ಎಟಿಪಿ ಡಬಲ್ಸ್ ಟೂರ್: 43ನೇ ವಯಸ್ಸಿನಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿದ ಬೋಪಣ್ಣ - Vistara News

ಕ್ರೀಡೆ

ಎಟಿಪಿ ಡಬಲ್ಸ್ ಟೂರ್: 43ನೇ ವಯಸ್ಸಿನಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿದ ಬೋಪಣ್ಣ

43 ವರ್ಷದ ಭಾರತದ ಸ್ಟಾರ್​ ಟೆನಿಸ್​ ಆಟಗಾರ ಬೋಪಣ್ಣ ಅವರು ಎಟಿಪಿ 1000 ಟೂರ್‌ನ ಅತ್ಯಂತ ಹಿರಿಯ ಚಾಂಪಿಯನ್ ಎಂಬ ಕೀರ್ತಿಗೆ ಪಾತ್ರರಾಗಿದ್ದಾರೆ.

VISTARANEWS.COM


on

ATP Doubles Tour: Bopanna-Mathew duo crowned champions
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ವಾಷಿಂಗ್ಟನ್: ಇಂಡಿಯನ್‌ ವೆಲ್ಸ್‌ನಲ್ಲಿ ನಡೆದ ಬಿಎನ್‌ಪಿ ಪಾರಿಬಾಸ್ ಓಪನ್ ಟೆನಿಸ್ ಟೂರ್ನಿಯ(Indian Wells Masters) ಪುರುಷರ ಡಬಲ್ಸ್ ಫೈನಲ್‌ ಪಂದ್ಯದಲ್ಲಿ ಭಾರತದ ರೋಹನ್ ಬೋಪಣ್ಣ(RohanBopanna) ಮತ್ತು ಆಸ್ಟ್ರೇಲಿಯಾದ ಮ್ಯಾಥ್ಯೂ ಎಬ್ಡೆನ್(Matthew Ebden) ಜೋಡಿ ಚಾಂಪಿಯನ್​ ಪಟ್ಟ ಅಲಂಕರಿಸಿದೆ.

ಈ ಸಾಧನೆಯೊಂದಿಗೆ 43 ವರ್ಷದ ಬೋಪಣ್ಣ ಅವರು ಎಟಿಪಿ 1000 ಟೂರ್‌ನ ಅತ್ಯಂತ ಹಿರಿಯ ಚಾಂಪಿಯನ್ ಎಂಬ ಕೀರ್ತಿಗೆ ಪಾತ್ರರಾದರು. ಭೋಪಣ್ಣ–ಮ್ಯಾಥ್ಯೂ ಜೋಡಿ ಅಗ್ರ ಶ್ರೇಯಾಂಕಿತರಾದ ಡಚ್‌ನ ವೆಸ್ಲಿ ಕೂಲೋಫ್‌-ಬ್ರಿಟನ್‌ನ ನೀಲ್ ಸ್ಕಪ್‌ಸ್ಕಿ ಜೋಡಿಯನ್ನು 6-3, 2-6, 10-8 ಸೆಟ್‌ಗಳಿಂದ ಮಣಿಸಿದರು.

ವರ್ಷದ ಮೊದಲ ಪ್ರಶಸ್ತಿ ಗೆದ್ದ ಬೋಪಣ್ಣ ಜೋಡಿ

ಈ ಪಂದ್ಯವೂ ಸೇರಿ ಒಟ್ಟು ಎರಡು ಬಾರಿ ಇಂಡಿಯನ್ ವೆಲ್ಸ್ ಟೂರ್ನಿಯ ಡಬಲ್ಸ್ ಪಂದ್ಯವನ್ನು ರೋಹನ್ ಬೋಪಣ್ಣ–ಮ್ಯಾಥ್ಯೂ ಜೋಡಿ ಗೆದ್ದ ಸಾಧನೆ ಮಾಡಿದೆ. ಜತೆಗೆ ಅವರ ಈ ವರ್ಷದ ಮೊದಲ ಪ್ರಶಸ್ತಿಯಾಗಿದೆ. ವರ್ಷಾರಂಭದ ಮೊದಲ ಟೆನಿಸ್​ ಟೂರ್ನಿಯಾದ ಆಸ್ಟ್ರೇಲಿಯಾ ಓಪನ್ ಮಿಶ್ರ ಡಬಲ್ಸ್​ ಫೈನಲ್​ನಲ್ಲಿ ಸಾನಿಯಾ ಮಿರ್ಜಾ ಜತೆ ಆಡಿ ರನ್ನರ್​ ಅಪ್​ ಆಗಿದ್ದರು.

ಪ್ರಶಸ್ತಿ ಗೆದ್ದ ಬಳಿಕ ಮಾತನಾಡಿದ ಬೋಪಣ್ಣ ’ಇಂಡಿಯನ್ ವೆಲ್ಸ್ ಟೆನಿಸ್‌ನ ಸ್ವರ್ಗ. ಈ ಟೂರ್ನಿಯಲ್ಲಿ ಆಡುವುದೇ ಸಂತೋಷ. ಮ್ಯಾಥ್ಯೂ ಜತೆ ಸೇರಿ ಈ ಬಿಎನ್‌ಪಿ ಟ್ರೋಫಿ ಗೆದ್ದಿರುವುದು ಇನ್ನೂ ಖುಷಿ ಕೊಟ್ಟಿದೆ. ವಯಸ್ಸು ಎನ್ನುವುದು ಕೇವಲ ನಂಬರ್​ ಮಾತ್ರ. ನಮ್ಮಲ್ಲಿ ಆಡುವ ಛಲ ಮತ್ತು ಸಾಮರ್ಥ್ಯವಿದ್ದರೆ ಎಲ್ಲವನ್ನು ಸಾಧಿಸಬಹುದು” ಎಂದು ಬೋಪಣ್ಣ ಹೇಳಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

IPL Streaming Case: ಏನಿದು ಐಪಿಎಲ್​ ಲೈವ್ ಸ್ಟ್ರೀಮಿಂಗ್ ಕೇಸ್​; ತಮನ್ನಾ,ಜಾಕ್ವೆಲಿನ್, ಸಂಜಯ್​ ದತ್​ಗೆ ಪೊಲೀಸರು ಸಮನ್ಸ್ ಜಾರಿ ಮಾಡಿದ್ದೇಕೆ?

IPL Streaming Case: 2023ರ ಐಪಿಎಲ್ ಒಟಿಟಿ ಹಕ್ಕು ಜಿಯೋ ಸಿನಿಮಾ ಪಡೆದಿತ್ತು. ಆದರೆ ಯಾವುದೇ ಬ್ರಾಡ್​ಕಾಸ್ಟಿಂಗ್ ಹಕ್ಕು ಪಡೆಯದೇ ಆ ವರ್ಷ ಐಪಿಎಲ್​​ನ ಫೇರ್​ಪ್ಲೇ ಆ್ಯಪ್​​ನಲ್ಲಿ ಪ್ರಸಾರ ಮಾಡಲಾಗಿತ್ತು. ಇದರಿಂದ ಅಧಿಕೃತವಾಗಿ ಪ್ರಸಾರ ಹಕ್ಕು ಪಡೆದ ಜಿಯೋ ಸಿನಿಮಾಗೆ ಸಾಕಷ್ಟು ನಷ್ಟ ಆಗಿತ್ತು. ಹೀಗಾಗಿ, ಫೇರ್​ಪ್ಲೇ ಆ್ಯಪ್​ ವಿರುದ್ಧ ಕೇಸ್ ದಾಖಲು ಮಾಡಲಾಗಿದೆ.

VISTARANEWS.COM


on

Tamannaah Bhatia and Sanjay Dutt
Koo

ಮುಂಬೈ: ಬಹುಭಾಷಾ ನಟಿ ತಮನ್ನಾ ಭಾಟಿಯಾ, ಸಂಜಯ್​ ದತ್, ಜಾಕ್ವೆಲಿನ್ ಫರ್ನಾಂಡಿಸ್ ಮತ್ತು ಸಿಂಗರ್​ ಬಾದ್​ಶಾ ಅವರಿಗೆ ಮುಂಬೈನ ಸೈಬರ್ ಕ್ರೈಂ ಪೊಲೀಸರು ಸಮನ್ಸ್ ಜಾರಿ ಮಾಡಿದ್ದಾರೆ. ಅಲ್ಲದೆ ಏಪ್ರಿಲ್ 29ರಂದು ವಿಚಾರಣೆಗೆ ಹಾಜರಾಗುವಂತೆ ಇವರಿಗೆ ಸೂಚಿಸಲಾಗಿದೆ ಎಂದು ತಿಳಿದು ಬಂದಿದೆ. ನಟ ಸಂಜಯ್ ದತ್ ತಾನು ವಿದೇಶದಲ್ಲಿರುವ ಕಾರಣ ವಿಚಾರಣೆಗೆ ಬೇರೊಂದು ಸಮಯ ಮತ್ತು ದಿನಾಂಕ ನಿಗದಿಗೆ ಮನವಿ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ.

ತಮನ್ನಾ ಮತ್ತು ಸಂಜಯ್ ದತ್ ಅವರು ಮಹದೇವ್ ಬೆಟ್ಟಿಂಗ್ ಅಪ್ಲಿಕೇಶನ್‌ನ ಅಂಗಸಂಸ್ತೆ ಫೇರ್‌ಪ್ಲೆ (FairPlay) ಅಪ್ಲಿಕೇಶನ್ ಅನ್ನು ಪ್ರಚಾರ ಮಾಡಿದ ಮತ್ತು ಪ್ರತಿನಿಧಿಸಿದ ಆರೋಪ ಎದುರಿಸುತ್ತಿದ್ದಾರೆ. ಸೆಲೆಬ್ರಿಟಿಗಳು ಹಲವು ಪ್ರಾಡಕ್ಟ್​ಗಳ ಪ್ರಚಾರ ಮಾಡುತ್ತಾರೆ. ಅನೇಕ ಬಾರಿ ತಾವು ಪ್ರಮೋಷನ್ ಮಾಡುತ್ತಿರುವ ಸಂಸ್ಥೆ ಎಂಥದ್ದು, ಅದರ ಹಿನ್ನೆಲೆ ಏನು ಎಂಬುದನ್ನು ತಿಳಿಯದೇ ದುಡ್ಡಿದಾಗಿ ಜಾಹೀರಾತು ಮಾಡಿಕೊಡುತ್ತಾರೆ. ಸಂಸ್ಥೆಗಳು ಈ ರೀತಿ ತೊಂದರೆಗೆ ಸಿಲುಕಿದಾಗ ಅದರ ಪ್ರಚಾರ ಮಾಡಿದವರೂ ವಿಚಾರಣೆ ಎದುರಿಸಬೇಕಾಗುತ್ತದೆ. ಇದೇ ರೀತಿ ಈ ನಟ ಮತ್ತು ನಟಿಯರಿಗೂ ಈಗ ಸಮಸ್ಯೆ ಎದುರಾಗಿದೆ.

ಇದನ್ನೂ ಓದಿ IPL 2024: ಸಿಕ್ಸರ್​ನಿಂದ ಗಾಯಗೊಂಡ ಕ್ಯಾಮೆರಮನ್​ಗೆ ವಿಡಿಯೊ ಮೂಲಕ ಕ್ಷಮೆ ಕೇಳಿದ ರಿಷಭ್​ ಪಂತ್​​

ವಯಾಕಾಮ್‌ಗೆ ಅಪಾರ ನಷ್ಟ


2023ರ ಐಪಿಎಲ್ ಒಟಿಟಿ ಹಕ್ಕು ಜಿಯೋ ಸಿನಿಮಾ ಪಡೆದಿತ್ತು. ಆದರೆ ಯಾವುದೇ ಬ್ರಾಡ್​ಕಾಸ್ಟಿಂಗ್ ಹಕ್ಕು ಪಡೆಯದೇ ಆ ವರ್ಷ ಐಪಿಎಲ್​​ನ ಫೇರ್​ಪ್ಲೇ ಆ್ಯಪ್​​ನಲ್ಲಿ ಪ್ರಸಾರ ಮಾಡಲಾಗಿತ್ತು. ಇದರಿಂದ ಅಧಿಕೃತವಾಗಿ ಪ್ರಸಾರ ಹಕ್ಕು ಪಡೆದ ಜಿಯೋ ಸಿನಿಮಾಗೆ ಸಾಕಷ್ಟು ನಷ್ಟ ಆಗಿತ್ತು. ಹೀಗಾಗಿ, ಫೇರ್​ಪ್ಲೇ ಆ್ಯಪ್​ ವಿರುದ್ಧ ಕೇಸ್ ದಾಖಲು ಮಾಡಲಾಗಿದೆ. ನೊಟೀಸ್ ಜಾರಿಯಾದ ಹಿನ್ನೆಲೆಯಲ್ಲಿ ನಟಿ ತಮನ್ನಾ ಏಪ್ರಿಲ್ 29 ರಂದು ಮಹಾರಾಷ್ಟ್ರದ ಸೈಬರ್ ಭದ್ರತೆ ಮತ್ತು ಸೈಬರ್ ಅಪರಾಧ ತನಿಖೆಗೆ ನೋಡಲ್ ಏಜೆನ್ಸಿಯ ಮುಂದೆ ಹಾಜರಾಗಬೇಕಾಗಿದೆ.

Continue Reading

ಕ್ರೀಡೆ

DC vs GT: ಕೊಹ್ಲಿಯಂತೆ ಅದ್ಭುತ ಫೀಲ್ಡಿಂಗ್​ ನಡೆಸಿ ಡೆಲ್ಲಿಗೆ ಗೆಲುವು ತಂದ ಟ್ರಿಸ್ಟಾನ್ ಸ್ಟಬ್ಸ್

DC vs GT: ಗುಜರಾತ್​ ವಿರುದ್ಧದ ಪಂದ್ಯದಲ್ಲಿ ವಿಸ್ಫೋಟಕ ಬ್ಯಾಟಿಂಗ್​ ನಡೆಸಿದ ಟ್ರಿಸ್ಟಾನ್ ಸ್ಟಬ್ಸ್ ಕೇವಲ 7 ಎಸೆತಗಳಿಂದ 26 ರನ್​ ಬಾರಿಸಿದರು. ಈ ಇನಿಂಗ್ಸ್​ನಲ್ಲಿ 2 ಸಿಕ್ಸರ್​ ಮತ್ತು 3 ಬೌಂಡರಿ ಸಿಡಿಯಿತು.

VISTARANEWS.COM


on

DC vs GT
Koo

ನವದೆಹಲಿ: ವಿರಾಟ್​ ಕೊಹ್ಲಿ(Virat Kohli) ಅವರು ಇದೇ ವರ್ಷಾರಂಭದಲ್ಲಿ ಅಫಘಾನಿಸ್ತಾನ ವಿರುದ್ಧದ ಟಿ20 ಪಂದ್ಯದಲ್ಲಿ ಸೂಪರ್​ ಮ್ಯಾನ್​ ರೀತಿಯಲ್ಲಿ ಹಾರಿ ಸಿಕ್ಸರ್​ ತಡೆದು ಭಾರತದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಇದೇ ರೀತಿಯಲ್ಲಿ ನಿನ್ನೆ (ಬುಧವಾರ) ನಡೆದ ಗುಜರಾತ್​ ಟೈಟಾನ್ಸ್​(DC vs GT) ವಿರುದ್ಧದ ಐಪಿಎಲ್(IPL 2024)​ ಪಂದ್ಯದಲ್ಲಿಯೂ ಡೆಲ್ಲಿ ತಂಡದ ಆಟಗಾರ ಟ್ರಿಸ್ಟಾನ್ ಸ್ಟಬ್ಸ್(Tristan Stubbs) ಕೂಡ ಸಿಕ್ಸರ್​ ತಡೆದು ಡೆಲ್ಲಿ ತಂಡಕ್ಕೆ ಗೆಲುವು ತಂದುಕೊಟ್ಟಿದ್ದಾರೆ. ಟ್ರಿಸ್ಟಾನ್ ಸ್ಟಬ್ಸ್ ಫೀಲ್ಡಿಂಗ್​ನ ಈ ಫೋಟೊ ಎಲ್ಲಡೆ ವೈರಲ್​ ಆಗಿದ್ದು ಮಾಜಿ ಕ್ರಿಕೆಟಿಗರು ಕೊಹ್ಲಿ 2.0 ವರ್ಷನ್​ ಎಂದು ಹೇಳಿದ್ದಾರೆ.

ಗುಜರಾತ್ ಇನ್ನಿಂಗ್ಸ್‌ನ 19 ನೇ ಓವರ್‌ನಲ್ಲಿ ಈ ಘಟನೆ ಸಂಭವಿಸಿತು. ರೋಮಾಂಚನಕಾರಿ ಕ್ಲೈಮ್ಯಾಕ್ಸ್​ನಲ್ಲಿ ರಶೀದ್ ಖಾನ್ ಸ್ಟ್ರೈಕ್‌ನಲ್ಲಿದ್ದರು. ರಸಿಖ್ ಸಲಾಮ್‌ ಎಸೆದ ನಿಧಾನಗತಿಯ ಎಸೆತವನ್ನು ರಶೀದ್​ ಖಾನ್​ ಸಿಕ್ಸರ್​ಗೆ ಬಡಿದಟ್ಟಿದರು. ಈ ವೇಳೆ ಬೌಂಡರಿ ಲೈನ್​ನಲ್ಲಿ ನಿಂತಿದ್ದ ಟ್ರಿಸ್ಟಾನ್ ಸ್ಟಬ್ಸ್ ಎತ್ತರಕ್ಕೆ ಜಿಗಿದು ಸಿಕ್ಸರ್​ ತಡೆದರು. ಅವರು ಈ ಸಿಕ್ಸರ್​ ತಡೆದಯೇ ಹೋಗಿದ್ದರೆ ಡೆಲ್ಲಿ ಸೋಲು ಕಾಣುತ್ತಿತ್ತು. ಡೆಲ್ಲಿ ಗೆದ್ದದ್ದು ಕೇವಲ 4 ರನ್​ ಅಂತರದಿಂದ.

ಗುಜರಾತ್​ ವಿರುದ್ಧದ ಪಂದ್ಯದಲ್ಲಿ ವಿಸ್ಫೋಟಕ ಬ್ಯಾಟಿಂಗ್​ ನಡೆಸಿದ ಟ್ರಿಸ್ಟಾನ್ ಸ್ಟಬ್ಸ್ ಕೇವಲ 7 ಎಸೆತಗಳಿಂದ 26 ರನ್​ ಬಾರಿಸಿದರು. ಈ ಇನಿಂಗ್ಸ್​ನಲ್ಲಿ 2 ಸಿಕ್ಸರ್​ ಮತ್ತು 3 ಬೌಂಡರಿ ಸಿಡಿಯಿತು.

ಇಲ್ಲಿನ ಅರುಣ್​ ಜೇಟ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್​ ಸೋತು ಬ್ಯಾಟಿಂಗ್​ಗೆ ಇಳಿಸಲ್ಪಟ್ಟ ಡೆಲ್ಲಿ ಕ್ಯಾಪಿಟಲ್ಸ್​ ರಿಷಭ್​ ಪಂತ್​(88*) ಮತ್ತು ಅಕ್ಷರ್​ ಪಟೇಲ್​(66) ಅವರ ಸಮಯೋಚಿತ ಬ್ಯಾಟಿಂಗ್​ ನೆರವಿನಿಂದ ನಿಗದಿತ 20 ಓವರ್​ಗಳಲ್ಲಿ 4 ವಿಕೆಟ್​ಗೆ 224 ರನ್​ ಪೇರಿಸಿತು. ಜವಾಬಿತ್ತ ಗುಜರಾತ್ ದಿಟ್ಟ ಹೋರಾಟ ನಡೆಸಿದರೂ 8 ವಿಕೆಟ್​ಗೆ 220 ರನ್​ ಬಾರಿಸಿ ಸಣ್ಣ ಅಂತರದಿಂದ ​ಸೋಲೊಪ್ಪಿಕೊಂಡಿತು.

ಇದನ್ನೂ ಓದಿ IPL 2024: ಸಿಕ್ಸರ್​ನಿಂದ ಗಾಯಗೊಂಡ ಕ್ಯಾಮೆರಮನ್​ಗೆ ವಿಡಿಯೊ ಮೂಲಕ ಕ್ಷಮೆ ಕೇಳಿದ ರಿಷಭ್​ ಪಂತ್​​

ಚೇಸಿಂಗ್​ ವೇಳೆ ಕೆಲ ಕ್ರಮಾಂಕದಲ್ಲಿ ಶಕ್ತಿ ಮೀರಿ ಬ್ಯಾಟಿಂಗ್​ ನಡೆಸಿದ ಡೇವಿಡ್​ ಮಿಲ್ಲರ್​ ಅರ್ಧಶತಕ ಬಾರಿಸುವ ಮೂಲಕ ಒಂದು ಹಂತದಲ್ಲಿ ಗುಜರಾತ್​ ಪಾಳಯದಲ್ಲಿ ಗೆಲುವಿನ ಆಸೆ ಚಿಗುರೊಡೆಯುವಂತೆ ಮಾಡಿದರು. ಆದರೆ ಉಳಿದ ಆಟಗಾರರಿಂದ ಉತ್ತಮ ಸಾಥ್​ ಸಿಗದ ಕಾರಣ ದೊಡ್ಡ ಹೊಡೆತಗಳಿಗೆ ಕೈ ಹಾಕಿ ರಾಸಿಖ್ ಸಲಾಂ ಅವರಿಗೆ ಕ್ಯಾಚ್​ ನೀಡಿ ವಿಕೆಟ್​ ಕೈಚೆಲ್ಲಿದರು. ಈ ವಿಕೆಟ್​ ಪತನದ ಬಳಿಕ ರಶೀದ್​ ಖಾನ್​ ಮತ್ತು ಸಾಯಿ ಕಿಶೋರ್​ ಸಿಡಿದು ನಿಂತರು. ಅಂತಿಮ ಓವರ್​ನಲ್ಲಿ ಗೆಲುವಿಗೆ 19 ರನ್​ ತೆಗೆಯುವ ಸವಾಲಿನಲ್ಲಿ ರಶೀದ್​ ಅವರು ಮುಕೇಶ್​ ಕುಮಾರ್​ಗೆ ಸತತ 2 ಬೌಂಡರಿ ಮತ್ತು ಒಂದು ಸಿಕ್ಸರ್​ ಬಾರಿಸಿ ಪಂದ್ಯವನ್ನು ರೋಚಕ ಹಂತಕ್ಕೆ ತಂದು ನಿಲ್ಲಿಸಿದರು. ಅಂತಿಮ ಎಸೆತದಲ್ಲಿ ಗೆಲುವಿಗೆ 5 ರನ್​ ಬೇಕಿದ್ದಾಗ ಇದನ್ನು ಬಾರಿಸುವಲ್ಲಿ ರಶೀದ್​ ಎಡವಿದರು. ಡೆಲ್ಲಿ ರೋಚಕ 4 ರನ್​ಗಳ ಗೆಲುವು ಸಾಧಿಸಿತು.

Continue Reading

ಕ್ರೀಡೆ

Virender Sehwag: ಬಡ ದೇಶದ ಕ್ರಿಕೆಟ್​ ಲೀಗ್​ ಆಡಲ್ಲ ಎಂದ ವೀರೇಂದ್ರ ಸೆಹವಾಗ್; ಕಾರಣವೇನು?

Virender Sehwag: ಸೆಹವಾಗ್​ ಅವರು 14 ವರ್ಷದ ಕ್ರಿಕೆಟ್​ ಬಾಳ್ವೆಯಲ್ಲಿ 17,000 ಸಾವಿರಕ್ಕೂ ಅಧಿಕ ಅಂತಾರಾಷ್ಟ್ರಿಯ ರನ್​ ಬಾರಿಸಿದ್ದಾರೆ. ಭಾರತ ಪರ ಟೆಸ್ಟ್​ನಲ್ಲಿ ತ್ರಿಶತಕ ​ ಬಾರಿಸಿದ ಮೊದಲ ಆಟಗಾರ ಎಂಬ ಹಿರಿಮೆಯೂ ಇವರದ್ದಾಗಿದೆ.

VISTARANEWS.COM


on

Virender Sehwag
Koo

ಮುಂಬಯಿ: ಟೀಮ್​ ಇಂಡಿಯಾದ ಮಾಜಿ ಡ್ಯಾಶಿಂಗ್ ಓಪನಿಂಗ್​ ಬ್ಯಾಟರ್ ವೀರೇಂದ್ರ ಸೆಹವಾಗ್​​(Virender Sehwag) ಸಂದರ್ಶನವೊಂದರಲ್ಲಿ ಡ್ಯಾಶಿಂಗ್​ ಉತ್ತರವನ್ನೇ ನೀಡಿದ್ದಾರೆ. ನಾವು ಶ್ರೀಮಂತರು, ಬೇರೆ ಕ್ರಿಕೆಟ್ ಲೀಗ್​ಗಳಲ್ಲಿ ಆಡುವುದಕ್ಕಾಗಿ ಬಡ ದೇಶಗಳಿಗೆ ಹೋಗುವುದಿಲ್ಲ ಎಂದು ಹೇಳಿದ್ದಾರೆ.

ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಆ್ಯಡಂ ಗಿಲ್‌ ಕ್ರಿಸ್ಟ್‌(Adam Gilchrist) ಅವರು “ಇತರ ಟಿ20 ಲೀಗ್ ಗಳಲ್ಲಿ ಆಡುವುದಕ್ಕಾಗಿ ಭಾರತೀಯ ಕ್ರಿಕೆಟಿಗರು ಮುಂದೆ ಯಾವತ್ತಾದರೂ ಬೇರೆ ದೇಶಗಳಿಗೆ ಹೋಗುವ ಸಾಧ್ಯತೆಯಿದೆಯೇ?” ಎಂದು ಸೆಹವಾಗ್​ಗೆ ಪ್ರಶ್ನೆ ಮಾಡಿದರು. ಇದಕ್ಕೆ ಉತ್ತರಿಸಿದ ಸೆಹವಾಗ್​, ”ಇಲ್ಲ, ನಮಗೆ ಅದರ ಅಗತ್ಯವಿಲ್ಲ. ನಾವು ಶ್ರೀಮಂತರು. ಇತರ ಲೀಗ್ ಗಳಲ್ಲಿ ಆಡುವುದಕ್ಕಾಗಿ ನಾವು ಬಡ ದೇಶಗಳಿಗೆ ಹೋಗುವುದಿಲ್ಲ” ಎಂದು ಹೇಳಿದರು. ಈ ಉತ್ತರ ಕೇಳಿ ಗಿಲ್‌ ಕ್ರಿಸ್ಟ್‌ ಒಂದು ಕ್ಷಣ ಅಚ್ಚರಿಗೊಂಡು ಬ್ಯಾಟಿಂಗ್​ ಮಾತ್ರವಲ್ಲದೆ ಮಾತಿನಲ್ಲಿಯೂ ನೀವು ಸ್ಫೋಟಕವಾಗಿದ್ದೀರಿ ಎಂದು ಹೇಳಿದ್ದಾರೆ.

‘ನನ್ನನ್ನು ಭಾರತ ತಂಡದಿಂದ ಕೈಬಿಡಲಾಗಿತ್ತು. ನಾನು ಐಪಿಎಲ್​ನಲ್ಲಿ ಆಡುತ್ತಿದ್ದೆ. ಆಗ ನನಗೆ ಬಿಬಿಎಲ್ ನಿಂದ ಒಂದು ಅವಕಾಶ ಬಂತು. ಈ ವೇಳೆ ನಾನು ಎಷ್ಟು ಹಣ ಸಿಗಬಹುದು ಎಂದು ಕೇಳಿದೆ. ಈ ವೇಳೆ ಫ್ರಾಂಚೈಸಿಯ ಅಧಿಕಾರಿಯೊಬ್ಬರು ಒಂದು ಲಕ್ಷ ಡಾಲರ್ ಸಿಗಬಹುದು ಎಂದು ಹೇಳಿದರು. ತಕ್ಷಣ ಉತ್ತರಿಸಿದ ನಾನು, ಈ ಮೊತ್ತವನ್ನು ನಾನು ಪ್ರವಾಸಕ್ಕಾಗಿ ಖರ್ಚು ಮಾಡುತ್ತೇನೆ. ನನ್ನ ಕಳೆದ ರಾತ್ರಿಯ ಬಿಲ್ ಇದಕ್ಕಿಂತ ಹೆಚ್ಚಾಗಿತ್ತು ಎಂದು ಹೇಳಿ ಆಫರ್ ತಿರಸ್ಕರಿಸಿದೆ” ಎಂದು ಸೆಹವಾಗ್​ ಹೇಳಿದರು. ಈ ಮೂಲಕ ಭಾರತದ ಕ್ರಿಕೆಟ್​ ಲೀಗ್​ಗಳು ವಿದೇಶೀ ಲೀಗ್​ಗಳಿಗಿಂತ ಅತ್ಯಂತ ಶ್ರೀಮಂತ ಎನ್ನುವುದನ್ನು ಸೆಹವಾಗ್​ ಪರೋಕ್ಷವಾಗಿ ಹೇಳಿದರು.

ಇದನ್ನೂ ಓದಿ Virender Sehwag: ನಾಯಕತ್ವ ನೀಡುವುದಾಗಿ ನಂಬಿಕೆ ದ್ರೋಹ; ಸೆಹ್ವಾಗ್​​​ ಸ್ಫೋಟಕ ಹೇಳಿಕೆ

ಸೆಹವಾಗ್​ ಅವರು 14 ವರ್ಷದ ಕ್ರಿಕೆಟ್​ ಬಾಳ್ವೆಯಲ್ಲಿ 17,000 ಸಾವಿರಕ್ಕೂ ಅಧಿಕ ಅಂತಾರಾಷ್ಟ್ರಿಯ ರನ್​ ಬಾರಿಸಿದ್ದಾರೆ. ಭಾರತ ಪರ ಟೆಸ್ಟ್​ನಲ್ಲಿ ತ್ರಿಶತಕ ​ ಬಾರಿಸಿದ ಮೊದಲ ಆಟಗಾರ ಎಂಬ ಹಿರಿಮೆಯೂ ಇವರದ್ದಾಗಿದೆ. ಸಚಿನ್​ ಬಳಿಕ ಏಕದಿನದಲ್ಲಿ ದ್ವಿಶತಕ ಬಾರಿಸಿದ ದ್ವಿತೀಯ ಆಟಗಾರನೂ ಹೌದು. ಒಟ್ಟು 251 ಏಕದಿನ ಪಂದ್ಯ ಆಡಿ 8273 ರನ್​ ಬಾರಿಸಿದ್ದಾರೆ. 15 ಶತಕ, 1 ದ್ವಿಶತಕ ಮತ್ತು 38 ಅರ್ಧಶತಕ ಬಾರಿಸಿದ್ದಾರೆ. ಟೆಸ್ಟ್​ನಲ್ಲಿ 8586 ರನ್​, 23 ಶತಕ 6 ದ್ವಿಶತಕ 2 ತ್ರಿಶತಕ ಬಾರಿಸಿದ್ದಾರೆ.

ಟಿ20 ಕ್ರಿಕೆಟ್​ನಲ್ಲಿ ಭಾರತ ತಂಡವನ್ನು ಮೊದಲ ಬಾರಿ ನಾಯಕನಾಗಿ ಮುನ್ನಡೆಸಿದ ಕೀರ್ತಿಯೂ ಇವರದ್ದಾಗಿದೆ. 19 ಟಿ20 ಪಂದ್ಯಗಳಿಂದ 394 ರನ್​ ಬಾರಿಸಿದ್ದಾರೆ. ಐಪಿಎಲ್​ನಲ್ಲಿಯೂ ತಮ್ಮ ಬಿರುಸಿನ ಬ್ಯಾಟಿಂಗ್​ ಮೂಲಕ 2728 ರನ್​ ಬಾರಿಸಿದ್ದಾರೆ. 2 ಶತಕ ಕೂಡ ಒಳಗೊಂಡಿದೆ.

Continue Reading

ಕ್ರೀಡೆ

IPL 2024: ಸಿಕ್ಸರ್​ನಿಂದ ಗಾಯಗೊಂಡ ಕ್ಯಾಮೆರಮನ್​ಗೆ ವಿಡಿಯೊ ಮೂಲಕ ಕ್ಷಮೆ ಕೇಳಿದ ರಿಷಭ್​ ಪಂತ್​​

IPL 2024: ಮೋಹಿತ್​ ಶರ್ಮ ಎಸೆತ ಅಂತಿಮ ಓವರ್​ನಲ್ಲಿ ಪಂತ್​ 4 ಸಿಕ್ಸರ್​ ಮತ್ತು ಒಂದು ಬೌಂಡರಿ ಸಿಡಿಸಿ 31 ರನ್ ದೋಚಿದರು. ಹೀಗಾಗಿ ಅಂತಿಮ 18 ಎಸೆತಗಳಲ್ಲಿ ಡೆಲ್ಲಿಗೆ ಬರೋಬ್ಬರಿ 67 ರನ್​ ಹರಿದು ಬಂತು. ಕೇವಲ 43 ಎಸೆತ ಎದುರಿಸಿದ ಪಂತ್​ ಬರೋಬ್ಬರಿ 8 ಸಿಕ್ಸರ್​ ಮತ್ತು 5 ಬೌಂಡರಿ ಸಿಡಿಸಿ ಅಜೇಯ 88 ರನ್​ ಬಾರಿಸಿದರು.

VISTARANEWS.COM


on

IPL 2024
Koo

ನವದೆಹಲಿ: ಗುಜರಾತ್​ ಟೈಟಾನ್ಸ್(DC vS GT)​ ವಿರುದ್ಧ ವಿಸ್ಫೋಟಕ ಬ್ಯಾಟಿಂಗ್​ ನಡೆಸಿ ಸಿಕ್ಸರ್​ಗಳ ಸುರಿಮಳೆ ಸುರಿಸಿದ್ದ ರಿಷಭ್​ ಪಂತ್(Rishabh Pant)​ ಅವರ ಒಂದು ಸಿಕ್ಸರ್​ ಕ್ಯಾಮೆರಮನ್​ಗೆ ತಲುಲಿದೆ. ಈ ಚೆಂಡಿನೇಡಿಗೆ ಗಾಯಗೊಂಡಿರುವ ಕ್ಯಾಮೆರಮನ್​ಗೆ ಪಂತ್​ ಅವರು ಪಂದ್ಯದ ಬಳಿಕ ಕ್ಷಮೆ ಕೇಳಿ ಶೀಘ್ರ ಚೇತರಿಕೆಗೆ ಹಾರೈಸಿದ್ದಾರೆ. ಈ ವಿಡಿಯೊವನ್ನು ಐಪಿಎಲ್​(IPL 2024) ತನ್ನ ಅಧಿಕೃತ ಟ್ವಿಟರ್​ ಎಕ್ಸ್​ನಲ್ಲಿ ಹಂಚಿಕೊಂಡಿದೆ.

ಪಂದ್ಯದ ಮುಕ್ತಾಯದ ಬಳಿಕ ರಿಷಭ್​ ಪಂತ್​ ಮತ್ತು ತಂಡದ ಹೆಡ್​ ಕೋಚ್​ ರಿಕಿ ಪಾಂಟಿಂಗ್​ ಈ ಘಟನೆಯ ಬಗ್ಗೆ ಮಾತನಾಡಿ, ಪಂತ್ ಅವರು ನಾನು ಉದ್ದೇಶ ಪೂರ್ವಕವಾಗಿ ಇದನ್ನು ಮಾಡಿಲ್ಲ. ಕ್ಷಮಿಸು ಸಹೋದರ, ಆದಷ್ಟು ಶೀಘ್ರವಾಗಿ ಚೇತರಿಕೆ ಕಾಣುವಂತಾಗಲಿ ಎಂದು ಕ್ಯಾಮೆರಮೆನ್​ಗೆ ಕ್ಷಮೆ ಕೇಳಿದ್ದಾರೆ.

44 ರನ್​ಗೆ ಮೂರು ವಿಕೆಟ್​ ಕಳೆದುಕೊಂಡ ವೇಳೆ ಕ್ರೀಸ್​ಗಿಳಿದ ಎಡಗೈ ಬ್ಯಾಟರ್​ಗಳಾದ ರಿಷಭ್​ ಪಂತ್​ ಮತ್ತು ಅಕ್ಷರ್​ ಪಟೇಲ್​ ಆರಂಭದಲ್ಲಿ ತಾಳ್ಮೆಯುತ ಬ್ಯಾಟಿಂಗ್​ ನಡೆಸಿ ತಂಡವನ್ನು ಆರಂಭಿಕ ಆಘಾತದಿಂದ ಪಾರು ಮಾಡಿದರು. ಅರ್ಧಶತಕ ಪೂರ್ತಿಗೊಂಡ ತಕ್ಷಣ ಜಿದ್ದಿಗೆ ಬಿದ್ದವರಂತೆ ಬ್ಯಾಟ್​ ಬೀಸಿ ಗುಜರಾತ್​ ಬೌಲರ್​ಗಳ ಮೇಲೆ ಸವಾರಿ ಮಾಡಿದರು. 17ನೇ ಓವರ್​ ತನಕ ಕ್ರೀಸ್​ನಲ್ಲಿದ್ದ ಅಕ್ಷರ್​ ಪಟೇಲ್ 5 ಬೌಂಡರಿ ಮತ್ತು 4 ಸಿಕ್ಸರ್​ ನೆರವಿನಿಂದ 66 ರನ್​ ಚಚ್ಚಿದರು. ಈ ಜೋಡಿ 4ನೇ ವಿಕೆಟ್​ಗೆ 113 ರನ್​ ಒಟ್ಟುಗೂಡಿಸಿತು.

ಮೋಹಿತ್​ ಶರ್ಮ ಎಸೆತ ಅಂತಿಮ ಓವರ್​ನಲ್ಲಿ ಪಂತ್​ 4 ಸಿಕ್ಸರ್​ ಮತ್ತು ಒಂದು ಬೌಂಡರಿ ಸಿಡಿಸಿ 31 ರನ್ ದೋಚಿದರು. ಹೀಗಾಗಿ ಅಂತಿಮ 18 ಎಸೆತಗಳಲ್ಲಿ ಡೆಲ್ಲಿಗೆ ಬರೋಬ್ಬರಿ 67 ರನ್​ ಹರಿದು ಬಂತು. ಕೇವಲ 43 ಎಸೆತ ಎದುರಿಸಿದ ಪಂತ್​ ಬರೋಬ್ಬರಿ 8 ಸಿಕ್ಸರ್​ ಮತ್ತು 5 ಬೌಂಡರಿ ಸಿಡಿಸಿ ಅಜೇಯ 88 ರನ್​ ಬಾರಿಸಿದರು.

4 ರನ್​ ಅಂತರದಿಂದ ಗೆದ್ದ ಡೆಲ್ಲಿ

ಇಲ್ಲಿನ ಅರುಣ್​ ಜೇಟ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್​ ಸೋತು ಬ್ಯಾಟಿಂಗ್​ಗೆ ಇಳಿಸಲ್ಪಟ್ಟ ಡೆಲ್ಲಿ ಕ್ಯಾಪಿಟಲ್ಸ್​ ರಿಷಭ್​ ಪಂತ್​(88*) ಮತ್ತು ಅಕ್ಷರ್​ ಪಟೇಲ್​(66) ಅವರ ಸಮಯೋಚಿತ ಬ್ಯಾಟಿಂಗ್​ ನೆರವಿನಿಂದ ನಿಗದಿತ 20 ಓವರ್​ಗಳಲ್ಲಿ 4 ವಿಕೆಟ್​ಗೆ 224 ರನ್​ ಪೇರಿಸಿತು. ಜವಾಬಿತ್ತ ಗುಜರಾತ್ ದಿಟ್ಟ ಹೋರಾಟ ನಡೆಸಿದರೂ 8 ವಿಕೆಟ್​ಗೆ 220 ರನ್​ ಬಾರಿಸಿ ಸಣ್ಣ ಅಂತರದಿಂದ ​ಸೋಲೊಪ್ಪಿಕೊಂಡಿತು. ಡೆಲ್ಲಿ ಈ ಗೆಲುವಿನ ಮೂಲಕ ಪ್ಲೇ ಆಫ್​ ರೇಸ್​ ಜೀವಂತವಾಗಿದೆ.

Continue Reading
Advertisement
Kannada Serials TRP Lakshmi Nivasa In Top Amruthadhaare in Top 5
ಕಿರುತೆರೆ7 mins ago

Kannada Serials TRP: ಈ ವಾರ ಟಿಆರ್‌ಪಿಯಲ್ಲಿ ʻಲಕ್ಷ್ಮೀ ನಿವಾಸʼಕ್ಕೆ ಎರಡನೇ ಸ್ಥಾನ: ಟಾಪ್‌ 5ನಲ್ಲಿ ʻಅಮೃತಧಾರೆʼ!

Lok Sabha Election 2024 No names of election officials in voter list Protest in front of the polling booth
Lok Sabha Election 202410 mins ago

Lok Sabha Election 2024: ವೋಟರ್‌ ಲಿಸ್ಟ್‌ನಲ್ಲಿ ಚುನಾವಣಾ ಅಧಿಕಾರಿಗಳ ಹೆಸರೇ ಇಲ್ಲ; ಮತಗಟ್ಟೆ ಮುಂದೆಯೇ ಪ್ರೊಟೆಸ್ಟ್!

Reliance Smart Bazar
ವಾಣಿಜ್ಯ20 mins ago

Reliance Smart Bazar: ರಿಲಯನ್ಸ್ ಸ್ಮಾರ್ಟ್ ಬಜಾರ್ ಗ್ರಾಹಕರ ಸಂಖ್ಯೆಯಲ್ಲಿ ಭಾರೀ ಹೆಚ್ಚಳ; ಯಾವೆಲ್ಲ ವಸ್ತುಗಳಿಗೆ ಹೆಚ್ಚಿನ ಬೇಡಿಕೆ?

Ethnic Collection
ಫ್ಯಾಷನ್44 mins ago

Ethnic Collection: ‘ಹೀರಾಮಂಡಿ’ ವೆಬ್ ಸೀರಿಸ್‌ ಪ್ರೇರಿತ ಸಾಂಪ್ರದಾಯಿಕ ಫ್ಯಾಷನ್ ಕಲೆಕ್ಷನ್‌ ಬಿಡುಗಡೆ ಮಾಡಿದ ಅಜಿಯೋ

Self Harming in Bengaluru
ಬೆಂಗಳೂರು45 mins ago

Self Harming : ಬೆಂಗಳೂರಲ್ಲಿ ರೈಲಿಗೆ ಸಿಲುಕಿ ಮೂವರು ಸಾವು; ಚೆಲ್ಲಾಪಿಲ್ಲಿಯಾಗಿ ಬಿದ್ದ ಮೃತದೇಹಗಳು

Voting awareness by the newly married couple at the reception
ಕರ್ನಾಟಕ51 mins ago

Lok Sabha Election 2024: ಆರತಕ್ಷತೆಯಲ್ಲಿ ವಧು-ವರರಿಂದ ಮತದಾನ ಜಾಗೃತಿ

Tamannaah Bhatia and Sanjay Dutt
ಕ್ರೀಡೆ56 mins ago

IPL Streaming Case: ಏನಿದು ಐಪಿಎಲ್​ ಲೈವ್ ಸ್ಟ್ರೀಮಿಂಗ್ ಕೇಸ್​; ತಮನ್ನಾ,ಜಾಕ್ವೆಲಿನ್, ಸಂಜಯ್​ ದತ್​ಗೆ ಪೊಲೀಸರು ಸಮನ್ಸ್ ಜಾರಿ ಮಾಡಿದ್ದೇಕೆ?

World Malaria Day
ಆರೋಗ್ಯ2 hours ago

World Malaria Day: ಮಲೇರಿಯಾ ಮತ್ತು ಡೆಂಗ್ಯು ನಡುವಿನ ವ್ಯತ್ಯಾಸ ಏನು? ಗುರುತಿಸುವುದು ಹೇಗೆ?

supreme court wealth redistribution
ಪ್ರಮುಖ ಸುದ್ದಿ2 hours ago

ವಿಸ್ತಾರ Explainer: Wealth redistribution: ನಿಮ್ಮ ಆಸ್ತಿಯನ್ನು ಸರ್ಕಾರ ವಶಪಡಿಸಿಕೊಳ್ಳಬಹುದಾ? ಸುಪ್ರೀಂ ಕೋರ್ಟ್ ಮುಂದಿದೆ ಕೇಸ್‌

Lok Sabha Election 2024 BJP rejects Sam Pitroda statement
Lok Sabha Election 20242 hours ago

Lok Sabha Election 2024: ಕಾಂಗ್ರೆಸ್‌ಗೆ ಅಧಿಕಾರ ಸಿಕ್ಕರೆ ಪಿತ್ರಾರ್ಜಿತ ಆಸ್ತಿಯಲ್ಲಿ ಸರ್ಕಾರಕ್ಕೆ ಪಾಲು; ‘ಕೈ’ಗೆ ಇಕ್ಕಟ್ಟು, ಬಿಜೆಪಿಗೆ ಅಸ್ತ್ರ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Neha Murder case CID Officer
ಹುಬ್ಬಳ್ಳಿ3 hours ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

Lok sabha election 2024
Lok Sabha Election 20245 hours ago

Lok Sabha Election 2024 : ಕರ್ನಾಟಕದಲ್ಲಿ ಮೊದಲ ಹಂತದ ಮತದಾನ; ಪ್ರವಾಸಿ ತಾಣಗಳ ಪ್ರವೇಶಕ್ಕೆ ಪ್ರವಾಸಿಗರಿಗೆ ನಿಷೇಧ

Dina Bhavishya
ಭವಿಷ್ಯ1 day ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು3 days ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ3 days ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು3 days ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

CET Exam 2024
ಬೆಂಗಳೂರು3 days ago

CET 2024 Exam : ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ; ಕೈ ಕೈ ಮಿಲಾಯಿಸಿದ ಪೊಲೀಸರು- ಎವಿಬಿಪಿ ಕಾರ್ಯಕರ್ತರು

Dina Bhavishya
ಭವಿಷ್ಯ3 days ago

Dina Bhavishya : ಸಹೋದ್ಯೋಗಿಗಳು ನಿಮ್ಮ ವಿರುದ್ಧ ಪಿತೂರಿ ಮಾಡುವ ಸಾಧ್ಯತೆ; ಈ ರಾಶಿಯವರು ಎಚ್ಚರ

Dina Bhavishya
ಭವಿಷ್ಯ4 days ago

Dina Bhavishya : ಅಮೂಲ್ಯ ವಸ್ತುಗಳು ಕೈ ತಪ್ಪಬಹುದು; ಈ ರಾಶಿಯವರು ಇಂದು ಎಚ್ಚರವಹಿಸಿ

ಟ್ರೆಂಡಿಂಗ್‌