INDvsSL | ಲಂಕಾ ಸರಣಿಯಲ್ಲಿ ಯುವ ಆಟಗಾರರಿಗೆ ಭರಪೂರ ಅವಕಾಶ; ಗಿಲ್​, ಗಾಯಕ್ವಾಡ್​ ನಡುವೆ ಪೈಪೋಟಿ - Vistara News

ಕ್ರಿಕೆಟ್

INDvsSL | ಲಂಕಾ ಸರಣಿಯಲ್ಲಿ ಯುವ ಆಟಗಾರರಿಗೆ ಭರಪೂರ ಅವಕಾಶ; ಗಿಲ್​, ಗಾಯಕ್ವಾಡ್​ ನಡುವೆ ಪೈಪೋಟಿ

ಭಾರತ ಮತ್ತು ಪ್ರವಾಸಿ ಶ್ರೀಲಂಕಾ (INDvsSL) ನಡುವಿನ ಟಿ20 ಸರಣಿಯ ಮೊದಲ ಪಂದ್ಯ ಮಂಗಳವಾರ ಮುಂಬೈನ ವಾಂಖೆಡೆ ಸ್ಟೇಡಿಯಮ್​ನಲ್ಲಿ ನಡೆಯಲಿದೆ.

VISTARANEWS.COM


on

Team India
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬೈ: ಭಾರತ ಕ್ರಿಕೆಟ್​ ತಂಡ 2023ರ ಕ್ಯಾಲೆಂಡರ್​ ವರ್ಷದ ಮೊದಲ ಹಣಾಹಣಿಯಲ್ಲಿ ಪ್ರವಾಸಿ ಶ್ರೀಲಂಕಾ (INDvsSL) ತಂಡವನ್ನು ಎದುರಿಸಲಿದೆ. ಇತ್ತಂಡಗಳ ನಡುವೆ ಮಂಗಳವಾರ ಮುಂಬಯಿಯ ವಾಂಖೆಡೆ ಸ್ಟೇಡಿಯಮ್​ನಲ್ಲಿ ಟಿ20 ಸರಣಿಯ ಮೊದಲ ಪಂದ್ಯ ನಡೆಯಲಿದೆ. ಭಾರತದ ಯುವ ಆಟಗಾರರ ಪಾಲಿಗೆ ಇದು ಅವಕಾಶಗಳನ್ನು ಬಾಚಿಕೊಳ್ಳುವುದಕ್ಕೆ ಲಭಿಸಿರುವ ಅತ್ಯುತ್ತಮ ಅವಕಾಶ.

ಭಾರತ ತಂಡದ ಹಿರಿಯ ಆಟಗಾರರಾದ ರೋಹಿತ್​ ಶರ್ಮ, ಕೆ ಎಲ್​ ರಾಹುಲ್​ ಹಾಗೂ ವಿರಾಟ್ ಕೊಹ್ಲಿಗೆ ವಿಶ್ರಾಂತಿ ಕಲ್ಪಿಸಲಾಗಿದೆ. ಅದೇ ರೀತಿ ಟೀಮ್​ ಇಂಡಿಯಾ 2024ರ ಟಿ20 ವಿಶ್ವ ಕಪ್​ಗಾಗಿ ತಂಡವನ್ನು ಸಜ್ಜುಗೊಳಿಸಲು ಮುಂದಾಗಿದೆ. ಹೀಗಾಗಿ ಶ್ರೀಲಂಕಾ ವಿರುದ್ಧದ ಸರಣಿಯಿಂದಲೇ ಆಟಗಾರರ ಪರೀಕ್ಷೆ ಆರಂಭಗೊಳ್ಳಲಿದೆ. ಪ್ರಮುಖವಾಗಿ ಇಶಾನ್​ ಕಿಶನ್​​, ಶುಬ್ಮನ್​ ಗಿಲ್​, ಸಂಜು ಸ್ಯಾಮ್ಸನ್​, ದೀಪಕ್​ ಹೂಡ, ವೇಗದ ಬೌಲರ್​ ಶಿವಂ ಮಾವಿಗೆ ತಮ್ಮ ಸಾಮರ್ಥ್ಯ ಸಾಬೀತು ಮಾಡಲು ಅವಕಾಶ ಸಿಗಲಿದೆ. ಎಲ್ಲದಕ್ಕಿಂತ ಮುಖ್ಯವಾಗಿ ರೋಹಿತ್​ ಶರ್ಮ ಉತ್ತರಾಧಿಕಾರಿ ಎಂದೇ ಹೇಳಲಾಗುತ್ತಿರುವ ಹಾರ್ದಿಕ್ ಪಾಂಡ್ಯಗೆ ತಮ್ಮ ನಾಯಕತ್ವದ ಸಾಮರ್ಥ್ಯವನ್ನು ನಿರೂಪಿಸಲು ಸಿಗುತ್ತಿರುವ ಮತ್ತೊಂದು ಅವಕಾಶ.

ಕಳೆದ ವರ್ಷ ಭಾರತ ಪ್ರವಾಸ ಮಾಡಿದ್ದ ಶ್ರೀಲಂಕಾ ತಂಡ ಟಿ20 ಸರಣಿಯಲ್ಲಿ 3-0 ಅಂತರದಿಂದ ವೈಟ್​ವಾಷ್​ ಮಾಡಿಸಿಕೊಂಡಿತ್ತು. ಆದರೆ, 2022ರ ಅಕ್ಟೋಬರ್​ನಲ್ಲಿ ಯುಎಇನಲ್ಲಿ ನಡೆದ ಏಷ್ಯಾ ಕಪ್ ಸರಣಿಯಲ್ಲಿ ಲಂಕಾ ಬಳಗ ಭಾರತ ತಂಡವನ್ನು ಸೂಪರ್​ 4 ಹಂತದಲ್ಲಿ ಸೋಲಿಸುವ ಜತೆಗೆ ಚಾಂಪಿಯನ್​ ಪಟ್ಟ ಅಲಂಕರಿಸಿತ್ತು. ಅದೇ ವಿಶ್ವಾಸದಲ್ಲಿರುವ ಶ್ರೀಲಂಕಾ ತಂಡವನ್ನು ಹಾರ್ದಿಕ್​ ಪಾಂಡ್ಯ ಬಳಗ ಎಚ್ಚರಿಕೆಯಿಂದ ಎದುರಿಸಬೇಕು.

ಲಂಕಾ ಪ್ರೀಮಿಯರ್ ಲೀಗ್ ಆಡಿದ ಬಳಿಕ ಶ್ರೀಲಂಕಾ ತಂಡ ಭಾರತಕ್ಕೆ ಪ್ರವಾಸ ಬಂದಿದೆ. ಅಲ್ಲಿ ಉತ್ತಮ ಪ್ರದರ್ಶನ ತೋರಿದ ಆಟಗಾರರು ಪ್ರವಾಸಿ ತಂಡದಲ್ಲಿದ್ದಾರೆ. ಜತೆಗೆ ಹಿಂದೆ ಭಾರತ ತಂಡವನ್ನು ಸೋಲಿಸಿದ ಆತ್ಮವಿಶ್ವಾಸವೂ ಇದೆ. ಭಾರತದ ಉಪಖಂಡದ ತಾಣವಾಗಿರುವ ಕಾರಣ ಉತ್ತಮ ಪ್ರದರ್ಶನ ನೀಡುವ ಎಲ್ಲ ಅವಕಾಶಗಳಿವೆ.

ಯಾರು ಓಪನರ್​?

ಬಾಂಗ್ಲಾದೇಶ ವಿರುದ್ಧ ದಾಖಲೆಯ ದ್ವಿ ಶತಕ ಬಾರಿಸಿರುವ ಇಶಾನ್​ ಕಿಶನ್​ ಆರಂಭಿಕ ಬ್ಯಾಟರ್ ಆಗಿ ಅವಕಾಶ ಪಡೆಯಲಿದ್ದಾರೆ. ಎರಡನೇ ಓಪನರ್​ ಸ್ಥಾನಕ್ಕೆ ಶುಬ್ಮನ್​ ಗಿಲ್ ಹಾಗೂ ಋತುರಾಜ್ ಗಾಯಕ್ವಾಡ್​ ನಡುವೆ ಪೈಪೋಟಿಯಿದೆ. ಇಬ್ಬರೂ ಉತ್ತಮ ಫಾರ್ಮ್​ನಲ್ಲಿದ್ದು, ಪಂದ್ಯದ ಪರಿಸ್ಥಿತಿಗೆ ಪೂರಕವಾಗಿ ಅವಕಾಶ ಪಡೆಯಲಿದ್ದಾರೆ. ಗಿಲ್​ಗೆ ಅವಕಾಶ ಸಿಕ್ಕರೆ ಅವರು ಟಿ20 ಮಾದರಿಗೆ ಪದಾರ್ಪಣೆ ಮಾಡಿದಂತಾಗುತ್ತದೆ. ಹೀಗಾದರೆ ದೇಶಿ ಕ್ರಿಕೆಟ್​ನಲ್ಲಿ ಒಂದೇ ಓವರ್​ನಲ್ಲಿ ಆರು ಸಿಕ್ಸರ್​ ಬಾರಿಸಿದ ದಾಖಲೆ ಬರೆದಿರುವ ಹೊರತಾಗಿಯೂ ಋತುರಾಜ್​ ಬೆಂಚು ಕಾಯಬೇಕಾಗುತ್ತದೆ.

ಮಧ್ಯಮ ಕ್ರಮಾಂಕದಲ್ಲಿ ಸೂರ್ಯಕುಮಾರ್​ ಯಾದವ್, ಹಾರ್ದಿಕ್ ಪಾಂಡ್ಯ, ಸಂಜು ಸ್ಯಾಮ್ಸನ್​ ಮತ್ತು ಅಕ್ಷರ್ ಪಟೇಲ್​ ಅವಕಾಶ ಪಡೆಯಲಿದ್ದಾರೆ. ಅರ್ಶ್​ದೀಪ್ ಸಿಂಗ್​, ಉಮ್ರಾನ್​ ಮಲಿಕ್, ಹರ್ಷಲ್​ ಪಟೇಲ್​ ವೇಗದ ಬೌಲರ್​ಗಳಾಗಿರುತ್ತಾರೆ. ಸ್ಪಿನ್ನರ್​ ಯಜ್ವೇಂದ್ರ ಚಹಲ್​ಗೂ ಅವಕಾಶ ಖಂಡಿತ.

ಭಾರತ ಸಂಭಾವ್ಯ 11 ಆಟಗಾರರ ಬಳಗ

ಇಶಾನ್ ಕಿಶನ್, ಶುಬ್ಮನ್ ಗಿಲ್/ಋತುರಾಜ್ ಗಾಯಕ್ವಾಡ್, ಸೂರ್ಯಕುಮಾರ್ ಯಾದವ್, ಸಂಜು ಸ್ಯಾಮ್ಸನ್, ಹಾರ್ದಿಕ್ ಪಾಂಡ್ಯ, ದೀಪಕ್ ಹೂಡಾ, ಅಕ್ಷರ್ ಪಟೇಲ್, ಅರ್ಶ್​ದೀಪ್​ ಸಿಂಗ್, ಹರ್ಷಲ್ ಪಟೇಲ್, ಉಮ್ರಾನ್ ಮಲಿಕ್, ಯಜ್ವೇಂದ್ರ ಚಹಲ್​.

ಶ್ರೀಲಂಕಾ ಸಂಭಾವ್ಯ 11 ಆಟಗಾರರ ಬಳಗ

ಪಾಥುಮ್ ನಿಸಾಂಕ, ಕುಸಾಲ್‌ ಮೆಂಡಿಸ್ (ವಿ.ಕೀ), ಆವಿಷ್ಕಾ ಫೆರ್ನಾಂಡೊ, ಚರಿತ ಅಸಲಂಕ, ಭಾನುಕಾ ರಾಜಪಕ್ಷ, ದಸುನ್‌ ಶನಕ(ನಾಯಕ), ವಾನಿಂದು ಹಸರಂಗ, ಚಾಮಿಕ ಕರುಣಾರತ್ನೆ, ಮಹೀಶ್‌ ತೀಕ್ಷಣ, ಲಾಹಿರು ಕುಮಾರ, ದಿಲ್ಷಾನ್‌ ಮದುಸೂದನ್‌

ಇದನ್ನೂ ಓದಿ | Women’s Asia Cup | ಶ್ರೀಲಂಕಾ ತಂಡವನ್ನು ಮಣಿಸಿದ ಭಾರತ ತಂಡ ಏಳನೇ ಬಾರಿ ಚಾಂಪಿಯನ್‌

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Venkatesh Iyer Marriage: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕ್ರಿಕೆಟಿಗ ವೆಂಕಟೇಶ್​ ಅಯ್ಯರ್​

Venkatesh Iyer Marriage: ಕೆಕೆಆರ್​ ತಂಡದ ವೆಂಕಟೇಶ್​ ಅಯ್ಯರ್​(Venkatesh Iyer Marriage) ಅವರು ತಮ್ಮ ಬಹುಕಾಲದ ಗೆಳತಿ ಶೃತಿ ರಘುನಾಥನ್(Shruti Raghunathan) ಅವರೊಂದಿಗೆ ದಾಂಪತ್ಯ ಬದುಕಿಗೆ ಅಡಿಯಿರಿಸಿದ್ದಾರೆ.

VISTARANEWS.COM


on

Venkatesh Iyer Marriage
Koo

ಬೆಂಗಳೂರು​: ಟೀಮ್​ ಇಂಡಿಯಾದ ಕ್ರಿಕೆಟಿಗ, ಕೆಕೆಆರ್​ ತಂಡದ ಸೂಪರ್​ ಸ್ಟಾರ್​ ವೆಂಕಟೇಶ್​ ಅಯ್ಯರ್​(Venkatesh Iyer Marriage) ಅವರು ತಮ್ಮ ಬಹುಕಾಲದ ಗೆಳತಿ ಶೃತಿ ರಘುನಾಥನ್(Shruti Raghunathan) ಅವರೊಂದಿಗೆ ದಾಂಪತ್ಯ ಬದುಕಿಗೆ ಅಡಿಯಿರಿಸಿದರು. ಭಾನುವಾರ ಈ ಜೋಡಿಯ ವಿವಾಹ ಸಂಪ್ರದಾಯಬದ್ಧವಾಗಿ ನೆರವೇರಿತು. ಮದುವೆಯ ಫೋಟೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು ಕೆಕೆಆರ್​ ಫ್ರಾಂಚೈಸಿ ಮತ್ತು ತಂಡದ ಸಹ ಆಟಗಾರರು ಸೇರು ಅನೇಕ ಮಾಜಿ ಮತ್ತು ಹಾಲಿ ಕ್ರಿಕೆಟಿಗರು ಈ ಜೋಡಿಗೆ ಶುಭ ಹಾರೈಸಿದ್ದಾರೆ.

ಕಳೆದ ವರ್ಷ ನವೆಂಬರ್ 21, 2023ರಲ್ಲಿ ಈ ಜೋಡಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಇದೀಗ ಸಪ್ತಪದಿ ತುಳಿದಿದ್ದಾರೆ. ವೆಂಕಟೇಶ್​ ಅಯ್ಯರ್ ಈ ಬಾರಿಯ ಐಪಿಎಲ್​ ಟೂರ್ನಿಯಲ್ಲಿ ಚಾಂಪಿಯನ್​ ಪಟ್ಟ ಅಲಂಕರಿಸಿದ ಕೆಕೆಆರ್ ತಂಡದ ಸದ್ಯನಾಗಿದ್ದಾರೆ. ಈ ಬಾರಿ 14 ಪಂದ್ಯಗಳನ್ನಾಡಿ 370 ರನ್​ ಬಾರಿಸಿದ್ದಾರೆ. ಫೈನಲ್​ ಪಂದ್ಯದಲ್ಲಿ ಅರ್ಧಶತಕ ಬಾರಿಸಿ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಇದನ್ನೂ ಓದಿ T20 World Cup 2024 : ಟಿ20 ವಿಶ್ವಕಪ್ ವಿಜೇತ ಭಾರತ ತಂಡದ ಕ್ರಿಕೆಟಿಗರು ಈಗ ಎಲ್ಲಿದ್ದಾರೆ?

ವರದಿಗಳ ಪ್ರಕಾರ ಶ್ರುತಿ ಅವರು ಪಿಎಸ್​ಜಿ ಕಾಲೇಜ್ ಆಫ್ ಆರ್ಟ್ಸ್ ಆ್ಯಂಡ್​ ಸೈನ್ಸ್‌ನಿಂದ ಬಿಕಾಂ ಪದವಿ ಪೂರ್ಣಗೊಳಿಸಿದ್ದಾರೆ. ಭಾರತದ NIFTನಿಂದ ಫ್ಯಾಷನ್ ಮ್ಯಾನೇಜ್‌ಮೆಂಟ್‌ನಲ್ಲಿ ಸ್ನಾತಕೋತ್ತರ ಪದವಿಯನ್ನು ಹೊಂದಿದ್ದಾರೆ. ಪ್ರಸ್ತುತ ಬೆಂಗಳೂರಿನಲ್ಲಿರುವ ಲೈಫ್‌ಸ್ಟೈಲ್ ಇಂಟರ್‌ನ್ಯಾಶನಲ್ ಪ್ರೈವೇಟ್ ಲಿಮಿಟೆಡ್‌ನಲ್ಲಿ ಮರ್ಚಂಡೈಸ್ ಪ್ಲಾನರ್ ಆಗಿ ಕೆಲಸ ಮಾಡುತ್ತಿದ್ದಾರೆ ಎನ್ನಲಾಗಿದೆ.

29 ವರ್ಷದ ವೆಂಕಟೇಶ್​ ಅಯ್ಯರ್​ ಅವರು ಭಾರತ ಪರ 2 ಏಕದಿನ, 9 ಟಿ20 ಪಂದ್ಯಗಳನ್ನಾಡಿದ್ದಾರೆ. ಏಕದಿನದಲ್ಲಿ 24 ಮತ್ತು ಟಿ20ಯಲ್ಲಿ 133 ರನ್​ ಬಾರಿಸಿದ್ದಾರೆ. ಐಪಿಎಲ್​ನಲ್ಲಿ 50 ಪಂದ್ಯಗಳನ್ನು ಆಡಿ 1326 ರನ್​ ಗಳಿಸಿದ್ದಾರೆ. ಒಂದು ಶತಕ ಕೂಡ ಬಾರಿಸಿದ್ದಾರೆ. ಐಪಿಎಲ್​ನಲ್ಲಿ ಸಿಕ್ಕ ಯಶಸ್ಸು ಅವರಿಗೆ ಟೀಮ್​ ಇಂಡಿಯಾ ಪರ ಸಿಗಲಿಲ್ಲ. ಮಧ್ಯಮ ವೇಗಿಯಾಗಿರುವ ವೆಂಕಿ, ಐಪಿಎಲ್​ನಲ್ಲಿ 3, ಭಾರತ ಪರ ಟಿ20ಯಲ್ಲಿ 5 ವಿಕೆಟ್​ ಪಡೆದಿದ್ದಾರೆ.

Continue Reading

ಕ್ರಿಕೆಟ್

Aaron Jones: 17 ವರ್ಷಗಳ ಹಿಂದಿನ ಟಿ20 ವಿಶ್ವಕಪ್​ ದಾಖಲೆ ಸರಿಗಟ್ಟಿದ ಯುಎಸ್​ಎ ಬ್ಯಾಟರ್​ ಆರೋನ್ ಜೋನ್ಸ್

Aaron Jones: 4ನೇ ಕ್ರಮಾಂಕದಲ್ಲಿ ಆಡಲಿಳಿದ ಆರೋನ್ ಜೋನ್ಸ್ ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್​ ನಡೆಸಿ ಕೆನಡಾ ಬೌಲರ್​ಗಳ ಬೆವರಿಳಿಸಿದರು. ಸಿಕ್ಸರ್​ ಮತ್ತು ಬೌಂಡರಿಗಳ ಮೂಲಕ ಮೈದಾನದ ಮೂಲೆ ಮೂಲೆಗೂ ಚೆಂಡನ್ನು ಬಡಿದಟ್ಟಿ ನೆರದಿದ್ದ ಸ್ಥಳೀಯ ಅಭಿಮಾನಿಗಳಿಗೆ ಭರಪೂರ ರಂಜನೆ ಒದಗಿಸಿದರು.

VISTARANEWS.COM


on

Aaron Jones
Koo

ನ್ಯೂಯಾರ್ಕ್​: ಕೆನಡಾ(CAN vs USA) ವಿರುದ್ಧ ವಿಸ್ಫೋಟಕ ಬ್ಯಾಟಿಂಗ್​ ಮೂಲಕ ಸಿಕ್ಸರ್​ಗಳ ಸುರಿಮಳೆ ಸುರಿಸಿದ ಅಮೆರಿಕ ತಂಡದ ಮಧ್ಯಮ ಕ್ರಮಾಂಕದ ಬ್ಯಾಟರ್​ ಆರೋನ್ ಜೋನ್ಸ್(Aaron Jones) ಟಿ20 ವಿಶ್ವಕಪ್(T20 World Cup)​ ಟೂರ್ನಿಯಲ್ಲಿ ದಾಖಲೆಯೊಂದನ್ನು ಬರೆದಿದ್ದಾರೆ. ಟಿ20 ವಿಶ್ವಕಪ್​ ಪಂದ್ಯವೊಂದರಲ್ಲಿ ಅತ್ಯಧಿಕ ಸಿಕ್ಸರ್​ ಬಾರಿಸಿದ 2ನೇ ಬ್ಯಾಟರ್​ ಎನಿಸಿಕೊಂಡಿದ್ದಾರೆ.

ಡಲ್ಲಾಸ್​ನಲ್ಲಿ ನಡೆದ ಪಂದ್ಯದಲ್ಲಿ 4ನೇ ಕ್ರಮಾಂಕದಲ್ಲಿ ಆಡಲಿಳಿದ ಆರೋನ್ ಜೋನ್ಸ್ ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್​ ನಡೆಸಿ ಕೆನಡಾ ಬೌಲರ್​ಗಳ ಬೆವರಿಳಿಸಿದರು. ಸಿಕ್ಸರ್​ ಮತ್ತು ಬೌಂಡರಿಗಳ ಮೂಲಕ ಮೈದಾನದ ಮೂಲೆ ಮೂಲೆಗೂ ಚೆಂಡನ್ನು ಬಡಿದಟ್ಟಿ ನೆರದಿದ್ದ ಸ್ಥಳೀಯ ಅಭಿಮಾನಿಗಳಿಗೆ ಭರಪೂರ ರಂಜನೆ ಒದಗಿಸಿದರು.

ಒಟ್ಟು 40 ಎಸೆತ ಎದುರಿಸಿದ ಆರೋನ್ ಜೋನ್ಸ್ ಅಜೇಯ 94 ರನ್​ ಬಾರಿಸಿದರು. ಇದರಲ್ಲಿ 60 ರನ್​ ಕೇವಲ ಸಿಕ್ಸರ್​ ಮೂಲಕವೇ ದಾಖಲಾಯಿತು. ಒಟ್ಟು 10 ಸಿಕ್ಸರ್​ ಮತ್ತು 4 ಬೌಂಡರಿ ಬಾರಿಸಿದರು. 10 ಸಿಕ್ಸರ್​ ಬಾರಿಸುವ ಮೂಲಕ ವೆಸ್ಟ್​ ಇಂಡೀಸ್​ನ ಮಾಜಿ ಬ್ಯಾಟರ್​ ಕ್ರಿಸ್​ ಗೇಲ್​ ದಾಖಲೆಯನ್ನು ಸರಿಗಟ್ಟಿದರು. ಕ್ರಿಸ್​ ಗೇಲ್​ 2007ರಲ್ಲಿ ಉದ್ಘಾಟನ ಆವೃತ್ತಿಯ ಟಿ20 ವಿಶ್ವಕಪ್​ನಲ್ಲಿ ದಕ್ಷಿಣ ಆಫ್ರಿಕಾ​ ವಿರುದ್ಧ 10 ಸಿಕ್ಸರ್​ ಬಾರಿಸಿದ್ದರು. ಈ ದಾಖಲೆಯನ್ನು 17ವರ್ಷಗಳ ಬಳಿಕ ಜೋನ್ಸ್ ಸರಿಗಟ್ಟಿದ್ದಾರೆ. ಪಂದ್ಯವೊಂದರಲ್ಲಿ ಅತ್ಯಧಿಕ ಸಿಕ್ಸರ್​ ದಾಖಲೆ ಇನ್ನೂ ಕೂಡ ಕ್ರಿಸ್​ ಗೇಲ್​ ಹೆಸರಿನಲ್ಲಿದೆ. 2016ರಲ್ಲಿ ಭಾರತದಲ್ಲಿ ನಡೆದಿದ್ದ ಇಂಗ್ಲೆಂಡ್​ ವಿರುದ್ಧದ ಪಂದ್ಯದಲ್ಲಿ ಗೇಲ್​ 11 ಸಿಕ್ಸರ್​ ಬಾರಿಸಿದ್ದರು.

ಇದನ್ನೂ ಓದಿ CAN vs USA: ಕೆನಡಾ ಪರ ಟಿ20 ವಿಶ್ವಕಪ್​ ಪಂದ್ಯವಾಡಿದ ದಾವಣಗೆರೆಯ ಶ್ರೇಯಸ್

ಟಿ20 ವಿಶ್ವಕಪ್​ ಪಂದ್ಯವೊಂದರಲ್ಲಿ ಅತ್ಯಧಿಕ ಸಿಕ್ಸರ್​ ಬಾರಿಸಿದ ಆಟಗಾರರು

ಆಟಗಾರಸಿಕ್ಸರ್​ವಿರುದ್ಧವರ್ಷ
ಕ್ರಿಸ್​ ಗೇಲ್​11ಇಂಗ್ಲೆಂಡ್​2016
ಕ್ರಿಸ್​ ಗೇಲ್​10ದಕ್ಷಿಣ ಆಫ್ರಿಕಾ2007
ಆರೋನ್ ಜೋನ್ಸ್10ಕೆನಡಾ2024
ರೀಲಿ ರೊಸೊ8ಬಾಂಗ್ಲಾದೇಶ2022

ಭರ್ಜರಿ ಗೆಲುವು ಸಾಧಿಸಿದ ಅಮೆರಿಕ


ಇಲ್ಲಿನ ಗ್ರ್ಯಾಂಡ್ ಪ್ರೈರೀ ಸ್ಟೇಡಿಯಂ, ಡಲ್ಲಾಸ್​ನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್​ ಸೋತು ಬ್ಯಾಟಿಂಗ್​ಗೆ ಇಳಿಸಲ್ಪಟ್ಟ ಕೆನಡಾ ತಂಡ ನವನೀತ್ ಧಲಿವಾಲ್(61) ಮತ್ತು ನಿಕೋಲಸ್ ಕಿರ್ಟನ್(51) ಅರ್ಧಶತಕದ ಬ್ಯಾಟಿಂಗ್​ ನೆರವಿನಿಂದ 5 ವಿಕೆಟ್​ಗೆ 194 ರನ್​ ಬಾರಿಸಿತು. ಜವಾಬಿತ್ತ ಅಮೆರಿಕ ಈ ಬೃಹತ್​ ಮೊತ್ತವನ್ನು 17.4 ಓವರ್​ಗಳಲ್ಲಿ ಕೇವಲ 3 ವಿಕೆಟ್​ ಕಳೆದುಕೊಂಡು 197 ರನ್​ ಬಾರಿಸಿ ಅಮೋಘ ಗೆಲುವು ದಾಖಲಿಸಿತು. ಈ ಗೆಲುವಿನೊಂದಿಗೆ ಯುಎಸ್​ಎ ಗರಿಷ್ಠ ಮೊತ್ತ ಚೇಸ್​ ಮಾಡಿದ ದಾಖಲೆ ಬರೆಯಿತು. ಇದಕ್ಕೂ ಮುನ್ನ 168 ರನ್​ಗಳನ್ನು ಚೇಸ್ ಮಾಡಿದ್ದು ತಂಡದ ಅತ್ಯುತ್ತಮ ಸಾಧನೆಯಾಗಿತ್ತು. ಇದೀಗ ಟಿ20 ವಿಶ್ವಕಪ್​ನ ಚೊಚ್ಚಲ ಪಂದ್ಯದಲ್ಲೇ ಐತಿಹಾಸಿಕ ಗೆಲುವು ದಾಖಲಿಸಿದೆ.

Continue Reading

ಕ್ರೀಡೆ

CAN vs USA: ಕೆನಡಾ ಪರ ಟಿ20 ವಿಶ್ವಕಪ್​ ಪಂದ್ಯವಾಡಿದ ದಾವಣಗೆರೆಯ ಶ್ರೇಯಸ್

CAN vs USA: ಇಂದು ನಡೆದ ಅಮೆರಿಕ ವಿರುದ್ಧದ ಪಂದ್ಯದಲ್ಲಿ 5ನೇ ಕ್ರಮಾಂಕದಲ್ಲಿ ಬ್ಯಾಟಿಂಗ್​ ನಡೆಸಿದ ಶ್ರೇಯಸ್ ಆಕ್ರಮಣಕಾರಿ ಬ್ಯಾಟಿಂಗ್​ ಮೂಲಕ 16 ಎಸೆತಗಳಿಂದ ಅಜೇಯ 32 ರನ್​ ಬಾರಿಸಿದರು. ಅವರ ಈ ಬ್ಯಾಟಿಂಗ್​ ಇನಿಂಗ್ಸ್​ನಲ್ಲಿ ತಲಾ 2 ಬೌಂಡರಿ ಮತ್ತು ಸಿಕ್ಸರ್​ ಸಿಡಿಯಿತು. 20 ರನ್​ಗಳು ಬೌಂಡರಿ ಮತ್ತು ಸಿಕ್ಸರ್​ ಮೂಲಕವೇ ದಾಖಲಾಯಿತು.

VISTARANEWS.COM


on

CAN vs USA
Koo

ನ್ಯೂಯಾರ್ಕ್​: 9ನೇ ಆವೃತ್ತಿಯ ಟಿ20 ವಿಶ್ವಕಪ್(T20 World Cup 2024)​ ಟೂರ್ನಿಗೆ ಅಧಿಕೃತ ಚಾಲನೆ ಸಿಕ್ಕಿದೆ. ಇಂದು(ಭಾನುವಾರ) ನಡೆದ ಉದ್ಘಾಟನ ಪಂದ್ಯದಲ್ಲಿ ಆತಿಥೇಯ ಅಮೆರಿಕ(CAN vs USA) ತಂಡ ಕೆನಡಾ ವಿರುದ್ಧ ಭರ್ಜರಿ 7 ವಿಕೆಟ್​ಗಳ ಗೆಲುವು ಸಾಧಿಸಿ ಟೂರ್ನಿಯಲ್ಲಿ ಶುಭಾರಂಭ ಕಂಡಿದೆ. ಕೆನಡಾ ಪರ ಕರ್ನಾಟಕದ, ದಾವಣಗೆರೆ ಮೂಲದ ಆಟಗಾರ ಶ್ರೇಯಸ್ ಮೋವಾ(Shreyas Movva) ಕೂಡ ಕಣಕ್ಕಿಳಿದು ಚೊಚ್ಚಲ ಟಿ20 ವಿಶ್ವಕಪ್​ ಪಂದ್ಯವನ್ನಾಡಿದ ಹಿರಿಮೆಗೆ ಪಾತ್ರರಾದರು.

ಕರ್ನಾಟಕ ಪರವೂ ಆಡಿದ್ದರು


ಹೌದು, 30 ವರ್ಷದ ವಿಕೆಟ್​ ಕೀಪರ್​ ಕಮ್​ ಬ್ಯಾಟರ್​ ಆಗಿರುವ ಶ್ರೇಯಸ್ ಮೋವಾ ದಾವಣಗೆರೆಯವರಾಗಿದ್ದಾರೆ. ಬಾಲ್ಯದ ದಿನದಲ್ಲಿ ಅಂದರೆ, 2006ರಲ್ಲಿ ದಾವಣಗೆರೆ ಕ್ರಿಕೆಟ್ ಅಕಾಡೆಮಿಯಲ್ಲಿ ತರಬೇತಿ ಪಡೆದು, ಬಳಿಕ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ನಡೆಸುವ ಅಂತಾರಾಜ್ಯ ವಯೋಮಿತಿ ಒಳಗೊಂಡ 19 ವರ್ಷದೊಳಗಿನ, 16 ವರ್ಷದೊಳಗಿನ ಪಂದ್ಯಾವಳಿಗಳಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ್ದರು.

ಕೆನಡಾ ಪೌರತ್ವ


ದಾವಣಗೆರೆಯ ಬಾಪೂಜಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಎಂಜಿನಿಯರಿಂಗ್ ಪದವಿ ಪಡೆದ ಶ್ರೇಯಸ್, ಹೆಚ್ಚಿನ ವಿದ್ಯಾಭ್ಯಾಸಕ್ಕೆ ಕೆನಡಾಕ್ಕೆ ತರೆಳಿದರು. ಇಲ್ಲಿಯೂ ಕೂಡ ಕ್ರಿಕೆಟ್​ ನಂಟು ಬಿಡದ ಇವರು ಅಲ್ಲಿನ ಸ್ಥಳೀಯ ಕ್ರಿಕೆಟ್​ ಟೂರ್ನಿಗಳಲ್ಲಿ ಆಡುವ ಮೂಲಕ ಗಮನಸೆಳೆದಿದ್ದರು. ಬಳಿಕ ಕೆನಡಾ ದೇಶದ ಪೌರತ್ವ ಪಡೆದು ಇದೀಗ ಕೆನಡಾ ರಾಷ್ಟ್ರೀಯ ತಂಡದ ಪರ ಆಡುತ್ತಿದ್ದಾರೆ. ಇದುವರೆಗೆ 6 ಟಿ20 ಮತ್ತು 7 ಏಕದಿನ ಪಂದ್ಯಗಳನ್ನಾಡಿ ಒಟ್ಟು 171 ರನ್​ ಬಾರಿಸಿದ್ದಾರೆ. ವಿಕೆಟ್​ ಕೀಪರ್​ ಆಗಿರುವ ಇವರು ಇದೇ ವರ್ಷ ನಡೆದಿದ್ದ ನೇಪಾಳ ವಿರುದ್ಧದ ಏಕದಿನ ಸರಣಿಯ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಪದಾರ್ಪಣೆ ಮಾಡಿದ್ದರು.

ಇದನ್ನೂ ಓದಿ USA vs CAN: ಆರನ್ ಜೋನ್ಸ್ ಪ್ರಚಂಡ ಬ್ಯಾಟಿಂಗ್​; ಗೆಲುವಿನ ಶುಭಾರಂಭ ಕಂಡ ಅಮೆರಿಕ

ಇಂದು ನಡೆದ ಅಮೆರಿಕ ವಿರುದ್ಧದ ಪಂದ್ಯದಲ್ಲಿ 5ನೇ ಕ್ರಮಾಂಕದಲ್ಲಿ ಬ್ಯಾಟಿಂಗ್​ ನಡೆಸಿದ ಶ್ರೇಯಸ್ ಆಕ್ರಮಣಕಾರಿ ಬ್ಯಾಟಿಂಗ್​ ಮೂಲಕ 16 ಎಸೆತಗಳಿಂದ ಅಜೇಯ 32 ರನ್​ ಬಾರಿಸಿದರು. ಅವರ ಈ ಬ್ಯಾಟಿಂಗ್​ ಇನಿಂಗ್ಸ್​ನಲ್ಲಿ ತಲಾ 2 ಬೌಂಡರಿ ಮತ್ತು ಸಿಕ್ಸರ್​ ಸಿಡಿಯಿತು. 20 ರನ್​ಗಳು ಬೌಂಡರಿ ಮತ್ತು ಸಿಕ್ಸರ್​ ಮೂಲಕವೇ ದಾಖಲಾಯಿತು. ಆದರೆ ಪಂದ್ಯ ಸೋತ ಕಾರಣ ಇವರ ಈ ಬ್ಯಾಟಿಂಗ್​ ಪ್ರದರ್ಶನ ವ್ಯರ್ಥವಾಯಿತು.

ಪಂದ್ಯ ಸೋತ ಕೆನಡಾ


ಇಲ್ಲಿನ ಗ್ರ್ಯಾಂಡ್ ಪ್ರೈರೀ ಸ್ಟೇಡಿಯಂ, ಡಲ್ಲಾಸ್​ನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್​ ಸೋತು ಬ್ಯಾಟಿಂಗ್​ಗೆ ಇಳಿಸಲ್ಪಟ್ಟ ಕೆನಡಾ ತಂಡ ನವನೀತ್ ಧಲಿವಾಲ್(61) ಮತ್ತು ನಿಕೋಲಸ್ ಕಿರ್ಟನ್(51) ಅರ್ಧಶತಕದ ಬ್ಯಾಟಿಂಗ್​ ನೆರವಿನಿಂದ 5 ವಿಕೆಟ್​ಗೆ 194 ರನ್​ ಬಾರಿಸಿತು. ಜವಾಬಿತ್ತ ಅಮೆರಿಕ ಈ ಬೃಹತ್​ ಮೊತ್ತವನ್ನು 17.4 ಓವರ್​ಗಳಲ್ಲಿ ಕೇವಲ 3 ವಿಕೆಟ್​ ಕಳೆದುಕೊಂಡು 197 ರನ್​ ಬಾರಿಸಿ ಅಮೋಘ ಗೆಲುವು ದಾಖಲಿಸಿತು. ಈ ಗೆಲುವಿನೊಂದಿಗೆ ಯುಎಸ್​ಎ ಗರಿಷ್ಠ ಮೊತ್ತ ಚೇಸ್​ ಮಾಡಿದ ದಾಖಲೆ ಬರೆಯಿತು. ಇದಕ್ಕೂ ಮುನ್ನ 168 ರನ್​ಗಳನ್ನು ಚೇಸ್ ಮಾಡಿದ್ದು ತಂಡದ ಅತ್ಯುತ್ತಮ ಸಾಧನೆಯಾಗಿತ್ತು. ಇದೀಗ ಟಿ20 ವಿಶ್ವಕಪ್​ನ ಚೊಚ್ಚಲ ಪಂದ್ಯದಲ್ಲೇ ಐತಿಹಾಸಿಕ ಗೆಲುವು ದಾಖಲಿಸಿದೆ.

Continue Reading

ಕ್ರೀಡೆ

Virat Kohli: ಐಸಿಸಿ ವರ್ಷದ ಏಕದಿನ ಆಟಗಾರ ಪ್ರಶಸ್ತಿ ಸ್ವೀಕರಿಸಿದ ವಿರಾಟ್ ಕೊಹ್ಲಿ

Virat Kohli: 2012, 2017, 2018 ರಲ್ಲಿಯೂ ಕೊಹ್ಲಿ ಐಸಿಸಿ ವರ್ಷದ(ICC ODI Player Of The Year 2023) ಏಕದಿನ ಆಟಗಾರ ಪ್ರಶಸ್ತಿಗೆ ಭಾಜನರಾಗಿದ್ದರು.

VISTARANEWS.COM


on

Virat Kohli
Koo

ನ್ಯೂಯಾರ್ಕ್​: ಭಾರತ ತಂಡದ ಸ್ಟಾರ್​ ಆಟಗಾರ ವಿರಾಟ್ ಕೊಹ್ಲಿ(Virat Kohli) ಅವರು ಐಸಿಸಿ ವರ್ಷದ(ICC ODI Player Of The Year 2023) ಏಕದಿನ ಆಟಗಾರ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಭಾನುವಾರ ಕೊಹ್ಲಿ ಈ ಪ್ರಶಸ್ತಿ ಸ್ವೀಕರಿಸಿದರು. ಈ ಮೂಲಕ ವೃತ್ತಿಜೀವನದಲ್ಲಿ ಮತ್ತೊಂದು ಬೃಹತ್ ಉತ್ತುಂಗಕ್ಕೆ ಏರಿದ್ದಾರೆ. ಟಿ20 ವಿಶ್ವಕಪ್​ ಆಡುವ ಸಲುವಾಗಿ ನ್ಯೂಯಾರ್ಕ್​ನಲ್ಲಿರು ಕೊಹ್ಲಿ ಈ ಪ್ರಶಸ್ತಿಯನ್ನು ಇಲ್ಲಿಯೇ ಸ್ವೀಕರಿಸಿದ್ದಾರೆ. ಇದರ ವಿಡಿಯೊವನ್ನು ಐಸಿಸಿ ತನ್ನ ಅಧಿಕೃತ ಟ್ವಿಟರ್​ ಎಕ್ಸ್​ನಲ್ಲಿ ಹಂಚಿಕೊಂಡಿದೆ. 2012, 2017, 2018 ರಲ್ಲಿಯೂ ಕೊಹ್ಲಿ ಈ ಪ್ರಶಸ್ತಿ ಪಡೆದಿದ್ದರು.

2022ರ ದ್ವಿತೀಯಾರ್ಧದಲ್ಲಿ ಮತ್ತೆ ಹಳೆಯ ಬ್ಯಾಟಿಂಗ್​ ಫಾರ್ಮ್​ಗೆ ಮರಳಿದ ವಿರಾಟ್​ ಕೊಹ್ಲಿ ಟೆಸ್ಟ್ ಮತ್ತು ಏಏಕದಿನ ಕ್ರಿಕೆಟ್​ನಲ್ಲಿ ರನ್​ಗಳ ಮಳೆಯನ್ನೇ ಸುರಿಸಿದ್ದರು. ಅಲ್ಲದೆ ಹಲವು ವಿಶ್ವ ದಾಖಲೆಯನ್ನು ಕೂಡ ತಮ್ಮ ಹೆಸೆರಿಗೆ ಬರೆದಿದ್ದರು. 2023ರಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆದ ಬಾರ್ಡರ್-ಗವಾಸ್ಕರ್ ಸರಣಿಯ ಅಂತಿಮ ಪಂದ್ಯದಲ್ಲಿ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಕೊಹ್ಲಿ 186 ರನ್ ಸಿಡಿಸಿದ್ದರು. ಇದು 2019 ರ ನಂತರ ಅವರ ಮೊದಲ ಟೆಸ್ಟ್ ಶತಕವಾಗಿತ್ತು.

ಆಸೀಸ್​ ಬಳಿಕ ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್​ನಲ್ಲಿ 121 ರನ್ ಗಳಿಸುವ ತಮ್ಮ ಶತಕದ ಸಂಖ್ಯೆಯನ್ನು ಮತ್ತೆ ಹೆಚ್ಚಿಸಿದರು. ಏಕದಿನ ಮಾದರಿಯಲ್ಲಿ ಹಲವಾರು ದಾಖಲೆಗಳನ್ನು ಪುಡಿಮಾಡಿ ಕಳೆದ ವರ್ಷ ಆರು ಶತಕಗಳನ್ನು ಬಾರಿಸಿದ್ದಾರೆ. ಜತೆಗೆ ಏಕದಿನ ಕ್ರಿಕೆಟ್​ನಲ್ಲಿ ಸಚಿನ್​ ಬಾರಿಸಿದ್ದ 49 ಶತಕದ ವಿಶ್ವ ದಾಖಲೆಯನ್ನು ಹಿಂದಿಕ್ಕಿ 50 ಶತಕ ಪೂರ್ತಿಗೊಳಿಸಿದ್ದರು. ವಿಶ್ವಕಪ್​ ಟೂರ್ನಿಯಲ್ಲೂ 765 ರನ್​ ಬಾರಿಸಿ ಟೂರ್ನಿಯಲ್ಲಿ ಅತ್ಯಧಿಕ ರನ್​ ಗಳಿಸಿದ ಆಟಗಾರ ಎನಿಸಿಕೊಂಡಿದ್ದರು.

ಇದನ್ನೂ ಓದಿ Virat kohli : ಕಡೆಗಣಿಸುವ ಹೇಳಿಕೆ ನೀಡಿ ಕೊಹ್ಲಿಗೆ ಮತ್ತೆ ಅವಮಾನ ಮಾಡಿದ ಅಂಬಾಟಿ ರಾಯುಡು

35 ವರ್ಷದ ಕೊಹ್ಲಿ 2023 ರಲ್ಲಿ 27 ಏಕದಿನ ಪಂದ್ಯಗಳಿಂದ 24 ಇನ್ನಿಂಗ್ಸ್‌ಗಳಲ್ಲಿ ಆರು ಶತಕಗಳು ಮತ್ತು ಎಂಟು ಅರ್ಧಶತಕಗಳೊಂದಿಗೆ 72.47 ರ ಸರಾಸರಿ ಮತ್ತು 99.13 ರ ಸ್ಟ್ರೈಕ್ ರೇಟ್‌ನಲ್ಲಿ 1,377 ರನ್ ಗಳಿಸಿದ್ದಾರೆ. ಈ ಪೈಕಿ ಗರಿಷ್ಠ ಸ್ಕೋರ್ 166* ಆಗಿತ್ತು. ಏಷ್ಯಾ ಕಪ್ 2023 ರ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ನಿರ್ಣಾಯಕ ಸೂಪರ್ ಫೋರ್ ಹಂತದ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ 94 ಎಸೆತಗಳಲ್ಲಿ ಅಜೇಯ 122* ರನ್ ಗಳಿಸಿದ್ದರು.

ಕಳೆದ ವರ್ಷ ತವರಿನಲ್ಲಿ ನಡೆದ ಏಕದಿನ ವಿಶ್ವಕಪ್‌ನಲ್ಲಿ, ವಿರಾಟ್ 11 ಪಂದ್ಯಗಳಲ್ಲಿ 95.62 ಸರಾಸರಿಯಲ್ಲಿ 765 ರನ್‌ಗಳನ್ನು ಗಳಿಸಿದ್ದರು. ಇದರಲ್ಲಿ ಮೂರು ಶತಕಗಳು, ಆರು ಅರ್ಧ ಶತಕಗಳು ದಾಖಲಾಗಿತ್ತು. ಈ ಬಾರಿಯ ಐಪಿಎಲ್​ ಟೂರ್ನಿಯಲ್ಲಿ ಅತಿ ಹೆಚ್ಚು ರನ್‌ಗಳಿಸಿ ಆರೆಂಜ್ ಕ್ಯಾಪ್ ಗೆದ್ದಿದ್ದರು. ಇದೀಗ ಟಿ20 ವಿಶ್ವಕಪ್​ ಆಡಲು ಸಜ್ಜಾಗಿದ್ದಾರೆ. ಭಾರತ ತನ್ನ ಮೊದಲ ಲೀಗ್​ ಪಂದ್ಯವನ್ನು ಜೂನ್ 5ರಂದು ಐರ್ಲೆಂಡ್​ ವಿರುದ್ಧ ಆಡಲಿದೆ.

Continue Reading
Advertisement
MLC Election
ಕರ್ನಾಟಕ3 mins ago

MLC Election: ವಿಧಾನ ಪರಿಷತ್‌ ಚುನಾವಣೆ; ಸಿ.ಟಿ.ರವಿ, ಎನ್.ರವಿಕುಮಾರ್‌ ಸೇರಿ ಮೂವರಿಗೆ ಬಿಜೆಪಿ ಟಿಕೆಟ್‌

Actor Dhanush unveils new poster from Ilaiyaraaja biopic
ಕಾಲಿವುಡ್24 mins ago

Actor Dhanush: ಇಳಯರಾಜ ಬಯೋಪಿಕ್‌ ಹೊಸ ಪೋಸ್ಟರ್‌ ಔಟ್‌; ಸಹೋದರರು ಎಂದು ಕಮಲ್‌ ಹಾಸನ್‌ ಹೇಳಿದ್ಯಾರಿಗೆ?

Murder Case
ಚಾಮರಾಜನಗರ25 mins ago

Murder Case : ಚಾಮರಾಜನಗರದಲ್ಲಿ ಅತ್ತಿಗೆ ಮೇಲಿನ ಮೋಹಕ್ಕೆ ಅಣ್ಣನನ್ನೇ ಕೊಂದ ಕಾಮುಕ ತಮ್ಮ

Venkatesh Iyer Marriage
ಕ್ರೀಡೆ38 mins ago

Venkatesh Iyer Marriage: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕ್ರಿಕೆಟಿಗ ವೆಂಕಟೇಶ್​ ಅಯ್ಯರ್​

West Bengal
ದೇಶ39 mins ago

West Bengal: ಬಿಜೆಪಿ ಕಾರ್ಯಕರ್ತನ ಬರ್ಬರ ಹತ್ಯೆ; ಗುಂಡಿಕ್ಕಿ ಕೊಂದು, ರುಂಡ ಕಡಿದು ಒಯ್ದ ದುಷ್ಕರ್ಮಿಗಳು

Electric shock Electronic City
ಬೆಂಗಳೂರು ಗ್ರಾಮಾಂತರ57 mins ago

Electric Shock: ಪಲ್ಲಕ್ಕಿ ಹೊತ್ತಿದ್ದ ಟ್ರ್ಯಾಕ್ಟರ್‌ಗೆ ಪ್ರವಹಿಸಿದ ವಿದ್ಯುತ್‌; ಕ್ಷಣಾರ್ಧದಲ್ಲೇ ಇಬ್ಬರು ಸುಟ್ಟು ಕರಕಲು

Udupi Pocso case
ಪ್ರಮುಖ ಸುದ್ದಿ59 mins ago

Udupi Pocso case: ಉಡುಪಿಯಲ್ಲಿ ಪ್ರಜ್ವಲ್ ರೇವಣ್ಣ ಮಾದರಿಯ ಕೇಸ್‌; 8-9 ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ!

Aaron Jones
ಕ್ರಿಕೆಟ್1 hour ago

Aaron Jones: 17 ವರ್ಷಗಳ ಹಿಂದಿನ ಟಿ20 ವಿಶ್ವಕಪ್​ ದಾಖಲೆ ಸರಿಗಟ್ಟಿದ ಯುಎಸ್​ಎ ಬ್ಯಾಟರ್​ ಆರೋನ್ ಜೋನ್ಸ್

Indian 2 Audio Launch Kamal Haasan Simbu Kajal Aggarwal
ಕಾಲಿವುಡ್1 hour ago

Indian 2 Audio Launch: ಅದ್ಧೂರಿಯಾಗಿ ನೆರವೇರಿತು ʼಇಂಡಿಯನ್‌ 2ʼ ಸಿನಿಮಾದ ಆಡಿಯೊ ಲಾಂಚ್‌!

Traffic Advisory
Lok Sabha Election 20241 hour ago

Traffic Advisory : ಲೋಕಸಭೆ ಎಲೆಕ್ಷನ್‌ ಕೌಂಟಿಂಗ್‌; ಬೆಂಗಳೂರಲ್ಲಿ ಎಲ್ಲೆಲ್ಲಿ ವಾಹನ ನಿರ್ಬಂಧ, ಮಾರ್ಗ ಬದಲು?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ3 hours ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು22 hours ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ3 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ5 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು5 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ6 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ7 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು7 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

ಟ್ರೆಂಡಿಂಗ್‌