ಭಾರತ ಪಂದ್ಯಕ್ಕೂ ಮುನ್ನ ತಂದೆಯ ಸ್ಮರಣೀಯ ಇನಿಂಗ್ಸ್​ ನೆನೆದ ಬಾಸ್​ ಡಿ ಲೀಡೆ Vistara News

ಕ್ರಿಕೆಟ್

ಭಾರತ ಪಂದ್ಯಕ್ಕೂ ಮುನ್ನ ತಂದೆಯ ಸ್ಮರಣೀಯ ಇನಿಂಗ್ಸ್​ ನೆನೆದ ಬಾಸ್​ ಡಿ ಲೀಡೆ

ಬಾಸ್​ ಡಿ ಲೀಡೆ ಅವರು ತಮ್ಮ ತಂದೆ 2003ರ ವಿಶ್ವಕಪ್​ನಲ್ಲಿ ಸಚಿನ್ ತೆಂಡೂಲ್ಕರ್(sachin tendulkar) ಅವರ ವಿಕೆಟ್​ ಕಿತ್ತು ವಿಚಾರವನ್ನು ನೆನಪಿಸಿಕೊಂಡಿರುವ ವಿಡಿಯೊವನ್ನು ಐಸಿಸಿ ತನ್ನ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಹಂಚಿಕೊಂಡಿದೆ.

VISTARANEWS.COM


on

bas de leede
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಭಾರತ ವಿರುದ್ಧ ಇನ್ನೇನು ಕೆಲವೇ ಕ್ಷಣದಲ್ಲಿ ನೆದರ್ಲೆಂಡ್ಸ್​ ತಂಡ ಕಣಕ್ಕಿಳಿಯಲಿದೆ. ಈ ಪಂದ್ಯದಕ್ಕೂ ಮುನ್ನ ನೆದೆರ್ಲೆಂಡ್ಸ್​ ತಂಡದ ಯುವ ಆಲ್​ ರೌಂಡರ್​ ಬಾಸ್​ ಡಿ ಲೀಡೆ(bas de leede) ಅವರು 2003ರ ವಿಶ್ವಕಪ್​ನಲ್ಲಿ(2003 india vs netherlands) ತಮ್ಮ ತಂದೆ ಟಿಮ್​ ಡಿ ಲೀಡೆ(v) ಅವರು ಭಾರತ ವಿರುದ್ಧ ತೋರಿದ ಪ್ರದರ್ಶನವನ್ನು ನೆನಪಿಸಿಕೊಂಡಿದ್ದಾರೆ.

ಚೆಂಡಿನಲ್ಲಿ ಆಟೋಗ್ರಾಫ್​ ನೀಡಿದ್ದ ಸಚಿನ್​

ಬಾಸ್​ ಡಿ ಲೀಡೆ ಅವರು ತಮ್ಮ ತಂದೆ 2003ರ ವಿಶ್ವಕಪ್​ನಲ್ಲಿ ಸಚಿನ್ ತೆಂಡೂಲ್ಕರ್(sachin tendulkar) ಅವರ ವಿಕೆಟ್​ ಕಿತ್ತು ವಿಚಾರವನ್ನು ನೆನಪಿಸಿಕೊಂಡಿರುವ ವಿಡಿಯೊವನ್ನು ಐಸಿಸಿ ತನ್ನ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಹಂಚಿಕೊಂಡಿದೆ. ಈ ವಿಡಿಯೊದಲ್ಲಿ ಬಾಸ್​ ಡಿ ಲೀಡೆ ಅಂದು ತಮ್ಮ ತಂದೆ ಟಿಮ್​ ಡಿ ಲೀಡೆ ಅವರು ಭಾರತ ವಿರುದ್ಧ ಶ್ರೇಷ್ಠ ಮಟ್ಟದ ಬೌಲಿಂಗ್​ ನಡೆಸಿದ್ದರು. ಅದರಲ್ಲೂ ಅವರು ಸಚಿನ್​ ತೆಂಡೂಲ್ಕರ್​ ಅವರ ವಿಕೆಟ್​ ಕಿತ್ತದ್ದು ಅವರ ಕ್ರಿಕೆಟ್​ ಬದುಕಿನ ಶ್ರೇಷ್ಠ ಇನಿಂಗ್ಸ್​ ಆಗಿತ್ತು. ಈ ವಿಚಾರವನ್ನು ಅವರೇ ನನಗೆ ಹೇಳಿದ್ದರು. ಅಲ್ಲದೆ ಸಚಿನ್​ ಅವರು ನಮ್ಮ ತಂದೆಗೆ ಚೆಂಡಿನಲ್ಲಿ ಸಹಿ ಹಾಕಿ ಆಟೋಗ್ರಾಫ್​ ನೀಡಿದ್ದರು. ಇದು ಈಗಲೂ ತಂದೆಯ ಜತೆ ಇದೆ ಎಂದು ಈ ವಿಡಿಯೊದಲ್ಲಿ ಹೇಳಿದ್ದಾರೆ. ಟಿಮ್​ ಡಿ ಲೀಡೆ ಅವರು ಅಂದು ಸಚಿನ್​ ಸಹಿ ಹಾಕಿ ನೀಡಿದ ಚೆಂಡನ್ನು ಕೂಡ ಈ ವಿಡಿಯೊದಲ್ಲಿ ತೋರಿಸಿದ್ದಾರೆ.

ಸಚಿನ್​ ಅವರನ್ನು ನೋಡುವ ಭಾಗ್ಯ ನನಗೂ ಈ ಬಾರಿಯ ವಿಶ್ವಕಪ್​ನಲ್ಲಿ ಸಿಕ್ಕಿದೆ. ಅವರನ್ನು ಕಂಡು ನಾನು ಸಂತಸಗೊಂಡಿದ್ದೇನೆ. ನನ್ನ ತಂದೆ ಹೇಳುತ್ತಿದ್ದರು. ಸಚಿನ್​ ಅವರಂತೆ ಸವ್ಯಸಾಚಿ ಕ್ರಿಕೆಟಿಗ ಎಂದಿಗೂ ಸಿಗಲಾರರು ಎಂದು ಅದು ನೂರಕ್ಕೆ ನೂರರಷ್ಟು ನಿಜ. ವಿಕೆಟ್​ ಕಿತ್ತರೂ ಅವರು ನನ್ನ ತಂದೆಗೆ ಆಟೋಗ್ರಾಫ್​ ನೀಡಿದ್ದೇ ಇದಕ್ಕೆ ಉತ್ತಮ ನಿದರ್ಶನ. ಅಂದಿನ ಪಂದ್ಯದಲ್ಲಿ ಆಟಗಾರರಾಗಿದ್ದ ರಾಹುಲ್​ ದ್ರಾವಿಡ್​ ಸರ್​ ಇಂದು ಭಾರತ ತಂಡದ ಕೋಚ್​ ಆಗಿದ್ದಾರೆ. ಅವರನ್ನು ಬಹಳ ಹತ್ತಿರದಿಂದ ನೋಡುವ ಅವಕಾಶ ನನಗೆ ಸಿಕ್ಕಿತು ಎಂದು ಬಾಸ್​ ಡಿ ಲೀಡೆ ಸಂತಸಗೊಂಡರು.

ಇದನ್ನೂ ಓದಿ IND vs NED: ಭಾರತ-ನೆದರ್ಲೆಂಡ್ಸ್‌ ಪಂದ್ಯ; ಬೆಂಗಳೂರಿನ ಹಲವೆಡೆ ವಾಹನ ನಿಲುಗಡೆ ನಿಷೇಧ

ಮೊದಲ ವಿಶ್ವಕಪ್ ಮುಖಾಮುಖಿಯಾಗಿತ್ತು…

ಭಾರತ ಮತ್ತು ನೆದರ್ಲೆಂಡ್ಸ್​ ತಂಡಗಳು ವಿಶ್ವಕಪ್​ ಟೂರ್ನಿಯಲ್ಲಿ ಮೊದಲ ಬಾರಿಗೆ ಮುಖಾಮುಖಿಯಾಗಿದ್ದು 2003ರಲ್ಲಿ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್​ ನಡೆಸಿದ ಭಾರತ ಸಚಿನ್​ ತೆಂಡೂಲ್ಕರ್(52)​ ಅವರ ಅರ್ಧಶತಕ ಮತ್ತು ದಿನೇಶ್‌ ಮೊಂಗಿಯ(42) ಅವರ ಬ್ಯಾಟಿಂಗ್​ ಸಾಹಸದಿಂದ 48.5 ಓವರ್​ಗಳಲ್ಲಿ 204 ರನ್​ಗೆ ಆಲೌಟ್​ ಆಯಿತು. ಗುರಿ ಬೆನ್ನಟ್ಟಿದ್ದ ನೆದರ್ಲೆಂಡ್ಸ್​ ತಂಡ ವ್ಯಾನ್ ಬಂಗೆ(62) ಏಕಾಂಗಿ ಹೋರಾಟದ ಹೊರತಾಗಿಯೂ 48.1 ಓವರ್​ಗಳಲ್ಲಿ 136 ರನ್​ಗೆ ಸರ್ವಪತನ ಕಂಡಿತು. ಜಾವಗಲ್​ ಶ್ರೀನಾಥ್​ ಮತ್ತು ಅನಿಲ್​ ಕುಂಬ್ಳೆ ತಲಾ ನಾಲ್ಕು ವಿಕೆಟ್​ ಕಿತ್ತು ಡಚ್ಚರ ಸೊಕ್ಕಡಗಿಸಿದ್ದರು.

ಮಗನ ಪಂದ್ಯ ನೋಡಲು ಬಂದ ತಂದೆ

4 ವಿಕೆಟ್​ ಕಿತ್ತ ಟಿಮ್​ ಡಿ ಲೀಡೆ

ಟಿಮ್​ ಡಿ ಲೀಡೆ ಅವರು ಈ ಪಂದ್ಯದಲ್ಲಿ 35 ರನ್‌ಗಳಿಗೆ ನಾಲ್ಕು ವಿಕೆಟ್‌ಗಳನ್ನು ಕಿತ್ತಿದ್ದರು. ಸಚಿನ್ ತೆಂಡೂಲ್ಕರ್, ರಾಹುಲ್ ದ್ರಾವಿಡ್, ಹರ್ಭಜನ್ ಸಿಂಗ್ ಮತ್ತು ಜಹೀರ್ ಖಾನ್ ಅವರ ವಿಕೆಟ್​ ಉರುಳಿಸಿದ್ದರು. ಇದೀಗ ಇವರ ಮಗ ಬಾಸ್ ಡಿ ಲೀಡೆ ಇಂದು ಭಾರತ ವಿರುದ್ಧ ಕಣಕ್ಕಿಳಿಯಲಿದ್ದಾರೆ. ಅವರೂ ಕೂಡ ತಂದೆಯಂತೆ ಪರಾಕ್ರಮ ತೋರಲಿದ್ದಾರಾ ಎಂದು ಕಾದು ನೋಡಬೇಕಿದೆ.

2003ರ ವಿಶ್ವಕಪ್ ಹೈಲೆಟ್ಸ್​

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕ್ರಿಕೆಟ್

Ind vs SA : ಭಾರತ ವಿರುದ್ಧ ಸರಣಿಗೆ ದಕ್ಷಿಣ ಆಫ್ರಿಕಾ ತಂಡ ಪ್ರಕಟ

Ind vs SA: ದಕ್ಷಿಣ ಆಫ್ರಿಕಾ ತಂಡದಲ್ಲಿ ಹಲವಾರು ಹೊಸ ಮುಖಗಳಿಗೆ ಅವಕಾಶ ನೀಡಲಾಗಿದೆ.

VISTARANEWS.COM


on

Markram
Koo

ಬೆಂಗಳೂರು: ದಕ್ಷಿಣ ಆಫ್ರಿಕಾ ಸೋಮವಾರ (ಡಿಸೆಂಬರ್ 4) ಭಾರತ ವಿರುದ್ಧದ ಬಹು ಸ್ವರೂಪದ ತವರು ಸರಣಿಗೆ (Ind vs SA) ತಮ್ಮ ತಂಡಗಳನ್ನು ಪ್ರಕಟಿಸಿದೆ. ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಭಾರತ 3 ಟಿ20, 3 ಏಕದಿನ ಹಾಗೂ 2 ಟೆಸ್ಟ್ ಪಂದ್ಯಗಳನ್ನಾಡಲಿದೆ. ಈ ಸರಣಿಯು ಡಿಸೆಂಬರ್ 10 ರಿಂದ ಜನವರಿ 7 ರವರೆಗೆ ನಡೆಯಲಿದೆ.

ತೆಂಬಾ ಬವುಮಾ ಮತ್ತು ಕಗಿಸೊ ರಬಾಡ ಅವರಿಗೆ ಪ್ರವಾಸದ ವೈಟ್-ಬಾಲ್ ಲೆಗ್ಗೆ ವಿಶ್ರಾಂತಿ ನೀಡಲಾಗಿದ್ದು, ಟೆಸ್ಟ್​​ಗೆ ಮರಳಲಿದ್ದಾರೆ. ಬವುಮಾ ಅನುಪಸ್ಥಿತಿಯಲ್ಲಿ ಟಿ20ಐನಲ್ಲಿ ದಕ್ಷಿಣ ಆಫ್ರಿಕಾವನ್ನು ಮುನ್ನಡೆಸುತ್ತಿರುವ ಏಡೆನ್ ಮಾರ್ಕ್ರಮ್ ಏಕದಿನ ತಂಡವನ್ನು ಮುನ್ನಡೆಸಲಿದ್ದಾರೆ. ಟೆಸ್ಟ್ ಸರಣಿಗೆ ಒತ್ತು ನೀಡಿರುವುದರಿಂದ ರೆಡ್-ಬಾಲ್ ಕ್ರಿಕೆಟ್ ಆಡುವ ಸಲುವಾಗಿ ಪ್ರವಾಸದ ವೈಟ್​​ಬಾಲ್ ಲೆಗ್ಗೆ ಕೈಬಿಡಲಾದ ಆಟಗಾರರ ಗುಂಪಿನಲ್ಲಿ ನಾಯಕ ತೆಂಬಾ ಬವುಮಾ ಮತ್ತು ಕಗಿಸೊ ರಬಾಡಾ ಸೇರಿದ್ದಾರೆ ಎಂದು ಸಿಎಸ್ಎ ಹೇಳಿಕೆಯಲ್ಲಿ ತಿಳಿಸಿದೆ.

ವಿಶ್ವ ಕಪ್​ ಆಡಿದ ಅಟಗಾರರು

ವೈಟ್-ಬಾಲ್ ತಂಡಗಳಲ್ಲಿ ಇತ್ತೀಚೆಗೆ ನಡೆದ ಐಸಿಸಿ ಪುರುಷರ ಕ್ರಿಕೆಟ್ ವಿಶ್ವಕಪ್​​ನಲ್ಲಿ ಭಾಗವಹಿಸಿದ ಹಲವಾರು ಆಟಗಾರರು ಇದ್ದಾರೆ. ಇದರಲ್ಲಿ ಹೆನ್ರಿಕ್ ಕ್ಲಾಸೆನ್, ಕೇಶವ್ ಮಹಾರಾಜ್, ಡೇವಿಡ್ ಮಿಲ್ಲರ್, ತಬ್ರೈಜ್ ಶಮ್ಸಿ ಸೇರಿದ್ದಾರೆ. ಜೆರಾಲ್ಡ್ ಕೋಜಿ, ಮಾರ್ಕೊ ಜಾನ್ಸೆನ್ ಮತ್ತು ಲುಂಗಿ ಎನ್ಗಿಡಿ ಅವರು ಪ್ರಥಮ ದರ್ಜೆ ಪಂದ್ಯಗಳಲ್ಲಿ ಭಾಗವಹಿಸುವ ಮೂಲಕ ರೆಡ್-ಬಾಲ್ ಪಂದ್ಯಗಳಿಗೆ ತಯಾರಿ ನಡೆಸಲು ಅಂತಿಮ ಟಿ 20 ಐ ಮತ್ತು ಏಕದಿನ ಸರಣಿಯಿಂದ ಹೊರಗುಳಿಯಲಿದ್ದಾರೆ.

ಇತ್ತೀಚೆಗೆ ಮುಕ್ತಾಯಗೊಂಡ ಐಸಿಸಿ ಪುರುಷರ ಕ್ರಿಕೆಟ್ ವಿಶ್ವಕಪ್​ನಲ್ಲಿ ಅತ್ಯುತ್ತಮ ಪ್ರದರ್ಶನದ ನಂತರ ನಾವು ಅದೇ ಆವೇಗವನ್ನು ಮುಂದುವರಿಸಲು ಬಯಸುತ್ತೇವೆ. ಈ ಸರಣಿಯಲ್ಲಿ ನಮ್ಮ ಪ್ರಮುಖ ತಂಡವನ್ನು ನಿರ್ಮಿಸುತ್ತಿದ್ದೇವೆ ಎಂದು ಸೀಮಿತ ಓವರ್​ಗಳ ಮುಖ್ಯ ಕೋಚ್ ರಾಬ್ ವಾಲ್ಟರ್ ಐಸಿಸಿಗೆ ತಿಳಿಸಿದ್ದಾರೆ.

ಭಾರತದ ವಿರುದ್ಧದ ಟಿ20 ಮತ್ತು ನಂತರ ಏಕದಿನ ಪಂದ್ಯಗಳಿಂದ ಪ್ರಾರಂಭವಾಗುವ ಬಿಡುವಿಲ್ಲದ ಬೇಸಿಗೆಯನ್ನು ನಾವು ಹೊಂದಿದ್ದೇವೆ ಮತ್ತು ಆದ್ದರಿಂದ ನಮ್ಮ ಹಲವಾರು ಹಿರಿಯ ಆಟಗಾರರನ್ನು ಕೈಬಿಡುವ ನಿರ್ಧಾರವನ್ನು ನಾವು ತೆಗೆದುಕೊಂಡಿದ್ದೇವೆ. ಪ್ರವಾಸದ ಕೆಂಪು-ಚೆಂಡಿನ ಚರಣಕ್ಕೆ ನಾವು ಒತ್ತು ನೀಡುತ್ತಿದ್ದೇವೆ. ಅವರು ದೇಶೀಯ ಕ್ರಿಕೆಟ್ ಆಡುವ ಮೂಲಕ ಟೆಸ್ಟ್ ಸರಣಿಗೆ ತಯಾರಿ ನಡೆಸಲಿದ್ದಾರೆ. ಈ ಕ್ರಮವು ದೇಶಿಯ ಮಟ್ಟದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಇತರರಿಗೆ ಅವಕಾಶಗಳನ್ನು ಒದಗಿಸಲಿದೆ ಎಂದು ಅವರು ರಾಬ್​ ಹೇಳಿದ್ದಾರೆ.

ಇದನ್ನೂ ಓದಿ : Pro Kabaddi : ತಲೈವಾಸ್​, ಗುಜರಾತ್​ ಜಯಂಟ್ಸ್​ಗೆ ಗೆಲುವು

ಆಲ್ರೌಂಡರ್ ಮಿಹ್ಲಾಲಿ ಎಂಪೊಂಗ್ವಾನಾ, ಬ್ಯಾಟರ್​ ಡೇವಿಡ್ ಬೆಡಿಂಗ್ಹ್ಯಾಮ್ ಮತ್ತು ವೇಗದ ಬೌಲರ್ ನಾಂಡ್ರೆ ಬರ್ಗರ್ ತಮ್ಮ ಚೊಚ್ಚಲ ಅಂತರರಾಷ್ಟ್ರೀಯ ಕರೆಯನ್ನು ಪಡೆದುಕೊಂಡಿದ್ದಾರೆ. ಏಕದಿನ ತಂಡದಲ್ಲಿ ಎಂಪೊಂಗ್ವಾನಾ ಅವರನ್ನು ಹೆಸರಿಸಲಾಗಿದ್ದರೆ, ಬೆಡಿಂಗ್ಹ್ಯಾಮ್ ಅವರನ್ನು ಟೆಸ್ಟ್ ತಂಡಕ್ಕೆ ಸೇರಿಸಲಾಗಿದೆ. ಅದ್ಭುತ ದೇಶೀಯ ಋತುವನ್ನು ಹೊಂದಿರುವ ಬರ್ಗರ್ ಅವರನ್ನು ಎಲ್ಲಾ ಮೂರು ತಂಡಗಳಲ್ಲಿ ಸೇರಿಸಲಾಗಿದೆ. ಬ್ಯಾಟರ್​​ ಟ್ರಿಸ್ಟಾನ್ ಸ್ಟಬ್ಸ್ ತಮ್ಮ ಚೊಚ್ಚಲ ಟೆಸ್ಟ್ ಕರೆಯನ್ನು ಸ್ವೀಕರಿಸಿದರೆ, ವಿಕೆಟ್ ಕೀಪರ್ ಕೈಲ್ ವೆರೆನ್ನೆ ಏಕದಿನ ಮತ್ತು ಟೆಸ್ಟ್ ತಂಡಗಳಲ್ಲಿ ಸ್ಥಾನ ಪಡೆದಿದ್ದಾರೆ.

ಇದು ಹೊಸ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಚಕ್ರದ ಪ್ರಾರಂಭವಾಗಿದೆ. ಎಲ್ಲರಿಗೂ ಉತ್ತೇಜನ ನೀಡಲಿದೆ. ವಿಶ್ವದ ಅತ್ಯುತ್ತಮ ತಂಡಗಳಲ್ಲಿ ಒಂದಾಗಿರುವ ಭಾರತ ವಿರುದ್ಧ ತವರಿನಲ್ಲಿ ಉತ್ತಮ ಪ್ರದರ್ಶನ ನೀಡಲಿದ್ದೇವೆ ಎಂದು ಅವರು ಹೇಳಿದರು.

ತಂಡಗಳು ಇಂತಿವೆ

ಟಿ20 ತಂಡ: ಏಡೆನ್ ಮಾರ್ಕ್ರಮ್ (ನಾಯಕ), ಒಟ್ನಿಯಲ್ ಬಾರ್ಟ್ಮನ್, ಥ್ಯೂ ಬ್ರೀಟ್ಜ್ಕೆ, ನಾಂಡ್ರೆ ಬರ್ಗರ್, ಜೆರಾಲ್ಡ್ ಕೊಟ್ಜೆ (ಮೊದಲ ಮತ್ತು ಎರಡನೇ ಟಿ 20 ಪಂದ್ಯಗಳು), ಡೊನೊವನ್ ಫೆರೇರಾ, ರೀಜಾ ಹೆಂಡ್ರಿಕ್ಸ್, ಮಾರ್ಕೊ ಜಾನ್ಸೆನ್ (ಮೊದಲ ಮತ್ತು ಎರಡನೇ ಟಿ 20 ಐ), ಹೆನ್ರಿಕ್ ಕ್ಲಾಸೆನ್, ಕೇಶವ್ ಮಹಾರಾಜ್, ಡೇವಿಡ್ ಮಿಲ್ಲರ್, ಲುಂಗಿ ಎನ್ಗಿಡಿ (1 ಮತ್ತು 2 ನೇ ಟಿ 20 ಐ), ಆಂಡಿಲೆ ಫೆಹ್ಲುಕ್ವಾಯೊ, ತಬ್ರೈಜ್ ಶಮ್ಸಿ.

ಏಕದಿನ ತಂಡ: ಏಡೆನ್ ಮಾರ್ಕ್ರಮ್ (ನಾಯಕ), ಒಟ್ನಿಯಲ್ ಬಾರ್ಟ್ಮನ್, ನಾಂಡ್ರೆ ಬರ್ಗರ್, ಟೋನಿ ಡಿ ಜೋರ್ಜಿ, ರೀಜಾ ಹೆಂಡ್ರಿಕ್ಸ್, ಹೆನ್ರಿಕ್ ಕ್ಲಾಸೆನ್, ಕೇಶವ್ ಮಹಾರಾಜ್, ಮಿಹ್ಲಾಲಿ ಎಂಪೊಂಗ್ವಾನಾ, ಡೇವಿಡ್ ಮಿಲ್ಲರ್, ವಿಯಾನ್ ಮುಲ್ಡರ್, ಆಂಡಿಲೆ ಫೆಹ್ಲುಕ್ವಾಯೊ, ತಬ್ರೈಜ್ ಶಮ್ಸಿ, ರಾಸ್ಸಿ ವಾನ್ ಡೆರ್ ಡುಸೆನ್, ಕೈಲ್ ವೆರೆನ್ನೆ ಮತ್ತು ಲಿಜಾಡ್ ವಿಲಿಯಮ್ಸ್.

ಟೆಸ್ಟ್ ತಂಡ: ಟೆಂಬಾ ಬವುಮಾ (ನಾಯಕ), ಡೇವಿಡ್ ಬೆಡಿಂಗ್ಹ್ಯಾಮ್, ನಾಂಡ್ರೆ ಬರ್ಗರ್, ಜೆರಾಲ್ಡ್ ಕೊಟ್ಜೆ, ಟೋನಿ ಡಿ ಜೋರ್ಜಿ, ಡೀನ್ ಎಲ್ಗರ್, ಮಾರ್ಕೊ ಜಾನ್ಸೆನ್, ಕೇಶವ್ ಮಹಾರಾಜ್, ಐಡೆನ್ ಮಾರ್ಕ್ರಮ್, ವಿಯಾನ್ ಮುಲ್ಡರ್, ಲುಂಗಿ ಎನ್ಗಿಡಿ, ಕೀಗನ್ ಪೀಟರ್ಸನ್, ಕಗಿಸೊ ರಬಾಡಾ, ಟ್ರಿಸ್ಟಾನ್ ಸ್ಟಬ್ಸ್ ಮತ್ತು ಕೈಲ್ ವೆರೆನ್ನೆ.

Continue Reading

ಕ್ರಿಕೆಟ್

Ind vs Aus : ಭಾರತ ತಂಡಕ್ಕೆ ಕೊನೇ ಪಂದ್ಯದಲ್ಲೂ ಜಯ, 4-1 ಅಂತರದಿಂದ ಸರಣಿ ಕೈವಶ

ind vs aus : ಸರಣಿಯುದ್ದಕ್ಕೂ ಭಾರತ ತಂಡ ಅತ್ಯುತ್ತಮ ಪ್ರದರ್ಶನ ನೀಡಿತಲ್ಲದೆ, ಯುವ ಆಟಗಾರರು ತಮ್ಮ ಸಾಮರ್ಥ್ಯವನ್ನು ಪ್ರದರ್ಶಿಸಿದರು.

VISTARANEWS.COM


on

indian cricket team
Koo

ಬೆಂಗಳೂರು: ಐದು ಪಂದ್ಯಗಳ ಟಿ20 ಸರಣಿಯ ಕೊನೇ ಪಂದ್ಯದಲ್ಲಿ ಭಾರತ ತಂಡ ಆಸ್ಟ್ರೇಲಿಯಾ (ind vs aus) ವಿರುದ್ಧ 6 ರನ್​ ಗೆಲುವು ಸಾಧಿಸಿದೆ. ಇದರೊಂದಿಗೆ ಸರಣಿಯನ್ನು ಭಾರತ ತಂಡ 4-1 ಅಂತರದಿಂದ ಕೈವಶ ಮಾಡಿಕೊಂಡಿದೆ. ರಾಯ್ಪುರದಲ್ಲಿ ನಡೆದಿದ್ದ ನಾಲ್ಕನೇ ಪಂದ್ಯದಲ್ಲಿ ಗೆಲುವು ಸಾಧಿಸುವುದರೊಂದಿಗೆ ಭಾರತ ತಂಡ ಸರಣಿಯನ್ನು ಗೆದ್ದುಕೊಂಡಿತ್ತು. ಹೀಗಾಗಿ ಐದನೇ ಪಂದ್ಯಕ್ಕೆ ಹೆಚ್ಚಿನ ಮೌಲ್ಯ ಇರಲಿಲ್ಲ. ಆದಾಗ್ಯೂ ಭಾರತ ತಂಡ ಸರ್ವತೋಮುಖ ಪ್ರದರ್ಶನ ನೀಡುವ ಮೂಲಕ ವಿಜಯ ತನ್ನದಾಗಿಸಿಕೊಂಡಿತು. ವಿಶ್ವ ಕಪ್​ ಫೈನಲ್ ಸೋಲಿನ ಬಳಿಕ ಆಸ್ಟ್ರೇಲಿಯಾ ತಂಡದ ವಿರುದ್ಧವೇ ಸರಣಿ ಗೆಲ್ಲುವ ಮೂಲಕ ಭಾರತ ತಂಡ ಸಮಾಧಾನ ಮಾಡಿಕೊಂಡಿತು. ಇದೇ ವೇಳೆ ಒಟ್ಟು 136 ಟಿ20 ಅಂತಾರಾಷ್ಟ್ರೀಯ ಪಂದ್ಯಗಳನ್ನು ಗೆದ್ದಿರುವ ಏಕೈಕ ತಂಡ ಎಂಬ ಹೆಗ್ಗಳಿಕೆಯನ್ನೂ ಗಳಿಸಿತು.

ಚಿನ್ನಸ್ವಾಮಿ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತ ಭಾರತ ತಂಡ ಮೊದಲು ಬ್ಯಾಟ್​ ಮಾಡಿ ನಿಗದಿತ 20 ಓವರ್​ಗಳಿಗೆ 8 ವಿಕೆಟ್​ ಕಳೆದುಕೊಂಡು 160 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್ ಮಾಡಿದ ಮ್ಯಾಥ್ಯೂ ವೇಡ್​ ನೇತೃತ್ವದ ಆಸ್ಟ್ರೇಲಿಯಾ ತಂಡ ನಿಗದಿತ 20 ಓವರ್​ಗಳು ಮುಕ್ತಾಯಗೊಂಡಾಗ 154 ರನ್​ ಬಾರಿಸಿ ಸೋಲೊಪ್ಪಿಕೊಂಡಿತು. ಆಸ್ಟ್ರೇಲಿಯಾ ತಂಡದ ಗೆಲುವಿಗೆ ಕೊನೇ ಓವರ್​ನಲ್ಲಿ 10 ರನ್​ ಬೇಕಾಗಿತ್ತು. ಟಿ20ಯಲ್ಲಿ ಇದು ದೊಡ್ಡ ಮೊತ್ತವೇ ಆಗಿರಲಿಲ್ಲ. ಆದರೆ, ಅರ್ಶ್​ದೀಪ್​ ಸಿಂಗ್ ಒಂದು ವಿಕೆಟ್​ ಪಡೆಯುವ ಜತೆಗೆ ಕೇವಲ ನಾಲ್ಕು ರನ್​ ನೀಡಿ ತಂಡವನ್ನು ಗೆಲ್ಲಿಸಿದರು.

ಸ್ಪರ್ಧಾತ್ಮಕ ಮೊತ್ತವನ್ನು ಬೆನ್ನಟ್ಟಲು ಆರಂಭಿಸಿದ ಆಸ್ಟ್ರೇಲಿಯಾ ತಂಡ ನಿಯಮಿತವಾಗಿ ವಿಕೆಟ್​ ಕಳೆದುಕೊಂಡಿತು. ಮಧ್ಯಮ ಕ್ರಮಾಂಕದಲ್ಲಿ ಬೆನ್​ ಮೆಕ್​ಡರ್ಮಾಟ್​​ (54) ಅರ್ಧ ಶತಕ ಬಾರಿಸಿ ತಂಡವನ್ನು ಗೆಲುವಿನೆಡೆಗೆ ಸಾಗಿಸುವ ಯತ್ನ ಮಾಡಿದರು. ಆದರೆ, ಉಳಿದವರ ನೆರವು ದೊರಕದ ಕಾರಣ ತಂಡ ಸೋತಿತು. ಅದಕ್ಕಿಂತ ಮೊದಲು ಆರಂಭಿಕ ಬ್ಯಾಟರ್​​ ಟ್ರಾವಿಡ್​ ಹೆಡ್​​ 28 ರನ್ ಬಾರಿಸಿದರೆ ಕೊನೆಯಲ್ಲಿ ಮ್ಯಾಥ್ಯೂ ವೇಡ್​ 22 ರನ್​ ಬಾರಿಸಿದರೂ ತಂಡವನ್ನು ಗೆಲ್ಲಿಸಲು ಅವರಿಗೆ ಸಾಧ್ಯವಾಗಲಿಲ್ಲ.

ಇದನ್ನೂ ಓದಿ : IND vs SA : ಭಾರತದ ದಕ್ಷಿಣ ಆಫ್ರಿಕಾ ಪ್ರವಾಸ ಕುರಿತ ಪೂರ್ಣ ವಿವರ ಇಲ್ಲಿದೆ

ಭಾರತ ತಂಡ ಪರ ಬೌಲಿಂಗ್​ನಲ್ಲಿ ಮುಖೇಶ್ ಕುಮಾರ್​ 3 ವಿಕೆಟ್​ ಪಡೆದರೆ ರವಿ ಬಿಷ್ಣೋಯ್​ 2 ಹಾಗೂ ಅರ್ಶ್​ದೀಪ್ ಸಿಂಗ್ 2 ವಿಕೆಟ್ ತಮ್ಮದಾಗಿಸಿಕೊಂಡರು.

ಸಾಧಾರಣ ಬ್ಯಾಟಿಂಗ್​

ಬೆಂಗಳೂರಿನಲ್ಲಿ ಭಾರತ ತಂಡದ ಬ್ಯಾಟರ್​ಗಳು ಅಬ್ಬರಿಸಬಹುದು ಎಂಬ ನಿರೀಕ್ಷೆ ಈ ಪಂದ್ಯದಲ್ಲಿ ಸುಳ್ಳಾಯಿತು. ಉತ್ತಮ ಆರಂಭ ನೀಡಿತ ಹೊರತಾಗಿಯೂ ಯಶಸ್ವಿ ಜೈಸ್ವಾಲ್​ 15 ಎಸೆತಕ್ಕೆ 21 ರನ್ ಬಾರಿಸಿ ಔಟಾದರು. ಹೀಗಾಗಿ 33 ರನ್​ಗೆ ಭಾರತ ಮೊದಲ ವಿಕೆಟ್​ ಕಳೆದುಕೊಂಡಿತು. ಋತುರಾಜ್ ಗಾಯಕ್ವಾಡ್ ಕೂಡ 10 ರನ್​ಗೆ ಸೀಮಿತಗೊಂಡರು. ಸೂರ್ಯಕುಮಾರ್​ ಯಾದವ್​ ಮತ್ತೆ ಬ್ಯಾಟಿಂಗ್​ನಲ್ಲಿ ವೈಫಲ್ಯ ಎದುರಿಸಿ 5 ರನ್​ಗೆ ಸೀಮಿತಗೊಂಡರು. ಹಿಂದಿನ ನಾಲ್ಕ ಪಂದ್ಯಗಳಲ್ಲಿ ತಂಡ ಗೆಲುವಿಗೆ ಪ್ರಾಮಾಣಿಕ ಕೊಡುಗೆ ಕೊಟ್ಟಿದ್ದ ರಿಂಕು ಸಿಂಗ್​ ಇಲ್ಲಿ 6 ರನ್​ಗೆ ಸೀಮಿತಗೊಂಡರು. ಈ ಸರಣಿಯಲ್ಲಿ ಇದು ಅವರ ಮೊದಲ ಒಂದಂಕಿ ಮೊತ್ತವಾಗಿದೆ. ಹೀಗಾಗಿ ಭಾರತ 55 ರನ್​ಗಳಿಗೆ ಮೊದಲ ನಾಲ್ಕು ವಿಕೆಟ್​ ಕಳೆದುಕೊಂಡಿತು.

ಶ್ರೇಯಸ್ ಅರ್ಧ ಶತಕ

ಭಾರತ ತಂಡ ಸಂಕಷ್ಟದಲ್ಲಿದ್ದ ವೇಳೆ ನೆರವಿಗೆ ನಿಂತ ಶ್ರೇಯಸ್​​ ಅಯ್ಯರ್ ಅರ್ಧ ಶತಕ ಬಾರಿಸಿತು. ಮೂರನೇ ಕ್ರಮಾಂಕದಲ್ಲಿ ಆಡಲು ಬಂದ ಅವರು ಆರಂಭದಲ್ಲಿ ನಿಧಾನಕ್ಕೆ ಆಡಿ ಬಳಿಕ ರನ್​ ಗಳಿಕೆ ನೆರವಾದರು. 37 ಎಸೆತಗಳನ್ನು ಎದುರಿಸಿದ ಅವರು 5 ಫೊರ್ ಹಾಗೂ 2 ಸಿಕ್ಸರ್​ಗಳನ್ನ ಬಾರಿಸಿ ಮಿಂಚಿದರು. ಇವರು ವಿಕೆಟ್​ ಕೀಪರ್ ಜಿತೇಶ್​ ಶರ್ಮಾ ಅವರ ಜತೆ ಅಮೂಲ್ಯ ಜತೆಯಾಟವಾಡಿದರು. ಜಿತೇಶ್​ 16 ಎಸೆತಕ್ಕೆ 3 ಫೊರ್​ ಹಾಗೂ 1 ಸಿಕ್ಸರ್ ಬಾರಿಸಿದರು. ಕೊನೆಯಲ್ಲಿ ಅಕ್ಷರ್ ಪಟೇಲ್​ ಸಿಡಿದೆದ್ದರು. ಅವರು 21 ಎಸೆತಕ್ಕೆ 31 ರನ್​ ಗಳ ಕೊಡುಗೆ ಕೊಟ್ಟರು. ಹೀಗಾಗಿ ಭಾರತದ ಗಳಿಕೆ ಹೆಚ್ಚಾಯಿತು.

Continue Reading

ಕ್ರಿಕೆಟ್

IND vs SA : ಭಾರತದ ದಕ್ಷಿಣ ಆಫ್ರಿಕಾ ಪ್ರವಾಸ ಕುರಿತ ಪೂರ್ಣ ವಿವರ ಇಲ್ಲಿದೆ

IND vs SA: ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಭಾರತ ತಂಡ ಮೂರು ಟಿ20, ಮೂರು ಏಕದಿನ ಹಾಗೂ ಎರಡು ಟೆಸ್ಟ್​ ಪಂದ್ಯಗಳಲ್ಲಿ ಭಾಗಿಯಾಗಲಿದೆ.

VISTARANEWS.COM


on

Team India
Koo

ಬೆಂಗಳೂರು: ತವರು ನೆಲದಲ್ಲಿ ಆಸ್ಟ್ರೇಲಿಯಾವನ್ನು ಟಿ20 ಐ ಸರಣಿಯಲ್ಲಿ ಮಣಿಸಿದ ನಂತರ ಭಾರತವು ದಕ್ಷಿಣ ಆಫ್ರಿಕಾ (IND vs SA) ಪ್ರವಾಸ ಮಾಡಲಿದೆ. ಮೂರು ಟಿ 20, ಮೂರು ಏಕದಿನ ಮತ್ತು ಎರಡು ಟೆಸ್ಟ್ ಪಂದ್ಯಗಳನ್ನು ಆಡಲಿದೆ. ಡಿಸೆಂಬರ್ 10 ರಿಂದ ಮೂರು ಪಂದ್ಯಗಳ ಟಿ 20 ಐ ಸರಣಿಯೊಂದಿಗೆ ಪ್ರವಾಸ ಪ್ರಾರಂಭವಾಗಲಿದ್ದು, ಏಕದಿನ ಸರಣಿ ಡಿಸೆಂಬರ್ 17 ರಂದು ಪ್ರಾರಂಭವಾಗಲಿದೆ. ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಚಕ್ರದ (2023-25) ಭಾಗವಾಗಿರುವ ಎರಡು ಟೆಸ್ಟ್ ಪಂದ್ಯಗಳು ಡಿಸೆಂಬರ್ 26 ರಿಂದ ಆರಂಭವಾಗಲಿದೆ.

ಬಿಸಿಸಿಐ (BCCI) ಇತ್ತೀಚೆಗೆ ಪ್ರವಾಸದ ಎಲ್ಲಾ ಮೂರು ಸ್ವರೂಪಗಳಿಗೆ ತಂಡಗಳನ್ನು ಪ್ರಕಟಿಸಿದೆ. ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಜಸ್ಪ್ರೀತ್ ಬುಮ್ರಾ ಮತ್ತು ಮೊಹಮ್ಮದ್ ಶಮಿ ಅವರಿಗೆ ವಿಶ್ವಕಪ್ ಅಭಿಯಾನದ ನಂತರ ವೈಟ್ ಬಾಲ್ ಸರಣಿಯಿಂದ ವಿಶ್ರಾಂತಿ ನೀಡಲಾಗಿದೆ.

ಇವರೆಲ್ಲ ನಾಯಕರು

ಸೂರ್ಯಕುಮಾರ್ ಯಾದವ್ ಟಿ20 ತಂಡವನ್ನು ಮುನ್ನಡೆಸಲಿದ್ದು, ರವೀಂದ್ರ ಜಡೇಜಾ ಉಪನಾಯಕನಾಗಿರುತ್ತಾರೆ. ಕೆಎಲ್ ರಾಹುಲ್ ಏಕದಿನ ತಂಡವನ್ನು ಮುನ್ನಡೆಸುವ ಜವಾಬ್ದಾರಿಯನ್ನು ವಹಿಸಲಾಗಿದೆ. ಟೆಸ್ಟ್ ಸರಣಿಯಲ್ಲಿ ನಾಯಕ ರೋಹಿತ್ ಶರ್ಮಾ ಮತ್ತು ಸ್ಟಾರ್ ಬ್ಯಾಟರ್​ ವಿರಾಟ್ ಕೊಹ್ಲಿ ಮರಳಲಿದ್ದರೆ. ಭಾರತವು ನಿರ್ಣಾಯಕ ಡಬ್ಲ್ಯುಟಿಸಿ ಅಂಕಗಳನ್ನು ಗಳಿಸಲು ಎದುರು ನೋಡುತ್ತಿದೆ.

2010-11 ರಲ್ಲಿ ಮೊದಲ ಬಾರಿಗೆ ಡ್ರಾ ಸಾಧಿಸಿದ್ದನ್ನು ಹೊರತುಪಡಿಸಿ, 1992ರಿಂದ ಈ ದೇಶದಲ್ಲಿ ಭಾರತ ಇನ್ನೂ ಟೆಸ್ಟ್ ಸರಣಿಯನ್ನು ಗೆದ್ದಿಲ್ಲ. ಇದಲ್ಲದೆ, ಮೆನ್ ಇನ್ ಬ್ಲೂ 50 ಓವರ್​ಗಳ ಸ್ವರೂಪದಲ್ಲಿ ನಿರಾಶಾದಾಯಕ ದಾಖಲೆಯನ್ನು ಹೊಂದಿದೆ. ಕಾಮನಬಿಲ್ಲು ರಾಷ್ಟ್ರದಲ್ಲಿ ಆಡಿದ ಎಂಟು ಏಕದಿನ ಪಂದ್ಯಗಳಲ್ಲಿ ಕೇವಲ ಒಂದು ಏಕದಿನ ಸರಣಿಯನ್ನು ಗೆದ್ದಿದೆ.

ಇದನ್ನೂ ಓದಿ : IPL 2024 : ಐಪಿಎಲ್​ ಹರಾಜಿನ ದಿನಾಂಕ, ಸ್ಥಳದ ಬಗ್ಗೆ ಖಚಿತ ಮಾಹಿತಿ ನೀಡಿದ ಬಿಸಿಸಿಐ

ದಕ್ಷಿಣ ಆಫ್ರಿಕಾ ವಿರುದ್ಧ ಟಿ20 ಮಾದರಿಯಲ್ಲಿ ಭಾರತ ಪ್ರಾಬಲ್ಯ ಹೊಂದಿದೆ. ಆಡಿದ ನಾಲ್ಕು ಸರಣಿಗಳ ಪೈಕಿ ಮೂರರಲ್ಲಿ ಗೆಲುವು ಸಾಧಿಸಿದೆ. ಆದ್ದರಿಂದ, ಮುಂಬರುವ ಪ್ರವಾಸದಲ್ಲಿ ಏಕದಿನ ಮತ್ತು ಟೆಸ್ಟ್ ಸರಣಿಗಳನ್ನು ಗೆಲ್ಲುವ ಮೂಲಕ ತಮ್ಮ ದಾಖಲೆಗಳನ್ನು ಸುಧಾರಿಸಲು ಭಾರತ ಉತ್ಸುಕವಾಗಿದೆ.

ಭಾರತ-ದಕ್ಷಿಣ ಆಫ್ರಿಕಾ ಟಿ20 ಸರಣಿ ವೇಳಾಪಟ್ಟಿ

  • ಮೊದಲ ಟಿ20 ಪಂದ್ಯ ಕಿಂಗ್ಸ್​ಮೀಡ್, ಡರ್ಬಾನ್ ಭಾನುವಾರ, ಡಿಸೆಂಬರ್ 10 ರಾತ್ರಿ 9:30
  • 2ನೇ ಟಿ20 ಪಂದ್ಯ ಸೇಂಟ್ ಜಾರ್ಜ್ಸ್ ಪಾರ್ಕ್, ಗ್ಕೆಬೆರ್ಹಾ ಮಂಗಳವಾರ, ಡಿಸೆಂಬರ್ 12 ರಾತ್ರಿ 9:30
  • 3ನೇ ಟಿ20 ಪಂದ್ಯ ನ್ಯೂ ವಾಂಡರರ್ಸ್ ಕ್ರೀಡಾಂಗಣ, ಜೋಹಾನ್ಸ್​​ಬರ್ಗ್​​ ಗುರುವಾರ, ಡಿಸೆಂಬರ್ 14 ರಾತ್ರಿ 9:30

ಏಕದಿನ ಸರಣಿ ವೇಳಾಪಟ್ಟಿ 2023 ಪಂದ್ಯ

  • ಮೊದಲ ಏಕದಿನ ಪಂದ್ಯ ನ್ಯೂ ವಾಂಡರರ್ಸ್ ಕ್ರೀಡಾಂಗಣ, ಜೋಹಾನ್ಸ್​ಬರ್ಗ್​​ ಭಾನುವಾರ, ಡಿಸೆಂಬರ್ 17 ಮಧ್ಯಾಹ್ನ 1:30
  • 2ನೇ ಏಕದಿನ ಪಂದ್ಯ ಸೇಂಟ್ ಜಾರ್ಜ್ಸ್ ಪಾರ್ಕ್, ಗ್ಕೆಬೆರ್ಹಾ ಮಂಗಳವಾರ, ಡಿಸೆಂಬರ್ 19 ಸಂಜೆ 4:30
  • 3ನೇ ಏಕದಿನ ಪಂದ್ಯ ಬೋಲ್ಯಾಂಡ್ ಪಾರ್ಕ್, ಪಾರ್ಲ್ ಗುರುವಾರ, ಡಿಸೆಂಬರ್ 21 ಸಂಜೆ 4:30

ಟೆಸ್ಟ್ ವೇಳಾಪಟ್ಟಿ 2023

  • ಮೊದಲ ಟೆಸ್ಟ್ ಸೂಪರ್ ಸ್ಪೋರ್ಟ್ ಪಾರ್ಕ್, ಸೆಂಚೂರಿಯನ್ ಮಂಗಳವಾರ, ಡಿಸೆಂಬರ್ 26 ಮಧ್ಯಾಹ್ನ 1:30
  • 2ನೇ ಟೆಸ್ಟ್ ನ್ಯೂಲ್ಯಾಂಡ್ಸ್, ಕೇಪ್ ಟೌನ್ ಬುಧವಾರ, ಜನವರಿ 03 ಮಧ್ಯಾಹ್ನ 2:00

ದಕ್ಷಿಣ ಆಫ್ರಿಕಾ ವಿರುದ್ಧ ಭಾರತ ತಂಡ

ಟಿ20 ತಂಡ: ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ಋತುರಾಜ್ ಗಾಯಕ್ವಾಡ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ರಿಂಕು ಸಿಂಗ್, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಜಿತೇಶ್ ಶರ್ಮಾ (ವಿಕೆಟ್ ಕೀಪರ್), ರವೀಂದ್ರ ಜಡೇಜಾ (ಉಪನಾಯಕ), ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಕುಲದೀಪ್ ಯಾದವ್, ಅರ್ಷ್ದೀಪ್ ಸಿಂಗ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ದೀಪಕ್ ಚಹರ್.

ಏಕದಿನ ತಂಡ: ಋತುರಾಜ್ ಗಾಯಕ್ವಾಡ್, ಸಾಯಿ ಸುದರ್ಶನ್, ತಿಲಕ್ ವರ್ಮಾ, ರಜತ್ ಪಾಟಿದಾರ್, ರಿಂಕು ಸಿಂಗ್, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ನಾಯಕ), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಯಜುವೇಂದ್ರ ಚಾಹಲ್, ಮುಖೇಶ್ ಕುಮಾರ್, ಅವೇಶ್ ಖಾನ್, ಅರ್ಷ್ದೀಪ್ ಸಿಂಗ್, ದೀಪಕ್ ಚಹರ್.

ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಋತುರಾಜ್ ಗಾಯಕ್ವಾಡ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಕೆಎಲ್ ರಾಹುಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಮೊಹಮ್ಮದ್ ಶಮಿ*, ಜಸ್ಪ್ರೀತ್ ಬುಮ್ರಾ (ಉಪನಾಯಕ), ಪ್ರಸಿದ್ಧ್ ಕೃಷ್ಣ.

ನೇರ ಪ್ರಸಾರ ಪ್ರಸಾರ ವಿವರಗಳು

ಭಾರತದ ಸಂಪೂರ್ಣ ದಕ್ಷಿಣ ಆಫ್ರಿಕಾ ಪ್ರವಾಸದ ನೇರ ಪ್ರಸಾರವು ಸ್ಟಾರ್ ಸ್ಪೋರ್ಟ್ಸ್ ನೆಟ್ವರ್ಕ್​ನಲ್ಲಿ ಲಭ್ಯವಿದ್ದರೆ, ಲೈವ್ ಸ್ಟ್ರೀಮಿಂಗ್ ಡಿಸ್ನಿ ಪ್ಲಸ್ ಹಾಟ್ಸ್ಟಾರ್ ಅಪ್ಲಿಕೇಶನ್ ಮತ್ತು ವೆಬ್​ಸೈಟ್​ನಲ್ಲಿ ಲಭ್ಯವಿರುತ್ತದೆ.

ನೇರ ಪ್ರಸಾರ- ಸ್ಟಾರ್ ಸ್ಪೋರ್ಟ್ಸ್ ನೆಟ್ವರ್ಕ್

ಲೈವ್ ಸ್ಟ್ರೀಮಿಂಗ್- ಡಿಸ್ನಿ ಪ್ಲಸ್ ಹಾಟ್​ಸ್ಟಾರ್​ ಅಪ್ಲಿಕೇಶನ್ ಮತ್ತು ವೆಬ್ಸೈಟ್

Continue Reading

ಕ್ರಿಕೆಟ್

Ind vs Aus : ಟಾಸ್ ಗೆದ್ದ ಆಸ್ಟ್ರೇಲಿಯಾ, ಭಾರತಕ್ಕೆ ಮೊದಲು ಬ್ಯಾಟಿಂಗ್​

ind vs aus : ಐದು ಪಂದ್ಯಗಳ ಸರಣಿಯನ್ನು ಭಾರತ ತಂಡ 3-1 ಅಂತರದಿಂದ ಕೈವಶ ಮಾಡಿಕೊಂಡಿದ್ದು, ಇದು ಔಪಚಾರಿಕ ಪಂದ್ಯ ಎನಿಸಿಕೊಳ್ಳಲಿದೆ.

VISTARANEWS.COM


on

Suryakuamr Yadav
Koo

ಬೆಂಗಳೂರು: ಟಿ20 ಸರಣಿಯ ಐದನೇ ಹಾಗೂ ಕೊನೇ ಪಂದ್ಯದಲ್ಲಿ ಪ್ರವಾಸಿ ಆಸ್ಟ್ರೇಲಿಯಾ ತಂಡ ಟಾಸ್​ ಗೆದ್ದಿದ್ದು ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ ಭಾರತ ತಂಡ ಮೊದಲು ಬ್ಯಾಟ್​ ಮಾಡಿ ದೊಡ್ಡ ಮೊತ್ತ ಪೇರಿಸಿ ಅದನ್ನು ಕಾಪಾಡಿಕೊಳ್ಳಬೇಕಾಗಿದೆ. ಸರಣಿಯಲ್ಲಿ ಮೊದಲೆರಡು ಹಾಗೂ ನಾಲ್ಕನೇ ಪಂದ್ಯವನ್ನು ಗೆದ್ದಿರುವ ಸೂರ್ಯಕುಮಾರ್ ನೇತೃತ್ವದ ಭಾರತ ತಂಡ ಸರಣಿಯನ್ನು ಕೈವಶ ಮಾಡಿಕೊಂಡಿದೆ. ಹೀಗಾಗಿ ಇದು ಔಪಚಾರಿಕ ಪಂದ್ಯ ಎನಿಸಿಕೊಳ್ಳಲಿದೆ. ಆದಾಗ್ಯೂ ಗೆಲುವಿನೊಂದಿಗೆ ಅಭಿಯಾನ ಕೊನೆಗೊಳಿಸುವುದು ಎರಡೂ ತಂಡಗಳ ಉದ್ದೇಶವಾಗಿರುತ್ತದೆ.

ಟಾಸ್ ಗೆದ್ದಿರುವ ಆಸ್ಟ್ರೇಲಾ ತಂಡದ ನಾಯಕ ಮಾತನಾಡಿ, ನಮ್ಮ ಬಳಿ ಒಂದು ಬೌಲಿಂಗ್ ಆಯ್ಕೆಯಿದೆ. ವಿಕೆಟ್ ಸ್ವಲ್ಪ ಜಟಿಲವಾಗಿದೆ ಹಾಗೂ ಹವಾಮಾನ ಪರಿಸ್ಥಿತಿ ಸೂಕ್ತವಾಗಿಲ್ಲ. ಕ್ಯಾಮರೂನ್​ ಗ್ರೀನ್ ಬದಲಿಗೆ ನೇಥಾನ್​ ಎಲ್ಲಿಸ್ ತಂಡ ಸೇರಿದ್ದಾರೆ. ತಂಡದ ಆಟಗಾರರಿಗೆ ಉತ್ತಮ ಪ್ರದರ್ಶನ ನೀಡಲು ಸೂಕ್ತ ಸಮಯ ಎಂದು ಹೇಳಿದ್ದಾರೆ.

ಭಾರತ ತಂಡದ ನಾಯಕ ಸೂರ್ಯಕುಮಾರ್ ಯಾದವ್ ಮಾತನಾಡಿ, ನಾವು ಮೊದಲು ಬೌಲಿಂಗ್ ಮಾಡಲು ಇಷ್ಟಪಡುತ್ತಿದ್ದೆವು. ಅದ್ಭುತ ಪ್ರೇಕ್ಷಕರ ಮುಂದೆ ಆಡಲು ಮತ್ತೊಂದು ಅವಕಾಶ, ಬ್ಯಾಟಿಂಗ್ ಘಟಕಕ್ಕೆ ಉತ್ತಮ ಪ್ರದರ್ಶನ ನೀಡಲು ಹೇಳಿದ್ದೇನೆ. ದೀಪಕ್ ಚಾಹರ್ ಬದಲಿಗೆ ಅರ್ಶ್​ದೀಪ್​ ಕಣಕ್ಕಿಳಿಯಲಿದ್ದಾರೆ. ವೈದ್ಯಕೀಯ ತುರ್ತು ಪರಿಸ್ಥಿತಿಯಿಂದಾಗಿ ಅವರು (ದೀಪಕ್) ಮನೆಗೆ ಮರಳಿದ್ದಾರೆ ಎಂದು ಹೇಳಿದರು.

ಮೂರು ವಾರಗಳ ಹಿಂದೆ, ಇದೇ ಸಮಯದಲ್ಲಿ, ಭಾರತವು ಬೆಂಗಳೂರಿನಲ್ಲಿ ಆಡಿತ್ತು. ವಿಶ್ವಕಪ್​ ಪಂದ್ಯದಲ್ಲಿ ನೆದರ್ಲೆಂಡ್ಸ್ ವಿರುದ್ಧ 4 ವಿಕೆಟ್ ನಷ್ಟಕ್ಕೆ 410 ರನ್ ಗಳಿಸಿತ್ತು. ಅಂತಿಮ ಹಂತಲ್ಲಿ ಭಾರತವು ಟ್ರೋಫಿ ನಷ್ಟ ಮಾಡಿಕೊಂಡಿದ್ದರೂ ಸಾಕಷ್ಟು ನಿರ್ಭೀತ ಕ್ರಿಕೆಟ್ ಅಡಿತ್ತು. ಇದೀಗ ರಿಂಕು, ರುತುರಾಜ್, ಯಶಸ್ವಿ, ಜಿತೇಶ್ ಸೇರಿದಂತೆ ಹಲವರು ನಿರ್ಭೀತ ಕ್ರಿಕೆಟ್ ಆಡಲು ಬೆಂಗಳೂರಿಗೆ ಬಂದಿದ್ದಾರೆ. ಗುವಾಹಟಿ ಹೊರತುಪಡಿಸಿ ಭಾರತವು ಈ ಸರಣಿಯ ಪ್ರಮುಖ ಭಾಗಗಳಲ್ಲಿ ತಮ್ಮ ಪ್ರಾಬಲ್ಯ ಮೆರೆದಿತ್ತು. ಕಳೆದ ಪಂದ್ಯದಲ್ಲಿ 20 ರನ್​ಗಳ ಜಯ ಸಾಧಿಸಿದ ಆತಿಥೇಯರು ರಾಯ್ಪುರದಲ್ಲಿ ಸರಣಿ ಗೆಲುವು ತಮ್ಮದಾಗಿಸಿಕೊಂಡಿದ್ದಾರೆ.

ತಂಡಗಳು

ಭಾರತ ತಂಡ: ಯಶಸ್ವಿ ಜೈಸ್ವಾಲ್, ಋತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್ (ಸಿ), ರಿಂಕು ಸಿಂಗ್, ಜಿತೇಶ್ ಶರ್ಮಾ (ವಿಕೆ), ಅಕ್ಷರ್ ಪಟೇಲ್, ರವಿ ಬಿಷ್ಣೋಯ್, ಅವೇಶ್ ಖಾನ್, ಮುಖೇಶ್ ಕುಮಾರ್, ಅರ್ಷ್ದೀಪ್ ಸಿಂಗ್.

ಇದನ್ನೂ ಓದಿ : IPL 2024 : ಐಪಿಎಲ್​ ಹರಾಜಿನ ದಿನಾಂಕ, ಸ್ಥಳದ ಬಗ್ಗೆ ಖಚಿತ ಮಾಹಿತಿ ನೀಡಿದ ಬಿಸಿಸಿಐ

ಆಸ್ಟ್ರೇಲಿಯಾ ತಂಡ: ಟ್ರಾವಿಸ್ ಹೆಡ್, ಜೋಶ್ ಫಿಲಿಪ್, ಬೆನ್ ಮೆಕ್ಡರ್ಮಾಟ್, ಆ್ಯರೋನ್ ಹಾರ್ಡಿ, ಟಿಮ್ ಡೇವಿಡ್, ಮ್ಯಾಥ್ಯೂ ಶಾರ್ಟ್, ಮ್ಯಾಥ್ಯೂ ವೇಡ್ (ಸಿ & ವಿಕೆ), ಬೆನ್ ಡ್ವಾರ್ಶುಯಿಸ್, ನಾಥನ್ ಎಲ್ಲಿಸ್, ಜೇಸನ್ ಬೆಹ್ರೆನ್ಡಾರ್ಫ್, ತನ್ವೀರ್ ಸಂಗಾ

Continue Reading
Advertisement
Lighting for Suvarna Vidhana Soudha
ಕರ್ನಾಟಕ1 min ago

Belagavi Winter Session: ಬೆಳಗಾವಿಯ ಸುವರ್ಣ ವಿಧಾನಸೌಧಕ್ಕೆ ಇನ್ಮುಂದೆ ವರ್ಷಪೂರ್ತಿ ಲೈಟಿಂಗ್ಸ್

Markram
ಕ್ರಿಕೆಟ್4 mins ago

Ind vs SA : ಭಾರತ ವಿರುದ್ಧ ಸರಣಿಗೆ ದಕ್ಷಿಣ ಆಫ್ರಿಕಾ ತಂಡ ಪ್ರಕಟ

Kenda teaser kannada
South Cinema29 mins ago

Kannada New Movie: ಟೀಸರ್ ಮೂಲಕ ಕೌತುಕದ ಕಿಡಿ ಹೊತ್ತಿಸಿದ `ಕೆಂಡ’!

CP Yogeshwar brother in law Mahadevaiah
ಕರ್ನಾಟಕ40 mins ago

Murder Case: ಮಾಜಿ ಸಚಿವ ಸಿ.ಪಿ. ಯೋಗೇಶ್ವರ್‌ ಭಾವ ಮಹದೇವಯ್ಯ ಕೊಲೆ!

Foeticide case and pair of pink bunny figurines
ಕರ್ನಾಟಕ1 hour ago

Belagavi Winter Session: ಭ್ರೂಣ ಹತ್ಯೆ ಕೇಸ್‌; ಕೋರ್ಟ್‌ನಲ್ಲಿ ಕೇಸ್‌ ದಾಖಲಿಸಲು ಸದನದಲ್ಲಿ ಒತ್ತಾಯ

Narendra Modi With Women
EXPLAINER1 hour ago

ಚುನಾವಣೆಯಲ್ಲಿ ಹೆಣ್ಣುಮಕ್ಕಳ ಮತಗಳನ್ನು ಸೆಳೆದ ಬಿಜೆಪಿ; ‘ಕ್ವೀನ್ಸ್’‌ ಕಿಂಗ್‌ಮೇಕರ್ಸ್‌ ಆಗಿದ್ದು ಹೇಗೆ?

Foeticide arrest
ಕರ್ನಾಟಕ1 hour ago

Foeticide Case : ಮೈಸೂರಿನ ಮತ್ತೊಂದು ಆಸ್ಪತ್ರೆಯಲ್ಲೂ ಭ್ರೂಣ ಹತ್ಯೆ; ಹೆಡ್‌ ನರ್ಸ್‌ ಉಷಾರಾಣಿ ಬಂಧನ

Tukali imitate sangeetha sringeri
ಬಿಗ್ ಬಾಸ್1 hour ago

BBK SEASON 10: ನಾಯಿಯಾದ ಸಂಗೀತಾ; ಅನುಕರಣೆ ಮಾಡೋದ್ರಲ್ಲಿ ತುಕಾಲಿ ಎತ್ತಿದ ಕೈ!

Revenue Minister Krishna Byre Gowda making coffee
ಕರ್ನಾಟಕ2 hours ago

Belagavi Winter Session: ಕಾವೇರಿದ ಚರ್ಚೆ ನಡುವೆ ಬಿಸಿ ಬಿಸಿ ಕಾಫಿ ಮಾಡಿಕೊಂಡು ಕುಡಿದ ಕೃಷ್ಣ ಬೈರೇಗೌಡ

Car catches fire after hitting bus
ಕರ್ನಾಟಕ2 hours ago

Video Viral : ಬಸ್‌ಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಕಾರು, ಪ್ರಾಣ ಉಳಿಸಿದ ಡ್ರೈವರ್‌; ವಿಡಿಯೊ ಇದೆ!

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

DCC Bank Recruitment 2023
ಉದ್ಯೋಗ10 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Bigg Boss- Saregamapa 20 average TRP
ಕಿರುತೆರೆ2 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ5 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Village Accountant Recruitment
ಉದ್ಯೋಗ10 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

ead your daily horoscope predictions for december 4th 2023
ಪ್ರಮುಖ ಸುದ್ದಿ11 hours ago

Dina Bhavishya : ಇಂದು ಹೂಡಿಕೆ ಮಾಡಿದ್ರೆ ಈ ರಾಶಿಯವರಿಗೆ ಡಬಲ್‌ ಧಮಾಕಾ!

Police call off protest FIR against lawyer who slapped police
ಕರ್ನಾಟಕ1 day ago

Police Protest : ಪ್ರತಿಭಟನೆ ಕೈ ಬಿಟ್ಟ ಪೊಲೀಸರು; ಕಪಾಳಕ್ಕೆ ಹೊಡೆದ ವಕೀಲನ ಮೇಲೆ ಎಫ್‌ಐಆರ್‌

Dina Bhavihsya
ಪ್ರಮುಖ ಸುದ್ದಿ1 day ago

Dina Bhavishya : ಸಂಡೇ ಆದರೂ ಈ ರಾಶಿಯವರಿಗೆ ಟೆನ್ಷನ್‌ ತಪ್ಪಲ್ಲ! ಇವರಿಂದ ದೂರ ಇರಿ

Cockroaches bite baby born 2 days ago in vanivilas hospital
ಆರೋಗ್ಯ2 days ago

Vanivilas Hospital : 2 ದಿನಗಳ ಹಿಂದಷ್ಟೇ ಜನಿಸಿದ ಮಗುವನ್ನು ಕಚ್ಚಿ ಹಾಕಿದ ಜಿರಳೆಗಳು!

Dina Bhavishya
ಪ್ರಮುಖ ಸುದ್ದಿ2 days ago

Dina Bhavishya : ಯಾರನ್ನೂ ನಂಬಿ ಇನ್ವೆಸ್ಟ್ಮೆಂಟ್‌ ಮಾಡ್ಬೇಡಿ!

DK Shiakumar and MLA Munirathna
ಕರ್ನಾಟಕ3 days ago

DK Shivakumar : ಡಿಕೆಶಿಯನ್ನು ಗೇಟ್‌ ಒಳಗೇ ಬಿಟ್ಟಿಲ್ಲ, ಸಿಎಂ ಮಾಡುವಂತೆಯೂ ಹೇಳಿಲ್ಲವೆಂದ ಮುನಿರತ್ನ!

Tigre Found in Mysuru again Beware of this village
ಕರ್ನಾಟಕ3 days ago

Operation Tiger : ಮೈಸೂರಲ್ಲಿ ಮತ್ತೆ ಹುಲಿ ಕಾಟ; ಈ ಗ್ರಾಮದವರು ಹುಷಾರು!

Infosys Narayana Murthy and Congress Guarantee
ಕರ್ನಾಟಕ4 days ago

Congress Guarantee : ಯಾವುದನ್ನೂ ಪುಕ್ಕಟೆ ಕೊಡಬೇಡಿ; ‘ಗ್ಯಾರಂಟಿ’ಗೆ ನಾರಾಯಣ ಮೂರ್ತಿ ಆಕ್ಷೇಪ!

Justice for Ajay Protests against NIMHANS Hospital
ಆರೋಗ್ಯ4 days ago

Child Death : ಜಸ್ಟಿಸ್ ಫಾರ್ ಅಜಯ್; ಶುರುವಾಯ್ತು ನಿಮ್ಹಾನ್ಸ್‌ ವಿರುದ್ಧ ಪ್ರತಿಭಟನೆ

Dina Bhavishya
ಪ್ರಮುಖ ಸುದ್ದಿ5 days ago

Dina Bhavishya : ಯಾರಾದರೂ ಕಾಳಜಿ ತೋರಿದರೆ ಈ ರಾಶಿಯವರು ನೆಗ್ಲೆಕ್ಟ್‌ ಮಾಡ್ಬೇಡಿ!

ಟ್ರೆಂಡಿಂಗ್‌