ICC World Cup: ವಿಶ್ವಕಪ್​ಗೆ ಮಾಸ್ಟರ್​ ಪ್ಲಾನ್; ರೋಹಿತ್​, ದ್ರಾವಿಡ್​​​ ಜತೆ ಅಗರ್ಕರ್ ಮಹತ್ವದ ಸಭೆ - Vistara News

ಕ್ರಿಕೆಟ್

ICC World Cup: ವಿಶ್ವಕಪ್​ಗೆ ಮಾಸ್ಟರ್​ ಪ್ಲಾನ್; ರೋಹಿತ್​, ದ್ರಾವಿಡ್​​​ ಜತೆ ಅಗರ್ಕರ್ ಮಹತ್ವದ ಸಭೆ

ಆಯ್ಕೆ ಸಮಿತಿಯ ನೂತನ ಮುಖ್ಯಸ್ಥ(Indian chief selector) ಅಜಿತ್ ಅಗರ್ಕರ್(Ajit Agarkar) ಅವರು ವೆಸ್ಟ್ ಇಂಡೀಸ್​ಗೆ ತೆರಳಿ ನಾಯಕ ರೋಹಿತ್​ ಶರ್ಮ(Rohit Sharma) ಮತ್ತು ಕೋಚ್​ ರಾಹುಲ್​ ದ್ರಾವಿಡ್(Rahul Dravid)​ ಜತೆ ಏಕದಿನ ವಿಶ್ವಕಪ್​(ICC World Cup) ಕುರಿತ ಸಭೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.

VISTARANEWS.COM


on

Indian chief selector Ajit Agarkar
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬಯಿ: ಟೀಮ್​ ಇಂಡಿಯಾದ ಪುರುಷರ ಕ್ರಿಕೆಟ್ ತಂಡದ ಆಯ್ಕೆ ಸಮಿತಿಯ ನೂತನ ಮುಖ್ಯಸ್ಥ(Indian chief selector) ಅಜಿತ್ ಅಗರ್ಕರ್(Ajit Agarkar) ಅವರು ವೆಸ್ಟ್ ಇಂಡೀಸ್​ಗೆ ತೆರಳಲು ಸಜ್ಜಾಗಿದ್ದಾರೆ. ಶೀಘ್ರದಲ್ಲೇ ವೆಸ್ಟ್ ಇಂಡೀಸ್ ಪ್ರವಾಸದಲ್ಲಿರುವ ಭಾರತೀಯ ತಂಡವನ್ನು ಭೇಟಿ ಮಾಡಲಿದ್ದಾರೆ. ಆಯ್ಕೆ ಸಮಿತಿ ಮುಖ್ಯಸ್ಥರಾದ ಬಳಿಕ ಅಗರ್ಕರ್​ ಅವರ ಮೊದಲ ಭೇಟಿ ಇದಾಗಿದೆ. ಈ ಭೇಟಿಯ ವೇಳೆ ನಾಯಕ ರೋಹಿತ್​ ಶರ್ಮ(Rohit Sharma) ಮತ್ತು ಕೋಚ್​ ರಾಹುಲ್​ ದ್ರಾವಿಡ್(Rahul Dravid)​ ಜತೆ ಏಕದಿನ ವಿಶ್ವಕಪ್​(ICC World Cup) ಕುರಿತ ಸಭೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.

ಅಜಿತ್ ಅಗರ್ಕರ್ ಅವರು ಆಯ್ಕೆ ಸಮಿತಿಯ ಮುಖ್ಯಸ್ಥರಾಗುವ ಮುನ್ನವೇ ಭಾರತ ತಂಡ ವಿಂಡೀಸ್​ ಪ್ರವಾಸ ಕೈಗೊಂಡಿತ್ತು. ಹೀಗಾಗಿ ಅವರಿಗೆ ತಂಡವನ್ನು ಭೇಟಿ ಮಾಡುವ ಅವಕಾಶ ಸಿಕ್ಕಿರಲಿಲ್ಲ. ಇದೀಗ ಅಗರ್ಕರ್ ಅವರೇ ತಂಡದ ಭೇಟಿಗಾಗಿ ವಿಂಡೀಸ್​ ಪ್ರವಾಸ ಕೈಗೊಳ್ಳಲಿದ್ದಾರೆ.

ಅಗರ್ಕರ್​ ಅವರು ವಿಂಡೀಸ್​ನಲ್ಲಿ ನಾಯಕ ರೋಹಿತ್​ ಮತ್ತು ಕೋಚ್​ ರಾಹುಲ್ ದ್ರಾವಿಡ್​ ಜತೆ ಏಷ್ಯಾ ಕಪ್​ ಮತ್ತು ಭಾರತದ ಆತಿಥ್ಯದಲ್ಲೇ ನಡೆಯುವ ಏಕದಿನ ವಿಶ್ವಕಪ್​ ಕುರಿತು ವಿಶೇಷ ಸಭೆ ನಡೆಸಿ ಚರ್ಚಿಸಲಿದ್ದಾರೆ. ತಂಡ ಸಂಯೋಜನೆ ಮತ್ತು ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆ ಇದೆ. ಜತೆಗೆ ಗಾಯಾಳುಗಳಾಗಿ ತಂಡದಿಂದ ಹೊರಗುಳಿದಿರುವ ಆಟಗಾರರ ಆಯ್ಕೆ ಪ್ರತಿಕೆಯ ಬಗ್ಗೆಯೂ ಪ್ರಮುಖ ತೀರ್ಮಾನ ತೆಗೆದುಕೊಳ್ಳುವ ಸಾಧ್ಯತೆ ಇದೆ.

ಇದನ್ನೂ ಓದಿ Team India : ಭಾರತ ಪುರುಷರ ಕ್ರಿಕೆಟ್​ ತಂಡದ ಆಯ್ಕೆ ಸಮಿತಿ ಅಧ್ಯಕ್ಷರಾಗಿ ಅಜಿತ್ ಅಗರ್ಕರ್ ನೇಮಕ

ಮೂಲಗಳ ಪ್ರಕಾರ ತಂಡದ ನಿರ್ವಹಣೆ ಮತ್ತು ಆಯ್ಕೆ ಸಮಿತಿಯು ಫಿಟ್‌ನೆಸ್ ಸಮಸ್ಯೆಗಳು ಮತ್ತು ಕೆಲಸದ ಹೊರೆ ನಿರ್ವಹಣೆ, ವಿಶ್ವಕಪ್​ಗೆ ಪ್ರಮುಖ 20 ಆಟಗಾರರ ಆಯ್ಕೆ ಈ ಎಲ್ಲ ವಿಚಾರದಲ್ಲಿ ಚರ್ಚೆ ನಡೆಸಲಿದ್ದಾರೆ ಎಂದು ವರದಿಯಾಗಿದೆ. ಇದಲ್ಲದೆ ಭವಿಷ್ಯದ ಟೆಸ್ಟ್​ ಮತ್ತು ಟಿ20 ತಂಡಗಳ ಬಗ್ಗೆಯೂ ಚರ್ಚೆ ನಡೆಯಲಿದೆ ಎನ್ನಲಾಗಿದೆ.

ಏಕದಿನ ವಿಶ್ವಕಪ್​ ಟೂರ್ನಿ ಅಕ್ಟೋಬರ್​ 5ರಿಂದ ಆರಂಭಗೊಂಡು ನವೆಂಬರ್​ 19ರ ತನಕ ನಡೆಯಲಿದೆ. ಭಾರತ ತನ್ನ ಮೊದಲ ಪಂದ್ಯವನ್ನು ಆಸ್ಟ್ರೇಲಿಯಾ ವಿರುದ್ಧ ಆಡುವ ಮೂಲಕ ವಿಶ್ವಕಪ್​ ಅಭಿಯಾನ ಆರಂಭಿಸಲಿದೆ. ಈ ಪಂದ್ಯ ಅಕ್ಟೋಬರ್​ 8ರಂದು ಚೆನ್ನೈಯಲ್ಲಿ ನಡೆಯಲಿದೆ.

ಟಿವಿ ಚಾನೆಲ್ ಒಂದರ ಕುಟುಕು ಕಾರ್ಯಾಚರಣೆಯ ವಿವಾದದ ಬಳಿಕ ಚೇತನ್ ಶರ್ಮಾ (Chetan Sharma) ಅವರನ್ನು ಹುದ್ದೆಯಿಂದ ಕೆಳಕ್ಕೆ ಇಳಿಸಲಾಗಿತ್ತು. ಹೀಗಾಗಿ ಕಳೆದ ಫೆಬ್ರವರಿಯಿಂದ ಖಾಲಿ ಇದ್ದ ಈ ಹುದ್ದೆಯನ್ನು 45 ವರ್ಷದ ಅಗರ್ಕರ್ ವಹಿಸಿಕೊಂಡಿದ್ದಾರೆ. ಶಿವ ಸುಂದರ್ ದಾಸ್, ಸಲೀಲ್ ಅಂಕೋಲಾ, ಸುಬ್ರತೋ ಬ್ಯಾನರ್ಜಿ ಮತ್ತು ಎಸ್ ಶರತ್ ಸೇರಿದಂತೆ ಐದು ಸದಸ್ಯರ ಸಮಿತಿಗೆ ಅಗರ್ಕರ್ ಮುಖ್ಯಸ್ಥರಾಗಿದ್ದಾರೆ.

191 ಏಕದಿನ ಮತ್ತು 26 ಟೆಸ್ಟ್ ಪಂದ್ಯಗಳನ್ನು ಆಡಿದ ಅನುಭವಿ ಆಲ್​ರೌಂಡರ್​ ಅಗರ್ಕರ್ ಅವರನ್ನು ಸುಲಕ್ಷಣಾ ನಾಯಕ್, ಅಶೋಕ್ ಮಲ್ಹೋತ್ರಾ ಮತ್ತು ಜತಿನ್ ಪರಾಂಜಪೆ ಅವರನ್ನು ಒಳಗೊಂಡ ಕ್ರಿಕೆಟ್ ಸಲಹಾ ಸಮಿತಿ ಜುಲೈ​ ಮೊದಲ ವಾರದಲ್ಲಿ ನೇಮಕ ಮಾಡಿತ್ತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

T20 World Cup : ಕ್ರಿಕೆಟ್​ ಕೂಸು ಅಮೆರಿಕ ತಂಡದ ವಿರುದ್ಧ ಸೋತ ಪಾಕಿಸ್ತಾನ

T20 World Cup: ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ ಬ್ಯಾಟಿಂಗ್ ವೈಫಲ್ಯ ಎದುರಿಸಿ ನಿಗದಿತ 20 ಓವರ್​ಗಳಲ್ಲಿ 7 ವಿಕೆಟ್​ ಕಳೆದುಕೊಂಡು 159 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್ ಮಾಡಿದ ಅಮೆರಿಕದ ತನ್ನ ಪಾಲಿನ ಓವರ್​ಗಳು ಮುಕ್ತಾಯಗೊಂಡಾಗ 3 ವಿಕೆಟ್​ ನಷ್ಟಕ್ಕೆ 159 ರನ್​ ಬಾರಿಸಿತು. ಕೊನೇ ಓವರ್​ನಲ್ಲಿ ಅಮೆರಿಕಕ್ಕೆ 15 ರನ್​ ಗೆಲುವಿಗೆ ಬೇಕಾಗಿತ್ತು. ಆದರೆ, 14 ರನ್ ಬಾರಿಸಿದ ಕಾರಣ ಸೂಪರ್​ ಓವರ್​ ಅನಿವಾರ್ಯವಾಯಿತು.

VISTARANEWS.COM


on

T 20 Wordl Cup
Koo

ಡಲ್ಲಾಸ್​: ಬಾಬರ್ ಅಜಂ ನೇತೃತ್ವದ ಪಾಕಿಸ್ತಾನ ತಂಡ ಟಿ20 ವಿಶ್ವ ಕಪ್​ನ (T20 World Cup) ತನ್ನ ಮೊದಲ ಪಂದ್ಯದಲ್ಲಿ ಹೀನಾಯ ಪ್ರದರ್ಶನ ನೀಡಿದ್ದು, ಕ್ರಿಕೆಟ್​ ಕ್ಷೇತ್ರದಲ್ಲಿ ಕಣ್ಣರಳಿಸುತ್ತಿರುವ ಅಮೆರಿಕ ವಿರುದ್ಧವೇ ಸೋತಿದೆ. ಎ ಗುಂಪಿನ ಈ ಪಂದ್ಯದಲ್ಲಿ ನಿಗದಿತ ಅವಧಿಯಲ್ಲಿನ ಪಂದ್ಯ ಟೈ ಆದ ಕಾರಣ ಸೂಪರ್​ ಓವರ್​ ಮೊರೆ ಹೋಗಲಾಯಿತು. ಅಂತಿಮವಾಗಿ ಪಾಕಿಸ್ತಾನವನ್ನು ಕಟ್ಟಿ ಹಾಕಿದ ಅಮೆರಿಕದ ತಂಡ ಜಯದ ಕೇಕೆ ಹಾಕಿತು. ಇದು ಅಮೆರಿಕ ತಂಡಕ್ಕೆ ಹಾಲಿ ವಿಶ್ವ ಕಪ್​ನಲ್ಲಿ ಸತತ ಎರಡನೇ ವಿಜಯವಾಗಿದ್ದು ಗುಂಪಿನಲ್ಲಿ ಅಗ್ರಸ್ಥಾನ ಪಡೆದುಕೊಂಡಿದೆ.

ಡಲ್ಲಾಸ್​ನ ಗ್ರ್ಯಾಂಡ್ ಪ್ರೈರಿ ಸ್ಟೇಡಿಯಂನಲ್ಲಿ ಟಾಸ್​ ಗೆದ್ದ ಅಮೆರಿಕ ತಂಡ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಅಂತೆಯೇ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ ಬ್ಯಾಟಿಂಗ್ ವೈಫಲ್ಯ ಎದುರಿಸಿ ನಿಗದಿತ 20 ಓವರ್​ಗಳಲ್ಲಿ 7 ವಿಕೆಟ್​ ಕಳೆದುಕೊಂಡು 159 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್ ಮಾಡಿದ ಅಮೆರಿಕದ ತನ್ನ ಪಾಲಿನ ಓವರ್​ಗಳು ಮುಕ್ತಾಯಗೊಂಡಾಗ 3 ವಿಕೆಟ್​ ನಷ್ಟಕ್ಕೆ 159 ರನ್​ ಬಾರಿಸಿತು. ಕೊನೇ ಓವರ್​ನಲ್ಲಿ ಅಮೆರಿಕಕ್ಕೆ 15 ರನ್​ ಗೆಲುವಿಗೆ ಬೇಕಾಗಿತ್ತು. ಆದರೆ, 14 ರನ್ ಬಾರಿಸಿದ ಕಾರಣ ಸೂಪರ್​ ಓವರ್​ ಅನಿವಾರ್ಯವಾಯಿತು.

ಅನುಭವಿ ಬೌಲರ್​ ಮೊಹಮ್ಮದ್ ಅಮೀರ್​ ದಾಳಿಯನ್ನು ಎದುರಿಸಿದ ಅಮೆರಿಕ ತಂಡ ಒಂದು ಓವರ್​ನಲ್ಲಿ 19 ರನ್ ಬಾರಿಸಿತು. ಇದನ್ನು ಬೆನ್ನಟ್ಟಲು ಹೊರಟ ಪಾಕಿಸ್ತಾನ 1 ವಿಕೆಟ್ ನಷ್ಟ ಮಾಡಿಕೊಂಡು ಕೇವಲ 13 ರನ್ ಬಾರಿಸಿ ಐದು ರನ್​ಗಳ ಪರಾಜಯಕ್ಕೆ ಗುರಿಯಾಯಿತು.

ಪಾಕಿಸ್ತಾ ತಂಡಕ್ಕೆ ಇದು ಹಾಲಿ ವಿಶ್ವ ಕಪ್​ನಲ್ಲಿ ಮೊದಲ ಪಂದ್ಯವಾಗಿತ್ತು. ಅದರಲ್ಲೇ ಸೋಲುವ ಮೂಲಕ ಹೀನಾಯ ಅರಂಭ ಮಾಡಿತು. ಅದೂ ಅಮೆರಿಕದ ವಿರುದ್ಧ ಸೋಲುವ ಮೂಲಕ ಇದ್ದ ಮರ್ಯಾದೆಯನ್ನೂ ಕಳೆದುಕೊಂಡಿತು.

ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ ಪವರ್ ಪ್ಲೇನಲ್ಲಿ 30 ರನ್ ಗಳಿಸಿ ಮೊಹಮ್ಮದ್ ರಿಜ್ವಾನ್, ಫಖರ್ ಜಮಾನ್ ಮತ್ತು ಉಸ್ಮಾನ್ ಖಾನ್ ಅವರ ವಿಕೆಟ್ ಗಳನ್ನು ಕಳೆದುಕೊಂಡಿತು. ಮತ್ತೊಂದೆಡೆ ನಾಯಕ ಬಾಬರ್ ಅಝಾಮ್ ಒತ್ತಡದಲ್ಲಿ ಉತ್ತಮ ಆರಂಭ ನೀಡಿದರು. ಬಾಬರ್ ಮತ್ತು ಶದಾಬ್ ಖಾನ್ ನಾಲ್ಕನೇ ವಿಕೆಟ್​ಗೆ 8 ಓವರ್​ಗಳಲ್ಲಿ 72 ರನ್​ಗಳ ಜೊತೆಯಾಟ ನೀಡಿದರು.

ಇದನ್ನೂ ಓದಿ:Sunil Chhetri : ಕಣ್ಣೀರು ಹಾಕುತ್ತಲೇ ಕೊನೇ ಅಂತಾರಾಷ್ಟ್ರೀಯ ಪಂದ್ಯವಾಡಿ ವಿದಾಯ ಹೇಳಿದ ಸುನಿಲ್​ ಛೆಟ್ರಿ

ಶದಾಬ್ 25 ಎಸೆತಗಳಲ್ಲಿ 4 ಮತ್ತು 3 ಸಿಕ್ಸರ್​ಗಳೊಂದಿಗೆ 40 ರನ್ ಗಳಿಸಿದರು. ಬಾಬರ್ 23 ಎಸೆತಗಳಲ್ಲಿ 44 ರನ್ ಸಿಡಿಸಿ ಔಟಾದರು. ನಂತರ ಫಾರ್ಮ್​ನಲ್ಲಿ ಇಲ್ಲದ ಅಜಂ ಖಾನ್ ಗೋಲ್ಡನ್ ಡಕ್ಗೆ ಕಳುಹಿಸಿದರು.

ಅಮೆರಿಕ ಪರ ಮಿಂಚಿದ ಮೊನಾಂಕ್​

ಗುರಿ ಬೆನ್ನಟ್ಟಿದ ಅಮೆರಿಕ ಪರ 38 ಎಸೆತಗಳಲ್ಲಿ 50 ರನ್ ಗಳಿಸಿದ ಮೊನಾಂಕ್ ಮಿಂಚಿದರು. ಕೊನೆಯ ಓವರ್​ನಲ್ಲಿ 12 ರನ್​ಗಳ ಅಗತ್ಯವಿದ್ದಾಗ ಮಿಂಚಿದ ಜೋನ್ಸ್ 11 ರನ್ ಗಳಿಸಿದರು. ಅವರು 26 ಎಸೆತಗಳಲ್ಲಿ 36 ರನ್ ಗಳಿಸಿ ಔಟಾಗದೆ ಉಳಿದರು.

Continue Reading

ಕ್ರಿಕೆಟ್

IND vs PAK T20 Match: 10 ಸೆಕೆಂಡ್‌ ಜಾಹೀರಾತಿಗೆ ಕನಿಷ್ಠ 50 ಲಕ್ಷ ನಿಗದಿ!

IND vs PAK T20 Match: ವರದಿಗಳ ಪ್ರಕಾರ ಈ ವಿಶ್ವಕಪ್‌ನ ಸಾಮಾನ್ಯ ಪಂದ್ಯಗಳ ಜಾಹೀರಾತು ಶುಲ್ಕ 10 ಸೆಕೆಂಡ್‌ಗೆ 6 ಲಕ್ಷ ಇದ್ದು, ಇನ್ನುಳಿದ ಪ್ರಮುಖ ಪಂದ್ಯಗಳಿಗೆ 12ರಿಂದ 15 ಲಕ್ಷದ ವರೆಗೆ ಶುಲ್ಕ ನಿಗದಿಪಡಿಸಲಾಗಿದೆ. ಭಾರತ ನಾಕೌಟ್‌ ಹಂತಕ್ಕೇರಿದರೆ, ಆ ಪಂದ್ಯಗಳ ಜಾಹೀರಾತಿಗೆ ಕನಿಷ್ಠ 26 ಲಕ್ಷ ನಿಗದಿಯಾಗಬಹುದು ಎನ್ನಲಾಗಿದೆ.

VISTARANEWS.COM


on

IND vs PAK T20 Match
Koo

ಮುಂಬಯಿ: ಭಾರತ-ಪಾಕ್‌(IND vs PAK T20 Match) ನಡುವೆ ಪಂದ್ಯ ನಡೆದರೆ, ಜಾಹೀರಾತು ಕಂಪನಿಗಳಿಂದ ಬಿಸಿಸಿಐ, ಪಿಸಿಬಿ ಮತ್ತು ಐಸಿಸಿಗಳಿಗೆ ಹಣ ಹೊಳೆಯೇ ಹರಿದುಹೋಗುತ್ತದೆ. ಎರಡೂ ದೇಶಗಳ ನಡುವೆ ಎಂದಿಗೂ ಮುಗಿಯದಂತೆ ಕಾಣುತ್ತಿರುವ ದ್ವೇಷಗಳ ಜತೆಗೆ ಹಣಕಾಸಿನ ಲೆಕ್ಕಾಚಾರವೂ ಅಲ್ಲಿರುತ್ತವೆ. ಇದೀಗ ಈ ಬಾರಿಯ ಟಿ20 ವಿಶ್ವಕಪ್​ ಟೂರ್ನಿಯಲ್ಲಿ(T20 World Cup 2024) ಉಭಯ ತಂಡಗಳ ಪಂದ್ಯದ ವೇಳೆ ಪ್ರಸಾರಗೊಳ್ಳುವ 10 ಸೆಕೆಂಡ್‌ಗಳ ಜಾಹೀರಾತಿಗೆ ಕನಿಷ್ಠ 50 ಲಕ್ಷ ನಿಗದಿಪಡಿಸಲಾಗಿದೆ ಎಂದು ಹೇಳಲಾಗುತ್ತಿದೆ. ಭಾರತ ಮತ್ತು ಪಾಕ್​ ಪಂದ್ಯ ಜೂನ್​ 9ರಂದು ನಡೆಯಲಿದೆ.

ವರದಿಗಳ ಪ್ರಕಾರ ಈ ವಿಶ್ವಕಪ್‌ನ ಸಾಮಾನ್ಯ ಪಂದ್ಯಗಳ ಜಾಹೀರಾತು ಶುಲ್ಕ 10 ಸೆಕೆಂಡ್‌ಗೆ 6 ಲಕ್ಷ ಇದ್ದು, ಇನ್ನುಳಿದ ಪ್ರಮುಖ ಪಂದ್ಯಗಳಿಗೆ 12ರಿಂದ 15 ಲಕ್ಷದ ವರೆಗೆ ಶುಲ್ಕ ನಿಗದಿಪಡಿಸಲಾಗಿದೆ. ಭಾರತ ನಾಕೌಟ್‌ ಹಂತಕ್ಕೇರಿದರೆ, ಆ ಪಂದ್ಯಗಳ ಜಾಹೀರಾತಿಗೆ ಕನಿಷ್ಠ 26 ಲಕ್ಷ ನಿಗದಿಯಾಗಬಹುದು ಎನ್ನಲಾಗಿದೆ. ವೆಸ್ಟ್​ ಇಂಡೀಸ್​ ಮತ್ತು ಅಮೆರಿಕದಲ್ಲಿ ಪಂದ್ಯಗಳು ಹಗಲು ಮತ್ತು ಬೆಳಗಿನ ಜಾವ ನಡೆಯುವ ಕಾರಣ ಹೆಚ್ಚಿನ ಸಂಖ್ಯೆಯ ಪ್ರೇಕ್ಷರು ಬರುತ್ತಿಲ್ಲ. ಈ ನಷ್ಟವನ್ನೆಲ್ಲ ಆಯೋಜಕರು ಭಾರತ-ಪಾಕ್‌ ಪಂದ್ಯದ ಮೂಲಕ ಭರಿಸುವ ಯೋಜನೆಯಲ್ಲಿದ್ದಾರೆ.

ಪಂದ್ಯ ನೋಡಲು ಅಭಿಮಾನಿಗಳ ನಿರಾಸಕ್ತಿ


ಭಾರತ-ಪಾಕ್​ ಹೈವೋಲ್ಟೇಜ್ ಪಂದ್ಯಕ್ಕೆ ಈ ಬಾರಿ ಪ್ರೇಕ್ಷಕರು ನಿರಾಸಕ್ತಿ ತೋರುತ್ತಿದ್ದಾರೆ ಎಂಬ ವಿಚಾರ ಕೂಡ ಹೊರಬಿದ್ದಿದೆ. ಈ ಪಂದ್ಯದ ಎಲ್ಲಾ ಟಿಕೆಟ್‌ಗಳು ಇನ್ನೂ ಮಾರಾಟವಾಗಿಲ್ಲ. ಈ ಪಂದ್ಯದ ಟಿಕೆಟ್‌ಗಳು ಇನ್ನೂ ಐಸಿಸಿ ವೆಬ್​ಸೈಟ್​ನಲ್ಲಿ ಲಭ್ಯವಿದೆ. ಇದು ಹಲವರಲ್ಲಿ ಅಚ್ಚರಿ ಮೂಡಿಸಿದೆ.

ಇದನ್ನೂ ಓದಿ IND vs PAK: ಭಾರತ ವಿರುದ್ಧ ಶಾಂತ ಚಿತ್ತರಾಗಿ ಆಡುವ ಉಪಾಯ ಮಾಡಿದ ಕುತಂತ್ರಿ ಪಾಕ್​

ಭಾರತ ಮತ್ತು ಪಾಕ್​ ಪಂದ್ಯದ ಟಿಕೆಟ್​ ಸಿಗುವುದೇ ಒಂದು ಅದೃಷ್ಟ. ಮ್ಯಾಚ್​ನ ಟಿಕೆಟ್​ಗಳು ಘೋಷಣೆಯಾದ ಕ್ಷಣಾರ್ಧದಲ್ಲೇ ಮಾರಾಟವಾಗುತ್ತಿದ್ದವು. ಆದರೆ ಈ ಬಾರಿ ಯಾರಿಗೂ ಕೂಡ ಟಿಕೆಟ್​ ಕೊಳ್ಳಲು ಆಸಕ್ತಿಯೇ ಇಲ್ಲದಂತಾಗಿದೆ. ಇದಕ್ಕೆ ಕಾರಣ ಟಿಕೆಟ್​ ಬೆಲೆ ದುಬಾರಿಯಾಗಿರುವುದು. ಈ ಪಂದ್ಯಕ್ಕಾಗಿ ಐಸಿಸಿ ಮೂರು ಪ್ಯಾಕೇಜ್‌ಗಳಲ್ಲಿ ಟಿಕೆಟ್‌ಗಳನ್ನು ಇರಿಸಿದೆ. ಇದರಲ್ಲಿ ಡೈಮಂಡ್ ಕ್ಲಬ್, ಪ್ರೀಮಿಯಂ ಕ್ಲಬ್ ಲಾಂಜ್​​ ಮತ್ತು ಕಾರ್ನರ್ ಕ್ಲಬ್​​ಗಳನ್ನು ಒಳಗೊಂಡಿವೆ. ಡೈಮಂಡ್ ಕ್ಲಬ್ ಟಿಕೆಟ್ ಬೆಲೆ 8.34 ಲಕ್ಷ ರೂ. ಈ ಟಿಕೆಟ್​ ಖರೀದಿಸುವ ಅಭಿಮಾನಿಗಳಿಗೆ ಅತ್ಯುತ್ತಮ ಸೌಲಭ್ಯಗಳು ಸಿಗುತ್ತವೆ. ಪ್ರೀಮಿಯಂ ಕ್ಲಬ್ ಲಾಂಜ್​ ಟಿಕೆಟ್ ಬೆಲೆ 2 ಲಕ್ಷ ರೂ, ಮತ್ತು ಕಾರ್ನರ್ ಕ್ಲಬ್ ಟಿಕೆಟ್ ಬೆಲೆ 2.29 ಲಕ್ಷ ರೂ. ಆಗಿದೆ. ಇದಲ್ಲದೆ ಪಂದ್ಯಕ್ಕೆ ಉಗ್ರರು ಬಾಂಬ್​ ಬೆದರಿಕೆ ಹಾಕಿದ್ದು ಕೂಡ ಅಭಿಮಾನಿಗಳ ಹಿಂದೇಟಿಗೆ ಕಾರಣವಾಗಿರಬಹುದು ಎಂದು ಹೇಳಲಾಗಿದೆ. 

ಹೈವೋಲ್ಟೇಜ್ ಕದನಕ್ಕೆ ನ್ಯೂಯಾರ್ಕ್(NEW YORK) ಹೊರವಲಯದಲ್ಲಿ 34,000 ಆಸನ ಸಾಮರ್ಥ್ಯವುಳ್ಳ ತಾತ್ಕಾಲಿಕ ಕ್ರೀಡಾಂಗಣವನ್ನು ನಿರ್ಮಿಸಲಾಗಿದೆ. ಭಾರತ ಮತ್ತು ಪಾಕ್​ ನಡುವಣ ಪಂದ್ಯ ನ್ಯೂಯಾರ್ಕ್‌ನಲ್ಲಿಯೇ ನಡೆಸಲು ಕಾರಣವೂ ಕೂಡ ಇದೆ. ಏಕೆಂದರೆ ಈ ಪ್ರದೇಶದಲ್ಲಿ 7,11,000 ಭಾರತೀಯ ಮತ್ತು ಸುಮಾರು 1,00,000 ಪಾಕಿಸ್ತಾನ ಮೂಲದ ಜನರು ವಾಸಿಸುತ್ತಿದ್ದಾರೆ ಎನ್ನಲಾಗಿದೆ. ಹೀಗಾಗಿ ಈ ಪಂದ್ಯ ಇಲ್ಲಿ ಏರ್ಪಡಿಸಲಾಗಿದೆ ಎನ್ನಲಾಗಿದೆ.

Continue Reading

ಕ್ರೀಡೆ

Virat Kohli: ‘ಕೊಹ್ಲಿ ಕೊ ಬೌಲಿಂಗ್​ ದೋ’ ನ್ಯೂಯಾರ್ಕ್​ ಸ್ಟೇಡಿಯಂನಲ್ಲಿ ಮೊಳಗಿದ ಅಭಿಮಾನಿಗಳ ಕೂಗು

Virat Kohli: ಅಭಿಮಾನಿಗಳು ವಿರಾಟ್​ ಅವರಿಗೆ ಬೌಲಿಂಗ್​ ನೀಡುವಂತೆ ಆಗ್ರಹಿಸಲು ಒಂದು ಕಾರಣವಿದೆ. ಕಳೆದ ವರ್ಷ ನಡೆದಿದ್ದ ಏಕದಿನ ವಿಶ್ವಕಪ್​ ಪಂದ್ಯದಲ್ಲಿ ಕೊಹ್ಲಿ ಬೌಲಿಂಗ್​ ನಡೆಸಿ ವಿಕೆಟ್​ ಕಿತ್ತು ಮಿಂಚಿದ್ದರು. ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಂ​ನಲ್ಲಿ ನಡೆದ ನೆದರ್ಲ್ಯಾಂಡ್ಸ್ ವಿರುದ್ಧದ ಪಂದ್ಯದಲ್ಲಿ ಕೊಹ್ಲಿ ನಾಯಕ ಸ್ಕಾಟ್ ಎಡ್ವರ್ಡ್ಸ್ ಅವರನ್ನು ಔಟ್ ಮಾಡಿದ್ದರು.

VISTARANEWS.COM


on

Virat Kohli
Koo

ನ್ಯೂಯಾರ್ಕ್​: ಟೀಮ್​ ಇಂಡಿಯಾದ(Team India) ಘಾತಕ ಬೌಲಿಂಗ್​ ದಾಳಿಗೆ ನೆಲಕಚ್ಚಿದ ಐರ್ಲೆಂಡ್(India vs Ireland)​, ಕೇವಲ 96 ರನ್​ಗೆ ಸರ್ವಪತನ ಕಂಡು ಹೀನಾಯ ಸೋಲು ಕಂಡಿತ್ತು. ಇದೇ ಪಂದ್ಯದಲ್ಲಿ ಸ್ಟಾರ್​ ಬ್ಯಾಟರ್​ ವಿರಾಟ್​ ಕೊಹ್ಲಿ(virat kohli) ಅವರಿಗೆ ಬೌಲಿಂಗ್​ ನೀಡುವಂತೆ ಪ್ರೇಕ್ಷಕರು ವಿಶೇಷವಾಗಿ ಮನವಿ ಮಾಡಿದ್ದರು. ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಈಗ ವೈರಲ್(viral video) ಆಗಿದೆ.

ಪಂದ್ಯದಲ್ಲಿ ಮೊದಲು ಬ್ಯಾಟಿಂಗ್​ ನಡೆಸಿದ ಐರ್ಲೆಂಡ್​ ತಂಡದ ಬ್ಯಾಟರ್​ಗಳು ಭಾರತೀಯ ಬೌಲರ್​ಗಳ ಬಿಗಿ ದಾಳಿಗೆ ಸತತವಾಗಿ ವಿಕೆಟ್​ ಕಳೆದುಕೊಳ್ಳುತ್ತಿದ್ದರು. ಇದನ್ನು ಗಮನಿಸಿದ ಭಾರತೀಯ ಅಭಿಮಾನಿಗಳು ಗ್ಯಾಲರಿಯಿಂದ ಜೋರಾಗಿ ಹಿಂದಿಯಲ್ಲಿ “ಕೊಹ್ಲಿ ಕೊ ಬೌಲಿಂಗ್​ ದೋ….ಕೊಹ್ಲಿ ಕೊ ಬೌಲಿಂಗ್​ ದೋ” ಎಂದು ಕೊಹ್ಲಿಗೆ ಬೌಲಿಂಗ್​ ನೀಡುವಂತೆ ಆಗ್ರಹಿಸಿದ್ದಾರೆ. ಇದರ ವಿಡಿಯೊ ವೈರಲ್​ ಆಗಿದೆ.

ಅಭಿಮಾನಿಗಳು ವಿರಾಟ್​ ಅವರಿಗೆ ಬೌಲಿಂಗ್​ ನೀಡುವಂತೆ ಆಗ್ರಹಿಸಲು ಒಂದು ಕಾರಣವಿದೆ. ಕಳೆದ ವರ್ಷ ನಡೆದಿದ್ದ ಏಕದಿನ ವಿಶ್ವಕಪ್​ ಪಂದ್ಯದಲ್ಲಿ ಕೊಹ್ಲಿ ಬೌಲಿಂಗ್​ ನಡೆಸಿ ವಿಕೆಟ್​ ಕಿತ್ತು ಮಿಂಚಿದ್ದರು. ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಂ​ನಲ್ಲಿ ನಡೆದ ನೆದರ್ಲ್ಯಾಂಡ್ಸ್ ವಿರುದ್ಧದ ಪಂದ್ಯದಲ್ಲಿ ಕೊಹ್ಲಿ ನಾಯಕ ಸ್ಕಾಟ್ ಎಡ್ವರ್ಡ್ಸ್ ಅವರನ್ನು ಔಟ್ ಮಾಡಿದ್ದರು. ಇದು 9 ವರ್ಷಗಳ ನಂತರ ಕೊಹ್ಲಿಗೆ ಲಭಿಸಿದ ವಿಕೆಟ್ ಆಗಿತ್ತು.

ಇದನ್ನೂ ಓದಿ Rohit Sharma: ಹಲವು ದಾಖಲೆಗಳ ಸರದಾರನಾದ ಹಿಟ್​ಮ್ಯಾನ್​ ರೋಹಿತ್​

ವಿರಾಟ್​ ಕೊಹ್ಲಿ ಕೂಡ ಬೌಲಿಂಗ್​ ಅನುಭವವನ್ನು ಹೊಂದಿದ್ದಾರೆ. 2015ರ ವಿಶ್ವಕಪ್​ನಲ್ಲಿ ಆಸೀಸ್​ ವಿರುದ್ಧ ಮತ್ತು ಇದಕ್ಕೂ ಮುನ್ನ 2011ರಲ್ಲಿ ನಡೆದಿದ್ದ ವಿಶ್ವಕಪ್ ಫೈನಲ್​ ಪಂದ್ಯದಲ್ಲಿ ಬೌಲಿಂಗ್​ ನಡೆಸಿದ್ದರು. ಇಲ್ಲಿ ತಲಾ ಓವರ್ ಬೌಲಿಂಗ್​ ನಡೆಸಿ ವಿಕೆಟ್​ ಪಡೆಯದಿದ್ದರೂ ಉತ್ತಮ ರನ್​ ಕಂಟ್ರೋಲ್​ ಮಾಡಿದ್ದರು. ಏಕದಿನದಲ್ಲಿ ಕೊಹ್ಲಿ 5 ವಿಕೆಟ್​, ಟಿ20 ಮತ್ತು ಐಪಿಎಲ್​ನಲ್ಲಿಯೂ ತಲಾ 4 ವಿಕಟ್​ ಪಡೆದ ಸಾಧನೆ ಮಾಡಿದ್ದಾರೆ. ಹೀಗಾಗಿ ಕೊಹ್ಲಿಗೆ ಬೌಲಿಂಗ್​ ನೀಡುವಂತೆ ಅಭಿಮಾನಿಗಳು ಆಗ್ರಹಿಸಿದ್ದಾರೆ. ಕಳೆದ ವರ್ಷ ಏಕದಿನ ವಿಶ್ವಕಪ್​ನಲ್ಲಿಯೂ ಅಭಿಮಾನಿಗಳು ಕೊಹ್ಲಿಗೆ ಬೌಲಿಂಗ್ ನೀಡುವಂತೆ ಆಗ್ರಹಿಸಿದ್ದರು.

ಐರ್ಲೆಂಡ್​ ವಿರುದ್ಧದ ಪಂದ್ಯದಲ್ಲಿ ಆರಂಭಿನಾಗಿ ಕಣಕ್ಕಿಳಿದ ಕೊಹ್ಲಿ ಕೇವಲ 1 ರನ್​ ಗಳಿಸಿ ವಿಫಲರಾದರು. ಇದಕ್ಕೂ ಮುನ್ನ ಐಪಿಎಲ್​ನಲ್ಲಿ ಕೊಹ್ಲಿ ಪ್ರಚಂಡ ಬ್ಯಾಟಿಂಗ್​ ನಡೆಸಿ ಟೂರ್ನಿಯಲ್ಲೇ ಅತ್ಯಧಿಕ ರನ್​ ಗಳಿಸಿದ ಆಟಗಾರನಾಗಿ ಹೊರಹೊಮ್ಮಿದ್ದರು. ಭಾರತ ಮುಂದಿನ ಪಂದ್ಯವನ್ನು ಪಾಕಿಸ್ತಾನ ವಿರುದ್ಧ ಆಡಲಿದೆ. ಈ ಪಂದ್ಯದಲ್ಲಿ ಕೊಹ್ಲಿಯ ಮೇಲೆ ಹೆಚ್ಚಿನ ಭರವಸೆ ಇರಿಸಲಾಗಿದೆ. ಕೊಹ್ಲಿ ಪಾಕಿಸ್ತಾನ ವಿರುದ್ಧ ಇದುವರೆಗೂ ಉತ್ತಮ ಪ್ರದರ್ಶನ ತೋರಿದ್ದಾರೆ. 2022ರಲ್ಲಿ ನಡೆದಿದ್ದ ಟಿ20 ವಿಶ್ವಕಪ್​ನಲ್ಲಿ ಕೊಹ್ಲಿ ಏಕಾಂಗಿಯಾಗಿ ಹೋರಾಡಿ ಪಾಕ್​ಗೆ ಸೋಲುಣಿಸಿದ್ದರು.

Continue Reading

ಕ್ರೀಡೆ

David Warner: ಕ್ರಿಸ್​ ಗೇಲ್​ ದಾಖಲೆ ಮುರಿದ ಡೇವಿಡ್​ ವಾರ್ನರ್​

David Warner: ಈಗಾಗಲೇ ಟೆಸ್ಟ್ ಮತ್ತು ಏಕದಿನ ಕ್ರಿಕೆಟ್​ಗೆ ವಿದಾಯ ಹೇಳಿರುವ ವಾರ್ನರ್​ ಟಿ20 ವಿಶ್ವಕಪ್​ ಬಳಿಕ ಮೂರು ಮಾದರಿಯ ಅಂತಾರಾಷ್ಟ್ರೀಯ ಕ್ರಿಕೆಟ್​ನಿಂದ ನಿವೃತ್ತಿಯಾಗಲಿದ್ದಾರೆ.

VISTARANEWS.COM


on

David Warner
Koo

ಬಾರ್ಬಡೋಸ್‌: ಆಸ್ಟ್ರೇಲಿಯಾದ ಆರಂಭಿಕ ಆಟಗಾರ ಡೇವಿಡ್​ ವಾರ್ನರ್​(David Warner) ಅವರು ಇಂದು(ಗುರವಾರ) ನಡೆದ ಒಮಾನ್​ ವಿರುದ್ಧದ ಪಂದ್ಯದಲ್ಲಿ ಅರ್ಧಶತಕ ಬಾರಿಸುವ ಮೂಲಕ ಟಿ20 ಕ್ರಿಕೆಟ್​ನಲ್ಲಿ(T20 World Cup 2024) ದಾಖಲೆಯೊಂದನ್ನು ಬರೆದಿದ್ದಾರೆ. ಈ ಮೂಲಕ ಕ್ರಿಸ್​ ಗೇಲ್(Chris Gayle)​ ದಾಲೆಯನ್ನು ಮುರಿದಿದ್ದಾರೆ.

ಒಮಾನ್​ ವಿರುದ್ಧ ವಾರ್ನರ್​ 51 ಎಸೆತ ಎದುರಿಸಿ 6 ಬೌಂಡರಿ ಮತ್ತು 1 ಸಿಕ್ಸರ್​ ನೆರವಿನಿಂದ 56 ರನ್​ ಬಾರಿಸಿ ಅರ್ಧಶತಕ ಪೂರ್ತಿಗೊಳಿಸಿದರು. ಇದೇ ವೇಳೆ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ಅರ್ಧಶತಕ ಬಾರಿಸಿದ ಆಟಗಾರನಾಗಿ ಹೊರಹೊಮ್ಮಿದರು. ಇದು ವಾರ್ನರ್​ ಅವರ 111ನೇ ಟಿ20 ಅರ್ಧಶತಕ. ಇದಕ್ಕೂ ಮುನ್ನ ಈ ದಾಖಲೆ ವೆಸ್ಟ್​ ಇಂಡೀಸ್​ ತಂಡದ ಮಾಜಿ ಆಟಗಾರ ಕ್ರಿಸ್​ ಗೇಲ್​ ಗೆಸರಿನಲ್ಲಿತ್ತು. ಗೇಲ್​ 110 ಅರ್ಧಶತಕ ಬಾರಿಸಿದ್ದಾರೆ.

ಈಗಾಗಲೇ ಟೆಸ್ಟ್ ಮತ್ತು ಏಕದಿನ ಕ್ರಿಕೆಟ್​ಗೆ ವಿದಾಯ ಹೇಳಿರುವ ವಾರ್ನರ್​ ಟಿ20 ವಿಶ್ವಕಪ್​ ಬಳಿಕ ಮೂರು ಮಾದರಿಯ ಅಂತಾರಾಷ್ಟ್ರೀಯ ಕ್ರಿಕೆಟ್​ನಿಂದ ನಿವೃತ್ತಿಯಾಗಲಿದ್ದಾರೆ. ಇದೇ ವರ್ಷ ನಡೆದಿದ್ದ ಐಪಿಎಲ್​ನಲ್ಲಿ ನಿರೀಕ್ಷಿತ ಪ್ರದರ್ಶನ ಮತ್ತು ಸರಿಯಾಗಿ ಆಡುವ ಅವಕಾಶ ಸಿಗದ ವಾರ್ನರ್​ ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಆಡಿದ ಮೊದಲ ಪಂದ್ಯದಲ್ಲೇ ಅಮೋಘ ಬ್ಯಾಟಿಂಗ್​ ನಡೆಸಿ ಗಮನಸೆಳೆದರು.

ಇದನ್ನೂ ಓದಿ David Warner : ಬಾಹುಬಲಿ ರಾಜಮೌಳಿ ನಿರ್ದೇಶನದಲ್ಲಿ ಕ್ರಿಕೆಟಿಗ ಡೇವಿಡ್​ ವಾರ್ನರ್ ಆ್ಯಕ್ಟಿಂಗ್​; ಇಲ್ಲಿದೆ ವಿಡಿಯೊ

ಡ್ರೆಸ್ಸಿಂಗ್​ ರೂಮ್​ ಮರೆತ ವಾರ್ನರ್​


ಇದೇ ಪಂದ್ಯದಲ್ಲಿ ವಾರ್ನರ್​ ಅವರು ಔಟ್​ ಆಗಿ ತಮ್ಮ ತಂಡದ ಡ್ರೆಸ್ಸಿಂಗ್​ ರೋಮ್​ಗೆ ತೆರಳುವ ಬದಲು ಎದುರಾಳಿ ಒಮಾನ್ ತಂಡದ ಡ್ರೆಸ್ಸಿಂಗ್​ ರೂಮ್​ಗೆ ತೆರಳಿದ ಪ್ರಸಂಗವೂ ನಡೆಯಿತು. ಮೆಟ್ಟಿಲೇರುತ್ತಾ ಒಮಾನ್​ ಡ್ರೆಸ್ಸಿಂಗ್​ ಕೋಣೆಗೆ ತೆರಳುತ್ತಿದ್ದ ವಾರ್ನರ್​ ಅವರನ್ನು ತಮ್ಮ ತಂಡದ ಸಹ ಆಟಗಾರರು ಜೋರಾಗಿ ಕರೆದು ಅದು ನಮ್ಮ ಕೊಠಡಿಯಲ್ಲ ಎಂದು ಹೇಳಿದ್ದಾರೆ. ಬಳಿಕ ವಾರ್ನರ್​ ತಂಡದ ಡ್ರೆಸ್ಸಿಂಗ್​ ರೂಮ್​ಗೆ ತೆರಳಿದರು. ಇದರ ವಿಡಿಯೊ ವೈರಲ್​ ಆಗಿದೆ.

ಪಂದ್ಯ ಗೆದ್ದ ಆಸ್ಟ್ರೇಲಿಯಾ


ಮಾಜಿ ಚಾಂಪಿಯನ್​ ಆಸ್ಟ್ರೇಲಿಯಾ ತಂಡ ಒಮಾನ್​ ವಿರುದ್ಧ 39 ರನ್​ಗಳ ಪ್ರಯಾಸದ ಗೆಲುವು ಸಾಧಿಸಿ ಟೂರ್ನಿಯಲ್ಲಿ ಶುಭಾರಂಭ ಕಂಡಿದೆ. ಟಾಸ್​ ಸೋತು ಬ್ಯಾಟಿಂಗ್​ಗೆ ಇಳಿಸಲ್ಪಟ್ಟ ಆಸ್ಟ್ರೇಲಿಯಾ ನಿಗದಿತ 20 ಓವರ್​ಗಳಲ್ಲಿ 5 ವಿಕೆಟ್​ಗೆ 164 ರನ್​ ಬಾರಿಸಿತು. ಆಸೀಸ್​ ತಂಡದ ಸಾಮರ್ಥ್ಯಕ್ಕೆ ಇದು ಕನಿಷ್ಠ ಮೊತ್ತ. ಜವಾಬಿತ್ತ ಒಮಾನ್​ ಉತ್ತಮ ಪೈಪೋಟಿ ನೀಡಿ 9 ವಿಕೆಟ್​ಗೆ 125 ರನ್​ ಗಳಿಸಿ ಸಣ್ಣ ಅಂತರದ ಸೋಲು ಕಂಡಿತು.

ಒಮಾನ್​ ಉತ್ತಮ ಬೌಲಿಂಗ್​ ದಾಳಿ ನಡೆಸಿದರೂ ಕೂಡ ಬ್ಯಾಟಿಂಗ್​ನಲ್ಲಿ ವಿಫಲವಾಯಿತು. ಸೋಲು ಕಂಡರೂ ಕೂಡ ಬಲಿಷ್ಠ ಆಸ್ಟ್ರೇಲಿಯಾದಂತಹ ತಂಡಕ್ಕೆ ತೀವ್ರ ಪೈಪೋಟಿ ನೀಡಿದನ್ನು ಮಾತ್ರ ಮೆಚ್ಚಲೇ ಬೇಕು. ಒಮಾನ್​ ಪರ ಮೆಹ್ರಾನ್ ಖಾನ್ 2 ವಿಕೆಟ್​ ಕಿತ್ತರು. ಆಸೀಸ್​ ಪರ ಸ್ಪಿನ್ನರ್​ ಝಾಂಪ (20), ಮಾರ್ಕಸ್​ ಸ್ಟೋಯಿನಿಸ್​(3) ಮಿಚೆಲ್​ ಸ್ಟಾರ್ಕ್​(2) ಮತ್ತು ನಥಾನ್​ ಎಲ್ಲಿಸ್​(2) ವಿಕೆಟ್​ ಕಿತ್ತರು.

Continue Reading
Advertisement
Election Results 2024
Lok Sabha Election 20245 mins ago

Election Results 2024: ಸಂಸದರಾಗಿ ಆಯ್ಕೆಯಾದ ಉತ್ತರ ಪ್ರದೇಶದ ಎಂಟು ಶಾಸಕರು; ಶೀಘ್ರ ಉಪಚುನಾವಣೆ

self harming attempt
ಕ್ರೈಂ6 mins ago

Self Harming Attempt: ಮತ್ತೊಬ್ಬ ಅಧಿಕಾರಿ ಆತ್ಮಹತ್ಯೆ ಯತ್ನ; ಅಕ್ಷರ ದಾಸೋಹದಲ್ಲಿ ಮೇಲಧಿಕಾರಿಗಳ ಕಿರುಕುಳ?

Lok Sabha Election 2024
ರಾಜಕೀಯ9 mins ago

Lok Sabha Election 2024: ಈ ಬಾರಿ ಆಯ್ಕೆಯಾದ 105 ಸಂಸದರು ಪಿಯುಸಿ ದಾಟಿಲ್ಲ!

Lok Sabha Election 2024
ರಾಜಕೀಯ17 mins ago

Lok Sabha Election 2024: ಈ ಬಾರಿ 24 ಮುಸ್ಲಿಂ ಸಂಸದರ ಆಯ್ಕೆ; ಕಾಂಗ್ರೆಸ್‌, ಎಸ್‌ಪಿಯಿಂದಲೇ ಹೆಚ್ಚು

Viral Video
ವೈರಲ್ ನ್ಯೂಸ್18 mins ago

Viral Video: ಪುಷ್ಪ 2 ಚಿತ್ರದ ಹಾಡಿಗೆ ಹೆಜ್ಜೆ ಹಾಕಿದ ಅಜ್ಜಿ; ವಾವ್ಹ್‌ ಕ್ಯೂಟ್ ಎಂದ ನೆಟ್ಟಿಗರು

Manipur violence
ದೇಶ25 mins ago

Manipur Violence: ಮಣಿಪುರ ಹಿಂಸಾಚಾರ; ಮೋಸ್ಟ್‌ ವಾಂಟೆಡ್‌ ಗಲಭೆಕೋರ ಅರೆಸ್ಟ್‌

love sex dhoka koppala
ಕ್ರೈಂ36 mins ago

Love Sex Dhoka: ಪ್ರೀತಿಸುವ ನಾಟಕವಾಡಿ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌; ಯುವಕನ ಬಂಧನಕ್ಕಾಗಿ ಪೊಲೀಸ್‌ ಠಾಣೆ ಮುಂದೆ ಯುವತಿ ಧರಣಿ

karnataka weather Forecast
ಮಳೆ2 hours ago

Karnataka Weather : ಗುಡುಗು ಸಹಿತ ಭಾರಿ ಮಳೆ; ಇಂದಿನಿಂದ 5 ದಿನ ಮೀನುಗಾರರು ಸಮುದ್ರಕ್ಕೆ ಇಳಿಯುವಂತಿಲ್ಲ

pulses benefits
ಆರೋಗ್ಯ2 hours ago

Pulses Benefits: ಬೇಳೆಕಾಳುಗಳಲ್ಲಿರುವ ಎಲ್ಲ ಪೋಷಕಾಂಶಗಳು ದೇಹಕ್ಕೆ ಸೇರಬೇಕಾದರೆ ಹೀಗೆ ಮಾಡಿ!

dry fruits
ಆಹಾರ/ಅಡುಗೆ3 hours ago

Dry Fruits: ಈ ಒಣಹಣ್ಣುಗಳನ್ನು ಬೆಳಗ್ಗೆ ಎದ್ದ ಕೂಡಲೇ ತಿನ್ನುವುದು ಒಳ್ಳೆಯದಲ್ಲ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ20 hours ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ3 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ4 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ4 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ5 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು6 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ1 week ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ1 week ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 week ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ2 weeks ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

ಟ್ರೆಂಡಿಂಗ್‌