Asian Cup Table Tennis | ಐತಿಹಾಸಿಕ ಪದಕ ಗೆದ್ದ ಮಣಿಕಾ ಬಾತ್ರಾ; ಈ ಸಾಧನೆ ಮಾಡಿದ ಮೊದಲ ಭಾರತೀಯ ಆಟಗಾರ್ತಿ - Vistara News

Latest

Asian Cup Table Tennis | ಐತಿಹಾಸಿಕ ಪದಕ ಗೆದ್ದ ಮಣಿಕಾ ಬಾತ್ರಾ; ಈ ಸಾಧನೆ ಮಾಡಿದ ಮೊದಲ ಭಾರತೀಯ ಆಟಗಾರ್ತಿ

ಬ್ಯಾಂಕಾಕ್​ನಲ್ಲಿ ನಡೆದ ಏಷ್ಯಾಕಪ್‌ ಟೇಬಲ್ ಟೆನಿಸ್ ಟೂರ್ನಿಯಲ್ಲಿ ಒಲಿಂಪಿಯನ್​ ಮಣಿಕಾ ಬಾತ್ರಾ ಐತಿಹಾಸಿಕ ಕಂಚಿದ ಪದಕ ಗೆದ್ದ ಸಾಧನೆ ಮಾಡಿದ್ದಾರೆ.

VISTARANEWS.COM


on

Asian Cup Table Tennis
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬ್ಯಾಂಕಾಕ್​: ಟೇಬಲ್ ಟೆನಿಸ್​ ಪಟು ಮಣಿಕಾ ಬಾತ್ರಾ ಅವರು ಏಷ್ಯಾ ಕಪ್‌ ಟೇಬಲ್ ಟೆನಿಸ್(Asian Cup Table Tennis) ಟೂರ್ನಿಯಲ್ಲಿ ಪದಕ ಗೆದ್ದ ಭಾರತದ ಮೊದಲ ಆಟಗಾರ್ತಿ ಎಂಬ ಸಾಧನೆ ಮೆರೆದಿದ್ದಾರೆ. ಶನಿವಾರ ಇಲ್ಲಿ ನಡೆದ ಮಹಿಳಾ ಸಿಂಗಲ್ಸ್ ವಿಭಾಗದಲ್ಲಿ ಕಂಚಿನ ಪದಕ ಜಯಿಸುವ ಮೂಲಕ ಈ ಶ್ರೇಯ ಪಡೆದರು. ಶರತ್‌ ಕಮಲ್‌ ಮತ್ತು ಜಿ.ಸತ್ಯನ್ ಅವರು ಕ್ರಮವಾಗಿ 2015 ಮತ್ತು 2019ರಲ್ಲಿ ಸಿಂಗಲ್ಸ್ ವಿಭಾಗದಲ್ಲಿ ಆರನೇ ಸ್ಥಾನ ಗಳಿಸಿದ್ದೇ ಭಾರತದ ಆಟಗಾರರ ಇದುವರೆಗಿನ ಶ್ರೇಷ್ಠ ಸಾಧನೆಯಾಗಿತ್ತು.

ವಿಶ್ವ ರ‍್ಯಾಂಕಿಂಗ್‌ನಲ್ಲಿ 44ನೇ ಸ್ಥಾನದಲ್ಲಿರುವ ಮಣಿಕಾ ಪದಕದ ಸುತ್ತಿನಲ್ಲಿ 11-6, 6-11, 11-7, 12-10, 4-11, 11-2 (4-2) ಅಂತರದಿಂದ ಜಪಾನ್ ಆಟಗಾರ್ತಿ, ಆರನೇ ರ‍್ಯಾಂಕಿನ ಹೀನಾ ಹಯಾತಾ ಅವರನ್ನು ಪರಾಭವಗೊಳಿಸಿ ಕಂಚಿನ ಪದಕಕ್ಕೆ ಕೊರಳೊಡಿದ್ದರು.

ಪದಕ ಗೆದ್ದ ಬಳಿಕ ಮಾತನಾಡಿದ ಮಣಿಕಾ, “ಅಗ್ರ ಕ್ರಮಾಂಕದ ಆಟಗಾರ್ತಿಯರನ್ನು ಮಣಿಸಿ ಪದಕ ಜಯಿಸಿದ್ದು ದೊಡ್ಡ ಸಾಧನೆ. ಅವರ ವಿರುದ್ಧದ ಆಟ ಮತ್ತು ಹೋರಾಟವನ್ನು ಆನಂದಿಸಿದ್ದೇನೆ. ಮುಂಬರುವ ಎಲ್ಲ ಟೂರ್ನಿಗಳಲ್ಲೂ ಇದೇ ರೀತಿಯ ಬಿಲಿಷ್ಠ ಪ್ರದರ್ಶನ ತೋರುವೆ’ ಎಂದು ಹೇಳಿದರು.

ಸೆಮಿಫೈನಲ್​ನಲ್ಲಿ ಸೋಲು

ಮಣಿಕಾ ಬಾತ್ರಾ ಅವರು ದಿನದ ಆರಂಭದಲ್ಲಿ ನಡೆದ ಸೆಮಿಫೈನಲ್‌ನಲ್ಲಿ ಎರಡನೇ ಶ್ರೇಯಾಂಕದ ಜಪಾನ್ ಆಟಗಾರ್ತಿ ಮಿಮಾ ಇಟೊ ವಿರುದ್ಧ 8-11, 11-7, 7-11, 6-11, 11-8, 7-11 (2-4) ಅಂತರದಿಂದ ಸೋಲು ಕಂಡಿದ್ದರು. ಬಳಿಕ ಕಂಚಿನ ಪದಕದ ಸುತ್ತಿನ ಹಣಾಹಣಿಯಲ್ಲಿ ತಮ್ಮ ಎಲ್ಲ ಸಾಮರ್ಥ್ಯವನ್ನು ಪಣಕ್ಕಿಟ್ಟು ಆಡಿದ ಮಣಿಕಾ, ಫೋರ್‌ಹ್ಯಾಂಡ್‌ ಹೊಡೆತಗಳ ಮೂಲಕ ಮಿಮಾ ಇಟೊ ವಿರುದ್ಧ ಪಾರಮ್ಯ ಮೆರೆದು ಭಾರತಕ್ಕೆ ಐತಿಹಾಸಿಕ ಪದಕವೊಂದನ್ನು ತಂದುಕೊಟ್ಟರು.

ಇದನ್ನೂ ಓದಿ | ITTF-ATTU Asian Cup | ಏಷ್ಯನ್ ಟಿಟಿ; ಸೆಮಿಫೈನಲ್​ಗೆ ಮಣಿಕಾ, ಈ ಸಾಧನೆ ಮಾಡಿದ ಭಾರತದ ಮೊದಲ ಆಟಗಾರ್ತಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Latest

Titanic Movie : ಟೈಟಾನಿಕ್​, ಗಾಂಧಿ ಸಿನಿಮಾದ ನಟ ಬರ್ನಾರ್ಡ್ ಹಿಲ್ ನಿಧನ

Titanic Movie: ಪ್ರಭಾವಶಾಲಿ ಬ್ರಿಟಿಷ್ ಕಿರು ಸರಣಿ ‘ಬಾಯ್ಸ್ ಫ್ರಮ್ ದಿ ಬ್ಲ್ಯಾಕ್ಸ್ಟಫ್’ ನಲ್ಲಿ ಕಾರ್ಮಿಕ ವರ್ಗದ ನಾಯಕ ಯೋಸರ್ ಹ್ಯೂಸ್ ಅವರಂತಹ ಸಂಕೀರ್ಣ ಪಾತ್ರಗಳನ್ನು ಮಾಡಿರುವ ಅವರ ಪ್ರತಿಭೆಯನ್ನು ಸ್ಮರಿಸಿದ್ದಾರೆ. ಬರ್ನಾರ್ಡ್​ ಹಿಲ್​ ಭಾರತೀಯರಿಗೆ ಟೈಟಾನಿಕ್​ ಸಿನಿಮಾ ಮೂಲಕ ಪರಿಚಿತ. ಅವರು ಆ ಸಿನಿಮಾದಲ್ಲಿ ಹಡಗಿನ ಕ್ಯಾಪ್ಟನ್​ ಎಡ್ವರ್ಡ್ ಸ್ಮಿತ್ ಪಾತ್ರದಲ್ಲಿ ನಟಿಸಿದ್ದರು.

VISTARANEWS.COM


on

Bernard Hill
Koo

ಬೆಂಗಳೂರು: ‘ದಿ ಲಾರ್ಡ್ ಆಫ್ ದಿ ರಿಂಗ್ಸ್’ ಟ್ರೈಲಜಿ ಮತ್ತು ವಿಶ್ವ ವಿಖ್ಯಾತಿ ಪಡೆದ ಹಾಲಿವುಡ್​ ಸಿನಿಮಾ ‘ಟೈಟಾನಿಕ್’ ನಲ್ಲಿ (Titanic Movie) ಪ್ರಭಾವಶಾಲಿ ಪಾತ್ರಗಳಿಗೆ ಹೆಸರುವಾಸಿಯಾದ ಪ್ರಸಿದ್ಧ ಇಂಗ್ಲಿಷ್ ನಟ ಬರ್ನಾರ್ಡ್ ಹಿಲ್ (Bernard Hill) ನಿಧನ ಹೊಂದಿದ್ದಾರೆ. ಅವರಿಗೆ ತಮ್ಮ 79 ವರ್ಷ. ಸ್ಕಾಟ್ಲೆಂಟ್​ನ ಜನಪ್ರಿಯ ಹಾಡುಗಾರ್ತಿ ಬಾರ್ಬರಾ ಡಿಕ್ಸನ್ ಈ ಸುದ್ದಿಯನ್ನು ಎಕ್ಸ್ (ಹಿಂದೆ ಟ್ವಿಟರ್) ನಲ್ಲಿ ಪ್ರಕಟಿಸಿ ಸಂತಾಪ ವ್ಯಕ್ತಪಡಿಸಿದ್ದಾರೆ. ಹಿಲ್ ಅವರು 1982ರಲ್ಲಿ ಮಹಾತ್ಮ ಗಾಂಧಿಯ ಜೀವನ ಚರಿತ್ರೆಯ ಕುರಿತು ರಿಚರ್ಡ್​ ಅಟೆನ್​ಬರೊ ಅವರ ಗಾಂಧಿ ಸಿನಿಮಾದಲ್ಲೂ ನಟಿಸಿದ್ದರು.

“ಬರ್ನಾರ್ಡ್ ಹಿಲ್ ಅವರ ನಿಧನದಿಂದ ನಾನು ದುಃಖ ತೃಪ್ತನಾಗಿದ್ದೇನೆ. ನಾವು 1974-1975 ರಲ್ಲಿ ಒಟ್ಟಿಗೆ ಕೆಲಸ ಮಾಡಿದ್ದೇವೆ. ನಿಜವಾಗಿಯೂ ಗಮನಾರ್ಹ ನಟ. ಅವರೊಂದಿಗೆ ಕೆಲಸ ಮಾಡುವುದು ಒಂದು ಗೌರವವಾಗಿತ್ತು ಎಂದು ಬರೆದುಕೊಂಡಿದ್ದಾರೆ. ಹಿಲ್ ಅವರ ನಿಧನದ ನಂತರ ಅಭಿಮಾನಿಗಳು ಅವರಿಗೆ ಗೌರವ ಸಲ್ಲಿಸಿದ್ದಾರೆ. ಅನೇಕರು ಅವರ ಬಹುಮುಖ ಪ್ರತಿಭೆಯನ್ನು ಶ್ಲಾಘಿಸಿದ್ದಾರೆ.

ಪ್ರಭಾವಶಾಲಿ ಬ್ರಿಟಿಷ್ ಕಿರು ಸರಣಿ ‘ಬಾಯ್ಸ್ ಫ್ರಮ್ ದಿ ಬ್ಲ್ಯಾಕ್ಸ್ಟಫ್’ ನಲ್ಲಿ ಕಾರ್ಮಿಕ ವರ್ಗದ ನಾಯಕ ಯೋಸರ್ ಹ್ಯೂಸ್ ಅವರಂತಹ ಸಂಕೀರ್ಣ ಪಾತ್ರಗಳನ್ನು ಮಾಡಿರುವ ಅವರ ಪ್ರತಿಭೆಯನ್ನು ಸ್ಮರಿಸಿದ್ದಾರೆ. ಬರ್ನಾರ್ಡ್​ ಹಿಲ್​ ಭಾರತೀಯರಿಗೆ ಟೈಟಾನಿಕ್​ ಸಿನಿಮಾ ಮೂಲಕ ಪರಿಚಿತ. ಅವರು ಆ ಸಿನಿಮಾದಲ್ಲಿ ಹಡಗಿನ ಕ್ಯಾಪ್ಟನ್​ ಎಡ್ವರ್ಡ್ ಸ್ಮಿತ್ ಪಾತ್ರದಲ್ಲಿ ನಟಿಸಿದ್ದರು.

ವೈವಿಧ್ಯಮಯ ಪಾತ್ರ

ಹಿಲ್ ಅವರು ತಮ್ಮ ಐದು ದಶಕಗಳಿಗೂ ಹೆಚ್ಚಿನ ವೃತ್ತಿಜೀವನದಲ್ಲಿ ರಂಗಭೂಮಿ, ದೂರದರ್ಶನ ಮತ್ತು ಚಲನಚಿತ್ರದಾದ್ಯಂತ ವೈವಿಧ್ಯಮಯ ಪಾತ್ರಗಳನ್ನು ಮಾಡಿದ್ದರು. ‘ದಿ ಲಾರ್ಡ್ ಆಫ್ ದಿ ರಿಂಗ್ಸ್: ದಿ ರಿಟರ್ನ್ ಆಫ್ ದಿ ಕಿಂಗ್’ ಮತ್ತು ‘ಟೈಟಾನಿಕ್’ ಸಿನಿಮಾಗಳ ಮೂಲಕ ಅಕಾಡಮಿ ಪ್ರಶಸ್ತಿಗಳನ್ನು ಗೆದ್ದಿದ್ದರು.

ಇದನ್ನೂ ಓದಿ: Self-Healing Roads: ರಸ್ತೆಗಳಲ್ಲಿ ಹೊಂಡಗಳೇ ಇರಲ್ಲ! ಬರಲಿವೆ ಸೆಲ್ಫ್‌ ಹೀಲಿಂಗ್‌ ರೋಡ್‌ಗಳು!

ಬಿಬಿಸಿ ಟಿವಿ ಸರಣಿ “ವೂಲ್ಫ್ ಹಾಲ್” ನಲ್ಲಿ, ಬರ್ನಾರ್ಡ್ ಹಿಲ್ ಡ್ಯೂಕ್ ಆಫ್ ನಾರ್ಫೋಕ್ ಆಗಿ ಸ್ಮರಣೀಯ ಅಭಿನಯ ಮಾಡಿದ್ದರು. ಕಾರ್ಡಿನಲ್ ವೋಲ್ಸಿಯ ವಿರೋಧಿ ಮತ್ತು ಅನ್ನಿ ಬೊಲೆನ್ ಅವರ ಚಿಕ್ಕಪ್ಪನಾದ ಈ ಪಾತ್ರವು ಹಿಲ್ ಅವರ ಬಹುಮುಖ ನಟನಾ ಕೌಶಲ್ಯವನ್ನು ಪ್ರದರ್ಶಿಸಿತ್ತು.

ದಶಕಗಳ ಸುದೀರ್ಘ ವೃತ್ತಿಜೀವನದುದ್ದಕ್ಕೂ, ಹಿಲ್ ವಿವಿಧ ಪಾತ್ರಗಳನ್ನು ಮಾಡಿದ್ದರ. ಅದು ಶಾಶ್ವತ ಪರಿಣಾಮ ಬೀರಿತ್ತು. 1976 ರ ಗೌರವಾನ್ವಿತ ಬಿಬಿಸಿ ಸರಣಿ “ಐ, ಕ್ಲಾಡಿಯಸ್” ನಲ್ಲಿ ಕಾಣಿಸಿಕೊಂಡಾಗಿನಿಂದ ಹಿಡಿದು 1982 ರಲ್ಲಿ ಮೆಚ್ಚುಗೆ ಪಡೆದ ಚಲನಚಿತ್ರ “ಗಾಂಧಿ” ಯಲ್ಲಿನ ಅವರ ಸರ್ಜೆಂಟ್​ ಪುಟ್ನಮ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. 1989 ರಲ್ಲಿ “ಶೆರ್ಲಿ ವ್ಯಾಲೆಂಟೈನ್”, 2002 ರಲ್ಲಿ “ದಿ ಸ್ಕಾರ್ಪಿಯನ್ ಕಿಂಗ್” ಮತ್ತು 2008 ರ ಟಾಮ್ ಕ್ರೂಸ್ ಚಲನಚಿತ್ರ “ವಾಲ್ಕೈರಿ” ನಂತಹ ಸಿನಿಮಾಗಳಲ್ಲಿ ಪಾತ್ರ ವಹಿಸಿದ್ದರು.

Continue Reading

Latest

IPL 2024 : ಸಿಎಸ್​ಕೆ ತಂಡದ ಸಮಸ್ಯೆಗಳನ್ನು ಬಹಿರಂಗಪಡಿಸಿದ ನಾಯಕ ಋತುರಾಜ್​

IPL 2024 : ಪಂದ್ಯದ ನಂತರದ ಸಮಾರಂಭದಲ್ಲಿ ಮಾತನಾಡಿದ ಸಿಎಸ್ಕೆ ನಾಯಕ ಋತುರಾಜ್ ಗಾಯಕ್ವಾಡ್ ಪಿಚ್ ನಿಧಾನಗತಿಯಲ್ಲಿತ್ತು. ಹೀಗಾಗಿ ನಾವು ಪೇರಿಸಿದ ರನ್​ ಬಗ್ಗೆ ಖುಷಿಯಿದೆ ಎಂದು ಹೇಳಿದರು. ವಿಕೆಟ್ ನಿಧಾನವಾಗಿತ್ತು.ಚೆಂಡು ಕಡಿಮೆ ಬೌನ್ಸ್ ಆಗುತ್ತಿತ್ತು ಇತ್ತು ಎಂದು ಹೇಳಿದರು.

VISTARANEWS.COM


on

IPL 2024
Koo

ಬೆಂಗಳೂರು: ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ 2024 (IPL 2024) 53 ನೇ ಪಂದ್ಯದಲ್ಲಿ ಋತುರಾಜ್ ಗಾಯಕ್ವಾಡ್ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ (CSK) ಸ್ಯಾಮ್ ಕರ್ರನ್ ನೇತೃತ್ವದ ಪಂಜಾಬ್ ಕಿಂಗ್ಸ್ (PBKS) ವಿರುದ್ಧ 28 ರನ್​ಗಳ ಗೆಲವು ಸಾಧಿಸಿದೆ. ಅದರ ಹೊರತಾಗಿಯೂ ಸಿಎಸ್​ಕೆ ತಂಡದಲ್ಲಿ ಕೆಲವೊಂದು ಸಮಸ್ಯೆಗಳು ಉಂಟಾಗಿವೆ ಎಂಬುದಾಗಿ ನಾಯಕ ಋತುರಾಜ್ ಗಾಯಕ್ವಾಡ್ ಹೇಳಿದ್ದಾರೆ.

ಗಾಯಕ್ವಾಡ್ ಟಾಸ್ ಸೋತರು. ಸಿಎಸ್​​ಕೆ ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನ ಪಡೆಯಿತು. ಬ್ಯಾಟರ್​ಗಳು ಉತ್ತಮ ಪ್ರದರ್ಶನ ನೀಡದ ಕಾರಣ 9 ವಿಕೆಟ್ ನಷ್ಟಕ್ಕೆ 167 ರನ್ ಗಳಿಸಿತು. ರವೀಂದ್ರ ಜಡೇಜಾ (43) ಗರಿಷ್ಠ ರನ್ ಗಳಿಸಿದರೆ, ಋತುರಾಜ್ ಗಾಯಕ್ವಾಡ್ ಮತ್ತು ಡ್ಯಾರಿಲ್ ಮಿಚೆಲ್ 30 ರನ್ ಗಳಿಸಿದರು. ರವೀಂದ್ರ ಜಡೇಜಾ 20 ರನ್ ನೀಡಿ 3 ವಿಕೆಟ್ ಪಡೆದರು. ಸಿಮರ್ಜೀತ್ ಸಿಂಗ್ ಮತ್ತು ತುಷಾರ್ ದೇಶಪಾಂಡೆ ತಲಾ ಎರಡು ವಿಕೆಟ್ ಪಡೆದರೆ, ಶಾರ್ದೂಲ್ ಠಾಕೂರ್ ಮತ್ತು ಮಿಚೆಲ್ ಸ್ಯಾಂಟ್ನರ್​ ತಲಾ ಒಂದು ವಿಕೆಟ್ ಪಡೆದರು.

ಪಂದ್ಯದ ನಂತರದ ಸಮಾರಂಭದಲ್ಲಿ ಮಾತನಾಡಿದ ಸಿಎಸ್ಕೆ ನಾಯಕ ಋತುರಾಜ್ ಗಾಯಕ್ವಾಡ್ ಪಿಚ್ ನಿಧಾನಗತಿಯಲ್ಲಿತ್ತು. ಹೀಗಾಗಿ ನಾವು ಪೇರಿಸಿದ ರನ್​ ಬಗ್ಗೆ ಖುಷಿಯಿದೆ ಎಂದು ಹೇಳಿದರು. ವಿಕೆಟ್ ನಿಧಾನವಾಗಿತ್ತು.ಚೆಂಡು ಕಡಿಮೆ ಬೌನ್ಸ್ ಆಗುತ್ತಿತ್ತು ಇತ್ತು ಎಂದು ಹೇಳಿದರು. ಸಿಮರ್ಜೀತ್ ಸಿಂಗ್ ಬಗ್ಗೆ ಮಾತನಾಡಿದ ಋತುರಾಜ್ ಗಾಯಕ್ವಾಡ್, ವೇಗಿಗೆ ಹೆಚ್ಚಿನ ಅವಕಾಶಗಳು ಸಿಗಲಿಲ್ಲ. ಅವರನ್ನು ಪರಿಚಯಿಸಲು ತಡ ಮಾಡಿಲ್ಲ ಎಂದ ಹೇಳಿದರ.

ತಂಡದಲ್ಲಿದೆ ಸಮಸ್ಯೆ

ನಮ್ಮ ತಂಡದಲ್ಲಿ ಸಮಸ್ಯೆಯಿದೆ. ಆಟಗಾರರು ಜ್ವರದಿಂದ ಬಳಲುತ್ತಿದ್ದಾರೆ. ಯಾರು ಆಡುತ್ತಿದ್ದಾರೆ ಅಥವಾ ಇಲ್ಲ ಎಂದು ಬೆಳಿಗ್ಗೆಯವರೆಗೆ ಖಚಿತವಾಗಿರಲಿಲ್ಲ. ಹೀಗಾಗಿ ಗೆಲುವು ನಿಜವಾಗಿಯೂ ಸಂತೋಷ ಕೊಟ್ಟಿದೆ ಎಂದು ಹೇಳದಿರು.

ಐದು ಸೋಲುಗಳನ್ನು ಕಂಡಿದ್ದ ಚೆನ್ನೈ

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಉತ್ತಮ ದಾಖಲೆಯನ್ನು ಹೊಂದಿಲ್ಲ. 2024ರ ಐಪಿಎಲ್ ಟೂರ್ನಿಯಲ್ಲಿ ಮುಖಾಮುಖಿಯಾಗಿರುವ ಸಿಎಸ್​ಕೆ ತಂಡ ಪಿಬಿಕೆಎಸ್ ವಿರುದ್ಧ 15-14 ಗೆಲುವಿನ ಅಂತರದ ಮುನ್ನಡೆ ಹೊಂದಿದೆ. ಆದಾಗ್ಯೂ, ಹಿಂದಿನ ಐದು ಪಂದ್ಯಗಳಲ್ಲಿ, ಪಂಜಾಬ್ ಕಿಂಗ್ಸ್ ಫ್ರಾಂಚೈಸಿ ಸಂಪೂರ್ಣ ಪ್ರಾಬಲ್ಯ ಸಾಧಿಸಿತು. ಏಕೆಂದರೆ ಅವರು ಆ ಎಲ್ಲಾ ಪಂದ್ಯಗಳನ್ನು ಗೆದ್ದಿದ್ದಾರೆ.

ಇದನ್ನೂ ಓದಿ: IPL 2024 : 28 ರನ್​ಗಳಿಂದ ಗೆದ್ದು ಪಂಜಾಬ್ ವಿರುದ್ಧ ಪ್ರತಿಕಾರ ತೀರಿಸಿದ ಚೆನ್ನೈ

ಐಪಿಎಲ್ ಇತಿಹಾಸದಲ್ಲಿ, ಕೇವಲ ಎರಡು ತಂಡಗಳು 5 ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಅನ್ನು ಸತತ ಐದು ಪಂದ್ಯಗಳಲ್ಲಿ ಸೋಲಿಸಿವೆ, ಮೊದಲ ತಂಡ ಮುಂಬೈ ಇಂಡಿಯನ್ಸ್ ಮತ್ತು ಇನ್ನೊಂದು ತಂಡ ಪಂಜಾಬ್ ಕಿಂಗ್ಸ್, ಇದು 2021 ರಲ್ಲಿ ತಮ್ಮ ಗೆಲುವಿನ ಸರಣಿಯನ್ನು ಪ್ರಾರಂಭಿಸಿತು ಮತ್ತು ಮೇ 1 ರ ಬುಧವಾರ ಚೆಪಾಕ್​​ನಲ್ಲಿ ಸಿಎಸ್ಕೆ ವಿರುದ್ಧ ಏಳು ವಿಕೆಟ್​​ಗಳಿಂದ ಸೋಲಿಸುವ ಮೂಲಕ ಮುಂಬೈ ದಾಖಲೆ ಸರಿಗಟ್ಟಿತು.

ಅಕ್ಟೋಬರ್ 7, 2021 ರಂದು, ಪಿಬಿಕೆಎಸ್ 42 ಎಸೆತಗಳು ಬಾಕಿ ಇರುವಾಗ 6 ವಿಕೆಟ್​​ಗಳಿಂದ ಗೆದ್ದಿತು ಮತ್ತು ಐಪಿಎಲ್ 2022ರಲ್ಲಿ ಕ್ರಮವಾಗಿ 54 ಮತ್ತು 11 ರನ್​ಗಳಿಂದ ಸತತ ಗೆಲುವುಗಳನ್ನು ದಾಖಲಿಸಿತು. ಐಪಿಎಲ್ 2023 ರಲ್ಲಿ, ಅವರು ಒಮ್ಮೆ ಮಾತ್ರ ಮುಖಾಮುಖಿಯಾಗಿದ್ದರು ಏಪ್ರಿಲ್ 30 ರಂದು ನಡೆದ ಪಂದ್ಯವನ್ನು ಪಿಬಿಕೆಎಸ್ 4 ವಿಕೆಟ್​​ಗಳಿಂದ ಗೆದ್ದಿತು.

ಪಂಜಾಬ್ ಕಿಂಗ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಇಂಡಿಯನ್ ಪ್ರೀಮಿಯರ್ ಲೀಗ್ 2024 ರ ಪಂದ್ಯದ ಮುಕ್ತಾಯದ ನಂತರ, ಸಿಎಸ್​ಕೆ ಪರವಾಗಿ 16-14 ಅಂತರದ ದಾಖಲೆ ಹೊಂದಿದೆ.

Continue Reading

ದೇಶ

Air India: ವಿಮಾನ ಪ್ರಯಾಣಿಕರೇ ಗಮನಿಸಿ, ಚೆಕ್-ಇನ್ ಬ್ಯಾಗೇಜ್ ಭಾರದ ಮಿತಿ ಇಳಿಕೆ!

ಏರ್ ಇಂಡಿಯಾವು ದೇಶೀಯ ವಿಮಾನಗಳಲ್ಲಿ ಉಚಿತ ಚೆಕ್-ಇನ್ ಬ್ಯಾಗೇಜ್ ಭತ್ಯೆಯನ್ನು 20 ಕೆ.ಜಿ.ಯಿಂದ 15 ಕೆ.ಜಿ.ಗೆ ಇಳಿಕೆ (Air India) ಮಾಡಲಾಗಿದೆ. ಮೇ 2ರಿಂದಲೇ ಈ ಹೊಸ ನೀತಿ ಜಾರಿಯಾಗಿದೆ.

VISTARANEWS.COM


on

By

Air India
Koo

ವಿಮಾನ ಪ್ರಯಾಣದ ಯೋಚನೆಯಲ್ಲಿದ್ದೀರಾ? ಹಾಗಿದ್ದರೆ ಗಮನಿಸಿ. ಏರ್ ಇಂಡಿಯಾವು (Air India) ದೇಶೀಯ ವಿಮಾನಗಳಲ್ಲಿ (domestic flights) ಲಗೇಜ್ ಭಾರವನ್ನು (check-in baggage) 20 ಕೆ.ಜಿ.ಯಿಂದ 15 ಕೆ.ಜಿ.ಗೆ ಇಳಿಕೆ ಮಾಡಿದೆ. ಇನ್ನು ಮುಂದೆ 15 ಕೆ.ಜಿ.ಗಿಂತ ಹೆಚ್ಚು ಸಾಮಗ್ರಿ ಒಯ್ಯುವುದಾದರೆ ಅದಕ್ಕೆ ಶುಲ್ಕ ಪಾವತಿ ಮಾಡಲೇಬೇಕು.


ದೇಶೀಯ ವಿಮಾನಗಳಲ್ಲಿ ಕಡಿಮೆ ಆರ್ಥಿಕ ದರದ ವಿಭಾಗದಲ್ಲಿ ಉಚಿತ ಚೆಕ್-ಇನ್ ಬ್ಯಾಗೇಜ್ ಭತ್ಯೆಯನ್ನು 20 ಕೆ.ಜಿ.ಯಿಂದ 15 ಕೆ.ಜಿ.ಗೆ ಇಳಿಕೆ ಮಾಡಲಾಗಿದೆ. ಕಳೆದ ಆಗಸ್ಟ್‌ನಲ್ಲಿ ಟಾಟಾ ಗ್ರೂಪ್ (Tata Group) ಮಾಲೀಕತ್ವದ ಏರ್ ಇಂಡಿಯಾ ಪರಿಚಯಿಸಿದ ಮೆನು-ಆಧಾರಿತ ಬೆಲೆ ಮಾದರಿಯ ದರದ ಭಾಗವಾಗಿ ಈ ಬದಲಾವಣೆಗಳನ್ನು ಪರಿಚಯಿಸಲಾಗಿದೆ.

ಈ ಮೊದಲು ಏರ್ ಇಂಡಿಯಾದ ದೇಶೀಯ ವಿಮಾನಗಳಲ್ಲಿ ಪ್ರಯಾಣಿಕರಿಗೆ ಯಾವುದೇ ಹೆಚ್ಚುವರಿ ಶುಲ್ಕವಿಲ್ಲದೆ 25 ಕೆ.ಜಿ. ಚೆಕ್-ಇನ್ ಬ್ಯಾಗೇಜ್ ಅನ್ನು ಸಾಗಿಸಲು ಅನುಮತಿಸಲಾಗಿತ್ತು. ಆದರೆ ಇತರ ದೇಶೀಯ ವಾಹಕಗಳಾದ ಇಂಡಿಗೊ, ವಿಸ್ತಾರಾ ಮತ್ತು ಸ್ಪೈಸ್ ಜೆಟ್ 15 ಕೆ.ಜಿ. ಚೆಕ್-ಇನ್ ಬ್ಯಾಗೇಜ್ ಅನ್ನು ನೀಡುತ್ತವೆ. ಬಳಿಕ ಹೆಚ್ಚುವರಿ ಶುಲ್ಕ ವಿಧಿಸುತ್ತಿದೆ.

ಹೇಗಿದೆ?

ಚೆಕ್-ಇನ್ ಬ್ಯಾಗೇಜ್ ನಲ್ಲಿ ಮೂರು ದರದ ಗುಂಪುಗಳಿವೆ. ಒಂದು ಕಂಫರ್ಟ್, ಎರಡನೆದ್ದು ಕಂಫರ್ಟ್ ಪ್ಲಸ್ ಮತ್ತು ಮೂರನೆಯದ್ದು ಫ್ಲೆಕ್ಸ್ . ಈ ಮೂರು ವಿಭಾಗಳಿಗೆ ಪ್ರತ್ಯೇಕ ದರ ನಿಗದಿ ಪಡಿಸಿರುವುದಾಗಿ ಏರ್ ಇಂಡಿಯಾ ವಕ್ತಾರರು ಶನಿವಾರ ತಿಳಿಸಿದ್ದಾರೆ. ವಿವಿಧ ಬೆಲೆಗಳಲ್ಲಿ ವಿಭಿನ್ನ ಮಟ್ಟದ ಪ್ರಯೋಜನಗಳನ್ನು ಗ್ರಾಹಕರು ಪಡೆಯಬಹುದಾಗಿದೆ.

ಈಗಾಗಲೇ ಜಾರಿ

ಚೆಕ್-ಇನ್ ಬ್ಯಾಗೇಜ್ ಮಿತಿಯನ್ನು ಮೇ 2ರಿಂದ ಈ ಜಾರಿಗೆ ಬರುವಂತೆ ಕ್ರಮಕೈಗೊಳ್ಳಲಾಗಿದೆ. ಏರ್‌ಲೈನ್ಸ್ ಹೇಳಿಕೆಯ ಪ್ರಕಾರ, ಕಂಫರ್ಟ್ ಮತ್ತು ಕಂಫರ್ಟ್ ಪ್ಲಸ್ ವರ್ಗಗಳಿಗೆ ಉಚಿತ ಚೆಕ್-ಇನ್ ಬ್ಯಾಗೇಜ್ ಭತ್ಯೆಯನ್ನು ಕ್ರಮವಾಗಿ 20 ಮತ್ತು 25 ಕೆ.ಜಿ.ಯಿಂದ 15 ಕೆ.ಜಿ.ಗೆ ಇಳಿಸಲಾಗಿದೆ.

ಬದಲಾವಣೆ

ಎಕಾನಮಿ ಕ್ಲಾಸ್‌ನಲ್ಲಿ ದೇಶೀಯ ಮಾರ್ಗಗಳಲ್ಲಿ ಕಂಫರ್ಟ್ ಮತ್ತು ಕಂಫರ್ಟ್ ಪ್ಲಸ್ ದರಗಳು ಈಗ 15 ಕೆ.ಜಿ. ಲಗೇಜ್ ಭತ್ಯೆಯನ್ನು ನೀಡುತ್ತವೆ. ಆದರೆ ಫ್ಲೆಕ್ಸ್ 25 ಕೆ.ಜಿ.ವರೆಗೆ ಭತ್ಯೆಯನ್ನು ಒದಗಿಸುತ್ತದೆ. ದೇಶೀಯ ಮಾರ್ಗಗಳಲ್ಲಿ ವ್ಯಾಪಾರ ವರ್ಗದ ಬ್ಯಾಗೇಜ್ ಭತ್ಯೆ 25 ಕೆ.ಜಿ.ಯಿಂದ 35 ಕೆ.ಜಿ. ವರೆಗೆ ಇರುತ್ತದೆ. ಅಂತಾರಾಷ್ಟ್ರೀಯ ವಿಮಾನಗಳಲ್ಲಿ ಉಚಿತ ಲಗೇಜ್ ಭತ್ಯೆಯು ಮಾರುಕಟ್ಟೆಯಿಂದ ಮಾರುಕಟ್ಟೆಗೆ ಬದಲಾಗುತ್ತದೆ ಎಂದು ಏರ್‌ಲೈನ್ ವಕ್ತಾರರು ತಿಳಿಸಿದ್ದಾರೆ.

ಪ್ರಯಾಣಿಕರ ವೈವಿಧ್ಯಮಯ ಆದ್ಯತೆಗಳನ್ನು ಪರಿಗಣಿಸಿ,ಅವಶ್ಯಕತೆಗಳಿಗೆ ಸೂಕ್ತವಾದ ದರ ಮತ್ತು ಸೇವೆಗಳನ್ನು ಆಯ್ಕೆ ಮಾಡಲು ಪ್ರಯಾಣಿಕರಿಗೆ ಅವಕಾಶ ನೀಡಲು ಶುಲ್ಕದಲ್ಲಿ ವ್ಯತ್ಯಾಸಗಳನ್ನು ಮಾಡಲಾಗಿದೆ ಎಂದು ಏರ್ ಲೈನ್ಸ್ ತಿಳಿಸಿದೆ.

ಇದನ್ನೂ ಓದಿ: Dubai Airport : ದುಬೈನಲ್ಲಿ ನಿರ್ಮಾಣವಾಗುತ್ತಿದೆ ವಿಶ್ವದ ಅತಿ ದೊಡ್ಡ ಏರ್​ಪೋರ್ಟ್​​; ಏನಿದರ ವಿಶೇಷತೆ? ಎಲ್ಲ ಮಾಹಿತಿ ಇಲ್ಲಿದೆ

ಹೇಗಿದೆ ದರ?

ಕಂಫರ್ಟ್ ಪ್ಲಸ್ ಮತ್ತು ಫ್ಲೆಕ್ಸ್ ದರಗಳ ನಡುವಿನ ಬೆಲೆ ವ್ಯತ್ಯಾಸವು ದೆಹಲಿ- ಮುಂಬಯಿನಂತಹ ದೇಶೀಯ ವಲಯದಲ್ಲಿ ಸಾಮಾನ್ಯವಾಗಿ 1,000 ರೂ. ಆಗಿರುತ್ತದೆ. 10 ಕೆ.ಜಿ. ಹೆಚ್ಚುವರಿ ಬ್ಯಾಗೇಜ್ ಮತ್ತು ಶೂನ್ಯ ಬದಲಾವಣೆ ಅಥವಾ ರದ್ದತಿ ಶುಲ್ಕ ಸೇರಿದಂತೆ 9,000 ರೂ.ವರೆಗೆ ಇರುತ್ತದೆ. ಗ್ರಾಹಕರ ಅಭಿಪ್ರಾಯವನ್ನು ಪಡೆದೇ ಈ ದರವನ್ನು ನಿಗದಿ ಪಡಿಸಲಾಗಿದೆ ಎಂದು ಏರ್ ಇಂಡಿಯಾ ವಕ್ತಾರರು ತಿಳಿಸಿದ್ದಾರೆ.

Continue Reading

ಕ್ರೈಂ

Viral News: ವಿಮಾನ ಪ್ರಯಾಣಿಕನ ಜೇಬಿನಲ್ಲಿತ್ತು ಎರಡು ಹಾವು!

ಪ್ರಯಾಣಿಕನೊಬ್ಬನ ಪ್ಯಾಂಟ್ ಕಿಸೆಯಲ್ಲಿದ್ದ ಎರಡು ಹಾವುಗಳನ್ನು ಫ್ಲೋರಿಡಾದ ಮಿಯಾಮಿಯ ವಿಮಾನ ನಿಲ್ದಾಣದಲ್ಲಿ (Viral News) ಭದ್ರತಾ ಅಧಿಕಾರಿಗಳು ಪತ್ತೆ ಮಾಡಿದ್ದಾರೆ.

VISTARANEWS.COM


on

By

Viral News
Koo

ಮಿಯಾಮಿ: ಪ್ರಯಾಣಿಕನೊಬ್ಬ ಪ್ಯಾಂಟ್‌ ಜೇಬಿನಲ್ಲಿ (Viral News) ಹಾವುಗಳನ್ನು (Snakes In Pant) ಸಾಗಿಸುತ್ತಿದ್ದ ಘಟನೆ ಫ್ಲೋರಿಡಾದ (Florida ) ಮಿಯಾಮಿಯ ವಿಮಾನ ನಿಲ್ದಾಣದಲ್ಲಿ (Miami Airport) ಬೆಳಕಿಗೆ ಬಂದಿದೆ. ಭದ್ರತಾ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದ ವೇಳೆ ಪ್ರಯಾಣಿಕನೊಬ್ಬ ಪ್ಯಾಂಟ್‌ನ ಜೇಬಿನಲ್ಲಿ ಹಾವುಗಳನ್ನು ಇಟ್ಟಿರುವುದನ್ನು ಪತ್ತೆ ಮಾಡಿದ್ದಾರೆ.

ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಭದ್ರತಾ ಅಧಿಕಾರಿಗಳು, ಏಪ್ರಿಲ್ 26ರಂದು ಚೆಕ್‌ಪಾಯಿಂಟ್‌ನಲ್ಲಿ ಪ್ರಯಾಣಿಕನೊಬ್ಬ ಪ್ಯಾಂಟ್‌ನಲ್ಲಿ ಹಾವುಗಳನ್ನು ಸಣ್ಣ ಚೀಲದಲ್ಲಿ ಇಟ್ಟು ಸಾಗಿಸುತ್ತಿರುವುದನ್ನು ಪತ್ತೆ ಮಾಡಿರುವ ಬಗ್ಗೆ ತಿಳಿಸಿದ್ದಾರೆ. ಸನ್‌ಗ್ಲಾಸ್ ಬ್ಯಾಗ್‌ನಲ್ಲಿ ಎರಡು ಸಣ್ಣ ಹಾವುಗಳನ್ನು ಪತ್ತೆ ಹಚ್ಚಿರುವ ಸಾರಿಗೆ ಭದ್ರತಾ ಆಡಳಿತದ (ಟಿಎಸ್‌ಎ) ವಕ್ತಾರರು ಹಾವುಗಳನ್ನು ಫ್ಲೋರಿಡಾ ಮೀನು ಮತ್ತು ವನ್ಯಜೀವಿ ಸಂರಕ್ಷಣಾ ಆಯೋಗಕ್ಕೆ ಒಪ್ಪಿಸಿರುವುದಾಗಿ ಅವರು ತಿಳಿಸಿದ್ದಾರೆ.

ಪ್ರಯಾಣಿಕನು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭದ್ರತಾ ತಪಾಸಣೆಗೆ ನಿಂತಿದ್ದಾಗ ಎಚ್ಚರಿಕೆ ಸದ್ದು ಕೇಳಿದಾಗ ಆತನೇ ತನ್ನ ಪ್ಯಾಂಟ್‌ನಲ್ಲಿ ಹಾವುಗಳಿವೆ ಎಂದು ಒಪ್ಪಿಕೊಂಡಿದ್ದಾನೆ. ಆತ ತನ್ನ ಚೀಲದಲ್ಲಿ ಈ ಹಾವುಗಳನ್ನು ಏಕೆ ಸಾಗಿಸುತ್ತಿದ್ದ ಎಂಬುದು ತಿಳಿದು ಬಂದಿಲ್ಲ. ಪ್ರಯಾಣಿಕನನ್ನು ವಶಕ್ಕೆ ಪಡೆಯಲಾಗಿದೆ.



ಬೇಬಿ ಡೈಪರ್ ನಲ್ಲಿತ್ತು ಗುಂಡು

ಮಿಯಾಮಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮತ್ತೊಂದು ವಿಲಕ್ಷಣ ಘಟನೆ ನಡೆದಿದೆ. ನ್ಯೂಯಾರ್ಕ್‌ನ ಲಾಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಬಿಸಾಡಬಹುದಾದ ಬೇಬಿ ಡೈಪರ್‌ನಲ್ಲಿ 17 ಗುಂಡುಗಳನ್ನು ಬಚ್ಚಿಟ್ಟಿರುವುದನ್ನು ಭದ್ರತಾ ಅಧಿಕಾರಿಗಳು ಪತ್ತೆ ಮಾಡಿದ್ದಾರೆ.

ವಿಮಾನ ನಿಲ್ದಾಣದ ಭದ್ರತಾ ಚೆಕ್‌ಪಾಯಿಂಟ್‌ನಲ್ಲಿ ಎಕ್ಸ್-ರೇ ಯಂತ್ರದಲ್ಲಿ ಎಚ್ಚರಿಕೆ ಬಂದಿದ್ದರಿಂದ ಅಧಿಕಾರಿಗಳು ಪ್ರಯಾಣಿಕರ ಕ್ಯಾರಿ-ಆನ್ ಬ್ಯಾಗ್‌ನಿಂದ ಕ್ಲೀನ್ ಡೈಪರ್ ಅನ್ನು ತೆಗೆದು ನೋಡಿದಾಗ ಅದರಲ್ಲಿ ಬುಲೆಟ್ ತುಂಬಿದ ಡಯಾಪರ್ ಕಂಡು ಬಂದಿತ್ತು.

ಈ ಬಗ್ಗೆ ಪ್ರಯಾಣಿಕನನ್ನು ವಿಚಾರಿಸಿದಾಗ ತನಗೆ ಇದು ಗೊತ್ತೇ ಇಲ್ಲ ಎಂದು ಹೇಳಿದ್ದ. ತನ್ನ ಗೆಳತಿ ಅದನ್ನು ಇಟ್ಟುಕೊಳ್ಳುವಂತೆ ಸೂಚಿಸಿದ್ದಳು ಎಂದು ತಿಳಿಸಿದ್ದ ಎನ್ನಲಾಗಿದೆ.

ಬೆಂಗಳೂರಿನಲ್ಲೂ ಪತ್ತೆಯಾಗಿತ್ತು

ಇತ್ತೀಚೆಗೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲೂ ಥಾಯ್ಲೆಂಡ್‌ನಿಂದ ಬಂದ ವ್ಯಕ್ತಿಯ ಬ್ಯಾಗ್‌ನಲ್ಲಿ 17 ಅತಿ ವಿಷಕಾರಿ ಕಾಳಿಂಗ ಸರ್ಪ , 55 ಚೆಂಡು ಹೆಬ್ಬಾವು ಮತ್ತು ಆರು ಕಾಪುಚಿನ್‌ ಕೋತಿ ಮರಿಗಳನ್ನು ಪತ್ತೆಯಾಗಿತ್ತು.

ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಏರ್ ಏಷಿಯಾ ವಿಮಾನದಲ್ಲಿ ಟರ್ಮಿನಲ್ 1ರಲ್ಲಿ ಬಂದಿಳಿದಿದ್ದ ವಿಮಾನದಿಂದ ಇಳಿದ ಪ್ರಯಾಣಿಕರ ವಿವರಗಳನ್ನು ಪಡೆದುಕೊಳ್ಳುತ್ತಿದ್ದಾಗ ಒಬ್ಬ ವ್ಯಕ್ತಿ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದುದು ಕಂಡುಬಂದಿತ್ತು.

ಇದನ್ನೂ ಓದಿ: ಹಿಂದೂ ಸಂಘಟನೆಯ ನಾಯಕನನ್ನು ಹತ್ಯೆ ಮಾಡಲು ಸಂಚು ರೂಪಿಸಿದ್ದ ಮೌಲ್ವಿಯ ಬಂಧನ

ಕೂಡಲೇ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಆತನ ಚೆಕ್‌ ಇನ್‌ ಲಗೇಜನ್ನು ಸ್ಕ್ಯಾನ್‌ ಮಾಡಿದರು. ಅದರಲ್ಲಿ ಹಾವು, ಕೋತಿಗಳು ಇರುವುದು ಕಂಡುಬಂತು. ಬಳಿಕ ಅವನನ್ನು ತಡೆ ಹಿಡಿದು ಹೆಚ್ಚಿನ ತಪಾಸಣೆ ನಡೆಸಿದಾಗ ಆತನ ಬಳಿ ವಿಷಕಾರಿ ಕಾಳಿಂಗ ಸರ್ಪ, ಹೆಬ್ಬಾವು ಮತ್ತು ಕೋತಿ ಮರಿಗಳನ್ನು ತಂದಿರುವುದು ಪತ್ತೆಯಾಗಿತ್ತು.

ಹಾವು ಮತ್ತು ಕೋತಿಯನ್ನು ತಂದಿರುವ ವ್ಯಕ್ತಿ ತಮಿಳುನಾಡಿನವನು ಎಂದು ತಿಳಿದು ಬಂದಿತ್ತು. ವನ್ಯ ಜೀವಿ ಕಳ್ಳಸಾಗಣೆದಾರ ಎಂದು ಗುರುತಿಸಿ ಆತನನ್ನು ಬಂಧಿಸಿ 1962ರ ಕಸ್ಟಮ್ಸ್ ಕಾಯಿದೆಯ ಸೆಕ್ಷನ್ 110ರ ಅಡಿಯಲ್ಲಿಆತನ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.

Continue Reading
Advertisement
Al Jazeera
ಪ್ರಮುಖ ಸುದ್ದಿ19 mins ago

Al Jazeera: ಹಮಾಸ್‌ ಉಗ್ರರ ಪರ ನಿಲುವು; ಇಸ್ರೇಲ್‌ನಲ್ಲಿ ಅಲ್‌ಜಜೀರಾ ಚಾನೆಲ್‌ ಬಂದ್‌ ಮಾಡಿದ ನೆತನ್ಯಾಹು!

Pralhad Joshi
ಕರ್ನಾಟಕ24 mins ago

Pralhad Joshi: ಕಾಂಗ್ರೆಸ್‌ನಿಂದ ಮೋದಿ ಎಂಬ ಆಕಾಶಕ್ಕೆ ಉಗುಳೋ ಕೃತ್ಯ: ಪ್ರಲ್ಹಾದ್ ಜೋಶಿ

Bernard Hill
Latest36 mins ago

Titanic Movie : ಟೈಟಾನಿಕ್​, ಗಾಂಧಿ ಸಿನಿಮಾದ ನಟ ಬರ್ನಾರ್ಡ್ ಹಿಲ್ ನಿಧನ

IPL 2024
Latest1 hour ago

IPL 2024 : ಸಿಎಸ್​ಕೆ ತಂಡದ ಸಮಸ್ಯೆಗಳನ್ನು ಬಹಿರಂಗಪಡಿಸಿದ ನಾಯಕ ಋತುರಾಜ್​

Air India
ದೇಶ1 hour ago

Air India: ವಿಮಾನ ಪ್ರಯಾಣಿಕರೇ ಗಮನಿಸಿ, ಚೆಕ್-ಇನ್ ಬ್ಯಾಗೇಜ್ ಭಾರದ ಮಿತಿ ಇಳಿಕೆ!

Lok Sabha Election 2024 Narendra Modi cant become PM again says CM Siddaramaiah
Lok Sabha Election 20241 hour ago

Lok Sabha Election 2024: ಮತ್ತೆ ಮೋದಿ ಪ್ರಧಾನಿಯಾಗಲು ಸಾಧ್ಯವೇ ಇಲ್ಲ: ಸಿಎಂ ಸಿದ್ದರಾಮಯ್ಯ ಹೀಗೆ ಹೇಳಿದ್ದು ಏಕೆ?

Radhika Khera
ದೇಶ1 hour ago

Radhika Khera: ಅಯೋಧ್ಯೆಗೆ ಭೇಟಿ ನೀಡಿದ್ದಕ್ಕೆ ಪಕ್ಷದಲ್ಲಿ ವಿರೋಧ; ಕಾಂಗ್ರೆಸ್‌ ತೊರೆದ ನಾಯಕಿ!

Viral News
ಕ್ರೈಂ1 hour ago

Viral News: ವಿಮಾನ ಪ್ರಯಾಣಿಕನ ಜೇಬಿನಲ್ಲಿತ್ತು ಎರಡು ಹಾವು!

Self-Healing Roads
ತಂತ್ರಜ್ಞಾನ1 hour ago

Self-Healing Roads: ರಸ್ತೆಗಳಲ್ಲಿ ಹೊಂಡಗಳೇ ಇರಲ್ಲ! ಬರಲಿವೆ ಸೆಲ್ಫ್‌ ಹೀಲಿಂಗ್‌ ರೋಡ್‌ಗಳು!

IPL 2024
ಪ್ರಮುಖ ಸುದ್ದಿ1 hour ago

IPL 2024 : 28 ರನ್​ಗಳಿಂದ ಗೆದ್ದು ಪಂಜಾಬ್ ವಿರುದ್ಧ ಪ್ರತಿಕಾರ ತೀರಿಸಿದ ಚೆನ್ನೈ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ2 hours ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ3 hours ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ4 hours ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Dina Bhavishya
ಭವಿಷ್ಯ17 hours ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ2 days ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ2 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ3 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ3 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ4 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ6 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

ಟ್ರೆಂಡಿಂಗ್‌