VISTARA TOP 10 NEWS : ರಾಜ್ಯಕ್ಕೆ ಬರದ ಆತಂಕ, ಉಗ್ರರ ದಮನಕ್ಕೆ ಅಮಿತ್​ ಶಾ ಸೂಚನೆ ಮತ್ತಿತರ ದಿನದ ಪ್ರಮುಖ ಸುದ್ದಿಗಳು - Vistara News

ಕ್ರೀಡೆ

VISTARA TOP 10 NEWS : ರಾಜ್ಯಕ್ಕೆ ಬರದ ಆತಂಕ, ಉಗ್ರರ ದಮನಕ್ಕೆ ಅಮಿತ್​ ಶಾ ಸೂಚನೆ ಮತ್ತಿತರ ದಿನದ ಪ್ರಮುಖ ಸುದ್ದಿಗಳು

VISTARA TOP 10 NEWS: ದೇಶ, ವಿದೇಶಗಳ ಸುದ್ದಿಗಳು, ದಿನವಿಡೀ ನಡೆದ ಪ್ರಮುಖ ಬೆಳವಣಿಗೆಗಳ ಸುತ್ತುನೋಟವೇ Vistara Top10 News

VISTARANEWS.COM


on

Top 10 news
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

1. ಕಾಡುತ್ತಿದೆ ಹಸಿರು ಬರ; ರೈತರ ಹಿತ ಕಾಪಾಡಿ: ಕೇಂದ್ರ ತಂಡಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ
ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಮಳೆ ಕೊರತೆಯಾಗಿ ತೀವ್ರವಾಗಿ ಬರ (Karnataka Drought) ಪರಿಸ್ಥಿತಿಯು ಕಾಡುತ್ತಿದೆ. ರೈತರು ಬೆಳೆದ ಬೆಳೆಗಳು (Crop damage) ನೆಲಕಚ್ಚಿವೆ. ಅಲ್ಲದೆ, ನೀರಿಗಾಗಿ ಹಾಹಾಕಾರ ಎದುರಾಗಿದೆ. ರಾಜ್ಯಾದ್ಯಂತ ನಡೆದ ಬಿತ್ತನೆ, ಬೆಳೆ ನಾಶದ ಪ್ರಮಾಣ ಸೇರಿದಂತೆ ಇನ್ನಿತರ ವಿಷಯಗಳನ್ನು ಕೇಂದ್ರ ಬರ ಅಧ್ಯಯನ ತಂಡಕ್ಕೆ (Central Drought Study Team) ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ಅಂಕಿ-ಅಂಶಗಳ ವಿವರಣೆ ಸಹಿತ ಮಾಹಿತಿ ನೀಡಿದ್ದಾರೆ. ಅಲ್ಲದೆ, ರಾಜ್ಯದ ರೈತರ ರಕ್ಷಣೆಗೆ ಪೂರಕವಾಗಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸಲಹೆ ನೀಡಿದ್ದಾರೆ. ಪೂರ್ಣ ಸುದ್ದಿಗೆ ಈ ಲಿಂಕ್ ಕ್ಲಿಕ್ ಮಾಡಿ.
ಈ ಸುದ್ದಿಯನ್ನೂ ಓದಿ: Karnataka Drought : ಕರ್ನಾಟಕದಲ್ಲಿ ಈ ವರ್ಷ ಎದುರಾಗಲಿದೆ ಆಹಾರ ಕೊರತೆ!

2. ಉಗ್ರರನ್ನು, ಅವರನ್ನು ಪೋಷಿಸುವ ವ್ಯವಸ್ಥೆಯನ್ನು ಮಟ್ಟ ಹಾಕಿ! ತನಿಖಾ ಸಂಸ್ಥೆಗಳಿಗೆ ಶಾ ಸೂಚನೆ
ನವ ದೆಹಲಿ: ಹೊಸ ಉಗ್ರರ ಗುಂಪುಗಳು ರೂಪುಗೊಳ್ಳದಂತೆ ಎಲ್ಲಾ ಭಯೋತ್ಪಾದನಾ ವಿರೋಧಿ ಸಂಸ್ಥೆಗಳು ಕಠಿಣ ವಿಧಾನವನ್ನು ಅಳವಡಿಸಿಕೊಳ್ಳಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Union Home Minister Amit Shah) ಗುರುವಾರ ಕರೆ ನೀಡಿದ್ದಾರೆ. ಭಯೋತ್ಪಾದನಾ ನಿಗ್ರಹ ಸಭೆಯಲ್ಲಿ (anti-terror meet) ಗುಡುಗಿದ ಅವರು, ನಾವು ಭಯೋತ್ಪಾದನೆಯನ್ನು ಅದರ ಬುಡಸಮೇತ ನಾಶ ಪಡಿಸಬೇಕಾಗಿದೆ ಎಂದು ಹೇಳಿದ್ದಾರೆ. ಪೂರ್ಣ ಸುದ್ದಿಗೆ ಈ ಲಿಂಕ್ ಕ್ಲಿಕ್ ಮಾಡಿ.

3. ನಾವೇನು ಟೆರರಿಸ್ಟಾ? ಬಿಜೆಪಿ ಸತ್ಯಶೋಧನ ತಂಡದ ಮುಂದೆ ಗಾಯಾಳು ಅಳಲು!
ಶಿವಮೊಗ್ಗ: ನಾವೇನು ಟೆರರಿಸ್ಟಾ? ನೀವೇ ಹೇಳಿ ಸರ್? ಹೆಣ್ಣು ಮಕ್ಕಳನ್ನು ಕಾಪಾಡಿದ್ದೇ ತಪ್ಪಾ? ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತೇವೆ ಅಂತ ಕೇಸ್ ಹಾಕಿದ್ದಾರೆ. ಕಲ್ಲು ಹೊಡೆದವರನ್ನು ಬಿಟ್ಟು ನಮ್ಮ ಮೇಲೆ ಕೇಸ್ ಮಾಡಿದ್ದಾರೆ ಎಂದು ಬಿಜೆಪಿ ಸತ್ಯಶೋಧನಾ ತಂಡದ (BJP fact finding team) ಮುಂದೆ ರಾಗಿಗುಡ್ಡದಲ್ಲಿ ನಡೆದ ಗಲಭೆಯಲ್ಲಿ (Shivamogga Violence) ಗಾಯಾಳುವಾಗಿ ಮೆಗ್ಗಾನ್‌ ಆಸ್ಪತ್ರೆಯಲ್ಲಿ (McGann Hospital) ಚಿಕಿತ್ಸೆ ಪಡೆಯುತ್ತಿರುವ ಪ್ರದೀಪ್‌ ಅಳಲು ತೋಡಿಕೊಂಡಿದ್ದಾರೆ. ಪೂರ್ಣ ಸುದ್ದಿಗೆ ಈ ಲಿಂಕ್ ಕ್ಲಿಕ್ ಮಾಡಿ.

4. ಹ್ಯಾಟ್ರಿಕ್​ ಚಿನ್ನ ಗೆದ್ದ ಭಾರತ; ಪದಕ ಸಂಖ್ಯೆ 84ಕ್ಕೆ ಏರಿಕೆ
ಹ್ಯಾಂಗ್‌ಝೌ: ಇಲ್ಲಿ ನಡೆಯುತ್ತಿರುವ ಏಷ್ಯನ್​ ಗೇಮ್ಸ್​ನಲ್ಲಿ(Asian Games 2023) ಗುರುವಾರ, ಭಾರತ ಮುಟ್ಟಿದೆಲ್ಲ ಚಿನ್ನ ಎಂಬಂತೆ ಮೂರು ಚಿನ್ನದ ಪದಕ ಗೆದ್ದುಕೊಂಡಿದೆ. ಇದರಲ್ಲಿ ಎರಡು ಚಿನ್ನ ಆರ್ಚರಿಯಲ್ಲಿ ದಾಖಲಾದರೆ, ಮತ್ತೊಂದು ಚಿನ್ನ ಸ್ಕ್ವಾಷ್​ನಲ್ಲಿ ದೊರಕಿತು. ಮಧ್ಯಾಹ್ನ ನಡೆದ ಪುರಷರ ಆರ್ಚರಿ ತಂಡದ ಫೈನಲ್​ನಲ್ಲಿ ಭಾರತದ ಓಜಸ್ ಡಿಯೋಟಾಲೆ, ಅಭಿಷೇಕ್ ವರ್ಮಾ ಮತ್ತು ಪ್ರಥಮೇಶ್ ಜಾವ್ಕರ್ ಅವರು ಕೊರಿಯಾವನ್ನು 230-235 ಅಂಕಗಳಿಂದ ಸೋಲಿಸಿ ಚಿನ್ನ ಗೆದ್ದರು. ಈ ಮೂಲಕ ಭಾರತದ ಚಿನ್ನದ ಪದಕ ಸಂಖ್ಯೆ 21ಕ್ಕೆ ಏರಿದೆ. ಮಹಿಳಾ ಹಾಕಿ ಸೆಮಿಫೈನಲ್​ ಪಂದ್ಯದಲ್ಲಿ ಭಾರತ ತಂಡ ಚೀನಾ ವಿರುದ್ಧ 4-0 ಗೋಲ್​ಗಳಿಂದ ಸೋತು ನಿರಾಸೆ ಮೂಡಿಸಿದರು. ಪೂರ್ಣ ಸುದ್ದಿಗೆ ಈ ಲಿಂಕ್ ಕ್ಲಿಕ್ ಮಾಡಿ.

5. ಮೊದಲ ಪಂದ್ಯದಲ್ಲಿಯೇ ಅಬ್ಬರಿಸಿದ ನ್ಯೂಜಿಲ್ಯಾಂಡ್​​; ಇಂಗ್ಲೆಂಡ್ ವಿರುದ್ಧ ಭರ್ಜರಿ ಜಯ
ಅಹಮದಾಬಾದ್​: ಡವೋನ್ ಕಾನ್ವೆ (ಅಜೇಯ 152 ರನ್) ಹಾಗೂ ಯುವ ಆಲ್​ರೌಂಡರ್ ರಚಿನ್ ರವೀಂದ್ರ (ಅಜೇಯ 123) ಜೋಡಿಯ ದಾಖಲೆಯ 273 ರನ್​ಗಳ ಜತೆಯಾಟದಿಂದ ಮಿಂಚಿದ ನ್ಯೂಜಿಲ್ಯಾಂಡ್​ ತಂಡ ವಿಶ್ವ ಕಪ್​ 2023ರ ಮೊದಲ (ICC World Cup 2023) ಪಂದ್ಯದಲ್ಲಿ ಕಳೆದ ಆವೃತ್ತಿಯ ಚಾಂಪಿಯನ್ ಇಂಗ್ಲೆಂಡ್ ವಿರುದ್ಧ 9 ವಿಕೆಟ್​ಗಳ ಸುಲಭ ವಿಜಯ ದಾಖಲಿಸಿದೆ. ಈ ಮೂಲಕ ಕಳೆದ ಆವೃತ್ತಿಯ ಫೈನಲ್ ಪಂದ್ಯದ ವಿವಾದಾತ್ಮಕ ಸೋಲಿಗೆ ಪ್ರತ್ಯುತ್ತ ಕೊಟ್ಟಿದೆ. ಈ ಪಂದ್ಯದೊಂದಿಗೆ ಭಾರತದ ಆತಿಥ್ಯದಲ್ಲಿ ನಡೆಯುತ್ತಿರುವ ವಿಶ್ವ ಕಪ್​ಗೆ ಭರ್ಜರಿ ಆರಂಭ ದೊರಕಿದೆ. ಜತೆಗೆ ದೊಡ್ಡ ಮೊತ್ತದ ಸ್ಕೋರ್​ಗಳ ಪಂದ್ಯಗಳು ನಡೆಯುವ ಎಲ್ಲ ಸೂಚನೆಗಳು ಲಭಿಸಿವೆ. ಪೂರ್ಣ ಸುದ್ದಿಗೆ ಈ ಲಿಂಕ್ ಕ್ಲಿಕ್ ಮಾಡಿ.
ವಿಶ್ವ ಕಪ್​ ಕುರಿತ ಎಲ್ಲ ಸುದ್ದಿಗಳಿಗಾಗಿ ಲಿಂಕ್ ಕ್ಲಿಕ್ ಮಾಡಿ

6.‘ಸಪ್ತಪದಿ’ ತುಳಿಯದ ಮದ್ವೆ ಮದುವೆಯೇ ಅಲ್ಲ! ಅಲಹಾಬಾದ್ ಹೈಕೋರ್ಟ್
ನವದೆಹಲಿ: ಸಪ್ತಪದಿ (Saptapadi Rituals) ಸೇರಿದಂತೆ ಇತರ ಧಾರ್ಮಿಕ ವಿಧಿವಿಧಾನಗಳನ್ನು ಪೂರೈಸದ ಹಿಂದೂ ವಿವಾಹವು (Hindu Marriage) ಊರ್ಜಿತವಾಗುವುದಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ (Allahabad High Court)ಹೇಳಿದೆ. ತನ್ನಿಂದ ದೂರವಾಗಿರುವ ಹೆಂಡತಿ, ನನಗೆ ವಿಚ್ಛೇದನ ನೀಡದೆಯೇ ಎರಡನೇ ಮದುವೆ ಮಾಡಿಕೊಂಡಿದ್ದಾಳೆ ಎಂದು ವ್ಯಕ್ತಿಯೊಬ್ಬ ಆರೋಪಿಸಿರುವ ಪ್ರಕರಣದ ವಿಚಾರಣೆಯನ್ನು ರದ್ದುಗೊಳಿಸಿದ ಹೈಕೋರ್ಟ್, ಹಿಂದೂ ಧಾರ್ಮಿಕ ಪ್ರಕ್ರಿಯೆಗಳನ್ನು ಪೂರೈಸದ ಮದುವೆ ಅಪೂರ್ಣ ಎನಿಸಲಿದೆ ಎಂದು ಹೇಳಿದೆ(quashed the proceedings of a case). ಪೂರ್ಣ ಸುದ್ದಿಗೆ ಈ ಲಿಂಕ್ ಕ್ಲಿಕ್ ಮಾಡಿ.

7.ಎಫ್‌ಡಿಗಳಿಂದ ಹೆಚ್ಚಿನ ಆದಾಯ ಬೇಕೇ? ಲ್ಯಾಡರಿಂಗ್ ತಂತ್ರದಂತೆ ಹೂಡಿಕೆ ಮಾಡಿ ನೋಡಿ!
ಳಿತಾಯ ಯೋಜನೆ ಮತ್ತು ಸಾಂಪ್ರದಾಯಿಕ ಹೂಡಿಕೆದಾರರಲ್ಲಿ ಬ್ಯಾಂಕ್ ಸ್ಥಿರ ಠೇವಣಿಗಳು (Fixed Deposits) ಅತ್ಯಂತ ಜನಪ್ರಿಯ ಹಣಕಾಸು ಯೋಜನೆಗಳಾಗಿವೆ. ವರ್ಷಗಳ ಬಳಿಕ ನಿಶ್ಚಿತ ಲಾಭದ ಖಾತ್ರಿಯನ್ನು ಒದಗಿಸುವ ಈ ಪ್ಲ್ಯಾನ್‌ಗಳ ನಿತ್ಯ ಹರಿದ್ವರ್ಣ ಎನಿಸಿಕೊಂಡಿವೆ. ಅಲ್ಲದೇ ಹೆಚ್ಚು ಸುರಕ್ಷಿತವಾಗಿರುವ ಈ ಬ್ಯಾಂಕ್ ಎಫ್‌ಡಿಗಳನ್ನು (Bank Fixed Deposits) ಯಾವಾಗ ಬೇಕಿದ್ದರೂ ನಗದಾಗಿ ಪರಿವರ್ತಿಸಬಹುದು. ಹೀಗಿದ್ದೂ, ಅವಧಿ ಪೂರ್ವ ನಗದು ಮಾಡಿದ್ರೆ ಒಂದಿಷ್ಟು ದಂಡವನ್ನು ಬ್ಯಾಂಕುಗಳ ಪಾವತಿಸಿಕೊಳ್ಳುತ್ತವೆ. ಆದರೆ, ಬಳಕೆದಾರರಿಗೆ ಬ್ಯಾಂಕ್ ಎಫ್‌ಡಿ ಲ್ಯಾಡರಿಂಗ್ (Bank FD Laddering) ತಂತ್ರ ಗೊತ್ತಿದ್ದರೆ, ಅವಧಿ ಪೂರ್ವ ಠೇವಣಿ ಹಿಂತೆಗೆತದ ವೇಳೆಯೂ ನಷ್ಟವನ್ನು ಮಾಡಿಕೊಳ್ಳಲು ಸಾಧ್ಯವಿಲ್ಲ. ಆ ಕುರಿತು ನಿಮಗೆ ಈ ಲೇಖನದಲ್ಲಿ ಮಾಹಿತಿ ನೀಡುತ್ತಿದ್ದೇವೆ ಓದಿ(Money Guide). ಪೂರ್ಣ ಸುದ್ದಿಗೆ ಈ ಲಿಂಕ್ ಕ್ಲಿಕ್ ಮಾಡಿ.

8. ನಾರ್ವೆ ನಾಟಕಕಾರ ಜಾನ್ ಫೋಸ್ಸೆಗೆ ಸಾಹಿತ್ಯ ನೊಬೆಲ್ ಪ್ರಶಸ್ತಿ, ಸಲ್ಮಾನ್ ರಶ್ದಿಗೆ ಮಿಸ್!
ಸ್ಟಾಕ್ ಹೋಮ್: ನಾರ್ವೆ ಕಾಂದಬರಿಕಾರ ಹಾಗೂ ನಾಟಕಕಾರ ಜಾನ್ ಫೋಸ್ಸೆ (Norwegian author and Author Jon Fosse) ಅವರಿಗೆ 20203ರ ಸಾಲಿನ ಸಾಹಿತ್ಯ ನೊಬೆಲ್ ಪ್ರಶಸ್ತಿಯನ್ನು (Nobel Prize in Literature) ಸ್ವಿಡಿಷ್ ಅಕಾಡೆಮಿ (Swedish Academy) ಗುರುವಾರ ಘೋಷಣೆ ಮಾಡಿದೆ. ಹೊಸ ನಮೂನೆಯ ನಾಟಕಗಳು ಮತ್ತು ಧ್ವನಿ ಇಲ್ಲದವರಿಗೆ ಧ್ವನಿಯಾದ ಗದ್ಯಕ್ಕಾಗಿ ಜಾನ್ ಫೋಸ್ಸೆ ಅವರಿಗೆ ನೊಬೆಲ್ ಪ್ರಶಸ್ತಿಯನ್ನು ನೀಡಲಾಗಿದೆ ಎಂದು ಅಕಾಡೆಮಿ ಹೇಳಿದೆ. ನೊಬೆಲ್ ಪ್ರಶಸ್ತಿ ಅಕಾಡೆಮಿಯು ಹಲವಾರು ನಾಟಕಗಳು, ಕಾದಂಬರಿಗಳು, ಕವನ ಸಂಕಲನಗಳು, ಪ್ರಬಂಧಗಳು, ಮಕ್ಕಳ ಪುಸ್ತಕಗಳು ಮತ್ತು ಅನುವಾದಗಳನ್ನು ಒಳಗೊಂಡಂತೆ ನಾರ್ವೇಜಿಯನ್ ನೈನೋರ್ಸ್ಕ್‌ನಲ್ಲಿ ಬರೆದ ಫೊಸ್ಸೆ ಅವರ ಕೃತಿಯನ್ನು ಗೌರವಿಸಿದೆ(Nobel Prize 2023 .ಪೂರ್ಣ ಸುದ್ದಿಗೆ ಈ ಲಿಂಕ್ ಕ್ಲಿಕ್ ಮಾಡಿ.

9. ಈ ಬಾರಿ ಮಾಜಿ ಸ್ಪರ್ಧಿಗಳಿಗೆ ಚಾನ್ಸ್‌ ಇದೆಯಾ? ಯಾರೆಲ್ಲ ಮತ್ತೆ ದೊಡ್ಮನೆಗೆ ಬರಬೋದು?
ಬೆಂಗಳೂರು: ಬಿಗ್‌ ಬಾಸ್‌ ಹತ್ತನೇ (Bigg Boss Kannada 10) ಸೀಸನ್‌ ಗ್ರ್ಯಾಂಡ್‌ ಪ್ರೀಮಿಯರ್‌ ಅಕ್ಟೋಬರ್ 8ರ ಸಂಜೆ 6ಕ್ಕೆ ನಡೆಯಲಿದೆ. ಅ.9ರಿಂದ ಪ್ರತಿ ರಾತ್ರಿ 9:30ಕ್ಕೆ ನಡೆಯಲಿದೆ. ಇದೀಗ ಸ್ಪರ್ಧಿಗಳು ಯಾರೆಲ್ಲ ಬರಬಹುದು ಎಂಬ ಚರ್ಚೆಗಳು ಶುರುವಾಗಿದೆ. ಈಗಾಗಲೇ ಚಾರ್ಲಿ ಮನೆಗೆ ಎಂಟ್ರಿ ಕೊಡುತ್ತಿರುವುದಂತೂ ಪಕ್ಕಾ ಆಗಿದೆ. ಇದರ ಜತೆಗೆ ದೊಡ್ಮನೆಗೆ ಹಳೇಯ ಸ್ಪರ್ಧಿಗಳು ಮತ್ತೆ ಸ್ಪರ್ಧಿಸಲಿದ್ದಾರಂತೆ ಎಂಬ ಮಾತುಗಳು ಜೋರಾಗಿದೆ. ಆ ಮೂಲಕ ಈ ಹಿಂದೆ ‘ಬಿಗ್ ಬಾಸ್’ ಕಾರ್ಯಕ್ರಮದಲ್ಲಿ ಸ್ಪರ್ಧಿಸಿದ್ದವರಿಗೆ ಸೆಕೆಂಡ್ ಚಾನ್ಸ್ ಸಿಗುತ್ತಿದೆ ಎಂದು ವರದಿಯಾಗಿದೆ. ಪೂರ್ಣ ಸುದ್ದಿಗೆ ಈ ಲಿಂಕ್ ಕ್ಲಿಕ್ ಮಾಡಿ.

10. ಪೆನ್ನು ಹಿಡಿಯೋ ಕೈಯಲ್ಲಿ ಸಿಗರೇಟ್‌! ಹುಡುಗಿಯರೂ ಸ್ಟ್ರಾಂಗ್‌ ಗುರು
ಬೆಂಗಳೂರು: ಹಿಂದೊಮ್ಮೆ ಬೆಂಗಳೂರಲ್ಲಿ (Bengaluru News) 7 ವರ್ಷದ ವಿದ್ಯಾರ್ಥಿಯ ಬ್ಯಾಗ್‌ನಲ್ಲಿ ಎಲೆಕ್ಟ್ರಾನಿಕ್ ಸಿಗರೇಟ್ ಪತ್ತೆಯಾಗಿತ್ತು. ಪೋಷಕರಿಗೆ ತಿಳಿಯದೇ ವಿದ್ಯಾರ್ಥಿಗಳು ಎಲೆಕ್ಟ್ರಾನಿಕ್ ಸಿಗರೇಟ್ ಸೇವಿಸುತ್ತಿದ್ದರು. ಇದೀಗ ರಾಜಾರೋಷವಾಗಿ ವಿದ್ಯಾರ್ಥಿಗಳು ಸಾರ್ವಜನಿಕ ಸ್ಥಳದಲ್ಲೇ ಸಿಗರೇಟ್‌ ಸೇದುತ್ತಿರುವುದು ಕಂಡು ಬಂದಿದೆ. ಪೂರ್ಣ ಸುದ್ದಿಗೆ ಈ ಲಿಂಕ್ ಕ್ಲಿಕ್ ಮಾಡಿ.
ಮತ್ತಷ್ಟು ವೈರಲ್‌ ಸುದ್ದಿಗಳಿಗಾಗಿ ಕ್ಲಿಕ್‌ ಮಾಡಿ:

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬ್ಯಾಡ್ಮಿಂಟನ್

Thailand Open 2024: ಥಾಯ್ಲೆಂಡ್‌ ಓಪನ್‌ ಗೆದ್ದ ಭಾರತದ ಚಿರಾಗ್‌-ಸಾತ್ವಿಕ್‌ ಜೋಡಿ

Thailand Open 2024: ಇಂದು (ಭಾನುವಾರ) ನಡೆದ ಥಾಯ್ಲೆಂಡ್‌ ಓಪನ್‌ ಸೂಪರ್‌ 500 ಬ್ಯಾಡ್ಮಿಂಟನ್‌(Thailand Open 2024) ಫೈನಲ್​ ಪಂದ್ಯದಲ್ಲಿ ಚಿರಾಗ್‌ ಶೆಟ್ಟಿ-ಸಾತ್ವಿಕ್‌ ಸಾಯಿರಾಜ್‌ ರಾಂಕಿರೆಡ್ಡಿ(Satwiksairaj Rankireddy-Chirag Shetty) ಚಾಂಪಿಯನ್​ ಪಟ್ಟ ಅಲಂಕರಿಸಿದ್ದಾರೆ.

VISTARANEWS.COM


on

Thailand Open 2024
Koo

ಬ್ಯಾಂಕಾಕ್‌: ಭಾರತದ ಸ್ಟಾರ್‌ ಡಬಲ್ಸ್‌ ಬ್ಯಾಡ್ಮಿಂಟನ್​ ಆಟಗಾರರಾದ ಚಿರಾಗ್‌ ಶೆಟ್ಟಿ-ಸಾತ್ವಿಕ್‌ ಸಾಯಿರಾಜ್‌ ರಾಂಕಿರೆಡ್ಡಿ(Satwiksairaj Rankireddy-Chirag Shetty) ಪ್ಯಾರಿಸ್​ ಒಲಿಂಪಿಕ್ಸ್​ ಟೂರ್ನಿ ಆರಂಭಕ್ಕೂ ಮುನ್ನವೇ ಶ್ರೇಷ್ಠ ಪ್ರದರ್ಶನವೊಂದನ್ನು ನೀಡಿದ್ದಾರೆ. ಇಂದು (ಭಾನುವಾರ) ನಡೆದ ಥಾಯ್ಲೆಂಡ್‌ ಓಪನ್‌ ಸೂಪರ್‌ 500 ಬ್ಯಾಡ್ಮಿಂಟನ್‌(Thailand Open 2024) ಫೈನಲ್​ ಪಂದ್ಯದಲ್ಲಿ ಗೆದ್ದು ಚಾಂಪಿಯನ್​ ಪಟ್ಟ ಅಲಂಕರಿಸಿದ್ದಾರೆ.

ಏಕಪಕ್ಷೀಯವಾಗಿ ಸಾಗಿದ ಫೈನಲ್​ ಪಂದ್ಯದಲ್ಲಿ ಏಷ್ಯಾಡ್‌ ಚಾಂಪಿಯನ್‌ ಹಾಗೂ ಕೂಟದ ಅಗ್ರ ಶ್ರೇಯಾಂಕಿ ಭಾರತೀಯ ಜೋಡಿ ಚೀನದ ಚೆನ್‌ ಬೊ ಯಾಂಗ್‌-ಲಿಯು ಯಿ(Chen Bo Yang-Liu Yi) ವಿರುದ್ಧ 21-15, 21-15 ನೇರ ಗೇಮ್​ಗಳಿಂದ ಹಿಮ್ಮೆಟಿಸಿದರು. ಶನಿವಾರ ನಡೆದಿದ್ದ ಸೆಮಿಫೈನಲ್ ಪಂದ್ಯದಲ್ಲಿ ಚಿರಾಗ್‌- ಸಾತ್ವಿಕ್‌ ಜೋಡಿ ಚೈನೀಸ್‌ ತೈಪೆಯ ಲು ಮಿಂಗ್‌ ಚೆ-ಟಾಂಗ್‌ ಕೈ ವೀ ವಿರುದ್ಧವೂ 21-11, 21-12 ಅಂತರದ ಸುಲಭ ಜಯ ಸಾಧಿಸುವಲ್ಲಿ ಯಶಸ್ವಿಯಾಗಿದ್ದರು. ಫೈನಲ್​ನಲ್ಲಿಯೂ ಇದೇ ಪ್ರದರ್ಶನ ತೋರಿ ಪ್ರಶಸ್ತಿಗೆ ಮುತ್ತಿಕ್ಕಿದರು.

ಕೆಲವು ವಾರಗಳ ಹಿಂದೆ ನಡೆದಿದ್ದ ಥಾಮಸ್‌ ಕಪ್‌ನಲ್ಲಿ ನಿರೀಕ್ಷಿತ ಪ್ರದರ್ಶನ ನೀಡಲು ವಿಫ‌ಲರಾಗಿದ್ದ ಚಿರಾಗ್​-ಸಾತ್ವಿಕ್​ ಜೋಡಿ ಇದೀಗ ಮರಳಿ ಲಯ ಕಂಡುಕೊಳ್ಳುವಲ್ಲಿ ಯಶಸ್ವಿಯಾಗಿದೆ. ಈ ಮೂಲಕ ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ದೊಡ್ಡ ಪದಕವೊಂದನ್ನು ಗೆಲ್ಲುವ ನೆಚ್ಚಿನ ಜೋಡಿಯಾಗಿ ಭರವಸೆ ಮೂಡಿಸಿದೆ.

ಸಾತ್ವಿಕ್‌ ಸಾಯಿರಾಜ್‌ ರಾಂಕಿರೆಡ್ಡಿ ಮತ್ತು ಕರ್ನಾಟಕ ಮೂಲದ ಚಿರಾಗ್‌ ಶೆಟ್ಟಿ ಜೋಡಿಗೆ ಇದೇ ವರ್ಷ ದೇಶದ ಪರಮೋಚ್ಚ ಕ್ರೀಡಾ ಪ್ರಶಸ್ತಿಯಾದ ಮೇಜರ್‌ ಧ್ಯಾನ್‌ಚಂದ್‌ ಖೇಲ್‌ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು. ಏಷ್ಯನ್​ ಗೇಮ್ಸ್​ನಲ್ಲಿ ಐತಿಹಾಸಿಕ ಚಿನ್ನದ ಪದಕ ಗೆದ್ದ ಸಾಧನೆ ಈ ಜೋಡಿಯದ್ದಾಗಿದೆ. 1982ರಲ್ಲಿ ಲೆರೋಯ್‌ ಫ್ರಾನ್ಸಿಸ್‌-ಪ್ರದೀಪ್‌ ಗಾಂಧಿ ಕಂಚು ಗೆದ್ದಿದ್ದು ಭಾರತಕ್ಕೆ ಪುರುಷರ ಡಬಲ್ಸ್‌ನಲ್ಲಿ ಸಿಕ್ಕ ಏಕೈಕ ಪದಕವಾಗಿತ್ತು. ಆದರೆ, ಚಿರಾಗ್‌-ಸಾತ್ವಿಕ್‌ ಚಿನ್ನ ಗೆಲ್ಲುವ ಮೂಲಕ ಐತಿಹಾಸಿಕ ದಾಖಲೆ ಬರೆದಿದ್ದರು.

ಇದನ್ನೂ ಓದಿ Thomas Cup 2024: ಉಬೆರ್‌ ಕಪ್‌ ಬಳಿಕ ಥಾಮಸ್‌ ಕಪ್​ನಲ್ಲಿಯೂ ಮುಗ್ಗರಿಸಿದ ಭಾರತ

ಬಹುನಿರೀಕ್ಷಿತ ಪ್ಯಾರಿಸ್​ ಒಲಿಂಪಿಕ್ಸ್(Paris Olympics)​ ಕ್ರೀಡಾಕೂಡಕ್ಕೆ ಅವಳಿ ಒಲಿಂಪಿಕ್ಸ್​ ಪದಕ ವಿಜೇತೆ ಪಿ.ವಿ ಸಿಂಧು(PV Sindhu) ಸೇರಿ 7 ಭಾರತೀಯ ಶಟ್ಲರ್​ಗಳು ಈಗಾಗಲೇ ಅರ್ಹತೆ ಪಡೆದಿದ್ದಾರೆ. ಮಹಿಳಾ ಡಬಲ್ಸ್​ನಲ್ಲಿ ಕನ್ನಡತಿ ಅಶ್ವಿನಿ ಪೊನ್ನಪ್ಪ ಅವರಿಗೂ ಒಲಿಂಪಿಕ್ಸ್​ ಟಿಕೆಟ್​ ಲಭಿಸಿದೆ.

ಅರ್ಹತೆ ಪಡೆದ ಶಟ್ಲರ್​ಗಳು

ಪಿವಿ ಸಿಂಧು, ಲಕ್ಷ್ಯ ಸೇನ್, ಎಚ್ ಎಸ್ ಪ್ರಣಯ್, ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ, ಚಿರಾಗ್ ಶೆಟ್ಟಿ, ಅಶ್ವಿನಿ ಪೊನ್ನಪ್ಪ, ತನಿಶಾ ಕ್ರಾಸ್ಟೊ.

ಜುಲೈ 26ಕ್ಕೆ ಒಲಿಂಪಿಕ್ಸ್​ ಆರಂಭ

ಮಹತ್ವದ ಕ್ರೀಡಾಕೂಡವಾದ ಪ್ಯಾರಿಸ್ ಒಲಿಂಪಿಕ್ಸ್‌ನ(Paris Olympics 2024) ಉದ್ಘಾಟನಾ ಸಮಾರಂಭಕ್ಕೆ(paris olympics 2024 opening ceremony) ದಿನಾಂಕ ನಿಗದಿಯಾಗಿದೆ. ಜುಲೈ 26ರಂದು ಸೀನ್ ನದಿಯಲ್ಲಿ ಸಂಜೆ 7.30ಕ್ಕೆ ಅದ್ಧೂರಿ ಕಾರ್ಯಕ್ರಮ ನೆರವೇರಲಿದೆ.

ಒಲಿಂಪಿಕ್ಸ್​ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಕ್ರೀಡಾಂಗಣದ ಹೊರಗಡೆ ನಡೆಯುವ ಉದ್ಘಾಟನಾ ಸಮಾರಂಭ ಇದಾಗಿದೆ. 10,500ಕ್ಕೂ ಹೆಚ್ಚು ಅಥ್ಲೀಟ್‌ಗಳು ಪ್ಯಾರಿಸ್‌ನಿಂದ ಸುಮಾರು 6 ಕಿಲೋಮೀಟರ್‌ ವರೆಗೆ ಬೋಟ್‌ಗಳಲ್ಲೇ ಪರೇಡ್‌ ನಡೆಸಿ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಕ್ರೀಡಾಕೂಟ ಜುಲೈ 26ರಿಂದ ಆಗಸ್ಟ್ 11ರವರೆಗೆ ನಡೆಯಲಿದೆ. ಪ್ಯಾರಿಸ್ ಆತಿಥ್ಯದಲ್ಲಿ ನಡೆಯುತ್ತಿರುವ ಮೂರನೇ (1900 ಮತ್ತು 1924ರ ನಂತರ) ಟೂರ್ನಿ ಇದಾಗಿದೆ. 32 ಕ್ರೀಡೆಗಳು ಮತ್ತು 329 ಈವೆಂಟ್‌ಗಳನ್ನು ಯೋಜಿಸಲಾಗಿದೆ.

Continue Reading

ಕ್ರಿಕೆಟ್

RCB vs CSK: ಧೋನಿ ವರ್ತನೆಗೆ ‘ಇಟ್‌ ಹರ್ಟ್ಸ್‌​’ ಎಂದ ಆರ್​ಸಿಬಿ ಅಭಿಮಾನಿಗಳು; ಧೋನಿ ಮಾಡಿದ ತಪ್ಪೇನು?

RCB vs CSK: ಪಂದ್ಯದ ಮುಕ್ತಾಯದ ಬಳಿಕ ವಾಡಿಕೆಯಂತೆ ಉಭಯ ತಂಡಗಳ ಆಟಗಾರರು ಪರಸ್ಪರ ಹಸ್ತಲಾಘವ ಮಾಡಬೇಕು. ಅದರಂತೆ ಚೆನ್ನೈ ತಂಡದ ಆಟಗಾರರೆಲ್ಲ ಸರದಿ ಸಾಲಿನಲ್ಲಿ ನಿಂತು ಸಿದ್ಧರಾಗಿದ್ದರು. ಆದರೆ ಆರ್​ಸಿಬಿ ಆಟಗಾರರು ಮೈದಾನದಲ್ಲೇ ಗೆಲುವಿನ ಸಂಭ್ರಮಾಚರಣೆ ಮಾಡುತ್ತಿದ್ದರು. ಕೆಲ ಕಾಲ ಕಾದ ಧೋನಿ ಆರ್​ಸಿಬಿ ಆಟಗಾರರು ಬರದೇ ಇದದ್ದನ್ನು ನೋಡಿ ಪೆವಿಲಿಯನ್​ನತ್ತ ಮರಳಿದ್ದಾರೆ.

VISTARANEWS.COM


on

RCB vs CSK
Koo

ಬೆಂಗಳೂರು: ಮಹೇಂದ್ರ ಸಿಂಗ್‌ ಧೋನಿ(MS Dhoni) ಕ್ರಿಕೆಟ್‌ ಮೈದಾನದಲ್ಲಿ ಶಾಂತಿಯಿಂದ ವ‌ರ್ತಿಸುತ್ತಾರೆ. ಬ್ಯಾಟಿಂಗ್‌, ವಿಕೆಟ್‌ ಕೀಪಿಂಗ್‌ ಅಥವಾ ನಾಯಕನಾಗೇ ಇರಲಿ ಶಾಂತಚಿತ್ತ ಅವರ ಮುಖ್ಯ ಗುಣ. ಎಂತಹ ಸನ್ನಿವೇಶವಿದ್ದರೂ ಧೋನಿ(MS Dhoni leaves without shaking hands) ತಾಳ್ಮೆ ಕಳೆದುಕೊಳ್ಳುವುದು ವಿರಳ. ಇದೇ ಕಾರಣಕ್ಕೆ ಅವರಿಗೆ ಕ್ಯಾಪ್ಟನ್‌ ಕೂಲ್‌ ಎಂಬ ಹೆಸರು ಕೂಡ ಇದೆ. ಆದರೆ ನಿನ್ನೆ(ಶನಿವಾರ) ನಡೆದ ಆರ್​ಸಿಬಿ(RCB vs CSK) ವಿರುದ್ಧದ ಪಂದ್ಯದಲ್ಲಿ ಧೋನಿ ತೋರಿದ ವರ್ತನೆಗೆ ಎದುರಾಳಿ ತಂಡದ ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದ್ದಾರೆ.

ಚಿನ್ನಸ್ವಾಮಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದ ಮಳೆ ಪೀಡಿತ ಪಂದ್ಯದಲ್ಲಿ ಟಾಸ್​ ಸೋತು ಬ್ಯಾಟಿಂಗ್​ ಆಹ್ವಾನ ಪಡೆದ ಆರ್​ಸಿಬಿ ನಿಗದಿತ 20 ಓವರ್​ಗಳಲ್ಲಿ 5 ವಿಕೆಟ್​ ನಷ್ಟಕ್ಕೆ 218 ರನ್​ ಬಾರಿಸಿತು. ಜವಾಬಿತ್ತ ಚೆನ್ನೈ ಈ ಬೃಹತ್​ ಮೊತ್ತವನ್ನು ಬೆನ್ನಟ್ಟಿದ ಚೆನ್ನೈ ಹಲವು ಏರಿಳಿತ ಕಂಡು ಕೊನೆಗೆ ತನ್ನ ಪಾಲಿನ ಆಟದಲ್ಲಿ 7 ವಿಕೆಟ್​ಗೆ 191 ರನ್​ ಗಳಿಸಲಷ್ಟೇ ಶಕ್ತವಾಗಿ ಸೋಲಿಗೆ ಶರಣಾಯಿತು. ಜತೆಗೆ ಟೂರ್ನಿಯಿಂದಲೂ ಹೊರಬಿದ್ದು ಮಾಜಿ ಚಾಂಪಿಯನ್​ ಎನಿಸಿಕೊಂಡಿತು.

ಇದನ್ನೂ ಓದಿ RCB vs CSK: ಚೆನ್ನೈ ಸೋಲಿಗೆ ಧೋನಿ ಬಾರಿಸಿದ ಔಟ್​ ಆಫ್​ದಿ ಸ್ಟೇಡಿಯಂ ಸಿಕ್ಸರ್​ ಕಾರಣ

ಪಂದ್ಯದ ಮುಕ್ತಾಯದ ಬಳಿಕ ವಾಡಿಕೆಯಂತೆ ಉಭಯ ತಂಡಗಳ ಆಟಗಾರರು ಪರಸ್ಪರ ಹಸ್ತಲಾಘವ ಮಾಡಬೇಕು. ಅದರಂತೆ ಚೆನ್ನೈ ತಂಡದ ಆಟಗಾರರೆಲ್ಲ ಸರದಿ ಸಾಲಿನಲ್ಲಿ ನಿಂತು ಸಿದ್ಧರಾಗಿದ್ದರು. ಆದರೆ ಆರ್​ಸಿಬಿ ಆಟಗಾರರು ಮೈದಾನದಲ್ಲೇ ಗೆಲುವಿನ ಸಂಭ್ರಮಾಚರಣೆ ಮಾಡುತ್ತಿದ್ದರು. ಕೆಲ ಕಾಲ ಕಾದ ಧೋನಿ ಆರ್​ಸಿಬಿ ಆಟಗಾರರು ಬರದೇ ಇದದ್ದನ್ನು ನೋಡಿ ಪೆವಿಲಿಯನ್​ನತ್ತ ಮರಳಿದ್ದಾರೆ. ಈ ವಿಡಿಯೊ ವೈರಲ್​ ಆಗಿದೆ.

ಆರ್​ಸಿಬಿ ಅಭಿಮಾನಿಗಳು ಚೆನ್ನೈ ವಿರೋಧಿಯಾಗಿದ್ದರೂ ಕೂಡ ನಿನ್ನೆ ಧೋನಿಗೆ ಸಂಪೂರ್ಣ ಬೆಂಬಲ ಸೂಚಿಸಿದ್ದರು. ಅಲ್ಲದೆ ಧೋನಿಯ ಜೆರ್ಸಿ ತೊಟ್ಟು, ದೊಡ್ಡ ಬ್ಯಾನರ್​ ಮೂಲಕ ನೀವು ವಿದಾಯ ಹೇಳಬೇಡಿ ಇದು ಆರ್​ಸಿಬಿ ಮತ್ತು ಕೊಹ್ಲಿ ಅಭಿಮಾನಿಗಳ ಬೇಡಿಕೆ ಎಂದು ಮನವಿ ಮಾಡಿದ್ದರು. ಈ ಮೂಲಕ ಧೋನಿಗೆ ಸಪೋರ್ಟ್​ ಮಾಡಿದ್ದರು. ಆದರೆ ಧೋನಿ ಆರ್​ಸಿಬಿ ಆಟಗಾರರಿಗೆ ಹಸ್ತಲಾಘವ ಮಾಡದೆ ತೆರಳಿದ್ದು ಮಾತ್ರ ಬೇಸರ ತಂದಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ‘ಇಟ್‌ ಹರ್ಟ್ಸ್‌​’ ಎಂದ ಹ್ಯಾಶ್​ ಟ್ಯಾಗ್​ನೊಂದಿಗೆ ಬರೆದುಕೊಂಡಿದ್ದಾರೆ.

ಧೋನಿ ಮೈದಾನದಲ್ಲಿದ ಆರ್​ಸಿಬಿ ಆಟಗಾರರಿಗೆ ಹಸ್ತಲಾಘವ ಮಾಡದಿದ್ದರೂ ಕೂಡ ತಾವು ಪೆವಿಲಿಯನ್​ ಕಡೆಗೆ ಹೋಗುವಾಗ ಎದುರಿಗೆ ಸಿಕ್ಕ ಆರ್​ಸಿಬಿ ಸಿಬ್ಬಂದಿಗಳಿಗೆ ಹಸ್ತಲಾಘವ ನೀಡಿದ್ದಾರೆ. ಯಶ್​ ದಯಾಳ್​ ಎಸೆತ ಅಂತಿಮ ಓವರ್​ನ ಮೊದಲ ಎಸೆತವನ್ನೇ ಧೋನಿ ಔಟ್​ ಆಫ್​ದಿ ಸ್ಟೇಡಿಯಂಗೆ ಸಿಕ್ಸರ್ ಬಾರಿಸಿದರು. ಈ ಸಿಕ್ಸರ್​ 110 ಮೀ. ದೂರ ಚಿಮ್ಮಿತು. ಮುಂದಿನ ಎಸೆತದಲ್ಲಿಯೂ ಧೋನಿ ಸಿಕ್ಸರ್​ ಬಾರಿಸುವ ಪ್ರಯತ್ನದಲ್ಲಿ ಬೌಂಡರಿ ಲೈನ್​ನಲ್ಲಿ ಕ್ಯಾಚ್​ ನೀಡಿ ವಿಕೆಟ್​ ಕಳೆದುಕೊಂಡರು. ಧೋನಿ ವಿಕೆಟ್​ ಪತನಗೊಳ್ಳುತ್ತಿದ್ದಂತೆ ಚೆನ್ನೈ ಸೋಲು ಕೂಡ ಖಚಿತಗೊಂಡಿತು.

Continue Reading

ಕ್ರೀಡೆ

RCB vs CSK: ಚೆನ್ನೈ ಸೋಲಿಗೆ ಧೋನಿ ಬಾರಿಸಿದ ಔಟ್​ ಆಫ್​ದಿ ಸ್ಟೇಡಿಯಂ ಸಿಕ್ಸರ್​ ಕಾರಣ

RCB vs CSK: ಧೋನಿ ಬಾರಿಸಿದ ಸಿಕ್ಸರ್ 110 ಮೀಟರ್ ಸಾಗಿ ಸ್ಟೇಡಿಯಂನಿಂದ ಹೊರಬಿದ್ದ ಕಾರಣ ಹೊಸ ಚೆಂಡನ್ನು ನೀಡಲಾಯಿತು. ಇದು ಒದ್ದೆಯಿಲ್ಲದ ಕಾರಣ ಬೌಲರ್ ಯಶ್ ದಯಾಳ್​ಗೆ ಚೆಂಡಿನ ಮೇಲೆ ಹಿಡಿತ ಸಾಧಿಸಲು ನೆರವಾಯಿತು.ಹೀಗಾಗಿ ನಾವು ಪಂದ್ಯ ಗೆದ್ದುವು ಎಂದು ದಿನೇಶ್ ಕಾರ್ತಿಕ್​ ಹೇಳಿದ್ದಾರೆ.

VISTARANEWS.COM


on

RCB vs CSK
Koo

ಬೆಂಗಳೂರು: ಬೆಂಗಳೂರಿನ ಎಂ ಚಿನ್ನಸ್ವಾಮಿ(M.Chinnaswamy Stadium) ಕ್ರೀಡಾಂಗಣದಲ್ಲಿ ಶನಿವಾರ ನಡೆದ ಐಪಿಎಲ್(IPL 2024) 2024ರ 68ನೇ ಪಂದ್ಯದಲ್ಲಿ ಎಂಎಸ್ ಧೋನಿ ಅವರು ಬಾರಿಸಿದ 110 ಮೀಟರ್ ಸಿಕ್ಸರ್ ಸಿಎಸ್‌ಕೆ ಸೋಲಿಗೆ ಪ್ರಮುಖ ಕಾರಣವಾಯಿತು ಎಂದು ಆರ್​ಸಿಬಿ ಆಟಗಾರ ದಿನೇಶ್​ ಕಾರ್ತಿಕ್​ ಅಭಿಪ್ರಾಯಪಟ್ಟಿದ್ದಾರೆ.

ಚೆನ್ನೈಗೆ(RCB vs CSK) ಪ್ಲೇ ಆಫ್​ ಪ್ರವೇಶಿಸಬೇಕಿದ್ದರೆ ಪಂದ್ಯದಲ್ಲಿ 201ರನ್​ ಗಡಿ ದಾಟಿಬೇಕಿತ್ತು. ಅಂತಿಮ ಹಂತದಲ್ಲಿ ರವೀಂದ್ರ ಜಡೇಜಾ ಮತ್ತು ಧೋನಿ ಸೇರಿಕೊಂಡು ಪಂದ್ಯ ಗೆಲ್ಲದಿದ್ದರೂ ಕೂಡ ಪ್ಲೇ ಆಫ್​ ಲೆಕ್ಕಾಚಾರದಲ್ಲಿ 201 ರನ್​ ಬಾರಿಸಲು ಶಕ್ತಿ ಮೀರಿ ಪ್ರಯತ್ನಪಟ್ಟರು. ಈ ಗುರಿ ತಲುಪಲು ಚೆನ್ನೈಗೆ ಅಂತಿಮವಾಗಿ 6 ಎಸೆತಗಳಲ್ಲಿ 17 ರನ್ ತೆಗೆಯುವ ಸವಾಲು ಎದುರಾಯಿತು. ಈ ವೇಳೆ ಯಶ್​ ದಯಾಳ್​ ಎಸೆತ ಅಂತಿಮ ಓವರ್​ನ ಮೊದಲ ಎಸೆತವನ್ನೇ ಧೋನಿ ಔಟ್​ ಆಫ್​ದಿ ಸ್ಟೇಡಿಯಂಗೆ ಸಿಕ್ಸರ್ ಬಾರಿಸಿದರು. ಈ ಸಿಕ್ಸರ್​ 110 ಮೀ. ದೂರ ಚಿಮ್ಮಿತು. ಮುಂದಿನ ಎಸೆತದಲ್ಲಿಯೂ ಧೋನಿ ಸಿಕ್ಸರ್​ ಬಾರಿಸುವ ಪ್ರಯತ್ನದಲ್ಲಿ ಬೌಂಡರಿ ಲೈನ್​ನಲ್ಲಿ ಕ್ಯಾಚ್​ ನೀಡಿ ವಿಕೆಟ್​ ಕಳೆದುಕೊಂಡರು. ಬಳಿಕ ಎಸೆತ ನಾಲ್ಕು ಎಸೆತಗಳಲ್ಲಿಯೂ ದಯಾಳ್​ ಹಿಡಿತ ಸಾಧಿಸಿ ಆರ್​ಸಿಬಿಗೆ ಅಭೂತಪೂರ್ವ ಗೆಲುವು ತಂದು ಕೊಟ್ಟರು.

ಧೋನಿ ಸಿಕ್ಸರ್​ನಿಂದ ಆರ್​ಸಿಬಿ ಲಾಭವಾಯಿತು ಎಂದು ದಿನೇಶ್​ ಕಾರ್ತಿಕ್​ ಹೇಳಿದ್ದಾರೆ. ಇದಕ್ಕೆ ಕಾರಣವನ್ನು ಕೂಡ ಅವರು ತಿಳಿಸಿದ್ದಾರೆ. ಪಂದ್ಯದ ಬಳಿಕ ಮಾತನಾಡಿದ ದಿನೇಶ್​ ಕಾರ್ತಿಕ್​, ‘ಧೋನಿ ಬಾರಿಸಿದ ಸಿಕ್ಸರ್ 110 ಮೀಟರ್ ಸಾಗಿ ಸ್ಟೇಡಿಯಂನಿಂದ ಹೊರಬಿದ್ದ ಕಾರಣ ಹೊಸ ಚೆಂಡನ್ನು ನೀಡಲಾಯಿತು. ಇದು ಒದ್ದೆಯಿಲ್ಲದ ಕಾರಣ ಬೌಲರ್ ಯಶ್ ದಯಾಳ್​ಗೆ ಚೆಂಡಿನ ಮೇಲೆ ಹಿಡಿತ ಸಾಧಿಸಲು ನೆರವಾಯಿತು. ಇದಕ್ಕೂ ಮುನ್ನ ಚೆಂಡು ಒದ್ದೆಯಾಗಿದ್ದ ಕಾರಣ ಬೌಲರ್​ಗಳಿಗೆ ಸರಿಯಾಗಿ ಚೆಂಡಿನ ಮೇಲೆ ಹಿಡಿತ ಸಾಧಿಸಲು ಕಷ್ಟವಾಗಿತ್ತು. ಹೀಗಾಗಿ ನೋ ಬಾಲ್​, ಫುಲ್​ಟಾಸ್​ ಸೇರಿ ವೈಡ್​ ಎಸೆತಗಳು ಕಂಡುಬಂತು. ಹೊಸ ಚೆಂಡು ಸಿಕ್ಕಿದ್ದು ಆರ್​ಸಿಬಿ ಗೆಲುವಿಗೆ ಸಹಾಯವಾಯಿತು” ಎಂದು ಹೇಳುವ ಮೂಲಕ ಧೋನಿ ಸಿಕ್ಸರ್​ ತಮ್ಮ ತಂಡಕ್ಕೆ ವರದಾನವಾಯಿತು ಎಂದರು.

ಇದನ್ನೂ ಓದಿ RCB: ಆರ್​ಸಿಬಿಯ ನಂಟು ಬಿಡದ ವಿಜಯ್​ ಮಲ್ಯ; ಟ್ವೀಟ್​ ಮೂಲಕ ಅಭಿನಂದನೆ

ಇಲ್ಲಿನ ಚಿನ್ನಸ್ವಾಮಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದ ಮಳೆ ಪೀಡಿತ ಪಂದ್ಯದಲ್ಲಿ ಟಾಸ್​ ಸೋತು ಬ್ಯಾಟಿಂಗ್​ ಆಹ್ವಾನ ಪಡೆದ ಆರ್​ಸಿಬಿ ವಿರಾಟ್​ ಕೊಹ್ಲಿ ಮತ್ತು ಫಾಫ್​ ಡುಪ್ಲೆಸಿಸ್​ ಮೊದಲ ವಿಕೆಟ್​ಗೆ ನಿರ್ಮಿಸಿದ ಭದ್ರ ಅಡಿಪಾಯದ ನೆರವಿನಿಂದ ನಿಗದಿತ 20 ಓವರ್​ಗಳಲ್ಲಿ 5 ವಿಕೆಟ್​ ನಷ್ಟಕ್ಕೆ 218 ರನ್​ ಬಾರಿಸಿತು. ಜವಾಬಿತ್ತ ಚೆನ್ನೈ ಈ ಬೃಹತ್​ ಮೊತ್ತವನ್ನು ಬೆನ್ನಟ್ಟಿದ ಚೆನ್ನೈ ಹಲವು ಏರಿಳಿತ ಕಂಡು ಕೊನೆಗೆ ತನ್ನ ಪಾಲಿನ ಆಟದಲ್ಲಿ 7 ವಿಕೆಟ್​ಗೆ 191 ರನ್​ ಗಳಿಸಲಷ್ಟೇ ಶಕ್ತವಾಗಿ ಸೋಲಿಗೆ ಶರಣಾಯಿತು. ಜತೆಗೆ ಟೂರ್ನಿಯಿಂದಲೂ ಹೊರಬಿದ್ದು ಮಾಜಿ ಚಾಂಪಿಯನ್​ ಎನಿಸಿಕೊಂಡಿತು.

Continue Reading

ಕ್ರಿಕೆಟ್

RCB: ಆರ್​ಸಿಬಿಯ ನಂಟು ಬಿಡದ ವಿಜಯ್​ ಮಲ್ಯ; ಟ್ವೀಟ್​ ಮೂಲಕ ಅಭಿನಂದನೆ

RCB: ಆರ್​ಸಿಬಿಯ ಗೆಲುವಿಗೆ ಫ್ರಾಂಚೈಸಿಯ ಮಾಜಿ ಮಾಲಿಕ ವಿಜಯ್​ ಮಲ್ಯ(Vijay Mallya) ಟ್ವೀಟ್​ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ.

VISTARANEWS.COM


on

RCB
Koo

ಲಂಡನ್​: ಶನಿವಾರ ತಡರಾತ್ರಿ ನಡೆದ ಐಪಿಎಲ್​ನ(IPL 2024) ರೋಚಕ ಪಂದ್ಯದಲ್ಲಿ ಕನ್ನಡಿಗರ ನೆಚ್ಚಿನ ತಂಡವಾದ ರಾಯಲ್​ ಚಾಲೆಂಜರ್ಸ್​ ಬೆಂಗಳೂರು(Royal Challengers Bengaluru) ತಂಡ ಹಾಲಿ ಚಾಂಪಿಯನ್​ ಚೆನ್ನೈ ಸೂಪರ್​ ಕಿಂಗ್ಸ್(Chennai Super Kings)​ ತಂಡವನ್ನು ಮಣಿಸಿ ಪ್ಲೇ ಆಫ್​ಗೆ ಪ್ರವೇಶಿಸಿತು. ಆರ್​ಸಿಬಿಯ ಗೆಲುವಿಗೆ ಫ್ರಾಂಚೈಸಿಯ ಮಾಜಿ ಮಾಲಿಕ ವಿಜಯ್​ ಮಲ್ಯ(Vijay Mallya) ಟ್ವೀಟ್​ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ. ಈ ಮೂಲಕ ಆರ್​ಸಿಬಿ ಜತೆಗಿನ ನಂಟನ್ನು ಮುಂದುವರಿಸಿದ್ದಾರೆ.

ಇಲ್ಲಿನ ಚಿನ್ನಸ್ವಾಮಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದ ಮಳೆ ಪೀಡಿತ ಪಂದ್ಯದಲ್ಲಿ ಟಾಸ್​ ಸೋತು ಬ್ಯಾಟಿಂಗ್​ ಆಹ್ವಾನ ಪಡೆದ ಆರ್​ಸಿಬಿ ವಿರಾಟ್​ ಕೊಹ್ಲಿ ಮತ್ತು ಫಾಫ್​ ಡುಪ್ಲೆಸಿಸ್​ ಮೊದಲ ವಿಕೆಟ್​ಗೆ ನಿರ್ಮಿಸಿದ ಭದ್ರ ಅಡಿಪಾಯದ ನೆರವಿನಿಂದ ನಿಗದಿತ 20 ಓವರ್​ಗಳಲ್ಲಿ 5 ವಿಕೆಟ್​ ನಷ್ಟಕ್ಕೆ 218 ರನ್​ ಬಾರಿಸಿತು. ಜವಾಬಿತ್ತ ಚೆನ್ನೈ ಈ ಬೃಹತ್​ ಮೊತ್ತವನ್ನು ಬೆನ್ನಟ್ಟಿದ ಚೆನ್ನೈ ಹಲವು ಏರಿಳಿತ ಕಂಡು ಕೊನೆಗೆ ತನ್ನ ಪಾಲಿನ ಆಟದಲ್ಲಿ 7 ವಿಕೆಟ್​ಗೆ 191 ರನ್​ ಗಳಿಸಲಷ್ಟೇ ಶಕ್ತವಾಗಿ ಸೋಲಿಗೆ ಶರಣಾಯಿತು. ಜತೆಗೆ ಟೂರ್ನಿಯಿಂದಲೂ ಹೊರಬಿದ್ದು ಮಾಜಿ ಚಾಂಪಿಯನ್​ ಎನಿಸಿಕೊಂಡಿತು.

ಇದನ್ನೂ ಓದಿ RCB vs CSK: ಇದು ಆರ್​ಸಿಬಿಯ ಹೊಸ ಅಧ್ಯಾಯ; ಹಾಲಿ ಚಾಂಪಿಯನ್​ ಚೆನ್ನೈ ಮಣಿಸಿ ಪ್ಲೇ ಆಫ್​ಗೆ ಲಗ್ಗೆ

ಆರ್​ಸಿಗೆ ಪ್ಲೇ ಆಫ್​ ಪ್ರವೇಶಿಸಬೇಕಿದ್ದರೆ 18 ರನ್​ ಅಂತರದಿಂದ ಗೆಲುವು ಬೇಕಿತ್ತು. ಅಂತಿಮ ಹಂತದಲ್ಲಿ ರವೀಂದ್ರ ಜಡೇಜಾ ಮತ್ತು ಧೋನಿ ಸೇರಿಕೊಂಡು ಪಂದ್ಯ ಗೆಲ್ಲದಿದ್ದರೂ ಕೂಡ ಪ್ಲೇ ಆಫ್​ ಲೆಕ್ಕಾಚಾರದ 201 ರನ್​ ಬಾರಿಸಲು ಶಕ್ತಿ ಮೀರಿ ಪ್ರಯತ್ನಪಟ್ಟರು. 6 ಎಸೆತಗಳಲ್ಲಿ 17 ರನ್​ ಬೇಕಿದ್ದಾಗ ಧೋನಿ ಯಶ್​ ದಯಾಳ್​ ಅವರ ಮೊದಲ ಎಸೆತವನ್ನೇ ಸ್ಟೇಡಿಯಂನಿಂದ ಹೊರಗೆಡೆ ಬಾರಿಸಿ 6 ರನ್​ ಕಲೆಹಾಕಿದರು. ಈ ಸಿಕ್ಸರ್​ 110 ಮೀಟರ್​ ದೂರಕ್ಕೆ ಸಿಡಿಯಿತು. ಆದರೆ ಮುಂದಿನ ಎಸೆತದಲ್ಲಿಯೂ ಧೋನಿ ಸಿಕ್ಸರ್​ ಬಾರಿಸುವ ಪ್ರಯತ್ನದಲ್ಲಿ ಬೌಂಡರಿ ಲೈನ್​ನಲ್ಲಿ ಕ್ಯಾಚ್​ ನೀಡಿ ವಿಕೆಟ್​ ಕಳೆದುಕೊಂಡರು. ಇಲ್ಲಿಗೆ ಚೆನ್ನೈ ಸೋಲು ಕೂಡ ಖಚಿತಗೊಂಡಿತು. ಅಂತಿಮ 2 ಎಸೆತದಲ್ಲಿ 10 ರನ್​ ಗಳಿಸುವ ಯತ್ನದಲ್ಲಿ ಜಡೇಜಾ ವಿಫಲರಾದರು. ಧೋನಿ 13 ಎಸೆತಗಳಿಂದ 25 ರನ್​ ಚಚ್ಚಿದರು. ಆರ್​ಸಿಬಿ ಗೆಲುವಿನ ನಗೆ ಬೀರಿತು.

ಆರ್​ಸಿಬಿ ಗೆಲುವು ಸಾಧಿಸುತ್ತಿದ್ದಂತೆ ವಿಜಯ್​ ಮಲ್ಯ ಟ್ವೀಟ್​ ಮಾಡಿ, “ಆರ್​ಸಿಬಿ ಪ್ಲೇ ಆಫ್​ಗೆ ಎಂಟ್ರಿ ಕೊಟ್ಟಿದ್ದಕ್ಕೆ ತುಂಬಾ ಸಂತೋಷವಾಗುತ್ತಿದೆ. ತಂಡಕ್ಕೆ ಹೃದಯ ಪೂರಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಸತತ ಸೋಲುಗಳಿಂದ ಗೆಲುವಿನ ಟ್ರ್ಯಾಕ್​ಗೆ ಮರಳಿರುವುದು ಅದ್ಭುತ. ಟ್ರೋಫಿ ಗೆಲ್ಲುವ ಕಡೆಗೆ ಆರ್​ಸಿಬಿ ಇನ್ನಷ್ಟು ಆಕ್ರಮಣಕಾರಿಯಾಗಿ ಆಡಬೇಕು” ಎಂದು ಮುಂದಿನ ಪಂದ್ಯಗಳಿಗೂ ಶುಭ ಹಾರೈಸಿದ್ದಾರೆ. ಇದೇ ವರ್ಷ ಆರ್​ಸಿಬಿ ಮಹಿಳಾ ತಂಡ ಡಬ್ಲ್ಯುಪಿಎಲ್​ (WPL) ಟೂರ್ನಿಯ ಕಪ್​ ಗೆದ್ದಾಗಲೂ ಕೂಡ ವಿಜಯ್ ಮಲ್ಯ ತಂಡಕ್ಕೆ ಅಭಿನಂದನೆ ಸಲ್ಲಿಸಿದ್ದರು.

ವಿಶೇಷವೆಂದರೆ ಆರ್​ಸಿಬಿಗೆ ಮೇ 18 ಎನ್ನುವುದು ಬಹಳ ಅದೃಷ್ಟದ ದಿನವಾಗಿತ್ತು. ಹೌದು, ಇದುವರೆಗಿನ ಐಪಿಎಲ್​ ಇತಿಹಾಸದಲ್ಲಿ ಆರ್​ಸಿಬಿ ಈ ದಿನದಂದು ಆಡಿದ ಎಲ್ಲ ಪಂದ್ಯಗಳನ್ನು ಗೆದ್ದಿತ್ತು. ಹೀಗಾಗಿ ಇಂದು ಕೂಡ ಆರ್​ಸಿಬಿ ಗೆಲುವು ಸಾಧಿಸಬಹುದು ಎನ್ನುವುದು ಅಭಿಮಾನಿಗಳ ಬಲವಾದ ನಂಬಿಕೆಯಾಗಿತ್ತು. ಅದರಂತೆ ಆರ್​ಸಿಬಿ ಗೆಲುವು ಸಾಧಿಸಿ ಅಭಿಮಾನಿಗಳ ನಂಬಿಕೆಯನ್ನು ಉಳಿಸಿಕೊಂಡಿದೆ.

Continue Reading
Advertisement
R Ashok
ರಾಜಕೀಯ20 mins ago

R Ashok: ರಾಜ್ಯದಲ್ಲಿ ಮಳೆಗಿಂತ ಹೆಚ್ಚಾಗಿ ಕೊಲೆಗಳೇ ನಡೆಯುತ್ತಿವೆ: ಆರ್‌.ಅಶೋಕ್‌ ಕಿಡಿ

Thailand Open 2024
ಬ್ಯಾಡ್ಮಿಂಟನ್39 mins ago

Thailand Open 2024: ಥಾಯ್ಲೆಂಡ್‌ ಓಪನ್‌ ಗೆದ್ದ ಭಾರತದ ಚಿರಾಗ್‌-ಸಾತ್ವಿಕ್‌ ಜೋಡಿ

Prajwal Revanna Case
ಕರ್ನಾಟಕ44 mins ago

Prajwal Revanna Case: ಪೆನ್‌ಡ್ರೈವ್‌ ಕೇಸ್‌ಗೆ ಟ್ವಿಸ್ಟ್;‌ ದೇವರಾಜೇಗೌಡ, ಡಿಕೆಶಿ ಆಡಿಯೊ ಬಯಲು, ಇಲ್ಲಿದೆ ಸ್ಫೋಟಕ ಮಾಹಿತಿ

Money Guide
ಮನಿ-ಗೈಡ್53 mins ago

Money Guide: ಪ್ಯಾನ್‌ ಕಾರ್ಡ್‌ ಇಲ್ಲದೆಯೂ ಸಿಬಿಲ್‌ ಸ್ಕೋರ್‌ ಪರಿಶೀಲಿಸಬೇಕೆ? ಈ ಟಿಪ್ಸ್‌ ಫಾಲೋ ಮಾಡಿ

Road Accident
ಕ್ರೈಂ57 mins ago

Road Accident: ಬೆಂಗಳೂರು, ಗದಗದಲ್ಲಿ ಸರಣಿ ಅಪಘಾತ; ಗ್ಯಾಸ್ ಟ್ಯಾಂಕರ್ ಸ್ಫೋಟಕ್ಕೆ ಮನೆಗಳೇ ಭಸ್ಮ

Janhvi Kapoor felt sexualised at the age of 12
ಬಾಲಿವುಡ್1 hour ago

Janhvi Kapoor: 12ನೇ ವಯಸ್ಸಿನಲ್ಲಿಯೇ ಅಶ್ಲೀಲ ವೆಬ್‌ಸೈಟ್‌ನಲ್ಲಿ ನನ್ನ ಫೋಟೊ ಅಪ್‌ಲೋಡ್‌ ಆಗಿತ್ತು ಎಂದ ಶ್ರೀದೇವಿ ಮಗಳು!

Kundapur News
ಕರ್ನಾಟಕ1 hour ago

Kundapur News: ಅನಾರೋಗ್ಯದಿಂದ ತಾಯಿ ಸಾವು, ಶವದ ಜತೆ 4 ದಿನ ಕಳೆದ ಬುದ್ಧಿಮಾಂದ್ಯ ಪುತ್ರಿಯೂ ಮೃತ್ಯು!

RCB vs CSK
ಕ್ರಿಕೆಟ್1 hour ago

RCB vs CSK: ಧೋನಿ ವರ್ತನೆಗೆ ‘ಇಟ್‌ ಹರ್ಟ್ಸ್‌​’ ಎಂದ ಆರ್​ಸಿಬಿ ಅಭಿಮಾನಿಗಳು; ಧೋನಿ ಮಾಡಿದ ತಪ್ಪೇನು?

Congress Manifesto
ದೇಶ1 hour ago

Congress Manifesto: ಕಾಂಗ್ರೆಸ್‌ ಪ್ರಣಾಳಿಕೆ ಬಗ್ಗೆ ಅಪಪ್ರಚಾರ; ವ್ಯಕ್ತಿ ಅರೆಸ್ಟ್‌-ಬಿಜೆಪಿ ಕಿಡಿ

Prajwal Revanna Case
ಕರ್ನಾಟಕ2 hours ago

Prajwal Revanna Case: ಡಿಕೆಶಿ 100 ಕೋಟಿ ರೂ. ಆಫರ್;‌ ಬೆಂಕಿ ಇಲ್ಲದೆ ಹೊಗೆಯಾಡಲ್ಲ ಎಂದ ಆರ್.‌ ಅಶೋಕ್

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ2 hours ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ2 hours ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ4 hours ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ2 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ2 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ3 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು3 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ4 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

ಟ್ರೆಂಡಿಂಗ್‌