Ambati Rayudu announces IPL retirement, confirms final vs GT to be his last game in tournament IPL 2023 : ಫೈನಲ್​ ಪಂದ್ಯಕ್ಕೆ ಮೊದಲೇ ನಿವೃತ್ತಿ ಘೋಷಿಸಿದ ಸಿಎಸ್​ಕೆ ಬ್ಯಾಟರ್​! Vistara News
Connect with us

ಕ್ರಿಕೆಟ್

IPL 2023 : ಫೈನಲ್​ ಪಂದ್ಯಕ್ಕೆ ಮೊದಲೇ ನಿವೃತ್ತಿ ಘೋಷಿಸಿದ ಸಿಎಸ್​ಕೆ ಬ್ಯಾಟರ್​!

ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯವು ತಮ್ಮ ಕೊನೆಯ ಹಣಾಹಣಿ ಎಂದು ಸಿಎಸ್​ಕೆ ಬ್ಯಾಟರ್​ ಅಂಬಾಟಿ ರಾಯುಡು ಭಾನುವಾರ ಖಚಿತಪಡಿಸಿದ್ದಾರೆ.

VISTARANEWS.COM


on

Ambati Rayudu announces IPL retirement
Koo

ಅಹಮದಾಬಾದ್​: ಚೆನ್ನೈ ಸೂಪರ್ ಕಿಂಗ್ಸ್​ ತಂಡದ ಮಧ್ಯಮ ಕ್ರಮಾಂಕದ ಬ್ಯಾಟರ್​ ಅಂಬಾಟಿ ರಾಯುಡು ಭಾನುವಾರ ಇಂಡಿಯನ್ ಪ್ರೀಮಿಯರ್ ಲೀಗ್​ಗೆ ನಿವೃತ್ತಿ ಘೋಷಿಸಿದ್ದಾರೆ. 2023ರ ಆವೃತ್ತಿಯ ಫೈನಲ್ ಗುಜರಾತ್ ಟೈಟನ್ಸ್ ವಿರುದ್ಧದ ಫೈನಲ್ ಪಂದ್ಯಾವಳಿಯಲ್ಲಿ ತಮ್ಮ ಕೊನೆಯ ಪಂದ್ಯವಾಗಲಿದೆ ಎಂದು ಖಚಿತಪಡಿಸಿದ್ದಾರೆ. 2018 ರಿಂದ ಸಿಎಸ್ಕೆ ತಂಡದ ಭಾಗವಾಗಿರುವ ರಾಯುಡು ಫ್ರಾಂಚೈಸಿಯೊಂದಿಗೆ ಎರಡು ಟ್ರೋಫಿಗಳನ್ನು ಗೆದ್ದಿದ್ದಾರೆ. ಅವರು 2010ರಲ್ಲಿ ಮುಂಬೈ ಇಂಡಿಯನ್ಸ್ ಪರ ತಮ್ಮ ಐಪಿಎಲ್ ವೃತ್ತಿಜೀವನ ಪ್ರಾರಂಭಿಸಿದ್ದರು.

ಎರಡು ತಂಡಗಳು ಮುಂಬೈ ಮತ್ತು ಸಿಎಸ್ಕೆ. ಒಟ್ಟು 204 ಪಂದ್ಯಗಳು. 14 ಋತುಗಳು, 11 ಪ್ಲೇಆಫ್​ಗಳು, 8 ಫೈನಲ್​ ಪಂದ್ಯಗಳು. 5 ಟ್ರೋಫಿಗಳು. ಇದು ಸುಮಧುರ ಪ್ರಯಾಣವಾಗಿದೆ. ಐಪಿಎಲ್​​ನ ಫೈನಲ್ ಪಂದ್ಯ ನನ್ನ ಕೊನೆಯ ಪಂದ್ಯವಾಗಲಿದೆ ಎಂದು ನಾನು ನಿರ್ಧರಿಸಿದ್ದೇನೆ. ಈ ಟೂರ್ನಿಯಲ್ಲಿ ಆಡುವುದನ್ನು ನಾನು ನಿಜವಾಗಿಯೂ ಆನಂದಿಸಿದ್ದೇನೆ. ಎಲ್ಲರಿಗೂ ಧನ್ಯವಾದಗಳು. ಈ ವಿಚಾರದಲ್ಲಿ ಮರು ನಿರ್ಧಾರವಲ್ಲ ಎಂದು ಅಂಬಾಟಿ ರಾಯುಡು ತಮ್ಮ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಬರೆದಿದ್ದಾರೆ.

ರಾಯುಡು 2013 ರಲ್ಲಿ ಮುಂಬೈ ಇಂಡಿಯನ್ಸ್ ತಂಡದ ಪರವಾಗಿ ಮೊದಲ ಪ್ರಶಸ್ತಿ ಗೆದ್ದಿದ್ದರು. ಇದು ಫ್ರಾಂಚೈಸಿಗೆ ಮೊದಲ ಪ್ರಶಸ್ತಿಯೂ ಆಗಿತ್ತು. ಆ ಋತುವಿನ ಎಲ್ಲ ಪಂದ್ಯಗಳಲ್ಲಿ ಅವರು ಆಡಿದ್ದರು. ಅಂತೆಯೇ 2015 ಮತ್ತು 2017 ರಲ್ಲಿ ಇನ್ನೂ ಎರಡು ಪ್ರಶಸ್ತಿಗಳನ್ನು ಆ ತಂಡದ ಪರವಾಗಿ ಗೆದ್ದಿದ್ದರು.

ಸಿಎಸ್​ಕೆ ತಂಡದಲ್ಲಿಯೂ ರಾಯುಡು ಪವರ್ ಹಿಟ್ಟರ್ ಆಗಿ ತಮ್ಮ ಖ್ಯಾತಿ ಬೆಳೆಸಿಕೊಂಡಿದ್ದರು. 2018ರಲ್ಲಿ ಚೆನ್ನೈ ತಂಡವು ಪ್ರಶಸ್ತಿಯನ್ನು ಎತ್ತಿಹಿಡಿದಾಗ ಸಿಎಸ್​ಕೆ ಜತೆ ಚೊಚ್ಚಲ ಋತುವಿನಲ್ಲಿ 16 ಪಂದ್ಯಗಳಲ್ಲಿ 602 ರನ್ ಗಳಿಸಿದ್ದಾರೆ. 149. 75 ಸ್ಟ್ರೈಕ್​​ರೇಟ್​​ನಲ್ಲಿ ಅವರು ರನ್​ ಗಳಿಸಿದ್ದ ಅವರಿಗೆ ಅದು ಸ್ಮರಣೀಯ ಋತು.

ಅವರು 2021 ರಲ್ಲಿ ವಿಜೇತ ತಂಡದ ಭಾಗವಾಗಿದ್ದರು, ಇದರಲ್ಲಿ ರಾಯುಡು 16 ಪಂದ್ಯಗಳಲ್ಲಿ 151.17 ಸ್ಟ್ರೈಕ್ ರೇಟ್ನಲ್ಲಿ ಹೊಡೆದರು.

ನಿವೃತ್ತಿ ವಾಪಸ್​ ಪಡೆದಿದ್ದರು

2022ನೇ ಆವೃತ್ತಿಗೆ ರಾಯುಡುಗೆ ಮರೆಯಲಾಗದ ವರ್ಷವಾಗಿತ್ತು. ಆ ವರ್ಷ ಸಿಎಸ್​ಕೆ 9ನೇ ಸ್ಥಾನ ಪಡೆದುಕೊಂಡು ಅವಮಾನ ಎದುರಿಸಿತ್ತು. ಇದೇ ಸಂದರ್ಭದಲ್ಲಿ ರಾಯುಡು ನಿವೃತ್ತಿ ಕೂಡ ಘೋಷಿಸಿದ್ದರು. ಬಳಿಕ ಯೂ ಟರ್ನ್​ ಹೊಡೆದ ಅವರು ಮತ್ತೆ ಸಿಎಸ್​ಕೆ ತಂಡವನ್ನು ಪ್ರತಿನಿಧಿಸುವುದಾಗಿ ಹೇಳಿದ್ದರು. ಈ ಬಾರಿ ಮತ್ತೆ ಹೇಳಿಕೆ ವಾಪಸ್ ಪಡೆಯುವುದಿಲ್ಲ ಎಂದು ಅವರು ಹೇಳಿದ್ದಾರೆ.

2023ರಲ್ಲಿ ರಾಯುಡು ಪ್ರದರ್ಶನ ಉತ್ತಮವಾಗಿರಲಿಲ್ಲ. ಇಂಪ್ಯಾಕ್ಟ್​ ಪ್ಲೇಯರ್​ ಆಗಿ 15 ಪಂದ್ಯಗಳಲ್ಲಿ ಆಡಿದ್ದಾರೆ. ಆದೆರ, 132.28 ಸ್ಟ್ರೈಕ್ ರೇಟ್ನೊಂದಿಗೆ 139 ರನ್ ಮಾತ್ರ ಗಳಿಸಿದ್ದಾರೆ. ಐಪಿಎಲ್​ ಇತಿಹಾಸದಲ್ಲಿ 200 ಅಥವಾ ಅದಕ್ಕಿಂತ ಹೆಚ್ಚು ಪಂದ್ಯಗಳನ್ನು ಆಡಿದ ಕೆಲವೇ ಕೆಲವು ಆಟಗಾರರಲ್ಲಿ ರಾಯುಡು ಕೂಡ ಒಬ್ಬರು. ಅವರು 4239 ರನ್ ಗಳಿಸಿರುವ ರಾಯುಡು ಐಪಿಎಲ್​ನಲ್ಲಿ ಅತಿ ಹೆಚ್ಚು ರನ್ ಗಳಿಸಿದವರ ಪಟ್ಟಿಯಲ್ಲಿ 12ನೇ ಸ್ಥಾನದಲ್ಲಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News Special Face Book ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
ವೈವಿಧ್ಯಮಯ ಸುದ್ದಿಗಳಿಗಾಗಿ Vistara News Twitter ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

ಕ್ರಿಕೆಟ್

ICC World Cup 2023 : ಕ್ರಿಕೆಟ್​ ದೇವರು ಸಚಿನ್​ಗೆ ಕ್ರಿಕೆಟ್​​ ವಿಶ್ವಕಪ್​ನ ವಿಶೇಷ ಗೌರವ

ಅಹ್ಮದಾಬಾದ್​​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಅಕ್ಟೋಬರ್ 5 ರಂದು ನಡೆಯಲಿರುವ ಉದ್ಘಾಟನಾ ಪಂದ್ಯಕ್ಕೂ ಮೊದಲು ಸಚಿನ್​ ಅವರು ಐಸಿಸಿ ಪುರುಷರ ಕ್ರಿಕೆಟ್ ವಿಶ್ವಕಪ್ ಟ್ರೋಫಿಯೊಂದಿಗೆ (ICC World Cup 2023) ಆಗಮಿಸಲಿದ್ದಾರೆ.

VISTARANEWS.COM


on

Sachin tendulkar
Koo

ಬೆಂಗಳೂರು: ಭಾರತದ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರನ್ನು 2023 ರ ಏಕದಿನ ಕ್ರಿಕೆಟ್​ ವಿಶ್ವಕಪ್​​ನ (ICC World Cup 2023) ಜಾಗತಿಕ ರಾಯಭಾರಿಯಾಗಿ ಹೆಸರಿಸಲಾಗಿದೆ. ಭಾರತ ಆತಿಥ್ಯ ವಹಿಸಲಿರುವ ವಿಶ್ವಕಪ್ ಗೆ ಸಚಿನ್ ಅವರನ್ನು ಜಾಗತಿಕ ರಾಯಭಾರಿಯಾಗಿ ಹೆಸರಿಸಿರುವುದು ಸೂಕ್ತ ಗೌರವವಾಗಿದೆ. 12 ವರ್ಷಗಳ ಹಿಂದೆ 2011ರಲ್ಲಿ ತವರಿನಲ್ಲಿ ನಡೆದ ಟೂರ್ನಿಯಲ್ಲಿ ಸಚಿನ್ ತೆಂಡೂಲ್ಕರ್ ಕೊನೆಯ ಬಾರಿಗೆ ಟ್ರೋಫಿ ಎತ್ತಿ ಹಿಡಿದಿದ್ದರು.

ಸಚಿತ್​ ತೆಂಡೂಲ್ಕರ್ ಅವರು ತಮ್ಮ ವೃತ್ತಿಜೀವನದಲ್ಲಿ ಆರು 50 ಓವರ್​ಗಳ ಕ್ರಿಕೆಟ್​ ವಿಶ್ವ ಕಪ್​ನಲ್ಲಿ ಕಾಣಿಸಿಕೊಂಡು ಅಪೇಕ್ಷಣೀಯ ದಾಖಲೆಯನ್ನು ಹೊಂಡಿದ್ದಾರೆ. ಹೀಗಾಗಿ ಅವರನ್ನು ಅಂಬಾಸಿಡರ್ ಆಗಿ ಅಯ್ಕೆ ಮಾಡಲಾಗಿದೆ. ಮಾಸ್ಟರ್ ಬ್ಲಾಸ್ಟರ್, ಅಹಮದಾಬಾದ್​ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಉದ್ಘಾಟನಾ ಪಂದ್ಯಕ್ಕೆ ಮೊದಲು ಪುರುಷರ ಕ್ರಿಕೆಟ್ ವಿಶ್ವಕಪ್ ಟ್ರೋಫಿಯೊಂದಿಗೆ ನಡೆಯಲಿದ್ದಾರೆ.

1987 ರಲ್ಲಿ ಬಾಲ್​ ಬಾಯ್​ ಆಗಿ ಕ್ರಿಕೆಟ್ ಪ್ರೀತಿ ಬೆಳೆಸಿದ ದಿನದಿಂದಹಿಡಿದು ಆರು ಆವೃತ್ತಿಗಳಲ್ಲಿ ದೇಶವನ್ನು ಪ್ರತಿನಿಧಿಸುವವರೆಗೆ, ವಿಶ್ವಕಪ್​ ಕ್ರಿಕೆಟ್​ ಯಾವಾಗಲೂ ನನ್ನ ಹೃದಯದಲ್ಲಿ ವಿಶೇಷ ಸ್ಥಾನ ಹೊಂದಿದ್ದವು. 2011 ರಲ್ಲಿ ವಿಶ್ವಕಪ್ ಗೆದ್ದಿದ್ದು ನನ್ನ ಕ್ರಿಕೆಟ್ ಪ್ರಯಾಣದ ಹೆಮ್ಮೆಯ ಕ್ಷಣವಾಗಿದೆ ಎಂದು ಬ್ರಾಂಡ್ ಅಂಬಾಸಿಡರ್​ ಆದ ಬಳಿಕ ಸಚಿನ್ ತೆಂಡೂಲ್ಕರ್ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಭಾರತದಲ್ಲಿ ನಡೆಯಲಿರುವ ಐಸಿಸಿ ಪುರುಷರ ಕ್ರಿಕೆಟ್ ವಿಶ್ವಕಪ್ 2023ರಲ್ಲಿ ಅನೇಕ ತಂಡಗಳು ಮತ್ತು ಆಟಗಾರರು ಕಠಿಣ ಸ್ಪರ್ಧೆಗೆ ಸಜ್ಜಾಗಿದ್ದದಾರೆ. ಈ ಅದ್ಭುತ ಪಂದ್ಯಾವಳಿಯನ್ನು ಉತ್ಸುಕತೆಯಿಂದ ಎದುರು ನೋಡುತ್ತೇನೆ ಎಂದು ಹೇಳಿದ್ದಾರೆ.

ವಿಶ್ವಕಪ್​ನಂಥ ಪ್ರಮುಖ ಟೂರ್ನಿಗಳು ಯುವ ಮನಸ್ಸುಗಳಲ್ಲಿ ಕನಸುಗಳನ್ನು ಮೂಡಿಸುತ್ತವೆ/ ಈ ಆವೃತ್ತಿಯು ಯುವ ಮನಸ್ಸುಗಳಿಗೆ ಕ್ರೀಡೆಗಳನ್ನು ತೊಡಗಿಸಿಕೊಳ್ಳಲು ಮತ್ತು ತಮ್ಮ ದೇಶಗಳನ್ನು ಉನ್ನತ ಮಟ್ಟದಲ್ಲಿ ಪ್ರತಿನಿಧಿಸಲು ಸ್ಫೂರ್ತಿ ನೀಡಲಿದೆ ಎಂದು ನಾನು ಭಾವಿಸುತ್ತೇನೆ ಎಂದು ಹೇಳಿದರು.

ರಾಯಭಾರಿಗಳ ಪಟ್ಟಿಯಲ್ಲಿ ಇನ್ಯಾರಿದ್ದಾರೆ

ವೆಸ್ಟ್ ಇಂಡೀಸ್​​ನ ವಿವಿಯನ್ ರಿಚರ್ಡ್ಸ್, ದಕ್ಷಿಣ ಆಫ್ರಿಕಾದ ಎಬಿ ಡಿವಿಲಿಯರ್ಸ್, ಇಂಗ್ಲೆಂಡ್ ವಿಶ್ವಕಪ್ ವಿಜೇತ ನಾಯಕ ಇಯಾನ್ ಮಾರ್ಗನ್, ಆಸ್ಟ್ರೇಲಿಯಾದ ಆರೋನ್ ಫಿಂಚ್, ಶ್ರೀಲಂಕಾದ ಸ್ಪಿನ್ ದಿಗ್ಗಜ ಮುತ್ತಯ್ಯ ಮುರಳೀಧರನ್, ನ್ಯೂಜಿಲೆಂಡ್​ನ ರಾಸ್ ಟೇಲರ್, ಭಾರತದ ಸುರೇಶ್ ರೈನಾ, ಮಿಥಾಲಿ ರಾಜ್ ಮತ್ತು ಪಾಕಿಸ್ತಾನದ ಆಲ್​ರೌಂಡರ್​ ಮೊಹಮ್ಮದ್ ಹಫೀಜ್ ಐಸಿಸಿ ರಾಯಭಾರಿಗಳ ಪಟ್ಟಿಯಲ್ಲಿದ್ದಾರೆ. ಇವರೆಲ್ಲರೂ ದೇಶಾದ್ಯಂತ ಆಯ್ದ ಪಂದ್ಯಗಳಿಗೆ ಹಾಜರಾಗಲಿದ್ದಾರೆ, ಇದು ಬಹುನಿರೀಕ್ಷಿತ ವಿಶ್ವಕಪ್​ನ ಉತ್ಸಾಹವನ್ನು ಮತ್ತಷ್ಟು ಹೆಚ್ಚಿಸಲಿದೆ.

ಇದನ್ನೂ ಓದಿ : ICC World Cup 2023 : ಭಾರತ- ನೆದರ್ಲ್ಯಾಂಡ್ಸ್​ ​​​ ಅಭ್ಯಾಸ ಪಂದ್ಯವೂ ರದ್ದು

ಐಸಿಸಿ ಪುರುಷರ ಕ್ರಿಕೆಟ್ ವಿಶ್ವಕಪ್ 2023 ಅಕ್ಟೋಬರ್ 5ರಂದು ಅಹಮದಾಬಾದ್​​ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ನಡುವೆ ಪ್ರಾರಂಭವಾಗಲಿದೆ. ಒಟ್ಟು 48 ಪಂದ್ಯಗಳು 10 ಸ್ಥಳಗಳಲ್ಲಿ ನಡೆಯಲಿದೆ. ನವೆಂಬರ್ 19 ರಂದು ವಿಶ್ವದ ಅತಿದೊಡ್ಡ ಕ್ರಿಕೆಟ್ ಕ್ರೀಡಾಂಗಣದಲ್ಲಿ ಫೈನಲ್ ಪಂದ್ಯ ನಡೆಯಲಿದೆ.

Continue Reading

ಕ್ರಿಕೆಟ್

ICC World Cup 2023 : ಭಾರತ- ನೆದರ್ಲ್ಯಾಂಡ್ಸ್​ ​​​ ಅಭ್ಯಾಸ ಪಂದ್ಯವೂ ರದ್ದು

ಎರಡೂ ಅಭ್ಯಾಸ ಪಂದ್ಯಗಳು ಮಳೆಯಿಂದ ರದ್ದಾಗಿರುವ ಕಾರಣ ವಿಶ್ವ ಕಪ್​ನಲ್ಲಿ (ICC World Cup 2023) ಭಾರತ ತಂಡ ನೇರವಾಗಿ ಆಸ್ಟ್ರೇಲಿಯಾ ತಂಡವನ್ನು ಎದುರಿಸಲಿದೆ.

VISTARANEWS.COM


on

indvsned practice match
Koo

ತಿರುವನಂತಪುರ : ನೆದರ್ಲ್ಯಾಂಡ್ಸ್ ವಿರುದ್ಧದ ಭಾರತ ತಂಡದ ವಿಶ್ವ ಕಪ್​ (ICC World Cup 2023) ಅಭ್ಯಾಸ ಪಂದ್ಯವೂ ರದ್ದಾಗಿದೆ. ಗುವಾಹಟಿಯಲ್ಲಿ ನಿಗದಿಯಾಗಿದ್ದ ಇಂಗ್ಲೆಂಡ್ ವಿರುದ್ಧದ ಮೊದಲ ಪಂದ್ಯವೂ ಮಳೆಯ ಕಾರಣಕ್ಕೆ ರದ್ದಾಗಿತ್ತು. ಆ ಪಂದ್ಯ ಗುವಾಹಟಿಯಲ್ಲಿ ಆಯೋಜನೆಗೊಂಡಿತ್ತು. ಹೀಗಾಗಿ ಯಾವುದೇ ಅಭ್ಯಾಸ ಪಂದ್ಯಗಳು ಇಲ್ಲದೆ ಭಾರತ ತಂಡ ನೇರವಾಗಿ ವಿಶ್ವ ಕಪ್​ ಆಡಲಿದೆ. ಬಲಿಷ್ಠ ಆಸ್ಟ್ರೇಲಿಯಾ ತಂಡದ ವಿರುದ್ಧ ತನ್ನ ವಿಶ್ವ ಕಪ್ ಅಭಿಯಾನ ಆರಂಭಿಸಲಿದೆ. ಅಕ್ಟೋಬರ್ 8ರಂದು ಚೆನ್ನೈನ ಚೆಪಾಕ್​ ಸ್ಟೇಡಿಯಮ್​ನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಪಂದ್ಯ ಆಯೋಜನೆಗೊಂಡಿದೆ.

ಅಕ್ಟೋಬರ್ 5 ರಿಂದ ಪ್ರಾರಂಭವಾಗಲಿರುವ ವಿಶ್ವಕಪ್ 2023 ಕ್ಕೆ ಮುಂಚಿತವಾಗಿ ಭಾರತ ಮತ್ತು ನೆದರ್ಲ್ಯಾಂಡ್ಸ್ ಇಂದು ತಮ್ಮ ಅಂತಿಮ ಅಭ್ಯಾಸ ಪಂದ್ಯದಲ್ಲಿ ಮುಖಾಮುಖಿಯಾಗಬೇಕಾಗಿತ್ತು.. ಇಂಗ್ಲೆಂಡ್ ವಿರುದ್ಧದ ಭಾರತದ ಹಿಂದಿನ ಅಭ್ಯಾಸ ಪಂದ್ಯಗಳು ಒಂದು ಎಸೆತವೂ ನಡೆಯದೇ ರದ್ದಾಗಿದ್ದವು. ಮತ್ತೊಂದೆಡೆ, ಆಸ್ಟ್ರೇಲಿಯಾ ವಿರುದ್ಧದ ನೆದರ್ಲ್ಯಾಂಡ್ಸ್ ಪಂದ್ಯವು ಯಾವುದೇ ಫಲಿತಾಂಶವಿಲ್ಲದೆ ಕೊನೆಗೊಂಡಿತ್ತು. ಆ ಪಂದ್ಯದಲ್ಲಿ ನೆದರ್ಲ್ಯಾಂಡ್​ ಬೌಲರ್​ಗಳು ಉತ್ತಮ ಪ್ರದರ್ಶನ ನೀಡಿ ಆಸ್ಟ್ರೇಲಿಯಾ ತಂಡವನ್ನು 23 ಓವರ್​ಗಳಲ್ಲಿ 7 ವಿಕೆಟ್ ನಷ್ಟಕ್ಕೆ 188 ರನ್​ಗಳಿಗೆ ನಿಯಂತ್ರಿಸಿತ್ತು,

ಇದೀಗ ನೆದಲ್ಯಾಂಡ್ಸ್ ತಂಡದ ಮತ್ತೊಂದು ಪಂದ್ಯವೂ ಫಲಿತಾಂಶವೇ ಇಲ್ಲದೆ ರದ್ದಾಗಿದೆ. ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಕನಿಷ್ಠ ಬೌಲಿಂಗ್ ಮಾಡುವ ಅವಕಾಶವಾದರೂ ಆ ತಂಡಕ್ಕೆ ಸಿಕ್ಕಿತ್ತು. ಆದರೆ, ಭಾರತ ವಿರುದ್ಧ ಒಂದೇ ಒಂದು ಎಸೆತ ಮಾಡಲು ಅವಕಾಶ ಸಿಗಲಿಲ್ಲ.

ಪ್ರಯಾಣದ ಸುಸ್ತು

ಸ್ಥಳೀಯ ಅನುಕೂಲಗಳನ್ನು ಬಳಸಿಕೊಂಡು ಭಾರತ ತಂಡ ವಿಶ್ವ ಕಪ್ ಗೆಲ್ಲುತ್ತದೆ ಎಂದು ವಿಶ್ಲೇಷಣೆ ಮಾಡಲಾಗಿದೆ. ಅದಕ್ಕೆ ಪೂರವಕಾಗಿ ಭಾರತ ತಂಡವೂ ಅತ್ಯಂತ ಉಮೇದಿನಲ್ಲಿದೆ. ಹೀಗಾಗಿ ವಿಶ್ವ ಕಪ್​ಗೆ ಮೊದಲು ಅಭ್ಯಾಸ ಪಂದ್ಯದಲ್ಲಿ ಆಡುವುದು ಈ ತಂಡಕ್ಕೆ ಅನಿವಾರ್ಯವಾಗಿತ್ತು. ಆದರೆ, ತಂಡಕ್ಕೆ ಎರಡೂ ಅಭ್ಯಾಸ ಪಂದ್ಯಗಳು ದೊರಕಿಲ್ಲ.

ಭಾರತ ತಂಡದ ಪಂದ್ಯಗಳು ಭಾರತದ 10 ಪ್ರದೇಶಗಳಲ್ಲಿ ನಡೆಯಲಿದೆ. ಹೀಗಾಗಿ ತಂಡವು ಒಂದೂವರೆ ತಿಂಗಳ ಅವಧಿಯಲ್ಲಿ ಸುಮಾರು ಸಾವಿರಾರು ಕಿಲೋ ಮೀಟರ್ ಪ್ರಯಾಣ ಮಾಡಬೇಕಾಗಿದೆ. ಹೀಗಾಗಿ ಅಭ್ಯಾಸ ಪಂದ್ಯದ ಪ್ರಯಾಣ ತಂಡಕ್ಕೆ ಹೊರೆಯೆನಿಸಬಹುದು. ಮೂರು ದಿನಗಳ ಹಿಂದೆ 15 ಆಟಗಾರರು ನೇರವಾಗಿ ಗುವಾಹಟಿಗೆ ಹೋಗಿತ್ತು. ಆದರೆ ಆ ಪ್ರಯಾಣದಿಂದ ತಂಡಕ್ಕೆ ಏನೂ ಲಾಭವಾಗಿರಲಿಲ್ಲ. ಮಳೆಯಿಂದಾಗಿ ಆಟ ರದ್ದಾಗಿತ್ತು. ಅಲ್ಲಿಂದ 2604 ಕಿಲೋ ಮೀಟರ್ ಪ್ರಯಾಣಿಸಿ ತಿರುವನಂತಪುರಕ್ಕೆ ಬಂದಿದ್ದ ಭಾರತ ತಂಡ ಇಲ್ಲಿಯೂ ನೆಟ್​ ಪ್ರಾಕ್ಟೀಸ್ ಮಾಡಿದ್ದಷ್ಟೇ ಬಂತು. ಪಂದ್ಯ ನಡೆಯದ ಕಾರಣ ಹೆಚ್ಚಿನ ಪ್ರಯೋಜನ ದೊರಕಿಲ್ಲ.

ತಂಡಗಳು

ಭಾರತ: ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ (ಉಪನಾಯಕ), ಶುಭಮನ್ ಗಿಲ್, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ರವಿಚಂದ್ರನ್ ಅಶ್ವಿನ್, ಇಶಾನ್ ಕಿಶನ್ (ವಿಕೆ), ಸೂರ್ಯಕುಮಾರ್ ಯಾದವ್.

ನೆದರ್ಲ್ಯಾಂಡ್ಸ್: ಸ್ಕಾಟ್ ಎಡ್ವರ್ಡ್ಸ್ (ಸಿ & ವಿಕೆ), ಮ್ಯಾಕ್ಸ್ ಒ’ಡೌಡ್, ಬಾಸ್ ಡಿ ಲೀಡ್, ವಿಕ್ರಮ್ಜಿತ್ ಸಿಂಗ್, ತೇಜಾ ನಿಡಮನೂರು, ಪಾಲ್ ವ್ಯಾನ್ ಮೀಕೆರೆನ್, ಕಾಲಿನ್ ಆಕರ್ಮ್ಯಾನ್, ರೋಲೊಫ್ ವ್ಯಾನ್ ಡೆರ್ ಮೆರ್ವೆ, ಲೋಗನ್ ವ್ಯಾನ್ ಬೀಕ್, ಆರ್ಯನ್ ದತ್, ರಿಯಾನ್ ಕ್ಲೈನ್, ವೆಸ್ಲಿ ಬಾರೆಸಿ, ಸಾಕಿಬ್ ಜುಲ್ಫಿಕರ್, ಶರೀಜ್ ಅಹ್ಮದ್, ಸಿಬ್ರಾಂಡ್ ಎಂಗೆಲ್ಬ್ರೆಕ್ಟ್.

Continue Reading

ಕ್ರಿಕೆಟ್

ICC World Cup 2023: ವಿಶ್ವಕಪ್‌ ಫೈಟ್‌ಗೆ ಪಾಕ್‌ ಸಜ್ಜು; ತಂಡದ ಬಲ-ದೌರ್ಬಲ್ಯಗಳೇನು? ಇಲ್ಲಿದೆ ವಿವರಣೆ

ICC World Cup 2023: ಬಾಬರ್‌ ಅಜಂ ನೇತೃತ್ವದ ಪಾಕಿಸ್ತಾನ ತಂಡವು ಭಾರತಕ್ಕೆ ಬಂದಿಳಿದಿದ್ದು, ಭರ್ಜರಿ ಸ್ವಾಗತ ದೊರೆತಿದೆ. ವಿಶ್ವಕಪ್‌ಗೆ ಪಾಕ್‌ ತಂಡ ಹೇಗೆ ಸಿದ್ಧವಾಗಿದೆ? ತಂಡದ ಪ್ಲಸ್‌ ಹಾಗೂ ಮೈನಸ್‌ ಏನು ಎಂಬುದರ ಸಂಕ್ಷಿಪ್ತ ಮಾಹಿತಿ ಇಲ್ಲಿದೆ.

VISTARANEWS.COM


on

Edited by

Pakistan Cricket Team
Koo

ಬೆಂಗಳೂರು: 2019ರ ಏಕದಿನ ವಿಶ್ವಕಪ್‌ನಲ್ಲಿ ಸೆಮಿಫೈನಲ್‌ ತಲುಪುವಲ್ಲಿಯೂ ವಿಫಲ. 2021 ಹಾಗೂ 2022ರಲ್ಲಿ ನಡೆದ ಟಿ-20 ವಿಶ್ವಕಪ್‌ ಟೂರ್ನಿಯಲ್ಲಿ ಹಿನ್ನಡೆ. 2022ರ ಏಷ್ಯಾಕಪ್‌ ಫೈನಲ್‌ನಲ್ಲಿ ಸೋಲು. 2023ರ ಏಷ್ಯಾಕಪ್‌ನಲ್ಲೂ ಫೈನಲ್‌ ತಲುಪುವಲ್ಲಿ ವಿಫಲ. ಅತ್ಯುತ್ತಮ ತಂಡವನ್ನೇ ಹೊಂದಿದ್ದರೂ ಪಾಕಿಸ್ತಾನ ಕ್ರಿಕೆಟ್‌ ತಂಡವು ಹೀಗೆ ಸಾಲು ಸಾಲು ವಿಶ್ವ ಕ್ರಿಕೆಟ್‌ ಟೂರ್ನಿಗಳಲ್ಲಿ ಸೋಲನುಭವಿಸಿದೆ. ಆದರೆ, ಈ ಸೋಲನ್ನು ಮರೆತು, ಗೆಲುವಿನ ಸಂಭ್ರಮ ಆಚರಿಸುವ ಮನೋಭಾವದೊಂದಿಗೆ ಪಾಕ್‌ ಕ್ರಿಕೆಟ್‌ ತಂಡವು ಭಾರತಕ್ಕೆ ಆಗಮಿಸಿದೆ. ಹಾಗಾದರೆ, 2023ರ ವಿಶ್ವಕಪ್‌ಗೆ ಪಾಕ್‌ ಕ್ರಿಕೆಟ್‌ ತಂಡ ಹೇಗೆ ಸಿದ್ಧವಾಗಿದೆ? ಅದರ ಬಲಾಬಲವೇನು ಎಂಬುದರ ಇಣುಕು ನೋಟ ಇಲ್ಲಿದೆ.

ಪಾಕಿಸ್ತಾನದ 15 ಸದಸ್ಯರ ತಂಡ

ಬಾಬರ್‌ ಅಜಂ (ನಾಯಕ), ಶದಾಬ್‌ ಖಾನ್‌ (ಉಪ ನಾಯಕ), ಫಖರ್‌ ಜಮಾನ್‌, ಇಮಾಮ್‌ ಉಲ್‌ ಹಕ್‌, ಅಬ್ದುಲ್ಲಾ ಶಫೀಕ್‌, ಮೊಹಮ್ಮದ್‌ ರಿಜ್ವಾನ್‌, ಇಫ್ತಿಕಾರ್‌ ಅಹ್ಮದ್‌, ಅಘಾ ಸಲ್ಮಾನ್‌, ಸೌದ್‌ ಶಕೀಲ್‌, ಮೊಹಮ್ಮದ್‌ ನವಾಜ್‌, ಶಹೀನ್‌ ಅಫ್ರಿದಿ, ಹ್ಯಾರಿಸ್‌ ರೌಫ್‌, ಹಸನ್‌ ಅಲಿ, ಉಸಾಮ ಮಿರ್‌, ಮೊಹಮ್ಮದ್‌ ವಸೀಂ.

ಬಾಬರ್‌ ಅಜಂ ಬಳಗದ ಸಾಮರ್ಥ್ಯವೇನು?

  1. ಬಲಿಷ್ಠ ಬ್ಯಾಟಿಂಗ್‌ ಲೈನ್‌ಅಪ್‌ ಹೊಂದಿರುವುದು ಪಾಕ್‌ ತಂಡದ ಸಾಮರ್ಥ್ಯ. ಬಾಬರ್‌ ಅಜಂ, ಫಖರ್‌ ಜಮಾನ್‌, ಇಮಾಮ್‌ ಉಲ್‌ ಹಕ್‌, ಮೊಹಮ್ಮದ್‌ ರಿಜ್ವಾನ್‌, ಇಫ್ತಿಕಾರ್‌ ಅಹ್ಮದ್‌ ಅವರು ವಿಶ್ವ ದರ್ಜೆಯ ಬ್ಯಾಟ್ಸ್‌ಮನ್‌ಗಳಾಗಿದ್ದಾರೆ. ಇವರು ಯಾವುದೇ ಪಂದ್ಯದ ಗತಿ ಬದಲಿಸುವ ಸಾಮರ್ಥ್ಯ ಹೊಂದಿದ್ದಾರೆ.
  2. ಪಾಕಿಸ್ತಾನದ ವೇಗದ ಬೌಲಿಂಗ್‌ ಅಟ್ಯಾಕ್‌ಗೆ ಜಗತ್ತಿನ ಶ್ರೇಷ್ಠ ಬ್ಯಾಟ್ಸ್‌ಮನ್‌ಗಳೇ ಒಂದು ಕ್ಷಣ ಯೋಚಿಸುತ್ತಾರೆ. ಶಹೀನ್‌ ಅಫ್ರಿದಿ, ಹ್ಯಾರಿಸ್‌ ರೌಫ್‌, ಮೊಹಮ್ಮದ್‌ ವಸೀಂ ಪ್ರಮುಖ ಪೇಸರ್‌ಗಳಾಗಿದ್ದಾರೆ.
  3. ಬ್ಯಾಟಿಂಗ್‌ ಹಾಗೂ ಬೌಲಿಂಗ್‌ ಜತೆಗೆ ಫೀಲ್ಡಿಂಗ್‌ನಲ್ಲೂ ಪಾಕಿಸ್ತಾನ ತಂಡವು ಬಲಿಷ್ಠವಾಗಿದೆ. ಜಗತ್ತಿನಲ್ಲೇ ಉತ್ತಮ ಫೀಲ್ಡರ್‌ಗಳಿರುವ ರಾಷ್ಟ್ರದಲ್ಲಿ ಪಾಕ್‌ 2ನೇ ಸ್ಥಾನದಲ್ಲಿರುವುದೇ ಇದಕ್ಕೆ ಸಾಕ್ಷಿಯಾಗಿದೆ. ಹಾಗಾಗಿ, ಪ್ರತಿ ಪಂದ್ಯದಲ್ಲಿ ಪಾಕ್‌ ತಂಡವು 20-30 ರನ್‌ ಉಳಿಸುವುದರಲ್ಲಿ ಎರಡು ಮಾತಿಲ್ಲ.
  4. ಬಾಬರ್‌ ಅಜಂ ಉತ್ತಮ ನಾಯಕತ್ವ ಹಾಗೂ ಅವರ ಅತ್ಯದ್ಭುತ ಬ್ಯಾಟಿಂಗ್‌ ಕೂಡ ಪಾಕ್‌ಗೆ ಸಕಾರಾತ್ಮಕವಾಗಿದೆ. ಮಹತ್ವದ ಟೂರ್ನಿಗಳಲ್ಲಿ ಇದು ಸಾಬೀತಾಗಿದೆ.

ಪಾಕ್‌ ತಂಡದ ದೌರ್ಬಲ್ಯಗಳೇನು?

  1. ಸ್ಪಿನ್‌ ವಿಭಾಗವೇ ಪಾಕ್‌ ಕ್ರಿಕೆಟ್‌ ತಂಡದ ದೊಡ್ಡ ತಲೆನೋವಾಗಿದೆ. ಉಪ ನಾಯಕ ಶದಾಬ್‌ ಖಾನ್‌ ಅವರು ಅಲ್‌ರೌಂಡರ್‌ ಆಗದ್ದರೂ ಏಷ್ಯಾ ಕಪ್‌ ಟೂರ್ನಿಯಲ್ಲ ಅವರ ಆಟ ನಡೆದಿರಲಿಲ್ಲ. ಸ್ಪಿನ್ನರ್‌ಗಳಿಗೆ ಭಾರತದ ಪಿಚ್‌ಗಳು ಹೇಳಿ ಮಾಡಿಸಿದಂತಿರುವ ಕಾರಣ ಸ್ಪಿನ್‌ ವಿಭಾಗವು ಪಾಕ್‌ಗೆ ತಲೆನೋವಾಗಿದೆ.
  2. ಏಷ್ಯಾ ಕಪ್‌ ಟೂರ್ನಿಯಲ್ಲಿ ಭಾರತದ ವಿರುದ್ಧ ನಡೆದ ಪಂದ್ಯದ ವೇಳೆ ಗಾಯಗೊಂಡಿರುವ ನಸೀಮ್‌ ಶಾ ಅನುಪಸ್ಥಿತಿಯೂ ಪಾಕ್‌ಗೆ ಕಾಡಲಿದೆ. ಇವರ ಜಾಗಕ್ಕೆ ಅಷ್ಟೇನೂ ಫಾರ್ಮ್‌ನಲ್ಲಿರುವ ಹಸನ್‌ ಅಲಿಗೆ ಪಾಕ್‌ ಮಣೆ ಹಾಕಿದೆ. ಆದರೂ, ವೇಗಿ ನಸೀಮ್‌ ಶಾ ಅಲಭ್ಯತೆಯು ಪಾಕಿಸ್ತಾನಕ್ಕೆ ಕಾಡಲಿದೆ.
  3. ಇತ್ತೀಚಿನ ಸರಣಿಗಳಲ್ಲಿ ಮೊಹಮ್ಮದ್‌ ರಿಜ್ವಾನ್‌ ಹಾಗೂ ಸಲ್ಮಾನ್‌ ಅಲಿ ಅಘಾ ಅವರಿಂದ ಸ್ಫೋಟಕ ಬ್ಯಾಟಿಂಗ್‌ ಪ್ರದರ್ಶನ ಕಾಣದಿರುವುದು ಬಾಬರ್‌ ಅಜಂ ಅವರಿಗೆ ನುಂಗಲಾರದ ತುತ್ತಾಗಿದೆ. ಪ್ರಮುಖ ಪಂದ್ಯಗಳಲ್ಲಿಯೇ ಇವರು ಕೈಕೊಡುವುದು ಕೂಡ ಹೆಚ್ಚು ರೂಢಿಯಾಗಿದೆ.
  4. ಅಗ್ರ ಕ್ರಮಾಂಕದ ಸದೃಢ ಬ್ಯಾಟಿಂಗ್‌ ಪಾಕಿಸ್ತಾನದ ಬಲವಾದರೆ, ಇದೇ ದೌರ್ಬಲ್ಯವೂ ಆಗಿದೆ. ಅಗ್ರ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳು ಔಟಾದರೆ ಸಾಕು, ಪಾಕ್‌ ಇನಿಂಗ್ಸ್‌ ಮುಗಿದಂತೆಯೇ ಎಂಬಂತಾಗಿದೆ. ಅದರಲ್ಲೂ, ದೀರ್ಘ ಸಮಯದ ನಂತರ ಭಾರತದ ಪಿಚ್‌ಗಳಲ್ಲಿ ಆಡುತ್ತಿದ್ದು, ಎಚ್ಚರಿಕೆ ವಹಿಸುವುದು ಅಗತ್ಯವಾಗಿದೆ.

ಇದನ್ನೂ ಓದಿ: ICC World Cup 2023 : ವಿಶ್ವ ಕಪ್​ಗೆ ಆಡುವ ಭಾರತ ತಂಡದ ಬಲಾಬಲವೇನು? ಗೆಲುವಿನ ಅವಕಾಶ ಎಷ್ಟಿದೆ?

Shaheen Afridi

ಪಾಕ್‌ಗೆ ಇರುವ ಒಳ್ಳೆಯ ಅವಕಾಶಗಳೇನು?

ಪಾಕಿಸ್ತಾನ ತಂಡವು ಕಳೆದ 12 ತಿಂಗಳಿಂದ ಸತತವಾಗಿ ಉತ್ತಮ ಪ್ರದರ್ಶನ ತೋರಿದೆ. ವಿಶ್ವ ಏಕದಿನ ರ‍್ಯಾಂಕಿಂಗ್‌ನಲ್ಲಿ ಎರಡನೇ ಸ್ಥಾನದಲ್ಲಿರುವ ಪಾಕ್‌ ತಂಡವು ಏಕದಿನ ಕ್ರಿಕೆಟ್‌ನ ಅತ್ಯುತ್ತಮ ತಂಡ ಎನಿಸಿದೆ. ಬಾಬರ್‌ ಅಜಂ ನಾಯಕತ್ವವೂ ಉತ್ತಮವಾಗಿದೆ. ಕಳೆದ 27 ವರ್ಷಗಳಿಂದ ಪಾಕಿಸ್ತಾನ ಏಕದಿನ ವಿಶ್ವಕಪ್‌ ಗೆದ್ದಿಲ್ಲ. ಬಲಿಷ್ಠ ತಂಡ, ಉತ್ತಮ ನಾಯಕತ್ವ, ಏಷ್ಯಾದಲ್ಲಿಯೇ ಪಂದ್ಯ ಆಯೋಜನೆಗೊಂಡಿರುವ ಕಾರಣ ವಿಶ್ವಕಪ್‌ ಗೆಲ್ಲಲು ಪಾಕ್‌ಗೆ ಒಳ್ಳೆಯ ಅವಕಾಶಗಳಿವೆ.

babar azam

ಹೀಗಿದೆ ಪಾಕ್‌ ತಂಡದ ವೇಳಾಪಟ್ಟಿ

ಅಕ್ಟೋಬರ್‌ 5ರಿಂದ ಏಕದಿನ ಕ್ರಿಕೆಟ್‌ ವಿಶ್ವಕಪ್‌ ಟೂರ್ನಿ ಆರಂಭವಾಗಲಿದೆ. ಪಾಕಿಸ್ತಾನವು ಮೊದಲ ಪಂದ್ಯವನ್ನು ಅಕ್ಟೋಬರ್‌ 6ರಂದು ನೆದರ್ಲೆಂಡ್ಸ್‌ ವಿರುದ್ಧ ಆಡಲಿದೆ. ಅ.10ರಂದು ಶ್ರೀಲಂಕಾ, ಅ.14ರಂದು ಭಾರತ, ಅ.20 ಆಸ್ಟ್ರೇಲಿಯಾ, ಅ.23 ಅಫಘಾನಿಸ್ತಾನ, ಅ.26 ದಕ್ಷಿಣ ಆಫ್ರಿಕಾ, ಅ.31 ಬಾಂಗ್ಲಾದೇಶ, ನವೆಂಬರ್‌ 4 ನ್ಯೂಜಿಲ್ಯಾಂಡ್‌ ಹಾಗೂ ನವೆಂಬರ್‌ 11ರಂದು ಇಂಗ್ಲೆಂಡ್‌ ವಿರುದ್ಧ ಆಡಲಿದೆ. ಅದರಲ್ಲೂ, ಅಹ್ಮದಾಬಾದ್‌ನಲ್ಲಿ ನಡೆಯುವ ಭಾರತ ಹಾಗೂ ಪಾಕಿಸ್ತಾನ ನಡುವಿನ ಪಂದ್ಯವು ತೀವ್ರ ಕುತೂಹಲ ಕೆರಳಿಸಿದೆ.

ವಿಶ್ವಕಪ್‌ ಕುರಿತ ಇನ್ನಷ್ಟು ಆಸಕ್ತಿದಾಯಕ ಸುದ್ದಿಗಳಿಗೆ ಇಲ್ಲಿ ಕ್ಲಿಕ್‌ ಮಾಡಿ

Continue Reading

ಕ್ರಿಕೆಟ್

ಫೈನಲ್​ ಪ್ರವೇಶಿಸಿ ಪ್ಯಾರಿಸ್​ ಒಲಿಂಪಿಕ್ಸ್​ಗೆ ಅರ್ಹತೆ ಪಡೆದ ಲವ್ಲಿನಾ ಬೋರ್ಗಹೈನ್‌

ಬಾಕ್ಸರ್‌ ಲವ್ಲಿನಾ ಬೋರ್ಗಹೈನ್‌(Lovlina Borgohain) ಇಲ್ಲಿ ನಡೆಯುತ್ತಿರುವ ಏಷ್ಯನ್​ ಗೇಮ್ಸ್​(Asian Games 2023) ಕ್ರೀಡಾಕೂಟದಲ್ಲಿ ಫೈನಲ್​ ಪ್ರವೇಶಿಸುವ ಮೂಲಕ ಚಿನ್ನದ ಪದಕ ಬರವಸೆ ಮೂಡಿಸಿದ್ದಾರೆ.

VISTARANEWS.COM


on

Edited by

Lovlina Borgohain
Koo

ಹ್ಯಾಂಗ್‌ಝೌ: ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ಗೆದ್ದ ಬಾಕ್ಸರ್‌ ಲವ್ಲಿನಾ ಬೋರ್ಗಹೈನ್‌(Lovlina Borgohain) ಇಲ್ಲಿ ನಡೆಯುತ್ತಿರುವ ಏಷ್ಯನ್​ ಗೇಮ್ಸ್​(Asian Games 2023) ಕ್ರೀಡಾಕೂಟದಲ್ಲಿ ಫೈನಲ್​ ಪ್ರವೇಶಿಸುವ ಮೂಲಕ ಚಿನ್ನದ ಪದಕ ಬರವಸೆ ಮೂಡಿಸಿದ್ದಾರೆ. ಜತೆಗೆ ಮುಂದಿನ ವರ್ಷ ಪ್ಯಾರಿಸ್​ನಲ್ಲಿ ನಡೆಯುವ ಒಲಿಂಪಿಕ್ಸ್​ಗೆ ಅರ್ಹತೆಯನ್ನು ಪಡೆದಿದ್ದಾರೆ.

ಮಂಗಳವಾರ ಹ್ಯಾಂಗ್‌ಝೌನಲ್ಲಿ ನಡೆದ 75 ಕೆಜಿ ವಿಭಾಗದ ಮಹಿಳಾ ಬಾಕ್ಸಿಂಗ್​ ಸೆಮಿಫೈನಲ್‌ನಲ್ಲಿ ಲವ್ಲಿನಾ ಅವರು ಥಾಯ್ಲೆಂಡ್‌ನ ಬೈಸನ್ ಮನೀಕಾನ್ ವಿರುದ್ಧ ಕಮಾಂಡಿಂಗ್ ಗೆಲುವು ಸಾಧಿಸಿ ಫೈನಲ್‌ಗೆ ಪ್ರವೇಶಿಸಿದರು. ಲವ್ಲಿನಾ 5-0 ಅಂಕಗಳಿಂದ ಗೆದ್ದು ಮರೆದಾಡಿದರು. ಈ ಮೂಲಕ ಭಾರತಕ್ಕೆ ಚಿನ್ನ ಅಥವಾ ಬೆಳ್ಳಿ ಪದಕವನ್ನು ಖಚಿತಪಡಿಸಿದರು. ಭಾರತ ಸದ್ಯ 13 ಚಿನ್ನ, 24 ಬೆಳ್ಳಿ ಮತ್ತು 25 ಕಂಚಿನ ಪದಕ ಸೇರಿದಂತೆ ಒಟ್ಟು 62 ಪದಕಗಳೊಂದಿಗೆ ಪದಕ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ.

ಇದೇ ವರ್ಷ ಮಾರ್ಚ್​ನಲ್ಲಿ ನಡೆದಿದ್ದ ಮಹಿಳೆಯರ ವಿಶ್ವ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ(Women’s Boxing Championship) ಲವ್ಲಿನಾ ​ ಅವರು ಚಿನ್ನದ ಪದಕ ಜಯಿಸಿದ್ದರು. ನೂತನ ತೂಕ ವಿಭಾಗದಲ್ಲಿ ಸ್ಪರ್ಧೆಗೆ ಇಳಿದಿದ್ದರು. 69 ಕೆಜಿ ವೆಲ್ಟರ್‌ವೆಟ್‌ನಿಂದ 75 ಕೆಜಿ ಮಿಡ್ಲ್ ವೇಟ್‌ಗೆ ಸ್ಪರ್ಧೆಯನ್ನು ಬದಲಿಸಿಕೊಂಡು ಸ್ಪರ್ಧಿಸಿದ್ದರು.​ ಕಳೆದ ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಲವ್ಲಿನಾ 69 ಕೆಜಿ ವಿಭಾಗದಲ್ಲಿ ಸ್ಪರ್ಧಿಸಿದ್ದರು.

ಕಂಚಿಗೆ ಪಂಚ್​ ನೀಡಿದ ಪ್ರೀತಿ

ಇಂದು(ಮಂಗಳವಾರ) ನಡೆದ 54 ಕೆಜಿ ವಿಭಾಗದಲ್ಲಿ ಸ್ಪರ್ಧಿಸಿದ್ದ ಭಾರತದ ಮಹಿಳಾ ಬಾಕ್ಸರ್ ಪ್ರೀತಿ ಪವಾರ್(Preeti Pawar) ಕಂಚಿನ ಪದಕ್ಕೆ ಪಂಚ್​ ನೀಡಿದ್ದಾರೆ. ಪ್ರೀತಿ ಸೆಮಿಫೈನಲ್​ನಲ್ಲಿ ಸೋಲು ಕಂಡು ಕಂಚಿಗೆ ತೃಪ್ತಿಪಟ್ಟರು. ಚೀನಾದ ಯುವಾನ್ ಚಾಂಗ್ ವಿರುದ್ಧ ಮೊದಲ ಸುತ್ತಿನಲ್ಲಿ 4-1 ಅಂತರದಿಂದ ಸೋಲು ಕಂಡರು. ಆದರೆ ದ್ವಿತೀಯ ಸುತ್ತಿನಲ್ಲಿ ತಮ್ಮ ಪವರ್​ ಪಂಚ್​ಗಳ ಮೂಲಕ ಗೆದ್ದು ಪಂದ್ಯದಲ್ಲಿ ಹಿಡಿತ ಸಾಧಿಸಿದರು. ಆ ಬಳಿಕದ ಸುತ್ತಿನಲ್ಲಿ ಇದೇ ಲಯವನ್ನು ಮುಂದುವರಿಸಲು ಸಾಧ್ಯವಾಗದೆ ಅಂತಿಮವಾಗಿ ವಿರುದ್ಧ 5-0 ಅಂಕದಿಂದ ಸೋಲು ಕಂಡರು. 

ಇದನ್ನೂ ಓದಿ Asian Games 2023: ಸೆಮಿಯಲ್ಲಿ ಸೋತು ಕಂಚಿಗೆ ತೃಪ್ತಿಪಟ್ಟ ಪ್ರೀತಿ ಪವಾರ್

ಪುರುಷರ ಕ್ಯಾನೋ ತಂಡಕ್ಕೆ ಕಂಚು

ಬೆಳಗ್ಗೆ ನಡೆದ ಪುರುಷರ ಕ್ಯಾನೋ ಡಬಲ್ 1000 ಮೀ ಫೈನಲ್‌ನಲ್ಲಿ ಭಾರತದ ಅರ್ಜುನ್ ಸಿಂಗ್(Arjun Singh) ಮತ್ತು ಸುನಿಲ್ ಸಿಂಗ್(Sunil Singh) ಅವರು ಕಂಚಿನ ಪದಕ ಗೆದ್ದಿದ್ದರು. ಭಾರತದ ಜೋಡಿಯು 3:53.329 ಸೆಕೆಂಡ್‌ಗಳಲ್ಲಿ ಗುರಿ ತಲುಪಿ ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟಿತು. ಏಷ್ಯನ್​ ಗೇಮ್ಸ್​ ಇತಿಹಾಸದಲ್ಲಿ ಈ ಸ್ಪರ್ಧೆಯಲ್ಲಿ ಭಾರತಕ್ಕೆ ಇಲಿದ 2ನೇ ಪದಕವಾಗಿದೆ. ಇದಕ್ಕೂ ಮುನ್ನ 1994 ರಲ್ಲಿ ಹಿರೋಷಿಮಾದಲ್ಲಿ ನಡೆದಿದ್ದ ಕೂಟದಲ್ಲಿ ಭಾರತದ ಜಾನಿ ರೋಮೆಲ್ ಮತ್ತು ಸಿಜಿ ಕುಮಾರ್ ಸದಾನಂದನ್ ಕಂಚು ಗೆದ್ದಿದ್ದರು. ಉಜ್ಬೇಕಿಸ್ತಾನದ ಖೋಲ್ಮುರಾಡೋವ್ ಮತ್ತು ನುರಿಸ್ಲೋಮ್ ತುಖ್ತಾಸಿನ್ ಉಗ್ಲಿ (3:43.796 ಸೆಕೆಂಡು) ಚಿನ್ನ ಗೆದ್ದರೆ, ಕಜಕಿಸ್ತಾನದ ಟಿಮೊಫಿ ಯೆಮೆಲಿಯಾನೊವ್ ಮತ್ತು ಸೆರ್ಗೆ ಯೆಮೆಲಿಯಾನೊವ್ (3:49.991 ಸೆಕೆಂಡ್‌) ಬೆಳ್ಳಿ ಗೆದ್ದರು.

ನಿಖತ್‌ ಜರೀನ್‌ ವಿಫಲ

ಭಾರತದ ಬಾಕ್ಸಿಂಗ್‌ ತಾರೆ, 2 ಬಾರಿ ವಿಶ್ವ ಚಾಂಪಿಯನ್‌, 2022ರ ಕಾಮನ್‌ವೆಲ್ತ್‌ ಗೇಮ್ಸ್‌ ಚಾಂಪಿಯನ್‌ ನಿಖತ್‌ ಜರೀನ್‌ ಅವರು ಸೋವಮಾರ ನಡೆದಿದ್ದ 50 ಕೆ.ಜಿ. ವಿಭಾಗದ ಸೆಮಿಫೈನಲ್​ನಲ್ಲಿ ಸೋತು ಕಂಚಿಗೆ ತೃಪ್ತಿಪಟ್ಟಿದ್ದರು. ಅವರ ಮೇಲೆ ಚಿನ್ನದ ನಿರೀಕ್ಷೆ ಮಾಡಲಾಗಿತ್ತು. ಆದರೆ ಅವರು ನಿರಾಸೆ ಮೂಡಿಸಿದ್ದರು. ಪ್ಯಾರಿಸ್​ನಲ್ಲಿ ನಡೆಯುವ ಒಲಿಂಪಿಕ್ಸ್​ಗೆ ಅರ್ಹತೆಯನ್ನು ಪಡೆದಿದ್ದಾರೆ. ಕಳೆದ ಟೋಕಿಯೊ ಒಲಿಂಪಿಕ್ಸ್‌ಗೆ ಅರ್ಹತೆ ಪಡೆಯುವಲ್ಲಿ ವಿಫಲರಾಗಿದ್ದರು.

Continue Reading
Advertisement
caste census repot image
ಕರ್ನಾಟಕ7 mins ago

Caste Census Report : ಮೋದಿ ಅಸಮಾಧಾನದ ಮಧ್ಯೆ ರಾಜ್ಯದಲ್ಲಿ ಮಂಡನೆಯಾಗುತ್ತಾ ಜಾತಿಗಣತಿ ವರದಿ?

Sachin tendulkar
ಕ್ರಿಕೆಟ್9 mins ago

ICC World Cup 2023 : ಕ್ರಿಕೆಟ್​ ದೇವರು ಸಚಿನ್​ಗೆ ಕ್ರಿಕೆಟ್​​ ವಿಶ್ವಕಪ್​ನ ವಿಶೇಷ ಗೌರವ

Eid Milad procession
ಕರ್ನಾಟಕ31 mins ago

Sagara News: ಸಾಗರದಲ್ಲಿ ತಲ್ವಾರ್‌ ಝಳಪಿಸಿ, ಹಿಂದು ವಿರೋಧಿ ಘೋಷಣೆ; ಮೂವರ ಬಂಧನ

gandhi
ಬಾಲಿವುಡ್40 mins ago

Gandhi Jayanti: ಗಾಂಧಿ ಪಾತ್ರಕ್ಕಾಗಿ 30 ಕೆಜಿ ತೂಕ ಕಳೆದುಕೊಂಡಿದ್ದೆ; ಬೊಮನ್‌ ಇರಾನಿ

Maharashtra News, another hospital witnessed for 10 patients death
ದೇಶ45 mins ago

Maharashtra News: ಮಹಾರಾಷ್ಟ್ರದ ಮತ್ತೊಂದು ಆಸ್ಪತ್ರೆಯಲ್ಲಿ 10 ರೋಗಿಗಳು ಮೃತ! ತನಿಖೆಗೆ ಮುಂದಾದ ಸರ್ಕಾರ

Arshad Nadeem
ಕ್ರೀಡೆ46 mins ago

Asian Games : ಪಾಕಿಸ್ತಾನದ ಸ್ಪರ್ಧಿ ನದೀಮ್ ಔಟ್​; ನೀರಜ್​ಗೆ ಪದಕ ಬಹುತೇಕ ಖಾತರಿ

rashmika
South Cinema1 hour ago

Rashmika Mandanna: ಮತ್ತೊಮ್ಮೆ ʼರಂಜಿತಮೆʼ, ʼಸಾಮಿʼ ಹಾಡಿಗೆ ಹೆಜ್ಜೆ ಹಾಕಿದ ರಶ್ಮಿಕಾ!

Annu Rani
ಕ್ರೀಡೆ1 hour ago

Asian Games : ಮಹಿಳೆಯರ ಜಾವೆಲಿನ್ ಎಸೆತದಲ್ಲಿ ಚಿನ್ನ ಗೆದ್ದು ದಾಖಲೆ ಬರೆದ ಅನ್ನುರಾಣಿ

Old Pension Scheme Madhu Bangarappa
ಕರ್ನಾಟಕ1 hour ago

Old Pension Scheme : ಸರ್ಕಾರಿ ನೌಕರರಿಗೆ Good News; ಶೀಘ್ರವೇ ಹಳೆ ಪಿಂಚಣಿ ವ್ಯವಸ್ಥೆ ಜಾರಿ ಎಂದ ಮಧು ಬಂಗಾರಪ್ಪ

No Rain Girl waiting For rain and holding Umbrella
ಉಡುಪಿ2 hours ago

karnataka weather forecast : ಮುಕ್ಕಾಲು ರಾಜ್ಯಕ್ಕೆ ಕೈಕೊಟ್ಟ ಮಳೆರಾಯ; ಮತ್ತೆ ಮುಂಗಾರು ದುರ್ಬಲ

7th Pay Commission
ನೌಕರರ ಕಾರ್ನರ್11 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Karnataka bandh Majestic
ಕರ್ನಾಟಕ1 week ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

DCC Bank Recruitment 2023
ಉದ್ಯೋಗ8 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Sphoorti Salu
ಸುವಚನ4 months ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Govt employees ssociation
ಕರ್ನಾಟಕ8 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

kpsc recruitment 2023 pdo recruitment 2023
ಉದ್ಯೋಗ3 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Rajendra Singh Gudha
ದೇಶ3 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

Village Accountant Recruitment
ಉದ್ಯೋಗ8 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike; Order from Govt
ನೌಕರರ ಕಾರ್ನರ್7 months ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ10 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

The maintenance train finally lifted Metro services as usual
ಕರ್ನಾಟಕ5 hours ago

Namma Metro : ಕೊನೆಗೂ ಲಿಫ್ಟ್ ಆಯ್ತು ಮೆಂಟೈನ್ಸ್‌ ವೆಹಿಕಲ್‌; ಎಂದಿನಂತೆ ಮೆಟ್ರೋ ಓಡಾಟ

BBK Season 10 KicchaSudeep
ಕಿರುತೆರೆ6 hours ago

BBK Season 10 : ಅಕ್ಟೋಬರ್‌ 8 ರಿಂದ ಬಿಗ್‌ ಬಾಸ್‌ ಆಟ; ಚಾರ್ಲಿ ಎಂಟ್ರಿ ಕನ್ಫರ್ಮ್, ಉಳಿದವರು ಯಾರು ?

dina bhavishya
ಪ್ರಮುಖ ಸುದ್ದಿ15 hours ago

Dina Bhavishya : ಈ ರಾಶಿಯವರಿಗೆ ಮಾತೇ ಮುತ್ತು, ಮಾತೇ ಮೃತ್ಯು!

Actor Nagabhushana
ಕರ್ನಾಟಕ1 day ago

Actor Nagabhushana : ಡ್ರಂಕ್‌ ಆ್ಯಂಡ್‌ ಡ್ರೈವ್‌ನಲ್ಲಿ ನಟ ನಾಗಭೂಷಣ್‌ ನೆಗಟಿವ್‌; ವಿಚಾರಣೆಗೆ ಕರೆದ ಪೊಲೀಸರು

Dina Bhavishya
ಪ್ರಮುಖ ಸುದ್ದಿ2 days ago

Dina Bhavishya : ಆಪ್ತರೊಂದಿಗೆ ಮಾಡುವ ವ್ಯಾಪಾರ ನಷ್ಟ ತಂದೀತು ಹುಷಾರ್‌!

Terrorist Attack in Turkey Suicide bomber blows himself near parliament
ಪ್ರಮುಖ ಸುದ್ದಿ2 days ago

Terrorist Attack: ಟರ್ಕಿ ಸಂಸತ್ ಬಳಿ ಆತ್ಮಹತ್ಯಾ ಬಾಂಬ್ ದಾಳಿ, ಸಿಸಿಟಿವಿಯಲ್ಲಿ ಸೆರೆಯಾಯ್ತು ಸ್ಫೋಟದ ಕ್ಷಣಗಳು!

prajwal and yashswini
ಕರ್ನಾಟಕ2 days ago

Actor Nagabhushana : ಆ್ಯಕ್ಟಿಂಗ್‌ ನೋಡಿ ಮೆಚ್ಚಿದವರ ಪಾಲಿಗೆ ಯಮನಾಗಿಬಿಟ್ಟ; ಮೃತ ಕುಟುಂಬಸ್ಥರ ಆಕ್ರೋಶ

Dina Bhavishya
ಪ್ರಮುಖ ಸುದ್ದಿ3 days ago

Dina Bhavishya : ಆಪ್ತರೊಂದಿಗೆ ಅತಿಯಾದ ಸಲುಗೆ ಈ ರಾಶಿಯವರಿಗೆ ಒಳ್ಳೆಯದಲ್ಲ!

dina bhavishya
ಪ್ರಮುಖ ಸುದ್ದಿ4 days ago

Dina Bhavishya : ದಿನ ಪೂರ್ತಿ ಈ ರಾಶಿಯವರಿಗೆ ಟೆನ್ಷನ್‌ ಜತೆಗೆ ಪ್ರೆಶರ್‌

Dina Bhavishya
ಪ್ರಮುಖ ಸುದ್ದಿ5 days ago

Dina Bhavishya : ಈ ರಾಶಿಯವರಿಗೆ ಮನೆಯಲ್ಲೂ ಕಿರಿಕಿರಿ, ಆಫೀಸ್‌ನಲ್ಲೂ ಕಿರಿಕ್‌!

ಟ್ರೆಂಡಿಂಗ್‌