Asian Games 2023: ಮಿಕ್ಸೆಡ್‌ ಡಬಲ್ಸ್​ನಲ್ಲಿ ಚಿನ್ನ ಗೆದ್ದ ಬೋಪಣ್ಣ-ರುತುಜಾ ಜೋಡಿ - Vistara News

ಕ್ರೀಡೆ

Asian Games 2023: ಮಿಕ್ಸೆಡ್‌ ಡಬಲ್ಸ್​ನಲ್ಲಿ ಚಿನ್ನ ಗೆದ್ದ ಬೋಪಣ್ಣ-ರುತುಜಾ ಜೋಡಿ

ರೋಹನ್‌ ಬೋಪಣ್ಣ(Rohan Bopanna) ಮತ್ತು ರುತುಜಾ ಭೋಸಲೆ(Rutuja Bhosale) ಮಿಕ್ಸೆಡ್‌ ಡಬಲ್ಸ್ ಟೆನಿಸ್​​ನಲ್ಲಿ ಚಿನ್ನದ ಪದಕ ಗೆದ್ದ ಸಾಧನೆ ಮಾಡಿದ್ದಾರೆ.

VISTARANEWS.COM


on

Rohan Bopanna and Rutuja
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹ್ಯಾಂಗ್‌ಝೌ: ಏಷ್ಯನ್​ ಗೇಮ್ಸ್​ನಲ್ಲಿ(Asian Games 2023) ರೋಹನ್‌ ಬೋಪಣ್ಣ(Rohan Bopanna) ಮತ್ತು ರುತುಜಾ ಭೋಸಲೆ(Rutuja Bhosale) ಮಿಕ್ಸೆಡ್‌ ಡಬಲ್ಸ್ ಟೆನಿಸ್​​ನಲ್ಲಿ ಚಿನ್ನದ ಪದಕ ಗೆದ್ದ ಸಾಧನೆ ಮಾಡಿದ್ದಾರೆ. ಇದು ಶನಿವಾರ ಭಾರತಕ್ಕೆ ಒಲಿದ ದ್ವಿತೀಯ ಪದಕವಾಗಿದೆ. ಇದಕ್ಕೂ ಮುನ್ನ ನಡೆದಿದ್ದ 10 ಮೀ. ಏರ್​ ಪಿಸ್ತೂಲ್​ ಮಿಶ್ರ ತಂಡ ಬೆಳ್ಳಿ ಪದಕ ಜಯಿಸಿತ್ತು.

ಶನಿವಾರ ನಡೆದ ಫೈನಲ್​ನಲ್ಲಿ ತೈವಾನ್​ನ ಒಂಬತ್ತನೇ ಶ್ರೇಯಾಂಕದ ತ್ಸುಂಗ್-ಹಾವೊ ಹುವಾಂಗ್ ಮತ್ತು ಎನ್-ಶುವೊ ಲಿಯಾಂಗ್ ವಿರುದ್ಧ 2-6, 6-3, 10-4 ಅಂತರದಿಂದ ಗೆದ್ದು ಚಿನ್ನದ ಪದಕ ಗೆದ್ದು ಮೆರೆದಾಡಿದರು. ಸೆಮಿಫೈನಲ್​ನಲ್ಲಿ ಬೋಪಣ್ಣ ಮತ್ತು ರುತುಜಾ ಜೋಡಿ ಚೈನಿಸ್​ ತೈಪೆಯ ಚಾನ್​ ಚಿಂಗ್​-ಯು ಸ್ಯು ವಿರುದ್ಧ 6-1, 3-6,(10-4) ಅಂತರದಲ್ಲಿ ಗೆದ್ದು ಫೈನಲ್​ ಪ್ರವೇಶ ಪಡೆದಿತ್ತು.

ಮೊದಲ ಸುತ್ತಿನಲ್ಲಿ ಸೋಲು

ಮೊದಲ ಸೆಟ್ ನಲ್ಲಿ 2-6 ರಲ್ಲಿ ಸೋಲು ಕಂಡ ಭಾರತೀಯ ಜೋಡಿ ಎರಡನೇ ಸೆಟ್​ನಲ್ಲಿ ಆಕ್ರಮಣ ಆಟಕ್ಕೆ ಒತ್ತು ನೀಡಿ ಪಂದ್ಯದಲ್ಲಿ ಹಿಡಿತ ಸಾಧಿಸಿತು. ನಿರ್ಣಾಯಕ ಸೆಟ್​ನಲ್ಲಿ ಟೈ-ಬ್ರೇಕರ್‌ಗೆ ಸಾಗಿದ ಪಂದ್ಯವನ್ನು 10-4 ಅಂತರದಲ್ಲಿ ಗೆಲ್ಲುವಲ್ಲಿ ಭಾರತೀಯ ಜೋಡಿ ಯಶಸ್ವಿಯಾಯಿತು. ಈ ಪಂದ್ಯ 1 ಗಂಟೆ 14 ನಿಮಿಷಗಳಲ್ಲಿ ಅಂತ್ಯ ಕಂಡಿತು. ಈ ಪದಕ ಗೆಲ್ಲುವ ಮೂಲಕ ಕಳೆದ 6 ಏಷ್ಯಡ್​ ಟೂರ್ನಿಯಲ್ಲಿ ಟೆನಿಸ್​ನಲ್ಲಿ ಭಾರತ ಕನಿಷ್ಠ ಒಂದು ಚಿನ್ನವನ್ನು ಗೆಲ್ಲುತ್ತಿದ್ದ ದಾಖಲೆಯನ್ನು ಮುಂದುವರಿಸಿತು.

43 ವರ್ಷದ ಕೊಡಗಿನವರಾದ ರೋಹನ್ ಬೋಪಣ್ಣ ಅವರು ಕಳೆದ ತಿಂಗಳು ನಡೆದಿದ್ದ ಯುಎಸ್ ಓಪನ್‌ 2023ರ(US Open 2023) ಪುರುಷರ ಡಬಲ್ಸ್ ವಿಭಾಗದಲ್ಲಿ ರನ್ನರ್​ಅಪ್​ ಸ್ಥಾನ ಪಡೆದಿದ್ದರು. ಇದೇ ವರ್ಷ ದೋಹಾ ಮತ್ತು ಇಂಡಿಯನ್ ವೆಲ್ಸ್‌ನಲ್ಲಿ ಪ್ರಶಸ್ತಿ ಗೆದ್ದಿದ್ದರು.  

ಶೂಟಿಂಗ್​ನಲ್ಲಿ ಬೆಳ್ಳಿ

ಶನಿವಾರ ಬೆಳಗ್ಗೆ ನಡೆದ 10 ಮೀ. ಏರ್​ ಪಿಸ್ತೂಲ್​ ಮಿಶ್ರ ತಂಡ ಸ್ಪರ್ಧೆಯಲ್ಲಿ ಕರ್ನಾಟಕದ ದಿವ್ಯಾ ಟಿ.ಎಸ್.(Divya TS ) ಮತ್ತು ಅವರ ಜತೆಗಾರ ಸರಬ್​ಜೋತ್​ ಸಿಂಗ್(Sarabjot Singh)​ ಬೆಳ್ಳಿ ಪದಕ ತಮ್ಮದಾಗಿಸಿಕೊಂಡಿದ್ದರು. ಶುಕ್ರವಾರ ಶೂಟಿಂಗ್​ನಲ್ಲಿ 2 ಚಿನ್ನ ಹಾಗೂ 3 ಬೆಳ್ಳಿ ಪದಕ ಒಲಿದಿತ್ತು.

ಇದನ್ನೂ ಓದಿ Asian Games 2023: 10 ಮೀ. ಏರ್​ ಪಿಸ್ತೂಲ್​ ಮಿಶ್ರ ತಂಡಕ್ಕೆ ಒಲಿದ ಬೆಳ್ಳಿ ಪದಕ

ಫೈನಲ್​ನಲ್ಲಿ ಚೀನಾ ವಿರುದ್ಧ ಉತ್ತಮ ಪ್ರದಶನ ತೋರಿದ ಭಾರತೀಯ ಜೋಡಿ ಕೇವಲ ನಾಲ್ಕು ಅಂಕಗಳ ಅಂತರದಿಂದ ಚಿನ್ನದ ಪದಕ ತಪ್ಪಿಸಿಕೊಂಡರು. 14-16ರಲ್ಲಿ ಸೋಲು ಕಂಡರು. ಶೂಟಿಂಗ್‌ನಲ್ಲಿ ಈ ಬಾರಿ ಭಾರತ 6 ಚಿನ್ನ, 8 ಬೆಳ್ಳಿ ಹಾಗೂ 5 ಕಂಚು ಸೇರಿ 19 ಪದಕ ಗೆದ್ದಿದೆ. ಇದು ಈ ಕೂಟದ ಇತಿಹಾಸದಲ್ಲೇ ಭಾರತದ ಶ್ರೇಷ್ಠ ಸಾಧನೆಯಾಗಿದೆ. 2006ರ ದೋಹಾ ಆವೃತ್ತಿಯಲ್ಲಿ ಭಾರತ 14 ಪದಕ ಗೆದ್ದಿದ್ದು, ಭಾರತದ ಈವರೆಗಿನ ಶ್ರೇಷ್ಠ ಪ್ರದರ್ಶನವಾಗಿತ್ತು. ಆದರೆ ಈ ಬಾರಿ ಇದನ್ನು ಮೀರಿ ನಿಂತಿದೆ. ಅಲ್ಲದೆ ಮುಂದಿನ ವರ್ಷ ಪ್ಯಾರಿಸ್​ನಲ್ಲಿ ನಡೆಯುವ ಒಲಿಂಪಿಕ್ಸ್​ನಲ್ಲಿ ಭಾರತಕ್ಕೆ ಪದಕ ಬರವಸೆಯನ್ನು ಮೂಡಿಸಿದೆ.

ಒಲಿಂಪಿಕ್ಸ್​ ಅರ್ಹತೆ ಪಡೆದ ನಿಖತ್​ ಜರೀನ್​

ಎರಡು ಬಾರಿಯ ವಿಶ್ವ ಚಾಂಪಿಯನ್‌ ಭಾರತದ ಸ್ಟಾರ್​ ಮಹಿಳಾ ಬಾಕ್ಸರ್​ ನಿಖತ್‌ ಜರೀನ್‌ ಅವರು ಶುಕ್ರವಾರ 50 ಕೆ.ಜಿ. ವಿಭಾಗದ ಕ್ವಾರ್ಟರ್‌ ಫೈನಲ್‌ನಲ್ಲಿ ಗೆದ್ದು ಸೆಮಿಫೈನಲ್​ ಪ್ರವೇಶ ಪಡೆಯುವ ಜತೆಗೆ ಒಲಿಂಪಿಕ್ಸ್​ ಅರ್ಹತೆಯನ್ನು ಪಡೆದಿದ್ದರು. ಜತೆಗೆ 2024ರ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಭಾರತದ ಮೊದಲ ಬಾಕ್ಸರ್‌ ಎನ್ನುವ ಹಿರಿಮೆಗೂ ಪಾತ್ರರಾಗಿದ್ದರು. ಕ್ವಾರ್ಟರ್​ ಫೈನಲ್​ನಲ್ಲಿ ಜರೀನ್​ ಅವರು ಬಲಿಷ್ಠ ಪಂತ್​ಗಳ ಮೂಲಕ ಜೊರ್ಡನ್‌ನ ನಸ್ಸರ್‌ ಹನನ್‌ ವಿರುದ್ಧ ಕೇವಲ 2 ನಿಮಿಷಗಳಲ್ಲಿ ಗೆಲುವು ಸಾಧಿಸಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

RCB vs CSK: ವಾಹನ ಸವಾರರೇ ಗಮನಿಸಿ, ನಾಳೆ ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಮುತ್ತ ಸಂಚಾರ ಬದಲಾವಣೆ

RCB vs CSK: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಅತ್ಯಾಧುನಿಕ ಸಬ್ ಏರ್ ಸಿಸ್ಟಂ ಹೊಂದಿರುವ ಕಾರಣ. ಮಳೆ ಬಂದರೂ ಶೀಘ್ರವಾಗಿ ಮೈದಾನದಲ್ಲಿನ ನೀರನ್ನು ಹೀರಿಕೊಳ್ಳುತ್ತದೆ. ಹೀಗಾಗಿ ಎಷ್ಟೇ ಮಳೆಯಾದರೂ ಕೆಲವೇ ನಿಮಿಷಗಳಲ್ಲಿ ಮೈದಾನವನ್ನು ಸಜ್ಜುಗೊಳಿಸಬಹುದು. ಈ ಕಾರಣದಿಂದಾಗಿ ಬೆಂಗಳೂರಿನಲ್ಲಿ ಮಳೆ ಬಂದರೂ ಸೀಮಿತ ಓವರ್​ಗಳ ಪಂದ್ಯವನ್ನು ನಿರೀಕ್ಷಿಸಬಹುದು.

VISTARANEWS.COM


on

RCB vs CSK
Koo

ಬೆಂಗಳೂರು: ಕನ್ನಡಿಗರ ನೆಚ್ಚಿನ ತಂಡವಾದ ಆರ್​ಸಿಬಿ(Royal Challengers Bengaluru) ನಾಳೆ (ಮೇ​ 18) ತವರು ಮೈದಾನ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ (chinnaswamy stadium) ಹಾಲಿ ಚಾಂಪಿಯನ್​ ಚೆನ್ನೈ ಸೂಪರ್​ ಕಿಂಗ್ಸ್(Chennai Super Kings)​ ವಿರುದ್ಧ ಕಣಕ್ಕಿಳಿಯಲಿದೆ. ಕ್ರಿಕೆಟ್ ಪಂದ್ಯಾವಳಿಯ ಹಿನ್ನೆಲೆಯಲ್ಲಿ ಸುಗಮ ಸಂಚಾರಕ್ಕಾಗಿ ಬೆಂಗಳೂರು ಟ್ರಾಫಿಕ್ ಪೊಲೀಸರು ಸೂಕ್ತ ಸಂಚಾರ ವ್ಯವಸ್ಥೆಯನ್ನು ಮಾಡಿಲಾಗಿದ್ದು ಚಿನ್ನಸ್ವಾಮಿ ಕ್ರೀಡಾಂಗಣ ಸುತ್ತಮುತ್ತಲಿನ ರಸ್ತೆಗಳಲ್ಲಿ ಸಂಪೂರ್ಣವಾಗಿ ಪಾರ್ಕಿಂಗ್ ನಿಷೇಧ ಮಾಡಲಾಗಿದೆ. ಶನಿವಾರ ಮಧ್ಯಾಹ್ನ 3.00 ಗಂಟೆಯಿಂದ ರಾತ್ರಿ 11.00ರವರೆಗೆ ಈ ವ್ಯತ್ಯಾಸಗಳು ಜಾರಿಯಲ್ಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಕೋರಲಾಗಿದೆ.

ಇಲ್ಲಿ ಪಾರ್ಕಿಂಗ್​ ನಿಷೇಧ


ನಗರದ ಕ್ರೀನ್ಸ್ ರಸ್ತೆ, ಎಂ.ಜಿ ರಸ್ತೆ, ಎಂ.ಜಿ ರಸ್ತೆ ಯಿಂದ ಕಬ್ಬನ್ ರಸ್ತೆ, ರಾಜಭವನ ರಸ್ತೆ, ಸೆಂಟ್ರಲ್ ಸ್ಟ್ರೀಟ್ ರಸ್ತೆ, ಕಬ್ಬನ್‌ರಸ್ತೆ, ಸೆಂಟ್ ಮಾರ್ಕ್ಸ್ ರಸ್ತೆ, ಮ್ಯೂಸಿಯಂ ರಸ್ತೆ, ಕಸ್ತೂರಿ ಬಾ ರಸ್ತೆ, ಅಂಬೇಡ್ಕರ್ ವೀದಿ ರಸ್ತೆ, ಟ್ರಿನಿಟಿ ವೃತ್ತ, ಲ್ಯಾವೆಲ್ಲೆ ರಸ್ತೆ, ವಿಠಲ್ ಮಲ್ಯ ರಸ್ತೆ, ಕಿಂಗ್ಸ್ ರಸ್ತೆ & ನೃಪತುಂಗ ರಸ್ತೆಯಲ್ಲಿ ಪಾರ್ಕಿಂಗ್​ ನಿಷೇಧ ಮಾಡಲಾಗಿದೆ.

ಎಲ್ಲಿ ಪಾರ್ಕಿಂಗ್​ ಮಾಡಬಹುದು?


ಸೆಂಟ್ ಜೋಸೆಫ್ ಇಂಡಿಯನ್ ಸ್ಕೂಲ್ ಮೈದಾನ, ಬಿ.ಎಂ.ಟಿ.ಸಿ ಬಸ್ ನಿಲ್ದಾಣದ ಮೊದಲನೆ ಮಹಡಿ & ಓಲ್ಸ್ ಕೆ.ಜಿ.ಐ.ಡಿ ಬಿಲ್ಡಿಂಗ್, ಕಿಂಗ್ಸ್ ರಸ್ತೆ, (ಕಬ್ಬನ್‌ಪಾರ್ಕ್ ಒಳಭಾಗ) ಈ ಪ್ರದೇಶದಲ್ಲಿ ಸಾರ್ವಜನಿಕ ವಾಹನಗಳ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ.

ವಿಶೇಷ ಮೆಟ್ರೋ ಸೇವೆ

ಕ್ರಿಕೆಟ್‌ ಪಂದ್ಯ ನೋಡಲು ಬರುವ ಕ್ರಿಕೆಟ್‌ ಪ್ರೇಮಿಗಳಿಗಾಗಿ ಮೆಟ್ರೋ ರೈಲು ವಿಶೇಷ ಓಡಾಟಕ್ಕೆ ಅನುಮತಿ ನೀಡಿವೆ. ಹೀಗಾಗಿ ಕ್ರಿಕೆಟ್‌ ನೋಡಲು ಬರುವವರು, ಕ್ರೀಡಾಂಗಣ ತಲುಪುವ ವಿಚಾರದಲ್ಲಿ ಯಾವುದೇ ಚಿಂತೆ ಮಾಡಬೇಕಾಗಿಲ್ಲ. ಪಂದ್ಯ ವೀಕ್ಷಣೆಗಾಗಿ ಬರುವ ಪ್ರಯಾಣಿಕರ ಅನುಕೂಲಕ್ಕಾಗಿ ಎಲ್ಲಾ ನಾಲ್ಕು ಟರ್ಮಿನಲ್ ಮೆಟ್ರೋ ನಿಲ್ದಾಣಗಳಿಂದ ಕೊನೆಯ ರೈಲು ಸೇವೆಗಳನ್ನು ರಾತ್ರಿ 11.30ಕ್ಕೆ ವಿಸ್ತರಿಸಲಾಗಿದೆ.

ಇದನ್ನೂ ಓದಿ IPL Ticket Scam: ಆನ್​ಲೈನ್​ ಟಿಕೆಟ್​ ಖರೀದಿಸಲು ಹೋಗಿ 3 ಲಕ್ಷ ರೂ ಕಳೆದುಕೊಂಡ ಆರ್​ಸಿಬಿ ಅಭಿಮಾನಿ

ಎಲ್ಲಾ ಮೆಟ್ರೋ ನಿಲ್ದಾಣಗಳಲ್ಲಿ ಮಧ್ಯಾಹ್ನ 2 ಗಂಟೆಯಿಂದ ರಿಟರ್ನ್ ಜರ್ನಿ ಪೇಪರ್ ಟಿಕೆಟ್‌ಗಳನ್ನು 50 ರೂ.ಗೆ ಮಾರಾಟ ಮಾಡಲಾಗುತ್ತಿದೆ. ಇದು ಕಬ್ಬನ್ ಪಾರ್ಕ್ ಮತ್ತು ಎಂ.ಜಿ ರಸ್ತೆ ಮೆಟ್ರೋ ನಿಲ್ದಾಣಗಳಿಂದ ಯಾವುದೇ ಇತರ ಮೆಟ್ರೋ ನಿಲ್ದಾಣಕ್ಕೆ ಒಂದೇ ಪ್ರಯಾಣಕ್ಕೆ ವಿತರಣೆಯ ದಿನದಂದು ರಾತ್ರಿ 8.00 ರಿಂದ ದಿನದ ಸೇವೆಗಳು ಕೊನೆಗೊಳ್ಳುವವರೆಗೆ ಮಾನ್ಯವಾಗಿರುತ್ತದೆ. ಈ ನಿಲ್ದಾಣಗಳಲ್ಲಿ ಟೋಕನ್ ಲಭ್ಯವಿರುವುದಿಲ್ಲ.

ಎಂದಿನಂತೆ, ಕ್ಯೂಆರ್‌ ( QR) ಕೋಡ್ ಟಿಕೆಟ್‌ಗಳು, ಸ್ಮಾರ್ಟ್ ಕಾರ್ಡ್‌ಗಳು ಮತ್ತು ಎನ್‌ಸಿಎಂಸಿ (NCMC) ಕಾರ್ಡ್‌ಗಳನ್ನು ಸಹ ಬಳಸಬಹುದು. ವಾಟ್ಸ್ ಆಪ್/ನಮ್ಮ ಮೆಟ್ರೋ ಆ್ಯಪ್/ಪೇ ಟಿಎಂ ಮೂಲಕ ಕ್ರಿಕೆಟ್ ಪಂದ್ಯದ ಆರಂಭಕ್ಕೆ ಮುಂಚಿತವಾಗಿ QR ಟಿಕೆಟ್‌ಗಳನ್ನು ಖರೀದಿಸಲು ಸಾರ್ವಜನಿಕರಿಗೆ ಸೂಚಿಸಲಾಗಿದೆ. ಕಬ್ಬನ್ ಪಾರ್ಕ್ ಮತ್ತು ಎಂಜಿ ರೋಡ್ ಮೆಟ್ರೋ ನಿಲ್ದಾಣಗಳಲ್ಲಿ ಟಿಕೆಟ್ ಖರೀದಿಸಲು ಟಿಕೆಟ್ ಕೌಂಟರ್‌ಗಳಲ್ಲಿ ಜನಸಂದಣಿಯನ್ನು ತಪ್ಪಿಸಲು ಈ ವ್ಯವಸ್ಥೆ ಮಾಡಲಾಗಿದೆ.

Continue Reading

ಕ್ರೀಡೆ

RCB vs CSK: ನಾಳಿನ ಪಂದ್ಯಕ್ಕೆ ಮಳೆ ಬಾರದಂತೆ ಕೃಷ್ಣ ನಾಮ ಜಪಿಸಿದ ಆರ್​ಸಿಬಿ ಆಟಗಾರರು; ವಿಡಿಯೊ ವೈರಲ್​

RCB vs CSK: ಹವಾಮಾನ ಇಲಾಖೆ ಪಂದ್ಯ ನಡೆಯುವ ಶನಿವಾರದಂದು ಶೇ.70ರಷ್ಟು ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ಆರ್​ಸಿಬಿ(RCB vs CSK) ಆಟಗಾರರು ಪಂದ್ಯದ ವೇಳೆ ಮಳೆ ಬಾರದಂತೆ ಕೃಷ್ಣ ನಾಮ ಜಪಿಸಿದ ವಿಡಿಯೊವೊಂದು ಭಾರೀ ವೈರಲ್​(viral video) ಆಗಿದೆ.

VISTARANEWS.COM


on

RCB vs CSK
Koo

ಬೆಂಗಳೂರು: ಹಾಲಿ ಚಾಂಪಿಯನ್​ ಚೆನ್ನೈ ಸೂಪರ್​ ಕಿಂಗ್ಸ್​(Chennai Super Kings) ವಿರುದ್ಧ ನಾಳೆ ನಡೆಯುವ ಮಹತ್ವದ ಪಂದ್ಯದಲ್ಲಿ ಆರ್​ಸಿಬಿ(Royal Challengers Bengaluru) ಕಣಕ್ಕಿಳಿಯಲು ಸಜ್ಜಾಗಿ ನಿಂತಿದ್ದರೂ ಕೂಡ ಪಂದ್ಯಕ್ಕೆ ಮಳೆ ಅನುವು ಮಾಡಿಕೊಡುವುದು ಬಹುತೇಖ ಅನುಮಾನ ಎನ್ನುವಂತಿದೆ. ಶುಕ್ರವಾರವೇ ಬೆಂಗಳೂರಿನಲ್ಲಿ ಭಾರೀ ಮಳೆಯಾಗಿದೆ. ಇದೀಗ ಆರ್​ಸಿಬಿ(RCB vs CSK) ಆಟಗಾರರು ಪಂದ್ಯದ ವೇಳೆ ಮಳೆ ಬಾರದಂತೆ ಕೃಷ್ಣ ನಾಮ ಜಪಿಸಿದ ವಿಡಿಯೊವೊಂದು ಭಾರೀ ವೈರಲ್​(viral video) ಆಗಿದೆ.

ಹವಾಮಾನ ಇಲಾಖೆ ಪಂದ್ಯ ನಡೆಯುವ ಶನಿವಾರದಂದು ಶೇ.70ರಷ್ಟು ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ಪ್ಲೇ ಆಫ್​ ಪ್ರವೇಶ ಪಡೆಯಬೇಕಿದ್ದರೆ ಆರ್​ಸಿಬಿಗೆ ಈ ಪಂದ್ಯದಲ್ಲಿ ಗೆಲುವು ಅನಿವಾರ್ಯ ಪಂದ್ಯ ರದ್ದಾದರೆ ಟೂರ್ನಿಯಿಂದ ಅಧಿಕೃತವಾಗಿ ಹೊರಬೀಳಲಿದೆ. ಹೇಗಾದರೂ ಪಂದ್ಯದ ದಿನ ಮಳೆ ಬಾರದಿರಲಿ ಎಂದು ಆರ್​ಸಿಬಿ ಆಟಗಾರರು ಡ್ರೆಸಿಂಗ್​ ರೋಮ್​ನಲ್ಲಿ ಹರೇ ರಾಮ ಹರೇ ರಾಮ, ರಾಮ ರಾಮ ಹರೇ ಹರೇ, ಹರೇ ಕೃಷ್ಣ ಹರೇ ಕೃಷ್ಣ, ಕೃಷ್ಣ ಕೃಷ್ಣ ಹರೇ ಹರೇ ಎಂದು ಕೃಷ್ಣ ನಾಮ ಜಪಿಸಿದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿದೆ.

ಅಸಲಿಗೆ ಆರ್​ಸಿಬಿ ಆಟಗಾರರು ಮಳೆ ಬಾರದಂತೆ ಕೃಷ್ಣ ನಾಮ ಜಪಿಸಿಲ್ಲ. ಬದಲಾಗಿ ನೆಟ್ಟಿಗರು ಈ ವಿಡಿಯೊವನ್ನು ಎಡಿಟ್​ ಮಾಡಿ ವೈರಲ್​ ಮಾಡಿದ್ದಾರೆ. ಪ್ರತಿ ಪಂದ್ಯ ಗೆದ್ದಾಗ ಆರ್​ಸಿಬಿ ಡ್ರೆಸ್ಸಿಂಗ್​ ರೂಮ್​ನಲ್ಲಿ ಸಂಭ್ರಮಿಸುತ್ತಾರೆ. ಈ ವಿಡಿಯೊಗೆ ಕೃಷ್ಣ ನಾಮ ಜಪವನ್ನು ಮತ್ತು ಹವಾಮಾನ ಇಲಾಖೆಯ ವರದಿಯ ಫೋಟೊವನ್ನು ಎಡಿಟ್​​ ಮಾಡಲಾಗಿದೆ.

ಇದನ್ನೂ ಓದಿ RCB vs CSK: ಅದೇ ದಿನ, ಅದೇ ವಾರ, ಮಳೆ ಭೀತಿ; ಇದೆಂಥಾ ಕಾಕತಾಳೀಯ! ಆರ್​ಸಿಬಿಗೆ ಇದು ಅದೃಷ್ಟವಾ?

1. ಪಂದ್ಯದ ಸಮಯದಲ್ಲಿ ಬೆಂಗಳೂರಿನಲ್ಲಿ ಭಾರೀ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಈಗಾಗಲೇ ಎಚ್ಚರಿಕೆ ನೀಡಿದೆ. ಒಂದೊಮ್ಮೆ ಪಂದ್ಯ ಮಳೆಯಿಂದ ರದ್ದಾದರೆ ಉಭಯ ತಂಡಗಳಿಗೂ ತಲಾ ಒಂದೊಂದು ಅಂಕ ನೀಡಲಾಗುತ್ತದೆ.

2. ಆರ್​ಸಿಬಿ-ಸಿಎಸ್​ಕೆ​ ನಡುವಣ ಪಂದ್ಯದ ಅಂತಿಮ 5 ಓವರ್​ಗಳ ಪಂದ್ಯದ ಆಯೋಜನೆಗೆ ಕಟ್ ಆಫ್ ಟೈಮ್ 10:56 PM. ಈ ವೇಳೆಗೆ ಪಂದ್ಯ ಆಯೋಜಿಸುವಂತಹ ಪರಿಸ್ಥಿತಿ ಇರದಿದ್ದರೆ ಪಂದ್ಯವನ್ನು ರದ್ದು ಎಂದು ನಿರ್ಧರಿಸಲಾಗುತ್ತದೆ.

3. ಒಂದು ವೇಳೆ ಮಳೆ ಬಂದು, ಉದಾಹರಣೆಗೆ ನಿಗದಿತ 10 ಓವರ್​ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್​ ನಡೆಸಿದ ತಂಡ 10 ಓವರ್ ಆಡಿ, 2ನೇ ಇನಿಂಗ್ಸ್​ನಲ್ಲಿ ಬ್ಯಾಟಿಂಗ್ ಮಾಡಿದ ತಂಡ 5 ಓವರ್​ಗಳನ್ನು ಪೂರ್ತಿಗೊಳಿಸಿದರೆ ಮಾತ್ರ ಆಗ ಡಕ್​ವರ್ತ್ ಲೂಯಿಸ್ ನಿಯಮ ಅನ್ವಯವಾಗುತ್ತದೆ.

4. ಪಂದ್ಯ ಆರಂಭಗೊಂಡ ಬಳಿಕ ಮಳೆ ಬಂದರೆ ಡಕ್​ವರ್ತ್ ಲೂಯಿಸ್ ನಿಯಮದ ಪ್ರಕಾರ ಓವರ್ ಕಡಿತದೊಂದಿಗೆ ಟಾರ್ಗೆಟ್ ನೀಡಲಾಗುತ್ತದೆ. ಈ ಮೂಲಕ ಪಂದ್ಯವನ್ನು ಪೂರ್ಣಗೊಳಿಸಲಾಗುತ್ತದೆ.

5. ಒಂದೊಮ್ಮೆ ಮಳೆಯಿಂದಾಗಿ ಪಂದ್ಯ ರದ್ದಾದರೆ ಚೆನ್ನೈ ತಂಡ ಅಧಿಕೃತವಾಗಿ ಪ್ಲೇಆಫ್​ಗೆ ಎಂಟ್ರಿ ಕೊಡಲಿದೆ. ಏಕೆಂದರೆ ಈಗಾಗಲೇ ಚೆನ್ನೈ 14 ಅಂಕಗಳನ್ನು ಹೊಂದಿದ್ದು ಪಂದ್ಯ ರದ್ದಾದ ಕಾರಣ ಸಿಗುವ ಒಂದು ಅಂಕದಿಂದ ಒಟ್ಟು ಅಂಕ 15ಕ್ಕೇ ಏರಿಕೆಯಾಗುತ್ತದೆ. ಇನ್ನುಳಿದ ಯಾವುದೇ ತಂಡಕ್ಕೂ ಈ ಮೊತ್ತವನ್ನು ಮೀರಲು ಸಾಧ್ಯವಾಗುವುದಿಲ್ಲ. ಹೀಗಾಗಿ ಚೆನ್ನೈಗೆ ಮಳೆ ವರದಾನವಾಗಲಿದೆ. ಆರ್​ಸಿಬಿ ತಂಡವು 13 ಅಂಕಗಳೊಂದಿಗೆ ಐಪಿಎಲ್​ನಿಂದ ಹೊರಬೀಳಲಿದೆ.

Continue Reading

ಕ್ರೀಡೆ

RCB vs CSK: ಆರ್​ಸಿಬಿ-ಚೆನ್ನೈ ಪಂದ್ಯಕ್ಕೆ ಮಳೆ ನಿಯಮ ಹೇಗಿದೆ?

RCB vs CSK: ಆರ್​ಸಿಬಿ-ಸಿಎಸ್​ಕೆ​ ನಡುವಣ ಪಂದ್ಯದ 5 ಓವರ್​ಗಳ ಪಂದ್ಯದ ಆಯೋಜನೆಗೆ ಕಟ್ ಆಫ್ ಟೈಮ್ 10:56 PM. ಈ ವೇಳೆಗೆ ಪಂದ್ಯ ಆಯೋಜಿಸುವಂತಹ ಪರಿಸ್ಥಿತಿ ಇರದಿದ್ದರೆ ಪಂದ್ಯವನ್ನು ರದ್ದು ಎಂದು ನಿರ್ಧರಿಸಲಾಗುತ್ತದೆ.

VISTARANEWS.COM


on

RCB vs CSK
Koo

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಚೆನ್ನೈ ಸೂಪರ್ ಕಿಂಗ್ಸ್ (CSK) ಮೇ 18 ರ ಶನಿವಾರ ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ (IPL 2024) 17ನೇ ಆವೃತ್ತಿಯ ಐಪಿಎಲ್​ನ ತಮ್ಮ ಅತಿದೊಡ್ಡ ಪಂದ್ಯವನ್ನಾಡಲು ಸಜ್ಜಾಗಿವೆ. ಎರಡೂ ತಂಡಗಳಿಗೂ ಪ್ಲೇಆಫ್ ಅರ್ಹತೆ ಪಡೆಯಲು ಈ ಪಂದ್ಯದಲ್ಲಿ ಗೆಲುವು ಅತ್ಯಗತ್ಯ. ಆದರೆ, ಪಂದ್ಯಕ್ಕೆ ಮಳೆ ಭೀತಿ(rcb vs csk match weather) ಎದುರಾಗಿರುವುದು ಇತ್ತಂಡಗಳಿಗೆ ಆತಂಕ ಪಡುವಂತೆ ಮಾಡಿದೆ. ಈ ಪಂದ್ಯದ ಮಳೆ ನಿಯಮ ಹೇಗಿದೆ ಎನ್ನುವ ಮಾಹಿತಿ ಇಂತಿದೆ.

1. ಪಂದ್ಯದ ಸಮಯದಲ್ಲಿ ಬೆಂಗಳೂರಿನಲ್ಲಿ ಭಾರೀ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಈಗಾಗಲೇ ಎಚ್ಚರಿಕೆ ನೀಡಿದೆ. ಒಂದೊಮ್ಮೆ ಪಂದ್ಯ ಮಳೆಯಿಂದ ರದ್ದಾದರೆ ಉಭಯ ತಂಡಗಳಿಗೂ ತಲಾ ಒಂದೊಂದು ಅಂಕ ನೀಡಲಾಗುತ್ತದೆ.

2. ಆರ್​ಸಿಬಿ-ಸಿಎಸ್​ಕೆ​ ನಡುವಣ ಪಂದ್ಯದ ಅಂತಿಮ 5 ಓವರ್​ಗಳ ಪಂದ್ಯದ ಆಯೋಜನೆಗೆ ಕಟ್ ಆಫ್ ಟೈಮ್ 10:56 PM. ಈ ವೇಳೆಗೆ ಪಂದ್ಯ ಆಯೋಜಿಸುವಂತಹ ಪರಿಸ್ಥಿತಿ ಇರದಿದ್ದರೆ ಪಂದ್ಯವನ್ನು ರದ್ದು ಎಂದು ನಿರ್ಧರಿಸಲಾಗುತ್ತದೆ.

3. ಒಂದು ವೇಳೆ ಮಳೆ ಬಂದು ಉದಾಹರಣೆಗೆ ನಿಗದಿತ 10 ಓವರ್​ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್​ ನಡೆಸಿದ ತಂಡ 10 ಓವರ್ ಆಡಿ, 2ನೇ ಇನಿಂಗ್ಸ್​ನಲ್ಲಿ ಬ್ಯಾಟಿಂಗ್ ಮಾಡಿದ ತಂಡ 5 ಓವರ್​ಗಳನ್ನು ಪೂರ್ತಿಗೊಳಿಸಿದರೆ ಮಾತ್ರ ಆಗ ಡಕ್​ವರ್ತ್ ಲೂಯಿಸ್ ನಿಯಮ ಅನ್ವಯವಾಗುತ್ತದೆ.

4. ಪಂದ್ಯ ಆರಂಭಗೊಂಡ ಬಳಿಕ ಮಳೆ ಬಂದರೆ ಡಕ್​ವರ್ತ್ ಲೂಯಿಸ್ ನಿಯಮದ ಪ್ರಕಾರ ಓವರ್ ಕಡಿತದೊಂದಿಗೆ ಟಾರ್ಗೆಟ್ ನೀಡಲಾಗುತ್ತದೆ. ಈ ಮೂಲಕ ಪಂದ್ಯವನ್ನು ಪೂರ್ಣಗೊಳಿಸಲಾಗುತ್ತದೆ.

ಇದನ್ನೂ ಓದಿ IPL Ticket Scam: ಆನ್​ಲೈನ್​ ಟಿಕೆಟ್​ ಖರೀದಿಸಲು ಹೋಗಿ 3 ಲಕ್ಷ ರೂ ಕಳೆದುಕೊಂಡ ಆರ್​ಸಿಬಿ ಅಭಿಮಾನಿ

5. ಒಂದೊಮ್ಮೆ ಮಳೆಯಿಂದಾಗಿ ಪಂದ್ಯ ರದ್ದಾದರೆ ಚೆನ್ನೈ ತಂಡ ಅಧಿಕೃತವಾಗಿ ಪ್ಲೇಆಫ್​ಗೆ ಎಂಟ್ರಿ ಕೊಡಲಿದೆ. ಏಕೆಂದರೆ ಈಗಾಗಲೇ ಚೆನ್ನೈ 14 ಅಂಕಗಳನ್ನು ಹೊಂದಿದ್ದು ಪಂದ್ಯ ರದ್ದಾದ ಕಾರಣ ಸಿಗುವ ಒಂದು ಅಂಕದಿಂದ ಒಟ್ಟು ಅಂಕ 15ಕ್ಕೇ ಏರಿಕೆಯಾಗುತ್ತದೆ. ಇನ್ನುಳಿದ ಯಾವುದೇ ತಂಡಕ್ಕೂ ಈ ಮೊತ್ತವನ್ನು ಮೀರಲು ಸಾಧ್ಯವಾಗುವುದಿಲ್ಲ. ಹೀಗಾಗಿ ಚೆನ್ನೈಗೆ ಮಳೆ ವರದಾನವಾಗಲಿದೆ. ಆರ್​ಸಿಬಿ ತಂಡವು 13 ಅಂಕಗಳೊಂದಿಗೆ ಐಪಿಎಲ್​ನಿಂದ ಹೊರಬೀಳಲಿದೆ.

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಅತ್ಯಾಧುನಿಕ ಸಬ್ ಏರ್ ಸಿಸ್ಟಂ ಹೊಂದಿರುವ ಕಾರಣ. ಮಳೆ ಬಂದರೂ ಶೀಘ್ರವಾಗಿ ಮೈದಾನದಲ್ಲಿನ ನೀರನ್ನು ಹೀರಿಕೊಳ್ಳುತ್ತದೆ. ಹೀಗಾಗಿ ಎಷ್ಟೇ ಮಳೆಯಾದರೂ ಕೆಲವೇ ನಿಮಿಷಗಳಲ್ಲಿ ಮೈದಾನವನ್ನು ಸಜ್ಜುಗೊಳಿಸಬಹುದು. ಈ ಕಾರಣದಿಂದಾಗಿ ಬೆಂಗಳೂರಿನಲ್ಲಿ ಮಳೆ ಬಂದರೂ ಸೀಮಿತ ಓವರ್​ಗಳ ಪಂದ್ಯವನ್ನು ನಿರೀಕ್ಷಿಸಬಹುದು.

ಒಂದೊಮ್ಮೆ ಆರ್​ಸಿಬಿ ತಂಡ ಚೆನ್ನೈ ವಿರುದ್ಧ ಗೆದ್ದರೂ ಕೂಡ ಪ್ಲೇ ಆಫ್​ ಟಿಕೆಟ್​ ಖಚಿತವಾಗುವುದಿಲ್ಲ. ರನ್‌ರೇಟ್‌ ಲೆಕ್ಕಾಚಾರದಲ್ಲಿ ಚೆನ್ನೈಯನ್ನು ಆರ್‌ಸಿಬಿ ಕನಿಷ್ಠ 18 ರನ್ನುಗಳಿಂದ ಮಣಿಸಬೇಕಿದೆ. ಚೇಸಿಂಗ್‌ ಲೆಕ್ಕಾಚಾರ ಬೇರೆಯೇ ಇದೆ. ಕನಿಷ್ಠ 11 ಎಸೆತ ಬಾಕಿ ಇರುವಾಗಲೇ ಗುರಿ ಮುಟ್ಟಬೇಕು. ಸಣ್ಣ ಅಂತರದ ಗೆಲುವು ಕಂಡರೆ ಕಷ್ಟ.

Continue Reading

ಕ್ರೀಡೆ

Virat Kohli: ಮಗಳು ವಮಿಕಾ ಕೂಡ ಕ್ರಿಕೆಟ್​ ಪ್ರಿಯೆ; ಬ್ಯಾಟಿಂಗ್​ ಅಚ್ಚುಮೆಚ್ಚು ಎಂದ ಕೊಹ್ಲಿ​

Virat Kohli: ದಾನೀಶ್ ಸೇಠ್ ಅವರು ಸಂದರ್ಶನದ ವೇಳೆ ಕೊಹ್ಲಿ ಜತೆ ಹಲವು ತರ್ಲೆ ಪ್ರಶ್ನೆಗಳನ್ನು ಕೇಳಿದ್ದಾರೆ. ಇದೇ ವೇಳೆ ನ್ಯಾಗ್ಸ್ ಒಂದು ಐಪಿಎಲ್​ಗೆ ಇನ್ನೊಂದು ಡಬ್ಲ್ಯುಪಿಎಲ್​ಗೆ ಎಂದು ಹೇಳುವ ಮೂಲಕ ಕೊಹ್ಲಿಯ ಕಾಲೆಳೆದಿದ್ದಾರೆ.

VISTARANEWS.COM


on

Virat Kohli
Koo

ಬೆಂಗಳೂರು: ಆರ್​ಸಿಬಿ(RCB) ತಂಡ ನಾಳೆ ನಡೆಯುವ 17ನೇ ಆವೃತ್ತಿಯ ಐಪಿಎಲ್​ನಲ್ಲಿ(IPL 2024) ತನ್ನ ಕೊನೆಯಲೀಗ್​ ಪಂದ್ಯವನ್ನು ಹಾಲಿ ಚಾಂಪಿಯನ್​ ಚೆನ್ನೈ ಸೂಪರ್​ ಕಿಂಗ್ಸ್​ ವಿರುದ್ಧ ಆಡಲಿದೆ. ಈ ಪಂದ್ಯಕ್ಕೂ ಮುನ್ನ ಆರ್​ಸಿಬಿಯ ಇನ್‌ಸೈಡರ್ ​ಮಿಸ್ಟರ್, ನ್ಯಾಗ್ಸ್(mr nags) ಖಾತಿಯ ದಾನೀಶ್ ಸೇಠ್(danish sait) ಅವರು ವಿರಾಟ್​ ಕೊಹ್ಲಿ(Virat Kohli) ಜತೆಗೆ ಸಂದರ್ಶನವೊಂದನ್ನು ಮಾಡಿದ್ದಾರೆ. ಈ ಸಂದರ್ಶನದಲ್ಲಿ ಕೊಹ್ಲಿ ತಮ್ಮ ಮಗಳು ವಮಿಕಾ(vamika) ಕೂಡ ಕ್ರಿಕೆಟ್​ ಪ್ರಿಯೆ ಎಂಬ ವಿಚಾರವನ್ನು ತಿಳಿಸಿದ್ದಾರೆ. ಈ ವಿಡಿಯೊ ವೈರಲ್ ಆಗಿದೆ.

ದಾನೀಶ್ ಸೇಠ್ ಅವರು ಸಂದರ್ಶನದ ವೇಳೆ ಕೊಹ್ಲಿ ಜತೆ ಹಲವು ತರ್ಲೆ ಪ್ರಶ್ನೆಗಳನ್ನು ಕೇಳಿದ್ದಾರೆ. ಇದೇ ವೇಳೆ ಪಾಪು ಹೇಗಿದೆ ಎಂದು ಕೇಳಿದಾಗ ಪಾಪು ಅದು ಯಾರು ಎಂದು ಕೊಹ್ಲಿ ಮರು ಪ್ರಶ್ನೆ ಮಾಡಿದ್ದಾರೆ. ಈ ವೇಳೆ ನ್ಯಾಗ್ಸ್ ಅಕಾಯ್​ ಎಂದು ಹೇಳಿದ್ದಾರೆ. ಹೋ.. ಮಗನಾ ಆರೋಗ್ಯವಾಗಿದ್ದಾನೆ ಎಂದು ಹೇಳುತ್ತಾರೆ. ಇದೇ ವೇಳೆ ನ್ಯಾಗ್ಸ್ ಒಂದು ಐಪಿಎಲ್​ಗೆ ಇನ್ನೊಂದು ಡಬ್ಲ್ಯುಪಿಎಲ್​ಗೆ ಎಂದು ಕೊಹ್ಲಿಯ ಕಾಲೆಳೆದಿದ್ದಾರೆ. ಈ ಮಾತು ಕೇಳಿದ ಕೊಹ್ಲಿ ಅರೇ ಏನು ಹೇಳುತ್ತಿದ್ದಿಯಾ ಮಾರಾಯ ಎಂದು ಹಿಂದಿಯಲ್ಲಿ ಹೇಳುವ ಮೂಲಕ ನಗಾಡಿದ್ದಾರೆ.

ಇದೇ ವೇಳೆ ತನ್ನ ಮಗಳಿಗೂ ಕ್ರಿಕೆಟ್​ ಎಂದರೆ ಅಚ್ಚು ಮೆಚ್ಚು ಅವಳು ಈಗಲೇ ಬ್ಯಾಟಿಂಗ್​ ಮಾಡುತ್ತಾ ಆಡುತ್ತಿದ್ದಾಳೆ. ಆದರೆ ಮುಂದಿನ ದಿನಗಳಲ್ಲಿ ಏನಾಗುತ್ತದೆಯೋ ತಿಳಿದಿಲ್ಲ ಎಂದು ಕೊಹ್ಲಿ ಹೇಳಿದ್ದಾರೆ. ಅವರ ಈ ಮಾತನ್ನು ಗಮನಿಸುವಾಗ ಮಗಳಿಗೆ ಯಾವ ಕ್ಷೇತ್ರದಲ್ಲಿಯೂ ಮುಂದುವರಿಯುವ ಸಂಪೂರ್ಣ ಸ್ವಾತಂತ್ರ್ಯ ಕೊಹ್ಲಿ ನೀಡಲಿದ್ದಾರೆ ಎನ್ನುವುದು ಅರ್ಥವಾಗುತ್ತದೆ. ಅಪ್ಪನಂತೆ ಮಗಳು ಕೂಡ ಭಾರತ ಮಹಿಳಾ ಕ್ರಿಕೆಟ್​ನಲ್ಲಿ ಸಾಧನೆ ಮಾಡಲಿ ಎಂದು ಕೊಹ್ಲಿಯ ಅಭಿಮಾನಿಗಳು ಹಾರೈಸಲಾರಂಭಿಸಿದ್ದಾರೆ.

ಇದನ್ನೂ ಓದಿ IPL Ticket Scam: ಆನ್​ಲೈನ್​ ಟಿಕೆಟ್​ ಖರೀದಿಸಲು ಹೋಗಿ 3 ಲಕ್ಷ ರೂ ಕಳೆದುಕೊಂಡ ಆರ್​ಸಿಬಿ ಅಭಿಮಾನಿ

ಕೊಹ್ಲಿ ತಮ್ಮ ನಿವೃತ್ತಿ(Virat Kohli restaurant) ವಿಚಾರದ ಬಗ್ಗೆ ಮಾತನಾಡಿದ್ದು, ಒಬ್ಬ ಕ್ರೀಡಾಪಟುವಾದ ಮೇಲೆ ಇಂದಲ್ಲ ನಾಳೆ, ತಮ್ಮ ವೃತ್ತಿಜೀವನದ ಅಂತಿಮ ದಿನಾಂಕವನ್ನು ನೋಡಲೇಬೇಕಿದೆ ಎಂದು ಹೇಳಿದ್ದಾರೆ. ಇದು  ಅವರ ಅಭಿಮಾನಿಗಳಿಗೆ ಭಾರೀ ಆತಂಕ ಉಂಟುಮಾಡುವಂತೆ ಮಾಡಿದೆ. 

ಸಂದರ್ಶನವೊಂದರಲ್ಲಿ ಕೊಹ್ಲಿಗೆ ಸಕ್ಸಸ್​​ ಹಿಂದೆ ಯಾಕಿಷ್ಟು ಹಸಿವಿನಿಂದ ಓಡುತ್ತಿದ್ದೀರಿ ಎಂದು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಕೊಹ್ಲಿ, ಒಬ್ಬ ಕ್ರೀಡಾಪಟು ಇಂದಲ್ಲ ನಾಳೆ ತಮ್ಮ ವೃತ್ತಿಜೀವನದ ಅಂತಿಮ ದಿನಾಂಕವನ್ನು ನೋಡಲೇಬೇಕಿದೆ. ಆದ್ದರಿಂದಲೇ ನಾನು ಈ ರೀತಿ ಹೆಚ್ಚು ಶ್ರಮವಹಿಸಿ, ಮಿತಿಮೀರಿ ಕೆಲಸ ಮಾಡುತ್ತಿದ್ದೇನೆ. ನೀವೃತ್ತಿಯ ಬಳಿಕ ನಾನು ಸಾಧನೆ ಮಾಡದರ ಕುರಿತು ಚಿಂತಿಸ ಬಾರದು. ಅಂತಹ ಪರಿಸ್ಥಿತಿ ನನಗೆ ಬರಬಾರದು ಎಂದರೆ, ಇಂದು ಅದ್ಭುತ ಆಟ ಆಡಲೇಬೇಕಿದೆ’ ಎಂದು ಹೇಳಿದರು.

‘ನನ್ನ ವೃತ್ತಿ ಜೀವನಕ್ಕೆ ವಿದಾಯ ಹೇಳಿದ ಬಳಿಕ ನನಗೆ ಯಾವುದೇ ವಿಷಾದ ಇರಬಾರದು. ಖಂಡಿತವಾಗಿ ಆ ರೀತಿ ನಾನು ಮಾಡಿಕೊಳ್ಳುವುದಿಲ್ಲ ಎಂದು ನನಗೆ ಖಾತ್ರಿಯಿದೆ. ಒಮ್ಮೆ ನಾನು ಕ್ರಿಕೆಟ್​ನಿಂದ ದೂರ ಸರಿದರೆ ಖಂಡಿತ ಮತ್ತೆ ನೀವು ನನ್ನನ್ನು ನೋಡೋದಿಲ್ಲ. ನಾನು ಆಡುವ ಕೊನೆವರೆಗೂ ನನ್ನಲ್ಲಿರುವ ಬೆಸ್ಟ್​ ಅನ್ನು ನೀಡಲು ಬಯಸುತ್ತೇನೆ. ಅದೊಂದೇ ನನ್ನನ್ನು ಮುಂದಕ್ಕೆ ಕೊಂಡೊಯ್ಯಲು ಸಾಧ್ಯ’ ಎಂದು ಹೇಳುವ ಮೂಲಕ ತಮ್ಮ ನಿವೃತ್ತಿಯ ಬಗೆಗಿನ ಸ್ಪಷ್ಟತೆಯನ್ನು ತಿಳಿಸಿದರು. ಕೊಹ್ಲಿಯ ಈ ಹೇಳಿಕೆ ಕಂಡು ಅವರ ಅಭಿಮಾನಿಗಳು ಆತಂಕಕ್ಕೆ ಒಳಪಟ್ಟಿದ್ದು, ಶೀಘ್ರದಲ್ಲೇ ಕೊಹ್ಲಿ ನಿವೃತ್ತಿ ಹೇಳಲಿದ್ದಾರಾ? ಎಂದು ಚಿಂತೆ ಪಡುವಂತೆ ಮಾಡಿದೆ.

Continue Reading
Advertisement
KSRTC BUS Woman locks in window of KSRTC bus after going to spit
ಬೆಂಗಳೂರು53 seconds ago

KSRTC Bus : ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ

banned plastic seized by corporation in Mysore
ಮೈಸೂರು3 mins ago

Mysore News: ಮೈಸೂರಿನಲ್ಲಿ ಪಾಲಿಕೆಯಿಂದ ನಿಷೇಧಿತ ಪ್ಲಾಸ್ಟಿಕ್‌ ವಶ; 1.61 ಲಕ್ಷ ರೂ. ದಂಡ

RCB vs CSK
ಕ್ರೀಡೆ25 mins ago

RCB vs CSK: ವಾಹನ ಸವಾರರೇ ಗಮನಿಸಿ, ನಾಳೆ ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಮುತ್ತ ಸಂಚಾರ ಬದಲಾವಣೆ

Amith Shah lok sabha election 2024
ಪ್ರಮುಖ ಸುದ್ದಿ43 mins ago

Lok Sabha Election 2024: 272 ಸೀಟು ಗೆಲ್ಲದೇ ಹೋದರೆ ಬಿಜೆಪಿಯ ಪ್ಲ್ಯಾನ್ ಬಿ ಏನು? ಅಮಿತ್ ಶಾ ಉತ್ತರ ಹೀಗಿದೆ

PM Narendra Modi
ದೇಶ50 mins ago

PM Narendra Modi: ಬುಲ್ಡೋಜರ್‌ ಹೇಗೆ ಬಳಸಬೇಕೆಂಬುದನ್ನು ಯೋಗಿಯಿಂದ ಕಲಿಯಬೇಕು: ಪ್ರಧಾನಿ ಮೋದಿ

Raveena tandon Saree fashion magic in Jayanthi Ballal designer
ಫ್ಯಾಷನ್50 mins ago

Raveena tandon Saree fashion: ಜಯಂತಿ ಬಲ್ಲಾಳ್‌ ಡಿಸೈನರ್‌ ಸೀರೆಯಲ್ಲಿ ನಟಿ ರವೀನಾ ಟಂಡನ್‌ ಜಾದೂ!

Prajwal Revanna Case Lawyer Devarajegowda sent to judicial custody End of police custody
ಕ್ರೈಂ2 hours ago

Prajwal Revanna Case: ವಕೀಲ ದೇವರಾಜೇಗೌಡರಿಗೆ ನ್ಯಾಯಾಂಗ ಬಂಧನ; ಪೊಲೀಸ್‌ ಕಸ್ಟಡಿ ಅಂತ್ಯ

RCB vs CSK
ಕ್ರೀಡೆ2 hours ago

RCB vs CSK: ನಾಳಿನ ಪಂದ್ಯಕ್ಕೆ ಮಳೆ ಬಾರದಂತೆ ಕೃಷ್ಣ ನಾಮ ಜಪಿಸಿದ ಆರ್​ಸಿಬಿ ಆಟಗಾರರು; ವಿಡಿಯೊ ವೈರಲ್​

Kannada New Movie The judgement Trailer Out Kannada
ಸ್ಯಾಂಡಲ್ ವುಡ್2 hours ago

Kannada New Movie: ಕುತೂಹಲ ಮೂಡಿಸಿದೆ ರವಿಚಂದ್ರನ್ ಅಭಿನಯದ ‘ದ ಜಡ್ಜ್ ಮೆಂಟ್’ ಟ್ರೈಲರ್‌!

Crime News
ದೇಶ2 hours ago

ಶಾಲೆ ಸಮೀಪದ ಚರಂಡಿಯಲ್ಲಿ 4 ವರ್ಷದ ಮಗುವಿನ ಮೃತದೇಹ ಪತ್ತೆ; ಭುಗಿಲೆದ್ದ ಹಿಂಸಾಚಾರ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ9 hours ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ11 hours ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ23 hours ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ1 day ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು1 day ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ2 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ2 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ3 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20243 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20243 days ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌