Asian Games : ಮಹಿಳೆಯರ ಜಾವೆಲಿನ್ ಎಸೆತದಲ್ಲಿ ಚಿನ್ನ ಗೆದ್ದು ದಾಖಲೆ ಬರೆದ ಅನ್ನುರಾಣಿ - Vistara News

ಕ್ರೀಡೆ

Asian Games : ಮಹಿಳೆಯರ ಜಾವೆಲಿನ್ ಎಸೆತದಲ್ಲಿ ಚಿನ್ನ ಗೆದ್ದು ದಾಖಲೆ ಬರೆದ ಅನ್ನುರಾಣಿ

ಅನ್ನು ರಾಣಿಯ ಚಿನ್ನದ ಪದಕದೊಂದಿಗೆ ಭಾರತದ ಒಟ್ಟಾರೆ ಚಿನ್ನದ ಪದಕದ ಸಂಖ್ಯೆ 15ಕ್ಕೆ ಏರಿಕೆಯಾಗಿದೆ.ಬೆಳ್ಳಿ, ಕಂಚು ಸೇರಿ 69 ಪದಕಗಳೊಂದಿಗೆ (Asian Games ) ಪದಕ ಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಪಡೆದಿದೆ.

VISTARANEWS.COM


on

Annu Rani
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹ್ಯಾಂಗ್ಜೌ: ಭಾರತದ ಜಾವೆಲಿನ್​ ಎಸೆತಗಾರ್ತಿ ಅನ್ನುರಾಣಿ ಏಷ್ಯನ್​ ಗೇಮ್ಸ್​ನಲ್ಲಿ (Asian Games) ಹೊಸ ದಾಖಲೆ ಬರೆದ್ದಾರೆ. ಅವರು ಖಂಡಾಂತರ ಕ್ರೀಡಾಕೂಟದ ಮಹಿಳೆಯರ ಜಾವೆಲಿನ್​ ಎಸೆತ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದಿರುವ ಭಾರತದ ಮೊಟ್ಟ ಮೊದಲ ಸ್ಪರ್ಧಿ ಎನಿಸಿಕೊಂಡಿದ್ದಾರೆ. ಮಂಗಳವಾರ ಸಂಜೆ ನಡೆಸ ಸ್ಪರ್ಧೆಯಲ್ಲಿ ಅತ್ಯುತ್ತಮ 62.92 ಮೀಟರ್ ದೂರಕ್ಕೆ ಜಾವೆಲಿನ್​ ಎಸೆತ ಅನ್ನು ರಾಣಿ ಬಂಗಾರದ ಪದಕಕ್ಕೆ ಕೊರಳೊಡ್ಡಿದರು. ಅಂದ ಹಾಗೆ ಅನ್ನು ರಾಣಿ 2014ರಲ್ಲಿ ನಡೆದಿದ್ದ ಏಷ್ಯನ ಗೇಮ್ಸ್​ನಲ್ಲಿ ಕಂಚಿನ ಪದಕ ಗೆದ್ದುಕೊಂಡಿದ್ದರು ಇದೀಗ ಅವರು ಪ್ರದರ್ಶನದಲ್ಲಿ ಸುಧಾರಣೆ ಮಾಡಿಕೊಂಡು ಸ್ವರ್ಣ ಪದಕ ತಮ್ಮದಾಗಿಸಿಕೊಂಡಿದ್ದರು.

ಅನ್ನು ರಾಣಿ ಅವರ ಚಿನ್ನದ ಪದಕದ ಸಾಧನೆಯೊಂದಿಗೆ ಭಾರತದ ಬಂಗಾರದ ಗಳಿಕೆ 15ಕ್ಕೆ ಏರಿಕೆಯಾಗಿದೆ. 26 ಬೆಳ್ಳಿ ಹಾಗೂ 28 ಕಂಚಿನ ಪದಕದ ಸಾಧನೆಯೊಂದಿಗೆ ಒಟ್ಟಾರೆ 69 ಪದಕಗಳನ್ನು ಗೆದ್ದು ಪದಕ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿ ಮುಂದುವರಿಸಿದೆ.

ಮಂಗಳವಾರ ಸಂಜೆ ಪಾರುಲ್ ಚೌಧರಿ, ಮಹಿಳೆಯರ 5000 ಮೀಟರ್ ಓಟದಲ್ಲಿ ಚಿನ್ನದ ಪದಕ ಗೆದ್ದಿದ್ದರು. ಓಟದ ಅಂತಿಮ ಕ್ಷಣದಲ್ಲಿ ವೇಗ ಹೆಚ್ಚಿಸಿದ ಅವರು ಅವರು 15:14.75 ಸೆಕೆಂಡುಗಳಲ್ಲಿ ಗುರಿ ತಲುಪಿ ಜಪಾನ್ ನ ರಿರಿಕಾ ಹಿರೊನಾಕಾ ಅವರನ್ನು ಹಿಂದಿಕ್ಕಿದರು.

ಮಹಿಳೆಯರ 400 ಮೀಟರ್ ಓಟದ ಫೈನಲ್​ನಲ್ಲಿ ವಿಥ್ಯಾ ರಾಮರಾಜ್ ಕಂಚಿನ ಪದಕ ಗೆದ್ದರು. ಇದಕ್ಕೂ ಮುನ್ನ ಯಶಸ್ವಿ ಜೈಸ್ವಾಲ್ ಅವರ ಅದ್ಭುತ ಶತಕ (100), ರಿಂಕು ಸಿಂಗ್ ಅವರ ಅದ್ಭುತ ಶತಕ (37*) ಮತ್ತು ಬೌಲರ್​ಗಳ ಅಬ್ಬರದಿಂದಾಗಿ ಭಾರತ ಕ್ರಿಕೆಟ್​ ತಂಡವು ತಂಡವು ನೇಪಾಳ ವಿರುದ್ಧ 23 ರನ್​ಗಳ ವಿಜಯ ಸಾಧಿಸಿತ್ತು. ಈ ಗೆಲುವಿನೊಂದಿಗೆ ಭಾರತ ಪುರುಷರ ಕ್ರಿಕೆಟ್ ಟೂರ್ನಿಯ ಸೆಮಿಫೈನಲ್ ಪ್ರವೇಶಿಸಿದೆ.

ಭಾರತ ಪುರುಷರ ಕಬಡ್ಡಿ ತಂಡವು ಪಂದ್ಯಾವಳಿಯಲ್ಲಿ 55-18 ಅಂಕಗಳಿಂದ ಬಾಂಗ್ಲಾದೇಶವನ್ನು ಸೋಲಿಸಿದರೆ, ಮಹಿಳಾ ಹಾಕಿ ತಂಡವು ಹಾಂಗ್ ಕಾಂಗ್ ವಿರುದ್ಧ 13-0 ಅಂತರದಿಂದ ಗೆಲುವು ಸಾಧಿಸಿತು. ಅರ್ಚರಿಯಲ್ಲಿ ಭಾರತೀಯರು ಪ್ರಾಬಲ್ಯ ಮೆರೆದಿದ್ದು, ಪುರುಷರ ವಿಭಾಗದಲ್ಲಿ ಓಜಾಸ್ ಪ್ರವೀಣ್ ಡಿಯೋಟಾಲೆ ಮತ್ತು ಅಭಿಷೇಕ್ ಶರ್ಮಾ ಅಖಿಲ ಭಾರತ ಫೈನಲ್ ತಲುಪಿದರೆ, ಜ್ಯೋತಿ ಸುರೇಖಾ ವೆನ್ನಮ್ ಕೂಡ ಮಹಿಳೆಯರ ವಿಭಾಗದಲ್ಲಿ ಫೈನಲ್ ತಲುಪಿದ್ದಾರೆ.

ಇದನ್ನೂ ಓದಿ : Asian Games : ಭಾರತಕ್ಕೆ ಮತ್ತೊಂದು ಚಿನ್ನದ ಪದಕ, 5000 ಮೀಟರ್​ ಓಟದಲ್ಲಿ ಮೊದಲ ಸ್ಥಾನ ಪಡೆದ ಪಾರುಲ್​

ಬ್ಯಾಡ್ಮಿಂಟರ್​ನಲ್ಲಿ ಭಾರತದ ಎಚ್.ಎಸ್.ಪ್ರಣಯ್, ಪಿ.ವಿ.ಸಿಂಧು ಮತ್ತು ಕಿಡಂಬಿ ಶ್ರೀಕಾಂತ್ 16ನೇ ಸುತ್ತಿಗೆ ತಲುಪಿದ್ದಾರೆ. ಮಹಿಳೆಯರ 800 ಮೀಟರ್ ಓಟದಲ್ಲಿ ಕುಮಾರಿ ಚಂದಾ ಮತ್ತು ಹರ್ಮಿಲನ್ ಬೈನ್ಸ್ ಅಂತಿಮ ಸ್ಥಾನಗಳನ್ನು ಗಳಿಸಿದರೆ. ಭಾರತವು 4×400 ಮೀಟರ್ ತಂಡ ಪುರುಷರ ಸ್ಪರ್ಧೆಯಲ್ಲಿ ಫೈನಲ್​ಗೆ ಅರ್ಹತೆ ಪಡೆಯಿತು.

ಪುರುಷರ ಡೆಕಾಥ್ಲಾನ್​ನಲ್ಲಿ ಅಗ್ರ ಸ್ಥಾನವನ್ನು ಗಳಿಸುವ ಗುರಿಯನ್ನು ತೇಜಸ್ವಿನ್ ಶಂಕರ್ ಹೊಂದಿದ್ದಾರೆ. 2014ರ ಏಷ್ಯನ್ ಗೇಮ್ಸ್ ನಲ್ಲಿ ಕಂಚು ಗೆದ್ದಿದ್ದ ಮಹಿಳಾ ಜಾವೆಲಿನ್ ಸ್ಪರ್ಧಿ ಅನ್ನು ರಾಣಿ ಇನ್ನೊಂದು ಪದಕದ ಮೇಲೆ ಗುರಿಯಿಟ್ಟಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

IND vs ENG Semi Final: ಆಂಗ್ಲರನ್ನು ಸದೆಬಡಿದು ಫೈನಲ್​ ಪ್ರವೇಶಿಸಲಿ ಭಾರತ

IND vs ENG Semi Final: ಇಂಗ್ಲೆಂಡ್​ ನಾಯಕ ಜಾಸ್​ ಬಟ್ಲರ್‌, ಫಿಲ್​ ಸಾಲ್ಟ್​, ಜಾನಿ ಬೇರ್‌ಸ್ಟೊ, ಹ್ಯಾರಿ ಬ್ರೂಕ್​, ಸ್ಯಾಮ್​ ಕರನ್​, ಮೊಯಿನ್​ ಅಲಿ ಅವರನ್ನೊಳಗೊಂಡ ಬ್ಯಾಟಿಂಗ್‌ ಸರದಿ ಟಿ20ಗೆ ಹೇಳಿ ಮಾಡಿಸಿದಂತಿದೆ. ಇವರನ್ನು ನಿಯಂತ್ರಿಸುವುದರಲ್ಲಿ ಭಾರತದ ಯಶಸ್ಸು ಅಡಗಿದೆ.

VISTARANEWS.COM


on

Koo

ಟರೂಬ/ಪ್ರೊವಿಡೆನ್ಸ್‌: ಚುಟುಕು ಕ್ರಿಕೆಟ್‌ನಲ್ಲಿ ತನ್ನದೇ ಹೆಗ್ಗುರುತು ಸ್ಥಾಪಿಸಿರುವ ಟೀಮ್‌ ಇಂಡಿಯಾ ನಾಳೆ (ಗುರುವಾರ) ನಡೆಯುವ ಟಿ20 ವಿಶ್ವಕಪ್(T20 World Cup 2024)​ ಟೂರ್ನಿಯ ಸೆಮಿಫೈನಲ್​(IND vs ENG Semi Final) ಪಂದ್ಯದಲ್ಲಿ ಇಂಗ್ಲೆಂಡ್(IND vs ENG)​ ವಿರುದ್ಧ ಅದೃಷ್ಠ ಪರೀಕ್ಷೆಗೆ ಇಳಿಯಲಿದೆ. ಸೀಮಿತ ಓವರ್‌ಗಳ ಮಾದರಿಯ ಕ್ರಿಕೆಟ್‌ನಲ್ಲಿ ಭಾರತ ಕಳೆದ ಕೆಲವು ವರ್ಷಗಳಿಂದ ಸ್ಥಿರತೆಯನ್ನು ಕಾಪಾಡಿಕೊಂಡು ಬಂದಿದೆ. ಅತ್ತ ಹಾಲಿ ಚಾಂಪಿಯನ್​ ಆಗಿರುವ ಇಂಗ್ಲೆಂಡ್​ ಸಹ ಇತ್ತೀಚೆಗೆ ಟಿ20ಗಳಲ್ಲಿ ಬಲಾಡ್ಯ ತಂಡವಾಗಿ ಹೊರಹೊಮ್ಮಿದೆ. ಹೀಗಾಗಿ ಇತ್ತಂಡಗಳ ನಡುವಿನ ಕ್ರಿಕೆಟ್‌ ಸಮರ ತೀವ್ರ ಕುತೂಹಲ, ರೋಮಾಂಚನ ಸೃಷ್ಟಿಸುವುದರಲ್ಲಿ ಅನುಮಾನವಿಲ್ಲ.

ಭಾರತಕ್ಕೆ ಕೊಹ್ಲಿಯದ್ದೇ ಚಿಂತೆ


ಪ್ರತಿ ಐಸಿಸಿ ಟೂರ್ನಿಯಲ್ಲಿ ಶ್ರೇಷ್ಠ ಪ್ರದರ್ಶನ ತೋರುವ ಕಿಂಗ್​ ಖ್ಯಾತಿಯ ವಿರಾಟ್​ ಕೊಹ್ಲಿಯ ಬ್ಯಾಟ್​ ಈ ಬಾರಿಯ ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಸದ್ದು ಮಾಡುತ್ತಿಲ್ಲ. ಇದು ಭಾರತ ತಂಡಕ್ಕೆ ದೊಡ್ಡ ಚಿಂತೆ ಉಂಟು ಮಾಡಿದೆ. ಆಡಿದ 7 ಪಂದ್ಯಗಳಲ್ಲಿ 2 ಶೂನ್ಯ ಸುತ್ತಿದ್ದಾರೆ. ಒಂದು ಪಂದ್ಯದಲ್ಲಿ ಮಾತ್ರ ಎರಡಂಕಿ ದಾಟಿದ್ದಾರೆ. ಹೀಗಾಗಿ ಕೊಹ್ಲಿ ಇಂಗ್ಲೆಂಡ್‌ ವಿರುದ್ಧ ಸಿಡಿದು ನಿಲ್ಲಬೇಕಾದುದ ಅನಿವಾರ್ಯತೆ ಇದೆ. ಕೊಹ್ಲಿ ಜತೆಗೆ ಶಿವಂ ದುಬೆ ಕೂಡ ಸಿಡಿದು ನಿಲ್ಲಬೇಕಿದೆ. ಐಪಿಎಲ್​ನಲ್ಲಿ ತೋರಿದ ಬ್ಯಾಟಿಂಗ್​ ಆರ್ಭಟವನ್ನು ದುಬೆ ಈ ಟೂರ್ನಿಯಲ್ಲಿ ಇದುವರೆಗೆ ತೋರಿಸಿಲ್ಲ. ಎಲ್ಲ ಪಂದ್ಯಗಳಲ್ಲಿಯೂ ಆಮೆ ಗತಿಯ ಬ್ಯಾಟಿಂಗ್​ ನಡೆಸಿ ತಂಡದ ಬೃಹತ್​ ಮೊತ್ತಕ್ಕೆ ಹಿನ್ನಡೆ ಉಂಟುಮಾಡುತ್ತಿದ್ದಾರೆ.

ಉಪನಾಯಕ ಹಾರ್ದಿಕ್​ ಪಾಂಡ್ಯ ಅವರು ಈ ಬಾರಿಯ ಐಪಿಎಲ್​ನಲ್ಲಿ ಬ್ಯಾಟಿಂಗ್​ ಮತ್ತು ಬೌಲಿಂಗ್​ನಲ್ಲಿ ಘೋರ ವೈಫಲ್ಯ ಕಂಡಿದ್ದರು. ಅವರನ್ನು ಟಿ20 ವಿಶ್ವಕಪ್​ಗೆ ಆಯ್ಕೆ ಮಾಡಿದಾಗ ಭಾರೀ ಟೀಕೆಗಳು ವ್ಯಕ್ತವಾಗಿತ್ತು. ಆದರೆ, ಪಾಂಡ್ಯ ಪ್ರತಿ ಪಂದ್ಯದಲ್ಲಿಯೂ ತಂಡಕ್ಕೆ ನೆರವಾಗುವ ಮೂಲಕ ತಮ್ಮ ಆಯ್ಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಅಂದು ಪಾಂಡ್ಯ ಬೇಡ ಎಂದವರು ಇಂದು ಪಾಂಡ್ಯ ಇಲ್ಲದೇ ಇದ್ದರೆ ಗೆಲುವು ಕಷ್ಟ ಎನ್ನುತ್ತಿದ್ದಾರೆ. ಕಳೆದ ಆಸೀಸ್​ ವಿರುದ್ಧ ಪ್ರಚಂಡ ಬ್ಯಾಟಿಂಗ್​ ನಡೆಸಿದ ನಾಯಕ ರೋಹಿತ್​ ಶರ್ಮ ಅವರ ಬ್ಯಾಟಿಂಗ್​ ಮೇಲೆ ಈ ಪಂದ್ಯದಲ್ಲಿಯೂ ತಂಡ ನಂಬಿಕೆ ಇರಿಸಿದೆ.

ಇದನ್ನೂ ಓದಿ IND vs ENG: ಇಂಗ್ಲೆಂಡ್‌ ಎದುರು ಭಾರತಕ್ಕೆ ಸೇಡಿನ ಪಂದ್ಯ; ನಾಳೆ ದ್ವಿತೀಯ ಸೆಮಿಫೈನಲ್​

ಇಂಗ್ಲೆಂಡ್​ ಕೂಡ ಬಲಿಷ್ಠ

ಇಂಗ್ಲೆಂಡ್​ ನಾಯಕ ಜಾಸ್​ ಬಟ್ಲರ್‌, ಫಿಲ್​ ಸಾಲ್ಟ್​, ಜಾನಿ ಬೇರ್‌ಸ್ಟೊ, ​ಲಿವಿಂಗ್​​ಸ್ಟೋನ್​, ಹ್ಯಾರಿ ಬ್ರೂಕ್​, ಸ್ಯಾಮ್​ ಕರನ್​, ಮೊಯಿನ್​ ಅಲಿ ಅವರನ್ನೊಳಗೊಂಡ ಬ್ಯಾಟಿಂಗ್‌ ಸರದಿ ಟಿ20ಗೆ ಹೇಳಿ ಮಾಡಿಸಿದಂತಿದೆ. ಇವರನ್ನು ನಿಯಂತ್ರಿಸುವುದರಲ್ಲಿ ಭಾರತದ ಯಶಸ್ಸು ಅಡಗಿದೆ. ಕಳೆದ ಕೆಲವು ವರ್ಷಗಳಿಂದ ಕ್ರಿಕೆಟ್​ನಿಂದ ದೂರ ಉಳಿದಿದ್ದ ಘಾತಕ ವೇಗಿ ಜೋಫ್ರಾ ಆರ್ಚರ್​ ಕೂಡ ತಂಡಕ್ಕೆ ಮರಳಿದ್ದು ಇಂಗ್ಲೆಂಡ್​ ಬೌಲಿಂಗ್​ ಬಲವನ್ನು ಹೆಚ್ಚಿಸಿದೆ.

ಸೇಡಿನ ಪಂದ್ಯ

2022ರಲ್ಲಿ ಅಡಿಲೇಡ್​ನಲ್ಲಿ ನಡೆದ ಟಿ20 ವಿಶ್ವಕಪ್​ ಸೆಮೀಸ್​ನಲ್ಲಿ ಇಂಗ್ಲೆಂಡ್​ ತಂಡ ಭಾರತಕ್ಕೆ 10 ವಿಕೆಟ್​ಗಳ ಹೀನಾಯ ಸೋಲುಣಿಸಿ ಫೈನಲ್​ ಪ್ರವೇಶಿಸಿತ್ತು. ಇದೀಗ ಅಂದಿನ ಸೋಲಿಗೆ ಸೇಡು ತೀರಿಸಿಕೊಳ್ಳುವ ಅಪೂರ್ವ ಅವಕಾಶವೊಂದು ಭಾರತಕ್ಕೆ ಎದುರಾಗಿದೆ. ಇದರಲ್ಲಿ ರೋಹಿತ್​ ಬಳಗ ಎಷ್ಟರ ಮಟ್ಟಿಗೆ ಯಶಸ್ವಿಯಾಗುತ್ತದೆ ಎಂಬುದೊಂದು ಕುತೂಹಲ.

Continue Reading

ಕ್ರೀಡೆ

Para Badminton Ranking: ಮೊದಲ ಬಾರಿಗೆ ವಿಶ್ವ ನಂ.1 ಸ್ಥಾನಕ್ಕೇರಿದ ಕನ್ನಡಿಗ ಸುಹಾಸ್‌ ಯತಿರಾಜ್

Para Badminton Ranking: ಹೊಸದಾಗಿ ಪ್ರಕಟಗೊಂಡ ರ್‍ಯಾಂಕಿಂಗ್‌ ಪಟ್ಟಿಯಲ್ಲಿ ಸುಹಾಸ್‌ ಒಂದು ಸ್ಥಾನ ಏರಿಕೆ ಕಾಣುವ ಮೂಲಕ ಈ ಹಿಂದೆ ಅಗ್ರಸ್ಥಾನದಲ್ಲಿದ್ದ ಫ್ರಾನ್ಸ್‌ನ ಲುಕಾಸ್‌ ಮಜುರ್‌ರನ್ನು ಹಿಂದಿಕ್ಕಿದರು

VISTARANEWS.COM


on

Para Badminton Ranking
Koo

ನವದೆಹಲಿ: ಟೋಕಿಯೊ ಪ್ಯಾರಾ ಒಲಿಂಪಿಕ್ಸ್ ಬೆಳ್ಳಿ ಪದಕ ವಿಜೇತ, ಕನ್ನಡಿಗ ಸುಹಾಸ್ ಯತಿರಾಜ್(Suhas Lalinakere Yathiraj) ಅವರು ಪ್ಯಾರಾ ಬ್ಯಾಡ್ಮಿಂಟನ್‌ ಪುರುಷರ ಸಿಂಗಲ್ಸ್‌ನ(Para Badminton Ranking) ಎಸ್‌ಎಲ್‌4 ವಿಭಾಗದಲ್ಲಿ ವಿಶ್ವ ನಂ.1 ಸ್ಥಾನಕ್ಕೇರಿದ್ದಾರೆ. ಈ ಸಂತಸ ವಿಚಾರವನ್ನು ಸುಹಾಸ್(Suhas L Yathiraj) ತಮ್ಮ ಅಧಿಕೃತ ಟ್ವಿಟರ್​ ಎಕ್ಸ್​ನಲ್ಲಿ ಪೋಸ್ಟ್​ ಮಾಡುವ ಮೂಲಕ ಹಂಚಿಕೊಂಡಿದ್ದಾರೆ.

ಹೊಸದಾಗಿ ಪ್ರಕಟಗೊಂಡ ರ್‍ಯಾಂಕಿಂಗ್‌ ಪಟ್ಟಿಯಲ್ಲಿ ಸುಹಾಸ್‌ ಒಂದು ಸ್ಥಾನ ಏರಿಕೆ ಕಾಣುವ ಮೂಲಕ ಈ ಹಿಂದೆ ಅಗ್ರಸ್ಥಾನದಲ್ಲಿದ್ದ ಫ್ರಾನ್ಸ್‌ನ ಲುಕಾಸ್‌ ಮಜುರ್‌ರನ್ನು ಹಿಂದಿಕ್ಕಿದರು. ಸುಹಾಸ್​ ಇದೇ ವರ್ಷ ಥಾಯ್ಲೆಂಡ್‌ನಲ್ಲಿ ನಡೆದಿದ್ದ ಪ್ಯಾರಾ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನದ ಪದ ಜಯಿಸಿದ್ದರು. ಪ್ಯಾರಾ ಏಷ್ಯನ್‌ ಗೇಮ್ಸ್‌ನಲ್ಲಿ 2 ಬಾರಿ ಸ್ವರ್ಣ ಪದಕ ಗೆದ್ದಿರುವ ಅವರು ಮುಂದಿನ ತಿಂಗಳು ನಡೆಯುವ ಪ್ಯಾರಿಸ್‌ ಪ್ಯಾರಾಲಿಂಪಿಕ್ಸ್‌ನಲ್ಲಿ ಸ್ಪರ್ಧಿಸಲು ಸಿದ್ಧತೆ ನಡೆಸುತ್ತಿದ್ದಾರೆ.

“ಅಂತಿಮವಾಗಿ ವಿಶ್ವ ನಂಬರ್ 1… ಈ ವಿಚಾರವನ್ನು ಹಂಚಿಕೊಳ್ಳಲು ಸಂತೋಷವಾಗಿದೆ. ಪುರುಷರ ಸಿಂಗಲ್ಸ್ ವಿಭಾಗಕ್ಕೆ ಘೋಷಿಸಲಾದ ಇತ್ತೀಚಿನ ಬ್ಯಾಡ್ಮಿಂಟನ್ ವರ್ಲ್ಡ್ ಫೆಡರೇಶನ್ ಪ್ಯಾರಾ ಬ್ಯಾಡ್ಮಿಂಟನ್ ಶ್ರೇಯಾಂಕದಲ್ಲಿ, ನಾನು ವಿಶ್ವದ ಅಗ್ರ ಶ್ರೇಯಾಂಕವನ್ನು ಪಡೆದುಕೊಂಡಿದ್ದೇನೆ. ಜೀವನದಲ್ಲಿ ಮೊದಲ ಬಾರಿಗೆ ಈ ಸಾಧನೆ ಮಾಡಿ ಫ್ರಾನ್ಸ್‌ನ ಲೂಕಾಸ್ ಮಜೂರ್ ಅವರ ಸ್ಥಾನವನ್ನು ವಶಪಡಿಸಿಕೊಂಡಿರುವೆ. ನಿಮ್ಮ ಆಶೀರ್ವಾದ ಮತ್ತು ಹಾರೈಕೆ ಹೀಗೆ ಇರಲಿ. ಜೈ ಹಿಂದ್” ಎಂದು ಸುಹಾಸ್ ಯತಿರಾಜ್ ಟ್ವಿಟರ್​ ಎಕ್ಸ್​ನಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ Spanish Para-Badminton: ಕಂಚಿನ ಪದಕ ವಿಜೇತ ಕನ್ನಡಿಗ ಸುಹಾಸ್ ಸ್ವದೇಶಕ್ಕೆ ಆಗಮನ

ಉತ್ತರ ಪ್ರದೇಶದ ಗೌತಮ್‌ ಬುದ್ಧ ನಗರದ ಜಿಲ್ಲಾಧಿಕಾರಿಯಾಗಿರುವ ಸುಹಾಸ್‌ ಹಾಸನ ಮೂಲದ ಐಎಎಸ್ ಅಧಿಕಾರಿಯಾಗಿದ್ದಾರೆ. ಎಸ್‌ಎಲ್‌4 ಬ್ಯಾಡ್ಮಿಂಟನ್‌ ವಿಭಾಗದಲ್ಲಿ ಅವರು ಟೋಕಿಯೊ ಪ್ಯಾರಾ ಒಲಿಂಪಿಕ್ಸ್ ಫೈನಲ್‌ನಲ್ಲಿ ಬೆಳ್ಳಿ ಪದಕಕ್ಕೆ ಕೊರಳೊಡ್ಡಿದ್ದರು. ಈ ಮೂಲಕ ಪ್ಯಾರಾಲಿಂಪಿಕ್ಸ್‌ ಪದಕ ಗೆದ್ದ ಮೊದಲ ಐಎಎಸ್‌ ಅಧಿಕಾರಿ ಎಂಬ ಹಿರಿಮೆಗೆ ಪಾತ್ರರಾಗಿದ್ದರು.

2007ರ ಬ್ಯಾಚ್‌ನ ಐಎಎಸ್‌ ಅಧಿಕಾರಿಯಾಗಿರುವ ಸುಹಾಸ್‌, ದುರ್ಬಲ ಕಾಲನ್ನು ಹೊಂದಿದ್ದಾರೆ. ಕಾಲಿನಲ್ಲಿ ತೀವ್ರ ಬಲಹೀನತೆಯಿದ್ದರೆ ಅಂತಹವರನ್ನು ಎಸ್‌ಎಲ್‌4 ವಿಭಾಗಕ್ಕೆ ಸೇರಿಸಲಾಗುತ್ತದೆ. ಇಂತಹ ಸಮಸ್ಯೆಗಳ ಮಧ್ಯೆಯೂ ಸುಹಾಸ್‌ ಐಎಎಸ್‌ ಅಧಿಕಾರಿಯಾಗಿದ್ದಾರೆ.

ಸುಹಾಸ್‌ ಅವರು ಹಿಂದೆಮ್ಮೊ ಸಂದರ್ಶನದಲ್ಲಿ ಮಾತನಾಡುವ ವೇಳೆ “ದೇಶವನ್ನು ಪ್ರತಿನಿಧಿಸುವುದು ಗೌರವದ ವಿಷಯ. ಅದರಲ್ಲೂ ದೇಶಕ್ಕಾಗಿ ಪದಕ ಗೆಲ್ಲುವುದು ತುಂಬಾ ಹೆಮ್ಮೆ ಮತ್ತು ಸಂತೋಷದ ಕ್ಷಣವಾಗಿರುತ್ತದೆ. ಯಾವಾಗಲೂ ಅತ್ಯುತ್ತಮ ಪ್ರದರ್ಶನಕ್ಕೆ ಪ್ರಯತ್ನ ನಡೆಸುತ್ತಿರುತ್ತೇನೆ” ಎಂದು ಹೇಳಿದ್ದರು. ಈ ಬಾರಿಯ ಒಲಿಂಪಿಕ್ಸ್​ನಲ್ಲಿ ಚಿನ್ನದ ಪದಕ ಜಯಿಸಲಿ ಎನ್ನುವುದು ಎಲ್ಲ ಕನ್ನಡಿಗರ ಆಶಯವಾಗಿದೆ.

Continue Reading

ಕ್ರೀಡೆ

1983 WC Win Anniversary: ಚೊಚ್ಚಲ ಏಕದಿನ ವಿಶ್ವಕಪ್ ಗೆಲುವಿನ​ ಸವಿ ನೆನಪನ್ನು ವಿಂಡೀಸ್​ನಲ್ಲಿ ಕೇಕ್​ ಕತ್ತರಿಸಿ ಸಂಭ್ರಮಿಸಿದ ರವಿಶಾಸ್ತ್ರಿ, ಗವಾಸ್ಕರ್, ​ಬಿನ್ನಿ

1983 World Cup: ವೆಸ್ಟ್​ ಇಂಡೀಸ್​ನಲ್ಲಿರುವ ಟೀಮ್​ ಇಂಡಿಯಾ ಆಟಗಾರರಾದ ರಿಷಭ್​ ಪಂತ್​, ಮೊಹಮ್ಮದ್​ ಸಿರಾಜ್​, ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್​ ಅಗರ್ಕರ್​ ಸೇರಿ ಕೆಲ ಆಟಗಾರರು ಲೆಜಂಡರಿ ಕ್ರಿಕೆಟಿಗರ ಈ ಪಾರ್ಟಿಯಲ್ಲಿ ಪಾಲ್ಗೊಂಡಿದ್ದರು. ಕೇಕ್ ಕತ್ತರಿಸಿ ಅಂದಿನ ಚೊಚ್ಚಲ ವಿಶ್ವಕಪ್​ ಗೆಲುವನ್ನು ಸಂಭ್ರಮಿಸಿದರು

VISTARANEWS.COM


on

1983 World Cup
Koo

ಗಯಾನ: ಭಾರತೀಯ ಕ್ರಿಕೆಟಿನ ದಿಕ್ಕನ್ನೇ ಬದಲಿಸಿದ ಈ ಮಹಾ ವಿಜಯಕ್ಕೆ(1983 World Cup) ಮಂಗಳವಾರ 41 ವರ್ಷ ತುಂಬಿತು(1983 WC Win Anniversary). 1983ರ ಜೂ. 25ರಂದು ಐತಿಹಾಸಿಕ ಲಾರ್ಡ್ಸ್‌ ಅಂಗಳದಲ್ಲಿ ಎರಡು ಬಾರಿಯ ಹಾಲಿ ಚಾಂಪಿಯನ್‌, ಭಯಾನಕ ವೆಸ್ಟ್‌ ಇಂಡೀಸ್​ ತಂಡವನ್ನು ಫೈನಲ್‌ನಲ್ಲಿ 43 ರನ್ನುಗಳಿಂದ ಉರುಳಿಸಿದ “ಕಪಿಲ್‌ ಡೆವಿಲ್ಸ್‌’ ಹೊಸ ಇತಿಹಾಸ ಬರೆದ ಅದ್ಭುತ ಕ್ಷಣವದು. ಈ ಸಂಭ್ರಮಕ್ಕೆ 41 ವರ್ಷ ತುಂಬಿದ ನಿಟ್ಟಿನಲ್ಲಿ ಅಂದಿನ ವಿಶ್ವಕಪ್​ ತಂಡದ ಸದಸ್ಯರಾದ ರವಿಶಾಸ್ತ್ರಿ(Ravi Shastri), ಸುನೀಲ್ ಗವಾಸ್ಕರ್(Sunil Gavaskar)​ ಮತ್ತು ಪ್ರಸ್ತುತ ಬಿಸಿಸಿಐ ಅಧ್ಯಕ್ಷರಾಗಿರುವ ರೋಜರ್ ಬಿನ್ನಿ(Roger Binny) ಅವರು ಹಾಲಿ ಟಿ20 ವಿಶ್ವಕಪ್​ ಆಡುತ್ತಿರುವ ಟೀಮ್​ ಇಂಡಿಯಾ ಆಟಗಾರರೊಂದಿಗೆ ಸಂಭ್ರಮಾಚರಣನೆ ನಡೆಸಿದ್ದಾರೆ.

ವೆಸ್ಟ್​ ಇಂಡೀಸ್​ನಲ್ಲಿರುವ ಟೀಮ್​ ಇಂಡಿಯಾ ಆಟಗಾರರಾದ ರಿಷಭ್​ ಪಂತ್​(Rishabh Pant), ಮೊಹಮ್ಮದ್​ ಸಿರಾಜ್​, ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್​ ಅಗರ್ಕರ್​ ಸೇರಿ ಕೆಲ ಆಟಗಾರರು ಲೆಜಂಡರಿ ಕ್ರಿಕೆಟಿಗರ ಈ ಪಾರ್ಟಿಯಲ್ಲಿ ಪಾಲ್ಗೊಂಡಿದ್ದರು. ಕೇಕ್ ಕತ್ತರಿಸಿ ಅಂದಿನ ಚೊಚ್ಚಲ ವಿಶ್ವಕಪ್​ ಗೆಲುವನ್ನು ಸಂಭ್ರಮಿಸಿದರು. ಈ ಸುಂದರ ಕ್ಷಣದ ಫೋಟೊವನ್ನು ರವಿಶ್ರಾಸ್ತ್ರಿ ತಮ್ಮ ಇನ್​ಸ್ಟಾಗ್ರಾಮ್​ ಮತ್ತು ಟ್ವಿಟರ್​ ಎಕ್ಸ್​ನಲ್ಲಿ ಹಂಚಿಕೊಂಡಿದ್ದಾರೆ. ಈ ಪೋಸ್ಟನ್ನು ಐಸಿಸಿ ಕೂಡ ಶೇರ್​ ಮಾಡಿದೆ.

ಆ ಕಾಲಕ್ಕೆ ಭಾರತದಲ್ಲಿ ಇನ್ನೂ ಕ್ರಿಕೆಟ್​ ಅಷ್ಟಾಗಿ ಖ್ಯಾತಿ ಪಡೆದಿರಲಿಲ್ಲ. ಭಾರತ ತಂಡವೂ ಕೂಡ ಬಲಿಷ್ಠವಾಗಿರಲಿಲ್ಲ. ಕೇವಲ ಲೆಕ್ಕ ಭರ್ತಿಗೆ ಇದ್ದ ತಂಡ ಎಂದು ಎಲ್ಲರಿಂದಲೂ ಅಪಹಾಸ್ಯಕ್ಕೆ ಒಳಗಾಗಿತ್ತು. ಜತೆಗೆ ಭಾರತೀಯ ಆಟಗಾರರಿಗೂ ಇದೊಂದು ವಿದೇಶ ಪ್ರವಾಸ ಎಂಬ ಭಾವನೆ ಇದ್ದಿತ್ತು. ಆದರೆ ಲಂಡನ್​ನಲ್ಲಿ ನಡೆದದ್ದೇ ಬೇರೆ.

ಫೈನಲ್​ನಲ್ಲಿ ಭಾರತ ಮತ್ತು ವೆಸ್ಟ್ ಇಂಡೀಸ್​ ಎದುರಾದಾಗ ಇಡೀ ವಿಶ್ವವೇ ಮತ್ತೊಮ್ಮೆ ವಿಂಡೀಸ್​ ಚಾಂಪಿಯನ್​ ಆಗಲಿದೆ ಎಂದು ಹೇಳಿದ್ದರು. ಆದರೆ, ಕಪಿಲ್​ದೇವ್​ ನೇತೃತ್ವದ ಭಾರತ ತಂಡ ಅಸಾಧಾರಣ ಪ್ರದರ್ಶನ ತೋರಿ ಹ್ಯಾಟ್ರಿಕ್​​ ಹಾದಿಯಲ್ಲಿದ್ದ ವಿಂಡೀಸ್​ ತಂಡವನ್ನು ಕಟ್ಟಿಹಾಕಿ ಇತಿಹಾಸ ನಿರ್ಮಿಸಿದರು.

ಇದನ್ನೂ ಓದಿ 1983 World Cup: ಕಪಿಲ್‌ ಪಡೆಯ ಏಕದಿನ ವಿಶ್ವಕಪ್‌ ವಿಜಯ ದಿವಸಕ್ಕೆ 40ರ ಸಂಭ್ರಮ

ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್​ ನಡೆಸಿದ ಭಾರತ 183 ರನ್​ಗಳಿಗೆ ಆಲೌಟ್​ ಆಯಿತು. ಸಣ್ಣ ಮೊತ್ತವನ್ನು ಬೆನ್ನಟ್ಟಿದ ವಿಂಡೀಸ್​ಗೆ ಛಲ ಬಿಡದ ಮದನ್​ಲಾಲ್​ ಮತ್ತು ಮೊಹಿಂದರ್​ ಅಮರ್​ನಾಥ್​(Mohinder Amarnath) ಉತ್ಕೃಷ್ಟ ಮಟ್ಟದ ಬೌಲಿಂಗ್​ ನಡೆಸಿ ತಲಾ 3 ವಿಕೆಟ್​ ಕೆಡವಿದರು. ಅಂತಿಮವಾಗಿ ಕೆರೆಬಿಯನ್ನರನ್ನು 140 ರನ್​​ಗೆ ಆಲೌಟ್​ ಮಾಡುವ ಮೂಲಕ 43 ರನ್​ಗಳಿಂದ ಗೆಲುವು ಸಾಧಿಸಿ ದೇಶಕ್ಕೆ ಮೊದಲ ಏಕದಿನ ವಿಶ್ವಕಪ್​ ತಂದುಕೊಟ್ಟರು. ನಾಯಕ ಕಪಿಲ್​ದೇವ್​ ಅವರು ಲಾರ್ಡ್ಸ್​ನಲ್ಲಿ ಕಪ್​ ಎತ್ತಿ ಭಾರತದ ವಿಜಯ ಪತಾಕೆ ಹಾರಿಸಿದ್ದರು.

ಅಂದಿನ ಕಪಿಲ್‌ ಪಡೆಯ ಓರ್ವ ಸದಸ್ಯ ಸಯ್ಯದ್‌ ಕಿರ್ಮಾನಿ ಹೇಳಿದಂತೆ “ನಮ್ಮ 1983ರ ವಿಶ್ವಕಪ್‌ ಗೆಲುವು ಮೊದಲ ಪ್ರೀತಿಯಂತೆ, ಯಾವತ್ತೂ ಮರೆಯಲಾಗದ್ದು” ನಿಜಕ್ಕೂ ಈ ಮಾತು ಇಂದಿಗೂ ಮರೆಯಲಾಗದಂತೆ ಎಲ್ಲರ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿದುಕೊಂಡಿದೆ.

Continue Reading

ಕ್ರಿಕೆಟ್

IND vs ENG: ಇಂಗ್ಲೆಂಡ್‌ ಎದುರು ಭಾರತಕ್ಕೆ ಸೇಡಿನ ಪಂದ್ಯ; ನಾಳೆ ದ್ವಿತೀಯ ಸೆಮಿಫೈನಲ್​

IND vs ENG: ಹಾಲಿ ಚಾಂಪಿಯನ್​ ಇಂಗ್ಲೆಂಡ್​ 2022ರಲ್ಲಿ ಅಡಿಲೇಡ್​ನಲ್ಲಿ ನಡೆದ ಟಿ20 ವಿಶ್ವಕಪ್​ ಸೆಮೀಸ್​ನಲ್ಲಿ ಭಾರತಕ್ಕೆ 10 ವಿಕೆಟ್​ಗಳ ಹೀನಾಯ ಸೋಲುಣಿಸಿ ಫೈನಲ್​ ಪ್ರವೇಶಿಸಿತ್ತು. ಇದೀಗ ಅಂದಿನ ಸೋಲಿಗೆ ಸೇಡು ತೀರಿಸಿಕೊಳ್ಳುವ ಅಪೂರ್ವ ಅವಕಾಶವೊಂದು ಭಾರತಕ್ಕೆ ಎದುರಾಗಿದೆ.

VISTARANEWS.COM


on

IND vs ENG
Koo


ಗಯಾನಾ: ಲೀಗ್‌ ಮತ್ತು ಸೂಪರ್​-8 ಹಂತದಲ್ಲಿ ಆಡಿದ ಎಲ್ಲ ಪಂದ್ಯಗಳನ್ನು ಗೆದ್ದು ಅಜೇಯವಾಗಿ ಟಿ20 ವಿಶ್ವಕಪ್‌(T20 World Cup 2024) ನಾಕೌಟ್‌ ಪ್ರವೇಶಿಸಿರುವ ಭಾರತ(IND vs ENG) ತಂಡದ ಮುಂದೀಗ ಸೇಡಿನ ಪಂದ್ಯವೊಂದು ಕಾದು ಕುಳಿತಿದೆ. ನಾಳೆ(ಗುರುವಾರ) ರಾತ್ರಿ ನಡೆಯಲಿರುವ ಸೆಮಿಫೈನಲ್‌(T20 World Cup 2024) ಮುಖಾಮುಖಿಯಲ್ಲಿ ರೋಹಿತ್​ ಶರ್ಮ ಪಡೆ ಬಲಿಷ್ಠ ಇಂಗ್ಲೆಂಡ್‌ ಸವಾಲನ್ನು ಎದುರಿಸಲಿದೆ.

ಹಾಲಿ ಚಾಂಪಿಯನ್​ ಇಂಗ್ಲೆಂಡ್​ 2022ರಲ್ಲಿ ಅಡಿಲೇಡ್​ನಲ್ಲಿ ನಡೆದ ಟಿ20 ವಿಶ್ವಕಪ್​ ಸೆಮೀಸ್​ನಲ್ಲಿ ಭಾರತಕ್ಕೆ 10 ವಿಕೆಟ್​ಗಳ ಹೀನಾಯ ಸೋಲುಣಿಸಿ ಫೈನಲ್​ ಪ್ರವೇಶಿಸಿತ್ತು. ಇದೀಗ ಅಂದಿನ ಸೋಲಿಗೆ ಸೇಡು ತೀರಿಸಿಕೊಳ್ಳುವ ಅಪೂರ್ವ ಅವಕಾಶವೊಂದು ಭಾರತಕ್ಕೆ ಎದುರಾಗಿದೆ. ಇದರಲ್ಲಿ ರೋಹಿತ್​ ಬಳಗ ಎಷ್ಟರ ಮಟ್ಟಿಗೆ ಯಶಸ್ವಿಯಾಗುತ್ತದೆ ಎಂಬುದೊಂದು ಕುತೂಹಲ. ದಿನದ ಮೊದಲ ಸೆಮಿಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾ ಮತ್ತು ಅಫಘಾನಿಸ್ತಾನ ತಂಡ ಸೆಣಸಾಟ ನಡೆಸಲಿದೆ.

ಅಡಿಲೇಡ್​ನಲ್ಲಿ ನಡೆದಿದ್ದ ಕಳೆದ ಟಿ20 ವಿಶ್ವಕಪ್​ ಸೆಮೀ ಫೈನಲ್​ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್​ ನಡೆಸಿದ ಭಾರತ 6 ವಿಕೆಟ್​ಗೆ 168 ರನ್​ಗಳ ಸಾಧಾರಣ ಮೊತ್ತ​ ಪೇರಿಸಿ ಸವಾಲೊಡ್ಡಿತು. ಈ ಮೊತ್ತವನ್ನು ಇಂಗ್ಲೆಂಡ್​ 16 ಓವರ್​ಗಳಲ್ಲೇ ವಿಕೆಟ್​ ನಷ್ಟವಿಲ್ಲದೆ 170 ರನ್​ ಗಳಿಸಿ ಗೆದ್ದಿತ್ತು. ಜಾಸ್​ ಬಟ್ಲರ್​(80*) ಮತ್ತು ಅಲೆಕ್ಸ್​ ಹೇಲ್ಸ್​(86*) ಅಜೇಯ ಬ್ಯಾಟಿಂಗ್​ ಆರ್ಭಟದ ಮುಂದೆ ಭಾರತೀಯ ಬೌಲರ್​ಗಳು ಸಂಪೂರ್ಣ ಮಂಕಾದರು. ಭಾರತ ಪರ ವಿರಾಟ್​ ಕೊಹ್ಲಿ ಮತ್ತು ಹಾರ್ದಿಕ್​ ಪಾಂಡ್ಯ ಅರ್ಧಶತಕ ಬಾರಿಸಿದ್ದರು. ಆದರೆ ಈ ಬಾರಿ ಕೊಹ್ಲಿ ಆಡಿದ ಎಲ್ಲ ಪಂದ್ಯಗಳಲ್ಲಿಯೂ ವಿಫಲರಾಗಿದ್ದಾರೆ. 2 ಶೂನ್ಯ ಕೂಡ ಸುತ್ತಿದ್ದಾರೆ. ಎರಡಂಕಿ ಮೊತ್ತ ಪೇರಿಸಿದ್ದು ಒಮ್ಮೆ ಮಾತ್ರ.

ಇದನ್ನೂ ಓದಿ IND vs ENG: ಭಾರತ-ಇಂಗ್ಲೆಂಡ್​ ಸೆಮಿ ಕಾದಾಟಕ್ಕೆ ಮೀಸಲು ದಿನ ಇಲ್ಲ; ಪಂದ್ಯ ರದ್ದಾದರೆ ಯಾರಾಗಲಿದ್ದಾರೆ ವಿಜೇತರು?

ಮಳೆ ಬಂದರೆ ಭಾರತಕ್ಕೆ ಲಾಭ


ಪ್ರಾವಿಡೆನ್ಸ್​ ಸ್ಟೇಡಿಯಂನಲ್ಲಿ ನಡೆಯಲಿರುವ ಇತ್ತಂಡಗಳ ನಡುವಣ ಈ ಪಂದ್ಯಕ್ಕೆ ಹವಾಮಾನ ಇಲಾಖೆ ಭಾರೀ ಮಳೆಯ ಮುನ್ಸೂಚನೆ ನೀಡಿದೆ. ಪಂದ್ಯದ ಸಮಯದಲ್ಲಿ ಮಳೆ ಸುರಿಯುವ ಸಾಧ್ಯತೆ ಶೇ. 88ರಷ್ಟಿದೆ ಎಂದು ಎಚ್ಚರಿಕೆ ನೀಡಿದೆ. ಪಂದ್ಯ ರದ್ದಾದರೂ ಅಚ್ಚರಿ ಇಲ್ಲ ಎಂದು ಹೇಳಿದೆ. ಈ ಪಂದ್ಯಕ್ಕೆ ಮೀಸಲು ದಿನವಿಲ್ಲ. ಆದರೆ, ಪಂದ್ಯ ಮುಗಿಸಲು 250 ನಿಮಿಷಗಳ ಹೆಚ್ಚುವರಿ ಸಮಯವನ್ನು ಐಸಿಸಿ ನೀಡಿದೆ. ಒಂದು ವೇಳೆ ಪಂದ್ಯ ರದ್ದುಗೊಂಡರೆ ಭಾರತ ತಂಡ ಫೈನಲ್​ಗೇರಲಿದೆ. ಏಕೆಂದರೆ ಸೂಪರ್​-8 ಅಂಕಪಟ್ಟಿಯಲ್ಲಿ ಭಾರತ ಅಗ್ರಸ್ಥಾನ ಸಂಪಾದಿಸಿದೆ. ಇಂಗ್ಲೆಂಡ್​ ಸೂಪರ್​-8 ಅಂಕಪಟ್ಟಿಯಲ್ಲಿ 2ನೇ ಸ್ಥಾನ ಗಳಿಸಿತ್ತು. ಹೀಗಾಗಿ ಈ ಲಾಭ ಭಾರತಕ್ಕೆ ಲಭಿಸಲಿದೆ.

ಜೂನ್​ 29ಕ್ಕೆ ಬ್ರಿಜ್​ಟೌನ್​ನಲ್ಲಿ ಫೈನಲ್​ ಪಂದ್ಯ ನಡೆಯಲಿದೆ. ನಿಗದಿತ ದಿನದಂದು ಪಂದ್ಯ ಪೂರ್ಣಗೊಳ್ಳಲಿದ್ದರೆ. ಪಂದ್ಯ ಎಲ್ಲಿಗೆ ನಿಂತಿರುತ್ತದೆಯೇ ಅಲ್ಲಿಂದಲೇ ಮೀಸಲು ದಿನ ಅಂದರೆ ಜೂನ್​ 30 (ಭಾನುವಾರ) ನಡೆಯಲಿದೆ. ಫೈನಲ್​ನಲ್ಲೂ ಫಲಿತಾಂಶ ನಿರ್ಧಾರಕ್ಕೆ ಉಭಯ ತಂಡಗಳು ಕನಿಷ್ಠ 10 ಓವರ್​ ಆಡಬೇಕು. ಮೀಸಲು ದಿನವೂ ಮಳೆ ಅಡ್ಡಿಪಡಿಸಿದರೆ, ಫೈನಲ್​ಗೇರಿದ ಎರಡೂ ತಂಡಗಳನ್ನು ಜಂಟಿ ಚಾಂಪಿಯನ್​ ಎಂದು ಐಸಿಸಿ ಘೋಷಿಸಲಿದೆ.

Continue Reading
Advertisement
Kenya Violence
ವಿದೇಶ3 mins ago

Kenya Violence: ಕೀನ್ಯಾದಲ್ಲಿ ಭುಗಿಲೆದ್ದ ಹಿಂಸಾಚಾರ; ಭಾರತೀಯರಿಗೆ ಎಚ್ಚರಿಕೆ ನೀಡಿದ ಹೈಕಮಿಷನ್

ಕಥೆಕೂಟ literature meet
ಕಲೆ/ಸಾಹಿತ್ಯ10 mins ago

ಕಥೆ ನಿಜ, ಕಥೆಗಾರ ಸುಳ್ಳು: ಕಥೆಕೂಟ ಸಮಾವೇಶದಲ್ಲಿ ಟಿಎನ್‌ ಸೀತಾರಾಮ್‌

CM Siddaramaiah
ಕರ್ನಾಟಕ13 mins ago

CM Siddaramaiah: ರಾಹುಲ್ ಗಾಂಧಿ ವಿಪಕ್ಷ ನಾಯಕರಾಗಿರೋದು ದೇಶದ ಹಿತದೃಷ್ಟಿಯಿಂದ ಒಳ್ಳೆಯದು ಎಂದ ಸಿಎಂ

Jayam Ravi's wife Aarti Ravi removes all her Instagram photos
ಕಾಲಿವುಡ್16 mins ago

Jayam Ravi: ಜಯಂ ರವಿ ದಾಂಪತ್ಯದಲ್ಲಿ ಬಿರುಕು? ಡಿವೋರ್ಸ್‌ ಹಾದಿಯಲ್ಲಿ ಮತ್ತೊಂದು ಸ್ಟಾರ್‌ ಜೋಡಿ!

Gold Rate Today
ಚಿನ್ನದ ದರ41 mins ago

Gold Rate Today: ಆಭರಣ ಪ್ರಿಯರಿಗೆ ಗುಡ್‌ನ್ಯೂಸ್‌; ಚಿನ್ನದ ದರ ಇಳಿಕೆ

ಕ್ರೀಡೆ45 mins ago

IND vs ENG Semi Final: ಆಂಗ್ಲರನ್ನು ಸದೆಬಡಿದು ಫೈನಲ್​ ಪ್ರವೇಶಿಸಲಿ ಭಾರತ

Rashmika Mandanna Ayushmann Khurrana Team Up For Horror Comedy
ಟಾಲಿವುಡ್51 mins ago

Rashmika Mandanna: ರಶ್ಮಿಕಾ ಇದೀಗ ಟಾಲಿವುಡ್‌ಗೆ ಬೈ ಬೈ; ಬಾಲಿವುಡ್‌ನಲ್ಲಿಯೇ ಬಿಡಾರ!

Self Harming
ಕರ್ನಾಟಕ57 mins ago

Self Harming: ಕೆಲಸದಿಂದ ತೆಗೆದು ಕಿರುಕುಳ; ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ

jewellery robbery case
ಕ್ರೈಂ58 mins ago

Robbery Case: 30 ಸೆಕೆಂಡ್‌ನಲ್ಲಿ ಇಡೀ ಜ್ಯುವೆಲ್ಲರಿ ದರೋಡೆ, ಸಿಸಿಟಿವಿಯಲ್ಲಿ ಕೃತ್ಯ ಸೆರೆ

Parineethi Chopra
Latest1 hour ago

Parineethi Chopra: ಏಳುಮಲ್ಲಿಗೆ ತೂಕದ ಚೆಲುವೆ ಪರಿಣಿತಿ ಚೋಪ್ರಾ ಸಿಕ್ಕಾಪಟ್ಟೆ ದಪ್ಪಗಾಗಿದ್ದು ಯಾಕೆ?

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ2 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ5 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ5 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ6 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 week ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 week ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 week ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 weeks ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

ಟ್ರೆಂಡಿಂಗ್‌