Asian Games Football: ಏಷ್ಯಾಡ್​ಗೆ ಫುಟ್ಬಾಲ್​ ತಂಡ ಪ್ರಕಟ; ಸುನೀಲ್​ ಚೆಟ್ರಿ ಸಾರಥ್ಯ - Vistara News

ಕ್ರೀಡೆ

Asian Games Football: ಏಷ್ಯಾಡ್​ಗೆ ಫುಟ್ಬಾಲ್​ ತಂಡ ಪ್ರಕಟ; ಸುನೀಲ್​ ಚೆಟ್ರಿ ಸಾರಥ್ಯ

ಏಷ್ಯನ್​ ಗೇಮ್ಸ್​(Asian Games) ಕ್ರೀಡಾಕೂಟಕ್ಕೆ ಭಾರತದ ಪುರುಷರ ಫುಟ್ಬಾಲ್​ ತಂಡ(indian football team) ಪ್ರಕಟಗೊಂಡಿದೆ. ಅನುಭವಿ ಆಟಗಾರ ಸುನೀಲ್​ ಚೆಟ್ರಿ(Sunil Chhetri) ತಂಡವನ್ನು(Asian Games Indian mens football team) ಮುನ್ನಡೆಸಲಿದ್ದಾರೆ

VISTARANEWS.COM


on

sunil chhetri celebration
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಸೆಪ್ಟೆಂಬರ್​ 23ರಿಂದ ಅಕ್ಟೋಬರ್​ 8ರ ವರೆಗೆ ಚೀನದ ಹ್ಯಾಂಗ್‌ಝೂನಲ್ಲಿ ನಡೆಯಲಿರುವ ಪ್ರತಿಷ್ಠಿತ ಏಷ್ಯನ್​ ಗೇಮ್ಸ್​(Asian Games) ಕ್ರೀಡಾಕೂಟಕ್ಕೆ ಭಾರತದ ಪುರುಷರ ಫುಟ್ಬಾಲ್​ ತಂಡ(indian football team) ಪ್ರಕಟಗೊಂಡಿದೆ. ಅನುಭವಿ ಆಟಗಾರ ಸುನೀಲ್​ ಚೆಟ್ರಿ(Sunil Chhetri) ತಂಡವನ್ನು(Asian Games Indian mens football team) ಮುನ್ನಡೆಸಲಿದ್ದಾರೆ. ಆದರೆ ಗೋಲ್ ಕೀಪರ್ ಗುರ್‌ಪ್ರೀತ್ ಸಿಂಗ್(Gurpreet Singh Sandhu) ಮತ್ತು ಡಿಫೆಂಡರ್ ಸಂದೇಶ ಝಿಂಗನ್‌(Sandesh Jhingan) ಸ್ಥಾನ ಪಡೆಯುವಲ್ಲಿ ವಿಫಲರಾಗಿದ್ದಾರೆ.

ಚೀನಾ ಮೊದಲ ಎದುರಾಳಿ

ಭಾರತ ಪುರುಷರ ತಂಡ ‘ಎ’ ಗುಂಪಿನಲ್ಲಿ ಸ್ಥಾನ ಪಡೆದಿದೆ. ಈ ಗುಂಪಿನಲ್ಲಿ ಚೀನಾ, ಬಾಂಗ್ಲಾದೇಶ ಹಾಗೂ ಮ್ಯಾನ್ಮಾರ್‌ ಕೂಡ ಕಾಣಿಸಿಕೊಂಡಿದೆ. ಫಿಫಾ ರ್‍ಯಾಂಕಿಂಗ್‌ನಲ್ಲಿ ಬಾಂಗ್ಲಾ ಹಾಗೂ ಮ್ಯಾನ್ಮಾರ್‌ ತಂಡಕ್ಕಿಂತ ಮೇಲಿರುವ ಭಾರತ ತಂಡ ಅಂತಿಮ 16ರ ಸುತ್ತು ಪ್ರವೇಶಿಸುವ ನಿರೀಕ್ಷೆ ಇದೆ. ಭಾರತ ತನ್ನ ಮೊದಲ ಪಂದ್ಯವನ್ನು ಚೀನಾ ವಿರುದ್ಧ ಆಡಲಿದೆ. ಈ ಪಂದ್ಯ ಸೆಪ್ಟೆಂಬರ್ 19 ರಂದು ನಡೆಯಲಿದೆ. ಇದಾದ ಎರಡು ದಿನಗಳ ಬಳಿಕ ಬಾಂಗ್ಲಾದೇಶ ಮತ್ತು ಸೆಪ್ಟೆಂಬರ್ 24 ರಂದು ಮ್ಯಾನ್ಮಾರ್ ವಿರುದ್ಧ ಆಡಲಿದೆ.

ಚೆಟ್ರಿ ಮೇಲೆ ಬೆಟ್ಟದಷ್ಟು ನಿರೀಕ್ಷೆ

ಕಳೆದ ಒಂದು ವರ್ಷಗಳಿಂದ ಭಾರತದ ಫುಟ್ಬಾಲ್​ ತಂಡ ಆಡಿದ ಎಲ್ಲ ಟೂರ್ನಿಗಳಲ್ಲಿಯೂ ಉತ್ತಮ ಪ್ರದರ್ಶನ ತೋರುತ್ತಲೇ ಬಂದಿದೆ. ಇಚ್ಚೀಚೆಗಷ್ಟೇ ಸ್ಯಾಫ್​ ಟೂರ್ನಿಯಲ್ಲಿಯೂ ಚಾಂಪಿಯನ್​ ಪಟ್ಟ ಅಲಂಕರಿಸಿತ್ತು. ತಂಡದ ಗೆಲುವಿನಲ್ಲಿ ನಾಯಕ ಸುನೀಲ್ ಚೆಟ್ರಿ ಶ್ರೇಷ್ಠ ಸಾಧನೆ ತೋರಿದ್ದರು. ಅಲ್ಲದೆ ಪ್ರತಿ ಪಂದ್ಯದಲ್ಲೂ ಗೋಲು ಬಾರಿ ತಂಡಕ್ಕೆ ಆಸರೆಯಾಗುತ್ತಿರುವ ಅವರ ಮೇಲೆ ತಂಡ ಬೆಟ್ಟದಷ್ಟು ನಿರೀಕ್ಷೆ ಇರಿಸಿದೆ. ಆರಂಭಿಕ ಹಂತದಲ್ಲಿ ಭಾರತೀಯ ಫುಟ್ಬಾಲ್ ಫೆಡರೇಷನ್‌ ಪ್ರಕಟಿಸಿದ್ದ ತಂಡದಲ್ಲಿ ಸುನೀಲ್ ಚೆಟ್ರಿ ಹೆಸರು ಬಿಟ್ಟುಹೋಗಿತ್ತು. ಬಳಿಕ​ ಏಷ್ಯನ್ ಗೇಮ್ಸ್‌ ಆಯೋಜಕರಿಗೆ ಮನವಿ ಮಾಡಿ ಉಭಯ ಆಟಗಾರರ ಹೆಸರನ್ನು ಸೇರಿಸಲಾಗಿತ್ತು.

ಕೊನೆಯ ಹಂತದಲ್ಲಿ ಸಿಕ್ಕ ಅವಕಾಶ

ಕ್ರೀಡಾಕೂಟದಲ್ಲಿ ಭಾಗಿಯಾಗುವ ಅಗ್ರ ಎಂಟು ತಂಡಗಳಲ್ಲಿ ಸ್ಥಾನ ಪಡೆಯುವ ಕ್ರೀಡಾ ಸಚಿವಾಲಯದ ಮಾನದಂಡಗಳನ್ನು ಪೂರೈಸುವಲ್ಲಿ ಭಾರತ ಫುಟ್ಬಾಲ್ ತಂಡ ವಿಫಲವಾಗಿದ್ದ ಕಾರಣ ಏಷ್ಯನ್ ಕ್ರೀಡಾಕೂಟದಲ್ಲಿ ಭಾಗವಹಿಸಲು ಸಾಧ್ಯವಾದ ಸ್ಥಿತಿ ಎದುರಾಗಿತ್ತು. ಆದರೆ ಇತ್ತೀನ ಪ್ರದರ್ಶನವನ್ನು ಪರಿಗಣಿಸಿ ಭಾರತ ತಂಡಗಳಿಗೆ ಅನುಮತಿ ನೀಡುವಂತೆ ಅಖಿಲ ಭಾರತ ಫುಟ್ಬಾಲ್​ ಫೆಡರೇಷನ್‌ (ಎಐಎಫ್‌ಎಫ್‌), ಕ್ರೀಡಾ ಸಚಿವಾಲಯಕ್ಕೆ ಮನವಿ ಮಾಡಿತ್ತು. ಈ ವಿಷಯದಲ್ಲಿ ಮಧ್ಯಪ್ರವೇಶಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸೀನಿಯರ್‌ ತಂಡದ ಮುಖ್ಯ ಕೋಚ್ ಇಗೊರ್‌ ಸ್ಟಿಮಾಚ್ ಅವರೂ ಮನವಿ ಮಾಡಿದ್ದರು. ಮನವಿಯನ್ನು ಗಂಭಿರವಾಗಿ ಚಿಂತಿಸಿದ ಕೇಂದ್ರ ಕ್ರೀಡಾ ಸಚಿವಾಲಯ ಅಂತಿಮವಾಗಿ ಮಾನದಂಡಗಳನ್ನು ಸಡಿಲಿ ಟೂರ್ನಿಯಲ್ಲಿ ಆಡಲು ಅವಕಾಶ ನೀಡಿತು.

ಇದನ್ನೂ ಓದಿ ಏಷ್ಯನ್​ ಗೇಮ್ಸ್​ ಆರಂಭಕ್ಕೂ ಮುನ್ನವೇ ಭಾರತ ತಂಡದಿಂದ ಹೊರಬಿದ್ದ ಸ್ಟಾರ್​ ವೇಗಿ

ಭಾರತ ತಂಡ

ಗುರ್ಮೀತ್‌ ಸಿಂಗ್‌, ಧೀರಜ್‌ ಸಿಂಗ್‌, ಸುಮಿತ್ ರಾಠಿ, ನರೇಂದರ್ ಗಹ್ಲೋಟ್, ಅಮರ್ಜಿತ್ ಸಿಂಗ್ ಕಿಯಾಮ್, ಸ್ಯಾಮ್ಯುಯೆಲ್ ಜೇಮ್ಸ್, ರಾಹುಲ್ ಕೆಪಿ, ಅಬ್ದುಲ್ ರಬೀಹ್ ಅಂಜುಕಂದನ್, ಆಯುಷ್ ದೇವ್ ಚೆಟ್ರಿ, ಬ್ರೈಸ್ ಮಿರಾಂಡಾ, ಅಜ್ಫರ್ ನೂರಾನಿ, ರಹೀಮ್ ಅಲಿ, ವಿನ್ಸಿ ಬ್ಯಾರೆಟ್ಟೊ, ಸುನೀಲ್​ ಚೆಟ್ರಿ, ರೋಹಿತ್‌ ದಾನು, ಗುರ್ಕಿರಾತ್ ಸಿಂಗ್​​, ಅನಿಕೇತ್‌ ಜಾಧವ್‌.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

MS Dhoni: ಈಡೇರಿದ ಶತಾಯುಷಿ ಅಭಿಮಾನಿಯ ಆಸೆ; ಧೋನಿ ಭೇಟಿಯಾಗಿ ವಿಶೇಷ ಉಡುಗೊರೆ ಪಡೆದ ರಾಮದಾಸ್

MS Dhoni: ಧೋನಿಯ(MS Dhoni) ಅಪಟ್ಟ ಅಭಿಮಾನಿಯಾಗಿರುವ 103 ವರ್ಷದ(103-year-old CSK fan) ಎಸ್ ರಾಮದಾಸ್(S Ramdas) ಅವರು ಕೊನೆಗೂ ತಮ್ಮ ಬಯಕೆಯಂತೆ ಧೋನಿ ಅವರನ್ನು ಭೇಟಿ ಮಾಡಿದ್ದಾರೆ. ಇದೇ ವೇಳೆ ಧೋನಿ ಈ ಶತಾಯುಷಿ ಅಭಿಮಾನಿಗೆ ವಿಶೇಷ ಉಡುಗೊರೆಯೊಂದನ್ನು ನೀಡಿದ್ದಾರೆ.

VISTARANEWS.COM


on

MS Dhoni
Koo

ಚೆನ್ನೈ: ಚೆನ್ನೈ ಸೂಪರ್​ ಕಿಂಗ್ಸ್(Chennai Super Kings)​ ಹಾಗೂ ಮಹೇಂದ್ರ ಸಿಂಗ್​ ಧೋನಿಯ(MS Dhoni) ಅಪಟ್ಟ ಅಭಿಮಾನಿಯಾಗಿರುವ 103 ವರ್ಷದ(103-year-old CSK fan) ಎಸ್ ರಾಮದಾಸ್(S Ramdas) ಅವರು ಕೊನೆಗೂ ತಮ್ಮ ಬಯಕೆಯಂತೆ ಧೋನಿ ಅವರನ್ನು ಭೇಟಿ ಮಾಡಿದ್ದಾರೆ. ಇದೇ ವೇಳೆ ಧೋನಿ ಈ ಶತಾಯುಷಿ ಅಭಿಮಾನಿಗೆ ವಿಶೇಷ ಉಡುಗೊರೆಯೊಂದನ್ನು ನೀಡಿದ್ದಾರೆ. ಈ ವಿಡಿಯೊವನ್ನು ಚೆನ್ನೈ ಸೂಪರ್​ ಕಿಂಗ್ಸ್​ ಫ್ರಾಂಚೈಸಿ ತನ್ನ ಅಧಿಕೃತ ಟ್ವಿಟರ್​ ಎಕ್ಸ್​ನಲ್ಲಿ ಹಂಚಿಕೊಂಡಿದೆ.

ಕೆಲವು ದಿನಗಳ ಹಿಂದೆ ಎಸ್ ರಾಮದಾಸ್ ಅವರು ಮಗನ ಬಳಿ ಮಾತನಾಡುವ ವೇಳೆ, ಚೆನ್ನೈ ಸೂಪರ್ ಕಿಂಗ್ಸ್​ನ ಪಂದ್ಯ ಮತ್ತು ಧೋನಿಯನ್ನು ನೋಡಲು ರಾಜಧಾನಿ ದೆಹಲಿಯವರೆಗೂ ನಡೆದುಕೊಂಡು ಹೋಗಲು ಸಿದ್ಧ ಎಂದು ಹೇಳಿದ್ದರು. ಧೋನಿಯನ್ನು ಮತ್ತು ಚೆನ್ನೈ ಪಂದ್ಯವನ್ನು ನೋಡುವ ಅಪ್ಪನ ಈ ಬಯಕೆಯನ್ನು ಈಡೇರಿಸುವುದಾಗಿ ಮಗ ಮಾತು ಕೊಟ್ಟಿದ್ದರು. ಚೆನ್ನೈನಲ್ಲಿ ನಡೆಯುವ ಪಂದ್ಯದ ಟಿಕೆಟ್​ ಖರೀದಿಸಿ ಪಂದ್ಯ ತೋರಿಸುತ್ತೇನೆ ಎಂದು ಹೇಳಿದ್ದರು. ಕೊಟ್ಟ ಮಾತಿನಂತೆ ಮಗ ಅಪ್ಪನಿಗೆ ಚೆಪಾಕ್​ನಲ್ಲಿ ನಡೆದ ಚೆನ್ನೈ ಮತ್ತು ಪಂಜಾಬ್​ ವಿರುದ್ಧದ ಪಂದ್ಯಕ್ಕೆ ಕರೆದುಕೊಂಡು ಹೋಗಿದ್ದಾರೆ.

ಪಂದ್ಯ ಮುಕ್ತಾಯಕ ಬಳಿಕ ಈ ವಿಶೇಷ ಅಭಿಮಾನೊಯನ್ನು ಧೋನಿ ಡ್ರೆಸ್ಸಿಂಗ್​ ರೋಮ್​ನಲ್ಲಿ ಭೇಟಿಯಾಗಿದ್ದಾರೆ. ಧೋನಿ ತಮ್ಮ ಜೆರ್ಸಿಯಲ್ಲಿ “ನಿಮ್ಮ ಈ ಬೆಂಬಲಕ್ಕೆ ಧನ್ಯವಾದಗಳು ತಾತ” ಎಂದು ಬರೆದು ತಮ್ಮ ಹಸ್ತಾಕ್ಷರ ಹಾಕಿ ಜೆರ್ಸಿಯನ್ನು ರಾಮದಾಸ್​ಗೆ ನೀಡಿದ್ದಾರೆ. ಇದೇ ವೇಳೆ ರಾಮದಾಸ್ ನಿಮ್ಮನ್ನು ನೋಡಿ ತುಂಬಾ ಖಷಿಯಾಯಿತು. ನೀವೊಬ್ಬರು ಗ್ರೇಟ್​ ಕ್ರಿಕೆಟರ್​ ಎಂದು ಹಾರೈಸಿದರು. ರಾಮ್​ದಾಸ್​ ಜತೆ ಅರ ಪತ್ನಿಯೂ ಜತೆಗಿದ್ದರು. ಚೆನ್ನೈ ಫ್ರಾಂಚೈಸಿ ವತಿಯಿಂದ ರಾಮದಾಸ್ 103 ಎಂದು ಬರೆದ ಚೆನ್ನೈ ತಂಡದ ಜೆರ್ಸಿಯನ್ನು ವಿಶೇಷ ಉಡುಗೊರೆಯಾಗಿ ನೀಡಲಾಯಿತು.

ಇದನ್ನೂ ಓದಿ IPL 2024 Points Table: ರೋಚಕ 1 ರನ್ ಗೆಲುವು ಸಾಧಿಸಿ ಅಂಕಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಿದ ಹೈದರಾಬಾದ್​

ಬ್ರಿಟಿಷ್ ಮಿಲಿಟರಿಯ ಸೈನ್ಯದ ಭಾಗವಾಗಿದ್ದ ರಾಮದಾಸ್ ಕ್ರಿಕೆಟ್ ಆಡಲು ಹೆದರುತ್ತಿದ್ದರಂತೆ. ಆದರೆ ಸಿಎಸ್‌ಕೆ ಜರ್ಸಿ ಧರಿಸಿ ಟಿವಿ ಮುಂದೆ ಕುಳಿತು ಐಪಿಎಲ್ ಆಟವನ್ನು ನೋಡಲು ಇಷ್ಟಪಡುತ್ತೇನೆ. ಒಮ್ಮೆಯಾದರೂ ಧೋನಿಯನ್ನು ಭೇಟಿಯಾಗಬೇಕು ಎಂದು ಹೇಳಿದ್ದ ವಿಡಿಯೊವನ್ನು ಕೂಡ ಚೆನ್ನೈ ಫ್ರಾಂಚೈಸಿ ಟ್ವಿಟರ್​ ಎಕ್ಸ್​ನಲ್ಲಿ ಹಂಚಿಕೊಂಡಿತ್ತು.

ಧೋನಿ ಎಂದರೆ ಅಭಿಮಾನಿಗಳಿಗೊಂದು ಎಮೋಷನ್ (ಭಾವನೆ). ಅವರು ಅಪಾರ ಸಂಖ್ಯೆಯ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಕಳೆದ ವರ್ಷವೇ ಧೋನಿ ಅವರು ಐಪಿಎಲ್​ಗೆ ವಿದಾಯ ಹೇಳಲು ನಿರ್ಧರಿಸಿದ್ದರು. ಆದರೆ ಅಭಿಮಾನಿಗಳ ಒತ್ತಾಯದ ಮೇರೆಗೆ ತಮ್ಮ ನಿವೃತ್ತಿಯನ್ನು ಮುಂದೆ ಹಾಕಿದ್ದರು. ಈ ಬಾರಿಯ ಟೂರ್ನಿ ಅವರಿಗೆ ವಿದಾಯದ ಟೂರ್ನಿಯಾಗಲಿದೆ. ಈ ಮೂಲಕ ಧೋನಿ ಎಲ್ಲ ಮಾದರಿಯ ಕ್ರಿಕಟ್​ಗೂ ಗುಡ್​ಬೈ ಹೇಳಲಿದ್ದಾರೆ. ಹೀಗಾಗಿ ಧೋನಿ ಅವರ ಬ್ಯಾಟಿಂಗ್​ ಕುಣ್ತುಂಬಿಕೊಳ್ಳಲು ಅವರ ಅಭಿಮಾನಿಗಳು ಪ್ರತಿ ಪಂದ್ಯದ ವೇಳೆಯೂ ಬಹಳ ನಿರೀಕ್ಷೆಯಿಂದ ಕಾಯುತ್ತಿರುತ್ತಾರೆ.

Continue Reading

ಕ್ರೀಡೆ

Kavya Maran: ರೋಚಕ ಗೆಲುವು ಕಂಡು ಆಕಾಶಕ್ಕೆ ಜಿಗಿದಂತೆ ಕುಣಿದು ಸಂಭ್ರಮಿಸಿದ ಕಾವ್ಯಾ ಮಾರನ್; ವಿಡಿಯೊ ವೈರಲ್​

Kavya Maran: ಕಾವ್ಯ ಚೆನ್ನೈ ಮೂಲದ ಮಾಧ್ಯಮ ಮತ್ತು ಟಿವಿ ಸಮೂಹ ಸನ್ ಟಿವಿ ನೆಟ್‌ವರ್ಕ್‌ನ ಮಾಲಕ ಕಲಾನಿತಿ ಮಾರನ್ ಅವರ ಪುತ್ರಿ. ನ್ಯೂಯಾರ್ಕ್ ವಿಶ್ವವಿದ್ಯಾಲಯದ ಸ್ಟರ್ನ್ ಸ್ಕೂಲ್ ಆಫ್ ಬ್ಯುಸಿನೆಸ್‌ನಲ್ಲಿ ಪದವೀಧರರಾಗಿದ್ದಾರೆ. ಐಪಿಎಲ್​ ಪಂದ್ಯದಲ್ಲಿ ಮಾತ್ರವಲ್ಲದೆ ಹರಾಜಿನ ವೇಳೆಯೂ ಅವರು ಪ್ರಧಾನ ಆಕರ್ಷಣೆಯಾಗಿರುತ್ತಾರೆ.

VISTARANEWS.COM


on

Kavya Maran
Koo

ಹೈದರಾಬಾದ್​: ಗುರುವಾರ ರಾತ್ರಿ ನಡೆದ ಐಪಿಎಲ್​ನ(IPL 2024) 50ನೇ ಪಂದ್ಯದಲ್ಲಿ ಭುವನೇಶ್ವರ್​ ಕುಮಾರ್(Bhuvneshwar Kumar)​ ಅವರು ಅಂತಿಮ ಎಸೆತದ ಮ್ಯಾಜಿಕ್​ನಿಂದ ಸನ್​ರೈಸರ್ಸ್ ಹೈದರಾಬಾದ್(Sunrisers Hyderabad)​ ತಂಡ ರಾಜಸ್ಥಾನ್​ ರಾಯಲ್ಸ್(Rajasthan Royals)​ ವಿರುದ್ಧ ರೋಚಕ 1 ರನ್​ ಅಂತರದ ಗೆಲುವು ಸಾಧಿಸಿತು. ಈ ಗೆಲುವನ್ನು ತಂಡದ ಆಟಗಾರರಿಗಿಂತಲ್ಲೂ ಹೆಚ್ಚು ಸಂಭ್ರಮಿಸಿದ್ದು ತಂಡದ ಮಾಲಕಿ ಕಾವ್ಯಾ ಮಾರನ್​. ಗ್ಯಾಲರಿಯಲ್ಲಿದ್ದ ಕಾವ್ಯ ತಂಡ ಗೆಲ್ಲುತ್ತಿದ್ದಂತೆ ಫೂಲ್​ ಜೋಶ್​ನಲ್ಲಿ ಕುಣಿದು ಕುಪ್ಪಳಿಸಿದ್ದಾರೆ. ಈ ವಿಡಿಯೊ ವೈರಲ್(viral video)​ ಆಗಿದೆ.

31 ಹರೆಯದ ಕಾವ್ಯಾ ತನ್ನ ಅದ್ಭುತ ನೋಟ ಮತ್ತು ಆಟದ ಮೇಲಿನ ಅಪಾರ ಉತ್ಸಾಹಕ್ಕೆ ಹೆಸರುವಾಸಿಯಾಗಿದ್ದಾರೆ. ಪಂದ್ಯ ಸೋತಾಗ ಮತ್ತು ಗೆದ್ದಾಗ ಅವರು ವಿಭಿನ್ನವಾಗಿ ಕಂಡುಬರುತ್ತಾರೆ. ಕ್ಯಾಮೆರಾ ಮೆನ್​ಗಳು ಕೂಡ ಪಂದ್ಯದ ವೇಳೆ ಇವರ ಮೇಲೆ ವಿಶೇಷ ನಿಗಾ ಇರಿಸಿರುತ್ತಾರೆ. ಪಂದ್ಯ ಸೋತಾಗ ಅತಿಯಾದ ಬೇಸರಿಂದ ಸಪ್ಪೆ ಮೋರೆ ಹಾಕಿ ಕುಳಿತಿದ್ದ ವಿಡಿಯೊ ಮತ್ತು ಫೋಟೊಗಳು ಕೂಡ ಹಲವು ಬಾರಿ ವೈರಲ್​ ಆಗಿತ್ತು.

ಖ್ಯಾತ ಸೂಪರ್​ ಸ್ಟಾರ್​ ನಟ ರಜನಿಕಾಂತ್ ಅವರು ಐಪಿಎಲ್​ ಆರಂಭಕ್ಕೂ ಮುನ್ನ ನಡೆದಿದ್ದ ಸಿನೆಮಾ ಕಾರ್ಯಕ್ರಮದ ಸಮಾರಂಭದ ವೇದಿಕೆಯಲ್ಲಿ ಸನ್​ರೈಸರ್ಸ್ ಹೈದರಾಬಾದ್​ ತಂಡಕ್ಕೆ ಒಳ್ಳೆ ಆಟಗಾರರನ್ನು ಆಯ್ಕೆ ಮಾಡಿ ಏಕೆಂದರೆ ಈ ಪಂದ್ಯ ಸೋತಾಗ ಕಾವ್ಯಾ ಅವರು ನೋಡಲು ಸಾಧ್ಯವಾಗುದಿಲ್ಲ ಎಂದು ಹೇಳಿದ್ದರು.

ಕಾವ್ಯ ಚೆನ್ನೈ ಮೂಲದ ಮಾಧ್ಯಮ ಮತ್ತು ಟಿವಿ ಸಮೂಹ ಸನ್ ಟಿವಿ ನೆಟ್‌ವರ್ಕ್‌ನ ಮಾಲಕ ಕಲಾನಿತಿ ಮಾರನ್ ಅವರ ಪುತ್ರಿ. ನ್ಯೂಯಾರ್ಕ್ ವಿಶ್ವವಿದ್ಯಾಲಯದ ಸ್ಟರ್ನ್ ಸ್ಕೂಲ್ ಆಫ್ ಬ್ಯುಸಿನೆಸ್‌ನಲ್ಲಿ ಪದವೀಧರರಾಗಿದ್ದಾರೆ. ಐಪಿಎಲ್​ ಪಂದ್ಯದಲ್ಲಿ ಮಾತ್ರವಲ್ಲದೆ ಹರಾಜಿನ ವೇಳೆಯೂ ಅವರು ಪ್ರಧಾನ ಆಕರ್ಷಣೆಯಾಗಿರುತ್ತಾರೆ.

ಪಂದ್ಯ ಗೆದ್ದ ಹೈದರಾಬಾದ್​


ರಾಜೀವ್​ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಮ್​ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಎಸ್​ಆರ್​ಎಚ್​ ತಂಡ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡು ನಿಗದಿತ 20 ಓವರ್​ಗಳಲ್ಲಿ 3 ವಿಕೆಟ್​ಗೆ 201 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್​ ಮಾಡಿದ ರಾಜಸ್ಥಾನ್ ತಂಡ ತನ್ನ ಪಾಲಿನ ಓವರ್​ಗಳು ಮುಕ್ತಾಯಗೊಂಡಾಗ 7 ವಿಕೆಟ್​ಗೆ 200 ರನ್ ಬಾರಿಸಿ ಸೋಲೊಪ್ಪಿಕೊಂಡಿತು. ಕೊನೇ ಓವರ್​ನಲ್ಲಿ ರಾಯಲ್ಸ್ ತಂಡಕ್ಕೆ 13 ರನ್​ಗಳು ಬೇಕಾಗಿತ್ತು. ಪೊವೆಲ್​ ನಿಖರವಾಗಿ ರನ್​ ಗಳಿಸಿ ತಂಡವನ್ನು ಗೆಲುವಿನ ಹೊಸ್ತಿಲಲ್ಲಿ ತಂದು ನಿಲ್ಲಿಸಿದ್ದರು. ಆದರೆ, ಭುವನೇಶ್ವರ್ ಕುಮಾರ್​ ಲೊ ಪುಲ್​ಟಾಸ್​ ಹಾಕುವ ಮೂಲಕ ಪೊವೆಲ್ ಅವರನ್ನು ಎಲ್​ಬಿಡಬ್ಲ್ಯು ಬಲೆಗೆ ಕೆಡವಿದರು.

Continue Reading

ಕ್ರೀಡೆ

Thomas Cup 2024: ಉಬೆರ್‌ ಕಪ್‌ ಬಳಿಕ ಥಾಮಸ್‌ ಕಪ್​ನಲ್ಲಿಯೂ ಮುಗ್ಗರಿಸಿದ ಭಾರತ

Thomas Cup 2024: ಪುರುಷರ ಸಿಂಗಲ್ಸ್‌ನ ಮೊದಲ ಪಂದ್ಯದಲ್ಲಿ ಪ್ರಣಯ್ 15-21 21-11 21-14 ತೀವ್ರ ಹೋರಾಟ ನಡೆಸಿದರೂ ಶಿ ಯು ಕಿ ವಿರುದ್ಧ ಸೋಲು ಕಂಡರು. ಆ ಬಳಿಕ ಆಡಿದ ಡಬಲ್ಸ್​ನಲ್ಲಿ ಬರವಸೆಯ ಜೋಡಿ ವಿಶ್ವ ನಂ.3 ಸಾತ್ವಿಕ್‌-ಚಿರಾಗ್‌ ಶೆಟ್ಟಿ 21-15 11-21 21-12 ಅಂತರದಿಂದ ಲಿಯಾಂಗ್ ವೀ ಕೆಂಗ್- ವಾಂಗ್ ಚಾಂಗ್ ಜೋಡಿ ವಿರುದ್ಧ ಸೋತರು.

VISTARANEWS.COM


on

Thomas Cup 2024
Koo

ಚೆಂಗ್ಡು(ಚೀನಾ): ಸತತ 2ನೇ ಬಾರಿ ಥಾಮಸ್‌ ಕಪ್‌(Thomas Cup 2024) ಗೆಲ್ಲುವ ನಿರೀಕ್ಷೆಯೊಂದಿಗೆ ಕಣಕ್ಕಿಳಿದಿದ್ದ ಭಾರತ ಪುರುಷರ ಬ್ಯಾಡ್ಮಿಂಟನ್​ ತಂಡ ಕ್ವಾರ್ಟರ್​ ಫೈನಲ್​ನಲ್ಲಿ ಚೀನಾ ವಿರುದ್ಧ 1-3 ಅಂತರದಲ್ಲಿ ಪರಾಭವಗೊಳ್ಳುವ ಮೂಲಕ ನಿರಾಸೆ ಮೂಡಿಸಿದೆ. ಇದಕ್ಕೂ ಮುನ್ನ ನಡೆದ ಉಬೆರ್‌ ಕಪ್‌(Uber Cup 2024) ಬ್ಯಾಡ್ಮಿಂಟನ್‌ ಟೂರ್ನಿಯಲ್ಲಿ ಭಾರತದ ಮಹಿಳಾ ತಂಡ ಕೂಡ ಕ್ವಾರ್ಟರ್​ ಫೈನಲ್​ನಲ್ಲಿ ಸೋಲು ಕಂಡಿತ್ತು. ಉಭಯ ತಂಡಗಳು ಕೂಡ ಸೋಲು ಕಾಣುವ ಮೂಲಕ ಭಾರತದ ಪದಕ ನಿರೀಕ್ಷೆ ಹುಸಿಯಾಯಿತು.

ಪುರುಷರ ಸಿಂಗಲ್ಸ್‌ನ ಮೊದಲ ಪಂದ್ಯದಲ್ಲಿ ಪ್ರಣಯ್ 15-21 21-11 21-14 ತೀವ್ರ ಹೋರಾಟ ನಡೆಸಿದರೂ ಶಿ ಯು ಕಿ ವಿರುದ್ಧ ಸೋಲು ಕಂಡರು. ಆ ಬಳಿಕ ಆಡಿದ ಡಬಲ್ಸ್​ನಲ್ಲಿ ಬರವಸೆಯ ಜೋಡಿ ವಿಶ್ವ ನಂ.3 ಸಾತ್ವಿಕ್‌-ಚಿರಾಗ್‌ ಶೆಟ್ಟಿ 21-15 11-21 21-12 ಅಂತರದಿಂದ ಲಿಯಾಂಗ್ ವೀ ಕೆಂಗ್- ವಾಂಗ್ ಚಾಂಗ್ ಜೋಡಿ ವಿರುದ್ಧ ಸೋತರು. ಭಾರತಕ್ಕೆ ಗೆಲುವಿನ ಖಾತೆ ತೆರೆದದ್ದು ಲಕ್ಷ್ಯ ಸೇನ್‌ ಮಾತ್ರ. 2ನೇ ಸಿಂಗಲ್ಸ್​ನಲ್ಲಿ ಆಡಿದ ಸೇನ್ ಗೆಲುವು ಸಾಧಿಸಿ ಪಂದ್ಯವನ್ನು ಜೀವಂತವಿರಿಸಿದರು. ಆದರೆ 4ನೇ ಪಂದ್ಯದಲ್ಲಿ ಅರ್ಜುನ್‌-ಧ್ರುವ್‌ ಕಪಿಲಾ ಸೋಲುವುದರೊಂದಿಗೆ ಭಾರತ ಟೂರ್ನಿಯಿಂದ ಹೊರಬಿದ್ದಿತು. ಈ ಪಂದ್ಯದಲ್ಲಿ ಗೆಲ್ಲುತ್ತಿದ್ದರೆ 2-2 ಸಮಬಲ ಸಾಧಿಸಿ ಅಂತಿಮ ಹೋರಾಟಲ್ಲಿ ಗೆಲ್ಲುವ ಅವಕಾಶವಿತ್ತು.

ಮಹಿಳೆಯರಿಗೂ ಸೋಲು

ಉಬೆರ್‌ ಕಪ್‌ ಬ್ಯಾಡ್ಮಿಂಟನ್‌ ಪಂದ್ಯಾವಳಿಯ ಕ್ವಾರ್ಟರ್​ ಫೈನಲ್(Uber Cup 2024 Quarterfinal)​ ಪಂದ್ಯದಲ್ಲಿ ಭಾರತದ(India) ಮಹಿಳಾ ತಂಡ ಜಪಾನ್(Japan)​ ವಿರುದ್ಧ 3-0 ಅಂತರದ ಸೋಲು ಕಾಣುವ ಮೂಲಕ ತನ್ನ ಅಭಿಯಾನವನ್ನು ಅಂತ್ಯಗೊಳಿಸಿತು. ಭಾರತ 1957, 2014 ಮತ್ತು 2016ರಲ್ಲಿ ಮೂರು ಬಾರಿ ಉಬರ್ ಕಪ್‌ನಲ್ಲಿ ಸೆಮಿಫೈನಲ್ ತಲುಪಿತ್ತು.

ಮೊದಲ ಮಹಿಳಾ ಸಿಂಗಲ್ಸ್‌ನಲ್ಲಿ ಅಶ್ಮಿತಾ ಚಲಿಹಾ 10-21, 22-20, 15-21 ರಲ್ಲಿ ಅಯಾ ಒಹೊರಿ ವಿರುದ್ಧ ಸೋತರು. ಮೊದಲ ಗೇಮ್‌ನಲ್ಲಿ ಲಯ ಕಂಡುಕೊಳ್ಳಲು ಹರಸಾಹಸಪಟ್ಟ ಚಲಿಹಾ ಎರಡನೇ ಗೇಮ್​ನಲ್ಲಿ ತಿರುಗಿ ಬಿದ್ದು 22-20 ಅಂತರದಿಂದ ಕೈವಶ ಮಾಡಿಕೊಳ್ಳುವ ಮೂಲಕ ಸಮಬಲ ಸಾಧಿಸಿದರು. ಆದರೆ ನಿರ್ಣಾಯಕ ಗೇಮ್​ನಲ್ಲಿ ಸೋಲು ಕಂಡರು.

ಡಬಲ್ಸ್​ನಲ್ಲಿ ಕೆ.ಪ್ರಿಯಾ-ಶ್ರುತಿ ಮಿಶ್ರಾ ಜೋಡಿಯನ್ನು ನಮಿ ಮತ್ಸುಯಾಮಾ-ಚಿಹರು ಶಿದಾ ಸೇರಿಕೊಂಡು 8-21, 9-21 ನೇರ ಗೇಮ್​ಗಳಿಂದ ಹಿಮ್ಮೆಟ್ಟಿಸಿದರು. ದ್ವಿತೀಯ ಮಹಿಳಾ ಸಿಂಗಲ್ಸ್​ನಲ್ಲಿ ಇಶಾರಾಣಿ ಶಾರಾಣಿ ಬರುಹಾ ಅವರನ್ನು 15-21, 12-21 ನೇರ ಗೇಮ್​ಗಳ ಅಂತದಿಂದ 2017ರ ವಿಶ್ವ ಚಾಂಪಿಯನ್‌ ಜಪಾನಿನ ನೊಜೊಮಿ ಒಕುಹಾರ ಮಣಿಸಿದರು. ಈ ಸೋಲಿನೊಂದಿಗೆ ಭಾರತ ತಂಡದ ಸವಾಲು ಕೂಡ ಅತ್ಯಂಗೊಂಡಿತು.

Continue Reading

ಕ್ರಿಕೆಟ್

T20 World Cup 2024: ಟಿ20 ವಿಶ್ವಕಪ್​ನ ಅಧಿಕೃತ ಹಾಡು ಬಿಡುಗಡೆ; ಕುಣಿದು ಕುಪ್ಪಳಿಸಿದ ಕ್ರಿಸ್​ ಗೇಲ್​, ಉಸೇನ್‌ ಬೋಲ್ಟ್

T20 World Cup 2024: ಎಂಟು ಬಾರಿಯ ಒಲಂಪಿಕ್ ಚಿನ್ನದ ಪದಕ ವಿಜೇತ ಉಸೇನ್ ಬೋಲ್ಟ್, ವೆಸ್ಟ್ ಇಂಡೀಸ್ ಕ್ರಿಕೆಟ್ ಐಕಾನ್‌ಗಳಾದ ಕ್ರಿಸ್ ಗೇಲ್, ಶಿವನಾರಾಯಣ್ ಚಂದ್ರಪಾಲ್ ಮತ್ತು ಮಹಿಳಾ ಆಟಗಾರ್ತಿ ಸ್ಟಾಫಾನಿ ಟೇಲರ್, ಅಮೆರಿಕದ ಬೌಲರ್ ಅಲಿ ಖಾನ್ ಸೇರಿದಂತೆ ಇತರ ಪ್ರಮುಖ ಕೆರಿಬಿಯನ್ ವ್ಯಕ್ತಿಗಳು ಈ ಗೀತೆಯಲ್ಲಿ ಕಾಣಿಸಿಕೊಂಡಿದ್ದಾರೆ.

VISTARANEWS.COM


on

T20 World Cup 2024
Koo

ನವದೆಹಲಿ: ಅಮೆರಿಕ ಮತ್ತು ವೆಸ್ಟ್​ ಇಂಡೀಸ್​ ಜಂಟಿ ಆತಿಥ್ಯದಲ್ಲಿ ನಡೆಯುವ ಐಸಿಸಿ(ICC) ಪುರುಷರ ಟಿ20 ವಿಶ್ವಕಪ್​ ಟೂರ್ನಿ(T20 World Cup 2024) ಆರಂಭಕ್ಕೆ ಇನ್ನು ಕೇವಲ ಬೆರಳೆಣಿಕೆಯ ದಿನಗಳು ಮಾತ್ರ ಬಾಕಿ ಉಳಿದಿವೆ. ವಿಶ್ವಕಪ್​ ಪಂದ್ಯವಾವಳಿಗಳು ಜೂನ್​ 1ರಿಂದ ಆರಂಭವಾಗಿ ಜೂನ್​ 29ಕ್ಕೆ ಮುಕ್ತಾಯ ಕಾಣಲಿದೆ. ಒಟ್ಟು 55 ಪಂದ್ಯಗಳು ಇರಲಿದೆ. ಟೂರ್ನಿ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಂತೆಯೇ ಐಸಿಸಿ ಪಂದ್ಯಾವಳಿಯ ಅಧಿಕೃತ ಗೀತೆಯನ್ನು ಅನಾವರಣಗೊಳಿಸಿದೆ.

ಗ್ರ್ಯಾಮಿ ಪ್ರಶಸ್ತಿ ವಿಜೇತ ಕಲಾವಿದ ಸೀನ್ ಪಾಲ್ ಮತ್ತು ಸೋಕಾ ಸೂಪರ್‌ಸ್ಟಾರ್ ಕೇಸ್ ಅವರು ‘ಔಟ್ ಆಫ್ ದಿಸ್ ವರ್ಲ್ಡ್’ ಎಂಬ ಶೀರ್ಷಿಕೆಯ ಗೀತೆಯನ್ನು ರಚಿಸಿದ್ದಾರೆ. ಇದು ಸಂಗೀತ ಮತ್ತು ಕ್ರೀಡೆಗಳೆರಡರಲ್ಲೂ ಕೆಲವು ಪ್ರಮುಖ ವ್ಯಕ್ತಿಗಳ ನಡುವಿನ ಸಹಯೋಗವನ್ನು ಇದು ಒಳಗೊಂಡಿದೆ. ಅಮೆರಿಕದ ಈ ಮೂರು ಕ್ರೀಡಾಂಗಣಗಳಲ್ಲಿ 16 ಪಂದ್ಯಗಳು ನಡೆಯಲಿದೆ. ಉಳಿದ 39 ಪಂದ್ಯಗಳಿಗೆ ವೆಸ್ಟ್ ಇಂಡೀಸ್ ಆತಿಥ್ಯ ವಹಿಸಿದೆ. 

ಎಂಟು ಬಾರಿಯ ಒಲಂಪಿಕ್ ಚಿನ್ನದ ಪದಕ ವಿಜೇತ ಉಸೇನ್ ಬೋಲ್ಟ್, ವೆಸ್ಟ್ ಇಂಡೀಸ್ ಕ್ರಿಕೆಟ್ ಐಕಾನ್‌ಗಳಾದ ಕ್ರಿಸ್ ಗೇಲ್, ಶಿವನಾರಾಯಣ್ ಚಂದ್ರಪಾಲ್ ಮತ್ತು ಮಹಿಳಾ ಆಟಗಾರ್ತಿ ಸ್ಟಾಫಾನಿ ಟೇಲರ್, ಅಮೆರಿಕದ ಬೌಲರ್ ಅಲಿ ಖಾನ್ ಸೇರಿದಂತೆ ಇತರ ಪ್ರಮುಖ ಕೆರಿಬಿಯನ್ ವ್ಯಕ್ತಿಗಳು ಈ ಗೀತೆಯಲ್ಲಿ ಕಾಣಿಸಿಕೊಂಡಿದ್ದಾರೆ. ಬೀಚ್​ ಒಂದರಲ್ಲಿ ಟಿ20 ವಿಶ್ವಕಪ್​ ಎಂದು ಬರೆದಿರುವ ಚೆಂಡೊಂದು ಬಿದ್ದಿರುತ್ತದೆ. ಇದನ್ನು ಹೆಕ್ಕುವ ಮೂಲಕ ಗೀತೆ ಆರಂಭೊಂಡಿದೆ. ವಿರಾಟ್​ ಕೊಹ್ಲಿ, ರೋಹಿತ್​ ಶರ್ಮ, ಜಾಸ್​ ಬಟ್ಲರ್​, ಗ್ಲೆನ್​ ಮ್ಯಾಕ್ಸ್​ವೆಲ್ ಅವರ ಕ್ರಿಕೆಟ್​ ಶಾಟ್​ಗಳ ಶೈಲಿಯಲ್ಲಿ ನೃತ್ಯ ಮಾಡಿದ್ದು ಕೂಡ ಈ ದೃಶ್ಯದಲ್ಲಿ ನೋಡಬಹುದಾಗಿದೆ.

ಇದನ್ನೂ ಓದಿ T20 World Cup 2024: ಟಿ20 ವಿಶ್ವಕಪ್​ಗೆ ಪಾಕಿಸ್ತಾನ ತಂಡ ಪ್ರಕಟಿಸಲು ಹೆದರುತ್ತಿರುವುದಕ್ಕೆ ಇದುವೇ ಅಸಲಿ ಕಾರಣ

ಕ್ರಿಕೆಟ್ ಯಾವಾಗಲೂ ಕೆರಿಬಿಯನ್ ಸಂಸ್ಕೃತಿಯ ಪ್ರಮುಖ ಭಾಗವಾಗಿದೆ. ಆದ್ದರಿಂದ ಟಿ20 ವಿಶ್ವಕಪ್‌ಗಾಗಿ ಅಧಿಕೃತ ಗೀತೆಯನ್ನು ಬರೆಯಲು ಮತ್ತು ರೆಕಾರ್ಡ್ ಮಾಡಲು ನನಗೆ ಗೌರವವಿದೆ. ಈ ಗೀತೆಗೆ ಸ್ಫೂರ್ತಿ ನೀಡಿದ ಸೃಜನಾತ್ಮಕ ಇನ್‌ಪುಟ್‌ನ ಸಂಪೂರ್ಣ ಸಿಬ್ಬಂದಿಗೆ ಗೌರವವು ಸಲ್ಲುತ್ತದೆ ಎಂದು ಸೋಕಾ ಸೂಪರ್‌ಸ್ಟಾರ್ ಕೆಸ್ ಹೇಳಿದ್ದಾರೆ.

ವಿಶ್ವಕಪ್​ಗೆ ಮುನ್ನ ಎಲ್ಲ 20 ತಂಡಗಳು ತಮ್ಮ ಆಗಮನಕ್ಕೆ ತಕ್ಕಂತೆ ತಲಾ 2 ಅಭ್ಯಾಸ ಪಂದ್ಯಗಳನ್ನು ಆಡಲಿವೆ. ಟೂರ್ನಿಯ ಲೀಗ್​ ಮತ್ತು ಸೂಪರ್​ 8 ಪಂದ್ಯಗಳಿಗೆ ಯಾವುದೇ ಮೀಸಲು ದಿನ ಇಲ್ಲ. ಈ ಪಂದ್ಯಗಳಿಗೆ ಮಳೆ ಬಂದು ಪಂದ್ಯ ರದ್ದಾದರೆ ಸಮಾನ ಅಂಕ ನೀಡಲಾಗುತ್ತದೆ. ಆದರೆ, ಸೆಮಿಫೈನಲ್​ ಮತ್ತು ಫೈನಲ್​ ಪಂದ್ಯಗಳಿಗೆ ಮೀಸಲು ದಿನ ಇರಲಿದೆ. ಒಂದೊಮ್ಮೆ ಸೆಮಿ ಮತ್ತು ಫೈನಲ್​ ಫೈನಲ್​ ಪಂದ್ಯಗಳು ಕೂಡ ಮೀಸಲು ದಿನವೂ ನಡೆಯದಿದ್ದರೆ ಆಗ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಪಡೆದ ತಂಡಕ್ಕೆ ಲಾಭ ಸಿಗಲಿದೆ.

Continue Reading
Advertisement
Prajwal Revanna Case If Prajwal and Revanna fails to appear infront of SIT they will be arrested says Dr Parameshwara
ಕ್ರೈಂ6 seconds ago

Prajwal Revanna Case: ಪ್ರಜ್ವಲ್‌, ರೇವಣ್ಣಗೆ ಮತ್ತೊಂದು ನೋಟಿಸ್‌; ವಿಚಾರಣೆಗೆ ಬಾರದಿದ್ದರೆ ಅರೆಸ್ಟ್‌: ಡಾ. ಜಿ. ಪರಮೇಶ್ವರ್

gold rate today
ಚಿನ್ನದ ದರ15 mins ago

Gold Rate Today: ಚಿನ್ನದ ಬೆಲೆ ಮತ್ತೆ ಇಳಿಕೆ; 10 ಗ್ರಾಂ 22 ಕ್ಯಾರಟ್‌ ಬಂಗಾರದ ಬೆಲೆಯಲ್ಲಿ ₹500 ಕಡಿತ

Gurucharan Singh Taarak Mehta Ka Ooltah Chashmah actor planned disappearance
ಕಿರುತೆರೆ15 mins ago

Gurucharan Singh: ಎರಡು ವಾರ ಕಳೆದರೂ ಪತ್ತೆಯಾಗದ  ʻತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾʼ ಖ್ಯಾತಿಯ ನಟ!

Ram Mandir
ದೇಶ35 mins ago

Ram Mandir:ಪಾಕ್‌ನ 200 ಸಿಂಧಿ ಯಾತ್ರಿಕರು ಅಯೋಧ್ಯೆಗೆ ಭೇಟಿ; ಭರ್ಜರಿ ಸ್ವಾಗತ

MS Dhoni
ಕ್ರೀಡೆ35 mins ago

MS Dhoni: ಈಡೇರಿದ ಶತಾಯುಷಿ ಅಭಿಮಾನಿಯ ಆಸೆ; ಧೋನಿ ಭೇಟಿಯಾಗಿ ವಿಶೇಷ ಉಡುಗೊರೆ ಪಡೆದ ರಾಮದಾಸ್

Drowned in water
ಕೋಲಾರ46 mins ago

Drowned In water : ಈಜಲು ಕೃಷಿ ಹೊಂಡಕ್ಕೆ ಜಿಗಿದ; ಸಾವಿನ ಕೊನೆ ಕ್ಷಣವನ್ನು ಮೊಬೈಲ್‌ನಲ್ಲಿ ಸೆರೆಹಿಡಿದ ತಂಗಿ!

Triple Talaq
ದೇಶ60 mins ago

Triple Talaq: ಚಲಿಸುವ ರೈಲಿನಲ್ಲೇ ಪತ್ನಿಗೆ ತ್ರಿವಳಿ ತಲಾಕ್‌ ನೀಡಿ ಪರಾರಿಯಾದ ಭೂಪ

Covishield vaccine Puneeth Rakumar
ಸ್ಯಾಂಡಲ್ ವುಡ್1 hour ago

Covishield vaccine: ಕೋವಿಶೀಲ್ಡ್‌ ‌ ತಗೋಬೇಡಿ, ಒಳ್ಳೆಯದಲ್ಲ ಎಂದು ಅಪ್ಪುಗೆ ಮನವಿ ಮಾಡಿದ್ದ ಅಭಿಮಾನಿ: ಪೋಸ್ಟ್‌ ವೈರಲ್‌!

Kavya Maran
ಕ್ರೀಡೆ1 hour ago

Kavya Maran: ರೋಚಕ ಗೆಲುವು ಕಂಡು ಆಕಾಶಕ್ಕೆ ಜಿಗಿದಂತೆ ಕುಣಿದು ಸಂಭ್ರಮಿಸಿದ ಕಾವ್ಯಾ ಮಾರನ್; ವಿಡಿಯೊ ವೈರಲ್​

murder case stabbing bengaluru
ಕ್ರೈಂ1 hour ago

Murder Case: ಎಣ್ಣೆ ಪಾರ್ಟಿ ನಂತರ ರಿಕ್ಷಾ ಚಾಲಕನ ಇರಿದು ಕೊಂದ ರೌಡಿ ಶೀಟರ್‌

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ7 hours ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ17 hours ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ1 day ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ3 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20244 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20244 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ4 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20245 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20245 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20245 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

ಟ್ರೆಂಡಿಂಗ್‌