BCCI: ಐತಿಹಾಸಿಕ ಗೆಲುವಿನ ಬೆನ್ನಲ್ಲೇ ಟೆಸ್ಟ್​ ಆಟಗಾರರಿಗೆ ವಿಶೇಷ ವೇತನ ಘೋಷಣೆ ಮಾಡಿದ ಬಿಸಿಸಿಐ - Vistara News

ಕ್ರೀಡೆ

BCCI: ಐತಿಹಾಸಿಕ ಗೆಲುವಿನ ಬೆನ್ನಲ್ಲೇ ಟೆಸ್ಟ್​ ಆಟಗಾರರಿಗೆ ವಿಶೇಷ ವೇತನ ಘೋಷಣೆ ಮಾಡಿದ ಬಿಸಿಸಿಐ

ಪ್ರಸ್ತುತ ಭಾರತದಲ್ಲಿ ಟೆಸ್ಟ್‌ ಪಂದ್ಯವೊಂದಕ್ಕೆ ಆಟಗಾರರಿಗೆ ಲಭಿಸುವ ವೇತನ 15 ಲಕ್ಷ ರೂ. ಐಪಿಎಲ್‌ ಬಳಿಕ ಒಂದು ಋತುವಿನ ಎಲ್ಲ ಟೆಸ್ಟ್‌ ಸರಣಿಗಳನ್ನು ಆಡುವ ಆಟಗಾರರಿಗೆ ಬೋನಸ್‌ ರೂಪದಲ್ಲಿ ವೇತನ ಸಿಗಲಿದೆ.

VISTARANEWS.COM


on

India vs England, 5th Test
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಧರ್ಮಶಾಲಾ: ಇಂಗ್ಲೆಂಡ್​ ವಿರುದ್ಧದ 5ನೇ ಹಾಗೂ ಅಂತಿಮ ಟೆಸ್ಟ್​ ಪಂದ್ಯವನ್ನು ಗೆದ್ದು ಐತಿಹಾಸಿಕ ಸಾಧನೆ ಮಾಡಿದ ಬೆನ್ನಲ್ಲೇ ಬಿಸಿಸಿಐ(BCCI) ಜಯ್​ ಶಾ(BCCI secretary Jay Shah) ಅವರು ಟೀಮ್ ಇಂಡಿಯಾ ಆಟಗಾರರಿಗೆ ಸಿಹಿ ಸುದ್ದಿಯೊಂದನ್ನು ಪ್ರಕಟಿಸಿದ್ದಾರೆ. ವಾರ್ಷಿಕ ಒಡಂಬಡಿಕೆಯ ವೇತನದ ಜತೆಗೆ ಹೆಚ್ಚುವರಿ ಮೊತ್ತ ನೀಡುವ ಘೋಷಣೆ ಮಾಡಿದ್ದಾರೆ. ಪಂದ್ಯ ಮುಗಿಯುತ್ತಿದ್ದಂತೆ ಜಯ್​ ಶಾ ಅವರು ಟ್ವೀಟ್​ ಮಾಡುವ ಮೂಲಕ ಇದನ್ನು ಪ್ರಕಟಿಸಿದರು.

ಪ್ರಸ್ತುತ ಭಾರತದಲ್ಲಿ ಟೆಸ್ಟ್‌ ಪಂದ್ಯವೊಂದಕ್ಕೆ ಆಟಗಾರರಿಗೆ ಲಭಿಸುವ ವೇತನ 15 ಲಕ್ಷ ರೂ. ಐಪಿಎಲ್‌ ಬಳಿಕ ಒಂದು ಋತುವಿನ ಎಲ್ಲ ಟೆಸ್ಟ್‌ ಸರಣಿಗಳನ್ನು ಆಡುವ ಆಟಗಾರರಿಗೆ ಬೋನಸ್‌ ರೂಪದ ನೂತನ ಮಾದರಿಯಲ್ಲಿ ಉದಾಹರಣೆಗೆ ಒಂಬತ್ತು-ಪಂದ್ಯಗಳ ಋತುವಿನಲ್ಲಿ ಕನಿಷ್ಠ 5ರಿಂದ 6 ಟೆಸ್ಟ್‌ಗಳನ್ನು ಆಡುವ ಆಟಗಾರರು ಪ್ರತಿ ಪಂದ್ಯಕ್ಕೆ 15 ಲಕ್ಷದ ಬದಲಾಗಿ ಇನ್ನು ಮುಂದೆ ಪ್ರತಿ ಪಂದ್ಯಕ್ಕೆ 30 ಲಕ್ಷ ಪಡೆಯಲಿದ್ದಾರೆ. ಹಾಗೆಯೇ ವರ್ಷವೊಂದರಲ್ಲಿ ಕನಿಷ್ಠ 75 ಪ್ರತಿಶತ ಪಂದ್ಯಗಳಲ್ಲಿ ಕಾಣಿಸಿಕೊಳ್ಳುವ ಪ್ರತಿಯೊಬ್ಬ ಆಟಗಾರನ ವೇತನವು ಪ್ರತಿ ಪಂದ್ಯಕ್ಕೆ 22.5 ಲಕ್ಷದಿಂದ 45 ಲಕ್ಷಕ್ಕೆ ದ್ವಿಗುಣಗೊಂಡಿದೆ. ವರ್ಷದ ಎಲ್ಲ ಟೆಸ್ಟ್‌ ಸರಣಿಗಳಲ್ಲಿ ಪಾಲ್ಗೊಳ್ಳುವ ಆಟಗಾರರಿಗಷ್ಟೇ ಇದು ಅನ್ವಯವಾಗುತ್ತದೆ.

ಆಟಗಾರರು ಟೆಸ್ಟ್‌ ಕ್ರಿಕೆಟ್‌ನತ್ತ ಹೆಚ್ಚಿನ ಆಸಕ್ತಿ ವಹಿಸಬೇಕು, ಹೆಚ್ಚೆಚ್ಚು ಟೆಸ್ಟ್‌ ಪಂದ್ಯಗಳನ್ನು ಆಡಬೇಕು, ಸಾಂಪ್ರದಾಯಿಕ ಕ್ರಿಕೆಟನ್ನು ಇನ್ನಷ್ಟು ಜನಪ್ರಿಯಗೊಳಿಸಬೇಕು ಎನ್ನುವುದು ಇದರ ಉದ್ದೇಶ ಎಂದು ಜಯ್​ ಶಾ ಅವರು ಹೇಳಿದರು. ಜಯ್​ ಶಾ ಅವರು ಬಿಸಿಸಿಐ ಕಾರ್ಯದರ್ಶಿಯಾದ ಬಳಿಕ ಅನೇಕ ಹೊಸ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಇದರಲ್ಲಿ ಮಹಿಳಾ ಕ್ರಿಕೆಟ್​ ಲೀಗ್​ ಮತ್ತು ಮಹಿಳಾ ಕ್ರಿಕೆಟಿಗರಿಗೂ ಪುರುಷರಂತೆ ಸಮಾನವಾದ ವೇತನ ಪದ್ಧತಿ ಪ್ರಾಮುಖ್ಯವಾದದ್ದು.

ಐತಿಹಾಸಿಕ ದಾಖಲೆ ಬರೆದ ಭಾರತ

ಅಂತಿಮ ಟೆಸ್ಟ್(India vs England 5th Test)​ ಪಂದ್ಯದಲ್ಲಿ ಆತಿಥೇಯ ಭಾರತ ಇನಿಂಗ್ಸ್​ ಮತ್ತು 64 ರನ್​ಗಳ ಅಂತರದ ಗೆಲುವು ಸಾಧಿಸುವ ಮೂಲಕ ಸರಣಿಯನ್ನು 4-1 ರೊಂದಿಗೆ ಮುಕ್ತಾಯಗೊಳಿಸಿದೆ. ಗುರುವಾರ ಆರಂಭಗೊಂಡ ಈ ಟೆಸ್ಟ್​ ಪಂದ್ಯ ಕೇವಲ ಮೂರು ದಿನಕ್ಕೆ ಅಂತ್ಯಕಂಡಿತು.

ಭಾರತ ಈ ಗೆಲುವಿನ ಮೂಲಕ 112 ವರ್ಷದಲ್ಲೇ ಮೊದಲ ಪಂದ್ಯದ ಸೋಲಿನ ಬಳಿಕ 5 ಪಂದ್ಯದ ಸರಣಿಯಲ್ಲಿ 4-1 ರಿಂದ ಗೆದ್ದ ಏಕೈಕ ತಂಡ ಎಂಬ ಇತಿಹಾಸ ನಿರ್ಮಿಸಿತು. 5 ಪಂದ್ಯಗಳ ಟೆಸ್ಟ್‌ ಸರಣಿಯಲ್ಲಿ ಮೊದಲ ಪಂದ್ಯ ಸೋತು ಬಳಿಕ ಸರಣಿಯನ್ನು 4-1ರಿಂದ ಗೆದ್ದಿದ್ದು ಈ ವರೆಗೆ ಕೇವಲ 2 ತಂಡಗಳು ಮಾತ್ರ. 1897-98 ಮತ್ತು 1901-02ರಲ್ಲಿ ಇಂಗ್ಲೆಂಡ್‌ ವಿರುದ್ಧ ಆಸ್ಟ್ರೇಲಿಯಾ, 1912ರಲ್ಲಿ ಆಸ್ಟ್ರೇಲಿಯಾ ವಿರುದ್ಧ ಇಂಗ್ಲೆಂಡ್‌ ಈ ಸಾಧನೆ ಮಾಡಿತ್ತು. ಇದೀಗ ಈ ಸಾಧನೆ ಕೂಡ ಈ ಸಾಧನೆ ಮಾಡಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Virat Kohli: ನಿವೃತ್ತಿಯ ಬಗ್ಗೆ ಮಹತ್ವದ ಹೇಳಿಕೆ ನೀಡಿದ ವಿರಾಟ್​ ಕೊಹ್ಲಿ; ಅಭಿಮಾನಿಗಳಿಗೆ ಆತಂಕ

Virat Kohli ಒಬ್ಬ ಕ್ರೀಡಾಪಟು ಇಂದಲ್ಲ ನಾಳೆ ತಮ್ಮ ವೃತ್ತಿಜೀವನದ ಅಂತಿಮ ದಿನಾಂಕವನ್ನು ನೋಡಲೇಬೇಕಿದೆ. ಆದ್ದರಿಂದಲೇ ನಾನು ಈ ರೀತಿ ಹೆಚ್ಚು ಶ್ರಮವಹಿಸಿ, ಮಿತಿಮೀರಿ ಕೆಲಸ ಮಾಡುತ್ತಿದ್ದೇನೆ. ನೀವೃತ್ತಿಯ ಬಳಿಕ ನಾನು ಸಾಧನೆ ಮಾಡದರ ಕುರಿತು ಚಿಂತಿಸ ಬಾರದು. ಅಂತಹ ಪರಿಸ್ಥಿತಿ ನನಗೆ ಬರಬಾರದು ಎಂದರೆ, ಇಂದು ಅದ್ಭುತ ಆಟ ಆಡಲೇಬೇಕಿದೆ’ ಎಂದು ಹೇಳುವ ಮೂಲಕ ಕೊಹ್ಲಿ ತಮ್ಮ ನಿವೃತ್ತಿ ಬಗ್ಗೆ ಸ್ಪಷ್ಟತೆ ನೀಡಿದ್ದಾರೆ.

VISTARANEWS.COM


on

Virat Kohli
Koo

ಬೆಂಗಳೂರು: ಟೀಮ್​ ಇಂಡಿಯಾದ ಸ್ಟಾರ್​ ಕ್ರಿಕೆಟಿಗ, ದಾಖಲೆಗಳ ಸರದಾರ, ರನ್‌ ಮೆಷಿನ್‌ ವಿರಾಟ್‌ ಕೊಹ್ಲಿ(Virat Kohli) ನೀಡಿದ ಹೇಳಿಕೆಯೊಂದು ಅವರ ಅಭಿಮಾನಿಗಳಿಗೆ ಭಾರೀ ಆತಂಕ ಉಂಟುಮಾಡುವಂತೆ ಮಾಡಿದೆ. ಹೌದು, ಕೊಹ್ಲಿ ತಮ್ಮ ನಿವೃತ್ತಿ(Virat Kohli restaurant) ವಿಚಾರದ ಬಗ್ಗೆ ಮಾತನಾಡಿದ್ದು, ಒಬ್ಬ ಕ್ರೀಡಾಪಟುವಾದ ಮೇಲೆ ಇಂದಲ್ಲ ನಾಳೆ, ತಮ್ಮ ವೃತ್ತಿಜೀವನದ ಅಂತಿಮ ದಿನಾಂಕವನ್ನು ನೋಡಲೇಬೇಕಿದೆ ಎಂದು ಹೇಳಿದ್ದಾರೆ.

ಸಂದರ್ಶನವೊಂದರಲ್ಲಿ ಕೊಹ್ಲಿಗೆ ಸಕ್ಸಸ್​​ ಹಿಂದೆ ಯಾಕಿಷ್ಟು ಹಸಿವಿನಿಂದ ಓಡುತ್ತಿದ್ದೀರಿ ಎಂದು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಕೊಹ್ಲಿ, ಒಬ್ಬ ಕ್ರೀಡಾಪಟು ಇಂದಲ್ಲ ನಾಳೆ ತಮ್ಮ ವೃತ್ತಿಜೀವನದ ಅಂತಿಮ ದಿನಾಂಕವನ್ನು ನೋಡಲೇಬೇಕಿದೆ. ಆದ್ದರಿಂದಲೇ ನಾನು ಈ ರೀತಿ ಹೆಚ್ಚು ಶ್ರಮವಹಿಸಿ, ಮಿತಿಮೀರಿ ಕೆಲಸ ಮಾಡುತ್ತಿದ್ದೇನೆ. ನೀವೃತ್ತಿಯ ಬಳಿಕ ನಾನು ಸಾಧನೆ ಮಾಡದರ ಕುರಿತು ಚಿಂತಿಸ ಬಾರದು. ಅಂತಹ ಪರಿಸ್ಥಿತಿ ನನಗೆ ಬರಬಾರದು ಎಂದರೆ, ಇಂದು ಅದ್ಭುತ ಆಟ ಆಡಲೇಬೇಕಿದೆ’ ಎಂದು ಹೇಳಿದರು.

‘ನನ್ನ ವೃತ್ತಿ ಜೀವನಕ್ಕೆ ವಿದಾಯ ಹೇಳಿದ ಬಳಿಕ ನನಗೆ ಯಾವುದೇ ವಿಷಾದ ಇರಬಾರದು. ಖಂಡಿತವಾಗಿ ಆ ರೀತಿ ನಾನು ಮಾಡಿಕೊಳ್ಳುವುದಿಲ್ಲ ಎಂದು ನನಗೆ ಖಾತ್ರಿಯಿದೆ. ಒಮ್ಮೆ ನಾನು ಕ್ರಿಕೆಟ್​ನಿಂದ ದೂರ ಸರಿದರೆ ಖಂಡಿತ ಮತ್ತೆ ನೀವು ನನ್ನನ್ನು ನೋಡೋದಿಲ್ಲ. ನಾನು ಆಡುವ ಕೊನೆವರೆಗೂ ನನ್ನಲ್ಲಿರುವ ಬೆಸ್ಟ್​ ಅನ್ನು ನೀಡಲು ಬಯಸುತ್ತೇನೆ. ಅದೊಂದೇ ನನ್ನನ್ನು ಮುಂದಕ್ಕೆ ಕೊಂಡೊಯ್ಯಲು ಸಾಧ್ಯ’ ಎಂದು ಹೇಳುವ ಮೂಲಕ ತಮ್ಮ ನಿವೃತ್ತಿಯ ಬಗೆಗಿನ ಸ್ಪಷ್ಟತೆಯನ್ನು ತಿಳಿಸಿದರು. ಕೊಹ್ಲಿಯ ಈ ಹೇಳಿಕೆ ಕಂಡು ಅವರ ಅಭಿಮಾನಿಗಳು ಆತಂಕಕ್ಕೆ ಒಳಪಟ್ಟಿದ್ದು, ಶೀಘ್ರದಲ್ಲೇ ಕೊಹ್ಲಿ ನಿವೃತ್ತಿ ಹೇಳಲಿದ್ದಾರಾ? ಎಂದು ಚಿಂತೆ ಪಡುವಂತೆ ಮಾಡಿದೆ.

ಇದನ್ನೂ ಓದಿ Virat kohli: ಅಂಪೈರ್​ಗಳ ಜತೆ ಮತ್ತೆ ಜಗಳವಾಡಿದ ವಿರಾಟ್​ ಕೊಹ್ಲಿ; ಇಲ್ಲಿದೆ ವಿಡಿಯೊ

ವಿರಾಟ್​ ಕೊಹ್ಲಿ(Virat Kohli) ಅವರು ಇಂಗ್ಲೆಂಡ್​ ವಿರುದ್ಧದ ತವರಿನ ಟೆಸ್ಟ್​ ಸರಣಿ ವೇಳೆ ವೈಯಕ್ತಿಕ ಕಾರಣ ನೀಡಿ ಸರಣಿಯಿಂದ ಹಿಂದೆ ಸರಿದ್ದರು. ಎರಡು ತಿಂಗಳ ಬಿಡುವಿನ ವೇಳೆಯಲ್ಲಿ ಕುಟುಂಬದ ಜತೆ ಅಮೂಲ್ಯ ಸಮಯ ಕಳೆದಿದ್ದರು. ಇದೇ ವಿಚಾರವಾಗಿ ಮಾತನಾಡಿದ್ದ ಕೊಹ್ಲಿ, ‘ಜನರು ನಮ್ಮನ್ನು ಗುರುತಿಸಲು ಸಾಧ್ಯವಾಗದ ಪ್ರದೇಶದಲ್ಲಿ ನಾವಿದ್ದೆವು. ಈ ಎರಡು ತಿಂಗಳ ಕಾಲ ಕುಟುಂಬದೊಂದಿಗೆ ಅತ್ಯಮೂಲ್ಯ ಸಮಯವನ್ನು ಕಳೆದಿದ್ದೇನೆ. ರಸ್ತೆಯಲ್ಲಿ ಓಡಾಡುವಾಗ ಎಲ್ಲರಂತೆ ನಾನೂ ಕೂಡ ಸಾಮಾನ್ಯ ವ್ಯಕ್ತಿಯಾಗಿ ಓಡಾಡಿದ್ದು ನಿಜಕ್ಕೂ ಅದ್ಭುತ ಅನುಭವ. ಇದಕ್ಕಾಗಿ ದೇವರಿಗೆ ಧನ್ಯವಾದ ತಿಳಿಸುತ್ತೇನೆ. ನನ್ನ ಹಾಗೂ ಕುಟುಂಬಕ್ಕೆ ಇದು ಅದ್ಭುತ ಅನುಭವವಾಗಿತ್ತು” ಎಂದು ಹೇಳಿದ್ದರು. ಕುಟುಂಬಕ್ಕೆ ಹೆಚ್ಚಿನ ಒತ್ತು ನೀಡುವ ಕೊಹ್ಲಿ ತಮ್ಮ ನಿವೃತ್ತಿ ಬಳಿಕ ಕುಟುಂಬದ ಜತೆಯೇ ಹೆಚ್ಚಿನ ಕಾಲ ಕಳೆಯಲು ನಿರ್ಧರಿಸಿದಂತಿದೆ. ಇದೇ ಕಾರಣಕ್ಕೆ ಅವರು ನಿಂದ ದೂರ ಸರಿದರೆ ಖಂಡಿತ ಮತ್ತೆ ನೀವು ನನ್ನನ್ನು ನೋಡೋದಿಲ್ಲ ಎಂದು ಹೇಳಿದಂತಿದೆ.

Continue Reading

ಕ್ರೀಡೆ

Sunil Chhetri: ಮೈ ಬ್ರದರ್, ನಿಮ್ಮ ಬಗ್ಗೆ ಹೆಮ್ಮೆಯಿದೆ ಎಂದು ಚೆಟ್ರಿಗೆ ಶುಭ ಹಾರೈಸಿದ ಗೆಳೆಯ ವಿರಾಟ್​ ಕೊಹ್ಲಿ

Sunil Chhetri: ವಿರಾಟ್ ಕೊಹ್ಲಿ ಹಾಗೂ ಸುನಿಲ್ ಚೆಟ್ರಿ ಉತ್ತಮ ಸ್ನೇಹಿತರು. ವಿರಾಟ್​ ಕೊಹ್ಲಿ ಹಿಂದೊಮ್ಮೆ ಸಂದರ್ಶನವೊಂದರಲ್ಲಿ ತಮ್ಮ ಫಿಟ್​ನೆಸ್​ಗೆ ಸುನಿಲ್ ಚೆಟ್ರಿಯೇ ನಿಜವಾದ ಸ್ಫೂರ್ತಿ ಎಂದು ಹೇಳಿದ್ದರು.

VISTARANEWS.COM


on

sunil chhetri
Koo

ಬೆಂಗಳೂರು: ಭಾರತ ಕಂಡ ಶ್ರೇಷ್ಠ ಫುಟ್ಬಾಲ್(Indian football icon)​ ಆಟಗಾರ ಸುನೀಲ್​ ಚೆಟ್ರಿ(Sunil Chhetri) ಅವರು ತಮ್ಮ ಅಂತಾರಾಷ್ಟ್ರೀಯ ಫುಟ್ಬಾಲ್​ ವೃತ್ತಿ ಜೀವನಕ್ಕೆ ತೆರೆ ಎಳೆಯಲು ನಿರ್ಧರಿಸಿದ್ದಾರೆ. ಜೂನ್​ 6 ರಂದು ಕುವೈತ್​(Kuwait) ವಿರುದ್ಧದ ಫಿಫಾ ವಿಶ್ವಕಪ್ ಅರ್ಹತಾ(FIFA World Cup 2026 qualifier) ಪಂದ್ಯ ಅವರಿಗೆ ಕೊನೆಯ ಪಂದ್ಯವಾಗಿರಲಿದೆ. ಚೆಟ್ರಿ ತಮ್ಮ ನಿವೃತ್ತಿಯನ್ನು ಘೋಷಿಸುತ್ತಿದ್ದಂತೆ, ಅನೇಕ ಭಾರತೀಯ ದಿಗ್ಗಜ ಕ್ರೀಡಾಪಟುಗಳು ಚೆಟ್ರಿಗೆ ಹಾರೈಸಿದ್ದಾರೆ ಜತೆಗೆ ಅವರ ಸಾಧನೆಯನ್ನು ಕೊಂಡಾಡಿದ್ದಾರೆ. ಚೆಟ್ರಿ ಅವರ ಆಪ್ತ ಗೆಳೆಯ ಟೀಮ್​ ಇಂಡಿಯಾದ ಕ್ರಿಕೆಟಿಗ ವಿರಾಟ್​ ಕೊಹ್ಲಿ(virat kohli) ನಿಮ್ಮ ಬಗ್ಗೆ ಹೆಮ್ಮೆಯಿದೆ, ಮೈ ಬದ್ರರ್ ಎಂದು ಕಮೆಂಟ್​ ಮಾಡಿದ್ದಾರೆ.

ವಿರಾಟ್ ಕೊಹ್ಲಿ ಹಾಗೂ ಸುನಿಲ್ ಚೆಟ್ರಿ ಉತ್ತಮ ಸ್ನೇಹಿತರು. ಈ ಹಿಂದೆ ಹಲವು ಬಾರಿ ಜತೆಯಾಗಿ ಕಾಣಿಸಿಕೊಂಡಿದ್ದರು. ಚೆಟ್ರಿ ಇಂಡಿಯನ್​ ಸೂಪರ್​ ಲೀಗ್​ನಲ್ಲಿ ಬೆಂಗಳೂರು ತಂಡದ ಪರ ಆಡುತ್ತಿದ್ದು, ವಿರಾಟ್​ ಕೊಹ್ಲಿ ಆರ್​ಸಿಬಿ ಪರ ಆಡುತ್ತಿದ್ದಾರೆ. ಹಲವು ಬಾರಿ ಚೆಟ್ರಿ ಆರ್​ಸಿಬಿ ಕ್ಯಾಂಪ್​ನಲ್ಲಿಯೂ ಕಾಣಿಸಿಕೊಂಡಿದ್ದಾರೆ. ಹೀಗಾಗಿ ಆರ್​ಸಿಬಿ ಕೂಡ ಚೆಟ್ರಿಗೆ ಶುಭ ಹಾರೈಸಿದೆ. ವಿರಾಟ್​ ಕೊಹ್ಲಿ ಹಿಂದೊಮ್ಮೆ ಸಂದರ್ಶನವೊಂದರಲ್ಲಿ ತಮ್ಮ ಫಿಟ್​ನೆಸ್​ಗೆ ಸುನಿಲ್ ಚೆಟ್ರಿಯೇ ನಿಜವಾದ ಸ್ಫೂರ್ತಿ ಎಂದು ಹೇಳಿದ್ದರು.

ಸೈನಿಕನ ಮಗ

1984 ಆಗಸ್ಟ್ 3ರಂದು ಸಿಕಂದರಾಬಾದನಲ್ಲಿ ಹುಟ್ಟಿದ ಸುನೀಲ್ ತಂದೆ ಒಬ್ಬ ಸೈನಿಕ ಆಗಿದ್ದರು ಮತ್ತು ಭಾರತದ ಆರ್ಮಿ ಫುಟ್ಬಾಲ್ ಟೀಮ್‌ನಲ್ಲಿ ಆಡಿದ್ದರು. ಅದರಿಂದಾಗಿ ಫುಟ್ಬಾಲ್ ಆಸಕ್ತಿ ಹುಡುಗನಿಗೆ ರಕ್ತದಲ್ಲಿಯೇ ಬಂದಿತ್ತು ಎನ್ನಬಹುದು. ತನ್ನ 18ನೆಯ ವರ್ಷದಲ್ಲಿ ವೃತ್ತಿಪರ ಫುಟ್ಬಾಲ್ ಆಟಗಾರನಾಗಿ ಆಡಲು ಆರಂಭ ಮಾಡಿದ್ದ ಸುನೀಲ್ ಹೆಚ್ಚು ಕಡಿಮೆ ಭಾರತದ ಎಲ್ಲ ಕ್ಲಬ್ಬುಗಳ ಪರವಾಗಿ ಆಡಿದ್ದಾರೆ. ಮೋಹನ್ ಬಗಾನ್, ಜೆಸಿಟಿ, ಬಂಗಾಳ ತಂಡಗಳ ಆಟಗಾರನಾಗಿ ಮಿಂಚು ಹರಿಸಿದ್ದಾರೆ. 2015ರಿಂದ ಇಂದಿನವರೆಗೆ ಬೆಂಗಳೂರು ತಂಡದ ಪರವಾಗಿ ಆಡುತ್ತ ಬಂದಿದ್ದಾರೆ. ಭಾರತದಲ್ಲಿ ಅತೀ ಹೆಚ್ಚು ಸಂಭಾವನೆ ಪಡೆಯುವ ಫುಟ್ಬಾಲ್ ಆಟಗಾರ ಎಂದರೆ ಅದು ಸುನೀಲ್ ಅನ್ನೋದು ನಿಜಕ್ಕೂ ಗ್ರೇಟ್.

ಒಬ್ಬ ಕ್ರೀಡಾಪಟುವಿಗೆ ದೊರೆಯುವ ಅತ್ಯುನ್ನತ ಪ್ರಶಸ್ತಿ ಖೇಲ್ ರತ್ನ ಪ್ರಶಸ್ತಿ, ಭಾರತ ಸರಕಾರ ಕೊಡಮಾಡುವ ಪದ್ಮಶ್ರೀ, 2011ರ ಅರ್ಜುನ ಪ್ರಶಸ್ತಿ ಅವರಿಗೆ ಈಗಾಗಲೇ ದೊರೆತಿವೆ. ಭಾಗವಹಿಸಿದ ಎಲ್ಲ ಜಾಗತಿಕ ಕೂಟಗಳಲ್ಲಿ ಒಂದಲ್ಲ ಒಂದು ಪ್ರಶಸ್ತಿ ಗೆಲ್ಲದೇ ಸುನೀಲ್ ಹಿಂದೆ ಬಂದ ಒಂದು ಉದಾಹರಣೆ ಕೂಡ ದೊರೆಯುವುದಿಲ್ಲ. ಸುನೀಲ್ ಕಾರಣಕ್ಕೆ ಭಾರತದಲ್ಲಿ ಫುಟ್ಬಾಲ್ ಆಕರ್ಷಣೆ ಹೆಚ್ಚಿತು ಮತ್ತು ಹೆಚ್ಚು ಯುವಜನತೆ ಫುಟ್ಬಾಲ್ ಆಡಲು ಸುರು ಮಾಡಿದರು ಅನ್ನುವ ಮಾತಿನಲ್ಲಿ ಉತ್ಪ್ರೇಕ್ಷೆ ಇಲ್ಲ! ಸದ್ಯಕ್ಕೆ ನಿವೃತ್ತಿ ಆಗುವ ಯಾವ ಸಾಧ್ಯತೆಯೂ ಇಲ್ಲ ಎಂದು ಹೇಳಿರುವ ಸುನೀಲ್ ಚೆಟ್ರಿ ಭಾರತೀಯ ಫುಟ್ಬಾಲ್ ಲೋಕದ ಲೆಜೆಂಡ್ ಆಟಗಾರ ಎಂದು ನೀವು ಖಂಡಿತವಾಗಿಯೂ ಒಪ್ಪುತ್ತೀರಿ. ಅಲ್ಲವೇ?

ಇದನ್ನೂ ಓದಿ IPL 2024 Points Table: ಪಂಜಾಬ್​ಗೆ ಗೆಲುವು; ಅಂಕಪಟ್ಟಿಯಲ್ಲಿ ಪಾತಾಳಕ್ಕೆ ಕುಸಿದ ಮುಂಬೈ

2005ರಲ್ಲಿ ಅಂತಾರಾಷ್ಟ್ರೀಯ ಫುಟ್ಬಾಲ್​ಗೆ ಪದಾರ್ಪಣೆ ಮಾಡಿದ ಸುನೀಲ್‌ ಚೆಟ್ರಿ 93 ಗೋಲು ದಾಖಲಿಸಿ ಅತ್ಯಧಿಕ ಗೋಲು ಬಾರಿಸಿದ ಆಟಗಾರರ ಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದ್ದಾರೆ. ಕ್ರಿಸ್ಟಿಯಾನೊ ರೊನಾಲ್ಡೊ, ಲಿಯೋನೆಲ್‌ ಮೆಸ್ಸಿ ಕ್ರಮವಾಗಿ ಮೊದಲೆರಡು ಸ್ಥಾನದಲ್ಲಿದ್ದಾರೆ. ಜೂನ್ 12, 2005 ರಂದು ಕ್ವೆಟ್ಟಾದಲ್ಲಿ ಪಾಕಿಸ್ತಾನದ ವಿರುದ್ಧದ ಸೌಹಾರ್ದ ಪಂದ್ಯದಲ್ಲಿ ಚೆಟ್ರಿ ಮೊದಲ ಬಾರಿಗೆ ಹಿರಿಯ ರಾಷ್ಟ್ರೀಯ ತಂಡದ ಜರ್ಸಿಯನ್ನು ತೊಟ್ಟಿದ್ದರು. ಆ ಪಂದ್ಯ 1-1 ಡ್ರಾದಲ್ಲಿ ಅತ್ಯಂಕಡಿತ್ತು. ಭಾರತದ ಈ ಒಂದು ಗೋಲ್​ ಬಾರಿಸಿದ್ದು ಚೆಟ್ರಿ. ಅಂದಿನಿಂದ, ಅವರು ಇದುವರೆಗೂ ರಾಷ್ಟ್ರೀಯ ತಂಡದ ಪರ ಹಲವು ಸಾಧನೆ ಮಾಡಿದ್ದಾರೆ.

Continue Reading

ಕ್ರೀಡೆ

Sanju Samson: ಸತತ 4 ಸೋಲು; ಬೇಸರ ಹೊರಹಾಕಿದ ನಾಯಕ ಸಂಜು ಸ್ಯಾಮ್ಸನ್

Sanju Samson: ಕಳೆದ ನಾಲ್ಕು ಪಂದ್ಯಗಳಿಂದ ನಾವು ವೈಫಲ್ಯಗಳನ್ನು ಅನುಭವಿಸುತ್ತಿದ್ದೇವೆ. ಇದಕ್ಕೆ ಮುಖ್ಯ ಕಾರಣ ಸಂಘಟಿತ ಪ್ರದರ್ಶನ ತೋರದೇ ಇರುವುದು. ನಮ್ಮಲ್ಲಿ ಹಲವು ಮ್ಯಾಚ್​ ವಿನ್ನರ್​ಗಳಿದ್ದಾರೆ. ಆದರೆ ಯಾರೂ ಕೂಡ ಪಂದ್ಯ ಗೆಲ್ಲಿಸಿಕೊಡುವಂತಹ ಪ್ರದರ್ಶನ ನೀಡುತ್ತಿಲ್ಲ ಎಂದು ಸಂಜು ಸ್ಯಾಮ್ಸನ್ ಹೇಳಿದರು.

VISTARANEWS.COM


on

Sanju Samson
Koo

ಗುವಾಹಟಿ: ಪಂಜಾಬ್​ ಕಿಂಗ್ಸ್(​Punjab Kings) ವಿರುದ್ಧದ ಪಂದ್ಯದಲ್ಲಿ 5 ವಿಕೆಟ್​ಗಳ ಸೋಲು ಕಾಣುವ ಮೂಲಕ ರಾಜಸ್ಥಾನ್​ ರಾಯಲ್ಸ್​(Rajasthan Royals) ಸತತ 4ನೇ ಸೋಲಿಗೆ ತುತ್ತಾಯಿತು. ತಂಡದ ಈ ಕಳಪೆ ಪ್ರದರ್ಶನದ ಬಗ್ಗೆ ನಾಯಕ ಸಂಜು ಸ್ಯಾಮ್ಸನ್(sanju samson)​ ಬಹಿರಂಗವಾಗಿಯೇ ಬೇಸರ ಹೊರಹಾಕಿದ್ದಾರೆ.

ಸೋಲಿನ ಬಳಿಕ ಮಾತನಾಡಿದ ಸಂಜು ಸ್ಯಾಮ್ಸನ್, ಕಳೆದ ನಾಲ್ಕು ಪಂದ್ಯಗಳಿಂದ ನಾವು ವೈಫಲ್ಯಗಳನ್ನು ಅನುಭವಿಸುತ್ತಿದ್ದೇವೆ. ಇದಕ್ಕೆ ಮುಖ್ಯ ಕಾರಣ ಸಂಘಟಿತ ಪ್ರದರ್ಶನ ತೋರದೇ ಇರುವುದು. ನಮ್ಮಲ್ಲಿ ಹಲವು ಮ್ಯಾಚ್​ ವಿನ್ನರ್​ಗಳಿದ್ದಾರೆ. ಆದರೆ ಯಾರೂ ಕೂಡ ಪಂದ್ಯ ಗೆಲ್ಲಿಸಿಕೊಡುವಂತಹ ಪ್ರದರ್ಶನ ನೀಡುತ್ತಿಲ್ಲ ಎಂದು ಹೇಳಿದರು.

ಈ ಹಿಂದೆ ನಾವು 200 ಪ್ಲಸ್​ ರನ್​ಗಳನ್ನು ಸುಲಭವಾಗಿ ಕಲೆಹಾಕಿದ್ದೇವೆ ಮತ್ತು ಚೇಸಿಂಗ್​ ಕೂಡ ಮಾಡಿದ್ದೇವೆ. ಆದರೆ ಈಗ ಕನಿಷ್ಠ 150ರ ಗಡಿ ದಾಡಲೂ ಕೂಡ ಪರದಾಡುವ ಸ್ಥಿತಿಯಲ್ಲಿದ್ದೇವೆ. ಮುಂದಿನ ಪಂದ್ಯಗಳಲ್ಲಿ ಸಂಘಟಿತ ಪ್ರದರ್ಶನ ತೋರುವ ತುರ್ತು ಅಗತ್ಯವಿದೆ. ಪ್ಲೇ ಆಫ್​ಗೆ ಪ್ರವೇಶ ಪಡೆದಿದ್ದರೂ ಕೂಡ ಮುಂದಿನ ಪಂದ್ಯದಲ್ಲಿ ಗೆಲ್ಲಲೇ ಬೇಕು. ಈ ಮೂಲಕ ಹಿಂದಿನ ಫಾರ್ಮ್​ ಕಂಡುಕೊಳ್ಳಬೇಕಿದೆ ಎಂದು ಸಂಜು ಸಹ ಆಟಗಾರರಿಗೆ ಎಚ್ಚರಿಕೆ ಸಂದೇಶ ನೀಡಿದ್ದಾರೆ. ಬೌಲಿಂಗ್​ ವಿಭಾಗದಲ್ಲಿಯೂ ಸುಧಾರಣೆ ಕಂಡುಕೊಳ್ಳುವ ಅನಿವಾರ್ಯತೆಯೂ ಇದೆ ಎಂದು ಇದೇ ಸಂದರ್ಭದಲ್ಲಿ ಸಂಜು ಹೇಳಿದರು.

ಇದನ್ನೂ ಓದಿ IPL 2024 Points Table: ಪಂಜಾಬ್​ಗೆ ಗೆಲುವು; ಅಂಕಪಟ್ಟಿಯಲ್ಲಿ ಪಾತಾಳಕ್ಕೆ ಕುಸಿದ ಮುಂಬೈ

ರಾಜಸ್ಥಾನ್​ ತಂಡಕ್ಕೆ​ 2ನೇ ತವರಾದ ಗುವಾಹಟಿಯ ಬರ್ಸಾಪರಾ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ 65ನೇ ಪಂದ್ಯದಲ್ಲಿ ಟಾಸ್​ ಗೆದ್ದು ಬ್ಯಾಟಿಂಗ್​ ಆಯ್ದುಕೊಂಡ ರಾಜಸ್ಥಾನ್​ ರಾಯಲ್ಸ್ ಬ್ಯಾಟಿಂಗ್​ ವೈಫಲ್ಯ ಕಂಡು ನಿಗದಿತ 20 ಓವರ್​ಗಳಲ್ಲಿ 9 ವಿಕೆಟ್​ ಕಳೆದುಕೊಂಡು ಕೇವಲ 144 ರನ್​ ಗಳಿಸಿತು. ಸಣ್ಣ ಮೊತ್ತವನ್ನು ಬೆನ್ನಟ್ಟಿದ ಪಂಜಾಬ್(Punjab Kings)​ ಕೂಡ ಒಂದು ಹಂತದಲ್ಲಿ ಆಘಾತ ಎದುರಿಸಿ ಬಳಿಕ ಚೇತರಿಕೆ ಹಾದಿ ಹಿಡಿದು 18.5 ಓವರ್​ನಲ್ಲಿ 5 ವಿಕೆಟ್​ ನಷ್ಟಕ್ಕೆ 145 ರನ್​ ಬಾರಿಸಿ ಗೆಲುವಿನ ನಗೆ ಬೀರಿತು.

ರಾಜಸ್ಥಾನ್​ ಪರ ಯಶಸ್ವಿ ಜೈಸ್ವಾಲ್​(4) ಜಾಸ್​ ಬಟ್ಲರ್​ ಅನುಪಸ್ಥಿತಿಯಲ್ಲಿ ಆಡಲಿಳಿದ ಕೊಹ್ಲರ್-ಕಾಡ್ಮೋರ್(18), ನಾಯಕ ಸಂಜು ಸ್ಯಾಮ್ಸನ್​(18), ಧೃವ್​ ಜುರೇಲ್​(0), ರೋಮನ್​ ಪೋವೆಲ್(4) ಬ್ಯಾಟಿಂಗ್​ ವೈಫಲ್ಯ ಕಂಡು ಪೆವಿಲಿಯನ್​ ಪರೇಡ್​ ನಡೆಸಿದರು. ರಿಯಾನ್​ ಪರಾಗ್​(48) ಮತ್ತು ಆರ್​.ಅಶ್ವಿನ್​(28) ಅವರ ಅಸಾಮಾನ್ಯ ಬ್ಯಾಟಿಂಗ್​ನಿಂದಾಗಿ ತಂಡ 100 ಗಡಿ ದಾಟಿ ಸ್ಪರ್ಧಾತ್ಮಕ ಮೊತ್ತ ಗಳಿಸುವಲ್ಲಿ ಯಶಸ್ಸು ಕಂಡಿತು.

Continue Reading

ಕ್ರೀಡೆ

Sunil Chhetri: 20 ವರ್ಷಗಳ ಫುಟ್ಬಾಲ್ ವೃತ್ತಿಜೀವನಕ್ಕೆ ತೆರೆ ಎಳೆಯಲು ನಿರ್ಧರಿಸಿದ ಸುನೀಲ್‌ ಚೆಟ್ರಿ; ಕುವೈತ್ ವಿರುದ್ಧ ಅಂತಿಮ ಪಂದ್ಯ

Sunil Chhetri: 2005ರಲ್ಲಿ ಅಂತಾರಾಷ್ಟ್ರೀಯ ಫುಟ್ಬಾಲ್​ಗೆ ಪದಾರ್ಪಣೆ ಮಾಡಿದ ಸುನೀಲ್‌ ಚೆಟ್ರಿ 93 ಗೋಲು ದಾಖಲಿಸಿ ಅತ್ಯಧಿಕ ಗೋಲು ಬಾರಿಸಿದ ಆಟಗಾರರ ಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದ್ದಾರೆ. ಕ್ರಿಸ್ಟಿಯಾನೊ ರೊನಾಲ್ಡೊ, ಲಿಯೋನೆಲ್‌ ಮೆಸ್ಸಿ ಕ್ರಮವಾಗಿ ಮೊದಲೆರಡು ಸ್ಥಾನದಲ್ಲಿದ್ದಾರೆ.

VISTARANEWS.COM


on

Sunil Chhetri
Koo

ಮುಂಬಯಿ: ಭಾರತದ ಖ್ಯಾತ ಫುಟ್ಬಾಲ್(Indian football icon)​ ಆಟಗಾರ ಸುನೀಲ್‌ ಚೆಟ್ರಿ(Sunil Chhetri) ಅವರು ಫುಟ್‌ಬಾಲ್‌ನಿಂದ ನಿವೃತ್ತಿ ಹೊಂದುವುದಾಗಿ ಘೋಷಿಸಿದ್ದಾರೆ. ಜೂನ್ 6 ರಂದು ಕುವೈತ್(Kuwait) ವಿರುದ್ಧ ಫಿಫಾ ವಿಶ್ವಕಪ್ ಅರ್ಹತಾ(FIFA World Cup 2026 qualifier) ಪಂದ್ಯದ ನಂತರ ಚೆಟ್ರಿ ಅಂತಾರಾಷ್ಟ್ರೀಯ ಫುಟ್‌ಬಾಲ್‌ನಿಂದ ನಿವೃತ್ತಿ ಹೊಂದಲಿದ್ದಾರೆ. ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ಪೋಸ್ಟ್ ಮಾಡುವ ಮೂಲಕ ಚೆಟ್ರಿ ತಮ್ಮ ನಿವೃತ್ತಿಯ ವಿಚಾರವನ್ನು ತಿಳಿಸಿದ್ದಾರೆ. ಭಾರತಕ್ಕಾಗಿ 145 ಪಂದ್ಯಗಳನ್ನು ಆಡಿರುವ ಅವರು 20 ವರ್ಷಗಳ ವೃತ್ತಿಜೀವನದಲ್ಲಿ 93 ಗೋಲುಗಳನ್ನು ಗಳಿಸಿದ್ದಾರೆ.

2005ರಲ್ಲಿ ಅಂತಾರಾಷ್ಟ್ರೀಯ ಫುಟ್ಬಾಲ್​ಗೆ ಪದಾರ್ಪಣೆ ಮಾಡಿದ ಸುನೀಲ್‌ ಚೆಟ್ರಿ 93 ಗೋಲು ದಾಖಲಿಸಿ ಅತ್ಯಧಿಕ ಗೋಲು ಬಾರಿಸಿದ ಆಟಗಾರರ ಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದ್ದಾರೆ. ಕ್ರಿಸ್ಟಿಯಾನೊ ರೊನಾಲ್ಡೊ, ಲಿಯೋನೆಲ್‌ ಮೆಸ್ಸಿ ಕ್ರಮವಾಗಿ ಮೊದಲೆರಡು ಸ್ಥಾನದಲ್ಲಿದ್ದಾರೆ.

ಕೆಲವು ದಿನಗಳ ಹಿಂದೆಯೇ ಸುನೀಲ್‌ ಚೆಟ್ರಿ ಅವರ ನಿವೃತ್ತಿಯ ವಿಚಾರ ಮುನ್ನಕೆಗೆ ಬಂದಿತ್ತು. ಈ ವಿಚಾರವನ್ನು ಕೋಚ್‌ ಐಗರ್‌ ಸ್ಟಿಮ್ಯಾಕ್‌ ಹೇಳಿದ್ದರು. “ಸುನೀಲ್‌ ಚೆಟ್ರಿ ಅವರಿಗೆ ಈಗ 38 ವಯಸ್ಸಾಗಿದೆ. ಇದು ಅವರಿಗೂ ಅರಿವಿಗೂ ಬಂದಿದೆ. ಇಷ್ಟು ವಯಸ್ಸಿನಲ್ಲಿ ಅವರಿಗೆ 90 ನಿಮಿಷಗಳ ಆಟ ಆಡಲು ದೇಹ ಸ್ಪಂದಿಸುವುದು ಕೂಡ ಕಷ್ಟಕರ. ಅವರು ಭಾರತ ಕಂಡ ಶ್ರೇಷ್ಠ ಫುಟ್ಬಾಲ್ ಆಟಗಾರರಲ್ಲಿ ಒಬ್ಬರಾಗಿದ್ದಾರೆ. ನನ್ನ ಪ್ರಕಾರ ಈ ಬಾರಿ ಏಷ್ಯಾ ಕಪ್​ ಅವರ ವಿದಾಯದ ಋತು ಆಗಿರುವ ಸಾಧ್ಯತೆಯೇ ಹೆಚ್ಚು ಎಂಬುದಾಗಿ ಸ್ಟಿಮ್ಯಾಕ್‌ ಹೇಳಿದ್ದರು. ಇದೀಗ ಅಂತಿಮವಾಗಿ ಚೆಟ್ರಿ ತಮ್ಮ ನಿವೃತ್ತಿ ನಿರ್ಧಾರವನ್ನು ಕೈಗೊಂಡಿದ್ದಾರೆ.

“ನಾನು ಎಂದಿಗೂ ಮರೆಯದ ಮತ್ತು ಆಗಾಗ ನೆನಪಿಸಿಕೊಳ್ಳುವ ಒಂದು ದಿನವಿದೆ, ಅದು ನಾನು ನನ್ನ ದೇಶಕ್ಕಾಗಿ ಆಡಿದ ಮೊದಲ ಪಂದ್ಯ. ಅದು ನಂಬಲಸಾಧ್ಯವಾಗಿತ್ತು. ಆ ದಿನವನ್ನು ನಾನು ಎಂದಿಗೂ ಮರೆಯುವುದಿಲ್ಲ ಮತ್ತು ನನ್ನ ಅತ್ಯುತ್ತಮ ದಿನಗಳಲ್ಲಿ ಒಂದಾಗಿದೆ” ಎಂದು ಚೆಟ್ರಿ ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

“ನಾನು ದೆಹಲಿಯಲ್ಲಿ ಸುಬ್ರೊಟೊ ಕಪ್ ಆಡುವಾಗ, ದೇಶಕ್ಕಾಗಿ ಆಡುತ್ತೇನೆ ಎಂದು ನಾನು ಭಾವಿಸಿರಲಿಲ್ಲ ಅಥವಾ ಕನಸು ಕಾಣಲಿಲ್ಲ. ಕ್ಲಬ್‌ಗಾಗಿ ಆಡುವ ವೃತ್ತಿಪರ ಸೆಟಪ್ ತುಂಬಾ ದೂರವಾಗಿತ್ತು. ಏಕೆಣದರೆ ಆ ದಿನಗಳಲ್ಲಿ ಅದು ಬಹಳ ಕಷ್ಟಕರವಾಗಿತ್ತು. ಹಾಗಾಗಿ ನಾನು ಆಡುವ ಕನಸು ಕಾಣಲಿಲ್ಲ. ಆದರೆ ದೇವರ ದಯೆಯಿಂದ ನನಗೆ ಈ ಅವಕಾಶ ಒದಗಿ ಬಂತು. ದೇಶವನ್ನು ಪ್ರತಿನಿಧಿಸುವ ಪ್ರತಿ ಕ್ಷಣವೂ ಕೂಡ ವಿಶೇಷ” ಎಂದರು.

ಜೂನ್ 12, 2005 ರಂದು ಕ್ವೆಟ್ಟಾದಲ್ಲಿ ಪಾಕಿಸ್ತಾನದ ವಿರುದ್ಧದ ಸೌಹಾರ್ದ ಪಂದ್ಯದಲ್ಲಿ ಚೆಟ್ರಿ ಮೊದಲ ಬಾರಿಗೆ ಹಿರಿಯ ರಾಷ್ಟ್ರೀಯ ತಂಡದ ಜರ್ಸಿಯನ್ನು ತೊಟ್ಟಿದ್ದರು. ಆ ಪಂದ್ಯ 1-1 ಡ್ರಾದಲ್ಲಿ ಅತ್ಯಂಕಡಿತ್ತು. ಭಾರತದ ಈ ಒಂದು ಗೋಲ್​ ಬಾರಿಸಿದ್ದು ಚೆಟ್ರಿ. ಅಂದಿನಿಂದ, ಅವರು ಇದುವರೆಗೂ ರಾಷ್ಟ್ರೀಯ ತಂಡದ ಪರ ಹಲವು ಸಾಧನೆ ಮಾಡಿದ್ದಾರೆ.

“ಕಳೆದ 19 ವರ್ಷಗಳಲ್ಲಿ ನಾನು ನೆನಪಿಸಿಕೊಳ್ಳುವ ಭಾವನೆಯು ಕರ್ತವ್ಯದ ಒತ್ತಡ ಮತ್ತು ಅಪಾರ ಸಂತೋಷದ ನಡುವಿನ ಉತ್ತಮ ಸಂಯೋಜನೆಯಾಗಿದೆ ಎಂದು ನಿಮಗೆ ತಿಳಿದಿದೆ. ನಾನು ವೈಯಕ್ತಿಕವಾಗಿ ಎಂದಿಗೂ ಯೋಚಿಸಲಿಲ್ಲ, ಇವು ದೇಶಕ್ಕಾಗಿ ನಾನು ಆಡಿದ ಹಲವಾರು ಆಟಗಳಾಗಿವೆ” ಎಂದರು.

“ನಾನು ನನ್ನ ತಾಯಿ, ತಂದೆ ಮತ್ತು ನನ್ನ ಹೆಂಡತಿ, ಕುಟುಂಬ ಮತ್ತು ಸಹ ಆಟಗಾರರಿಗೆ ಧನ್ಯವಾದ ಹೇಳಲು ಬಯಸುತ್ತೇನೆ. ಏಕೆಂದರೆ ನಾನು ಒತ್ತಡದಲ್ಲಿದ್ದ ವೇಳೆ ಇವರೆಲ್ಲ ನನ್ನ ಜತೆಗಿದ್ದು ನನ್ನನು ಬೆಂಬಲಿಸಿದ್ದಾರೆ. ದೇಶಕ್ಕಾಗಿ ಒಷ್ಟು ವರ್ಷ ಆಡಿದ್ದು ನಿಜಕ್ಕೂ ಹೆಮ್ಮೆಯ ಸಂಗತಿ” ಎಂದರು.

Continue Reading
Advertisement
Prajwal Revanna Case Lawyer DevarajeGowda sent to police custody for another day
ಕ್ರೈಂ5 mins ago

Prajwal Revanna Case: ವಕೀಲ ದೇವರಾಜೇಗೌಡ ಮತ್ತೊಂದು ದಿನ ಪೊಲೀಸ್‌ ಕಸ್ಟಡಿಗೆ!

Lok Sabha Election 2024
Lok Sabha Election 202416 mins ago

Lok Sabha Election 2024: ನಾಲ್ಕು ಹಂತಗಳ ಮತದಾನ ಅಂತ್ಯ; ಕಾಂಗ್ರೆಸ್ ಆಂತರಿಕ ವರದಿಯಲ್ಲೇನಿದೆ?

isis link ummer abdul rehman mariyam
ಕ್ರೈಂ19 mins ago

ISIS link: ಐಸಿಸ್‌ ಲಿಂಕ್ ಕೇಸ್‌ನಲ್ಲಿ ಮಾಜಿ ಶಾಸಕ ಇದಿನಬ್ಬ ಮೊಮ್ಮಗನಿಗೆ ದಿಲ್ಲಿ ಹೈಕೋರ್ಟ್‌ ಜಾಮೀನು; ಕೋರ್ಟ್‌ ಕೊಟ್ಟ ಕಾರಣ ನೋಡಿ!

Murder case in davangere
ದಾವಣಗೆರೆ19 mins ago

Murder case : ಕೊಳೆತ ಶವದಲ್ಲಿದ್ದ ಕಿವಿಯೋಲೆಯಿಂದಲೇ ಸಿಕ್ಕಿಬಿದ್ದರು ಹಂತಕರು

Terrorists Killed
ದೇಶ26 mins ago

Terrorists Killed: ಸೇನೆಯ ಭರ್ಜರಿ ಬೇಟೆ; ಎಲೆಕ್ಷನ್‌ ಹಾಳುಗೆಡವಲು ಗಡಿ ನುಸುಳುತ್ತಿದ್ದ ನಾಲ್ವರು ಉಗ್ರರ ಹತ್ಯೆ

Startup Investment
ವಾಣಿಜ್ಯ29 mins ago

Startup Investment : ಡ್ರಿಂಕ್​​ಪ್ರೈಮ್​ ವಿಸ್ತರಣಾ ಯೋಜನೆಯಲ್ಲಿ ಎಸ್​​ಐಡಿಬಿಐ ಹಣಕಾಸು ಸಂಸ್ಥೆಯ ಹೂಡಿಕೆ

Virat Kohli
ಕ್ರೀಡೆ34 mins ago

Virat Kohli: ನಿವೃತ್ತಿಯ ಬಗ್ಗೆ ಮಹತ್ವದ ಹೇಳಿಕೆ ನೀಡಿದ ವಿರಾಟ್​ ಕೊಹ್ಲಿ; ಅಭಿಮಾನಿಗಳಿಗೆ ಆತಂಕ

Bhavani Singh pankaj shivanna couple expecting-their first child
ಕಿರುತೆರೆ43 mins ago

Bhavani Singh: ಮೊದಲ ಮಗುವಿನ ನಿರೀಕ್ಷೆಯಲ್ಲಿ ʻಸುಬ್ಬಲಕ್ಷ್ಮಿ ಸಂಸಾರʼ ಧಾರಾವಾಹಿ ನಟ!

ರಾಜಕೀಯ58 mins ago

HD Revanna: ಬಸವನಗುಡಿ ನಿವಾಸದಿಂದ ದೂರವೇ ಉಳಿದ ಎಚ್‌ ಡಿ ರೇವಣ್ಣ; ಜ್ಯೋತಿಷಿಗಳ ಕಟ್ಟೆಚ್ಚರ?

Bomb threat
ದೇಶ1 hour ago

Bomb threat: ಏರ್‌ ಇಂಡಿಯಾ ವಿಮಾನಕ್ಕೆ ಬಾಂಬ್‌ ಬೆದರಿಕೆ; ಟಿಶ್ಯೂ ಪೇಪರ್‌ನಲ್ಲಿ ಬಂದಿತ್ತು ಸಂದೇಶ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case
ಕರ್ನಾಟಕ1 day ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ1 day ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ2 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20242 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20242 days ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ2 days ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು2 days ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ2 days ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ3 days ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ3 days ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

ಟ್ರೆಂಡಿಂಗ್‌