Site icon Vistara News

Sexual Assault | ಅತ್ಯಾಚಾರ ಪ್ರಕರಣದಲ್ಲಿ ಸಿಲುಕಿದ್ದ ನೇಪಾಳ ಕ್ರಿಕೆಟಿಗನಿಗೆ ಬೇಲ್​; ನಾನು ಅಮಾಯಕ ಎಂದ ಆಟಗಾರ

Lamichhane

ಕಾಠ್ಮಂಡು : ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ (Sexual Assault) ಎಸಗಿದ ಪ್ರಕರಣದಲ್ಲಿ ಜೈಲು ಸೇರಿದ್ದ ನೇಪಾಳದ ಕ್ರಿಕೆಟಿಗ ಸಂದೀಪ್​ ಲಾಮಿಚಾನೆಗೆ ಅಲ್ಲಿನ ಹೈಕೋರ್ಟ್​​ ಜಾಮೀನು ನೀಡಿದೆ. ಕೆಳ ಹಂತದ ನ್ಯಾಯಾಲಯದ ನೀಡಿದ್ದ ಬಂಧನ ಆದೇಶವನ್ನು ನ್ಯಾಯಾಲಯ ರದ್ದುಪಡಿಸಿದೆ. ಆದರೆ, ಪ್ರಕರಣ ಮುಗಿಯುವ ತನಕ ಕ್ರಿಕೆಟಿಗ ದೇಶ ಬಿಟ್ಟು ಹೋಗದಂತೆ ನಿರ್ದೇಶನ ನೀಡಿದೆ.

ನೇಪಾಳದ ಯುವ ಕ್ರಿಕೆಟಿಗ ಸಂದೀಪ್​ ಮೇಲೆ ಅತ್ಯಾಚಾರ ಎಸಗಿದ್ದರೆಂಬ ಆರೋಪ ಕೇಳಿ ಬಂದಿತ್ತು. ದೂರು ದಾಖಲಾದ ವೇಳೆ ಅವರು ವೆಸ್ಟ್​ ಇಂಡೀಸ್​ನಲ್ಲಿ ನಡೆಯುವ ಕೆರಿಬಿಯನ್​ ಕ್ರಿಕೆಟ್​ ಲೀಗ್​ನಲ್ಲಿ ಪಾಲ್ಗೊಳ್ಳುತ್ತಿದ್ದರು. ದೂರು ದಾಖಲಾದ ಬಳಿಕವೂ ಅವರು ತನಿಖೆಗೆ ಹಾಜರಾಗದ ಕಾರಣ ಅವರ ವಿರುದ್ಧ ಕೋರ್ಟ್​ ಜಾಮೀನುರಹಿತ ವಾರಂಟ್​ ಹೊರಡಿಸಿತ್ತು. ಬಳಿಕ ಅವರು ತವರಿಗೆ ಮರಳಿದ್ದರು. ಅವರನ್ನು ವಿಮಾನ ನಿಲ್ದಾಣದಲ್ಲೇ ಪೊಲೀಸರು ವಶಪಡಿಸಿಕೊಂಡು ಕೋರ್ಟ್​ಗೆ ಹಾಜರುಪಡಿಸಿದ್ದರು.

ಕೆಳ ಹಂತದ ನ್ಯಾಯಾಲಯ ಲಾಮಿಚಾನೆಯನ್ನು ನ್ಯಾಯಾಂಗ ಬಂಧನದಲ್ಲಿ ಇಡುವಂತೆ ಆದೇಶಿಸಿತ್ತು. ಹೀಗಾಗಿ ಮೂರು ತಿಂಗಳಿಂದ ಜೈಲಿನಲ್ಲಿದ್ದರು. ತಮಗೆ ನೀಡಿದ್ದ ಶಿಕ್ಷೆಯನ್ನು ಪ್ರಶ್ನಿಸಿ ಸಂದೀಪ್​ ಮೇಲ್ಮನವಿ ಸಲ್ಲಿಸಿದ್ದರು. ಹೈಕೋರ್ಟ್​ ಅವರಿಗೆ ಜಾಮೀನು ನೀಡಿದೆ. ಈ ವೇಳೆ 20 ಲಕ್ಷ ರೂಪಾಯಿ ಬಾಂಡ್​ ಕೂಡ ಪಡೆದುಕೊಂಡಿದೆ.

ಜೈಲಿನಿಂದ ಬಂದ ಸಂದೀಪ್​ ಅವರು ತಾವು ನಿರಪರಾಧಿ ಎಂದು ಹೇಳಿಕೊಂಡಿದ್ದಾರೆ. ಈ ಕುರಿತ ಟ್ವೀಟ್​ ಮಾಡಿರುವ ಅವರು ನಾನು ಅಮಾಯಕ ಹಾಗೂ ನ್ಯಾಯಾಲಯದ ಬಗ್ಗೆ ಸಂಪೂರ್ಣ ಭರವಸೆಯಿದೆ. ನಾನು ಸಿಪಿಎಲ್​ನಿಂದ ಬಿಡುವು ಪಡೆದುಕೊಂಡಿದ್ದು, ನನ್ನ ದೇಶದಲ್ಲೇ ಉಳಿಯುವೆ. ನನ್ನ ಮೇಲೆ ಮಾಡಿರುವ ನಿರಾಧಾರ ಆರೋಪಗಳಿಗೆ ಉತ್ತರಿಸಲು ನಾನು ಸಿದ್ಧ. ಸೂಕ್ತ ನ್ಯಾಯ ದೊರೆಯುವ ಭರವಸೆಯಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ | ಹರಿಯಾಣ ಕ್ರೀಡಾ ಸಚಿವ ಸಂದೀಪ್​ ಸಿಂಗ್​ ವಿರುದ್ಧ ಲೈಂಗಿಕ ದೌರ್ಜನ್ಯ ಕೇಸ್​ ದಾಖಲು; ಮಹಿಳಾ ಕೋಚ್​​​ರಿಂದ ದೂರು

Exit mobile version