Gautam Gambhir : ನನ್ನ ಎಲ್ಲ ಬೇಡಿಕೆಗಳಿಗೆ ಬಿಸಿಸಿಐ ಸಮ್ಮತಿಸಿದೆ; ಗೌತಮ್ ಗಂಭೀರ್​ - Vistara News

ಕ್ರೀಡೆ

Gautam Gambhir : ನನ್ನ ಎಲ್ಲ ಬೇಡಿಕೆಗಳಿಗೆ ಬಿಸಿಸಿಐ ಸಮ್ಮತಿಸಿದೆ; ಗೌತಮ್ ಗಂಭೀರ್​

Gautam Gambhir :

VISTARANEWS.COM


on

Gautam Gambhir
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಮುಂಬರುವ ಶ್ರೀಲಂಕಾ ಪ್ರವಾಸಕ್ಕೆ ಅಭಿಷೇಕ್ ನಾಯರ್ ಮತ್ತು ರಯಾನ್ ಟೆನ್ ಡೊಸ್ಚಾಟ್ ಅವರನ್ನು ಸಹಾಯಕ ತರಬೇತುದಾರರಾಗಿ ನೇಮಕ ಮಾಡಲಾಗಿದೆ ಎಂದು ಹೊಸದಾಗಿ ಆಯ್ಕೆಯಾಗಿರುವ ಮುಖ್ಯ ಕೋಚ್ ಗೌತಮ್ ಗಂಭೀರ್ (Gautam Gambhir) ಹೇಳಿದ್ದಾರೆ. ಈ ತಿಂಗಳ ಆರಂಭದಲ್ಲಿ ಜವಾಬ್ದಾರಿಯನ್ನು ವಹಿಸಿಕೊಂಡ ನಂತರ ಗಂಭೀರ್ ಮುಂಬೈನಲ್ಲಿ ನಡೆಸಿದ ಮೊದಲ ಪತ್ರಿಕಾಗೋಷ್ಠಿಯಲ್ಲಿ ಅವರು ಈ ಮಾಹಿತಿ ನೀಡಿದ್ದಾರೆ. ಈ ಮೂಲಕ ಗಂಭೀರ್ ಬೇಡಿಕೆಗೆಳನ್ನು ಬಿಸಿಸಿಐ ತಿರಸ್ಕರಿಸಿದೆ ಎಂಬ ಆರೋಪಗಳನ್ನು ತಳ್ಳಿ ಹಾಕಿದರು. ಎಲ್ಲದಕ್ಕೂ ಒಪ್ಪಿದೆ ಎಂಬುದನ್ನು ಒತ್ತಿ ಹೇಳಿದರು. ಶ್ರೀಲಂಕಾ ಪ್ರವಾಸಕ್ಕೆ ಹೊರಡಲಿರುವ ಹಿನ್ನೆಲೆಯಲ್ಲಿ ಆಯ್ಕೆಗಾರ ಅಜಿತ್ ಅಗರ್ಕರ್ ಜತೆ ಮಾಧ್ಯಮಗೋಷ್ಠಿ ನಡೆಸಿದರು.

ಐಪಿಎಲ್ 2024 ರಲ್ಲಿ ಕೋಲ್ಕತಾ ನೈಟ್ ರೈಡರ್ಸ್​​ನ ಯಶಸ್ವಿ ಅಭಿಯಾನದ ಸಮಯದಲ್ಲಿ ಈ ಮೂವರು ಇತ್ತೀಚೆಗೆ ಒಟ್ಟಿಗೆ ಕೆಲಸ ಮಾಡಿದ್ದರಿಂದ ನಾಯರ್ ಮತ್ತು ಟೆನ್ ಡೊಸ್ಚಾಟ್ ಅವರ ನೇಮಕವು ಅವರೆಲ್ಲರ ಪುನರ್ಮಿಲ ಎಂದೇ ಕರೆಯಬಹುದು. ಅವರ ಸಹಯೋಗದಿಂದ ಕೆಕೆಆರ್ ಒಂದು ದಶಕ ಬಳಿಕ ತಮ್ಮ ಮೊದಲ ಟ್ರೊಫಿ ಗೆದ್ದಿತು. ಈ ಸಾಧನೆಯು ಅವರೆಲ್ಲರವನ್ನೂ ರಾಷ್ಟ್ರೀಯ ಸೆಟಪ್​​ಗೆ ಕರೆತರುವ ಗಂಭೀರ್ ಅವರ ನಿರ್ಧಾರದ ಮೇಲೆ ಪ್ರಭಾವ ಬೀರಿತು.

ರಯಾನ್ (ಟೆನ್ ಡೊಸ್ಚಾಟೆ) ಮತ್ತು ಅಭಿಷೇಕ್ (ನಾಯರ್) ಅವರಂತಹ ಜನರು ನನ್ನೊಂದಿಗೆ ಕೆಲಸ ಮಾಡಿದವರು. ನಾನು ಆಟಗಾರರಿಂದ ಉತ್ತಮ ಪ್ರತಿಕ್ರಿಯೆಯನ್ನು ಪಡೆದಿದ್ದೇನೆ. ಟಿ.ದಿಲೀಪ್ ಫೀಲ್ಡಿಂಗ್ ಕೋಚ್ ಆಗಿ ಮುಂದುವರಿಯಲಿದ್ದಾರೆ. ಶ್ರೀಲಂಕಾ ಪ್ರವಾಸಕ್ಕೆ ಸಾಯಿರಾಜ್ ಬಹುತುಲೆ ಅವರನ್ನು ಮಧ್ಯಂತರ ಬೌಲಿಂಗ್ ಕೋಚ್ ಆಗಿ ನೇಮಿಸಲಾಗಿದೆ, “ಎಂದು ಗಂಭೀರ್ ಹೇಳಿದರು.

ಬಿಸಿಸಿಐ ಬೆಂಬಲಕ್ಕೆ ಸಮ್ಮತಿ

2024ರ ಟಿ 20 ವಿಶ್ವಕಪ್​​ನಲ್ಲಿ ಭಾರತದ ವಿಜಯದ ನಂತರ ದ್ರಾವಿಡ್ ಅವರಿಂದ ಅಧಿಕಾರ ವಹಿಸಿಕೊಂಡ ಗಂಭೀರ್, ಬಿಸಿಸಿಐ ಬೆಂಬಲದ ಬಗ್ಗೆ ತೃಪ್ತಿ ವ್ಯಕ್ತಪಡಿಸಿದ್ದಾರೆ. “ನಿಜವಾಗಿಯೂ ಸಂತೋಷವಾಗಿದೆ. ಬಿಸಿಸಿಐ. ನಾನು ಕೇಳಿದ ಹೆಚ್ಚಿನ ಬೇಡಿಕೆಗಗಳಿಗೆ ಒಪ್ಪಿಕೊಂಡಿದೆ. ನಾನು ಈ ವಿಷಯವನ್ನು ಮುಂದುವರಿಸುತ್ತಲೇ ಇರುತ್ತೇನೆ. ಸಹಾಯಕ ಸಿಬ್ಬಂದಿಯ ನೆರವು ಹಾಗೆಯೇ ಉಳಿಯುತ್ತದೆ. ಉಳಿದ ಸಿಬ್ಬಂದಿಯನ್ನು ಶ್ರೀಲಂಕಾ ಪ್ರವಾಸದ ನಂತರ ಅಂತಿಮಗೊಳಿಸಲಾಗುವುದು, “ಎಂದು ಗಂಭೀರ್ ಹೇಳಿದ್ದಾರೆ.

ಇದನ್ನೂ ಓದಿ: Olympics 2024 : ತಮ್ಮ ಲಗೇಜ್​ಗಳನ್ನೇ ಮರೆತು ಪ್ಯಾರಿಸ್ ತಲುಪಿದ ಆಸ್ಟ್ರೇಲಿಯಾದ ಮಹಿಳೆಯರ ಫುಟ್ಬಾಲ್​ ತಂಡ

ಜುಲೈ 27 ರಿಂದ ಪ್ರಾರಂಭವಾಗುವ ಮೂರು ಟಿ 20 ಮತ್ತು ಮೂರು ಏಕದಿನ ಪಂದ್ಯಗಳು ಸೇರಿದಂತೆ ಶ್ರೀಲಂಕಾ ಪ್ರವಾಸದೊಂದಿಗೆ ಹೊಸ ತಂಡ ತಕ್ಷಣದ ಸವಾಲನ್ನು ಎದುರಿಸುತ್ತಿದೆ. ಈ ಸರಣಿಯೊಂದಿಗೆ ಬಾಂಗ್ಲಾದೇಶ ಮತ್ತು ನ್ಯೂಜಿಲೆಂಡ್ ವಿರುದ್ಧದ ತವರು ಸರಣಿ ಸೇರಿದಂತೆ ಅಂತಾರಾಷ್ಟ್ರೀಯ ವೇಳಾಪಟ್ಟಿ ಆರಂಭಗೊಳ್ಳುತ್ತದೆ. ನಂತರ ವರ್ಷದ ಕೊನೆಯಲ್ಲಿ ಆಸ್ಟ್ರೇಲಿಯಾದಲ್ಲಿ ಐದು ಪಂದ್ಯಗಳ ಟೆಸ್ಟ್ ಸರಣಿ ನಡೆಯಲಿದೆ.

ದೇಶೀಯ ಕ್ರಿಕೆಟ್ ಅನುಭವದ ಸಂಪತ್ತನ್ನು ಹೊಂದಿರುವ ಭಾರತದ ಮಾಜಿ ಆಲ್ರೌಂಡರ್ ನಾಯರ್ ತಂಡಕ್ಕೆ ಅಮೂಲ್ಯ ನೆರವು ನೀಡಲಿದ್ದಾರೆ. ಈ ಹಿಂದೆ ದಿನೇಶ್ ಕಾರ್ತಿಕ್, ವರುಣ್ ಚಕ್ರವರ್ತಿ ಮತ್ತು ರಿಂಕು ಸಿಂಗ್ ಅವರಂತಹ ಆಟಗಾರನ್ನು ಹುರಿದುಂಬಿಸಿದ ಅನುಭವ ಅವರಿಗೆ ಇದೆ ಅವರ ಕೌಶಲಗಳು ಯುವ ಪ್ರತಿಭೆಗಳನ್ನು ಪೋಷಿಸುವಲ್ಲಿ ನಿರ್ಣಾಯಕವೆಂದು ಹೇಳಲಾಗುತ್ತಿದೆ.

ನೆದರ್ಲ್ಯಾಂಡ್​ಸ್​​ನ ಮಾಜಿ ಆಲ್ರೌಂಡರ್ ಟೆನ್ ಡೊಸ್ಚಾಟ್ ಅವರು ಮೇಜರ್ ಲೀಗ್ ಕ್ರಿಕೆಟ್​​ನಲ್ಲಿ ಲಾಸ್ ಏಂಜಲೀಸ್ ನೈಟ್ ರೈಡರ್ಸ್ ಪರ ಆಡಿದ್ದರು. ನಂತರ ಅಂತಾರರಾಷ್ಟ್ರೀಯ ದೃಷ್ಟಿಕೋನ ಮತ್ತು ಇತ್ತೀಚಿನ ಕೋಚಿಂಗ್ ಅನುಭವ ಹೊಂದಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Gautam Gambhir : ನನ್ನ ಮತ್ತು ಕೊಹ್ಲಿಯ ನಡುವೆ ಗೌರವಯುತ ಸಂಬಂಧವಿದೆ; ಗೌತಮ್ ಗಂಭೀರ್​

Gautam Gambhir: ಕೊಹ್ಲಿ ಅವರೊಂದಿಗಿನ ನನ್ನ ಸಂಬಂಧವು ಮಾಧ್ಯಮಗಳ ಟಿಆರ್​ಪಿಗಾಗಿ ಅಲ್ಲ ಎಂದು ಗಂಭೀರ್ ಸ್ಪಷ್ಟಪಡಿಸಿದ್ದಾರೆ. ನಾಣು ಕೊಹ್ಲಿಯೊಂದಿಗೆ ಅತ್ಯುತ್ತಮ ಸಂಬಂಧವನ್ನು ಹೊಂದಿದ್ದೇನೆ. ಭಾರತದ ಮಾಜಿ ನಾಯಕ ಸಂಪೂರ್ಣ ವೃತ್ತಿಪರ ಮತ್ತು ವಿಶ್ವ ದರ್ಜೆಯ ಕ್ರೀಡಾಪಟು. ಅವರು ತಂಡದ ಪ್ರಮುಖ ಭಾಗವಾಗಿರುವುದರಿಂದ ಉತ್ತಮ ನಿರೀಕ್ಷೆಯಿದೆ ಎಂದು ಅವರು ಹೇಳಿದರು.

VISTARANEWS.COM


on

Gautam Gambhir
Koo

ಬೆಂಗಳೂರು: ಟೀಮ್ ಇಂಡಿಯಾದ ನೂತನ ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್ (Gautam Gambhir) ನೇಮಕವಾದ ದಿನದಿಂದಲೂ ವಿರಾಟ್ ಕೊಹ್ಲಿ ಮತ್ತು ಅವರ ನಡುವಿನ ಸಂಬಂಧ ಚರ್ಚೆಯ ವಿಚಾರವಾಗಿದೆ. ಕೆಕೆಆರ್ ನಾಯಕನಾಗಿದ್ದಾಗ ಗಂಭೀರ್​, ಕೊಹ್ಲಿ ಅವರೊಂದಿಗೆ ತೀವ್ರ ವಾಗ್ವಾದ ನಡೆಸಿದ್ದರು. , ಐಪಿಎಲ್ 2023 ರಲ್ಲಿ ಇಬ್ಬರು ಕ್ರಿಕೆಟಿಗರ ನಡುವಿನ ಜಗಳ ಉಂಟಾಗಿತ್ತು. ಹೀಗಾಗಿ ಕೊಹ್ಲಿಗೆ ಕೋಚ್ ಆದ ಮೇಲೆ ಅವರಿಬ್ಬರ ಜಗಳ ಮುಂದುವರಿಯಬಹುದು ಎಂದು ಹೇಳಲಾಗಿತ್ತು

ಐಪಿಎಲ್ 2024 ರಲ್ಲಿಯೇ ಸನ್ನಿವೇಶವು ಬದಲಾಗಿತ್ತು. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕೆಕೆಆರ್ ಮತ್ತು ಆರ್​ಸಿಬಿ ನಡುವಿನ ಪಂದ್ಯದ ವೇಳೆ ಕೊಹ್ಲಿ ಮತ್ತು ಗಂಭೀರ್ ಇಬ್ಬರೂ ಪರಸ್ಪರ ತಬ್ಬಿಕೊಂಡಿದ್ದರು. ಆದಾಗ್ಯೂ ಭಾರತೀಯ ಕ್ರಿಕೆಟ್​​ನ ಸುಧಾರಣೆಗಾಗಿ ಒಟ್ಟಾಗಿ ಕೆಲಸ ಮಾಡಬಹುದೇ ಎಂಬುದು ದೊಡ್ಡ ಪ್ರಶ್ನೆಯೇ ಆಗಿತ್ತು. ಸೋಮವಾರ ಶ್ರೀಲಂಕಾ ಪ್ರವಾಸಕ್ಕೆ ಹೊರಡುವ ಮೊದಲು ಪತ್ರಿಕಾಗೋಷ್ಠಿ ನಡೆಸಿದ ಗಂಭೀರ್​ ಈ ಎಲ್ಲ ಪ್ರಶ್ನೆಗಳಿಗೆ ಉತ್ತರ ಹೇಳಿದ್ದಾರೆ.

ಇದನ್ನೂ ಓದಿ: Gautam Gambhir : ವಿರಾಟ್​ ಕೊಹ್ಲಿ, ರೋಹಿತ್​ ಶರ್ಮಾ 2027ರ ವಿಶ್ವ ಕಪ್​ ತನಕ ಆಡುತ್ತಾರೆ ಎಂದ ಗಂಭೀರ್​

ಕೊಹ್ಲಿ ಅವರೊಂದಿಗಿನ ನನ್ನ ಸಂಬಂಧವು ಮಾಧ್ಯಮಗಳ ಟಿಆರ್​ಪಿಗಾಗಿ ಅಲ್ಲ ಎಂದು ಗಂಭೀರ್ ಸ್ಪಷ್ಟಪಡಿಸಿದ್ದಾರೆ. ನಾಣು ಕೊಹ್ಲಿಯೊಂದಿಗೆ ಅತ್ಯುತ್ತಮ ಸಂಬಂಧವನ್ನು ಹೊಂದಿದ್ದೇನೆ. ಭಾರತದ ಮಾಜಿ ನಾಯಕ ಸಂಪೂರ್ಣ ವೃತ್ತಿಪರ ಮತ್ತು ವಿಶ್ವ ದರ್ಜೆಯ ಕ್ರೀಡಾಪಟು. ಅವರು ತಂಡದ ಪ್ರಮುಖ ಭಾಗವಾಗಿರುವುದರಿಂದ ಉತ್ತಮ ನಿರೀಕ್ಷೆಯಿದೆ ಎಂದು ಅವರು ಹೇಳಿದರು.

ವಿರಾಟ್ ಕೊಹ್ಲಿ ಅವರೊಂದಿಗೆ ಯಾವ ರೀತಿಯ ಸಂಬಂಧವಿದೆ ಎಂಬುದು ಟಿಆರ್​ಪಿ ವಿಷಯವಲ್ಲ. ನಮ್ಮಬ್ಬರ ಸಂಬಂಧ ವಿಷಯ ಬಹಿರಂಗವೂ ಅಲ್ಲ. ಇದು ಇಬ್ಬರು ಪ್ರಬುದ್ಧ ವ್ಯಕ್ತಿಗಳ ನಡುವಿನ ಸಂಬಂಧ. ಮೈದಾನದಲ್ಲಿ, ನಾವು ಒಂದೇ ರೀತಿಯಾಗಿ ಇರಬೇಕು ಎಂದು ನನಗೆ ಖಾತ್ರಿಯಿದೆ. ನಾನು ಅವರೊಂದಿಗೆ ಉತ್ತಮ ಸಂಬಂಧವನ್ನು ಹಂಚಿಕೊಳ್ಳುತ್ತೇನೆ. ನಾನು ಅವರೊಂದಿಗೆ ಸಾಕಷ್ಟು ಚಾಟ್ ಮಾಡಿದ್ದೇನೆ. ಕೆಲವೊಮ್ಮೆ. ನಾವು ಸಂದೇಶಗಳನ್ನು ಹಂಚಿಕೊಂಡಿದ್ದೇವೆ. ನಾವಿಬ್ಬರು ಏನು ಚರ್ಚಿಸಿದ್ದೇವೆ ಎಂಬುದು ಮುಖ್ಯವಲ್ಲ” ಎಂದು ಗಂಭೀರ್ ಹೇಳಿದ್ದಾರೆ.

“ಏಕೆಂದರೆ ನಮಗೆ ಫಲಿತಾಂಶ ಬೇಕು. ಅವರು ಸಂಪೂರ್ಣ ವೃತ್ತಿಪರರು. ಅವರು ವಿಶ್ವ ದರ್ಜೆಯ ಆಟಗಾರ. ನಾವು ನಿಜವಾಗಿಯೂ ಒಟ್ಟಿಗೆ ಕೆಲಸ ಮಾಡಬಹುದು ಎಂದು ಆಶಿಸುತ್ತೇವೆ. ಒಟ್ಟಾಗಿ ದೇಶವನ್ನು ಹೆಮ್ಮೆಪಡುವಂತೆ ಮಾಡುವುದು ನಮ್ಮ ಕೆಲಸ. ನಾವು ಒಂದು ಶತಕೋಟಿ ಜನರನ್ನು ಪ್ರತಿನಿಧಿಸುತ್ತಿದ್ದೇವೆ ಎಂದು ಅವರು ಹೇಳಿದರು.

ಜುಲೈ 22 ರಂದು ಭಾರತ ತಂಡ ಶ್ರೀಲಂಕಾಕ್ಕೆ ಪ್ರಯಾಣ ಬೆಳೆಸಿದೆ. ಮೂರು ಪಂದ್ಯಗಳ ಟಿ 20 ಐ ಸರಣಿಯನ್ನು ಮೊದಲು ಆಡಲಿದೆ.

Continue Reading

ಪ್ರಮುಖ ಸುದ್ದಿ

Gautam Gambhir : ವಿರಾಟ್​ ಕೊಹ್ಲಿ, ರೋಹಿತ್​ ಶರ್ಮಾ 2027ರ ವಿಶ್ವ ಕಪ್​ ತನಕ ಆಡುತ್ತಾರೆ ಎಂದ ಗಂಭೀರ್​

Gautam Gambhir : ಇದು ಅತ್ಯಂತ ವೈಯಕ್ತಿಕ ನಿರ್ಧಾರ. ಅವರಲ್ಲಿ ಎಷ್ಟು ಪ್ರಮಾನದ ಕ್ರಿಕೆಟ್ ಸಾಮರ್ಥ್ಯ ಉಳಿದಿದೆ ಎಂದು ನಾನು ಹೇಳಲಾರೆ. ಅಂತಿಮವಾಗಿ, ಅದು ಅವರಿಗೆ ಬಿಟ್ಟದ್ದು. ತಂಡದ ಯಶಸ್ಸಿಗೆ ಅವರು ಎಷ್ಟು ಕೊಡುಗೆ ನೀಡಬಹುದು ಎಂಬುದನ್ನು ನಿರ್ಧರಿಸುವುದು ಆಟಗಾರರಿಗೆ ಬಿಟ್ಟದ್ದು. ಅಂತಿಮವಾಗಿ, ತಂಡವೇ ಮುಖ್ಯ. ವಿರಾಟ್ ಮತ್ತು ರೋಹಿತ್ ಏನು ನೀಡಬಲ್ಲರು ಎಂಬುದನ್ನು ಎಲ್ಲರೂ ನೋಡಿದ್ದಾರೆ ಎಂದು ಗಂಭೀರ್ ಹೇಳಿದ್ದಾರೆ.

VISTARANEWS.COM


on

Gautam Gambhir
Koo

ಹೊಸದಿಲ್ಲಿ, : ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಭಾರತ ಏಕದಿನ ಹಾಗೂ ಟೆಸ್ಟ್ ತಂಡಗಳಲ್ಲಿ ಪ್ರಮುಖ ಪಾತ್ರ ವಹಿಸಲಿದ್ದಾರೆ ಎಂದು ನೂತನ ಮುಖ್ಯ ಕೋಚ್ ಗೌತಮ್ ಗಂಭೀರ್ (Gautam Gambhir) ಹೇಳಿದ್ದಾರೆ. ಚಾಂಪಿಯನ್ಸ್ ಟ್ರೋಫಿ ಮತ್ತು ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟೆಸ್ಟ್ ಸರಣಿಗೆ ರೋಹಿತ್ ಮತ್ತು ಕೊಹ್ಲಿ ತಮ್ಮ ಎಲ್ಲ ಸಿದ್ಧತೆಗಳನ್ನು ನಡೆಸಲಿದ್ದಾರೆ, ಅದೇ ರೀತಿ 2025 ರ ಋತುವಿನ ನಂತರವೂ ಭಾರತ ತಂಡದಲ್ಲಿ ಮುಂದುವರಿಯಲಿದ್ದಾರೆ ಎಂದು ಅವರು ಹೇಳಿದ್ದಾರೆ.

ಶ್ರೀಲಂಕಾ ಪ್ರವಾಸಕ್ಕೆ ಮುಂಚಿತವಾಗಿ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಗಂಭೀರ್, ಟಿ20 ವಿಶ್ವಕಪ್ ಅಥವಾ 50 ಓವರ್​ಗಳ ವಿಶ್ವಕಪ್ ಆಗಿರಲಿ, ದೊಡ್ಡ ವೇದಿಕೆಯಲ್ಲಿ ಯಾವ ಸಾಧನೆ ಮಾಡಬಹುದು ಎಂಬುದನ್ನು ಅವರು ತೋರಿಸಿದ್ದಾರೆ ಎಂದು ನಾನು ಭಾವಿಸುತ್ತೇನೆ. ನಾನು ಸ್ಪಷ್ಟವಾಗಿ ಹೇಳಬಹುದಾದ ಒಂದು ವಿಷಯವೆಂದರೆ ಆ ಇಬ್ಬರಲ್ಲಿ ಸಾಕಷ್ಟು ಕ್ರಿಕೆಟ್ ಉಳಿದಿದೆ. ಅದಕ್ಕಿಂತ ಮುಖ್ಯವಾಗಿ ಕೆಲವೇ ತಿಂಗಳಲ್ಲಿ ಚಾಂಪಿಯನ್ಸ್ ಟ್ರೋಫಿ ಬರುತ್ತಿದೆ. ಆಸ್ಟ್ರೇಲಿಯಾದ ದೊಡ್ಡ ಪ್ರವಾಸವೂ ಮುಂದಿದೆ. ಅವರು ತಮ್ಮ ಫಿಟ್ನೆಸ್ ಕಾಯ್ದುಕೊಳ್ಳಲು ಸಾಧ್ಯವಾದರೆ 2027 ರ ಏಕದಿನ ವಿಶ್ವಕಪ್​​ಗೂ ಇರುತ್ತಾರೆ ಎಂದು ಭಯಸುವೆ ” ಎಂದು ಹೇಳಿದ್ದಾರೆ.

ಇದು ಅತ್ಯಂತ ವೈಯಕ್ತಿಕ ನಿರ್ಧಾರ. ಅವರಲ್ಲಿ ಎಷ್ಟು ಪ್ರಮಾನದ ಕ್ರಿಕೆಟ್ ಸಾಮರ್ಥ್ಯ ಉಳಿದಿದೆ ಎಂದು ನಾನು ಹೇಳಲಾರೆ. ಅಂತಿಮವಾಗಿ, ಅದು ಅವರಿಗೆ ಬಿಟ್ಟದ್ದು. ತಂಡದ ಯಶಸ್ಸಿಗೆ ಅವರು ಎಷ್ಟು ಕೊಡುಗೆ ನೀಡಬಹುದು ಎಂಬುದನ್ನು ನಿರ್ಧರಿಸುವುದು ಆಟಗಾರರಿಗೆ ಬಿಟ್ಟದ್ದು. ಅಂತಿಮವಾಗಿ, ತಂಡವೇ ಮುಖ್ಯ. ವಿರಾಟ್ ಮತ್ತು ರೋಹಿತ್ ಏನು ನೀಡಬಲ್ಲರು ಎಂಬುದನ್ನು ಎಲ್ಲರೂ ನೋಡಿದ್ದಾರೆ. ಅವರು ವಿಶ್ವ ದರ್ಜೆಯ ಆಟಗಾರರು. ತಂಡ ಸಾಧ್ಯವಾದಷ್ಟು ಕಾಲ ಅವರಿಬ್ಬರನ್ನು ಬಯಸುತ್ತದೆ ಎಂದು ಗಂಭೀರ್​ ಹೇಳಿದರು.

ಕಳೆದ ತಿಂಗಳು ಬಾರ್ಬಡೋಸ್​​ನಲ್ಲಿ ನಡೆದ ಟಿ 20 ವಿಶ್ವಕಪ್ ಗೆದ್ದ ನಂತರ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಟಿ 20 ಐ ಕ್ರಿಕೆಟ್​ನಿಂದ ನಿವೃತ್ತರಾದರು. ಇಬ್ಬರೂ ಆಟಗಾರರು ಏಕದಿನ ಮತ್ತು ಟೆಸ್ಟ್ ತಂಡದ ಭಾಗವಾಗಿ ಮುಂದುವರಿಯಲಿದ್ದಾರೆ.

ಟೆಸ್ಟ್​ನಲ್ಲಿ ಪಾರಮ್ಯ

ಕೊಹ್ಲಿ ಮತ್ತು ರೋಹಿತ್ ಇಲ್ಲಿಂದ ಏಕದಿನ ಮತ್ತು ಟೆಸ್ಟ್​​ನಲ್ಲಿ ಭಾರತದ ಪಂದ್ಯಗಳನ್ನು ಆಡುತ್ತಾರೆ ಎಂದು ಗಂಭೀರ್ ಹೇಳಿದರು. ಅವರು ಉನ್ನತ ಮಟ್ಟದಲ್ಲಿ ಕೇವಲ ಎರಡು ಸ್ವರೂಪಗಳನ್ನು ಆಡುತ್ತಿರುವುದರಿಂದ ಅವರು ತಮ್ಮ ಕೆಲಸದ ಹೊರೆಯನ್ನು ನಿರ್ವಹಿಸಬಹುದು ಎಂದು ಹೇಳಿದರು. 2027ರ ಏಕದಿನ ವಿಶ್ವಕಪ್ ವೇಳೆ 37ರ ಹರೆಯದ ರೋಹಿತ್ಗೆ 41 ವರ್ಷ ವಯಸ್ಸಾಗಲಿದ್ದು ಕೊಹ್ಲಿಗೆ 38 ವರ್ಷವಾಗಲಿದೆ.

ಭಾರತ ಏಕದಿನ ಮತ್ತು ಟೆಸ್ಟ್ ನಾಯಕನಾಗಿ ರೋಹಿತ್ ಶರ್ಮಾ ಅವರನ್ನು ಉಳಿಸಿಕೊಂಡಿದ್ದರೆ, ಸೂರ್ಯಕುಮಾರ್ ಯಾದವ್ ಅವರನ್ನು ಟಿ 20 ಐ ನಾಯಕರನ್ನಾಗಿ ಕಳೆದ ವಾರ ಹೆಸರಿಸಲಾಗಿದೆ.

ಇದನ್ನೂ ಓದಿ: Gautam Gambhir : ನನ್ನ ಎಲ್ಲ ಬೇಡಿಕೆಗಳಿಗೆ ಬಿಸಿಸಿಐ ಸಮ್ಮತಿಸಿದೆ; ಗೌತಮ್ ಗಂಭೀರ್​

ಬುಮ್ರಾ ನಿರ್ವಹಣೆ ಮುಖ್ಯ

ಜಸ್ಪ್ರೀತ್ ಬುಮ್ರಾ ಅವರಂತಹವರಿಗೆ ಕೆಲಸದ ಹೊರೆ ನಿರ್ವಹಣೆ ಮುಖ್ಯ. ರೋಹಿತ್ ಮತ್ತು ವಿರಾಟ್ ಟಿ 20 ಪಂದ್ಯಗಳನ್ನು ಆಡುತ್ತಿಲ್ಲ. ಆದ್ದರಿಂದ ಅವರು ಪ್ರಮುಖ ಪಂದ್ಯಗಳಿಗೆ ಲಭ್ಯವಿರಬೇಕು. ಅವರು ಉತ್ತಮ ಕ್ರಿಕೆಟ್ ಆಡಲು ಮತ್ತು ಉತ್ತಮ ಫಾರ್ಮ್​ನಲ್ಲಿರಬೇಕು. ಬುಮ್ರಾಗೆ ಮಾತ್ರವಲ್ಲ, ಹೆಚ್ಚಿನ ಬೌಲರ್​ಗಳಿಗೆ ಕೆಲಸದ ಹೊರೆ ನಿರ್ವಹಣೆ ಮುಖ್ಯವಾಗಿದೆ ಎಂದು ಗಂಭೀರ್​ ಹೇಳಿದರು.

ಆಗಸ್ಟ್​ನಲ್ಲಿ ಶ್ರೀಲಂಕಾದಲ್ಲಿ ಪ್ರಾರಂಭವಾಗುವ 3 ಪಂದ್ಯಗಳ ಏಕದಿನ ಸರಣಿಗೆ ರೋಹಿತ್ ಮತ್ತು ಕೊಹ್ಲಿ ಇಬ್ಬರನ್ನೂ ಆಯ್ಕೆ ಮಾಡಲಾಗಿದೆ. ಗಂಭೀರ್ ಅವರ ಕೋರಿಕೆಯ ಮೇರೆಗೆ ಇಬ್ಬರು ಬ್ಯಾಟರ್​ಗಳು ಪ್ರವಾಸಿ ತಂಡದ ಭಾಗವಾಗಲು ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. 3ಟಿ 20 ಮತ್ತು ಅಷ್ಟೇ ಏಕದಿನ ಪಂದ್ಯಗಳನ್ನು ಹೊಂದಿರುವ ಮುಂಬರುವ ಶ್ರೀಲಂಕಾ ಪ್ರವಾಸವು ತಂಡದ ಮುಖ್ಯ ಕೋಚ್ ಆಗಿ ಗಂಭೀರ್ ಅವರ ಮೊದಲ ನೇಮಕವಾಗಿದೆ.

ಅಭಿಷೇಕ್ ನಾಯರ್ ಮತ್ತು ರಯಾನ್ ಟೆನ್ ಡೊಸ್ಚಾಟೆ ಸಹಾಯಕ ತರಬೇತುದಾರರಾಗಿ ಅವರೊಂದಿಗೆ ಸೇರಲಿದ್ದಾರೆ ಎಂದು ಗಂಭೀರ್ ಸೋಮವಾರ ಖಚಿತಪಡಿಸಿದ್ದಾರೆ. ಟಿ ದಿಲೀಪ್ ಮತ್ತು ಸಾಯಿರಾಜ್ ಬಹುತುಲೆ ಕೂಡ ಶ್ರೀಲಂಕಾ ಪ್ರವಾಸಕ್ಕಾಗಿ ಅವರ ಕೋಚಿಂಗ್ ಸಿಬ್ಬಂದಿಯ ಭಾಗವಾಗಲಿದ್ದಾರೆ.

Continue Reading

ಕ್ರೀಡೆ

Olympics 2024 : ತಮ್ಮ ಲಗೇಜ್​ಗಳನ್ನೇ ಮರೆತು ಪ್ಯಾರಿಸ್ ತಲುಪಿದ ಆಸ್ಟ್ರೇಲಿಯಾದ ಮಹಿಳೆಯರ ಫುಟ್ಬಾಲ್​ ತಂಡ

Olympics 2024: ಮಾರ್ಸಿಲೆಯಲ್ಲಿ ಜರ್ಮನಿ ವಿರುದ್ಧದ ಮೊದಲ ಗ್ರೂಪ್ ಪಂದ್ಯಕ್ಕೆ ಕೇವಲ ನಾಲ್ಕು ದಿನಗಳು ಬಾಕಿ ಇದೆ. ಅದಕ್ಕಾಗಿ ತಯಾರಿ ನಡೆಸುತ್ತಿದೆ. ತಂಡದ ಮ್ಯಾನೇಜ್ಮೆಂಟ್​ ತಮ್ಮ ಉಳಿದ ಸಾಮಾಗ್ರಿಗಳು ಹಾಗೂ ಕಾಣೆಯಾದ ಕೆಲವು ಉಪಕರಣಗಳನ್ನು ಸ್ಥಳೀಯವಾಗಿ ಜೋಡಿಸಿಕೊಳ್ಳಲು ಹೆಣಗಾಡುತ್ತಿದೆ.

VISTARANEWS.COM


on

Olympics 2024
Koo

ಬೆಂಗಳೂರು: ಆಸ್ಟ್ರೇಲಿಯಾದ ಮಹಿಳಾ ಫುಟ್ಬಾಲ್ ತಂಡ ಒಲಿಂಪಿಕ್ಸ್​ನಲ್ಲಿ ಪಾಲ್ಗೊಳ್ಳಲು ಪ್ಯಾರಿಸ್ ಹೊರಡಿದೆ. ಆದರೆ, ಬರುವಾಗ ತಮ್ಮ ಪ್ರಮುಖ ಲಗೇಜುಗಳು ಹಾಗೂ ಸಾಮಾಗ್ರಿಗಳನ್ನು ಮರೆತು ಬಂದಿದ್ದಾರೆ! ಅವರ ಬ್ಯಾಗ್​ ಸ್ಪೇನ್​ನಲ್ಲಿ ಉಳಿದಿದೆ ಎನ್ನಲಾಗಿದೆ. ನಿರ್ಣಾಯಕ ವೈದ್ಯಕೀಯ ಸಾಮಗ್ರಿಗಳು ಸೇರಿದಂತೆ ಕೆಲವು ವಸ್ತುಗಳೇ ಇಲ್ಲದೆ ಪ್ಯಾರಿಸ್​್ಗೆ ಆಗಮಿಸಿದೆ ಎಂದು ತಂಡದ ಮುಖ್ಯಸ್ಥೆ ಅನ್ನಾ ಮೀರೆಸ್ ಭಾನುವಾರ ತಿಳಿಸಿದ್ದಾರೆ.

ಮಾರ್ಸಿಲೆಯಲ್ಲಿ ಜರ್ಮನಿ ವಿರುದ್ಧದ ಮೊದಲ ಗ್ರೂಪ್ ಪಂದ್ಯಕ್ಕೆ ಕೇವಲ ನಾಲ್ಕು ದಿನಗಳು ಬಾಕಿ ಇದೆ. ಅದಕ್ಕಾಗಿ ತಯಾರಿ ನಡೆಸುತ್ತಿದೆ. ತಂಡದ ಮ್ಯಾನೇಜ್ಮೆಂಟ್​ ತಮ್ಮ ಉಳಿದ ಸಾಮಾಗ್ರಿಗಳು ಹಾಗೂ ಕಾಣೆಯಾದ ಕೆಲವು ಉಪಕರಣಗಳನ್ನು ಸ್ಥಳೀಯವಾಗಿ ಜೋಡಿಸಿಕೊಳ್ಳಲು ಹೆಣಗಾಡುತ್ತಿದೆ.

ಲಗೇಜ್ ಪ್ರಸ್ತುತ ಸ್ಪೇನ್ ನಲ್ಲಿದೆ. ಸಮಸ್ಯೆ ಪರಿಹರಿಸಲು ಆಸ್ಟ್ರೇಲಿಯಾ ಫುಟ್ಬಾಲ್ ತಂಡದೊಂದಿಗೆ ಮಾತುಕತೆ ನಡೆಸುತ್ತಿದ್ದೇವೆ ಎಂದು ಮೀರೆಸ್ ಹೇಳಿದರು. ತರಬೇತಿ ಕಿಟ್ ತಮ್ಮ ಬಳಿ ಇರುವುದರಿಂದ ತರಬೇತಿ ಮತ್ತು ತಯಾರಿ ನಡೆಸಲು ಸಾಧ್ಯವಾಗುತ್ತದೆ. ಆದರೆ ಕೆಲವು ವೈಯಕ್ತಿಕ ವಸ್ತುಗಳು ಮತ್ತು ವೈದ್ಯಕೀಯ ಉಪಕರಣಗಳು ಇನ್ನೂ ಬಂದಿಲ್ಲ ಎಂದು ತಂಡದ ಮುಖ್ಯಸ್ಥರು ಹೇಳಿದರು.

ವಸ್ತುಗಳು ಪ್ರಸ್ತುತ ಸ್ಪೇನ್​​ನಲ್ಲಿವೆ. ಈ ಸಮಸ್ಯೆಯನ್ನು ಪರಿಹರಿಸಲು ನಾವು ಫುಟ್ಬಾಲ್ ಆಸ್ಟ್ರೇಲಿಯಾದೊಂದಿಗೆ ಕೆಲಸ ಮಾಡುತ್ತಿದ್ದೇವೆ ಎಂದು ಮೀರೆಸ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ತಂಡದ ಅಧಿಕಾರಿಗಳು ಈಗಾಗಲೇ ಫ್ರಾನ್ಸ್​ನ ಮಾರ್ಸಿಲೆಯಲ್ಲಿ ಟೇಪ್ ಸ್ಟ್ರ್ಯಾಪಿಂಗ್, ಕತ್ತರಿ ಮತ್ತು ಪುನಶ್ಚೇತನ ಕಿಟ್​ಗಳಂಥ ಅಗತ್ಯ ವಸ್ತುಗಳನ್ನು ಸಂಗ್ರಹಿಸುತ್ತಿದ್ದಾರೆ. ನಾವು ಪ್ಯಾರಿಸ್ ತಲುಪುವ ಮೊದಲು ಉಪಕರಣಗಳು ಶನಿವಾರ ವಿಮಾನಗಳ ಮೂಲಕ ಬರಬೇಕಾಗಿತ್ತು. ಆದರೆ ಏನೋ ತಪ್ಪಾಗಿದೆ ಎಂದು ತಂಡದ ಮೂಲಗಳು ಹೇಳಿವೆ.

ಆಸ್ಟ್ರೇಲಿಯಾ ತಂಡಕ್ಕೆ ಇಂಥದ್ದು ಮೊದಲ ಅನುಭವ ಅಲ್ಲ.ಇದಕ್ಕೂ ಮುನ್ನ ಜುಲೈನಲ್ಲಿ ಟೀಮ್ ಆಸ್ಟ್ರೇಲಿಯಾದ ಎಲ್ಲಾ ಸಮವಸ್ತ್ರಗಳನ್ನು ಹೊತ್ತ ಕಂಟೈನರ್ ಹಡಗು ಜಿಬ್ರಾಲ್ಟರ್ ಬಳಿ ಮತ್ತೊಂದು ಹಡಗಿಗೆ ಡಿಕ್ಕಿ ಹೊಡೆದಿತ್ತು. ಹೀಗಾಗಿ ಅವರ ವಸ್ತುಗಳು ಸೂಕ್ತ ಸಂದರ್ಭದಲ್ಲಿ ದೊರಕಿರಲಿಲ್ಲ.

ಅಪಾಯಕಾರಿ ರಾಸಾಯನಿಕ ಪತ್ತೆ; ಪ್ಯಾರಿಸ್​ ಒಲಿಂಪಿಕ್ಸ್​​ ಬ್ರಾಂಡ್​​ನ ಬಾಟಲ್​​ಗಳಿಗೆ ನಿಷೇಧ

ಪ್ಯಾರಿಸ್: ಒಲಿಂಪಿಕ್ಸ್ (Paris Olympics 2024) ಆರಂಭಕ್ಕೆ ಇನ್ನೊಂದು ವಾರ ಬಾಕಿ ಇರುವ ನಡುವೆ ಫ್ರೆಂಚ್ ಅಧಿಕಾರಿಗಳು ಪ್ಯಾರಿಸ್ 2024-ಬ್ರಾಂಡೆಡ್ ಲೋಹದ ನೀರಿನ ಬಾಟಲಿಗಳನ್ನು ನಿಷೇಧ ಮಾಡಿದ್ದಾರೆ. ಇದರಿಂದ ಆಯೋಜಕರಿಗೆ ಮತ್ತು ಅಲ್ಲಿಗೆ ಪ್ರವಾಸ ಬರುವರಿಗೆ ಬಾರಿ ಸಮಸ್ಯೆ ಎದುರಾಗಲಿದೆ. ಯಾಕೆಂದರೆ ಒಲಿಂಪಿಕ್ಸ್ ಬ್ರಾಂಡ್​ ಹೊಂದಿರುವ ಬಾಟಲ್​ಗಳನ್ನು ಟೂರ್ನಿಯ ಅವಧಿಯಲ್ಲಿ ಬಳಸುವುದಕ್ಕೆ ನಿರ್ಧರಿಸಲಾಗಿತ್ತು. ಆದರೆ, ಡಿಸ್ಟ್ರಪ್ಟರ್ ಬಿಸ್ಫೆನಾಲ್ ಎ ರಾಸಾನಿಕ ಹೆಚ್ಚಿರುವ ಕಾರಣ ಅಧಿಕಾರಿಗಳು ನಿಷೇಧ ಹೇರಿದ್ದಾರೆ.

ಇದನ್ನೂ ಓದಿ: Joe Root : ವೆಸ್ಟ್​ ಇಂಡೀಸ್ ವಿರುದ್ಧ ಶತಕ ಬಾರಿಸಿ ಸ್ಟೀವ್​ ವಾ ದಾಖಲೆ ಸರಿಗಟ್ಟಿದ ಜೋ ರೂಟ್​

ಫ್ರೆಂಚ್ ಕಂಪನಿ ವಿಲಾಕ್ ತಯಾರಿಸಿದ ಬಾಟಲಿಗಳು “ನಿಯಮಗಳಿಗೆ ಅನುಸಾರವಾಗಿಲ್ಲ” ರಾಸಾಯನಿಕದ ಮಟ್ಟವನ್ನು ಹೊಂದಿವೆ ಎಂದು ಸರ್ಕಾರಿ ವೆಬ್​ಸೈಟ್​ ರಾಪೆಲ್ ಕಾನ್ಸೊದಲ್ಲಿ ಬರೆಯಲಾಗಿದೆ. ಆಗಸ್ಟ್ 2023 ರ ಅಂತ್ಯದಿಂದ ಜೂನ್ ಆರಂಭದವರೆಗೆ ಫ್ಯಾನ್ಸ್​ನಲ್ಲಿ ಮಾರಾಟವಾದ ಬಾಟಲಿಗಳು ಇನ್ನು ಮುಂದೆ ವಿಲಾಕ್ ಆನ್ಲೈನ್ ಅಂಗಡಿಯಲ್ಲಿ ಕಾಣಿಸಿಕೊಳ್ಳುವುದಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.

ನಿಯಮ ಅನುಸರಣೆಯ ಕಾರಣಗಳನ್ನು ಪತ್ತೆ ಹಚ್ಚಲು ಮತ್ತು ಸೂಕ್ತ ಕ್ರಮ ತೆಗೆದುಕೊಳ್ಳಲಾಗಿದೆ. ಲೈಸೆನ್ಸ್ ಕುರಿತು ಚರ್ಚೆಗಳು ನಡೆಯುತ್ತಿವೆ ಎಂದು ಪ್ಯಾರಿಸ್ 2024 ಸಂಘಟಕರು ರಾಯಿಟರ್ಸ್​​ಗೆ ತಿಳಿಸಿದ್ದಾರೆ. ಸ್ತನ ಕ್ಯಾನ್ಸರ್ ಮತ್ತು ಬಂಜೆತನ ಸೇರಿದಂತೆ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತಿದೆ ಎಂಬ ಕಾರಣಕ್ಕೆ ಬಿಸ್ಫೆನಾಲ್ ಎ ಅನ್ನು 2015 ರಿಂದ ಫ್ರಾನ್ಸ್​​ನಲ್ಲಿ ನಿಷೇಧಿಸಲಾಗಿದೆ.

Continue Reading

ಪ್ರಮುಖ ಸುದ್ದಿ

Paris Olympics 2024 : ಅಪಾಯಕಾರಿ ರಾಸಾಯನಿಕ ಪತ್ತೆ; ಪ್ಯಾರಿಸ್​ ಒಲಿಂಪಿಕ್ಸ್​​ ಬ್ರಾಂಡ್​​ನ ಬಾಟಲ್​​ಗಳಿಗೆ ನಿಷೇಧ

Paris Olympics 2024 : ಫ್ರೆಂಚ್ ಕಂಪನಿ ವಿಲಾಕ್ ತಯಾರಿಸಿದ ಬಾಟಲಿಗಳು “ನಿಯಮಗಳಿಗೆ ಅನುಸಾರವಾಗಿಲ್ಲ” ರಾಸಾಯನಿಕದ ಮಟ್ಟವನ್ನು ಹೊಂದಿವೆ ಎಂದು ಸರ್ಕಾರಿ ವೆಬ್​ಸೈಟ್​ ರಾಪೆಲ್ ಕಾನ್ಸೊದಲ್ಲಿ ಬರೆಯಲಾಗಿದೆ. ಆಗಸ್ಟ್ 2023 ರ ಅಂತ್ಯದಿಂದ ಜೂನ್ ಆರಂಭದವರೆಗೆ ಫ್ಯಾನ್ಸ್​ನಲ್ಲಿ ಮಾರಾಟವಾದ ಬಾಟಲಿಗಳು ಇನ್ನು ಮುಂದೆ ವಿಲಾಕ್ ಆನ್ಲೈನ್ ಅಂಗಡಿಯಲ್ಲಿ ಕಾಣಿಸಿಕೊಳ್ಳುವುದಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.

VISTARANEWS.COM


on

Paris Olympics 2024
Koo

ಪ್ಯಾರಿಸ್: ಒಲಿಂಪಿಕ್ಸ್ (Paris Olympics 2024) ಆರಂಭಕ್ಕೆ ಇನ್ನೊಂದು ವಾರ ಬಾಕಿ ಇರುವ ನಡುವೆ ಫ್ರೆಂಚ್ ಅಧಿಕಾರಿಗಳು ಪ್ಯಾರಿಸ್ 2024-ಬ್ರಾಂಡೆಡ್ ಲೋಹದ ನೀರಿನ ಬಾಟಲಿಗಳನ್ನು ನಿಷೇಧ ಮಾಡಿದ್ದಾರೆ. ಇದರಿಂದ ಆಯೋಜಕರಿಗೆ ಮತ್ತು ಅಲ್ಲಿಗೆ ಪ್ರವಾಸ ಬರುವರಿಗೆ ಬಾರಿ ಸಮಸ್ಯೆ ಎದುರಾಗಲಿದೆ. ಯಾಕೆಂದರೆ ಒಲಿಂಪಿಕ್ಸ್ ಬ್ರಾಂಡ್​ ಹೊಂದಿರುವ ಬಾಟಲ್​ಗಳನ್ನು ಟೂರ್ನಿಯ ಅವಧಿಯಲ್ಲಿ ಬಳಸುವುದಕ್ಕೆ ನಿರ್ಧರಿಸಲಾಗಿತ್ತು. ಆದರೆ, ಡಿಸ್ಟ್ರಪ್ಟರ್ ಬಿಸ್ಫೆನಾಲ್ ಎ ರಾಸಾನಿಕ ಹೆಚ್ಚಿರುವ ಕಾರಣ ಅಧಿಕಾರಿಗಳು ನಿಷೇಧ ಹೇರಿದ್ದಾರೆ.

ಫ್ರೆಂಚ್ ಕಂಪನಿ ವಿಲಾಕ್ ತಯಾರಿಸಿದ ಬಾಟಲಿಗಳು “ನಿಯಮಗಳಿಗೆ ಅನುಸಾರವಾಗಿಲ್ಲ” ರಾಸಾಯನಿಕದ ಮಟ್ಟವನ್ನು ಹೊಂದಿವೆ ಎಂದು ಸರ್ಕಾರಿ ವೆಬ್​ಸೈಟ್​ ರಾಪೆಲ್ ಕಾನ್ಸೊದಲ್ಲಿ ಬರೆಯಲಾಗಿದೆ. ಆಗಸ್ಟ್ 2023 ರ ಅಂತ್ಯದಿಂದ ಜೂನ್ ಆರಂಭದವರೆಗೆ ಫ್ಯಾನ್ಸ್​ನಲ್ಲಿ ಮಾರಾಟವಾದ ಬಾಟಲಿಗಳು ಇನ್ನು ಮುಂದೆ ವಿಲಾಕ್ ಆನ್ಲೈನ್ ಅಂಗಡಿಯಲ್ಲಿ ಕಾಣಿಸಿಕೊಳ್ಳುವುದಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.

ನಿಯಮ ಅನುಸರಣೆಯ ಕಾರಣಗಳನ್ನು ಪತ್ತೆ ಹಚ್ಚಲು ಮತ್ತು ಸೂಕ್ತ ಕ್ರಮ ತೆಗೆದುಕೊಳ್ಳಲಾಗಿದೆ. ಲೈಸೆನ್ಸ್ ಕುರಿತು ಚರ್ಚೆಗಳು ನಡೆಯುತ್ತಿವೆ ಎಂದು ಪ್ಯಾರಿಸ್ 2024 ಸಂಘಟಕರು ರಾಯಿಟರ್ಸ್​​ಗೆ ತಿಳಿಸಿದ್ದಾರೆ. ಸ್ತನ ಕ್ಯಾನ್ಸರ್ ಮತ್ತು ಬಂಜೆತನ ಸೇರಿದಂತೆ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತಿದೆ ಎಂಬ ಕಾರಣಕ್ಕೆ ಬಿಸ್ಫೆನಾಲ್ ಎ ಅನ್ನು 2015 ರಿಂದ ಫ್ರಾನ್ಸ್​​ನಲ್ಲಿ ನಿಷೇಧಿಸಲಾಗಿದೆ.

ವಿಲಾಕ್ ಪ್ರತಿನಿಧಿಗಳು ಈ ಬಗ್ಗೆ ಪ್ರತಿಕ್ರಿಯೆ ಕೊಟ್ಟಿಲ್ಲ. ಆದರೆ ಪ್ಯಾರಿಸ್ 2024 ಅಧಿಕಾರಿಗಳು ಎಷ್ಟು ಬಾಟಲಿಗಳನ್ನು ಹಿಂಪಡೆಯಲಾಗಿದೆ ಎಂದು ಹೇಳಲು ಸಾಧ್ಯವಾಗಲಿಲ್ಲ.

ಅಥ್ಲೀಟ್​ಗಳಿಗೆ ಸಿಗಲಿದೆ ಭಾರೀ ಮೊತ್ತದ ನಗದು ಬಹುಮಾನ

ಮೊನಾಕೊ: ಬಹುನಿರೀಕ್ಷಿತ ಪ್ಯಾರಿಸ್ ಒಲಿಂಪಿಕ್ಸ್(Paris Olympics)​ ಕ್ರೀಡಾಕೂಟ ಆರಂಭಕ್ಕೆ ದಿನಗಣನೆ ಆರಂಭವಾಗಿದೆ. ವಿಶೇಷವೆಂದರೆ ಇದೇ ಮೊದಲ ಬಾರಿಗೆ ಒಲಿಂಪಿಕ್ ಕೂಟದಲ್ಲಿ ನಗದು ಪ್ರಶಸ್ತಿ ನೀಡಲಾಗುತ್ತಿದೆ. ಟ್ರ್ಯಾಕ್ ಮತ್ತು ಫೀಲ್ಡ್(track & field gold medallists) ವಿಭಾಗದಲ್ಲಿ ಚಿನ್ನ ಜಯಿಸುವ ಅಥ್ಲೀಟ್‌ಗಳಿಗೆ 41.60 ಲಕ್ಷ ನಗದು ಪ್ರಶಸ್ತಿ ನೀಡಲು ವಿಶ್ವ ಅಥ್ಲೆಟಿಕ್ (ಡಬ್ಲ್ಯುಎ) ಸಂಸ್ಥೆ ತೀರ್ಮಾನಿಸಿದೆ.

ಇದನ್ನೂ ಓದಿ: Paris Olympics 2024 : ಒಲಿಂಪಿಕ್ಸ್​ ಸ್ಪರ್ಧೆಗೆ ಹೊರಟಿರುವ ಅಥ್ಲೀಟ್​ಗೆ 8.5 ಕೋಟಿ ರೂ. ಪ್ರೋತ್ಸಾಹಧನ ನೀಡಿದ ಬಿಸಿಸಿಐ

ಟೋಕಿಯೊ ಒಲಿಂಪಿಕ್​ನಲ್ಲಿ ಜಾವೆಲಿನ್ ಎಸೆತದಲ್ಲಿ ಚಿನ್ನದ ಪದಕ ಜಯಿಸಿದ್ದ ನೀರಜ್​ ಚೋಪ್ರಾ ಅವರು ಈ ಬಾರಿ ಚೆನ್ನ ಗೆದ್ದರೆ ಅವರಿಗೆ 50,000 ಅಮೆರಿಕನ್‌ ಡಾಲರ್‌ ಬಹುಮಾನ ದೊರೆಯಲಿದೆ. ನೀರಜ್​ ಅವರು ಟ್ರ್ಯಾಕ್‌ ಮತ್ತು ಫೀಲ್ಡ್ ವಿಭಾಗದಲ್ಲಿ ಚಿನ್ನ ಗೆದ್ದ ಮೊದಲ ಭಾರತೀಯ ಕ್ರೀಡಾಪಟು ಎಂಬ ಹೆಗ್ಗಳಿಕೆ ಹೊಂದಿದ್ದು ಈ ಬಾರಿಯೂ ಅವರು ಚಿನ್ನದ ಪದಕ ಗೆಲ್ಲುವ ಆತ್ಮವಿಶ್ವಾಸದಲ್ಲಿದ್ದಾರೆ.

ಈ ಬಾರಿ ಚಿನ್ನ ಗೆದ್ದ ಅಥ್ಲೀಟ್​ಗಳಿಗೆ ಮಾತ್ರ ನಗುದು ಬಹುಮಾನ ದೊರಕಲಿದೆ. 2028ರಲ್ಲಿ ಲಾಸ್‌ ಏಂಜಲಿಸ್​ನಲ್ಲಿ ನಡೆಯುವ ಒಲಿಂಪಿಕ್ ಕೂಟದಲ್ಲಿ ಮೊದಲ ಮೂರು ಸ್ಥಾನ ಪಡೆಯುವ ಎಲ್ಲರಿಗೂ ನಗದು ಪ್ರಶಸ್ತಿ ನೀಡುವುದಾಗಿವಿಶ್ವ ಅಥ್ಲೆಟಿಕ್ ಸಂಸ್ಥೆ ಘೋಷಿಸಿದೆ. ಡೈಮಂಡ್ ಲೀಗ್, ಕಾಂಟಿನೆಂಟಲ್ ಕಪ್‌ಗಳಲ್ಲಿ ಪದಕ ಗೆದ್ದಾಗ ನಗದು ಬಹುಮಾನ ನೀಡಲಾಗುತ್ತಿತ್ತು. ಆದರೆ ಒಲಿಂಪಿಕ್ಸ್​ ಬಹುಮಾನದಲ್ಲಿ ಈ ಸೌಕರ್ಯ ಇರಲಿಲ್ಲ. ಇದೀಗ ಒಲಿಂಪಿಕ್ಸ್​ನಲ್ಲಿಯೂ ಈ ನಿಯಮ ಬಂದಿರುವುದು ಸಂತಸ ತಂದಿದೆ ಎಂದು ಡಬ್ಲ್ಯುಎ ಅಧ್ಯಕ್ಷ ಸೆಬಾಸ್ಟಿಯನ್ ಕೊ ಹೇಳಿದ್ದಾರೆ.

Continue Reading
Advertisement
Damage to furniture learning material by miscreants in government model school
ಉತ್ತರ ಕನ್ನಡ8 mins ago

Banavasi News: ಬನವಾಸಿಯ ಸರ್ಕಾರಿ ಮಾದರಿ ಶಾಲೆಯಲ್ಲಿ ಕಿಡಿಗೇಡಿಗಳಿಂದ ಕಲಿಕಾ ಸಾಮಗ್ರಿ ಹಾನಿ

Contact Lens Awareness
ಫ್ಯಾಷನ್9 mins ago

Contact Lens Awareness: ಶೋಕಿಗಾಗಿ ಕಾಂಟ್ಯಾಕ್ಟ್‌ ಲೆನ್ಸ್ ಧರಿಸುವವರೇ ಎಚ್ಚರ! ಈ 5 ಸಂಗತಿ ಗಮನದಲ್ಲಿರಲಿ

Viral News
ವೈರಲ್ ನ್ಯೂಸ್10 mins ago

Viral News: ಮಕ್ಕಳ ಹಸಿವು ನೀಗಿಸಲು ಸೈನಿಕರೆದುರು ಬೆತ್ತಲಾಗುತ್ತಿರುವ ಮಹಿಳೆಯರು!

Suraj Revanna Case
ಕರ್ನಾಟಕ33 mins ago

Suraj Revanna Case: ಸೂರಜ್‌ ರೇವಣ್ಣಗೆ ಬಿಗ್‌ ರಿಲೀಫ್‌; 2ನೇ ಕೇಸ್‌ನಲ್ಲೂ ಜಾಮೀನು, ನಾಳೆ ರಿಲೀಸ್‌!

Gautam Gambhir
ಕ್ರೀಡೆ42 mins ago

Gautam Gambhir : ನನ್ನ ಮತ್ತು ಕೊಹ್ಲಿಯ ನಡುವೆ ಗೌರವಯುತ ಸಂಬಂಧವಿದೆ; ಗೌತಮ್ ಗಂಭೀರ್​

Nipah Virus
ಆರೋಗ್ಯ44 mins ago

Nipah Virus: ಡೇಂಜರಸ್‌ ನಿಫಾ ವೈರಸ್‌; ಇದರ ಲಕ್ಷಣಗಳೇನು? ನಮಗೆ ಅಪಾಯ ಇದೆಯೆ?

Nitish Kumar
ದೇಶ45 mins ago

Nitish Kumar: ಬಿಹಾರಕ್ಕೆ ವಿಶೇಷ ಸ್ಥಾನಮಾನ ಕೊಡಲ್ಲ ಎಂದ ಮೋದಿ ಸರ್ಕಾರ; ನಿತೀಶ್‌ ಕುಮಾರ್‌ ಬಂಡಾಯ ನಿಶ್ಚಿತ?

Shoe Theft
ಕ್ರೈಂ49 mins ago

Shoe Theft: ಬೆಂಗಳೂರಿನಲ್ಲಿ 10,000 ಶೂ, ಚಪ್ಪಲಿ ಕದ್ದ ಖತರ್‌ನಾಕ್‌ ಕಳ್ಳರ ಬಂಧನ!

Actor Darshan
ಕರ್ನಾಟಕ57 mins ago

Actor Darshan: ನಟ ದರ್ಶನ್‌ಗೆ ಇನ್ನೂ 3 ದಿನ ಜೈಲೂಟವೇ ಗತಿ; ಜು.25ಕ್ಕೆ ಆದೇಶ ಕಾಯ್ದಿರಿಸಿದ ಕೋರ್ಟ್‌

Beautician and Basic Fashion Designing Training Programme inauguration in Yallapura
ಉತ್ತರ ಕನ್ನಡ59 mins ago

Uttara Kannada News: ನಮ್ಮಲ್ಲಿರುವ ಕೌಶಲ್ಯಗಳನ್ನು ಅರಿತುಕೊಳ್ಳಬೇಕು; ಡಾ. ಆರ್.ಡಿ. ಜನಾರ್ಧನ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಮನೆ ಗೋಡೆ ಕುಸಿತ; ಕೊಟ್ಟಿಗೆಯಲ್ಲಿದ್ದ ಜಾನುವಾರುಗಳು ಸಾವು

karnataka Rain
ಮಳೆ2 days ago

Karnataka Rain : ಹಳ್ಳ ದಾಟಲು ಹೋಗಿ ನೀರುಪಾಲಾದ ಜಾನುವಾರು; ಬಿರುಗಾಳಿಗೆ ಕಳಚಿದ ವಿಂಡ್‌ ಫ್ಯಾನ್‌

karnataka Rain
ಮಳೆ3 days ago

Karnataka Rain : ಬೀದಿಗೆ ತಂದ ರಣಮಳೆ; ಮನೆ ಕುಸಿದು ಬಿದ್ದು 9 ತಿಂಗಳ ಗರ್ಭಿಣಿ ನರಳಾಟ

Karnataka Rain
ಮಳೆ3 days ago

Karnataka Rain : ರಾಜ್ಯದಲ್ಲಿ ಮಳೆಯ ಆರ್ಭಟ; ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕ ನಿರ್ಮಾಣ

Karnataka Rain
ಮಳೆ4 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ4 days ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Karnataka Rain
ಮಳೆ6 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ1 week ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ1 week ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

ಟ್ರೆಂಡಿಂಗ್‌