ICC World Cup 2023 : ವಿಶ್ವ ಕಪ್​ ನಡೆಯುವ 10 ಸ್ಟೇಡಿಯಮ್​ಗಳ ಬಗ್ಗೆ ನಿಮಗೆಷ್ಟು ಗೊತ್ತು ? ಇಲ್ಲಿದೆ ಎಲ್ಲ ವಿವರ - Vistara News

ಕ್ರಿಕೆಟ್

ICC World Cup 2023 : ವಿಶ್ವ ಕಪ್​ ನಡೆಯುವ 10 ಸ್ಟೇಡಿಯಮ್​ಗಳ ಬಗ್ಗೆ ನಿಮಗೆಷ್ಟು ಗೊತ್ತು ? ಇಲ್ಲಿದೆ ಎಲ್ಲ ವಿವರ

ಗುಜರಾತ್​ನ ನರೇಂದ್ರ ಮೋದಿ ಸ್ಟೇಡಿಯಮ್​ ವಿಶ್ವ ಕಪ್​ (ICC World Cup 2023) ನಡೆಯುವ ಎಲ್ಲ 10 ಸ್ಟೇಡಿಯಮ್​ಗಳ ಪೈಕಿ ಅತ್ಯಂತ ದೊಡ್ಡದು ಹಾಗೂ ಜಗತ್ತಿನ ಅತಿ ದೊಡ್ಡ ಕ್ರಿಕೆಟ್​ ಕ್ರೀಡಾಂಗಣ.

VISTARANEWS.COM


on

HPCA Stadium
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಐಸಿಸಿ ಪುರುಷರ ಕ್ರಿಕೆಟ್ ವಿಶ್ವಕಪ್ ನ 13 ನೇ (ICC World Cup 2023) ಆವೃತ್ತಿಗೆ ಭಾರತ ಆತಿಥ್ಯ ವಹಿಸುತ್ತಿದೆ. ಇದೇ ಮೊದಲ ಬಾರಿಗೆ ಬಿಸಿಸಿಐ ಏಕಾಂಗಿಯಾಗಿ ಟೂರ್ನಿಯನ್ನು ಆಯೋಜಿಸುತ್ತಿದೆ.. ಈ ಹಿಂದೆ ಎರಡೆರಡು ದೇಶಗಳಿಗೆ ಅತಿಥ್ಯದ ಹಕ್ಕು ನೀಡಲಾಗುತ್ತಿತ್ತು. ಆದರೆ ಈ ಸಲ ಭಾರತವೊಂದರಲ್ಲೇ ಪೂರ್ತಿ ಟೂರ್ನಿ ನಡೆಯಲಿದೆ. ಬಿಸಿಸಿಐ ಕೂಡ ಟೂರ್ನಿ ಆಯೋಜನೆಗೆ ಸಂಪೂರ್ಣವಾಗಿ ಸಿದ್ಧತೆ ಮಾಡಿಕೊಂಡಿದೆ. ಶ್ರೀಮಂತ ಕ್ರಿಕೆಟ್​ ಸಂಸ್ಥೆಯಾಗಿರುವ ಬಿಸಿಸಿಐ ಟೂರ್ನಿಯ ಯಶಸ್ಸಿಗೆ ಅನೇಕ ಯೋಜನೆಗಳನ್ನು ಕೈಗೊಂಡಿದೆ. ಉದ್ಘಾಟನಾ ಕಾರ್ಯಕ್ರಮದಿಂದ ಹಿಡಿದು ಸಮಾರೋಪದ ತನಕ ವಿಶೇಷವಾಗಿ ಅಯೋಜಿಸಲು ಯೋಜನೆ ರೂಪಿಸಿಕೊಂಡಿದೆ.

ಭಾರತ ಮೊದಲೇ ಅಪ್ಪಟ ಕ್ರಿಕೆಟ್​ ಪ್ರೇಮಿಗಳ ದೇಶ. ಹೀಗಾಗಿ ಟೂರ್ನಿ ಭರ್ಜರಿಯಾಗಿ ನಡೆಯುವುದರಲ್ಲಿ ಯಾವುದೇ ಸಂಶಯ ಇಲ್ಲ. ಹೀಗಾಗಿ ಒಟ್ಟು 10 ತಾಣಗಳಲ್ಲಿ ಪಂದ್ಯಗಳನ್ನು ಆಯೋಜಿಸುವ ಮೂಲಕ ದೇಶದ ಬಹುತೇಕ ಪ್ರದೇಶಗಳ ಅಭಿಮಾನಿಗಳಿಗೆ ಕ್ರಿಕೆಟ್​ ಹಬ್ಬದ ರಸದೌತಣ ಉಣಬಡಿಸಲು ಬಿಸಿಸಿಐ ಮುಂದಾಗಿದೆ. ಹಾಗಾದರೆ ವಿಶ್ವ ಕಪ್​ ನಡೆಯುವ ಸ್ಟೇಡಿಯಮ್​ಗಳು ಯಾವುವು, ಅವುಗಳ ವಿಶೇಷತೆಗಳೇನು ಎಂಬುದನ್ನು ನೋಡೋಣ.

ನರೇಂದ್ರ ಮೋದಿ ಸ್ಟೇಡಿಯಮ್​ ಅಹಮದಾಬಾದ್​

ಗುಜರಾತ್​ನ ಅಹಮದಾಬಾದ್​ನಲ್ಲಿ ಈ ಕ್ರೀಡಾಂಗಣದ ವಿಶ್ವದ ಅತಿದೊಡ್ಡ ಕ್ರೀಡಾ ವೇದಿಕೆ. ಏಕ ಕಾಲಕ್ಕೆ 1.32 ಲಕ್ಷ ಮಂದಿ ಪಂದ್ಯ ವೀಕ್ಷಣೆ ಮಾಡಲು ಸಾಧ್ಯವಿದೆ. ಕ್ರಿಕೆಟ್​ ವಿಚಾರಕ್ಕೆ ಬಂದರೂ ವಿಶ್ವದ ಬೃಹತ್​ ಹಾಗೂ ಸುಸಜ್ಜಿತ ಸ್ಟೇಡಿಯಮ್​. ಇದು ಹಿಂದಿನ ಮೊಟೆರಾ ಸ್ಟೇಡಿಯಮ್ ಆಗಿತ್ತು. ಅಭಿವೃದ್ಧಿ ಬಳಿಕ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಹೆಸರು ಇಡಲಾಗಿದೆ. ಈ ಸ್ಟೇಡಿಯಮ್​ ಈ ಬಾರಿಯ ವಿಶ್ವ ಕಪ್​ನಲ್ಲಿ ಅತಿ ಹೆಚ್ಚು ಪಂದ್ಯಗಳಿಗೆ ಆತಿಥ್ಯ ವಹಿಸಲಿದೆ. ಆರಂಭಿಕ ಪಂದ್ಯ, ಪ್ಲೇಆಫ್​ ಪಂದ್ಯಗಳು ಹಾಗೂ ಫೈನಲ್ ಇಲ್ಲೇ ನಡೆಯಲಿವೆ.

2021ರಲ್ಲಿ ನವೀಕರಿಸಲಾದ 132,000 ಸಾಮರ್ಥ್ಯದ ಸ್ಥಳವು ಕ್ರಿಕೆಟ್​ ಇತಿಹಾಸಕ್ಕೆ ಹೊಸತೇನಲ್ಲ. ಮಾರ್ಚ್ 1987ರಲ್ಲಿ, ಸುನಿಲ್ ಗವಾಸ್ಕರ್ ಈ (ಹಿಂದಿನ ಸರ್ದಾರ್​ ವಲ್ಲಭಾಬಾಯ್​ ಪಟೇಲ್​) ಕ್ರೀಡಾಂಗಣದಲ್ಲಿ 10,000 ಟೆಸ್ಟ್ ರನ್​ಗಳ ಗಡಿದಾಟಿದ ವಿಶ್ವದ ಮೊದಲ ಬ್ಯಾಟರ್​ ಎಂಬ ಖ್ಯಾತಿ ಪಡೆದಿದ್ದು ಇಲ್ಲೇ. ಅಮೆರಿಕದ ಮಾಜಿ ರಾಷ್ಟ್ರಾಧ್ಯಕ್ಷ ಡೊನಾಲ್ಡ್​ ಟ್ರಂಪ್​ ಭಾರತಕ್ಕೆ ಬಂದಿದ್ದ ವೇಳೆ ಅವರು ಇದೇ ಸ್ಟೇಡಿಯಮ್​ನಿಂದ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ್ದರು.

ಕ್ರೀಡಾಂಗಣವು ಕಳೆದ ಆವೃತ್ತಿಯ ಐಪಿಎಲ್ ಫೈನಲ್​ಗೆ ಆತಿಥ್ಯ ವಹಿಸಿದೆ. 2011 ರಲ್ಲಿ, ಭಾರತ ವಿಶ್ವ ಕಪ್ ಗೆದ್ದಿತ್ತು. ಆ ವರ್ಷ ಈ ಸ್ಟೇಡಿಯಮ್​ನಲ್ಲಿ ನಡೆದ ಪಂದ್ಯದಲ್ಲಿ ಮಾಜಿ ಚಾಂಪಿಯನ್ ಆಸ್ಟ್ರೇಲಿಯಾ ತಂಡವನ್ನು ಸೆಮಿಫೈನಲ್​ನಲ್ಲಿ ಸೋಲಿಸಿದ್ದು ಇಲ್ಲೇ.

ಇಲ್ಲಿನ ಪಿಚ್​ ಆರಂಭದಲ್ಲಿ ವೇಗಿಗಳಿಗೆ ನೆರವಾಗುತ್ತದೆ. ಹಾಗೆಂದು ಸಂಪೂರ್ಣವಾಗಿ ವೇಗಿಗಳಿಗೆ ಮೀಸಲಾಗಿಲ್ಲ. ಸ್ಪಿನ್ನರ್​ಗಳಿಗೂ ಪ್ರಭಾವ ಬೀರಲು ಅವಕಾಶ ನೀಡುವ ಮೂಲಕ ಸಮತೋಲಿತ ಪಿಚ್ ಎನಿಸಿಕೊಂಡಿದೆ. ಬ್ಯಾಟರ್​ಗಳಿಗೂ ಇಲ್ಲಿ ಹಬ್ಬ ಮಾಡುವ ಎಲ್ಲ ಅವಕಾಶ ಉಂಟು.

ಎಂ.ಚಿನ್ನಸ್ವಾಮಿ ಕ್ರೀಡಾಂಗಣ, ಬೆಂಗಳೂರು

ಇದು ಕರ್ನಾಟಕದಲ್ಲಿರುವ ಏಕೈಕ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಮ್​. ಮಹಾನಗರದ ಹೃದಯಭಾಗದಲ್ಲಿಯೇ ಇರುವುದು ಇದರ ಹೆಗ್ಗಳಿಕೆ. ಜತೆಗೆ ಬಸ್​, ಟ್ಯಾಕ್ಸಿ ಹಾಗೂ ಮೆಟ್ರೊ ಸೇರಿದಂತೆ ಎಲ್ಲ ಸೇರಿದಂತೆ ಎಲ್ಲ ರೀತಿಯ ಸಾರಿಗೆ ವ್ಯವಸ್ಥೆಯನ್ನು ಒಳಗೊಂಡಿದೆ. ಈ ಕ್ರೀಡಾಂಗಣವು 34,000 ಪ್ರೇಕ್ಷಕರ ಸಾಮರ್ಥ್ಯವನ್ನು ಹೊಂದಿದೆ. ಚಿನ್ನಸ್ವಾಮಿ ಕ್ರೀಡಾಂಗಣವು ದೇಶದ ಅತ್ಯುತ್ತಮ ಒಳಚರಂಡಿ ವ್ಯವಸ್ಥೆಯನ್ನು ಹೊಂದಿದೆ. ಮಳೆ ಎಷ್ಟೇ ಜೋರಾಗಿ ಬಂದರೂ ಕೇವಲ 15 ನಿಮಿಷಗಳ ನಂತರ ಸಬ್ ಏರ್ ವ್ಯವಸ್ಥೆಯು ಮೂಲಕ ಸ್ಟೇಡಿಯಮ್ ಅನ್ನು ಆಟಕ್ಕೆ ಸಜ್ಜುಗೊಳಿಸಲು ಸಾಧ್ಯವಿದೆ. ಈ ವರ್ಷದ ಆರಂಭದಲ್ಲಿ ಐಪಿಎಲ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ ತಂಡಗಳು ಪಂದ್ಯ ಪ್ರಾರಂಭವಾಗುವ ಮೊದಲು ಭಾರಿ ಮಳೆ ಸುರಿದ ಹೊರತಾಗಿಯೂ ಪೂರ್ಣ ಪಂದ್ಯ ಆಡಿಸಲಾಗಿತ್ತು

ಇದನ್ನೂ ಓದಿ : ICC World Cup 2023: ವಿಶ್ವಕಪ್​ ಆಡುವ 10 ತಂಡಗಳ ಆಟಗಾರರ ಪಟ್ಟಿ

ಐದು ದಶಕಗಳಷ್ಟು ಹಳೆಯದಾದ ಈ ಕ್ರೀಡಾಂಗಣವು ವೆಸ್ಟ್ ಇಂಡೀಸ್ ಕ್ರಿಕೆಟ್ ದಂತಕಥೆ ವಿವಿಯನ್ ರಿಚರ್ಡ್ಸ್ ಅವರ ಚೊಚ್ಚಲ ಟೆಸ್ಟ್ ಪಂದ್ಯ ಮತ್ತು 1996 ರ ವಿಶ್ವ ಸುಂದರಿ ಸ್ಪರ್ಧೆಯಂತಹ ಪ್ರಮುಖ ಘಟನೆಗಳಿಗೆ ಆತಿಥ್ಯ ವಹಿಸಿದೆ. ಚಿನ್ನಸ್ವಾಮಿ ಐಪಿಎಲ್ (ಇಂಡಿಯನ್ ಪ್ರೀಮಿಯರ್ ಲೀಗ್) ತಂಡಗಳಲ್ಲಿ ಒಂದಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ನ ತವರು ಮೈದಾನವಾಗಿದೆ. ಸುಮಾರು 65 ಮೀಟರ್ ಬೌಂಡರಿ ಗಾತ್ರಗಳನ್ನು ಹೊಂದಿರುವ ಎಂ ಚಿನ್ನಸ್ವಾಮಿ ಕ್ರೀಡಾಂಗಣವು ಹಾಲಿ ಟೂರ್ನಿಯಲ್ಲಿ ಬಿಗ್ ಸ್ಕೋರ್​ ಪಂದ್ಯಗಳಿಗೆ ಸಾಕ್ಷಿಯಾಗುವುದರಲ್ಲಿ ಅನುಮಾನವೇ ಇಲ್ಲ. ಇಲ್ಲಿನ ಪಿಚ್​​ ಬ್ಯಾಟರ್​ಗಳ ಸ್ವರ್ಗ. ಬೌಲರ್​ಗಳಿಗೆ ದೊಡ್ಡ ನಿರೀಕ್ಷೆ ಹುಟ್ಟಿಸದು. ಆದರೂ ಸ್ಪಿನ್ನರ್​​ಗಳಿಗೆ ಸ್ವಲ್ಪ ಕೈ ಚಳಕ ತೋರಬಹುದು.

ಈ ಬಾರಿ ಐದು ಪಂದ್ಯಗಳಿಗೆ ಈ ಸ್ಟೇಡಿಯಮ್​ ಆತಿಥ್ಯ ವಹಿಸಲಿದೆ. ಆಸ್ಟ್ರೇಲಿಯಾ ವಿರುದ್ಧ ಪಾಕಿಸ್ತಾನ (20 ಅಕ್ಟೋಬರ್ 02:00 ಗಂಟೆಗೆ), ಇಂಗ್ಲೆಂಡ್ ವಿರುದ್ಧ ಶ್ರೀಲಂಕಾ (26 ಅಕ್ಟೋಬರ್ 02: 00 ಗಂಟೆಗೆ), ನ್ಯೂಜಿಲೆಂಡ್ ವಿರುದ್ಧ ಪಾಕಿಸ್ತಾನ (04 ನವೆಂಬರ್ 10:30 ಕ್ಕೆ), ನ್ಯೂಜಿಲೆಂಡ್ ವಿರುದ್ಧ ಶ್ರೀಲಂಕಾ (09 ನವೆಂಬರ್ ಮಧ್ಯಾಹ್ನ 02:00 ಕ್ಕೆ), ಭಾರತ-ನೆದರ್ಲ್ಯಾಂಡ್ಸ್ (12 ನವೆಂಬರ್ ಮಧ್ಯಾಹ್ನ 02:00 ಗಂಟೆಗೆ),

2011ರಲ್ಲಿ ಐರ್ಲೆಂಡ್​​ನ ಕೆವಿನ್ ಒ’ಬ್ರಿಯಾನ್ ಏಕದಿನ ವಿಶ್ವಕಪ್​ನಲ್ಲಿ ಕೇವಲ 50 ಎಸೆತಗಳಲ್ಲಿ ಅತಿ ವೇಗದ ಶತಕ ಬಾರಿಸಿದ್ದರು. ಈ ಕ್ರೀಡಾಂಗಣವು 2000ರಿಂದ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಗೆ ನೆಲೆಯಾಗಿದೆ.

ಎಂ.ಎ. ಚಿದಂಬರಂ ಕ್ರೀಡಾಂಗಣ, ಚೆನ್ನೈ

ಹಿಂದೂ ಮಹಾಸಾಗರದ ಪಕ್ಕದಲ್ಲಿರುವ ಎಂ.ಎ.ಚಿದಂಬರಂ ಕ್ರೀಡಾಂಗಣವು ಎಲ್ಲಾ ಸ್ಥಳಗಳಲ್ಲಿ ಅತ್ಯಂತ ಆರ್ದ್ರ ವಾತಾವರಣ ಹೊಂದಿರುವ ಕ್ರಿಕೆಟ್​ ಸ್ಟೇಡಿಯಮ್ ಆಗಿದೆ. 1952 ರಲ್ಲಿ ಭಾರತದ ನಾಯಕ ವಿಜಯ್ ಹಜಾರೆ ಅವರ ತಂಡವು ಡೊನಾಲ್ಡ್ ಕಾರ್ ಅವರ ನೇತೃತ್ವದ ಇಂಗ್ಲೆಂಡ್ ತಂಡವನ್ನು ಸೋಲಿಸುವ ಮೂಲಕ ಭಾರತವು ಟೆಸ್ಟ್ ಕ್ರಿಕೆಟ್​​ನಲ್ಲಿ ಮೊದಲ ಗೆಲುವನ್ನು ದಾಖಲಿಸಿದ ಕ್ರೀಡಾಂಗಣ ಇದು.

ಮರೀನಾ ಬೀಚ್​ನಿಂದ ಕೇವಲ ಎರಡು ಕಿಲೋಮೀಟರ್ ದೂರದಲ್ಲಿರುವ ಈ ಕ್ರೀಡಾಂಗಣ 38,200 ಪ್ರೇಕ್ಷಕರ ಸಾಮರ್ಥ್ಯ ಹೊಂದಿದೆ. 1986ರಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಮೊದಲ ಸಮಬಲ ಟೆಸ್ಟ್ ಪಂದ್ಯ ನಡೆದಿದ್ದು ಇಲ್ಲೇ.

ಚೆಪಾಕ್ ಕ್ರೀಡಾಂಗಣ ಎಂದೂ ಕರೆಯಲ್ಪಡುವ ಮುತ್ತಯ್ಯ ಅಣ್ಣಾಮಲೈ (ಎಂಎ) ಚಿದಂಬರಂ ಕ್ರೀಡಾಂಗಣಕ್ಕೆ ಬಿಸಿಸಿಐನ ಮಾಜಿ ಅಧ್ಯಕ್ಷ ಎಂ.ಎ.ಚಿದಂಬರಂ ಚೆಟ್ಟಿಯಾರ್ ಅವರ ಹೆಸರನ್ನು ಇಡಲಾಗಿದೆ. ಕೋಲ್ಕತ್ತಾದ ಈಡನ್ ಗಾರ್ಡನ್ಸ್ ನಂತರ ಇದು ಭಾರತದ ಎರಡನೇ ಅತ್ಯಂತ ಹಳೆಯ ಕ್ರಿಕೆಟ್ ಕ್ರೀಡಾಂಗಣವಾಗಿದೆ. ಎಂಎ ಚಿದಂಬರಂ ಕ್ರೀಡಾಂಗಣವು ಎರಡನೇ ಅತ್ಯಂತ ಯಶಸ್ವಿ ಮತ್ತು ಅತ್ಯಂತ ಜನಪ್ರಿಉ ಐಪಿಎಲ್ (ಇಂಡಿಯನ್ ಪ್ರೀಮಿಯರ್ ಲೀಗ್) ತಂಡವಾದ ಚೆನ್ನೈ ಸೂಪರ್ ಕಿಂಗ್ಸ್ನ ತವರು ಮೈದಾನವಾಗಿದೆ. ಇದು ಮುಂಬರುವ ವಿಶ್ವಕಪ್ ನಲ್ಲಿ 5 ಪಂದ್ಯಗಳಿಗೆ ಆತಿಥ್ಯ ವಹಿಸಲಿದೆ.

ಭಾರತ-ಆಸ್ಟ್ರೇಲಿಯಾ (08 ಅಕ್ಟೋಬರ್ ಮಧ್ಯಾಹ್ನ 02:00 ಕ್ಕೆ), ಬಾಂಗ್ಲಾದೇಶ ವಿರುದ್ಧ ನ್ಯೂಜಿಲೆಂಡ್ (13 ಅಕ್ಟೋಬರ್ ಮಧ್ಯಾಹ್ನ 02:00 ಗಂಟೆಗೆ), ನ್ಯೂಜಿಲೆಂಡ್ ವಿರುದ್ಧ ಅಫ್ಘಾನಿಸ್ತಾನ (18 ಅಕ್ಟೋಬರ್ ಮಧ್ಯಾಹ್ನ 02:00 ಕ್ಕೆ), ಅಫ್ಘಾನಿಸ್ತಾನ ವಿರುದ್ಧ ಪಾಕಿಸ್ತಾನ (23 ಅಕ್ಟೋಬರ್ ಮಧ್ಯಾಹ್ನ 02:00 ಕ್ಕೆ), ಪಾಕಿಸ್ತಾನ ವಿರುದ್ಧ ದಕ್ಷಿಣ ಆಫ್ರಿಕಾ (27 ಅಕ್ಟೋಬರ್ ಮಧ್ಯಾಹ್ನ 02:00 ಕ್ಕೆ).

ಇದು ಸ್ಪಿನ್ ಬೌಲರ್​ಗಳ ಸ್ವರ್ಗ. ಇಲ್ಲಿ ಸ್ಪಿನ್ನರ್​ಗಳನ್ನು ಎದುರಿಸಲು ಬ್ಯಾಟ್ಸಮನ್​ಗಳು ಹೆದರುತ್ತಾರೆ. ಇಲ್ಲಿಯೂ ಸ್ಪರ್ಧಾತ್ಮಕ ಪಂದ್ಯಗಳು ನಡೆಯುತ್ತವೆ . ದೊಡ್ಡ ಸ್ಕೋರ್​​ನ ಪಂದ್ಯಗಳಿಗೆ ಆಸ್ಪದವಿಲ್ಲ.

ಅರುಣ್ ಜೇಟ್ಲಿ ಕ್ರೀಡಾಂಗಣ, ದೆಹಲಿ

ಭಾರತದ ರಾಜಧಾನಿಯಲ್ಲಿರುವ ಈ ಸ್ಟೇಡಿಯಯಮ್​ ದೇಶದ ಅತ್ಯಂತ ಐತಿಹಾಸಿಕ ಕ್ರಿಕೆಟ್​ ತಾಣಗಳಲ್ಲಿ ಒಂದಾಗಿದೆ. 2005ರಲ್ಲಿ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಸಚಿನ್ ತೆಂಡೂಲ್ಕರ್ 35ನೇ ಶತಕ ಬಾರಿಸುವ ಮೂಲಕ ಸುನಿಲ್ ಗವಾಸ್ಕರ್ ಅವರ ದಾಖಲೆಯನ್ನು ಮುರಿದಿದ್ದು ಇಲ್ಲೆ. ಕ್ರೀಡಾಂಗಣವು ಈ ಹಿಂದೆ ನಿಧಾನಗತಿಯ ಪಿಚ್​ಗಳನ್ನು ಹೊಂದಿತ್ತು. ಆದರೆ ಸ್ಟೇಡಿಯಮ್​ ನವೀಕರಣದ ಬಳಿಕ ದೊಡ್ಡ ಸ್ಕೋರಿಂಗ್ ಪಂದ್ಯಗಳು ನಡೆಯುತ್ತಿವೆ.

ಮೂಲತಃ 1883 ರಲ್ಲಿ ಫಿರೋಜ್ ಷಾ ಕೋಟ್ಲಾ ಕ್ರೀಡಾಂಗಣವಾಗಿ ಸ್ಥಾಪಿಸಲಾಯಿತು. ಹತ್ತಿರದ ಕೋಟ್ಲಾ ಕೋಟೆಯ ಹೆಸರನ್ನು ಇಡಲಾಗಿದೆ, ಇದು ಕೋಲ್ಕತ್ತಾದ ಈಡನ್ ಗಾರ್ಡನ್ಸ್ ನಂತರ ಭಾರತದ ಎರಡನೇ ಅತ್ಯಂತ ಹಳೆಯ ಸಕ್ರಿಯ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ. ಸೆಪ್ಟೆಂಬರ್ 12, 2019 ರಂದು, ಮಾಜಿ ಡಿಡಿಸಿಎ ಅಧ್ಯಕ್ಷ ಮತ್ತು ಹಣಕಾಸು ಸಚಿವ ಅರುಣ್ ಜೇಟ್ಲಿ ಅವರ ನೆನಪಿಗಾಗಿ ಕ್ರೀಡಾಂಗಣಕ್ಕೆ ಮರುನಾಮಕರಣ ಮಾಡಲಾಯಿತು. 2017 ರ ಹೊತ್ತಿಗೆ, ಭಾರತೀಯ ರಾಷ್ಟ್ರೀಯ ಕ್ರಿಕೆಟ್ ತಂಡವು 28 ವರ್ಷಗಳಿಂದ ಈ ಮೈದಾನದಲ್ಲಿ ಟೆಸ್ಟ್ ಪಂದ್ಯವನ್ನು ಮತ್ತು 10 ವರ್ಷಗಳಿಗಿಂತ ಹೆಚ್ಚು ಕಾಲ ಏಕದಿನ ಪಂದ್ಯವನ್ನು ಸೋತಿಲ್ಲ.

ಇಲ್ಲಿ ಈ ಬಾರಿ ಐದು ಪಂದ್ಯಗಳು ನಡೆಯಲಿವೆ. ದಕ್ಷಿಣ ಆಫ್ರಿಕಾ ವಿರುದ್ಧ ಶ್ರೀಲಂಕಾ (07 ಅಕ್ಟೋಬರ್ 02:00 ಗಂಟೆಗೆ), ಭಾರತ-ಅಫ್ಘಾನಿಸ್ತಾನ, (11 ಅಕ್ಟೋಬರ್ 02:00 ಗಂಟೆಗೆ), ಅಫ್ಘಾನಿಸ್ತಾನ ವಿರುದ್ಧ ಇಂಗ್ಲೆಂಡ್ (15 ಅಕ್ಟೋಬರ್ ಮಧ್ಯಾಹ್ನ 02:00 ಗಂಟೆಗೆ), ಆಸ್ಟ್ರೇಲಿಯಾ ವಿರುದ್ಧ ನೆದರ್ಲ್ಯಾಂಡ್ಸ್ (25 ಅಕ್ಟೋಬರ್ ಮಧ್ಯಾಹ್ನ 02:00 ಗಂಟೆಗೆ), ಬಾಂಗ್ಲಾದೇಶ ವಿರುದ್ಧ ಶ್ರೀಲಂಕಾ (06 ನವೆಂಬರ್ ಮಧ್ಯಾಹ್ನ 02:00 ಗಂಟೆಗೆ).

ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣ, ಧರ್ಮಶಾಲಾ

ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂ ದೇಶದ ಹೊಸ ಸ್ಟೇಡಿಯಂಗಳಲ್ಲಿ ಒಂದಾಗಿದೆ. 2013 ರಲ್ಲಿ ಇಂಗ್ಲೆಂಡ್ ವಿರುದ್ಧದ ಏಕದಿನ ಪಂದ್ಯದ ಬಳಿಕ ಅಂತರಾಷ್ಟ್ರೀಯ ಸ್ಟೇಡಿಯಮ್​ ಆಗಿ ಹೊರಹೊಮ್ಮಿತು 64 ಮೀಟರ್ ಬೌಂಡರಿಯೊಂದಿಗೆ ಇಲ್ಲಿ ದೊಡ್ಡ ಮೊತ್ತ ಗ್ಯಾರಂಟಿ. ಇದು ಬ್ಯಾಟರ್​ಗಳಿಗೆ ಅನುಕೂಲಕರ. ಸ್ವಲ್ಪ ಮಟ್ಟಿಗೆ ಸ್ಪಿನ್ನರ್​ಗಳಿಗೆ.

ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂ ಸಮುದ್ರ ಮಟ್ಟದಿಂದ 1,457 ಮೀಟರ್ ಎತ್ತರದಲ್ಲಿದೆ. ಎಚ್ಪಿಸಿಎ ಕ್ರೀಡಾಂಗಣವು ವಿಶ್ವದ ಅತ್ಯಂತ ಸುಂದರವಾದ ಒಂದಾಗಿದೆ. 2023ರ ಏಕದಿನ ವಿಶ್ವಕಪ್ ಟೂರ್ನಿಗೆ 5 ಪಂದ್ಯಗಳು ಆತಿಥ್ಯ ವಹಿಸಲಿವೆ. ಇಲ್ಲಿ ಐದು ಪಂದ್ಯಗಳು ನಡೆಯಲಿವೆ.

ಅಫ್ಘಾನಿಸ್ತಾನ ವಿರುದ್ಧ ಬಾಂಗ್ಲಾದೇಶ (07 ಅಕ್ಟೋಬರ್ 10:30 ಕ್ಕೆ), ಬಾಂಗ್ಲಾದೇಶ ವಿರುದ್ಧ ಇಂಗ್ಲೆಂಡ್ (10 ಅಕ್ಟೋಬರ್ 10:30 ಕ್ಕೆ ಬೆಳಿಗ್ಗೆ 10:30), ನೆದರ್ಲ್ಯಾಂಡ್ಸ್ ವಿರುದ್ಧ ದಕ್ಷಿಣ ಆಫ್ರಿಕಾ (17 ಅಕ್ಟೋಬರ್ ಮಧ್ಯಾಹ್ನ 02:00 ಕ್ಕೆ), ಭಾರತ-ನ್ಯೂಜಿಲೆಂಡ್ (22 ಅಕ್ಟೋಬರ್ ಮಧ್ಯಾಹ್ನ 02:00 ಗಂಟೆಗೆ), ಆಸ್ಟ್ರೇಲಿಯಾ ವಿರುದ್ಧ ನ್ಯೂಜಿಲೆಂಡ್ (28 ಅಕ್ಟೋಬರ್ 10:30 ಕ್ಕೆ)

ಈಡನ್ ಗಾರ್ಡನ್ಸ್, ಕೋಲ್ಕತಾ

ನರೇಂದ್ರ ಮೋದಿ ಕ್ರೀಡಾಂಗಣದ ನವೀಕರಣಕ್ಕೆ ಮೊದಲು, ಈಡನ್ ಗಾರ್ಡನ್ಸ್ 68,000 ಪ್ರೇಕ್ಷಕರ ಸಾಮರ್ಥ್ಯದೊಂದಿಗೆ ಭಾರತದ ಅತಿದೊಡ್ಡ ಸ್ಟೇಡಿಯಮ್​ ಎಂಬ ಹೆಗ್ಗಳಿಕೆ ಮಾಡಿತ್ತು. ಇದು 1987 ರಲ್ಲಿ ವಿಶ್ವಕಪ್ ಫೈನಲ್​ಗೆ ಆತಿಥ್ಯ ವಹಿಸಿದ ಮೊದಲ ಕ್ರೀಡಾಂಗಣ ಇದಾಗಿದೆ. ಹೂಗ್ಲಿ ನದಿಯ ಪಕ್ಕದಲ್ಲಿರುವ ಉತ್ಸಾಹಭರಿತ ಪಿಚ್ ಮತ್ತು ಗಾಳಿಯ ಪರಿಸ್ಥಿತಿಗಳು ಕೆಲವು ಅದ್ಭುತ ಏಕದಿನ ಪಂದ್ಯಗಳಿಗೆ ಸಾಕ್ಷಿಯಾಗಲಿದೆ.

1864 ರಲ್ಲಿ ನಿರ್ಮಿಸಲಾದ ಇದು ಭಾರತದ ಅತ್ಯಂತ ಹಳೆಯ ಕ್ರಿಕೆಟ್ ಕ್ರೀಡಾಂಗಣವಾಗಿದೆ. ಆಗಾಗ್ಗೆ “ಭಾರತೀಯ ಕ್ರಿಕೆಟ್​​ನ ಮೆಕ್ಕಾ” ಎಂದು ಕರೆಯಲ್ಪಡುವ ಈಡನ್ ಗಾರ್ಡನ್ಸ್ ದೇಶದ ಎರಡನೇ ಅತಿದೊಡ್ಡ ಕ್ರಿಕೆಟ್ ಕ್ರೀಡಾಂಗಣವಾಗಿದೆ. ವಿಶ್ವದ ಮೂರನೇ ಅತಿದೊಡ್ಡ ಕ್ರೀಡಾಂಗಣವೂ ಹೌದು. ಇದು 68,000 ಪ್ರೇಕ್ಷಕರನ್ನು ಹಿಡಿದಿಡುವ ಸಾಮರ್ಥ್ಯವನ್ನು ಹೊಂದಿದೆ. ಇದು ಬೌಲಿಂಗ್​​ ಹಾಗೂ ಬ್ಯಾಟಿಂಗ್​ಗೆ ಸಮತೋಲಿತವಾಗಿದೆ. ಭಾರತದ ಪಾಲಿಗೂ ನೆಚ್ಚಿನ ಕ್ರೀಡಾಂಗಣ,

ಇದು ಐದು ಪಂದ್ಯಗಳಿಗೆ ಆತಿಥ್ಯ ವಹಿಸಲಿದೆ. ಬಾಂಗ್ಲಾದೇಶ ವಿರುದ್ಧ ನೆದರ್ಲ್ಯಾಂಡ್ಸ್ (28 ಅಕ್ಟೋಬರ್ 02:00 ಗಂಟೆಗೆ), ಬಾಂಗ್ಲಾದೇಶ ವಿರುದ್ಧ ಪಾಕಿಸ್ತಾನ (31 ಅಕ್ಟೋಬರ್ ಮಧ್ಯಾಹ್ನ 02:00 ಗಂಟೆಗೆ), ಭಾರತ-ದಕ್ಷಿಣ ಆಫ್ರಿಕಾ (05 ನವೆಂಬರ್ ಮಧ್ಯಾಹ್ನ 02:00 ಕ್ಕೆ), ಇಂಗ್ಲೆಂಡ್ ವಿರುದ್ಧ ಪಾಕಿಸ್ತಾನ (11 ನವೆಂಬರ್ ಮಧ್ಯಾಹ್ನ 02:00 ಗಂಟೆಗೆ) ಸೆಮಿಫೈನಲ್ (16 ನವೆಂಬರ್ ಮಧ್ಯಾಹ್ನ 02:00 ಗಂಟೆಗೆ).

ವಾಂಖೆಡೆ ಕ್ರೀಡಾಂಗಣ, ಮುಂಬೈ

ಭಾರತದ ವೈವಿಧ್ಯತೆಯ ನಗರವಾದ ಮುಂಬೈನಲ್ಲಿರುವ ವಾಂಖೆಡೆ ಕ್ರೀಡಾಂಗಣವು ಅಪ್ರತಿಮ ಅಂತರರಾಷ್ಟ್ರೀಯ ಕ್ರಿಕೆಟ್ ಸ್ಥಳವಾಗಿದೆ. ಇದು ಐಸಿಸಿ ಕ್ರಿಕೆಟ್ ವಿಶ್ವಕಪ್ 2023 ರ ಸೆಮಿಫೈನಲ್ ಪಂದ್ಯಕ್ಕೂ ಆತಿಥ್ಯ ವಹಿಸಲಿದೆ. ಇದು 2011 ರ ಕ್ರಿಕೆಟ್ ವಿಶ್ವಕಪ್​​ಗೆ ಮೊದಲು ಗಣನೀಯ ನವೀಕರಣಕ್ಕೆ ಒಳಗಾಗಿದೆ ಇದು 33,108 ಆಸನ ಸಾಮರ್ಥ್ಯ ಹೊಂದಿದೆ. ಹಿಂದೆ ಈ ಪಿಚ್​​ 45,000 ಪ್ರೇಕ್ಷಕರ ಸಾಮರ್ಥ್ಯ ಹೊಂದಿತ್ತು. ಆದರೆ, ನವೀಕರಣದ ಬಳಿಕ ಆಸನ ಸಂಖ್ಯೆಗಳು ಕಡಿಮೆಯಾದವು.

ವಿಶಿಷ್ಟವಾದ ಕೆಂಪು-ಮಣ್ಣಿನ ಪಿಚ್ 1974 ರಲ್ಲಿ ನಿರ್ಮಾಣಗೊಂಡಿದ್ದು. ಕ್ರಿಕೆಟ್​​ನಲ್ಲಿ ಕೆಲವು ಸ್ಮರಣೀಯ ಸಾಧನೆಗಳನ್ನು ಕಂಡಿದೆ. ತನ್ನ ಇತಿಹಾಸದುದ್ದಕ್ಕೂ, ಈ ಕ್ರೀಡಾಂಗಣವು ಹಲವಾರು ಪ್ರತಿಷ್ಠಿತ ಕ್ರಿಕೆಟ್ ಮುಖಾಮುಖಿಗಳಿಗೆ ವೇದಿಕೆಯಾಗಿದೆ.. 2011ರ ಕ್ರಿಕೆಟ್ ವಿಶ್ವಕಪ್​ ಫೈನಲ್ ನಡೆದಿದ್ದು ಇಲ್ಲೇ ಹಾಗೂ ಧೋನಿ ವಿನ್ನಿಂಗ್ ಸಿಕ್ಸರ್ ಹೊಡೆದಿದ್ದು ಇದೇ ಮೈದಾನದಲ್ಲಿದೆ.

ಈ ಕ್ರೀಡಾಂಗಣವು ಕ್ರಿಕೆಟ್​ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ ಅಂತರರಾಷ್ಟ್ರೀಯ ವೃತ್ತಿಜೀವನಕ್ಕೆ ತಳಪಾಯ ಹಾಕಿದ ಜಾಗ. ಇದು ಸಮತೋಲಿತ ಪಿಚ್​. ಬೌಲಿಂಗ್​ ಹಾಗೂ ಬ್ಯಾಟಿಂಗ್ ಎರಡಕ್ಕೂ ನೆರವಾಗುತ್ತದೆ. ಆದರೆ, ಇಬ್ಬನಿ ಪರಿಣಾಮ ಇಲ್ಲಿ ಹೆಚ್ಚಿರುತ್ತದೆ.

ಎಂಸಿಎ ಇಂಟರ್​ನ್ಯಾಷನಲ್ ಸ್ಟೇಡಿಯಂ, ಪುಣೆ

37,000 ಕ್ಕೂ ಹೆಚ್ಚು ಆಸನ ಸಾಮರ್ಥ್ಯ ಹೊಂದಿರುವ ಎಂಸಿಎ ಕ್ರೀಡಾಂಗಣವು ಮುಂಬರುವ ವಿಶ್ವಕಪ್​​ನ 5 ಪಂದ್ಯಗಳಿಗೆ ಆತಿಥ್ಯ ವಹಿಸಲಿದೆ. 2007 ರಲ್ಲಿ ಪುಣೆ-ಮುಂಬೈ ಎಕ್ಸ್​ಪ್ರೆಸ್​ ವೇ ಸಮೀಪವಿರು ಈ ಸ್ಟೇಡಿಯಮ್ ಉದ್ಘಾಟನೆಗೊಂಡಿತು. ಇಂಗ್ಲಿಷ್ ವಾಸ್ತುಶಿಲ್ಪಿ ಮೈಕೆಲ್ ಹಾಪ್ಕಿನ್ಸ್ ಇದನ್ನು ನಿರ್ಮಿಸಿದ “ಆಳವಾದ ಬಟ್ಟಲಿನಂತೆ” ನಂತೆ ವಿನ್ಯಾಸಗೊಳಿಸಲಾಗಿದೆ. ಈ ಸ್ಟೇಡಿಯಮ್​ ಐದು ಪಂದ್ಯಗಳಿಗೆ ಆತಿಥ್ಯ ವಹಿಸಲಿದೆ. ಭಾರತ-ಬಾಂಗ್ಲಾದೇಶ (19 ಅಕ್ಟೋಬರ್ 02:00 ಗಂಟೆಗೆ), ಅಫ್ಘಾನಿಸ್ತಾನ ವಿರುದ್ಧ ಶ್ರೀಲಂಕಾ (30 ಅಕ್ಟೋಬರ್ ಮಧ್ಯಾಹ್ನ 02:00 ಗಂಟೆಗೆ), ನ್ಯೂಜಿಲೆಂಡ್ ವಿರುದ್ಧ ದಕ್ಷಿಣ ಆಫ್ರಿಕಾ (01 ನವೆಂಬರ್ ಮಧ್ಯಾಹ್ನ 02:00 ಗಂಟೆಗೆ), ಇಂಗ್ಲೆಂಡ್ ವಿರುದ್ಧ ನೆದರ್ಲ್ಯಾಂಡ್ಸ್ (08 ನವೆಂಬರ್ ಮಧ್ಯಾಹ್ನ 02:00 ಗಂಟೆಗೆ), ಆಸ್ಟ್ರೇಲಿಯಾ ವಿರುದ್ಧ ಬಾಂಗ್ಲಾದೇಶ (11 ನವೆಂಬರ್ 10:30 ಕ್ಕೆ). ಇದು ಕೂಡ ಸಮತೋಲಿತ ಪಿಚ್. ಮುಂಬಯಿ ರೀತಿ ಇಬ್ಬನಿ ಪರಿಣಾಮ ಇಲ್ಲ. ಆದರೆ, ಸ್ಪಿನ್ನರ್​ಗಳಿಗೆ ಹೆಚ್ಚು ಅನುಕೂಲಕರ.

ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣ, ಹೈದರಾಬಾದ್

ಹೈದರಾಬಾದ್​​ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಮೂರ ವಿಶ್ವಕಪ್ ಪಂದ್ಯಗಳು ನಡೆಯಲಿವೆ. ಭಾರತದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಹೆಸರಿನಲ್ಲಿರುವ ಈ ಕ್ರೀಡಾಂಗಣವು 15 ಎಕರೆ ಪ್ರದೇಶದಲ್ಲಿ ವ್ಯಾಪಿಸಿದೆ. 55,000 ಆಸನ ಸಾಮರ್ಥ್ಯ ಇಲ್ಲಿದೆ. ಈ ಸ್ಟೇಡಿಯಮ್​ನಲ್ಲಿ ತಾಪಮಾನ ಹೆಚ್ಚಿರುತ್ತದೆ. ಬಿಗ್ ಸ್ಕೋರ್ ಮ್ಯಾಚ್​ಗಳನ್ನು ಆಯೋಜಿಸಲು ಸಾಧ್ಯವಿದೆ.

2005 ರಲ್ಲಿ ರಾಜೀವ್ ಗಾಂಧಿ ಅಂತರರಾಷ್ಟ್ರೀಯ ಕ್ರೀಡಾಂಗಣವನ್ನು ನಿರ್ಮಿಸುವ ಮೊದಲು, ಹೈದರಾಬಾದ್​ನ ಎಲ್ಲಾ ಅಂತಾರರಾಷ್ಟ್ರೀಯ ಕ್ರಿಕೆಟ್ ಪಂದ್ಯಗಳನ್ನು ಲಾಲ್ ಬಹದ್ದೂರ್ ಶಾಸ್ತ್ರಿ ಕ್ರೀಡಾಂಗಣದಲ್ಲಿ ಆಡಲಾಗುತ್ತಿತ್ತು. 18 ವರ್ಷಗಳಲ್ಲಿ ಕ್ರೀಡಾಂಗಣದ ವ್ಯಾಪ್ತಿ ಗಗನಕ್ಕೇರಿದೆ. ನೆದರ್ಲ್ಯಾಂಡ್ಸ್ ವಿರುದ್ಧ ಪಾಕಿಸ್ತಾನ (06 ಅಕ್ಟೋಬರ್ ಮಧ್ಯಾಹ್ನ 02:00 ಗಂಟೆಗೆ) , ನೆದರ್ಲ್ಯಾಂಡ್ಸ್ ವಿರುದ್ಧ ನ್ಯೂಜಿಲೆಂಡ್ (09 ಅಕ್ಟೋಬರ್ 02:00 ಗಂಟೆಗೆ) ಪಾಕಿಸ್ತಾನ ವಿರುದ್ಧ ಶ್ರೀಲಂಕಾ ,(10 ಅಕ್ಟೋಬರ್ 02:00 ಗಂಟೆಗೆ) ಇಲ್ಲಿ ಭಾರತ ತಂಡಕ್ಕೆ ಯಾವುದೇ ಪಂದ್ಯಗಳು ಇಲ್ಲ.

ಭಾರತ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಏಕನಾ ಕ್ರಿಕೆಟ್ ಕ್ರೀಡಾಂಗಣ, ಲಖನೌ

2017 ರಲ್ಲಿ ನಿರ್ಮಿಸಲಾದ ಲಕ್ನೋದ ಕ್ರಿಕೆಟ್ ಕ್ರೀಡಾಂಗಣವು ಈ ಹಿಂದೆ ಹೆಚ್ಚಿನ ಸಂಖ್ಯೆಯ ಅಂತರರಾಷ್ಟ್ರೀಯ ಪಂದ್ಯಗಳಿಗೆ ಆತಿಥ್ಯ ವಹಿಸಿಲ್ಲ. ಆದರೆ ಐಸಿಸಿ ಪುರುಷರ ಕ್ರಿಕೆಟ್ ವಿಶ್ವಕಪ್ 2023 ಕ್ಕೆ ಪರಿಸ್ಥಿತಿಗಳು ಪೂರಕವಾಗಿವೆ. ಐಪಿಎಲ್​ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಕ್ರೀಡಾಂಗಣವನ್ನು ತಮ್ಮ ತವರು ಸ್ಥಳವೆಂದು ಹೇಳಿಕೊಂಡಿದೆ. ಅಕ್ಟೋಬರ್ 12 ರಂದು ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಪಂದ್ಯಕ್ಕೆ ವೇದಿಕೆ ಸಿದ್ಧವಾಗಲಿದೆ, ಅಲ್ಲಿ ಕ್ರೀಡಾಂಗಣವು ತನ್ನ ಮೊದಲ ವಿಶ್ವಕಪ್ ಪಂದ್ಯಕ್ಕೆ ಆತಿಥ್ಯ ವಹಿಸಲಿದೆ. ಐಪಿಎಲ್​ ಪಂದ್ಯಗಳನ್ನು ವೀಕ್ಷಿಸಿ ಹೇಳುವುದಾದರೆ ನಿಧಾನಗತಿಯ ಪಿಚ್​ ಇದು. ಸಾಧಾರಣ ಸ್ಕೋರ್ ಬಾರಿಸಲೂ ಇಲ್ಲಿ ಸಾಧ್ಯವಾಗುವುದಿಲ್ಲ. ಬೌಲರ್​ಗಳಿಗೆ ಪರಾಕ್ರಮ ಮೆರೆಯಲೂ ಸೂಕ್ತ ಜಾಗ. ಮೈದಾನದಲ್ಲಿ ಪ್ಯಾಚ್​ಗಳು ಹೆಚ್ಚಿವೆ. ಇದು ಭಾರತದ ಐದನೇ ಅತಿದೊಡ್ಡ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣವಾಗಿದ್ದು, 50,000 ಪ್ರೇಕ್ಷಕರನ್ನು ಹಿಡಿದಿಡುವ ಸಾಮರ್ಥ್ಯವನ್ನು ಹೊಂದಿದೆ.

ಇಲ್ಲಿ ಐದು ವಿಶ್ವ ಕಪ್​ ಪಂದ್ಯಗಳು ನಡೆಯಲಿವೆ. ಆಸ್ಟ್ರೇಲಿಯಾ ವಿರುದ್ಧ ದಕ್ಷಿಣ ಆಫ್ರಿಕಾ (02 ಅಕ್ಟೋಬರ್ ಮಧ್ಯಾಹ್ನ 02:00 ಕ್ಕೆ), ಆಸ್ಟ್ರೇಲಿಯಾ ವಿರುದ್ಧ ಶ್ರೀಲಂಕಾ (16 ಅಕ್ಟೋಬರ್ 02:00 ಗಂಟೆಗೆ), ನೆದರ್ಲ್ಯಾಂಡ್ಸ್ ವಿರುದ್ಧ ಶ್ರೀಲಂಕಾ (21 ಅಕ್ಟೋಬರ್ ಮಧ್ಯಾಹ್ನ 02:00 ಗಂಟೆಗೆ), ಭಾರತ-ಇಂಗ್ಲೆಂಡ್ (29 ಅಕ್ಟೋಬರ್ ಮಧ್ಯಾಹ್ನ 02:00 ಕ್ಕೆ), ಅಫ್ಘಾನಿಸ್ತಾನ ವಿರುದ್ಧ ನೆದರ್ಲ್ಯಾಂಡ್ಸ್ (03 ನವೆಂಬರ್ ಮಧ್ಯಾಹ್ನ 02:00 ಗಂಟೆಗೆ).

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Rohit Sharma: ವಿಶ್ವಕಪ್​ ಗೆದ್ದು ಬಂದ ರೋಹಿತ್​ಗೆ ಸರ್​ಪ್ರೈಸ್​ ಕೊಟ್ಟ ಬಾಲ್ಯದ ಗೆಳೆಯರು; ವಿಡಿಯೊ ವೈರಲ್​

Rohit Sharma: ಐತಿಹಾಸಿಕ ಗೆಲುವಿನ ಬಳಿಕ ನಾಯಕ ರೋಹಿತ್​ ಶರ್ಮ(Rohit Sharma) ಅವರು ಬಾರ್ಬಡೋಸ್​ ಕ್ರೀಡಾಂಗಣದ ಪಿಚ್​ನಲ್ಲಿನ ಮಣ್ಣನ್ನು ತಿಂದು ಧನ್ಯತಾ ಭಾವ ವ್ಯಕ್ತಪಡಿಸಿದ್ದರು. ಈ ವಿಡಿಯೊ ಕೂಡ ವೈರಲ್​ ಆಗಿತ್ತು.

VISTARANEWS.COM


on

Rohit Sharma
Koo

ಮುಂಬಯಿ: ಟಿ20 ವಿಶ್ವಕಪ್(T20 World Cup 2024)​ ಗೆದ್ದು ತವರಿಗೆ ಮರಳಿದ ಟೀಮ್​ ಇಂಡಿಯಾದ ನಾಯಕ ರೋಹಿತ್​ ಶರ್ಮಗೆ(Rohit Sharma) ತಮ್ಮ ಬಾಲ್ಯದ ಗೆಳೆಯರು(Rohit Sharma’s childhood friends) ವಿಶೇಷವಾಗಿ ವೆಲ್​ಕಮ್​ ಮಾಡಿದ್ದಾರೆ. ಈ ವಿಡಿಯೊ ವೈರಲ್​ ಆಗಿದೆ. ಗುರುವಾರ  ಮುಂಬೈಯಲ್ಲಿ ಟಿ20 ವಿಶ್ವಕಪ್(T20 World Cup) ಗೆದ್ದ ಭಾರತ ತಂಡದ ಆಟಗಾರರಿಗೆ ಭರ್ಜರಿಯಾಗಿ ಅಭಿನಂದಿಸಲಾಗಿತ್ತು. ಎಲ್ಲ ಕಾರ್ಯಕ್ರಮ ಮುಗಿದ ಬಳಿಕ ರೋಹಿತ್​ ಅವರು ಬಾಲ್ಯದ ಗೆಳೆಯನ್ನು ಭೇಟಿ ಮಾಡಿದರು. ಈ ವೇಳೆ ಗೆಳೆಯರು ಸೆಲ್ಯೂಟ್​ ಹೊಡೆದು, ರೋಹಿತ್​ ಅವರನ್ನು ಭುಜದ ಮೇಲೆ ಹೊತ್ತುಕೊಂಡು ಸಂಭ್ರಮಿಸಿದರು. ಈ ವೇಳೆ​ ಟೀಮ್​ ಇಂಡಿಯಾ ಆಟಗಾರ, ರೋಹಿತ್​ ಅವರ ಆಪ್ತರಾಗಿರುವ ತಿಲಕ್​ ವರ್ಮಾ ಕೂಡ ಜತೆಗಿದ್ದರು. ಇವರು ಕೂಡ ಸೆಲ್ಯೂಟ್​ ಹೊಡೆದು ರೋಹಿತ್​ಗೆ ಗೌರವಿಸಿದ್ದಾರೆ.

ಬಾರ್ಬಡೋಸ್‌ನಿಂದ ಬುಧವಾರ ಬೆಳಿಗ್ಗೆ ಪ್ರಯಾಣ ಆರಂಭಿಸಿದ್ದ ಭಾರತ ತಂಡವು ಗುರುವಾರ ಬೆಳಗ್ಗೆ ನವದೆಹಲಿಗೆ ಬಂದಿಳಿದಿತ್ತು. ಪ್ರಧಾನಿ ನರೇಂದ್ರ ಮೋದಿಯವರ ಆತಿಥ್ಯ ಸ್ವೀಕರಿಸಿದ ನಂತರ ಮಧ್ಯಾಹ್ನ 3.42ಕ್ಕೆ ಮುಂಬೈಗೆ ಪ್ರಯಾಣ ಬೆಳೆಸಿತ್ತು. ಸಂಜೆ ಐದು ಗಂಟೆಯ ನಂತರ ವಿಮಾನವು ಮುಂಬೈ ವಿಮಾನ ನಿಲ್ದಾಣಕ್ಕೆ ಬಂದಿಳಿದಿತ್ತು. ಸಾಗರೋಪಾದಿಯಲ್ಲಿ ಸೇರಿದ್ದ ಅಭಿಮಾನಿಗಳ ಗುಂಪಿನಲ್ಲಿ ಆಟಗಾರರು ತೆರೆದ ಬಸ್​ನಲ್ಲಿ ವಿಶ್ವಕಪ್​ ಟ್ರೋಫಿಯೊಂದಿಗೆ ರೋಡ್ ಶೋ ನಡೆಸಿದ್ದರು. ದಕ್ಷಿಣ ಮುಂಬೈನ ಮರೀನ್ ಡ್ರೈವ್‌ ಪ್ರದೇಶ ಸಾವಿರಾರು ಸಂಖ್ಯೆಯಲ್ಲಿ ಕ್ರಿಕೆಟ್ ಅಭಿಮಾನಿಗಳಿಂದ ತುಂಬಿ ಹೋಗಿತ್ತು.

ಇದನ್ನೂ ಓದಿ Team India’s Victory Parade: ಟೀಮ್ ಇಂಡಿಯಾದ ವಿಕ್ಟರಿ ಪೆರೇಡ್​ನಲ್ಲಿ ಹಲವು ಅಭಿಮಾನಿಗಳಿಗೆ ಗಾಯ; ಆಸ್ಪತ್ರೆಗೆ ದಾಖಲು

ಐತಿಹಾಸಿಕ ಗೆಲುವಿನ ಬಳಿಕ ನಾಯಕ ರೋಹಿತ್​ ಶರ್ಮ(Rohit Sharma) ಅವರು ಬಾರ್ಬಡೋಸ್​ ಕ್ರೀಡಾಂಗಣದ ಪಿಚ್​ನಲ್ಲಿನ ಮಣ್ಣನ್ನು ತಿಂದು ಧನ್ಯತಾ ಭಾವ ವ್ಯಕ್ತಪಡಿಸಿದ್ದರು. ‘ಆ ವಿಷಯಗಳನ್ನು ನನ್ನಿಂದ ವಿವರಿಸಲು ಸಾಧ್ಯವಿಲ್ಲ ಎಂದು ಭಾವಿಸುತ್ತೇನೆ. ಏಕೆಂದರೆ, ಯಾವುದನ್ನೂ ನಾನು ಸ್ಕ್ರಿಪ್ಟ್ ಮಾಡಿಲ್ಲ. ನಾನು ಮೈದಾನಕ್ಕೆ ಇಳಿದಾಗ ಆ ಕ್ಷಣವನ್ನು ಅನುಭವಿಸುತ್ತಿದ್ದೆ. ಗೆಲುವು ತಂದು ಕೊಟ್ಟ ಈ ಪಿಚ್​ನ ಋಣವನ್ನು ಮರೆಯಲು ಸಾಧ್ಯವಿಲ್ಲ. ನನ್ನ ಜೀವನದುದ್ದಕ್ಕೂ ಈ ಪಿಚ್​ನ ಮಣ್ಣಿನ ನೆನಪನ್ನು ಇಟ್ಟು ಕೊಳ್ಳುವ ಸಲುವಾಗಿ ನಾನು ಪಿಚ್​ನ ಮಣ್ಣು ತಿಂದೆ” ಎಂದು ಹೇಳಿದ್ದರು.

ವಿದಾಯ ಹೇಳಿದ ರೋಹಿತ್​


ನಾಯಕನಾಗಿ ಮತ್ತು ಆಟಗಾರನಾಗಿ 2 ಟಿ20 ವಿಶ್ವಕಪ್​ ಗೆದ್ದ ರೋಹಿತ್​ ಗೆಲುವಿನ ಬಳಿಕ ಟಿ20 ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದರು. ಈ ಮೂಲಕ ಸ್ಮರಣೀಯ ವಿದಾಯ ಪಡೆದರು. ಪಂದ್ಯದ ಬಳಿಕ ಮಾತನಾಡಿದ ರೋಹಿತ್​, “ಇದು ನನ್ನ ಕೊನೆಯ ಅಂತಾರಾಷ್ಟ್ರೀಯ ಟಿ20 ಪಂದ್ಯ. ಚುಟುಕು ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳಲು ಇದಕ್ಕಿಂತ ಸಕಾಲ ಇನ್ನೊಂದಿಲ್ಲ. ನಾನು ಮೊದಲು ಭಾರತ ತಂಡಕ್ಕೆ ಪದಾರ್ಪಣೆ ಮಾಡಿದ್ದೇ ಟಿ20 ಆಡುವ ಮೂಲಕ. ನಾಕಯನಾಗಿ ನಾನು ಕಪ್ ಗೆಲ್ಲಬೇಕೆಂದು ಬಯಸಿದ್ದೆ. ಇದು ಸಾಕಾರಗೊಂಡಿದೆ” ಎಂದು ಹೇಳುವ ಮೂಲಕ ವಿದಾಯ ಹೇಳಿದರು. ಟಿ20ಯಲ್ಲಿ 159 ಪಂದ್ಯಗಳನ್ನು ಆಡಿರುವ ರೋಹಿತ್‌, 4231 ರನ್‌ ಗಳಿಸಿದ್ದು, 5 ಶತಕ ಹಾಗೂ 37 ಅರ್ಧಶತಕಗಳನ್ನು ಬಾರಿಸಿದ್ದಾರೆ.

Continue Reading

ಕ್ರಿಕೆಟ್

Team India’s Victory Parade: ಟೀಮ್ ಇಂಡಿಯಾದ ವಿಕ್ಟರಿ ಪೆರೇಡ್​ನಲ್ಲಿ ಹಲವು ಅಭಿಮಾನಿಗಳಿಗೆ ಗಾಯ; ಆಸ್ಪತ್ರೆಗೆ ದಾಖಲು

Team India’s Victory Parade:ಕಿಕ್ಕಿರಿದು ಸೇರಿದ್ದ ಅಭಿಮಾನಿಗಳ ನೂಕು ನುಗ್ಗಲಿನಲ್ಲಿ ಹಲವರ ಚಪ್ಪಲಿಗಳು ಕಿತ್ತು ಹೋಗಿದೆ. ಶುಕ್ರವಾರ ಬೆಳಗ್ಗೆ ಮರೀನ್ ಡ್ರೈವ್‌ ಪ್ರೇಶದಲ್ಲಿ ಚಪ್ಪಲಿಗಳ ರಾಶಿಯೇ ಕಂಡು ಬಂದಿದೆ. ಸಾವಿರಾರು ಚಪ್ಪಳಿಗಳು ಬೀದಿಯಲ್ಲೇ ಅನಾಥವಾಗಿ ಬಿದ್ದಿದೆ.

VISTARANEWS.COM


on

Team India's Victory Parade
Koo

ಮುಂಬಯಿ: ಟಿ20 ವಿಶ್ವಕಪ್(T20 World Cup) ಗೆದ್ದ ಭಾರತ ಕ್ರಿಕೆಟ್ ತಂಡದ ಆಟಗಾರರಿಗೆ ನಿನ್ನೆ(ಗುರುವಾರ) ಮುಂಬೈಯಲ್ಲಿ ಭರ್ಜರಿಯಾಗಿ ಅಭಿನಂದಿಸಲಾಗಿತ್ತು. ತಂಡದ ಈ ವಿಜಯೋತ್ಸವದ(Team India’s Victory Parade) ವೇಳೆ ಭಾರಿ ಸಂಖ್ಯೆಯಲ್ಲಿ ಸೇರಿದ್ದ ಅಭಿಮಾನಿಗಳ ಪೈಕಿ ಕೆಲವರಿಗೆ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಪ್ರಕರಣಗಳು ಇದೀಗ ವರದಿಯಾಗಿವೆ. ಸದ್ಯದ ಮಾಹಿತಿ ಪ್ರಕಾರ 11 ಮಂದಿ ಗಾಯಗೊಂಡಿದ್ದಾರೆ ಎನ್ನಲಾಗಿದೆ.

ಸಾಗರೋಪಾದಿಯಲ್ಲಿ ಸೇರಿದ್ದ ಅಭಿಮಾನಿಗಳ ಗುಂಪಿನಲ್ಲಿ ಮಹಿಳೆಯೊಬ್ಬರು ಉಸಿರಾಟ ಸಮಸ್ಯೆಗೆ ಸಿಲುಕಿ ಬಳಿಕ ಪೊಲೀಸ್​ ಅಧಿಕಾರಿಯೊಬ್ಬರು ಮಹಿಳೆಯನ್ನು ತಮ್ಮ ಹೆಗಲ ಮೇಲೆ ಹೊತ್ತು ಸಾಗಿದ ದೃಶ್ಯ ಕೂಡ ವೈರಲ್​ ಆಗಿದೆ. ಒಟ್ಟು 9 ಮಂದಿ ಉಸಿರಾಟದ ಸಮಸ್ಯೆಗೆ ಸಿಲುಕಿ ಇಲ್ಲಿನ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ವರದಿ ತಿಳಿಸಿದೆ.

17 ವರ್ಷಗಳ ಬಳಿಕ 2ನೇ ಬಾರಿಗೆ ಟಿ-20 ವಿಶ್ವಕಪ್ ಗೆದ್ದ ಭಾರತ ತಂಡದ ವಿಜಯೋತ್ಸವವನ್ನು ಗುರುವಾರ ಮುಂಬೈನಲ್ಲಿ ಏರ್ಪಡಿಸಲಾಗಿತ್ತು. ದಕ್ಷಿಣ ಮುಂಬೈನ ಮರೀನ್ ಡ್ರೈವ್‌ ಪ್ರದೇಶ ಸಾವಿರಾರು ಸಂಖ್ಯೆಯಲ್ಲಿ ಕ್ರಿಕೆಟ್ ಅಭಿಮಾನಿಗಳಿಂದ ತುಂಬಿ ಹೋಗಿತ್ತು.

ಕಿಕ್ಕಿರಿದು ಸೇರಿದ್ದ ಅಭಿಮಾನಿಗಳ ನೂಕು ನುಗ್ಗಲಿನಲ್ಲಿ ಹಲವರ ಚಪ್ಪಲಿಗಳು ಕಿತ್ತು ಹೋಗಿದೆ. ಶುಕ್ರವಾರ ಬೆಳಗ್ಗೆ ಮರೀನ್ ಡ್ರೈವ್‌ ಪ್ರೇಶದಲ್ಲಿ ಚಪ್ಪಲಿಗಳ ರಾಶಿಯೇ ಕಂಡು ಬಂದಿದೆ. ಸಾವಿರಾರು ಚಪ್ಪಳಿಗಳು ಬೀದಿಯಲ್ಲೇ ಅನಾಥವಾಗಿ ಬಿದ್ದಿದೆ.

ಬಾರ್ಬಡೋಸ್‌ನಿಂದ ಬುಧವಾರ ಬೆಳಿಗ್ಗೆ ಪ್ರಯಾಣ ಆರಂಭಿಸಿದ್ದ ಭಾರತ ತಂಡವು ಗುರುವಾರ ಬೆಳಗ್ಗೆ ನವದೆಹಲಿಗೆ ಬಂದಿಳಿದಿತ್ತು. ಪ್ರಧಾನಿ ನರೇಂದ್ರ ಮೋದಿಯವರ ಆತಿಥ್ಯ ಸ್ವೀಕರಿಸಿದ ನಂತರ ಮಧ್ಯಾಹ್ನ 3.42ಕ್ಕೆ ಮುಂಬೈಗೆ ಪ್ರಯಾಣ ಬೆಳೆಸಿತ್ತು. ಸಂಜೆ ಐದು ಗಂಟೆಯ ನಂತರ ವಿಮಾನವು ಮುಂಬೈ ವಿಮಾನ ನಿಲ್ದಾಣಕ್ಕೆ ಬಂದಿಳಿದಿತ್ತು. ಆಟಗಾರರು ಬಂದೊಡನೆಯೇ ಕ್ರಿಕೆಟ್‌ ಪ್ರೇಮಿಗಳ ಜಯಘೋಷ ಮೊಳಗಿತು. ಅಭಿಮಾನಿಗಳ ಅಬ್ಬರಕ್ಕೆ ಅರಬ್ಬಿ ಸಮುದ್ರ ಕೂಡ ಒಂದು ಕ್ಷಣ ಸ್ಥಬ್ಧವಾಗಿತ್ತು. ವಿಶೇಷ ವಿನ್ಯಾಸದ ತೆರೆದ ವಾಹನದಲ್ಲಿ ವಿಶ್ವಕಪ್‌ ಟ್ರೋಫಿ ಹಿಡಿದು ನಾಯಕ ರೋಹಿತ್‌ ಶರ್ಮಾ, ವಿರಾಟ್‌ ಕೊಹ್ಲಿ, ಬೂಮ್ರಾ, ಪಾಂಡ್ಯ, ಕೋಚ್‌ ರಾಹುಲ್‌ ದ್ರಾವಿಡ್‌ ಸೇರಿದಂತೆ ಎಲ್ಲ ಆಟಗಾರರು ವಿಜಯಯಾತ್ರೆಯ ಮೆರವಣಿಗೆಯಲ್ಲಿ ಭಾಗಿಯಾಗಿ ಸಂಭ್ರಮಿಸಿದರು. ಸಾವಿರಾರು ಅಭಿಮಾನಿಗಳು ಘೋಷಣೆ ಕೂಗಿ ಅಭಿನಂದನೆಗಳನ್ನು ಸಲ್ಲಿಸಿದರು.

ಇದನ್ನೂ ಓದಿ Team India: ವಿಶ್ವಕಪ್ ಟ್ರೋಫಿ ಮೇಲೆ ಕಾಲಿಡುವುದು ನಮ್ಮ ಸಂಸ್ಕೃತಿಯಲ್ಲ ಎಂದು ತೋರಿಸಿಕೊಟ್ಟ ಟೀಮ್ ಇಂಡಿಯಾ​ ಕ್ರಿಕೆಟಿಗರು

ಜೂನ್ 29ರಂದು ಬಾರ್ಬಾಡೋಸ್‌ನಲ್ಲಿ ನಡೆದಿದ್ದ ಟೂರ್ನಿಯ ಫೈನಲ್‌ನಲ್ಲಿ ಭಾರತ ತಂಡವು ದಕ್ಷಿಣ ಆಫ್ರಿಕಾ ಎದುರು ಜಯಿಸಿತ್ತು. ಆದರೆ ಕೆರೀಬಿಯನ್ ದ್ವೀಪದಲ್ಲಿ ಚಂಡಮಾರುತ ಬೀಸಿದ್ದ ಕಾರಣ ವಿಮಾನಯಾನ ಸೌಲಭ್ಯ ರದ್ದಾಗಿತ್ತು. ಆದ್ದರಿಂದ ಬುಧವಾರದವರೆಗೂ ತಂಡವು ಬಾರ್ಬಾಡೋಸ್‌ನಲ್ಲಿಯೇ ಉಳಿದಿತ್ತು.

ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ (ಬಿಸಿಸಿಐ) ವತಿಯಿಂದ ಚಾಂಪಿಯನ್‌ ಭಾರತ ತಂಡಕ್ಕೆ ಘೋಷಿಸಿದ್ದ 125 ಕೋಟಿ ರೂಪಾಯಿ ಮೊತ್ತದ ಚೆಕ್‌ ಅನ್ನು ಬಿಸಿಸಿಐ ಅಧ್ಯಕ್ಷ ರೋಜರ್‌ ಬಿನ್ನಿ, ಉಪಾಧ್ಯಕ್ಷ ರಾಜೀವ್‌ ಶುಕ್ಲಾ, ಕಾರ್ಯದರ್ಶಿ ಜಯ್‌ ಶಾ ಹಸ್ತಾಂತರಿಸಿದರು.

Continue Reading

ಕ್ರೀಡೆ

IND vs ZIM: ನಾಳೆಯಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ; ಯುವ ಪಡೆಗೆ ಸ್ಫೂರ್ತಿಯಾಗಲಿ ಟಿ20 ವಿಶ್ವಕಪ್​ ಗೆಲುವು

IND vs ZIM:ಜಿಂಬಾಬ್ವೆ ವಿರುದ್ಧ ಭಾರತ ಅಜೇಯವಲ್ಲ. 2 ಸೋಲು ಕೂಡ ಕಂಡಿದೆ. ಅನುಭವಿ ಆಲ್​ರೌಂಡರ್​ ಹಾಗೂ ನಾಯಕನಾಗಿರುವ ಸಿಕಂದರ್​ ರಾಜಾ ಬ್ಯಾಟಿಂಗ್​ ಮತ್ತು ಬೌಲಿಂಗ್​ನಲ್ಲಿ ಉತ್ತಮ ಫಾರ್ಮ್​ನಲ್ಲಿದ್ದಾರೆ. ಹೀಗಾಗಿ ಯಂಗ್​ ಟೀಮ್​ ಇಂಡಿಯಾ ಆಟಗಾರರ ಎಚ್ಚರಿಕೆಯಿಂದ ಆಡಬೇಕು.

VISTARANEWS.COM


on

IND vs ZIM
Koo

ಹರಾರೆ: ಇದುವರೆಗೂ ಟಿ20 ವಿಶ್ವಕಪ್​ ಗೆಲುವಿನ ಗುಂಗಿನಲ್ಲಿದ್ದ ಭಾರತೀಯ ಕ್ರಿಕೆಟ್​ ಅಭಿಮಾನಿಗಳು ಇನ್ನು ನಾಳೆಯಿಂದ(ಶನಿವಾರ) ಆರಂಭಗೊಳ್ಳುವ ಜಿಂಬಾಬ್ವೆ ಮತ್ತು ಭಾರತ(IND vs ZIM) ನಡುವಣ ಟಿ20(
Zimbabwe vs India) ಸರಣಿಯತ್ತ ಗಮನ ಹರಿಸಲಿದ್ದಾರೆ. ಹರಾರೆಯಲ್ಲಿ ಇತ್ತಂಡಗಳ ಮೊದಲ ಪಂದ್ಯ ನಡೆಯಲಿದೆ. ಯುವ ಪಡೆಯನ್ನೇ ನೆಚ್ಚಿಕೊಂಡಿರುವ ಶುಭಮನ್​ ಗಿಲ್(shubman gill)​ ಸಾರಥ್ಯದ ಟೀಮ್​ ಇಂಡಿಯಾ ಹೇಗೆ ಪ್ರದರ್ಶನ ತೋರಲಿದೆ ಎನ್ನುವುದು ಈ ಸೆರಣಿಯ ಕೌತುಕ.

ಈಗಾಗಲೇ ಹಿರಿಯ ಆಟಗಾರರಾದ ರೋಹಿತ್​ ಶರ್ಮ, ವಿರಾಟ್​ ಕೊಹ್ಲಿ ಮತ್ತು ರವೀಂದ್ರ ಜಡೇಜಾ ಟಿ20 ಕ್ರಿಕೆಟ್​ಗೆ ಗುಡ್​ ಬೈ ಹೇಳಿದ್ದಾರೆ. ಮುಂದಿನ ವರ್ಷ ಐಸಿಸಿ ಚಾಂಪಿಯನ್ಸ್​ ಟ್ರೋಫಿ ಕೂಡ ನಡೆಯಲಿದೆ. ಇದು ಟಿ20 ಸ್ವರೂಪದಲ್ಲಿಯೇ ನಡೆಯಲಿದೆ. ಜತೆಗೆ 2026ರಲ್ಲಿ ಟಿ20 ವಿಶ್ವಕಪ್​ ಕೂಡ ನಡೆಯಲಿದೆ. ಈ ಟೂರ್ನಿಗೆ ತಂಡವನ್ನು ರಚಿಸಲು ಬಿಸಿಸಿಐ ಸಿದ್ಧತೆ ಆರಂಭಿಸಿದೆ. ಇದೀಗ ಜಿಂಬಾಬ್ವೆ ವಿರುದ್ಧದ ಸರಣಿಯಲ್ಲಿ ಸಿಕ್ಕ ಅವಕಾಶವನ್ನು ಯುವ ಆಟಗಾರರು ಸರಿಯಾಗಿ ಬಳಸಿಕೊಂಡರೆ ಭಾರತ ಸೀನಿಯರ್​ ತಂಡದಲ್ಲಿ ಆಡುವ ಅವಕಾಶ ಪಡೆಯಬಹುದು. ಹೀಗಾಗಿ ಎಲ್ಲ ಆಟಗಾರರು ಶ್ರೇಷ್ಠ ಪ್ರದರ್ಶನ ತೋರಬೇಕು.

ರೋಹಿತ್​ ನಿವೃತ್ತಿಯಿಂದ ತೆರವಾದ ಟಿ20 ತಂಡದ ನಾಯಕತ್ವಕ್ಕೆ ಈಗಾಗಲೇ ಹಾರ್ದಿಕ್​ ಹೆಸರು ಕೇಳಿ ಬಂದಿದೆ. ಜಿಂಬಾಬ್ವೆ ಸರಣಿಯಲ್ಲಿ ತಂಡ ಮುನ್ನಡೆಸುತ್ತಿರುವ ಶುಭಮನ್​ ಗಿಲ್​ ಈ ಸರಣಿಯಲ್ಲಿ ಯಶಸ್ವಿಯಾದರೆ ಮುಂದಿನ ದಿನದಲ್ಲಿ ನಾಯಕನಾಗುವ ಸಾಧ್ಯತೆಯೂ ಇದೆ. ಈ ಬಾರಿಯ ಐಪಿಎಲ್​ನಲ್ಲಿ ಸನ್​ರೈಸರ್ಸ್​ ಹೈದರಾಬಾದ್​ ಪರ ವಿಸ್ಫೋಟಕ ಬ್ಯಾಟಿಂಗ್​ ಮೂಲಕ ಸಿಕ್ಸರ್​ಗಳ ಮಳೆಯನ್ನೇ ಸುರಿಸಿದ್ದ ಎಡಗೈ ಬ್ಯಾಟರ್​ ಅಭಿಷೇಕ್​ ಶರ್ಮ ಬ್ಯಾಟಿಂಗ್​ ಪ್ರದರ್ಶನದ ಮೇಕೆಯೂ ಬಹಳ ನಿರೀಕ್ಷೆ ಇದೆ. ಒಟ್ಟಾರೆ ಈ ಸರಣಿಯಲ್ಲಿ ಆಟಗಾರರು ತೋರುವ ಪ್ರದರ್ಶನದಲ್ಲಿ ಅವರ ಮುಂದಿನ ಕ್ರಿಕೆಟ್​ ಭವಿಷ್ಯ ಅಡಗಿದೆ ಎನ್ನಲಡ್ಡಿಯಿಲ್ಲ.

ಇದನ್ನೂ ಓದಿ Team India: ವಿಶ್ವಕಪ್ ಟ್ರೋಫಿ ಮೇಲೆ ಕಾಲಿಡುವುದು ನಮ್ಮ ಸಂಸ್ಕೃತಿಯಲ್ಲ ಎಂದು ತೋರಿಸಿಕೊಟ್ಟ ಟೀಮ್ ಇಂಡಿಯಾ​ ಕ್ರಿಕೆಟಿಗರು

ಜಿಂಬಾಬ್ವೆ ಕೂಡ ಬಲಿಷ್ಠ


ಜಿಂಬಾಬ್ವೆ ವಿರುದ್ಧ ಭಾರತ ಅಜೇಯವಲ್ಲ. 2 ಸೋಲು ಕೂಡ ಕಂಡಿದೆ. ಅನುಭವಿ ಆಲ್​ರೌಂಡರ್​ ಹಾಗೂ ನಾಯಕನಾಗಿರುವ ಸಿಕಂದರ್​ ರಾಜಾ ಬ್ಯಾಟಿಂಗ್​ ಮತ್ತು ಬೌಲಿಂಗ್​ನಲ್ಲಿ ಉತ್ತಮ ಫಾರ್ಮ್​ನಲ್ಲಿದ್ದಾರೆ. ಜತೆಗೆ ತಂಡದ ನೂತನ ಕೋಚ್​ ಆಗಿರುವ ಜಸ್ಟಿನ್‌ ಸ್ಯಾಮ್ಸನ್‌ ಅವರ ಮಾರ್ಗದರ್ಶನ ಕೂಡ ತಂಡಕ್ಕೆ ನೆರವಾಗಬಹುದು. ಹೀಗಾಗಿ ಭಾರತ ಎಚ್ಚರಿಕೆಯಿಂದ ಆಡಬೇಕು.

ಮುಖಾಮುಖಿ


ಭಾರತ ಮತ್ತು ಜಿಂಬಾಬ್ವೆ ಇದುವರೆಗೆ ಒಟ್ಟು 8 ಟಿ20 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಭಾರತ 6 ಪಂದ್ಯ ಗೆದ್ದಿದ್ದರೆ, ಜಿಂಬಾಬ್ವೆ 2 ಪಂದ್ಯ ಗೆದ್ದಿದೆ. ಕೊನೆಯ ಬಾರಿ ಇತ್ತಂಡಗಳು ಆಡಿದ್ದು 2022ರಲ್ಲಿ. ಆಸ್ಟ್ರೇಲಿಯಾದಲ್ಲಿ ನಡೆದಿದ್ದ ಟಿ20 ವಿಶ್ವಕಪ್​ ಟೂರ್ನಿಯಲ್ಲಿ. ಈ ಪಂದ್ಯವನ್ನು ಭಾರತ 71 ರನ್​ ಅಂತರದಿಂದ ಗೆದ್ದು ಬೀಗಿತ್ತು.

ಭಾರತ ತಂಡ

ಶುಭಮನ್ ಗಿಲ್ (ನಾಯಕ), ಋತುರಾಜ್ ಗಾಯಕ್ವಾಡ್, ಅಭಿಷೇಕ್ ಶರ್ಮಾ, ರಿಂಕು ಸಿಂಗ್, ಧ್ರುವ್ ಜುರೆಲ್ (ವೀಕಿ), ರಿಯಾನ್ ಪರಾಗ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಅವೇಶ್ ಖಾನ್, ಖಲೀಲ್ ಅಹ್ಮದ್, ಮುಖೇಶ್ ಕುಮಾರ್, ತುಷಾರ್ ದೇಶಪಾಂಡೆ, ಸಾಯಿ ಸುದರ್ಶನ್, ಜಿತೇಶ್ ಶರ್ಮಾ (ವೀಕಿ) , ಹರ್ಷಿತ್ ರಾಣಾ.

ವೇಳಾಪಟ್ಟಿ

1ನೇ ಟಿ20: ಜುಲೈ 6, ಹರಾರೆ, ಸಂಜೆ 4.30

2ನೇ ಟಿ20: ಜುಲೈ 7, ಹರಾರೆ, ಸಂಜೆ 4.30

3ನೇ T20: ಜುಲೈ 10, ಹರಾರೆ, ಸಂಜೆ 4.30

4ನೇ T20: ಜುಲೈ 13, ಹರಾರೆ, ಸಂಜೆ 4.30

5 ನೇ T20: ಜುಲೈ 14, ಹರಾರೆ, ಸಂಜೆ 4.30

Continue Reading

ಕ್ರೀಡೆ

Jay Shah: ಕೊಹ್ಲಿಯನ್ನೇ ದಿಟ್ಟಿಸಿ ನೋಡುತ್ತಾ ನಿಂತ ಜಯ್​ ಶಾ; ವಿಡಿಯೊ ವೈರಲ್​

Jay Shah: ವಿರಾಟ್​ ಕೊಹ್ಲಿ ಅವರು ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡುವ ವೇಳೆ ಕಳೆದ 15 ವರ್ಷಗಳಲ್ಲಿ ರೋಹಿತ್ ಶರ್ಮಾ ಅವರನ್ನು ಇಷ್ಟೊಂದು ಭಾವುಕರಾಗಿ ಎಂದೂ ನೋಡಿರಲಿಲ್ಲ ಎಂದರು.

VISTARANEWS.COM


on

Jay Shah
Koo

ಮುಂಬಯಿ: ಟಿ20 ವಿಶ್ವಕಪ್(T20 World Cup) ಗೆದ್ದು ತವರಿಗೆ ಮರಳಿದ ಟೀಮ್ ಇಂಡಿಯಾ(Team India) ಆಟಗಾರರಿಗೆ ನಿನ್ನೆ)ಗುರುವಾರ) ಮುಂಬೈಯಲ್ಲಿ ಭರ್ಜರಿ ಸ್ವಾಗತ ಕೋರಲಾಯಿತು. ಮುಂಬೈಯಲ್ಲಿ ಒಂದು ರೀತಿಯ ಹಬ್ಬದ ವಾತಾವರಣವೇ ಸೃಷ್ಟಿಯಾಗಿತ್ತು. ಭಾರಿ ಸಂಖ್ಯೆಯಲ್ಲಿ ನೆರೆದಿದ್ದ ಅಭಿಮಾನಿಗಳ ಮಧ್ಯೆ ತೆರೆದ ಬಸ್‌ನಲ್ಲಿ ಆಟಗಾರರರನ್ನು ಮೆರವಣಿಗೆ ಮಾಡಿ ವಾಂಖೆಡೆ ಮೈದಾನದಲ್ಲೂ ಸಂಭ್ರಮ ಆಚರಿಸಲಾಯಿತು. ಈ ವೇಳೆ ಬಿಸಿಸಿಐ ಕಾರ್ಯದರ್ಶಿ ಜಯ್​ ಶಾ(Jay Shah) ಅವರು ವಿರಾಟ್​ ಕೊಹ್ಲಿಗೆ(virat kohli) ಹಸ್ತಲಾಘವ ನೀಡಿದ ಬಳಿಕವೂ ಕೊಹ್ಲಿಯನ್ನೇ ದಿಟ್ಟಿಸಿ ನೋಡುತ್ತಾ ನಿಂತು ಮೈಮರೆತ ವಿಡಿಯೊವೊಂದು ವೈರಲ್​ ಆಗಿದೆ.

ಮೋದಿ ಭೇಟಿ ಬಳಿಕ ಟೀಮ್​ ಇಂಡಿಯಾ ಆಟಗಾರರು ಮುಂಬೈಗೆ ತಲುಪಿದೊಡನೆ ‘ಮುಂಬೈನ ನರೀಮನ್ ಪಾಯಿಂಟ್‌ನಿಂದ ರೋಡ್‌ ಶೋ ಮಾಡಲಾಯಿತು. ಅದಾದ ಮೇಲೆ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಆಟಗಾರರನ್ನು ಮತ್ತು ಮತ್ತು ಸಿಬ್ಬಂದಿ ಬಳಗವನ್ನು ಸನ್ಮಾನಿಸಲಾಯಿತು. ಬಳಿಕ ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ (ಬಿಸಿಸಿಐ) ವತಿಯಿಂದ ಚಾಂಪಿಯನ್‌ ಭಾರತ ತಂಡಕ್ಕೆ ಘೋಷಿಸಿದ್ದ 125 ಕೋಟಿ ರೂಪಾಯಿ ಮೊತ್ತದ ಚೆಕ್‌ ಅನ್ನು ಬಿಸಿಸಿಐ ಅಧ್ಯಕ್ಷ ರೋಜರ್‌ ಬಿನ್ನಿ, ಉಪಾಧ್ಯಕ್ಷ ರಾಜೀವ್‌ ಶುಕ್ಲಾ, ಕಾರ್ಯದರ್ಶಿ ಜಯ್‌ ಶಾ ಹಸ್ತಾಂತರಿಸಿದರು.

ಚೆಕ್‌ ವಿತರಣೆಯ ಕಾರ್ಯಕ್ರಮದ ವೇಳೆ ವೇದಿಕೆಯಲ್ಲಿದ್ದ ಬಿಸಿಸಿಐ ಅಧಿಕಾರಿಗಳಿಗೆ ಆಟಗಾರರು ಹಸ್ತಲಾಘವ ನೀಡುವ ಮೂಲಕ ಗೌರವ ಸೂಚಿಸಿದರು. ಎಲ್ಲ ಆಟಗಾರರಂತೆ ಕೊಹ್ಲಿ ಕೂಡ ಸರತಿ ಸಾಲಿನಲ್ಲಿ ಅಧಿಕಾರಿಗಳ ಕೈ ಕುಲುಕಿ ಮುಂದೆ ಸಾಗಿದರು. ಈ ವೇಳೆ ಜಯ್​ ಶಾ, ಕೊಹ್ಲಿ ಕೈ ಕುಲುಕಿದ ಬಳಿಕ ಕೊಹ್ಲಿಯನ್ನೇ ನೋಡುವುದರಲ್ಲೇ ಮಗ್ನರಾದರು. ನಂತರ ಬಂದ ಆಟಗಾರರಿಗೆ ಕೈ ಕುಲುಕುವುದನ್ನೇ ಮರೆತುಬಿಟ್ಟರು. ಈ ವಿಡಿಯೊ ವೈರಲ್​ ಆಗಿದೆ. ಜಯ್​ ಶಾ ಅವರು ಕೊಹ್ಲಿಯನ್ನೇ ನೋಡುತ್ತಾ ನಿಂತಿದ್ದು ಯಾಕೆ ಎಂಬ ಬಗ್ಗೆ ನೆಟ್ಟಿಗರು ಚರ್ಚೆ ನಡೆಸಲಾರಂಭಿಸಿದ್ದಾರೆ.

ಕಳೆದ ವರ್ಷ ನಡೆದಿದ್ದ ಏಕದಿನ ವಿಶ್ವಕಪ್​ ಟ್ರೋಫಿ ವೇಳೆ ಸರಣಿ ಶ್ರೇಷ್ಠ ಪ್ರಶಸ್ತಿ ಸ್ವಿಕರಿಸುವಾಗ ಕೊಹ್ಲಿ ಜಯ್​ ಶಾ ಮುಖವನ್ನು ಕೂಡ ನೋಡದೆ ನೇರವಾಗಿ ಬಂದಿದ್ದರು. ಈ ವಿಡಿಯೊ ಕೂಡ ವೈರಲ್​ ಆಗಿತ್ತು. ಯಾರಿಗೆ ಗೌರವ ನೀಡಬೇಕು ಮತ್ತು ನೀಡಬಾರದು ಎಂಬುದು ಕಿಂಗ್​ ಕೊಹ್ಲಿಗೆ ತಿಳಿದಿದೆ ಎಂಬುದಾಗಿ ಕೊಹ್ಲಿ ಅಭಿಮಾನಿಗಳು ಈ ವಿಡಿಯೊಗೆ ಕಮೆಂಟ್​ ಮಾಡಿದ್ದರು.

15 ವರ್ಷಗಳಲ್ಲಿ ರೋಹಿತ್‌ರನ್ನು ಇಷ್ಟು ಭಾವುಕರಾಗಿ ಎಂದೂ ನೋಡಿರಲಿಲ್ಲ ಎಂದ ಕೊಹ್ಲಿ


ವಿರಾಟ್​ ಕೊಹ್ಲಿ ಅವರು ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡುವ ವೇಳೆ ಕಳೆದ 15 ವರ್ಷಗಳಲ್ಲಿ ರೋಹಿತ್ ಶರ್ಮಾ ಅವರನ್ನು ಇಷ್ಟೊಂದು ಭಾವುಕರಾಗಿ ಎಂದೂ ನೋಡಿರಲಿಲ್ಲ ಎಂದರು. ನಾವು ಕೆನ್ಸಿಂಗ್ಟನ್ ಓವಲ್‌ನಲ್ಲಿ ಮೆಟ್ಟಿಲುಗಳನ್ನು ಹತ್ತುವಾಗ ಅಳುತ್ತಿದ್ದೆವು. 2011ರಲ್ಲಿ ಇದೇ ಮೈದಾನದಲ್ಲಿ ಏಕದಿನ ವಿಶ್ವಕಪ್ ಗೆಲುವಿನ ಬಳಿಕ ಅಂದು ಹಿರಿಯ ಆಟಗಾರರು ಭಾವುಕರಾಗಿದ್ದಾಗ ಅವರ ಭಾವನೆಗಳನ್ನು ಅಷ್ಟೊಂದು ಆಳವಾಗಿ ಗ್ರಹಿಸಲು ಸಾಧ್ಯವಾಗಿರಲಿಲ್ಲ. ಆದರೆ ನನಗೀಗ ಎಲ್ಲವೂ ಅರ್ಥವಾಗುತ್ತಿದೆ’ ಎಂದು ಹೇಳಿದರು.

Continue Reading
Advertisement
Kung Fu Panda 4 OTT Jio cinema july 15th onwards
ಒಟಿಟಿ22 seconds ago

Kung Fu Panda 4 OTT: ಪುಟಾಣಿಗಳ ಫೇವರಿಟ್‌ ʻಕುಂಗ್ ಫು ಪಾಂಡಾ 4 ಸಿನಿಮಾʼ ಒಟಿಟಿಗೆ ಬಂದಾಯ್ತು; ಕನ್ನಡ ಭಾಷೆಯಲ್ಲೂ ಲಭ್ಯ!

CM Siddaramaiah
ಕರ್ನಾಟಕ4 mins ago

CM Siddaramaiah: ಸಿದ್ದರಾಮಯ್ಯ ಈಗ ಕನ್ನಡ ಮೇಷ್ಟ್ರು; ಶಾಲೆಗೆ ಭೇಟಿ ನೀಡಿ ವ್ಯಾಕರಣ ಪಾಠ ಮಾಡಿದ ಸಿಎಂ!

Rohit Sharma
ಕ್ರೀಡೆ31 mins ago

Rohit Sharma: ವಿಶ್ವಕಪ್​ ಗೆದ್ದು ಬಂದ ರೋಹಿತ್​ಗೆ ಸರ್​ಪ್ರೈಸ್​ ಕೊಟ್ಟ ಬಾಲ್ಯದ ಗೆಳೆಯರು; ವಿಡಿಯೊ ವೈರಲ್​

Raj Tarun Police complaint filed by live-in partner
ಟಾಲಿವುಡ್31 mins ago

Raj Tarun: ಟಾಲಿವುಡ್‌ ಯುವ ನಟ ʻರಾಜ್ ತರುಣ್ʼ ಪ್ರೀತಿ ಪ್ರೇಮದ ಹೆಸರಿನಲ್ಲಿ ಮೋಸ: ದೂರು ದಾಖಲಿಸಿದ ಪ್ರೇಯಸಿ!

NEET PG 2024
ಶಿಕ್ಷಣ32 mins ago

NEET PG 2024: ನೀಟ್-ಪಿಜಿ ಪರೀಕ್ಷೆಯ ದಿನಾಂಕ ಪ್ರಕಟ; ಆ. 11ರಂದು ನಡೆಯಲಿದೆ ಟೆಸ್ಟ್‌

Electric shock
ದಾವಣಗೆರೆ36 mins ago

Electric shock : ಮೋಟಾರ್‌ ಆನ್‌ ಮಾಡುವಾಗ ಕರೆಂಟ್‌ ಶಾಕ್‌ಗೆ ಮಹಿಳೆ ಸಾವು; ಮೀನು ಹಿಡಿಯಲು ಹೋಗಿ ವ್ಯಕ್ತಿ ನೀರುಪಾಲು

Channaptna By Election CP Yogeshwar
ಪ್ರಮುಖ ಸುದ್ದಿ42 mins ago

Channaptna By Election: ಚನ್ನಪಟ್ಟಣಕ್ಕೆ ನಾನೇ ಮೈತ್ರಿ ಅಭ್ಯರ್ಥಿ, ಎಚ್‌ಡಿಕೆ ಇದನ್ನು ಘೋಷಿಸಲಿ: ಸಿಪಿ ಯೋಗೇಶ್ವರ್‌

Viral Video
Latest42 mins ago

Viral Video: ತಲೆಕೂದಲಿನಲ್ಲಿ ಟೀಪಾಟ್ ತಯಾರಿಸಿ ಅದರಿಂದ ನೀರು ಕುಡಿದ ಕೇಶ ವಿನ್ಯಾಸಕಿ!

SC ST Scholarship
ಪ್ರಮುಖ ಸುದ್ದಿ45 mins ago

SC ST Scholarship: ದೆಹಲಿಯಲ್ಲಿ ಎಸ್‌ಸಿ, ಎಸ್‌ಟಿ ಮಕ್ಕಳಿಗೆ ಹಾಸ್ಟೆಲ್, ಸ್ಪರ್ಧಾತ್ಮಕ ಪರೀಕ್ಷೆ ತರಬೇತಿಗೆ 15,000 ಶಿಷ್ಯವೇತನ: ಸಿಎಂ ಘೋಷಣೆ

Retirement Panning
ಮನಿ-ಗೈಡ್58 mins ago

Retirement Panning: ನಿವೃತ್ತಿ ಬಳಿಕ 1 ಲಕ್ಷ ರೂ. ಪಿಂಚಣಿ ಗಳಿಸೋದು ಹೇಗೆ? ಸುಲಭ ಯೋಜನೆಯ ಮಾಹಿತಿ ಇಲ್ಲಿದೆ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka rain
ಮಳೆ2 hours ago

Karnataka Rain: ಮಳೆಗೆ ಮನೆಗಳಿಗೆ ನುಗ್ಗುತ್ತಿವೆ ಹಾವುಗಳು! ಕುಸಿದು ಬಿತ್ತು ಮನೆಗಳು

Elephant attack in Hassan and Chikmagalur
ಹಾಸನ3 hours ago

Elephant Attack : ಕಾಫಿ ತೋಟದ‌ ಕೆಲಸಗಾರನನ್ನು ಸೊಂಡಿಲಿನಿಂದ ಎತ್ತಿ ಬಿಸಾಡಿದ ಒಂಟಿ ಸಲಗ

Physical Abuse
ಬೆಂಗಳೂರು4 hours ago

Physical Abuse : ಇವಳೇನು ಶಿಕ್ಷಕಿಯೋ ಕಾಮುಕಿಯೋ; ಬಾಲಕಿಯ ಖಾಸಗಿ ಅಂಗಾಂಗ ಮುಟ್ಟಿ ವಿಕೃತಿ

Self Harming in bengaluru
ಬೆಂಗಳೂರು5 hours ago

Self Harming : ವರದಕ್ಷಿಣೆ ಟಾರ್ಚರ್‌; ಫ್ಯಾನಿಗೆ ನೇಣು ಬಿಗಿದುಕೊಂಡು ಟೆಕ್ಕಿ ಸೂಸೈಡ್‌

karnataka Weather Forecast Rain
ಮಳೆ9 hours ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಮಳೆ ಅಬ್ಬರ; ಇಲ್ಲೆಲ್ಲ ಕಾದಿದೆ ಗಂಡಾಂತರ

karnataka Weather Forecast
ಮಳೆ21 hours ago

Karnataka Weather : ಭಾರಿ ಮಳೆಗೆ ಗುಡ್ಡ ಕುಸಿತ; ಮಣ್ಣಿನ ಅಡಿ ಸಿಲುಕಿದ ಮಹಿಳೆ ಉಸಿರುಗಟ್ಟಿ ಸಾವು

karnataka Rain
ಮಳೆ23 hours ago

Karnataka Rain : ಮಳೆಗೆ ಜಾರಿ ಮುಖಾಮುಖಿ ಡಿಕ್ಕಿಯಾದ ಲಾರಿಗಳು; ಕಾರಿನ ಮೇಲೆ ಬಿದ್ದ ಬೃಹತ್‌ ಮರ

wild animal attack
ಬೆಂಗಳೂರು ಗ್ರಾಮಾಂತರ24 hours ago

Wild Animal Attack : ಮಾಗಡಿಯಲ್ಲಿ ರೈತನ ತಲೆ ಬಗೆದ ಕರಡಿ; ಮಲೆನಾಡಿನಲ್ಲಿ ಆನೆಗಳ ಹಾವಳಿ

Chikkaballapura News
ಚಿಕ್ಕಬಳ್ಳಾಪುರ1 day ago

Chikkaballapura News : ಒಂದು ವರ್ಷದ ಮಗು ಬಿಟ್ಟು ಕ್ಷಣಾರ್ಧದಲ್ಲಿ ತಾಯಿ ಎಸ್ಕೇಪ್!

karnataka Rain
ಮಳೆ1 day ago

Karnataka Rain : ಧಾರಾಕಾರ ಮಳೆಗೆ ಗುಡ್ಡ ಕುಸಿತ; ಹೊನ್ನಾವರ-ಬೆಂಗಳೂರು ಹೆದ್ದಾರಿ ಬಂದ್

ಟ್ರೆಂಡಿಂಗ್‌