Asian Games; ಪದಕದ ಶತಕ ಬಾರಿಸಿದ ಭಾರತ; ಒಂದೇ ಗಂಟೆ ಅಂತರದಲ್ಲಿ 3 ಚಿನ್ನ ಬೇಟೆ - Vistara News

ಕ್ರೀಡೆ

Asian Games; ಪದಕದ ಶತಕ ಬಾರಿಸಿದ ಭಾರತ; ಒಂದೇ ಗಂಟೆ ಅಂತರದಲ್ಲಿ 3 ಚಿನ್ನ ಬೇಟೆ

ಏಷ್ಯನ್ ಗೇಮ್ಸ್​ನಲ್ಲಿ ಭಾರತ ಐತಿಹಾಸಿಕ ಸಾಧನೆ ಮಾಡಿದೆ. ಇದೇ ಮೊದಲ ಬಾರಿಗೆ ಪದಕಗಳ ಶತವನ್ನು ಬಾರಿಸಿದೆ. ಈ ಮೂಲಕ ಭಾರತ ಏಷ್ಯನ್​ ಗೇಮ್ಸ್ ಇತಿಹಾಸದಲ್ಲೇ ಅತ್ಯಧಿಕ ಪದಕ ಗೆದ್ದ ಚಾರಿತ್ರಿಕ ದಾಖಲೆಯೊಂದನ್ನು ನಿರ್ಮಿಸಿದೆ.

VISTARANEWS.COM


on

asian games
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹ್ಯಾಂಗ್‌ಝೌ: ಏಷ್ಯನ್ ಗೇಮ್ಸ್​ನಲ್ಲಿ ಭಾರತ ಐತಿಹಾಸಿಕ ಸಾಧನೆ ಮಾಡಿದೆ. ಇದೇ ಮೊದಲ ಬಾರಿಗೆ ಪದಕಗಳ ಶತವನ್ನು ಬಾರಿಸಿದೆ. ಈ ಮೂಲಕ ಭಾರತ ಏಷ್ಯನ್​ ಗೇಮ್ಸ್ ಇತಿಹಾಸದಲ್ಲೇ ಅತ್ಯಧಿಕ ಪದಕ ಗೆದ್ದ ಚಾರಿತ್ರಿಕ ದಾಖಲೆಯೊಂದನ್ನು ನಿರ್ಮಿಸಿದೆ. 14ನೇ ದಿನವಾದ ಶನಿವಾರ ಭಾರತ ಒಂದು ಗಂಟೆಯ ಅಂತರದಲ್ಲಿ ಮೂರು ಚಿನ್ನದ ಪದಕ ಜಯಿಸಿದೆ. ಮಹಿಳಾ ಕಬಡ್ಡಿ ತಂಡ ಚಿನ್ನ ಗೆಲ್ಲುವ ಮೂಲಕ ಭಾರತ ನೂರನೇ ಪದಕವನ್ನು ಪೂರ್ತಿಗೊಳಿಸಿತು.

ಚಿನ್ನ ಗೆದ್ದ ಮಹಿಳಾ ಕಬಡ್ಡಿ ತಂಡ

ಅತ್ಯಂತ ರೋಚಕವಾಗಿ ನಡೆದ ಮಹಿಳಾ ಕಬಡ್ಡಿ ಫೈನಲ್​ ಪಂದ್ಯದಲ್ಲಿ ಭಾರತ ರೋಚಕ ಗೆಲುವು ಸಾಧಿಸಿತು. ಕೊನೆಯ ಕ್ಷಣದ ವರೆಗೂ ಈ ಪಂದ್ಯ ರೋಚಕತೆ ಸೃಷ್ಟಿಸಿತು. ಆದರೆ ಅದೃಷ್ಟ ಭಾರತಕ್ಕೆ ಒಲಿಯಿತು. ಕೇವಲ ಒಂದು ಅಂಕದ ಅಂತರದಲ್ಲಿ ಭಾರತ ವನಿತೆಯರು ಗೆದ್ದು ಬೀಗಿದರು. ಗೆಲುವಿನ ಅಂತರ 26-25. ಈ ಪದಕ ಒಲಿದ ತಕ್ಷಣ ಭಾರತ ಪದಕದ ಶತಕವನ್ನು ಬಾರಿಸಿತು.

ಆರ್ಚರಿಯಲ್ಲಿ ಚಿನ್ನ

ಇದಕ್ಕೂ ಮುನ್ನ ನಡೆದ ಪುರುಷರ ಕಾಂಪೌಂಡ್ ಸ್ಪರ್ಧೆಯಲ್ಲಿ ಓಜಸ್ ಪ್ರವೀಣ್ ಅವರು ತಮ್ಮದೇ ದೇಶದ ಅಭಿಷೇಕ್ ವರ್ಮಾ ಅವರನ್ನು ಸೋಲಿಸಿ ಚಿನ್ನ ಗೆದ್ದರು. ಸೋಲು ಕಂಡ ಅಭಿಷೇಕ್​ ಬೆಳ್ಳಿ ಗೆದ್ದರು. ಮಹಿಳೆಯರ ವೈಯಕ್ತಿಕ ಕಾಂಪೌಂಡ್ ಸ್ಪರ್ಧೆಯಲ್ಲಿ ಜ್ಯೋತಿ ಸುರೇಖಾ ಚಿನ್ನ, ಅದಿತಿ ಸ್ವಾಮಿ ಕಂಚಿನ ಪದಕಕ್ಕೆ ಮುತ್ತಿಟ್ಟಿದ್ದಾರೆ. ಭಾರತ ಪುರುಷರ ಕ್ರಿಕೆಟ್ ತಂಡ ಮತ್ತು ಬ್ಯಾಡ್ಮಿಂಟನ್ ಡಬಲ್ಸ್ ಜೋಡಿ ಸಾತ್ವಿಕ್​ ಮತ್ತು ಚಿರಾಗ್ ಶೆಟ್ಟಿ ಚಿನ್ನದ ಪದಕಕ್ಕಾಗಿ ಕಣಕ್ಕಿಳಿಯಲಿದ್ದಾರೆ.

ಇದನ್ನೂ ಓದಿ Asian Games Men’s T20: ಆಫ್ಘನ್​ ಸೊಕ್ಕು ಮುರಿದು ಐತಿಹಾಸಿಕ ಚಿನ್ನ ಗೆಲ್ಲಲಿ ಗಾಯಕ್ವಾಡ್​ ಪಡೆ

ಓಜಸ್ ಫೈನಲ್​ ಪಂದ್ಯದಲ್ಲಿ 148-147 ಅಂಕಗಳ ಅಂತರದಿಂದ ಭಾರತದ ಸ್ಪರ್ಧಿ ಅಭಿಷೇಕ್ ವರ್ಮಾ ಅವರನ್ನು ಸೋಲಿಸಿ ಚಿನ್ನ ಗೆದ್ದರು. ಮಹಿಳಾ ವಿಭಾಗದಲ್ಲಿ ಭಾರತದ ಅದಿತಿ ಗೋಪಿಚಂದ್ ಸ್ವಾಮಿ ವೈಯಕ್ತಿಕ ಕಾಂಪೌಂಡ್ ಸ್ಪರ್ಧೆಯಲ್ಲಿ ಇಂಡೋನೇಷ್ಯಾದ ರೈತ್ ಫಡ್ಲಿ ಅವರನ್ನು 146-140 ಅಂಕಗಳಿಂದ ಮಣಿಸಿ ಕಂಚು ಗೆದ್ದರು.

ಈ ಹಿಂದೆ 2018ರಲ್ಲಿ ಭಾರತ 70 ಪದಕಗಳನ್ನು ಜಯಿಸಿದ್ದು ಇದುವರೆಗಿನ ಶ್ರೇಷ್ಠ ಸಾಧನೆಯಾಗಿತ್ತು. ಆದರೆ ಈ ಬಾರಿ 100 ಪದಕ ಗೆದ್ದು ಐತೊಹಾಸಿಕ ಸಾಧನೆ ಮಾಡಿದೆ. ಮುಂದಿನ ವರ್ಷ ಪ್ಯಾರಿಸ್​ ಒಲಿಂಪಿಕ್ಸ್​ಗೂ ಮುನ್ನ ಭಾರತೀಯರ ಈ ಸಾಧನೆ ಕ್ರೀಡಾ ಕ್ಷೇತ್ರದಲ್ಲಿ ಹೊಸ ಕ್ರಾಂತಿಯನ್ನು ಮೂಡಿಸಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರಿಕೆಟ್

Andre Russell Dance: ಬಾಲಿವುಡ್ ನಟಿ ಅನನ್ಯಾ ಪಾಂಡೆ ಜತೆ ‘ಲುಟ್ ಪಟ್ ಗಯಾ’ ಹಾಡಿಗೆ ಡ್ಯಾನ್ಸ್​ ಮಾಡಿದ ಆ್ಯಂಡ್ರೆ ರಸೆಲ್​

Andre Russell Dance: ಇತ್ತೀಚಿಗೆ ರಸೆಲ್ ತನ್ನ ಕಾರಿನಲ್ಲಿ ಪ್ರಯಾಣಿಸುವಾಗ ಮತ್ತು ವಿಮಾನ ಪ್ರಯಾಣದ ಸಮಯದಲ್ಲಿ ಶಾರುಖ್​ ಖಾನ್​ ನಟನೆಯ(Shah Rukh Khan) ಡಂಕಿ ಚಲನಚಿತ್ರದ ಅಪ್ರತಿಮ ಹಾಡು “ಲುಟ್ ಪುಟ್ ಗಯಾ” ಹಾಡನ್ನು ಹಾಡಿದ್ದರು. ಈ ವೇಳೆ ರಿಂಕು ಸಿಂಗ್​ ಕೂಡ ರಸೆಲ್​ಗೆ ಸಾಥ್​ ನೀಡಿದ್ದರು. ಈ ವಿಡಿಯೊ ಕೂಡ ವೈರಲ್​ ಆಗಿತ್ತು.

VISTARANEWS.COM


on

Andre Russell Dance:
Koo

ಮುಂಬಯಿ: ಭಾನುವಾರ(ಮೇ 26) ನಡೆದಿದ್ದ ಐಪಿಎಲ್​ ಫೈನಲ್​ ಪಂದ್ಯದಲ್ಲಿ ಕೋಲ್ಕತ್ತಾ ನೈಟ್​ ರೈಡರ್ಸ್​ ತಂಡ ಸನ್​ರೈಸರ್ಸ್ ಹೈದರಾಬಾದ್​ ವಿರುದ್ಧ 8 ವಿಕೆಟ್​ಗಳ ಗೆಲುವು ಸಾಧಿಸಿ ಮೂರನೇ ಬಾರಿಗೆ ಚಾಂಪಿಯನ್​ ಪಟ್ಟ ಅಲಂಕರಿಸಿತು. ಈ ಗೆಲುವಿನ ಬಳಿಕ ಕೆಕೆಆರ್​ ತಂಡ ಪಬ್​ನಲ್ಲಿ ಪಾರ್ಟಿ ಮಾಡಿತ್ತು. ಇದೇ ವೇಳೆ ಆ್ಯಂಡ್ರೆ ರಸೆಲ್(Andre Russell Dance)​ ಅವರು ಬಾಲಿವುಡ್ ನಟಿ ಅನನ್ಯಾ ಪಾಂಡೆ(Ananya Pandey) ಜತೆ ಶಾರೂಖ್ ಖಾನ್ ಅಭಿನಯದ ಡಂಕಿ ಚಿತ್ರದ​ ‘ಲುಟ್ ಪಟ್ ಗಯಾ’ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಈ ವಿಡಿಯೊ ವೈರಲ್​ ಆಗಿದೆ.

ಇತ್ತೀಚಿಗೆ ರಸೆಲ್ ತನ್ನ ಕಾರಿನಲ್ಲಿ ಪ್ರಯಾಣಿಸುವಾಗ ಮತ್ತು ವಿಮಾನ ಪ್ರಯಾಣದ ಸಮಯದಲ್ಲಿ ಶಾರುಖ್​ ಖಾನ್​ ನಟನೆಯ(Shah Rukh Khan) ಡಂಕಿ ಚಲನಚಿತ್ರದ ಅಪ್ರತಿಮ ಹಾಡು “ಲುಟ್ ಪುಟ್ ಗಯಾ” ಹಾಡನ್ನು ಹಾಡಿದ್ದರು. ಈ ವೇಳೆ ರಿಂಕು ಸಿಂಗ್​ ಕೂಡ ರಸೆಲ್​ಗೆ ಸಾಥ್​ ನೀಡಿದ್ದರು. ಈ ವಿಡಿಯೊ ಕೂಡ ವೈರಲ್​ ಆಗಿತ್ತು.

ವೆಸ್ಟ್​ ಇಂಡೀಸ್​ ತಂಡ ಸ್ಫೋಟಕ ಬ್ಯಾಟರ್​ ರಸೆಲ್(Andre Russell) ಬಾಲಿವುಡ್​ ನಟಿ ಅವಿಕಾ ಗೋರ್(Avika Gor) ಜತೆ ಲುಂಗಿಯಲ್ಲಿ ಮಸ್ತ್​ ಸ್ಟೆಪ್ಸ್ ಹಾಕಿದ ವಿಡಿಯೊ ಕೂಡ ಕೆಲವು ದಿನಗಳ ಹಿಂದೆ ವೈರಲ್​ ಆಗಿತ್ತು. ​’ಲಡ್ಕಿ ತು ಕಮಲ್ ಕಿ’ ಎನ್ನುವ ಹಾಡಿಗೆ ರೆಸೆಲ್ ಅವಿಕಾ ಸೇರಿ ಹೆಜ್ಜೆ ಹಾಕಿರುವ ಈ ಹಾಡು ಯೂಟ್ಯೂಬ್​ನಲ್ಲಿ ಮೇ 9 ರಂದು ಬಿಡುಗಡೆಯಾಗಿತ್ತು.

ಈ ಹಾಡಿನಲ್ಲಿ ರಸೆಲ್​ ಕೇಸರಿ ಬಣ್ಣದ ಲುಂಗಿ ತೊಟ್ಟು, ಕಪ್ಪು ಬಣ್ಣದ ಬನಿಯನ್ ಹಾಗೂ ಸ್ಟೈಲಿಶ್ ಶರ್ಟ್​ ಧರಿಸಿ ಎಲ್ಲರ ಗಮನ ತನ್ನತ್ತ ಸೆಳೆದಿದ್ದಾರೆ. ಅವಿಕಾ ಗೋರ್ ನೀಲಿ ಸೀರೆಯಲ್ಲಿ ಮಿಂಚುವ ಜತೆಗೆ ಬೋಲ್ಡ್​ ಆಗಿ ಸೊಂಟ ಬಳುಕಿಸಿದ್ದಾರೆ. ಅವಿಕಾ ಗೋರ್ ಭಾರತೀಯ ನಟಿಯಾಗಿದ್ದು, ಅವರು ಮುಖ್ಯವಾಗಿ ಹಿಂದಿ ಮತ್ತು ತೆಲುಗು ಚಲನಚಿತ್ರಗಳು ಮತ್ತು ಕಿರುತೆರೆಯಲ್ಲಿ ನಟಿಸುತ್ತಾರೆ.

ಇದನ್ನೂ ಓದಿ IPL 2024 : ಇದು ಕಾಕತಾಳಿಯವೇ? ಐಪಿಎಲ್ ಮತ್ತು ಡಬ್ಲ್ಯುಪಿಎಲ್​ ಫೈನಲ್ ರಿಸಲ್ಟ್​​ನಲ್ಲಿದೆ ಸಾಮ್ಯತೆ

ಮೂರನೇ ಟ್ರೋಫಿ ಗೆದ್ದ ಕೆಕೆಆರ್​


ಚೆನ್ನೈಯ ಎಂ.ಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದಿದ್ದ ಅತ್ಯಂತ ನೀರಸ ಫೈನಲ್​ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್​ ನಡೆಸಿದ ಹೈದರಾಬಾದ್​ ತಂಡ 18.3 ಓವರ್​ಗಳಲ್ಲಿ 113 ರನ್​ಗೆ ಸರ್ವಪತನ ಕಂಡಿತು. ಈ ಅಲ್ಪ ಮೊತ್ತವನ್ನು ಚೇಸಿಂಗ್​ ನಡೆಸಿದ ಕೆಕೆಆರ್​ ಕೇವಲ 10.3 ಓವರ್​ನಲ್ಲಿ 2 ವಿಕೆಟ್​ ನಷ್ಟಕ್ಕೆ 114 ರನ್​ ಬಾರಿಸಿ ಚಾಂಪಿಯನ್​ ಪಟ್ಟ ಅಲಂಕರಿಸಿತು. ಇದು ಕೆಕೆಆರ್​ಗೆ ಒಲಿದ ಮೂರನೇ ಐಪಿಎಲ್​ ಟ್ರೋಫಿ.

Continue Reading

ಕ್ರೀಡೆ

Rishabh Pant Video Calls: ನ್ಯೂಯಾರ್ಕ್​ನಿಂದ ವಿಡಿಯೊ ಕಾಲ್​ ಮಾಡಿ ರಿಂಕು ಸಿಂಗ್​ಗೆ ಅಭಿನಂದಿಸಿದ ಪಂತ್​

Rishabh Pant Video Calls: ರಿಂಕು ಸಿಂಗ್(Rinku Singh)​ ಅವರಿಗೆ ರಿಷಭ್​ ಪಂತ್(Rishabh Pant)​ ನ್ಯೂಯಾರ್ಕ್​ನಿಂದ ವಿಡಿಯೊ ಕಾಲ್(Rishabh Pant Video Calls)​ ಮಾಡಿ ಅಭಿನಂದಿಸಿದ್ದಾರೆ. ಇದೇ ವೇಳೆ ರಿಂಕು ತಾನು ಮೇ 28ರಂದು ನ್ಯೂಯಾರ್ಕ್​ಗೆ ಬರುತ್ತಿದ್ದೇನೆ ಎಂದು ಹೇಳಿದ್ದಾರೆ. ಈ ವಿಡಿಯೊ ವೈರಲ್(Viral Video)​ ಆಗಿದೆ.

VISTARANEWS.COM


on

Rishabh Pant Video Calls
Koo

ಚೆನ್ನೈ: ಟಿ20 ವಿಶ್ವಕಪ್(T20 World Cup 2024)​ ಟೂರ್ನಿಯನ್ನಾಡಲು ಟೀಮ್​ ಇಂಡಿಯಾದ ಮೊದಲ ಬ್ಯಾಚ್​ ಈಗಾಗಲೇ ನ್ಯೂಯಾರ್ಕ್​ ತಲುಪಿದೆ. ಆಟಗಾರರು ನ್ಯೂಯಾರ್ಕ್​ಗೆ ತಲುಪಿದ ವಿಚಾರವನ್ನು ಬಿಸಿಸಿಐ(BCCI) ತನ್ನ ಅಧಿಕೃತ ಟ್ವಿಟರ್​ ಎಕ್ಸ್​ ಖಾತೆಯಲ್ಲಿ ಹಂಚಿಕೊಂಡಿದೆ. ದ್ವಿತೀಯ ಬ್ಯಾಚ್​ ಇಂದು(28) ಪ್ರಯಾಣ ಬೆಳೆಸಲಿದೆ. ಮೇ 26ರಂದು ನಡೆದಿದ್ದ ಐಪಿಎಲ್​ ಫೈನಲ್​ನಲ್ಲಿ ಕೆಕೆಆರ್​ ತಂಡ ಹೈದರಾಬಾದ್​ ತಂಡವನ್ನು ಮಣಿಸಿ ಕಪ್​ ಗೆದ್ದಿತ್ತು. ಈ ಗೆಲುವಿನ ಬಳಿಕ ರಿಂಕು ಸಿಂಗ್(Rinku Singh)​ ಅವರಿಗೆ ರಿಷಭ್​ ಪಂತ್(Rishabh Pant)​ ನ್ಯೂಯಾರ್ಕ್​ನಿಂದ ವಿಡಿಯೊ ಕಾಲ್(Rishabh Pant Video Calls)​ ಮಾಡಿ ಅಭಿನಂದಿಸಿದ್ದಾರೆ. ಇದೇ ವೇಳೆ ರಿಂಕು ತಾನು ಮೇ 28ರಂದು ನ್ಯೂಯಾರ್ಕ್​ಗೆ ಬರುತ್ತಿದ್ದೇನೆ ಎಂದು ಹೇಳಿದ್ದಾರೆ. ಈ ವಿಡಿಯೊ ವೈರಲ್(Viral Video)​ ಆಗಿದೆ.

ವಿಡಿಯೊ ಕಾಲ್​ ಮೂಲಕ ರಿಂಕು ಸಿಂಗ್​ ಮಾತ್ರವಲ್ಲದೆ ನಿತೇಶ್​ ರಾಣಾ ಕೂಡ ಪಂತ್​ ಜತೆ ಮಾತನಾಡಿದ್ದಾರೆ. ರಿಂಕು ಅವರು ಟಿ20ಯಲ್ಲಿ ಮೀಸಲು ಆಟಗಾರನಾಗಿ ಅವಕಾಶ ಪಡೆದಿದ್ದಾರೆ. ಭಾರತ ಜೂನ್​ 1ರಂದು ಬಾಂಗ್ಲಾದೇಶ ವಿರುದ್ಧ ಅಭ್ಯಾಸ ಪಂದ್ಯವನ್ನಾಡಲಿದೆ. ತಂಡದ ನಾಯಕ ರೋಹಿತ್​, ಶರ್ಮ, ಕೋಚ್ ರಾಹುಲ್​ ದ್ರಾವಿಡ್​, ರವೀಂದ್ರ ಜಡೇಜಾ, ಕುಲ್​ದೀಪ್​ ಯಾದವ್​, ಮೊಹಮ್ಮದ್ ಸಿರಾಜ್​ ಸೇರಿ ಹಲವು ಆಟಗಾರರು ಮತ್ತು ಕೋಚಿಂಗ್​ ಸಿಬ್ಬಂದಿಗಳು ಶನಿವಾರದಂದು  ಮುಂಬೈ ವಿಮಾನ ನಿಲ್ದಾಣದಿಂದ ಪ್ರಯಾಣಿಸಿದ್ದರು.

ಇದನ್ನೂ ಓದಿ IPL 2024 : ಇದು ಕಾಕತಾಳಿಯವೇ? ಐಪಿಎಲ್ ಮತ್ತು ಡಬ್ಲ್ಯುಪಿಎಲ್​ ಫೈನಲ್ ರಿಸಲ್ಟ್​​ನಲ್ಲಿದೆ ಸಾಮ್ಯತೆ

ವಿರಾಟ್​ ಕೊಹ್ಲಿ ಅವರು ಮೇ 30ಕ್ಕೆ ಏಕಾಂಗಿಯಾಗಿ ನ್ಯೂಯಾರ್ಕ್​ಗೆ ಪ್ರಯಾಣಿಸಲಿದ್ದಾರೆ ಎಂದು ವರದಿಯಾಗಿದೆ, ಜತೆಗೆ ಜೂನ್​ 1ರಂದು ನಡೆಯುವ ಬಾಂಗ್ಲಾದೇಶ ವಿರುದ್ಧದ ಅಭ್ಯಾಸ ಪಂದ್ಯಕ್ಕೂ ಕೊಹ್ಲಿ ಅಲಭ್ಯರಾಗಲಿದ್ದಾರೆ ಎನ್ನಲಾಗಿದೆ. “ಕೊಹ್ಲಿ ಅವರು ತಡವಾಗಿ ತಂಡವನ್ನು ಸೇರಿಕೊಳ್ಳುತ್ತಾರೆ ಎಂದು ನಮಗೆ ಮೊದಲೇ ತಿಳಿಸಿದ್ದರು. ಇದೇ ಕಾರಣಕ್ಕೆ ಬಿಸಿಸಿಐ ಅವರ ವೀಸಾವನ್ನು ಕಾಯ್ದಿರಿಸಿದೆ. ಅವರು ಮೇ 30 ರ ಮುಂಜಾನೆ ನ್ಯೂಯಾರ್ಕ್‌ಗೆ ಪ್ರಯಾಣಿಸುವ ನಿರೀಕ್ಷೆಯಿದೆ. ಅವರ ಮನವಿಗೆ ಬಿಸಿಸಿಐ ಒಪ್ಪಿಗೆ ನೀಡಿದೆ” ಎಂದು ಬಿಸಿಸಿಐ ಅಧಿಕಾರಿಯೊಬ್ಬರು ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

ಕೊಹ್ಲಿ ಅಲ್ಲದೆ, ವಿಕೆಟ್ ಕೀಪರ್-ಬ್ಯಾಟರ್ ಸಂಜು ಸ್ಯಾಮ್ಸನ್ ಮತ್ತು ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಕೂಡ ತಡವಾಗಿ ತಂಡವನ್ನು ಸೇರಿಕೊಳ್ಳಲಿದ್ದಾರೆ. ದುಬೈನಲ್ಲಿ ವೈಯಕ್ತಿಕ ಕೆಲಸದ ನಿಮಿತ್ತ ತಂಡ ಸೇರಲು ತಡವಾಗಲಿದೆ ಎಂದು ಸಂಜು ಈಗಾಗಲೇ ಬಿಸಿಸಿಐಗೆ ತಿಳಿಸಿರುವ ಕಾರಣ ಬಿಸಿಸಿಐ ಸ್ಯಾಮ್ಸನ್​ಗೆ ತಡವಾಗಿ ತಂಡ ಸೇರಲು ಅವಕಾಶ ನೀಡಿದೆ.

ಭಾರತ ತನ್ನ ಮೊದಲ ಲೀಗ್​ ಪಂದ್ಯವನ್ನು ಜೂನ್‌ 5 ರಂದು ಐರ್ಲೆಂಡ್​ ವಿರುದ್ಧ ಆಡಲಿದೆ. ಭಾರತವು ತನ್ನ ಗುಂಪು ಹಂತದ ಎಲ್ಲಾ ಪಂದ್ಯಗಳನ್ನು ಅಮೆರಿಕದಲ್ಲೇ ಆಡಲಿದೆ. ಲೀಗ್​ ಮುಕ್ತಾಯದ ಬಳಿಕ ಮುಂದಿನ ಹಂತಕ್ಕೆ ಅರ್ಹತೆ ಪಡೆದರೆ, ಸೂಪರ್ 8 ಪಂದ್ಯಗಳನ್ನು ಸಹ ಇಲ್ಲೇ ಆಡಲಿದೆ.

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್​ ಕೀಪರ್​), ಸಂಜು ಸ್ಯಾಮ್ಸನ್ (ವಿಕೆಟ್​ ಕೀಪರ್​), ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಯುಜ್ವೇಂದ್ರ ಚಾಹಲ್, ಅರ್ಶದೀಪ್​ ಸಿಂಗ್​, ಜಸ್​ಪ್ರೀತ್​ ಬುಮ್ರಾ, ಮೊಹಮ್ಮದ್​ ಸಿರಾಜ್. ಮೀಸಲು ಆಟಗಾರರು ಶುಭಮನ್ ಗಿಲ್, ರಿಂಕು ಸಿಂಗ್, ಖಲೀಲ್ ಅಹ್ಮದ್ ಮತ್ತು ಅವೇಶ್ ಖಾನ್.

Continue Reading

ಕ್ರೀಡೆ

India Head Coach: ಗಂಭೀರ್‌ ಕೋಚ್​ ಆಗುವುದು ಬಹುತೇಕ ಖಚಿತ; ಕುತೂಹಲ ಮೂಡಿಸಿದ ಜಯ್‌ ಶಾ ಭೇಟಿ

India Head Coach: ಕೆಲವು ದಿನಗಳ ಹಿಂದೆ ಗೌತಮ್ ಗಂಭೀರ್ ಅವರು ತಾನು ಭಾರತದ ಮುಖ್ಯ ಕೋಚ್ ಆಗಲು ಉತ್ಸುಕನಾಗಿದ್ದೇನೆ. ಆದರೆ, ಮುಖ್ಯ ಕೋಚ್ ಹುದ್ದೆಗೆ ಅರ್ಜಿ ಭರ್ತಿ ಮಾಡುವ ಮುನ್ನ ‘ಒಂದು ಷರತ್ತು’ ಇದೆ, ‘ಆಯ್ಕೆಯ ಗ್ಯಾರಂಟಿ’ ನೀಡಿದರೆ ಮಾತ್ರ ಈ ಹುದ್ದೆಗೆ ಅರ್ಜಿ ಸಲ್ಲಿಸಲಿದ್ದೇನೆ ಎಂದಿದ್ದರು. ಇದೀಗ ಜಯ್​ ಶಾ ಅವರು ಗಂಭೀರ್​ಗೆ ಗ್ಯಾರಂಟಿ ನೀಡಿದಂತಿದೆ.

VISTARANEWS.COM


on

India Head Coach
Koo

ಮುಂಬಯಿ: ಭಾರತ ತಂಡದ ಕೋಚ್(India Head Coach)​ ಹುದ್ದೆಗೆ ಅರ್ಜಿ ಸಲ್ಲಿಸಲು ಮೇ 27 ಅಂತಿಮ ದಿನವಾಗಿತ್ತು. ಸದ್ಯ ಯಾರೆಲ್ಲ ಕೋಚ್​ ಹುದ್ದೆಗೆ ಅರ್ಜಿ ಸಲ್ಲಿಸಿದ್ದಾರೆ ಎನ್ನುವ ಬಗ್ಗೆ ಯಾವುದೇ ಮಾಹಿತಿ ಹೊರಬಿದ್ದಿಲ್ಲ. ಆದರೆ ಇದೀಗ, ಕೆಕೆಆರ್​ ಮೆಂಟರ್​, ಟೀಮ್​ ಇಂಡಿಯಾದ ಮಾಜಿ ಆಟಗಾರ ಗೌತಮ್​ ಗಂಭೀರ್​(Gautam Gambhir) ಜತೆ ಬಿಸಿಸಿಐ(BCCI) ಕಾರ್ಯದರ್ಶಿ ಜಯ್​ ಶಾ(Jay Shah) ಸುದೀರ್ಘ ಚರ್ಚೆ ನಡೆಸಿದ್ದಾರೆ. ಇದು ಕೋಚ್​ ಹುದ್ದೆಯ ಬಗ್ಗೆಯೇ ನಡೆದಿರುವ ಚರ್ಚೆ ಎನ್ನಲಾಗಿದೆ.

ಕೆಲವು ದಿನಗಳ ಹಿಂದೆ ಗೌತಮ್ ಗಂಭೀರ್ ಅವರು ತಾನು ಭಾರತದ ಮುಖ್ಯ ಕೋಚ್ ಆಗಲು ಉತ್ಸುಕನಾಗಿದ್ದೇನೆ. ಆದರೆ, ಮುಖ್ಯ ಕೋಚ್ ಹುದ್ದೆಗೆ ಅರ್ಜಿ ಭರ್ತಿ ಮಾಡುವ ಮುನ್ನ ‘ಒಂದು ಷರತ್ತು’ ಇದೆ, ‘ಆಯ್ಕೆಯ ಗ್ಯಾರಂಟಿ’ ನೀಡಿದರೆ ಮಾತ್ರ ಈ ಹುದ್ದೆಗೆ ಅರ್ಜಿ ಸಲ್ಲಿಸಲಿದ್ದೇನೆ ಎಂದಿದ್ದರು. ಇದೀಗ ಜಯ್​ ಶಾ ಅವರು ಗಂಭೀರ್​ಗೆ ಗ್ಯಾರಂಟಿ ನೀಡಿದಂತಿದೆ.

ಗಂಭೀರ್​ ಅವರು ಈ ಬಾರಿಯ ಐಪಿಎಲ್​ ಆರಂಭಕ್ಕೂ ಮುನ್ನವೇ, ತಮ್ಮ ತಂಡದ ನಾಯಕ ಮೇ 26ರಂದು ನಡೆಯುವ ಫೈನಲ್​ ಪಂದ್ಯವ ವೇಳೆ ಟಾಸ್​ಗೆ ಸಿದ್ಧರಾಗಿರಬೇಕು ಎಂದು ಹೇಳಿದ್ದರು. ಅದರಂತೆ ಕೆಕೆಆರ್​ ಫೈನಲ್​ ಪ್ರವೇಶಿಸಿ ಕಪ್​ ಕೂಡ ಗೆದ್ದಿತು. ಗಂಭೀರ್​ ತಂಡವನ್ನು ಸಿದ್ಧಪಡಿಸಿದ ರೀತಿ ಮತ್ತು ಕಪ್​ ಗೆಲ್ಲಲೇ ಬೇಕೆಂದು ಪಣ ತೊಟ್ಟಿದೆಲ್ಲ ಫಲ ನೀಡಿತು. ಅವರ ಈ ಸಾಧನೆ ಮತ್ತು ಹಠವನ್ನು ಸೂಕ್ಷವಾಗಿ ಗಮನಿಸಿದ ಬಿಸಿಸಿಐ ಭಾರತ ತಂಡ ಕೋಚ್​ ಹುದ್ದೆ ನೀಡುವ ಯೋಜನೆಯಲ್ಲಿದೆ. ಇನ್ನೊಂದು ಮೂಲಗಳ ಪ್ರಕಾರ ಗಂಭೀರ್​ ಕೋಚ್​ ಆಗುವ ದೃಷ್ಟಿಯಿಂದಲೇ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿಲ್ಲ ಎನ್ನಲಾಗಿದೆ.

ನೂತನ ಕೋಚ್​ ಆಗಿ ಆಯ್ಕೆಯಾದವರ ಕಾರ್ಯಾವಧಿ 2027ರ ಡಿಸೆಂಬರ್ 31ಕ್ಕೆ ಮುಕ್ತಾಯಗೊಳ್ಳುತ್ತದೆ. 2027ರಲ್ಲಿ ನಡೆಯುವ ಏಕದಿನ ವಿಶ್ವಕಪ್​ ಟೂರ್ನಿಯೂ ಈ ಕೋಚ್​ಗೆ ಸಿಗಲಿದೆ. ಕೋಚ್​ ಹುದ್ದೆಗೆ ಅರ್ಜಿ ಸಲ್ಲಿಸಲು ಇದೇ 27ರಂದು ಕೊನೆಯ ದಿನವಾಗಿದೆ. ಆಯ್ಕೆ ಪ್ರಕ್ರಿಯೆ ಅರ್ಜಿಗಳ ಸಂಪೂರ್ಣ ಪರಿಶೀಲನೆಯನ್ನು ನಡೆಸಿ ನಂತರ ವೈಯಕ್ತಿಕ ಸಂದರ್ಶನಗಳು ಮತ್ತು ಶಾರ್ಟ್‌ಲಿಸ್ಟ್ ಮಾಡಿದ ಅಭ್ಯರ್ಥಿಗಳ ಮೌಲ್ಯಮಾಪನ ಒಳಗೊಂಡಿರುತ್ತದೆ. ಆಯ್ಕೆಯಾದ ಹೊಸ ಕೋಚ್‌ ಟಿ20 ವಿಶ್ವಕಪ್‌ ಟೂರ್ನಿಯ ನಂತರ ತಕ್ಷಣವೇ ತಂಡದ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದಾರೆ.

ಇದನ್ನೂ ಓದಿ India Head Coach: ಕೋಚ್​ ಹುದ್ದೆಗೆ ನಾನು ರೆಡಿ; ಆದರೆ ಒಂದು ಷರತ್ತು ಎಂದ ಗಂಭೀರ್​

ಆಸ್ಟ್ರೇಲಿಯಾದ ಮಾಜಿ ಆಟಗಾರರು ಭಾರತ ತಂಡದ ಕೋಚ್​ ಹುದ್ದೆಯ ಬಗ್ಗೆ ನಿರಾಸಕ್ತಿಕ ಹೇಳಿಕೆ ನೀಡುತ್ತಿರುವ ಬೆನ್ನಲ್ಲೇ ಬಿಸಿಸಿಐ ಕಾರ್ಯದರ್ಶಿ ಜಯ್​ ಶಾ ಈ ಎಲ್ಲ ಹೇಳಿಕೆಗೆ ತಿರುಗೇಟು ನೀಡಿದ್ದರು. ಭಾರತೀಯ ಕ್ರಿಕೆಟ್‌ ತಂಡದ ಮುಖ್ಯ ತರಬೇತುದಾರರ ಹುದ್ದೆಗೆ ನಾವು ಯಾವುದೇ ಆಸ್ಟ್ರೇಲಿಯಾದವರನ್ನು ಸಂಪರ್ಕಿಸಿಲ್ಲ ಎಂದು ಸ್ಪಷ್ಟನೆ ನೀಡಿದ್ದರು.

Continue Reading

ಕ್ರೀಡೆ

Yuvraj Singh : ಅಪಾರ್ಟ್​ಮೆಂಟ್ ವಿತರಣೆಯಲ್ಲಿ ಮೋಸ, ರಿಯಲ್ ಎಸ್ಟೇಟ್ ಸಂಸ್ಥೆಗಳಿಗೆ ನೋಟಿಸ್​ ಕೊಟ್ಟ ಯುವರಾಜ್ ಸಿಂಗ್

Yuvraj Singh : ಈ ಸಂಸ್ಥೆಗಳು ಭರವಸೆ ನೀಡಿದಂತೆ ಸ್ವಾಧೀನದ ದೃಷ್ಟಿಯಿಂದ ಯೋಜನೆಗಳ ವಿತರಣೆಯನ್ನು ಸಹ ಸರಿಯಾದ ಸಮಯದಲ್ಲಿ ಪೂರೈಸಲಾಗಿಲ್ಲ ಎಂದು ಸಿಂಗ್ ಹೇಳಿದ್ದಾರೆ. ವಿಶೇಷವೆಂದರೆ, ಮಾಜಿ ಕ್ರಿಕೆಟ್ ತಾರೆ 2020 ರಲ್ಲಿ ದೆಹಲಿಯ ಹೌಜ್ ಖಾಸ್ ಪ್ರದೇಶದಲ್ಲಿ ವಸತಿ ಘಟಕವನ್ನು ಕಾಯ್ದಿರಿಸಿದ್ದರು.

VISTARANEWS.COM


on

Yuvraj Singh
Koo

ನವದೆಹಲಿ: ಟೀಮ್ ಇಂಡಿಯಾದ ಮಾಜಿ ಆಲ್​ರೌಂಡರ್ ಯುವರಾಜ್ ಸಿಂಗ್ (Yuvraj Singh)​ ಅವರು ದೆಹಲಿ ಮೂಲದ ರಿಯಲ್ ಎಸ್ಟೇಟ್ ಸಂಸ್ಥೆಗಳಿಗೆ ಎರಡು ಕಾನೂನು ನೋಟಿಸ್ ನೀಡಿದ್ದಾರೆ. ಈ ಸಂಸ್ಥೆಗಳು ನಡೆಸುವ ಯೋಜನೆಗಳಿಗೆ ಮೋಸದ ಪ್ರಚಾರ ಚಟುವಟಿಕೆಗಳ ಮೂಲಕ ಗೌಪ್ಯತೆ ಹಕ್ಕುಗಳ ಉಲ್ಲಂಘನೆ ಮಾಡಲಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಈ ಸಂಸ್ಥೆಗಳು ಭರವಸೆ ನೀಡಿದಂತೆ ಸ್ವಾಧೀನದ ದೃಷ್ಟಿಯಿಂದ ಯೋಜನೆಗಳ ವಿತರಣೆಯನ್ನು ಸಹ ಸರಿಯಾದ ಸಮಯದಲ್ಲಿ ಪೂರೈಸಲಾಗಿಲ್ಲ ಎಂದು ಸಿಂಗ್ ಹೇಳಿದ್ದಾರೆ. ವಿಶೇಷವೆಂದರೆ, ಮಾಜಿ ಕ್ರಿಕೆಟ್ ತಾರೆ 2020 ರಲ್ಲಿ ದೆಹಲಿಯ ಹೌಜ್ ಖಾಸ್ ಪ್ರದೇಶದಲ್ಲಿ ವಸತಿ ಘಟಕವನ್ನು ಕಾಯ್ದಿರಿಸಿದ್ದರು. ಯುವರಾಜ್ ಸಿಂಗ್ ಅವರನ್ನು ಪ್ರತಿನಿಧಿಸುವ ರಿಜ್ವಾನ್ ಲಾ ಅಸೋಸಿಯೇಟ್ಸ್ ಎಂಬ ಕಾನೂನು ಸಂಸ್ಥೆಯು ಯೋಜನೆಯ ವಿಳಂಬದಿಂದಾಗಿ ಉಂಟಾದ ಹಾನಿಯ ಕ್ಲೇಮ್​ನೊಂದಿಗೆ ನೋಟಿಸ್ ನೀಡಿದೆ.

ಇದನ್ನೂ ಓದಿ: Kavya Maran : ಸೋತಾಗ ಕಣ್ಣೀರು ಹಾಕಿದ ಕಾವ್ಯಾ ಮಾರನ್​, ​ ಡ್ರೆಸಿಂಗ್​ ರೂಮ್​ಗೆ ತೆರಳಿ ಆಟಗಾರರನ್ನೇ ನಗಿಸಿದರು; ಇಲ್ಲಿದೆ ವಿಡಿಯೊ

ಸಿಂಗ್ ಅವರಿಗೆ ಪ್ರೀಮಿಯಂ ಗುಣಮಟ್ಟದ ಅಪಾರ್ಟ್​ಮೆಂಟ್​ ಕೊಡುವೆ ಭರವಸೆ ನೀಡಲಾಗಿತ್ತು. ಆದರೆ ರಿಯಲ್ ಎಸ್ಟೇಟ್ ಕಡಿಮೆ ಗುಣಮಟ್ಟದ ಅಪಾರ್ಟ್​​ಮೆಂಟ್​ ಮಂಜೂರು ಮಾಡುವ ಮೂಲಕ ಮೋಸ ಮಾಡಿದೆ ಎಂದು ಆರೋಪಿಸಲಾಗಿದೆ. ವಿಶೇಷವೆಂದರೆ, ಈ ಯೋಜನೆ ಮೆಸರ್ಸ್ ಉಪ್ಪಲ್ ಹೌಸಿಂಗ್ ಪ್ರೈವೇಟ್ ಲಿಮಿಟೆಡ್​ ಸೇರಿದೆ. ಬೌದ್ಧಿಕ ಆಸ್ತಿ ಹಕ್ಕುಗಳನ್ನು ಉಲ್ಲಂಘಿಸಿದ್ದಕ್ಕಾಗಿ ಮತ್ತು ಗೌಪ್ಯತೆ ಹಕ್ಕುಗಳ ಉಲ್ಲಂಘನೆಗಾಗಿ ಮೆಸರ್ಸ್ ಬ್ರಿಲಿಯಂಟ್ ಎಟೋಯಿಲ್ ಪ್ರೈವೇಟ್ ಲಿಮಿಟೆಡ್ ಎಂಬ ಮತ್ತೊಂದು ಸಂಸ್ಥೆಗೆ ಎರಡನೇ ನೋಟಿಸ್ ನೀಡಲಾಗಿದೆ.

ಈ ವಿವಾದವು ಮುಖ್ಯವಾಗಿ ವ್ಯಕ್ತಿತ್ವ ಹಕ್ಕುಗಳಿಗೆ ಸಂಬಂಧಿಸಿದಂತೆ ಬೌದ್ಧಿಕ ಆಸ್ತಿ ಹಕ್ಕುಗಳ ಉಲ್ಲಂಘನೆ ಮತ್ತು ಸೆಲೆಬ್ರಿಟಿಯ ಬ್ರಾಂಡ್ ಮೌಲ್ಯದ ದುರುಪಯೋಗಕ್ಕೆ ಸಂಬಂಧಿಸಿದೆ.

ಒಪ್ಪಂದವು ಕಳೆದ ವರ್ಷ ನವೆಂಬರ ನಲ್ಲಿ ಮುಕ್ತಾಯಗೊಂಡಿತ್ತು

ರಿಯಲ್ ಎಸ್ಟೇಟ್ ಸಂಸ್ಥೆ ಕೈಗೊಂಡ ಯೋಜನೆಗಳ ಪ್ರಚಾರ ಮತ್ತು ಅನುಮೋದನೆಗೆ ಸಂಬಂಧಿಸಿದಂತೆ ಸಂಬಂಧಿತ ಪಕ್ಷಗಳು ತಿಳಿವಳಿಕೆ ಒಪ್ಪಂದಕ್ಕೆ (ತಿಳಿವಳಿಕೆ ಒಪ್ಪಂದ) ಸಹಿ ಹಾಕಿರುವುದು ಅತ್ಯಗತ್ಯ. ಆದಾಗ್ಯೂ, ಈ ತಿಳಿವಳಿಕೆ ಒಪ್ಪಂದವು ಕಳೆದ ವರ್ಷ ನವೆಂಬರ್ 23 ರಂದು ಕೊನೆಗೊಂಡಿತು. ಅದರ ಹೊರತಾಗಿಯೂ, ಸಂಸ್ಥೆಯು ಯುವರಾಜ್ ಸಿಂಗ್ ಅವರ ಹೆಸರನ್ನು ಬಿಲ್ಬೋರ್ಡ್ ಜಾಹೀರಾತುಗಳ ಮೂಲಕ ಮತ್ತು ಯೋಜನಾ ಸ್ಥಳದಲ್ಲಿ ಬಳಸುವುದನ್ನು ಮುಂದುವರಿಸಿತ್ತು.

ಸಂಸ್ಥೆಯು ಸುದ್ದಿ ಲೇಖನಗಳ ಜೊತೆಗೆ ಅವರ ವ್ಯಕ್ತಿತ್ವವನ್ನು ತಮ್ಮ ಸಾಮಾಜಿಕ ಮಾಧ್ಯಮ ಅಭಿಯಾನಗಳಲ್ಲಿ ಬಳಸುವ ಮೂಲಕ ಉಲ್ಲಂಘನೆ ಮುಂದುವರಿಸಿತ್ತು. ಇದರಿಂದಾಗಿ ಕೃತಿಸ್ವಾಮ್ಯ, ಪ್ರಚಾರದ ಹಕ್ಕು ಮತ್ತು ವ್ಯಕ್ತಿತ್ವದ ಹಕ್ಕುಗಳ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಯುವರಾಜ್ ಸಿಂಗ್ ಆರೋಪಿಸಿದ್ದಾರೆ.

Continue Reading
Advertisement
murder case belagavi news
ಕ್ರೈಂ33 mins ago

Murder Case: ಎಮ್ಮೆ ಮಾರಿ ಬಂದ ಕಾಸಿನಿಂದ ಕುಡಿದ; ಆಕ್ಷೇಪಿಸಿದ ಹೆಂಡತಿಯ ಕೊಂದು ನೇಣು ಹಾಕಿಕೊಂಡ

Pune Porsche Accident
ದೇಶ40 mins ago

Pune Porsche Accident: ಆರೋಪಿಯ ರಕ್ತದ ಮಾದರಿ ಬದಲಿಸಲು 3 ಲಕ್ಷ ರೂ. ಲಂಚ ಪಡೆದಿದ್ದ ವೈದ್ಯರು; ಆಸ್ಪತ್ರೆ ಜವಾನ ಅರೆಸ್ಟ್‌

Andre Russell Dance:
ಕ್ರಿಕೆಟ್42 mins ago

Andre Russell Dance: ಬಾಲಿವುಡ್ ನಟಿ ಅನನ್ಯಾ ಪಾಂಡೆ ಜತೆ ‘ಲುಟ್ ಪಟ್ ಗಯಾ’ ಹಾಡಿಗೆ ಡ್ಯಾನ್ಸ್​ ಮಾಡಿದ ಆ್ಯಂಡ್ರೆ ರಸೆಲ್​

Job Alert
ಉದ್ಯೋಗ60 mins ago

Job Alert: ಬಂಧನ್‌ ಬ್ಯಾಂಕ್‌ನಲ್ಲಿದೆ ಉದ್ಯೋಗಾವಕಾಶ; ಅಪ್ಲೈ ಮಾಡಲು ಮೇ 31 ಕೊನೆಯ ದಿನ

kalaburagi cyber crime news fraud
ಕ್ರೈಂ1 hour ago

Cyber Crime: ಸಿಬಿಐ ಅಧಿಕಾರಿಗಳ ಸೋಗಿನಲ್ಲಿ ವೈದ್ಯರಿಗೆ ವಂಚನೆ; 76 ಲಕ್ಷ ರೂ. ಸುಲಿಗೆ!

Rishabh Pant Video Calls
ಕ್ರೀಡೆ1 hour ago

Rishabh Pant Video Calls: ನ್ಯೂಯಾರ್ಕ್​ನಿಂದ ವಿಡಿಯೊ ಕಾಲ್​ ಮಾಡಿ ರಿಂಕು ಸಿಂಗ್​ಗೆ ಅಭಿನಂದಿಸಿದ ಪಂತ್​

Bomb Threat
ದೇಶ1 hour ago

Bomb Threat: ಸಾಲು ಸಾಲು ಬಾಂಬ್‌ ಥ್ರೆಟ್‌ ಪ್ರಕರಣ; ತಾಜ್‌ ಹೊಟೇಲ್‌ ಬೆನ್ನಲ್ಲೇ ಇಂಡಿಗೋ ವಿಮಾನಕ್ಕೂ ಬೆದರಿಕೆ

India Head Coach
ಕ್ರೀಡೆ2 hours ago

India Head Coach: ಗಂಭೀರ್‌ ಕೋಚ್​ ಆಗುವುದು ಬಹುತೇಕ ಖಚಿತ; ಕುತೂಹಲ ಮೂಡಿಸಿದ ಜಯ್‌ ಶಾ ಭೇಟಿ

hindalaga jail assault case
ಕ್ರೈಂ2 hours ago

Assault Case: ಹಿಂಡಲಗಾ ಜೈಲಿನಲ್ಲಿ ಕೈದಿಯಿಂದಲೇ ಮಾರಣಾಂತಿಕ ಹಲ್ಲೆ; ಭಯದಲ್ಲಿ ಬದುಕುತ್ತಿರುವ ಸಿಬ್ಬಂದಿ!

Viral Video
ವೈರಲ್ ನ್ಯೂಸ್2 hours ago

Viral Video: ನಡು ರಸ್ತೆಯಲ್ಲಿ ಪಿಸ್ತೂಲ್‌ ತೋರಿಸಿ ವ್ಯಕ್ತಿ ಮೇಲೆ ಹಲ್ಲೆ; ಅಂತಾರಾಷ್ಟ್ರೀಯ ಮಟ್ಟದ ಶೂಟರ್‌ನಿಂದ ದಾಂಧಲೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ17 hours ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ2 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು2 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ5 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ6 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ7 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು7 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು7 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ1 week ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

ಟ್ರೆಂಡಿಂಗ್‌