Asia Cup: ಏಷ್ಯಾ ಕಪ್​ ವಿಚಾರದಲ್ಲಿ ಹೊಸ ಕ್ಯಾತೆ ತೆಗೆದ ಪಾಕಿಸ್ತಾನ​; ಟೂರ್ನಿ ನಡೆಯುವುದೇ ಅನುಮಾನ - Vistara News

ಕ್ರಿಕೆಟ್

Asia Cup: ಏಷ್ಯಾ ಕಪ್​ ವಿಚಾರದಲ್ಲಿ ಹೊಸ ಕ್ಯಾತೆ ತೆಗೆದ ಪಾಕಿಸ್ತಾನ​; ಟೂರ್ನಿ ನಡೆಯುವುದೇ ಅನುಮಾನ

ಝಾಕಾ ಅಶ್ರಫ್ ಅವರು ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸುವ ಮುನ್ನವೇ ಏಷ್ಯಾ ಕಪ್​ ವಿಚಾರದಲ್ಲಿ ಮಹತ್ವದ ಹೇಳಿಕೆಯೊಂದನ್ನು ನೀಡಿದ್ದಾರೆ.

VISTARANEWS.COM


on

Asia Cup
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಲಹೋರ್​: ಹಲವು ಗೊಂದಲಗಳ ಮಧ್ಯೆಯೂ ಕಳೆದ ವಾರ ಏಷ್ಯಾ ಕಪ್​ನ(Asia Cup) ದಿನಾಂಕಗಳನ್ನು ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಖಚಿತಪಡಿಸಿತ್ತು. ಹೈಬ್ರೀಡ್​ ಮಾದರಿಯಲ್ಲಿ ನಡೆಯುವ ಈ ಟೂರ್ನಿ ಆಗಸ್ಟ್ 31 ರಿಂದ ಸೆಪ್ಟೆಂಬರ್ 17 ರವರೆಗೆ ನಡೆಯಲಿದೆ. ಒಟ್ಟು ಆರು ತಂಡಗಳು ಪಂದ್ಯಾವಳಿಯಲ್ಲಿ ಭಾಗವಹಿಸಲಿದ್ದು, ಭಾರತ, ಪಾಕಿಸ್ತಾನ, ಶ್ರೀಲಂಕಾ, ಬಾಂಗ್ಲಾದೇಶ, ಅಫಘಾನಿಸ್ತಾನ ಮತ್ತು ನೇಪಾಳ ನಡುವೆ ಕೂಟ ನಡೆಯಲಿದೆ. ಟೂರ್ನಿಯಲ್ಲಿ 13 ಪಂದ್ಯಗಳು ನಡೆಯಲಿವೆ. ಆದರೆ ಇದೀಗ ಈ ಟೂರ್ನಿಗೆ ಮತ್ತೊಂದು ಕಂಟಕ ಎದುರಾಗಿದ್ದು ಟೂರ್ನಿ ನಡೆಯುವ ಕುರಿತು ಅನುಮಾನವೊಂದು ಮೂಡಿದೆ.

ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸುವ ಮುನ್ನವೇ ಝಾಕಾ ಅಶ್ರಫ್ (Zaka Ashraf) ಅವರು ಏಷ್ಯಾ ಕಪ್​ ವಿಚಾರದಲ್ಲಿ ಮಹತ್ವದ ಹೇಳಿಕೆಯೊಂದನ್ನು ನೀಡಿದ್ದಾರೆ. ಹೈಬ್ರಿಡ್ ಮಾದರಿಯನ್ನು ಮತ್ತೊಮ್ಮೆ ಪರಿಶೀಲಿಸುವುದಾಗಿ ಹೇಳಿದ್ದಾರೆ. ಅವರ ಈ ಹೇಳಿಕೆ ಇದೀಗ ಮತ್ತೊಮ್ಮೆ ಚರ್ಚೆಗೆ ಗ್ರಾಸವಾಗಿದೆ.

ಈ ಹಿಂದೆ ಪಾಕ್ ಕ್ರಿಕೆಟ್​ ಮಂಡಳಿಯ ಅಧ್ಯಕ್ಷರಾಗಿದ್ದ ನಜಮ್​​ ಸೇಥಿ ಅವರ ಅಧಿಕಾರವಧಿ ಮುಕ್ತಾಯಗೊಳ್ಳಲಿದ್ದು ಈ ಸ್ಥಾನಕ್ಕೆ ಇದೀಗ ಝಾಕಾ ಅಶ್ರಫ್ ಅವರು ಆಯ್ಕೆಯಾಗಿದ್ದಾರೆ. ಇನ್ನೇನು ಕೆಲ ದಿನಗಳಲ್ಲಿ ಅವರು ಅಧಿಕಾರ ಸ್ವೀಕರಿಸಲಿದ್ದಾರೆ. ಇದಕ್ಕೂ ಮುನ್ನ ಮಾದ್ಯಮದ ಮುಂದೆ ಮಾತನಾಡಿರುವ ಅವರು ಏಷ್ಯಾ ಕಪ್​ ಹೈಬ್ರೀಡ್ ಮಾದರಿಯಲ್ಲಿ ನಡೆಯುವುದು ಇಷ್ಟವಿಲ್ಲ ಎಂದು ಹೇಳಿದ್ದಾರೆ.

“ನನ್ನ ವೈಯಕ್ತಿಕ ಅಭಿಪ್ರಾಯದಲ್ಲಿ, ಏಷ್ಯಾ ಕಪ್​ ಹೈಬ್ರಿಡ್ ಮಾದರಿಯು ಪಾಕಿಸ್ತಾನಕ್ಕೆ ಯಾವುದೇ ಪ್ರಯೋಜನಕಾರಿಯಲ್ಲ ಮತ್ತು ನಾನು ಇದನ್ನು ಇಷ್ಟಪಡುವುದಿಲ್ಲ. ಏಕೆಂದರೆ ಆತಿಥೇಯರಾಗಿ ಸಂಪೂರ್ಣ ಪಂದ್ಯಾವಳಿಯನ್ನು ಪಾಕಿಸ್ತಾನದಲ್ಲಿ ನಡೆಸಬೇಕು. ಪಾಕಿಸ್ತಾನದಲ್ಲಿ ಲೆಕ್ಕ ಭರ್ತಿಗೆ ಎಂಬಂತೆ ಕೇವಲ ನಾಲ್ಕು ಪಂದ್ಯಗಳನ್ನು ಆಡಿಸಿ ಉಳಿದ ಮಹತ್ವದ ಪಂದ್ಯಗಳನ್ನು ಶ್ರೀಲಂಕಾದಲ್ಲಿ ನಡೆಸುವುದರಲ್ಲಿ ಯಾವುದೇ ಅರ್ಥವಿಲ್ಲ. ಇದು ಪಾಕಿಸ್ತಾನಕ್ಕೆ ನ್ಯಾಯೋಚಿತವಲ್ಲ. ಹೀಗಾಗಿ ಮತ್ತೊಮ್ಮೆ ಪಾಕ್​ ಕ್ರಿಕೆಟ್​ ಮಂಡಳಿ ಏಷ್ಯಾ ಕಪ್​ ಬಗ್ಗೆ ಚಿಂತಿಸಲಿದೆ” ಎಂದು ಹೇಳುವ ಮೂಲಕ ಹೊಸ ಕ್ಯಾತೆ ತೆಗೆದಿದ್ದಾರೆ.

ಇದನ್ನೂ ಓದಿ Asia Cup 2023 : ಏಷ್ಯಾ ಕಪ್​ ದಿನಾಂಕ ಪ್ರಕಟ; ಪಂದ್ಯಗಳ ಪೂರ್ಣ ವಿವರ ಇಲ್ಲಿದೆ

“ಈ ಹಿಂದೆ ಯಾವ ನಿರ್ಧಾರವನ್ನು ಮಾಡಲಾಗಿದೆ ಎಂದು ನನಗೆ ತಿಳಿದಿಲ್ಲ. ಪಾಕಿಸ್ತಾನದಲ್ಲಿ ಪಂದ್ಯ ಆಡಬೇಕೆಂದು ಖಚಿತಪಡಿಸಿಕೊಳ್ಳಲು ಹಿಂದಿನ ಪಾಕ್​ ಮಂಡಳಿಯೂ ಉತ್ತಮವಾಗಿ ಮಾತುಕತೆ ನಡೆಸಬೇಕಿತ್ತು. ಸದ್ಯ ಟೂರ್ನಿಯ ವೇಳಾಪಟ್ಟಿ ಪ್ರಕಟಗೊಂಡಿದೆ. ಪಂದ್ಯ ಆಡಲು ನಾನು ಯಾವುದೇ ನಿರ್ಬಂಧ ಹೇರುವುದಿಲ್ಲ. ಆದರೆ ಮತ್ತೊಂದು ಬಾರಿ ಉನ್ನತ ಮಟ್ಟದ ಸಭೆ ನಡೆಸುವುದಂತು ನಿಜ” ಎಂದು ಅಡ್ಡ ಗೋಡೆ ಮೇಲೆ ದೀಪ ಇಟ್ಟಂತೆ ಹೇಳಿಕೆ ನೀಡಿದ್ದಾರೆ. ಒಂದೊಮ್ಮೆ ಪಾಕ್​ ಮತ್ತೆ ಸಂಪೂರ್ಣ ಪಂದ್ಯಗಳು ಪಾಕ್​ನಲ್ಲೇ ನಡೆಯಬೇಕು ಎಂದು ಪಟ್ಟು ಹಿಡಿದರೆ ಈ ಟೂರ್ನಿ ರದ್ದುಗೊಂಡರೂ ಅಚ್ಚರಿಯಿಲ್ಲ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Team India : ಜಿಂಬಾಬ್ವೆ ಪ್ರವಾಸಕ್ಕೆ ಟೀಮ್ ಇಂಡಿಯಾ ಪ್ರಕಟ, ಶುಭ್​ಮನ್ ಗಿಲ್​ಗೆ ನಾಯಕತ್ವ

Team India : ಭಾರತ ಮತ್ತು ಜಿಂಬಾಬ್ವೆ ನಡುವಿನ ಸರಣಿ ಜುಲೈ 6 ರಿಂದ 14 ರವರೆಗೆ ನಡೆಯಲಿದೆ. ಎಲ್ಲಾ ಪಂದ್ಯಗಳು ಹರಾರೆಯಲ್ಲಿ ನಡೆಯಲಿವೆ. ಅಭಿಷೇಕ್ ಶರ್ಮಾ, ಧ್ರುವ್ ಜುರೆಲ್, ನಿತೀಶ್ ರೆಡ್ಡಿ, ರಿಯಾನ್ ಪರಾಗ್ ಮತ್ತು ತುಷಾರ್ ದೇಶಪಾಂಡೆ ಅವರಂತಹ ಹಲವಾರು ಆಟಗಾರರಿಗೆ ಆಯ್ಕೆದಾರರು ಮೊದಲ ಬಾರಿಗೆ ಕರೆ ನೀಡಿದ್ದಾರೆ.

VISTARANEWS.COM


on

Team India
Koo

ಬೆಂಗಳೂರು: ಜಿಂಬಾಬ್ವೆ ಪ್ರವಾಸದಲ್ಲಿ ನಡೆಯಲಿರುವ ಐದು ಪಂದ್ಯಗಳ ಟಿ 20 ಐ ಸರಣಿಗೆ ಬಿಸಿಸಿಐ ಸೋಮವಾರ (ಜೂನ್ 24) ಭಾರತ ತಂಡವನ್ನು (Team India) ಪ್ರಕಟಿಸಲಾಗಿದೆ. ಇದು ಸೀಮಿತ ಓವರ್​ಗಳ ಸರಣಿಯಾಗಿದ್ದು ಯುವ ಆಟಗಾರರನ್ನು ಹೊಂದಿರುವ ಮೆನ್ ಇನ್ ಬ್ಲೂ ಜಿಂಬಾಬ್ವೆಗೆ ಭೇಟಿ ನೀಡಲಿದೆ. ನಿರೀಕ್ಷೆಯಂತೆ, ಅಜಿತ್ ಅಗರ್ಕರ್ ನೇತೃತ್ವದ ಆಯ್ಕೆ ಸಮಿತಿಯು ಪ್ರವಾಸಕ್ಕಾಗಿ ಎರಡನೇ ಹಂತದ ತಂಡವನ್ನು ಆಯ್ಕೆ ಮಾಡಿದೆ. ಭಾರತ ತಂಡವು ಪ್ರಸ್ತುತ ಟಿ 20 ವಿಶ್ವಕಪ್​ನಲ್ಲಿ ಆಡುತ್ತಿರುವುದರಿಂದ, ವಿಶ್ವಕಪ್ ತಂಡದ ಹೆಚ್ಚಿನ ಆಟಗಾರರಿಗೆ ಜಿಂಬಾಬ್ವೆ ವಿರುದ್ಧದ ಸರಣಿಗೆ ವಿಶ್ರಾಂತಿ ನೀಡಲಾಗುವುದು ಎಂದು ನಿರೀಕ್ಷಿಸಲಾಗಿತ್ತು. ಅಂತೆಯೇ ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್ ಮತ್ತು ಹಾರ್ದಿಕ್ ಪಾಂಡ್ಯ ಅವರಿಗೆ ವಿಶ್ರಾಂತಿ ನೀಡಿರುವುದರಿಂದ ಮುಂಬರುವ ಸರಣಿಗೆ ಶುಭ್ಮನ್ ಗಿಲ್ ಅವರನ್ನು ನಾಯಕರನ್ನಾಗಿ ಹೆಸರಿಸಲಾಗಿದೆ.

ಭಾರತ ಮತ್ತು ಜಿಂಬಾಬ್ವೆ ನಡುವಿನ ಸರಣಿ ಜುಲೈ 6 ರಿಂದ 14 ರವರೆಗೆ ನಡೆಯಲಿದೆ. ಎಲ್ಲಾ ಪಂದ್ಯಗಳು ಹರಾರೆಯಲ್ಲಿ ನಡೆಯಲಿವೆ. ಅಭಿಷೇಕ್ ಶರ್ಮಾ, ಧ್ರುವ್ ಜುರೆಲ್, ನಿತೀಶ್ ರೆಡ್ಡಿ, ರಿಯಾನ್ ಪರಾಗ್ ಮತ್ತು ತುಷಾರ್ ದೇಶಪಾಂಡೆ ಅವರಂತಹ ಹಲವಾರು ಆಟಗಾರರಿಗೆ ಆಯ್ಕೆದಾರರು ಮೊದಲ ಬಾರಿಗೆ ಕರೆ ನೀಡಿದ್ದಾರೆ. ಎಲ್ಲಾ ಆಟಗಾರರು ಈ ವರ್ಷ ಐಪಿಎಲ್​ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದಾರೆ.

ಇದನ್ನೂ ಓದಿ: Irfan Pathan : ಇರ್ಫಾನ್ ಪಠಾಣ್​ ಮೇಕಪ್ ಆರ್ಟಿಸ್ಟ್​​ ವೆಸ್ಟ್​ ಇಂಡೀಸ್​ನ ಸ್ವಿಮ್ಮಿಂಗ್​ ಪೂಲ್​ನಲ್ಲಿ ಶವವಾಗಿ ಪತ್ತೆ!

ಕಳೆದ ವರ್ಷ, ರೋಹಿತ್ ಅನುಪಸ್ಥಿತಿಯಲ್ಲಿ ಪಾಂಡ್ಯ ಮತ್ತು ಸೂರ್ಯಕುಮಾರ್ ಟಿ 20 ಪಂದ್ಯಗಳಲ್ಲಿ ತಂಡ ಮುನ್ನಡೆಸಿದ್ದರು. ಇಬ್ಬರೂ ಜಿಂಬಾಬ್ವೆ ಸರಣಿಗೆ ತಂಡದ ಭಾಗವಾಗದ ಕಾರಣ, ಗಿಲ್​ಗೆ ಜವಾಬ್ದಾರಿ ನೀಡಲಾಗಿದೆ. ಗಿಲ್ ಎಂದಿಗೂ ಭಾರತೀಯ ತಂಡವನ್ನು ಮುನ್ನಡೆಸಿಲ್ಲ. ಆದರೆ ಅವರು ಐಪಿಎಲ್​ನಲ್ಲಿ ಗುಜರಾತ್​ ಟೈಟಾನ್ಸ್ ತಂಡ ನಾಯಕತ್ವ ವಹಿಸಿದ್ದರು.

ಜಿಂಬಾಬ್ವೆ ಪ್ರವಾಸಕ್ಕೆ ಭಾರತ ತಂಡ:

ಭಾರತ ಮತ್ತು ಜಿಂಬಾಬ್ವೆ ನಡುವಿನ ಟಿ 20 ವಿಶ್ವಕಪ್ ಸರಣಿಗೆ ಭಾರತದ ಇಬ್ಬರು ಆಟಗಾರರನ್ನು ಮಾತ್ರ ಹೆಸರಿಸಲಾಗಿದೆ. ಯಶಸ್ವಿ ಜೈಸ್ವಾಲ್ ಮತ್ತು ಸಂಜು ಸ್ಯಾಮ್ಸನ್ ಆ ಪ್ರಮುಖ ಆಟಗಾರರು. ಜೈಸ್ವಾಲ್ ಅಥವಾ ಸ್ಯಾಮ್ಸನ್ ಟಿ20 ವಿಶ್ವ ಕಪ್​ನಲ್ಲಿ ಇಲ್ಲಿಯವರೆಗೆ ಒಂದು ಪಂದ್ಯವನ್ನೂ ಆಡಿಲ್ಲ. ಸ್ಪರ್ಧೆಯ ಉಳಿದ ಭಾಗಕ್ಕೆ ಅವರು ಪ್ಲೇಯಿಂಗ್ ಹನ್ನೊಂದರಲ್ಲಿ ಅವಕಾಶ ಪಡೆಯುವ ಸಾಧ್ಯತೆಯಿಲ್ಲ.

ತಂಡ: ಶುಬ್ಮನ್ ಗಿಲ್ (ನಾಯಕ), ಯಶಸ್ವಿ ಜೈಸ್ವಾಲ್, ಋತುರಾಜ್ ಗಾಯಕ್ವಾಡ್, ಅಭಿಷೇಕ್ ಶರ್ಮಾ, ರಿಂಕು ಸಿಂಗ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಧ್ರುವ್ ಜುರೆಲ್ (ವಿಕೆಟ್ ಕೀಪರ್), ನಿತೀಶ್ ರೆಡ್ಡಿ, ರಿಯಾನ್ ಪರಾಗ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಅವೇಶ್ ಖಾನ್, ಖಲೀಲ್ ಅಹ್ಮದ್, ಮುಖೇಶ್ ಕುಮಾರ್, ತುಷಾರ್ ದೇಶಪಾಂಡೆ.

Continue Reading

ಪ್ರಮುಖ ಸುದ್ದಿ

Irfan Pathan : ಇರ್ಫಾನ್ ಪಠಾಣ್​ ಮೇಕಪ್ ಆರ್ಟಿಸ್ಟ್​​ ವೆಸ್ಟ್​ ಇಂಡೀಸ್​ನ ಸ್ವಿಮ್ಮಿಂಗ್​ ಪೂಲ್​ನಲ್ಲಿ ಶವವಾಗಿ ಪತ್ತೆ!

Irfan Pathan : ಐಸಿಸಿ ಟಿ 20 ವಿಶ್ವಕಪ್ 2024 ಪ್ರಸ್ತುತ ಯುಎಸ್ಎ ಮತ್ತು ವೆಸ್ಟ್ ಇಂಡೀಸ್​ನಲ್ಲಿ ನಡೆಯುತ್ತಿದೆ. ಸೂಪರ್ 8 ಪಂದ್ಯಗಳು ವೆಸ್ಟ್ ಇಂಡೀಸ್​ನಲ್ಲಿ ನಡೆಯುತ್ತಿವೆ. ಪಠಾಣ್ ವಿಂಡೀಸ್​ಗೆ ತೆರಳಿದ್ದು ಅನ್ಸಾರಿಯೂ ಹೋಗಿದ್ದಾರೆ. ಜೂನ್ 21 ರ ಶುಕ್ರವಾರ ಸಂಜೆ ಅನ್ಸಾರಿ ಹೋಟೆಲ್ ಈಜುಕೊಳದಲ್ಲಿ ಸ್ನಾನ ಮಾಡುವಾಗ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ವೆಸ್ಟ್ ಇಂಡೀಸ್ ನಿಂದ ಮಾಹಿತಿ ಸಿಕ್ಕಿದೆ.

VISTARANEWS.COM


on

Irfan Pathan
Koo

ನವದೆಹಲಿ: ಟಿ 20 ವಿಶ್ವಕಪ್​​ನ ವೀಕ್ಷಕ ವಿವರಣೆ ತಂಡದ ಭಾಗವಾಗಿ ವೆಸ್ಟ್​ ಇಂಡೀಸ್​ಗೆ ಹೋಗಿದ್ದ ಮಾಜಿ ಕ್ರಿಕೆಟಿಗ ಇರ್ಫಾನ್ ಪಠಾಣ್ ಅವರ ಮೇಕಪ್​ ಆರ್ಟಿಸ್ಟ್​ ಫಯಾಜ್ ಅನ್ಸಾರಿ ಇಂಡೀಸ್​ನ ಈಜುಕೊಳದಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಫಯಾಜ್​ ಅವರು ವಿಶ್ವ ಕಪ್ ಹಿನ್ನೆಲೆಯಲ್ಲಿ ವೆಸ್ಟ್​ ಇಂಡೀಸ್​​ಗೆ ತೆರಳಿದ್ದರು. ಈ ದುರಂತ ಘಟನೆಯು ಅವರ ಕುಟುಂಬಕ್ಕೆ ಆಘಾತ ತಂದಿದೆ. ಫಯಾಜ್ ಅನ್ಸಾರಿ ಉತ್ತರ ಪ್ರದೇಶದ ಬಿಜ್ನೋರ್​​ ನಾಗಿನಾ ಮೂಲದವರು.

22 ವರ್ಷಗಳ ಹಿಂದೆ, ಬಿಜ್ನೋರ್​ನ ನಾಗಿನಾ ತಹಸಿಲ್​​ನ ಮೊಹಲ್ಲಾ ಖಾಜಿ ಸರಾಯ್ನ ಫಯಾಜ್ ಅನ್ಸಾರಿ ಮುಂಬೈಗೆ ತೆರಳಿ ತಮ್ಮದೇ ಆದ ಸಲೂನ್ ಪ್ರಾರಂಭಿಸಿದ್ದರು. ಈ ಸಮಯದಲ್ಲಿ, ಪಠಾಣ್ ಮೇಕಪ್​ಗಾಗಿ ಅವರ ಸಲೂನ್​ಗೆ ಭೇಟಿ ನೀಡಲು ಪ್ರಾರಂಭಿಸಿದರು. ತರುವಾಯ, ಮಾಜಿ ಆಲ್​ರೌಂಡರ್​ ಅನ್ಸಾರಿಯನ್ನು ತಮ್ಮ ವೈಯಕ್ತಿಕ ಮೇಕಪ್ ಕಲಾವಿದನನ್ನಾಗಿ ಇಟ್ಟುಕೊಂಡಿದ್ದರು. ಅವರನ್ನು ಅಂತಾರಾಷ್ಟ್ರೀಯ ಪ್ರವಾಸಗಳಿಗೆ ಕರೆದೊಯ್ಯುತ್ತಿದ್ದರು.

ಐಸಿಸಿ ಟಿ 20 ವಿಶ್ವಕಪ್ 2024 ಪ್ರಸ್ತುತ ಯುಎಸ್ಎ ಮತ್ತು ವೆಸ್ಟ್ ಇಂಡೀಸ್​ನಲ್ಲಿ ನಡೆಯುತ್ತಿದೆ. ಸೂಪರ್ 8 ಪಂದ್ಯಗಳು ವೆಸ್ಟ್ ಇಂಡೀಸ್​ನಲ್ಲಿ ನಡೆಯುತ್ತಿವೆ. ಪಠಾಣ್ ವಿಂಡೀಸ್​ಗೆ ತೆರಳಿದ್ದು ಅನ್ಸಾರಿಯೂ ಹೋಗಿದ್ದಾರೆ. ಜೂನ್ 21 ರ ಶುಕ್ರವಾರ ಸಂಜೆ ಅನ್ಸಾರಿ ಹೋಟೆಲ್ ಈಜುಕೊಳದಲ್ಲಿ ಈಜುವಾಗ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ವೆಸ್ಟ್ ಇಂಡೀಸ್ ನಿಂದ ಮಾಹಿತಿ ಸಿಕ್ಕಿದೆ.

ಇದನ್ನೂ ಓದಿ: Hardik Pandya : ಹಾರ್ದಿಕ್ ಪಾಂಡ್ಯ ನತಾಶಾಗೆ ವಿಚ್ಛೇದನ ಕೊಡುವುದು ಖಾತರಿ ಎಂದ ಟೀಮ್​ ಇಂಡಿಯಾ ಆಟಗಾರ

ಅನ್ಸಾರಿ ಅವರ ಸೋದರಸಂಬಂಧಿ ಮೊಹಮ್ಮದ್ ಅಹ್ಮದ್ ಅವರ ಪ್ರಕಾರ, ಅವರು ಕೇವಲ ಎರಡು ತಿಂಗಳ ಹಿಂದೆ ವಿವಾಹವಾಗಿದ್ದರು. ಎಂಟು ದಿನಗಳ ಹಿಂದೆಯಷ್ಟೇ ಬಿಜ್ನೋರ್​ನ ನಾಗಿನಾದಿಂದ ಮುಂಬೈಗೆ ಹೋಗಿದ್ದರು. ಹಠಾತ್ ಅಪಘಾತವು ಕುಟುಂಬವನ್ನು ದುಃಖದಲ್ಲಿ ಮುಳುಗಿಸಿದೆ. ಅವರ ಪತ್ನಿ ಮತ್ತು ಸಂಬಂಧಿಕರು ದುಃಖಿತರಾಗಿದ್ದರು.

ಅನ್ಸಾರಿ ಅವರ ದೇಹವನ್ನು ಭಾರತಕ್ಕೆ ತರಲು ಇರ್ಫಾನ್ ಪಠಾಣ್ ಸ್ವತಃ ವೆಸ್ಟ್ ಇಂಡೀಸ್​ನಲ್ಲಿ ಎಲ್ಲಾ ವ್ಯವಸ್ಥೆಗಳನ್ನು ಮಾಡುತ್ತಿದ್ದಾರೆ. ಕುಟುಂಬವು ದೆಹಲಿಯಲ್ಲಿ ಶವವನ್ನು ಸ್ವೀಕರಿಸಲು ಯೋಜನೆ ರೂಪಿಸಿದೆ. ಇದು ಸುಮಾರು ಮೂರರಿಂದ ನಾಲ್ಕು ದಿನಗಳನ್ನು ತೆಗೆದುಕೊಳ್ಳುವ ನಿರೀಕ್ಷೆಯಿದೆ

Continue Reading

ಪ್ರಮುಖ ಸುದ್ದಿ

Hardik Pandya : ಹಾರ್ದಿಕ್ ಪಾಂಡ್ಯ ನತಾಶಾಗೆ ವಿಚ್ಛೇದನ ಕೊಡುವುದು ಖಾತರಿ ಎಂದ ಟೀಮ್​ ಇಂಡಿಯಾ ಆಟಗಾರ

Hardik Pandya : ಪತ್ನಿ ನತಾಶಾ ಸ್ಟಾಂಕೋವಿಕ್ ಅವರಿಂದ ವಿಚ್ಛೇದನದ ವರದಿಗಳೊಂದಿಗೆ ಅವರ ಜೀವನದಲ್ಲಿ ಭಾವನಾತ್ಮಕ ಪ್ರಕ್ಷುಬ್ಧತೆಗೆ ಕಾರಣವಾಯಿತು. ಇದೀಗ ಅವರ ಕುಟುಂಬದಲ್ಲಿ ಸಮಸ್ಯೆ ಆಗಿರುವುದು ಹೌದು ಎಂದು ಟೀಮ್ ಇಂಡಿಯಾ ಆಟಗಾರರೊಬ್ಬರು ಹೇಳಿದ್ದಾರೆ. ನತಾಶಾ ಜತೆಗೆ ಅವರ ಸಂಬಂಧ ಮುರಿದು ಬೀಳುವುದು ಬಹುತೇಕ ಖಚಿತ ಎಂಬುದಾಗಿ ಅವರು ಹೇಳಿದ್ದಾರೆ.

VISTARANEWS.COM


on

Hardik Pandya
Koo

ಬೆಂಗಳೂರು: ಪ್ರಸ್ತುತ ನಡೆಯುತ್ತಿರುವ ಐಸಿಸಿ ಟಿ 20 ವಿಶ್ವಕಪ್ 2024 ರಲ್ಲಿ (T20 World Cup 2024) ಭಾರತದ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ (Hardik Pandya) ಅವರ ಪ್ರದರ್ಶನವು ಗಮನ ಸೆಳೆದಿದೆ. ಮುಂಬೈ ಇಂಡಿಯನ್ಸ್ ನಾಯಕರಾಗಿ ಅವರು ಐಪಿಎಲ್ 2024 ರ ಕಳಪೆ ಋತುವಿನ ನಂತರ ವಿಶ್ವ ಕಪ್​ಗೆ ಪ್ರವೇಶ ಪಡೆದಿದ್ದಾರೆ. ಹೀಗಾಗಿ ಅವರು ಪ್ರದರ್ಶನದ ಬಗ್ಗೆ ಅನುಮಾನಗಳು ಇದ್ದವು. ಇದೀಗ ಎಲ್ಲ ಅನುಮಾನಗಳಿಗೆ ಪರಿಹಾರ ಕೊಟ್ಟಿದ್ದು, ಬ್ಯಾಟ್ ಮೂಲಕ ಮಿಂಚಿದ್ದಾರೆ.

ಐಪಿಎಲ್ 2024 ರಲ್ಲಿ ರೋಹಿತ್ ಶರ್ಮಾ ಅವರನ್ನು ಮುಂಬೈ ಇಂಡಿಯನ್ಸ್ (ಎಂಐ) ನಾಯಕನ ಸ್ಥಾನದಿಂದ ಇಳಿಸಿ ಹಾರ್ದಿಕ್​ಗೆ ಪಟ್ಟ ಕಟ್ಟಿದ್ದಕ್ಕಾಗಿ ಭಾರಿ ಟೀಕೆಗಳನ್ನು ಎದುರಿಸಿದ್ದರು. ನಂತರ ಪತ್ನಿ ನತಾಶಾ ಸ್ಟಾಂಕೋವಿಕ್ ಅವರಿಂದ ವಿಚ್ಛೇದನದ ವರದಿಗಳೊಂದಿಗೆ ಅವರ ಜೀವನದಲ್ಲಿ ಭಾವನಾತ್ಮಕ ಪ್ರಕ್ಷುಬ್ಧತೆಗೆ ಕಾರಣವಾಯಿತು. ಇದೀಗ ಅವರ ಕುಟುಂಬದಲ್ಲಿ ಸಮಸ್ಯೆ ಆಗಿರುವುದು ಹೌದು ಎಂದು ಟೀಮ್ ಇಂಡಿಯಾ ಆಟಗಾರರೊಬ್ಬರು ಹೇಳಿದ್ದಾರೆ. ನತಾಶಾ ಜತೆಗೆ ಅವರ ಸಂಬಂಧ ಮುರಿದು ಬೀಳುವುದು ಬಹುತೇಕ ಖಚಿತ ಎಂಬುದಾಗಿ ಅವರು ಹೇಳಿದ್ದಾರೆ.

ನತಾಶಾ ಮತ್ತು ಹಾರ್ದಿಕ್ ದಾಂಪತ್ಯದಲ್ಲಿ ಬಿರುಕು ಬಿಟ್ಟಿದೆ ಎಂಬುದಾಗಿ ಐಪಿಎಲ್ ಮುಕ್ತಾಯಗೊಂಡ ತಕ್ಷಣ ಸುದ್ದಿಯಾಗಿತ್ತು. ಈ ಸುದ್ದಿಗೆ ರೆಕ್ಕೆ ಪುಕ್ಕಗಳು ಹುಟ್ಟಿಕೊಂಡ ಕಾರಣ ಅದು ಚರ್ಚೆಯ ವಿಷಯವಾಯಿತು. ನತಾಶಾ ಸ್ಟಾಂಕೊವಿಕ್​ ಪತಿಯನ್ನು ತೊರೆದಿದ್ದಾರೆ ಎಂಬುದಾಗಿ ಸುದ್ದಿಯಾಯಿತು. ತನ್ನ ಇನ್​​ಸ್ಟಾಗ್ರಾಮ್​ ಬಯೊದಲ್ಲಿ ಪಾಂಡ್ಯ ಹೆಸರನ್ನು ತೆಗೆದಿರುವುದೇ ಅದಕ್ಕೆ ಕಾರಣ. ಕೊನೆಯಲ್ಲಿ ಅದಕ್ಕೆ ತೇಪೆ ಹಚ್ಚಲಾಯಿತು. ತಾವು ಜತೆಗೆ ಇದ್ದೇವೆ ಎಂಬ ಪರೋಕ್ಷ ಸಂದೇಶವನ್ನು ನತಾಶಾ ಕಳುಹಿಸಿದ್ದರು. ಆದರೆ ಅದು ಖಾತರಿಯಾಗಿರಲಿಲ್ಲ. ಇದೀಗ ಆ ಸುದ್ದಿಯನ್ನೂ ನಿರಾಕರಿಸಲಾಗಿದೆ.

ಟೀಕಾಕಾರರ ಬಾಯಿ ಮುಚ್ಚಿದ ಹಾರ್ದಿಕ್ ಪಾಂಡ್ಯ

ಐರ್ಲೆಂಡ್ ವಿರುದ್ಧದ ಭಾರತದ ಆರಂಭಿಕ ಪಂದ್ಯದಲ್ಲಿ, ಪಾಂಡ್ಯ ತಮ್ಮ ನಾಲ್ಕು ಓವರ್​​ಗಳಲ್ಲಿ 27 ರನ್​​ಗಳಿಗೆ ಮೂರು ವಿಕೆಟ್​​ಗಳನ್ನು ಪಡೆದಿದ್ದದರು. 2024 ರ ಟಿ 20 ವಿಶ್ವಕಪ್ ಅಭಿಯಾನದಲ್ಲಿ ತಮ್ಮ ತಂಡದ ಗೆಲುವಿನ ಪ್ರಾರಂಭದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಇದು ಪಾಂಡ್ಯ ಮತ್ತು ಟೀಮ್ ಇಂಡಿಯಾ ಇಬ್ಬರಿಗೂ ಗಮನಾರ್ಹ ಆತ್ಮವಿಶ್ವಾಸವನ್ನು ಹೆಚ್ಚಿಸಿತು.

ಐಪಿಎಲ್ 2024 ಫಾರ್ಮ್ ಕಾರಣದಿಂದಾಗಿ ಟಿ 20 ವಿಶ್ವಕಪ್ 2024 ತಂಡದಲ್ಲಿ ಅವರನ್ನು ಸೇರಿಸುವ ಬಗ್ಗೆ ಆರಂಭಿಕ ಅನುಮಾನಗಳ ಹೊರತಾಗಿಯೂ, ಸ್ಟಾರ್ ಭಾರತೀಯ ಆಲ್ರೌಂಡರ್ ಪ್ರಸ್ತುತ ನಡೆಯುತ್ತಿರುವ ಮೆಗಾ ಐಸಿಸಿ ಈವೆಂಟ್​​ನ್ಲಿ ಬ್ಯಾಟ್ ಮತ್ತು ಬಾಲ್ ಎರಡರಲ್ಲೂ ತಮ್ಮ ಪರಿಣಾಮಕಾರಿ ಪ್ರದರ್ಶನ ನೀಡುತ್ತಿದ್ದಾರೆ.

ಅವರು ಭಾರತೀಯ ಕ್ರಿಕೆಟ್ ತಂಡಕ್ಕೆ ಉತ್ತಮ ಸಮತೋಲನ ಒದಗಿಸುತ್ತಿದ್ದಾರೆ, ಪ್ಲೇಯಿಂಗ್ ಇಲೆವೆನ್​ ಸಂಯೋಜನೆಗಳಿಗೆ ಪೂರಕವಾಗಿದ್ದಾರೆ. ಪ್ರಸ್ತುತ ನಡೆಯುತ್ತಿರುವ ಟಿ 20 ವಿಶ್ವಕಪ್ 2024 ಪ್ರಗತಿಯಲ್ಲಿ, ಮೆನ್ ಇನ್ ಬ್ಲೂ ಪಂದ್ಯಾವಳಿಯಲ್ಲಿ ಪಾಂಡ್ಯ ಅವರ ಅದ್ಭುತ ಫಾರ್ಮ್ ಅನ್ನು ಮುಂದುವರಿಸಲು ಇಲ್ಲಿಯವರೆಗೆ ಅವರ ಮೂರು ಇನ್ನಿಂಗ್ಸ್​ಗಳಲ್ಲಿ 7, 32, 50* ರನ್ ಬಾರಿಸಿದ್ದಾರೆ.

ಇದನ್ನೂ ಓದಿ: T20 World Cup 2024 : ದಕ್ಷಿಣ ಆಫ್ರಿಕಾ ತಂಡ ಸೆಮೀಸ್​ಗೆ, ಆತಿಥೇಯ ವಿಂಡೀಸ್ ಔಟ್​

ಬಾಂಗ್ಲಾದೇಶ ವಿರುದ್ಧ 27 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ್ದರು. ಹಾರ್ದಿಕ್ ಅವರ ಬೌಲಿಂಗ್ ಪ್ರದರ್ಶನದ ಬಗ್ಗೆ ಮಾತನಾಡುತ್ತಾ, ಭಾರತದ ಸ್ಟಾರ್ ಆಲ್ರೌಂಡರ್ ಪ್ರಸ್ತುತ ನಡೆಯುತ್ತಿರುವ ಟಿ 20 ವಿಶ್ವಕಪ್ 2024 ರಲ್ಲಿ ಇಲ್ಲಿಯವರೆಗೆ 8 ವಿಕೆಟ್​​ ಪಡೆಯುವ ಮೂಲಕ ಸ್ಥಿರವಾಗಿ ಬೌಲಿಂಗ್ ಮಾಡುತ್ತಿದ್ದಾರೆ.

ಹಾರ್ದಿಕ್ ಪಾಂಡ್ಯ ಬ್ಯಾಟಿಂಗ್ ಮತ್ತು ಬೌಲಿಂಗ್​ಗೆ ಮೆಚ್ಚುಗೆ ತೋರಿದ ರಾಬಿನ್ ಉತ್ತಪ್ಪ

ಪ್ರಸ್ತುತ ನಡೆಯುತ್ತಿರುವ ಪಂದ್ಯಾವಳಿಯಲ್ಲಿ ಪಾಂಡ್ಯ ಅವರ ಅಸಾಧಾರಣ ಪಾತ್ರವನ್ನು ಶ್ಲಾಘಿಸಿದ ಮಾಜಿ ಬ್ಯಾಟರ್​ ರಾಬಿನ್​ ಉತ್ತಪ್ಪ, ಬ್ಯಾಟ್ ಮತ್ತು ಬಾಲ್ ಎರಡರಲ್ಲೂ ಅವರ ಪ್ರಭಾವಶಾಲಿ ಪ್ರದರ್ಶನ ತಂಡಕ್ಕೆ ನೆರವಾಗಿದೆ ಎಂದು ಹೇಳಿದ್ದಾರೆ. ಕಳೆದ ಕೆಲವು ತಿಂಗಳುಗಳಲ್ಲಿ ವೃತ್ತಿಪರವಾಗಿ ಮತ್ತು ವೈಯಕ್ತಿಕವಾಗಿ ಅವರು ಎದುರಿಸಿದ ಸವಾಲುಗಳನ್ನು ಪರಿಗಣಿಸಿ ಪಾಂಡ್ಯ ಅವರ ಪ್ರಸ್ತುತ ಫಾರ್ಮ್ ಇನ್ನೂ ಗಮನಾರ್ಹ ಎಂದು ಹೇಳಿದರು.

Continue Reading

ಪ್ರಮುಖ ಸುದ್ದಿ

T20 World Cup 2024 : ದಕ್ಷಿಣ ಆಫ್ರಿಕಾ ತಂಡ ಸೆಮೀಸ್​ಗೆ, ಆತಿಥೇಯ ವಿಂಡೀಸ್ ಔಟ್​

T20 World Cup 2024 : ಸತತ ಏಳನೇ ಗೆಲುವು ಸಾಧಿಸಿದ ದಕ್ಷಿಣ ಆಫ್ರಿಕಾ ಗ್ರೂಪ್ 2 ಅಂಕಪಟ್ಟಿಯಲ್ಲಿ ಸೂಪರ್ 8 ಸ್ಥಾನ ಗಳಿಸಿದೆ. ಮತ್ತೊಂದೆಡೆ, ಕೆರಿಬಿಯನ್ ತಂಡವು ತಮ್ಮ ಎಲ್ಲಾ ಗ್ರೂಪ್ ಸಿ ಪಂದ್ಯಗಳನ್ನು ಗೆದ್ದಿತು, ನಂತರ ಅವರು ಯುನೈಟೆಡ್ ಸ್ಟೇಟ್ಸ್ ಅನ್ನು 9 ವಿಕೆಟ್​​ಗಳಿಂದ ಸೋಲಿತ್ತು. ಆದರೆ ಕ್ವಾರ್ಟರ್ ಫೈನಲ್​​ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಸೋತ ನಂತರ ಆ ತಂಡ ಹೊರಗುಳಿಯಲಿದೆ.

VISTARANEWS.COM


on

T20 World Cup 2024
Koo

ಬೆಂಗಳೂರು: 2024ರ ಟಿ20 ವಿಶ್ವಕಪ್ ಟೂರ್ನಿಯಲ್ಲಿ (T20 World Cup 2024) ದಕ್ಷಿಣ ಆಫ್ರಿಕಾ ಸೆಮಿಫೈನಲ್ ಪ್ರವೇಶಿಸಿದೆ. ಇದೇ ವೇಳೆ ಆತಿಥೇಯ ವೆಸ್ಟ್ ಇಂಡೀಸ್​ ಬಳಗ ಟೂರ್ನಿಯಿಂದ ಹೊರಕ್ಕೆ ಬಿದ್ದಿದೆ. ಬಿ ಗುಂಪಿನಿಂದ ಇಂಗ್ಲೆಂಡ್ ತಂಡವೂ ಸೆಮೀಸ್​ಗೆ ಎಂಟ್ರಿ ತೆಗೆದುಕೊಂಡಿದೆ ಆಂಟಿಗುವಾದ ನಾರ್ತ್ ಸೌಂಡ್​​ನ ಸರ್ ವಿವಿಯನ್ ರಿಚರ್ಡ್ಸ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವು ಸಹ ಆತಿಥೇಯ ವೆಸ್ಟ್ ಇಂಡೀಸ್ ತಂಡವನ್ನು 3 ವಿಕೆಟ್​​ಗಳಿಂದ (ಡಕ್​​ವರ್ತ್​ ಲೂಯಿಸ್​ ನಿಯಮದ ಪ್ರಕಾ ) ಸೋಲಿಸಿತು. ಮಳೆಯಿಂದ ಮೊಟಕುಗೊಂಡ ಪಂದ್ಯದಲ್ಲಿ ಏಡೆನ್ ಮಾರ್ಕ್ರಮ್ ಪಡೆ 5 ಎಸೆತಗಳು ಬಾಕಿ ಇರುವಾಗಲೇ 123 ರನ್​ಗಳ ಪರಿಷ್ಕೃತ ಗುರಿಯನ್ನು ಬೆನ್ನಟ್ಟಿತು. 2009 ಮತ್ತು 2014ರ ಬಳಿಕ ದಕ್ಷಿಣ ಆಫ್ರಿಕಾ ಸೆಮಿಫೈನಲ್ ಪ್ರವೇಶಿಸುತ್ತಿರುವುದು ಇದು ಮೂರನೇ ಬಾರಿ.

ಸತತ ಏಳನೇ ಗೆಲುವು ಸಾಧಿಸಿದ ದಕ್ಷಿಣ ಆಫ್ರಿಕಾ ಗ್ರೂಪ್ 2 ಅಂಕಪಟ್ಟಿಯಲ್ಲಿ ಸೂಪರ್ 8 ಸ್ಥಾನ ಗಳಿಸಿದೆ. ಮತ್ತೊಂದೆಡೆ, ಕೆರಿಬಿಯನ್ ತಂಡವು ತಮ್ಮ ಎಲ್ಲಾ ಗ್ರೂಪ್ ಸಿ ಪಂದ್ಯಗಳನ್ನು ಗೆದ್ದಿತು, ನಂತರ ಅವರು ಯುನೈಟೆಡ್ ಸ್ಟೇಟ್ಸ್ ಅನ್ನು 9 ವಿಕೆಟ್​​ಗಳಿಂದ ಸೋಲಿತ್ತು. ಆದರೆ ಕ್ವಾರ್ಟರ್ ಫೈನಲ್​​ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಸೋತ ನಂತರ ಆ ತಂಡ ಹೊರಗುಳಿಯಲಿದೆ.

ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ ತಂಡಕ್ಕೆ ಶಾಯ್ ಹೋಪ್ ಮತ್ತು ನಿಕೋಲಸ್ ಪೂರನ್ 1.1 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 5 ರನ್ ಗಳಿಸಿ ಬೇಗನೆ ನಿರ್ಗಮಿಸಿದರು. ಜಾನ್ಸನ್ ಚಾರ್ಲ್ಸ್ ಬದಲಿಗೆ ಬಂದ ಕೈಲ್ ಮೇಯರ್ಸ್ ಮತ್ತು ರೋಸ್ಟನ್ ಚೇಸ್ 10.5 ಓವರ್​​ಗಳಲ್ಲಿ 81 ರನ್​​ಗಳ ಜೊತೆಯಾಟದೊಂದಿಗೆ ತಂಡವನ್ನು ಮುನ್ನಡೆಸಿದರು. ತಬ್ರೈಜ್ ಶಮ್ಸಿ ವಿಕೆಟ್ ಪಡೆಯುವ ಮೊದಲು ಮೇಯರ್ಸ್ ತಮ್ಮ 35 ರನ್ ಗಳಲ್ಲಿ ಭರವಸೆದಾಯಕವಾಗಿ ಕಾಣಿಸಿಕೊಂಡರು.

ಚೇಸ್ 39 ಎಸೆತಗಳಲ್ಲಿ ಅರ್ಧಶತಕ ಗಳಿಸಿದರು. ಆದರೆ ಅವರು ಶಮ್ಸಿ ಎಸೆತಕ್ಕೆ ಔಟಾದರು. ನಾಯಕ ರೋವ್ಮನ್ ಪೊವೆಲ್ ಮತ್ತು ಶೆರ್ಫೇನ್ ರುದರ್ಫೋರ್ಡ್ ಬ್ಯಾಟಿಂಗ್​ನಲ್ಲಿ ಎಡವಿದ್ದರಿಂದ ಕೆರಿಬಿಯನ್ ತಂಡವು ಸಂಕಷ್ಟಕ್ಕೆ ಸಿಲುಕಿತು. ಆಂಡ್ರೆ ರಸೆಲ್ ಮತ್ತು ಅಲ್ಜಾರಿ ಜೋಸೆಫ್ 15 ಮತ್ತು 11 ರನ್ ಗಳಿಸಿ ವೆಸ್ಟ್ ಇಂಡೀಸ್ 8 ವಿಕೆಟ್ ನಷ್ಟಕ್ಕೆ 135 ರನ್ ಗಳಿಸಲು ನೆರವಾದರು.

ಒಟ್ನೀಲ್ ಬಾರ್ಟ್ಮನ್ ಬದಲಿಗೆ ಬದಲಿ ಆಟಗಾರನಾಗಿ ಕರೆತರಲ್ಪಟ್ಟ ಶಮ್ಸಿ, 4ಓವರ್​ಗಳಲ್ಲಿ 27 ರನ್​ ನೀಡಿ 3 ವಿಕೆಟ್​ ಉರುಳಿಸಿದರು. ಮಾರ್ಕೊ ಜಾನ್ಸೆನ್, ಐಡೆನ್ ಮಾರ್ಕ್ರಮ್, ಕೇಶವ್ ಮಹಾರಾಜ್ ಮತ್ತು ಕಗಿಸೊ ರಬಾಡ ತಲಾ ಒಂದು ವಿಕೆಟ್ ಪಡೆದರು. ರಬಾಡ ಅಕೆಲ್ ಹೊಸೈನ್ ವಿಕೆಟ್​ ಪಡೆದರು.

ಉತ್ತಮ ಆರಂಭ ಸಿಗಲಿಲ್ಲ

ರೀಜಾ ಹೆಂಡ್ರಿಕ್ಸ್ ಮತ್ತು ಕ್ವಿಂಟನ್ ಡಿ ಕಾಕ್ ಅಗ್ಗವಾಗಿ ಔಟಾಗಿದ್ದರಿಂದ ದಕ್ಷಿಣ ಆಫ್ರಿಕಾಕ್ಕೆ ಆಹ್ಲಾದಕರ ಆರಂಭ ಸಿಗಲಿಲ್ಲ. ಡಿ ಕಾಕ್ 3 ಬೌಂಡರಿಗಳೊಂದಿಗೆ ಪ್ರಾರಂಭಿಸಿದರು. ಆದರೆ ಮುಂದುವರಿಯಲು ಸಾಧ್ಯವಾಗಲಿಲ್ಲ. ಬಳಿಕ ಸುರಿದ ಮಳೆ ಪಂದ್ಯವನ್ನು ಹಾಳುಮಾಡುವ ಬೆದರಿಕೆ ಹಾಕಿತು. ಆದರೆ ಕೇವಲ 3 ಓವರ್​​ ಮಾತ್ರ ಕಡಿಮೆ ಮಾಡಲಾಯಿತು.

ಇದನ್ನೂ ಓದಿ: IND vs AUS : ಭಾರತ – ಆಸ್ಟ್ರೇಲಿಯಾ ಪಂದ್ಯಕ್ಕೆ ಮಳೆ ಬಂದರೆ ಪಂದ್ಯದ ಗತಿಯೇನು?

18 ರನ್ ಗಳಿಗೆ ಮಾರ್ಕ್ರಮ್ ಔಟಾದರು. ಹೆನ್ರಿಕ್ ಕ್ಲಾಸೆನ್ 10 ಎಸೆತಗಳಲ್ಲಿ 22 ರನ್ ಗಳಿಸಿದರು. ಸ್ಟಬ್ಸ್ ಮಧ್ಯಮ ಕ್ರಮಾಂಕದಲ್ಲಿ ಉತ್ತಮವಾಗಿ ಆಡಿದರು. ಆದರೆ ಸ್ಟಬ್ಸ್ 29 ರನ್ ಗಳಿಗೆ ನಿರ್ಗಮಿಸಿದ ನಂತರ, ದಕ್ಷಿಣ ಆಫ್ರಿಕಾವು ನಡುಗಿತು. ಆದರೆ ಜಾನ್ಸೆನ್ 14 ಎಸೆತಗಳಲ್ಲಿ 21 ರನ್ ಗಳಿಸಿ ದಕ್ಷಿಣ ಆಫ್ರಿಕಾವನ್ನು 16.1 ಓವರ್​ಗಳಲ್ಲಿ ಗೆಲುವಿನ ದಡ ಸೇರಿಸಿದರು.

Continue Reading
Advertisement
Viral Video
Latest6 mins ago

Viral Video: ಶಾಪಿಂಗ್‌ ಮಾಲ್‌ನ ಆಟಿಕೆ ರೈಲು ಪಲ್ಟಿಯಾಗಿ ಬಾಲಕ ಸಾವು

Team India
ಪ್ರಮುಖ ಸುದ್ದಿ8 mins ago

Team India : ಜಿಂಬಾಬ್ವೆ ಪ್ರವಾಸಕ್ಕೆ ಟೀಮ್ ಇಂಡಿಯಾ ಪ್ರಕಟ, ಶುಭ್​ಮನ್ ಗಿಲ್​ಗೆ ನಾಯಕತ್ವ

karnataka Weather Forecast
ಮಳೆ10 mins ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

Artificial Colours Ban
ಪ್ರಮುಖ ಸುದ್ದಿ16 mins ago

Artificial Colours Ban: ರಾಜ್ಯದಲ್ಲಿ ಚಿಕನ್‌, ಫಿಶ್‌ ಕಬಾಬ್‌ನಲ್ಲಿ ಕೃತಕ ಬಣ್ಣ ಬಳಕೆ ನಿಷೇಧ!

Divorce
ದೇಶ46 mins ago

Divorce: ತೂಕ ಇಳಿಸಿಕೊಳ್ಳಲು ನೆರವಾಗದ ‘ಜಿಮ್‌ ಟ್ರೇನರ್‌’ ಗಂಡನಿಗೆ ಮಹಿಳೆ ಡಿವೋರ್ಸ್‌!

Crush Saree Fashion
ಫ್ಯಾಷನ್50 mins ago

Crush Saree Fashion: ಸೆಲೆಬ್ರೆಟಿ ಲುಕ್‌ ನೀಡುವ ಡಿಸೈನರ್‌ ಕ್ರಶ್‌ ಸೀರೆಗಳು

ಕರ್ನಾಟಕ54 mins ago

Renuka Swamy Murder: ರೇಣುಕಾಸ್ವಾಮಿ ಹತ್ಯೆ ಕೇಸ್‌ನ 4 ಆರೋಪಿಗಳು ತುಮಕೂರು ಜೈಲಿಗೆ ಶಿಫ್ಟ್; ಕಾರಣವೇನು?

union Minister Pralhad Joshi took oath in the name of God in his mother tongue
ಕರ್ನಾಟಕ1 hour ago

Pralhad Joshi: ಮಾತೃಭಾಷೆ, ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಸಚಿವ ಪ್ರಲ್ಹಾದ್‌ ಜೋಶಿ

Divisional Level Progress Review Meeting of Revenue Department by Minister Krishna Byregowda
ಕಲಬುರಗಿ1 hour ago

krishna byre gowda: ಪಹಣಿ-ಆಧಾರ್ ಲಿಂಕ್‌ ಮಾಡಲು ಜುಲೈಗೆ ಅಂತಿಮ ಗಡುವು; ಕೃಷ್ಣ ಬೈರೇಗೌಡ

Hardeep Singh Nijjar
ದೇಶ1 hour ago

Hardeep Singh Nijjar: ಪಾಕಿಸ್ತಾನಕ್ಕೂ ಭೇಟಿ ಕೊಟ್ಟಿದ್ದನಂತೆ ನಿಜ್ಜರ್‌; ಖಲಿಸ್ತಾನಿ ಉಗ್ರನ ಬಗ್ಗೆ ಮತ್ತಷ್ಟು ಭೀಕರ ಸಂಗತಿ ಬಯಲು

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ10 mins ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ3 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ3 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ4 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 week ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 week ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 week ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ1 week ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

ಟ್ರೆಂಡಿಂಗ್‌