ಕ್ರಿಕೆಟ್
INDvsWI 2023 : 15 ತಿಂಗಳು ತಂಡದಲ್ಲೇ ಇಲ್ಲದ ಆಟಗಾರ ಈಗ ಏಕಾಏಕಿ ಟೆಸ್ಟ್ ತಂಡದ ಉಪನಾಯಕ!
ಈ ಪ್ರವಾಸಕ್ಕಾಗಿ (INDvsWI 2023) ಚೇತೇಶ್ವರ ಪೂಜಾರ ಅವರನ್ನು ತಂಡದಿಂದ ಕೈಬಿಡಲಾಗಿದ್ದು ರಹಾನೆಗೆ ಅವಕಾಶ ಕೊಟ್ಟಿದ್ದಾರೆ.
ಮುಂಬಯಿ: ಸ್ಪೆಷಲಿಸ್ಟ್ ಬ್ಯಾಟರ್ ಚೇತೇಶ್ವರ ಪೂಜಾರ ಅವರನ್ನು ಕೈಬಿಟ್ಟು ಮುಂಬರುವ ವೆಸ್ಟ್ ಇಂಡೀಸ್ (INDvsWI 2023) ಪ್ರವಾಸದ ಎರಡು ಟೆಸ್ಟ್ ಸರಣಿಗೆ ಭಾರತ ತಂಡವನ್ನು ಪ್ರಕಟಿಸಿದೆ. ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯ ಜುಲೈ 12ರಿಂದ ಡೊಮಿನಿಕಾದಲ್ಲಿ ಆರಂಭವಾಗಲಿದೆ. ಎರಡನೇ ಟೆಸ್ಟ್ ಜುಲೈ 20 ರಿಂದ ಆರಂಭವಾಗಲಿದ್ದು, ಪೋರ್ಟ್ ಆಫ್ ಸ್ಪೇನ್ನ ಕ್ವೀನ್ಸ್ ಪಾರ್ಕ್ ಓವಲ್ನಲ್ಲಿ ಆಯೋಜನೆಗೊಂಡಿದೆ. ಅಚ್ಚರಿಯೆಂದರೆ ಈ ಟೂರ್ನಿಗೆ ಭಾರತ ತಂಡದ ಉಪನಾಯಕರನ್ನಾಗಿ ಅಜಿಂಕ್ಯ ರಹಾನೆ ಅವರನ್ನು ಆಯ್ಕೆ ಮಾಡಲಾಗಿದೆ. ಈ ಮೂಲಕ ಕಳದ 15 ತಿಂಗಳು ತಂಡದಲ್ಲಿ ಅವಕಾಶವನ್ನೇ ನೀಡದ ಆಟಗಾರನಿಗೆ ಉಪನಾಯಕನ ಪಟ್ಟ ಕಟ್ಟುವ ಮೂಲಕ ಬಿಸಿಸಿಐ ಅಚ್ಚರಿಯ ನಿರ್ಧಾರ ಕೈಗೊಂಡಿದೆ.
ಪೂಜಾರ ಅವರ ಅನುಪಸ್ಥಿತಿಯಿಂದಾಗಿ ಭಾರತ ತಂಡಕ್ಕೆ ಹೊಸ ಮೂರನೇ ಕ್ರಮಾಂಕದ ಆಟಗಾರನನ್ನು ಹೆಸರಿಸಬೇಕಾಗಿದೆ. ಯಶಸ್ವಿ ಜೈಸ್ವಾಲ್ ಮತ್ತು ಋತುರಾಜ್ ಗಾಯಕ್ವಾಡ್ ಅವರಂತಹ ಆಟಗಾರರು ತಂಡಕ್ಕೆ ಆಯ್ಕೆಯಾಗಿದ್ದು ಅವರಲ್ಲಿ ಒಬ್ಬರು ಆಯ್ಕೆಯಾಗಬಹುದು. ಅದರಲ್ಲೂ ಪ್ರಥಮ ದರ್ಜೆ ಕ್ರಿಕೆಟ್ನಲ್ಲಿ ಯಶಸ್ವಿ ಜೈಸ್ವಾಲ್ ಹೊಂದಿರುವ ದಾಖಲೆ ಅವರನ್ನು ತಂಡಕ್ಕೆ ಆಯ್ಕೆ ಮಾಡಲು ಟೀಮ್ ಇಂಡಿಯಾ ಮ್ಯಾನೇಜ್ಮೆಂಟ್ಗೆ ಪ್ರೇರಣೆ ನೀಡಬಹುದು.
ಪೂಜಾರ ಅವರ ಸ್ಥಾನಕ್ಕೆ ಹೊಸ ಟೆಸ್ಟ್ ಉಪನಾಯಕನ ನೇಮಕವೂ ಅಗತ್ಯವಾಗಿತ್ತು ಆಯ್ಕೆಗಾರರು ಶುಭ್ಮನ್ ಗಿಲ್ಗೆ ಅವಕಾಶ ನೀಡಬಹುದು ಎಂದು ನಿರೀಕ್ಷೆ ಮಾಡಲಾಗಿದ್ದರೂ ಅಂತಿಮವಾಗಿ ಅಜಿಂಕ್ಯ ರಹಾನೆಗೆ ಪಟ್ಟ ಕಟ್ಟಿದ್ದಾರೆ. 2022 ರ ಆರಂಭದಲ್ಲಿ ತಂಡದಿಂದ ಕೈಬಿಡಲ್ಪಟ್ಟ ರಹಾನೆ ಪ್ರಥಮ ದರ್ಜೆ ಕ್ರಿಕೆಟ್, ಐಪಿಎಲ್ ಹಾಗೂ ಡಬ್ಲ್ಯುಟಿಸಿ ಫೈನಲ್ನಲ್ಲಿ ಉತ್ತಮ ಪ್ರದರ್ಶನ ನೀಡಿದ ಕಾರಣ ಅವನ್ನು ತಂಡಕ್ಕೆ ಆಯ್ಕೆ ಮಾಡುವ ಜತೆಗೆ ಉಪನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ.
ಇದನ್ನೂ ಓದಿ : INDvsWI 2023 : ವಿಂಡೀಸ್ ಪ್ರವಾಸಕ್ಕೆ ಟೆಸ್ಟ್, ಏಕದಿನ ತಂಡ ಪ್ರಕಟ; ಯಾರಿಗೆಲ್ಲ ಸಿಕ್ತು ಚಾನ್ಸ್?
ವಿಶ್ವ ಟೆಸ್ಟ್ ಚಾಂಪಿಯನ್ಷಿಪ್ ಫೈನಲ್ನಲ್ಲಿ ರಹಾನೆ ಮೊದಲ ಇನಿಂಗ್ಸ್ನಲ್ಲಿ ಭಾರತದ ಅತ್ಯಧಿಕ ಸ್ಕೋರರ್ ಎನಿಸಿಕೊಂಡಿದ್ದರು. ಅವರು 129 ಎಸೆತಗಳಲ್ಲಿ 89 ರನ್ ಗಳಿಸಿ ತಂಡದ ಮರ್ಯಾದೆ ಕಾಪಾಡಿದ್ದರು. ಎರಡನೇ ಇನಿಂಗ್ಸ್ನಲ್ಲಿ ರಹಾನೆ 108 ಎಸೆತಗಳಲ್ಲಿ 46 ರನ್ ಪೇರಿಸಿದ್ದರು. 5ನೇ ದಿನದ ಮೊದಲ ಸೆಷನ್ನಲ್ಲಿ ಟೀಮ್ ಇಂಡಿಯಾದ ಬ್ಯಾಟರ್ಗಳು ದಿಕ್ಕಾಪಾಲಾಗುವ ಮೂದಲು ರಹಾನೆ ಉತ್ತಮ ಪ್ರದರ್ಶನ ನೀಡಿದ್ದರು.
ರಹಾನೆ ಅವರನ್ನು 2022ರಲ್ಲಿ ತಂಡದಿಂದ ಕೈಬಿಡುವ ಮೊದಲು ಭಾರತದ ಟೆಸ್ಟ್ ಉಪನಾಯಕರಾಗಿದ್ದರು. ಅವರು ಆರು ಪಂದ್ಯಗಳಲ್ಲಿ ಭಾರತವನ್ನು ಮುನ್ನಡೆಸಿದ್ದರು ಕೂಡ. ವಿಶೇವೆಂದರೆ ಅವರು ಮುನ್ನಡೆಸಿದ ಟೆಸ್ಟ್ನಲ್ಲಿ ಭಾರತ ಎಂದಿಗೂ ಸೋತಿಲ್ಲ. 2020 – 21ರ ಆಸ್ಟ್ರೇಲಿಯಾ ಪ್ರವಾಸದಲ್ಲಿ ವಿರಾಟ್ ಕೊಹ್ಲಿ ಅನುಪಸ್ಥಿತಿಯಲ್ಲಿ ಅವರು ಭಾರತದ ನಾಯಕರಾಗಿದ್ದರು. ಆ ಸರಣಿಯನ್ನು ಗೆದ್ದು ಭಾರತ ತಂಡ ಇತಿಹಾಸ ನಿರ್ಮಿಸಿತ್ತು.
ಟೆಸ್ಟ್ ಸರಣಿಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಋತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಯಶಸ್ವಿ ಜೈಸ್ವಾಲ್, ಅಜಿಂಕ್ಯ ರಹಾನೆ (ಉಪನಾಯಕ), ಕೆಎಸ್ ಭರತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್, ಮೊಹಮ್ಮದ್ ಶಮಿ. ಸಿರಾಜ್, ಮುಖೇಶ್ ಕುಮಾರ್, ಜಯದೇವ್ ಉನಾದ್ಕಟ್, ನವದೀಪ್ ಸೈನಿ.
ಏಕ ದಿನ ಸರಣಿಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಋತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪನಾಯಕ), ಶಾರ್ದೂಲ್ ಠಾಕೂರ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಯಜುವೇಂದ್ರ ಚಾಹಲ್, ಕುಲದೀಪ್ ಯಾದವ್, ಜಯದೇವ್ ಉನಾದ್ಕತ್, ಮೊಹಮ್ಮದ್ ಶಮಿ. ಸಿರಾಜ್, ಉಮ್ರಾನ್ ಮಲಿಕ್, ಮುಖೇಶ್ ಕುಮಾರ್.
ಕ್ರಿಕೆಟ್
World Cup 2023 : ಭಾರತ ವಿರುದ್ಧ ಗೆದ್ದವರು ವಿಶ್ವ ಕಪ್ ಗೆಲ್ತಾರೆ; ಪಾಕ್ ತಂಡ ಮಾಜಿ ಆಟಗಾರನ ಭವಿಷ್ಯ
ಹಾಲಿ ವಿಶ್ವ ಕಪ್ನಲ್ಲಿ (World Cup 2023) ಆಡುವ ತಂಡಗಳಲ್ಲಿ ಭಾರತ ತಂಡ ಅತ್ಯಂತ ಬಲಿಷ್ಠವಾಗಿದೆ ಎಂಬುದಾಗಿ ಪಾಕಿಸ್ತಾನದ ಮಾಜಿ ಆರಂಭಿಕ ಬ್ಯಾಟರ್ ಅಭಿಪ್ರಾಯಪಟ್ಟಿದ್ದಾರೆ.
ನವ ದೆಹಲಿ: ಏಕದಿನ ವಿಶ್ವ ಕಪ್ 2023 ರ (World Cup 2023) ಆವೃತ್ತಿಯು ಎರಡು ವಾರಗಳಿಗಿಂತ ಕಡಿಮೆ ದೂರದಲ್ಲಿದೆ. ಕ್ರಿಕೆಟ್ ಅಭಿಮಾನಿಗಳ ಉತ್ಸಾಹದ ಮಟ್ಟವು ಸಾರ್ವಕಾಲಿಕ ಗರಿಷ್ಠ ಮಟ್ಟದಲ್ಲಿದೆ. ತಜ್ಞರು ಅವಿಸ್ಮರಣಿಯ ಈವೆಂಟ್ನ ಫಲಿತಾಂಶವನ್ನು ಊಹಿಸುವಲ್ಲಿ ನಿರತರಾಗಿದ್ದರೆ, ಕೆಲವರು ತಮ್ಮ ನೆಚ್ಚಿನ ತಂಡಗಳನ್ನು ಹೆಸರಿಸುವಲ್ಲಿ ಬ್ಯುಸಿಯಾಗಿದ್ದಾರೆ. ಇನ್ನೂ ಕೆಲವು ಕ್ರಿಕೆಟ್ ಪಂಡಿತರ ಎಲ್ಲ ತಂಡಗಳ ಬಲ ಮತ್ತು ದುರ್ಬಲ ಅಂಶಗಳನ್ನು ವಿಶ್ಲೇಷಿಸುವಲ್ಲಿ ನಿರತರಾಗಿದ್ದಾರೆ.
ಇಂಗ್ಲೆಂಡ್ ಮಾಜಿ ನಾಯಕ ಮೈಕಲ್ ವಾನ್ ಇತ್ತೀಚೆಗೆ ಟ್ವೀಟ್ನಲ್ಲಿ ಆತಿಥೇಯ ಭಾರತವು ಪಂದ್ಯಾವಳಿಯಲ್ಲಿ ಗೆಲ್ಲುವ ತಂಡ ಎಂದು ಹೇಳಿದ್ದರು. ಅದನ್ನು ಹೊರತುಪಡಿಸಿದರೆ ‘ಮೆನ್ ಇನ್ ಬ್ಲೂ’ ಅನ್ನು ಸೋಲಿಸುವ ತಂಡವು ಪ್ರಶಸ್ತಿಯನ್ನು ಗೆಲ್ಲಬಹುದು ಎಂದು ಹೇಳಿದ್ದರು. ಈಗ, ಪಾಕಿಸ್ತಾನದ ಮಾಜಿ ನಾಯಕ ಸಲ್ಮಾನ್ ಬಟ್ ವಾನ್ ಅವರ ಹೇಳಿಕೆಯನ್ನು ಪುನರುಚ್ಚರಿಸಿದ್ದಾರೆ. ಭಾರತವು ತಪ್ಪುಗಳನ್ನು ಮಾಡದಿದ್ದರೆ ಇತರ ತಂಡಗಳಿಗೆ ಅವರನ್ನು ಸೋಲಿಸುವುದು ತುಂಬಾ ಕಷ್ಟ ಎಂದು ಹೇಳಿದ್ದಾರೆ.
ವಿಶ್ವ ಕ್ರಿಕೆಟ್ನಲ್ಲಿ ಎಲ್ಲ ರೀತಿಯಲ್ಲಿ ಸಮತೋಲನ ಹೊಂದಿರುವ ಏಕೈಕ ತಂಡ ಭಾರತ. ಮುಂಬರುವ ವಿಶ್ವಕಪ್ನಲ್ಲಿ ಗಮನಿಸಬೇಕಾದ ನಾಲ್ಕು ತಂಡಗಳ ಬಗ್ಗೆ ಎಲ್ಲರೂ ಮಾತನಾಡುತ್ತಿದ್ದಾರೆ. ಆದಾಗ್ಯೂ, ಭಾರತವನ್ನು ಸೋಲಿಸುವ ತಂಡವು ವಿಶ್ವಕಪ್ ಗೆಲ್ಲುತ್ತದೆ ಎಂದು ನಾನು ನಂಬುತ್ತೇನೆ. ಭಾರತ ಅತ್ಯುತ್ತಮ ತಂಡ. ಅವರ ಬ್ಯಾಟಿಂಗ್ ಪರಿಪೂರ್ಣವಾಗಿದೆ ಅವರ ಬೌಲಿಂಗ್ ಅಲ್ಲಿನ ಪರಿಸ್ಥಿತಿಗಳಿಗೆ ಹೆಚ್ಚು ಸೂಕ್ತವಾಗಿದೆ. ಅವರು ಸ್ವಯಂ ತಪ್ಪುಗಳನ್ನು ಮಾಡದ ಹೊರತು, ಯಾವುದೇ ತಂಡವು ಅವರ ಹತ್ತಿರವೂ ಹೋಗುವುದು ಅಸಂಭವ ಎಂದು ಬಟ್ ತಮ್ಮ ಯೂಟ್ಯೂಬ್ ಚಾನೆಲ್ನಲ್ಲಿ ಹೇಳಿದ್ದಾರೆ.
ಉನ್ನತ ದರ್ಜೆಯ ಕ್ರಿಕೆಟ್
ಕಳೆದ ಕೆಲವು ವರ್ಷಗಳಲ್ಲಿ ಭಾರತದಲ್ಲಿ ಕ್ರಿಕೆಟ್ ವಾತಾವರಣವು ಗಣನೀಯವಾಗಿ ಸುಧಾರಿಸಿದೆ. ಆಟಗಾರರು ಫಿಟ್ನೆಸ್ಗೆ ಹೆಚ್ಚಿನ ಒತ್ತು ನೀಡುತ್ತಾರೆ. ಫೀಲ್ಡಿಂಗ್ ಗುಣಮಟ್ಟವನ್ನು ಹೆಚ್ಚಿಸುತ್ತಾರೆ ಎಂದು ಬಟ್ ಹೇಳಿದ್ದಾರೆ. ಭಾರತದ ಮೂಲಸೌಕರ್ಯ ಮತ್ತಿತರ ವ್ಯವಸ್ಥೆಗಳನ್ನು ಬಟ್ ಶ್ಲಾಘಿಸಿದರು.
ಇದನ್ನೂ ಓದಿ : Asian Games 2023 : ಶೂಟಿಂಗ್ ಸ್ಕೀಟ್ ವಿಭಾಗದಲ್ಲಿ ಕಂಚಿನ ಪದಕ ಗೆದ್ದ ಭಾರತ ಪುರುಷರ ತಂಡ
“ಕಳೆದ ಕೆಲವು ವರ್ಷಗಳಲ್ಲಿ ಭಾರತವು ಗಮನಾರ್ಹವಾಗಿ ಸುಧಾರಿಸಿದೆ. ಈ ಆಟಗಾರರ ಫಿಟ್ನೆಸ್ ಮಟ್ಟವು ನಾವು 15 ವರ್ಷಗಳ ಹಿಂದೆ ಹೇಳಿದ್ದಕ್ಕಿಂತ ಉತ್ತಮವಾಗಿದೆ. ಅಂತೆಯೇ, ಫೀಲ್ಡಿಂಗ್ ಗುಣಮಟ್ಟವೂ ಸುಧಾರಿಸಿದೆ. ಮೂಲಸೌಕರ್ಯದಿಂದ ಹಿಡಿದು ವೀಕ್ಷಕವಿವರಣೆಗಾರರು, ತಜ್ಞರು ಸೇರಿದಂತೆ ಭಾರತದಲ್ಲಿ ಕ್ರಿಕೆಟ್ಗೆ ಸಂಬಂಧಿಸಿದ ಎಲ್ಲವೂ ಉನ್ನತ ದರ್ಜೆಯದ್ದಾಗಿದೆ, “ಎಂದು ಪಾಕಿಸ್ತಾನದ ಮಾಜಿ ನಾಯಕ ಹೇಳಿದರು.
ರೋಹಿತ್ ಶರ್ಮಾ ಮತ್ತು ತಂಡವು ಏಕದಿನ ವಿಶ್ವಕಪ್ನ ಎಲ್ಲಾ ಮೂರು ಸ್ವರೂಪಗಳಲ್ಲಿ ನಂ.1 ತಂಡವಾಗಿ ಪ್ರವೇಶಿಸಲಿದೆ. ಅಕ್ಟೋಬರ್ 8 ರಂದು ಚೆನ್ನೈನಲ್ಲಿ ಐದು ಬಾರಿಯ ಚಾಂಪಿಯನ್ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದೊಂದಿಗೆ 10 ತಂಡಗಳ ಟೂರ್ನಿಯಲ್ಲಿ ಅವರ ಅಭಿಯಾನ ಪ್ರಾರಂಭವಾಗುತ್ತದೆ.
ಕ್ರಿಕೆಟ್
Cricket Record : T20ಯಲ್ಲಿ 314 ರನ್, 9 ಬಾಲ್ನಲ್ಲಿ ಫಿಫ್ಟಿ, 34 ಬಾಲ್ಗಳಲ್ಲಿ ಸೆಂಚುರಿ! ಯಾರ ದಾಖಲೆ ಇದು?
ಮಂಗೋಲಿಯಾ ವಿರುದ್ಧದ ಏಷ್ಯನ್ ಗೇಮ್ಸ್ ನ ತನ್ನ ಆರಂಭಿಕ ಪಂದ್ಯದಲ್ಲಿ ನೇಪಾಳವು ಅದ್ಭುತ ಪವರ್ ಹಿಟ್ಟಿಂಗ್ ಪ್ರದರ್ಶನದೊಂದಿಗೆ ಅನೇಕ ಕ್ರಿಕೆಟ್ ದಾಖಲೆಗಳನ್ನು (Cricket Record) ಮುರಿದಿದೆ.
ಹ್ಯಾಂಗ್ಝೌ: ಏಷ್ಯನ್ ಗೇಮ್ಸ್ (Asian Games 2023) ಕ್ರಿಕೆಟ್ ಸ್ಪರ್ಧೆಯ ಗ್ರೂಪ್ ಪಂದ್ಯದಲ್ಲಿ ಮಂಗೋಲಿಯಾ ವಿರುದ್ಧ ನೇಪಾಳ ಪುರುಷರ ತಂಡ ಇತಿಹಾಸ ಸೃಷ್ಟಿಸಿದೆ. ಪುರುಷರ ಟೂರ್ನಮೆಂಟ್ ಆರಂಭವಾಗುತ್ತಿದ್ದಂತೆ ಸರಣಿ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ದಾಖಲೆಗಳ (Cricket Record) ಮೇಲೆ ದಾಖಲೆಗಳು ಸೃಷ್ಟಿಯಾಗಿವೆ. ನೇಪಾಳ ತಂಡವು ಮಂಗೋಲಿಯಾ ವಿರುದ್ಧ 20 ಓವರ್ಗಳಲ್ಲಿ 314/3 ರ ನಂಬಲಸಾಧ್ಯವಾದ ಸ್ಕೋರ್ ದಾಖಲಿಸಿತು. ಕೇವಲ 120 ಎಸೆತಗಳಲ್ಲಿ 300 ರನ್ ದಾಖಲಿಸಿ ಅಚ್ಚರಿ ಮೂಡಿಸಿತು. ಕ್ರಿಕೆಟ್ ಆಟದ ಕಿರು ಸ್ವರೂಪದಲ್ಲಿ 300 ರನ್ಗಳ ಗಡಿಯನ್ನು ದಾಟಿದ ಮೊದಲ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಯಿತು ನೇಪಾಳ. ಏಷ್ಯನ್ ಗೇಮ್ಸ್ ನಲ್ಲಿ ನಡೆಯುವ ಪಂದ್ಯಗಳಿಗೆ ಟ್ವೆಂಟಿ-20 ಸ್ಥಾನಮಾನ ನೀಡಲಾಗುವುದು ಎಂದು ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಈ ಹಿಂದೆ ದೃಢಪಡಿಸಿತ್ತು. ಹೀಗಾಗಿ ನೇಪಾಳ ಮಾಡಿದ್ದೆಲ್ಲವೂ ಕ್ರಿಕೆಟ್ ಇತಿಹಾಸದ ದಾಖಲೆ ಪುಸ್ತಕ ಸೇರಿಕೊಂಡವು.
2007ರ ವಿಶ್ವಕಪ್ನಲ್ಲಿ ಇಂಗ್ಲೆಂಡ್ ವಿರುದ್ಧ 12 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಯುವರಾಜ್ ಸಿಂಗ್ ಅವರ ದೀರ್ಘಕಾಲದ ದಾಖಲೆಯನ್ನು ನೇಪಾಳ ಬ್ಯಾಟರ್ ದೀಪೇಂದ್ರ ಸಿಂಗ್ ಐರಿ ಮುರಿದರು. ಅವರು 9 ಎಸೆತಗಳಲ್ಲಿ ಅರ್ಧ ಶತಕ ಬಾರಿಸಿ 10 ಎಸೆತಗಳಲ್ಲಿ ಅಜೇಯ 52 ರನ್ ಗಳಿಸಿದರು, ಅದರಲ್ಲಿ 48 ರನ್ಗಳು ಸಿಕ್ಸರ್ಗಳ ಮೂಲಕೇ ಬಂದಿದ್ದವು.
Records created by Nepal today in Asian Games in T20I history:
— Johns. (@CricCrazyJohns) September 27, 2023
– First team ever to score 300 runs.
– Kushal Malla scored the fastest ever T20I hundred: 34 balls.
– Dipendra Singh scored the fastest ever T20I fifty: 9 balls. pic.twitter.com/oV0rQYRh6R
ಈ ಪಂದ್ಯದಲ್ಲಿ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಅವರ ದಾಖಲೆಯೂ ಮುರಿಯಿತು. ಭಾರತದ ನಾಯಕ ರೋಹಿತ್ ಶರ್ಮಾ ಮತ್ತು ದಕ್ಷಿಣ ಆಫ್ರಿಕಾದ ಸ್ಟಾರ್ ಬ್ಯಾಟರ್ ಡೇವಿಡ್ ಮಿಲ್ಲರ್ ಅವರನ್ನು ಹಿಂದಿಕ್ಕಿದ ನೇಪಾಳ ಬ್ಯಾಟರ್ ಕುಶಾಲ್ ಮಲ್ಲಾ ಕೇವಲ 34 ಎಸೆತಗಳಲ್ಲಿ ಟಿ 20 ಐನಲ್ಲಿ ವೇಗವಾಗಿ ಶತಕ ಗಳಿಸಿದರು. ಇಬ್ಬರೂ ಬ್ಯಾಟರ್ಗಳಲ್ಲಿ 35 ಎಸೆತಗಳಲ್ಲಿ ಮೂರಂಕಿ ಮೊತ್ತ ದಾಟಿದ್ದರು. ಮಲ್ಲಾ 8 ಬೌಂಡರಿ ಮತ್ತು 12 ಸಿಕ್ಸರ್ಗಳನ್ನು ಬಾರಿಸಿ ಕೇವಲ 50 ಎಸೆತಗಳಲ್ಲಿ 137 ರನ್ ಗಳಿಸಿ ಅಜೇಯರಾಗಿ ಉಳಿದರು.
ಇತಿಹಾಸದಲ್ಲಿ ಅತಿ ಹೆಚ್ಚು ಟಿ 20 ಸ್ಕೋರ್ ಗಳ ಪಟ್ಟಿ ಇಲ್ಲಿದೆ
- ನೇಪಾಳ – ಮಂಗೋಲಿಯಾ ವಿರುದ್ಧ 314/4 (2023)
- ಅಫ್ಘಾನಿಸ್ತಾನ – ಐರ್ಲೆಂಡ್ ವಿರುದ್ಧ 278/3 (2019)
- ಜೆಕ್ ಗಣರಾಜ್ಯ – ಟರ್ಕಿ ವಿರುದ್ಧ 278/4 (2019)
- ಆಸ್ಟ್ರೇಲಿಯಾ – ಶ್ರೀಲಂಕಾ ವಿರುದ್ಧ 263/3 (2016)
- ಕೀನ್ಯಾ ವಿರುದ್ಧ ಶ್ರೀಲಂಕಾ 260/6 (2007)
ಕುತೂಹಲಕಾರಿ ಸಂಗತಿಯೆಂದರೆ, ಹ್ಯಾಂಗ್ಝೌನ ಝೆಜಿಯಾಂಗ್ ಯುನಿವರ್ಸಿಟಿ ಆಫ್ ಟೆಕ್ನಾಲಜಿ ಕ್ರಿಕೆಟ್ ಫೀಲ್ಡ್ನಲ್ಲಿ ನೇಪಾಳವು ತಮ್ಮ ಇನ್ನಿಂಗಗ್ಸ್ಗೆ ನಿಧಾನಗತಿಯ ಆರಂಭವನ್ನು ನೀಡಿತು, ಇಬ್ಬರೂ ಆರಂಭಿಕರು 100ಕ್ಕಿಂತ ಕಡಿಮೆ ಸ್ಟ್ರೈಕ್ ರೇಟ್ನಲ್ಲಿ ಆಡಿದ್ದರು. ಆದರೆ, ಬಳಿಕ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದರು ನೇಪಾಳ ಬ್ಯಾಟರ್ಗಳು.
ಒಂದೇ ಪಂದ್ಯದಲ್ಲಿ 26 ಸಿಕ್ಸರ್ಗಳು
ನೇಪಾಳದ ಬ್ಯಾಟರ್ಗಳು ಒಂದೇ ಇನ್ನಿಂಗ್ಸ್ನಲ್ಲಿ 26 ಸಿಕ್ಸರ್ಗಳನ್ನು ಬಾರಿಸುವ ಮೂಲಕ ತಮ್ಮ ಹಿಟ್ಟಿಂಗ್ ಸಾಮರ್ಥ್ಯವನ್ನು ಪ್ರದರ್ಶಿಸಿದರು. ಈ ಗಮನಾರ್ಹ ಸಾಧನೆಯು ಈಗ ಟಿ 20 ಐ ಇತಿಹಾಸದಲ್ಲಿ ಒಂದೇ ಇನ್ನಿಂಗ್ಸ್ನಲ್ಲಿ ಯಾವುದೇ ತಂಡವು ಅತಿ ಹೆಚ್ಚು ಸಿಕ್ಸರ್ಗಳ ದಾಖಲೆಯಾಗಿದೆ. ಇದು 2019 ರಲ್ಲಿ ಅಫ್ಘಾನಿಸ್ತಾನವು 278/3 ಸ್ಕೋರ್ ಮಾಡಿದಾಗ 22 ಸಿಕ್ಸರ್ಗಳ ದಾಖಲೆಯನ್ನೂ ಮುರಿದಿದೆ.
ಇದನ್ನೂ ಓದಿ :Asian Games 2023 : ಶೂಟಿಂಗ್ನಲ್ಲಿ ಭಾರತಕ್ಕೆ ಚಿನ್ನ, 25 ಮೀಟರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಮಹಿಳೆಯರ ಸಾಧನೆ
ಭಾರತ ನೇರ ಕ್ವಾರ್ಟರ್ಫೈನಲ್ಸ್ಗೆ
ಏಷ್ಯನ್ ಗೇಮ್ಸ್ ನ ಪುರುಷರ ಕ್ರಿಕೆಟ್ ಸ್ಪರ್ಧೆಯ ಮೊದಲ ಸುತ್ತಿನಲ್ಲಿ ತಲಾ ಮೂರು ತಂಡಗಳನ್ನು ಹೊಂದಿರುವ ಮೂರು ಗುಂಪುಗಳಿವೆ. ಪ್ರತಿ ಗುಂಪಿನಲ್ಲಿ ಅಗ್ರ ಸ್ಥಾನ ಪಡೆಯುವ ತಂಡಗಳು ಕ್ವಾರ್ಟರ್ ಫೈನಲ್ಗೆ ಅರ್ಹತೆ ಪಡೆಯುತ್ತವೆ. ಅಲ್ಲಿ ಭಾರತ, ಶ್ರೀಲಂಕಾ, ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದಂತಹ ತಂಡಗಳು ಸೇರಿಕೊಳ್ಳುತ್ತವೆ.
ಇತ್ತೀಚೆಗೆ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯ ಭಾಗವಾಗಿದ್ದ ಋತುರಾಜ್ ಗಾಯಕ್ವಾಡ್ ಭಾರತವನ್ನು ಮುನ್ನಡೆಸಲಿದ್ದಾರೆ.
ಕ್ರಿಕೆಟ್
Shubman Gill : ಅಂತಿಮ ಪಂದ್ಯದಲ್ಲಿ ಗಿಲ್ಗೆ ವಿಶ್ರಾಂತಿ? ಪಾಕ್ ನಾಯಕ ಬಾಬರ್ ಅಜಮ್ಗೆ ನೆಮ್ಮದಿ
ಶುಭ್ಮನ್ ಗಿಲ್ಗೆ ಆಸ್ಟ್ರೇಲಿಯಾ ವಿರುದ್ಧದ 3ನೇ ಪಂದ್ಯದಲ್ಲಿ ವಿಶ್ರಾಂತಿ ನೀಡುತ್ತಿರುವ ಕಾರಣ ಅವರಿಗೆ ಬಾಬರ್ ಅಜಮ್ ನಂಬರ್ 1 ಸ್ಥಾನವನ್ನ ಅಕ್ರಮಿಸಿಕೊಳ್ಳುವುದಕ್ಕೆ ಸಾಧ್ಯವಾಗುತ್ತಿಲ್ಲ.
ನವದೆಹಲಿ: ಆಸ್ಟ್ರೇಲಿಯಾ ವಿರುದ್ಧದ ಏಕ ದಿನ ಕ್ರಿಕೆಟ್ ಸರಣಿಯ ಮೂರನೇ ಮತ್ತು ಅಂತಿಮ ಪಂದ್ಯಕ್ಕೆ ಭಾರತದ ಆರಂಭಿಕ ಆಟಗಾರ ಶುಭ್ಮನ್ ಗಿಲ್ಗೆ (Shubman Gill) ವಿಶ್ರಾಂತಿ ನೀಡಲಾಗಿದೆ. ಇದರಿಂದಾಗಿ ಪಾಕಿಸ್ತಾನ ತಂಡದ ನಾಯಕ ಬಾಬರ್ ಅಜಮ್ ಏಕದಿನ ಬ್ಯಾಟಿಂಗ್ ಶ್ರೇಯಾಂಕದಲ್ಲಿ ಅಗ್ರಸ್ಥಾನದಲ್ಲಿ ಉಳಿಯಲಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಮೊದಲ ಎರಡು ಏಕದಿನ ಪಂದ್ಯಗಳಲ್ಲಿ ಶುಬ್ಮನ್ ಗಿಲ್ 74 ಮತ್ತು 104 ರನ್ ಗಳಿಸಿದ್ದಾರೆ. ಮೂರು ಏಕದಿನ ಪಂದ್ಯಗಳಿಗೆ ಮೊದಲು, ಬಲಗೈ ಬ್ಯಾಟರ್ ಐಸಿಸಿ ಏಕದಿನ ಶ್ರೇಯಾಂಕದಲ್ಲಿ ಬಾಬರ್ ಅಜಮ್ ಅವರನ್ನು ಹಿಂದಿಕ್ಕಲು ಸುವರ್ಣಾವಕಾಶವಿತ್ತು. ರಾಜ್ಕೋಟ್ನಲ್ಲಿ ನಡೆಯಲಿರುವ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಕಳೆದ ಎರಡು ಹಣಾಹಣಿಗಳಲ್ಲಿ ಶತಕ ಹಾಗೂ ಅರ್ಧಶತಕಗಳನ್ನು ಗಳಿಸಿರುವ ಗಿಲ್ಗೆ ಖಂಡಿತವಾಗಿಯೂ ಮತ್ತೊಂದು ದೊಡ್ಡ ಸ್ಕೋರ್ ಗಳಿಸುವ ಅವಕಾಶವಿತ್ತು. ಆದಾಗ್ಯೂ, ಮೂರನೇ ಏಕದಿನ ಪಂದ್ಯಕ್ಕೆ ಯುವ ಆಟಗಾರನಿಗೆ ವಿಶ್ರಾಂತಿ ನೀಡಲಾಗಿದೆ. ಹೀಗಾಗಿ ಅಜಮ್ ದಾಖಲೆ ಮುರಿಯುವ ಅವಕಾಶ ತಪ್ಪಿದೆ.
ಅದ್ಭುತ ಫಾರ್ಮ್ನಲ್ಲಿರುವ ಗಿಲ್
ಕಳೆದ ಬುಧವಾರ ಐಸಿಸಿ ಶ್ರೇಯಾಂಕ ಅಪ್ಡೇಟ್ ಆದ ನಂತರ ಭಾರತದ ಆರಂಭಿಕ ಆಟಗಾರ ಪ್ರಸ್ತುತ ಏಕದಿನ ಬ್ಯಾಟರ್ಗಳ ಐಸಿಸಿ ಶ್ರೇಯಾಂಕದಲ್ಲಿ 814 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ. ಪಾಕ್ ನಾಯಕ ಬಾಬರ್ ಅಜಮ್ ಅವರಿಗಿಂತ ಕೇವಲ 43 ರೇಟಿಂಗ್ ಪಾಯಿಂಟ್ಗಳಿಂದ (857 ರೇಟಿಂಗ್ ಪಾಯಿಂಟ್ಗಳು) ಹಿಂದಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಗಿಲ್ 63 ಎಸೆತಗಳಲ್ಲಿ 74 ರನ್ ಗಳಿಸಿದ್ದರು ಮತ್ತು ಭಾನುವಾರ ನಡೆದ ಎರಡನೇ ಏಕದಿನ ಪಂದ್ಯದಲ್ಲಿ 97 ಎಸೆತಗಳಲ್ಲಿ 104 ರನ್ ಗಳಿಸಿದ್ದಾರೆ.
ವೆಸ್ಟ್ ಇಂಡೀಸ್ ಪ್ರವಾಸದಲ್ಲಿ ಉತ್ತಮ ಪ್ರದರ್ಶನ ನೀಡಲು ಹೆಣಗಾಡಿದ್ದ ಗಿಲ್ ಏಷ್ಯಾ ಕಪ್ 2023 ರ ಸಮಯದಲ್ಲಿ ಸಂಪೂರ್ಣವಾಗಿ ಫಾರ್ಮ್ಗೆ ಮರಳಿದ್ದರು. ಅಲ್ಲಿ ಅವರು ಪ್ರಮುಖ ಗರಿಷ್ಠ ಸ್ಕೋರರ್ ಆಗಿ ಆಟ ಮುಗಿಸಿದ್ದರು. ಅವರು ಆಸೀಸ್ ವಿರುದ್ಧವೂ ತಮ್ಮ ಫಾರ್ಮ್ ಉಳಿಸಿಕೊಂಡರು. ಅಂತರರಾಷ್ಟ್ರೀಯ ಕ್ರಿಕೆಟ್ನಲ್ಲಿ ಮುಂದಿನ ದೊಡ್ಡ ಸ್ಟಾರ್ ಎಂಬ ಹೆಗ್ಗಳಿಕೆಗೆ ತಕ್ಕ ಹಾಗೆ ಬ್ಯಾಟ್ ಬೀಸಿದರು. ಇದೇ ವೇಳೆ ಏಕದಿನ ಮಾದರಿಯಲ್ಲಿ ನಂ.1 ಬ್ಯಾಟರ್ ಎಂಬ ಟ್ಯಾಗ್ ಪಡೆಯುವ ಅವಕಾಶವೂ ಗಿಲ್ಗೆ ಸಿಕ್ಕಿತ್ತು. ಆದಾಗ್ಯೂ, ಅವರು ಸ್ಥಾನವನ್ನು ಪಡೆಯಲು ವಿಶ್ವಕಪ್ ವರೆಗೆ ಕಾಯಬೇಕಾಗಿದೆ ಎಂದು ತೋರುತ್ತದೆ.
ಇದನ್ನೂ ಓದಿ : Shubman Gill: ಗಿಲ್ ಶತಕಕ್ಕೆ ಸಚಿನ್ ಸೇರಿ ಹಲವು ದಿಗ್ಗಜರ ದಾಖಲೆ ಪತನ
ಬಾಬರ್ ಅಜಮ್ ಕೊನೆಯ ಬಾರಿಗೆ ಶ್ರೀಲಂಕಾ ವಿರುದ್ಧದ ಏಷ್ಯಾ ಕಪ್ ಸೂಪರ್ 4 ಪಂದ್ಯದ ವೇಳೆ ಕಾಣಿಸಿಕೊಂಡಿದ್ದರು. ಸ್ಪರ್ಧೆಯಲ್ಲಿ ಬಾಬರ್ ಉತ್ತಮ ಪ್ರದರ್ಶನ ನೀಡಿರಲಿಲ್ಲ. ಪಾಕಿಸ್ತಾನದ ನಾಯಕ ಮುಂಬರುವ ವಿಶ್ವಕಪ್ ನಲ್ಲಿ ಮತ್ತೆಕಾಣಿಸಿಕೊಳ್ಳಲಿದ್ದಾರೆ. ತಮ್ಮ ಅದ್ಭುತ ರನ್ ಗಳಿಸುವ ಸಾಮರ್ಥ್ಯ ಪ್ರದರ್ಶನ ಮಾಡಲಿದ್ದಾರೆ. ಮೆನ್ ಇನ್ ಗ್ರೀನ್ ತಂಡವು ತನ್ನ ಆರಂಭಿಕ ಪಂದ್ಯದಲ್ಲಿ ನೆದರ್ಲೆಂಡ್ಸ್ ತಂಡವನ್ನು ಎದುರಿಸಲಿದೆ. ಪಾಕಿಸ್ತಾನ ಪ್ರಶಸ್ತಿ ಗೆಲ್ಲುವ ಅವಕಾಶದಲ್ಲಿ ಬಾಬರ್ ನಿರ್ಣಾಯಕ ಪಾತ್ರ ವಹಿಸಬೇಕಾಗಿದೆ. ಐಸಿಸಿ ಏಕದಿನ ಶ್ರೇಯಾಂಕದಲ್ಲಿ ಅಗ್ರಸ್ಥಾನದಲ್ಲಿ ಉಳಿಸಿಕೊಳ್ಳುವ ಭರವಸೆ ಕೂಡ ಹೊಂದಿದ್ದಾರೆ.
ಕ್ರಿಕೆಟ್
WPL 2023 : ಮಹಿಳೆಯರ ಐಪಿಎಲ್ನಲ್ಲಿ ಬಿಸಿಸಿಐಗೆ ಸಿಕ್ಕ ಆದಾಯ ಕಡಿಮೆಯೇನಲ್ಲ
ಮುಂಬಯಿ: ವರದಿಗಳ ಪ್ರಕಾರ ಈ ವರ್ಷದ ಆರಂಭದಲ್ಲಿ ಮುಂಬೈನಲ್ಲಿ ನಡೆದ ಮಹಿಳಾ ಪ್ರೀಮಿಯರ್ ಲೀಗ್ (ಡಬ್ಲ್ಯುಪಿಎಲ್ 2023) ನ ಉದ್ಘಾಟನಾ ಆವೃತ್ತಿಯಿಂದ (WPL 2023 ) ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) 377.49 ಕೋಟಿ ರೂ.ಗಳಿಸಿದೆ. ಗೋವಾದಲ್ಲಿ ಸೋಮವಾರ ನಡೆದ ಬಿಸಿಸಿಐ ವಾರ್ಷಿಕ ಸಭೆಯಲ್ಲಿ ಬಿಸಿಸಿಐ ಖಜಾಂಚಿ ಆಶಿಶ್ ಶೆಲಾರ್ ತಮ್ಮ ವರದಿಯಲ್ಲಿ ಈ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ಶೆಲಾರ್ ಅವರ ವರದಿಯಲ್ಲಿನ ಆದಾಯ ವಿಶ್ಲೇಷಣೆಯ ಪ್ರಕಾರ, 2022-23ರ ಹಣಕಾಸು ವರ್ಷದಲ್ಲಿ ಬಿಸಿಸಿಐನ ಒಟ್ಟು ಆದಾಯದ ಆರು ಶೇಕಡಾ ಮಹಿಳೆಯರ ಪ್ರೀಮಿಯರ್ ಲೀಗ್ನಿಂದ ಬಂದಿದೆ.
ಬಿಸಿಸಿಐ ಆದಾಯಕ್ಕೆ ಐಪಿಎಲ್ ದೊಡ್ಡ ಕೊಡುಗೆ ಕೊಟ್ಟಿದೆ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನಿಂದ ಶೇಕಡಾ 37 , ಮಾಧ್ಯಮ ಹಕ್ಕುಗಳ ಮಾರಾಟದಿಂದ ಶೇಕಾಡ 38 . ಹಿರಿಯ ಪುರುಷರ ಕ್ರಿಕೆಟ್ ತಂಡದ ಅಂತಾರಾಷ್ಟ್ರೀಯ ಪ್ರವಾಸಗಳಿಂದ ಶೇ 10 ಪ್ರತಿಶತದಷ್ಟು ಆದಾಯ ಬಂದಿದೆ ಎಂದು ವಿವರಣೆ ನೀಡಲಾಗಿದೆ.
2022-23ನೇ ವರ್ಷವು ದೇಶೀಯ ಋತುವನ್ನು ಉತ್ಸಾಹದಿಂದ ನಡೆಸಲು ವಿಶ್ವಾಸವನ್ನು ನೀಡಿದೆ. ಅಧಿಕಾರವನ್ನು ಅನ್ನು ನನ್ನ ಹಿಂದಿನವರು ಆರೋಗ್ಯಕರ ಆರ್ಥಿಕ ಸ್ಥಿತಿಯಲ್ಲಿ ನನಗೆ ಹಸ್ತಾಂತರಿಸಿದರು. ಸಮಯ ಕಳೆದಂತೆ ಅದು ಬಲಗೊಳ್ಳುತ್ತದೆ ಎಂದು ನಾನು ಖಚಿತಪಡಿಸಿಕೊಳ್ಳುತ್ತೇನೆ. ಎಲ್ಲಾ ಸಂದರ್ಭಗಳಲ್ಲಿ ಗುಣಮಟ್ಟವನ್ನು ಹೇಗೆ ಕಾಪಾಡಿಕೊಳ್ಳಬಹುದು ಎಂಬುದನ್ನು ಬಿಸಿಸಿಐ ಕ್ರೀಡಾ ಜಗತ್ತಿಗೆ ಸಾಬೀತುಪಡಿಸಿದ ಎಂದು ಶೆಲಾರ್ ರಾಜ್ಯ ಅಸೋಸಿಯೇಷನ್ ಸದಸ್ಯರಿಗೆ ತಿಳಿಸಿದ್ದಾರೆ ಎಂದು ವರದಿಯಾಗಿದೆ.
“ನನ್ನ ಹಿಂದಿನವರು ನನಗೆ ಅಧಿಕಾರ ಹಸ್ತಾಂತರ ಮಾಡುವಾಗ ಬಿಸಿಸಿಐ ಹಣಕಾಸು ಸ್ಥಿತಿ ಆರೋಗ್ಯಕರವಾಗಿತ್ತು. ದಿನ ಕಳೆದಂತೆ ಅದು ಇನ್ನಷ್ಟು ಅಭಿವೃದ್ಧಿಯಾಗುತ್ತಾ ಬಂತು ಎಂಬುದನ್ನು ನಾನು ಖಚಿತಪಡಿಸಿಕೊಳ್ಳುತ್ತೇನೆ. ಬಿಸಿಸಿಐ ಈ ಮಟ್ಟಕ್ಕೆ ಏರುವುದುಕ್ಕೆ ಎಲ್ಲಾ ಮಾಜಿ ಮತ್ತು ಪ್ರಸ್ತುತ ಅಧಿಕಾರಿಗಳ ಸಾಮೂಹಿಕ ಪ್ರಯತ್ನವೇ ಕಾರಣ. ನಾಯಕತ್ವದ ದೂರದೃಷ್ಟಿ ಮತ್ತು ಬಿಸಿಸಿಐನ ಎಲ್ಲಾ ಸದಸ್ಯರ ಬಲವಾದ ಬದ್ಧತೆಯು ಕೆಲವೇ ವರ್ಷಗಳ ಅವಧಿಯಲ್ಲಿ ಕ್ರಿಕೆಟ್ ಕ್ರೀಡೆಯನ್ನು ಗೌರವಾನ್ವಿತ ಎತ್ತರಕ್ಕೆ ಕೊಂಡೊಯ್ದಿದೆ. ಇದು ಇನ್ನಷ್ಟು ಅಭಿವೃದ್ಧಿ ಕಾಣಲಿದೆ ಎಂಬುದಾಗಿ ಶೆಲಾರ್ ಅವರು ಹೇಳಿಕೊಂಡಿದ್ದಾರೆ.
ಬಿಸಿಸಿಐನ ಸಮರ್ಪಣೆ ಮತ್ತು ದೃಢನಿಶ್ಚಯವು ಬಿಸಿಸಿಐ ಎಲ್ಲಾ ಸಮಯದಲ್ಲೂ ನೈತಿಕವಾಗಿ ಮತ್ತು ಆರ್ಥಿಕವಾಗಿ ಸದೃಢವಾಗಿರುವಂತೆ ನೋಡಿಕೊಂಡಿದೆ. ಎಲ್ಲಾ ಸಂದರ್ಭಗಳಲ್ಲಿ ಗುಣಮಟ್ಟವನ್ನು ಹೇಗೆ ಕಾಪಾಡಿಕೊಳ್ಳಬಹುದು ಎಂಬುದನ್ನು ಬಿಸಿಸಿಐ ಕ್ರೀಡಾ ಜಗತ್ತಿಗೆ ಸಾಬೀತುಪಡಿಸಿದೆ ಎಂದು ಶೆಲಾರ್ ಅವರು ತಮ್ಮ ವರದಿಯಲ್ಲಿ ತಿಳಿಸಿದ್ದಾರೆ.
2023 ಮಾರ್ಚ್ 4 ರಿಂದ 26 ರವರೆಗೆ ನಡೆದ ಡಬ್ಲ್ಯುಪಿಎಲ್ 2023 ರಲ್ಲಿ ಮುಂಬೈ ಇಂಡಿಯನ್ಸ್, ಡೆಲ್ಲಿ ಕ್ಯಾಪಿಟಲ್ಸ್, ಯುಪಿ ವಾರಿಯರ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಜೈಂಟ್ಸ್ ತಂಡಗಳು ಭಾಗವಹಿಸಿದ್ದವು. ಹರ್ಮನ್ಪ್ರೀತ್ ಕೌರ್ ನಾಯಕತ್ವದ ಮುಂಬೈ ಇಂಡಿಯನ್ಸ್ ಫೈನಲ್ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು 7 ವಿಕೆಟ್ಗಳಿಂದ ಸೋಲಿಸಿ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಈ ಯಶಸ್ಸಿನ ಹಿನ್ನೆಲೆಯಲ್ಲಿ ಮುಂದಿನ ಆವೃತ್ತಿಯ ಮಹಿಳೆಯರ ಪ್ರೀಮಿಯರ್ ಲೀಗ್ ಅನ್ನು ಇನ್ನಷ್ಟು ಅದ್ಧೂರಿಯಾಗಿ ಆಚರಿಸಲು ಬಿಸಿಸಿಐ ಸಿದ್ಧತೆ ಮಾಡಿಕೊಂಡಿದೆ ಎಂಬುದಾಗಿ ಹೇಳಲಾಗಿದೆ.
-
ದೇಶ13 hours ago
UNGA Speech: ಪ್ರಾದೇಶಿಕ ಸಮಗ್ರತೆಯನ್ನು ಗೌರವಿಸಿ, ವಿಶ್ವ ಸಂಸ್ಥೆಯಲ್ಲಿ ಭಾರತೀಯ ವಿದೇಶಾಂಗ ಸಚಿವ ಜೈಶಂಕರ್ ಪಾಠ!
-
ವಿದೇಶ21 hours ago
Great auction: ಅಮೆರಿಕದ ಅಪರೂಪದ ನೋಟು 3.9 ಕೋಟಿ ರೂ.ಗೆ ಮಾರಾಟ!
-
South Cinema24 hours ago
Heart attack : ಹಿರಿಯ ನಟ ಬ್ಯಾಂಕ್ ಜನಾರ್ದನ್ಗೆ ಹೃದಯಾಘಾತ?
-
ಸುವಚನ8 hours ago
ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ
-
ದೇಶ14 hours ago
Manipur Horror: ಅಪಹರಿಸಿ ಕೊಂದ್ರಲ್ಲಾ… ನಮ್ಮ ಮಕ್ಕಳು ಮಾಡಿದ ತಪ್ಪಾದ್ರೂ ಏನು? ಹತ್ಯೆಗೀಡಾದ ವಿದ್ಯಾರ್ಥಿಗಳ ಪೋಷಕರ ಪ್ರಶ್ನೆ
-
ಕರ್ನಾಟಕ24 hours ago
Bengaluru Bandh : ಪೊಲೀಸರಿಗೆ ಕೊಟ್ಟ ಊಟದಲ್ಲಿ ಸಿಕ್ಕಿತು ಫ್ರೈಡ್ ಇಲಿ!
-
ದೇಶ14 hours ago
GST Evasion: ಜಿಎಸ್ಟಿ ವಂಚಿಸಿದ ಬಿಜೆಪಿ ನಾಯಕಿಯ ಸಕ್ಕರೆ ಕಾರ್ಖಾನೆಯ 19 ಕೋಟಿ ರೂ. ಮೌಲ್ಯದ ಸೊತ್ತು ಜಪ್ತಿ!
-
ಆಟೋಮೊಬೈಲ್20 hours ago
Viral News : ಅಮ್ಮನ ಕಾರಿನಲ್ಲಿಯೇ ಮನೆ ಬಿಟ್ಟು ಹೋದ ಪುಟಾಣಿ ಮಕ್ಕಳು, 300 ಕಿ. ಮೀ ದೂರ ಹೋಗಿ ಸಿಕ್ಕಿಬಿದ್ದರು