ICC World Cup 2023 : ಅಲ್ಲೇ ಡ್ರಾ, ಅಲ್ಲೇ ಬಹುಮಾನ; ಶಕಿಬ್​ ವಿರುದ್ಧ ಸೇಡು ತೀರಿಸಿಕೊಂಡ ಮ್ಯಾಥ್ಯೂಸ್​ - Vistara News

ಕ್ರಿಕೆಟ್

ICC World Cup 2023 : ಅಲ್ಲೇ ಡ್ರಾ, ಅಲ್ಲೇ ಬಹುಮಾನ; ಶಕಿಬ್​ ವಿರುದ್ಧ ಸೇಡು ತೀರಿಸಿಕೊಂಡ ಮ್ಯಾಥ್ಯೂಸ್​

ವಿವಾದಾತ್ಮಕ ತೀರ್ಪಿನ ಮೂಲಕ ತಮ್ಮನ್ನು ಔಟ್ ಮಾಡಿದ ಶಕಿಬ್ ವಿಕೆಟ್​ ಪಡೆಯುವ ಮೂಲಕ ಅವರು ಸೇಡು ತೀರಿಸಿಕೊಂಡಿದ್ದಾರೆ.

VISTARANEWS.COM


on

Shakib al hasan
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ಶಕೀಬ್ ಅಲ್ ಹಸನ್ ಮೇಲೆ ಏಂಜೆಲೊ ಮ್ಯಾಥ್ಯೂಸ್ ಸೇಡು ತೀರಿಸಿಕೊಂಡಿದ್ದಾರೆ. ಬಾಂಗ್ಲಾದೇಶ ವಿರುದ್ಧದ ತಮ್ಮ ವಿಶ್ವ ಕಪ್​ ಪಂದ್ಯದಲ್ಲಿ (ICC World Cup 2023) ಮೊದಲ ಇನ್ನಿಂಗ್ಸ್​ನಲ್ಲಿ ಶಕೀಬ್ ಅವರ ಮನವಿಯಿಂದಾಗಿ ಮ್ಯಾಥ್ಯೂಸ್ ಅವರನ್ನು ಟೈಮ್ಡ್​ ​ ಔಟ್​ ಎಂದು ಘೋಷಿಸಲಾಗಿತ್ತು. ಇದು ಶ್ರೀಲಂಕಾ ತಂಡದ ಮಾಜಿ ಆಟಗಾರನನ್ನು ಕೆರಳಿಸಿತ್ತು. ಅನವಶ್ಯಕವಾಗಿ ಔಟ್​ ಮಾಡಿದ್ದಾರೆ ಎಂಬ ಕೋಪ ವ್ಯಕ್ತಪಡಿಸಿದ್ದರು. ಅಂತೆಯೇ ಬಾಂಗ್ಲಾದೇಶ ಇನಿಂಗ್ಸ್​ನಲ್ಲಿ ಶಕೀಬ್ ಅವರನ್ನು ಏಂಜೆಲೋ ಮ್ಯಾಥ್ಯೂಸ್ ಪೆವಿಲಿಯನ್​ಗೆ ಕಳುಹಿಸಿದ್ದಾರೆ. ಈ ವೇಳೆ ಅವರು ಟೈಮ್ ಆಯಿತು ಹೋಗು ಎನ್ನುವಂತೆ ಸನ್ನೆ ಮಾಡುವ ಮೂಲಕ ತಮ್ಮ ಸೇಡು ತೀರಿಸಿಕೊಂಡಿದ್ದಾರೆ.

ನಾಯಕ ಶಕಿಬ್ ಅಲ್​ ಹಸನ್ ಪಂದ್ಯದಲ್ಲಿ 82 ರನ್ ಬಾರಿಸುವ ಮೂಲಕ ಗೆಲುವಿಗೆ ತಮ್ಮ ಕೊಡುಗೆ ಕೊಟ್ಟಿದ್ದಾರೆ. ಆದರೆ ಮ್ಯಾಥ್ಯೂಸ್​ ಎಸೆತಕ್ಕೆ ವಿಕೆಟ್ ಒಪ್ಪಿಸುವ ಮೂಲಕ ಅವರು ಅನವಶ್ಯಕವಾಗಿ ಟ್ರೋಲ್ ಆಗುವಂತಾಯಿತು.

ಮ್ಯಾಥ್ಯೂಸ್ ಯಾಕೆ ಔಟ್​?

ಶ್ರೀಲಂಕಾದ ಆಟಗಾರ ಏಂಜೆಲೊ ಮ್ಯಾಥ್ಯೂಸ್‌(Angelo Mathews) ಅವರು ಬ್ಯಾಟಿಂಗ್​ ನಡೆಸದೆಯೇ ಔಟ್​ ಆಗಿರುವುದು ಭಾರಿ ಚರ್ಚೆಗೆ ಕಾರಣವಾಯಿತು. ಬ್ಯಾಟಿಂಗ್​ ಆರಂಭಿಸಲು ತಡ ಮಾಡಿದ ಕಾರಣದಿಂದ ಅವರು ಟೈಮ್ಡ್‌ ಔಟ್‌(timed out) ಆಗಿದ್ದಾರೆ. ಆ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಈ ರೀತಿ ಔಟಾದ ಮೊದಲ ಆಟಗಾರ ಎಂಬ ಕುಖ್ಯಾತಿಗೆ ಒಳಗಾಗಿದ್ದಾರೆ.

ಅಸಲಿಗೆ ಔಟ್​ ಆಗಲು ಕಾರಣವೇನು?

ನಾಲ್ಕನೇ ವಿಕೆಟ್​ ಬಿದ್ದ ಬಳಿಕ ಆಡಲಿಳಿದ ಏಂಜೆಲೊ ಮ್ಯಾಥ್ಯೂಸ್ ಅವರು ಕ್ರೀಸ್​ಗೆ ಬಂದಾಗ ಹೆಲ್ಮೆಟ್​ ಸಮಸ್ಯೆ ಇರುವುದು ಗಮನಕ್ಕೆ ಬಂದಿದೆ. ಇದೇ ವೇಳೆ ಅವರು ಸಹ ಆಟಗಾರನ ಬಳಿ ಬೇರೆ ಹೆಲ್ಮೆಟ್ ತರುವಂತೆ ಹೇಳಿದ್ದಾರೆ. ಹೊಸ ಹೆಲ್ಮೆಟ್ ತರುವಲ್ಲಿ ಕೊಂಚ ತಡವಾಗಿದೆ. ಇದೇ ವೇಳೆ ಬಾಂಗ್ಲಾದೇಶ ಆಟಗಾರರು ಅಂಪೈರ್​ ಬಳಿ ಐಸಿಸಿ ನಿಯಮದಂತೆ ಟೈಮ್ ಔಟ್ ಅಫೀಲ್​ ಮಾಡಿದ್ದಾರೆ. ಇದನ್ನು ಅಂಪೈರ್​ ಕೂಡ ಮಾನ್ಯ ಮಾಡಿ ಓಟ್​ ಎಂದು ತೀರ್ಪು ನೀಡಿದರು. ಆದರೆ ಪಂದ್ಯ ವೀಕ್ಷಿಸುತ್ತಿದ್ದ ಪ್ರೇಕ್ಷಕರಿಗೆ ಇಲ್ಲಿ ಏನು ನಡೆಯುತ್ತಿದೆ ಎಂದು ಅರ್ಥವಾಗಲೇ ಇಲ್ಲ. ಎಲ್ಲರೂ ಅಚ್ಚರಿಯಿಂದ ಚರ್ಚಿಸತೊಡಗಿದರು.

ಔಟ್​ ನೀಡಿದ ಬಳಿಕ ಮ್ಯಾಥ್ಯೂಸ್ ಕೂಡ ಅಂಪೈರ್​ ಬಳಿಕ ಚರ್ಚೆ ನಡೆಸಿದರು. ನಾನು ಉದ್ದೇಶ ಪೂರ್ವಕವಾಗಿ ಈ ರೀತಿ ಸಮಯ ವ್ಯರ್ಥ ಮಾಡಿಲ್ಲ. ಎಂದು ಮನವರಿಕೆ ಮಾಡಿದರು. ಅಲ್ಲದೆ ಬಾಂಗ್ಲಾದೇಶ ನಾಯಕ ಶಕೀಬ್​ ಅವರರಿಗೂ ತಮ್ಮ ಸಮಸ್ಯೆಯನ್ನು ತಿಳಿಸಿದರೂ ಆದರೆ ಇದಕ್ಕೆ ಶಕೀಬ್,​ ರೂಲ್ಸ್​ ಪ್ರಕಾರ ನಾವು ಅಫೀಲ್ ಮಾಡಿದ್ದೇವೆ ಎಂದು ಹೇಳಿ ಸುಮ್ಮನಾದರು.​

ಇದನ್ನೂ ಓದಿ: ICC World Cup 2023 : ಶ್ರೀಲಂಕಾ ವಿರುದ್ಧ ಬಾಂಗ್ಲಾ ತಂಡಕ್ಕೆ 3 ವಿಕೆಟ್​ ವಿಜಯ

ಮ್ಯಾಥ್ಯೂಸ್ ಪೆವಿಲಿಯನ್​ ಕಡೆ ಸಾಗುವ ವೇಳೆಯೂ ಬೇಸರಿಂದಲೇ ಹೆಜ್ಜೆ ಹಾಕಿದರು. ಅಲ್ಲದೆ ತಂಡದ ಸಿಬ್ಬಂದಿ ಬಳಿಯೂ ಇದೇ ವಿಚಾರವನ್ನು ಚರ್ಚಿಸಿದರು. ಈ ವಿಡಿಯೊವನ್ನು ಐಸಿಸಿ ತನ್ನ ಅಧಿಕೃತ ಇನ್​ಸ್ಟಾಗ್ರಾಮ್​ ಹಂಚಿಕೊಂಡಿದೆ. ಎಂಸಿಸಿ ಪ್ರಕಾರ, ಈ ಕೆಳಗಿನ ಸಂದರ್ಭಗಳಲ್ಲಿ ಬ್ಯಾಟರ್ ಅನ್ನು ಸಮಯ ಮೀರಿದ ಔಟ್ ಎಂದು ಪರಿಗಣಿಸಲಾಗುತ್ತದೆ.

ಐಸಿಸಿ ನಿಯಮ ಏನು ಹೇಳುತ್ತದೆ?

ಆರ್ಟಿಕಲ್ 40.1.1 ನಿಯಮದ ಪ್ರಕಾರ, ಒಂದು ವಿಕೆಟ್ ಪತನದ ನಂತರ ಅಥವಾ ಬ್ಯಾಟರ್‌ನ ನಿವೃತ್ತಿಯ ಬಳಿಕ ಕ್ರೀಸ್​ಗೆ ಬರುವ ಆಟಗಾರ ನಿಗದಿತ ಸಮಯದಲ್ಲಿ ಚೆಂಡನ್ನು ಎದುರಿಸಲು ಸಿದ್ಧರಾಗಿರಬೇಕು. ಅಂದರೆ 3 ನಿಮಿಷಗಳ ಒಳಗೆ ಚೆಂಡನ್ನು ಎದುರಿಸಬೇಕು. ಒಂದು ವೇಳೆ ಈ ಪ್ರಕ್ರಿಯೆಯನ್ನು ಬ್ಯಾಟರ್ ಪೂರೈಸದಿದ್ದರೆ, ಆಗ ಸಮಯ ಮೀರಿದ (ಟೈಮ್ಡ್ ಔಟ್) ಎಂದು ತೀರ್ಪು ನೀಡಲಾಗುತ್ತದೆ.

40.1.2 ನಿಯಮದ ಪ್ರಕಾರ, ಯಾವುದೇ ಬ್ಯಾಟರ್ ಹೆಚ್ಚಿನ ವಿಳಂಬದ ಬಳಿಕ ಕ್ರೀಸ್‌ಗೆ ಬಂದರೆ, ಸ್ಟ್ಯಾಂಡಿಂಗ್ ಅಂಪೈರ್‌ಗಳು 16.3ರ ಕಾರ್ಯವಿಧಾನದ ಅಡಿಯಲ್ಲಿ ಅಳವಡಿಸಿಕೊಳ್ಳಬೇಕು. ಆದರೆ ಎದುರಾಳಿ ತಂಡದ ಆಟಗಾರರು ಔಟ್​ಗೆ ಮನವಿ ಮಾಡಿದರೆ ಮಾತ್ರ. ಅಂಪೈರ್​ ಅವರೇ ಸ್ವ ನಿರ್ಧಾರ ಕೈಗೊಳ್ಳುವಂತಿಲ್ಲ. ಈ ಟೈಮ್ಡ್ ಔಟ್ ವಿಕೆಟ್‌ ಬೌಲಿಂಗ್​ ನಡೆಸುತ್ತಿದ್ದ ಬೌಲರ್​ಗೆ ಸಿಗುವುದಿಲ್ಲ. ಇದು ತಂಡಕ್ಕೆ ಸಿಗುತ್ತದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Womens Asia Cup Final: 8ನೇ ಪ್ರಶಸ್ತಿ ನಿರೀಕ್ಷೆಯಲ್ಲಿ ಭಾರತ; ನಾಳೆ ಫೈನಲ್​

Womens Asia Cup Final:ಮಹಿಳಾ ಏಷ್ಯಾ ಕಪ್​ ಈವರೆಗಿನ 8 ಕೂಟಗಳಲ್ಲಿ ಭಾರತ 7 ಸಲ ಚಾಂಪಿಯನ್‌ ಆಗುವ ಮೂಲಕ ಪ್ರಭುತ್ವ ಸಾಧಿಸಿದೆ. ಸೋಲು ಕಂಡಿದ್ದು ಒಮ್ಮೆ ಮಾತ್ರ. ಅದು 2018ರಲ್ಲಿ ಬಾಂಗ್ಲಾದೇಶ ವಿರುದ್ಧ. ಅಂದಿನ ಫೈನಲ್​ ಪಂದ್ಯದಲ್ಲಿ ಭಾರತ 3 ವಿಕೆಟ್‌ ಅಂತರದಿಂದ ಸೋಲನುಭವಿಸಿ ಪ್ರಶಸ್ತಿಯಿಂದ ವಂಚಿತವಾಗಿತ್ತು.

VISTARANEWS.COM


on

Womens Asia Cup Final
Koo

ದಾಂಬುಲಾ (ಶ್ರೀಲಂಕಾ): ಮಹಿಳಾ ಏಷ್ಯಾಕಪ್​ ಫೈನಲ್​(Womens Asia Cup Final) ಪಂದ್ಯಕ್ಕೆ ವೇದಿಕೆ ಸಿದ್ಧಗೊಂಡಿದೆ. ನಾಳೆ ನಡೆಯುವ ಫೈನಲ್​ ಹಣಾಹಣಿಯಲ್ಲಿ ಹಾಲಿ ಚಾಂಪಿಯನ್​ ಭಾರತ ಮತ್ತು ಶ್ರೀಲಂಕಾ(India Women vs Sri Lanka Women Final) ಪ್ರಶಸ್ತಿಗಾಗಿ ಕಾದಾಟ ನಡೆಸಲಿವೆ. 7 ಬಾರಿಯ ಚಾಂಪಿಯನ್​ ಭಾರತವೇ ಈ ಬಾರಿಯೂ ಪ್ರಶಸ್ತಿ ಗೆಲ್ಲುವ ಹಾಟ್‌ ಫೇವರಿಟ್‌ ಆಗಿದೆ. ಅತ್ತ ಆತಿಥೇಯ ಲಂಕಾ ಚೊಚ್ಚಲ ಪ್ರಶಸ್ತಿ ಗೆಲ್ಲುವ ಇದಾರೆಯಲ್ಲಿದೆ. ಇತ್ತಂಡಗಳು ಕೂಡ ಈ ಬಾರಿ ಅಜೇಯ ತಂಡಗಳಾಗಿ ಫೈನಲ್​ಗೆ ಲಗ್ಗೆಯಿಟ್ಟಿದೆ. ಹೀಗಾಗಿ ಈ ಪಂದ್ಯದವನ್ನು ಹೈವೋಲ್ಟೇಜ್​ ಎಂದು ನಿರೀಕ್ಷೆ ಮಾಡಬಹುದು.

ಮಹಿಳಾ ಏಷ್ಯಾ ಕಪ್​ ಈವರೆಗಿನ 8 ಕೂಟಗಳಲ್ಲಿ ಭಾರತ 7 ಸಲ ಚಾಂಪಿಯನ್‌ ಆಗುವ ಮೂಲಕ ಪ್ರಭುತ್ವ ಸಾಧಿಸಿದೆ. ಸೋಲು ಕಂಡಿದ್ದು ಒಮ್ಮೆ ಮಾತ್ರ. ಅದು 2018ರಲ್ಲಿ ಬಾಂಗ್ಲಾದೇಶ ವಿರುದ್ಧ. ಅಂದಿನ ಫೈನಲ್​ ಪಂದ್ಯದಲ್ಲಿ ಭಾರತ 3 ವಿಕೆಟ್‌ ಅಂತರದಿಂದ ಸೋಲನುಭವಿಸಿ ಪ್ರಶಸ್ತಿಯಿಂದ ವಂಚಿತವಾಗಿತ್ತು.

6ನೇ ಬಾರಿ ಭಾರತ-ಲಂಕಾ ಫೈನಲ್​ ಮುಖಾಮುಖಿ


ಇದುವರೆಗಿನ ಮಹಿಳಾ ಏಷ್ಯಾಕಪ್​ ಟೂರ್ನಿಯಲ್ಲಿ ಭಾರತ ಮತ್ತು ಶ್ರೀಲಂಕಾ 5 ಬಾರಿ ಫೈನಲ್​ ಮುಖಾಮುಖಿಯಾಗಿವೆ. ಎಲ್ಲ ಪಂದ್ಯಗಳನ್ನು ಭಾರತವೇ ಗೆದ್ದು ಬೀಗಿದೆ. ಈ ಬಾರಿಯದ್ದು 6ನೇ ಮುಖಾಮುಖಿ. 6ನೇ ಪ್ರಯತ್ನದಲ್ಲಾದರೂ ಲಂಕಾ ಪ್ರೋಫಿ ಗೆಲ್ಲಬಹುದೇ ಎಂಬ ಪ್ರಶ್ನೆಗೆ ನಾಳೆ ಉತ್ತರ ಸಿಗಲಿದೆ.

ಭಾರತ ಪರ ಬ್ಯಾಟಿಂಗ್​ನಲ್ಲಿ ಆರಂಭಿಕ ಆಟಗಾರ್ತಿಯರಾದ ಶಫಾಲಿ ವರ್ಮ ಮತ್ತು ಸ್ಮೃತಿ ಮಂಧಾನ ಎಲ್ಲ ಪಂದ್ಯಗಲ್ಲಿಯೂ ಶ್ರೇಷ್ಠ ಪ್ರದರ್ಶನ ತೋರಿದ್ದಾರೆ. ಶಫಾಲಿ 184 ರನ್​ ಗಳಿಸಿ ಕೂಟದ ಅತ್ಯಧಿಕ ರನ್​ ಗಳಿಸಿದ ಆಟಗಾರ್ತಿಯಲ್ಲಿ 2ನೇ ಸ್ಥಾನ ಪಡೆದಿದ್ದಾರೆ. ಬೌಲಿಂಗ್ ವಿಭಾಗ ತುಂಬಾನೆ ಘಾತಕವಾಗಿದೆ. ಸ್ಪಿನ್ನ್​ ಮತ್ತು ವೇಗದ ವಿಭಾಗದಲ್ಲಿ ಸಮತೋಲಿತವಾಗಿದೆ. ರಾಧಾ ಯಾದವ್​, ಆಲ್​ರೌಂಡರ್​ ದೀಪ್ತಿ ಶರ್ಮಾ ತಂಡದ ಸ್ಪಿನ್ನರ್​ಗಳಾದರೆ, ವೇಗಿ ರೇಣುಕಾ ಸಿಂಗ್​ ಮತ್ತು ಪೂಜಾ ವಸ್ತ್ರಾಕರ್​ ವೇಗಿಗಳಾಗಿದ್ದಾರೆ.

ಇದನ್ನೂ ಓದಿ Womens Asia Cup T20: ಬಾಂಗ್ಲಾ ಮಣಿಸಿ ಫೈನಲ್​ ಪ್ರವೇಶಿಸಿದ ಭಾರತ

ಲಂಕಾ ಕೂಡ ಬಲಿಷ್ಠ


ಎದುರಾಳಿ ಶ್ರೀಲಂಕಾ ಕೂಡ ಭಾರತದ ಹಾಗೆ ಬಲಿಷ್ಠವಾಗಿದೆ. ಅದರಲ್ಲೂ ಕೂಟದ ಗರಿಷ್ಠ ಸ್ಕೋರರ್​ ಎನಿಸಿಕೊಂಡಿರುವ ನಾಯಕಿ ಚಾಮರಿ ಅತಪಟ್ಟು ಪ್ರಚಂಡ ಬ್ಯಾಟಿಂಗ್​ ಫಾರ್ಮ್​ನಲ್ಲಿದ್ದಾರೆ. ಒಂದು ಶತಕ ಕೂಡ ಬಾರಿಸಿದ್ದಾರೆ. ಆಡಿದ 4 ಪಂದ್ಯಗಳಿಂದ 243 ರನ್​ ಕಲೆ ಹಾಕಿದ್ದಾರೆ. ಇವರನ್ನು ಹೆಚ್ಚು ಹೊತ್ತು ಕ್ರೀಸ್​ ಆಕ್ರಮಿಸದಂತೆ ಭಾರತೀಯ ಬೌಲರ್​ಗಳು ನೋಡಿಕೊಂಡರೆ ಅರ್ಧ ಪಂದ್ಯ ಗೆದ್ದಂತೆ. ನಿನ್ನೆ ನಡೆದಿದ್ದ ಸೆಮಿಫೈನಲ್​ ಪಂದ್ಯದಲ್ಲಿ ಭಾರತ ತಂಡ ಬಾಂಗ್ಲಾವನ್ನು ಮಣಿಸಿದರೆ, ಶ್ರೀಲಂಕಾ ಪಾಕಿಸ್ತಾನವನ್ನು ಸೋಲಿಸಿ ಫೈನಲ್​ ಪ್ರವೇಶಿಸಿತ್ತು.

ಸಂಭಾವ್ಯ ತಂಡಗಳು


ಶ್ರೀಲಂಕಾ: ವಿಶ್ಮಿ ಗುಣರತ್ನೆ, ಚಾಮರಿ ಅಟಪಟ್ಟು (ನಾಯಕಿ), ಹರ್ಷಿತಾ ಸಮರವಿಕ್ರಮ, ಹಾಸಿನಿ ಪೆರೇರಾ, ಅನುಷ್ಕಾ ಸಂಜೀವನಿ (ವಾಕ್), ಕವಿಶಾ ದಿಲ್ಹಾರಿ, ನೀಲಾಕ್ಷಿ ಡಿ ಸಿಲ್ವಾ, ಇನೋಶಿ ಪ್ರಿಯದರ್ಶನಿ, ಉದೇಶಿಕಾ ಪ್ರಬೋಧನಿ, ಸುಗಂದಿಕಾ ಕುಮಾರಿ, ಅಚಿನಿ ಕುಲಸೂರ್ಯ.

ಭಾರತ: ಶಫಾಲಿ ವರ್ಮಾ, ಸ್ಮೃತಿ ಮಂಧಾನ, ಉಮಾ ಚೆಟ್ರಿ, ಹರ್ಮನ್‌ಪ್ರೀತ್ ಕೌರ್ (ನಾಯಕಿ), ಜೆಮಿಮಾ ರಾಡ್ರಿಗಸ್, ರಿಚಾ ಘೋಷ್ (ವಿಕೀ), ದೀಪ್ತಿ ಶರ್ಮಾ, ಪೂಜಾ ವಸ್ತ್ರಾಕರ್, ರಾಧಾ ಯಾದವ್, ತನುಜಾ ಕನ್ವರ್, ರೇಣುಕಾ ಠಾಕೂರ್ ಸಿಂಗ್.

Continue Reading

ಕ್ರೀಡೆ

Champions Trophy 2025: ನಾವು ತುಂಬಾ ಒಳ್ಳೆಯವರು, ಪಾಕಿಸ್ತಾನಕ್ಕೆ ಬನ್ನಿ; ಟೀಮ್ ಇಂಡಿಯಾಗೆ ಪಾಕ್​ ಆಟಗಾರನ ಮನವಿ

Champions Trophy 2025: ಕಳೆದ ವರ್ಷ ಪಾಕಿಸ್ತಾನದ ಆತಿಥ್ಯದಲ್ಲಿ ನಡೆದಿದ್ದ ಏಷ್ಯಾಕಪ್​ ಟೂರ್ನಿಯಲ್ಲಿ ಭಾರತ ಪಾಕ್​ಗೆ ಹೋಗಲು ಒಪ್ಪದ ಕಾರಣ ಹೈಬ್ರೀಡ್​ ಮಾದರಿಯಲ್ಲಿ ಪಾಕ್​ ಮತ್ತು ಶ್ರೀಲಂಕಾದಲ್ಲಿ ಆಡಿಸಲಾಗಿತ್ತು. ಭಾರತ ತನ್ನ ಪಂದ್ಯಗಳನ್ನು ಶ್ರೀಲಂಕಾದಲ್ಲಿ ಆಡಿತ್ತು.

VISTARANEWS.COM


on

Champions Trophy 2025
Koo

ಕರಾಚಿ: ಮುಂದಿನ ವರ್ಷ ನಡೆಯುವ ಚಾಂಪಿಯನ್ಸ್‌ ಟ್ರೋಫಿ(Champions Trophy 2025) ಕ್ರಿಕೆಟ್‌ ಪಂದ್ಯಾವಳಿ ಪಾಕಿಸ್ತಾನದಲ್ಲಿ ನಡೆಯಲಿದೆ. ಆದರೆ, ಭಾರತ ತಂಡ(India to visit Pakistan) ಪಾಕ್​ಗೆ ತೆರಳುವುದು ಅನಿಶ್ಚಿತವಾಗಿದೆ. ಈಗಾಗಲೇ ಬಿಸಿಸಿಐ ಭಾರತದ ಪಂದ್ಯಗಳನ್ನು ತಟಸ್ಥ ತಾಣದಲ್ಲಿ ನಡೆಸಬೇಕೆಂದು ಐಸಿಸಿಗೂ ಮನವಿ ಮಾಡಿದೆ. ಒಂದೊಮ್ಮೆ ಐಸಿಸಿ ಇದಕ್ಕೆ ಸಮ್ಮತಿ ಸೂಚಿಸದಿದ್ದರೆ ಟೂರ್ನಿಯಿಂದ ಭಾರತ ತಂಡ ಹಿಂದೆ ಸರಿಯಲಿದೆ ಎಂದು ದೃಢ ನಿರ್ಧಾರವನ್ನು ಕೂಡ ಪ್ರಕಟಿಸಿದೆ. ಆದರೆ, ಪಾಕಿಸ್ತಾನದ ಮಾಜಿ ಕ್ರಿಕೆಟಿಗರು ಹೇಗಾದರೂ ಮಾಡಿ ಟೀಮ್​ ಇಂಡಿಯಾವನ್ನು ಪಾಕ್​ಗೆ ಕರೆತರಲು ನಾನಾ ರೀತಿಯ ಕಸರತ್ತು ಮಾಡುತ್ತಿದ್ದಾರೆ. ಈ ಸಾಲಿಗೆ ಇದೀಗ ಶೋಯಿಬ್‌ ಮಲಿಕ್‌(Shoaib Malik) ಕೂಡ ಸೇರ್ಪಡೆಗೊಂಡಿದ್ದಾರೆ.

“ದೇಶಗಳ ನಡುವೆ ಯಾವುದೇ ಮೀಸಲಾತಿ ಇದ್ದರೂ ಅದು ಪ್ರತ್ಯೇಕ ಸಮಸ್ಯೆ ಮತ್ತು ಪ್ರತ್ಯೇಕವಾಗಿ ಪರಿಹರಿಸಬೇಕು. ಕ್ರೀಡೆಯಲ್ಲಿ ರಾಜಕೀಯ ಬರಬಾರದು. ಕಳೆದ ವರ್ಷ ಪಾಕಿಸ್ತಾನ ತಂಡ ಭಾರತಕ್ಕೆ ಹೋಗಿತ್ತು, ಮತ್ತು ಈಗ ಭಾರತ ತಂಡಕ್ಕೂ ಪಾಕ್​ಗೆ ಬರುವ ಉತ್ತಮ ಅವಕಾಶವಿದೆ. ಈಗಿನ ಭಾರತ ತಂಡದ ಸ್ಟಾರ್​ ಆಟಗಾರರಿಗೆ ಪಾಕಿಸ್ತಾನದಲ್ಲಿ ಒಮ್ಮೆಯೂ ಆಡುವ ಅವಕಾಶ ಸಿಕ್ಕಿಲ್ಲ. ವಿರಾಟ್​ ಕೊಹ್ಲಿ, ರೋಹಿತ್​ ಶರ್ಮ ಅವರಿಗೆ ಪಾಕ್​ನಲ್ಲಿ ಅಪಾರ ಸಂಖ್ಯೆಯ ಅಭಿಮಾನಿಗಳಿದ್ದಾರೆ. ಆದ್ದರಿಂದ ಭಾರತ ತಂಡವನ್ನು ಪಾಕ್​ಗೆ ಕಳುಹಿಸಿಕೊಡಿ. ‘ಹಮ್ ಬಹುತ್ ಅಚ್ಚೆ ಲೋಗ್ ಹೈ” (ನಾವು ತುಂಬಾ ಒಳ್ಳೆಯ ಜನರು), ಹಾಗಾಗಿ ಭಾರತೀಯ ತಂಡ ಖಂಡಿತವಾಗಿಯೂ ಇಲ್ಲಿಗೆ ಬರಬೇಕು. ಬಿಸಿಸಿಐ ಇದಕ್ಕೆ ಒಪ್ಪಿಗೆ ನೀಡಬೇಕು” ಎಂದು ಮಲಿಕ್ ಹೇಳಿದ್ದಾರೆ.

​ಇದಕ್ಕೂ ಮುನ್ನ ಪಾಕ್‌ ಕ್ರಿಕೆಟ್‌ ತಂಡದ ಮಾಜಿ ನಾಯಕ ಯೂನಿಸ್‌ ಖಾನ್‌ ಭಾರತದ ಸ್ಟಾರ್​ ಬ್ಯಾಟರ್‌ ವಿರಾಟ್‌ ಕೊಹ್ಲಿ ಪಾಕಿಸ್ತಾನಕ್ಕೆ ಬರಬೇಕು, ಇಲ್ಲಿ ಅವರು ಆಡಬೇಕು, ಇದು ನಮ್ಮ ಆಸೆ ಎಂದು ಹೇಳಿದ್ದರು. ಮುಂದಿನ ವರ್ಷ ನಡೆಯಲಿರುವ ಚಾಂಪಿಯನ್ಸ್‌ ಟ್ರೋಫಿ ಏಕದಿನ ಪಂದ್ಯಾವಳಿಗಾಗಿ ಭಾರತ ತಂಡವನ್ನು ಪಾಕಿಸ್ಥಾನಕ್ಕೆ ಕಳುಹಿಸಲು ಸಾಧ್ಯವಿಲ್ಲ ಎಂದು ಬಿಸಿಸಿಐ ಮೂಲ ಹೇಳಿತ್ತು. ಇದೇ ವಿಚಾರವನ್ನು ಮುಂದಿಟ್ಟಿರುವ ಯೂನಿಸ್‌ ಖಾನ್‌, ಕೊಹ್ಲಿ ಈವರೆಗೆ ಪಾಕಿಸ್ತಾನದಲ್ಲಿ ಆಡಿಲ್ಲ. ಇದಕ್ಕೆ ಬಿಸಿಸಿಐ ಅವಕಾಶ ನೀಡಬೇಕು ಎಂದು ಒತ್ತಾಯಿಸಿದ್ದಾರೆ. 2006ರಲ್ಲಿ ಪಾಕಿಸ್ತಾನಕ್ಕೆ ಪ್ರವಾಸ ಹೋಗಿದ್ದ ಭಾರತ ತಂಡ, ಇಲ್ಲಿ ಕೊನೆಯ ಸಲ ಸರಣಿಯನ್ನಾಡಿತ್ತು.

ಇದನ್ನೂ ಓದಿ ICC Champions Trophy : ಪಾಕಿಸ್ತಾನದ ಕ್ರಿಕೆಟ್​ ಮಂಡಳಿಯ ಮಾಧ್ಯಮ ಹಕ್ಕುಗಳನ್ನು ಕೇಳುವವರೇ ಇಲ್ಲ!

ನವೆಂಬರ್ 2008ರ ಮುಂಬೈ ಭಯೋತ್ಪಾದಕ ದಾಳಿಯಲ್ಲಿ 150 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ ನಂತರ ಭಾರತವು ಪಾಕಿಸ್ತಾನದೊಂದಿಗೆ ದ್ವಿಪಕ್ಷೀಯ ಕ್ರಿಕೆಟ್ ಆಡಿಲ್ಲ. ಜೂನ್-ಜುಲೈ 2008 ರಲ್ಲಿ ಏಷ್ಯಾ ಕಪ್ ಸಮಯದಲ್ಲಿ ಭಾರತೀಯ ಕ್ರಿಕೆಟ್ ತಂಡವು ಕೊನೆಯ ಬಾರಿಗೆ ಪಾಕಿಸ್ತಾನಕ್ಕೆ ಪ್ರಯಾಣಿಸಿತ್ತು. ಭಾರತದಲ್ಲಿ ಡಿಸೆಂಬರ್ 2012 ರಿಂದ ಜನವರಿ 2013 ರವರೆಗಿನ ದ್ವಿಪಕ್ಷೀಯ ಸರಣಿಯು ಎರಡು ರಾಷ್ಟ್ರಗಳ ನಡುವಿನ ಅಂತಿಮ ದ್ವಿಪಕ್ಷೀಯ ಸರಣಿಯಾಗಿದೆ. ಇದಾದ ಬಳಿಕ ಉಭಯ ತಂಡಗಳು ಕೇವಲ ಐಸಿಸಿ ಟೂರ್ನಿಗಳಲ್ಲಿ ಮಾತ್ರ ಆಡುತ್ತವೆ.

ಕಳೆದ ವರ್ಷ ಪಾಕಿಸ್ತಾನದ ಆತಿಥ್ಯದಲ್ಲಿ ನಡೆದಿದ್ದ ಏಷ್ಯಾಕಪ್​ ಟೂರ್ನಿಯಲ್ಲಿ ಭಾರತ ಪಾಕ್​ಗೆ ಹೋಗಲು ಒಪ್ಪದ ಕಾರಣ ಹೈಬ್ರೀಡ್​ ಮಾದರಿಯಲ್ಲಿ ಪಾಕ್​ ಮತ್ತು ಶ್ರೀಲಂಕಾದಲ್ಲಿ ಆಡಿಸಲಾಗಿತ್ತು. ಭಾರತ ತನ್ನ ಪಂದ್ಯಗಳನ್ನು ಶ್ರೀಲಂಕಾದಲ್ಲಿ ಆಡಿತ್ತು.

ಭಾರತ ತಂಡ ಚಾಂಪಿಯನ್ಸ್‌ ಟ್ರೋಫಿ ಟೂರ್ನಿಯಿಂದ ಹಿಂದೆ ಸರಿದರೆ, 9ನೇ ಸ್ಥಾನಿಯಾಗಿರುವ ಶ್ರೀಲಂಕಾಗೆ ಅವಕಾಶ ಸಿಗಲಿದೆ. ಯಾವುದೇ ತಂಡವು ಐಸಿಸಿ ಟೂರ್ನಿಯಿಂದ ಹಿಂದೆ ಸರಿದರೆ ಅಂಕಪಟ್ಟಿಯಲ್ಲಿ ನಂತರದ ಸ್ಥಾನ ಪಡೆದಿರುವ ತಂಡ ತಂಡಕ್ಕೆ ಅರ್ಹತೆ ನೀಡಲಾಗುತ್ತದೆ. ಪ್ರಸ್ತುತ ಭಾರತ, ಆಸ್ಟ್ರೇಲಿಯಾ, ಪಾಕಿಸ್ತಾನ, ಇಂಗ್ಲೆಂಡ್​, ಅಫಘಾನಿಸ್ತಾನ, ದಕ್ಷಿಣ ಆಫ್ರಿಕಾ, ನ್ಯೂಜಿಲ್ಯಾಂಡ್​ ಮತ್ತು ಬಾಂಗ್ಲಾದೇಶ ಅರ್ಹತೆ ಪಡೆದ ತಂಡಗಳಾಗಿವೆ.

Continue Reading

ಕ್ರೀಡೆ

IND vs SL: ಇಂದು ಲಂಕಾ ವಿರುದ್ಧ ಮೊದಲ ಟಿ20; ಹೇಗಿರಲಿದೆ ಭಾರತ ಆಡುವ ಬಳಗ?

IND vs SL: ಪಲ್ಲೆಕೆಲೆ ಕ್ರೀಡಾಂಗಣದ ಪಿಚ್ ಬ್ಯಾಟರ್‌ಗಳಿಗೆ ಹೆಚ್ಚು ನೆರವು ನೀಡುತ್ತದೆ. ಮೊದಲು ಬ್ಯಾಟಿಂಗ್ ಮಾಡುವ ತಂಡಗಳು ಸಾಮಾನ್ಯವಾಗಿ 170 ರನ್‌ಗಳ ಗುರಿಯನ್ನು ದಾಟಿದರೆ ಮಾತ್ರ ಪಂದ್ಯದಲ್ಲಿ ಪೈಪೋಟಿ ನೀಡಬಹುದು. ಈ ಮೊತ್ತವನ್ನು ಇಲ್ಲಿ ಸ್ಪರ್ಧಾತ್ಮಕ ಮೊತ್ತವೆಂದು ಪರಿಗಣಿಸಲಾಗಿದೆ.

VISTARANEWS.COM


on

IND vs SL
Koo

ಪೆಲೆಕೆಲೆ: ಇಂದು (ಶನಿವಾರ) ನಡೆಯುವ ಶ್ರೀಲಂಕಾ(IND vs SL) ತಂಡದ ಎದುರಿನ ಮೊದಲ ಟಿ20 ಪಂದ್ಯದಲ್ಲಿ ಕಣಕ್ಕಿಳಿಯಲು ಟಿ20 ವಿಶ್ವ ಚಾಂಪಿಯನ್ ಭಾರತ ಸಜ್ಜಾಗಿ ನಿಂತಿದೆ. 2021ರ ಬಳಿಕ ಭಾರತ(Sri Lanka vs India) ಮೊದಲ ಬಾರಿಗೆ ಶ್ರೀಲಂಕಾದಲ್ಲಿ ಆಡುತ್ತಿರುವ ದ್ವಿಪಕ್ಷೀಯ ಸರಣಿ ಇದಾಗಿದೆ. ಪಂದ್ಯ ರಾತ್ರಿ 7ಕ್ಕೆ ಆರಂಭಗೊಳ್ಳಲಿದೆ.

ಟಿ20 ವಿಶ್ವ ಕಪ್​ ಆಡಿದ ಸೂರ್ಯಕುಮಾರ್​ ಯಾದವ್​ ನಾಯಕನಾಗಿದ್ದರೆ, ಯಶಸ್ವಿ ಜೈಸ್ವಾಲ್, ಶಿವಂ ದುಬೆ ಆಲ್‌ರೌಂಡರ್ ಅಕ್ಷರ್ ಪಟೇಲ್, ಹಾರ್ದಿಕ್​ ಪಾಂಡ್ಯ, ಸಂಜು ಸ್ಯಾಮ್ಸನ್​, ಅರ್ಶ್​ದೀಪ್​ ಸಿಂಗ್​, ಮೊಹಮ್ಮದ್​ ಸಿರಾಜ್​ ಅವರು ತಂಡದಲ್ಲಿದ್ದಾರೆ. ಇವರ ಜತೆ ವಾಷಿಂಗ್ಟನ್ ಸುಂದರ್, ಸ್ಪಿನ್ನರ್ ರವಿ ಅವರ ಬಲವೂ ತಂಡಕ್ಕೆ ಇದೆ.

ಪಿಚ್​ ರಿಪೋರ್ಟ್


ಪಲ್ಲೆಕೆಲೆ ಕ್ರೀಡಾಂಗಣದ ಪಿಚ್ ಬ್ಯಾಟರ್‌ಗಳಿಗೆ ಹೆಚ್ಚು ನೆರವು ನೀಡುತ್ತದೆ. ಮೊದಲು ಬ್ಯಾಟಿಂಗ್ ಮಾಡುವ ತಂಡಗಳು ಸಾಮಾನ್ಯವಾಗಿ 170 ರನ್‌ಗಳ ಗುರಿಯನ್ನು ದಾಟಿದರೆ ಮಾತ್ರ ಪಂದ್ಯದಲ್ಲಿ ಪೈಪೋಟಿ ನೀಡಬಹುದು. ಈ ಮೊತ್ತವನ್ನು ಇಲ್ಲಿ ಸ್ಪರ್ಧಾತ್ಮಕ ಮೊತ್ತವೆಂದು ಪರಿಗಣಿಸಲಾಗಿದೆ. ಹೀಗಾಗಿ ಮೊದಲು ಬ್ಯಾಟಿಂಗ್​ ನಡೆಸುವ ತಂಡ ಆದಷ್ಟು ಬೃಹತ್​ ಮೊತ್ತ ಬಾರಿಸರೆ ಉತ್ತಮ. ರಾತ್ರಿಯ ವೇಳೆ ಇಬ್ಬನಿಯ ಕಾಟ ಇರುವುದರಿಂದ ಚೇಸಿಂಗ್​ ನಡೆಸಲು ಉತ್ತಮ. ಹೀಗಾಗಿ ಟಾಸ್​ ಗೆದ್ದ ತಂಡ ಮೊದಲು ಫೀಲ್ಡಿಂಗ್​ ಆಯ್ಕೆಗೆ ಪ್ರಾಮುಖ್ಯತೆ ನೀಡಬಹುದು. ವೇಗಿಗಳಿಗಿಂತ ಇಲ್ಲಿ ಸ್ಪಿನ್ನ್​ ಬೌಲರ್​ಗಳು ಹೆಚ್ಚು ಪರಿಣಾಮ ಬೀರಬಹುದು. ಲಂಕಾದಲ್ಲಿ ಯಾವುದೇ ಮಳೆ ಭೀತಿ ಎದುರಾಗಿಲ್ಲ ಹೀಗಾಗಿ ಪಂದ್ಯ ಸಂಪೂರ್ಣವಾಗಿ ನಡೆಯಲಿದೆ.

ಮುಖಾಮುಖಿ


ಭಾರತ ಮತ್ತು ಶ್ರೀಲಂಕಾ ತಂಡಗಳು(SL vs IND Head to Head in T20) ಇದುವರೆಗೂ ಒಟ್ಟು 19 ಟಿ20 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ಪೈಕಿ ಭಾರತ ಗರಿಷ್ಠ 19 ಪಂದ್ಯಗಳನ್ನು ಗೆದ್ದರೆ, ಶ್ರೀಲಂಕಾ 9 ಪಂದ್ಯಗಳನ್ನು ಮಾತ್ರ ಗೆದ್ದಿದೆ. ಒಂದು ಪಂದ್ಯ ಫಲಿತಾಂಶ ಕಂಡಿಲ್ಲ. ಇತ್ತಂಡಗಳು ಕೊನೆಯ ಬಾರಿಗೆ ಟಿ20 ಪಂದ್ಯವನ್ನಾಡಿದ್ದು 2023ರಲ್ಲಿ. ಈ ಪಂದ್ಯದಲ್ಲಿ ಭಾರತ 91 ರನ್​ ಅಂತರದ ಗೆಲುವು ಸಾಧಿಸಿತ್ತು.

ಇದನ್ನೂ ಓದಿ India Tour of Sri Lanka 2024 : ಶ್ರೀಲಂಕಾ ತಂಡಕ್ಕೆ 3ನೇ ಹೊಡೆತ; ಭಾರತ ವಿರುದ್ಧದ ಟಿ20 ಸರಣಿಗೆ ಬಿನುರಾ ಫರ್ನಾಂಡೊ ಅಲಭ್ಯ

ಉಭಯ ತಂಡಗಳು ಮೊದಲ ಬಾರಿಗೆ ಟಿ20 ಆಡಿದ್ದು 2009ರಲ್ಲಿ. ಕೊಲಂಬೊದ ಪ್ರೇಮದಾಸ ಕ್ರಿಕೆಟ್​ ಸ್ಟೆಡಿಯಂನಲ್ಲಿ ನಡೆದ ಪಂದ್ಯ ಇದಾಗಿತ್ತು. ಇಲ್ಲಿ ಧೋನಿ ಪಡೆ 3 ವಿಕೆಟ್​ಗಳ ಗೆಲುವು ಕಂಡಿತ್ತು. ಶ್ರೀಲಂಕಾ ತಂಡ ಭಾರತ ವಿರುದ್ಧ ಮೊದಲ ಟಿ20 ಗೆಲುವು ಸಾಧಿಸಿದ್ದು ಕೂಡ 2009ರಲ್ಲಿ. ನಾಗ್ಪುರದಲ್ಲಿ ನಡೆದಿದ್ದ ಪಂದ್ಯದಲ್ಲಿ. ಇಲ್ಲಿ ಲಂಕಾ ತಂಡ 29 ರನ್​​ಗಳ ಜಯ ಗಳಿಸಿತ್ತು. ಪ್ರಸ್ತುತ ಲಂಕಾ ತಂಡವನ್ನು ನೋಡುವಾಗ ಭಾರತ ಆರಾಮದಾಯಕವಾಗಿ ಈ ಸರಣಿ ಗೆಲ್ಲುವಂತಿದೆ.

ಸಂಭಾವ್ಯ ತಂಡಗಳು

ಭಾರತ: ಶುಭಮನ್ ಗಿಲ್, ಯಶಸ್ವಿ ಜೈಸ್ವಾಲ್, ಸೂರ್ಯಕುಮಾರ್ ಯಾದವ್ (ನಾಯಕ), ರಿಷಬ್ ಪಂತ್ (ವಿಕೀ), ರಿಂಕು ಸಿಂಗ್, ಹಾರ್ದಿಕ್ ಪಾಂಡ್ಯ, ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಅರ್ಷದೀಪ್ ಸಿಂಗ್, ರವಿ ಬಿಷ್ಣೋಯ್, ಮೊಹಮ್ಮದ್ ಸಿರಾಜ್.

ಶ್ರೀಲಂಕಾ: ಅವಿಷ್ಕ ಫೆರ್ನಾಂಡೋ, ಚರಿತ್ ಅಸಲಂಕ (ನಾಯಕ), ದಿನೇಶ್ ಚಾಂಡಿಮಾಲ್, ಕುಸಲ್ ಮೆಂಡಿಸ್ (ವಿಕೀ), ಪಾತುಮ್ ನಿಸ್ಸಾಂಕ, ವನಿಂದು ಹಸರಂಗ, ದಸುನ್ ಶಾನಕ, ಮಥೀಶ ಪತಿರಣ, ಮಹೇಶ್ ತೀಕ್ಷಣ, ದುನಿತ್ ವೆಲ್ಲಲಾಗೆ, ಚಾಮಿಂದು ವಿಕ್ರಮಸಿಂಘೆ

Continue Reading

ಪ್ರಮುಖ ಸುದ್ದಿ

Paris Olympics 2024 : ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಭಾಗಿಯಾಗಿರುವ ಭಾರತದ ಅಥ್ಲೀಟ್​ಗಳಿಗೆ ಶುಭ ಕೋರಿದ ಪ್ರಧಾನಿ ಮೋದಿ

Paris Olympics 2024 : ಬಿಲ್ಲುಗಾರಿಕೆ, ಅಥ್ಲೆಟಿಕ್ಸ್, ಬ್ಯಾಡ್ಮಿಂಟನ್, ಬಾಕ್ಸಿಂಗ್, ಈಕ್ವೆಸ್ಟ್ರಿಯನ್, ಗಾಲ್ಫ್, ಹಾಕಿ, ಜೂಡೋ, ರೋಯಿಂಗ್, ಸೇಲಿಂಗ್, ಶೂಟಿಂಗ್, ಈಜು, ಟೇಬಲ್ ಟೆನಿಸ್ ಮತ್ತು ಟೆನಿಸ್ ಸೇರಿದಂತೆ 16 ಕ್ರೀಡೆಗಳಲ್ಲಿ 117 ಕ್ರೀಡಾಪಟುಗಳು 69 ಪದಕ ಸ್ಪರ್ಧೆಗಳಲ್ಲಿ ಭಾಗವಹಿಸಲಿದ್ದಾರೆ.

VISTARANEWS.COM


on

Paris Olympics 2024
Koo

ಬೆಂಗಳೂರು: 2024 ರ ಪ್ಯಾರಿಸ್ ಒಲಿಂಪಿಕ್ಸ್​ನ (Paris Olympics 2024) ಉದ್ಘಾಟನಾ ಸಮಾರಂಭವು ನಡೆಯುತ್ತಿರುವುದರಿಂದ ಫ್ರಾನ್ಸ್​​ನ ರಾಜಧಾನಿಯಲ್ಲಿ ಸಂಭ್ರಮ ಜೋರಾಗಿದೆ. ಸಾವಿರಾರು ಕ್ರೀಡಾಪಟುಗಳು ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳುವ ಜತೆಗೆ ಕ್ರೀಡಾಪ್ರೇಮಿಗಳು ಹಾಗೂ ಆಯೋಜಕರ ದೊಡ್ಡ ದಂಡು ಅಲ್ಲಿ ನೆರೆದಿದೆ. ಅಂತೆಯೇ ಭಾರತದಿಂದ ಬಿಲ್ಲುಗಾರಿಕೆ, ಅಥ್ಲೆಟಿಕ್ಸ್, ಬ್ಯಾಡ್ಮಿಂಟನ್, ಬಾಕ್ಸಿಂಗ್, ಈಕ್ವೆಸ್ಟ್ರಿಯನ್, ಗಾಲ್ಫ್, ಹಾಕಿ, ಜೂಡೋ, ರೋಯಿಂಗ್, ಸೇಲಿಂಗ್, ಶೂಟಿಂಗ್, ಈಜು, ಟೇಬಲ್ ಟೆನಿಸ್ ಮತ್ತು ಟೆನಿಸ್ ಸೇರಿದಂತೆ 16 ಕ್ರೀಡೆಗಳಲ್ಲಿ 117 ಕ್ರೀಡಾಪಟುಗಳು 69 ಪದಕ ಸ್ಪರ್ಧೆಗಳಲ್ಲಿ ಭಾಗವಹಿಸಲಿದ್ದಾರೆ.

ಬಹುನಿರೀಕ್ಷಿತ ಕ್ರೀಡಾಕೂಟದ ಪ್ರಾರಂಭಕ್ಕೆ ಮುಂಚಿತವಾಗಿ, ಭಾರತದ ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರವನ್ನು ಪ್ರತಿನಿಧಿಸುವ 117 ಅಥ್ಲೀಟ್​ಗಳ ಭಾರತದ ನಿಯೋಗಕ್ಕೆ ಶುಭಾಶಯಗಳನ್ನು ಕಳುಹಿಸಿದ್ದಾರೆ.

ಪ್ಯಾರಿಸ್ ಒಲಿಂಪಿಕ್ಸ್​ ಆರಂಭವಾಗುತ್ತಿದ್ದು ಭಾರತೀಯ ತಂಡಕ್ಕೆ ನನ್ನ ಶುಭ ಹಾರೈಕೆಗಳು. ಪ್ರತಿಯೊಬ್ಬ ಕ್ರೀಡಾಪಟುವೂ ಭಾರತದ ಹೆಮ್ಮೆ.. ಅವರೆಲ್ಲರೂ ತಮ್ಮ ಅಸಾಧಾರಣ ಪ್ರದರ್ಶನಗಳು ನಮಗೆ ಸ್ಫೂರ್ತಿ ನೀಡುವ ಮೂಲಕ ನಿಜವಾದ ಕ್ರೀಡಾ ಮನೋಭಾವವನ್ನು ಬೆಳಗಿಸಲಿ ಮತ್ತು ಸಾಕಾರಗೊಳಿಸಲಿ ಎಂದು ಪ್ರಧಾನಿ ತಮ್ಮ ಅಧಿಕೃತ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ: ICC Champions Trophy : ಪಾಕಿಸ್ತಾನದ ಕ್ರಿಕೆಟ್​ ಮಂಡಳಿಯ ಮಾಧ್ಯಮ ಹಕ್ಕುಗಳನ್ನು ಕೇಳುವವರೇ ಇಲ್ಲ!

ಟೇಬಲ್ ಟೆನಿಸ್ ತಾರೆ ಶರತ್ ಕಮಲ್ ಮತ್ತು ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧು ಅವರು ಭಾರತದ ಧ್ವಜಧಾರಿಯಾಗಿ ಉದ್ಘಾಟನಾ ಸಮಾರಂಭದ ಪಥ ಸಂಚಲನದಲ್ಲಿ ಪಾಲ್ಗೊಳ್ಳಲಿದ್ದಾರೆ. ಪರೇಡ್​ನಲ್ಲಿ 7,500 ಸ್ಪರ್ಧಿಗಳು ಸೀನ್ ನದಿಯ ಆರು ಕಿಲೋಮೀಟರ್ (ನಾಲ್ಕು ಮೈಲಿ) ಉದ್ದದ ಉದ್ದಕ್ಕೂ 85 ದೋಣಿಗಳಲ್ಲಿ ಪ್ರಯಾಣಿಸಲಿದ್ದಾರೆ.

ಕೋವಿಡ್-19 ಕಾರಣದಿಂದಾಗಿ ಒಂದು ವರ್ಷ ವಿಳಂಬವಾಗಿ ಖಾಲಿ ಕ್ರೀಡಾಂಗಣದಲ್ಲಿ ತೆರೆಯಲ್ಪಟ್ಟ 2020 ರ ಟೋಕಿಯೊ ಒಲಿಂಪಿಕ್ಸ್​ಗೆ ಹೋಲಿಸಿದರೆ, ಪ್ಯಾರಿಸ್​​ನ ಮಹತ್ವಾಕಾಂಕ್ಷೆಯ ನಡಿಗೆ 300,000 ಉತ್ಸಾಹಭರಿತ ಪ್ರೇಕ್ಷಕರು ಮತ್ತು ವಿಶ್ವದಾದ್ಯಂತದ ವಿಐಪಿಗಳು ಮತ್ತು ಸೆಲೆಬ್ರಿಟಿಗಳ ಪ್ರೇಕ್ಷಕರ ಮುಂದೆ ನಡೆಯಲಿದೆ. ಸ್ಪರ್ಧೆಗಳು ಜುಲೈ 27 ರಿಂದ ಪ್ರಾರಂಭವಾಗಲಿದ್ದು, ಆರಂಭಿಕ ದಿನದಂದು ಭಾರತವು 16 ಸ್ಪರ್ಧೆಗಳಲ್ಲಿ 6ರಲ್ಲಿ ಭಾಗವಹಿಸಲಿದೆ. ಅವುಗಳೆಂದರೆ, ರೋಯಿಂಗ್, ಬ್ಯಾಡ್ಮಿಂಟನ್, ಶೂಟಿಂಗ್, ಟೇಬಲ್ ಟೆನಿಸ್, ಟೆನಿಸ್ ಮತ್ತು ಹಾಕಿ.

Continue Reading
Advertisement
Money Guide
ಮನಿ-ಗೈಡ್5 mins ago

Money Guide: ಐಟಿಆರ್ ಇನ್ನೂ ಸಲ್ಲಿಸಿಲ್ಲವೇ? ಕೊನೆಯ ಕ್ಷಣದ ಗೊಂದಲ ತಪ್ಪಿಸಲು ಈ ಟಿಪ್ಸ್‌ ಫಾಲೋ ಮಾಡಿ

Womens Asia Cup Final
ಕ್ರೀಡೆ27 mins ago

Womens Asia Cup Final: 8ನೇ ಪ್ರಶಸ್ತಿ ನಿರೀಕ್ಷೆಯಲ್ಲಿ ಭಾರತ; ನಾಳೆ ಫೈನಲ್​

dk shivakumar hd kumarswamy
ಪ್ರಮುಖ ಸುದ್ದಿ31 mins ago

DK Shivakumar: ನಮ್ಮ ಸರ್ವನಾಶವೇ ಕುಮಾರಸ್ವಾಮಿ ಅವರ ಆಲೋಚನೆ: ಡಿಸಿಎಂ ಡಿಕೆ ಶಿವಕುಮಾರ್

karnataka high court
ಪ್ರಮುಖ ಸುದ್ದಿ58 mins ago

Karnataka High Court: ʼಚಿಲ್ಲರೆ ಅಂಗಡಿಯವರಲ್ಲೂ ಯುಪಿಐ ಇದೆ, ನಿಮ್ಮಲ್ಲೇಕಿಲ್ಲ?ʼ ಬೆಸ್ಕಾಂಗೆ ಹೈಕೋರ್ಟ್‌ ತರಾಟೆ

Ghuspaithia Hindi movie release on August 9
ಕರ್ನಾಟಕ1 hour ago

Ghuspaithiya Hindi Movie: ರಮೇಶ್ ರೆಡ್ಡಿ ನಿರ್ಮಾಣದ ʼಘುಸ್ಪೈಥಿಯಾʼ ಹಿಂದಿ ಸಿನಿಮಾ ಆ. 9ರಂದು ತೆರೆಗೆ

2nd International Airport in Bengaluru Another round of discussion was held by Minister MB Patil
ಕರ್ನಾಟಕ1 hour ago

MB Patil: ಬೆಂಗಳೂರಿನಲ್ಲಿ 2ನೇ ವಿಮಾನ ನಿಲ್ದಾಣ; ಪರಿಣತರ ಜತೆ ಎಂ.ಬಿ.ಪಾಟೀಲ್‌ ಸಮಾಲೋಚನೆ

Kanwar Yatra
ದೇಶ1 hour ago

Kanwar Yatra: ಕನ್ವರ್ ಯಾತ್ರೆ ಮಾರ್ಗದಲ್ಲಿನ ಮಸೀದಿ ಕಾಣದಂತೆ ಪರದೆ; ವ್ಯಾಪಕ ವಿರೋಧದ ಬಳಿಕ ತೆರವು

ramanagara news
ರಾಮನಗರ2 hours ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

pramod mutalik dog meat
ಪ್ರಮುಖ ಸುದ್ದಿ2 hours ago

Dog Meat: 15 ವರ್ಷದಿಂದ ಅಬ್ದುಲ್ ರಜಾಕ್ ನಾಯಿ ಮಾಂಸ ತಿನ್ನಿಸುತ್ತಿದ್ದಾರೆ: ಪ್ರಮೋದ್‌ ಮುತಾಲಿಕ್‌ ಶಾಕಿಂಗ್‌ ಹೇಳಿಕೆ

Shiva Rajkumar played the dupe for saikumar in film
ಸ್ಯಾಂಡಲ್ ವುಡ್2 hours ago

Shiva Rajkumar: ಸಾಯಿಕುಮಾರ್‌ಗೆ ಶಿವಣ್ಣ ಡ್ಯೂಪ್ ಆಗಿದ್ದ ಸಿನಿಮಾ ಯಾವುದು? ಆ ದೃಶ್ಯಕ್ಕೆ ಅಭಿಮಾನಿಗಳಿಂದ ಶಿಳ್ಳೆ, ಚಪ್ಪಾಳೆ!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

ramanagara news
ರಾಮನಗರ2 hours ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

karnataka rain
ಮಳೆ2 hours ago

Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

Ankola landslide
ಉತ್ತರ ಕನ್ನಡ21 hours ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ22 hours ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ23 hours ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

Karnataka rain
ಮಳೆ24 hours ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

karnataka Rain
ಮಳೆ2 days ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್2 days ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ2 days ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

Actor Darshan
ಸಿನಿಮಾ2 days ago

Actor Darshan: ಆಧ್ಯಾತ್ಮದತ್ತ ವಾಲಿದ ದರ್ಶನ್‌; ಜೈಲಲ್ಲಿ ಹೇಗಿದೆ ಗೊತ್ತಾ ನಟನ ಬದುಕು

ಟ್ರೆಂಡಿಂಗ್‌