಪನ್ವಾರ್. ಆರಂಭ ಮಧ್ಯಾಹ್ನ 12:30 ರಿಂದ

ಶೂಟಿಂಗ್

10 ಮೀ ಏರ್ ರೈಫಲ್ ಮಿಶ್ರ ತಂಡ ಅರ್ಹತೆ: ಸಂದೀಪ್ ಸಿಂಗ್, ಅರ್ಜುನ್ ಬಾಬುತಾ, ಎಲವೆನಿಲ್ ವಲರಿವನ್, ರಮಿತಾ ಜಿಂದಾಲ್. ಮಧ್ಯಾಹ್ನ 12:30

10ಮೀ ಏರ್ ಪಿಸ್ತೂಲ್ ಪುರುಷರ ಅರ್ಹತೆ: ಸರಬ್ಜೋತ್ ಸಿಂಗ್, ಅರ್ಜುನ್ ಚೀಮಾ. (ಮಧ್ಯಾಹ್ನ 2 ಗಂಟೆ)

10ಮೀ ಏರ್ ರೈಫಲ್ ಮಿಶ್ರ ತಂಡ ಪದಕ ಸುತ್ತುಗಳು: (ಅರ್ಹತೆ ಪಡೆದರೆ) ಮಧ್ಯಾಹ್ನ 2 ಗಂಟೆ

10 ಮೀ ಏರ್ ಪಿಸ್ತೂಲ್ ಮಹಿಳೆಯರ ಅರ್ಹತೆ ಸುತ್ತು: ರಿದಮ್ ಸಾಂಗ್ವಾನ್, ಮನು ಭಾಕರ್. (ಸಂಜೆ 4 ಗಂಟೆಯಿಂದ)

ಟೆನಿಸ್; ಮೊದಲ ಸುತ್ತಿನ ಪಂದ್ಯಗಳು


ಪುರುಷರ ಸಿಂಗಲ್ಸ್: ಸುಮಿತ್ ನಗಾಲ್.

ಪುರುಷರ ಡಬಲ್ಸ್: ರೋಹನ್ ಬೋಪಣ್ಣ ಮತ್ತು ಎನ್. ಶ್ರೀರಾಮ್ ಬಾಲಾಜಿ. (ಮಧ್ಯಾಹ್ನ 3:30 ರಿಂದ)

ಟೇಬಲ್ ಟೆನ್ನಿಸ್


ಪುರುಷರ ಸಿಂಗಲ್ಸ್: ಶರತ್ ಕಮಲ್, ಹರ್ಮೀತ್ ದೇಸಾಯಿ

ಮಹಿಳೆಯರ ಸಿಂಗಲ್ಸ್: ಮಾಣಿಕಾ ಬಾತ್ರಾ, ಶ್ರೀಜಾ ಅಕುಲಾ. (ಸಂಜೆ 6:30 ರಿಂದ)

ಬಾಕ್ಸಿಂಗ್

ಮಹಿಳೆಯರ 54 ಕೆಜಿ ವಿಭಾಗ: ಪ್ರೀತಿ ಪವಾರ್, 32ರ ಸುತ್ತು. (ಸಂಜೆ 7 ರಿಂದ)

ಹಾಕಿ


ಪುರುಷರ ಗುಂಪು ‘ಬಿ’: 
ಭಾರತ ಮತ್ತು ನ್ಯೂಜಿಲ್ಯಾಂಡ್​. (ರಾತ್ರಿ 9 ಗಂಟೆಗೆ)

Continue Reading

ಕ್ರೀಡೆ

IND vs SL: ಇಂದು ಲಂಕಾ ವಿರುದ್ಧ ಮೊದಲ ಟಿ20; ಹೇಗಿರಲಿದೆ ಭಾರತ ಆಡುವ ಬಳಗ?

IND vs SL: ಪಲ್ಲೆಕೆಲೆ ಕ್ರೀಡಾಂಗಣದ ಪಿಚ್ ಬ್ಯಾಟರ್‌ಗಳಿಗೆ ಹೆಚ್ಚು ನೆರವು ನೀಡುತ್ತದೆ. ಮೊದಲು ಬ್ಯಾಟಿಂಗ್ ಮಾಡುವ ತಂಡಗಳು ಸಾಮಾನ್ಯವಾಗಿ 170 ರನ್‌ಗಳ ಗುರಿಯನ್ನು ದಾಟಿದರೆ ಮಾತ್ರ ಪಂದ್ಯದಲ್ಲಿ ಪೈಪೋಟಿ ನೀಡಬಹುದು. ಈ ಮೊತ್ತವನ್ನು ಇಲ್ಲಿ ಸ್ಪರ್ಧಾತ್ಮಕ ಮೊತ್ತವೆಂದು ಪರಿಗಣಿಸಲಾಗಿದೆ.

VISTARANEWS.COM


on

IND vs SL
Koo

ಪೆಲೆಕೆಲೆ: ಇಂದು (ಶನಿವಾರ) ನಡೆಯುವ ಶ್ರೀಲಂಕಾ(IND vs SL) ತಂಡದ ಎದುರಿನ ಮೊದಲ ಟಿ20 ಪಂದ್ಯದಲ್ಲಿ ಕಣಕ್ಕಿಳಿಯಲು ಟಿ20 ವಿಶ್ವ ಚಾಂಪಿಯನ್ ಭಾರತ ಸಜ್ಜಾಗಿ ನಿಂತಿದೆ. 2021ರ ಬಳಿಕ ಭಾರತ(Sri Lanka vs India) ಮೊದಲ ಬಾರಿಗೆ ಶ್ರೀಲಂಕಾದಲ್ಲಿ ಆಡುತ್ತಿರುವ ದ್ವಿಪಕ್ಷೀಯ ಸರಣಿ ಇದಾಗಿದೆ. ಪಂದ್ಯ ರಾತ್ರಿ 7ಕ್ಕೆ ಆರಂಭಗೊಳ್ಳಲಿದೆ.

ಟಿ20 ವಿಶ್ವ ಕಪ್​ ಆಡಿದ ಸೂರ್ಯಕುಮಾರ್​ ಯಾದವ್​ ನಾಯಕನಾಗಿದ್ದರೆ, ಯಶಸ್ವಿ ಜೈಸ್ವಾಲ್, ಶಿವಂ ದುಬೆ ಆಲ್‌ರೌಂಡರ್ ಅಕ್ಷರ್ ಪಟೇಲ್, ಹಾರ್ದಿಕ್​ ಪಾಂಡ್ಯ, ಸಂಜು ಸ್ಯಾಮ್ಸನ್​, ಅರ್ಶ್​ದೀಪ್​ ಸಿಂಗ್​, ಮೊಹಮ್ಮದ್​ ಸಿರಾಜ್​ ಅವರು ತಂಡದಲ್ಲಿದ್ದಾರೆ. ಇವರ ಜತೆ ವಾಷಿಂಗ್ಟನ್ ಸುಂದರ್, ಸ್ಪಿನ್ನರ್ ರವಿ ಅವರ ಬಲವೂ ತಂಡಕ್ಕೆ ಇದೆ.

ಪಿಚ್​ ರಿಪೋರ್ಟ್


ಪಲ್ಲೆಕೆಲೆ ಕ್ರೀಡಾಂಗಣದ ಪಿಚ್ ಬ್ಯಾಟರ್‌ಗಳಿಗೆ ಹೆಚ್ಚು ನೆರವು ನೀಡುತ್ತದೆ. ಮೊದಲು ಬ್ಯಾಟಿಂಗ್ ಮಾಡುವ ತಂಡಗಳು ಸಾಮಾನ್ಯವಾಗಿ 170 ರನ್‌ಗಳ ಗುರಿಯನ್ನು ದಾಟಿದರೆ ಮಾತ್ರ ಪಂದ್ಯದಲ್ಲಿ ಪೈಪೋಟಿ ನೀಡಬಹುದು. ಈ ಮೊತ್ತವನ್ನು ಇಲ್ಲಿ ಸ್ಪರ್ಧಾತ್ಮಕ ಮೊತ್ತವೆಂದು ಪರಿಗಣಿಸಲಾಗಿದೆ. ಹೀಗಾಗಿ ಮೊದಲು ಬ್ಯಾಟಿಂಗ್​ ನಡೆಸುವ ತಂಡ ಆದಷ್ಟು ಬೃಹತ್​ ಮೊತ್ತ ಬಾರಿಸರೆ ಉತ್ತಮ. ರಾತ್ರಿಯ ವೇಳೆ ಇಬ್ಬನಿಯ ಕಾಟ ಇರುವುದರಿಂದ ಚೇಸಿಂಗ್​ ನಡೆಸಲು ಉತ್ತಮ. ಹೀಗಾಗಿ ಟಾಸ್​ ಗೆದ್ದ ತಂಡ ಮೊದಲು ಫೀಲ್ಡಿಂಗ್​ ಆಯ್ಕೆಗೆ ಪ್ರಾಮುಖ್ಯತೆ ನೀಡಬಹುದು. ವೇಗಿಗಳಿಗಿಂತ ಇಲ್ಲಿ ಸ್ಪಿನ್ನ್​ ಬೌಲರ್​ಗಳು ಹೆಚ್ಚು ಪರಿಣಾಮ ಬೀರಬಹುದು. ಲಂಕಾದಲ್ಲಿ ಯಾವುದೇ ಮಳೆ ಭೀತಿ ಎದುರಾಗಿಲ್ಲ ಹೀಗಾಗಿ ಪಂದ್ಯ ಸಂಪೂರ್ಣವಾಗಿ ನಡೆಯಲಿದೆ.

ಮುಖಾಮುಖಿ


ಭಾರತ ಮತ್ತು ಶ್ರೀಲಂಕಾ ತಂಡಗಳು(SL vs IND Head to Head in T20) ಇದುವರೆಗೂ ಒಟ್ಟು 19 ಟಿ20 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ಪೈಕಿ ಭಾರತ ಗರಿಷ್ಠ 19 ಪಂದ್ಯಗಳನ್ನು ಗೆದ್ದರೆ, ಶ್ರೀಲಂಕಾ 9 ಪಂದ್ಯಗಳನ್ನು ಮಾತ್ರ ಗೆದ್ದಿದೆ. ಒಂದು ಪಂದ್ಯ ಫಲಿತಾಂಶ ಕಂಡಿಲ್ಲ. ಇತ್ತಂಡಗಳು ಕೊನೆಯ ಬಾರಿಗೆ ಟಿ20 ಪಂದ್ಯವನ್ನಾಡಿದ್ದು 2023ರಲ್ಲಿ. ಈ ಪಂದ್ಯದಲ್ಲಿ ಭಾರತ 91 ರನ್​ ಅಂತರದ ಗೆಲುವು ಸಾಧಿಸಿತ್ತು.

ಇದನ್ನೂ ಓದಿ India Tour of Sri Lanka 2024 : ಶ್ರೀಲಂಕಾ ತಂಡಕ್ಕೆ 3ನೇ ಹೊಡೆತ; ಭಾರತ ವಿರುದ್ಧದ ಟಿ20 ಸರಣಿಗೆ ಬಿನುರಾ ಫರ್ನಾಂಡೊ ಅಲಭ್ಯ

ಉಭಯ ತಂಡಗಳು ಮೊದಲ ಬಾರಿಗೆ ಟಿ20 ಆಡಿದ್ದು 2009ರಲ್ಲಿ. ಕೊಲಂಬೊದ ಪ್ರೇಮದಾಸ ಕ್ರಿಕೆಟ್​ ಸ್ಟೆಡಿಯಂನಲ್ಲಿ ನಡೆದ ಪಂದ್ಯ ಇದಾಗಿತ್ತು. ಇಲ್ಲಿ ಧೋನಿ ಪಡೆ 3 ವಿಕೆಟ್​ಗಳ ಗೆಲುವು ಕಂಡಿತ್ತು. ಶ್ರೀಲಂಕಾ ತಂಡ ಭಾರತ ವಿರುದ್ಧ ಮೊದಲ ಟಿ20 ಗೆಲುವು ಸಾಧಿಸಿದ್ದು ಕೂಡ 2009ರಲ್ಲಿ. ನಾಗ್ಪುರದಲ್ಲಿ ನಡೆದಿದ್ದ ಪಂದ್ಯದಲ್ಲಿ. ಇಲ್ಲಿ ಲಂಕಾ ತಂಡ 29 ರನ್​​ಗಳ ಜಯ ಗಳಿಸಿತ್ತು. ಪ್ರಸ್ತುತ ಲಂಕಾ ತಂಡವನ್ನು ನೋಡುವಾಗ ಭಾರತ ಆರಾಮದಾಯಕವಾಗಿ ಈ ಸರಣಿ ಗೆಲ್ಲುವಂತಿದೆ.

ಸಂಭಾವ್ಯ ತಂಡಗಳು

ಭಾರತ: ಶುಭಮನ್ ಗಿಲ್, ಯಶಸ್ವಿ ಜೈಸ್ವಾಲ್, ಸೂರ್ಯಕುಮಾರ್ ಯಾದವ್ (ನಾಯಕ), ರಿಷಬ್ ಪಂತ್ (ವಿಕೀ), ರಿಂಕು ಸಿಂಗ್, ಹಾರ್ದಿಕ್ ಪಾಂಡ್ಯ, ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಅರ್ಷದೀಪ್ ಸಿಂಗ್, ರವಿ ಬಿಷ್ಣೋಯ್, ಮೊಹಮ್ಮದ್ ಸಿರಾಜ್.

ಶ್ರೀಲಂಕಾ: ಅವಿಷ್ಕ ಫೆರ್ನಾಂಡೋ, ಚರಿತ್ ಅಸಲಂಕ (ನಾಯಕ), ದಿನೇಶ್ ಚಾಂಡಿಮಾಲ್, ಕುಸಲ್ ಮೆಂಡಿಸ್ (ವಿಕೀ), ಪಾತುಮ್ ನಿಸ್ಸಾಂಕ, ವನಿಂದು ಹಸರಂಗ, ದಸುನ್ ಶಾನಕ, ಮಥೀಶ ಪತಿರಣ, ಮಹೇಶ್ ತೀಕ್ಷಣ, ದುನಿತ್ ವೆಲ್ಲಲಾಗೆ, ಚಾಮಿಂದು ವಿಕ್ರಮಸಿಂಘೆ

Continue Reading

ಅಂಕಣ

ರಾಜಮಾರ್ಗ ಅಂಕಣ: 28 ಒಲಿಂಪಿಕ್ ಪದಕಗಳ ವಿಶ್ವದಾಖಲೆ- ಮೈಕೆಲ್ ಫೆಲ್ಪ್ಸ್

ರಾಜಮಾರ್ಗ ಅಂಕಣ: ಭಗವಂತನು ಆತನನ್ನು ಈಜುವುದಕ್ಕಾಗಿ ಸೃಷ್ಟಿ ಮಾಡಿದ್ದ ಅನ್ನಿಸುತ್ತದೆ. ಆರು ಅಡಿ ನಾಲ್ಕು ಇಂಚು ಎತ್ತರ, ಮೀನಿನ ಹಾಗೆ ಬೆಂಡ್ ಆಗುವ ದೇಹ, ಭಾರೀ ಬಲಿಷ್ಟವಾದ ತೋಳುಗಳು, ನೀರನ್ನು ರಭಸವಾಗಿ ಹಿಂದೆ ತಳ್ಳಿ ಮುಂದೆ ಹೋಗುವ ದೋಣಿ ಆಕಾರದ ದೇಹ ಇದೆಲ್ಲವೂ ಆತನಿಗೆ ದೈವದತ್ತವಾಗಿ ಬಂದಿದ್ದವು.

VISTARANEWS.COM


on

Michel Phelps ರಾಜಮಾರ್ಗ ಅಂಕಣ
Koo

ಜಗತ್ತಿನ ಮಹೋನ್ನತ ಸ್ವಿಮ್ಮರ್ ನೀರಿಗೆ ಇಳಿದರೆ ದಾಖಲೆ ಮತ್ತು ದಾಖಲೆಗಳೇ ನಿರ್ಮಾಣ ಆಗುತ್ತಿದ್ದವು!

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ: ಒಲಿಂಪಿಕ್ಸ್ (Olympics) ವೇದಿಕೆಗಳಲ್ಲಿ ಒಂದೋ ಅಥವಾ ಎರಡೋ ಪದಕಗಳನ್ನು (medals) ಗೆಲ್ಲುವ ಕನಸು ಕಂಡವರು, ಅದನ್ನು ಸಾಧನೆ ಮಾಡಿದವರು ಲೆಜೆಂಡ್ ಅಂತ ಅನ್ನಿಸಿಕೊಳ್ಳುತ್ತಾರೆ. ಆದರೆ ಈ ಅಮೇರಿಕನ್ ಈಜುಗಾರ (Swimmer) ಒಟ್ಟು ನಾಲ್ಕು ಒಲಿಂಪಿಕ್ ಕೂಟಗಳಲ್ಲಿ ಭಾಗವಹಿಸಿ ಗೆದ್ದದ್ದು ಬರೋಬ್ಬರಿ 28 ಒಲಿಂಪಿಕ್ ಪದಕಗಳನ್ನು ಅಂದರೆ ನಂಬಲು ಸಾಧ್ಯವೇ ಇಲ್ಲ! ಅದರಲ್ಲಿ ಕೂಡ 23 ಹೊಳೆಯುವ ಚಿನ್ನದ ಪದಕಗಳು! ಆತನು ನೀರಿಗೆ ಇಳಿದರೆ ಸಾಕು ದಾಖಲೆಗಳು ಮತ್ತು ದಾಖಲೆಗಳು ಮಾತ್ರ ನಿರ್ಮಾಣ ಆಗುತ್ತಿದ್ದವು.

ಆತನು ಅಮೇರಿಕಾದ ಮಹೋನ್ನತ ಈಜುಗಾರ ಮೈಕೆಲ್ ಫೆಲ್ಪ್ಸ್ (Michel Phelps).

ಭಗವಂತನು ಆತನನ್ನು ಈಜುವುದಕ್ಕಾಗಿ ಸೃಷ್ಟಿ ಮಾಡಿದ್ದ ಅನ್ನಿಸುತ್ತದೆ. ಆರು ಅಡಿ ನಾಲ್ಕು ಇಂಚು ಎತ್ತರ, ಮೀನಿನ ಹಾಗೆ ಬೆಂಡ್ ಆಗುವ ದೇಹ, ಭಾರೀ ಬಲಿಷ್ಟವಾದ ತೋಳುಗಳು, ನೀರನ್ನು ರಭಸವಾಗಿ ಹಿಂದೆ ತಳ್ಳಿ ಮುಂದೆ ಹೋಗುವ ದೋಣಿ ಆಕಾರದ ದೇಹ ಇದೆಲ್ಲವೂ ಆತನಿಗೆ ದೈವದತ್ತವಾಗಿ ಬಂದಿದ್ದವು. ಸತತವಾಗಿ ನಾಲ್ಕು ಒಲಿಂಪಿಕ್ಸ್ ಕೂಟಗಳಲ್ಲಿ ಆತ ಭಾಗವಹಿಸಿದ್ದು ಮಾತ್ರವಲ್ಲ ಪ್ರತೀ ಬಾರಿ ನೀರಿಗೆ ಇಳಿದಾಗ ಒಂದಲ್ಲ ಒಂದು ದಾಖಲೆ, ಒಂದಲ್ಲ ಒಂದು ಪದಕ ಗೆಲ್ಲದೆ ಆತ ಮೇಲೆ ಬಂದ ಉದಾಹರಣೆಯೇ ಇಲ್ಲ!

ಬಾಲ್ಟಿಮೋರ್‌ನ ಬುಲ್ಲೆಟ್!

1985ನೇ ಜೂನ್ 30ರಂದು ಅಮೇರಿಕಾದ ಬಾಲ್ಟಿಮೋರ್ ಎಂಬ ಪ್ರಾಂತ್ಯದಲ್ಲಿ ಹುಟ್ಟಿದ ಆತ ತನ್ನ ಒಂಬತ್ತನೇ ವಯಸ್ಸಿಗೆ ಅಪ್ಪ ಮತ್ತು ಅಮ್ಮನ ಪ್ರೀತಿಯಿಂದ ವಂಚಿತವಾದನು. ಅದಕ್ಕೆ ಕಾರಣ ಅವರ ವಿಚ್ಛೇದನ. ಅದರಿಂದಾಗಿ ಆತನಿಗೆ ಮಾನಸಿಕ ನೆಮ್ಮದಿ ಹೊರಟುಹೋಯಿತು. ಆತನಿಗೆ Attention Deficit Hyper active Disorder (ADHD) ಎಂಬ ಮಾನಸಿಕ ಸಮಸ್ಯೆಯು ಬಾಲ್ಯದಿಂದಲೂ ತೊಂದರೆ ಕೊಡುತ್ತಿತ್ತು. ರಾತ್ರಿ ನಿದ್ದೆ ಬಾರದೆ ಆತ ಒದ್ದಾಡುತ್ತಿದ್ದನು. ಈ ಸಮಸ್ಯೆಗಳಿಂದ ಹೊರಬರಲು ಆತ ಆರಿಸಿಕೊಂಡ ಮಾಧ್ಯಮ ಎಂದರೆ ಅದು ಸ್ವಿಮ್ಮಿಂಗ್ ಪೂಲ್! ತನ್ನ ಏಳನೇ ವಯಸ್ಸಿಗೆ ನೀರಿಗೆ ಇಳಿದ ಆತನಿಗೆ ಬಾಬ್ ಬೌಮಾನ್ ಎಂಬ ಕೋಚ್ ಸಿಕ್ಕಿದ ನಂತರ ಆತನ ಬದುಕಿನ ಗತಿಯೇ ಬದಲಾಯಿತು. ಆತ ದಿನದ ಹೆಚ್ಚು ಹೊತ್ತನ್ನು ನೀರಿನಲ್ಲಿಯೇ ಕಳೆಯಲು ತೊಡಗಿದನು.

ಆತನ ಕಣ್ಣ ಮುಂದೆ ಇಬ್ಬರು ಸ್ವಿಮ್ಮಿಂಗ್ ಲೆಜೆಂಡ್ಸ್ ಇದ್ದರು. ಒಬ್ಬರು ಒಂದೇ ಒಲಿಂಪಿಕ್ ಕೂಟದಲ್ಲಿ ಏಳು ಚಿನ್ನದ ಪದಕಗಳನ್ನು ಗೆದ್ದ ಮಾರ್ಕ್ ಸ್ಪಿಟ್ಜ್ (1972). ಇನ್ನೊಬ್ಬರು ಆಸ್ಟ್ರೇಲಿಯಾದ ಸ್ವಿಮಿಂಗ್ ದೈತ್ಯ ಇಯಾನ್ ತೋರ್ಪ್. ಅವರಿಂದ ಸ್ಫೂರ್ತಿ ಪಡೆದ ಆತ ಮುಂದೆ ಮಾಡಿದ್ದು ಎಲ್ಲವೂ ವಿಶ್ವ ದಾಖಲೆಯ ಸಾಧನೆಗಳೇ ಆಗಿವೆ. ಜನರು ಆತನನ್ನು ಬಾಲ್ಟಿಮೋರದ ಬುಲೆಟ್ ಎಂದು ಪ್ರೀತಿಯಿಂದ ಕರೆದರು.

ಸತತ ನಾಲ್ಕು ಒಲಿಂಪಿಕ್ಸ್ – 28 ಪದಕಗಳು – ಅದರಲ್ಲಿ 23 ಚಿನ್ನದ ಪದಕಗಳು!

2004ರ ಅಥೆನ್ಸ್ ಒಲಿಂಪಿಕ್ಸ್ – ಒಟ್ಟು ಎಂಟು ಪದಕಗಳು.
2008 ಬೀಜಿಂಗ್ ಒಲಿಂಪಿಕ್ಸ್ – ಒಟ್ಟು ಎಂಟು ಚಿನ್ನದ ಪದಕಗಳು.
2012 ಲಂಡನ್ ಒಲಿಂಪಿಕ್ಸ್ – ನಾಲ್ಕು ಚಿನ್ನ ಮತ್ತು ಎರಡು ಬೆಳ್ಳಿಯ ಪದಕಗಳು.
2016 ರಿಯೋ ಒಲಿಂಪಿಕ್ಸ್ – ಐದು ಚಿನ್ನದ ಪದಕ ಮತ್ತು ಒಂದು ಬೆಳ್ಳಿ.

ಅಂದರೆ ಸತತ ನಾಲ್ಕು ಒಲಿಂಪಿಕ್ಸ್ ಕೂಟಗಳಲ್ಲಿ ಭಾಗವಹಿಸಿ ಒಟ್ಟು 28 ಪದಕಗಳನ್ನು ಬೇರೆ ಯಾರೂ ಕಲ್ಪನೆ ಕೂಡ ಮಾಡಲು ಸಾಧ್ಯವಿಲ್ಲ! ಬಟರ್ ಫ್ಲೈ, ಮೆಡ್ಲಿ, ಫ್ರೀ ಸ್ಟೈಲ್, ಬ್ಯಾಕ್ ಸ್ಟ್ರೋಕ್ಸ್…ಹೀಗೆ ಪ್ರತೀಯೊಂದು ವಿಭಾಗಳಲ್ಲಿಯೂ ಮೈಕೆಲ್ ಒಂದರ ಮೇಲೊಂದು ಪದಕಗಳನ್ನು ಗೆಲ್ಲುತ್ತಾ ಹೋಗಿದ್ದಾನೆ! ಆ 16 ವರ್ಷಗಳ ಅವಧಿಯಲ್ಲಿ ಆತನಿಗೆ ಸ್ಪರ್ಧಿಗಳೇ ಇರಲಿಲ್ಲ ಎನ್ನಬಹುದು!

ಮೈಕೆಲ್ ಎಂಬ ಚಿನ್ನದ ಮೀನಿನ ಜಾಗತಿಕ ದಾಖಲೆಗಳು

೧) ಆತನು ತನ್ನ ಜೀವಮಾನದಲ್ಲಿ ಗೆದ್ದ ಒಟ್ಟು ಅಂತಾರಾಷ್ಟ್ರೀಯ ಪದಕಗಳ ಸಂಖ್ಯೆ ಬೆರಗು ಹುಟ್ಟಿಸುತ್ತದೆ. ಒಟ್ಟು 82 ಪದಕಗಳು. ಅದರಲ್ಲಿ 65 ಚಿನ್ನ, 14 ಬೆಳ್ಳಿ ಮತ್ತು 3 ಕಂಚು!
೨) ಒಟ್ಟು 20 ಗಿನ್ನೆಸ್ ದಾಖಲೆಗಳು ಆತನ ಹೆಸರಿನಲ್ಲಿ ಇವೆ!
೩) ಒಟ್ಟು 39 ವಿಶ್ವದಾಖಲೆಗಳು ಆತನ ಹೆಸರಿನಲ್ಲಿ ಇವೆ. ಅದರಲ್ಲಿ 29 ವೈಯಕ್ತಿಕ ಮತ್ತು 10 ರಿಲೇ ಸ್ಪರ್ಧೆಗಳದ್ದು!
೪) 2004ರಿಂದ 2018ರವರೆಗೆ ನಡೆದ ವಿಶ್ವ ಈಜು ಚಾಂಪಿಯನಶಿಪ್ ಸ್ಪರ್ಧೆಗಳಲ್ಲಿ ಆತ ಪದಕಗಳ ಗೊಂಚಲು ಗೆಲ್ಲದೆ ಹಿಂದೆ ಬಂದ ನಿದರ್ಶನವೇ ಇಲ್ಲ!
೫) ಒಟ್ಟು ಎಂಟು ಬಾರಿ ಅವನಿಗೆ ‘ವರ್ಲ್ಡ್ ಸ್ವಿಮ್ಮರ್ ಆಫ್ ದ ಇಯರ್’ ಪ್ರಶಸ್ತಿಗಳು ದೊರೆತಿವೆ!
೬) ಒಟ್ಟು 11 ಬಾರಿ ‘ಅಮೇರಿಕನ್ ಸ್ವಿಮ್ಮರ್ ಆಫ್ ದ ಇಯರ್’ ಪ್ರಶಸ್ತಿಗಳು ದೊರೆತಿವೆ!
೭) ಒಂದೇ ಒಲಿಂಪಿಕ್ ಕೂಟದಲ್ಲಿ ಆತ ಎಂಟು ಚಿನ್ನದ ಪದಕಗಳನ್ನು (2008 ಬೀಜಿಂಗ್) ಗೆದ್ದ ದಾಖಲೆಯನ್ನು ಮುಂದೆ ಕೂಡ ಯಾರೂ ಮುರಿಯುವ ಸಾಧ್ಯತೆ ಇಲ್ಲವೇ ಇಲ್ಲ!
೮) ಆತನಿಗೆ ಜಾಗತಿಕ ಒಲಿಂಪಿಕ್ ಸಮಿತಿಯು ಜಗತ್ತಿನ ಅತ್ಯುತ್ತಮ ಸ್ವಿಮ್ಮರ್ ಪ್ರಶಸ್ತಿ ನೀಡಿ ಗೌರವಿಸಿದೆ!
೯) 100 ಮೀಟರ್ ಬಟರ್ ಫ್ಲೈ, 200 ಮೀಟರ್ ಬಟರ್ ಫ್ಲೈ, 200 ಮೀಟರ್ ಇಂಡಿವಿಜುವಲ್ ಮೆಡ್ಲಿ, 400 ಮೀಟರ್ ಇಂಡಿವಿಜುವಲ್ ಮೆಡ್ಲಿ ಈ ವಿಭಾಗದಲ್ಲಿ ಆತ ಮಾಡಿದ ಜಾಗತಿಕ ದಾಖಲೆಗಳನ್ನು ಮುಂದೆ ಕೂಡ ಯಾರೂ ಮುರಿಯುವ ಸಾಧ್ಯತೆ ಇಲ್ಲ ಎಂದು ಭಾವಿಸಲಾಗುತ್ತಿದೆ!

ಈ ಎಲ್ಲಾ ಸಾಧನೆಗಳಿಗೆ ಕಾರಣ ಆತನ ಈಜುವ ಪ್ಯಾಶನ್!

ಆತನ ಆತ್ಮಚರಿತ್ರೆಯ ಪುಸ್ತಕವನ್ನು ಒಮ್ಮೆ ತಿರುವಿ ಹಾಕಿದಾಗ ಆತನ ಸ್ವಿಮ್ಮಿಂಗ್ ಪ್ಯಾಶನ್ ಬಗ್ಗೆ ಹಲವು ಉದಾಹರಣೆಗಳು ದೊರೆಯುತ್ತವೆ.

ಒಮ್ಮೆ ಏನಾಯಿತೆಂದರೆ 2001 ಸೆಪ್ಟೆಂಬರ್ 11ರಂದು ಅಮೆರಿಕದ ಟ್ವಿನ್ ಟವರ್ ಮೇಲೆ ಭಯೋತ್ಪಾದಕ ಧಾಳಿ ನಡೆದು ಇಡೀ ಟವರ್ ಕುಸಿದು ಹೋದದ್ದು, ಇಡೀ ಅಮೇರಿಕಾ ನಲುಗಿ ಹೋದದ್ದು ನಮಗೆಲ್ಲ ಗೊತ್ತಿದೆ. ಸರಿಯಾಗಿ ಅದೇ ಹೊತ್ತಿಗೆ ಮೈಕೆಲ್ ಸ್ವಿಮ್ಮಿಂಗ್ ಪೂಲನಲ್ಲಿ ಈಜುತ್ತಾ ತನ್ನ ಕೋಚಗೆ ಕಾಲ್ ಮಾಡಿ ಕೇಳಿದ್ದನಂತೆ- ಸರ್, ಎಲ್ಲಿದ್ದೀರಿ? ನಾನು ಪೂಲಲ್ಲಿ ಪ್ರಾಕ್ಟೀಸ್ ಮಾಡ್ತಾ ಇದ್ದೇನೆ!

ಮೈಕೆಲ್ ಫೆಲ್ಫ್ಸ್ ಇಷ್ಟೊಂದು ವಿಶ್ವ ದಾಖಲೆಗಳನ್ನು ಕ್ರಿಯೇಟ್ ಮಾಡಿದ್ದು ಸುಮ್ಮನೆ ಅಲ್ಲ!

ಇದನ್ನೂ ಓದಿ: ರಾಜಮಾರ್ಗ ಅಂಕಣ: ಕಾರ್ಗಿಲ್, ಇದು‌ ಕೆಚ್ಚಿನ ಕಲಿಗಳ ಸಮರಗಾಥೆ

Continue Reading
Advertisement
Actor Darshan Astrologer Chanda Pandey Said Facing Problems Because Of His vig
ಕ್ರೈಂ19 mins ago

Actor Darshan: ವಿಗ್‌ ಹಾಕಿದ್ದರಿಂದಲೇ ದರ್ಶನ್‌ಗೆ ಕಂಟಕ ಆಯ್ತು ಎಂದ ಕಾಳಿ ಉಪಾಸಕಿ ಚಂದಾ ಪಾಂಡೇ!

Encounter in Kupwara
ದೇಶ46 mins ago

Encounter in Kupwara: ಕುಪ್ವಾರಾದಲ್ಲಿ ಉಗ್ರರೊಂದಿಗೆ ಗುಂಡಿನ ಚಕಮಕಿ: ಮೂವರು ಸೈನಿಕರಿಗೆ ಗಾಯ

Champions Trophy 2025
ಕ್ರೀಡೆ49 mins ago

Champions Trophy 2025: ನಾವು ತುಂಬಾ ಒಳ್ಳೆಯವರು, ಪಾಕಿಸ್ತಾನಕ್ಕೆ ಬನ್ನಿ; ಟೀಮ್ ಇಂಡಿಯಾಗೆ ಪಾಕ್​ ಆಟಗಾರನ ಮನವಿ

Murder in PG Case
ಕ್ರೈಂ57 mins ago

Murder in PG: ಪಿಜಿಯಲ್ಲಿ ಯುವತಿ ಕೊಲೆ ಮಾಡಿದ ಪಾತಕಿ ಮಧ್ಯಪ್ರದೇಶದಲ್ಲಿ ಸೆರೆ

kaveri aarti
ಪ್ರಮುಖ ಸುದ್ದಿ1 hour ago

Kaveri Aarti: ಗಂಗಾ ಆರತಿ ಮಾದರಿಯಲ್ಲಿ ಕಾವೇರಿ ಆರತಿ; ದಸರಾ ಹೊತ್ತಿಗೆ ರೆಡಿ

Malaika Arora breakup rumours rushes past Arjun Kapoor
ಬಾಲಿವುಡ್1 hour ago

Malaika Arora: ಒಂದೇ ಈವೆಂಟ್‌ನಲ್ಲಿ ಇದ್ದರೂ ಒಬ್ಬರ ಮುಖವನ್ನು ಇನ್ನೊಬ್ಬರು ನೋಡಿಕೊಂಡಿಲ್ಲ! ಅರ್ಜುನ್​-ಮಲೈಕಾ ಬ್ರೇಕಪ್‌ ಖಚಿತ?

Narendra Modi
ದೇಶ1 hour ago

Narendra Modi: ರಷ್ಯಾ ಬಳಿಕ ಮುಂದಿನ ತಿಂಗಳು ಯುದ್ಧ ಪೀಡಿತ ಉಕ್ರೇನ್‌ಗೆ ಪ್ರಧಾನಿ ಮೋದಿ ಭೇಟಿ

Actor Rajinikanth Fulfils Grandfather Duties By Dropping Grandson At School
ಕಾಲಿವುಡ್1 hour ago

Actor Rajinikanth: ಶಾಲೆಗೆ ಹೋಗಲ್ಲ ಎಂದು ಹಠ ಹಿಡಿದ ಮೊಮ್ಮಗ; ತಾತನ ಡ್ಯೂಟಿ ಮಿಸ್ ಮಾಡ್ದೆ ಸ್ಕೂಲ್‌ಗೆ ಬಿಟ್ಟು ಬಂದ ರಜನಿಕಾಂತ್‌!

Paris Olympics 2024
ಕ್ರೀಡೆ2 hours ago

Paris Olympics 2024: ಒಲಿಂಪಿಕ್ಸ್​ನಲ್ಲಿ ಇಂದು ಭಾರತದ ಕ್ರೀಡಾ ಸ್ಫರ್ಧೆಗಳು; ಶೂಟಿಂಗ್​ನಲ್ಲಿ ಪದಕ ನಿರೀಕ್ಷೆ

students night
ಪ್ರಮುಖ ಸುದ್ದಿ2 hours ago

Students Night: ವಿದ್ಯಾರ್ಥಿಗಳು ಕುಡಿದು ಕುಪ್ಪಳಿಸಲು ʼಸ್ಟೂಡೆಂಟ್ಸ್‌ ನೈಟ್‌ʼ ಆಯೋಜಿಸಿದ ಬಾರ್‌ ಮಾಲಿಕ! ಕಾರ್ಯಕ್ರಮ ರದ್ದು

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Ankola landslide
ಉತ್ತರ ಕನ್ನಡ16 hours ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ17 hours ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ18 hours ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

Karnataka rain
ಮಳೆ19 hours ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

karnataka Rain
ಮಳೆ2 days ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್2 days ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ2 days ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

Actor Darshan
ಸಿನಿಮಾ2 days ago

Actor Darshan: ಆಧ್ಯಾತ್ಮದತ್ತ ವಾಲಿದ ದರ್ಶನ್‌; ಜೈಲಲ್ಲಿ ಹೇಗಿದೆ ಗೊತ್ತಾ ನಟನ ಬದುಕು

karnataka Weather Forecast
ಮಳೆ3 days ago

Karnataka Weather : ರಭಸವಾಗಿ ಸುರಿಯುವ ಮಳೆ; 50 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ

karnataka weather Forecast
ಮಳೆ4 days ago

Karnataka Weather : ರಾಜ್ಯದಲ್ಲಿ ಮುಂದುವರಿದ ಮಳೆ ಅವಾಂತರ; ನಾಳೆಯೂ ಇರಲಿದೆ ಅಬ್ಬರ

ಟ್ರೆಂಡಿಂಗ್‌