T20 World Cup | ಬ್ಯಾಟಿಂಗ್ ವೈಫಲ್ಯ; ಅಭ್ಯಾಸ ಪಂದ್ಯದಲ್ಲಿ ಭಾರತ ತಂಡಕ್ಕೆ ಹೀನಾಯ ಸೋಲು - Vistara News

ಕ್ರಿಕೆಟ್

T20 World Cup | ಬ್ಯಾಟಿಂಗ್ ವೈಫಲ್ಯ; ಅಭ್ಯಾಸ ಪಂದ್ಯದಲ್ಲಿ ಭಾರತ ತಂಡಕ್ಕೆ ಹೀನಾಯ ಸೋಲು

ಎರಡನೇ ಅಭ್ಯಾಸ ಪಂದ್ಯದಲ್ಲಿ ಭಾರತ ತಂಡ ವೆಸ್ಟರ್ನ್‌ ಅಸ್ಟ್ರೇಲಿಯಾ ವಿರುದ್ಧ 36 ರನ್‌ಗಳ ಹೀನಾಯ ಸೋಲಿಗೆ ಒಳಗಾಗಿದೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಪರ್ತ್‌: ವೆಸ್ಟರ್ನ್‌ ಆಸ್ಟ್ರೇಲಿಯಾ ಇಲೆವೆನ್‌ ತಂಡದ ವಿರುದ್ಧದ ಎರಡನೇ ಅಭ್ಯಾಸ ಪಂದ್ಯದಲ್ಲಿ ಭಾರತ ತಂಡ ೩೬ ರನ್‌ಗಳ ಹೀನಾಯ ಸೋಲಿಗೆ ಒಳಗಾಗಿದೆ. ಕೆ. ಎಲ್‌ ರಾಹುಲ್‌ (೭೬) ಒಬ್ಬರನ್ನು ಬಿಟ್ಟು ಉಳಿದ ಎಲ್ಲ ಬ್ಯಾಟರ್‌ಗಳು ಕಳಪೆ ಬ್ಯಾಟಿಂಗ್‌ ಪ್ರದರ್ಶನ ನೀಡಿದ ಕಾರಣ ತಂಡಕ್ಕೆ ಸೋಲು ಎದುರಾಯಿತು.

ಪರ್ತ್‌ನ ವೆಸ್ಟರ್ನ್‌ ಆಸ್ಟ್ರೇಲಿಯಾ ಕ್ರಿಕೆಟ್‌ ಸ್ಟೇಡಿಯಮ್‌ನಲ್ಲಿ ನಡೆದ ಪಂದ್ಯದಲ್ಲಿ ಟಾಸ್‌ ಗೆದ್ದ ಭಾರತ ತಂಡ ಫೀಲ್ಡಿಂಗ್‌ ಆಯ್ಕೆ ಮಾಡಿಕೊಂಡಿತು. ಅಂತೆಯೇ ಮೊದಲು ಬ್ಯಾಟ್‌ ಮಾಡಿದ ವೆಸ್ಟರ್ನ್‌ ಆಸ್ಟ್ರೇಲಿಯಾ ತಂಡ ನಿಗದಿತ ೨೦ ಓವರ್‌ಗಳಲ್ಲಿ ೮ ವಿಕೆಟ್‌ಗೆ ೧೬೮ ರನ್‌ ಬಾರಿಸಿತು. ಪ್ರತಿಯಾಗಿ ಆಡಿದ ಭಾರತ ತನ್ನ ಪಾಲಿನ ಓವರ್‌ಗಳು ಮುಕ್ತಾಯಗೊಂಡಾಗ ೮ ವಿಕೆಟ್‌ ನಷ್ಟಕ್ಕೆ ೧೩೨ ರನ್ ಮಾತ್ರ ಬಾರಿಸಲು ಶಕ್ತಗೊಂಡು ಸೋಲಿಗೊಳಗಾಯಿತು.

ಭಾರತ ಪರ ಕೆ. ಎಲ್‌ ರಾಹುಲ್ ಅರ್ಧ ಶತಕ ಬಾರಿಸಿದರೆ ಹಾರ್ದಿಕ್‌ ಪಾಂಡ್ಯ ೧೭ ರನ್‌ ಹಾಗೂ ದಿನೇಶ್‌ ಕಾರ್ತಿಕ್‌ ೧೦ ರನ್‌ ಗಳಿಸಿದರು. ನಾಯಕ ರೋಹಿತ್‌ ಶರ್ಮ ಬ್ಯಾಟಿಂಗ್‌ ಮಾಡಲಿಲ್ಲ. ರಿಷಭ್‌ ಪಂತ್‌ (೯), ದೀಪಕ್‌ ಹೂಡ (೬), ಅಕ್ಷರ್‌ ಪಟೇಲ್‌ (೨) ಬ್ಯಾಟಿಂಗ್‌ ವೈಫಲ್ಯ ಎದುರಿಸಿದರು.

ಮೊದಲು ಬ್ಯಾಟ್‌ ಮಾಡಿದ ವೆಸ್ಟರ್ನ್‌ ಆಸ್ಟ್ರೇಲಿಯಾ ತಂಡದ ಪರ ಡಿ ಅರ್ಕಿ ಶಾರ್ಟ್‌ (೫೨), ನಿಕ್‌ ಹಾಬ್ಸನ್‌ (೬೪) ಅರ್ಧ ಶತಕ ಬಾರಿಸಿದರು. ಭಾರತ ಪರ ಬೌಲಿಂಗ್‌ನಲ್ಲಿ ಆರ್‌ ಅಶ್ವಿನ್‌ ೩ ವಿಕೆಟ್‌ ಕಬಳಿಸಿದರು.

ಇದನ್ನೂ ಓದಿ | T20 World Cup | ವಿಶ್ವ ಕಪ್‌ಗೆ ಮೊದಲು ಭಾರತ ತಂಡಕ್ಕೆ ಸಾಲು ಸಾಲು ಅಭ್ಯಾಸ ಪಂದ್ಯಗಳು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರಿಕೆಟ್

IND vs SA Final: ಭಾರತ ತಂಡ ವಿಶ್ವಕಪ್​ ಗೆಲ್ಲಲಿ; ಪ್ರಯಾಗ್ ರಾಜ್​ನಲ್ಲಿ ಅಭಿಮಾನಿಗಳಿಂದ ವಿಶೇಷ ಪೂಜೆ

IND vs SA Final: 2014ರಲ್ಲಿ ಭಾರತ ಟಿ20 ಫೈನಲ್​ ಪ್ರವೇಶಿಸಿತ್ತು. ಆದರೆ ಲಂಕಾ ವಿರುದ್ಧ ಸೋಲು ಕಂಡು ನಿರಾಸೆ ಅನುಭವಿಸಿತ್ತು. ಇದೀಗ 10 ವರ್ಷಗಳ ಬಳಿಕ ಈ ಕೂಟದಲ್ಲಿ ಭಾರತ ಫೈನಲ್​ ಪಂದ್ಯ ಆಡುತ್ತಿದೆ. ಎದುರಾಳಿ ದಕ್ಷಿಣ ಆಫ್ರಿಕಾಕ್ಕೆ ಇದು ಚೊಚ್ಚಲ ಫೈನಲ್​ ಪಂದ್ಯವಾಗಿದೆ.

VISTARANEWS.COM


on

IND vs SA Final
Koo

ಉತ್ತರ ಪ್ರದೇಶ: 2023ರ ಏಕದಿನ ವಿಶ್ವಕಪ್‌ ಗೆಲ್ಲುವ ಸುವರ್ಣಾವಕಾಶ ಕಳೆದುಕೊಂಡ ಭಾರತದ ಮುಂದೆ ಇದೀಗ ಟಿ20 ವಿಶ್ವಕಪ್(T20 World Cup 2024)​ ಗೆಲ್ಲುವ ಅವಕಾಶವೊಂದು ಬಂದು ನಿಂತಿದೆ. ಇಂದು(ಶನಿವಾರ) ನಡೆಯುವ ಫೈನಲ್(IND vs SA Final)​ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಅದೃಷ್ಟ ಪರೀಕ್ಷೆಗೆ ಇಳಿಯಲಿದೆ. ಟಿ20 ವಿಶ್ವಕಪ್‌ ಭಾರತಕ್ಕೆ ಒಲಿಯಲಿ ಎಂಬುದು ಕೋಟ್ಯಂತರ ಕ್ರಿಕೆಟ್‌ ಪ್ರೇಮಿಗಳ ಹಾರೈಕೆ. ಭಾರತ ತಂಡದ ಯಶಸ್ಸಿಗಾಗಿ ಅಭಿಮಾನಿಗಳು ಮತ್ತು ಕೆಲ ಸಾಧು ಸಂತರು ಉತ್ತರಪ್ರದೇಶದ ಪ್ರಯಾಗ್ ರಾಜ್​ನಲ್ಲಿ ವಿಶೇಷ ಪೂಜೆ ನೆರವೇರಿಸಿದ್ದಾರೆ. ಈ ವಿಡಿಯೊ ವೈರಲ್​ ಆಗಿದೆ.

2013ರ ಬಳಿಕ ಭಾರತ ಯಾವುದೇ ಐಸಿಸಿ ಟ್ರೋಫಿ ಗೆದ್ದಿಲ್ಲ. ಈ ಬಾರಿಯಾದರೂ ಫೈನಲ್​ನಲ್ಲಿ ಗೆದ್ದು ಭಾರತದ ಪ್ರಶಸ್ತಿ ಬರ ನೀಗಲಿ ಎನ್ನುವ ನಿಟ್ಟಿನಲ್ಲಿ ಪ್ರಯಾಗ್ ರಾಜ್​ನಲ್ಲಿ ಅಭಿಮಾನಿಗಳು ಟೀಮ್​ ಇಂಡಿಯಾ ಆಟಗಾರಾದ ರೋಹಿತ್​ ಶರ್ಮ, ವಿರಾಟ್​ ಕೊಹ್ಲಿ ಸೇರಿ ತಂಡದ ಆಟಗಾರರ ಫೋಟೊವನ್ನು ಇರಿಸಿ ಪೂಜೆ, ಭಜನೆ ಮತ್ತು ಗಂಗಾ ಪೂಜೆ ನೆರವೇರಿಸಿ ಯಶಸ್ಸಿಗೆ ಪ್ರಾರ್ಥಿಸಿದ್ದಾರೆ.

ಇದನ್ನೂ ಓದಿ IND vs SA Final: ಫೈನಲ್​ ಪಂದ್ಯಕ್ಕೂ ಮುನ್ನ ಭಾರತ ತಂಡಕ್ಕೆ ನಡುಕ ಹುಟ್ಟಿಸಿದ ಅಂಪೈರ್​!

2014ರಲ್ಲಿ ಭಾರತ ಟಿ20 ಫೈನಲ್​ ಪ್ರವೇಶಿಸಿತ್ತು. ಆದರೆ ಲಂಕಾ ವಿರುದ್ಧ ಸೋಲು ಕಂಡು ನಿರಾಸೆ ಅನುಭವಿಸಿತ್ತು. ಇದೀಗ 10 ವರ್ಷಗಳ ಬಳಿಕ ಈ ಕೂಟದಲ್ಲಿ ಭಾರತ ಫೈನಲ್​ ಪಂದ್ಯ ಆಡುತ್ತಿದೆ. ಎದುರಾಳಿ ದಕ್ಷಿಣ ಆಫ್ರಿಕಾಕ್ಕೆ ಇದು ಚೊಚ್ಚಲ ಫೈನಲ್​ ಪಂದ್ಯವಾಗಿದೆ. ಇತ್ತಂಡಗಳು ಕೂಡ ಟೂರ್ನಿಯ ಅಜೇಯ ತಂಡಗಳಾಗಿ ಫೈನಲ್​ ಪ್ರವೇಶಿಸಿರುವ ಕಾರಣ ಈ ಪ್ರಶಸ್ತಿ ಸಮರ ತೀವ್ರ ಕುತೂಹಲ, ರೋಮಾಂಚನ ಸೃಷ್ಟಿಸುವುದರಲ್ಲಿ ಅನುಮಾನವಿಲ್ಲ.

ಪಿಚ್​ ರಿಪೋರ್ಟ್


ಬ್ರಿಜ್‌ಟೌನ್‌ನಲ್ಲಿ ಈವರೆಗೆ 50 ಟಿ20 ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಲಾಗಿದೆ. ಮೊದಲು ಬ್ಯಾಟಿಂಗ್‌ ನಡೆಸಿದ ತಂಡ 31ರಲ್ಲಿ ಗೆಲುವು ಕಂಡಿದೆ. ಈ ಟೂರ್ನಿಯಲ್ಲಿ ಭಾರತ ಬ್ರಿಜ್‌ಟೌನ್‌ನಲ್ಲಿ ಒಂದು ಪಂದ್ಯ ಆಡಿ ಗೆಲುವು ಕಂಡಿದೆ. ದಕ್ಷಿಣ ಆಫ್ರಿಕಾ ಇಲ್ಲಿ ಇನ್ನೂ ಆಡಿಲ್ಲ. ಟಾಸ್​ ಗೆದ್ದ ತಂಡ ಮೊದಲು ಬ್ಯಾಟಿಂಗ್​ ಆಯ್ದುಕೊಂಡರೆ ಉತ್ತಮ.

ಭಾರತ ತಂಡದ ದೊಡ್ಡ ಸಮಸ್ಯೆ ಎಂದರೆ ಲೀಗ್, ಸೆಮಿಫೈನಲ್​ನಲ್ಲಿ ಎಷ್ಟೇ ಉತ್ತಮ ಪ್ರದರ್ಶನ ತೋರಿದರೂ ಕೂಡ ಪ್ರಶಸ್ತಿ ಸುತ್ತಿನ ಪಂದ್ಯದಲ್ಲಿ ಸಂಪೂರ್ಣ ನರ್ವಸ್​ ಆಗಿ ಆಡುವುದು. ಒಂದು ವಿಕೆಟ್​ ಬಿದ್ದರೆ ಸಾಕು ಬಳಿಕ ಕ್ರೀಸ್​ಗಿಳಿವ ಬ್ಯಾಟರ್​ಗಳು ಭಯದಿಂದಲೇ ಆಡಲು ಮುಂದಾಗಿ ಸತತವಾಗಿ ವಿಕೆಟ್​ ಕಳೆದುಕೊಂಡು ಅಲ್ಪ ಮೊತ್ತಕ್ಕೆ ಕುಸಿಯುತ್ತಾರೆ. ಕಳೆದ ಏಕದಿನ ವಿಶ್ವಕಪ್​ ಫೈನಲ್​, ಟೆಸ್ಟ್​ ಚಾಂಪಿಯನ್​ಶಿಪ್​ ಫೈನಲ್​ ಇದಕ್ಕೆ ಉತ್ತಮ ನಿದರ್ಶನ. ಹೀಗಾಗಿ ನಾಳೆ ನಡೆಯುವ ಫೈನಲ್​ ಪಂದ್ಯದಲ್ಲಿ ಬ್ಯಾಟರ್​ಗಳು ಮತ್ತು ಬೌಲರ್​ಗಳು ವಿಚಲಿತರಾಗದೆ ಆಡಬೇಕು.

Continue Reading

ಕ್ರೀಡೆ

IND vs SA Final: ಫೈನಲ್​ ಪಂದ್ಯಕ್ಕೂ ಮುನ್ನ ಭಾರತ ತಂಡಕ್ಕೆ ನಡುಕ ಹುಟ್ಟಿಸಿದ ಅಂಪೈರ್​!

IND vs SA Final: ಬ್ರಿಜ್‌ಟೌನ್‌ನ “ಕೆನ್ಸಿಂಗ್ಟನ್‌ ಓವಲ್‌’ ಮೈದಾನದಲ್ಲಿ ನಡೆಯುವ ಫೈನಲ್​ ಪಂದ್ಯದಲ್ಲಿ ಭಾರತದ ಪಾಲಿಗೆ ಐರನ್ ಲೆಗ್ ಎಂದು ಕರೆಯಲ್ಪಡುವ ರಿಚರ್ಡ್‌ ಕೆಟಲ್‌ಬರೋ(Richard Kettleborough) ಈ ಪಂದ್ಯಕ್ಕೆ ಥರ್ಡ್‌ ಅಂಪೈರ್​ ಆಗಿ ಕಾರ್ಯ ನಿರ್ವಹಿಸಲಿದ್ದಾರೆ.

VISTARANEWS.COM


on

IND vs SA Final
Koo

ಬಾರ್ಬಡೋಸ್​: ದ್ವಿತೀಯ ಟಿ20 ವಿಶ್ವಕಪ್‌(T20 World Cup 2024) ಕಿರೀಟ ಎತ್ತಿಹಿಡಿಯಲು ಕಾದು ಕುಳಿತಿರುವ ಭಾರತ, ಇಂದು ದಕ್ಷಿಣ ಆಫ್ರಿಕಾ ವಿರುದ್ಧದ ಫೈನಲ್​ ಪಂದ್ಯದಲ್ಲಿ ಕಣಕ್ಕಿಳಿಯಲಿದೆ. ಆದರೆ, ಈ ಪಂದ್ಯಕ್ಕೂ ಮುನ್ನವೇ ಭಾರತ(IND vs SA Final) ತಂಡಕ್ಕೆ ನಡುಕವೊಂದು ಶುರುವಾಗಿದೆ. ಇದಕ್ಕೆ ಕಾರಣ ಈ ಪಂದ್ಯಕ್ಕೆ ಕಾರ್ಯನಿರ್ವಹಿಸುತ್ತಿರುವ ಅಂಪೈರ್​.

ಬ್ರಿಜ್‌ಟೌನ್‌ನ “ಕೆನ್ಸಿಂಗ್ಟನ್‌ ಓವಲ್‌’ ಮೈದಾನದಲ್ಲಿ ನಡೆಯುವ ಫೈನಲ್​ ಪಂದ್ಯದಲ್ಲಿ ಭಾರತದ ಪಾಲಿಗೆ ಐರನ್ ಲೆಗ್ ಎಂದು ಕರೆಯಲ್ಪಡುವ ರಿಚರ್ಡ್‌ ಕೆಟಲ್‌ಬರೋ(Richard Kettleborough) ಈ ಪಂದ್ಯಕ್ಕೆ ಥರ್ಡ್‌ ಅಂಪೈರ್​ ಆಗಿ ಕಾರ್ಯ ನಿರ್ವಹಿಸಲಿದ್ದಾರೆ. ಕಳೆದ ವರ್ಷ ನಡೆದಿದ್ದ ಏಕದಿನ ವಿಶ್ವಕಪ್​ ಫೈನಲ್​ ಪಂದ್ಯಕ್ಕೆ ಕೆಟಲ್‌ಬರೋ ಅಂಪೈರ್​ ಎಂದು ತಿಳಿದಾಗಲೇ ಎಲ್ಲ ಭಾರತೀಯ ಕ್ರಿಕೆಟ್​ ಅಭಿಮಾನಿಗಳು ಕೂಡ ಈ ಬಾರಿ ಭಾರತಕ್ಕೆ ಸೋಲು ಖಚಿತ ಎಂದೇ ಹೇಳಿದ್ದರು. ಅದರಂತೆ ಈ ಭವಿಷ್ಯ ಕೂಡ ನಿಜವಾಗಿತ್ತು. ಸದ್ಯ ಈ ಬಾರಿ ಫೀಲ್ಡ್​ ಅಂಪೈರ್​ ಆಗಿ ಕರ್ತವ್ಯ ನಿರ್ವಹಿಸುವ ಬದಲು ಮೂರನೇ ಅಂಪೈರ್​ ಆಗಿ ಕಾರ್ಯನಿರ್ವಹಿಸುವ ಕಾರಣ ಕೊಂಚ ಅದೃಷ್ಟ ಭಾರತದ ಪಾಲಿಗೆ ಇರಬಹುದೆಂಬುದು ಈ ಬಾರಿ ಅಭಿಮಾನಿಗಳ ನಂಬಿಕೆ.

ರಿಚರ್ಡ್‌ ಕೆಟಲ್‌ಬರೋ ಕಾರ್ಯನಿರ್ವಹಿಸಿದ ಎಲ್ಲ ಮಹತ್ವದ ಪಂದ್ಯದಲ್ಲಿಯೂ ಭಾರತ ತಂಡ ಸೋಲುಕಂಡಿತ್ತು. ಕಳೆದ ಬಾರಿಯ ಏಕದಿನ ವಿಶ್ವಕಪ್​ ಫೈನಲ್​ ಪಂದ್ಯದಲ್ಲಿ ಅವರು ಅಂಪೈರ್​ ಆದಾಗ ಅಭಿಮಾನಿಗಳು ಭಾರತಕ್ಕೆ ಸೋಲು ಖಚಿತ ಎಂದು ಹೇಳಿದ್ದರು. ಈ ಭವಿಷ್ಯ ಕೂಡ ನಿಜವಾಗಿತ್ತು. ಭಾರತ ಫೈನಲ್​ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋಲು ಕಂಡಿತ್ತು. ಲೀಗ್​ನಿಂದ ಸೆಮಿಫೈನಲ್​ ತನಕ ಆಡಿದ ಎಲ್ಲ ಪಂದ್ಯಗಳಲ್ಲಿಯೂ ಭಾರತ ಸಾಧಿಸಿದ ಗೆಲುವು ಫೈನಲ್​ನಲ್ಲಿ ಸೋಲು ಕಾಣುವ ಮೂಲಕ ನೀರಲ್ಲಿ ಹೋಮವಾಗಿತ್ತು. ಇದೀಗ ಮತ್ತೆ ಭಾರದ ಪಾಲಿಗೆ ಈ ಅಂಪೈರ್​ ಅಡ್ಡಗಾಲಿಕ್ಕಲಿದ್ದಾರಾ ಎಂದು ಕಾದು ನೋಡಬೇಕಿದೆ.

ಇದನ್ನೂ ಓದಿ IND vs SA Final: ಇಂದು ಫೈನಲ್​ ಪಂದ್ಯ ನಡೆಯುವುದೇ ಅನುಮಾನ; ಕಾರಣವೇನು?

ಎಲ್ಲ ಪಂದ್ಯದಲ್ಲಿಯೂ ಸೋಲು


2014 ರಿಂದ ರಿಚರ್ಡ್‌ ಕೆಟಲ್‌ಬರೋ ಅಂಪೈರಿಂಗ್‌ ಮಾಡಿದ ಎಲ್ಲ ಪ್ರಮುಖ ಪಂದ್ಯಗಳಲ್ಲಿಯೂ ಟೀಮ್‌ ಇಂಡಿಯಾ ಸೋಲು ಕಂಡಿದೆ. 2014ರ ಟಿ20 ವಿಶ್ವ ಕಪ್ ಫೈನಲ್, 2015ರ ಏಕದಿನ ವಿಶ್ವ ಕಪ್ ಸೆಮಿಫೈನಲ್, 2016ರ ಟಿ20 ವಿಶ್ವ ಕಪ್ ಸೆಮಿಫೈನಲ್, 2017ರ ಚಾಂಪಿಯನ್ಸ್ ಟ್ರೋಫಿ ಫೈನಲ್, 2019ರ ಏಕದಿನ ವಿಶ್ವ ಕಪ್ ಸೆಮಿಫೈನಲ್, 2021ರ ಟೆಸ್ಟ್ ವಿಶ್ವ ಚಾಂಪಿಯನ್‌ಶಿಪ್ ಫೈನಲ್, 2023ರ ಏಕದಿನ ವಿಶ್ವಕಪ್​ ಫೈನಲ್​ ಪಂದ್ಯದಲ್ಲಿ ಭಾರತ ಸೋತಿತ್ತು.

ಅಂಪೈರ್​ಗಳ ಪಟ್ಟಿ​


ಅಂಪೈರ್​: ಕ್ರಿಸ್‌ ಗಫಾನಿ, ರಿಚರ್ಡ್‌ ಇಲ್ಲಿಂಗ್‌ವರ್ತ್‌

ರೆಫ್ರಿ: ರಿಚೀ ರಿಚರ್ಡ್‌ಸನ್‌

ಥರ್ಡ್‌ ಅಂಪಾಯರ್‌: ರಿಚರ್ಡ್‌ ಕೆಟಲ್‌ಬರೊ

ಫೋರ್ತ್‌ ಅಂಪಾಯರ್‌: ರಾಡ್‌ ಟ್ಯುಕರ್‌

Continue Reading

ಕ್ರೀಡೆ

IND vs SA Final: ಇಂದು ಫೈನಲ್​ ಪಂದ್ಯ ನಡೆಯುವುದೇ ಅನುಮಾನ; ಕಾರಣವೇನು?

IND vs SA Final: ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಒಟ್ಟು 6 ಪಂದ್ಯಗಳಲ್ಲಿ ಆಡಿದ್ದು, ಭಾರತ 4 ಪಂದ್ಯ ಗೆದ್ದಿದೆ. 2 ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಗೆಲುವು ಕಂಡಿದೆ. 2022ರಲ್ಲಿ ನಡೆದಿದ್ದ ವಿಶ್ವಕಪ್​ ಟೂರ್ನಿಯಲ್ಲಿ ರೋಹಿತ್​ ಪಡೆ ದಕ್ಷಿಣ ಆಫ್ರಿಕಾ ವಿರುದ್ಧ 5 ವಿಕೆಟ್​ ಅಂತರದ ಸೋಲು ಕಂಡಿತ್ತು.

VISTARANEWS.COM


on

IND vs SA Final
Koo

ಬಾರ್ಬಡೋಸ್​: ಹಾಲಿ ಆವೃತ್ತಿಯ ಟಿ20 ವಿಶ್ವಕಪ್​ ಟೂರ್ನಿಯ(IND vs SA Final) ಲೀಗ್​, ಸೂಪರ್-8 ಮತ್ತು ನಾಕೌಟ್​ ಪಂದ್ಯಗಳಿಗೆ ಮಳೆಯಿಂದ ಅಡಚಣೆ ಉಂಟಾಗಿತ್ತು. ಇದೀಗ ಇಂದು ನಡೆಯುವ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಣ ಫೈನಲ್​ ಪಂದ್ಯಕ್ಕೂ ಭಾರೀ ಮಳೆ ಭೀತಿ ಎದುರಾಗಿದೆ.

ಫೈನಲ್​ ಪಂದ್ಯಕ್ಕೂ ಹವಾಮಾನ ಇಲಾಖೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ. ಶೇ.70ರಷ್ಟು ಮಳೆಯಾಗಲಿದೆ ಎಂದು ತನ್ನ ವರದಿಯಲ್ಲಿ ತಿಳಿಸಿದೆ. ಒಂದೊಮ್ಮೆ ನಿಗದಿತ ದಿನ ಪಂದ್ಯ ನಡೆಯದೇ ಇದ್ದರೆ, ಮೀಸಲು ದಿನಕ್ಕೆ ಮುಂದುವರಿಯಲಿದೆ. ಸೂಪರ್​ 8 ಹಂತದಲ್ಲಿ ಮತ್ತು ಸೆಮಿಫೈನಲ್​ ಪಂದ್ಯ ಮಳೆಯಿಂದ ಮೀಸಲು ದಿನವೂ ಫಲಿತಾಂಶ ಕಾಣದಿದ್ದರೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಪಡೆದ ಸ್ಥಾನ ಮುಂದಿನ ಹಂತಕ್ಕೇರುತ್ತದೆ. ಆದರೆ ಫೈನಲ್​ ಪಂದ್ಯಕ್ಕೆ ಈ ನಿಯಮ ಅನ್ವಯವಾಗುವುದಿಲ್ಲ.

ಮುಖಾಮುಖಿ


ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ಇದುವರೆಗೆ 26 ಟಿ20 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ಪೈಕಿ ಭಾರತ 14 ಪಂದ್ಯ ಗೆದ್ದರೆ, ದಕ್ಷಿಣ ಆಫ್ರಿಕಾ 11 ಪಂದ್ಯಗಳನ್ನು ಗೆದ್ದಿದೆ. ಒಂದು ಪಂದ್ಯ ಫಲಿತಾಂಶ ಕಂಡಿಲ್ಲ. ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಒಟ್ಟು 6 ಪಂದ್ಯಗಳಲ್ಲಿ ಆಡಿದ್ದು, ಭಾರತ 4 ಪಂದ್ಯ ಗೆದ್ದಿದೆ. 2 ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಗೆಲುವು ಕಂಡಿದೆ. 2022ರಲ್ಲಿ ನಡೆದಿದ್ದ ವಿಶ್ವಕಪ್​ ಟೂರ್ನಿಯಲ್ಲಿ ರೋಹಿತ್​ ಪಡೆ ದಕ್ಷಿಣ ಆಫ್ರಿಕಾ ವಿರುದ್ಧ 5 ವಿಕೆಟ್​ ಅಂತರದ ಸೋಲು ಕಂಡಿತ್ತು.

ಜಂಟಿ ವಿಜೇತರ ಘೋಷಣೆ


ಒಂದು ವೇಳೆ ಫೈನಲ್‌(T20 World Cup 2024) ಪಂದ್ಯ ಮೀಸಲು ದಿನದಲ್ಲಿಯೂ ನಡೆಯದೇ ಹೋದರೆ, ಆಗ ಎರಡೂ ತಂಡಗಳನ್ನು ಜಂಟಿ ವಿಜೇತರು ಎಂದು ಘೋಷಿಸಲಾಗುತ್ತದೆ. 2002ರಲ್ಲಿ ಶ್ರೀಲಂಕಾದಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯ ಮಳೆಯಿಂದ ಪೂರ್ಣಗೊಳಿಸಲು ಸಾಧ್ಯವಾಗದ ಕಾರಣ ಭಾರತ ಮತ್ತು ಆತಿಥೇಯ ಶ್ರೀಲಂಕಾ ಎರಡು ತಂಡಗಳನ್ನು ಜಂಟಿ ವಿಜೇತರನ್ನಾಗಿ ಘೋಷಣೆ ಮಾಡಲಾಗಿತ್ತು.

ಕೊಲಂಬೊದಲ್ಲಿ ನಡೆದಿದ್ದ ಆ ಫೈನಲ್‌ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್​ ನಡೆಸಿದ ಶ್ರೀಲಂಕಾ 5 ವಿಕೆಟ್​ಗೆ 244 ರನ್ ಗಳಿಸಿತು. ಭಾರತ ವಿಕೆಟ್ ನಷ್ಟವಿಲ್ಲದೆ 14 ರನ್ ಗಳಿದ ವೇಳೆ ಜೋರಾಗಿ ಮಳೆ ಸುರಿಯಿತು. ಮಳೆ ಬಿಡುವು ನೀಡದೆ ಪಂದ್ಯವನ್ನು ಅರ್ಧಕ್ಕೆ ನಿಲ್ಲಿಸಿ ಎರಡೂ ತಂಡಗಳನ್ನು ಜಂಟಿ ವಿಜೇತರು ಎಂದು ಘೋಷಿಸಲಾಯಿತು. ಇದೀಗ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಣ ಪಂದ್ಯ ಕೂಡ ಪೂರ್ಣ ಫಲಿತಾಂಶ ಕಾಣದಿದ್ದರೆ ಇತ್ತಂಡಗಳು ಕೂಡ ಜಂಟಿ ಚಾಂಪಿಯನ್​ ಎನಿಸಿಕೊಳ್ಳಲಿದೆ. ಭಾರತ 2ನೇ ಕಪ್​ ಗೆದ್ದರೆ, ದಕ್ಷಿಣ ಆಫ್ರಿಕಾ ಚೊಚ್ಚಲ ಬಾರಿಗೆ ಚಾಂಪಿಯನ್​ ಪಟ್ಟ ಅಲಂಕರಿಸಿದಂತಾಗುತ್ತದೆ.

Continue Reading

ಪ್ರಮುಖ ಸುದ್ದಿ

Muhammad Usman : ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ ಯುಎಇ ಕ್ರಿಕೆಟಿಗ ಉಸ್ಮಾನ್​

Muhammad Usman: ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಯುಎಇಯನ್ನು ಪ್ರತಿನಿಧಿಸುವ ಮೊದಲು, ಎಡಗೈ ಬ್ಯಾಟರ್​ ಜನವರಿ 2016 ರಲ್ಲಿ ನೆದರ್ಲ್ಯಾಂಡ್ಸ್ ವಿರುದ್ಧ ಪ್ರಥಮ ದರ್ಜೆ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದ್ದರು. ಅವರು ಯುಎಇ ಪರ ಒಟ್ಟು 5 ಪ್ರಥಮ ದರ್ಜೆ ಪಂದ್ಯಗಳನ್ನು ಆಡಿದ್ದಾರೆ.

VISTARANEWS.COM


on

Muhammad Usman
Koo

ಬೆಂಗಳೂರು: ಯುಎಇ ಬ್ಯಾಟರ್​ ಮುಹಮ್ಮದ್ ಉಸ್ಮಾನ್ (Muhammad Usman) ಶುಕ್ರವಾರ (ಜೂನ್ 28) ಅಂತರರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಹೇಳಿದ್ದಾರೆ. ಆ ತಂಡದ ಮಧ್ಯಮ ಕ್ರಮಾಂಕದ ಬ್ಯಾಟರ್​ ಅಗಿದ್ದ ಅವರು ಒಟ್ಟು 85 ಅಂತರರಾಷ್ಟ್ರೀಯ ಪಂದ್ಯಗಳಲ್ಲಿ ಪಾಲ್ಗೊಂಡಿದ್ದರು. ಪಾಕಿಸ್ತಾನದ ಲಾಹೋರ್​ನಲ್ಲಿ ಜನಿಸಿದ 38ರ ಹರೆಯದ ಉಸ್ಮಾನ್​ 2016ರಿಂದ 2022ರವರೆಗೆ ಯುಎಇ ಪರ 38 ಏಕದಿನ ಮತ್ತು 47 ಟಿ20 ಪಂದ್ಯಗಳನ್ನು ಆಡಿದ್ದಾರೆ. ಅವರು ಫೆಬ್ರವರಿ 2016 ರಲ್ಲಿ ನೆದರ್ಲ್ಯಾಂಡ್ಸ್ ವಿರುದ್ಧದ ಟಿ 20 ಐ ಮೂಲಕ ಯುಎಇ ಪರ ಪಾದಾರ್ಪಣೆ ಮಾಡಿದರು. ಅದೇ ವರ್ಷದ ಆಗಸ್ಟ್​​ನಲ್ಲಿ ಮುಹಮ್ಮದ್ ಉಸ್ಮಾನ್ ಎಡಿನ್​ಬರ್ಗ್​​ನಲ್ಲಿ ಸ್ಕಾಟ್ಲೆಂಡ್ ವಿರುದ್ಧದ ಪಂದ್ಯದ ಮೂಲಕ ಏಕದಿನ ಕ್ರಿಕೆಟ್​ಗೆ ಪದಾ ರ್ಪಣೆ ಮಾಡಿದರು.

ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಯುಎಇಯನ್ನು ಪ್ರತಿನಿಧಿಸುವ ಮೊದಲು, ಎಡಗೈ ಬ್ಯಾಟರ್​ ಜನವರಿ 2016 ರಲ್ಲಿ ನೆದರ್ಲ್ಯಾಂಡ್ಸ್ ವಿರುದ್ಧ ಪ್ರಥಮ ದರ್ಜೆ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದ್ದರು. ಅವರು ಯುಎಇ ಪರ ಒಟ್ಟು 5 ಪ್ರಥಮ ದರ್ಜೆ ಪಂದ್ಯಗಳನ್ನು ಆಡಿದ್ದಾರೆ.

ಮೊಹಮ್ಮದ್ ಉಸ್ಮಾನ್ 38 ಏಕದಿನ ಪಂದ್ಯಗಳಲ್ಲಿ 31.50 ಸರಾಸರಿಯಲ್ಲಿ 1008 ರನ್ ಗಳಿಸಿದ್ದಾರೆ. ಅವರು 50 ಓವರ್​ಗಳ ಸ್ವರೂಪದಲ್ಲಿ ಒಂದು ಶತಕ ಮತ್ತು ಐದು ಅರ್ಧಶತಕಗಳನ್ನು ಗಳಿಸಿದ್ದಾರೆ. ಟಿ20ಐನಲ್ಲಿ ದಕ್ಷಿಣ ಆಫ್ರಿಕಾ 47 ಪಂದ್ಯಗಳಲ್ಲಿ ಮೂರು ಅರ್ಧಶತಕಗಳ ಸಹಾಯದಿಂದ 891 ರನ್ ಗಳಿಸಿದೆ.

ಅವರು 2016 ರ ಏಷ್ಯಾ ಕಪ್​ಗಾಗಿ ಯುಎಇ ತಂಡದ ಭಾಗವಾಗಿದ್ದರು. ಅವರು 7 ಪಂದ್ಯಗಳಲ್ಲಿ 176 ರನ್ ಗಳಿಸಿದ ನಂತರ ಯುಎಇಯ ಅತಿ ಹೆಚ್ಚು ರನ್ ಗಳಿಸಿದ ಮತ್ತು ಒಟ್ಟಾರೆ ಮೂರನೇ ಅತಿ ಹೆಚ್ಚು ರನ್ ಗಳಿಸಿದ ಆಟಗಾರನಾಗಿ ಪಂದ್ಯಾವಳಿಯನ್ನು ಮುಗಿಸಿದ್ದರು. 5 ಪ್ರಥಮ ದರ್ಜೆ ಪಂದ್ಯಗಳಲ್ಲಿ, ಅನುಭವಿ ಬ್ಯಾಟ್ಸ್ಮನ್ ಶತಕದ ಸಹಾಯದಿಂದ 217 ರನ್ ಗಳಿಸಿದ್ದಾರೆ. 2022ರ ಫೆಬ್ರವರಿಯಲ್ಲಿ ಒಮಾನ್ ಹಾಗೂ ನೇಪಾಳ ವಿರುದ್ಧ ಏಕದಿನ ಹಾಗೂ ಟಿ20ಐನಲ್ಲಿ ಕೊನೆಯ ಬಾರಿ ಆಡಿದ್ದರು.

ಇದು ನಂಬಲಾಗದ ಪ್ರಯಾಣ: ಮುಹಮ್ಮದ್ ಉಸ್ಮಾನ್

ಮುಹಮ್ಮದ್ ಉಸ್ಮಾನ್ ಅವರು ಅಂತರರಾಷ್ಟ್ರೀಯ ಕ್ರಿಕೆಟ್​​ನಲ್ಲಿ ತಮ್ಮ ಪ್ರಯಾಣವನ್ನು ನಂಬಲಾಗದ ಎಂದು ಕರೆದರು ಮತ್ತು ಅವರ ಕ್ರಿಕೆಟ್ ಪ್ರಯಾಣದಲ್ಲಿ ಪಾತ್ರವಹಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು. ಅವರು ತಮ್ಮ ಆಟದ ವೃತ್ತಿಜೀವನದ ಅಂತ್ಯದ ನಂತರವೂ ಆಟದೊಂದಿಗೆ ಸಂಬಂಧ ಹೊಂದುವ ಬಯಕೆಯನ್ನು ವ್ಯಕ್ತಪಡಿಸಿದರು.

ಇದನ್ನೂ ಓದಿ: Virat Kohli : ಫಾರ್ಮ್​ ಕಳೆದುಕೊಂಡಿರುವ ವಿರಾಟ್​ ಕೊಹ್ಲಿಯ ಬೆಂಬಲಕ್ಕೆ ನಿಂತ ಗಂಗೂಲಿ

ಯುಎಇ ಕ್ರಿಕೆಟ್ ತಂಡ ಮತ್ತು ಕ್ರಿಕೆಟ್ ಮಂಡಳಿಯೊಂದಿಗೆ ಇದು ನಂಬಲಾಗದ ಪ್ರಯಾಣವಾಗಿದೆ. ನನ್ನ ತಂಡದ ಸದಸ್ಯರು, ತರಬೇತುದಾರರು ಮತ್ತು ಇತರ ಸಹಾಯಕ ಸಿಬ್ಬಂದಿ ಸೇರಿದಂತೆ ನನ್ನ ಪ್ರಯಾಣದಲ್ಲಿ ಪಾತ್ರ ವಹಿಸಿದ ಎಲ್ಲರಿಗೂ ನಾನು ಧನ್ಯವಾದಗಳನ್ನು ಅರ್ಪಿಸುತ್ತೇನೆ. 85 ಅಂತಾರಾಷ್ಟ್ರೀಯ ಪಂದ್ಯಗಳಿಗೆ ಯುಎಇಯನ್ನು ಪ್ರತಿನಿಧಿಸುವ ಅವಕಾಶ ಸಿಕ್ಕಿದ್ದು ನನ್ನ ಅದೃಷ್ಟ ಮತ್ತು ಹೆಮ್ಮೆ ಎನಿಸುತ್ತದೆ ಎಂದುಹೇಳಿದರು.

ನಾನು ಕ್ರೀಡೆಯೊಂದಿಗೆ ಬೇರೆ ಸಂಬಂಧ ಹೊಂದಲು ಬಯಸುವುದರಿಂದ ನನ್ನ ಜೀವನದ ಮುಂದಿನ ಅಧ್ಯಾಯವನ್ನು ಎದುರು ನೋಡುತ್ತಿದ್ದೇನೆ. ಯುಎಇ ತಂಡ ಮತ್ತು ಆಟಗಾರರಿಗೆ ದೇಶದಲ್ಲಿ ಆಟಕ್ಕೆ ಬಹಳ ರೋಮಾಂಚನಕಾರಿ ಸಮಯದಲ್ಲಿ ನಾನು ಶುಭ ಹಾರೈಸಲು ಬಯಸುತ್ತೇನೆ ಎಂದು ಮುಹಮ್ಮದ್ ಉಸ್ಮಾನ್ ಹೇಳಿದರು.

Continue Reading
Advertisement
Isha Ambani
ವಾಣಿಜ್ಯ8 mins ago

Isha Ambani: ತಾನು ಅವಳಿ ಮಕ್ಕಳಿಗೆ ತಾಯಿಯಾಗಿದ್ದು ಐವಿಎಫ್ ಮೂಲಕ ಎಂದ ಇಶಾ ಅಂಬಾನಿ

Road Accident
ದೇಶ14 mins ago

Road Accident: ಭೀಕರ ರಸ್ತೆ ಅಪಘಾತ; 2 ಕಾರು ಮುಖಾಮುಖಿ ಡಿಕ್ಕಿಯಾಗಿ 6 ಮಂದಿ ಸಾವು

IND vs SA Final
ಕ್ರಿಕೆಟ್26 mins ago

IND vs SA Final: ಭಾರತ ತಂಡ ವಿಶ್ವಕಪ್​ ಗೆಲ್ಲಲಿ; ಪ್ರಯಾಗ್ ರಾಜ್​ನಲ್ಲಿ ಅಭಿಮಾನಿಗಳಿಂದ ವಿಶೇಷ ಪೂಜೆ

Job Alert
ಉದ್ಯೋಗ56 mins ago

Job Alert: ಗಮನಿಸಿ: ಗ್ರಾಮೀಣ ಬ್ಯಾಂಕ್‌ನ 9,995 ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ; ನಾಳೆ ಕೊನೆಯ ದಿನ

Kannada New Movie Kenda in premier In world wide
ಸ್ಯಾಂಡಲ್ ವುಡ್1 hour ago

Kannada New Movie: ವಿಶ್ವಮಟ್ಟದಲ್ಲಿ ದಾಖಲೆ ಬರೆದ ಕನ್ನಡದ `ಕೆಂಡ’!

Orange Peel Benefits
ಆರೋಗ್ಯ1 hour ago

Orange Peel Benefits: ಕಿತ್ತಳೆ ಸಿಪ್ಪೆ ಎಸೆಯಬೇಡಿ; ಹೃದಯದ ಆರೋಗ್ಯಕ್ಕೆ ಇದು ಒಳ್ಳೆಯದು!

Shivamogga News
ಕರ್ನಾಟಕ1 hour ago

Shivamogga News: ಶಿವಮೊಗ್ಗದಲ್ಲಿ ಆಂಬುಲೆನ್ಸ್-ಬೈಕ್‌ ಡಿಕ್ಕಿ; ಸ್ಥಳದಲ್ಲೇ ಮೂವರ ಸಾವು

IND vs SA Final
ಕ್ರೀಡೆ1 hour ago

IND vs SA Final: ಫೈನಲ್​ ಪಂದ್ಯಕ್ಕೂ ಮುನ್ನ ಭಾರತ ತಂಡಕ್ಕೆ ನಡುಕ ಹುಟ್ಟಿಸಿದ ಅಂಪೈರ್​!

Kalki 2898 AD box office day 2 prediction Prabhas
ಟಾಲಿವುಡ್1 hour ago

Kalki 2898 AD: ಎರಡನೇ ದಿನವೂ ಒಳ್ಳೆಯ ಗಳಿಕೆ ಕಂಡ  ‘ಕಲ್ಕಿ 2898 ಎಡಿ’ ಸಿನಿಮಾ!

US Presidential Election
ವಿದೇಶ1 hour ago

US Presidential Election: ಬಹಿರಂಗ ಚರ್ಚೆ ಬಳಿಕ ಅಭ್ಯರ್ಥಿಯ ಬದಲಾವಣೆ? ಬೈಡೆನ್‌ ಬದಲಿಗೆ ಮಿಶೆಲ್‌ ಒಬಾಮಾ ಕಣಕ್ಕೆ?

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ16 hours ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ22 hours ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ2 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು2 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ2 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ5 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ1 week ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ1 week ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ1 week ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

ಟ್ರೆಂಡಿಂಗ್‌