Site icon Vistara News

Arshdeep Singh : ಫೈನಲ್​ ಪಂದ್ಯದಲ್ಲಿ ಅರ್ಶ್​ದೀಪ್​ ಸಿಂಗ್​ಗೆ ಇದೆ ದಾಖಲೆ ಬರೆಯುವ ಅವಕಾಶ

Arshdeep Singh

ಬೆಂಗಳೂರು : ಭಾರತ ತಂಡದ ಎಡಗೈ ವೇಗಿ ಅರ್ಶ್​ದೀಪ್​ ಸಿಂಗ್​ಗೆ (Arshdeep Singh) 2024 ರ ಟಿ 20 ವಿಶ್ವಕಪ್​ನ ಒಂದೇ ಆವೃತ್ತಿಯಲ್ಲಿ ಅತಿ ಹೆಚ್ಚು ವಿಕೆಟ್​ಗಳನ್ನು ಪಡೆದಿರುವ ಹೊಸ ದಾಖಲೆಯನ್ನು ಮಾಡುವ ಅವಕಾಶ ಹೊಂದಿದ್ದಾರೆ. ಅರ್ಶ್​ದೀಪ್​ 7.50ರ ಎಕಾನಮಿ ರೇಟ್​ನಲ್ಲಿ ಇದುವರೆಗೆ ಆಡಿರುವ ಏಳು ಪಂದ್ಯದಲ್ಲಿ 15 ವಿಕೆಟ್​ಗಳನ್ನು ಪಡೆದಿದ್ದಾರೆ. ಈ ಸಾಧನೆಯು ಟಿ 20 ವಿಶ್ವಕಪ್​​ ಒಂದೇ ಆವೃತ್ತಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಸಾರ್ವಕಾಲಿಕ ಆಟಗಾರರ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ. ಪ್ರಸ್ತುತ ಅಫ್ಘಾನಿಸ್ತಾನ ತಂಡದ ಆಟಗಾರ ಫಜಲ್ಹಾಕ್ ಫಾರೂಕಿ 2024ರ ಆವೃತ್ತಿಯಲ್ಲಿ 17 ವಿಕೆಟ್​ಗಳನ್ನು ಪಡೆದುಕೊಂಡಿದ್ದಾರೆ. ಅವರು ಇತ್ತೀಚೆಗೆ 2021- 2022 ಋತುವಿನಲ್ಲಿ ಶ್ರೀಲಂಕಾದ ಆಲ್​ರೌಂಡರ್​ ವನಿಂದು ಹಸರಂಗ ಅವರ 16 ವಿಕೆಟ್​ಗಳ ದಾಖಲೆಯನ್ನು ಮುರಿದಿದ್ದಾರೆ ಹೀಗಾಗಿ ಅರ್ಶ್​ದೀಪ್​ ಇನ್ನೆರಡು ವಿಕೆಟ್​ ಪಡೆದರೆ ದಾಖಲೆ ಗ್ಯಾರಂಟಿ.

2012-2013ರ ಆವೃತ್ತಿಯಲ್ಲಿ 15 ವಿಕೆಟ್ ಪಡೆದ ಶ್ರೀಲಂಕಾದ ಅಜಂತಾ ಮೆಂಡಿಸ್ ಮೂರನೇ ಸ್ಥಾನದಲ್ಲಿದ್ದಾರೆ. ಅರ್ಶ್​​ದೀಪ್​ ಸಿಂಗ್ 2024 ರ ಟಿ 20 ವಿಶ್ವಕಪ್​ನಲ್ಲಿ ಉತ್ತಮ ಫಾರ್ಮ್​​ನಲ್ಲಿದ್ದಾರೆ. ಅವರು ದಕ್ಷಿಣ ಆಫ್ರಿಕಾ ವಿರುದ್ಧದ ಅಂತಿಮ ಪಂದ್ಯದಲ್ಲಿ ಅದೇ ಫಾರ್ಮ್ ಅನ್ನು ಮುಂದುವರಿಸುವ ಭರವಸೆ ಹೊಂದಿದ್ದಾರೆ. ಹೀಗಾಗಿ ದಾಖಲೆ ಮುರಿಯುವ ಎಲ್ಲ ಅವಕಾಶಗಳು ಅವರ ಮುಂದಿವೆ.

ಭಾರತದ ಗೆಲವಿಗೆ ವಿಶೇಷ ಪೂಜೆ

ದಕ್ಷಿಣ ಆಫ್ರಿಕಾ ವಿರುದ್ಧದ ಟಿ 20 ವಿಶ್ವಕಪ್ ಫೈನಲ್​​ನಲ್ಲಿ(T20 World Cup Final) ಭಾರತದ ಗೆಲ್ಲಲ್ಲಿ ಎಂದು ಪ್ರಾರ್ಥಿಸಿ ಮುಂಬೈನ ಪ್ರಸಿದ್ಧ ಸಿದ್ಧಿವಿನಾಯಕ ದೇವಾಲಯದ ಅರ್ಚಕರು ಶನಿವಾರ ವಿಶೇಷ ಪೂಜೆ ನಡೆಸಿದ್ದಾರೆ. ದೊಡ್ಡ ಫೈನಲ್ ಸಮೀಪಿಸುತ್ತಿದ್ದಂತೆ ಕ್ರಿಕೆಟ್​ ಅಭಿಮಾನಿಗಳಲ್ಲಿ ಉತ್ಸಾಹ ಮತ್ತು ಆತಂಕ ಹೆಚ್ಚಾಗಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಟೀಮ್ ಇಂಡಿಯಾದ ಆಟಗಾರರಿಗೆ ಪ್ರೋತ್ಸಾಹದ ಸಂದೇಶಗಳು ತುಂಬಿಕೊಂಡಿವೆ. ಪ್ರಮುಖ ಬೀದಿಗಳು ಟೀಮ್ ಇಂಡಿಯಾವನ್ನು ಬೆಂಬಲಿಸುವ ಪೋಸ್ಟರ್​ಗಳಿಂದ ತುಂಬಿಕೊಂಡಿವೆ. ಈ ನಡುವೆ ಹಲವೆಡೆ ವಿಶೇಷ ಪೂಜೆಗಳು ನಡೆಯುತ್ತಿವೆ. ಅಂತೆಯ ಸಿದ್ಧಿವಿನಾಯಕ ದೇವಾಲಯದಲ್ಲೂ ಪೂಜೆ ಮಾಡಲಾಗಿದೆ.

ಇದನ್ನೂ ಓದಿ: IND vs SA Final: ರಾಮನಾಮ ಸ್ಮರಣೆ ಮಾಡಿ ಭಾರತ ವಿರುದ್ಧ ಫೈನಲ್​ ಆಡಲಿದ್ದಾರೆ ದಕ್ಷಿಣ ಆಫ್ರಿಕಾ ಕ್ರಿಕೆಟಿಗ

ಈ ಪಂದ್ಯವು ಭಾರತದ ಕ್ರಿಕೆಟ್​ ಪಾಲಿಗೆ ಪ್ರಮುಖ ಘಟನೆಯಾಗಿದೆ. ಲಕ್ಷಾಂತರ ಭಾರತೀಯರ ಭರವಸೆಗಳು ಮತ್ತು ಪ್ರಾರ್ಥನೆಗಳು ಪ್ರಸಸ್ತಿಗಾಗಿ ಹಂಬಲಿಸಿವೆ. 17 ವರ್ಷಗಳ ಸುದೀರ್ಘ ನಂತರ ಭಾರತವು ಟಿ 20 ವಿಶ್ವಕಪ್ ಟ್ರೋಫಿ ಎತ್ತುವುದನ್ನು ನೋಡಲು ಕೋಟ್ಯಂತರ ಮಂದಿ ಕಾಯುತ್ತಿದ್ದಾರೆ.

ಸಿದ್ಧಿವಿನಾಯಕ ದೇವಾಲಯವು ವಿಶ್ವ ಕಪ್​ ಗೆಲುವಿಗಾಗಿ ವಿಶೇಷ ಪ್ರಾರ್ಥನೆ ಮತ್ತು ಆರತಿಗಳನ್ನು ಆಯೋಜಿಸಿತ್ತು. ಈ ಸಂದರ್ಭದಲ್ಲಿ ಹಾಜರಿದ್ದ ಭಕ್ತರು ಮೆನ್ ಇನ್ ಬ್ಲೂಗೆ ಆಶೀರ್ವಾದ ಮಾಡುವಂತೆ ಭಗವಂತನ ಬಳಿ ಕೋರಿಕೊಂಡರು. ಸಿದ್ಧಿವಿನಾಯಕನ ಪುರೋಹಿತರು. ತಂಡ ಮತ್ತು ಅವರ ಅಭಿಮಾನಿಗಳ ಪರವಾಗಿ ಪೂಜೆ ಸಲ್ಲಿಸಿ ಪ್ರಸಾದ ವಿತಣೆ ಮಾಡಿದರು.

ಎರಡನೇ ಬಾರಿಗೆ ಟಿ20 ವಿಶ್ವಕಪ್ ಗೆಲ್ಲುವ ಗುರಿ ಹೊಂದಿರುವ ಭಾರತ ಅದಕ್ಕಾಗಿ ಸಜ್ಜಾಗಿದ್ದು, ಮೊದಲ ಟಿ20 ವಿಶ್ವಕಪ್ ಗೆಲ್ಲುವ ತವಕದಲ್ಲಿರುವ ದಕ್ಷಿಣ ಆಫ್ರಿಕಾ ಸಂಪೂರ್ಣ ಸಿದ್ಧತೆ ಮಾಡಿಕೊಂಡಿದೆ. ಎರಡೂ ತಂಡಗಳು ಐಸಿಸಿ ಟ್ರೋಫಿಗಾಗಿ ದೀರ್ಘ ಕಾಯುವಿಕೆ ಎದುರಿಸಿವೆ. ಭಾರತಕ್ಕೆ 13 ವರ್ಷಗಳಿಂದ ಪ್ರಶಸ್ತಿಗಾಗಿ ಕಾದರೆ, ದಕ್ಷಿಣ ಆಫ್ರಿಕಾ ಇದುವರೆಗೆ ಒಂದೇ ಒಂದು ಟ್ರೋಫಿ ಸಿಕ್ಕಿಲ್ಲ. ಈ ಅಂತಿಮ ಪಂದ್ಯವು ಈ ಕ್ರಿಕೆಟ್ ಶಕ್ತಿ ಕೇಂದ್ರಗಳ ಪ್ರಶಸ್ತಿ ಬರವನ್ನು ಕೊನೆಗೊಳಿಸಲಿದೆ.

Exit mobile version