ನಾನು ಐಶ್ವರ್ಯಾ ರೈಯನ್ನು ಮದುವೆಯಾಗಿದ್ದರೆ... ಕಿಡಿ ಹಚ್ಚಿದ ಪಾಕ್​ ಮಾಜಿ ಕ್ರಿಕೆಟರ್​ ರಜಾಕ್​ ಹೇಳಿಕೆ - Vistara News

ಕ್ರಿಕೆಟ್

ನಾನು ಐಶ್ವರ್ಯಾ ರೈಯನ್ನು ಮದುವೆಯಾಗಿದ್ದರೆ… ಕಿಡಿ ಹಚ್ಚಿದ ಪಾಕ್​ ಮಾಜಿ ಕ್ರಿಕೆಟರ್​ ರಜಾಕ್​ ಹೇಳಿಕೆ

ಪಾಕಿಸ್ತಾನ ಕ್ರಿಕೆಟ್​ಗೆ ಸಂಬಂಧವೇ ಇಲ್ಲದ ಐಶ್ವರ್ಯಾ ರೈ ಅವರನ್ನು ಮದುವೆವೆಯಾಗಿದ್ದರೆ ಎಂಬ ಹೇಳಿಕೆ ನೀಡಿರುವ ರಜಾಕ್ ಅವರ ಕಳಪೆ ಮನಸ್ಥಿತಿಗೆ ನೆಟ್ಟಿಗರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

VISTARANEWS.COM


on

Abdul Razzak
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಅಬ್ದುಲ್ ರಜಾಕ್ ಇತ್ತೀಚೆಗೆ ಸಂದರ್ಶನವೊಂದರಲ್ಲಿ ಬಾಲಿವುಡ್ ನಟಿ ಐಶ್ವರ್ಯಾ ರೈ ಬಚ್ಚನ್ ಅವರ ಹೆಸರನ್ನು ಅನಗತ್ಯವಾಗಿ ತಮ್ಮ ಮಾತಿನ ಮಧ್ಯೆ ಎಳೆದು ತರುವ ಮೂಲಕ ವಿವಾದವನ್ನು ಹುಟ್ಟುಹಾಕಿದ್ದಾರೆ. ಭಾರತದಲ್ಲಿ ನಡೆದ ಐಸಿಸಿ ವಿಶ್ವಕಪ್ 2023 ರಿಂದ ತಂಡವು ಬೇಗನೆ ನಿರ್ಗಮಿಸಿದ ನಂತರ ಪಾಕಿಸ್ತಾನ ಕ್ರಿಕೆಟ್ ಮಂಡಳಿಯೊಳಗಿನ ಪ್ರಕ್ಷುಬ್ಧತೆಯ ಕುರಿತು ರಜಾಕ್​ ಮಾತನಾಡುತ್ತಿದ್ದರು. ಈ ವೇಳೆ ಅವರು ತಾನು ಮಾಜಿ ವಿಶ್ವ ಸುಂದರಿ ಐಶ್ವರ್ಯಾ ರೈಯನ್ನು ಮದುವೆಯಾಗುತ್ತಿದ್ದರೆ ಎಂದು ಹೇಳಿಕೆ ಕೊಟ್ಟಿದ್ದಾರೆ. ಇದು ಕೀಳು ಅಭಿರುಚಿ ಎಂಬುವ ಟೀಕೆಗಳು ವ್ಯಕ್ತಗೊಂಡಿವೆ.

ಪಿಸಿಬಿಯ ಆಡಳಿತ ಮಂಡಳಿಯನ್ನು ಟೀಕಿಸುವಾಗ, ಅಬ್ದುಲ್ ಐಶ್ವರ್ಯಾ ರೈ ಅವರನ್ನು ಉದಾಹರಣೆಯಾಗಿ ಬಳಸಿದ್ದರು. ನಾನು ಐಶ್ವರ್ಯಾ ರೈಯನ್ನು ಮದುವೆಯಾಗುವುದರಿಂದ ಉತ್ತಮ ನಡತೆ ಮತ್ತು ಸದ್ಗುಣಶೀಲ ಮಕ್ಕಳು ಹುಟ್ಟುತ್ತವೆ ಎಂಬ ನಿರೀಕ್ಷೆ ಸುಳ್ಳು ಎಂಬ ಅಧಿಕಪ್ರಸಂಗದ ಮಾತನ್ನು ಹೇಳಿದ್ದರು. ಪಾಕಿಸ್ತಾನ ಕ್ರಿಕೆಟ್​ ಮಂಡಳಿಯೂ ಇದೇ ರೀತಿ ಒಳ್ಳೆಯ ಮಕ್ಕಳನ್ನು ಹುಟ್ಟಿಸುವ ಹುಸಿ ನಿರೀಕ್ಷೆಯಲ್ಲಿದೆ. ಆದರೆ ಅದು ಸಾಧ್ಯವಾಗುತ್ತಿಲ್ಲ ಎಂದು ರಜಾಕ್​ ಕಾಮೆಂಟ್ ಮಾಡಿದ್ದರು.

ಪಾಕ್​​ ಕ್ರಿಕೆಟ್​ ಆಡಳಿತಕ್ಕೂ ಐಶ್ವರ್ಯ ರೈಗೂ ಯಾವುದೇ ಸಂಬಂಧ ಇಲ್ಲ. ಅಂಥದ್ದರಲ್ಲಿ ಬೇರೆ ದೇಶದ, ಬೇರೆ ಧರ್ಮದ ನಟಿಯೊಬ್ಬಳನ್ನು ಮದುವೆಯಾಗಿ ಅವರಿಗೆ ಒಳ್ಳೆಯ ಮಕ್ಕಳು ಹುಟ್ಟುವುದಿಲ್ಲ ಎಂಬ ಬೇಡ ಹೇಳಿಕೆ ನೀಡಿರುವುದು ಅಕ್ಷಮ್ಯ ಎಂಬುದಾಗಿ ಐಶ್ವರ್ಯಾ ಅಭಿಮಾನಿಗಳು ಟೀಕಿಸಿದ್ದಾರೆ. ರಜಾಕ್​ ಉರ್ದುವಿನಲ್ಲಿ ನೀಡಿರುವ ಈ ಕಾಮೆಂಟ್​ಗೆ ಮರ್ಯಾದೆಯೇ ಇಲ್ಲದ ಪಾಕಿಸ್ತಾನದ ಮಾಜಿ ಕ್ರಿಕೆಟ್ ತಾರೆಗಳಾದ ಉಮರ್ ಗುಲ್ ಮತ್ತು ಶಾಹಿದ್ ಅಫ್ರಿದಿ ಮತ್ತಿತರರು ಜೋರಾಗಿ ನಕ್ಕಿದ್ದರು. ಅವರು ಕೂಡ ಅದನ್ನು ಖಂಡಿಸಿಲ್ಲ. ಈ ಮೂಲಕ ಪಾಕಿಸ್ತಾನ ಕ್ರಿಕೆಟ್​ ಆಟಗಾರರ ಮನಸ್ಥಿತಿ ಜಗಜ್ಜಾಹೀರಾಗಿದೆ.

ಅಬ್ದುಲ್ ರಜಾಕ್ ಹೇಳಿಕೆಗೆ ವ್ಯಾಪಕ ವಿರೋಧ

ರಜಾಕ್ ಅವರ ಕಳಪೆ ಜೋಕ್​​ ಮಾಜಿಕ ಮಾಧ್ಯಮದಲ್ಲಿ ಚರ್ಚೆಗೆ ಕಾರಣವಾಯಿತು. ಅಲ್ಲಿ ಐಶ್ವರ್ಯಾ ಅಭಿಮಾನಿಗಳು ಮತ್ತು ನೆಟ್ಟಿಗರು ಜನಪ್ರಿಯ ಭಾರತೀಯ ನಟಿಯ ಬಗ್ಗೆ ಅಬ್ದುಲ್ ರಜಾಕ್​ ಅವರ ಅಗೌರವದ ಹೇಳಿಕೆಯನ್ನು ಖಂಡಿಸಿದರು. ನೆಟ್ಟಗೆ ಆಡಲು ಬಾರದ ಪಾಕ್​ ತಂಡದ ಬಗ್ಗೆ ಉದಾಹರಣೆ ನೀಡಲು ನಮ್ಮ ನಟಿಯೇ ಬೇಕಾಗಿತ್ತಾ. ನಿಮ್ಮಲ್ಲಿರುವ ಯಾರಾದರೂ ಕಳಪೆ ನಟಿಯನ್ನು ಉದಾಹರಣೆ ನೀಡಿ ಎಂದು ಕ್ರೋಧ ವ್ಯಕ್ತಪಡಿಸಿದ್ದಾರೆ. ಅಂತೆಯೇ ವಿಶ್ವಕಪ್​ನಲ್ಲಿ ತಂಡದ ಕಳಪೆ ಪ್ರದರ್ಶನದ ಬಗ್ಗೆ ಅಸಮಾಧಾನ ಇರುವ ಇದೇ ಹೊತ್ತಿನಲ್ಲಿ ಮಾಜಿ ಕ್ರಿಕೆಟಿಗನ ಬೇಜವಾಬ್ದಾರಿ ಹೇಳಿಕೆ ಉರಿಯುವ ಬೆಂಕಿ ತುಪ್ಪ ಸುರಿದಂತಾಗಿದೆ.

ಟ್ವಿಟ್ಟರ್ ಬಳಕೆದಾರರೊಬ್ಬರು “ಪ್ರತಿದಿನ ಅಬ್ದುಲ್ ರಜಾಕ್ ಅವರ ಹೊಸ ಕಳಪೆ ಹೇಳಿಎ ” ಎಂದು ಬರೆದರೆ, ಇನ್ನೊಬ್ಬ ಬಳಕೆದಾರರು “ಅಬ್ದುಲ್ ರಜಾಕ್ ನೀಡಿದ ನಾಚಿಕೆಗೇಡಿನ ಉದಾಹರಣೆ” ಎಂದು ಬರೆದಿದ್ದಾರೆ. “ಐಶ್ವರ್ಯಾ ರೈ ಬಚ್ಚನ್ ಮತ್ತು ಶಾಹಿದ್ ಅಫ್ರಿದಿ ಬಗ್ಗೆ ಪಾಕಿಸ್ತಾನದ ದಂತಕಥೆ ಕ್ರಿಕೆಟಿಗ ಅಬ್ದುಲ್ ರಜಾಕ್ ನೀಡಿರುವುದು ಥರ್ಡ್ ಕ್ಲಾಸ್ ಹೇಳಿಕೆಯಾಗಿದೆ. ಹೇಳಿಕೆ ನೀಡುವುದಲ್ಲದೆ ನಾಚಿಕೆಯಿಲ್ಲದೆ ನಗುತ್ತಿದ್ದಾರೆ. ಇದು ಪಾಕಿಸ್ತಾನದ ಜನರ ದುಷ್ಟ ಮನಸ್ಥಿತಿಯನ್ನು ತೋರಿಸುತ್ತದೆ ಎಂದು ನೆಟ್ಟಿಗರೊಬ್ಬರು ಕಾಮೆಂಟ್​ ಮಾಡಿದ್ದಾರೆ. ಪಾಕಿಸ್ತಾನ ಮಹಿಳೆಯರು ತಮ್ಮ ದೇಶದಲ್ಲಿ ಪ್ರತಿದಿನ ಏನನ್ನು ಅನುಭವಿಸುತ್ತಿದ್ದಾರೆ ಎಂಬುದಕ್ಕೆ ರಜಾಕ್ ಅವರ ಮನಸ್ಥಿತಿಯೇ ಉದಾಹರಣೆ ಎಂದು ಮತ್ತೊಬ್ಬ ಟ್ವಿಟ್ಟರ್ ಬಳಕೆದಾರರು ಬರೆದಿದ್ದಾರೆ.

ಇದನ್ನೂ ಓದಿ: ind vs Nz : ನ್ಯೂಜಿಲ್ಯಾಂಡ್​ ವಿರುದ್ಧದ ಪಂದ್ಯದಲ್ಲಿ ಭಾರತ ತಂಡದ ಆಟಗಾರರಿಂದ ಏನು ನಿರೀಕ್ಷಿಸಬಹುದು?

ನಟಿ ಪ್ರತಿಕ್ರಿಯೆ ಕೊಟ್ಟಿಲ್ಲ

ಐಶ್ವರ್ಯಾ ಅವರು ಈ ಹೇಳಿಕೆಗೆ ಪ್ರತಿಕ್ರಿಯಿಸಿಲ್ಲ. ಆದಾಗ್ಯೂ, ಅಬ್ದುಲ್ ಅವರ ಕೀಳು ಹೇಳಿಕೆಯು ಭಾರತ ವಿರುದ್ಧ ಪಾಕ್ ತಂಡದ ಸೋಲು ಸೇರಿದಂತೆ ಆ ತಂಡದ ವಿಶ್ವ ಕಪ್ ಅಭಿಯಾನದ ವೈಫಲ್ಯಕ್ಕೆ ಮತ್ತೊಂದು ಸಾಕ್ಷಿ ಒದಗಿಸುತ್ತಿದೆ. ಭ್ರಮೆಯಲ್ಲಿ ಬದುಕುವ ಆ ದೇಶದ ಮಾಜಿ ಕ್ರಿಕೆಟಿಗರು ಇಂಥ ಹೇಳಿಕೆಗಳಿಗೆ ಸುಪ್ರಸಿದ್ಧರೇ ಹೊರತು ತಂಡವನ್ನು ಸರಿ ಮಾಡಲು ಮುಂದಾಗುವುದಿಲ್ಲ ಎಂಬುದು ಖಾತರಿಯಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕ್ರಿಕೆಟ್

Ashwini Puneeth Rajkumar: ಅಪ್ಪು ಕಪ್‌ ಸೀಸನ್‌ 2ಗೆ ಚಾಲನೆ ನೀಡಿದ ಅಶ್ವಿನಿ ಪುನೀತ್‌ ರಾಜ್‌ಕುಮಾರ್!

Ashwini Puneeth Rajkumar: ಸೀಸನ್‌ 1 ಯಶಸ್ವಿಯಾಗಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಈ ಬಾರಿ ಅದ್ದೂರಿಯಾಗಿ ಸೀಸನ್‌ 2 ಅನ್ನು ಆಯೋಜಿಸಲಾಗಿದೆ. ಇತ್ತೀಚೆಗೆ ಅಪ್ಪು ಕಪ್‌ ಸೀಸನ್‌ 2 ಆಕರ್ಷಕ ಟ್ರೋಫಿ ಜೊತೆಗೆ ತಂಡಗಳ ಜೆರ್ಸಿಗಳನ್ನು ಅನಾವರಣಗೊಳಿಸಲಾಗಿತ್ತು. ಇದೀಗ ಅದ್ದೂರಿಯಾಗಿ ಪಂದ್ಯಾವಳಿಗಳನ್ನು ಆರಂಭಿಸಲಾಗಿದ್ದು, ಅಂತಿಮ ವಿಜೇತರಿಗೆ ಭಾರೀ ಬಹುಮಾನ ಘೋಷಣೆ ಮಾಡಲಾಗಿದೆ.

VISTARANEWS.COM


on

Ashwini Puneeth Rajkumar launched Appu Cup season 2
Koo

ಬೆಂಗಳೂರು: ಅಪ್ಪು ನೆನಪನ್ನು ಚಿರಸ್ಥಾಯಿಯಾಗಿಸುವ ನಿಟ್ಟಿನಲ್ಲಿ ಅಪ್ಪು ಕಪ್‌ ಸೀಸನ್‌ 2 ಬ್ಯಾಡ್ಮಿಂಟನ್‌ ಟೂರ್ನಿಗೆ ಇಂದು ನಾಗರಬಾವಿಯ ಕಿಂಗ್ಸ್‌ ಕ್ಲಬ್‌ನಲ್ಲಿ ಚಾಲನೆ ನೀಡಲಾಯಿತು. ಕಾರ್ಯಕ್ರಮವನ್ನು ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ ಉದ್ಘಾಟಿಸಿದರು.

ಕಾರ್ಯಕ್ರಮ ಉದ್ಘಾಟಿಸಿದ ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ ಸ್ಪರ್ಧಾಳುಗಳಿಗೆ ಶುಭ ಕೋರಿ, ಮೊದಲ ಪಂದ್ಯದ ಆರಂಭಕ್ಕೆ ಟಾಸ್‌ ಹಾಕಿದರು.

PRK ಸಂಸ್ಥೆಯ ಸಹಯೋಗದೊಂದಿಗೆ ಚೇತನ್‌ ಸೂರ್ಯ ಅವರು ಈ ಟೂರ್ನಮೆಂಟ್‌ ಅನ್ನು ಆಯೋಜಿಸಿದ್ದು, ಈ ಪಂದ್ಯಾವಳಿಯು ಮೂರು ದಿನಗಳ ಕಾಲ ನಡೆಯಲಿದೆ. ಅಪ್‌ ಕಪ್‌ ಸೀಸನ್‌ 2ನಲ್ಲಿ ಹತ್ತು ತಂಡಗಳು ಭಾಗವಹಿಸಲಿದ್ದು, ಸಿನಿಮಾ, ಧಾರಾವಾಹಿ ಮತ್ತು ಮಾಧ್ಯಮದವರು ಆಡಲಿದ್ದಾರೆ.

ಸೀಸನ್‌ 1 ಯಶಸ್ವಿಯಾಗಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಈ ಬಾರಿ ಅದ್ದೂರಿಯಾಗಿ ಸೀಸನ್‌ 2 ಅನ್ನು ಆಯೋಜಿಸಲಾಗಿದೆ. ಇತ್ತೀಚೆಗೆ ಅಪ್ಪು ಕಪ್‌ ಸೀಸನ್‌ 2 ಆಕರ್ಷಕ ಟ್ರೋಫಿ ಜೊತೆಗೆ ತಂಡಗಳ ಜೆರ್ಸಿಗಳನ್ನು ಅನಾವರಣಗೊಳಿಸಲಾಗಿತ್ತು. ಇದೀಗ ಅದ್ದೂರಿಯಾಗಿ ಪಂದ್ಯಾವಳಿಗಳನ್ನು ಆರಂಭಿಸಲಾಗಿದ್ದು, ಅಂತಿಮ ವಿಜೇತರಿಗೆ ಭಾರೀ ಬಹುಮಾನ ಘೋಷಣೆ ಮಾಡಲಾಗಿದೆ.

ಇದನ್ನೂ ಓದಿ: Ghuspaithiya Hindi Movie: ರಮೇಶ್ ರೆಡ್ಡಿ ನಿರ್ಮಾಣದ ʼಘುಸ್ಪೈಥಿಯಾʼ ಹಿಂದಿ ಸಿನಿಮಾ ಆ. 9ರಂದು ತೆರೆಗೆ

ಕಾರ್ಯಕ್ರಮದಲ್ಲಿ ಮೀಡಿಯಾ ಕನೆಕ್ಟ್‌ ಸಂಸ್ಥಾಪಕಿ ಹಾಗೂ ಸಿಇಒ ದಿವ್ಯಾ ರಂಗೇನಹಳ್ಳಿ, ಡಿಪಿಐಎಸ್ ಫೌಂಡರ್‌, ಚೇರ್‌ಪರ್ಸನ್ ಸುನಿತಾ ಗೌಡ, ‌ಹಿರಿಯ ನಿರ್ಮಾಕರಾದ ಸಾರಾ ಗೋವಿಂದು ಉಪಸ್ಥಿತರಿದ್ದರು.

Continue Reading

ಕ್ರೀಡೆ

Womens Asia Cup Final: 8ನೇ ಪ್ರಶಸ್ತಿ ನಿರೀಕ್ಷೆಯಲ್ಲಿ ಭಾರತ; ನಾಳೆ ಫೈನಲ್​

Womens Asia Cup Final:ಮಹಿಳಾ ಏಷ್ಯಾ ಕಪ್​ ಈವರೆಗಿನ 8 ಕೂಟಗಳಲ್ಲಿ ಭಾರತ 7 ಸಲ ಚಾಂಪಿಯನ್‌ ಆಗುವ ಮೂಲಕ ಪ್ರಭುತ್ವ ಸಾಧಿಸಿದೆ. ಸೋಲು ಕಂಡಿದ್ದು ಒಮ್ಮೆ ಮಾತ್ರ. ಅದು 2018ರಲ್ಲಿ ಬಾಂಗ್ಲಾದೇಶ ವಿರುದ್ಧ. ಅಂದಿನ ಫೈನಲ್​ ಪಂದ್ಯದಲ್ಲಿ ಭಾರತ 3 ವಿಕೆಟ್‌ ಅಂತರದಿಂದ ಸೋಲನುಭವಿಸಿ ಪ್ರಶಸ್ತಿಯಿಂದ ವಂಚಿತವಾಗಿತ್ತು.

VISTARANEWS.COM


on

Womens Asia Cup Final
Koo

ದಾಂಬುಲಾ (ಶ್ರೀಲಂಕಾ): ಮಹಿಳಾ ಏಷ್ಯಾಕಪ್​ ಫೈನಲ್​(Womens Asia Cup Final) ಪಂದ್ಯಕ್ಕೆ ವೇದಿಕೆ ಸಿದ್ಧಗೊಂಡಿದೆ. ನಾಳೆ ನಡೆಯುವ ಫೈನಲ್​ ಹಣಾಹಣಿಯಲ್ಲಿ ಹಾಲಿ ಚಾಂಪಿಯನ್​ ಭಾರತ ಮತ್ತು ಶ್ರೀಲಂಕಾ(India Women vs Sri Lanka Women Final) ಪ್ರಶಸ್ತಿಗಾಗಿ ಕಾದಾಟ ನಡೆಸಲಿವೆ. 7 ಬಾರಿಯ ಚಾಂಪಿಯನ್​ ಭಾರತವೇ ಈ ಬಾರಿಯೂ ಪ್ರಶಸ್ತಿ ಗೆಲ್ಲುವ ಹಾಟ್‌ ಫೇವರಿಟ್‌ ಆಗಿದೆ. ಅತ್ತ ಆತಿಥೇಯ ಲಂಕಾ ಚೊಚ್ಚಲ ಪ್ರಶಸ್ತಿ ಗೆಲ್ಲುವ ಇದಾರೆಯಲ್ಲಿದೆ. ಇತ್ತಂಡಗಳು ಕೂಡ ಈ ಬಾರಿ ಅಜೇಯ ತಂಡಗಳಾಗಿ ಫೈನಲ್​ಗೆ ಲಗ್ಗೆಯಿಟ್ಟಿದೆ. ಹೀಗಾಗಿ ಈ ಪಂದ್ಯದವನ್ನು ಹೈವೋಲ್ಟೇಜ್​ ಎಂದು ನಿರೀಕ್ಷೆ ಮಾಡಬಹುದು.

ಮಹಿಳಾ ಏಷ್ಯಾ ಕಪ್​ ಈವರೆಗಿನ 8 ಕೂಟಗಳಲ್ಲಿ ಭಾರತ 7 ಸಲ ಚಾಂಪಿಯನ್‌ ಆಗುವ ಮೂಲಕ ಪ್ರಭುತ್ವ ಸಾಧಿಸಿದೆ. ಸೋಲು ಕಂಡಿದ್ದು ಒಮ್ಮೆ ಮಾತ್ರ. ಅದು 2018ರಲ್ಲಿ ಬಾಂಗ್ಲಾದೇಶ ವಿರುದ್ಧ. ಅಂದಿನ ಫೈನಲ್​ ಪಂದ್ಯದಲ್ಲಿ ಭಾರತ 3 ವಿಕೆಟ್‌ ಅಂತರದಿಂದ ಸೋಲನುಭವಿಸಿ ಪ್ರಶಸ್ತಿಯಿಂದ ವಂಚಿತವಾಗಿತ್ತು.

6ನೇ ಬಾರಿ ಭಾರತ-ಲಂಕಾ ಫೈನಲ್​ ಮುಖಾಮುಖಿ


ಇದುವರೆಗಿನ ಮಹಿಳಾ ಏಷ್ಯಾಕಪ್​ ಟೂರ್ನಿಯಲ್ಲಿ ಭಾರತ ಮತ್ತು ಶ್ರೀಲಂಕಾ 5 ಬಾರಿ ಫೈನಲ್​ ಮುಖಾಮುಖಿಯಾಗಿವೆ. ಎಲ್ಲ ಪಂದ್ಯಗಳನ್ನು ಭಾರತವೇ ಗೆದ್ದು ಬೀಗಿದೆ. ಈ ಬಾರಿಯದ್ದು 6ನೇ ಮುಖಾಮುಖಿ. 6ನೇ ಪ್ರಯತ್ನದಲ್ಲಾದರೂ ಲಂಕಾ ಪ್ರೋಫಿ ಗೆಲ್ಲಬಹುದೇ ಎಂಬ ಪ್ರಶ್ನೆಗೆ ನಾಳೆ ಉತ್ತರ ಸಿಗಲಿದೆ.

ಭಾರತ ಪರ ಬ್ಯಾಟಿಂಗ್​ನಲ್ಲಿ ಆರಂಭಿಕ ಆಟಗಾರ್ತಿಯರಾದ ಶಫಾಲಿ ವರ್ಮ ಮತ್ತು ಸ್ಮೃತಿ ಮಂಧಾನ ಎಲ್ಲ ಪಂದ್ಯಗಲ್ಲಿಯೂ ಶ್ರೇಷ್ಠ ಪ್ರದರ್ಶನ ತೋರಿದ್ದಾರೆ. ಶಫಾಲಿ 184 ರನ್​ ಗಳಿಸಿ ಕೂಟದ ಅತ್ಯಧಿಕ ರನ್​ ಗಳಿಸಿದ ಆಟಗಾರ್ತಿಯಲ್ಲಿ 2ನೇ ಸ್ಥಾನ ಪಡೆದಿದ್ದಾರೆ. ಬೌಲಿಂಗ್ ವಿಭಾಗ ತುಂಬಾನೆ ಘಾತಕವಾಗಿದೆ. ಸ್ಪಿನ್ನ್​ ಮತ್ತು ವೇಗದ ವಿಭಾಗದಲ್ಲಿ ಸಮತೋಲಿತವಾಗಿದೆ. ರಾಧಾ ಯಾದವ್​, ಆಲ್​ರೌಂಡರ್​ ದೀಪ್ತಿ ಶರ್ಮಾ ತಂಡದ ಸ್ಪಿನ್ನರ್​ಗಳಾದರೆ, ವೇಗಿ ರೇಣುಕಾ ಸಿಂಗ್​ ಮತ್ತು ಪೂಜಾ ವಸ್ತ್ರಾಕರ್​ ವೇಗಿಗಳಾಗಿದ್ದಾರೆ.

ಇದನ್ನೂ ಓದಿ Womens Asia Cup T20: ಬಾಂಗ್ಲಾ ಮಣಿಸಿ ಫೈನಲ್​ ಪ್ರವೇಶಿಸಿದ ಭಾರತ

ಲಂಕಾ ಕೂಡ ಬಲಿಷ್ಠ


ಎದುರಾಳಿ ಶ್ರೀಲಂಕಾ ಕೂಡ ಭಾರತದ ಹಾಗೆ ಬಲಿಷ್ಠವಾಗಿದೆ. ಅದರಲ್ಲೂ ಕೂಟದ ಗರಿಷ್ಠ ಸ್ಕೋರರ್​ ಎನಿಸಿಕೊಂಡಿರುವ ನಾಯಕಿ ಚಾಮರಿ ಅತಪಟ್ಟು ಪ್ರಚಂಡ ಬ್ಯಾಟಿಂಗ್​ ಫಾರ್ಮ್​ನಲ್ಲಿದ್ದಾರೆ. ಒಂದು ಶತಕ ಕೂಡ ಬಾರಿಸಿದ್ದಾರೆ. ಆಡಿದ 4 ಪಂದ್ಯಗಳಿಂದ 243 ರನ್​ ಕಲೆ ಹಾಕಿದ್ದಾರೆ. ಇವರನ್ನು ಹೆಚ್ಚು ಹೊತ್ತು ಕ್ರೀಸ್​ ಆಕ್ರಮಿಸದಂತೆ ಭಾರತೀಯ ಬೌಲರ್​ಗಳು ನೋಡಿಕೊಂಡರೆ ಅರ್ಧ ಪಂದ್ಯ ಗೆದ್ದಂತೆ. ನಿನ್ನೆ ನಡೆದಿದ್ದ ಸೆಮಿಫೈನಲ್​ ಪಂದ್ಯದಲ್ಲಿ ಭಾರತ ತಂಡ ಬಾಂಗ್ಲಾವನ್ನು ಮಣಿಸಿದರೆ, ಶ್ರೀಲಂಕಾ ಪಾಕಿಸ್ತಾನವನ್ನು ಸೋಲಿಸಿ ಫೈನಲ್​ ಪ್ರವೇಶಿಸಿತ್ತು.

ಸಂಭಾವ್ಯ ತಂಡಗಳು


ಶ್ರೀಲಂಕಾ: ವಿಶ್ಮಿ ಗುಣರತ್ನೆ, ಚಾಮರಿ ಅಟಪಟ್ಟು (ನಾಯಕಿ), ಹರ್ಷಿತಾ ಸಮರವಿಕ್ರಮ, ಹಾಸಿನಿ ಪೆರೇರಾ, ಅನುಷ್ಕಾ ಸಂಜೀವನಿ (ವಾಕ್), ಕವಿಶಾ ದಿಲ್ಹಾರಿ, ನೀಲಾಕ್ಷಿ ಡಿ ಸಿಲ್ವಾ, ಇನೋಶಿ ಪ್ರಿಯದರ್ಶನಿ, ಉದೇಶಿಕಾ ಪ್ರಬೋಧನಿ, ಸುಗಂದಿಕಾ ಕುಮಾರಿ, ಅಚಿನಿ ಕುಲಸೂರ್ಯ.

ಭಾರತ: ಶಫಾಲಿ ವರ್ಮಾ, ಸ್ಮೃತಿ ಮಂಧಾನ, ಉಮಾ ಚೆಟ್ರಿ, ಹರ್ಮನ್‌ಪ್ರೀತ್ ಕೌರ್ (ನಾಯಕಿ), ಜೆಮಿಮಾ ರಾಡ್ರಿಗಸ್, ರಿಚಾ ಘೋಷ್ (ವಿಕೀ), ದೀಪ್ತಿ ಶರ್ಮಾ, ಪೂಜಾ ವಸ್ತ್ರಾಕರ್, ರಾಧಾ ಯಾದವ್, ತನುಜಾ ಕನ್ವರ್, ರೇಣುಕಾ ಠಾಕೂರ್ ಸಿಂಗ್.

Continue Reading

ಕ್ರೀಡೆ

Champions Trophy 2025: ನಾವು ತುಂಬಾ ಒಳ್ಳೆಯವರು, ಪಾಕಿಸ್ತಾನಕ್ಕೆ ಬನ್ನಿ; ಟೀಮ್ ಇಂಡಿಯಾಗೆ ಪಾಕ್​ ಆಟಗಾರನ ಮನವಿ

Champions Trophy 2025: ಕಳೆದ ವರ್ಷ ಪಾಕಿಸ್ತಾನದ ಆತಿಥ್ಯದಲ್ಲಿ ನಡೆದಿದ್ದ ಏಷ್ಯಾಕಪ್​ ಟೂರ್ನಿಯಲ್ಲಿ ಭಾರತ ಪಾಕ್​ಗೆ ಹೋಗಲು ಒಪ್ಪದ ಕಾರಣ ಹೈಬ್ರೀಡ್​ ಮಾದರಿಯಲ್ಲಿ ಪಾಕ್​ ಮತ್ತು ಶ್ರೀಲಂಕಾದಲ್ಲಿ ಆಡಿಸಲಾಗಿತ್ತು. ಭಾರತ ತನ್ನ ಪಂದ್ಯಗಳನ್ನು ಶ್ರೀಲಂಕಾದಲ್ಲಿ ಆಡಿತ್ತು.

VISTARANEWS.COM


on

Champions Trophy 2025
Koo

ಕರಾಚಿ: ಮುಂದಿನ ವರ್ಷ ನಡೆಯುವ ಚಾಂಪಿಯನ್ಸ್‌ ಟ್ರೋಫಿ(Champions Trophy 2025) ಕ್ರಿಕೆಟ್‌ ಪಂದ್ಯಾವಳಿ ಪಾಕಿಸ್ತಾನದಲ್ಲಿ ನಡೆಯಲಿದೆ. ಆದರೆ, ಭಾರತ ತಂಡ(India to visit Pakistan) ಪಾಕ್​ಗೆ ತೆರಳುವುದು ಅನಿಶ್ಚಿತವಾಗಿದೆ. ಈಗಾಗಲೇ ಬಿಸಿಸಿಐ ಭಾರತದ ಪಂದ್ಯಗಳನ್ನು ತಟಸ್ಥ ತಾಣದಲ್ಲಿ ನಡೆಸಬೇಕೆಂದು ಐಸಿಸಿಗೂ ಮನವಿ ಮಾಡಿದೆ. ಒಂದೊಮ್ಮೆ ಐಸಿಸಿ ಇದಕ್ಕೆ ಸಮ್ಮತಿ ಸೂಚಿಸದಿದ್ದರೆ ಟೂರ್ನಿಯಿಂದ ಭಾರತ ತಂಡ ಹಿಂದೆ ಸರಿಯಲಿದೆ ಎಂದು ದೃಢ ನಿರ್ಧಾರವನ್ನು ಕೂಡ ಪ್ರಕಟಿಸಿದೆ. ಆದರೆ, ಪಾಕಿಸ್ತಾನದ ಮಾಜಿ ಕ್ರಿಕೆಟಿಗರು ಹೇಗಾದರೂ ಮಾಡಿ ಟೀಮ್​ ಇಂಡಿಯಾವನ್ನು ಪಾಕ್​ಗೆ ಕರೆತರಲು ನಾನಾ ರೀತಿಯ ಕಸರತ್ತು ಮಾಡುತ್ತಿದ್ದಾರೆ. ಈ ಸಾಲಿಗೆ ಇದೀಗ ಶೋಯಿಬ್‌ ಮಲಿಕ್‌(Shoaib Malik) ಕೂಡ ಸೇರ್ಪಡೆಗೊಂಡಿದ್ದಾರೆ.

“ದೇಶಗಳ ನಡುವೆ ಯಾವುದೇ ಮೀಸಲಾತಿ ಇದ್ದರೂ ಅದು ಪ್ರತ್ಯೇಕ ಸಮಸ್ಯೆ ಮತ್ತು ಪ್ರತ್ಯೇಕವಾಗಿ ಪರಿಹರಿಸಬೇಕು. ಕ್ರೀಡೆಯಲ್ಲಿ ರಾಜಕೀಯ ಬರಬಾರದು. ಕಳೆದ ವರ್ಷ ಪಾಕಿಸ್ತಾನ ತಂಡ ಭಾರತಕ್ಕೆ ಹೋಗಿತ್ತು, ಮತ್ತು ಈಗ ಭಾರತ ತಂಡಕ್ಕೂ ಪಾಕ್​ಗೆ ಬರುವ ಉತ್ತಮ ಅವಕಾಶವಿದೆ. ಈಗಿನ ಭಾರತ ತಂಡದ ಸ್ಟಾರ್​ ಆಟಗಾರರಿಗೆ ಪಾಕಿಸ್ತಾನದಲ್ಲಿ ಒಮ್ಮೆಯೂ ಆಡುವ ಅವಕಾಶ ಸಿಕ್ಕಿಲ್ಲ. ವಿರಾಟ್​ ಕೊಹ್ಲಿ, ರೋಹಿತ್​ ಶರ್ಮ ಅವರಿಗೆ ಪಾಕ್​ನಲ್ಲಿ ಅಪಾರ ಸಂಖ್ಯೆಯ ಅಭಿಮಾನಿಗಳಿದ್ದಾರೆ. ಆದ್ದರಿಂದ ಭಾರತ ತಂಡವನ್ನು ಪಾಕ್​ಗೆ ಕಳುಹಿಸಿಕೊಡಿ. ‘ಹಮ್ ಬಹುತ್ ಅಚ್ಚೆ ಲೋಗ್ ಹೈ” (ನಾವು ತುಂಬಾ ಒಳ್ಳೆಯ ಜನರು), ಹಾಗಾಗಿ ಭಾರತೀಯ ತಂಡ ಖಂಡಿತವಾಗಿಯೂ ಇಲ್ಲಿಗೆ ಬರಬೇಕು. ಬಿಸಿಸಿಐ ಇದಕ್ಕೆ ಒಪ್ಪಿಗೆ ನೀಡಬೇಕು” ಎಂದು ಮಲಿಕ್ ಹೇಳಿದ್ದಾರೆ.

​ಇದಕ್ಕೂ ಮುನ್ನ ಪಾಕ್‌ ಕ್ರಿಕೆಟ್‌ ತಂಡದ ಮಾಜಿ ನಾಯಕ ಯೂನಿಸ್‌ ಖಾನ್‌ ಭಾರತದ ಸ್ಟಾರ್​ ಬ್ಯಾಟರ್‌ ವಿರಾಟ್‌ ಕೊಹ್ಲಿ ಪಾಕಿಸ್ತಾನಕ್ಕೆ ಬರಬೇಕು, ಇಲ್ಲಿ ಅವರು ಆಡಬೇಕು, ಇದು ನಮ್ಮ ಆಸೆ ಎಂದು ಹೇಳಿದ್ದರು. ಮುಂದಿನ ವರ್ಷ ನಡೆಯಲಿರುವ ಚಾಂಪಿಯನ್ಸ್‌ ಟ್ರೋಫಿ ಏಕದಿನ ಪಂದ್ಯಾವಳಿಗಾಗಿ ಭಾರತ ತಂಡವನ್ನು ಪಾಕಿಸ್ಥಾನಕ್ಕೆ ಕಳುಹಿಸಲು ಸಾಧ್ಯವಿಲ್ಲ ಎಂದು ಬಿಸಿಸಿಐ ಮೂಲ ಹೇಳಿತ್ತು. ಇದೇ ವಿಚಾರವನ್ನು ಮುಂದಿಟ್ಟಿರುವ ಯೂನಿಸ್‌ ಖಾನ್‌, ಕೊಹ್ಲಿ ಈವರೆಗೆ ಪಾಕಿಸ್ತಾನದಲ್ಲಿ ಆಡಿಲ್ಲ. ಇದಕ್ಕೆ ಬಿಸಿಸಿಐ ಅವಕಾಶ ನೀಡಬೇಕು ಎಂದು ಒತ್ತಾಯಿಸಿದ್ದಾರೆ. 2006ರಲ್ಲಿ ಪಾಕಿಸ್ತಾನಕ್ಕೆ ಪ್ರವಾಸ ಹೋಗಿದ್ದ ಭಾರತ ತಂಡ, ಇಲ್ಲಿ ಕೊನೆಯ ಸಲ ಸರಣಿಯನ್ನಾಡಿತ್ತು.

ಇದನ್ನೂ ಓದಿ ICC Champions Trophy : ಪಾಕಿಸ್ತಾನದ ಕ್ರಿಕೆಟ್​ ಮಂಡಳಿಯ ಮಾಧ್ಯಮ ಹಕ್ಕುಗಳನ್ನು ಕೇಳುವವರೇ ಇಲ್ಲ!

ನವೆಂಬರ್ 2008ರ ಮುಂಬೈ ಭಯೋತ್ಪಾದಕ ದಾಳಿಯಲ್ಲಿ 150 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ ನಂತರ ಭಾರತವು ಪಾಕಿಸ್ತಾನದೊಂದಿಗೆ ದ್ವಿಪಕ್ಷೀಯ ಕ್ರಿಕೆಟ್ ಆಡಿಲ್ಲ. ಜೂನ್-ಜುಲೈ 2008 ರಲ್ಲಿ ಏಷ್ಯಾ ಕಪ್ ಸಮಯದಲ್ಲಿ ಭಾರತೀಯ ಕ್ರಿಕೆಟ್ ತಂಡವು ಕೊನೆಯ ಬಾರಿಗೆ ಪಾಕಿಸ್ತಾನಕ್ಕೆ ಪ್ರಯಾಣಿಸಿತ್ತು. ಭಾರತದಲ್ಲಿ ಡಿಸೆಂಬರ್ 2012 ರಿಂದ ಜನವರಿ 2013 ರವರೆಗಿನ ದ್ವಿಪಕ್ಷೀಯ ಸರಣಿಯು ಎರಡು ರಾಷ್ಟ್ರಗಳ ನಡುವಿನ ಅಂತಿಮ ದ್ವಿಪಕ್ಷೀಯ ಸರಣಿಯಾಗಿದೆ. ಇದಾದ ಬಳಿಕ ಉಭಯ ತಂಡಗಳು ಕೇವಲ ಐಸಿಸಿ ಟೂರ್ನಿಗಳಲ್ಲಿ ಮಾತ್ರ ಆಡುತ್ತವೆ.

ಕಳೆದ ವರ್ಷ ಪಾಕಿಸ್ತಾನದ ಆತಿಥ್ಯದಲ್ಲಿ ನಡೆದಿದ್ದ ಏಷ್ಯಾಕಪ್​ ಟೂರ್ನಿಯಲ್ಲಿ ಭಾರತ ಪಾಕ್​ಗೆ ಹೋಗಲು ಒಪ್ಪದ ಕಾರಣ ಹೈಬ್ರೀಡ್​ ಮಾದರಿಯಲ್ಲಿ ಪಾಕ್​ ಮತ್ತು ಶ್ರೀಲಂಕಾದಲ್ಲಿ ಆಡಿಸಲಾಗಿತ್ತು. ಭಾರತ ತನ್ನ ಪಂದ್ಯಗಳನ್ನು ಶ್ರೀಲಂಕಾದಲ್ಲಿ ಆಡಿತ್ತು.

ಭಾರತ ತಂಡ ಚಾಂಪಿಯನ್ಸ್‌ ಟ್ರೋಫಿ ಟೂರ್ನಿಯಿಂದ ಹಿಂದೆ ಸರಿದರೆ, 9ನೇ ಸ್ಥಾನಿಯಾಗಿರುವ ಶ್ರೀಲಂಕಾಗೆ ಅವಕಾಶ ಸಿಗಲಿದೆ. ಯಾವುದೇ ತಂಡವು ಐಸಿಸಿ ಟೂರ್ನಿಯಿಂದ ಹಿಂದೆ ಸರಿದರೆ ಅಂಕಪಟ್ಟಿಯಲ್ಲಿ ನಂತರದ ಸ್ಥಾನ ಪಡೆದಿರುವ ತಂಡ ತಂಡಕ್ಕೆ ಅರ್ಹತೆ ನೀಡಲಾಗುತ್ತದೆ. ಪ್ರಸ್ತುತ ಭಾರತ, ಆಸ್ಟ್ರೇಲಿಯಾ, ಪಾಕಿಸ್ತಾನ, ಇಂಗ್ಲೆಂಡ್​, ಅಫಘಾನಿಸ್ತಾನ, ದಕ್ಷಿಣ ಆಫ್ರಿಕಾ, ನ್ಯೂಜಿಲ್ಯಾಂಡ್​ ಮತ್ತು ಬಾಂಗ್ಲಾದೇಶ ಅರ್ಹತೆ ಪಡೆದ ತಂಡಗಳಾಗಿವೆ.

Continue Reading

ಕ್ರೀಡೆ

IND vs SL: ಇಂದು ಲಂಕಾ ವಿರುದ್ಧ ಮೊದಲ ಟಿ20; ಹೇಗಿರಲಿದೆ ಭಾರತ ಆಡುವ ಬಳಗ?

IND vs SL: ಪಲ್ಲೆಕೆಲೆ ಕ್ರೀಡಾಂಗಣದ ಪಿಚ್ ಬ್ಯಾಟರ್‌ಗಳಿಗೆ ಹೆಚ್ಚು ನೆರವು ನೀಡುತ್ತದೆ. ಮೊದಲು ಬ್ಯಾಟಿಂಗ್ ಮಾಡುವ ತಂಡಗಳು ಸಾಮಾನ್ಯವಾಗಿ 170 ರನ್‌ಗಳ ಗುರಿಯನ್ನು ದಾಟಿದರೆ ಮಾತ್ರ ಪಂದ್ಯದಲ್ಲಿ ಪೈಪೋಟಿ ನೀಡಬಹುದು. ಈ ಮೊತ್ತವನ್ನು ಇಲ್ಲಿ ಸ್ಪರ್ಧಾತ್ಮಕ ಮೊತ್ತವೆಂದು ಪರಿಗಣಿಸಲಾಗಿದೆ.

VISTARANEWS.COM


on

IND vs SL
Koo

ಪೆಲೆಕೆಲೆ: ಇಂದು (ಶನಿವಾರ) ನಡೆಯುವ ಶ್ರೀಲಂಕಾ(IND vs SL) ತಂಡದ ಎದುರಿನ ಮೊದಲ ಟಿ20 ಪಂದ್ಯದಲ್ಲಿ ಕಣಕ್ಕಿಳಿಯಲು ಟಿ20 ವಿಶ್ವ ಚಾಂಪಿಯನ್ ಭಾರತ ಸಜ್ಜಾಗಿ ನಿಂತಿದೆ. 2021ರ ಬಳಿಕ ಭಾರತ(Sri Lanka vs India) ಮೊದಲ ಬಾರಿಗೆ ಶ್ರೀಲಂಕಾದಲ್ಲಿ ಆಡುತ್ತಿರುವ ದ್ವಿಪಕ್ಷೀಯ ಸರಣಿ ಇದಾಗಿದೆ. ಪಂದ್ಯ ರಾತ್ರಿ 7ಕ್ಕೆ ಆರಂಭಗೊಳ್ಳಲಿದೆ.

ಟಿ20 ವಿಶ್ವ ಕಪ್​ ಆಡಿದ ಸೂರ್ಯಕುಮಾರ್​ ಯಾದವ್​ ನಾಯಕನಾಗಿದ್ದರೆ, ಯಶಸ್ವಿ ಜೈಸ್ವಾಲ್, ಶಿವಂ ದುಬೆ ಆಲ್‌ರೌಂಡರ್ ಅಕ್ಷರ್ ಪಟೇಲ್, ಹಾರ್ದಿಕ್​ ಪಾಂಡ್ಯ, ಸಂಜು ಸ್ಯಾಮ್ಸನ್​, ಅರ್ಶ್​ದೀಪ್​ ಸಿಂಗ್​, ಮೊಹಮ್ಮದ್​ ಸಿರಾಜ್​ ಅವರು ತಂಡದಲ್ಲಿದ್ದಾರೆ. ಇವರ ಜತೆ ವಾಷಿಂಗ್ಟನ್ ಸುಂದರ್, ಸ್ಪಿನ್ನರ್ ರವಿ ಅವರ ಬಲವೂ ತಂಡಕ್ಕೆ ಇದೆ.

ಪಿಚ್​ ರಿಪೋರ್ಟ್


ಪಲ್ಲೆಕೆಲೆ ಕ್ರೀಡಾಂಗಣದ ಪಿಚ್ ಬ್ಯಾಟರ್‌ಗಳಿಗೆ ಹೆಚ್ಚು ನೆರವು ನೀಡುತ್ತದೆ. ಮೊದಲು ಬ್ಯಾಟಿಂಗ್ ಮಾಡುವ ತಂಡಗಳು ಸಾಮಾನ್ಯವಾಗಿ 170 ರನ್‌ಗಳ ಗುರಿಯನ್ನು ದಾಟಿದರೆ ಮಾತ್ರ ಪಂದ್ಯದಲ್ಲಿ ಪೈಪೋಟಿ ನೀಡಬಹುದು. ಈ ಮೊತ್ತವನ್ನು ಇಲ್ಲಿ ಸ್ಪರ್ಧಾತ್ಮಕ ಮೊತ್ತವೆಂದು ಪರಿಗಣಿಸಲಾಗಿದೆ. ಹೀಗಾಗಿ ಮೊದಲು ಬ್ಯಾಟಿಂಗ್​ ನಡೆಸುವ ತಂಡ ಆದಷ್ಟು ಬೃಹತ್​ ಮೊತ್ತ ಬಾರಿಸರೆ ಉತ್ತಮ. ರಾತ್ರಿಯ ವೇಳೆ ಇಬ್ಬನಿಯ ಕಾಟ ಇರುವುದರಿಂದ ಚೇಸಿಂಗ್​ ನಡೆಸಲು ಉತ್ತಮ. ಹೀಗಾಗಿ ಟಾಸ್​ ಗೆದ್ದ ತಂಡ ಮೊದಲು ಫೀಲ್ಡಿಂಗ್​ ಆಯ್ಕೆಗೆ ಪ್ರಾಮುಖ್ಯತೆ ನೀಡಬಹುದು. ವೇಗಿಗಳಿಗಿಂತ ಇಲ್ಲಿ ಸ್ಪಿನ್ನ್​ ಬೌಲರ್​ಗಳು ಹೆಚ್ಚು ಪರಿಣಾಮ ಬೀರಬಹುದು. ಲಂಕಾದಲ್ಲಿ ಯಾವುದೇ ಮಳೆ ಭೀತಿ ಎದುರಾಗಿಲ್ಲ ಹೀಗಾಗಿ ಪಂದ್ಯ ಸಂಪೂರ್ಣವಾಗಿ ನಡೆಯಲಿದೆ.

ಮುಖಾಮುಖಿ


ಭಾರತ ಮತ್ತು ಶ್ರೀಲಂಕಾ ತಂಡಗಳು(SL vs IND Head to Head in T20) ಇದುವರೆಗೂ ಒಟ್ಟು 19 ಟಿ20 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ಪೈಕಿ ಭಾರತ ಗರಿಷ್ಠ 19 ಪಂದ್ಯಗಳನ್ನು ಗೆದ್ದರೆ, ಶ್ರೀಲಂಕಾ 9 ಪಂದ್ಯಗಳನ್ನು ಮಾತ್ರ ಗೆದ್ದಿದೆ. ಒಂದು ಪಂದ್ಯ ಫಲಿತಾಂಶ ಕಂಡಿಲ್ಲ. ಇತ್ತಂಡಗಳು ಕೊನೆಯ ಬಾರಿಗೆ ಟಿ20 ಪಂದ್ಯವನ್ನಾಡಿದ್ದು 2023ರಲ್ಲಿ. ಈ ಪಂದ್ಯದಲ್ಲಿ ಭಾರತ 91 ರನ್​ ಅಂತರದ ಗೆಲುವು ಸಾಧಿಸಿತ್ತು.

ಇದನ್ನೂ ಓದಿ India Tour of Sri Lanka 2024 : ಶ್ರೀಲಂಕಾ ತಂಡಕ್ಕೆ 3ನೇ ಹೊಡೆತ; ಭಾರತ ವಿರುದ್ಧದ ಟಿ20 ಸರಣಿಗೆ ಬಿನುರಾ ಫರ್ನಾಂಡೊ ಅಲಭ್ಯ

ಉಭಯ ತಂಡಗಳು ಮೊದಲ ಬಾರಿಗೆ ಟಿ20 ಆಡಿದ್ದು 2009ರಲ್ಲಿ. ಕೊಲಂಬೊದ ಪ್ರೇಮದಾಸ ಕ್ರಿಕೆಟ್​ ಸ್ಟೆಡಿಯಂನಲ್ಲಿ ನಡೆದ ಪಂದ್ಯ ಇದಾಗಿತ್ತು. ಇಲ್ಲಿ ಧೋನಿ ಪಡೆ 3 ವಿಕೆಟ್​ಗಳ ಗೆಲುವು ಕಂಡಿತ್ತು. ಶ್ರೀಲಂಕಾ ತಂಡ ಭಾರತ ವಿರುದ್ಧ ಮೊದಲ ಟಿ20 ಗೆಲುವು ಸಾಧಿಸಿದ್ದು ಕೂಡ 2009ರಲ್ಲಿ. ನಾಗ್ಪುರದಲ್ಲಿ ನಡೆದಿದ್ದ ಪಂದ್ಯದಲ್ಲಿ. ಇಲ್ಲಿ ಲಂಕಾ ತಂಡ 29 ರನ್​​ಗಳ ಜಯ ಗಳಿಸಿತ್ತು. ಪ್ರಸ್ತುತ ಲಂಕಾ ತಂಡವನ್ನು ನೋಡುವಾಗ ಭಾರತ ಆರಾಮದಾಯಕವಾಗಿ ಈ ಸರಣಿ ಗೆಲ್ಲುವಂತಿದೆ.

ಸಂಭಾವ್ಯ ತಂಡಗಳು

ಭಾರತ: ಶುಭಮನ್ ಗಿಲ್, ಯಶಸ್ವಿ ಜೈಸ್ವಾಲ್, ಸೂರ್ಯಕುಮಾರ್ ಯಾದವ್ (ನಾಯಕ), ರಿಷಬ್ ಪಂತ್ (ವಿಕೀ), ರಿಂಕು ಸಿಂಗ್, ಹಾರ್ದಿಕ್ ಪಾಂಡ್ಯ, ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಅರ್ಷದೀಪ್ ಸಿಂಗ್, ರವಿ ಬಿಷ್ಣೋಯ್, ಮೊಹಮ್ಮದ್ ಸಿರಾಜ್.

ಶ್ರೀಲಂಕಾ: ಅವಿಷ್ಕ ಫೆರ್ನಾಂಡೋ, ಚರಿತ್ ಅಸಲಂಕ (ನಾಯಕ), ದಿನೇಶ್ ಚಾಂಡಿಮಾಲ್, ಕುಸಲ್ ಮೆಂಡಿಸ್ (ವಿಕೀ), ಪಾತುಮ್ ನಿಸ್ಸಾಂಕ, ವನಿಂದು ಹಸರಂಗ, ದಸುನ್ ಶಾನಕ, ಮಥೀಶ ಪತಿರಣ, ಮಹೇಶ್ ತೀಕ್ಷಣ, ದುನಿತ್ ವೆಲ್ಲಲಾಗೆ, ಚಾಮಿಂದು ವಿಕ್ರಮಸಿಂಘೆ

Continue Reading
Advertisement
PARIS 2024 OLYMPICS
ಕ್ರೀಡೆ13 seconds ago

PARIS 2024 OLYMPICS: ಶೂಟಿಂಗ್​ನಲ್ಲಿ ಭಾರತಕ್ಕೆ ಮತ್ತೊಂದು ಸೋಲು

Road Accident
ದೇಶ7 mins ago

Road Accident: ಕಣಿವೆಗೆ ಉರುಳಿದ ಕಾರು; ಐವರು ಮಕ್ಕಳು ಸೇರಿ 8 ಮಂದಿ ಸಾವು

Ashwini Puneeth Rajkumar launched Appu Cup season 2
ಕ್ರಿಕೆಟ್11 mins ago

Ashwini Puneeth Rajkumar: ಅಪ್ಪು ಕಪ್‌ ಸೀಸನ್‌ 2ಗೆ ಚಾಲನೆ ನೀಡಿದ ಅಶ್ವಿನಿ ಪುನೀತ್‌ ರಾಜ್‌ಕುಮಾರ್!

Money Guide
ಮನಿ-ಗೈಡ್30 mins ago

Money Guide: ಐಟಿಆರ್ ಇನ್ನೂ ಸಲ್ಲಿಸಿಲ್ಲವೇ? ಕೊನೆಯ ಕ್ಷಣದ ಗೊಂದಲ ತಪ್ಪಿಸಲು ಈ ಟಿಪ್ಸ್‌ ಫಾಲೋ ಮಾಡಿ

Womens Asia Cup Final
ಕ್ರೀಡೆ53 mins ago

Womens Asia Cup Final: 8ನೇ ಪ್ರಶಸ್ತಿ ನಿರೀಕ್ಷೆಯಲ್ಲಿ ಭಾರತ; ನಾಳೆ ಫೈನಲ್​

dk shivakumar hd kumarswamy
ಪ್ರಮುಖ ಸುದ್ದಿ57 mins ago

DK Shivakumar: ನಮ್ಮ ಸರ್ವನಾಶವೇ ಕುಮಾರಸ್ವಾಮಿ ಅವರ ಆಲೋಚನೆ: ಡಿಸಿಎಂ ಡಿಕೆ ಶಿವಕುಮಾರ್

karnataka high court
ಪ್ರಮುಖ ಸುದ್ದಿ1 hour ago

Karnataka High Court: ʼಚಿಲ್ಲರೆ ಅಂಗಡಿಯವರಲ್ಲೂ ಯುಪಿಐ ಇದೆ, ನಿಮ್ಮಲ್ಲೇಕಿಲ್ಲ?ʼ ಬೆಸ್ಕಾಂಗೆ ಹೈಕೋರ್ಟ್‌ ತರಾಟೆ

Ghuspaithia Hindi movie release on August 9
ಕರ್ನಾಟಕ2 hours ago

Ghuspaithiya Hindi Movie: ರಮೇಶ್ ರೆಡ್ಡಿ ನಿರ್ಮಾಣದ ʼಘುಸ್ಪೈಥಿಯಾʼ ಹಿಂದಿ ಸಿನಿಮಾ ಆ. 9ರಂದು ತೆರೆಗೆ

2nd International Airport in Bengaluru Another round of discussion was held by Minister MB Patil
ಕರ್ನಾಟಕ2 hours ago

MB Patil: ಬೆಂಗಳೂರಿನಲ್ಲಿ 2ನೇ ವಿಮಾನ ನಿಲ್ದಾಣ; ಪರಿಣತರ ಜತೆ ಎಂ.ಬಿ.ಪಾಟೀಲ್‌ ಸಮಾಲೋಚನೆ

Kanwar Yatra
ದೇಶ2 hours ago

Kanwar Yatra: ಕನ್ವರ್ ಯಾತ್ರೆ ಮಾರ್ಗದಲ್ಲಿನ ಮಸೀದಿ ಕಾಣದಂತೆ ಪರದೆ; ವ್ಯಾಪಕ ವಿರೋಧದ ಬಳಿಕ ತೆರವು

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

ramanagara news
ರಾಮನಗರ2 hours ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

karnataka rain
ಮಳೆ3 hours ago

Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

Ankola landslide
ಉತ್ತರ ಕನ್ನಡ21 hours ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ22 hours ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ23 hours ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

Karnataka rain
ಮಳೆ1 day ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

karnataka Rain
ಮಳೆ2 days ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್2 days ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ2 days ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

Actor Darshan
ಸಿನಿಮಾ2 days ago

Actor Darshan: ಆಧ್ಯಾತ್ಮದತ್ತ ವಾಲಿದ ದರ್ಶನ್‌; ಜೈಲಲ್ಲಿ ಹೇಗಿದೆ ಗೊತ್ತಾ ನಟನ ಬದುಕು

ಟ್ರೆಂಡಿಂಗ್‌