Aleem Dar: Pakistan's Aleem Dar Bids Farewell to ICC Umpire Panel Aleem Dar: ಐಸಿಸಿ ಅಂಪೈರ್‌ ಪ್ಯಾನೆಲ್‌ಗೆ ವಿದಾಯ ಹೇಳಿದ ಪಾಕಿಸ್ತಾನದ ಅಲೀಂ ದಾರ್ - Vistara News Aleem Dar: ಐಸಿಸಿ ಅಂಪೈರ್‌ ಪ್ಯಾನೆಲ್‌ಗೆ ವಿದಾಯ ಹೇಳಿದ ಪಾಕಿಸ್ತಾನದ ಅಲೀಂ ದಾರ್

ಕ್ರಿಕೆಟ್

Aleem Dar: ಐಸಿಸಿ ಅಂಪೈರ್‌ ಪ್ಯಾನೆಲ್‌ಗೆ ವಿದಾಯ ಹೇಳಿದ ಪಾಕಿಸ್ತಾನದ ಅಲೀಂ ದಾರ್

ಅಲೀಂ ದಾರ್(Aleem Dar) ಅವರು ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ICC) ಎಲೈಟ್​ ಪ್ಯಾನಲ್​ನಿಂದ ನಿವೃತ್ತಿ ಹೊಂದಿದ್ದಾರೆ.

VISTARANEWS.COM


on

Aleem Dar: Pakistan's Aleem Dar Bids Farewell to ICC Umpire Panel
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ದುಬೈ: ಪಾಕಿಸ್ತಾನದ ಅಲೀಂ ದಾರ್(Aleem Dar) ಅವರು ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ICC) ಎಲೈಟ್​ ಪ್ಯಾನಲ್​ನಿಂದ ನಿವೃತ್ತಿ ಹೊಂದಿದ್ದಾರೆ. ಅವರ ಸ್ಥಾನಕ್ಕೆ ಪಾಕಿಸ್ತಾನದವರೇ ಆದ ಎಹಸಾನ್ ರಾಜಾ(Ahsan Raza) ನೇಮಕವಾಗಿದ್ದಾರೆ. ಐಸಿಸಿ ಕ್ರಿಕೆಟ್​ ಟೂರ್ನಿಯಲ್ಲಿ ಸುದೀರ್ಘ ಕಾಲದಿಂದ ಅಂಪೈರ್ ಆಗಿ ಕಾರ್ಯನಿರ್ವಹಿಸಿದ ಸಾಧನೆ ಅವರದ್ದಾಗಿತ್ತು.

ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಪಂದ್ಯಗಳಲ್ಲಿ ಅಂಪೈರ್ ಆಗಿ ಕಾರ್ಯನಿರ್ವಹಿಸಿದ ದಾಖಲೆ ದಾರ್​ ಹೆಸರಿನಲ್ಲಿದೆ. 144 ಟೆಸ್ಟ್, 222 ಏಕ ದಿನ ಹಾಗೂ 69 ಟಿ20 ಪಂದ್ಯಗಳಲ್ಲಿ ಅವರು ಅಂಪೈರ್​ ಆಗಿ ಕಾರ್ಯನಿರ್ವಹಿಸಿದ್ದಾರೆ.

58 ವರ್ಷದ ಅಲೀಂ ದಾರ್ ಅವರು ವಿದಾಯ ಹೇಳಿದ ವಿಚಾರವನ್ನು ಐಸಿಸಿ ತನ್ನ ಅಧಿಕೃತ ಪ್ರಕಟನೆಯಲ್ಲಿ ತಿಳಿಸಿದೆ. ‘ಅಂಪೈರ್ ಅಲೀಂ ದಾರ್ ಅವರು ಎಲೈಟ್​ ಅಂಪೈರ್‌ ಆಗಿ 19 ವರ್ಷಗಳ ದೀರ್ಘ ಕಾರ್ಯನಿರ್ವಹಣೆಯ ಬಳಿಕ ವಿದಾಯ ಹೇಳಿದ್ದಾರೆ. ಪುರುಷರ ಕ್ರಿಕೆಟ್‌ನಲ್ಲಿ ಒಟ್ಟು 435 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಅವರು ಕಾರ್ಯನಿರ್ವಹಿಸಿದ್ದರು. ಅವರ ಮುಂದಿನ ಜೀವನಕ್ಕೆ ಶುಭಹಾರೈಕೆಗಳು” ಎಂದು ಐಸಿಸಿ ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನೂ ಓದಿ IND VS AUS: ಮೊದಲ ಏಕದಿನ; ರಾಹುಲ್​ಗೆ ಅವಕಾಶ

“ಸುದೀರ್ಘ 19 ವರ್ಷಗಳ ಕಾಲ ಐಸಿಸಿ ಕ್ರಿಕೆಟ್​ನಲ್ಲಿ ಅಂಪೈರ್ ಆಗಿ ಕಾರ್ಯನಿರ್ವಹಿಸಿದ್ದು ಸಂತಸದ ಜತೆಗೆ ಗೌರವದ ಸಂಕೇತ. ಈ ವೃತ್ತಿಜೀವನದಲ್ಲಿ ವಿಶ್ವದ ಬೇರೆ ಬೇರೆ ತಾಣಗಳಲ್ಲಿ ಕೆಲಸ ಮಾಡಿದ್ದು ಖುಷಿ ಇದೆ” ಎಂದು ಅಲೀಂ ದಾರ್​ ಹೇಳಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

RR vs KKR: ಮಳೆಯಿಂದ​ ಪಂದ್ಯ ರದ್ದು; ಎಲಿಮಿನೇಟರ್‌ ಪಂದ್ಯದಲ್ಲಿ​ ಆರ್​ಸಿಬಿಗೆ ರಾಜಸ್ಥಾನ್​ ಎದುರಾಳಿ

RR vs KKR: ಕೆಕೆಆರ್​ ಮಣಿಸಿ ಅಂಕಪಟ್ಟಿಯಲ್ಲಿ ದ್ವಿತೀಯ ಸ್ಥಾನಿಯಾಗಿ ಕ್ವಾಲಿಫೈಯರ್​ ಪಂದ್ಯವನ್ನಾಡುವ ನಿರೀಕ್ಷೆಯಲ್ಲಿದ್ದ ರಾಜಸ್ಥಾನ್​ಗೆ(Rajasthan Royals)​ ಮಳೆ ತಣ್ಣೀರೆರಚಿತು. ಸನ್​ರೈಸರ್ಸ್​ ಹೈದರಾಬಾದ್​ 2ನೇ ತಂಡವಾಗಿ ಕ್ವಾಲಿಫೈಯರ್​ಗೆ ಅರ್ಹತೆ ಪಡೆಯಿತು.

VISTARANEWS.COM


on

RR vs KKR
Koo

ಗುವಾಹಟಿ: 17ನೇ ಆವೃತ್ತಿಯ ಐಪಿಎಲ್​ನ(IPL 2024) ಕೊನೆಯ ಲೀಗ್​ ಪಂದ್ಯ ಮಳೆಯಿಂದ ರದ್ದುಗೊಂಡಿದೆ. ರಾಜಸ್ಥಾನ್​ ರಾಯಲ್ಸ್​(RR vs KKR) ಮತ್ತು ಕೋಲ್ಕತ್ತಾ ನೈಟ್​ ರೈಡರ್ಸ್(Kolkata Knight Riders)​ ತಂಡಗಳು ಈ ಪಂದ್ಯದಲ್ಲಿ ಮುಖಾಮುಖಿಯಾಗಬೇಕಿತ್ತು. ಆದರೆ ಮಳೆಯಿಂದ ಒಂದೂ ಎಸೆತ ಕಾಣದೆ ಈ ಪಂದ್ಯ ರದ್ದಾದ ಕಾರಣ ಉಭಯ ತಂಡಗಳಿಗೂ ತಲಾ ಒಂದು ಅಂಕ ನೀಡಲಾಯಿತು.

10 ಗಂಟೆ ಸುಮಾರಿಗೆ ಮಳೆ ನಿಂತಿತು. ಮಳೆ ನಿಂತ ಕಾರಣ ಪಂದ್ಯವನ್ನು ಡಕ್​ವರ್ತ್​ ನಿಯಮದ ಪ್ರಕಾರ 7 ಓವರ್​ಗೆ ಸೀಮಿತಗೊಳಿಸಿ ಟಾಸ್​ ಕೂಡ ಹಾರಿಸಲಾಯಿತು. ಟಾಸ್​ ಗೆದ್ದು ಕೆಕೆಆರ್​ ಫೀಲ್ಡಿಂಗ್​ ಆಯ್ದುಕೊಂಡಿತು. ಇನ್ನೇನು ಆಟಗಾರರು ಮೈದಾನಕ್ಕೆ ಇಳಿಯಬೇಕು ಎನ್ನುವಷ್ಟರಲ್ಲಿ ಮಳೆ ಮತ್ತೆ ಆರಂಭಗೊಂಡಿತು. ಹೀಗಾಗಿ ಅಂಪೈರ್​ಗಳು ಕೊನೆಗೆ ಪಂದ್ಯವನ್ನು ರದ್ದು ಎಂದು ಘೋಷಣೆ ಮಾಡಿದರು.

ಕೆಕೆಆರ್​ ಮಣಿಸಿ ಅಂಕಪಟ್ಟಿಯಲ್ಲಿ ದ್ವಿತೀಯ ಸ್ಥಾನಿಯಾಗಿ ಕ್ವಾಲಿಫೈಯರ್​ ಪಂದ್ಯವನ್ನಾಡುವ ನಿರೀಕ್ಷೆಯಲ್ಲಿದ್ದ ರಾಜಸ್ಥಾನ್​ಗೆ(Rajasthan Royals)​ ಮಳೆ ತಣ್ಣೀರೆರಚಿತು. ಸನ್​ರೈಸರ್ಸ್​ ಹೈದರಾಬಾದ್​ 2ನೇ ತಂಡವಾಗಿ ಕ್ವಾಲಿಫೈಯರ್​ಗೆ ಅರ್ಹತೆ ಪಡೆಯಿತು. ರಾಜಸ್ಥಾನ್​ ಮತ್ತು ಹೈದರಾಬಾದ್ ಸಮಾನ 17 ಅಂಕ ಹೊಂದಿದರೂ ರನ್​ ರೇಟ್​ನಲ್ಲಿ ಮುಂದಿದ್ದ ಕಾರಣ ಈ ಲಾಭ ಕಮಿನ್ಸ್​ ಪಡೆಗೆ ಲಭಿಸಿತು. ಮಂಗಳವಾರ(ಮೇ 21) ನಡೆಯುವ ಮೊದಲ ಕ್ವಾಲಿಫೈಯರ್​ ಪಂದ್ಯದಲ್ಲಿ ಕೆಕೆಆರ್​ ವಿರುದ್ಧ ಹೈದರಾಬಾದ್​ ಕಣಕ್ಕಿಳಿಯಲಿದೆ. ಈ ಪಂದ್ಯ ಅಹಮದಾಬಾದ್​ನಲ್ಲಿ ನಡೆಯಲಿದೆ.

ಆರ್​ಸಿಬಿ-ರಾಜಸ್ಥಾನ್​ ಮಧ್ಯೆ ಎಲಿಮಿನೇಟರ್​ ಪಂದ್ಯ


ಬುಧವಾರ ನಡೆಯುವ ಎಲಿಮಿನೇಟರ್​ ಪಂದ್ಯದಲ್ಲಿ ಆರ್​ಸಿಬಿ ತಂಡ ರಾಜಸ್ಥಾನ್​ ರಾಯಲ್ಸ್​ ವಿರುದ್ಧ ಆಡಲಿದೆ. ಈ ಪಂದ್ಯ ಅಹಮದಾಬಾದ್​ನ ನರೇಂದ್ರ ಮೋದಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆಯಲಿದೆ. ಸತತವಾಗಿ 6 ಪಂದ್ಯಗಳನ್ನು ಗೆದ್ದು ಪ್ಲೇ ಆಫ್​ ಆಫ್​ಗೆ ಲಗ್ಗೆಯಿಟ್ಟ ಆರ್​ಸಿಬಿಗೆ ಎಲಿಮಿನೇಟರ್​ ಪಂದ್ಯದಲ್ಲೂ ಲಕ್​ ಹೈ ಹಿಡಿಯುವುದೇ ಎಂದು ಕಾದು ನೋಡಬೇಕಿದೆ.

ಪಂಜಾಬ್​ ವಿರುದ್ಧ ಗೆದ್ದ ಹೈದರಾಬಾದ್​


ದಿನದ ಮೊದಲ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್​ ತಂಡ ಪಂಜಾಬ್​ ಕಿಂಗ್ಸ್​ ವಿರುದ್ಧ 4 ವಿಕೆಟ್​ಗಳ ಗೆಲುವು ಸಾಧಿಸಿತು. ಈ ಗೆಲುವಿನೊಂದಿಗೆ 17 ಅಂಕ ಸಂಪಾದಿಸಿ ಅಂಕಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿತು. ಬ್ಯಾಟಿಂಗ್​ ಸ್ನೇಹಿಯಾದ ಉಪ್ಪಳದ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್​ ಗೆದ್ದು ಬ್ಯಾಟಿಂಗ್​ ಆಯ್ದುಕೊಂಡ ಪಂಜಾಬ್​ ಕಿಂಗ್ಸ್​ 5 ವಿಕೆಟ್​ಗೆ 214 ರನ್​ ಬಾರಿಸಿ ತನ್ನ ಆಯ್ಕೆಯನ್ನು ಸಮರ್ಥಿಸಿಕೊಂಡಿತು. ಆದರೆ ಈ ಮೊತ್ತ ಹೈದರಾಬಾದ್​ ತಂಡವನ್ನು ಕಟ್ಟಿ ಹಾಕಲು ಸಾಕಾಗಲಿಲ್ಲ. ಗುರಿ ಬೆನ್ನಟ್ಟಿದ ಸನ್​ರೈಸರ್ಸ್​ ಹೈದರಾಬಾದ್ 19.1​ ಓವರ್​ಗಳಲ್ಲಿ 6 ವಿಕೆಟ್​ ನಷ್ಟಕ್ಕೆ 215 ಬಾರಿಸಿ ತವರಿನಲ್ಲಿ ವಿಜಯ ಪತಾಕೆ ಹಾರಿಸಿತು. ಉಭಯ ತಂಡಗಳ ಜಿದ್ದಾಜಿದ್ದಿನ ಬ್ಯಾಟಿಂಗ್​ ಪರಾಕ್ರಮದಿಂದಾಗಿ ಈ ಪಂದ್ಯದಲ್ಲಿ ಒಟ್ಟು 429 ರನ್​ ದಾಖಲಾಯಿತು.

Continue Reading

ಕ್ರೀಡೆ

SRH vs PBKS: ಆರ್​ಸಿಬಿಯ ಸಿಕ್ಸರ್​ ದಾಖಲೆ ಮುರಿದ ಹೈದರಾಬಾದ್​

SRH vs PBKS: ಆರ್​ಸಿಬಿ ಮತ್ತು ಹೈದರಾಬಾದ್(SRH vs PBKS)​ ತಂಡಗಳು ಪ್ಲೇ ಆಫ್​ ಪ್ರವೇಶಿಸಿದ ಕಾರಣ ತಮ್ಮ ತಂಡಗಳ ಸಿಕ್ಸರ್​ಗಳ ಸಂಖ್ಯೆ ಇನ್ನೂ ಹೆಚ್ಚಿಸುವ ಅವಕಾಶವಿದೆ. ಅಂತಿಮವಾಗಿ ಯಾರು ಹೆಚ್ಚು ಸಿಕ್ಸರ್​ ಬಾರಿಸುತ್ತಾರೋ ಅವರಿಗೆ ಅಗ್ರಸ್ಥಾನ ಸಿಗಲಿದೆ. ಈ ತಂಡ ಯಾವುದು ಎಂಬುದು ಸದ್ಯದ ಕುತೂಹಲ.

VISTARANEWS.COM


on

SRH vs PBKS
Koo

ಹೈದರಾಬಾದ್​: ಸನ್​ರೈಸರ್ಸ್​ ಹೈದರಾಬಾದ್(Sunrisers Hyderabad)​ ತಂಡ ಐಪಿಎಲ್​(IPL 2024) ಆವೃತ್ತಿಯಲ್ಲಿ ಮತ್ತು ಟಿ20 ಸರಣಿಯಲ್ಲಿ ಅತಿ ಹೆಚ್ಚು ಸಿಕ್ಸರ್​ ಬಾರಿಸಿದ ಮೊದಲ ತಂಡ ಎಂಬ ದಾಖಲೆ ಬರೆದಿದೆ. ಈ ಮೂಲಕ ಆರ್​ಸಿಬಿ ಹೆಸರಿನಲ್ಲಿದ್ದ ದಾಖಲೆಯನ್ನು ಮುರಿದೆ. ಆರ್​ಸಿಬಿ ಈ ಆವೃತ್ತಿಯಲ್ಲಿ ಒಟ್ಟು 157 ಸಿಕ್ಸರ್​ ಬಾರಿಸಿ ಅಗ್ರಸ್ಥಾನ ಪಡೆದಿತ್ತು. ಆದರೆ, ಇದೀಗ ಹೈದರಾಬಾದ್​ 160 ಸಿಕ್ಸರ್​ ಬಾರಿಸುವ ಮೂಲಕ ದಾಖಲೆಯನ್ನು ತನ್ನ ಹೆಸರಿಗೆ ಬರೆದಿದೆ.

ಅತಿ ಹೆಚ್ಚು ಸಿಕ್ಸರ್​ ಬಾರಿಸಿದ 5 ತಂಡಗಳು


ಸನ್​ರೈಸರ್ಸ್​ ಹೈದರಾಬಾದ್​-160
ಸಿಕ್ಸರ್​, 2024

ಆರ್​ಸಿಬಿ-157 ಸಿಕ್ಸರ್​, 2024

ಚೆನ್ನೈ ಸೂಪರ್​ ಕಿಂಗ್ಸ್​-145 ಸಿಕ್ಸರ್​, 2018

ಸರ್ರೆ-144 (ಟಿ20 ಬ್ಲಾಸ್ಟ್​ 2013)

ಕೆಕೆಆರ್​-143 ಸಿಕ್ಸರ್​, 2019

ಆರ್​ಸಿಬಿ ಮತ್ತು ಹೈದರಾಬಾದ್(SRH vs PBKS)​ ತಂಡಗಳು ಪ್ಲೇ ಆಫ್​ ಪ್ರವೇಶಿಸಿದ ಕಾರಣ ತಮ್ಮ ತಂಡಗಳ ಸಿಕ್ಸರ್​ಗಳ ಸಂಖ್ಯೆ ಇನ್ನೂ ಹೆಚ್ಚಿಸುವ ಅವಕಾಶವಿದೆ. ಅಂತಿಮವಾಗಿ ಯಾರು ಹೆಚ್ಚು ಸಿಕ್ಸರ್​ ಬಾರಿಸುತ್ತಾರೋ ಅವರಿಗೆ ಅಗ್ರಸ್ಥಾನ ಸಿಗಲಿದೆ. ಈ ತಂಡ ಯಾವುದು ಎಂಬುದು ಸದ್ಯದ ಕುತೂಹಲ.

ಕೊಹ್ಲಿಯ ಸಿಕ್ಸರ್​ ದಾಖಲೆ ಮುರಿದ ಅಭಿಷೇಕ್​


ಪಂಜಾಬ್​ ಕಿಂಗ್ಸ್​ ವಿರುದ್ಧ ಪ್ರಚಂಡ ಬ್ಯಾಟಿಂಗ್​ ಮೂಲಕ ಸಿಕ್ಸರ್​ಗಳ ಸುರಿಮಳೆಯನ್ನೇ ಸುರಿಸಿದ ಅಭಿಷೇಕ್​ ಬರೋಬ್ಬರಿ 6 ಸಿಕ್ಸರ್​ ಬಾರಿಸಿ ಮಿಂಚಿದರು. ಇದೇ ವೇಳೆ ಈ ಬಾರಿ ಅತ್ಯಧಿಕ ಸಿಕ್ಸರ್​ ಬಾರಿಸಿದ ವಿರಾಟ್​ ಕೊಹ್ಲಿ(37) ಅವರ ದಾಖಲೆಯನ್ನು ಹಿಂದಿಕ್ಕಿದರು. ಸದ್ಯ ಅಭಿಷೇಕ್​ 41* ಸಿಕ್ಸರ್​ ಬಾರಿಸಿದ ಸಾಧನೆ ಮಾಡಿದ್ದಾರೆ. ಆರ್​ಸಿಬಿ ಕೂಡ ಪ್ಲೇ ಆಫ್​ ಪ್ರವೇಶಿಸಿದ ಕಾರಣ ಕೊಹ್ಲಿಗೆ ಈ ದಾಖಲೆಯನ್ನು ಮುರಿಯುವ ಅವಕಾಶ ಇನ್ನೂ ಜೀವಂತವಿದೆ. ಒಟ್ಟಾರೆಯಾಗಿ ಉಭಯ ಆಟಗಾರರ ಮಧ್ಯೆ ಸಿಕ್ಸರ್​ ಪೈಪೋಟಿ ಏರ್ಪಟ್ಟಿದೆ.

ಇದನ್ನೂ ಓದಿ SRH vs PBKS: ಒಂದು ದಿನ ಕಳೆಯುವ ಮುನ್ನವೇ ಕೊಹ್ಲಿಯ ಸಿಕ್ಸರ್​ ದಾಖಲೆ ಮುರಿದ ಅಭಿಷೇಕ್

ಈ ಬಾರಿ ಅತ್ಯಧಿಕ ಸಿಕ್ಸರ್​ ಬಾರಿಸಿದ ಟಾಪ್​ 5 ಆಟಗಾರರು


ಅಭಿಷೇಕ್ ಶರ್ಮ-41 ಸಿಕ್ಸರ್​​

ವಿರಾಟ್​ ಕೊಹ್ಲಿ-37 ಸಿಕ್ಸರ್​

ನಿಕೋಲಸ್​ ಪೂರನ್​-36 ಸಿಕ್ಸರ್​

ಹೆನ್ರಿಚ್​ ಕ್ಲಾಸೆನ್​-33 ಸಿಕ್ಸರ್​

ಸುನೀಲ್​ ನರೈನ್​-32 ಸಿಕ್ಸರ್

ಹೈದರಾಬಾದ್​ಗೆ 4 ವಿಕೆಟ್​ ಜಯ

ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್​ ಗೆದ್ದು ಬ್ಯಾಟಿಂಗ್​ ಆಯ್ದುಕೊಂಡ ಪಂಜಾಬ್​ ಕಿಂಗ್ಸ್​ 5 ವಿಕೆಟ್​ಗೆ 214 ರನ್​ ಬಾರಿಸಿ ತನ್ನ ಆಯ್ಕೆಯನ್ನು ಸಮರ್ಥಿಸಿಕೊಂಡಿತು. ಆದರೆ ಈ ಮೊತ್ತ ಹೈದರಾಬಾದ್​ ತಂಡವನ್ನು ಕಟ್ಟಿ ಹಾಕಲು ಸಾಕಾಗಲಿಲ್ಲ. ಗುರಿ ಬೆನ್ನಟ್ಟಿದ ಸನ್​ರೈಸರ್ಸ್​ ಹೈದರಾಬಾದ್ 19.1​ ಓವರ್​ಗಳಲ್ಲಿ 6 ವಿಕೆಟ್​ ನಷ್ಟಕ್ಕೆ 215 ಬಾರಿಸಿ ತವರಿನಲ್ಲಿ ವಿಜಯ ಪತಾಕೆ ಹಾರಿಸಿತು. ಉಭಯ ತಂಡಗಳ ಜಿದ್ದಾಜಿದ್ದಿನ ಬ್ಯಾಟಿಂಗ್​ ಪರಾಕ್ರಮದಿಂದಾಗಿ ಈ ಪಂದ್ಯದಲ್ಲಿ ಒಟ್ಟು 429 ರನ್​ ದಾಖಲಾಯಿತು.

ಈಗಾಗಲೇ ಪ್ಲೇ ಆಫ್​ ಪ್ರವೇಶಿಸಿರುವ ಹೈದರಾಬಾದ್​ ಈ ಗೆಲುವಿನೊಂದಿಗೆ 17 ಅಂಕ ಸಂಪಾದಿಸಿ ಅಂಕಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿದೆ. ರಾತ್ರಿ ನಡೆಯುವ ಪಂದ್ಯದಲ್ಲಿ ರಾಜಸ್ಥಾನ್​ ತಂಡ ಕೆಕೆಆರ್​ ವಿರುದ್ಧ ಗೆದ್ದರೆ ಹೈದರಾಬಾದ್​ ಮೂರನೇ ಸ್ಥಾನಕ್ಕೆ ಕುಸಿದು ಎಲಿಮಿನೇಟರ್​​ ಪಂದ್ಯದಲ್ಲಿ ಆರ್​ಸಿಬಿ ವಿರುದ್ಧ ಆಡಲಿದೆ. ​ಎಲಿಮಿನೇಟರ್ ಪಂದ್ಯ ಬುಧವಾರ ನರೇಂದ್ರ ಮೋದಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆಯಲಿದೆ.

Continue Reading

ಕ್ರೀಡೆ

SRH vs PBKS: ಒಂದು ದಿನ ಕಳೆಯುವ ಮುನ್ನವೇ ಕೊಹ್ಲಿಯ ಸಿಕ್ಸರ್​ ದಾಖಲೆ ಮುರಿದ ಅಭಿಷೇಕ್

SRH vs PBKS: ಪಂಜಾಬ್​ ವಿರುದ್ಧದ ಪಂದ್ಯದಲ್ಲಿ 21 ಎಸೆತಗಳಿಂದ ಅರ್ಧಶತಕ ಪೂರ್ತಿಗೊಳಿಸಿದ ಅಭಿಷೇಕ್​ ಒಟ್ಟು 28 ಎಸೆತಗಳಿಂದ 66 ರನ್​ ಬಾರಿಸಿ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಅವರ ಬ್ಯಾಟಿಂಗ್​ ಇನಿಂಗ್ಸ್​ನಲ್ಲಿ 6 ಸಿಕ್ಸರ್​ ಮತ್ತು 5 ಬೌಂಡರಿ ಸಿಡಿಯಿತು.

VISTARANEWS.COM


on

SRH vs PBKS
Koo

ಹೈದರಾಬಾದ್: ವಿರಾಟ್​ ಕೊಹ್ಲಿ(Virat Kohli) ಅವರು ಶನಿವಾರ ಚೆನ್ನೈ ವಿರುದ್ಧದ ಪಂದ್ಯದಲ್ಲಿ 4 ಸಿಕ್ಸರ್​ ಬಾರಿಸುವ ಮೂಲಕ ಈ ಬಾರಿಯ ಐಪಿಎಲ್​ನಲ್ಲಿ(IPL 2024) ಅತ್ಯಧಿಕ ಸಿಕ್ಸರ್​ ಬಾರಿಸಿದ ಆಟಗಾರ ಎಂಬ ದಾಖಲೆ ಬರೆದಿದ್ದರು. ಆದರೆ ಈ ದಾಖಲೆ ಒಂದು ದಿನ ಕಳೆಯುವ ಮುನ್ನವೇ ಪತನಗೊಂಡಿದೆ. ಸನ್​ರೈಸರ್ಸ್ ಹೈದರಾಬಾದ್(SRH vs PBKS)​ ತಂಡದ ಯುವ ಆಟಗಾರ ಅಭಿಷೇಕ್​ ಶರ್ಮ(Abhishek Sharma) ಈ ದಾಖಲೆಯನ್ನು ಮರಿದಿದ್ದಾರೆ.

ಇಂದು(ಭಾನುವಾರ) ನಡೆದ ಐಪಿಎಲ್​ನ 69ನೇ ಪಂದ್ಯದಲ್ಲಿ ಪಂಜಾಬ್​ ಕಿಂಗ್ಸ್​ ವಿರುದ್ಧ ಪ್ರಚಂಡ ಬ್ಯಾಟಿಂಗ್​ ಮೂಲಕ ಸಿಕ್ಸರ್​ಗಳ ಸುರಿಮಳೆಯನ್ನೇ ಸುರಿಸಿದ ಅಭಿಷೇಕ್​ ಬರೋಬ್ಬರಿ 6 ಸಿಕ್ಸರ್​ ಬಾರಿಸಿ ಮಿಂಚಿದರು. ಇದೇ ವೇಳೆ ಈ ಬಾರಿ ಅತ್ಯಧಿಕ ಸಿಕ್ಸರ್​ ಬಾರಿಸಿದ ವಿರಾಟ್​ ಕೊಹ್ಲಿ(37) ಅವರ ದಾಖಲೆಯನ್ನು ಹಿಂದಿಕ್ಕಿದರು. ಸದ್ಯ ಅಭಿಷೇಕ್​ 41* ಸಿಕ್ಸರ್​ ಬಾರಿಸಿದ ಸಾಧನೆ ಮಾಡಿದ್ದಾರೆ. ಆರ್​ಸಿಬಿ ಕೂಡ ಪ್ಲೇ ಆಫ್​ ಪ್ರವೇಶಿಸಿದ ಕಾರಣ ಕೊಹ್ಲಿಗೆ ಈ ದಾಖಲೆಯನ್ನು ಮುರಿಯುವ ಅವಕಾಶ ಇನ್ನೂ ಜೀವಂತವಿದೆ. ಒಟ್ಟಾರೆಯಾಗಿ ಉಭಯ ಆಟಗಾರರ ಮಧ್ಯೆ ಸಿಕ್ಸರ್​ ಪೈಪೋಟಿ ಏರ್ಪಟ್ಟಿದೆ.

ಈ ಬಾರಿ ಅತ್ಯಧಿಕ ಸಿಕ್ಸರ್​ ಬಾರಿಸಿದ ಟಾಪ್​ 5 ಆಟಗಾರರು


ಅಭಿಷೇಕ್ ಶರ್ಮ-41 ಸಿಕ್ಸರ್​​

ವಿರಾಟ್​ ಕೊಹ್ಲಿ-37 ಸಿಕ್ಸರ್​

ನಿಕೋಲಸ್​ ಪೂರನ್​-36 ಸಿಕ್ಸರ್​

ಹೆನ್ರಿಚ್​ ಕ್ಲಾಸೆನ್​-33 ಸಿಕ್ಸರ್​

ಸುನೀಲ್​ ನರೈನ್​-32 ಸಿಕ್ಸರ್

ಇದನ್ನೂ ಓದಿ PBKS vs SRH: ಸೋಲಿನ ಮೂಲಕ ಅಭಿಯಾನ ಮುಗಿಸಿದ ಪಂಜಾಬ್​; ಹೈದರಾಬಾದ್​​ಗೆ 4 ವಿಕೆಟ್​ ಜಯ

ಪಂಜಾಬ್​ ವಿರುದ್ಧದ ಪಂದ್ಯದಲ್ಲಿ 21 ಎಸೆತಗಳಿಂದ ಅರ್ಧಶತಕ ಪೂರ್ತಿಗೊಳಿಸಿದ ಅಭಿಷೇಕ್​ ಒಟ್ಟು 28 ಎಸೆತಗಳಿಂದ 66 ರನ್​ ಬಾರಿಸಿ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಅವರ ಬ್ಯಾಟಿಂಗ್​ ಇನಿಂಗ್ಸ್​ನಲ್ಲಿ 6 ಸಿಕ್ಸರ್​ ಮತ್ತು 5 ಬೌಂಡರಿ ಸಿಡಿಯಿತು.

ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್​ ಗೆದ್ದು ಬ್ಯಾಟಿಂಗ್​ ಆಯ್ದುಕೊಂಡ ಪಂಜಾಬ್​ ಕಿಂಗ್ಸ್​ 5 ವಿಕೆಟ್​ಗೆ 214 ರನ್​ ಬಾರಿಸಿ ತನ್ನ ಆಯ್ಕೆಯನ್ನು ಸಮರ್ಥಿಸಿಕೊಂಡಿತು. ಆದರೆ ಈ ಮೊತ್ತ ಹೈದರಾಬಾದ್​ ತಂಡವನ್ನು ಕಟ್ಟಿ ಹಾಕಲು ಸಾಕಾಗಲಿಲ್ಲ. ಗುರಿ ಬೆನ್ನಟ್ಟಿದ ಸನ್​ರೈಸರ್ಸ್​ ಹೈದರಾಬಾದ್ 19.1​ ಓವರ್​ಗಳಲ್ಲಿ 6 ವಿಕೆಟ್​ ನಷ್ಟಕ್ಕೆ 215 ಬಾರಿಸಿ ತವರಿನಲ್ಲಿ ವಿಜಯ ಪತಾಕೆ ಹಾರಿಸಿತು. ಉಭಯ ತಂಡಗಳ ಜಿದ್ದಾಜಿದ್ದಿನ ಬ್ಯಾಟಿಂಗ್​ ಪರಾಕ್ರಮದಿಂದಾಗಿ ಈ ಪಂದ್ಯದಲ್ಲಿ ಒಟ್ಟು 429 ರನ್​ ದಾಖಲಾಯಿತು.

ಈಗಾಗಲೇ ಪ್ಲೇ ಆಫ್​ ಪ್ರವೇಶಿಸಿರುವ ಹೈದರಾಬಾದ್​ ಈ ಗೆಲುವಿನೊಂದಿಗೆ 17 ಅಂಕ ಸಂಪಾದಿಸಿ ಅಂಕಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿದೆ. ರಾತ್ರಿ ನಡೆಯುವ ಪಂದ್ಯದಲ್ಲಿ ರಾಜಸ್ಥಾನ್​ ತಂಡ ಕೆಕೆಆರ್​ ವಿರುದ್ಧ ಗೆದ್ದರೆ ಹೈದರಾಬಾದ್​ ಮೂರನೇ ಸ್ಥಾನಕ್ಕೆ ಕುಸಿದು ಎಲಿಮಿನೇಟರ್​​ ಪಂದ್ಯದಲ್ಲಿ ಆರ್​ಸಿಬಿ ವಿರುದ್ಧ ಆಡಲಿದೆ. ​ಎಲಿಮಿನೇಟರ್ ಪಂದ್ಯ ಬುಧವಾರ ನರೇಂದ್ರ ಮೋದಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆಯಲಿದೆ.

Continue Reading

ಕ್ರೀಡೆ

PBKS vs SRH: ಸೋಲಿನ ಮೂಲಕ ಅಭಿಯಾನ ಮುಗಿಸಿದ ಪಂಜಾಬ್​; ಹೈದರಾಬಾದ್​​ಗೆ 4 ವಿಕೆಟ್​ ಜಯ

PBKS vs SRH: ಈಗಾಗಲೇ ಪ್ಲೇ ಆಫ್​ ಪ್ರವೇಶಿಸಿರುವ ಹೈದರಾಬಾದ್​ ಈ ಗೆಲುವಿನೊಂದಿಗೆ 17 ಅಂಕದೊಂದಿಗೆ ಅಂಕಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿದೆ. ರಾತ್ರಿ ನಡೆಯುವ ಪಂದ್ಯದಲ್ಲಿ ರಾಜಸ್ಥಾನ್​ ತಂಡ ಕೆಕೆಆರ್​ ವಿರುದ್ಧ ಗೆದ್ದರೆ ಹೈದರಾಬಾದ್​ ಮೂರನೇ ಸ್ಥಾನಕ್ಕೆ ಕುಸಿದು ಎಲಿಮಿನೇಟರ್​ ಪಂದ್ಯದಲ್ಲಿ ಆರ್​ಸಿಬಿ ವಿರುದ್ಧ ಆಡಲಿದೆ. ​

VISTARANEWS.COM


on

PBKS vs SRH
Koo

ಹೈದರಾಬಾದ್​: ಎಡಗೈ ಬ್ಯಾಟರ್​ ಅಭಿಷೇಕ್​​ ಶರ್ಮ(66) ಬಾರಿಸಿದ ಸೊಗಸಾದ ಅರ್ಧಶತಕದ ನೆರವಿನಿಂದ ಸನ್​ರೈರ್ಸ್​ ಹೈದರಾಬಾದ್​(PBKS vs SRH) ತಂಡ ತವರಿನಲ್ಲೇ ನಡೆದ ತನ್ನ ಕೊನೆಯ ಲೀಗ್​ ಪಂದ್ಯದಲ್ಲಿ ಪಂಜಾಬ್​ ಕಿಂಗ್ಸ್​ ವಿರುದ್ಧ 4 ವಿಕೆಟ್ ಅಂತರದ ಗೆಲುವು ಸಾಧಿಸಿದೆ.​ ಈಗಾಗಲೇ ಪ್ಲೇ ಆಫ್​ ಪ್ರವೇಶಿಸಿರುವ ಹೈದರಾಬಾದ್​ ಈ ಗೆಲುವಿನೊಂದಿಗೆ 17 ಅಂಕ ಸಂಪಾದಿಸಿ ಅಂಕಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿದೆ. ರಾತ್ರಿ ನಡೆಯುವ ಪಂದ್ಯದಲ್ಲಿ ರಾಜಸ್ಥಾನ್​ ತಂಡ ಕೆಕೆಆರ್​ ವಿರುದ್ಧ ಗೆದ್ದರೆ ಹೈದರಾಬಾದ್​ ಮೂರನೇ ಸ್ಥಾನಕ್ಕೆ ಕುಸಿದು ಎಲಿಮಿನೇಟರ್​​ ಪಂದ್ಯದಲ್ಲಿ ಆರ್​ಸಿಬಿ ವಿರುದ್ಧ ಆಡಲಿದೆ. ​ಎಲಿಮಿನೇಟರ್ ಪಂದ್ಯ ಬುಧವಾರ ನರೇಂದ್ರ ಮೋದಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆಯಲಿದೆ.

ಬ್ಯಾಟಿಂಗ್​ ಸ್ನೇಹಿಯಾದ ಉಪ್ಪಳದ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್​ ಗೆದ್ದು ಬ್ಯಾಟಿಂಗ್​ ಆಯ್ದುಕೊಂಡ ಪಂಜಾಬ್​ ಕಿಂಗ್ಸ್​ 5 ವಿಕೆಟ್​ಗೆ 214 ರನ್​ ಬಾರಿಸಿ ತನ್ನ ಆಯ್ಕೆಯನ್ನು ಸಮರ್ಥಿಸಿಕೊಂಡಿತು. ಆದರೆ ಈ ಮೊತ್ತ ಹೈದರಾಬಾದ್​ ತಂಡವನ್ನು ಕಟ್ಟಿ ಹಾಕಲು ಸಾಕಾಗಲಿಲ್ಲ. ಗುರಿ ಬೆನ್ನಟ್ಟಿದ ಸನ್​ರೈಸರ್ಸ್​ ಹೈದರಾಬಾದ್ 19.1​ ಓವರ್​ಗಳಲ್ಲಿ 6 ವಿಕೆಟ್​ ನಷ್ಟಕ್ಕೆ 215 ಬಾರಿಸಿ ತವರಿನಲ್ಲಿ ವಿಜಯ ಪತಾಕೆ ಹಾರಿಸಿತು. ಉಭಯ ತಂಡಗಳ ಜಿದ್ದಾಜಿದ್ದಿನ ಬ್ಯಾಟಿಂಗ್​ ಪರಾಕ್ರಮದಿಂದಾಗಿ ಈ ಪಂದ್ಯದಲ್ಲಿ ಒಟ್ಟು 429 ರನ್​ ದಾಖಲಾಯಿತು.

ಹೆಡ್​ ಕ್ಲೀನ್​ ಬೌಲ್ಡ್​


ಗುರಿ ಬೆನ್ನಟ್ಟಿದ ಹೈದರಾಬಾದ್​ ತಂಡ ಸ್ಫೋಟಕ ಬ್ಯಾಟಿಂಗ್​ಗೆ ಹೆಸರುವಾಸಿಯಾದ ಟ್ರಾವಿಸ್​ ಹೆಟ್​​ ಅವರನ್ನು ಮೊದಲ ಎಸೆತದಲ್ಲೇ ಕಳೆದುಕೊಂಡು ಆರಂಭಿಕ ಆಘಾತಕ್ಕೆ ಒಳಗಾಯಿತು. ಹೆಡ್​​ ಅವರು ಅರ್ಶದೀಪ್​ ಸಿಂಗ್​ ಅವರ ಮೊದಲ ಎಸೆತಲ್ಲೇ ಕ್ಲೀನ್​ ಬೌಲ್ಡ್​ ಆದರು. ಹೆಡ್​ ವಿಕೆಟ್​ ಬಿದ್ದರೂ ಕೂಡ ವಿಚಲಿತರಾಗದ ಅಭಿಷೇಕ್​ ಶರ್ಮ ಬಿರುಸಿನ ಬ್ಯಾಟಿಂಗ್​ ಮೂಲಕ ಪಂಜಾಬ್​ ಬೌಲರ್​ಗಳ ಮೇಲೆರಗಿ ಸತತ ಸಿಕ್ಸರ್ ಮತ್ತು ಬೌಂಡರಿ ಬಾರಿಸಿ ತಮ್ಮ ಹಾಗೂ ತಂಡದ ಮೊತ್ತವನ್ನು ಹಿಗ್ಗಿಸಿದರು.

​ಅಭಿಷೇಕ್ ಶರ್ಮ ಅವರಿಗೆ ಮತ್ತೊಂದು ತುದಿಯಲ್ಲಿ ರಾಹುಲ್​ ತ್ರಿಪಾಠಿ ಕೂಡ ಉತ್ತಮ ಸಾಥ್​ ನೀಡಿದರು. ಉಭಯ ಆಟಗಾರರು ಸೇರಿಕೊಂಡು ದ್ವಿತೀಯ ವಿಕೆಟ್​ಗೆ 72 ರನ್​ ಬಾರಿಸಿ ತಂಡವನ್ನು ಆರಂಭಿಕ ಆಘಾತದಿಂದ ಪಾರು ಮಾಡಿದರು. ಈ ಮೊತ್ತವನ್ನು ಈ ಜೋಡಿ ಕೇವಲ 4.6 ಓವರ್​ನಲ್ಲಿ ಬಾರಿಸಿದರು. ತಿಪಾಠಿ 18 ಎಸೆತ ಎದುರಿಸಿ 33(4 ಬೌಂಡರಿ, 2 ಸಿಕ್ಸರ್​) ಬಾರಿಸಿದರು.

ಮತ್ತೆ ಸಿಡಿದ ಅಭಿಷೇಕ್ ಶರ್ಮ

ಮೂರನೇ ವಿಕೆಟ್​ಗೂ ಅಭಿಷೇಕ್​, ನಿತೀಶ್​ ರೆಡ್ಡಿ ಜತೆಗೂಡಿ ಮತ್ತೊಂದು ಅರ್ಧಶತಕದ ಜತೆಯಾಟ ನಡೆಸಿ ಗಮನಸೆಳೆದರು. ಸಿಕ್ಸರ್​ಗಳ ಸುರಿಮಳೆ ಸುರಿಸಿದ ಅಭಿಷೇಕ್​ ಈ ಬಾರಿಯ ಟೂರ್ನಿಯಲ್ಲಿ ಅತ್ಯಧಿಕ ಸಿಕ್ಸರ್​ ಬಾರಿಸಿದ ಆಟಗಾರನಾಗಿ ಹೊರಮೊಮ್ಮಿದರು. ಇದೇ ವೇಳೆ 37 ಸಿಕ್ಸರ್​ ಬಾರಿಸಿರುವ ವಿರಾಟ್​ ಕೊಹ್ಲಿಯ ದಾಖಲೆ ಪತನಗೊಂಡಿತು. ಒಟ್ಟು 28 ಎಸೆತ ಎದುರಿಸಿದ ಅಭಿಷೇಕ್​ ಬರೋಬ್ಬರಿ 6 ಸಿಕ್ಸರ್​ ಮತ್ತು 5 ಬೌಂಡರಿ ಸಿಡಿಸಿ 66 ರನ್​ ಬಾರಿಸಿದರು. 51 ಎಸೆತಗಳಲ್ಲಿ ಅರ್ಧಶತಕ ಪೂರ್ತಿಗೊಳಿಸಿದರು. ಇದು ಈ ಆವೃತ್ತಿಯ 3ನೇ ಅರ್ಧಶತಕವಾಗಿದೆ.

ಇದನ್ನೂ ಓದಿ RCB vs CSK: ಆನ್​ಲೈನ್​ ವೀಕ್ಷಣೆಯಲ್ಲೂ ದಾಖಲೆ ಬರೆದ ಆರ್​ಸಿಬಿ-ಚೆನ್ನೈ ಪಂದ್ಯ

ಅಭಿಷೇಕ್​ ವಿಕೆಟ್​ ಪತನದ ಬಳಿಕ ಉತ್ತಮವಾಗಿ ಆಡುತ್ತಿದ್ದ ನಿತೀಶ್​ ರೆಡ್ಡಿ 37 ರನ್​ಗೆ ವಿಕೆಟ್​ ಕಳೆದುಕೊಂಡರು. ಬಳಿಕ ಬಂದ ಶಾಬಾಜ್​ ಅಹ್ಮದ್​ 3 ರನ್​ಗೆ ವಿಕೆಟ್​ ಕೈಚೆಲ್ಲಿದರು. ಈ ವೇಳೆ ಹೈದರಾಬಾದ್​ ಕೊಂಚ ಆತಂಕಕ್ಕೆ ಸಿಲುಕಿತು. ಇದೇ ವೇಳೆ ಹೆನ್ರಿಚ್​ ಕ್ಲಾಸೆನ್​ ಜವಾಬ್ದಾರಿಯು ಬ್ಯಾಟಿಂಗ್​ ನಡೆಸಿ 42 ರನ್​ ಬಾರಿಸಿದರು. ಅಂತಿಮವಾಗಿ ಅಬ್ದುಲ್​ ಸಮದ್​(11*) ಮತ್ತು ಸನ್ವೀರ್ ಸಿಂಗ್(6*) ಅಜೇಯ ರನ್​ ಬಾರಿಸುವ ಮೂಲಕ ತಂಡವನ್ನು ಗೆಲುವಿನ ದಡ ಸೇರಿಸಿದರು. ಪಂಜಾಬ್​ ಬ್ಯಾಟರ್​ಗಳು ಬೃಹತ್​ ಮೊತ್ತ ಪೇರಿಸಿದರೂ ಬೌಲರ್​ಗಳಿಂದ ನಿರೀಕ್ಷಿತ ಪ್ರದರ್ಶನ ಕಂಡು ಬಾರದ ಕಾರಣ ಸೋಲಿಗೆ ತುತ್ತಾದರು.

ಪ್ರಭಾಸಿಮ್ರಾನ್ ಅರ್ಧಶತಕ ವ್ಯರ್ಥ


ಇದಕ್ಕೂ ಮುನ್ನ ಬ್ಯಾಟಿಂಗ್​ ನಡೆಸಿದ ಪಂಜಾಬ್​ ಕೂಡ ಅತ್ಯಂತ ಜೋಶ್​ನಲ್ಲಿ ಬ್ಯಾಟಿಂಗ್ ನಡೆಸಿತು. ಆರಂಭಿಕ ಆಟಗಾರರಾದ ​ಅಥರ್ವ ತೈಡೆ ಮತ್ತು ಪ್ರಭಾಸಿಮ್ರಾನ್ ಸಿಂಗ್ 10 ಸರಾಸರಿಯಲ್ಲಿ ರನ್​ ಗಳಿಸಿ ಮೊದಲ ವಿಕೆಟ್​ಗೆ 97 ರನ್​ ಒಟ್ಟುಗೂಡಿಸಿದರು. ಅಥರ್ವ ತೈಡೆ 46 ರನ್​ ಬಾರಿಸಿದರೆ, ಪ್ರಭಾಸಿಮ್ರಾನ್ 71 ರನ್(7 ಬೌಂಡರಿ, 4 ಸಿಕ್ಸರ್​)​ ಬಾರಿಸಿದರು. ಆ ಬಳಿಕ ಬಂದ ರೀಲಿ ರೋಸೊ ಕೂಡ ಆಕ್ರಮಣಕಾರಿ ಬ್ಯಾಟಿಂಗ್​ ನಡೆಸಿ 4 ಸಿಕ್ಸರ್​ ಮತ್ತು 3 ಬೌಂಡರಿ ನೆರವಿನಿಂದ 47 ರನ್​ ಗಳಿಸಿ ಔಟಾದರು. ಈ ಮೂಲಕ ಕೇವಲ 3 ರನ್​ ಅಂತರದಿಂದ ಅರ್ಧಶಕ ವಂಚಿತರಾದರು.

5 ನೇ ಕ್ರಮಾಂಕದಲ್ಲಿ ಆಡಲಿಳಿದ ಜಿತೇಶ್​ ಶರ್ಮ ಕೇವಲ 15 ಎಸೆತಗಳಿಂದ ಅಜೇಯ 32 ರನ್​ ಬಾರಿಸಿ ತಂಡದ ಬೃಹತ್​ ಮೊತಕ್ಕೆ ಕಾರಣರಾದರು. ಹೈದರಾಬಾದ್​ ಪರ ಎಡಗೈ ವೇಗಿ ಟಿ ನಟರಾಜ್​ 33 ರನ್​ಗೆ 2 ವಿಕೆಟ್​ ಉರುಳಿಸಿದರು. ನಾಯಕ ಪ್ಯಾಟ್​ ಕಮಿನ್ಸ್​ ಮತ್ತು ವಿಜಯಕಾಂತ್ ವ್ಯಾಸಕಾಂತ್ ತಲಾ ಒಂದು ವಿಕೆಟ್​ ಪಡೆದರು.

Continue Reading
Advertisement
RR vs KKR
ಕ್ರೀಡೆ13 mins ago

RR vs KKR: ಮಳೆಯಿಂದ​ ಪಂದ್ಯ ರದ್ದು; ಎಲಿಮಿನೇಟರ್‌ ಪಂದ್ಯದಲ್ಲಿ​ ಆರ್​ಸಿಬಿಗೆ ರಾಜಸ್ಥಾನ್​ ಎದುರಾಳಿ

Parliament Security
ದೇಶ24 mins ago

Parliament Security: ನಾಳೆಯಿಂದ ಸಂಸತ್‌ಗೆ ಸಿಆರ್‌ಪಿಎಫ್‌ ಬದಲು ಸಿಐಎಸ್‌ಎಫ್‌ ಭದ್ರತೆ; ಏಕಿಂಥ ನಿರ್ಧಾರ?

Dangerous Bike Stunt
ಕರ್ನಾಟಕ32 mins ago

Dangerous Bike Stunt: ಯುವತಿಯನ್ನು ತೊಡೆ ಮೇಲೆ ಕೂರಿಸಿಕೊಂಡು ಬೈಕ್‌ ಓಡಿಸಿದ ಯುವಕ ಅರೆಸ್ಟ್‌

Narendra Modi
ದೇಶ1 hour ago

Narendra Modi: ಮುಸ್ಲಿಮರ ವೋಟಿಗಾಗಿ ಮಮತಾ ಬ್ಯಾನರ್ಜಿ ಹಿಂದು ಸಂಘಟನೆಗಳ ವಿರುದ್ಧ ಆರೋಪ; ಮೋದಿ ಟೀಕೆ

SRH vs PBKS
ಕ್ರೀಡೆ2 hours ago

SRH vs PBKS: ಆರ್​ಸಿಬಿಯ ಸಿಕ್ಸರ್​ ದಾಖಲೆ ಮುರಿದ ಹೈದರಾಬಾದ್​

Drowned in Lake
ಕರ್ನಾಟಕ2 hours ago

Drown in Lake: ಮೀನು ಹಿಡಿಯಲು ಕೆರೆಗೆ ಹೋಗಿದ್ದ ಇಬ್ಬರು ನೀರು ಪಾಲು

Bengaluru Rain
ಕರ್ನಾಟಕ2 hours ago

Bengaluru Rain: ಬೆಂಗಳೂರಿನಲ್ಲಿ ಮುಂದುವರಿದ ಮಳೆ ಆರ್ಭಟ; ರಸ್ತೆಗಳು ಜಲಾವೃತ, ಹಲವೆಡೆ ಸಂಚಾರ ಅಸ್ತವ್ಯಸ್ತ

Kantara Movie
ಸಿನಿಮಾ2 hours ago

Kantara Movie: ದಾಖಲೆ ಮೊತ್ತಕ್ಕೆ ಕಾಂತಾರ ಸಿನಿಮಾದ ಡಿಜಿಟಲ್‌ ರೈಟ್ಸ್‌ ಮಾರಾಟ; ಅಬ್ಬಾ ಇಷ್ಟು ಕೋಟಿನಾ!

SRH vs PBKS
ಕ್ರೀಡೆ3 hours ago

SRH vs PBKS: ಒಂದು ದಿನ ಕಳೆಯುವ ಮುನ್ನವೇ ಕೊಹ್ಲಿಯ ಸಿಕ್ಸರ್​ ದಾಖಲೆ ಮುರಿದ ಅಭಿಷೇಕ್

Harish Poonja
ಕರ್ನಾಟಕ3 hours ago

Harish Poonja: ಪೊಲೀಸರಿಗೆ ಧಮ್ಕಿ; ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್‌ಐಆರ್

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ7 hours ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ8 hours ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ9 hours ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ2 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ3 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ3 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು4 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ5 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

ಟ್ರೆಂಡಿಂಗ್‌