Asia Cup 2023: Jay Shah plans to host Asia Cup by excluding Pakistan Asia Cup 2023 : ಪಾಕಿಸ್ತಾನ ತಂಡವನ್ನು ಹೊರಗಿಟ್ಟು ಏಷ್ಯಾ ಕಪ್​ ಆಯೋಜಿಸಲು ಜಯ್​ ಶಾ ಯೋಜನೆ - Vistara News

ಕ್ರಿಕೆಟ್

Asia Cup 2023 : ಪಾಕಿಸ್ತಾನ ತಂಡವನ್ನು ಹೊರಗಿಟ್ಟು ಏಷ್ಯಾ ಕಪ್​ ಆಯೋಜಿಸಲು ಜಯ್​ ಶಾ ಯೋಜನೆ

ಏಷ್ಯಾಕಪ್​​ನ 4 ಮತ್ತು 5 ಪಂದ್ಯಗಳನ್ನು ಪಾಕಿಸ್ತಾನದಲ್ಲಿ ಮತ್ತು ಯುಎಇಯಲ್ಲಿ ಭಾರತ ಸೇರಿದಂತೆ ಉಳಿದ ಪಂದ್ಯಗಳನ್ನು ಆಯೋಜಿಸಲು ಪಾಕಿಸ್ತಾನ ಬಯಸಿತ್ತು.

VISTARANEWS.COM


on

Asia Cricket Council meeting
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬಯಿ: 2023ರ ಏಷ್ಯಾಕಪ್ ಆತಿಥ್ಯ ವಿಚಾರದಲ್ಲಿ ಪಿಸಿಬಿ ಮುಖ್ಯಸ್ಥ ನಜಾಮ್ ಸೇಥಿ ಸೂಚಿಸಿದ ಹೈಬ್ರಿಡ್ ಮಾದರಿಯನ್ನು ಭಾರತ ಮತ್ತು ಇತರ ಸದಸ್ಯರು ತಿರಸ್ಕರಿಸಿದ್ದಾರೆ ಎಂದು ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ಎಸಿಸಿ) ಅಧ್ಯಕ್ಷರೂ ಆಗಿರುವ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಸ್ಪಷ್ಟಪಡಿಸಿದ್ದಾರೆ. ಹೈಬ್ರಿಡ್ ಮಾದರಿಯಲ್ಲಿ 4 ಅಥವಾ 5 ಪಂದ್ಯಗಳನ್ನು ಪಾಕಿಸ್ತಾನದಲ್ಲಿ ಆಡುವುದು ಮತ್ತು ಭಾರತದ ಎಲ್ಲಾ ಪಂದ್ಯಗಳು ಸೇರಿದಂತೆ ಉಳಿದ ಪಂದ್ಯಗಳನ್ನು ದುಬೈನಲ್ಲಿ ಆಡುವುದು ಪಾಕಿಸ್ತಾನ ಕ್ರಿಕೆಟ್​ ಮಂಡಳಿಯ ಯೋಜನೆಯಾಗಿದೆ. ಆದರೆ, ಈ ಯೋಜನೆಯನ್ನು ಎಸಿಸಿ ತಿರಸ್ಕರಿಸಿದೆ. ಹೀಗಾಗಿ ಪಾಕಿಸ್ತಾನ ತನ್ನ ಹಠಮಾರಿತನ ಮುಂದುವರಿಸಿದರೆ ಆ ತಂಡವನ್ನೇ ಹೊರಗಿಟ್ಟು ಟೂರ್ನಿ ನಡೆಸುವುದು ಎಸಿಸಿ ಮುಂದಿನ ಯೋಜನೆಯಾಗಿದೆ.

ಅಹ್ಮದಾಬಾದ್​​ನಲ್ಲಿ ನಡೆಸಿದ್ದ ಏಷ್ಯಾ ಕ್ರಿಕೆಟ್​ ಕೌನ್ಸಿಲ್​ ಸದಸ್ಯ ರಾಷ್ಟ್ರಗಳ ಮುಖ್ಯಸ್ಥರೊಂದಿಗೆ ಇತ್ತೀಚೆಗೆ ನಡೆಸಲಾದ ಅನೌಪಚಾರಿಕ ಚರ್ಚೆಯ ಸಂದರ್ಭದಲ್ಲಿ ಪಂದ್ಯಾವಳಿಯನ್ನು ಒಂದು ರಾಷ್ಟ್ರದಲ್ಲಿ ಮಾತ್ರ ನಡೆಸಬೇಕು ಎಂಬ ಅಭಿಪ್ರಾಯ ವ್ಯಕ್ತಗೊಂಡಿದ್ದವು. ಪಾಕಿಸ್ತಾನ ಅದಕ್ಕೆ ಒಪ್ಪದಿದ್ದರೆ ಶ್ರೀಲಂಕಾದಲ್ಲಿ ನಡೆಸುವುದು ಯೋಜನೆಯಾಗಿದೆ. ಇದೇ ವೇಳೆ ಪಾಕಿಸ್ತಾನ ಸೂಚಿಸಿರುವ ಹೈಬ್ರಿಡ್​ ಮಾದರಿ ಸಾಧ್ಯವೇ ಇಲ್ಲ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಸೆಪ್ಟೆಂಬರ್​ನಲ್ಲಿ ಯುಎಇನಲ್ಲಿ ಅತಿಯಾದ ಉಷ್ಣಾಂಶ ಇರುವ ಕಾರಣ ಆಡುವುದು ಅಸಾಧ್ಯ ಎಂಬ ಅಭಿಪ್ರಾಯ ವ್ಯಕ್ತಗೊಂಡಿದೆ. ಜಯ್​ ಶಾ ಅವರು ಈ ಅಭಿಪ್ರಾಯವನ್ನು ಮಂಡಿಸಿದ್ದು ಉಳಿದ ದೇಶಗಳು ಅದಕ್ಕೆ ಸಮ್ಮತಿ ಸೂಚಿಸಿವೆ.

ಟೆಲಿಗ್ರಾಫ್​ ಮಾಡಿರುವ ವರದಿಯ ಪ್ರಕಾರ, ಭಾಗವಹಿಸುವ ಇತರ ಎಲ್ಲಾ ರಾಷ್ಟ್ರಗಳು ಶ್ರೀಲಂಕಾದಲ್ಲಿ ಆಡಲು ಒಪ್ಪಿಕೊಂಡಿವೆ. ಈ ಮಾಹಿತಿಯನ್ನು ಎಸಿಸಿಯ ಮುಂದಿನ ಕಾರ್ಯಕಾರಿ ಮಂಡಳಿ ಸಭೆಯಲ್ಲಿ ಪಾಕಿಸ್ತಾನಕ್ಕೆ ಸ್ಪಷ್ಟವಾಗಿ ತಿಳಿಸಲು ಯೋಜನೆ ರೂಪಿಸಲಾಗಿದೆ. ಈ ವರ್ಷ ಸೆಪ್ಟೆಂಬರ್​ನಲ್ಲಿ ಏಷ್ಯಾಕಪ್ ಆತಿಥ್ಯ ವಹಿಸಲಿರುವ ಪಿಸಿಬಿ, ಸಮರ್ಥ ಯೋಜನೆ ರೂಪಿಸಲು ವಿಫಲಗೊಂಡಿದೆ.

ಐದನೇ ತಂಡ ಯಾವುದು?

ಒಂದು ವೇಳೆ ಪಾಕಿಸ್ತಾನ ಏಷ್ಯಾಕಪ್ ಟೂರ್ನಿಯಿಂದ ಹಿಂದೆ ಸರಿದರೆ, ಭಾರತ, ಶ್ರೀಲಂಕಾ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನ ತಂಡಗಳು ಮಾತ್ರ ಪಟ್ಟಿಯಲ್ಲಿ ಉಳಿಯಲಿವೆ. ಹೀಗಾಗಿ ಐದನೇ ತಂಡ ಸೇರಿಸುವ ಬಗ್ಗೆ ಯೋಜನೆ ರೂಪುಗೊಳ್ಳಲಿದೆ. ಪಾಕಿಸ್ತಾನಕ್ಕೆ ಪ್ರವಾಸ ಮಾಡಲು ಬಿಸಿಸಿಐ ನಿರಾಕರಿಸಿರುವುದು ಮತ್ತು ಹೈಬ್ರಿಡ್ ಮಾದರಿಯನ್ನು ತಿರಸ್ಕರಿಸಿರುವುದು ಕ್ರಿಕೆಟ್​ ಕ್ಷೇತ್ರದಲ್ಲಿ ತೀವ್ರ ಪರಿಣಾಮ ಬೀರಬಹುದು. ಏಕೆಂದರೆ ಭಾರತವು ಅಕ್ಟೋಬರ್-ನವೆಂಬರ್​ನಲ್ಲಿ 2023ರ ಏಕದಿನ ವಿಶ್ವ ಕಪ್​ಗೆ ಆತಿಥ್ಯ ವಹಿಸಲಿದೆ. ಪ್ರತೀಕಾರವಾಗಿ ಪಾಕಿಸ್ತಾನವು ಭಾರತಕ್ಕೆ ಪ್ರವಾಸ ಮಾಡಲು ನಿರಾಕರಿಸಬಹುದು.

ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಅಧ್ಯಕ್ಷ ಗ್ರೆಗ್ ಬಾರ್ಕ್ಲೇ ಮತ್ತು ಸಿಇಒ ಜೆಫ್ ಅಲ್ಲಾರ್ಡೈಸ್ ಪ್ರಸ್ತುತ ಲಾಹೋರ್​ನಲ್ಲಿದ್ದಾರೆ. ಅವರು ವಿಶ್ವಕಪ್ನಲ್ಲಿ ಭಾಗವಹಿಸಲು ಪಾಕಿಸ್ತಾನದಿಂದ ಭರವಸೆ ಕೋರಿದ್ದಾರೆ ಎನ್ನಲಾಗಿದೆ. ಭಾರತದಲ್ಲಿ ನಡೆಯಲಿರುವ ವಿಶ್ವಕಪ್​​ನಲ್ಲಿ ಅವರ ತಂಡ ಭಾಗವಹಿಸುವುದು ಅಲ್ಲಿನ ಸರ್ಕಾರದ ಅನುಮತಿಗೆ ಒಳಪಟ್ಟಿರುತ್ತದೆ ಎಂದು ಪಿಸಿಬಿ ತಿಳಿಸಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ : Asia Cup 2023: ಏಷ್ಯಾ ಕಪ್​ ಆತಿಥ್ಯ ಕೈ ತಪ್ಪಿದರೆ ಟೂರ್ನಿಗೆ ಬಹಿಷ್ಕಾರ; ಪಾಕ್​ ಎಚ್ಚರಿಕೆ

ಏಷ್ಯಾಕಪ್​​ಗಾಗಿ ಭಾರತ ಪಾಕಿಸ್ತಾನ ಪ್ರವಾಸ ಕೈಗೊಳ್ಳದಿದ್ದರೂ ನಮ್ಮ ಸರಕಾರ ಒಪ್ಪಿಗೆ ನೀಡಿದರೆ ತಂಡವನ್ನು ಭಾರತಕ್ಕೆ ಕಳುಹಿಸುತ್ತೇವೆ ಎಂದು ಎಂದು ನಜಾಮ್​ ಸೇಥಿ ಈ ತಿಂಗಳ ಆರಂಭದಲ್ಲಿ ದಿ ಟೆಲಿಗ್ರಾಫ್​ಗೆ ತಿಳಿಸಿದ್ದರು.

ಏಷ್ಯಾ ಕಪ್​​ಗೆ ಪಿಸಿಬಿ ಪ್ರಸ್ತಾಪಿಸಿದ ಹೈಬ್ರಿಡ್ ಮಾದರಿಯನ್ನು ತಿರಸ್ಕರಿಸಲು ಪ್ರಮುಖ ಕಾರಣವೆಂದರೆ, ಈ ಪಂದ್ಯಾವಳಿಯನ್ನು ಈ ಮಾದರಿಯಲ್ಲಿ ಆಡಿದರೆ, ಪಾಕಿಸ್ತಾನ ತಂಡ ವಿಶ್ವ ಕಪ್​ನಲ್ಲಿಯೂ ಅದೇ ರೀತಿ ಮಾಡಬೇಕೆಂದು ಒತ್ತಾಯಿಸಬಹುದು ಎಂಬ ಊಹೆಯ ಮೇಲೆ. ಭಾರತವು ಪಾಕಿಸ್ತಾನಕ್ಕೆ ಪ್ರವಾಸ ಮಾಡದೇ ತಟಸ್ಥ ಸ್ಥಳದಲ್ಲಿ ತನ್ನ ಪಂದ್ಯಗಳನ್ನು ಆಡಲು ಬಯಸಿದರೆ, ಪಾಕಿಸ್ತಾನವು ವಿಶ್ವಕಪ್ ಸಮಯದಲ್ಲಿ ಅದೇ ಮಾದರಿಯನ್ನು ಕೇಳಬಹುದು ಶ್ರೀಲಂಕಾ ಅಥವಾ ಬಾಂಗ್ಲಾದೇಶದಲ್ಲಿ ತನ್ನ ಪಂದ್ಯಗಳನ್ನು ಆಯೋಜಿಸಲು ಐಸಿಸಿಯನ್ನು ಕೇಳುವ ಸಾಧ್ಯತೆಗಳಿವೆ.

ಪಾಕಿಸ್ತಾನವು ತನ್ನ ಪಂದ್ಯಗಳನ್ನು ತಟಸ್ಥ ಸ್ಥಳದಲ್ಲಿ ಆಡಲು ಬಯಸಿದರೆ ಬಿಸಿಸಿಐ ಒಪ್ಪುವುದಿಲ್ಲ. ಭಾರತದಲ್ಲಿ ಆಟವಾಡಿ ಇಲ್ಲದೇ ಹೋದರೆ ಬೇರೆ ಅವಕಾಶಗಳು ಇಲ್ಲ ಎಂದು ಬಿಸಿಸಿಐ ತನ್ನ ನಿಲುವು ಹೇಳಿದೆ. ಮುಂದಿನ ವಾರ ಲಂಡನ್ನಲ್ಲಿ ನಡೆಯಲಿರುವ ವಿಶ್ವ ಟೆಸ್ಟ್ ಚಾಂಪಿಯನ್​ಷಿಪ್​ ಫೈನಲ್​ ವೇಳೆ ವಿಶ್ವ ಕಪ್​ನ ವೇಳಾಪಟ್ಟಿ ಬಿಡುಗಡೆ ಮಾಡುವ ನಿರೀಕ್ಷೆಯಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Mayank Yadav: ಗಾಯಾಳು ಮಾಯಾಂಕ್‌ ಯಾದವ್‌ ಐಪಿಎಲ್​ನಿಂದ ಔಟ್​?

Mayank Yadav: ಮಯಾಂಕ್ ಗಾಯದ ಬಗ್ಗೆ ಮಾಹಿತಿ ನೀಡಿರುವ ತಂಡದ ಮುಖ್ಯ ಕೋಚ್​ ಜಸ್ಟೀನ್​ ಲ್ಯಾಂಗರ್​, ‘ಪರಿಪೂರ್ಣ ಪುನರ್ವಸತಿಗೆ ಒಳಗಾಗಿದ್ದರೂ, ಮಯಾಂಕ್​ಗೆ ಹೊಟ್ಟೆಯ ಕೆಳಭಾಗದಲ್ಲಿ ನೋವು ಕಾಣಿಸಿಕೊಂಡಿದೆ. ಹೀಗಾಗಿ ಅವರನ್ನು ಸ್ಕ್ಯಾನಿಂಗ್​ಗೆ ಒಳಪಡಿಸಲಾಗಿದೆ. ಅವರಿಗೆ ಈ ನೋವಿನಿಂದ ಚೇತರಿಸಿಕೊಳ್ಳಲು ಕನಿಷ್ಠ ಮೂರು ವಾರಗಳ ವಿಶ್ರಾಂತಿ ಬೇಕಾಗಬಹುದು” ಎಂದು ಹೇಳಿದ್ದಾರೆ.

VISTARANEWS.COM


on

Mayank Yadav
Koo

ಲಕ್ನೋ: ಈ ಐಪಿಎಲ್‌ನಲ್ಲಿ(IPL 2024) ಶರವೇಗದ, ಅಷ್ಟೇ ನಿಖರ ಎಸೆತಗಳಿಂದ ಎದುರಾಳಿಯ ದಿಕ್ಕು ತಪ್ಪಿಸಿ ಗಂಟೆಗೆ 150 ಕಿಮೀ ವೇಗದಲ್ಲಿ ಚೆಂಡೆಸೆದು ಭಾರೀ ಸಂಚಲನ ಮೂಡಿಸುತ್ತಿದ್ದ ಲಕ್ನೋ ಸೂಪರ್‌ ಜೈಂಟ್ಸ್‌(Lucknow Super Giants) ತಂಡದ ವೇಗಿ ಮಾಯಾಂಕ್‌ ಯಾದವ್‌(Mayank Yadav) ಮತ್ತೆ ಗಾಯಗೊಂಡಿದ್ದು ಟೂರ್ನಿಯಿಂದ ಹೊರಬೀಳಲಿದ್ದಾರೆ ಎಂದು ತಿಳಿದುಬಂದಿದೆ.

ಈ ಬಾರಿಯ ಐಪಿಎಲ್​ ಆವೃತ್ತಿಯಲ್ಲಿ ಆರಂಭಿಕ ಮೂರು ಪಂದ್ಯಗಳನ್ನಾಡಿದ್ದ ಮಯಾಂಕ್​ ಗಾಯದಿಂದ ಆ ಬಳಿಕದ ಕೆಲವು ಪಂದ್ಯಗಳನ್ನಾಡಿರಲಿಲ್ಲ. ನಿನ್ನೆ(ಮಂಗಳವಾರ) ನಡೆದ ಮುಂಬೈ ಇಂಡಿಯನ್ಸ್​ ವಿರುದ್ಧದ ಪಂದ್ಯದ ಮೂಲಕ ಮತ್ತೆ ಮೈದಾನಕ್ಕಿಳಿದಿದ್ದರು. ಆದರೆ, ಪಂದ್ಯದ ವೇಳೆ ಮತ್ತೆ ಈ ಹಿಂದಿನ ಗಾಯಕ್ಕೆ ತುತ್ತಾಗಿ ಪಂದ್ಯದಿಂದ ಹೊರಗುಳಿದರು.

3.1 ಓವರ್‌ಗಳಲ್ಲಿ 31 ರನ್‌ಗಳಿಗೆ 1 ವಿಕೆಟ್‌ ಪಡೆದು ಗಾಯದಿಂದ ಪಂದ್ಯವನ್ನು ಅರ್ಧಕ್ಕೆ ಮೊಡಕುಗೊಳಿಸಿದ್ದರು. ಬಳಿಕ ಇವರ ಓವರನ್ನು ನವೀನ್​ ಉಲ್​ ಹಕ್​ ಪೂರ್ಣಗೊಳಿಸಿದ್ದರು. ಟೈಮ್ಸ್​ ಆಫ್​ ಇಂಡಿಯಾ ವರದಿಯ ಪ್ರಕಾರ ಮಯಾಂಕ್​ ಯಾದವ್​ ಇನ್ನುಳಿದ ಎಲ್ಲ ಪಂದ್ಯಗಳಿಗೂ ಅಲಭ್ಯರಾಗಲಿದ್ದು ಟೂರ್ನಿಯಿಂದ ಹೊರಗುಳಿಯಲಿದ್ದಾರೆ ಎಂದು ತಿಳಿಸಿದೆ.

ಮಯಾಂಕ್ ಗಾಯದ ಬಗ್ಗೆ ಮಾಹಿತಿ ನೀಡಿರುವ ತಂಡದ ಮುಖ್ಯ ಕೋಚ್​ ಜಸ್ಟೀನ್​ ಲ್ಯಾಂಗರ್​, ‘ಪರಿಪೂರ್ಣ ಪುನರ್ವಸತಿಗೆ ಒಳಗಾಗಿದ್ದರೂ, ಮಯಾಂಕ್​ಗೆ ಹೊಟ್ಟೆಯ ಕೆಳಭಾಗದಲ್ಲಿ ನೋವು ಕಾಣಿಸಿಕೊಂಡಿದೆ. ಹೀಗಾಗಿ ಅವರನ್ನು ಸ್ಕ್ಯಾನಿಂಗ್​ಗೆ ಒಳಪಡಿಸಲಾಗಿದೆ. ಅವರಿಗೆ ಈ ನೋವಿನಿಂದ ಚೇತರಿಸಿಕೊಳ್ಳಲು ಕನಿಷ್ಠ ಮೂರು ವಾರಗಳ ವಿಶ್ರಾಂತಿ ಬೇಕಾಗಬಹುದು” ಎಂದು ಹೇಳಿದ್ದಾರೆ. ಇವರ ಈ ಹೇಳಿಕೆ ನೋವುವಾಗ ಮಯಾಂಕ್​ ಟೂರ್ನಿಯಿಂದ ಹೊರಗುಳಿಯುವುದು ಬಹುತೇಖ ಖಚಿತಗೊಂಡಂತಿದೆ.

ಇದನ್ನೂ ಓದಿ IPL 2024: ನಾಯಕ ಹಾರ್ದಿಕ್​ ಪಾಂಡ್ಯ ಸೇರಿ ಮುಂಬೈ ತಂಡದ ಆಟಗಾರರಿಗೆ ಬಿತ್ತು ಭಾರೀ ದಂಡ

ಮಯಾಂಕ್ ಲಿಸ್ಟ್​ ‘ಎ’ಯಲ್ಲಿ 17 ಪಂದ್ಯಗಳನ್ನಾಡಿ 34 ವಿಕೆಟ್​ ಪಡೆದಿದ್ದಾರೆ. ದೇಶೀಯ ಟಿ20 ಟೂರ್ನಿಯಲ್ಲಿ 12 ಪಂದ್ಯ ಆಡಿ 18 ವಿಕೆಟ್​ ಕೆಡೆವಿದ್ದಾರೆ. ಕಳೆದ ಆರ್​ಸಿಬಿ ವಿರುದ್ಧದ ಪಂದ್ಯದಲ್ಲಿ 4 ಓವರ್​ ಎಸೆದು 14 ರನ್​ ನೀಡಿ 3 ವಿಕೆಟ್​ ವಿಕೆಟ್​ ಕಬಳಿಸಿದ್ದರು. ಮಯಾಂಕ್ ಪ್ರಸ್ತುತ ಐಪಿಎಲ್​ನಲ್ಲಿ ಅತ್ಯಂತ ವೇಗದ ಎಸೆತವನ್ನು ಎಸೆದು ಗಮನಸೆಳೆದಿದ್ದಾರೆ. ಆರ್​ಸಿಬಿ ವಿರುದ್ಧದ ಪಂದ್ಯದಲ್ಲಿ 156.7 kmph ವೇಗದಲ್ಲಿ ಚೆಂಡೆಸಿದಿದ್ದರು. ಇದಕ್ಕೂ ಮುನ್ನ ನಡೆದಿದ್ದ ಪಂಜಾಬ್​ ವಿರುದ್ಧದ ಪಂದ್ಯದಲ್ಲಿ ಗಂಟೆಗೆ 155.8 kmph ವೇಗದಲ್ಲಿ ಬೌಲಿಂಗ್​ ನಡೆಸಿದ್ದರು. ದೇಶೀಯ ಕ್ರಿಕೆಟ್‌ನಲ್ಲಿ ದಿಲ್ಲಿ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ. ಇವರ ಬೌಲಿಂಗ್​ ಶ್ರೇಯಸ್ಸಿಗೆ ಇಶಾಂತ್‌ ಶರ್ಮ, ನವದೀಪ್‌ ಸೈನಿ ನೀಡಿದ ಸಲಹೆಯೂ ಕೂಡ ಕಾರಣ. ಈ ವಿಚಾರವನ್ನು ಸ್ವತಃ ಯಾದವ್ ಅವರೇ ಹೇಳಿಕೊಂಡಿದ್ದರು. 

Continue Reading

ಕ್ರೀಡೆ

T20 World Cup 2024: ಡ್ರಾಪ್ -ಇನ್ ಪಿಚ್ ಅಳವಡಿಕೆ ಕಾರ್ಯ ಆರಂಭಿಸಿದ ಐಸಿಸಿ

T20 World Cup 2024: ಟಿ20 ವಿಶ್ವಕಪ್​ಗಾಗಿಯೇ ನ್ಯೂಯಾರ್ಕ್​ನಲ್ಲಿ ತಾತ್ಕಾಲಿಕವಾಗಿ ನಸ್ಸೌ ಕೌಂಟಿ ಇಂಟರ್‌ನ್ಯಾಶನಲ್ ಕ್ರಿಕೆಟ್ ಸ್ಟೇಡಿಯಂ(Nassau County International Cricket Stadium) ನಿರ್ಮಾಣ ಮಾಡಲಾಗಿದೆ. 34 ಸಾವಿರ ಪ್ರೇಕ್ಷಕರು ಕೂರುವಷ್ಟು ಸಾಮರ್ಥ್ಯದ ಸ್ಟೇಡಿಯಂ ಇದಾಗಿದೆ.

VISTARANEWS.COM


on

T20 World Cup 2024
Koo

ನ್ಯೂಯಾರ್ಕ್: ವೆಸ್ಟ್​ ಇಂಡೀಸ್​ ಮತ್ತು ಅಮೆರಿಕ ಆತಿಥ್ಯದಲ್ಲಿ ನಡೆಯಲಿರುವ ಟಿ20 ವಿಶ್ವಕಪ್​ ಟೂರ್ನಿಗೆ(T20 World Cup 2024) ಇನ್ನು ಕೆಲವೇ ಇಂದು ತಿಂಗಳು ಮಾತ್ರ ಬಾಕಿ ಉಳಿದಿದೆ. ವಿಶ್ವಕಪ್​ ಪಂದ್ಯಾವಳಿಗಳು ಜೂನ್​ 1ರಿಂದ 29ರ ತನಕ ಸಾಗಲಿದೆ. ಟೂರ್ನಿಯಲ್ಲಿ ಪಾಲ್ಗೊಳ್ಳುವ ದೇಶಗಳು ಬಲಿಷ್ಠ ತಂಡವನ್ನು ಕೂಡ ಪ್ರಕಟಿಸುತ್ತಿವೆ. ಇದೇ ಮೊದಲ ಬಾರಿಗೆ ಅಮೆರಿಕ ಐಸಿಸಿ ಪಂದ್ಯಾವಳಿ ಆತಿಥ್ಯ ವಹಿಸಿಕೊಂಡಿದೆ. ಸುಸಜ್ಜಿತ ಪಿಚ್ ಇಲ್ಲದ ಕಾರಣ ಆಸ್ಟ್ರೇಲಿಯಾದಿಂದ ತರಿಸಿದ ಡ್ರಾಪ್ ಇನ್ ಪಿಚ್‌ಗಳನ್ನು(Drop-In Pitches) ಅಳವಡಿಸಲಾಗುತ್ತಿದೆ ಎಂದು ಐಸಿಸಿ ಬುಧವಾರ ತಿಳಿಸಿದೆ.

“ಟಿ20 ವಿಶ್ವಕಪ್‌ಗಾಗಿ ಸಿದ್ಧಪಡಿಸಲಾದ ಡ್ರಾಪ್-ಇನ್ ಪಿಚ್‌ಗಳನ್ನು ಫ್ಲೋರಿಡಾದಿಂದ ನ್ಯೂಯಾರ್ಕ್‌ಗೆ ಸೆಮಿ ಟ್ರೈಲರ್ ಟ್ರಕ್‌ಗಳಲ್ಲಿ ನಸ್ಸೌ ಕೌಂಟಿ ಇಂಟರ್‌ನ್ಯಾಶನಲ್ ಕ್ರಿಕೆಟ್ ಸ್ಟೇಡಿಯಂಗೆ ತರಲಾಗಿದ್ದು, ಇದರ ಅಳವಡಿಕೆಯ ಕಾರ್ಯ ಇನ್ನೆರಡು ದಿನಗಳಲ್ಲಿ ಆರಂಭಗೊಳ್ಳಲಿದೆ’ ಎಂದು ಐಸಿಸಿ (ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್) ಬುಧವಾರ ತಿಳಿಸಿದೆ. ಡ್ರಾಪ್-ಇನ್ ಪಿಚ್​ ಫುಟ್‌ಬಾಲ್, ರಗ್ಬಿ ಮತ್ತು ಕ್ರಿಕೆಟ್ ಪಂದ್ಯಗಳನ್ನು ಆಯೋಜಿಸಲು ಅನುವು ಮಾಡಿಕೊಡುತ್ತದೆ.

ನಸ್ಸೌ ಕ್ರೀಡಾಂಗಣದಲ್ಲಿ ನಾಲ್ಕು ಪಿಚ್‌ಗಳನ್ನು ಸ್ಥಾಪಿಸಲಾಗುವುದು, ನೆರೆಯ ಅಭ್ಯಾಸ ಸೌಲಭ್ಯಗಳಿಗಾಗಿ ಹೆಚ್ಚುವರಿ ಆರು ಪಿಚ್​ ಮಾಡಲಾಗುವುದು ಎಂದು ಐಸಿಸಿ ತಿಳಿಸಿದೆ. ಟಿ20 ವಿಶ್ವಕಪ್​ಗಾಗಿಯೇ ನ್ಯೂಯಾರ್ಕ್​ನಲ್ಲಿ ತಾತ್ಕಾಲಿಕವಾಗಿ ನಸ್ಸೌ ಕೌಂಟಿ ಇಂಟರ್‌ನ್ಯಾಶನಲ್ ಕ್ರಿಕೆಟ್ ಸ್ಟೇಡಿಯಂ(Nassau County International Cricket Stadium) ನಿರ್ಮಾಣ ಮಾಡಲಾಗಿದೆ. ಬಹುತೇಕ ಇದರ ಕಾಮಗಾರಿ ಮುಕ್ತಾಯ ಕಂಡಿದೆ. ಜೂನ್ 9 ರಂದು ಭಾರತ ಮತ್ತು ಪಾಕಿಸ್ತಾನ(IND vs PAK) ನಡುವಿನ ಹೈ-ವೋಲ್ಟೇಜ್ ಘರ್ಷಣೆ ಸೇರಿದಂತೆ ಭಾರತದ ಎಲ್ಲಾ ಗುಂಪು-ಹಂತದ ಪಂದ್ಯಗಳಿಗೆ ಈ ಕ್ರೀಡಾಂಗಣವು ಅಣಿಯಾಗಿದೆ. ಅಚ್ಚರಿ ಎಂದರೆ ಈ ಸ್ಟೇಡಿಯಂ ಅನ್ನು ನಿರ್ಮಾಣ ಮಾಡಿದ್ದೇ ಭಾರತ ಮತ್ತು ಪಾಕಿಸ್ತಾನ ಎದುರಿನ ಪಂದ್ಯಕ್ಕಾಗಿ.

ಇದನ್ನೂ ಓದಿ T20 World Cup 2024: ಟಿ20 ವಿಶ್ವಕಪ್​ಗೆ ತಂಡ ಪ್ರಕಟಿಸಿದ ಆಸ್ಟ್ರೇಲಿಯಾ; ಅನುಭವಿ ಸ್ಮಿತ್​ಗೆ ಅವಕಾಶವಿಲ್ಲ

34 ಸಾವಿರ ಪ್ರೇಕ್ಷಕರು ಕೂರುವಷ್ಟು ಸಾಮರ್ಥ್ಯದ ಸ್ಟೇಡಿಯಂ ಇದಾಗಿದ್ದು. ಭಾರತ-ಪಾಕ್​ ಪಂದ್ಯಕ್ಕಾಗಿಯೇ ಇದನ್ನು ತಾತ್ಕಾಲಿಕವಾಗಿ ನಿರ್ಮಿಸಲಾಗಿದೆ. ಪಂದ್ಯದ ನಂತರ ಇದನ್ನು ಕೆಡವಲಾಗುತ್ತದೆ ಎಂದು ತಿಳಿಸಲಾಗಿದೆ. ಭಾರತ ಮತ್ತು ಪಾಕ್​ ನಡುವಣ ಪಂದ್ಯ ನ್ಯೂಯಾರ್ಕ್‌ನಲ್ಲಿಯೇ ನಡೆಸಲು ಕಾರಣವೂ ಕೂಡ ಇದೆ. ಏಕೆಂದರೆ ಈ ಪ್ರದೇಶದಲ್ಲಿ 7,11,000 ಭಾರತೀಯ ಮತ್ತು ಸುಮಾರು 1,00,000 ಪಾಕಿಸ್ತಾನ ಮೂಲದ ಜನರು ವಾಸಿಸುತ್ತಿದ್ದಾರೆ ಎನ್ನಲಾಗಿದೆ.

ವಿಶ್ವಕಪ್ ಟೂರ್ನಿಗೆ ಅಮೆರಿಕದ ಮೂರು ಸ್ಟೇಡಿಯಂಗಳು ಆತಿಥ್ಯ ವಹಿಸಿವೆ. ಇಲ್ಲಿ 16 ಪಂದ್ಯಗಳು ನಡೆಯಲಿದೆ. ಈ ಮೈದಾನಕ್ಕೆ ಆಸ್ಟ್ರೇಲಿಯಾದಿಂದ ತರಿಸಲಾದ ಡ್ರಾಪ್ ಇನ್ ಪಿಚ್ ಬಳಸಗಾಗುತ್ತದೆ. ಪಿಚ್ ಸಂಪೂರ್ಣವಾಗಿ ಅಡಿಲೇಡ್‌ನಲ್ಲಿ ತಯಾರಿಸಲಾಗಿದ್ದು, ಅದನ್ನು ಹಡಗಿನಲ್ಲೇ 22,500 ಕಿಲೋಮೀಟರ್ ದೂರದ ಫ್ಲೋರಿಡಾ ಮೂಲಕ ನ್ಯೂಯಾರ್ಕ್‌ಗೆ ತರಲಾಗಿದೆ. ಅಮೆರಿಕದ ಈ ಮೂರು ಕ್ರೀಡಾಂಗಣಗಳಲ್ಲಿ 16 ಪಂದ್ಯಗಳು ನಡೆಯಲಿದೆ. ಉಳಿದ 39 ಪಂದ್ಯಗಳಿಗೆ ವೆಸ್ಟ್ ಇಂಡೀಸ್ ಆತಿಥ್ಯ ವಹಿಸಿದೆ. ಟೂರ್ನಿಯಲ್ಲಿ ಒಟ್ಟು 55 ಪಂದ್ಯಗಳು ನಡೆಯಲಿವೆ. ಜೂನ್ 1ರಿಂದ 18ರವರೆಗೆ ಗುಂಪು ಹಂತದಲ್ಲಿ 40 ಪಂದ್ಯಗಳು ನಡೆಯಲಿವೆ. ಜೂನ್ 19 ರಿಂದ 24 ರವರೆಗೆ ಸೂಪರ್ 8 ಪಂದ್ಯಗಳು ನಡೆಯಲಿವೆ.

Continue Reading

ಕ್ರೀಡೆ

T20 World Cup: ಟಿ20 ವಿಶ್ವಕಪ್​ನಲ್ಲಿ ಸ್ಥಾನ ಪಡೆದ ಚಹಲ್​ಗೆ ಪತ್ನಿಯಿಂದ ವಿಶೇಷ ಹಾರೈಕೆ

T20 World Cup: ಯಜುವೇಂದ್ರ ಚಹಲ್​ ಮತ್ತು ಧನಶ್ರೀ ವರ್ಮಾ ಮಧ್ಯೆ ಎಲ್ಲವೂ ಸರಿಯಿಲ್ಲ. ಶೀಘ್ರದಲ್ಲೇ ಈ ಜೋಡಿ ದೂರವಾಗಲಿದ್ದಾರೆ ಎಂದು ಹಲವು ಬಾರಿ ಸಾಮಾಜಿಕ ಜಾಲತಾಣದಲ್ಲಿ ಭಾರಿ ಸುದ್ದಿಯಾಗಿತ್ತು. ಆದರೆ ಈ ಜೋಡಿ ಮಾತ್ರ ಈ ಮಾತಿಗೆ ಕ್ಯಾರೆ ಎನ್ನದೆ ನಮ್ಮ ಸಂಸಾರದ ಮಧ್ಯೆ ಯಾವುದೇ ಬಿರುಕು ಮೂಡಿಲ್ಲ ಎಂದು ಹಲವು ಬಾರಿ ತೋರಿಸಿಕೊಟ್ಟಿದ್ದಾರೆ.

VISTARANEWS.COM


on

T20 World Cup
Koo

ಮುಂಬಯಿ: ಅಮೆರಿಕ ಮತ್ತು ವೆಸ್ಟ್​ ಇಂಡೀಸ್​ ಜಂಟಿ ಆತಿಥ್ಯದಲ್ಲಿ ಜೂನ್​ 1ರಿಂದ 29ರ ತನಕ ನಡೆಯುವ ಐಸಿಸಿ ಪುರುಷರ ಟಿ20 ವಿಶ್ವಕಪ್​ಗೆ(T20 World Cup) ಬಿಸಿಸಿಐ ಮಂಗಳವಾರ ಭಾರತ ತಂಡವನ್ನು ಪ್ರಕಟಿಸಿತ್ತು. ಈ ತಂಡದಲ್ಲಿ ಸ್ಪಿನ್ನರ್​ ಯಜುವೇಂದ್ರ ಚಹಲ್(Yuzvendra Chahal)​ ಕೂಡ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಇದೇ ಖುಷಿಯಲ್ಲಿ ಚಹಲ್​ ಪತ್ನಿ ಧನಶ್ರೀ ವರ್ಮಾ(Dhanashree Verma) ಇನ್​ಸ್ಟಾಗ್ರಾಮ್​ನಲ್ಲಿ ಪೋಸ್ಟ್​ ಮಾಡುವ ಮೂಲಕ ಪತಿಯ ಮೇಲಿನ ಪ್ರೀತಿಯನ್ನು ವ್ಯಕ್ತಪಡಿಸಿದ್ದಾರೆ. ‘ಕಮ್​ ಆನ್ ಯುಜಿ​… ಹಿ ಈಸ್ ಬ್ಯಾಕ್ ಎಂದು ಬರೆದುಕೊಂಡಿದ್ದಾರೆ.

ಯಜುವೇಂದ್ರ ಚಹಲ್​ ಮತ್ತು ಧನಶ್ರೀ ವರ್ಮಾ ಮಧ್ಯೆ ಎಲ್ಲವೂ ಸರಿಯಿಲ್ಲ. ಶೀಘ್ರದಲ್ಲೇ ಈ ಜೋಡಿ ದೂರವಾಗಲಿದ್ದಾರೆ ಎಂದು ಹಲವು ಬಾರಿ ಸಾಮಾಜಿಕ ಜಾಲತಾಣದಲ್ಲಿ ಭಾರಿ ಸುದ್ದಿಯಾಗಿತ್ತು. ಆದರೆ ಈ ಜೋಡಿ ಮಾತ್ರ ಈ ಮಾತಿಗೆ ಕ್ಯಾರೆ ಎನ್ನದೆ ನಮ್ಮ ಸಂಸಾರದ ಮಧ್ಯೆ ಯಾವುದೇ ಬಿರುಕು ಮೂಡಿಲ್ಲ ಎಂದು ಹಲವು ಬಾರಿ ತೋರಿಸಿಕೊಟ್ಟಿದ್ದಾರೆ. ಇಬ್ಬರೂ ಕೂಡ ಹಲವು ಬಾರಿ ವಿದೇಶ ಪ್ರವಾಸದಲ್ಲಿ ಜಾಲಿ ಮೂಡ್​ನಲ್ಲಿರುವ ಫೋಟೊಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.


ಇತ್ತೀಚೆಗೆ 150ನೇ ಐಪಿಎಲ್​ ಪಂದ್ಯವನ್ನಾಡಿದ ಚಹಲ್​ಗೆ ಪತ್ನಿ ಭಾವುಕ ವಿಡಿಯೊ ಸಂದೇಶದ ಮೂಲಕ ಹಾರೈಸಿದ್ದರು. “ಹೇ ಯುಜಿ, ನಿಮ್ಮ 150ನೇ ಐಪಿಎಲ್ ಪಂದ್ಯಕ್ಕೆ ಅಭಿನಂದನೆಗಳು. ನಿವು ಈ ಹಿಂದೆ ಆಡಿದ ತಂಡಕ್ಕೆ ಮತ್ತು ಈಗ ಆಡುತ್ತಿರುವ ರಾಜಸ್ಥಾನ್ ರಾಯಲ್ಸ್‌ಗೆ ನೀವು ಅಪಾರ ಕೊಡುಗೆ ನೀಡಿದ್ದೀರಿ. ನಿಮ್ಮ ಬಗ್ಗೆ ನನಗೆ ಯಾವತ್ತೂ ಹೆಮ್ಮೆ ಇದೆ. ನೀವು ನಿಮ್ಮ ಆಟವನ್ನು ಹೇಗೆ ಆಡುತ್ತೀರಿ ಮತ್ತು ಪ್ರತಿ ಬಾರಿ ನೀವು ಕಮ್​ಬ್ಯಾಕ್​ ಮಾಡುವ ರೀತಿ ನಿಜಕ್ಕೂ ಮೆಚ್ಚಲೇ ಬೇಕು. ಯಾವುದೇ ಪಂದ್ಯ ಒತ್ತಡದಲ್ಲಿದ್ದಾಗಲೆಲ್ಲಾ ವಿಕೆಟ್​ ತೆಗೆಯಬಲ್ಲ ಬೌಲರ್​ ನೀವಾಗಿದ್ದೀರಿ. ನಾನು ನಿಮ್ಮ ದೊಡ್ಡ ಚೀರ್‌ಲೀಡರ್ ಮತ್ತು ನಾನು ಯಾವಾಗಲೂ 100 ಪ್ರತಿಶತದಷ್ಟು ನಿಮ್ಮನ್ನು ಬೆಂಬಲಿಸುತ್ತೇನೆ. ನಿಮ್ಮ 150 ನೇ ಐಪಿಎಲ್ ಪಂದ್ಯವನ್ನು ಆನಂದಿಸಿ” ಎಂದು ಶುಭ ಹಾರೈಸಿದ್ದರು. ವಿಡಿಯೊವನ್ನು ರಾಜಸ್ಥಾನ್​ ರಾಯಲ್ಸ್(Rajasthan Royals)​ ತನ್ನ ಅಧಿಕೃತ ಟ್ವಿಟರ್​ ಎಕ್ಸ್​ನಲ್ಲಿ ಪೋಸ್ಟ್​ ಮಾಡಿತ್ತು.

ಇದನ್ನೂ ಓದಿ T20 World Cup 2024: ಟಿ20 ವಿಶ್ವಕಪ್​ಗೆ ತಂಡ ಪ್ರಕಟಿಸಿದ ಆಸ್ಟ್ರೇಲಿಯಾ; ಅನುಭವಿ ಸ್ಮಿತ್​ಗೆ ಅವಕಾಶವಿಲ್ಲ

ಏಷ್ಯಾ ಕಪ್​ ಮತ್ತು ಏಕದಿನ ವಿಶ್ವಕಪ್​ನಲ್ಲಿ ಅವಕಾಶ ಸಿಗದ ಸ್ಪಿನ್ನರ್ ಯಜುವೇಂದ್ರ ಚಾಹಲ್ ಅವರಿಗೆ ಐಪಿಎಲ್​ ಪ್ರದರ್ಶನ ನೋಡಿ ಟಿ20ಯಲ್ಲಿ ಅವಕಾಶ ನೀಡಲಾಗಿದೆ. ಚಹಲ್​ ಇದುವರೆಗೆ ಭಾರತ ಪರ 72 ಏಕದಿನ ಪಂದ್ಯಗಳಿಂದ 121 ವಿಕೆಟ್​, 80 ಟಿ20 ಆಡಿ 96 ವಿಕೆಟ್​ ಕಡೆವಿದ್ದಾರೆ. ಇದುವರೆಗೂ ಟೆಸ್ಟ್​ ಕ್ರಿಕೆಟ್​ ಆಡಿಲ್ಲ.

ಟಿ20 ವಿಶ್ವಕಪ್​ನಲ್ಲಿ ಭಾರತ ತನ್ನ ಮೊದಲ ಪಂದ್ಯವನ್ನು ಜೂನ್‌ 5 ರಂದು ಐರ್ಲೆಂಡ್​ ವಿರುದ್ಧ ಆಡಲಿದೆ. ದ್ವಿತೀಯ ಪಂದ್ಯ ಜೂನ್‌ 9 ರಂದು ಪಾಕ್​ ವಿರುದ್ಧ ಆಡಲಿದ. ಭಾರತ ತನ್ನ ಎಲ್ಲ ಲೀಗ್‌ ಪಂದ್ಯಗಳನ್ನು ಅಮೆರಿಕದಲ್ಲೇ ಆಡದೆ. ಇದರಲ್ಲಿ ಮೂರು ಪಂದ್ಯಗಳು ನ್ಯೂಯಾರ್ಕ್‌ ಮತ್ತು ಒಂದು ಪಂದ್ಯ ಫ್ಲೋರಿಡಾದಲ್ಲಿ ನಡೆಯಲಿದೆ.

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್​ ಕೀಪರ್​), ಸಂಜು ಸ್ಯಾಮ್ಸನ್ (ವಿಕೆಟ್​ ಕೀಪರ್​), ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಯುಜ್ವೇಂದ್ರ ಚಾಹಲ್, ಅರ್ಶದೀಪ್​ ಸಿಂಗ್​, ಜಸ್​ಪ್ರೀತ್​ ಬುಮ್ರಾ, ಮೊಹಮ್ಮದ್​ ಸಿರಾಜ್. ಮೀಸಲು ಆಟಗಾರರು ಶುಭಮನ್ ಗಿಲ್, ರಿಂಕು ಸಿಂಗ್, ಖಲೀಲ್ ಅಹ್ಮದ್ ಮತ್ತು ಅವೇಶ್ ಖಾನ್.

Continue Reading

ಕ್ರೀಡೆ

IPL 2024: ನಾಯಕ ಹಾರ್ದಿಕ್​ ಪಾಂಡ್ಯ ಸೇರಿ ಮುಂಬೈ ತಂಡದ ಆಟಗಾರರಿಗೆ ಬಿತ್ತು ಭಾರೀ ದಂಡ

IPL 2024: “ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಐಪಿಎಲ್​ನ 48ನೇ ಪಂದ್ಯದಲ್ಲಿ ನಿಧಾನ ಗತಿಯ ಬೌಲಿಂಗ್ ಮಾಡಿದ್ದಕ್ಕಾಗಿ ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಅವರಿಗೆ ದಂಡ ವಿಧಿಸಲಾಗಿದೆ. ಈ ಸೀಸನ್‍ನಲ್ಲಿ ಇದು ತಂಡದ ಎರಡನೇ ಅಪರಾಧವಾಗಿದ್ದು, ಐಪಿಎಲ್ ನೀತಿಸಂಹಿತೆ ಅನ್ವಯ, ಕನಿಷ್ಠ ಓವರ್ ದರವನ್ನು ನಿರ್ವಹಿಸಬೇಕಾಗುತ್ತದೆ” ಎಂದು ಐಪಿಎಲ್ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

VISTARANEWS.COM


on

IPL 2024
Koo

ಲಕ್ನೋ: ಲಕ್ನೋ ಸೂಪರ್​ ಜೈಂಟ್ಸ್​ ವಿರುದ್ಧದ ಪಂದ್ಯದಲ್ಲಿ (IPL 2024) ನಿಧಾನಗತಿಯ ಓವರ್ ರೇಟ್ ಕಾಯ್ದುಕೊಂಡಿದ್ದ ಕಾರಣಕ್ಕೆ ಮುಂಬೈ ನಾಯಕ ಹಾರ್ದಿಕ್​ ಪಾಂಡ್ಯ(Hardik Pandya)​ಗೆ 24 ಲಕ್ಷ ರೂ. ದಂಡ ವಿಧಿಸಿದೆ. ಇದು ಪಾಂಡ್ಯ ಅವರ 2ನೇ ಪ್ರಕರಣವಾಗಿದೆ. ನಾಯಕನ ಈ ತಪ್ಪಿನಿಂದ ಇಂಪ್ಯಾಕ್ಟ್ ಆಟಗಾರ ಸೇರಿದಂತೆ ಇತರ ಎಲ್ಲ ಆಟಗಾರರಿಗೆ ವೈಯಕ್ತಿಕವಾಗಿ 6 ಲಕ್ಷ ಅಥವಾ ಅವರ ಪಂದ್ಯದ ಸಂಭಾವನೆಯ ಶೇ. 25ರಷ್ಟು ದಂಡ ವಿಧಿಸಲಾಗಿದೆ.

“ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಐಪಿಎಲ್​ನ 48ನೇ ಪಂದ್ಯದಲ್ಲಿ ನಿಧಾನ ಗತಿಯ ಬೌಲಿಂಗ್ ಮಾಡಿದ್ದಕ್ಕಾಗಿ ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಅವರಿಗೆ ದಂಡ ವಿಧಿಸಲಾಗಿದೆ. ಈ ಸೀಸನ್‍ನಲ್ಲಿ ಇದು ತಂಡದ ಎರಡನೇ ಅಪರಾಧವಾಗಿದ್ದು, ಐಪಿಎಲ್ ನೀತಿಸಂಹಿತೆ ಅನ್ವಯ, ಕನಿಷ್ಠ ಓವರ್ ದರವನ್ನು ನಿರ್ವಹಿಸಬೇಕಾಗುತ್ತದೆ. ಈ ಅಪರಾಧಕ್ಕಾಗಿ 24 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ” ಎಂದು ಐಪಿಎಲ್ ಹೇಳಿಕೆ ನೀಡಿದೆ.

ಇಂಪ್ಯಾಕ್ಟ್ ಆಟಗಾರ ಸೇರಿದಂತೆ ಆಡಿದ ಎಲ್ಲ ಇತರ 11 ಮಂದಿ ಆಟಗಾರರಿಗೆ 6 ಲಕ್ಷ ರೂ. ಅಥವಾ ಪಂದ್ಯದ ಸಂಭಾವನೆಯ ಶೇ. 25 ದಂಡ ವಿಧಿಸಲಾಗಿದೆ ಎಂದು ಪ್ರಕಟಣೆ ವಿವರಿಸಿದೆ. ಕಳೆದ ಏಪ್ರಿಲ್​ 18ರಂದು ನಡೆದಿದ್ದ ಪಂಜಾಬ್​ ಕಿಂಗ್ಸ್​ ವಿರುದ್ಧದ ಪಂದ್ಯದಲ್ಲಿಯೂ ನಿಧಾನಗತಿಯ ಓವರ್ ರೇಟ್ ಕಾಯ್ದುಕೊಂಡಿದ್ದ ಕಾರಣಕ್ಕೆ ಪಾಂಡ್ಯಗೆ ಬಿಸಿಸಿಐ 12 ಲಕ್ಷ ರೂ. ದಂಡ ವಿಧಿಸಿತ್ತು.

ಇದನ್ನೂ ಓದಿ IPL 2024 Points Table: 3ನೇ ಸ್ಥಾನಕ್ಕೇರಿದ ಲಕ್ನೋ; ಕುಸಿತ ಕಂಡ ಹಾಲಿ ಚಾಂಪಿಯನ್​ ಚೆನ್ನೈ

ಇನ್ನೊಂದು ಬಾರಿ ತಪ್ಪು ಮರುಕಳಿಸಿದರೆ ಒಂದು ಪಂದ್ಯ ನಿಷೇಧ


ಸ್ಲೋ ಓವರ್​ ರೇಟ್​ ನಿಯಮದ ಪ್ರಕಾರ ಮೊದಲ ತಪ್ಪಿಗೆ ನಾಯಕನನ್ನು ದೋಷಿಯನ್ನಾಗಿ ಮಾಡಲಾಗುತ್ತದೆ. ಮೊದಲ ಬಾರಿಯ ತಪ್ಪಿಗೆ 12 ಲಕ್ಷ ರೂ. ದಂಡ ಹಾಕಲಾಗುತ್ತದೆ. ಇದು ಪುನರಾವರ್ತನೆಯಾದಲ್ಲಿ 24 ಲಕ್ಷ ರೂ. ದಂಡ ನಿಗದಿ ಮಾಡಲಾಗಿದೆ. ಅಲ್ಲದೆ ತಂಡದ ಇತರೆ ಆಟಗಾರರು ಪಂದ್ಯದ ಶುಲ್ಕದ ಶೇ.25 ರಷ್ಟು ಮೊತ್ತವನ್ನು ದಂಡವಾಗಿ ನೀಡಬೇಕು. ಒಂದೊಮ್ಮೆ ಮೂರನೇ ಬಾರಿ ಮತ್ತೆ ಇದೇ ತಪ್ಪು ಮರುಕಳಿಸಿದರೆ ಆಗ ನಾಯಕ ಒಂದು ಪಂದ್ಯದ ನಿಷೇಧಕ್ಕೆ ಗುರಿಯಾಗಲಿದ್ದಾರೆ.

ಮುಂಬೈಗೆ ಸೋಲು

ಶ್ರೀ ಅಟಲ್​ ಬಿಹಾರಿ ವಾಜಪೇಯಿ ಕ್ರಿಕೆಟ್ ಸ್ಟೇಡಿಯಮ್​ನಲ್ಲಿ ಮಂಗಳವಾರ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್​ ನಡೆಸಿದ ಮುಂಬೈ ಬ್ಯಾಟರ್​ಗಳು ಲಕ್ನೋ ಬೌಲರ್​ಗಳ ಬಿಗು ದಾಳಿಗೆ ಕುಸಿದು 7 ವಿಕೆಟ್ ನಷ್ಟಕ್ಕೆ 144 ರನ್ ಬಾರಿಸಿತು. ಜವಾಬಿತ್ತ ಲಕ್ನೊ ತಂಡ 19.2 ಓವರ್​ಗಳು 6 ವಿಕೆಟ್​ಗೆ 145 ರನ್ ಬಾರಿಸಿ ಗೆಲುವು ಸಾಧಿಸಿತು.

Continue Reading
Advertisement
Chaitra Achar
ಫ್ಯಾಷನ್7 mins ago

Chaitra Achar: ನೋಡುಗರ ಹುಬ್ಬೇರಿಸಿದ ನಟಿ ಚೈತ್ರಾ ಆಚಾರ್‌ ಪಾರದರ್ಶಕ ನಿಟ್‌ವೇರ್

Veena kashappanavar
ಕರ್ನಾಟಕ32 mins ago

Veena Kashappanavar: ರಾಜಕೀಯದಿಂದ ದೂರ ಸರಿದ್ರಾ ವೀಣಾ ಕಾಶಪ್ಪನವರ್‌? ಭಾವನಾತ್ಮಕ ಪೋಸ್ಟ್‌ ಹಾಕಿದ ಕೈ ನಾಯಕಿ!

Mayank Yadav
ಕ್ರೀಡೆ43 mins ago

Mayank Yadav: ಗಾಯಾಳು ಮಾಯಾಂಕ್‌ ಯಾದವ್‌ ಐಪಿಎಲ್​ನಿಂದ ಔಟ್​?

Bomb threat
ದೇಶ1 hour ago

Bomb Threat: ದೆಹಲಿ ಶಾಲೆಗಳಿಗೆ ಬಾಂಬ್‌ ಬೆದರಿಕೆ; ಇ-ಮೇಲ್‌ ಮಾಡಿದವ 16 ವರ್ಷದ ಪೋರ?

Saree Fashion
ಫ್ಯಾಷನ್1 hour ago

Saree Fashion: ಸೀರೆಯ ಹೊಸ ಟ್ರೆಂಡ್‌ ಬಗ್ಗೆ ರ‍್ಯಾಪರ್‌ ಇಶಾನಿಯ ವ್ಯಾಖ್ಯಾನ ಇದು!

karnataka weather Forecast
ಮಳೆ1 hour ago

Karnataka Weather : ಮಳೆಗಾಗಿ ಕಪ್ಪೆಗಳಿಗೆ ಮದುವೆ; ಶಾಖದ ಹೊಡೆತಕ್ಕೆ 6 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Lottery
ವೈರಲ್ ನ್ಯೂಸ್1 hour ago

Lottery: ಕೋಟಿ ರೂ. ಲಾಟರಿ ಗೆದ್ದಿದ್ದೀರಿ ಎಂದರೆ, ಸ್ಕ್ಯಾಮ್‌ ಎಂದು ಫೋನಿಟ್ಟ ಮಹಿಳೆ; ಕೊನೆಗೆ ದುಡ್ಡು ಸಿಕ್ತಾ?

Prajwal Revanna Case What is diplomatic passport
ಹಾಸನ2 hours ago

Prajwal Revanna Case: ಏನಿದು ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌? ಕೇಂದ್ರ ರದ್ದು ಮಾಡಿದರೆ ಪ್ರಜ್ವಲ್‌ ರೇವಣ್ಣ ಅರೆಸ್ಟ್!

Money Guide
ಮನಿ-ಗೈಡ್2 hours ago

Money Guide: ಹೆಣ್ಣು ಮಕ್ಕಳ ಶಿಕ್ಷಣಕ್ಕೆ ನೆರವು ನೀಡುವ ಯೋಜನೆಗಳಿವು

T20 World Cup 2024
ಕ್ರೀಡೆ2 hours ago

T20 World Cup 2024: ಡ್ರಾಪ್ -ಇನ್ ಪಿಚ್ ಅಳವಡಿಕೆ ಕಾರ್ಯ ಆರಂಭಿಸಿದ ಐಸಿಸಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for April 30 2024
ಭವಿಷ್ಯ2 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20242 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20242 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20243 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20243 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20243 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20243 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest3 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

ಟ್ರೆಂಡಿಂಗ್‌