Australian Open: ಗಾಫ್​ಗೆ ಸೋಲಿನ ಆಘಾತವಿಕ್ಕಿ ಫೈನಲ್​ಗೆ ಲಗ್ಗೆಯಿಟ್ಟ ಸಬಲೆಂಕಾ - Vistara News

ಕ್ರೀಡೆ

Australian Open: ಗಾಫ್​ಗೆ ಸೋಲಿನ ಆಘಾತವಿಕ್ಕಿ ಫೈನಲ್​ಗೆ ಲಗ್ಗೆಯಿಟ್ಟ ಸಬಲೆಂಕಾ

ಬೆಲರೂಸ್‌ನ ಅರಿನಾ ಸಬಲೆಂಕಾ ಅವರು ಆಸ್ಟ್ರೇಲಿಯನ್ ಓಪನ್(Australian Open) ಮಹಿಳಾ ಸಿಂಗಲ್ಸ್​ನಲ್ಲಿ ಫೈನಲ್‌ ಪ್ರವೇಶಿಸಿದ್ದಾರೆ.

VISTARANEWS.COM


on

Aryna Sabalenka
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮೆಲ್ಬೊರ್ನ್​: ವಿಶ್ವದ ಎರಡನೇ ಶ್ರೇಯಾಂಕಿತ ಆಟಗಾರ್ತಿ ಅರಿನಾ ಸಬಲೆಂಕಾ(Aryna Sabalenka) ಆಸ್ಟ್ರೇಲಿಯನ್ ಓಪನ್(Australian Open) ಫೈನಲ್‌ ತಲುಪಿದ್ದಾರೆ. ಸೆಮಿಫೈನಲ್​​ ಪಂದ್ಯದಲ್ಲಿ ಯುವ ಆಟಗಾರ್ತಿ ಕೊಕೊ ಗಾಫ್(Coco Gauff) ಅವರನ್ನು ಮಣಿಸಿ ಪ್ರಶಸ್ತಿ ಸುತ್ತಿಗೇರಿದ್ದಾರೆ.

ಕಳೆದ ವರ್ಷದ ಯುಎಸ್ ಓಪನ್ ಫೈನಲ್‌ನಲ್ಲಿ ಅಮೆರಿಕದ ಕೊಕೊ ಗಾಫ್ ಅವರು​ ಬೆಲರೂಸ್‌ನ ಅರಿನಾ ಸಬಲೆಂಕಾಗೆ ಸೋಲಿನ ಆಘಾತವಿಕ್ಕಿ ಚೊಚ್ಚಲ ಗ್ರ್ಯಾನ್‌ಸ್ಲಾಮ್‌ ಪ್ರಶಸ್ತಿಗೆ ಮುತ್ತಿಕ್ಕಿದ್ದರು. ಅಂದಿನ ಫೈನಲ್​ ಸೋಲಿಗೆ ಈ ಬಾರಿ ಆಸ್ಟ್ರೇಲಿಯಾ ಓಪನ್​ ಟೂರ್ನಿಯಲ್ಲಿ ಸಬಲೆಂಕಾ ಸೇಡು ತೀರಿಸಿಕೊಂಡಿದ್ದಾರೆ. ಗುರುವಾರ ನಡೆದ ಮಹಿಳಾ ಸಿಂಗಲ್ಸ್​ನ ಸೆಮಿ ಫೈನಲ್​ ಕಾದಾಟದಲ್ಲಿ 7-6, 4-6 ನೇರ ಸೆಟ್​ಗಳಿಂದ ಮಣಿಸಿದ್ದಾರೆ.

ಸೇಡಿನ ಪಂದ್ಯದಲ್ಲಿ ಕಣಕ್ಕಿಳಿದ್ದ ಬೆಲರೂಸ್‌ನ ಅರಿನಾ ಸಬಲೆಂಕಾ ಬಲಿಷ್ಠ ಹೊಡೆತಗಳ ಮೂಲಕ ಆರಂಭದಿಂದಲೇ ಗಾಫ್​ ಮೇಲೆ ಸವಾರಿ ನಡೆಸಿದಿದರು. ಎರಡೇ ಸೆಟ್​ನಲ್ಲಿ ಪಂದ್ಯವನ್ನು ಮುಗಿಸಿದರು. ಈ ಹೋರಾಟ ಒಂದು ಗಂಟೆ 46 ನಿಮಿಷದಲ್ಲಿ ಅಂತ್ಯ ಕಂಡಿತ್ತು. ಈ ಟೂರ್ನಿಯ ಹಾಲಿ ಚಾಂಪಿಯನ್​ ಆಗಿರುವ ಸಬಲೆಂಕಾ ಈ ಬಾರಿಯೂ ಫೈನಲ್​ನಲ್ಲಿ ಗೆದ್ದು ಪ್ರಶಸ್ತಿ ಉಳಿಸಿಕೊಳ್ಳವ ವಿಶ್ವಾಸದಲ್ಲಿದ್ದಾರೆ. ಸಬಲೆಂಕಾ ಫೈನಲ್​ ಪಂದ್ಯದಲ್ಲಿ ದಯಾನಾ ಯಾಸ್ಟ್ರೆಮ್ಸ್ಕಾ-ಕಿನ್ವೆನ್ ಝೆಂಗ್ ನಡುವಣ ವಿಜೇತರನ್ನು ಎದುರಿಸಲಿದ್ದಾರೆ.

ಫೈನಲ್​​ ಪ್ರವೇಶಿಸಿದ ರೋಹನ್ ಬೋಪಣ್ಣ-ಮ್ಯಾಥ್ಯೂ ಎಬ್ಡೆನ್‌ ಜೋಡಿ


ಭಾರತದ ಹಿರಿಯ ಟೆನಿಸ್‌ ತಾರೆ ರೋಹನ್ ಬೋಪಣ್ಣ(Rohan Bopanna) ಅವರು ಆಸ್ಟ್ರೇಲಿಯನ್ ಓಪನ್(Australian Open) ಟೆನಿಸ್‌ 2024 ರ ಪುರುಷರ ಡಬಲ್ಸ್​ನಲ್ಲಿ ಫೈನಲ್‌ ತಲುಪಿದ್ದಾರೆ. ಮೂಲಕ ಗ್ರ್ಯಾಂಡ್‌ಸ್ಲಾಮ್​ನಲ್ಲಿ ಹೊಸ ಇತಿಹಾಸವನ್ನು ನಿರ್ಮಿಸಿದ್ದಾರೆ. ಬೋಪಣ್ಣ ಮತ್ತು ಅವರ ಜತೆಗಾರ ಮ್ಯಾಥ್ಯೂ ಎಬ್ಡೆನ್(Matthew Ebden) ಗುರುವಾರ ನಡೆದ ಸೆಮಿಫೈನಲ್​ ಪಂದ್ಯದಲ್ಲಿ ಅಧಿಕಾರಯುತ ಗೆಲುವು ಸಾಧಿಸಿ ಪ್ರಶಸ್ತಿ ಸುತ್ತಿಗೇರಿದ್ದಾರೆ.

ಇದನ್ನೂ ಓದಿ Australian Open 2024: ಇತಿಹಾಸ ಸೃಷ್ಟಿಸಿದ ರೋಹನ್‌ ಬೋಪಣ್ಣ; ನಂ.1 ಹಿರಿಯ ಟೆನಿಸ್‌ ಆಟಗಾರ

ಗುರುವಾರ ನಡೆದ ಪುರುಷರ ಡಬಲ್ಸ್​ನ ಸೆಮಿಫೈನಲ್​ ಪಂದ್ಯದಲ್ಲಿ ವಿಶ್ವ ನಂ.2 ಇಂಡೋ-ಆಸೀಸ್​ ಜೋಡಿ ರೋಚಕ 3 ಸೆಟ್‌ಗಳ ಸೆಮಿ ಕಾದಾಟದಲ್ಲಿ ಥಾಮಸ್ ಮಚಾಕ್ ಮತ್ತು ಜಾಂಗ್ ಝಿಶೆನ್ ಜೋಡಿಯನ್ನು ಸೋಲಿಸಿದರು. ಬೋಪಣ್ಣ-ಎಬ್ಡೆನ್ ಜೋಡಿಯು ಮೊದಲ ಸೆಟ್ ಅನ್ನು 6-3 ರಿಂದ ಆರಾಮವಾಗಿ ಗೆದ್ದುಕೊಂಡರು. ನಂತರ ಎರಡನೇ ಸೆಟ್​ನಲ್ಲಿ 3-6 ರಲ್ಲಿ ಸೋತರು. ಮೂರನೇ ಸೆಟ್‌ನಲ್ಲಿ ಎರಡೂ ಜೋಡಿಗಳು ತಮ್ಮ ಅತ್ಯುತ್ತಮ ಪ್ರದರ್ಶನ ನೀಡಿ ಟೈ ಬ್ರೇಕರ್‌ಗೆ ಕೊಂಡೊಯ್ದರು. ಬೋಪಣ್ಣ ಮತ್ತು ಎಬ್ಡೆನ್ ಅವರು ಟೈ ಬ್ರೇಕರನ್ನು 10-7 ರಿಂದ ಗೆದ್ದು ಫೈನಲ್ ಟಿಕೆಟ್​ ಪಡೆದರು. ಇದೇ ವೇಳೆ ಬೋಪಣ್ಣ ಗ್ರ್ಯಾಂಡ್ ಸ್ಲಾಮ್ ಫೈನಲ್‌ ತಲುಪಿದ ಅತ್ಯಂತ ಹಿರಿಯ ಆಟಗಾರ ಎನ್ನುವ ತಮ್ಮದೇ ದಾಖಲೆಯನ್ನು ಮುರಿದರು.

ಬೋಪಣ್ಣ ಆಸ್ಟ್ರೇಲಿಯನ್ ಓಪನ್ ಫೈನಲ್ ಪ್ರವೇಶಿಸಿದ್ದು ಇದೇ ಮೊದಲು. 2023ರಲ್ಲಿ ನಡೆದಿದ್ದ ಯುಎಸ್ ಓಪನ್ ಗ್ರ್ಯಾನ್‌ಸ್ಲಾಮ್‌ ಟೂರ್ನಿಯಲ್ಲಿ ಬೋಪಣ್ಣ ಮತ್ತು ಎಬ್ಡೆನ್ ಫೈನಲ್‌ಗೆ ಪ್ರವೇಶಿಸಿದ್ದರು. ಆದರೆ ಫೈನಲ್​ನಲ್ಲಿ ಸೋತು ರನ್ನರ್​ ಅಪ್​ಗೆ ತೃಪ್ತಿಪಟ್ಟಿದ್ದರು. ಈ ಬಾರಿಯ ಆಟವನ್ನು ನೋಡುವಾಗ ಬೋಪಣ್ಣ-ಎಬ್ಡೆನ್ ಜೋಡಿ ಚೊಚ್ಚಲ ಗ್ರ್ಯಾನ್‌ಸ್ಲಾಮ್‌ ಪ್ರಶಸ್ತಿಗೆ ಮುತ್ತಿಕ್ಕುವ ನಿರೀಕ್ಷೆಯಲ್ಲಿದ್ದಾರೆ.

ಎರಡನೇ ಶ್ರೇಯಾಂಕದ ಇಂಡೋ-ಆಸ್ಟ್ರೇಲಿಯನ್ ಜೋಡಿಯು ಮೂರನೇ ಸೆಟ್‌ನಲ್ಲಿ ತಮ್ಮ ಪ್ರತಿಸ್ಪರ್ಧಿಗಳಿಂದ ಕೆಲವು ತೀವ್ರ ಪ್ರತಿರೋಧವನ್ನು ಎದುರಿಸಿತು. ಆದರೆ ಅಂತಿಮವಾಗಿ ಸೂಪರ್ ಟೈ ಬ್ರೇಕರ್ಸ್​ನಲ್ಲಿ ಮೇಲುಗೈ ಸಾಧಿಸಿದ ಬೋಪಣ್ಣ-ಎಬ್ಡೆನ್ ಜೋಡಿ 6-3 3-6 7-6 (10-7) ಅಂಕಗಳೊಂದಿಗೆ ಹೆದ್ದು ಫೈನಲ್​ಗೆ ಮುನ್ನಡೆದರು. ಈ ಹೋರಾಟ ಎರಡು ಗಂಟೆ ಎರಡು ನಿಮಿಷದ ವರೆಗೆ ಸಾಗಿತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Paris Olympics 2024: ಪ್ಯಾರಿಸ್​ ಒಲಿಂಪಿಕ್ಸ್​ಗೆ ಅರ್ಹತೆ ಪಡೆದ ಕನ್ನಡಿಗ ಬೋಪಣ್ಣ, ಸುಮಿತ್‌ ನಾಗಲ್‌

Paris Olympics 2024: 44 ವರ್ಷದ ಬೋಪಣ್ಣ ಜನವರಿಯಲ್ಲಿ ಆಸ್ಟ್ರೇಲಿಯನ್ ಓಪನ್ ಗ್ರ್ಯಾಂಡ್ ಸ್ಲಾಮ್ ಗೆದ್ದು ಕಳೆದ ವಾರ ಫ್ರೆಂಚ್ ಓಪನ್‌ನಲ್ಲಿ ಸೆಮಿಫೈನಲ್ ತಲುಪಿದ್ದರು. ಬೋಪಣ್ಣ ಲಂಡನ್ 2012 ಗೇಮ್ಸ್ ಮತ್ತು ರಿಯೊ 2016 ರಲ್ಲಿ ಭಾರತವನ್ನು ಪ್ರತಿನಿಧಿಸಿದ್ದರು. ಆದರೆ ಟೋಕಿಯೊ ಒಲಿಂಪಿಕ್ಸ್‌ಗೆ ಅರ್ಹತೆ ಕಳೆದುಕೊಂಡಿದ್ದರು.

VISTARANEWS.COM


on

Paris Olympics 2024
Koo

ನವದೆಹಲಿ: ಭಾರತದ ಹಿರಿಯ ಟೆನಿಸ್​ ಆಟಗಾರ ರೋಹನ್‌ ಬೋಪಣ್ಣ(Rohan Bopanna) ಮತ್ತು ಸುಮಿತ್‌ ನಾಗಲ್‌(Sumit Nagal) ಮುಂದಿನ ತಿಂಗಳು ಪ್ಯಾರಿಸ್​ನಲ್ಲಿ ನಡೆಯುವ ಒಲಿಂಪಿಕ್ಸ್​ಗೆ(Paris Olympics 2024) ಅರ್ಹತೆ ಗಿಟ್ಟಿಸಿಕೊಂಡಿದ್ದಾರೆ. ನೂತನ ಎಟಿಪಿ ರ್‍ಯಾಂಕಿಂಗ್‌ನಲ್ಲಿ ಸುಮಿತ್‌ 18 ಸ್ಥಾನ ಮೇಲೇರಿ 77ನೇ ರ್‍ಯಾಂಕಿಂಗ್‌ ಪಡೆದ ಕಾರಣ ಅವರಿಗೆ ಒಲಿಂಪಿಕ್ಸ್‌ ಅರ್ಹತೆ ಲಭಿಸಿತು.

ಭಾನುವಾರ ಜರ್ಮನಿಯಲ್ಲಿ ನಡೆದ ಹೀಲ್‌ಬ್ರಾನ್ ನೆಕರ್‌ಕಪ್‌ ಚಾಲೆಂಜರ್‌ ಫೈನಲ್​ನಲ್ಲಿ ಸುಮಿತ್‌ ಅವರು ಸ್ವಿಜರ್ಲೆಂಡ್‌ನ‌ ಅಲೆಕ್ಸಾಂಡರ್‌ ರಿಚರ್ಡ್ಸ್‌ ವಿರುದ್ಧ 6 -1, 6-7 (5), 6-3 ಅಂತರದ ಜಯ ಗಳಿಸಿ ಚಾಂಪಿಯನ್‌ ಆಗಿ ಮಿಂಚಿದ್ದರು. ಈ ಗೆಲುವಿನಿಂದಾಗಿ ಸುಮಿತ್‌ ರ್‍ಯಾಂಕಿಂಗ್‌ನಲ್ಲಿ ಭಾರೀ ಪ್ರಗತಿ ಕಂಡುಬಂದಿತ್ತು. ಇದೀಗ ಒಲಿಂಪಿಕ್ಸ್​ ಟಿಕೆಟ್​ ಕೂಡ ಪಡೆದಿದ್ದಾರೆ. ಸುಮಿತ್‌ ನಾಗಲ್‌ 2012ರ ಬಳಿಕ ಒಲಿಂಪಿಕ್ಸ್‌ ಟೆನಿಸ್‌ ಸಿಂಗಲ್ಸ್‌ನಲ್ಲಿ ಭಾರತವನ್ನು ಪ್ರತಿನಿಧಿಸಲಿರುವ ಮೊದಲ ಆಟಗಾರ ಎನಿಸಿಕೊಂಡಿದ್ದಾರೆ. 2012ರಲ್ಲಿ ಸೋಮದೇವ್‌ ದೇವವರ್ಮನ್‌ ಆಡಿದ್ದರು.

ಇದನ್ನೂ ಓದಿ Paris Olympics 2024: ಕೊನೆಗೂ ಪ್ಯಾರಿಸ್​ ಒಲಿಂಪಿಕ್ಸ್​ ಟಿಕೆಟ್​ ಪಡೆದ ಬಾಕ್ಸರ್​ ಅಮಿತ್‌ ಪಂಘಲ್‌

ವಯಸ್ಸು 40 ದಾಟಿದರೂ ಕೂಡ ಯುವ ಆಟಗಾರರು ಕೂಡ ನಾಚುವಂತ ಪ್ರದರ್ಶನ ತೋರುತ್ತಿರುವ ಕನ್ನಡಿಗ ಬೋಪಣ್ಣ ಕೂಡ ಒಲಿಂಪಿಕ್ಸ್​ನಲ್ಲಿ ಕಣಕ್ಕಿಳಿಯಲಿದ್ದಾರೆ. ಪುರುಷರ ಡಬಲ್ಸ್​ನಲ್ಲಿ ಅವರು ಸ್ಪರ್ಧಿಸಲಿದ್ದಾರೆ. ಅವರು ವಿಶ್ವ ಶ್ರೇಯಾಂಕದ 67ನೇ ಶ್ರೇಯಾಂಕದ ಶ್ರೀರಾಮ್ ಬಾಲಾಜಿ ಅವರನ್ನು ಒಲಿಂಪಿಕ್ಸ್‌ನಲ್ಲಿ ತಮ್ಮ ಜತೆಗಾರನಾಗಿ ಆಯ್ಕೆ ಮಾಡುವ ನಿರೀಕ್ಷೆಯಿದೆ.

44 ವರ್ಷದ ಬೋಪಣ್ಣ ಜನವರಿಯಲ್ಲಿ ಆಸ್ಟ್ರೇಲಿಯನ್ ಓಪನ್ ಗ್ರ್ಯಾಂಡ್ ಸ್ಲಾಮ್ ಗೆದ್ದು ಕಳೆದ ವಾರ ಫ್ರೆಂಚ್ ಓಪನ್‌ನಲ್ಲಿ ಸೆಮಿಫೈನಲ್ ತಲುಪಿದ್ದರು. ಬೋಪಣ್ಣ ಲಂಡನ್ 2012 ಗೇಮ್ಸ್ ಮತ್ತು ರಿಯೊ 2016 ರಲ್ಲಿ ಭಾರತವನ್ನು ಪ್ರತಿನಿಧಿಸಿದ್ದರು. ಆದರೆ ಟೋಕಿಯೊ ಒಲಿಂಪಿಕ್ಸ್‌ಗೆ ಅರ್ಹತೆ ಕಳೆದುಕೊಂಡಿದ್ದರು.

ಜುಲೈ 26ಕ್ಕೆ ಒಲಿಂಪಿಕ್ಸ್​ ಆರಂಭ

ಮಹತ್ವದ ಕ್ರೀಡಾಕೂಡವಾದ ಪ್ಯಾರಿಸ್ ಒಲಿಂಪಿಕ್ಸ್‌ನ(Paris Olympics 2024) ಉದ್ಘಾಟನಾ ಸಮಾರಂಭಕ್ಕೆ(paris olympics 2024 opening ceremony) ದಿನಾಂಕ ನಿಗದಿಯಾಗಿದೆ. ಜುಲೈ 26ರಂದು ಸೀನ್ ನದಿಯಲ್ಲಿ ಸಂಜೆ 7.30ಕ್ಕೆ ಅದ್ಧೂರಿ ಕಾರ್ಯಕ್ರಮ ನೆರವೇರಲಿದೆ.

ಒಲಿಂಪಿಕ್ಸ್​ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಕ್ರೀಡಾಂಗಣದ ಹೊರಗಡೆ ನಡೆಯುವ ಉದ್ಘಾಟನಾ ಸಮಾರಂಭ ಇದಾಗಿದೆ. 10,500ಕ್ಕೂ ಹೆಚ್ಚು ಅಥ್ಲೀಟ್‌ಗಳು ಪ್ಯಾರಿಸ್‌ನಿಂದ ಸುಮಾರು 6 ಕಿಲೋಮೀಟರ್‌ ವರೆಗೆ ಬೋಟ್‌ಗಳಲ್ಲೇ ಪರೇಡ್‌ ನಡೆಸಿ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಕ್ರೀಡಾಕೂಟ ಜುಲೈ 26ರಿಂದ ಆಗಸ್ಟ್ 11ರವರೆಗೆ ನಡೆಯಲಿದೆ. ಪ್ಯಾರಿಸ್ ಆತಿಥ್ಯದಲ್ಲಿ ನಡೆಯುತ್ತಿರುವ ಮೂರನೇ (1900 ಮತ್ತು 1924ರ ನಂತರ) ಟೂರ್ನಿ ಇದಾಗಿದೆ. 32 ಕ್ರೀಡೆಗಳು ಮತ್ತು 329 ಈವೆಂಟ್‌ಗಳನ್ನು ಯೋಜಿಸಲಾಗಿದೆ.

ಚಿನ್ನ ಗೆದ್ದ ಬಾಕ್ಸರ್​ಗಳಿಗೆ ಭಾರೀ ನಗದು ಪ್ರಶಸ್ತಿ ಘೋಷಣೆ


ಕೆಲವು ತಿಂಗಳ ಹಿಂದೆ ವಿಶ್ವ ಅಥ್ಲೆಟಿಕ್ (ಡಬ್ಲ್ಯುಎ) ಸಂಸ್ಥೆ ಟ್ರ್ಯಾಕ್ ಮತ್ತು ಫೀಲ್ಡ್(track & field gold medallists) ವಿಭಾಗದಲ್ಲಿ ಚಿನ್ನ ಜಯಿಸುವ ಅಥ್ಲೀಟ್‌ಗಳಿಗೆ 41.60 ಲಕ್ಷ ನಗದು ಪ್ರಶಸ್ತಿ ನೀಡುವುದಾಗಿ ಪ್ರಕಟಿಸಿತ್ತು. ಇದೀಗ ಅಂತರರಾಷ್ಟ್ರೀಯ ಬಾಕ್ಸಿಂಗ್ ಸಂಸ್ಥೆ (International Boxing Association) ಕೂಡ ಮಹತ್ವದ ನಿರ್ಧಾರ ಕೈಗೊಂಡಿದ್ದು, ಚಿನ್ನ ಗೆಲ್ಲುವ ಪ್ರತಿಯೊಬ್ಬ ಬಾಕ್ಸರ್​ಗಳಿಗೆ 41.68 ಲಕ್ಷ ನಗದು ಬಹುಮಾನ ನೀಡುವುದಾಗಿ ಘೋಷಿಸಿದೆ. ಜತೆಗೆ ಕೋಚ್‌, ರಾಷ್ಟ್ರೀಯ ತಂಡಗಳಿಗೆ 10 ಲಕ್ಷ ನೀಡುವುದಾಗಿಯೂ ಪ್ರಕಟಿಸಿದೆ. ಆದರೆ, 2020ರ ಟೋಕಿಯೊ ಒಲಿಂಪಿಕ್ಸ್‌ ಬಾಕ್ಸಿಂಗ್ ಸ್ಪರ್ಧೆಗಳನ್ನು ಐಬಿಎ(IBA) ನೆರವಿಲ್ಲದೇ ಐಒಸಿಯೇ ಸಂಘಟಿಸಿತ್ತು. ಕ್ರೀಡಾ ಸಂಸ್ಥೆಗಳು ನೀಡುವ ಬಹುಮಾನ ಹಣಕ್ಕೂ ಐಒಸಿ ಸಮ್ಮತಿ ನೀಡಿಲ್ಲ.

Continue Reading

ಕ್ರೀಡೆ

Danielle Wyatt Marriage: ಸಲಿಂಗ ಸಂಗಾತಿಯೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಇಂಗ್ಲೆಂಡ್ ಮಹಿಳಾ ಕ್ರಿಕೆಟ್​ ತಂಡದ ಆಟಗಾರ್ತಿ

Danielle Wyatt Marriage: ಕಳೆದ ವರ್ಷ ಮಾರ್ಚ್ 2ರಂದು ಜಾರ್ಜಿ ಹಾಡ್ಜ್ ಅವರೊಂದಿಗೆ ವ್ಯಾಟ್ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಇದು ಇಂಗ್ಲೆಂಡ್​ ಆಟಗಾರ್ತಿ ಸಲಿಂಗ ವಿವಾಹವಾದ ಎರಡನೇ ನಿದರ್ಶನವಾಗಿದೆ. ಇದಕ್ಕೂ ಮುನ್ನ ಇಂಗ್ಲೆಂಡ್ ಮಹಿಳಾ ರಾಷ್ಟ್ರೀಯ ತಂಡದ ಕ್ರಿಕೆಟಿಗರಾದ ನತಾಲಿಯಾ ಸೀವರ್ ಮತ್ತು ಕ್ಯಾಥರಿನ್ ಬ್ರಂಟ್ ಸಲಿಂಗ ವಿವಾಹವಾಗಿದ್ದರು.

VISTARANEWS.COM


on

Danielle Wyatt Marriage
Koo

ಲಂಡನ್: ಇಂಗ್ಲೆಂಡ್ ಮಹಿಳಾ ಕ್ರಿಕೆಟ್ ತಂಡದ ಸ್ಟಾರ್​ ಆಟಗಾರ್ತಿ ಡೇನಿಯಲ್ ವ್ಯಾಟ್(Danielle Wyatt) ಅವರು ತನ್ನ ಬಹುಕಾಲ ಗೆಳತಿ ಜಾರ್ಜಿ ಹಾಡ್ಜ್(Georgie Hodge) ಅವರೊಂದಿಗೆ ಮದುವೆಯಾಗಿದ್ದಾರೆ. ಮದುವೆಯ ಫೋಟೊಗಳನ್ನು ವ್ಯಾಟ್ ತಮ್ಮ ಇನ್​​ಸ್ಟಾಗ್ರಾಮ್ ಮತ್ತು ಸಾಮಾಜಿಕ ಜಾಲತಾಣ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ.


ಕಳೆದ ವರ್ಷ ಮಾರ್ಚ್ 2ರಂದು ಜಾರ್ಜಿ ಹಾಡ್ಜ್ ಅವರೊಂದಿಗೆ ವ್ಯಾಟ್ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಇದು ಇಂಗ್ಲೆಂಡ್​ ಆಟಗಾರ್ತಿ ಸಲಿಂಗ ವಿವಾಹವಾದ ಎರಡನೇ ನಿದರ್ಶನವಾಗಿದೆ. ಇದಕ್ಕೂ ಮುನ್ನ ಇಂಗ್ಲೆಂಡ್ ಮಹಿಳಾ ರಾಷ್ಟ್ರೀಯ ತಂಡದ ಕ್ರಿಕೆಟಿಗರಾದ ನತಾಲಿಯಾ ಸೀವರ್ ಮತ್ತು ಕ್ಯಾಥರಿನ್ ಬ್ರಂಟ್ ಸಲಿಂಗ ವಿವಾಹವಾಗಿದ್ದರು.


ಭಾರತದ ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿಗೆ 2014ರಲ್ಲಿ ಡೇನಿಯಲ್ ವ್ಯಾಟ್​ “ಕೊಹ್ಲಿ ನನ್ನನ್ನು ಮದುವೆಯಾಗು!!’ ಎಂದು ಟ್ವೀಟ್ ಮೂಲಕ ಪ್ರೇಮ ನಿವೇದನೆ ಮಾಡಿದ್ದರು. ಆದರೆ ಕೊಹ್ಲಿ ಇದಕ್ಕೆ ಕೊಹ್ಲಿ ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ.

ಇದನ್ನೂ ಓದಿ WPL Auction: ಡಬ್ಲ್ಯುಪಿಎಲ್ ಟೂರ್ನಿಯಲ್ಲಿ ಅವಕಾಶ ಸಿಗದೆ, ಹೃದಯ ಒಡೆದು ಹೋಗಿದೆ; ಡೇನಿಯಲ್ ವ್ಯಾಟ್

‘ನಮ್ಮ ಮುಂದಿನ ಜೀವನವನ್ನು ದೃಢಪಡಿಸಿಕೊಳ್ಳುತ್ತಿದ್ದೇವೆ’ ಎಂದು ಮನೆಯ ಎಮೊಜಿಗಳನ್ನು ಹಾಕಿ ಟ್ವಿಟರ್​ ಪೋಸ್ಟ್​ ಮೂಲಕ ಡೇನಿಯಲ್‌ ವ್ಯಾಟ್‌ ತಮ್ಮ ವಿವಾಹದ(Danielle Wyatt Marriage) ವಿಚಾರವನ್ನು ತಿಳಿಸಿದ್ದಾರೆ. ಮದುವೆಯ ಮೂರು ಫೋಟೊಗಳನ್ನು ಕೂಡ ಹಂಚಿಕೊಂಡಿದ್ದಾರೆ.


ದಾಂಪತ್ಯ ಜೀವನಕ್ಕೆ ಕಾಲಿರಿಸಿ ಈ ಜೋಡಿಗಳಿಗೆ ಭಾರತ ಮಹಿಳಾ ತಂಡದ ಆಟಗಾರ್ತಿ ಶೆಫಾಲಿ ವರ್ಮಾ, ಸ್ಮೃತಿ ಮಂಧಾನ, ಜೆಮೀಮಾ ರೋಡ್ರಿಗಸ್​ ಸೇರಿ ಹಲವು ದೇಶದ ಆಟಗಾರ್ತಿಯರು ಮತ್ತು ಇಂಗ್ಲೆಂಡ್ ಕ್ರಿಕೆಟ್ ಮಂಡಳಿ ಕೂಡ ಶುಭ ಕೋರಿದೆ. ನಾಯಕಿ ಹೀದರ್ ನೈಟ್, ಡ್ಯಾನಿ ವ್ಯಾಟ್, ಇಶಾ ಗುಹಾ, ಜೆನ್ನಿ ಗನ್ ಸೇರಿದಂತೆ ಇಂಗ್ಲೆಂಡ್ ತಂಡದ ಪ್ರಸ್ತುತ ಮತ್ತು ಹಿಂದಿನ ಸದಸ್ಯರು ಸಮಾರಂಭದಲ್ಲಿ ಭಾಗವಹಿಸಿದ್ದರು.


33 ವರ್ಷದ ಡೇನಿಯಲ್‌ ವ್ಯಾಟ್‌ ಅವರು ಇಂಗ್ಲೆಂಡ್​ ಪರ 2 ಟೆಸ್ಟ್​, 110 ಏಕದಿನ ಮತ್ತು 156 ಟಿ20 ಪಂದ್ಯಗಳನ್ನು ಆಡಿ ಒಟ್ಟು 4,762 ರನ್​ ಬಾರಿಸಿದ್ದಾರೆ. ಏಕದಿನ ಮತ್ತು ಟಿ20ಯಲ್ಲಿ ತಲಾ 2 ಶತಕ ಬಾರಿಸಿದ್ದಾರೆ. ಬೌಲಿಂಗ್​ನಲ್ಲಿಯೂ ಸಾಧನೆ ಮಾಡಿರುವ ಇವರು 73 ಅಂತಾರಾಷ್ಟ್ರೀಯ ವಿಕೆಟ್ ಪಡೆದಿದ್ದಾರೆ. ಮಹಿಳಾ ಐಪಿಎಲ್​ ಟೂರ್ನಿಯಾದ ಡಬ್ಲ್ಯುಪಿಎಲ್​ನಲ್ಲಿ ಯುಪಿ ವಾರಿಯರ್ಸ್​ ತಂಡದ ಆಟಗಾರ್ತಿಯಾಗಿದ್ದಾರೆ.​

Continue Reading

ಕ್ರಿಕೆಟ್

Champions Trophy 2025: ಲಾಹೋರ್​ನಲ್ಲಿ ಭಾರತದ ಪಂದ್ಯ ಆಯೋಜನೆಗೆ ಸಿದ್ಧತೆ ಆರಂಭಿಸಿದ ಪಾಕ್​ ಕ್ರಿಕೆಟ್​ ಮಂಡಳಿ

Champions Trophy 2025: ಟೂರ್ನಿ ನಡೆಸಲು ಎಲ್ಲ ಸಿದ್ಧತೆ ನಡೆಸುತ್ತಿರುವ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಹೆಚ್ಚಿನ ಪ್ರಯಾಣ ತಪ್ಪಿಸಲು ಭಾರತದ ಎಲ್ಲಾ ಪಂದ್ಯ ಗಳನ್ನು ಲಾಹೋರ್ ಕ್ರೀಡಾಂಗಣದಲ್ಲೇ ನಿಗದಿಪಡಿಸಿ ಎಂದು ಐಸಿಸಿಗೆ ತಿಳಿಸಿದೆ. ಟೂರ್ನಿಯ ಅಧಿಕೃತ ವೇಳಾ ಪಟ್ಟಿ, ಆತಿಥ್ಯ ನಗರ ಇನ್ನಷ್ಟೇ ಅಧಿಕೃತಗೊಳ್ಳಬೇಕಿದೆ.

VISTARANEWS.COM


on

Champions Trophy 2025
Koo

ಕರಾಚಿ: ಪಾಕಿಸ್ತಾನ(IND vs PAK) ಆತಿಥ್ಯದಲ್ಲಿ ಮುಂದಿನ ವರ್ಷ(2025) ನಡೆಯುವ ಐಸಿಸಿ ಚಾಂಪಿಯನ್ಸ್ ಟ್ರೋಫಿ(Champions Trophy 2025) ಕ್ರಿಕೆಟ್ ಪಂದ್ಯಾವಳಿ ಫೆಬ್ರವರಿ 19 ರಿಂದ ಮಾರ್ಚ್ 9 ರವರೆಗೆ ಟೂರ್ನಮೆಂಟ್ ನಡೆಯಲಿದೆ ಎಂದು ವರದಿಯಾಗಿದೆ. ಭಾರತ ತಂಡ ಟೂರ್ನಿಯಲ್ಲಿ ಆಡಲು ಪಾಕಿಸ್ತಾನಕ್ಕೆ ತೆರಳುವುದು ಇನ್ನೂ ಖಚಿತಗೊಂಡಿಲ್ಲ. ಈ ಮಧ್ಯೆ ಭಾರತದ ಪಂದ್ಯಗಳನ್ನು ಲಾಹೋರ್‌ನಲ್ಲಿ(Lahore) ಆಯೋಜಿಸುವಂತೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ(PCB) ಐಸಿಸಿಗೆ ಸಲಹೆ ನೀಡಿದೆ.

ಟೂರ್ನಿ ನಡೆಸಲು ಎಲ್ಲ ಸಿದ್ಧತೆ ನಡೆಸುತ್ತಿರುವ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಹೆಚ್ಚಿನ ಪ್ರಯಾಣ ತಪ್ಪಿಸಲು ಭಾರತದ ಎಲ್ಲಾ ಪಂದ್ಯ ಗಳನ್ನು ಲಾಹೋರ್ ಕ್ರೀಡಾಂಗಣದಲ್ಲೇ ನಿಗದಿಪಡಿಸಿ ಎಂದು ಐಸಿಸಿಗೆ ತಿಳಿಸಿದೆ. ಟೂರ್ನಿಯ ಅಧಿಕೃತ ವೇಳಾ ಪಟ್ಟಿ, ಆತಿಥ್ಯ ನಗರ ಇನ್ನಷ್ಟೇ ಅಧಿಕೃತಗೊಳ್ಳಬೇಕಿದೆ. ಪಿಸಿಬಿ ಅಧ್ಯಕ್ಷ ಮೊಹ್ಸಿನ್ ನಖ್ವಿ ಕೂಡ ಭಾರತ ಈ ಬಾರಿ ಪಾಕ್​ನಲ್ಲಿ ಕ್ರಿಕೆಟ್ ಆಡಲಿದೆ ಎಂದು ಬಲವಾದ ಹೇಳಿಕೆಯನ್ನು ಕೂಡ ನೀಡಿದ್ದಾರೆ.

ಇದನ್ನೂ ಓದಿ IND vs PAK: ಟ್ರ್ಯಾಕ್ಟರ್ ಮಾರಿ ಭಾರತ-ಪಾಕ್​ ಪಂದ್ಯ ವೀಕ್ಷಿಸಿ ಕಣ್ಣೀರು ಹಾಕಿದ ಅಭಿಮಾನಿ

2014ರಿಂದ ಅಧಿಕಾರದಲ್ಲಿರುವ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ನೆರೆಯ ರಾಷ್ಟ್ರದೊಂದಿಗೆ ಯಾವುದೇ ಸ್ನೇಹಪರ ರೀತಿಯಲ್ಲಿ ಸಂಬಂಧ ಹೊಂದಿಲ್ಲ. ಶತ್ರು ದೇಶದ ವಿರುದ್ದ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಪುಲ್ವಾಮಾ ಮತ್ತು ಉರಿ ದಾಳಿಯ ನಂತರ ಎರಡೂ ದೇಶಗಳ ಸಂಬಂಧ ಹದಗೆಟ್ಟಿದೆ. ಇತ್ತೀಚೆಗೆ ಮುಕ್ತಾಯಗೊಂಡ ಲೋಕ ಸಭಾ ಚುನಾವಣೆಯಲ್ಲಿ ಬಿಜೆಪಿಯು ಎನ್​ಡಿಎ ಜತೆ ಮೈತ್ರಿ ಮಾಡಿಕೊಂಡು ಅಧಿಕಾರಕ್ಕೆ ಬಂದಿದ್ದರೂ ಕೂಡ ಈ ಸರ್ಕಾರದ ವಿದೇಶಾಂಗ ನೀತಿ ಬದಲಾಗುವ ಸಾಧ್ಯತೆಗಳು ಇಲ್ಲದ ಕಾರಣ ಚಾಂಪಿಯನ್ಸ್ ಟ್ರೋಫಿಗೆ ಭಾರತ ತಂಡ ಪಾಕಿಸ್ತಾನಕ್ಕೆ ಹೋಗುವುದು ಖಚಿತವಲ್ಲ ಎಂದು ಕ್ರಿಕ್​ಬಜ್​ ವರದಿ ಮಾಡಿದೆ. ಆದರೆ, ಪಾಕ್​ ಕ್ರಿಕೆಟ್​ ಮಂಡಳಿ ಮಾತ್ರ ಭಾರತ ಕೂಡ ಪಾಕ್​ನಲ್ಲಿಯೇ ಆಡಲಿದೆ ಎಂದು ಬಲವಾಗಿ ನಂಬಿದೆ.

ಕಳೆದ ವರ್ಷ ಪಾಕಿಸ್ತಾನದ ಆತಿಥ್ಯದಲ್ಲಿ ನಡೆದಿದ್ದ ಏಷ್ಯಾಕಪ್​ ಟೂರ್ನಿಯಲ್ಲಿ ಭಾರತ ಪಾಕ್​ಗೆ ಹೋಗಲು ಒಪ್ಪದ ಕಾರಣ ಹೈಬ್ರೀಡ್​ ಮಾದರಿಯಲ್ಲಿ ಪಾಕ್​ ಮತ್ತು ಶ್ರೀಲಂಕಾದಲ್ಲಿ ಆಡಿಸಲಾಗಿತ್ತು. ಭಾರತ ತನ್ನ ಪಂದ್ಯಗಳನ್ನು ಶ್ರೀಲಂಕಾದಲ್ಲಿ ಆಡಿತ್ತು. ನವೆಂಬರ್ 2008ರ ಮುಂಬೈ ಭಯೋತ್ಪಾದಕ ದಾಳಿಯಲ್ಲಿ 150 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ ನಂತರ ಭಾರತವು ಪಾಕಿಸ್ತಾನದೊಂದಿಗೆ ದ್ವಿಪಕ್ಷೀಯ ಕ್ರಿಕೆಟ್ ಆಡಿಲ್ಲ. ಜೂನ್-ಜುಲೈ 2008 ರಲ್ಲಿ ಏಷ್ಯಾ ಕಪ್ ಸಮಯದಲ್ಲಿ ಭಾರತೀಯ ಕ್ರಿಕೆಟ್ ತಂಡವು ಕೊನೆಯ ಬಾರಿಗೆ ಪಾಕಿಸ್ತಾನಕ್ಕೆ ಪ್ರಯಾಣಿಸಿತ್ತು. ಭಾರತದಲ್ಲಿ ಡಿಸೆಂಬರ್ 2012 ರಿಂದ ಜನವರಿ 2013 ರವರೆಗಿನ ದ್ವಿಪಕ್ಷೀಯ ಸರಣಿಯು ಎರಡು ರಾಷ್ಟ್ರಗಳ ನಡುವಿನ ಅಂತಿಮ ದ್ವಿಪಕ್ಷೀಯ ಸರಣಿಯಾಗಿದೆ. ಇದಾದ ಬಳಿಕ ಉಭಯ ತಂಡಗಳು ಕೇವಲ ಐಸಿಸಿ ಟೂರ್ನಿಗಳಲ್ಲಿ ಮಾತ್ರ ಆಡುತ್ತವೆ.

ಒಂದು ತಿಂಗಳ ಹಿಂದಷ್ಟೇ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಉಪಾಧ್ಯಕ್ಷ ರಾಜೀವ್ ಶುಕ್ಲಾ(Rajeev Shukla) ಅವರು ಕೇಂದ್ರ ಸರ್ಕಾರ ಅನುಮತಿ ನೀಡಿದರೆ ಮಾತ್ರ ಭಾರತ(India Travelling To Pakistan) ತಂಡವನ್ನು ಪಾಕಿಸ್ತಾನಕ್ಕೆ ಕಳುಹಿಸಲಾಗುವುದು ಎಂದು ಹೇಳಿದ್ದರು. ಎಎನ್‌ಐ ಜತೆ ಮಾತನಾಡಿದ್ದ ಶುಕ್ಲಾ, “ಚಾಂಪಿಯನ್ ಟ್ರೋಫಿಯ ಸಂದರ್ಭದಲ್ಲಿ, ಭಾರತ ಸರ್ಕಾರ ನಮಗೆ ಏನು ಹೇಳುತ್ತದೆಯೋ ಅದನ್ನು ಮಾಡುತ್ತೇವೆ. ಭಾರತ ಸರ್ಕಾರ ನಮಗೆ ಅನುಮತಿ ನೀಡಿದಾಗ ಮಾತ್ರ ನಾವು ನಮ್ಮ ತಂಡವನ್ನು ಕಳುಹಿಸುತ್ತೇವೆ. ಹಾಗಾಗಿ ಭಾರತ ಸರ್ಕಾರದ ನಿರ್ಧಾರದ ಮೇಲೆ ತಂಡದ ಪ್ರಯಾಣದ ಭವಿಷ್ಯ ಅಡಗಿದೆ” ಎಂದು ಶುಕ್ಲಾ ಹೇಳಿದ್ದರು.

Continue Reading

ಕ್ರಿಕೆಟ್

Kamran Akmal: ಜನಾಂಗೀಯ ನಿಂದನೆಗೆ ಜಾಡಿಸಿದ ಹರ್ಭಜನ್​ ಸಿಂಗ್​: ಕ್ಷಮೆಯಾಚಿಸಿದ ಕಮ್ರಾನ್ ಅಕ್ಮಲ್

Kamran Akmal: ವಿವಾದಾತ್ಮಕ ಹೇಳಿಕೆಗೆ ಭಾರೀ ಟಿಕೆ ಮತ್ತು ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಕಮ್ರಾನ್​ ಅಕ್ಮಲ್​ ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಕ್ಷಮೆ ಯಾಚಿಸಿದ್ದಾರೆ. “ಇತ್ತೀಚಿನ ನನ್ನ ಹೇಳಿಕೆಗೆ ಹರ್ಭಜನ್ ಸಿಂಗ್ ಮತ್ತು ಸಿಕ್ಖ್ ಸಮುದಾಯದ ಬಳಿ ಪ್ರಾಮಾಣಿಕವಾಗಿ ಕ್ಷಮೆ ಯಾಚಿಸುತ್ತಿದ್ದೇನೆ. ನನ್ನ ಮಾತುಗಳು ಅಗೌರವ ಮತ್ತು ಅಸಮರ್ಪಕ. ವಿಶ್ವಾದ್ಯಂತ ಇರುವ ಸಿಕ್ಖ್ ಸಮುದಾಯದ ಮೇಲೆ ನನಗೆ ಅಪಾರ ಗೌರವ ಇದೆ. ಯಾರನ್ನೂ ನೋಯಿಸುವ ಉದ್ದೇಶ ನನಗೆ ಇರಲಿಲ್ಲ” ಎಂದು ಎಂದು ಪೋಸ್ಟ್ ಮಾಡಿದ್ದಾರೆ.

VISTARANEWS.COM


on

Kamran Akmal
Koo

ನವದೆಹಲಿ: ಭಾರತ ಮತ್ತು ಪಾಕ್​(IND vs PAK) ಪಂದ್ಯದ ವೇಳೆ ಟೀಮ್​ ಇಂಡಿಯಾದ ಯುವ ವೇಗಿ ಅರ್ಶ್​ದೀಪ್​ ಸಿಂಗ್​ ವಿರುದ್ಧ ನೇರ ಪ್ರಸಾರದಲ್ಲೇ ಜನಾಂಗೀಯ ನಿಂದನೆ ಮಾಡಿದ್ದ ಪಾಕಿಸ್ತಾನ ಕ್ರಿಕೆಟ್​ ತಂಡದ ಮಾಜಿ ಆಟಗಾರ ಕಮ್ರಾನ್​ ಅಕ್ಮಲ್​ಗೆ(Kamran Akmal) ಭಾರತ ತಂಡದ ಮಾಜಿ ಸ್ಪಿನ್ನರ್​ ಹರ್ಭಜನ್​ ಸಿಂಗ್​(Harbhajan Singh) ಜಾಡಿಸಿದ್ದಾರೆ.

ಅರ್ಶ್​ದೀಪ್ ಅವರು ಪಂದ್ಯದ ಕೊನೆಯ ಓವರ್ ಬೌಲಿಂಗ್ ಮಾಡುತ್ತಿದ್ದ ವೇಳೆ ಅಕ್ಮಲ್​ “ಕುಚ್ ಭೀ ಹೋ ಸಕ್ತಾ ಹೈ.. 12 ಬಜ್ ಗಯೇ ಹೈ (ಏನು ಬೇಕಾದರೂ ಸಂಭವಿಸಬಹುದು. 12 ರ ನಂತರ ಯಾವುದೇ ಸಿಖ್ಖರನ್ನು ನೀಡಲಾಗುವುದಿಲ್ಲ) ಎಂದು ಸಿಕ್ಖ್ ಸಮುದಾಯವನ್ನು ಅವಹೇಳನ ಮಾಡುವ ರೀತಿಯಲ್ಲಿ ಹೇಳಿಕೆ ನೀಡಿದ್ದರು. ಈ ಬಗ್ಗೆ ಹಲವರು ಆಕ್ರೋಶ ವ್ಯಕ್ತಪಡಿಸಿದ್ದರು.

ಅಕ್ಮಲ್​ ಅವರ ಹೇಳಿಕೆಗೆ ಹರ್ಭಜನ್​ ಸಿಂಗ್(Harbhajan Singh slams Kamran Akmal)​ ಅವರು ಟ್ವೀಟ್​ ಮಾಡಿ ತಿರುಗೇಟು ನೀಡಿದ್ದರು. ‘ನಿಮ್ಮ ಕೊಳಕು ಬಾಯಿ ತೆರೆಯುವ ಮೊದಲು ನೀವು ಸಿಖ್ಖರ ಇತಿಹಾಸವನ್ನು ಮೊದಲು ತಿಳಿದುಕೊಳ್ಳಬೇಕು. ನಾವು ಸಿಖ್ಖರು ನಿಮ್ಮ ತಾಯಂದಿರು ಮತ್ತು ಸಹೋದರಿಯರನ್ನು ಆಕ್ರಮಣಕಾರರು ಅಪಹರಿಸಿದಾಗ ಅವರನ್ನು ರಕ್ಷಿಸಿದ್ದೇವೆ. ನಿಮಗೆ ನಾಚಿಕೆಯಾಗಬೇಕು… ಸ್ವಲ್ಪ ಕೃತಜ್ಞತೆ ಇರಲಿ” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ IND vs PAK: ಟ್ರ್ಯಾಕ್ಟರ್ ಮಾರಿ ಭಾರತ-ಪಾಕ್​ ಪಂದ್ಯ ವೀಕ್ಷಿಸಿ ಕಣ್ಣೀರು ಹಾಕಿದ ಅಭಿಮಾನಿ

ಕ್ಷಮೆ ಕೇಳಿದ ಅಕ್ಮಲ್​


ವಿವಾದಾತ್ಮಕ ಹೇಳಿಕೆಗೆ ಭಾರೀ ಟಿಕೆ ಮತ್ತು ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಕಮ್ರಾನ್​ ಅಕ್ಮಲ್​ ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಕ್ಷಮೆ ಯಾಚಿಸಿದ್ದಾರೆ. “ಇತ್ತೀಚಿನ ನನ್ನ ಹೇಳಿಕೆಗೆ ಹರ್ಭಜನ್ ಸಿಂಗ್ ಮತ್ತು ಸಿಕ್ಖ್ ಸಮುದಾಯದ ಬಳಿ ಪ್ರಾಮಾಣಿಕವಾಗಿ ಕ್ಷಮೆ ಯಾಚಿಸುತ್ತಿದ್ದೇನೆ. ನನ್ನ ಮಾತುಗಳು ಅಗೌರವ ಮತ್ತು ಅಸಮರ್ಪಕ. ವಿಶ್ವಾದ್ಯಂತ ಇರುವ ಸಿಕ್ಖ್ ಸಮುದಾಯದ ಮೇಲೆ ನನಗೆ ಅಪಾರ ಗೌರವ ಇದೆ. ಯಾರನ್ನೂ ನೋಯಿಸುವ ಉದ್ದೇಶ ನನಗೆ ಇರಲಿಲ್ಲ. ನಿಜವಾಗಿಯೂ ಕ್ಷಮೆ ಯಾಚಿಸುತ್ತೇನೆ” ಎಂದು ಪೋಸ್ಟ್ ಮಾಡಿದ್ದಾರೆ.


ಭಾನುವಾರ ನಡೆದಿದ್ದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್​ ನಡೆಸಿದ ಭಾರತ, ಪಾಕ್​ ಬೌಲರ್​ಗಳ ನಿಖರ ದಾಳಿಗೆ ತಡೆಯೊಡ್ಡುವಲ್ಲಿ ವಿಫಲವಾಗಿ ಕೇವಲ 119 ರನ್ನಿಗೆ ಆಲೌಟಾಯಿತು. ಗುರಿ ಬೆನ್ನಟ್ಟಿದ ಪಾಕ್ ಕೂಡ ಭಾರತದ ಬೌಲಿಂಗ್ ದಾಳಿಗೆ ನಲುಗಿ 7 ವಿಕೆಟ್ ನಷ್ಟಕ್ಕೆ 113 ರನ್ ಗಳಿಸಿ ಸೋಲು ಕಂಡಿತು. ಮೊಹಮ್ಮದ್ ರಿಜ್ವಾನ್(31) ಒಂದು ಹಂತದ ವರೆಗೆ ಭಾರತೀಯ ಬೌಲರ್​ಗಳನ್ನು ಕಾಡಿದರೂ ಕೂಡ ಬುಮ್ರಾ ಎಸೆತಕ್ಕೆ ಕ್ಲೀನ್​ ಬೌಲ್ಡ್​ ಆದರು. ಇಲ್ಲಿಂದ ಪಾಕ್​ ಕುಸಿತ ಕೂಡ ಆರಂಭವಾಯಿತು. ಭಾರತ ಪಂದ್ಯವನ್ನು ಗೆದ್ದು ಬೀಗುವಲ್ಲಿ ಯಶಸ್ಸು ಕಂಡಿತು.

ಸೂಪರ್​-8ಗೆ ಪ್ರವೇಶಿಸಲು ಪಾಕಿಸ್ತಾನ ತಂಡವು ಉಳಿದ ಎರಡೂ ಪಂದ್ಯಗಳನ್ನು ಗೆಲ್ಲಬೇಕು. ಅಷ್ಟೇ ಅಲ್ಲದೆ ಯುಎಸ್‌ಎ ಮತ್ತು ಕೆನಡಾ ತಂಡಗಳು ಗುಂಪು ಹಂತದಲ್ಲಿ ಉಳಿದ ಪಂದ್ಯಗಳಲ್ಲಿ ಸೋಲು ಕಾಣಬೇಕು. ಅಮೆರಿಕ ಮುಂದಿನ 2 ಪಂದ್ಯಗಳಲ್ಲಿ ಸೋಲು ಕಂಡು, ಪಾಕ್​ 2 ಪಂದ್ಯ ಗೆದ್ದರೆ ಉಭಯ ತಂಡಗಳಿಗೆ ತಲಾ 4 ಅಂಕ ಆಗಲಿದೆ. ಹೀಗಾಗಿ ಪಾಕ್​ಗೆ ಕೇವಲ ಗೆಲುವು ಮಾತ್ರ ಸಾಲದು ಜತೆಗೆ ರನ್​ರೇಟ್​ ಕೂಡ ಬೇಕಾಗಿದೆ. ಅಮೆರಿಕ ಮತ್ತು ಭಾರತ ಮುಂದಿನ ಪಂದ್ಯದಲ್ಲಿ ಗೆದ್ದರೆ ಪಾಕ್​ ಅಧಿಕೃತವಾಗಿ ಟೂರ್ನಿಯಿಂದ ಹೊರಬೀಳಲಿದೆ.

Continue Reading
Advertisement
Actor Darshan
ಪ್ರಮುಖ ಸುದ್ದಿ7 mins ago

Actor Darshan : ದರ್ಶನ್​ಗೆ ಮರಣದಂಡನೆಯಾಗಲಿ; ಸ್ಯಾಂಡಲ್​ವುಡ್​ ಕ್ವೀನ್​ ರಮ್ಯಾ ಒತ್ತಾಯ

Paris Olympics 2024
ಕ್ರೀಡೆ32 mins ago

Paris Olympics 2024: ಪ್ಯಾರಿಸ್​ ಒಲಿಂಪಿಕ್ಸ್​ಗೆ ಅರ್ಹತೆ ಪಡೆದ ಕನ್ನಡಿಗ ಬೋಪಣ್ಣ, ಸುಮಿತ್‌ ನಾಗಲ್‌

Parliament Session 2024
ದೇಶ1 hour ago

Parliament Session 2024: ಜೂನ್‌ 24ರಿಂದ ಸಂಸತ್‌ ವಿಶೇಷ ಅಧಿವೇಶನ; ಸ್ಪೀಕರ್‌ ಆಯ್ಕೆ ಸೇರಿ ಏನೆಲ್ಲ ತೀರ್ಮಾನ?

HD Kumaraswamy
ಕರ್ನಾಟಕ1 hour ago

HD Kumaraswamy: ಎಚ್‌ಡಿಕೆ ಭೇಟಿಯಾದ ಉಕ್ಕು ಪ್ರಾಧಿಕಾರದ ಅಧ್ಯಕ್ಷ; ವಿಐಎಸ್‌ಎಲ್ ಪುನಶ್ಚೇತನದ ಬಗ್ಗೆ ಚರ್ಚೆ

Narendra Modi
ದೇಶ1 hour ago

Narendra Modi: ಮೊದಲ ಕ್ಯಾಬಿನೆಟ್‌ ಸಭೆಯಲ್ಲಿ ಪ್ರಧಾನಿ ಮೋದಿ ಸಚಿವರಿಗೆ ಹೇಳಿದ ಕಿವಿ ಮಾತು ಇದು

Actor Darshan
ಸಿನಿಮಾ1 hour ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Danielle Wyatt Marriage
ಕ್ರೀಡೆ2 hours ago

Danielle Wyatt Marriage: ಸಲಿಂಗ ಸಂಗಾತಿಯೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಇಂಗ್ಲೆಂಡ್ ಮಹಿಳಾ ಕ್ರಿಕೆಟ್​ ತಂಡದ ಆಟಗಾರ್ತಿ

Actor Darshan
ಕರ್ನಾಟಕ2 hours ago

Actor Darshan: ಒಂದಲ್ಲ, ಎರಡಲ್ಲ, 3 ಕೇಸ್‌ಗಳಲ್ಲಿ ದರ್ಶನ್‌ಗೆ ಸಂಕಷ್ಟ; ಆರೋಪ ಸಾಬೀತಾದರೆ ಯಾವ ಶಿಕ್ಷೆ?

Supreme Court
ದೇಶ2 hours ago

Supreme Court: ನೀಟ್​ ಅಕ್ರಮ ಆರೋಪ; ರಾಷ್ಟ್ರೀಯ ಪರೀಕ್ಷಾ ಸಂಸ್ಥೆಗೆ ನೋಟಿಸ್‌ ಜಾರಿ ಮಾಡಿದ ಸುಪ್ರೀಂ ಕೋರ್ಟ್‌

Actor Darshan
ಸಿನಿಮಾ2 hours ago

Actor Darshan: ರೇಣುಕಾಸ್ವಾಮಿ ಕೊಲೆ ಕೇಸ್; ತನಿಖೆ ಬಳಿಕವೇ ದರ್ಶನ್ ಪಾತ್ರ ಗೊತ್ತಾಗಲಿದೆ ಎಂದ ಸಚಿವ ಪರಮೇಶ್ವರ್‌

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಸಿನಿಮಾ1 hour ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ4 hours ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ23 hours ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ4 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ4 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ1 week ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ1 week ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ1 week ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

ಟ್ರೆಂಡಿಂಗ್‌