Australian Open: ಗಾಫ್​ಗೆ ಸೋಲಿನ ಆಘಾತವಿಕ್ಕಿ ಫೈನಲ್​ಗೆ ಲಗ್ಗೆಯಿಟ್ಟ ಸಬಲೆಂಕಾ - Vistara News

ಕ್ರೀಡೆ

Australian Open: ಗಾಫ್​ಗೆ ಸೋಲಿನ ಆಘಾತವಿಕ್ಕಿ ಫೈನಲ್​ಗೆ ಲಗ್ಗೆಯಿಟ್ಟ ಸಬಲೆಂಕಾ

ಬೆಲರೂಸ್‌ನ ಅರಿನಾ ಸಬಲೆಂಕಾ ಅವರು ಆಸ್ಟ್ರೇಲಿಯನ್ ಓಪನ್(Australian Open) ಮಹಿಳಾ ಸಿಂಗಲ್ಸ್​ನಲ್ಲಿ ಫೈನಲ್‌ ಪ್ರವೇಶಿಸಿದ್ದಾರೆ.

VISTARANEWS.COM


on

Aryna Sabalenka
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮೆಲ್ಬೊರ್ನ್​: ವಿಶ್ವದ ಎರಡನೇ ಶ್ರೇಯಾಂಕಿತ ಆಟಗಾರ್ತಿ ಅರಿನಾ ಸಬಲೆಂಕಾ(Aryna Sabalenka) ಆಸ್ಟ್ರೇಲಿಯನ್ ಓಪನ್(Australian Open) ಫೈನಲ್‌ ತಲುಪಿದ್ದಾರೆ. ಸೆಮಿಫೈನಲ್​​ ಪಂದ್ಯದಲ್ಲಿ ಯುವ ಆಟಗಾರ್ತಿ ಕೊಕೊ ಗಾಫ್(Coco Gauff) ಅವರನ್ನು ಮಣಿಸಿ ಪ್ರಶಸ್ತಿ ಸುತ್ತಿಗೇರಿದ್ದಾರೆ.

ಕಳೆದ ವರ್ಷದ ಯುಎಸ್ ಓಪನ್ ಫೈನಲ್‌ನಲ್ಲಿ ಅಮೆರಿಕದ ಕೊಕೊ ಗಾಫ್ ಅವರು​ ಬೆಲರೂಸ್‌ನ ಅರಿನಾ ಸಬಲೆಂಕಾಗೆ ಸೋಲಿನ ಆಘಾತವಿಕ್ಕಿ ಚೊಚ್ಚಲ ಗ್ರ್ಯಾನ್‌ಸ್ಲಾಮ್‌ ಪ್ರಶಸ್ತಿಗೆ ಮುತ್ತಿಕ್ಕಿದ್ದರು. ಅಂದಿನ ಫೈನಲ್​ ಸೋಲಿಗೆ ಈ ಬಾರಿ ಆಸ್ಟ್ರೇಲಿಯಾ ಓಪನ್​ ಟೂರ್ನಿಯಲ್ಲಿ ಸಬಲೆಂಕಾ ಸೇಡು ತೀರಿಸಿಕೊಂಡಿದ್ದಾರೆ. ಗುರುವಾರ ನಡೆದ ಮಹಿಳಾ ಸಿಂಗಲ್ಸ್​ನ ಸೆಮಿ ಫೈನಲ್​ ಕಾದಾಟದಲ್ಲಿ 7-6, 4-6 ನೇರ ಸೆಟ್​ಗಳಿಂದ ಮಣಿಸಿದ್ದಾರೆ.

ಸೇಡಿನ ಪಂದ್ಯದಲ್ಲಿ ಕಣಕ್ಕಿಳಿದ್ದ ಬೆಲರೂಸ್‌ನ ಅರಿನಾ ಸಬಲೆಂಕಾ ಬಲಿಷ್ಠ ಹೊಡೆತಗಳ ಮೂಲಕ ಆರಂಭದಿಂದಲೇ ಗಾಫ್​ ಮೇಲೆ ಸವಾರಿ ನಡೆಸಿದಿದರು. ಎರಡೇ ಸೆಟ್​ನಲ್ಲಿ ಪಂದ್ಯವನ್ನು ಮುಗಿಸಿದರು. ಈ ಹೋರಾಟ ಒಂದು ಗಂಟೆ 46 ನಿಮಿಷದಲ್ಲಿ ಅಂತ್ಯ ಕಂಡಿತ್ತು. ಈ ಟೂರ್ನಿಯ ಹಾಲಿ ಚಾಂಪಿಯನ್​ ಆಗಿರುವ ಸಬಲೆಂಕಾ ಈ ಬಾರಿಯೂ ಫೈನಲ್​ನಲ್ಲಿ ಗೆದ್ದು ಪ್ರಶಸ್ತಿ ಉಳಿಸಿಕೊಳ್ಳವ ವಿಶ್ವಾಸದಲ್ಲಿದ್ದಾರೆ. ಸಬಲೆಂಕಾ ಫೈನಲ್​ ಪಂದ್ಯದಲ್ಲಿ ದಯಾನಾ ಯಾಸ್ಟ್ರೆಮ್ಸ್ಕಾ-ಕಿನ್ವೆನ್ ಝೆಂಗ್ ನಡುವಣ ವಿಜೇತರನ್ನು ಎದುರಿಸಲಿದ್ದಾರೆ.

ಫೈನಲ್​​ ಪ್ರವೇಶಿಸಿದ ರೋಹನ್ ಬೋಪಣ್ಣ-ಮ್ಯಾಥ್ಯೂ ಎಬ್ಡೆನ್‌ ಜೋಡಿ


ಭಾರತದ ಹಿರಿಯ ಟೆನಿಸ್‌ ತಾರೆ ರೋಹನ್ ಬೋಪಣ್ಣ(Rohan Bopanna) ಅವರು ಆಸ್ಟ್ರೇಲಿಯನ್ ಓಪನ್(Australian Open) ಟೆನಿಸ್‌ 2024 ರ ಪುರುಷರ ಡಬಲ್ಸ್​ನಲ್ಲಿ ಫೈನಲ್‌ ತಲುಪಿದ್ದಾರೆ. ಮೂಲಕ ಗ್ರ್ಯಾಂಡ್‌ಸ್ಲಾಮ್​ನಲ್ಲಿ ಹೊಸ ಇತಿಹಾಸವನ್ನು ನಿರ್ಮಿಸಿದ್ದಾರೆ. ಬೋಪಣ್ಣ ಮತ್ತು ಅವರ ಜತೆಗಾರ ಮ್ಯಾಥ್ಯೂ ಎಬ್ಡೆನ್(Matthew Ebden) ಗುರುವಾರ ನಡೆದ ಸೆಮಿಫೈನಲ್​ ಪಂದ್ಯದಲ್ಲಿ ಅಧಿಕಾರಯುತ ಗೆಲುವು ಸಾಧಿಸಿ ಪ್ರಶಸ್ತಿ ಸುತ್ತಿಗೇರಿದ್ದಾರೆ.

ಇದನ್ನೂ ಓದಿ Australian Open 2024: ಇತಿಹಾಸ ಸೃಷ್ಟಿಸಿದ ರೋಹನ್‌ ಬೋಪಣ್ಣ; ನಂ.1 ಹಿರಿಯ ಟೆನಿಸ್‌ ಆಟಗಾರ

ಗುರುವಾರ ನಡೆದ ಪುರುಷರ ಡಬಲ್ಸ್​ನ ಸೆಮಿಫೈನಲ್​ ಪಂದ್ಯದಲ್ಲಿ ವಿಶ್ವ ನಂ.2 ಇಂಡೋ-ಆಸೀಸ್​ ಜೋಡಿ ರೋಚಕ 3 ಸೆಟ್‌ಗಳ ಸೆಮಿ ಕಾದಾಟದಲ್ಲಿ ಥಾಮಸ್ ಮಚಾಕ್ ಮತ್ತು ಜಾಂಗ್ ಝಿಶೆನ್ ಜೋಡಿಯನ್ನು ಸೋಲಿಸಿದರು. ಬೋಪಣ್ಣ-ಎಬ್ಡೆನ್ ಜೋಡಿಯು ಮೊದಲ ಸೆಟ್ ಅನ್ನು 6-3 ರಿಂದ ಆರಾಮವಾಗಿ ಗೆದ್ದುಕೊಂಡರು. ನಂತರ ಎರಡನೇ ಸೆಟ್​ನಲ್ಲಿ 3-6 ರಲ್ಲಿ ಸೋತರು. ಮೂರನೇ ಸೆಟ್‌ನಲ್ಲಿ ಎರಡೂ ಜೋಡಿಗಳು ತಮ್ಮ ಅತ್ಯುತ್ತಮ ಪ್ರದರ್ಶನ ನೀಡಿ ಟೈ ಬ್ರೇಕರ್‌ಗೆ ಕೊಂಡೊಯ್ದರು. ಬೋಪಣ್ಣ ಮತ್ತು ಎಬ್ಡೆನ್ ಅವರು ಟೈ ಬ್ರೇಕರನ್ನು 10-7 ರಿಂದ ಗೆದ್ದು ಫೈನಲ್ ಟಿಕೆಟ್​ ಪಡೆದರು. ಇದೇ ವೇಳೆ ಬೋಪಣ್ಣ ಗ್ರ್ಯಾಂಡ್ ಸ್ಲಾಮ್ ಫೈನಲ್‌ ತಲುಪಿದ ಅತ್ಯಂತ ಹಿರಿಯ ಆಟಗಾರ ಎನ್ನುವ ತಮ್ಮದೇ ದಾಖಲೆಯನ್ನು ಮುರಿದರು.

ಬೋಪಣ್ಣ ಆಸ್ಟ್ರೇಲಿಯನ್ ಓಪನ್ ಫೈನಲ್ ಪ್ರವೇಶಿಸಿದ್ದು ಇದೇ ಮೊದಲು. 2023ರಲ್ಲಿ ನಡೆದಿದ್ದ ಯುಎಸ್ ಓಪನ್ ಗ್ರ್ಯಾನ್‌ಸ್ಲಾಮ್‌ ಟೂರ್ನಿಯಲ್ಲಿ ಬೋಪಣ್ಣ ಮತ್ತು ಎಬ್ಡೆನ್ ಫೈನಲ್‌ಗೆ ಪ್ರವೇಶಿಸಿದ್ದರು. ಆದರೆ ಫೈನಲ್​ನಲ್ಲಿ ಸೋತು ರನ್ನರ್​ ಅಪ್​ಗೆ ತೃಪ್ತಿಪಟ್ಟಿದ್ದರು. ಈ ಬಾರಿಯ ಆಟವನ್ನು ನೋಡುವಾಗ ಬೋಪಣ್ಣ-ಎಬ್ಡೆನ್ ಜೋಡಿ ಚೊಚ್ಚಲ ಗ್ರ್ಯಾನ್‌ಸ್ಲಾಮ್‌ ಪ್ರಶಸ್ತಿಗೆ ಮುತ್ತಿಕ್ಕುವ ನಿರೀಕ್ಷೆಯಲ್ಲಿದ್ದಾರೆ.

ಎರಡನೇ ಶ್ರೇಯಾಂಕದ ಇಂಡೋ-ಆಸ್ಟ್ರೇಲಿಯನ್ ಜೋಡಿಯು ಮೂರನೇ ಸೆಟ್‌ನಲ್ಲಿ ತಮ್ಮ ಪ್ರತಿಸ್ಪರ್ಧಿಗಳಿಂದ ಕೆಲವು ತೀವ್ರ ಪ್ರತಿರೋಧವನ್ನು ಎದುರಿಸಿತು. ಆದರೆ ಅಂತಿಮವಾಗಿ ಸೂಪರ್ ಟೈ ಬ್ರೇಕರ್ಸ್​ನಲ್ಲಿ ಮೇಲುಗೈ ಸಾಧಿಸಿದ ಬೋಪಣ್ಣ-ಎಬ್ಡೆನ್ ಜೋಡಿ 6-3 3-6 7-6 (10-7) ಅಂಕಗಳೊಂದಿಗೆ ಹೆದ್ದು ಫೈನಲ್​ಗೆ ಮುನ್ನಡೆದರು. ಈ ಹೋರಾಟ ಎರಡು ಗಂಟೆ ಎರಡು ನಿಮಿಷದ ವರೆಗೆ ಸಾಗಿತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಅಂಕಣ

ರಾಜಮಾರ್ಗ ಅಂಕಣ: ರಿಶಭ್ ಪಂತ್ – ಕಮ್ ಬ್ಯಾಕ್ ಅಂದರೆ ಹೀಗಿರಬೇಕು!

ರಾಜಮಾರ್ಗ ಅಂಕಣ: ಆಕ್ರಮಣಕಾರಿ ರಿಶಭ್ ಪಂತ್ ಡೆಹ್ರಾಡೂನ್ ಆಸ್ಪತ್ರೆಯಲ್ಲಿ ಅರ್ಧ ಹೆಣವಾಗಿ ಮಲಗಿದ್ದ! ಯಾರಿಗೂ ಆತ ಮರಳಿ ಕ್ರಿಕೆಟ್ ಆಡುವ ಭರವಸೆ ಇರಲಿಲ್ಲ. ಆದರೆ ಈಗ, ಈ ಐಪಿಎಲ್ ಸೀಸನ್‌ನಲ್ಲಿ ವಿಕೆಟ್ ಮುಂದೆ ಮತ್ತು ಹಿಂದೆ ಆತ ಆಕ್ರಮಣಕಾರಿ ಆಗಿ ಆಡುತ್ತಿರುವುದನ್ನು ನೀವು ನೋಡಿಯೇ ನೋಡಿರುತ್ತೀರಿ!

VISTARANEWS.COM


on

Rishabh Pant
Koo

ಹೋರಾಟಗಾರ ಕ್ರಿಕೆಟರ್ ಕ್ರಿಟಿಕಲ್ ಇಂಜುರಿ ಗೆದ್ದು ಬಂದ ಕಥೆ

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ: 2022 ಡಿಸೆಂಬರ್ 30ರ ಮಧ್ಯರಾತ್ರಿ ರೂರ್ಕಿ ಎಂಬಲ್ಲಿ ಆ ಕ್ರಿಕೆಟರ್ ಕಾರು ಅಪಘಾತಕ್ಕೆ ಒಳಗಾಗಿತ್ತು. ಆ ಅಪಘಾತದ ತೀವ್ರತೆಯನ್ನು ನೋಡಿದವರು ಆತ ಬದುಕಿದ್ದೇ ಗ್ರೇಟ್ ಅಂದಿದ್ದರು. ಬಲಗಾಲಿನ ಮಂಡಿ ಚಿಪ್ಪು ಸಮೇತ 90 ಡಿಗ್ರೀಯಷ್ಟು ತಿರುಗಿ ನಿಂತಿತ್ತು! ಮೈಯೆಲ್ಲಾ ಗಾಯಗಳು ಮತ್ತು ಎಲುಬು ಮುರಿತಗಳು! ಡೆಹ್ರಾಡೂನ್ ಆಸ್ಪತ್ರೆಯ ವೈದ್ಯರು ಆತನ ದೇಹದಲ್ಲಾದ ಗಾಯ ಮತ್ತು ಮೂಳೆ ಮುರಿತಗಳನ್ನು ನೋಡಿದಾಗ ‘ನೀನಿನ್ನು ಕ್ರಿಕೆಟ್ ಆಡೋದು ಕಷ್ಟ’ ಅಂದಿದ್ದರು. ಒಬ್ಬರಂತೂ ‘ನೀನು ನಿನ್ನ ಕಾಲುಗಳ ಮೇಲೆ ನಿಂತರೆ ಅದೇ ದೊಡ್ಡ ಸಾಧನೆ’ ಅಂದಿದ್ದರು!

ಅಮ್ಮಾ ನನಗೆ ಸಹಾಯ ಮಾಡು, ನಾನು ವಿಶ್ವಕಪ್ ಆಡಬೇಕು!

ಆ ಕ್ರಿಕೆಟಿಗ ಆಸ್ಪತ್ರೆಯ ಬೆಡ್ ಮೇಲೆ ಮಲಗಿ ಚೀರಿ ಚೀರಿ ಹಾಗೆ ಹೇಳುತ್ತಿದ್ದರೆ ನರ್ಸ್ ಮತ್ತು ವೈದ್ಯರು ಕಣ್ಣೀರು ಸುರಿಸುತ್ತಿದ್ದರು! ಕ್ರಿಕೆಟ್ ವಿಶ್ವಕಪ್ ಆರಂಭವಾಗಲು ಕೇವಲ ಒಂದೂವರೆ ವರ್ಷ ಬಾಕಿ ಇತ್ತು. ವೈದ್ಯರು ‘ಅನಿವಾರ್ಯ ಆದರೆ ಆತನ ಒಂದು ಕಾಲು ತುಂಡು ಮಾಡಬೇಕಾಗಬಹುದು!’ ಎಂದು ಅವನ ಅಮ್ಮನ ಕಿವಿಯಲ್ಲಿ ಪಿಸುಗುಟ್ಟಿದ್ದು, ಆತನ ಅಮ್ಮ ಬಾತ್ ರೂಮ್ ಒಳಗೆ ಹೋಗಿ ಕಣ್ಣೀರು ಸುರಿಸಿದ್ದು ಎಲ್ಲವೂ ನಡೆದು ಹೋಗಿತ್ತು!

ಆತ ರಿಶಭ್ ಪಂತ್ – ಆಕ್ರಮಣಕ್ಕೆ ಇನ್ನೊಂದು ಹೆಸರು!

ಅಪಘಾತ ಆಗುವ ಮೊದಲು ಆತ ಭಾರತೀಯ ಕ್ರಿಕೆಟ್ ತಂಡದ ಮೂರೂ ಫಾರ್ಮಾಟಗಳಲ್ಲಿ ಶಾಶ್ವತ ಸ್ಥಾನ ಪಡೆದಿದ್ದ! ಆಕ್ರಮಣಕ್ಕೆ ಹೆಸರಾಗಿದ್ದ. ಸಲೀಸಾಗಿ ಒಂದೇ ಅವಧಿಯಲ್ಲಿ ಡಬಲ್ ಸೆಂಚುರಿ ಹೊಡೆಯುತ್ತಿದ್ದ. ವಿಕೆಟ್ ಹಿಂದೆ ಪಾದರಸದ ಚುರುಕು ಇತ್ತು. ಆತನ ಆಟವನ್ನು ನೋಡಿದವರು ʻಈತ ಧೋನಿಯ ಉತ್ತರಾಧಿಕಾರಿ ಆಗುವುದು ಖಂಡಿತ’ ಅನ್ನುತ್ತಿದ್ದರು!

ಅಂತಹ ರಿಶಭ್ ಪಂತ್ ಡೆಹ್ರಾಡೂನ್ ಆಸ್ಪತ್ರೆಯಲ್ಲಿ ಅರ್ಧ ಹೆಣವಾಗಿ ಮಲಗಿದ್ದ! ಯಾರಿಗೂ ಆತ ಮರಳಿ ಕ್ರಿಕೆಟ್ ಆಡುವ ಭರವಸೆ ಇರಲಿಲ್ಲ.

ಆತನ ನೆರವಿಗೆ ನಿಂತವರು ಕೇವಲ ನಾಲ್ಕೇ ಜನ

ಮರಳಿ ಕ್ರಿಕೆಟ್ ಮೈದಾನಕ್ಕೆ ಇಳಿಯಬೇಕು ಎಂದು ನಿದ್ದೆಯಲ್ಲಿಯೂ ಕನವರಿಸುತ್ತಿದ್ದ ಆತನ ನೆರವಿಗೆ ನಿಂತವರು ಕೇವಲ ನಾಲ್ಕೇ ಜನ. ಅವರೆಲ್ಲರೂ ಆತನ ಕ್ರಿಕೆಟ್ ದೈತ್ಯ ಪ್ರತಿಭೆಯನ್ನು ಕಂಡವರು. ಒಬ್ಬರು ಆತನಿಗೆ ಶಸ್ತ್ರಚಿಕಿತ್ಸೆ ಮಾಡಿದ ಮುಂಬಯಿಯ ಅಂಬಾನಿ ಆಸ್ಪತ್ರೆಯ ಖ್ಯಾತ ಸರ್ಜನ್ ದಿನ್ ಶಾ ಪಾದ್ರಿವಾಲ. ಇನ್ನೊಬ್ಬರು ಉತ್ತರಾಖಂಡದ ಶಾಸಕ ಉಮೇಶ್ ಕುಮಾರ್. ಇನ್ನೊಬ್ಬರು ನ್ಯಾಶನಲ್ ಕ್ರಿಕೆಟ್ ಅಕಾಡೆಮಿಯ ಕೋಚ್ ಆದ ಧನಂಜಯ್ ಕೌಶಿಕ್. ನಾಲ್ಕನೆಯರು ರಿಷಭನ ತಾಯಿ! ಆಕೆ ನಿಜಕ್ಕೂ ಗಾಡ್ಸ್ ಗ್ರೇಸ್ ಅನ್ನಬಹುದು. ಅವರೆಲ್ಲರಿಗೂ ಆತ ಭಾರತಕ್ಕೆ ಎಷ್ಟು ಅಮೂಲ್ಯ ಆಟಗಾರ ಎಂದು ಗೊತ್ತಿತ್ತು! ಆಸ್ಪತ್ರೆಯ ಹಾಸಿಗೆಗೆ ಒರಗಿ ಆತ ಪಟ್ಟ ಮಾನಸಿಕ ಮತ್ತು ದೈಹಿಕ ನೋವು, ಹೊರಹಾಕಿದ ನಿಟ್ಟುಸಿರು ಎಲ್ಲವೂ ಆ ನಾಲ್ಕು ಮಂದಿಗೆ ಗೊತ್ತಿತ್ತು.

ಆ ಹದಿನೈದು ತಿಂಗಳು…!

Rishabh Panth

ಆ ಅವಧಿಯಲ್ಲಿ ಏಷಿಯಾ ಕಪ್, ವಿಶ್ವ ಟೆಸ್ಟ್ ಚಾಂಪಿಯನಶಿಪ್, ವಿಶ್ವ ಕಪ್ ಎಲ್ಲವೂ ನಡೆದುಹೋಯಿತು! ಭಾರತ ಹಲವು ವಿಕೆಟ್ ಕೀಪರಗಳ ಪ್ರಯೋಗ ಮಾಡಿತು. ಭಾರತ ಒಂದೂ ಕಪ್ ಗೆಲ್ಲಲಿಲ್ಲ. ಭಾರತಕ್ಕೆ ಶಾಶ್ವತವಾದ ವಿಕೆಟ್ ಕೀಪರ್ ಸಿಗಲಿಲ್ಲ! ರಿಷಭ್ ಈ ಎಲ್ಲ ಪಂದ್ಯಗಳನ್ನು ನೋಡುತ್ತಿದ್ದ. ವಿಕೆಟ್ ಹಿಂದೆ ಅವನಿಗೆ ಅವನೇ ಕಾಣುತ್ತಿದ್ದ!

ಹಾಸಿಗೆಯಿಂದ ಎದ್ದು ಕ್ರಚಸ್ ಹಿಡಿದು ನಡೆದದ್ದು, ನಂತರ ಕ್ರಚಸ್ ಬದಿಗೆ ಇಟ್ಟು ಗೋಡೆ ಹಿಡಿದು ನಡೆದದ್ದು, ನಂತರ ಎಲ್ಲವನ್ನೂ ಬಿಟ್ಟು ನಿಧಾನವಾಗಿ ತನ್ನ ಕಾಲ ಮೇಲೆ ಗಟ್ಟಿಯಾಗಿ ನಿಂತದ್ದು, ಜಾಗಿಂಗ್ ಮಾಡಿದ್ದು, ಓಡಿದ್ದು, ಕಾಲುಗಳಿಗೆ ಫಿಸಿಯೋ ಥೆರಪಿ ಆದದ್ದು, ಆತ್ಮವಿಶ್ವಾಸ ಬೆಳೆಸಿಕೊಳ್ಳಲು ಕೌನ್ಸೆಲಿಂಗ್ ನೆರವು ಪಡೆದದ್ದು….ಇವೆಲ್ಲವೂ ಕನಸಿನಂತೆ ಗೋಚರ ಆಗುತ್ತಿದೆ. ಮುಂದೆ ನಿರಂತರ ಕ್ರಿಕೆಟ್ ಕೋಚಿಂಗ್, ಮೈದಾನದಲ್ಲಿ ಬೆವರು ಹರಿಸಿದ್ದು, ಅಪಘಾತವಾದ ಕಾಲು ಬಗ್ಗಿಸಲು ತುಂಬ ಕಷ್ಟಪಟ್ಟದ್ದು ಒಂದು ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾದಂತೆ ಅನ್ನಿಸುತ್ತಿದೆ.

2024 ಮಾರ್ಚ್ 12….

ಒಬ್ಬ ಕ್ರಿಕೆಟರ್ ಮತ್ತೆ ಸ್ಪರ್ಧಾತ್ಮಕ ಕ್ರಿಕೆಟ್ ಮೈದಾನಕ್ಕೆ ಇಳಿಯಲು ಬಿಸಿಸಿಐ ಫಿಟ್ನೆಸ್ ಸರ್ಟಿಫಿಕೇಟ್ ಕೊಡಬೇಕು. ಅದು ಸುಲಭದ ಕೆಲಸ ಅಲ್ಲ. ಅಲ್ಲಿ ಕೂಡ ರಿಶಭ್ ಇಚ್ಛಾಶಕ್ತಿ ಗೆದ್ದಿತ್ತು. ಮಾರ್ಚ್ 12ರಂದು ಆತನು ಕ್ರಿಕೆಟ್ ಆಡಲು ಸಂಪೂರ್ಣ ಫಿಟ್ ಎಂದು ಬಿಸಿಸಿಐ ಘೋಷಣೆ ಮಾಡಿದಾಗ ಆತ ಮೈದಾನದ ಮಧ್ಯೆ ಕೂತು ಜೋರಾಗಿ ಕಣ್ಣೀರು ಹಾಕಿದ್ದನು! ಎರಡೇ ದಿನದಲ್ಲಿ ಡೆಲ್ಲಿ ಐಪಿಎಲ್ ತಂಡವು ಆತನನ್ನು ತೆರೆದ ತೋಳುಗಳಿಂದ ಸ್ವಾಗತ ಮಾಡಿ ನಾಯಕತ್ವವನ್ನು ಕೂಡ ಆತನಿಗೆ ನೀಡಿತ್ತು! ಈ ಐಪಿಎಲ್ ಸೀಸನ್‌ನಲ್ಲಿ ವಿಕೆಟ್ ಮುಂದೆ ಮತ್ತು ಹಿಂದೆ ಆತ ಆಕ್ರಮಣಕಾರಿ ಆಗಿ ಆಡುತ್ತಿರುವುದನ್ನು ನೀವು ನೋಡಿಯೇ ನೋಡಿರುತ್ತೀರಿ!

ಮುಂದಿನ T20 ವಿಶ್ವಕಪ್ ಟೂರ್ನಿಯಲ್ಲಿ ಭಾರತಕ್ಕೆ ಒಬ್ಬ ಅದ್ಭುತ ಬ್ಯಾಟರ್ ಮತ್ತು ವಿಕೆಟ್ ಕೀಪರ್ ದೊರಕಿದ್ದನ್ನು ನಾವು ಸಂಭ್ರಮಿಸಲು ಯಾವ ಅಡ್ಡಿ ಕೂಡ ಇಲ್ಲ ಎನ್ನಬಹುದು. ಆತನಿಗೆ ಶುಭವಾಗಲಿ.

ಇದನ್ನೂ ಓದಿ: ರಾಜಮಾರ್ಗ ಅಂಕಣ: ವಾಲ್ಮೀಕಿ ರಾಮಾಯಣ vs ಹನುಮಾನ್ ರಾಮಾಯಣ

Continue Reading

ಕ್ರೀಡೆ

CSK vs SRH: ಮತ್ತೆ ಗೆಲುವಿನ ಟ್ರ್ಯಾಕ್​ಗೆ ಮರಳಿದ ಚೆನ್ನೈ; ಹೈದರಾಬಾದ್​ ವಿರುದ್ಧ 78 ರನ್​ ಅಮೋಘ ಜಯ

CSK vs SRH: 40 ರನ್​ಗೆ ಮೂರು ವಿಕೆಟ್​ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ ತಂಡಕ್ಕೆ ಐಡೆನ್​ ಮಾರ್ಕ್ರಮ್​ ಮತ್ತು ನಿತೀಶ್​ ರೆಡ್ಡಿ ಕೆಲ ಕಾಲ ಆಸರೆಯಾದರೂ ಕೂಡ ಇವರಿಂದ ದೊಡ್ಡ ಮೊತ್ತ ಪೇರಿಸಲು ಸಾಧ್ಯವಾಗಲಿಲ್ಲ. ಕೇವಲ 4 ಬೌಂಡರಿ ನೆರವಿನಿಂದ ಮಾರ್ಕ್ರಮ್​ 32 ರನ್​ ಗಳಿಸಿ ಪತಿರಾಣ ಯಾರ್ಕರ್​ ಎಸೆತಕ್ಕೆ ಕ್ಲೀನ್​ ಬೌಲ್ಡ್​ ಆದರು. ನಿತೀಶ್​ ರೆಡ್ಡಿ ಎಸೆತವೊಂದರಂತೆ 15 ರನ್​ ಗಳಿಸಿ ವಿಕೆಟ್​ ಕಳೆದುಕೊಂಡರು.

VISTARANEWS.COM


on

CSK vs SRH
Koo

ಚೆನ್ನೈ: ಲಕ್ನೋ ಸೂಪರ್​ ಜೈಂಟ್ಸ್​ ವಿರುದ್ಧ ಸತತ ಎರಡು ಸೋಲು ಕಂಡು ಮಂಕಾಗಿದ್ದ ಹಾಲಿ ಚಾಂಪಿಯನ್​ ಚೆನ್ನೈ ಸೂಪರ್​ ಕಿಂಗ್ಸ್​ ಭರ್ಜರಿ(CSK vs SRH) ಗೆಲುವಿನ ಮೂಲಕ ಮತ್ತೆ ಗೆಲುವಿನ ಟ್ರ್ಯಾಕ್​ಗೆ ಮರಳಿದೆ. ಸನ್​ರೈಸರ್ಸ್​ ಹೈದರಾಬಾದ್(Sunrisers Hyderabad)​ ವಿರುದ್ಧ ತವರಿನಲ್ಲಿ ನಡೆದ ಭಾನುವಾರದ ಪಂದ್ಯದಲ್ಲಿ 78 ರನ್​ಗಳ ಗೆಲುವು ಸಾಧಿಸಿದೆ.

ಚೆನ್ನೈಯ ಚೆಪಾಕ್​ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದ ದ್ವಿತೀಯ ಐಪಿಎಲ್​(IPL 2024) ಪಂದ್ಯದಲ್ಲಿ ಟಾಸ್​ ಸೋತು ಬ್ಯಾಟಿಂಗ್​ ಆಹ್ವಾನ ಪಡೆದ ಚೆನ್ನೈ(Chennai Super Kings) ತಂಡ ನಾಯಕ ಋತುರಾಜ್​ ಗಾಯಕ್ವಾಡ್​, ಡೇರಿಯಲ್​ ಮಿಚೆಲ್​ ಮತ್ತು ಶಿವಂ ದುಬೆ ಅವರ ಆಕ್ರಮಣಕಾರಿ ಬ್ಯಾಟಿಂಗ್​ ಸಾಹಸದಿಂದ ನಿಗದಿತ 20 ಓವರ್​ಗಳಲ್ಲಿ ಕೇವಲ 3 ವಿಕೆಟ್​ ನಷ್ಟಕ್ಕೆ 212 ರನ್​ ಬಾರಿಸಿತು. ಈ ಹಿಂದಿನ ಪಂದ್ಯಗಳಲ್ಲಿ ಸಲೀಸಾಗಿ ಮೂರು ಬಾರಿ 250ರ ಗಡಿ ದಾಟಿದ್ದ ಸನ್​ರೈಸರ್ಸ್​ ತಂಡಕ್ಕೆ ಈ ಮೊತ್ತ ಎಲ್ಲಿಂದಲೂ ಸಾಲದು ಎಂದು ನಿರೀಕ್ಷೆ ಮಾಡಿದ್ದವರಿಗೆ ಚೆನ್ನೈ ತಂಡದ ಮಧ್ಯಮ ವೇಗಿ ತುಷಾರ್​ ದೇಶ್​ಪಾಂಡೆ ಘಾತಕ ಸ್ಫೆಲ್ ಮೂಲಕ ಕಟ್ಟಿಹಾಕಿದರು. ಅಂತಿಮವಾಗಿ ಹೈದರಾಬಾದ್​ 18.5 ಓವರ್​ಗಳಲ್ಲಿ 134 ರನ್​ಗೆ ಸರ್ವಪತನ ಕಂಡು ಹೀನಾಯವಾಗಿ ಸೋಲೊಪ್ಪಿಕೊಂಡಿತು.

ಕಾಡಿದ ತುಷಾರ್​ ದೇಶ್​ಪಾಂಡೆ


ದೊಡ್ಡ ಮೊತ್ತವನ್ನು ಬೆನ್ನಟ್ಟಿದ ಹೈದರಾಬಾದ್​ಗೆ ಮೊದಲ ಎಸೆತದಲ್ಲೇ ಟ್ರಾವಿಸ್​ ಹೆಡ್​ ಬೌಂಡರಿ ಮೂಲಕ ರನ್​ ಖಾತೆ ತೆರೆದರು. ಮುಂದಿನ ಓವರ್​ನಲ್ಲಿ ತುಷಾರ್​ ದೇಶ್​ಪಾಂಡೆಗೆ ಸಿಕ್ಸರ್​ ರುಚಿ ತೋರಿಸಿದರು. ಅಭಿಷೇಕ್​ ಶರ್ಮ ಕೂಡ ಒಂದು ಸಿಕ್ಸರ್​ ಬಾರಿಸಿ ಅಪಾಯಕಾರಿಯಾಗುವ ಸೂಚನೆ ನೀಡಿದರು. ಈ ವೇಳೆ ಧೋನಿ ನೀಡಿದ ಸಲಹೆಯನ್ನಾಧರಿಸಿ ಇದೇ ಓವರ್​ನಲ್ಲಿ ತುಷಾರ್​ ದೊಡ್ಡ ಬೇಟೆಯಾಡುವಲ್ಲಿ ಯಶಸ್ವಿಯಾದರು. ಟ್ರಾವಿಸ್​ ಹೆಡ್(13)​ ಮತ್ತು ಅನ್ಮೋಲ್ಪ್ರೀತ್ ಸಿಂಗ್​(0) ಖಾತೆ ತರೆಯುವ ಮುನ್ನವೇ ವಿಕೆಟ್​ ಕಿತ್ತು ಪೆವಿಲಿಯನ್​ ಕಡೆಗೆ ದಾರಿ ತೋರಿದರು. 21 ರನ್​ಗೆ 2 ವಿಕೆಟ್​ ಕಳೆದುಕೊಂಡ ಹೈದರಾಬಾದ್​ ಈ ಆಘಾತವನ್ನು ಅರಗಿಸಿಕೊಳ್ಳುವ ಮುನ್ನವೇ ಅಭಿಷೇಕ್​ ಶರ್ಮ(15) ವಿಕೆಟ್​ ಕೂಡ ಪತನಗೊಂಡಿತು. ಈ ವಿಕೆಟ್​ ಕೂಡ ತುಷಾರ್ ಪಾಲಾಯಿತು. ಅಲ್ಲಿಗೆ ಅಗ್ರ ಕ್ರಮಾಂಕದ ಮೂರು ವಿಕೆಟ್​ ಕೂಡ ತುಷಾರ್​ ಕಿತ್ತರು.

40 ರನ್​ಗೆ ಮೂರು ವಿಕೆಟ್​ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ ತಂಡಕ್ಕೆ ಐಡೆನ್​ ಮಾರ್ಕ್ರಮ್​ ಮತ್ತು ನಿತೀಶ್​ ರೆಡ್ಡಿ ಕೆಲ ಕಾಲ ಆಸರೆಯಾದರೂ ಕೂಡ ಇವರಿಂದ ದೊಡ್ಡ ಮೊತ್ತ ಪೇರಿಸಲು ಸಾಧ್ಯವಾಗಲಿಲ್ಲ. ಕೇವಲ 4 ಬೌಂಡರಿ ನೆರವಿನಿಂದ ಮಾರ್ಕ್ರಮ್​ 32 ರನ್​ ಗಳಿಸಿ ಪತಿರಾಣ ಯಾರ್ಕರ್​ ಎಸೆತಕ್ಕೆ ಕ್ಲೀನ್​ ಬೌಲ್ಡ್​ ಆದರು. ನಿತೀಶ್​ ರೆಡ್ಡಿ ಎಸೆತವೊಂದರಂತೆ 15 ರನ್​ ಗಳಿಸಿ ವಿಕೆಟ್​ ಕಳೆದುಕೊಂಡರು.

ಆಕ್ರಮಣಕಾರಿ ಬ್ಯಾಟಿಂಗ್​ಗೆ ಹೆಸರುವಾಸಿಯಾದ ಹೆನ್ರಿಚ್​ ಕ್ಲಾಸೆನ್​ ಮತ್ತು ಅಬ್ದುಲ್​ ಸಮದ್​ ಕೂಡ ಈ ಪಂದ್ಯದಲ್ಲಿ ರನ್​ ಗಳಿಸಲು ಪರದಾಡಿದರು. ಕ್ಲಾಸೆನ್​ 21 ಎಸೆತ ಎದುರಿಸಿ 20 ರನ್​ ಗಳಿಸಿದರು. ಸಿಡಿದದ್ದು 1 ಸಿಕ್ಸರ್​ ಮಾತ್ರ. ಅಬ್ದುಲ್​ ಸಮದ್ 18 ಎಸೆತಗಳಿಂದ 19 ರನ್​ ಕಲೆಹಾಕಿದರು. ಡೇರಿಯಲ್​ ಮಿಚೆಲ್​ ಈ ಪಂದ್ಯದಲ್ಲಿ 5 ಕ್ಯಾಚ್​ ಹಿಡಿದು ಮಿಂಚಿದರು.

ಗಾಯಕ್ವಾಡ್​ ಸೂಪರ್​ ಅರ್ಧಶತಕ


ಮೊದಲು ಬ್ಯಾಟಿಂಗ್​ ನಡೆಸಿದ ಚೆನ್ನೈ ತಂಡ ಆರಂಭದಲ್ಲೇ ಅಜಿಂಕ್ಯಾ ರಹಾನೆ ವಿಕೆಟ್​ ಕಳೆದುಕೊಂಡರೂ ಕೂಡ ಇದರಿಂದ ವಿಚಲಿತರಾಗಲಿಲ್ಲ. ನಾಯಕ ಋತುರಾಜ್​ ಗಾಯಕ್ವಾಡ್​ ಮತ್ತು ಡೇರಿಯಲ್​ ಮಿಚೆಲ್​ ಸೇರಿಕೊಂಡು ಹೈದರಾಬಾದ್​ ಬೌಲರ್​ಗಳ ಮೇಲೆ ಸವಾರಿ ನಡೆಸಿ ಅರ್ಧಶತಕ ಬಾರಿಸಿದರು. ಗಾಯಕ್ವಾಡ್​ ಕೇವಲ 27 ಎಸೆತಗಳಿಂದ ಅರ್ಧಶತಕ ಪೂರ್ತಿಗೊಳಿಸಿದರು. ಉತ್ತಮವಾಗಿ ಆಡುತ್ತಿದ್ದ ಈ ಜೋಡಿಯನ್ನು ಕೊನೆಗೂ ಜಯ್​ದೇವ್​ ಉನಾದ್ಕತ್​ ಬೇರ್ಪಡಿಸುವಲ್ಲಿ ಯಶಸ್ಸು ಕಂಡರು. ಗಾಯಕ್ವಾಡ್ ಮತ್ತು ಮಿಚೆಲ್​ ದ್ವಿತೀಯ ವಿಕೆಟ್​ಗೆ 107 ರನ್​ಗಳ ಅಮೋಘ ಜತೆಯಾಟ ನಡೆಸಿತು. ಮಿಚೆಲ್​ ಅವರು ​ಉನಾದ್ಕತ್ ಎಸೆತ ಲೋ ಫುಲ್​ಟಾಸ್ ಎಸೆತಕ್ಕೆ ಕ್ಯಾಚ್​ ನೀಡಿ ವಿಕೆಟ್​ ಕಳೆದುಕೊಂಡರು. 7 ಬೌಂಡರಿ ಮತ್ತು 1 ಸಿಕ್ಸರ್​ ಬಾರಿಸಿದ ಮಿಚೆಲ್​ 52 ರನ್​ ಗಳಿಸಿದರು.

ಇದನ್ನೂ ಓದಿ IPL 2024: ಗೆಲುವಿನಲ್ಲೂ ನೂತನ ದಾಖಲೆ ಬರೆದ ಆರ್​ಸಿಬಿ

​ಮಿಚೆಲ್​ ವಿಕೆಟ್​ ಬಿದ್ದರೂ ಕೂಡ ಚೆನ್ನೈ ತಂಡದ ರನ್​ ಗಳಿಕೆಗೆ ಯಾವುದೇ ಹಿನ್ನಡೆಯಾಗಲಿಲ್ಲ. ಶಿವಂ ದುಬೆ ತಮ್ಮ ಎಂದಿನ ಆಕ್ರಮಣಕಾರಿ ಶೈಲಿಯ ಬ್ಯಾಟಿಂಗ್ ನಡೆಸಿ ತಮ್ಮ ಹಾಗೂ ತಂಡದ ಮೊತ್ತವನ್ನು ಹಿಗ್ಗಿಸಿದರು. 19.2 ಓವರ್​ ತನಕ ಬ್ಯಾಟಿಂಗ್​ ಕಾಯ್ದುಕೊಂಡಿದ್ದ ಗಾಯಕ್ವಾಡ್​ 98 ರನ್​ ಗಳಿಸಿ ವಿಕೆಟ್​ ಕಳೆದುಕೊಂಡು ಕೇವಲ 2 ರನ್​ ಅಂತರದಿಂದ ಶತಕ ವಂಚಿತರಾದರು. ಕಳೆದ ಲಕ್ನೋ ವಿರುದ್ಧದ ಪಂದ್ಯದಲ್ಲಿ ಇದೇ ಮೈದಾನದಲ್ಲಿ ಶತಕ ಸಿಡಿಸಿದ್ದರು. ಸತತವಾಗಿ 2ನೇ ಶತಕ ಬಾರಿಸುವ ಅವಕಾಶ ಕೈ ಚೆಲ್ಲಿದರು. ಒಟ್ಟು 54 ಎಸೆತ ಎದುರಿಸಿದ ಗಾಯಕ್ವಾಡ್​ 10 ಬೌಂಡರಿ ಮತ್ತು 3 ಸಿಕ್ಸರ್​ ನೆರವಿನಿಂದ 98 ರನ್​ ಗಳಿಸಿದರು.

ಶಿವಂ ದುಬೆ 4 ಬಿಗ್​ ಹಿಟ್ಟಿಂಗ್​ ಸಿಕ್ಸರ್​ ಮತ್ತು 1 ಬೌಂಡರಿ ಬಾರಿಸಿ ಅಜೇಯ 39 ರನ್​ ಗಳಿಸಿದರು. ಧೋನಿ ಕೂಡ 5 ರನ್ ಬಾರಿಸಿ ಅಜೇಯರಾಗಿ ಉಳಿದರು. ಹೈದರಾಬಾದ್​ ಪರ ಭುವನೇಶ್ವರ್ ಕುಮಾರ್​, ಟಿ. ನಟರಾಜನ್​ ಮತ್ತು ಉನಾದ್ಕತ್​ ತಲಾ ಒಂದು ವಿಕೆಟ್​ ಕಿತ್ತರು.​​

Continue Reading

ಕ್ರೀಡೆ

Paris Olympics: ಬೆಳ್ಳಿ ಗೆದ್ದು ಪ್ಯಾರಿಸ್​ ಒಲಿಂಪಿಕ್ಸ್​ಗೆ ಅರ್ಹತೆ ಪಡೆದ ಶೂಟರ್​ ಮಹೇಶ್ವರಿ

Paris Olympics: ಇದೇ ಮೊದಲ ಬಾರಿಗೆ ಐಎಸ್‌ಎಸ್‌ಎಫ್ ಫೈನಲ್‌ನಲ್ಲಿ ಸ್ಪರ್ಧಿಸಿದ್ದ ಮಹೇಶ್ವರಿ, ಭಾನುವಾರ ನಡೆದ ಚಿನ್ನದ ಪದಕದ ಹೋರಾಟದಲ್ಲಿ ಚಿಲಿಯ ಫ್ರಾನ್ಸಿಸ್ಕಾ ಕ್ರೊವೆಟ್ಟೊ ಚಾಡಿಡ್ ವಿರುದ್ಧ 3-4 ಸಣ್ಣ ಅಂತರದಲ್ಲಿ ಸೋತು ಬೆಳ್ಳಿಗೆ ತೃಪ್ತಿಪಟ್ಟರು.

VISTARANEWS.COM


on

Paris Olympics
Koo

ನವದೆಹಲಿ: ಪ್ಯಾರಿಸ್​ ಒಲಿಂಪಿಕ್ಸ್(Paris Olympics)​ ಆರಂಭಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಇದು ಹಲವು ಭಾರತೀಯ ಕ್ರೀಡಾಪಟುಗಳು ವಿವಿಧ ಸ್ಪರ್ಧೆಗಳ ವಿಭಾಗದಲ್ಲಿ ಅಮೋಘ ಪ್ರದರ್ಶನ ತೋರುವ ಮೂಲಕ ಒಲಿಂಪಿಕ್ಸ್​ ಅರ್ಹತೆ(Paris 2024 Olympic quota) ಪಡೆಯುತ್ತಿದ್ದಾರೆ. ಇದೀಗ ಭಾರತದ ಮಹೇಶ್ವರಿ ಚೌಹಾಣ್(Maheshwari Chauhan) ದೋಹಾದಲ್ಲಿ ನಡೆಯುತ್ತಿರುವ ಐಎಸ್‌ಎಸ್‌ಎಫ್ ಶೂಟಿಂಗ್ ಫೈನಲ್ ಒಲಿಂಪಿಕ್ ಅರ್ಹತಾ ಚಾಂಪಿಯನ್‌ಷಿಪ್‌ನ ಮಹಿಳಾ ಸ್ಕೀಟ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆಲ್ಲುವ ಮೂಲಕ ಒಲಿಂಪಿಕ್ಸ್​ ಟಿಕೆಟ್​ ಗಿಟ್ಟಿಸಿಕೊಂಡಿದ್ದಾರೆ. ಇದರೊಂದಿಗೆ ಪ್ಯಾರಿಸ್ ಒಲಿಂಪಿಕ್ಸ್‌ಗೆ ಭಾರತದ 21 ನೇ ಕೋಟಾ ಭರ್ತಿಯಾಗಿದೆ.

ಇದೇ ಮೊದಲ ಬಾರಿಗೆ ಐಎಸ್‌ಎಸ್‌ಎಫ್ ಫೈನಲ್‌ನಲ್ಲಿ ಸ್ಪರ್ಧಿಸಿದ್ದ ಮಹೇಶ್ವರಿ, ಭಾನುವಾರ ನಡೆದ ಚಿನ್ನದ ಪದಕದ ಹೋರಾಟದಲ್ಲಿ ಚಿಲಿಯ ಫ್ರಾನ್ಸಿಸ್ಕಾ ಕ್ರೊವೆಟ್ಟೊ ಚಾಡಿಡ್ ವಿರುದ್ಧ 3-4 ಸಣ್ಣ ಅಂತರದಲ್ಲಿ ಸೋತು ಬೆಳ್ಳಿಗೆ ತೃಪ್ತಿಪಟ್ಟರು. ಈ ಸಾಧನೆ ಬಳಿಕ ಮಾತನಾಡಿದ ಮಹೇಶ್ವರಿ, ‘ಇಲ್ಲಿಗೆ ಬರಲು ಬಹಳಷ್ಟು ಕಠಿಣ ಪರಿಶ್ರಮಪಟ್ಟಿದ್ದೇನೆ. ಒಟ್ಟಾರೆಯಾಗಿ ನನ್ನ ಈ ಪ್ರದರ್ಶನ ತೃಪ್ತಿಕರವಾಗಿದೆ’ ಎಂದು ಹೇಳಿದರು.

ಕುಸ್ತಿಯಲ್ಲಿ ವಿನೇಶ್, ಅಂಶು ಮಲಿಕ್​ಗೆ ಒಲಿಂಪಿಕ್ಸ್​ ಟಿಕೆಟ್​


ಕಳೆದ ವಾರ ನಡೆದಿದ್ದ ಕುಸ್ತಿ ಸ್ಪರ್ಧೆಯಲ್ಲಿ ಕಾಮನ್‌ವೆಲ್ತ್ ಮತ್ತು ಏಷ್ಯನ್ ಗೇಮ್ಸ್ ಚಾಂಪಿಯನ್ ವಿನೇಶ್ ಫೋಗಟ್(Vinesh Phogat) ಅವರು ಏಷ್ಯನ್ ಒಲಿಂಪಿಕ್ ಅರ್ಹತಾ ಸುತ್ತಿನ ಮಹಿಳೆಯರ 50 ಕೆಜಿ ಸ್ಪರ್ಧೆಯಲ್ಲಿ ಸೆಮಿಫೈನಲ್‌ನಲ್ಲಿ ಕಜಕಿಸ್ತಾನ್‌ನ ಲಾರಾ ಗ್ಯಾನಿಕಿಜಿ ಅವರನ್ನು 10-0 ಅಂತರದಿಂದ ಸೋಲಿಸುವ ಮೂಲಕ ಪ್ಯಾರಿಸ್​ ಒಲಿಂಪಿಕ್ಸ್​ಗೆ(Paris Olympics) ಅರ್ಹತೆ ಪಡೆದಿದ್ದಾರೆ. ಅತ್ಯಂತ ಶ್ರೇಷ್ಠ ಪ್ರದರ್ಶನ ತೋರಿದ ವಿನೇಶ್ ಎದುರಾಳಿಯನ್ನು ಕೇವಲ 4:18 ನಿಮಿಷದಲ್ಲಿ ಮಣಿಸಿದರು. 57 ಕೆಜಿ ವಿಭಾಗದಲ್ಲಿ ಅಂಶು ಮಲಿಕ್‌ ಕೂಡ ಒಲಿಂಪಿಕ್ಸ್​ಗೆ(Paris Olympics) ಅರ್ಹತೆ ಪಡೆದರು. ಇವರು ಉಜ್ಬೆಕ್ ಗ್ರಾಪ್ಲರ್ ಅವರನ್ನು 10-0 ಅಂತರದಿಂದ ಸೋಲಿಸಿ ಈ ಸಾಧನೆ ಮಾಡಿದರು.

ಇದನ್ನೂ ಓದಿ IPL 2024: ಗೆಲುವಿನಲ್ಲೂ ನೂತನ ದಾಖಲೆ ಬರೆದ ಆರ್​ಸಿಬಿ

ಜುಲೈ 26ಕ್ಕೆ ಒಲಿಂಪಿಕ್ಸ್​ ಆರಂಭ

ಮಹತ್ವದ ಕ್ರೀಡಾಕೂಡವಾದ ಪ್ಯಾರಿಸ್ ಒಲಿಂಪಿಕ್ಸ್‌ನ(Paris Olympics 2024) ಉದ್ಘಾಟನಾ ಸಮಾರಂಭಕ್ಕೆ(paris olympics 2024 opening ceremony) ದಿನಾಂಕ ನಿಗದಿಯಾಗಿದೆ. ಜುಲೈ 26ರಂದು ಸೀನ್ ನದಿಯಲ್ಲಿ ಸಂಜೆ 7.30ಕ್ಕೆ ಅದ್ಧೂರಿ ಕಾರ್ಯಕ್ರಮ ನೆರವೇರಲಿದೆ.

ಒಲಿಂಪಿಕ್ಸ್​ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಕ್ರೀಡಾಂಗಣದ ಹೊರಗಡೆ ನಡೆಯುವ ಉದ್ಘಾಟನಾ ಸಮಾರಂಭ ಇದಾಗಿದೆ. 10,500ಕ್ಕೂ ಹೆಚ್ಚು ಅಥ್ಲೀಟ್‌ಗಳು ಪ್ಯಾರಿಸ್‌ನಿಂದ ಸುಮಾರು 6 ಕಿಲೋಮೀಟರ್‌ ವರೆಗೆ ಬೋಟ್‌ಗಳಲ್ಲೇ ಪರೇಡ್‌ ನಡೆಸಿ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಕ್ರೀಡಾಕೂಟ ಜುಲೈ 26ರಿಂದ ಆಗಸ್ಟ್ 11ರವರೆಗೆ ನಡೆಯಲಿದೆ. ಪ್ಯಾರಿಸ್ ಆತಿಥ್ಯದಲ್ಲಿ ನಡೆಯುತ್ತಿರುವ ಮೂರನೇ (1900 ಮತ್ತು 1924ರ ನಂತರ) ಟೂರ್ನಿ ಇದಾಗಿದೆ. 32 ಕ್ರೀಡೆಗಳು ಮತ್ತು 329 ಈವೆಂಟ್‌ಗಳನ್ನು ಯೋಜಿಸಲಾಗಿದೆ.

Continue Reading

ಕ್ರೀಡೆ

IPL 2024: ಗೆಲುವಿನಲ್ಲೂ ನೂತನ ದಾಖಲೆ ಬರೆದ ಆರ್​ಸಿಬಿ

IPL 2024: ಆರ್​ಸಿಬಿ ತಂಡ ಗುಜರಾತ್​ ವಿರುದ್ಧ ಗೆಲುವು ಸಾಧಿಸುವ ಮೂಲಕ ಐಪಿಎಲ್​ನ ಇದುವರೆಗಿನ ಇತಿಹಾಸದಲ್ಲಿ ಅತಿ ಕಡಿಮೆ ಎಸೆತಗಳನ್ನು ಎದುರಿಸಿ 200 ರನ್​ ಚೇಸಿಂಗ್​ ಮಾಡಿದ ಮೊದಲ ತಂಡ ಎಂಬ ದಾಖಲೆಯನ್ನು ತನ್ನ ಹೆಸರಿಗೆ ಬರೆದುಕೊಂಡಿತು. ಇದಕ್ಕೂ ಮುನ್ನ ಈ ದಾಖಲೆ ಮುಂಬೈ ಇಂಡಿಯನ್ಸ್​ ತಂಡದ ಪರ ಇತ್ತು. 2023ರಲ್ಲಿ ಆರ್​ಸಿಬಿ ವಿರುದ್ಧವೇ ಮುಂಬೈ ಈ ದಾಖಲೆ ಬರೆದಿತ್ತು.

VISTARANEWS.COM


on

IPL 2024
Koo

ಅಹಮದಾಬಾದ್​: ಸತತ ಸೋಲಿನಿಂದ ಕಂಗೆಟ್ಟಿದ್ದ ಆರ್​ಸಿಬಿ ಇದೀಗ ಗೆಲುವಿನ ಹಳಿಗೆ ಮರಳಿದೆ. ಇಂದಿನ ಪಂದ್ಯದಲ್ಲಿ ಗುಜರಾತ್​ ಟೈಟಾನ್ಸ್(Gujarat Titans)​ ವಿರುದ್ಧ ಗೆಲ್ಲುವು ಮೂಲಕ ಸತತ 2ನೇ ಹಾಗೂ ಒಟ್ಟಾರೆ ಮೂರನೇ ಗೆಲುವು ದಾಖಲಿಸಿದೆ. ಗುಜರಾತ್​ ವಿರುದ್ಧ 9 ವಿಕೆಟ್​ ಅಂತರದ ಗೆಲುವು ಸಾಧಿಸುವ ಮೂಲಕ ಆರ್​ಸಿಬಿ(Royal Challengers Bengaluru) ಐಪಿಎಲ್​ನಲ್ಲಿ(IPL 2024) ನೂತನ ದಾಖಲೆಯೊಂದನ್ನು ನಿರ್ಮಿಸಿದೆ.

ಅಹಮದಾಬಾದ್​ನ ನರೇಂದ್ರ ಮೋದಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್​ ಸೋತು ಬ್ಯಾಟಿಂಗ್​ಗೆ ಇಳಿಸಲ್ಪಟ್ಟ ಗುಜರಾತ್​ ಟೈಟಾನ್ಸ್​, ಸಾಯಿ ಸುದರ್ಶನ್​(84*) ಮತ್ತು ಶಾರೂಖ್​ ಖಾನ್​(58) ಅವರ ಅರ್ಧಶತಕದ ಉಪಯುಕ್ತ ಬ್ಯಾಟಿಂಗ್​ ನೆರವಿನಿಂದ 20 ಓವರ್​ಗೆ 3 ವಿಕೆಟ್​ ಕಳೆದುಕೊಂಡು ಭರ್ತಿ 200 ರನ್​ ಪೇರಿಸಿತು. ಜವಾಬಿತ್ತ ಆರ್​ಸಿಬಿ ಫುಲ್​ ಬ್ಯಾಟಿಂಗ್​ ಜೋಶ್​ನೊಂದಿಗೆ ಕೇವಲ 16 ಓವರ್​ಗಳಲ್ಲಿ 1 ವಿಕೆಟ್​ನಷ್ಟಕ್ಕೆ ಇನ್ನೂ 24 ಎಸೆತಗಳು ಬಾಕಿ ಇರುವಂತೆಯೇ 206 ರನ್​ ಬಾರಿಸಿ ಭರ್ಜರಿ ಗೆಲುವು ತನ್ನದಾಗಿಸಿಕೊಂಡಿತು.

ಈ ಗೆಲುವಿನ ಮೂಲಕ ಐಪಿಎಲ್​ನ ಇದುವರೆಗಿನ ಇತಿಹಾಸದಲ್ಲಿ ಅತಿ ಕಡಿಮೆ ಎಸೆತಗಳನ್ನು ಎದುರಿಸಿ 200 ರನ್​ ಚೇಸಿಂಗ್​ ಮಾಡಿದ ಮೊದಲ ತಂಡ ಎಂಬ ದಾಖಲೆಯನ್ನು ತನ್ನ ಹೆಸರಿಗೆ ಬರೆದುಕೊಂಡಿತು. ಇದಕ್ಕೂ ಮುನ್ನ ಈ ದಾಖಲೆ ಮುಂಬೈ ಇಂಡಿಯನ್ಸ್​ ತಂಡದ ಪರ ಇತ್ತು. 2023ರಲ್ಲಿ ಆರ್​ಸಿಬಿ ವಿರುದ್ಧವೇ ಮುಂಬೈ ಈ ದಾಖಲೆ ಬರೆದಿತ್ತು.

ಅತಿ ಹೆಚ್ಚು ಬಾಲ್​ ಉಳಿಸಿ 200 ರನ್​ ಚೇಸಿಂಗ್​ ನಡೆಸಿದ ತಂಡಗಳು


ಆರ್​ಸಿಬಿ-24 ಎಸೆತ ಬಾಕಿ ಇರುವಂತೆ ಗೆಲುವು

ಮುಂಬೈ ಇಂಡಿಯನ್ಸ್​- 21 ಎಸೆತ ಬಾಕಿ ಇರುವಂತೆ ಗೆಲುವು

ಡೆಲ್ಲಿ ಕ್ಯಾಪಿಟಲ್ಸ್​-15 ಎಸೆತ ಬಾಕಿ ಇರುವಂತೆ ಗೆಲುವು

ಮುಂಬೈ ಇಂಡಿಯನ್ಸ್​-12 ಎಸೆತ ಬಾಕಿ ಇರುವಂತೆ ಗೆಲುವು

ಇದನ್ನೂ ಓದಿ RCB vs GT: ವಿಲ್​ ಜ್ಯಾಕ್ಸ್ ಅಜೇಯ ಶತಕ; ಆರ್​ಸಿಬಿಗೆ 9 ವಿಕೆಟ್​ ಭರ್ಜರಿ ಗೆಲುವು

ಈ ಪಂದ್ಯದಲ್ಲಿ ವಿಸ್ಫೋಟಕ ಬ್ಯಾಟಿಂಗ್​ ನಡೆಸಿದ ವಿಲ್​ ಜಾಕ್ಸ್​ 41 ಎಸೆತಗಳಿಂದ ಬರೋಬ್ಬರಿ 10 ಸಿಕ್ಸರ್​ ಮತ್ತು 5 ಬೌಂಡರಿ ಬಾರಿಸಿ ಭರ್ತಿ 100 ರನ್​ ಪೇರಿಸಿದರು. ಈ ಮೂಲಕ ಐಪಿಎಲ್​ನಲ್ಲಿ ಚೊಚ್ಚಲ ಶತಕ ಪೂರ್ತಿಗೊಳಿಸಿದರು. ಇವರಿಗೆ ಮತ್ತೊಂದು ತುದಿಯಲ್ಲಿ ಉತ್ತಮ ಸಾಥ್​ ನೀಡಿದ ವಿರಾಟ್​ ಕೊಹ್ಲಿ ಕೇವಲ 32 ಎಸೆತಗಳಿಂದ ಅರ್ಧಶತಕ ಪೂರ್ತಿಗೊಳಿಸಿ ಒಟ್ಟು 44 ಎಸೆತಗಳಿಂದ ಅಜೇಯ 70 ರನ್​ ಬಾರಿಸಿ ಮಿಂಚಿದರು.

ದಾಖಲೆ ಬರೆದ ಕೊಹ್ಲಿ


ವಿರಾಟ್​ ಕೊಹ್ಲಿ ಅವರು ಈ ಆವೃತ್ತಿಯಲ್ಲಿ 500 ರನ್​ಗಳ ಗಡಿ ದಾಟುವ ಮೂಲಕ ಐಪಿಎಲ್​ ಇತಿಹಾಸದಲ್ಲಿ ಅತ್ಯಧಿಕ ಬಾರಿ 500 ರನ್ ಗಡಿ ದಾಡಿದ ಆಸ್ಟ್ರೇಲಿಯಾದ ಡೇವಿಡ್​ ವಾರ್ನರ್​ ಅವರ ದಾಖಲೆಯನ್ನು ಸರಿಗಟ್ಟಿದರು. ಉಭಯ ಆಟಗಾರರು ಕೂಡ 7 ಬಾರಿ ಈ ಸಾಧನೆ ಮಾಡಿದ್ದಾರೆ. ಗುಜರಾತ್​ ವಿರುದ್ಧ ಕೊಹ್ಲಿ ಬಾರಿಸಿದ ಮೂರನೇ ಅರ್ಧಶತಕ ಇದಾಗಿದೆ. ಒಂದು ಶತಕ ಕೂಡ ಒಳಗೊಂಡಿದೆ.

Continue Reading
Advertisement
tomato price rise
ಕರ್ನಾಟಕ12 mins ago

Tomato Price: ಗ್ರಾಹಕನ ಜೇಬು ಸುಡಲು ಟೊಮ್ಯಾಟೊ ಸಜ್ಜು, ಬಾಕ್ಸ್‌ಗೆ 400 ರೂಪಾಯಿಗೆ ಬೆಲೆ ಏರಿಕೆ

srinivasa prasad
ಪ್ರಮುಖ ಸುದ್ದಿ43 mins ago

Srinivasa Prasad passes away‌: 7 ಬಾರಿ ಸಂಸದರಾಗಿದ್ದ ಸ್ವಾಭಿಮಾನಿ, ದಕ್ಷಿಣ ಕರ್ನಾಟಕದ ʼದಲಿತ ಸೂರ್ಯʼ

ಕರ್ನಾಟಕ51 mins ago

Srinivas Prasad: ತೀವ್ರ ಹೃದಯಾಘಾತದಿಂದ ಹಿರಿಯ ಸಂಸದ ಶ್ರೀನಿವಾಸ್‌ ಪ್ರಸಾದ್‌ ವಿಧಿವಶ

Sleeping Tips
ಆರೋಗ್ಯ1 hour ago

Sleeping Tips: ದಿನಕ್ಕೆಷ್ಟು ತಾಸು ನಿದ್ದೆ ಮಾಡುತ್ತೀರಿ ನೀವು? ಇದು ಗಂಭೀರ ವಿಷಯ!

Rishabh Pant
ಅಂಕಣ1 hour ago

ರಾಜಮಾರ್ಗ ಅಂಕಣ: ರಿಶಭ್ ಪಂತ್ – ಕಮ್ ಬ್ಯಾಕ್ ಅಂದರೆ ಹೀಗಿರಬೇಕು!

Karnataka Weather
ಕರ್ನಾಟಕ2 hours ago

Karnataka Weather: ಇಂದು ಬೀದರ್, ಕಲಬುರಗಿ ಸೇರಿ ಹಲವೆಡೆ ಶಾಖದ ಅಲೆ ಎಚ್ಚರಿಕೆ; ಇನ್ನೂ ಎಲ್ಲಿಯವರೆಗೆ ಈ ರಣ ಬಿಸಿಲು?

Tooth Decay
ಆರೋಗ್ಯ2 hours ago

Tooth Decay: ನಮ್ಮ ಈ ದುರಭ್ಯಾಸಗಳು ಹಲ್ಲಿನ ಹುಳುಕಿಗೆ ಕಾರಣವಾಗುತ್ತವೆ

dina bhavishya read your daily horoscope predictions for April 29 2024
ಭವಿಷ್ಯ3 hours ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

love jihad
ಕರ್ನಾಟಕ8 hours ago

Love Jihad Case: ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್; ಬಾಲಕಿಯನ್ನು ಪುಸಲಾಯಿಸಿ ಕರೆತಂದ ಅನ್ಯಕೋಮಿನ ಯುವಕ!

BUS
ಕರ್ನಾಟಕ8 hours ago

ಚಿಕ್ಕಮಗಳೂರಿನ ದತ್ತಪೀಠದಲ್ಲಿ 100 ಅಡಿ ಆಳಕ್ಕೆ ಬಿದ್ದ ಪ್ರವಾಸಿ ಬಸ್;‌ ಬಾಲಕ ಸಾವು, 29 ಮಂದಿಗೆ ಗಾಯ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for April 29 2024
ಭವಿಷ್ಯ3 hours ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Congress fears defeat over EVMs Congress will not win a single seat in Karnataka says PM Narendra Modi
Lok Sabha Election 202415 hours ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 202418 hours ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 202420 hours ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 202420 hours ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
ಪ್ರಮುಖ ಸುದ್ದಿ23 hours ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 20242 days ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

road Accident in kolar evm
ಕೋಲಾರ2 days ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ2 days ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

ಟ್ರೆಂಡಿಂಗ್‌