Bajrang Punia: ತ್ರಿವರ್ಣ ಧ್ವಜದ ಪೋಸ್ಟರ್​ ಮೇಲೆ ಕಾಲಿಟ್ಟ ಬಜರಂಗ್ ಪೂನಿಯಾ; ವಿಡಿಯೊ ವೈರಲ್ - Vistara News

ಕ್ರೀಡೆ

Bajrang Punia: ತ್ರಿವರ್ಣ ಧ್ವಜದ ಪೋಸ್ಟರ್​ ಮೇಲೆ ಕಾಲಿಟ್ಟ ಬಜರಂಗ್ ಪೂನಿಯಾ; ವಿಡಿಯೊ ವೈರಲ್

Bajrang Punia: ವಿನೇಶ್​ ಫೋಗಟ್(Vinesh Phogat)​ ಸೆಮಿಫೈನಲ್​ ಪ್ರವೇಶಿಸಿದ್ದ ವೇಳೆ ಬಜರಂಗ್‌ ಪೂನಿಯ ಟ್ವಿಟರ್​ ಎಕ್ಸ್​ನಲ್ಲಿ ಪೋಸ್ಟ್ ಮಾಡುವ ಮೂಲಕ ವಿನೇಶ್ ಸಾಧನೆಯನ್ನು ಕೊಂಡಾಡಿ ಕೇಂದ್ರ ಸರ್ಕಾರಕ್ಕೆ ಪರೋಕ್ಷವಾಗಿ ಟಾಂಗ್​ ಕೊಟ್ಟಿದ್ದರು.

VISTARANEWS.COM


on

Bajrang Punia
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಪ್ಯಾರಿಸ್​ನಿಂದ ಇಂದು ನವದೆಹಲಿಗೆ ಆಗಮಿಸಿದ್ದ ಕುಸ್ತಿಪಟು ವಿನೇಶ್​ ಫೋಗಟ್(Vinesh Phogat)​ ಅವರಿಗೆ ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭರ್ಜರಿ ಸ್ವಾಗತ ಕೋರಲಾಗಿತ್ತು. ಇದೇ ವೇಳೆ ಕುಸ್ತಿಪಟು ಬಜರಂಗ್​ ಪೂನಿಯ(Bajrang Punia) ಮಾಧ್ಯಮದವರನ್ನು ಸಂಬಾಳಿಸುವ ಫಜೀತಿಯಲ್ಲಿ ತ್ರಿವರ್ಣ ಧ್ವಜದ ಪೋಸ್ಟರ್ ಮೇಲೆ ಕಾಲಿಟ್ಟಿ ಇದೀಗ ವಿವಾದವೊಂದನ್ನು ಮೈಮೇಲೆ ಎಳೆದುಕೊಂಡಿದ್ದಾರೆ.

ವಿನೇಶ್ ಅವರನ್ನು ಒಲಿಂಪಿಯನ್‌ಗಳಾದ ಸಾಕ್ಷಿ ಮಲಿಕ್, ಬಜರಂಗ್ ಪೂನಿಯಾ ಸೇರಿದಂತೆ ಅಪಾರ ಸಂಖ್ಯೆಯ ಅಭಿಮಾನಿಗಳು ಆತ್ಮೀಯವಾಗಿ ಸ್ವಾಗತಿಸಿದರು. ಇದೇ ವೇಳೆ ನೆರದಿದ್ದ ಪತ್ರಕರ್ತರು ವಿನೇಶ್​ ಅವರ ಬೈಟ್ಸ್​ಗಳಿಗೆ ಮೈಕ್​ ಹಿಡಿದು ಕಾರಿಗೆ ಸುತ್ತುವರಿದಿದ್ದರು. ಇವರನ್ನು ಸಂಬಾಳಿಸುವ ಭರದಲ್ಲಿ ಕಾರ್‌ನ ಬಾನೆಟ್‌ ಮೇಲೆ ಹಾಕಲಾಗಿದ್ದ ತ್ರಿವರ್ಣ ಧ್ವಜದ ಪೋಸ್ಟರ್ ಇರುವ ಬ್ಯಾನರ್‌ ಮೇಲೆ ಬಜರಂಗ್ ಪೂನಿಯಾ ನಿಂತಿದ್ದರು. ಸದ್ಯ ಈ ಫೋಟೊ ಮತ್ತು ವಿಡಿಯೊ ವೈರಲ್​ ಆಗಿದ್ದು, ರಾಷ್ಟ್ರ ಧ್ವಜದ ಮೇಲೆ ಕಾಲಿಡಬಾರದು ಎಂಬ ಕಿಂಚಿತ್ತು ಬುದ್ಧಿ ಕೂಡ ನಿಮಗಿಲ್ಲವೇ ಎಂದು ನೆಟ್ಟಿಗರು ಬಜರಂಗ್​ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ವಿನೇಶ್​ ಫೋಗಟ್(Vinesh Phogat)​ ಸೆಮಿಫೈನಲ್​ ಪ್ರವೇಶಿಸಿದ್ದ ವೇಳೆ ಬಜರಂಗ್‌ ಪೂನಿಯ ಟ್ವಿಟರ್​ ಎಕ್ಸ್​ನಲ್ಲಿ ಪೋಸ್ಟ್ ಮಾಡುವ ಮೂಲಕ ವಿನೇಶ್ ಸಾಧನೆಯನ್ನು ಕೊಂಡಾಡಿ ಕೇಂದ್ರ ಸರ್ಕಾರಕ್ಕೆ ಪರೋಕ್ಷವಾಗಿ ಟಾಂಗ್​ ಕೊಟ್ಟಿದ್ದರು.

“ಜಗತನ್ನೇ ಗೆಲ್ಲಲು ಹೊರಟಿರುವ ವಿನೇಶಾ ಫೋಗಟ್ ಹಿಂದೊಮ್ಮೆ ತನ್ನದೇ ದೇಶದಲ್ಲಿ ಸೋಲು ಎದುರಿಸಿದ್ದಳು. ಲೈಗಿಂಕ ಕಿರುಕುಳದ ವಿರುದ್ಧ ನ್ಯಾಯಕ್ಕಾಗಿ ಹೋರಾಡಿದ್ದ ಈಕೆಯ ಮೇಲೆ ತನ್ನದೇ ದೇಶದಲ್ಲಿ ಲಾಠಿಯಿಂದ ಹೊಡೆದು ದಮನಿಸಲಾಗಿತ್ತು. ಬೀದಿಯಲ್ಲಿ ಎಳೆದಾಡಿ ತುಳಿದು ಅವಾಮಾನಿಸಲಾಗಿತ್ತು. ಇಂದು ಈ ಹುಡುಗಿಯ ಸಾಧನೆಯ ಮುಂದೆ ದೇಶದ ವ್ಯವಸ್ಥೆ ಸೋಲು ಕಂಡಿದೆ” ಎಂದು ಬರೆದುಕೊಂಡಿದ್ದರು.

ಡಬ್ಲ್ಯೂಎಫ್‌ಐ ವಿವಾದಕ್ಕೆ ಸಂಬಂಧಿಸಿದಂತೆ ಬಜರಂಗ್‌ ಪೂನಿಯಾ ಅವರು ಪದ್ಮಶ್ರೀ ಪ್ರಶಸ್ತಿಯನ್ನು ಕರ್ತವ್ಯ ಪಥದಲ್ಲಿ ಪದ್ಮಶ್ರೀ ಬಿಟ್ಟು ಹೋಗಿದ್ದರು. ಬಿಡುವಿಲ್ಲದ ವೇಳಾಪಟ್ಟಿಯಿಂದಾಗಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಲು ಸಾಧ್ಯವಾಗಲಿಲ್ಲ, ಆದರೆ ಪದಕವನ್ನು ಮನೆಗೆ ಕೊಂಡೊಯ್ಯುವುದಿಲ್ಲ. ಹೀಗಾಗಿ ಅಲ್ಲಿಯೇ ಬಿಟ್ಟು ಬಂದಿದ್ದೇನೆ ಎಂದು ಹೇಳಿದ್ದರು. ಭಾರತೀಯ ಕುಸ್ತಿ ಒಕ್ಕೂಟದ ಮಾಜಿ ಅಧ್ಯಕ್ಷ ಬ್ರಿಜ್​ಭೂಷಣ್​ ಸಿಂಗ್ ವಿರುದ್ಧ ನಡೆಸಿದ್ದ ಪ್ರತಿಭಟನೆ ರೂವಾರಿಗಳಲ್ಲಿ ಬಜರಂಗ್​ ಕೂಡ ಒಬ್ಬರಾಗಿದ್ದರು.

ಇದನ್ನೂ ಓದಿ Bajrang Punia: ‘ದೇಶದಲ್ಲಿ’ ಸೋತು ಒಲಿಂಪಿಕ್ಸ್​ನಲ್ಲಿ ಗೆಲುವಿನ ಹೆಜ್ಜೆಯಿಟ್ಟ​ ವಿನೇಶ್​​; ಬಜರಂಗ್‌ ಪೂನಿಯ ಟಾಂಗ್​

ನಿಗದಿತ ತೂಕಗಿಂತ ಹೆಚ್ಚಿನ ಭಾರ ಇದ್ದ ಕಾರಣ ಪ್ಯಾರಿಸ್​ ಒಲಿಂಪಿಕ್ಸ್(Paris Olympics)​ ಚಿನ್ನದ ಪದಕದ ಸ್ಪರ್ಧೆಯಿಂದ ಅನರ್ಹಗೊಂಡ ಕುಸ್ತಿಪಟು ವಿನೇಶ್‌ ಪೋಗಟ್‌(Vinesh Phogat) ಶನಿವಾರ ಭಾರತಕ್ಕೆ ಆಗಮಿಸಿದ್ದಾರೆ. ದೆಹಲಿಯ ವಿಮಾನ ನಿಲ್ದಾಣದಲ್ಲಿ ಅವರನ್ನು ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು. ಪದಕ ಗೆಲ್ಲಲಾಗದ ನೋವಿನಲ್ಲಿದ್ದ ವಿನೇಶ್ ಅಭಿಮಾನಿಗಳನ್ನು ಕಂಡ ತಕ್ಷಣ ಜೋರಾಗಿ ಅಳುತ್ತಾ ಕೈ ಮುಗಿದು ಧನ್ಯವಾದ ತಿಳಿಸಿದರು. ಕುಟುಂಬದ ಸದಸ್ಯರು, ಮಾಜಿ ಒಲಿಂಪಿನ್,​ ಕಂಚಿನ ಪದಕ ವಿಜೇತೆ ಸಾಕ್ಷಿ ಮಲಿಕ್​, ಬಜರಂಗ್​ ಪೂನಿಯಾ ಸೇರಿ ಹಲವು ಕುಸ್ತಿಪಟುಗಳು ಈ ವೇಳೆ ​ಜತೆಗಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರಿಕೆಟ್

Mohammed Shami Comeback: ಟೀಮ್​ ಇಂಡಿಯಾಕ್ಕೆ ಮರಳುವ ಸೂಚನೆ ನೀಡಿದ ಶಮಿ; ಎನ್​ಸಿಎಯಲ್ಲಿ ಕಠಿಣ ಅಭ್ಯಾಸ

Mohammed Shami Comeback: ಎನ್​ಸಿಎಯಲ್ಲಿ(NCA) ಕಠಿಣ ಬ್ಯಾಟಿಂಗ್, ಬೌಲಿಂಗ್​​ ಅಭ್ಯಾಸ ನಡೆಸುತ್ತಿರುವ ವಿಡಿಯೊವನ್ನು ಶಮಿ ತಮ್ಮ ಅಧಿಕೃತ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

VISTARANEWS.COM


on

Mohammed Shami comeback
Koo

ಬೆಂಗಳೂರು: ಪಾದದ ಶಸ್ತ್ರಚಿಕಿತ್ಸೆಗೆ(mohammed shami injury update) ಒಳಗಾಗಿ ಚೇತರಿಕೆ ಕಂಡಿರುವ ಮೊಹಮ್ಮದ್ ಶಮಿ(Mohammed Shami) ಮತ್ತೆ ಟೀಮ್​ ಇಂಡಿಯಾಕ್ಕೆ(Team India) ಕಮ್​ಬ್ಯಾಕ್​(Mohammed Shami Comeback) ಮಾಡುವ ನಿರೀಕ್ಷೆಯಲಿದ್ದಾರೆ. ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (ಎನ್​ಸಿಎ)ಯಲ್ಲಿ ಕಠಿಣ ಬೌಲಿಂಗ್ ಮತ್ತು ಜಿಮ್​ ವರ್ಕೌಟ್​​ ಮಾಡುತ್ತಿರುವ ವಿಡಿಯೊವನ್ನು ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಮುಂದಿನ ತಿಂಗಳು ನಡೆಯುವ ಬಾಂಗ್ಲಾದೇಶ ವಿರುದ್ಧದ ಟೆಸ್ಟ್​ ಸರಣಿಯಲ್ಲಿ ಕಣಕ್ಕಿಳಿಯುವ ಸಾಧ್ಯತೆ ಇದೆ.

ಎನ್​ಸಿಎಯಲ್ಲಿ(NCA) ಕಠಿಣ ಬ್ಯಾಟಿಂಗ್, ಬೌಲಿಂಗ್​​ ಅಭ್ಯಾಸ ನಡೆಸುತ್ತಿರುವ ವಿಡಿಯೊವನ್ನು ಶಮಿ ತಮ್ಮ ಅಧಿಕೃತ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಇತ್ತೀಚೆಗೆ ಮುಕ್ತಾಯ ಕಂಡಿದ್ದ ಲಂಕಾ ವಿರುದ್ಧದ ಸರಣಿಯಲ್ಲಿ ಶಮಿ ಆಡಲಿದ್ದಾರೆ ಎನ್ನಲಾಗಿತ್ತು. ಆದರೆ, ಶಮಿ ಇನ್ನೂ ಫಿಟ್​ನೆಸ್​ ಕ್ಲೀಯರೆನ್ಸ್​ ಪಡೆಯದ ಕಾರಣ ಅವರು ಲಂಕಾ ಸರಣಿಗೆ ಆಯ್ಕೆಯಾಗಿರಲಿಲ್ಲ. ದುಲೀಪ್​ ಟ್ರೋಫಿ ಟೂರ್ನಿಯಲ್ಲಿಯೂ ಶಮಿಗೆ ಬಿಸಿಸಿಐ ವಿಶ್ರಾಂತಿ ನೀಡಿದೆ.

ಗಾಯದಿಂದಾಗಿ ಶಮಿಗೆ ಈ ಬಾರಿ ಐಪಿಎಲ್​ ಸೇರಿ ಮಹತ್ವದ ಟಿ20 ವಿಶ್ವಕಪ್​ ಟೂರ್ನಿ ಕೈತಪ್ಪಿತ್ತು. ಕಳೆದ ವರ್ಷ ನಡೆದಿದ್ದ ಏಕದಿನ ವಿಶ್ವಕಪ್​ ವೇಳೆ ಗಾಯಗೊಂಡಿದ್ದ ಶಮಿ, ಈ ಗಾಯವನ್ನು ಮರೆಮಾಚಿ ವಿಶ್ವಕಪ್​ನಲ್ಲಿ ಅಮೋಘ ಬೌಲಿಂಗ್​ ಪ್ರದರ್ಶನ ತೋರಿದ್ದರು. ವಿಶ್ವಕಪ್​ ಬಳಿಕ ಶಮಿ ಇದುವರೆಗೂ ಯಾವುದೇ ಕ್ರಿಕೆಟ್​ ಪಂದ್ಯ ಆಡಿಲ್ಲ. ಗಾಯದಿಂದ ಸಂಪೂರ್ಣ ಚೇತರಿಕೆ ಕಂಡಿರುವ ಶಮಿ ಈಗಾಗಲೇ ಬೌಲಿಂಗ್​ ಅಭ್ಯಾಸ ಕೂಡ ಆರಂಭಿಸಿದ್ದಾರೆ. ಶೀಘ್ರದಲ್ಲೇ ಅವರು ಭಾರತ ತಂಡ ಸೇರುವಂತಾಗಲಿ ಎಂದು ಅಭಿಮಾನಿಗಳು ಹಾರೈಸಿದ್ದಾರೆ.

ಕಳೆದ ವರ್ಷ ಭಾರತದ ಆತಿಥ್ಯದಲ್ಲಿ ನಡೆದಿದ್ದ ಏಕದಿನ ವಿಶ್ವಕಪ್​ ವೇಳೆ ಗಾಯಗೊಂಡಿದ್ದ ಶಮಿಗೆ ಲಂಡನ್​ನಲ್ಲಿ ಪಾದದ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು. ವಿಶ್ವಕಪ್​ ಬಳಿಕ ಶಮಿ ಇದುವರೆಗೂ ಯಾವುದೇ ಕ್ರಿಕೆಟ್​ ಪಂದ್ಯ ಆಡಿಲ್ಲ. ಏಕದಿನ ವಿಶ್ವಕಪ್​ ಟೂರ್ನಿಯಲ್ಲಿ ಶಮಿ ಅವರು ತಮ್ಮ ಮೊನಚಾದ ಬೌಲಿಂಗ್​ ದಾಳಿಯ ಮೂಲಕ ಟೂರ್ನಿಯಲ್ಲಿಯೇ ಅತ್ಯಧಿಕ ವಿಕೆಟ್​ ಪಡೆದ ಬೌಲರ್​ ಎನಿಸಿಕೊಂಡಿದ್ದರು. ಆಡಿದ 7 ಪಂದ್ಯಗಳಲ್ಲಿ 24 ವಿಕೆಟ್‌ ಉರುಳಿಸಿದ್ದರು. ಅವರ ಈ ಸಾಧನೆಯನ್ನು ಪರಿಗಣಿಸಿ ಅವರಿಗೆ ದೇಶದ ಎರಡನೇ ಅತ್ಯುನ್ನತ ಕ್ರೀಡಾ ಗೌರವವಾದ ಅರ್ಜುನ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು.

ಇದನ್ನೂ ಓದಿ Mohammed Shami : ಭಾರತ ತಂಡ ಬಿಟ್ಟು ಬೇರೆ ತಂಡಕ್ಕೆ ಮರಳಲು ಮೊಹಮ್ಮದ್ ಶಮಿ ನಿರ್ಧಾರ

ಮೊಹಮ್ಮದ್ ಶಮಿ ಭಾರತ ಪರ 64 ಟೆಸ್ಟ್ ಪಂದ್ಯಗಳಲ್ಲಿ 229 ವಿಕೆಟ್ ಪಡೆದಿದ್ದಾರೆ. 101 ಏಕದಿನ ಪಂದ್ಯಗಳಲ್ಲಿ 195 ವಿಕೆಟ್ ಪಡೆದಿದ್ದಾರೆ. 23 ಟಿ20 ಪಂದ್ಯಗಳಲ್ಲಿ 24 ವಿಕೆಟ್ ಪಡೆದಿದ್ದಾರೆ.

Continue Reading

ಕ್ರೀಡೆ

Viral Video: ಜಸ್​ಪ್ರೀತ್​ ಬುಮ್ರಾಗಿಂತ ವೇಗವಾಗಿ ಬೌಲಿಂಗ್​ ನಡೆಸಿ ವಿಕೆಟ್ ಕಿತ್ತ ಶಾಲಾ ಬಾಲಕಿ; ವಿಡಿಯೊ ವೈರಲ್​​

Viral Video: ಫೀಮೇಲ್ ಕ್ರಿಕೆಟ್​ ಎನ್ನುವ ಟ್ವಿಟರ್​ ಎಕ್ಸ್​ ಖಾತೆಯಿಂದ ಪೋಸ್ಟ್ ಆಗಿರುವ ಈ ವಿಡಿಯೊದಲ್ಲಿ ಶಾಲಾ ವಿದ್ಯಾರ್ಥಿಯೊಬ್ಬಳು ತನ್ನ ಶಾಲೆಯ ಸಮವಸ್ತ್ರದಲ್ಲೇ ಅತ್ಯಂತ ವೇಗದ ಬೌಲಿಂಗ್​ ನಡೆಸುವ ಮೂಲಕ ಬ್ಯಾಟರ್​ ಅನ್ನು ಕ್ಲೀನ್​ ಬೌಲ್ಟ್​ ಮಾಡಿದ ವಿಡಿಯೊ ವೈರಲ್​ ಆಗಿದೆ.

VISTARANEWS.COM


on

Koo

ಮುಂಬಯಿ: ಸಾಮಾಜಿಕ ಜಾಲತಾಣದಲ್ಲಿ ಹಲವು ವೈರಲ್​ ವಿಡಿಯೋಗಳು(Viral Video) ಹರಿದಾಡುತ್ತಿರುತ್ತವೆ. ಆದರೆ ಅವುಗಳಲ್ಲಿ ಕೆಲವೊಂದು ವಿಡಿಯೋಗಳು ವಿಶೇಷ ಕಾರಣದಿಂದಾಗಿ ಜನರ ಗಮನ ಸೆಳೆದುಬಿಡುತ್ತದೆ. ಇದೀಗ ಇತಂಹದ್ದೇ ವಿಡಿಯೊವೊಂದು ಕ್ರಿಕೆಟ್​ ಪ್ರಿಯರ ಮನಗೆದ್ದಿದೆ. ಶಾಲಾ ವಿದ್ಯಾರ್ಥಿಯೊಬ್ಬಳು ಜಸ್​ಪ್ರೀತ್​ ಬುಮ್ರಾ ಅವರಂತೆ ವೇಗದ ಬೌಲಿಂಗ್​ ನಡೆಸುತ್ತಿರುವ ವಿಡಿಯೊ ವೈರಲ್​ ಆಗಿದೆ.

ಫೀಮೇಲ್ ಕ್ರಿಕೆಟ್​ ಎನ್ನುವ ಟ್ವಿಟರ್​ ಎಕ್ಸ್​ ಖಾತೆಯಿಂದ ಪೋಸ್ಟ್ ಆಗಿರುವ ಈ ವಿಡಿಯೊದಲ್ಲಿ ಶಾಲಾ ವಿದ್ಯಾರ್ಥಿಯೊಬ್ಬಳು ತನ್ನ ಶಾಲೆಯ ಸಮವಸ್ತ್ರದಲ್ಲೇ ಅತ್ಯಂತ ವೇಗದ ಬೌಲಿಂಗ್​ ನಡೆಸುವ ಮೂಲಕ ಬ್ಯಾಟರ್​ ಅನ್ನು ಕ್ಲೀನ್​ ಬೌಲ್ಟ್​ ಮಾಡುತ್ತಿರುವುದನ್ನು ಕಾಣಬಹುದು. ಅತ್ಯುತ್ತಮ ಲೆಂತ್​ ಮತ್ತು ಲೈನ್​ನಲ್ಲಿ ಬೌಲಿಂಗ್​ ನಡೆಸುವ ಈಕೆ ಭವಿಷ್ಯದ ಭಾರತ ಮಹಿಳಾ ತಂಡದ ಸ್ಟಾರ್(Indian Women’s Cricket team)​ ವೇಗಿ ಎಂದು ನೆಟ್ಟಿಗರು ಈಗಲೇ ಭವಿಷ್ಯ ನುಡಿಯಲಾರಂಭಿಸಿದ್ದಾರೆ.

ಕಳೆದ ವರ್ಷ ಹಳ್ಳಿ ಹುಡುಗಿಯೊಬ್ಬಳ ಬ್ಯಾಟಿಂಗ್​ ಕಂಡು ಟೀಮ್​ ಇಂಡಿಯಾದ ಮಾಜಿ ಕ್ರಿಕೆಟಿಗ ಸಚಿನ್​ ತೆಂಡೂಲ್ಕರ್(sachin tendulkar)​ ಕೂಡ ಅಚ್ಚರಿಗೊಂಡಿದ್ದರು. ತೆಂಡೂಲ್ಕರ್​ ತಮ್ಮ ಟ್ವಿಟರ್​ನಲ್ಲಿ ಶೇರ್​ ಮಾಡಿ ಈ ಹುಡುಗಿಯ ಬ್ಯಾಟಿಂಗ್​ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ನಿಮ್ಮ ಅತ್ಯದ್ಭುತ ಬ್ಯಾಟಿಂಗ್​ಗೆ ನಾನು ಮನಸೋತಿರುವೆ. ಇದೇ ರೀತಿ ಆಟ ಮುಂದುವರಿಸಿ ಮುಂದೊಂದು ದಿನ ಟೀಮ್​ ಇಂಡಿಯಾದಲ್ಲಿ ನೀವು ಕಾಣಿಸಿಕೊಳ್ಳುವಂತಾಗಲಿ ಎಂದು ಹಾರೈಸಿದ್ದರು.

ಹಳ್ಳಿ ಹುಡುಗಿಯ ಈ ಪರ್ಫೆಕ್ಟ್​ ಬ್ಯಾಟಿಂಗ್​ ಕಂಡು ಬಿಸಿಸಿಐ ಕಾರ್ಯದರ್ಶಿ ಜಯ್​ ಶಾ ಕೂಡ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಶೇರ್​ ಮಾಡಿ, ಹುಡುಗಿಯ ಬ್ಯಾಟಿಂಗ್​ ಕೊಂಡಾಡಿದ್ದರು. ಮಹಿಳೆಯರ ಕ್ರಿಕೆಟ್ ಬೆಳವಣಿಗೆಯ ಹಾದಿಯಲ್ಲಿದೆ ಎಂದು ಹೇಳಿದ್ದರು.

ಎಬಿಡಿ ವಿಲಿಯರ್ಸ್ ಶೈಲಿಯಲ್ಲೇ ಕ್ಯಾಚ್​ ಹಿಡಿದ ಇಂಗ್ಲೆಂಡ್​ ಆಟಗಾರ್ತಿ ಮ್ಯಾಡಿ ವಿಲಿಯರ್ಸ್


ಲಂಡನ್​: ವಿಶ್ವ ಕ್ರಿಕೆಟ್‌ನಲ್ಲಿ ಈಗಾಗಲೇ ಹಲವು ಅದ್ಭುತ ಕ್ಯಾಚ್‌ಗಳು(stunning catch) ದಾಖಲಾಗಿವೆ. ಆ ಸಾಲಿಗೆ ಇದೀಗ ಇಂಗ್ಲೆಂಡ್​ ತಂಡದ ಆಟಗಾರ್ತಿ ಮ್ಯಾಡಿ ವಿಲಿಯರ್ಸ್(Mady Villiers) ಸೇರ್ಪಡೆಗೊಂಡಿದ್ದಾರೆ. ‘ದಿ ಹಂಟ್ರೆಡ್​’ ಕ್ರಿಕೆಟ್(The Hundred)​ ಟೂರ್ನಿಯ ಪಂದ್ಯವೊಂದರಲ್ಲಿ ಮ್ಯಾಡಿ ವಿಲಿಯರ್ಸ್ ಯಾರೂ ಊಹಿಸದ ರೀತಿಯಲ್ಲಿ ಮೇಲಕ್ಕೆ ಜಂಪ್ ಮಾಡಿ ಒಂದೇ ಕೈಯಲ್ಲಿ ಅದ್ಭುತ ಕ್ಯಾಚ್ ಒಂದನ್ನು ಹಿಡಿಯುವ ಮೂಲಕ ಎಲ್ಲರನ್ನು ನಿಬ್ಬೆರಗಾಗಿಸಿದ್ದಾರೆ. ಸದ್ಯ ಈ ಕ್ಯಾಚ್​ನ ವಿಡಿಯೊ ವೈರಲ್​ ಆಗುತ್ತಿದ್ದು, ಮಹಿಳಾ ಕ್ರಿಕೆಟ್​ನಲ್ಲಿ ಕಂಡು ಬಂದ ಅತ್ಯದ್ಭುತ ಕ್ಯಾಚ್​ ಎಂದು ಕ್ರಿಕೆಟ್​ ಪಂಡಿತರು ಹೇಳಿದ್ದಾರೆ.

ಇದನ್ನೂ ಓದಿ Viral Video: ಕಂಬಕ್ಕೆ ಸಿಲುಕಿದ ತ್ರಿವರ್ಣ ಧ್ವಜ; ಮಿಂಚಂತೆ ಬಂದು ಧ್ವಜ ಬಿಡಿಸಿದ ಹಕ್ಕಿ; ಅಪರೂಪದ ಘಟನೆ!

ಓವಲ್‌ ಇನ್ವಿನ್ಸಿಬಲ್‌ ತಂಡದ ಪರವಾಗಿ ಆಡುತ್ತಿರುವ 25 ವರ್ಷದ ಮ್ಯಾಡಿ ವಿಲಿಯರ್ಸ್‌ 30ಯಾರ್ಡ್​ನಲ್ಲಿ ಫೀಲ್ಡಿಂಗ್​ ನಡೆಸುತ್ತಿದ್ದರು. ಈ ವೇಳೆ ಎದುರಾಳಿ ತಂಡದ ಆಟಗಾರ್ತಿ ಬೌಂಡರಿ ಕಡೆಗೆ ಬಾರಿಸಿದ ಚೆಂಡನ್ನು ಕಣ್ಣು ಮಿಟುಕಿಸುವಷ್ಟರಲ್ಲಿ ಮೇಲಕ್ಕೆ ಜಿಗಿದು ತನ್ನ ಎಡಗೈಯಿಂದ ಕ್ಯಾಚ್​ ಹಿಡಿದು ಎಲ್ಲರ ಹುಬ್ಬೇರುವಂತೆ ಮಾಡಿದ್ದಾರೆ. ಈ ಕ್ಯಾಚ್​ ಕಂಡ ಪ್ರೇಕ್ಷಕರು ಒಂದು ಕ್ಷಣ ದಂಗಾಗಿದ್ದಾರೆ. ಅತ್ತ ಕಾಮೆಂಟ್ರಿ ನಡೆಸುತ್ತಿದ್ದವರು, ಕ್ಯಾಚ್‌ ಆಫ್‌ ದಿ ಟೂರ್ನಮೆಂಟ್‌ ಎಂದು ಬಣ್ಣಿಸಿದ್ದಾರೆ. ಟ್ರೆಂಟ್‌ ರಾಕೆಟ್ಸ್‌ ತಂಡ ಆರಂಭಿ ಆಟಗಾರ್ತಿ ಬ್ರಯೋನಿ ಸ್ಮಿತ್ ಅವರ ಕ್ಯಾಚ್​ ಇದಾಗಿತ್ತು.

Continue Reading

ಕ್ರೀಡೆ

Pakistan Cricket: ಬಾಡಿಗೆ ಫ್ಲಡ್‌ಲೈಟ್‌ ಅಳವಡಿಸಿ ಚಾಂಪಿಯನ್‌ ಟ್ರೋಫಿ ನಡೆಸಲು ಮುಂದಾದ ಪಾಕಿಸ್ತಾನ

Pakistan Cricket:ಕೆಲವು ತಿಂಗಳ ಹಿಂದೆ ಲಾಹೋರ್​ ಕ್ರಿಕೆಟ್​ ಮೈದಾನದಲ್ಲಿ ಬೆಳೆದಿದ್ದ ಭಾರೀ ಗಾತ್ರದ ಹುಲ್ಲುಗಳನ್ನು ಕಟಾವು ಮಾಡುತ್ತಿರುವ ವಿಡಿಯೊ ವೈರಲ್​ ಆಗಿತ್ತು.

VISTARANEWS.COM


on

Pakistan Cricket
Koo

ಕರಾಚಿ: ಮುಂದಿನ ವರ್ಷ ನಡೆಯುವ ಚಾಂಪಿಯನ್‌ ಟ್ರೋಫಿಗಾಗಿ(champions trophy 2025) ಎಲ್ಲ ಸಿದ್ಧತೆ ಆರಂಭಿಸಿದ್ದೇವೆ ಎಂದು ಕಟು ಸತ್ಯ ಮರೆಮಾಚಿ ಬಡಾಯಿ ಕೊಚ್ಚಿಕೊಳ್ಳುತ್ತಿದ್ದ ಪಾಕಿಸ್ತಾನ ಕ್ರಿಕೆಟ್(Pakistan Cricket)​ ಮಂಡಳಿಯ ಪರಿಸ್ಥಿತಿ ಕಂಡು ಇದೀಗ ನಗುವಂತಾಗಿದೆ. ಹೌದು, ತನ್ನ ಕ್ರೀಡಾಂಗಣಗಳನ್ನು ಸಿದ್ಧಪಡಿಸುತ್ತಿರುವ ಪಾಕಿಸ್ತಾನ ಕ್ರಿಕೆಟ್‌ ಮಂಡಳಿ (Pakistan Cricket Board), ಕರಾಚಿ ಹಾಗೂ ಲಾಹೋರ್‌ ಕ್ರೀಡಾಂಗಣಗಳಿಗೆ ಫ್ಲಡ್‌ಲೈಟ್‌ಗಳನ್ನು ಬಾಡಿಗೆಗೆ ಪಡೆಯಲಿದೆ ಎಂದು ತಿಳಿದುಬಂದಿದೆ.

ಕರಾಚಿ ಹಾಗೂ ಲಾಹೋರ್‌ನಲ್ಲಿ ಈಗಾಗಲೇ ಇರುವ ಫ್ಲಡ್‌ಲೈಟ್‌ಗಳು ಹಳೆಯದಾಗಿವೆ. ಹೀಗಾಗಿ ಅಲ್ಲಿನ ಫ್ಲಡ್‌ಲೈಟ್‌ಗಳನ್ನು ಹಣ ಉಳಿತಾಯಕ್ಕಾಗಿ ಕ್ವೆಟ್ಟಾ ಹಾಗೂ ರಾವಲ್ಪಿಂಡಿ ಕ್ರೀಡಾಂಗಣಗಳಿಗೆ ಸ್ಥಳಾಂತರ ಮಾಡಿ, ಕರಾಚಿ ಹಾಗೂ ಲಾಹೋರ್‌ಗೆ ಬೇಕಾದ ಫ್ಲಡ್‌ಲೈಟ್‌ಗಳನ್ನು ಬಾಡಿಗೆಗೆ ಪಡೆಯಲು ಪಿಸಿಬಿ ಈಗಾಗಲೇ ಟೆಂಡರ್‌ ಕೂಡಾ ಆಹ್ವಾನಿಸಿದೆ ಎನ್ನಲಾಗಿದೆ. ಈ ವಿಚಾರ ತಿಳಿದ ನೆಟ್ಟಿಗರು ಇದೀಗ ಪಾಕಿಸ್ತಾನ ಕ್ರಿಕೆಟ್ ಮಂಡಳಿಯನ್ನು ಟ್ರೋಲ್ ಮಾಡಲಾರಂಭಿಸಿದ್ದಾರೆ.

ಕೆಲವು ತಿಂಗಳ ಹಿಂದೆ ಲಾಹೋರ್​ ಕ್ರಿಕೆಟ್​ ಮೈದಾನದಲ್ಲಿ ಬೆಳೆದಿದ್ದ ಭಾರೀ ಗಾತ್ರದ ಹುಲ್ಲುಗಳನ್ನು ಕಟಾವು ಮಾಡುತ್ತಿರುವ ವಿಡಿಯೊ ವೈರಲ್​ ಆಗಿತ್ತು. ಎಷ್ಟೇ ದಯನೀಯ ಪರಿಸ್ಥಿತಿಯ ಇದ್ದರೂ ಕೂಡ ಪಾಕ್​ ಬಡಾಯಿ ಕೊಚ್ಚಿಕೊಳ್ಳುತ್ತಿರುವುದನ್ನು ಮಾತ್ರ ನಿಲ್ಲಿಸುತ್ತಿಲ್ಲ.

ಚಾಂಪಿಯನ್ಸ್ ಟ್ರೋಫಿಯಲ್ಲಿ(ICC Champions Trophy) ಭಾರತ(champions trophy ind vs pak) ತಂಡ ಪಾಲ್ಗೊಳ್ಳಲಿದೆಯಾ? ಇಲ್ಲವಾ? ಎಂಬ ಬಗ್ಗೆ ಚರ್ಚೆ ನಡೆಯುತ್ತಲೇ ಇದೆ. ಇದುವರೆಗೂ ಈ ವಿಚಾರದಲ್ಲಿ ಯಾವುದೇ ಅಧಿಕೃತ ಮಾಹಿತಿ ಲಭಿಸಿಲ್ಲ. ತಾತ್ಕಾಲಿಕ ವೇಳಾಪಟ್ಟಿಯ ಪ್ರಕಾರ ಭಾರತ ಮತ್ತು ಪಾಕ್​ ನಡುವಣ ಪಂದ್ಯ ಮಾರ್ಚ್ 1 ರಂದು ಲಾಹೋರ್​ನಲ್ಲಿ ನಡೆಯಬೇಕಿದೆ.

ಇದನ್ನೂ ಓದಿ Pakistan Cricket Team: ಪಾಕಿಸ್ತಾನ ಕ್ರಿಕೆಟಿಗರ ವೇತನ ಕಡಿತಕ್ಕೆ ಮುಂದಾದ ಪಾಕ್​ ಕ್ರಿಕೆಟ್ ಮಂಡಳಿ

ಒಂದೊಮ್ಮೆ ಭಾರತ ತಂಡ ಚಾಂಪಿಯನ್ಸ್ ಟ್ರೋಫಿ ಆಡಲು ಪಾಕಿಸ್ತಾನಕ್ಕೆ ತೆರಳದಿದ್ದರೆ ಆ ದೇಶದ ಕ್ರಿಕೆಟ್ ಮಂಡಳಿಗೆ ಭಾರಿ ನಷ್ಟವಾಗುವ ಸಾಧ್ಯತೆ ಇದೆ. ಈಗಾಗಲೇ ಪಾಕಿಸ್ತಾನ ನಷ್ಟದ ಹಾದಿಯಲ್ಲಿದೆ. ಕ್ರಿಕೆಟ್​ನಲ್ಲಿ ಟೀಮ್​ ಇಂಡಿಯಾಗೆ ಇರುವ ಕ್ರೇಜ್ ಮತ್ತು ಬೇಡಿಕೆ​ ಬೇರೆ ಯಾವ ದೇಶಕ್ಕೂ ಇಲ್ಲ. ಹೀಗಾಗಿ ಟೀಮ್​ ಇಂಡಿಯಾ ಪಾಕಿಸ್ತಾನಕ್ಕೆ ಹೋದಲ್ಲಿ ಅದರಿಂದ ಆರ್ಥಿಕವಾಗಿಯೂ ಲಾಭವಾಗಲಿದೆ ಮತ್ತು ಪಾಕ್​ ಮೇಲೆ ಇರುವ ಕಳಂಕವೂ ದೂರವಾಗಲಿದೆ. ಅಲ್ಲದೆ, ಉಭಯ ದೇಶಗಳ ನಡುವಿನ ಸಂಬಂಧವೂ ಕೂಡ ಮತ್ತೆ ಚಿಗುರಲಿದೆ ಎಂಬ ನಿರೀಕ್ಷೆಯಲ್ಲಿದೆ.

ಸದ್ಯ ಕೇಳಿ ಬಂದಿರುವ ಮಾಹಿತಿ ಪ್ರಕಾರ ಪಿಸಿಬಿಯ ಮನವಿಗೆ ಐಸಿಸಿ ಸ್ಪಂದಿಸಿದ್ದು, ಹೈಬ್ರಿಡ್​ ಮಾದರಿಯ ಪಂದ್ಯಗಳಿಗೆ ಐಸಿಸಿ ಅನುಮತಿಸಿಲ್ಲ ಎಂದು ವರದಿಯಾಗಿದೆ. ಈ ವಿಚಾವಾಗಿ ಈಗಾಗಲೇ ಬಿಸಿಸಿಐ ಜತೆ ಮಾತುಕತೆ ನಡೆಸುತ್ತಿದೆ ಎನ್ನಲಾಗಿದೆ. ಒಟ್ಟಾರೆ ಕೇಂದ್ರ ಸರ್ಕಾರ ತೆಗೆದುಕೊಳ್ಳುವ ನಿರ್ಧಾರದ ಮೇಲೆ ಭಾರತ ಚಾಂಪಿಯನ್ಸ್​ ಟ್ರೋಫಿ ಆಡುವ ಬಗ್ಗೆ ನಿರ್ಧಾರವಾಗಲಿದೆ. ಈ ಬಗ್ಗೆ ಮುಂದಿನ ದಿನಗಳಲ್ಲಿ ಅಧಿಕೃತವಾಗಿ ಮಾಹಿತಿ ಹೊರಬೀಳಬೇಕಿದೆ.

Continue Reading

ಕ್ರೀಡೆ

Manu Bhaker: 3 ತಿಂಗಳ ರಜೆಯಲ್ಲಿ ಭರತನಾಟ್ಯ, ಕುದುರೆ ಸವಾರಿ, ಸ್ಕೇಟಿಂಗ್ ಕಲಿಯಲಿದ್ದಾರೆ ಮನು ಭಾಕರ್

Manu Bhaker: ಮುಂದಿನ ಮೂರು ತಿಂಗಳ ಕಾಲ 22 ವರ್ಷದ ಮನು ಭಾಕರ್​ ತಮ್ಮ ನೆಚ್ಚಿನ ಭರತನಾಟ್ಯ(Manu Bhaker Bharatnatyam), ಕುದುರೆ ಸವಾರಿ, ವಯೋಲಿನ್​ ನುಡಿಸುವುದು, ಮಾರ್ಷಿಯಲ್​ ಆರ್ಟ್ಸ್​ ಮತ್ತು ಸ್ಕೇಟಿಂಗ್​ನಂಥ ಹವ್ಯಾಸಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲಿದ್ದಾರೆ.

VISTARANEWS.COM


on

Manu Bhaker
Koo

ನವದೆಹಲಿ: ಒಂದೇ ಒಲಿಂಪಿಕ್ಸ್ ಅಭಿಯಾನದಲ್ಲಿ ಎರಡು ಶೂಟಿಂಗ್ ಪದಕಗಳನ್ನು ಗೆದ್ದ ಏಕೈಕ ಭಾರತೀಯ ಎಂಬ ಇತಿಹಾಸವನ್ನು ಬರೆದಿರುವ ಮನು ಭಾಕರ್​(Manu Bhaker) ಅವರು ಕೆಲ ದಿನಗಳ ಹಿಂದೆ ಮುಂದಿನ 3 ತಿಂಗಳು ಶೂಟಿಂಗ್​ನಿಂದ ಸಂಪೂರ್ಣ ದೂರ ಉಳಿಯಲಿದ್ದೇನೆ ಎಂದು ಹೇಳಿದ್ದರು. ಆದರೆ, ಅವರ ಈ ವಿಶ್ರಾಂತಿಗೆ ಕಾರಣ ಏನೆಂಬುದು ತಿಳಿಸಿರಲಿಲ್ಲ. ಇದೀಗ ತಮ್ಮ ಈ ರಜೆಯ ಹಿಂದಿರುವ ಕಾರಣವನ್ನು ಸ್ವತಃ ಅವರೇ ರಿವೀಲ್​ ಮಾಡಿದ್ದಾರೆ. 3 ತಿಂಗಳ ವಿಶ್ರಾಂತಿಯಿಂದ ಅಕ್ಟೋಬರ್​ನಲ್ಲಿ ನವದೆಹಲಿಯಲ್ಲಿ ನಡೆಯಲಿರುವ ಶೂಟಿಂಗ್​ ವಿಶ್ವಕಪ್ ಫೈನಲ್​ಗೆ ಅಲಭ್ಯರಾಗಲಿದ್ದಾರೆ.

ಹೌದು, ಮುಂದಿನ ಮೂರು ತಿಂಗಳ ಕಾಲ 22 ವರ್ಷದ ಮನು ಭಾಕರ್​ ತಮ್ಮ ನೆಚ್ಚಿನ ಭರತನಾಟ್ಯ(Manu Bhaker Bharatnatyam), ಕುದುರೆ ಸವಾರಿ, ವಯೋಲಿನ್​ ನುಡಿಸುವುದು, ಮಾರ್ಷಿಯಲ್​ ಆರ್ಟ್ಸ್​ ಮತ್ತು ಸ್ಕೇಟಿಂಗ್​ನಂಥ ಹವ್ಯಾಸಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲಿದ್ದಾರೆ. ಈ ವಿವಾರವನ್ನು ಮನು ಸಂದರ್ಶನವೊಂದಲ್ಲಿ ತಿಳಿಸಿದ್ದಾರೆ.

‘ನಾನು ಭರತನಾಟ್ಯವನ್ನು ಕಲಿಯುತ್ತಿರುವೆ. ಅದು ನನಗಿಷ್ಟ. ಫ್ರಾನ್ಸ್​ನಲ್ಲಿ ಶೂಟಿಂಗ್​ ಅಭ್ಯಾಸದಲ್ಲಿ ತೊಡಗಿಕೊಂಡಿದ್ದಾಗ, ಭರತನಾಟ್ಯ ಕ್ಲಾಸ್​ನಲ್ಲಿ ಪಾಲ್ಗೊಳ್ಳಲು ಸಮಯ ಸಿಕ್ಕಿರಲಿಲ್ಲ. ನೃತ್ಯ ಎಂದರೆ ನನಗಿಷ್ಟ. ಇದುವರೆಗೂ ತಮಿಳುನಾಡಿನ ಶಿಕ್ಷಕರೊಬ್ಬರ ಸಹಾಶಯದಿಂದ ಆನ್​ಲೈನ್​ನಲ್ಲಿಯೇ ಭರತನಾಟ್ಯವನ್ನು ಅಭ್ಯಾಸ ಮಾಡುತ್ತಿದ್ದೆ. ಇದೀಗ ನೇರವಾಗಿ ಹಾಜರಾಗಿ ನೃತ್ಯ ಕಲಿಯುವೆ. ಜತೆಗೆ ವಯೋಲಿನ್​ ಕಲಿಕೆ ಮುಂದುವರಿಸುವೆ. ಶೂಟಿಂಗ್​ಗೆ ಮುನ್ನ ಕರಾಟೆ ಕಲಿತಿದ್ದೆ. ಮತ್ತೆ ಅದರಲ್ಲಿ ತೊಡಗಿಸಿಕೊಳ್ಳುವೆ’ ಎಂದರು.

ಇದನ್ನೂ ಓದಿ Manu Bhaker-Neeraj Chopra: ನೀರಜ್​ ಚೋಪ್ರಾ ಜತೆ ಮದುವೆ ವದಂತಿ; ಸ್ಪಷ್ಟನೆ ನೀಡಿದ ಮನು ಭಾಕರ್​ ತಂದೆ

ಕುದುರೆ ಸವಾರಿಯೂ ನನಗಿಷ್ಟ


ಕುದುರೆ ಸವಾರಿ ಕೂಡ ಇಷ್ಟ. ಕೆಲವು ವರ್ಷಗಳಿಂದ ಕುದುರೆ ಸವಾರಿ ಕಲಿಯತ್ತಿರುವೆ. ಜತೆಗೆ ಸ್ಕೇಟಿಂಗ್ ಕೂಟ ಕಲಿಯುತ್ತಿರುವೆ. ಸ್ಕೂಬಾ ಡೈವಿಂಗ್​ ಬಗ್ಗೆಯೂ ಆಸಕ್ತಿ ಇದೆ. ಆದರೆ ಇದುವರೆಗೂ ಸ್ಕೂಬಾ ಡೈವಿಂಗ್ ಮಾಡಿಲ್ಲ. ಇದನ್ನೂ ಕೂಡ ಶೀಘ್ರದಲ್ಲೇ ಮಾಡುವೆ ಎಂದು ಎಂದು ಮನು ಭಾಕರ್​ ಸುದ್ದಿಸಂಸ್ಥೆ ಜತೆಗಿನ ಸಂದರ್ಶನದಲ್ಲಿ ಹೇಳಿದ್ದಾರೆ. ಕೆಲ ದಿನಗಳ ಹಿಂದೆ ಮನು ಭಾಕರ್​ ಅವರು ಸ್ವಿಮ್ಮಿಂಗ್‌ ಪೂಲ್‌ ಬಳಿ ಕುಳಿತು ವಯೋಲಿನ್ ಮೂಲಕ ರಾಷ್ಟ್ರಗೀತೆ ಜನ ಗಣ ಮನವನ್ನು ಬಹಳ ಇಂಪಾಗಿ ನುಡಿಸಿದ್ದ ವಿಡಿಯೊ ವೈರಲ್​ ಆಗಿತ್ತು.

ಪ್ಯಾರಿಸ್​ನಲ್ಲಿ ಕಂಚಿನ ಪದಕ ಗೆಲ್ಲುವ ಮೂಲಕ ಒಲಿಂಪಿಕ್ಸ್‌ನಲ್ಲಿ ಪದಕ ಗೆದ್ದ ಮೊದಲ ಮಹಿಳಾ ಶೂಟರ್ ಎಂಬ ಹೆಗ್ಗಳಿಕೆಗೆ ಮನು ಭಾಕರ್​ ಪಾತ್ರರಾಗಿದ್ದರು. ಜತೆಗೆ 12 ವರ್ಷಗಳ ಬಳಿಕ ಒಲಿಂಪಿಕ್​ ಶೂಟಿಂಗ್​ನಲ್ಲಿ ದೇಶಕ್ಕೆ ಪದಕ ಗೆದ್ದ ಸಾಧನೆ ಮಾಡಿದ್ದರು.

ಭಾಕರ್(Manu Bhaker)​ ಅವರ ಜಾಹೀರಾತು ಮೌಲ್ಯದಲ್ಲಿ ಇದೀಗ ಭಾರೀ ಏರಿಕೆ ಕಂಡಿದೆ. ಮನು ಅವರ ಬ್ರ್ಯಾಂಡ್​ ಮೌಲ್ಯ ಈಗ 1.5 ರೂ. ಆಗಿದೆ. ಅವರು ಪ್ರತಿ ಡಿಜಿಟಲ್​ ಜಾಹೀರಾತಿಗೂ 30 ಲಕ್ಷ ರೂ. ಸಂಭಾವನೆ ಪಡೆಯಲಿದ್ದಾರೆ ಎನ್ನಲಾಗಿದೆ.

ಪ್ರಮುಖವಾಗಿ ತಂಪು ಪಾನೀಯ, ಸ್ಕಿನ್​ ಕೇರ್​, ನ್ಯೂಟ್ರೀಷಿಯನ್​ ಕಂಪನಿಗಳು ಮನು ಅವರನ್ನು ಸಂಪರ್ಕಿಸಿವೆ ಎಂದು ತಿಳಿದುಬಂದಿದೆ. ಕೆಲ ದಿನಗಳ ಹಿಂದೆ 40 ಕಂಪನಿಗಳು(40 brands chasing Manu Bhaker) ಮನು ಅವರನ್ನು ಸಂಪರ್ಕಿಸಿದ್ದವು ಎಂದು ವರದಿಯಾಗಿತ್ತು. ಭಾರತ ತಂಡದ ಸ್ಟಾರ್​ ಕ್ರಿಕೆಟಿಗರು ಜಾಹೀರಾತು ಒಪ್ಪಂದಗಳಿಗೆ ವಾರ್ಷಿಕ 3 ರಿಂದ 6 ಕೋಟಿ ರೂ. ಪಡೆಯುತ್ತಾರೆ. ಬ್ಯಾಡ್ಮಿಂಟನ್​ ಆಟಗಾರ್ತಿ ಪಿ,ವಿ ಸಿಂಧು 2022ರಲ್ಲಿ 2.21 ಕೋಟಿ ರೂ. ಮೊತ್ತದ ಒಪ್ಪಂದ ಪಡೆದಿದ್ದೇ ಭಾರತದಲ್ಲಿ ಕ್ರಿಕೆಟಿಗರ ಹೊರತಾಗಿ ಇತರ ಕ್ರೀಡಾಪಟುಗಳು ಪಡೆದ ಇದುವರೆಗಿನ ಗರಿಷ್ಠ ಮೊತ್ತವಾಗಿದೆ. ಒಲಿಂಪಿಕ್ಸ್​ ಪದಕ ಗೆಲ್ಲುವ ಮೊದಲು ಮನು ಪ್ರತಿ ಒಪ್ಪಂದವನ್ನು 20-25 ಲಕ್ಷ ರೂ.ಗೆ ಮಾಡಿಕೊಳ್ಳುತ್ತಿದ್ದರು. ಸದ್ಯ ಮನು ಪಾಮ್ಯಾಕ್ಸ್​ ಆಕ್ಟಿವ್​ವೇರ್​ಗೆ ಮಾತ್ರ ಪ್ರಚಾರ ರಾಯಭಾರಿಯಾಗಿದ್ದಾರೆ.

Continue Reading
Advertisement
tungabhadra dam gate
ಪ್ರಮುಖ ಸುದ್ದಿ22 mins ago

Tungabhadra Dam: ಮುರಿದುಹೋದ 19ನೇ ಗೇಟ್‌ಗೆ ಸ್ಟಾಪ್‌ ಲಾಗ್‌ ಅಳವಡಿಕೆ ಯಶಸ್ವಿ, ಪೋಲಾಗುತ್ತಿದ್ದ ನೀರು ಬಂದ್!

CM Siddaramaiah
ಪ್ರಮುಖ ಸುದ್ದಿ32 mins ago

CM Siddaramaiah : ಸಿಎಂ ಸಿದ್ದರಾಮಯ್ಯಗೆ ಉರುಳಾಗಿರುವ ಮುಡಾ ಹಗರಣ ಏನು? ಇಲ್ಲಿದೆ ಎಲ್ಲ ಮಾಹಿತಿ

Murder Case
Latest43 mins ago

Murder Case: ಮಮತಾ ರಾಜ್ಯದಲ್ಲಿ ಕೊಲೆ ಸರಣಿ; ಬೆಂಗಳೂರಿನಿಂದ ಊರಿಗೆ ಬಂದಿದ್ದ ಯುವತಿಯ ರುಂಡ ಕಡಿದು ಕೊಲೆ!

cm siddaramaiah congress protest
ಪ್ರಮುಖ ಸುದ್ದಿ51 mins ago

CM Siddaramaiah: ರಾಜ್ಯಪಾಲರ ನಡೆ ಖಂಡಿಸಿ ಸೋಮವಾರ ಕಾಂಗ್ರೆಸ್‌ ಬೃಹತ್‌ ಪ್ರತಿಭಟನೆ

Mohammed Shami comeback
ಕ್ರಿಕೆಟ್54 mins ago

Mohammed Shami Comeback: ಟೀಮ್​ ಇಂಡಿಯಾಕ್ಕೆ ಮರಳುವ ಸೂಚನೆ ನೀಡಿದ ಶಮಿ; ಎನ್​ಸಿಎಯಲ್ಲಿ ಕಠಿಣ ಅಭ್ಯಾಸ

ಕಾಲಿವುಡ್1 hour ago

Thangalaan Movie: ಸೀಕ್ವೆಲ್ ಆಗಿ ಬರಲಿದೆ ‘ತಂಗಲಾನ್ʼ; ಹೊಸ ದಾಖಲೆ ಬರೆದ ಚಿಯಾನ್ ವಿಕ್ರಮ್‍!

Dengue Vaccine
ಆರೋಗ್ಯ1 hour ago

Dengue Vaccine: ಭಾರತದ ಮೊದಲ ಡೆಂಗ್ಯೂ ಲಸಿಕೆ; 3ನೇ ಹಂತದ ಪ್ರಯೋಗ ಪ್ರಾರಂಭ

ಫ್ಯಾಷನ್1 hour ago

Nail Extension Beauty Trend: ಬ್ಯೂಟಿ ಲೋಕದಲ್ಲಿ ಟ್ರೆಂಡಿಯಾದ ನೇಲ್ ಎಕ್ಸ್‌ಟೆನ್ಷನ್ ಕಾನ್ಸೆಪ್ಟ್

governor Thawarchand gehlot and CM Siddaramaiah
ಪ್ರಮುಖ ಸುದ್ದಿ1 hour ago

CM Siddaramaiah: ರಾಜ್ಯಪಾಲರು ತನಿಖೆಗೆ ಅನುಮತಿ ನೀಡಿರುವ 6 ಪುಟಗಳ ಪತ್ರದಲ್ಲಿ ಏನೇನಿದೆ? ಕೊಟ್ಟ ಸಮರ್ಥನೆಗಳು ಹೀಗಿವೆ

Rakshit Shetty Copyright Infringement 20 lakhs for Delhi High Court orders deposit
ಸ್ಯಾಂಡಲ್ ವುಡ್1 hour ago

Rakshit Shetty: ಕಾಪಿ ರೈಟ್ ಉಲ್ಲಂಘನೆ; ರಕ್ಷಿತ್ ಶೆಟ್ಟಿಗೆ 20 ಲಕ್ಷ ರೂ. ಠೇವಣಿ ಇಡುವಂತೆ ದೆಹಲಿ ಹೈಕೋರ್ಟ್ ಆದೇಶ

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ1 week ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ1 week ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ1 week ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌