Asian Games: ಚೀನಾಕ್ಕೆ ತೆರಳಿದ ಭಾರತೀಯ ಅಥ್ಲೀಟ್‌ಗಳು - Vistara News

ಕ್ರೀಡೆ

Asian Games: ಚೀನಾಕ್ಕೆ ತೆರಳಿದ ಭಾರತೀಯ ಅಥ್ಲೀಟ್‌ಗಳು

ಈ ಬಾರಿಯ ಏಷ್ಯನ್‌ ಗೇಮ್ಸ್‌ನಲ್ಲಿ ಭಾರತ ದಾಖಲೆಯ ಕ್ರೀಡಾಪಟುಗಳನ್ನು ಕಳುಹಿಸಿಕೊಟ್ಟಿದೆ. ಅತ್ಯಧಿಕ 634 ಕ್ರೀಡಾಪಟುಗಳನ್ನು ಕಳುಹಿಸಲಿದೆ. 2018ರ ಜಕಾರ್ತಾ ಗೇಮ್ಸ್‌ಗೆ 572 ಅಥ್ಲೀಟ್‌ಗಳನ್ನು ರವಾನಿಸಿದ್ದು ಈವರೆಗಿನ ದಾಖಲೆ ಆಗಿತ್ತು.

VISTARANEWS.COM


on

Indian boxing team
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಪ್ರತಿಷ್ಠಿತ ಏಷ್ಯನ್​ ಗೇಮ್ಸ್​(Asian Games) ಕ್ರೀಡಾಕೂಡದಲ್ಲಿ ಪಾಲ್ಗೊಳ್ಳಲು ಭಾರತೀಯ ಅಥ್ಲೀಟ್‌ಗಳ ಜೆರ್ಸಿ, ಕಿಟ್‌ ಬಿಡುಗಡೆ ಹಾಗೂ ಅಥ್ಲೀಟ್‌ಗಳಿಗೆ ಬೀಳ್ಕೊಡುಗೆ ಸಮಾರಂಭ ಮಂಗಳವಾರ ನವದೆಹಲಿಯಲ್ಲಿ ನಡೆದಿದೆ. ಕೇಂದ್ರ ಕ್ರೀಡಾ ಸಚಿವ ಅನುರಾಗ್‌ ಠಾಕೂರ್‌, ಭಾರತೀಯ ಒಲಿಂಪಿಕ್ಸ್‌ ಸಮಿತಿ ಅಧ್ಯಕ್ಷೆ ಪಿ.ಟಿ.ಉಷಾ ಅಥ್ಲೀಟ್‌ಗಳಿಗೆ ಶುಭ ಹಾರೈಸಿದ್ದಾರೆ. ಈಗಾಗಲೇ ಬಾಕ್ಸಿಂಗ್​ ತಂಡ ಚೀನಾದ ಹಾಂಗ್‌ಝೌ ತಲುಪಿದ್ದಾರೆ. ಟೂರ್ನಿ ಸೆಪ್ಟೆಂಬರ್​ 23ರಿಂದ ಅಕ್ಟೋಬರ್​ 8ರ ವರೆಗೆ ನಡೆಯಲಿದೆ.

ಭಾರತದಿಂದ ದಾಖಲೆಯ ಕ್ರೀಡಾಪಟುಗಳು

ಈ ಬಾರಿಯ ಏಷ್ಯನ್‌ ಗೇಮ್ಸ್‌ನಲ್ಲಿ ಭಾರತ ದಾಖಲೆಯ ಕ್ರೀಡಾಪಟುಗಳನ್ನು ಕಳುಹಿಸಿಕೊಟ್ಟಿದೆ. ಅತ್ಯಧಿಕ 634 ಕ್ರೀಡಾಪಟುಗಳನ್ನು ಕಳುಹಿಸಲಿದೆ. 2018ರ ಜಕಾರ್ತಾ ಗೇಮ್ಸ್‌ಗೆ 572 ಅಥ್ಲೀಟ್‌ಗಳನ್ನು ರವಾನಿಸಿದ್ದು ಈವರೆಗಿನ ದಾಖಲೆ ಆಗಿತ್ತು.

38 ವಿಭಾಗಗಳಲ್ಲಿ ಸ್ಪರ್ಧೆ

ಭಾರತ ಒಟ್ಟು 38 ವಿಭಾಗಗಳಲ್ಲಿ ಸ್ಪರ್ಧೆಗೆ ಇಳಿಯಲಿದೆ. ಈ 634 ಕ್ರೀಡಾಪಟುಗಳ(634 athletes) ಯಾದಿಯಲ್ಲಿ ಟ್ರ್ಯಾಕ್‌ ಆ್ಯಂಡ್‌ ಫೀಲ್ಡ್‌ನ ಗರಿಷ್ಠ 65 ಆ್ಯತ್ಲೀಟ್‌ಗಳಿದ್ದಾರೆ. ಇವರಲ್ಲಿ 34 ಪುರುಷರು ಹಾಗೂ 31 ವನಿತೆಯರು. ಅನಂತರದ ಸ್ಥಾನ ಫ‌ುಟ್‌ಬಾಲ್‌ ಮತ್ತು ಹಾಕಿ ತಂಡಗಳಿಗೆ ಸಲ್ಲುತ್ತದೆ. ಎರಡೂ ಫುಟ್​ಬಾಲ್​ ತಂಡಗಳು ಸ್ಪರ್ಧಿಸಲಿದ್ದು, ಇಲ್ಲಿನ ಆಟಗಾರರ ಸಂಖ್ಯೆ 44. ಹಾಕಿಪಟುಗಳ ಒಟ್ಟು ಸಂಖ್ಯೆ 36. ಪುರುಷರ ಹಾಗೂ ವನಿತೆಯರ ಕ್ರಿಕೆಟ್‌ ತಂಡಗಳೂ ಪದಕ ಸ್ಪರ್ಧೆಗೆ ಇಳಿಯಲಿವೆ. ಒಂದೊಂದು ತಂಡದಲ್ಲಿ 15 ಸದಸ್ಯರಿದ್ದಾರೆ. ಸೈಲಿಂ ಗ್‌ನಲ್ಲಿ 33, ಶೂಟಿಂಗ್‌ನಲ್ಲಿ 30 ಸ್ಪರ್ಧಿಗಳಿದ್ದಾರೆ.

ಇದನ್ನೂ ಓದಿ Asian Games 2023 : ವಿವಾದದ ಬಳಿಕ ಏಷ್ಯನ್ ಗೇಮ್ಸ್​ನಿಂದ ಹಿಂದೆ ಸರಿದ ವಿನೇಶ್​ ಫೋಗಾಟ್​

ಮೊದಲ ಬಾರಿ ಕ್ರಿಕೆಟ್​

ಈ ಬಾರಿಯ ಗೇಮ್ಸ್‌ನಲ್ಲಿ ಭಾರತದ ಕ್ರಿಕೆಟ್‌ ತಂಡ ಮೊದಲ ಬಾರಿ ಆಡುತ್ತಿದೆ. ಟೂರ್ನಿ ಸೆಪ್ಟೆಂಬರ್​ 23ರಿಂದ ಅಕ್ಟೋಬರ್​ 8ರ ವರೆಗೆ ನಡೆಯಲಿದೆ. ಈಗಾಗಕಲೇ ಭಾರತ ತಂಡ ಕೂಡ ಪ್ರಕಟಗೊಂಡಿದೆ. ಭಾರತ ಪುರುಷರ ತಂಡವನ್ನು ಋತುರಾಜ್​ ಗಾಯಕ್ವಾಡ್​ ಮುನ್ನಡೆಸಲಿದ್ದಾರೆ. ಏಷ್ಯನ್‌ ಗೇಮ್ಸ್‌ನಲ್ಲಿ ಇಷ್ಟರವರೆಗೆ ಕೇವಲ ಎರಡು ಬಾರಿ ಕ್ರಿಕೆಟ್‌ ಸ್ಪರ್ಧೆ ನಡೆದಿದೆ. 2010 (ಗ್ವಾಂಗ್‌ಝೂ) ಮತ್ತು 2014 (ಇಂಚಿಯಾನ್‌)ರ ಗೇಮ್ಸ್‌ನಲ್ಲಿ ಕ್ರಿಕೆಟ್‌ ಸ್ಪರ್ಧೆ ನಡೆದಿದ್ದು ಇಲ್ಲಿ ಕ್ರಮವಾಗಿ ಬಾಂಗ್ಲಾದೇಶ ಮತ್ತು ಶ್ರೀಲಂಕಾ ಚಿನ್ನದ ಪದಕ ಗೆದ್ದಿತ್ತು. ಮಹಿಳೆಯರ ವಿಭಾಗದಲ್ಲಿ ಪಾಕಿಸ್ತಾನ ಎರಡೂ ಆವೃತ್ತಿಯಲ್ಲಿ ಚಿನ್ನ ಗೆದ್ದು ಮೆರೆದಾಡಿತ್ತು.

ಚೀನಾ ತಲುಪಿದ ಬಾಕ್ಸಿಂಗ್​ ತಂಡ

ಭಾರತದ ಬಾಕ್ಸಿಂಗ್‌ ತಂಡ(Indian boxing team) ಈಗಾಗಲೇ ಚೀನಾ ತಲುಪಿದೆ. 2 ಬಾರಿ ವಿಶ್ವ ಚಾಂಪಿಯನ್‌ ನಿಖತ್‌ ಜರೀನ್‌(Nikhat Zareen) ಅವರು ಭಾರತ ತಂಡವನ್ನು ಮುನ್ನಡೆಸಲಿದ್ದಾರೆ. ಇವರ ಜತೆಗೆ ಟೋಕಿಯೋ ಒಲಿಂಪಿಕ್ಸ್‌ ಪದಕ ವಿಜೇತೆ ಲವ್ಲೀನಾ ಬೊರ್ಗಹೈನ್‌(Lovlina Borgohain) ಕೂಡ ಕಣಕ್ಕಿಳಿಯಲಿದ್ದಾರೆ. ಉಭಯ ಆಟಗಾರ್ತಿಯ ಮೇಲೆ ಪದಕ ಬರವಸೆಯನ್ನು ಇಡಲಾಗಿದೆ.

ಮಹಿಳೆಯರ ವಿಭಾಗದಲ್ಲಿ ಜಾಸ್ಮೀನ್‌, ಅರುಂಧತಿ ಚೌಧರಿ, ಪ್ರೀತಿ ಪವಾರ್‌, ಪರ್ವೀನ್‌ ಹೂಡಾ ಕೂಡಾ ಕಣಕ್ಕಿಳಿಯಲಿದ್ದಾರೆ. ಅಚ್ಚರಿ ಎಂದರೆ ಏಷ್ಯನ್‌ ಗೇಮ್ಸ್‌ ಚಾಂಪಿಯನ್‌ ಅಮಿತ್‌ ಪಂಘಲ್‌, ವಿಶ್ವ ಚಾಂಪಿಯನ್‌ ನೀತು ಗಂಗಾಸ್‌ ತಂಡದಲ್ಲಿ ಸ್ಥಾನ ಪಡೆಯಲು ವಿಫಲರಾಗಿದ್ದಾರೆ. ಪುರುಷರ ವಿಭಾಗದಲ್ಲಿ ದೀಪಕ್‌ ಭೋರಿಯ ತಂಡ ಮುನ್ನಡೆಸಲಿದ್ದು, ಸಚಿನ್‌, ಶಿವ ಥಾಪ, ನಿಶಾಂತ್‌ ದೇವ್‌, ಲಕ್ಷ್ಯ ಚಹರ್‌, ಸಂಜೀತ್‌ ಹಾಗೂ ನರೇಂದರ್‌ ಬರ್ವಾಲ್‌ ಸಹ ಆಡಲಿದ್ದಾರೆ. 2024ರ ಪ್ಯಾರಿಸ್‌ ಒಲಿಂಪಿಕ್ಸ್‌ಗೆ ಮೊದಲ ಅರ್ಹತಾ ಕೂಟವಾಗಿರುವ ಕಾರಣ ಏಷ್ಯಾದ ಬಾಕ್ಸರ್‌ಗಳಿಗೆ ಇದು ಮಹತ್ವದ ಟೂರ್ನಿಯಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Latest

IPL 2024 : ಸಿಎಸ್​ಕೆ ತಂಡದ ಸಮಸ್ಯೆಗಳನ್ನು ಬಹಿರಂಗಪಡಿಸಿದ ನಾಯಕ ಋತುರಾಜ್​

IPL 2024 : ಪಂದ್ಯದ ನಂತರದ ಸಮಾರಂಭದಲ್ಲಿ ಮಾತನಾಡಿದ ಸಿಎಸ್ಕೆ ನಾಯಕ ಋತುರಾಜ್ ಗಾಯಕ್ವಾಡ್ ಪಿಚ್ ನಿಧಾನಗತಿಯಲ್ಲಿತ್ತು. ಹೀಗಾಗಿ ನಾವು ಪೇರಿಸಿದ ರನ್​ ಬಗ್ಗೆ ಖುಷಿಯಿದೆ ಎಂದು ಹೇಳಿದರು. ವಿಕೆಟ್ ನಿಧಾನವಾಗಿತ್ತು.ಚೆಂಡು ಕಡಿಮೆ ಬೌನ್ಸ್ ಆಗುತ್ತಿತ್ತು ಇತ್ತು ಎಂದು ಹೇಳಿದರು.

VISTARANEWS.COM


on

IPL 2024
Koo

ಬೆಂಗಳೂರು: ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ 2024 (IPL 2024) 53 ನೇ ಪಂದ್ಯದಲ್ಲಿ ಋತುರಾಜ್ ಗಾಯಕ್ವಾಡ್ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ (CSK) ಸ್ಯಾಮ್ ಕರ್ರನ್ ನೇತೃತ್ವದ ಪಂಜಾಬ್ ಕಿಂಗ್ಸ್ (PBKS) ವಿರುದ್ಧ 28 ರನ್​ಗಳ ಗೆಲವು ಸಾಧಿಸಿದೆ. ಅದರ ಹೊರತಾಗಿಯೂ ಸಿಎಸ್​ಕೆ ತಂಡದಲ್ಲಿ ಕೆಲವೊಂದು ಸಮಸ್ಯೆಗಳು ಉಂಟಾಗಿವೆ ಎಂಬುದಾಗಿ ನಾಯಕ ಋತುರಾಜ್ ಗಾಯಕ್ವಾಡ್ ಹೇಳಿದ್ದಾರೆ.

ಗಾಯಕ್ವಾಡ್ ಟಾಸ್ ಸೋತರು. ಸಿಎಸ್​​ಕೆ ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನ ಪಡೆಯಿತು. ಬ್ಯಾಟರ್​ಗಳು ಉತ್ತಮ ಪ್ರದರ್ಶನ ನೀಡದ ಕಾರಣ 9 ವಿಕೆಟ್ ನಷ್ಟಕ್ಕೆ 167 ರನ್ ಗಳಿಸಿತು. ರವೀಂದ್ರ ಜಡೇಜಾ (43) ಗರಿಷ್ಠ ರನ್ ಗಳಿಸಿದರೆ, ಋತುರಾಜ್ ಗಾಯಕ್ವಾಡ್ ಮತ್ತು ಡ್ಯಾರಿಲ್ ಮಿಚೆಲ್ 30 ರನ್ ಗಳಿಸಿದರು. ರವೀಂದ್ರ ಜಡೇಜಾ 20 ರನ್ ನೀಡಿ 3 ವಿಕೆಟ್ ಪಡೆದರು. ಸಿಮರ್ಜೀತ್ ಸಿಂಗ್ ಮತ್ತು ತುಷಾರ್ ದೇಶಪಾಂಡೆ ತಲಾ ಎರಡು ವಿಕೆಟ್ ಪಡೆದರೆ, ಶಾರ್ದೂಲ್ ಠಾಕೂರ್ ಮತ್ತು ಮಿಚೆಲ್ ಸ್ಯಾಂಟ್ನರ್​ ತಲಾ ಒಂದು ವಿಕೆಟ್ ಪಡೆದರು.

ಪಂದ್ಯದ ನಂತರದ ಸಮಾರಂಭದಲ್ಲಿ ಮಾತನಾಡಿದ ಸಿಎಸ್ಕೆ ನಾಯಕ ಋತುರಾಜ್ ಗಾಯಕ್ವಾಡ್ ಪಿಚ್ ನಿಧಾನಗತಿಯಲ್ಲಿತ್ತು. ಹೀಗಾಗಿ ನಾವು ಪೇರಿಸಿದ ರನ್​ ಬಗ್ಗೆ ಖುಷಿಯಿದೆ ಎಂದು ಹೇಳಿದರು. ವಿಕೆಟ್ ನಿಧಾನವಾಗಿತ್ತು.ಚೆಂಡು ಕಡಿಮೆ ಬೌನ್ಸ್ ಆಗುತ್ತಿತ್ತು ಇತ್ತು ಎಂದು ಹೇಳಿದರು. ಸಿಮರ್ಜೀತ್ ಸಿಂಗ್ ಬಗ್ಗೆ ಮಾತನಾಡಿದ ಋತುರಾಜ್ ಗಾಯಕ್ವಾಡ್, ವೇಗಿಗೆ ಹೆಚ್ಚಿನ ಅವಕಾಶಗಳು ಸಿಗಲಿಲ್ಲ. ಅವರನ್ನು ಪರಿಚಯಿಸಲು ತಡ ಮಾಡಿಲ್ಲ ಎಂದ ಹೇಳಿದರ.

ತಂಡದಲ್ಲಿದೆ ಸಮಸ್ಯೆ

ನಮ್ಮ ತಂಡದಲ್ಲಿ ಸಮಸ್ಯೆಯಿದೆ. ಆಟಗಾರರು ಜ್ವರದಿಂದ ಬಳಲುತ್ತಿದ್ದಾರೆ. ಯಾರು ಆಡುತ್ತಿದ್ದಾರೆ ಅಥವಾ ಇಲ್ಲ ಎಂದು ಬೆಳಿಗ್ಗೆಯವರೆಗೆ ಖಚಿತವಾಗಿರಲಿಲ್ಲ. ಹೀಗಾಗಿ ಗೆಲುವು ನಿಜವಾಗಿಯೂ ಸಂತೋಷ ಕೊಟ್ಟಿದೆ ಎಂದು ಹೇಳದಿರು.

ಐದು ಸೋಲುಗಳನ್ನು ಕಂಡಿದ್ದ ಚೆನ್ನೈ

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಉತ್ತಮ ದಾಖಲೆಯನ್ನು ಹೊಂದಿಲ್ಲ. 2024ರ ಐಪಿಎಲ್ ಟೂರ್ನಿಯಲ್ಲಿ ಮುಖಾಮುಖಿಯಾಗಿರುವ ಸಿಎಸ್​ಕೆ ತಂಡ ಪಿಬಿಕೆಎಸ್ ವಿರುದ್ಧ 15-14 ಗೆಲುವಿನ ಅಂತರದ ಮುನ್ನಡೆ ಹೊಂದಿದೆ. ಆದಾಗ್ಯೂ, ಹಿಂದಿನ ಐದು ಪಂದ್ಯಗಳಲ್ಲಿ, ಪಂಜಾಬ್ ಕಿಂಗ್ಸ್ ಫ್ರಾಂಚೈಸಿ ಸಂಪೂರ್ಣ ಪ್ರಾಬಲ್ಯ ಸಾಧಿಸಿತು. ಏಕೆಂದರೆ ಅವರು ಆ ಎಲ್ಲಾ ಪಂದ್ಯಗಳನ್ನು ಗೆದ್ದಿದ್ದಾರೆ.

ಇದನ್ನೂ ಓದಿ: IPL 2024 : 28 ರನ್​ಗಳಿಂದ ಗೆದ್ದು ಪಂಜಾಬ್ ವಿರುದ್ಧ ಪ್ರತಿಕಾರ ತೀರಿಸಿದ ಚೆನ್ನೈ

ಐಪಿಎಲ್ ಇತಿಹಾಸದಲ್ಲಿ, ಕೇವಲ ಎರಡು ತಂಡಗಳು 5 ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಅನ್ನು ಸತತ ಐದು ಪಂದ್ಯಗಳಲ್ಲಿ ಸೋಲಿಸಿವೆ, ಮೊದಲ ತಂಡ ಮುಂಬೈ ಇಂಡಿಯನ್ಸ್ ಮತ್ತು ಇನ್ನೊಂದು ತಂಡ ಪಂಜಾಬ್ ಕಿಂಗ್ಸ್, ಇದು 2021 ರಲ್ಲಿ ತಮ್ಮ ಗೆಲುವಿನ ಸರಣಿಯನ್ನು ಪ್ರಾರಂಭಿಸಿತು ಮತ್ತು ಮೇ 1 ರ ಬುಧವಾರ ಚೆಪಾಕ್​​ನಲ್ಲಿ ಸಿಎಸ್ಕೆ ವಿರುದ್ಧ ಏಳು ವಿಕೆಟ್​​ಗಳಿಂದ ಸೋಲಿಸುವ ಮೂಲಕ ಮುಂಬೈ ದಾಖಲೆ ಸರಿಗಟ್ಟಿತು.

ಅಕ್ಟೋಬರ್ 7, 2021 ರಂದು, ಪಿಬಿಕೆಎಸ್ 42 ಎಸೆತಗಳು ಬಾಕಿ ಇರುವಾಗ 6 ವಿಕೆಟ್​​ಗಳಿಂದ ಗೆದ್ದಿತು ಮತ್ತು ಐಪಿಎಲ್ 2022ರಲ್ಲಿ ಕ್ರಮವಾಗಿ 54 ಮತ್ತು 11 ರನ್​ಗಳಿಂದ ಸತತ ಗೆಲುವುಗಳನ್ನು ದಾಖಲಿಸಿತು. ಐಪಿಎಲ್ 2023 ರಲ್ಲಿ, ಅವರು ಒಮ್ಮೆ ಮಾತ್ರ ಮುಖಾಮುಖಿಯಾಗಿದ್ದರು ಏಪ್ರಿಲ್ 30 ರಂದು ನಡೆದ ಪಂದ್ಯವನ್ನು ಪಿಬಿಕೆಎಸ್ 4 ವಿಕೆಟ್​​ಗಳಿಂದ ಗೆದ್ದಿತು.

ಪಂಜಾಬ್ ಕಿಂಗ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಇಂಡಿಯನ್ ಪ್ರೀಮಿಯರ್ ಲೀಗ್ 2024 ರ ಪಂದ್ಯದ ಮುಕ್ತಾಯದ ನಂತರ, ಸಿಎಸ್​ಕೆ ಪರವಾಗಿ 16-14 ಅಂತರದ ದಾಖಲೆ ಹೊಂದಿದೆ.

Continue Reading

ಪ್ರಮುಖ ಸುದ್ದಿ

IPL 2024 : 28 ರನ್​ಗಳಿಂದ ಗೆದ್ದು ಪಂಜಾಬ್ ವಿರುದ್ಧ ಪ್ರತಿಕಾರ ತೀರಿಸಿದ ಚೆನ್ನೈ

IPL 2024: ಮೊದಲು ಬ್ಯಾಟ್‌ ಬೀಸಿದ ರುತುರಾಜ್‌ ಪಡೆಯುವ ನಿಗದಿತ 20 ಓವರ್​ಗಳಲ್ಲಿ 9 ವಿಕೆಟ್‌ ಕಳೆದುಕೊಂಡು 167 ರನ್‌ ಗಳಿಸಿತು. ಸ್ಪರ್ಧಾತ್ಮಕ ಗುರಿ ಬೆನ್ನಟ್ಟಿದ ಪಂಜಾಬ್‌ ಕಿಂಗ್ಸ್‌, ಸತತವಾಗಿ ವಿಕೆಟ್‌ ಕಳೆದುಕೊಂಡು ತನ್ನ ಪಾಲಿನ ಓವರ್​ಗಳು ಮುಕ್ತಾಯಗೊಂಡಾಗ 9 ವಿಕೆಟ್‌ ಕಳೆದುಕೊಂಡು 139 ರನ್‌ ಗಳಿಸಲಷ್ಟೇ ಶಕ್ತವಾಯ್ತು.

VISTARANEWS.COM


on

IPL 2024
Koo

ಧರ್ಮಶಾಲಾ: ಚೆನ್ನೈ ಸೂಪರ್ ಕಿಂಗ್ಸ್​ ತಂಡ ತನ್ನ ಹಿಂದಿನ ಪಂದ್ಯದ ಸೋಲಿಗೆ ಪ್ರತಿಕಾರ ತೀರಿಸಿಕೊಂಡಿದೆ. ಪಂಜಾಬ್ ಕಿಂಗ್ಸ್ ವಿರುದ್ಧ ನಡೆದ ಐಪಿಎಲ್​ (IPL 2024) ಪಂದ್ಯದಲ್ಲಿ 28 ರನ್​ಗಳ ಗೆಲುವು ದಾಖಲಿಸಿದೆ. ಈ ಮೂಲಕ ಹಿಂದಿನ ಪಂದ್ಯದಲ್ಲಿ ಅದೇ ತಂಡದ ವಿರುದ್ಧ ಅನುಭವಿಸಿದ್ದ 7 ವಿಕೆಟ್ ಸೋಲಿಗೆ ಉತ್ತರ ಹೇಳಿದೆ. ಇದರೊಂದಿಗೆ ಐಪಿಎಲ್‌ 2024ರ ಆವೃತ್ತಿಯಲ್ಲಿ ಪ್ಲೇ ಆಫ್‌ ಆಸೆಯನ್ನು ಇನ್ನೂ ಜೀವಂತವಾಗಿ ಇರಿಸಿಕೊಂಡಿದೆ. ಅಲ್ಲದೆ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೇರಿದೆ. ಅತ್ತ ಸತತ ಎರಡು ಪಂದ್ಯಗಳಲ್ಲಿ ಗೆದ್ದು ಪ್ಲೇ ಆಫ್‌ ಹಂತಕ್ಕೇರುವ ಕನಸು ಹೊತ್ತಿದ್ದ ಸ್ಯಾಮ್‌ ಕರನ್‌ ಪಡೆ, ಸಿಎಸ್‌ಕೆ ವಿರುದ್ಧ ಸೋಲಿನೊಂದಿಗೆ ಮತ್ತೆ ಹಿನ್ನಡೆ ಅನುಭವಿಸಿದೆ.

ಇಲ್ಲಿನ ಹಿಮಾಚಲ ಪ್ರದೇಶ ಕ್ರಿಕೆಟ್ ಸಂಸ್ಥೆಯಲ್ಲಿ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್‌ ಗೆದ್ದ ಪಂಜಾಬ್‌ ಕಿಂಗ್ಸ್‌ ಬೌಲಿಂಗ್‌ ಆಯ್ಕೆ ಮಾಡಿಕೊಂಡಿತು. ಅದರಂತೆ ಮೊದಲು ಬ್ಯಾಟ್‌ ಬೀಸಿದ ರುತುರಾಜ್‌ ಪಡೆಯುವ ನಿಗದಿತ 20 ಓವರ್​ಗಳಲ್ಲಿ 9 ವಿಕೆಟ್‌ ಕಳೆದುಕೊಂಡು 167 ರನ್‌ ಗಳಿಸಿತು. ಸ್ಪರ್ಧಾತ್ಮಕ ಗುರಿ ಬೆನ್ನಟ್ಟಿದ ಪಂಜಾಬ್‌ ಕಿಂಗ್ಸ್‌, ಸತತವಾಗಿ ವಿಕೆಟ್‌ ಕಳೆದುಕೊಂಡು ತನ್ನ ಪಾಲಿನ ಓವರ್​ಗಳು ಮುಕ್ತಾಯಗೊಂಡಾಗ 9 ವಿಕೆಟ್‌ ಕಳೆದುಕೊಂಡು 139 ರನ್‌ ಗಳಿಸಲಷ್ಟೇ ಶಕ್ತವಾಯ್ತು.

ಬ್ಯಾಟಿಂಗ್‌ ಆಹ್ವಾನ ಪಡೆದ ಚೆನ್ನೈ ತಂಡಕ್ಕೆ ಉತ್ತಮ ಆರಂಭ ಸಿಗಲಲ್ಲ. ಅಜಿಂಕ್ಯ ರಹಾನೆ 9 ರನ್‌ ಗಳಿಸಿ ಔಟಾದರು. ಈ ವೇಳೆ ಒಂದಾದ ನಾಯಕ ಋತುರಾಜ್‌ ಹಾಗೂ ಡ್ಯಾರಿಲ್​ ಮಿಚೆಲ್‌ ಅರ್ಧಶತಕದ ಜೊತೆಯಾಟ ನೀಡಿದರು. 21 ಎಸೆತಗಳಲ್ಲಿ 32 ರನ್‌ ಗಳಿಸಿ ಗಾಯಕ್ವಾಡ್‌ ಔಟಾದರೆ, ಅವರ ಬೆನ್ನಲ್ಲೇ ಶಿವಂ ದುಬೆ ಗೋಲ್ಡನ್‌ ಡಕ್‌ ಆದರು. ಈ ವೇಳೆ ಚೆನ್ನೈ ತಂಡಕ್ಕೆ ಆಘಾತವಾಯಿತು. ಅಲ್ಲದೆ ದುಬೆ ಸತತ ಎರಡು ಪಂದ್ಯಗಳಲ್ಲಿ ಮೊದಲ ಎಸೆತದಲ್ಲೇ ಔಟಾದರು. ಮಿಚೆಲ್‌ ಇನಿಂಗ್ಸ್​​ ರನ್‌ಗೆ ಅಂತ್ಯವಾದರೆ, ಮೊಯೀನ್‌ ಅಲಿ 17 ರನ್ ಗಳಿಸಿದರು.

ಇದನ್ನೂ ಓದಿ: IPL 2024 : ಚೆನ್ನೈ ತಂಡದ ಮಾರಕ ಬೌಲರ್ ಮಹೀಶ್​ ಪತಿರಾನಾ​ ಐಪಿಎಲ್​ನಿಂದ ಹೊರಕ್ಕೆ

ಸ್ಯಾಂಟ್ನರ್​ 11 ರನ್‌ ಗಳಿಸಿದರು. ಶಾರ್ದುಲ್‌ ಠಾಕೂರ್‌ 17 ರನ್‌ ಗಳಿಸಿ ನಿರ್ಗಮಿಸಿದರು. ಅವರ ಬೆನ್ನಲ್ಲೇ ಎಂಎಸ್‌ ಧೋನಿ ಕೂಡಾ ಗೋಲ್ಡನ್‌ ಡಕ್‌ ಆದರು. ಅಂತಿಮವಾಗಿ ತಂಡವು 167 ರನ್‌ ಗಳಿಸಲಷ್ಟೇ ಸಾಧ್ಯವಾಯ್ತು.

ಬ್ಯಾಟಿಂಗ್ ವೈಫಲ್ಯ

ಗುರಿ ಬೆನ್ನಟ್ಟಿದ ಪಂಜಾಬ್ ತಂಡಕ್ಕೆ ಹೆಚ್ಚಿನ ಚೈತನ್ಯ ಸಿಗಲಿಲ್ಲ. ಜಾನಿ ಬೈರ್​ಸ್ಟೋವ್​ 7 ರನ್​ಗೆ ಔಟಾದರೆ, ರೀಲಿ ರೊಸ್ಸೊ ಶೂನ್ಯಕ್ಕೆ ವಿಕೆಟ್​ ಒಪ್ಪಿಸಿದರು. ಪ್ರಭ್​ಸಿಮ್ರಾನ್​ ಸಿಂಗ್​ 30 ರನ್ ಬಾರಿಸಿ ಹೋರಾಟ ಸಂಘಟಿಸಿದರೂ ಹೆಚ್ಚಿನ ಹೊತ್ತು ಇರಲು ಅವರಿಗೆ ಸಾಧ್ಯವಾಗಲಿಲ್ಲ. ಆದರೆ, ಶಶಾಂಕ್​ ಸಿಂಗ್ (27) ಜತೆ ಇನಿಂಗ್ಸ್ ಕಟ್ಟಲು ಯತ್ನಿಸಿದರು. ಆದರೆ ಶಶಾಂಕ್ ಔಟಾದ ಬಳಿಕ ಸ್ಯಾಮ್​ ಕರ್ರನ್​ 7 ರನ್​, ಜಿತೇಶ್ ಶರ್ಮಾ (0), ಅಶುತೋಷ್​ ಶರ್ಮಾ 7 ರನ್​ಗೆ ಔಟಾದರು. ಈ ವೇಳೆ ಪಂಜಾಬ್ ಸೋಲಿನ ಸುಳಿಗೆ ಸಿಲುಕಿತು.

ಹರ್​​ಪ್ರೀತ್​ ಬ್ರಾರ್​ 17 ರನ್​, ಹರ್ಷಲ್​ ಪಟೇಲ್ 12 ರನ್ ಹಾಗೂ ಕಗಿಸೊ ರಬಾಡ 11 ರನ್ ಬಾರಿಸಿ ಔಟಾದರು.

Continue Reading

Latest

IPL 2024 : ಚೆನ್ನೈ ತಂಡದ ಮಾರಕ ಬೌಲರ್ ಮಹೀಶ್​ ಪತಿರಾನಾ​ ಐಪಿಎಲ್​ನಿಂದ ಹೊರಕ್ಕೆ

IPL 2024: ಬಲಗೈ ವೇಗಿ ಈವರೆಗೆ 6 ಇನಿಂಗ್ಸ್​​ಗಳಲ್ಲಿ 13 ವಿಕೆಟ್​​ಗಳನ್ನು ಪಡೆದಿದ್ದಾರೆ. ಅವರ ಡೆತ್ ಬೌಲಿಂಗ್ ಕೌಶಲ್ಯದಿಂದ ಸಿಎಸ್​​ಕೆಗೆ ನಿರ್ಣಾಯಕ ಆಸ್ತಿಯಾಗಿದ್ದರು. ಆದಾಗ್ಯೂ, ಅವರು ತಮ್ಮ ವೃತ್ತಿಜೀವನದುದ್ದಕ್ಕೂ ಪದೇ ಪದೇ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಟಿ20 ವಿಶ್ವಕಪ್​​ನಲ್ಲಿ ಪ್ರಮುಖ ಪಂದ್ಯಾವಳಿಗೆ ಮುಂಚಿತವಾಗಿ ಶ್ರೀಲಂಕಾ ಕ್ರಿಕೆಟ್ ತಮ್ಮ ವೇಗಿಯನ್ನು ಅಪಾಯಕ್ಕೆ ತಳ್ಳಲು ಬಯಸುವುದಿಲ್ಲ.

VISTARANEWS.COM


on

IPL 2024
Koo

ಬೆಂಗಳೂರು: ಎಸ್ಆರ್​ಎಚ್​​ ವಿರುದ್ಧದ ಪಂದ್ಯದ ನಂತರ ಸ್ನಾಯುಸೆಳೆತಕ್ಕೆ ಒಳಗಾಗಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ವೇಗದ ಬೌಲರ್​ ಮಹೀಶ್ ಪತಿರಾನಾ ಐಪಿಎಲ್​ನ (IPL 2024) ಉಳಿದ ಭಾಗದಿಂದ ಹೊರಗುಳಿಯುವಂತಾಗಿದೆ. ಅವರು ತಮ್ಮ ತಾಯ್ನಾಡಾದ ಶ್ರೀಲಂಕಾಕ್ಕೆ ಮರಳಿದ್ದಾರೆ. ಧರ್ಮಶಾಲಾದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯಕ್ಕೆ ಅವರು ಫಿಟ್ ಆಗಿರುತ್ತಾರೆ ಎಂದು ವರದಿಯಾಗಿತ್ತು. ಆದರೆ ಸಿಎಸ್​​ಕೆ ಸ್ಟಾರ್​ ಇನ್ನೂ ಗುಣಮುಖರಾಗದ ಕಾರಣ ತಾಯ್ನಾಡಿಗೆ ಮರಳಿದ್ದಾರೆ ಎಂದು ಸಿಎಸ್​ಕೆ ಮೂಲಗಳೂ ಬಹಿರಂಗಪಡಿಸಿವೆ. ಇದರರ್ಥ ಅವರು ಟಿ20 ವಿಶ್ವಕಪ್​​ನಲ್ಲಿ ಲಂಕಾ ತಂಡದ ಭಾಗವಾಗಲಿದ್ದಾರೆ.

ಬಲಗೈ ವೇಗಿ ಈವರೆಗೆ 6 ಇನಿಂಗ್ಸ್​​ಗಳಲ್ಲಿ 13 ವಿಕೆಟ್​​ಗಳನ್ನು ಪಡೆದಿದ್ದಾರೆ. ಅವರ ಡೆತ್ ಬೌಲಿಂಗ್ ಕೌಶಲ್ಯದಿಂದ ಸಿಎಸ್​​ಕೆಗೆ ನಿರ್ಣಾಯಕ ಆಸ್ತಿಯಾಗಿದ್ದರು. ಆದಾಗ್ಯೂ, ಅವರು ತಮ್ಮ ವೃತ್ತಿಜೀವನದುದ್ದಕ್ಕೂ ಪದೇ ಪದೇ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಟಿ20 ವಿಶ್ವಕಪ್​​ನಲ್ಲಿ ಪ್ರಮುಖ ಪಂದ್ಯಾವಳಿಗೆ ಮುಂಚಿತವಾಗಿ ಶ್ರೀಲಂಕಾ ಕ್ರಿಕೆಟ್ ತಮ್ಮ ವೇಗಿಯನ್ನು ಅಪಾಯಕ್ಕೆ ತಳ್ಳಲು ಬಯಸುವುದಿಲ್ಲ.

ಇದನ್ನೂ ಓದಿ : IPL 2024 : ಮ್ಯಾಕ್ಸಿ ಐಪಿಎಲ್​ನಲ್ಲಿ ಬರೀ ಬೂಸಿ; ಮ್ಯಾಕ್ಸ್​ವೆಲ್​ ಆಟಕ್ಕೆ ಅಭಿಮಾನಿಗಳ ಆಕ್ರೋಶ

ಸ್ನಾಯುಸೆಳೆತದ ಗಾಯಗಳು ಚೇತರಿಸಿಕೊಳ್ಳಲು ಸಾಮಾನ್ಯವಾಗಿ ಐದರಿಂದ ಆರು ವಾರಗಳನ್ನು ತೆಗೆದುಕೊಳ್ಳುತ್ತವೆ. ಆದ್ದರಿಂದ ಪಥಿರಾನಾ ಈ ಹೊಡೆತದಿಂದ ಹೇಗೆ ಚೇತರಿಸಿಕೊಳ್ಳುತ್ತಾರೆ ಎಂಬುದನ್ನು ನೋಡುವುದು ಕುತೂಹಲಕರವಾಗಿದೆ. ಅವರು ಶ್ರೀಲಂಕಾದ ವಿಶ್ವಕಪ್ 2023 ತಂಡದ ಭಾಗವಾಗಿದ್ದರು. ಆದರೆ ಮಧ್ಯದಲ್ಲಿ ಗಾಯಗೊಂಡಿದ್ದರು. ವಿಶ್ವ ದರ್ಜೆಯ ಕೌಶಲ್ಯಗಳನ್ನು ಹೊಂದಿರುವ ಪಥಿರಾನಾ ಆ ಪಂದ್ಯಾವಳಿಗೆ ಸಂಪೂರ್ಣ ಫಿಟ್ ಆಗುವುದು ಕಡ್ಡಾಯ ಎಂದು ಹೇಳಿದರು.

ಇದು ಖಂಡಿತವಾಗಿಯೂ ಸಿಎಸ್​ಕೆಗೆ ದೊಡ್ಡ ಹೊಡೆತವಾಗಿದೆ. ಪಥಿರಾನಾ ನಿಜವಾಗಿಯೂ ಇಡೀ ಐಪಿಎಲ್ 2024 ರಿಂದ ಹೊರಗುಳಿದರೆ ಋತುರಾಜ್ ಗಾಯಕ್ವಾಡ್ ಮತ್ತು ತಂಡವು ತಮ್ಮ ವ್ಯವಹಾರವನ್ನು ಹೇಗೆ ನಡೆಸುತ್ತದೆ ಎಂಬುದನ್ನು ನೋಡಬೇಕಾಗಿದೆ ಎಂದು ಕ್ರಿಕೆಟ್ ಪಂಡಿತರು ಹೇಳಿದ್ದಾರೆ.

Continue Reading

ಕ್ರೀಡೆ

MI vs SRH: ಸನ್ ಸ್ಟ್ರೋಕ್​ನಿಂದ ತಪ್ಪಿಸಿಕೊಂಡೀತೇ ಮುಂಬೈ ಇಂಡಿಯನ್ಸ್​​?

MI vs SRH: ಹೆಡ್​ ಮತ್ತು ಅಭಿಷೇಕ್​ ಶರ್ಮಾ ಪವರ್​ ಪ್ಲೇ ತನಕ ಆಡಿದರೆ ದೊಡ್ಡ ಮೊತ್ತ ಹರಿದು ಬರಲಿದೆ. ಮಧ್ಯಮ ಕ್ರಮಾಂಕದಲ್ಲಿಯೂ ಬ್ಯಾಟಿಂಗ್​ ಲೈನ್​ ಅಪ್​ ಬಲಿಷ್ಠವಾಗಿದೆ. ಮಾರ್ಕ್ರಮ್​, ಕ್ಲಾಸೆನ್​ ನಿತೇಶ್​ ರೆಡ್ಡಿ, ಅಬ್ದುಲ್​ ಸಮದ್​ ಸಿಡಿದು ನಿಂತು ಪಂದ್ಯದ ಗತಿಯನ್ನೇ ಬದಲಿಸುವ ಸಾಮರ್ಥ್ಯ ಹೊಂದಿದ್ದಾರೆ.

VISTARANEWS.COM


on

MI vs SRH
Koo

ಮುಂಬಯಿ: ಪ್ಲೇ ಆಫ್​​ನಿಂದ ಬಹುತೇಕ ಹೊರಬಿದ್ದಿರುವ 5 ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್​(MI vs SRH) ಸೋಮವಾರದ ಐಪಿಎಲ್(IPL 2024)​ ಪಂದ್ಯದಲ್ಲಿ ಸನ್​ರೈಸರ್ಸ್​ ಹೈದರಾಬಾದ್​(sunrisers hyderabad) ವಿರುದ್ಧ ಆಡಲಿದೆ. ಮುಂಬೈಗೆ ತವರಿನ ಪಂದ್ಯವಾಗಿದ್ದರೂ ಕೂಡ ತಂಡದ ಪ್ರದರ್ಶನ ನೋಡುವಾಗ ಗೆಲುವು ಕಷ್ಟ ಎನ್ನಲಡ್ಡಿಯಿಲ್ಲ.

ರಾಜೀವ್​ ಗಾಂಧಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದಿದ್ದ ಇತ್ತಂಡಗಳ ನಡುವಣ ಮೊದಲ ಮುಖಾಮುಖಿಯಲ್ಲಿ ಉಭಯ ತಂಡಗಳು ಸೇರಿ 523 ರನ್ ಬಾರಿಸಿತ್ತು. ಹೈದರಾಬಾದ್​ 3 ವಿಕೆಟ್​ಗೆ 277 ರನ್ ಬಾರಿಸಿದ್ದರೆ, ಮುಂಬೈ  5 ವಿಕೆಟ್​ಗೆ 246 ರನ್ ಗಳಿಸಿ 31 ರನ್​ ಅಂತರದಿಂದ ಸೋಲು ಕಂಡಿತ್ತು. ಹೆಡ್​ ಕೇವಲ 18 ಎಸೆತಗಳಲ್ಲಿ ಅರ್ಧಶತಕ ಬಾರಿಸಿದರೆ, ಇವರ ಜತೆಗಾರ ಅಭಿಷೇಕ್​ ಶರ್ಮ 16 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದ್ದರು. ಇದೀಗ ಈ ಸೋಲಿಗೆ ಮುಂಬೈ ತವರಿನಲ್ಲಿ ಸೇಡು ತೀರಿಸಿಕೊಂಡೀತೇ ಎಂದು ಕಾದು ನೋಡಬೇಕಿದೆ.

ಉತ್ಸಾಹ ಕಳೆದುಕೊಂಡ ಮುಂಬೈ


ಐದು ಬಾರಿಯ ಚಾಂಪಿಯನ್​ ಮುಂಬೈ ತಂಡ ಈ ಬಾರಿ ಅತ್ಯಂತ ಕಳಪೆ ಪ್ರದರ್ಶನ ತೋರಿದೆ. ಯಾರೂ ಕೂಡ ತಂಡಕ್ಕಾಗಿ ಹಾಗೂ ಉತ್ಸಾಹ ಭರಿತವಾಗಿ ಆಡುತ್ತಿಲ್ಲ. 11 ಪಂದ್ಯಗಳಿಂದ ಕೇವಲ 3 ಗೆಲುವು ಸಾಧಿಸಿ 6 ಅಂಕದೊಂದಿಗೆ ಕೊನೆಯ ಸ್ಥಾನಿಯಾಗಿದೆ. ಕಳೆದ 16 ಆವೃತ್ತಿಯ ಐಪಿಎಲ್​ ಟೂರ್ನಿಯನ್ನು ನೋಡುವುದಾದರೆ ಮುಂಬೈ ಈ ಸ್ಥಿತಿ ತಲುಪಿದ್ದು ಇದೇ ಮೊದಲು.

ಇದನ್ನೂ ಓದಿ IPL 2024 : ಮ್ಯಾಕ್ಸಿ ಐಪಿಎಲ್​ನಲ್ಲಿ ಬರೀ ಬೂಸಿ; ಮ್ಯಾಕ್ಸ್​ವೆಲ್​ ಆಟಕ್ಕೆ ಅಭಿಮಾನಿಗಳ ಆಕ್ರೋಶ

ನೂತನ ನಾಯಕ ಹಾರ್ದಿಕ್​ ಪಾಂಡ್ಯ, ಸೂರ್ಯಕುಮಾರ್​ ಯಾದವ್​, ಇಶಾನ್​ ಕಿಶನ್​, ಟಿಮ್​ ಡೇವಿಡ್​ ಹೀಗೆ ಸಾಗಿ ಎಲ್ಲ ಬ್ಯಾಟರ್​ಗಳು ಘೋರ ವೈಫಲ್ಯ. ಬೌಲಿಂಗ್​ನಲ್ಲಿ ಜಸ್​ಪ್ರೀತ್​ ಬುಮ್ರಾ ಹೊರತುಪಡಿಸಿದ ಉಳಿದೆಲ್ಲರು ಲೆಕ್ಕಭರ್ತಿಗೆ ಆಡಿದಂತೆ ಆಡುತ್ತಿದ್ದಾರೆ. ಸಂಘಟಿತ ಪ್ರದರ್ಶನ ತೋರದೇ ಹೋದಲ್ಲಿ ಈ ಪಂದ್ಯದಲ್ಲಿಯೂ ಸೋಲು ಕಟ್ಟಿಟ್ಟ ಬುತ್ತಿ ಎನ್ನಲಡ್ಡಿಯಿಲ್ಲ. ಬೆನ್ನು ನೋವಿನಿಂದ ಬಳಲುತ್ತಿರುವ ರೋಹಿತ್​ ಈ ಪಂದ್ಯದಿಂದ ಹೊರಗುಳಿಯುವ ಸಾಧ್ಯತೆ ಅಧಿಕ. ಕಳೆದ ಪಂದ್ಯದಲ್ಲಿ ರೋಹಿತ್​ ಇಂಪ್ಯಾಕ್ಟ್​ ಆಟಗಾರನಾಗಿ ಕಣಕ್ಕಿಳಿದಿದ್ದರು. ಮುಂದಿನ ತಿಂಗಳು ಟಿ20 ವಿಶ್ವಕಪ್​ ಕೂಡ ಆರಂಭಗೊಳ್ಳುವ ಕಾರಣ ಬಿಸಿಸಿಐ ಕೂಡ ವಿಶ್ರಾಂತಿ ಪಡೆಯಲು ಸೂಚನೆ ನೀಡಿರಬಹುದು.

ಹೈದರಾಬಾದ್​ಗೆ ಮಹತ್ವದ ಪಂದ್ಯ


ಪ್ಲೇ ಆಫ್​ ಪ್ರವೇಶಿಸಬೇಕಿದ್ದರೆ ಸನ್​ರೈಸರ್ಸ್​ ಹೈದರಾಬಾದ್​ಗೆ ಇದು ಮಹತ್ವದ ಪಂದ್ಯ. ಸದ್ಯ 12 ಅಂಕ ಗಳಿಸಿ ನಾಲ್ಕನೇ(ಚೆನ್ನೈ-ಪಂಜಾಬ್​ ಪಂದ್ಯಕ್ಕೂ ಮುನ್ನ) ಸ್ಥಾನದಲ್ಲಿದೆ. ಕಮಿನ್ಸ್​ ಪಡೆ ಕಳೆದ ರಾಜಸ್ಥಾನ್​ ವಿರುದ್ಧದ ಪಂದ್ಯದಲ್ಲಿ ಕೇವಲ 1 ರನ್​ ಅಂತರದಿಂದ ಗೆದ್ದು ಬೀಗಿತ್ತು. ಹೀಗಾಗಿ ತಂಡಕ್ಕೆ ಲಕ್​ ಕೂಡ ಇದೆ. ಹೆಡ್​ ಮತ್ತು ಅಭಿಷೇಕ್​ ಶರ್ಮಾ ಪವರ್​ ಪ್ಲೇ ತನಕ ಆಡಿದರೆ ದೊಡ್ಡ ಮೊತ್ತ ಹರಿದು ಬರಲಿದೆ. ಮಧ್ಯಮ ಕ್ರಮಾಂಕದಲ್ಲಿಯೂ ಬ್ಯಾಟಿಂಗ್​ ಲೈನ್​ ಅಪ್​ ಬಲಿಷ್ಠವಾಗಿದೆ. ಮಾರ್ಕ್ರಮ್​, ಕ್ಲಾಸೆನ್​ ನಿತೇಶ್​ ರೆಡ್ಡಿ, ಅಬ್ದುಲ್​ ಸಮದ್​ ಸಿಡಿದು ನಿಂತು ಪಂದ್ಯದ ಗತಿಯನ್ನೇ ಬದಲಿಸುವ ಸಾಮರ್ಥ್ಯ ಹೊಂದಿದ್ದಾರೆ.

Continue Reading
Advertisement
IPL 2024
Latest25 mins ago

IPL 2024 : ಸಿಎಸ್​ಕೆ ತಂಡದ ಸಮಸ್ಯೆಗಳನ್ನು ಬಹಿರಂಗಪಡಿಸಿದ ನಾಯಕ ಋತುರಾಜ್​

Air India
ದೇಶ26 mins ago

Air India: ವಿಮಾನ ಪ್ರಯಾಣಿಕರೇ ಗಮನಿಸಿ, ಚೆಕ್-ಇನ್ ಬ್ಯಾಗೇಜ್ ಭಾರದ ಮಿತಿ ಇಳಿಕೆ!

Lok Sabha Election 2024 Narendra Modi cant become PM again says CM Siddaramaiah
Lok Sabha Election 202431 mins ago

Lok Sabha Election 2024: ಮತ್ತೆ ಮೋದಿ ಪ್ರಧಾನಿಯಾಗಲು ಸಾಧ್ಯವೇ ಇಲ್ಲ: ಸಿಎಂ ಸಿದ್ದರಾಮಯ್ಯ ಹೀಗೆ ಹೇಳಿದ್ದು ಏಕೆ?

Radhika Khera
ದೇಶ33 mins ago

Radhika Khera: ಅಯೋಧ್ಯೆಗೆ ಭೇಟಿ ನೀಡಿದ್ದಕ್ಕೆ ಪಕ್ಷದಲ್ಲಿ ವಿರೋಧ; ಕಾಂಗ್ರೆಸ್‌ ತೊರೆದ ನಾಯಕಿ!

Viral News
ಕ್ರೈಂ33 mins ago

Viral News: ವಿಮಾನ ಪ್ರಯಾಣಿಕನ ಜೇಬಿನಲ್ಲಿತ್ತು ಎರಡು ಹಾವು!

Self-Healing Roads
ತಂತ್ರಜ್ಞಾನ35 mins ago

Self-Healing Roads: ರಸ್ತೆಗಳಲ್ಲಿ ಹೊಂಡಗಳೇ ಇರಲ್ಲ! ಬರಲಿವೆ ಸೆಲ್ಫ್‌ ಹೀಲಿಂಗ್‌ ರೋಡ್‌ಗಳು!

IPL 2024
ಪ್ರಮುಖ ಸುದ್ದಿ43 mins ago

IPL 2024 : 28 ರನ್​ಗಳಿಂದ ಗೆದ್ದು ಪಂಜಾಬ್ ವಿರುದ್ಧ ಪ್ರತಿಕಾರ ತೀರಿಸಿದ ಚೆನ್ನೈ

Narendra Modi
ದೇಶ45 mins ago

Narendra Modi: ಪ್ರಚಾರದ ಮಧ್ಯೆಯೇ ರಾಮಮಂದಿರಕ್ಕೆ ತೆರಳಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ಮೋದಿ

Viral News
ವೈರಲ್ ನ್ಯೂಸ್47 mins ago

Viral News: ಕಾಳಿಂಗ ಸರ್ಪವನ್ನು ಈ ಕುಟುಂಬ ಹೇಗೆ ಪೂಜಿಸುತ್ತಿದೆ ನೋಡಿ!

Narendra Modi
ದೇಶ56 mins ago

Narendra Modi: ಅಯೋಧ್ಯೆಯಲ್ಲಿ ಮೋದಿ ಬೃಹತ್‌ ರೋಡ್ ಶೋ;‌ ಎಲ್ಲೆಡೆ ಜೈ ಶ್ರೀರಾಮ್‌ ಘೋಷಣೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ1 hour ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ3 hours ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ3 hours ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Dina Bhavishya
ಭವಿಷ್ಯ16 hours ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ2 days ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ2 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ3 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ3 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ4 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ6 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

ಟ್ರೆಂಡಿಂಗ್‌