Australian Open : ಬೆಲಾರಸ್​ನ ಅರಿನಾ ಸಬಲೆಂಕಾ ಆಸ್ಟ್ರೇಲಿಯನ್​ ಓಪನ್ ಚಾಂಪಿಯನ್​ Vistara News
Connect with us

ಕ್ರೀಡೆ

Australian Open : ಬೆಲಾರಸ್​ನ ಅರಿನಾ ಸಬಲೆಂಕಾ ಆಸ್ಟ್ರೇಲಿಯನ್​ ಓಪನ್ ಚಾಂಪಿಯನ್​

ಕಜಕಸ್ತಾನದ ಎಲೆನಾ ರಿಬಕಿನಾ ಅವರನ್ನು ಮಣಿಸಿದ ಬೆಲಾರಸ್​ನ ಅರಿನಾ ಸಬಲೆಂಕಾ ಆಸ್ಟ್ರೇಲಿಯನ್​ ಓಪನ್ ಟ್ರೋಫಿ ಗೆದ್ದರು.

VISTARANEWS.COM


on

aryna sabalenka
Koo

ಮೆಲ್ಬೋರ್ನ್​: ವರ್ಷದ ಮೊದಲ ಗ್ರ್ಯಾನ್​ ಸ್ಲಾಮ್ ಟೂರ್ನಿ ಆಸ್ಟ್ರೇಲಿಯನ್​ ಓಪನ್​ನ (Australian Open) ಮಹಿಳೆಯ ಸಿಂಗಲ್ಸ್​ ವಿಭಾಗದ ಚಾಂಪಿಯನ್​ ಪಟ್ಟವನ್ನು ಬೆಲಾರಸ್​ನ ಅರಿನಾ ಸಬಲೆಂಕಾ (aryna sablenka) ಅಲಂಕರಿಸಿದ್ದಾರೆ. ರಾಡ್​ ಲೇವರ್ ಅರೆನಾದಲ್ಲಿ ಶನಿವಾರ ನಡೆದ ಫೈನಲ್​ ಪಂದ್ಯದಲ್ಲಿ ಅವರು 4-6, 6-3,6-4 ಸೆಟ್​ಗಳ ಅಂತರದಿಂದ ಕಜಕಸ್ತಾನದ ಎಲೆನಾ ರಿಬಕಿನಾ (Elena Rybakina) ಅವರನ್ನು ಮಣಿಸಿ ಟ್ರೋಫಿ ಮುಡಿಗೇರಿಸಿಕೊಂಡರು. ಇದು ಅರಿನಾ ಪಾಲಿನ ಮೊದಲ ಗ್ರ್ಯಾನ್​ಸ್ಲಾಮ್​ ಪ್ರಶಸ್ತಿಯಾಗಿದೆ.

ಅತ್ಯಂತ ರೋಚಕವಾಗಿ ನಡೆದ ಹಣಾಹಣಿಯಲ್ಲಿ ಮೊದಲ ಸೆಟ್​ ಗೆದ್ದ ಕಜಕಸ್ತಾನದ ಅಟಗಾರ್ತಿ ಮುಂದೆನೆರಡು ಸುತ್ತಿನಲ್ಲಿ ಬೆಲಾರಸ್​ನ ಆಟಗಾರ್ತಿಯ ಪೈಪೋಟಿ ಎದುರಿಸಲು ವಿಫಲಗೊಂಡರು. ಇವರಿಬ್ಬರ ನಡುವಿನ ಕಾದಾಟ 2 ಗಂಟೆ 28 ನಿಮಿಷಗಳ ತನಕ ನಡೆಯಿತು. ಗ್ರೌಂಡ್​ ಸ್ಟ್ರೋಕ್​ಗಳು ಹಾಗೂ ನಿರಂತರ ರ್ಯಾಲಿಗಳು ರಾಡ್​ಲೇವರ್​ ಅರೆನಾದಲ್ಲಿ ಪಂದ್ಯ ವೀಕ್ಷಿಸಲು ಬಂದಿದ್ದ ಟೆನಿಸ್​ ಅಭಿಮಾನಿಗಳಿಗೆ ರಸದೌತಣ ನೀಡಿದವು.

ಇದನ್ನೂ ಓದಿ : Australian Open 2023: ಆಸ್ಟ್ರೇಲಿಯಾ ಓಪನ್​; ಸಾನಿಯಾ ಮಿರ್ಜಾ-ಬೋಪಣ್ಣ ಜೋಡಿ ರನ್ನರ್​ ಅಪ್

ಮೊದಲ ಸೆಟ್​ 34 ನಿಮಿಷಗಳಲ್ಲಿ ಮುಕ್ತಾಯಗೊಂಡಿತು. ಆ ಸೆಟ್​ ಗೆದ್ದ ರಿಬಕಿನಾ ಪ್ರಶಸ್ತಿ ಗೆಲ್ಲುವ ಮುನ್ಸೂಚನೆ ನೀಡಿದರು. ಆದರೆ, 57 ನಿಮಿಷಗಳ ಮುಂದಿನ ಸೆಟ್​ನಲ ಹೋರಾಟದಲ್ಲಿ ಸಬಲೆಂಕಾ ಗೆಲುವು ಸಾಧಿಸಿದರು. ನಿರ್ಣಾಯ ಸೆಟ್​​ ಹೆಚ್ಚು ಪೈಪೋಟಿಯಿಂದ ಕೂಡಿತ್ತು. ಈ ಗೆಲುವಿನೊಂದಿಗೆ ಸಬಲಂಕಾ ವಿಶ್ವ ರ್ಯಾಂಕ್​ನಲ್ಲಿ ಬಡ್ತಿ ಡೆಯಲಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News Special Face Book ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
ವೈವಿಧ್ಯಮಯ ಸುದ್ದಿಗಳಿಗಾಗಿ Vistara News Twitter ಪೇಜ್ ಫಾಲೋ ಮಾಡಿ

ಕ್ರೀಡೆ

Heart Attack: ಬ್ಯಾಡ್ಮಿಂಟನ್‌ ಆಡುತ್ತಿದ್ದವನ ಬಾಳಲ್ಲಿ ಆಟವಾಡಿದ ವಿಧಿ; ಹೃದಯಾಘಾತದಿಂದ ವ್ಯಕ್ತಿ ಸಾವು

Heart Attack: ನೊಯ್ಡಾ 11ನೇ ಸೆಕ್ಟರ್‌ ನಿವಾಸಿ ಮಹೇಂದ್ರ ಶರ್ಮಾ ಅವರು ಆರೋಗ್ಯದ ಕುರಿತು ಹೆಚ್ಚಿನ ಕಾಳಜಿ ವಹಿಸುತ್ತಿದ್ದರು. ಕಳೆದ ಐದು ವರ್ಷದಿಂದ ಅವರು ನಿತ್ಯ ಬ್ಯಾಡ್ಮಿಂಟನ್‌ ಆಡುತ್ತಿದ್ದರು. ಆದರೆ, ಅವರಿಗೆ ಶನಿವಾರ ಬೆಳಗ್ಗೆ ಹೃದಯಾಘಾತವಾಗಿದೆ. ಇದಾದ ಕೆಲವೇ ನಿಮಿಷದಲ್ಲಿ ಅವರು ಮೃತಪಟ್ಟಿದ್ದಾರೆ.

VISTARANEWS.COM


on

Edited by

Man Dies Of Heart Attack In Noida
Koo

ನೊಯ್ಡಾ: ಇತ್ತೀಚೆಗೆ ಹೃದಯಾಘಾತಕ್ಕೀಡಾಗಿ, ಮೃತಪಡುತ್ತಿರುವವರ ಸಂಖ್ಯೆ ಜಾಸ್ತಿಯಾದ ಕಾರಣ ಜನರ ಬದುಕು ಮತ್ತಷ್ಟು ಅನಿಶ್ಚಿತತೆಯಿಂದ ಕೂಡಿದೆ. ನಮ್ಮೆದುರು ಚೆನ್ನಾಗಿ ಇರುವವರು ಕೆಲವೇ ಗಂಟೆಯಲ್ಲಿ ಹೃದಯಾಘಾತದಿಂದ ಸಾವಿಗೀಡಾಗುತ್ತಿರುವುದು ಭೀತಿ ಹುಟ್ಟಿಸಿದೆ. ಇದಕ್ಕೆ ನಿದರ್ಶನ ಎಂಬಂತೆ, ಉತ್ತರ ಪ್ರದೇಶದ ನೊಯ್ಡಾದಲ್ಲಿ ಬ್ಯಾಡ್ಮಿಂಟನ್‌ ಆಡುತ್ತಿರುವಾಗಲೇ ಹೃದಯಾಘಾತದಿಂದ (Heart Attack) ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.

ಸೆಕ್ಟರ್‌ 21 ಎನಲ್ಲಿರುವ ನೊಯ್ಡಾ ಸ್ಟೇಡಿಯಂನಲ್ಲಿ 52 ವರ್ಷದ ಮಹೇಂದ್ರ ಶರ್ಮಾ ಅವರು ಬ್ಯಾಡ್ಮಿಂಟನ್‌ ಆಡುತ್ತಿದ್ದರು. ಬ್ಯಾಡ್ಮಿಂಟನ್‌ ಆಡುತ್ತಿರುವಾಗಲೇ ಅವರು ಕುಸಿದುಬಿದ್ದಿದ್ದಾರೆ. ಅವರು ಕುಸಿದು ಬೀಳುತ್ತಲೇ ಸ್ಟೇಡಿಯಂನಲ್ಲಿದ್ದ ತುರ್ತು ವೈದ್ಯಕೀಯ ತಂಡ ಆಗಮಿಸಿ ತಪಾಸಣೆ ಮಾಡಿದೆ. ವೈದ್ಯರು ಮಹೇಂದ್ರ ಶರ್ಮಾ ಅವರ ಎದೆ ಒತ್ತಿ, ತಿಕ್ಕಿದ್ದಾರೆ. ಆದರೂ, ಮಹೇಂದ್ರ ಶರ್ಮಾ ಅವರು ಸುಧಾರಿಸಿಕೊಳ್ಳದ ಕಾರಣ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಹೇಂದ್ರ ಶರ್ಮಾ ಅವರನ್ನು ಆಸ್ಪತ್ರೆಗೆ ಕೊಂಡೊಯ್ಯಲಾಯಿತಾದರೂ, ಅಷ್ಟೊತ್ತಿಗಾಗಲೇ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. “ಶನಿವಾರ ಬೆಳಗ್ಗೆ 7.30ರ ಸುಮಾರಿಗೆ ಮಹೇಂದ್ರ ಶರ್ಮಾ ಅವರು ಬ್ಯಾಡ್ಮಿಂಟನ್‌ ಆಡುತ್ತಿರುವಾಗಲೇ ಕುಸಿದು ಬಿದ್ದಿದ್ದಾರೆ. ಕೂಡಲೇ ಆಂಬ್ಯುಲೆನ್ಸ್‌ನಲ್ಲಿ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಅಷ್ಟೊತ್ತಿಗಾಗಲೇ ಅವರು ಮೃತಪಟ್ಟಿದ್ದರು” ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Heart attack: 16,000 ಹೃದ್ರೋಗಿಗಳಿಗೆ ಚಿಕಿತ್ಸೆ ನೀಡಿದ್ದ ವೈದ್ಯ ಹೃದಯಾಘಾತಕ್ಕೆ ಬಲಿ

ಸೆಕ್ಟರ್‌ 11ನೇ ನಿವಾಸಿಯಾಗಿರುವ ಮಹೇಂದ್ರ ಶರ್ಮಾ ಅವರು ಕಳೆದ ಐದು ವರ್ಷದಿಂದ ಬ್ಯಾಡ್ಮಿಂಟನ್‌ ಆಡುತ್ತಿದ್ದರು. ಅಷ್ಟರಮಟ್ಟಿಗೆ ಅವರು ಆರೋಗ್ಯದ ಕಡೆ ಗಮನ ಹರಿಸುತ್ತಿದ್ದರು. ಆದರೆ, ಏಕಾಏಕಿ ಹಾರ್ಟ್‌ ಅಟಾಕ್‌ ಆಗಿ ಅವರು ಮೃತಪಟ್ಟಿರುವುದು ದುಃಖದ ವಿಚಾರ ಎಂದು ಮಹೇಂದ್ರ ಶರ್ಮಾ ಗೆಳೆಯರು ವಿಷಾದ ವ್ಯಕ್ತಪಡಿಸಿದ್ದಾರೆ. ಆದಾಗ್ಯೂ, ಇತ್ತೀಚೆಗೆ ಹೃದಯಾಘಾತದಿಂದ ಮೃತಪಡುತ್ತಿರುವವರ ಸಂಖ್ಯೆ ಹೆಚ್ಚಾಗಿದೆ. ಅದರಲ್ಲೂ, ಕಡಿಮೆ ವಯಸ್ಸಿನವರು ಹೃದಯಾಘಾತಕ್ಕೆ ಬಲಿಯಾಗುತ್ತಿರುವುದು ಆತಂಕ ಮೂಡಿಸಿದೆ.

Continue Reading

ಕ್ರಿಕೆಟ್

WTC Final : ಭಾರತದ ಗೆಲುವಿಗೆ ಇನ್ನೂ ಬೇಕು 280 ರನ್​, ಕೌತುಕದಲ್ಲಿ ವಿಶ್ವ ಟೆಸ್ಟ್​ ಚಾಂಪಿಯನ್​ಷಿಪ್​ ಫೈನಲ್​

ಭಾರತ ತಂಡದ ಬಳಿ ಏಳು ವಿಕೆಟ್​ಗಳು ಉಳಿದಿದ್ದು, ಕೊನೇ ದಿನದ 90 ಓವರ್​​ಗಳಲ್ಲಿ ವಿಕೆಟ್​ ಉಳಿಸಿಕೊಂಡು ಗೆಲುವು ಸಾಧಿಸಬೇಕಾಗಿದೆ.

VISTARANEWS.COM


on

Viat kohli WTC Final 2023
Koo

ಲಂಡನ್: ವಿಶ್ವ ಟೆಸ್ಟ್ ಚಾಂಪಿಯನ್​​ಷಿಪ್​ನ ಫೈನಲ್​ ಪಂದ್ಯ ಕುತೂಹಲಕಾರಿ ಘಟ್ಟಕ್ಕೆ ತಲುಪಿದೆ. ಪಂದ್ಯದ ನಾಲ್ಕನೇ ದಿನದ ಅಂತ್ಯಕ್ಕೆ ಎರಡನೇ ಇನಿಂಗ್ಸ್​ನಲ್ಲಿ ಬ್ಯಾಟ್​ ಮಾಡುತ್ತಿರುವ ಭಾರತ ತಂಡ 3 ವಿಕೆಟ್​ ಕಳೆದಕೊಂಡು 164 ರನ್​ ಬಾರಿಸಿದೆ. ಸ್ಪೆಷಲಿಸ್ಟ್​ ಬ್ಯಾಟರ್​​ಗಳಾದ ವಿರಾಟ್​ ಕೊಹ್ಲಿ (44) ಹಾಗೂ ಅಜಿಂಕ್ಯ ರಹಾನೆ (20 ರನ್​) ಕ್ರೀಸ್​ನಲ್ಲಿ ಉಳಿದುಕೊಂಡಿದ್ದಾರೆ. ಭಾರತ ತಂಡದ ಗೆಲುವಿಗೆ 280 ರನ್​ ಬೇಕಾಗಿದ್ದು ಕೊನೇ ದಿನ 90 ಓವರ್​​ಗಳು ಬಾಕಿ ಉಳಿದಿವೆ. ಅತ್ತ ಆಸ್ಟ್ರೇಲಿಯಾ ತಂಡವು ಭಾರತದ ಇನ್ನುಳಿದ ಏಳು ವಿಕೆಟ್​​ಗಳನ್ನು ಉರುಳಿಸುವ ನಿಟ್ಟಿನಲ್ಲಿ ಯೋಜನೆ ರೂಪಿಸಿಕೊಂಡಿದೆ.

ಇಲ್ಲಿನ ಓವಲ್​ ಮೈದಾನದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಎರಡನೇ ಇನಿಂಗ್ಸ್ ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡ 8 ವಿಕೆಟ್​ ನಷ್ಟಕ್ಕೆ 270 ರನ್​ ಬಾರಿಸಿ ಡಿಕ್ಲೇರ್​ ಮಾಡಿಕೊಂಡಿತು. 444 ರನ್​​ಗಳ ಗುರಿಯೊಂದಿಗೆ ಬ್ಯಾಟ್​ ಮಾಡಿದ ಭಾರತ ತಂಡ ಮೊದಲ ವಿಕೆಟ್​ಗೆ 41 ರನ್ ಬಾರಿಸಿತು. ರೋಹಿತ್​ ಶರ್ಮಾ (43) ಹಾಗೂ ಶುಭಮನ್​ ಗಿಲ್​ (18) ಭರವಸೆ ಮೂಡಿಸಿದರು. ಆದರೆ, ಮೂರನೇ ಅಂಪೈರ್ ನೀಡಿದ ವಿವಾದಾತ್ಮಕ ತೀರ್ಪಿನ ಬಳಿಕ ಶುಭ್​ಮನ್​ ಗಿಲ್​ ನಿರಾಸೆಯಿಂದ ಪೆವಿಲಿಯನ್​ಗೆ ಮರಳಬೇಕಾಯಿತು. ಬೋಲ್ಯಾಂಡ್ ಅವರ ಎಸೆತಕ್ಕೆ ಗ್ರೀನ್​ಗೆ ಕ್ಯಾಚ್ ನೀಡಿದ ಅವರು ಬೇಸರದಿಂದ ಹೊರಕ್ಕೆ ನಡೆದರು.

ನಂತರ ರೋಹಿತ್ ಮತ್ತು ಚೇತೇಶ್ವರ್​ ಪೂಜಾರ (27) 77 ಎಸೆತಗಳಲ್ಲಿ 51 ರನ್ ಗಳಿಸಿದರು. ನಂತರ ಇಬ್ಬರೂ ಬ್ಯಾಟ್ಸಮನ್​ಗಳು ಕೆಲವೇ ನಿಮಿಷಗಳಲ್ಲಿ ಔಟಾಗಿದ್ದಿಂದ ಭಾರತದ ಪ್ರಗತಿಗೆ ಅಡ್ಡಿಯಾಯಿತು. ರೋಹಿತ್​ ಸ್ವೀಪ್​ ಮಾಡಲು ಹೋಗಿ ನೇಥನ್​ ಲಯಾನ್​ ಎಸೆತಕ್ಕೆ ಎಲ್​ಬಿಡಬ್ಲ್ಯು ಆಡದರೆ, ಕಮಿನ್ಸ್ ಎಸೆತಕ್ಕೆ ಅನಗತ್ಯ ರನ್​ ಬಾರಿಸಲು ಮುಂದಾದ ಪೂಜಾರ ವಿಕೆಟ್​ ಕೀಪರ್​ಗೆ ಕ್ಯಾಚ್ ನೀಡಿ ನಿರ್ಗಮಿಸಿದರು. ನಾಲ್ಕನೇ ವಿಕೆಟ್​ಗೆ ವಿರಾಟ್ ಕೊಹ್ಲಿ ಮತ್ತು ಅಜಿಂಕ್ಯ ರಹಾನೆ ಆಗಿರುವ ಉಂಟಾದ ಹಾನಿಯನ್ನು ಸರಿಪಡಿಸಿದ್ದಾರೆ. ಜೊತೆಯಾಟವು 50 ರನ್​ಗಳ ಗಡಿ ದಾಟಿದೆ. ಇದೀಗ ಡಬ್ಲ್ಯುಟಿಸಿ ಫೈನಲ್ ಪಂದ್ಯವನ್ನು ಗೆಲ್ಲಲು ಭಾರತವು ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ಯಶಸ್ವಿ ರನ್ ಚೇಸ್ ಮಾಡಿದ ದಾಖಲೆಯನ್ನು ಮುರಿಯಬೇಕಾಗಿದೆ.

ಇದನ್ನೂ ಓದಿ: WTC Final 2023 : ಲೆಜೆಂಡ್​ ಸಚಿನ್​ ತೆಂಡೂಲ್ಕರ್​ ದಾಖಲೆ ಮುರಿದ ರೋಹಿತ್​ ಶರ್ಮಾ

ಅಲೆಕ್ಸ್ ಕ್ಯೇರಿ ಅರ್ಧ ಶತಕ

ಮೂರನೇ ದಿನದಾಟದ ಅಂತ್ಯಕ್ಕೆ 123 ರನ್​ಗಳಿಗೆ 4 ವಿಕೆಟ್​ ಕಳೆದುಕೊಂಡಿದ್ದ ಆಸ್ಟ್ರೇಲಿಯಾ, ನಾಲ್ಕನೇ ದಿನದ ಮೊದಲ ಸೆಶನ್​ನಲ್ಲಿ ವಿಕೆಟ್​ಗಳನ್ನು ಕಳೆದುಕೊಂಡಿತು. ಮರ್ನಸ್​ ಲಾಬುಶೇನ್​ ಆರಂಭದಲ್ಲಿಯೇ ವಿಕೆಟ್​ ಒಪ್ಪಿಸಿದರು. ಆದರೆ ಏಳನೆ ವಿಕೆಟ್​ಗೆ ಅಲೆಕ್ಸ್​ ಕ್ಯೇರಿ (ಅಜೇಯ 66) ಹಾಗೂ ಮಿಚೆಲ್ ಸ್ಟಾರ್ಕ್​ (41) 93 ರನ್ ಜತೆಯಾಟ ನೀಡುವ ಮೂಲಕ ಭಾರತ ತಂಡಕ್ಕೆ ದೊಡ್ಡ ಗುರಿಯನ್ನು ಒಡ್ಡಲು ನೆರವಾದರು. ಅದಕ್ಕಿಂತ ಮೊದಲು ಸ್ಮಿತ್ (34) ಹಾಗೂ ಟ್ರಾವಿಡ್​ ಹೆಡ್​ (18) ಆಸ್ಟ್ರೇಲಿಯಾ ತಂಡಕ್ಕೆ ಸಣ್ಣ ಕೊಡುಗೆ ಕೊಟ್ಟರು.

Continue Reading

ಕ್ರೀಡೆ

ಡೈಮಂಡ್​ ಲೀಗ್​ನಲ್ಲಿ ಪದಕ ಗೆದ್ದ ಮುರಳಿ, ಲಾಂಗ್​ ಜಂಪ್​ನಲ್ಲಿ ಭಾರತ ಪರ ನೂತನ ದಾಖಲೆ

ಭಾರತದ ಪರ ಡೈಮಂಡ್​ ಲೀಗ್​ ಸ್ಪರ್ಧೆಯ ಲಾಂಗ್​ ಜಂಪ್​​ನಲ್ಲಿ ಪದಕ ಗೆದ್ದ ಮೊದಲ ಭಾರತೀಯ ಎನಿಸಕೊಂಡಿದ್ದಾರೆ ಮುರಳಿ ಶ್ರೀಶಂಕರ್​.

VISTARANEWS.COM


on

Murali Sreeshankar
Koo

ನವ ದೆಹಲಿ: ಭಾರತದ ಅಗ್ರಮಾನ್ಯ ಲಾಂಗ್ ಜಂಪರ್ ಮುರಳಿ ಶ್ರೀಶಂಕರ್ ಪ್ಯಾರೀಸ್​ನಲ್ಲಿ ನಡೆಯುತ್ತಿರುವ ಡೈಮಂಡ್​ ಲೀಗ್​ನಲ್ಲಿ ಕಂಚಿನ ಪದಕ ಗೆದ್ದಿದ್ದಾರೆ. ಸ್ಪರ್ಧೆಯ ಅಂತಿಮ ಸುತ್ತಿನಲ್ಲಿ 8.09 ಮೀಟರ್ ಜಿಗಿದ ಅವರು ಮೂರನೇ ಸ್ಥಾನ ಗಿಟ್ಟಿಸಿಕೊಂಡರು. ಈ ಮೂಲಕ ಡೈಮಂಡ್​ ಲೀಗ್​ನಲ್ಲಿ ಭಾರತದ ಪರ ಪದಕದ ಗೆದ್ದ ಮೊದಲ ಲಾಂಗ್​ ಜಂಪರ್ ಎಂಬ ಖ್ಯಾತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ.

ಒಲಿಂಪಿಕ್ ಚಾಂಪಿಯನ್ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಮತ್ತು ಮಾಜಿ ಡಿಸ್ಕಸ್ ಎಸೆತಗಾರ ವಿಕಾಸ್ ಗೌಡ ಭಾರತ ಪರ ಡೈಮಂಡ್ ಲೀಗ್​ನಲ್ಲಿ ಪದಕ ಗೆದ್ದ ಭಾರತೀಯರಾಗಿದ್ದರು. ಇದೀಗ ಮೂರನೆಯವರಾಗಿ ಸಾಧನೆ ಮಾಡಿದ್ದಾರೆ ಮುರಳಿ ಶ್ರೀಶಂಕರ್​. ಕಾಮನ್ವೆಲ್ತ್ ಗೇಮ್ಸ್ ಕೂಟದಲ್ಲಿ ಬೆಳ್ಳಿ ಪದಕ ಗೆದ್ದಿದ್ದ ಶ್ರೀಶಂಕರ್ ಶುಕ್ರವಾರ ರಾತ್ರಿ ತಮ್ಮ ಮೂರನೇ ಪ್ರಯತ್ನದಲ್ಲಿ ದಿನದ ಅತ್ಯುತ್ತಮ ಜಿಗಿತವನ್ನು ಸಾಧಿಸಿ ಪದಕ ಗೆದ್ದರು.

ಕಳೆದ ತಿಂಗಳು ಗ್ರೀಸ್​ನಲ್ಲಿ ನಡೆದ ಸ್ಪರ್ಧೆಯಲ್ಲಿ ಚಿನ್ನ ಗೆದ್ದಾಗ ಮರಳಿ ಅತ್ಯುತ್ತಮ 8.18 ಮೀಟರ್ ದೂರ ಜಿಗಿದಿದ್ದರು. ಡೈಮಂಡ್ ಲೀಗ್​ನ ಅವ 8.09 ಮೀಟರ್ ಪ್ರಯತ್ನ ಅದಕ್ಕೆ ಹತ್ತಿರವಾಗಿಲ್ಲ. ಅಂತೆಯೇ 24ರ ಹರೆಯದ ಈ ಲಾಂಗ್​ ಜಂಪರ್​ ಪ್ರತಿಭೆ ಕಳೆದ ವರ್ಷ 8.36 ಮೀಟರ್ ಜಿಗಿದು ವೈಯಕ್ತಿಕ ಶ್ರೇಷ್ಠ ಸಾಧನೆ ಮಾಡಿದ್ದರು.

ಒಲಿಂಪಿಕ್ ಚಾಂಪಿಯನ್ ಮತ್ತು ವಿಶ್ವದ ನಂ.1 ಲಾಂಗ್ ಜಂಪ್​ ಪಟು ಗ್ರೀಸ್​​ನ ಮಿಲ್ಟಿಯಾಡಿಸ್ ಟೆಂಟೊಗ್ಲೋ ಅವರು ಐದನೇ ಸುತ್ತಿನಲ್ಲಿ 8.13 ಮೀಟರ್ ಜಿಗಿತದೊಂದಿಗೆ ಅಗ್ರ ಸ್ಥಾನ ಪಡೆದರು. ವಿಶ್ವ ಚಾಂಪಿಯನ್​ಷಿಪ್​ನ ಕಂಚಿನ ಪದಕ ವಿಜೇತ ಸ್ವಿಟ್ಜರ್ಲೆಂಡ್​ನ ಸೈಮನ್ ಎಹಮ್ಮರ್ ನಾಲ್ಕನೇ ಸುತ್ತಿನಲ್ಲಿ 8.11 ಮೀಟರ್ ಜಿಗಿತದೊಂದಿಗೆ ಎರಡನೇ ಸ್ಥಾನ ಪಡೆದರು.

ಇಲ್ಲಿನ ಚಾರ್ಲೆಟಿ ಸ್ಟೇಡಿಯಂನಲ್ಲಿ ನಡೆದ ಸ್ಪರ್ಧೆಯಲ್ಲಿ ಶ್ರೀಶಂಕರ್ ಮೊದಲೆರಡು ಜಿಗಿತದಲ್ಲಿ 7.79 ಮೀ, 7.94 ಮೀ ದಾಖಲೆ ಮಾಡಿದರು. ಕ್ಯೂಬಾದ ಒಲಿಂಪಿಕ್ ಕಂಚಿನ ಪದಕ ವಿಜೇತ ಮೇಕೆಲ್ ಮಾಸೊ (7.83 ಮೀಟರ್) ಮತ್ತು ಸ್ವೀಡನ್​​ನ ವಿಶ್ವ 4ನೇ ಶ್ರೇಯಾಂಕದ ಸ್ಪರ್ಧಿ ಥೋಬಿಯಾಸ್ ಮಾಂಟ್ಲರ್ (7.82 ಮೀಟರ್) ಅವರನ್ನು ಮುರಳಿ ಹಿಂದಕ್ಕಿದರು.

ನೀರಜ್​ ಚೋಪ್ರಾ ಸಾಧನೆ

ಕಳೆದ ಸೆಪ್ಟೆಂಬರ್​​ನಲ್ಲಿ ಜ್ಯೂರಿಚ್​​ನಲ್ಲಿ ನಡೆದ ಫೈನಲ್ಸ್ ಗೆದ್ದ ನಂತರ ಒಲಿಂಪಿಕ್ ಚಾಂಪಿಯನ್ ಚೋಪ್ರಾ ಜಾವೆಲಿನ್ ಎಸೆತದಲ್ಲಿ ಹಾಲಿ ಡೈಮಂಡ್ ಲೀಗ್ ಚಾಂಪಿಯನ್ ಆಗಿದ್ದರು ಕಳೆದ ತಿಂಗಳು ದೋಹಾದಲ್ಲಿ ನಡೆದ ಋತುವಿನ ಆರಂಭಿಕ ಹಂತವನ್ನು ಗೆಲ್ಲುವ ಮೊದಲು ಅವರು ಲೌಸೆನ್​ನಲ್ಲಿ ಅಗ್ರಸ್ಥಾನದಲ್ಲಿದ್ದರು.2012ರಲ್ಲಿ ನ್ಯೂಯಾರ್ಕ್ ಹಾಗೂ 2014ರಲ್ಲಿ ದೋಹಾದಲ್ಲಿ ಎರಡನೇ ಸ್ಥಾನ ಪಡೆದಿದ್ದರೆ, 2015ರಲ್ಲಿ ಶಾಂಘೈ ಮತ್ತು ಯೂಜೀನ್ ನಲ್ಲಿ ಮೂರನೇ ಸ್ಥಾನ ಪಡೆದಿದ್ದರು.

ಇದನ್ನೂ ಓದಿ : WTC Final 2023 : ಲೆಜೆಂಡ್​ ಸಚಿನ್​ ತೆಂಡೂಲ್ಕರ್​ ದಾಖಲೆ ಮುರಿದ ರೋಹಿತ್​ ಶರ್ಮಾ

ವೈಯಕ್ತಿಕ ಡೈಮಂಡ್ ಲೀಗ್ ಸ್ಪರ್ಧೆಗಳಿಗೆ ಪದಕಗಳನ್ನು ನೀಡಲಾಗುವುದಿಲ್ಲ. ಆದಾಗ್ಯೂ ಡೈಮಂಡ್ ಲೀಗ್ ಸ್ಪರ್ಧೆಯಲ್ಲಿ ಶ್ರೀಶಂಕರ್ ಅವರ ಎರಡನೇ ಪ್ರವೇಶ ಇದಾಗಿದೆ. ಕಳೆದ ವರ್ಷ ಮೊನಾಕೊ ಚರಣದಲ್ಲಿ ಆರನೇ ಸ್ಥಾನ ಪಡೆದಿದ್ದರು. ಸೆಪ್ಟೆಂಬರ್​​ನಲ್ಲಿ ಅಮೆರಿಕದ ಯೂಜಿನ್​ನಲ್ಲಿ ನಡೆಯಲಿರುವ ಋತುವಿನ ಡೈಮಂಡ್ ಲೀಗ್​ಗೆ ಮುರಳಿ ಆರು ಅರ್ಹತಾ ಅಂಕಗಳನ್ನು ಗಿಟ್ಟಿಸಿಕೊಂಡಿದ್ದಾರೆ. .

ಈ ಗೆಲುವಿನ ಮೂಲಕ ಅವರು ಆಗಸ್ಟ್​​ನಲ್ಲಿ ಹಂಗರಿಯ ಬುಡಾಪೆಸ್ಟ್​ನಲ್ಲಿ ನಡೆಯಲಿರುವ ವಿಶ್ವ ಚಾಂಪಿಯನ್​​ಷಿಪ್​​ ಅರ್ಹತೆ ಪಡೆಯುವ ಪ್ರಯತ್ನದಲ್ಲಿ ಅವರು ಮೌಲ್ಯಯುತ ಶ್ರೇಯಾಂಕ ಅಂಕಗಳನ್ನು ಪಡೆಯಲಿದ್ದಾರೆ. ಕಳೆದ ಒಂದು ತಿಂಗಳಿನಿಂದ ಗ್ರೀಸ್​ನಲ್ಲಿ ತರಬೇತಿ ಪಡೆಯುತ್ತಿರುವ ಶ್ರೀಶಂಕರ್​ ವಿಶ್ವ ಚಾಂಪಿಯನ್ ಶಿಪ್ನ​ ನೇರ ಅರ್ಹತೆಯ ಮಾನದಂಡವಾದ 8.25 ಮೀ ಅನ್ನು ಇನ್ನೂ ಸಾಧಿಸಿಲ್ಲ. ಜುಲೈ 30ರ ಈ ಅರ್ಹತೆಗೆ ಗಡುವಾಗಿದೆ.

ಬುಡಾಪೆಸ್ಟ್ ಟೂರ್ನಿಯ ಶ್ರೇಯಾಂಕದಲ್ಲಿ ಅವರು 20ನೇ ಸ್ಥಾನದಲ್ಲಿರುವುದರಿಂದ ಅವರು ಇನ್ನೂ ವಿಶ್ವ ಶ್ರೇಯಾಂಕದ ಮೂಲಕ ಅರ್ಹತೆ ಪಡೆಯಬಹುದು. ವಿಶ್ವ ಅಥ್ಲೆಟಿಕ್ಸ್ ಸಿದ್ಧಪಡಿಸಿದ ಋತುವಿನ ಅಗ್ರ ಪಟ್ಟಿಯಲ್ಲಿ ಪ್ರಸ್ತುತ ಎರಡನೇ ಸ್ಥಾನದಲ್ಲಿರುವ ಜೆಸ್ವಿನ್ ಆಲ್ಡ್ರಿನ್, ಮಾರ್ಚ್​​ನಲ್ಲಿ ಬಳ್ಳಾರಿಯಲ್ಲಿ ನಡೆದ ಇಂಡಿಯನ್ ಓಪನ್ ಜಂಪ್ಸ್ ಸ್ಪರ್ಧೆಯಲ್ಲಿ 8.42 ಮೀಟರ್ ರಾಷ್ಟ್ರೀಯ ದಾಖಲೆ ಮುರಿಯುವ ಪ್ರಯತ್ನದೊಂದಿಗೆ ಈಗಾಗಲೇ ವಿಶ್ವ ಚಾಂಪಿಯಶಿಪ್​ಗೆ ಅರ್ಹತೆ ಪಡೆದಿದ್ದಾರೆ. ಜೂನ್ 15 ರಿಂದ 19ರವರೆಗೆ ಭುವನೇಶ್ವರದಲ್ಲಿ ನಡೆಯಲಿರುವ ರಾಷ್ಟ್ರೀಯ ಅಂತಾರಾಜ್ಯ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ನಲ್ಲಿ ಶ್ರೀಶಂಕರ್ ಸ್ಪರ್ಧಿಸಲಿದ್ದಾರೆ.

Continue Reading

ಕ್ರಿಕೆಟ್

WTC FInal : ಚೀಟರ್​, ಚೀಟರ್​… ಗಿಲ್​ಗೆ ಔಟ್​ ನೀಡಿದ ಅಂಪೈರ್​ ವಿರುದ್ಧ ಅಭಿಮಾನಿಗಳ ಕಿಡಿ

ಶುಭ್​ಮನ್​ ಗಿಲ್​ಗೆ ಔಟ್​ ನೀಡಿರುವ ಮೂರನೇ ಅಂಪೈರ್​ ನಿರ್ಧಾರ ಸರಿಯಿಲ್ಲ ಎಂದು ರೋಹಿತ್​ ಶರ್ಮಾ ಸ್ಥಳದಲ್ಲೇ ಅಸಮಾಧಾನ ವ್ಯಕ್ತಪಡಿಸಿದರು

VISTARANEWS.COM


on

Shubhman GIll Wicket
Koo

ಲಂಡನ್​: ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವಿನ ವಿಶ್ವ ಟೆಸ್ಟ್ ಚಾಂಪಿಯನ್​ಷಿಪ್​ ಪಂದ್ಯ ಅಂತಿಮ ಘಟಕ್ಕೆ ತಲುಪಿದೆ. ಪಂದ್ಯ ಬಹುತೇಕ ಪ್ಯಾಟ್​ ಕಮಿನ್ಸ್​ ನೇತೃತ್ವದ ಆಸ್ಟ್ರೇಲಿಯಾ ತಂಡದ ಬಿಗಿ ಹಿಡಿತದಲ್ಲಿದೆ. ಆದಾಗ್ಯೂ ಪಂದ್ಯದ ಫಲಿತಾಂಶದ ಬಗ್ಗೆ ಕುತೂಹಲ ಮೂಡಿದೆ. ಇವೆಲ್ಲದರ ನಡುವೆ ಭಾರತ ತಂಡದ ಎರಡನೇ ಇನಿಂಗ್ಸ್​ ಬ್ಯಾಟಿಂಗ್ ವೇಳೆ ಥರ್ಡ್​ ಅಂಪೈರ್​ ನೀಡಿದ ತೀರ್ಪೊಂದು ವಿವಾದಕ್ಕೆ ಕಾರಣವಾಗಿದೆ. ಭಾರತೀಯ ಕ್ರಿಕೆಟ್​ ಅಭಿಮಾನಿಗಳಂತೂ ಇದು ಮೋಸದಾಟ ಎಂಬುದಾಗಿ ದೂರಿದ್ದಾರೆ.

444 ರನ್​ಗಳ ಗುರಿ ಬೆನ್ನಟ್ಟಿದ್ದ ಟೀಮ್ ಇಂಡಿಯಾ ತನ್ನ ಎರಡನೇ ಇನ್ನಿಂಗ್ಸ್ ಅನ್ನು ಉತ್ತಮವಾಗಿ ಆರಂಭಿಸಿತು. ರೋಹಿತ್ ಶರ್ಮಾ ಮತ್ತು ಶುಬ್ಮನ್ ಗಿಲ್ ಇಬ್ಬರೂ ಉತ್ತಮ ಆರಂಭ ತಂದುಕೊಟ್ಟರು. ಆದಾಗ್ಯೂ ಸ್ಕಾಟ್ ಬೋಲ್ಯಾಂಡ್ ಮತ್ತೊಮ್ಮೆ ಯಶ್ಸಸ್ಸು ಸಾಧಿಸುವ ಮೂಲಕ ಶುಭ್​ಮನ್ ಗಿಲ್​ ಅವರನ್ನು ಔಟ್​ ಮಾಡಿದರು.19 ಎಸೆತಕ್ಕೆ 18 ರನ್​ ಬಾರಿಸಿದ್ದ ಅವರು ಕ್ಯಾಮೆರಾನ್​ ಗ್ರೀನ್​ ಹಿಡಿದ ಅದ್ಭುತ ಕ್ಯಾಚ್​ಗೆ ಬಲಿಯಾದರು.

ಇನಿಂಗ್ಸ್​ನ ಎಂಟನೇ ಓವರ್​ನ ಮೊದಲ ಎಸೆತದಲ್ಲಿ ಚೆಂಡನ್ನು ನೇರವಾಗಿ ಕ್ಯಾಮರೂನ್ ಗ್ರೀನ್ ಅವರ ಕೈಗೆ ಸೇರಿತು. ಆದರೆ ಡೈವ್​ ಮಾಡಿ ಅವರು ಹಿಡಿದ ಕ್ಯಾಚ್ ಅನುಮಾನಾಸ್ಪಾದವಾಗಿತ್ತು. ಹೀಗಾಗಿ ಫೀಲ್ಡ್​ ಅಂಪೈರ್​ಗಳು ಟಿವಿ ಅಂಪೈರ್​ಗಳಿಗೆ ನಿರ್ಧಾರ ಪ್ರಕಟಿಸುವಂತೆ ಕೋರಿದರು. ಮೊದಲೆರಡು ಕೋನಗಳಲ್ಲಿ ಪರೀಕ್ಷಿಸಿದಾಗ ಚೆಂಡು ನೆಲಕ್ಕೆ ತಗುಲಿದಂತೆ ಕಂಡಿತು. ಹೀಗಾಗಿ ಭಾರತೀಯ ಪ್ರೇಮಿಗಳು ಸಂಭ್ರಮ ಪಟ್ಟರು. ಆದರೆ, ಇನ್ನೊಂದು ಕೋನದಲ್ಲಿ ನೋಡುವಾಗ ಚೆಂಡಿನ ಕೆಳಗೆ ಬೆರಳಿದ್ದಂತೆ ಕಂಡಿತು. ಆದರೆ, ಮೂರನೇ ಅಂಪೈರ್​ ಔಟ್​ ತೀರ್ಪು ನೀಡಿದರು.

ಮೂರನೇ ಅಂಪೈರ್ ತೀರ್ಮಾನಕ್ಕೆ ನಾಯಕ ರೋಹಿತ್​ ಶರ್ಮಾ ಅವರು ಸ್ಥಳದಲ್ಲೇ ಅಸಮಾಧಾನ ವ್ಯಕ್ತಪಡಿಸಿದರು. ಇದು ಮುಂದುವರಿದರು ಸಾಮಾಜಿಕ ಜಾಲ ತಾಣಗಳಲ್ಲಿ ಇದರ ಕುರಿತು ಭರ್ಜರಿ ಚರ್ಚೆಗಳು ಆರಂಭಗೊಂಡವು. ಭಾರತೀಯ ಪ್ರೇಮಿಗಳಂತೂ ಇದು ಮೋಸದಾಟ ಎಂಬುದಾಗಿ ಜರೆದರು. ಅಂಪೈರ್​ಗಳು ಆಸ್ಟ್ರೇಲಿಯಾ ಪರವಾಗಿ ಅನವಶ್ಯಕ ತೀರ್ಪು ನೀಡಿದ್ದಾರೆ ಎಂಬುದಾಗಿ ಅವರು ಆರೋಪಿಸಿದರು.

ಇದನ್ನೂ ಓದಿ : WTC Final 2023 : ಲೆಜೆಂಡ್​ ಸಚಿನ್​ ತೆಂಡೂಲ್ಕರ್​ ದಾಖಲೆ ಮುರಿದ ರೋಹಿತ್​ ಶರ್ಮಾ

ಇಬ್ಬರೂ ಆರಂಭಿಕ ಆಟಗಾರರು ಇನ್ನಿಂಗ್ಸ್​​ಗೆ ಸಕಾರಾತ್ಮಕ ಆರಂಭ ನೀಡಿದ್ದರಿಂದ ಈ ಔಟ್ ಭಾರತಕ್ಕೆ ದೊಡ್ಡ ಹಿನ್ನಡೆ ಉಂಟು ಮಾಡಿತು ದಿ ಓವಲ್​ನಲ್ಲಿ ಎದುರಾದ 444 ರನ್​ಗಳ ಚೇಸಿಂಗ್​​ನಲ್ಲಿ ರೋಹಿತ್ ಅಜೇಯ 22 ರನ್ ಗಳಿಸಿದರು .

ಕುತೂಹಲಕಾರಿ ಸಂಗತಿಯೆಂದರೆ, ಬೋಲ್ಯಾಂಡ್ ಮೊದಲ ಇನ್ನಿಂಗ್ಸ್​ನಲ್ಲಿ ಗಿಲ್ ಅವರನ್ನು ಔಟ್ ಮಾಡಿದ್ದರು. ಆಫ್-ಸ್ಟಂಪ್​​ನ ಹೊರಗೆ ಎಸೆದ ಚೆಂಡನ್ನು ಮುಟ್ಟಲು ಹೋಗಿ ಗಿಲ್​ ವಿಕೆಟ್​ ಒಪ್ಪಿಸಬೇಕಾಯಿತು.

Continue Reading
Advertisement
Sphoorti Salu
ಸುವಚನ1 hour ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Horoscope Today
ಪ್ರಮುಖ ಸುದ್ದಿ1 hour ago

Horoscope Today: ಈ ರಾಶಿಯವರ ಕುಟುಂಬದಲ್ಲಿ ಭಿನ್ನಾಭಿಪ್ರಾಯ ಮೂಡುವ ಸಾಧ್ಯತೆ, ಎಚ್ಚರ ಇರಲಿ!

Hindu janajagruti samiti pressmeet
ಕರ್ನಾಟಕ6 hours ago

ಜೂ.16 ರಿಂದ 22ರವರೆಗೆ ಗೋವಾದಲ್ಲಿ ‘ವೈಶ್ವಿಕ ಹಿಂದು ರಾಷ್ಟ್ರ ಮಹೋತ್ಸವʼ

Man Dies Of Heart Attack In Noida
ಕ್ರೀಡೆ6 hours ago

Heart Attack: ಬ್ಯಾಡ್ಮಿಂಟನ್‌ ಆಡುತ್ತಿದ್ದವನ ಬಾಳಲ್ಲಿ ಆಟವಾಡಿದ ವಿಧಿ; ಹೃದಯಾಘಾತದಿಂದ ವ್ಯಕ್ತಿ ಸಾವು

Digital Payment
ಪ್ರಮುಖ ಸುದ್ದಿ7 hours ago

ವಿಸ್ತಾರ ಸಂಪಾದಕೀಯ: ಡಿಜಿಟಲ್ ಪಾವತಿಯಲ್ಲಿ ಭಾರತ ನಂ.1, ಭಾರತೀಯರ ಪ್ರೌಢಿಮೆಗೆ ಇದು ಸಾಕ್ಷಿ

aamir khan to act in rajamouli movie
ಸಿನಿಮಾ7 hours ago

Aamir Khan : ದಕ್ಷಿಣ ಭಾರತ ಸಿನಿಮಾದಲ್ಲಿ ವಿಲನ್‌ ಆಗ್ತಾರಂತೆ ಬಾಲಿವುಡ್‌ನ ಮಿಸ್ಟರ್‌ ಪರ್ಫೆಕ್ಟ್‌ ಆಮೀರ್ ಖಾನ್‌!

Minister Pralhad Joshi
ಕರ್ನಾಟಕ7 hours ago

ಹುಬ್ಬಳ್ಳಿ ಏರ್‌ಪೋರ್ಟ್‌ ವಿಸ್ತರಣೆಗೆ 273 ಕೋಟಿ ರೂ.; ಕೇಂದ್ರಕ್ಕೆ ಪ್ರಲ್ಹಾದ್‌ ಜೋಶಿ ಧನ್ಯವಾದ

Viat kohli WTC Final 2023
ಕ್ರಿಕೆಟ್7 hours ago

WTC Final : ಭಾರತದ ಗೆಲುವಿಗೆ ಇನ್ನೂ ಬೇಕು 280 ರನ್​, ಕೌತುಕದಲ್ಲಿ ವಿಶ್ವ ಟೆಸ್ಟ್​ ಚಾಂಪಿಯನ್​ಷಿಪ್​ ಫೈನಲ್​

Debt Under Narendra Modi Government
ದೇಶ7 hours ago

Narendra Modi: 14 ಪ್ರಧಾನಿಗಳು ಮಾಡಿದ್ದ ಸಾಲ 55 ಲಕ್ಷ ಕೋಟಿ ರೂ., ಮೋದಿ ಒಬ್ಬರೇ ಮಾಡಿದ ಸಾಲವೆಷ್ಟು?

murder case accused tippayya
ಕರ್ನಾಟಕ8 hours ago

Bellary News: ಪತ್ನಿ, ಮಕ್ಕಳು ಸೇರಿ ಐವರನ್ನು ಕೊಂದವನಿಗೆ ಮರಣ ದಂಡನೆ

7th Pay Commission
ನೌಕರರ ಕಾರ್ನರ್7 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ4 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Sphoorti Salu
ಸುವಚನ1 day ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Govt employees ssociation
ಕರ್ನಾಟಕ4 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

Village Accountant Recruitment
ಉದ್ಯೋಗ4 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike Order from Govt
ನೌಕರರ ಕಾರ್ನರ್3 months ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ6 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

Teacher Transfer
ನೌಕರರ ಕಾರ್ನರ್8 months ago

ಸೇವಾ ನಿರತ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ; ಸದ್ಯವೇ ಸರ್ಕಾರದಿಂದ ಗುಡ್‌ ನ್ಯೂಸ್‌?

7th Pay Commission
ಕರ್ನಾಟಕ7 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

smartphone
ವಾಣಿಜ್ಯ2 months ago

Mobile export : ಭಾರತದಿಂದ 2022-23ರಲ್ಲಿ 85,000 ಕೋಟಿ ರೂ. ಮೊಬೈಲ್‌ ಫೋನ್‌ ರಫ್ತು

Autodrivers oppose free bus service
ಕರ್ನಾಟಕ13 hours ago

Free Bus Service: ನನ್ ಒಂದೇ ಓಟಲ್ಲ ಸ್ವಾಮಿ, ನಮ್ ಫ್ಯಾಮಿಲಿದೆಲ್ಲ ಇದೆ ಹುಷಾರ್: ಸಿದ್ದರಾಮಯ್ಯಗೆ ಆಟೋ ಡ್ರೈವರ್‌ ವಾರ್ನಿಂಗ್‌

accident in kerala
ವೈರಲ್ ನ್ಯೂಸ್18 hours ago

Viral Video: ಬಸ್ಸು ಮತ್ತು ಲಾರಿ ಮಧ್ಯೆ ಸ್ಕೂಟರ್‌ ಅಪ್ಪಚ್ಚಿ, ಸವಾರರ ಕಣ್ ಮುಂದೆ ಯಮ ರಪ್ ಅಂತ ಪಾಸ್ ಆದ!

Cancellation of tenders for 108 ambulances and Dinesh Gundu rao
ಆರೋಗ್ಯ2 days ago

Dinesh Gundu Rao: ಬಿಜೆಪಿ ಅವಧಿಯ 108 ಆಂಬ್ಯುಲೆನ್ಸ್‌, ಡಯಾಲಿಸಿಸ್‌ ಟೆಂಡರ್‌ ರದ್ದು; ಆರೋಗ್ಯ ಇಲಾಖೆಯಲ್ಲಿ ಮೇಜರ್‌ ಸರ್ಜರಿ

Meghalaya Villagers Chase Bangladesh soldiers
ದೇಶ2 days ago

Viral Video : ಗಡಿ ದಾಟಿ ಭಾರತಕ್ಕೆ ನುಗ್ಗಿದ ಬಾಂಗ್ಲಾ ಯೋಧರು! ಅಟ್ಟಾಟಿಸಿಕೊಂಡು ಒದ್ದೋಡಿಸಿದ ಹಳ್ಳಿಗರು

snake mate in chamarajnagar 2
ಕರ್ನಾಟಕ2 days ago

Video Viral: ಚಾಮರಾಜನಗರದಲ್ಲಿ ಹಾವುಗಳ ಮಿಲನ; ಗಂಟೆಗೂ ಹೆಚ್ಚು ಸರಸ ಸಲ್ಲಾಪ! ವೈರಲ್‌ ಆಯ್ತು ವಿಡಿಯೊ

Rain in mangalore
ಉಡುಪಿ2 days ago

Rain News: ಬಿಪರ್‌ಜಾಯ್‌ ಸೈಕ್ಲೋನ್ ಎಫೆಕ್ಟ್‌; ಮಂಗಳೂರಲ್ಲಿ ಚಿಟಪಟ ಮಳೆ

Rain in koppal
ಉಡುಪಿ2 days ago

Weather Report: ಕರಾವಳಿಯಲ್ಲಿ ಗುಡುಗಲಿರುವ ಮಳೆ; ಮಲೆನಾಡು, ಒಳನಾಡಲ್ಲಿ ಹೇಗಿರಲಿದೆ ಪ್ರಭಾವಳಿ

youths rescued in Kaveri river
ಕರ್ನಾಟಕ2 days ago

Video Viral: ತಲಕಾಡಿನ ಕಾವೇರಿ ನದಿ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಮೂವರು ಯುವಕರ ರಕ್ಷಣೆ!

Elephant attack in muttunga wildlife sanctuary
ಕರ್ನಾಟಕ3 days ago

Viral Video: ವನ್ಯಧಾಮದಲ್ಲಿ ಮೂತ್ರಕ್ಕೆಂದು ಕಾಡಿಗೆ ಹೋದ; ಆನೆ ದಾಳಿಗೆ ಹೆದರಿ ಪ್ಯಾಂಟ್‌ ಹಿಡಿದು ಓಡೋಡಿ ಬಂದ!

abhishek ambareesh wedding Reception
ಕರ್ನಾಟಕ3 days ago

Abhishek Ambareesh Reception: ಅಭಿ- ಅವಿವ ಅದ್ಧೂರಿ ಆರತಕ್ಷತೆ; ಲೈವ್‌ ವಿಡಿಯೊ ಇಲ್ಲಿದೆ

ಟ್ರೆಂಡಿಂಗ್‌

error: Content is protected !!