Jay Shah | ಐಸಿಸಿ ಕ್ರಿಕೆಟ್‌ ಸಮಿತಿಯಲ್ಲೂ ಜಯ್‌ ಶಾ ದರ್ಬಾರು; ಹಣಕಾಸು ಸಮಿತಿ ಮುಖ್ಯಸ್ಥರಾಗಿ ಆಯ್ಕೆ - Vistara News

Latest

Jay Shah | ಐಸಿಸಿ ಕ್ರಿಕೆಟ್‌ ಸಮಿತಿಯಲ್ಲೂ ಜಯ್‌ ಶಾ ದರ್ಬಾರು; ಹಣಕಾಸು ಸಮಿತಿ ಮುಖ್ಯಸ್ಥರಾಗಿ ಆಯ್ಕೆ

ಬಿಸಿಸಿಐ ಕಾರ್ಯದರ್ಶಿ ಜಯ್‌ ಶಾ(Jay Shah) ಐಸಿಸಿಯ ಹಣಕಾಸು ಮತ್ತು ವಾಣಿಜ್ಯ ವ್ಯವಹಾರಗಳ ಸಮಿತಿಯ ಮುಖ್ಯಸ್ಥರಾಗಿ ಆಯ್ಕೆಯಾಗಿದ್ದಾರೆ.

VISTARANEWS.COM


on

jay shah
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮೆಲ್ಬೋರ್ನ್‌: ಭಾರತ ಕ್ರಿಕೆಟ್‌ ನಿಯಂತ್ರಣ ಮಂಡಳಿ (ಬಿಸಿಸಿಐ) ಕಾರ್ಯದರ್ಶಿ ಜಯ್‌ ಶಾ(Jay Shah) ಅವರು ಐಸಿಸಿಯ ಹಣಕಾಸು ಮತ್ತು ವಾಣಿಜ್ಯ ವ್ಯವಹಾರಗಳ ಸಮಿತಿಯ ಮುಖ್ಯಸ್ಥರಾಗಿ ಆಯ್ಕೆಯಾಗಿದ್ದಾರೆ. ಮೆಲ್ಬೋರ್ನ್‌ನಲ್ಲಿ ಶನಿವಾರ ನಡೆದ ಐಸಿಸಿ ಆಡಳಿತ ಮಂಡಳಿ ಸಭೆಯಲ್ಲಿ ಜಯ್‌ ಶಾ ಅವರನ್ನು ಈ ಹುದ್ದೆಗೆ ಆಯ್ಕೆ ಮಾಡಲಾಯಿತು.

ಏಕಕಾಲದಲ್ಲಿ ಮೂರು ಹುದ್ದೆ

ಜಯ್‌ ಶಾ ಐಸಿಸಿಯ ಹಣಕಾಸು ಮತ್ತು ವಾಣಿಜ್ಯ ವ್ಯವಹಾರಗಳ ಸಮಿತಿಯ ಮುಖ್ಯಸ್ಥರಾಗಿ ಆಯ್ಕೆಯಾಗುವುದರೊಂದಿಗೆ ಏಕಕಾಲದಲ್ಲಿ ಮೂರು ಪ್ರಮುಖ ಹುದ್ದೆಗಳನ್ನು ನಿಭಾಯಿಸಿದ್ದಂತಾಗಿದೆ. ಈಗಾಗಲೇ ಅವರು ಬಿಸಿಸಿಐ ಕಾರ್ಯದರ್ಶಿ ಹುದ್ದೆಯ ಜತೆಗೆ ಏಷ್ಯಾ ಕ್ರಿಕೆಟ್ ಕೌನ್ಸಿಲ್‌ (ಎಸಿಸಿ) ಅಧ್ಯಕ್ಷರೂ ಆಗಿದ್ದಾರೆ. ಇದರೊಂದಿಗೆ ಜಯ್‌ ಶಾ ತಮ್ಮ ಅಧಿಕಾರದ ದರ್ಬಾರನ್ನು ಪ್ರಮುಖ ಕ್ರಿಕೆಟ್‌ ಮಂಡಳಿಗಳಲ್ಲಿ ಮುಂದುವರಿಸಿದ್ದಾರೆ.

ವಾಣಿಜ್ಯ ವ್ಯವಹಾರಗಳ ಸಮಿತಿಯ ಕೆಲಸವು ಎಲ್ಲ ಪ್ರಮುಖ ಹಣಕಾಸು ನೀತಿ ನಿರ್ಧಾರಗಳನ್ನು ತೆಗೆದುಕೊಳ್ಳುವುದಾಗಿದ್ದು, ಈ ಸಮಿತಿಯು ನಿರ್ಧಾರವನ್ನು ತೆಗೆದುಕೊಂಡ ಬಳಿಕವೇ, ಐಸಿಸಿ ಅದನ್ನು ಅನುಮೋದಿಸುತ್ತದೆ. ಜತೆಗೆ ಈ ಸಮಿತಿಯು ಸದಸ್ಯ ರಾಷ್ಟ್ರಗಳ ನಡುವೆ ಆದಾಯದ ಹಂಚಿಕೆಯನ್ನು ಸಹ ಒಳಗೊಂಡಿದೆ. ಅದರಂತೆ ಈ ಸಮಿತಿಯ ಮುಖ್ಯಸ್ಥರು ಐಸಿಸಿ ಮಂಡಳಿಯ ಸದಸ್ಯರು ಕೂಡ ಆಗಿರುತ್ತಾರೆ. ಈಗ ಜಯ್ ಶಾ ಅವರ ಆಯ್ಕೆಯೊಂದಿಗೆ ಅವರು ಐಸಿಸಿ ಮಂಡಳಿಯಲ್ಲಿ ಬಿಸಿಸಿಐ ಅನ್ನು ಪ್ರತಿನಿಧಿಸಲಿದ್ದಾರೆ.

ಇದನ್ನೂ ಓದಿ | PAK VS ENG | ಟಿ20 ವಿಶ್ವ ಕಪ್​ ಫೈನಲ್​ಗೆ ಮಳೆ ಭೀತಿ; ಪಂದ್ಯ ನಡೆಯದಿದ್ದರೆ ಏನು ಗತಿ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Latest

IPL 2024 : ಚೆನ್ನೈ ತಂಡದ ಮಾರಕ ಬೌಲರ್ ಮಹೀಶ್​ ಪತಿರಾನಾ​ ಐಪಿಎಲ್​ನಿಂದ ಹೊರಕ್ಕೆ

IPL 2024: ಬಲಗೈ ವೇಗಿ ಈವರೆಗೆ 6 ಇನಿಂಗ್ಸ್​​ಗಳಲ್ಲಿ 13 ವಿಕೆಟ್​​ಗಳನ್ನು ಪಡೆದಿದ್ದಾರೆ. ಅವರ ಡೆತ್ ಬೌಲಿಂಗ್ ಕೌಶಲ್ಯದಿಂದ ಸಿಎಸ್​​ಕೆಗೆ ನಿರ್ಣಾಯಕ ಆಸ್ತಿಯಾಗಿದ್ದರು. ಆದಾಗ್ಯೂ, ಅವರು ತಮ್ಮ ವೃತ್ತಿಜೀವನದುದ್ದಕ್ಕೂ ಪದೇ ಪದೇ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಟಿ20 ವಿಶ್ವಕಪ್​​ನಲ್ಲಿ ಪ್ರಮುಖ ಪಂದ್ಯಾವಳಿಗೆ ಮುಂಚಿತವಾಗಿ ಶ್ರೀಲಂಕಾ ಕ್ರಿಕೆಟ್ ತಮ್ಮ ವೇಗಿಯನ್ನು ಅಪಾಯಕ್ಕೆ ತಳ್ಳಲು ಬಯಸುವುದಿಲ್ಲ.

VISTARANEWS.COM


on

IPL 2024
Koo

ಬೆಂಗಳೂರು: ಎಸ್ಆರ್​ಎಚ್​​ ವಿರುದ್ಧದ ಪಂದ್ಯದ ನಂತರ ಸ್ನಾಯುಸೆಳೆತಕ್ಕೆ ಒಳಗಾಗಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ವೇಗದ ಬೌಲರ್​ ಮಹೀಶ್ ಪತಿರಾನಾ ಐಪಿಎಲ್​ನ (IPL 2024) ಉಳಿದ ಭಾಗದಿಂದ ಹೊರಗುಳಿಯುವಂತಾಗಿದೆ. ಅವರು ತಮ್ಮ ತಾಯ್ನಾಡಾದ ಶ್ರೀಲಂಕಾಕ್ಕೆ ಮರಳಿದ್ದಾರೆ. ಧರ್ಮಶಾಲಾದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯಕ್ಕೆ ಅವರು ಫಿಟ್ ಆಗಿರುತ್ತಾರೆ ಎಂದು ವರದಿಯಾಗಿತ್ತು. ಆದರೆ ಸಿಎಸ್​​ಕೆ ಸ್ಟಾರ್​ ಇನ್ನೂ ಗುಣಮುಖರಾಗದ ಕಾರಣ ತಾಯ್ನಾಡಿಗೆ ಮರಳಿದ್ದಾರೆ ಎಂದು ಸಿಎಸ್​ಕೆ ಮೂಲಗಳೂ ಬಹಿರಂಗಪಡಿಸಿವೆ. ಇದರರ್ಥ ಅವರು ಟಿ20 ವಿಶ್ವಕಪ್​​ನಲ್ಲಿ ಲಂಕಾ ತಂಡದ ಭಾಗವಾಗಲಿದ್ದಾರೆ.

ಬಲಗೈ ವೇಗಿ ಈವರೆಗೆ 6 ಇನಿಂಗ್ಸ್​​ಗಳಲ್ಲಿ 13 ವಿಕೆಟ್​​ಗಳನ್ನು ಪಡೆದಿದ್ದಾರೆ. ಅವರ ಡೆತ್ ಬೌಲಿಂಗ್ ಕೌಶಲ್ಯದಿಂದ ಸಿಎಸ್​​ಕೆಗೆ ನಿರ್ಣಾಯಕ ಆಸ್ತಿಯಾಗಿದ್ದರು. ಆದಾಗ್ಯೂ, ಅವರು ತಮ್ಮ ವೃತ್ತಿಜೀವನದುದ್ದಕ್ಕೂ ಪದೇ ಪದೇ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಟಿ20 ವಿಶ್ವಕಪ್​​ನಲ್ಲಿ ಪ್ರಮುಖ ಪಂದ್ಯಾವಳಿಗೆ ಮುಂಚಿತವಾಗಿ ಶ್ರೀಲಂಕಾ ಕ್ರಿಕೆಟ್ ತಮ್ಮ ವೇಗಿಯನ್ನು ಅಪಾಯಕ್ಕೆ ತಳ್ಳಲು ಬಯಸುವುದಿಲ್ಲ.

ಇದನ್ನೂ ಓದಿ : IPL 2024 : ಮ್ಯಾಕ್ಸಿ ಐಪಿಎಲ್​ನಲ್ಲಿ ಬರೀ ಬೂಸಿ; ಮ್ಯಾಕ್ಸ್​ವೆಲ್​ ಆಟಕ್ಕೆ ಅಭಿಮಾನಿಗಳ ಆಕ್ರೋಶ

ಸ್ನಾಯುಸೆಳೆತದ ಗಾಯಗಳು ಚೇತರಿಸಿಕೊಳ್ಳಲು ಸಾಮಾನ್ಯವಾಗಿ ಐದರಿಂದ ಆರು ವಾರಗಳನ್ನು ತೆಗೆದುಕೊಳ್ಳುತ್ತವೆ. ಆದ್ದರಿಂದ ಪಥಿರಾನಾ ಈ ಹೊಡೆತದಿಂದ ಹೇಗೆ ಚೇತರಿಸಿಕೊಳ್ಳುತ್ತಾರೆ ಎಂಬುದನ್ನು ನೋಡುವುದು ಕುತೂಹಲಕರವಾಗಿದೆ. ಅವರು ಶ್ರೀಲಂಕಾದ ವಿಶ್ವಕಪ್ 2023 ತಂಡದ ಭಾಗವಾಗಿದ್ದರು. ಆದರೆ ಮಧ್ಯದಲ್ಲಿ ಗಾಯಗೊಂಡಿದ್ದರು. ವಿಶ್ವ ದರ್ಜೆಯ ಕೌಶಲ್ಯಗಳನ್ನು ಹೊಂದಿರುವ ಪಥಿರಾನಾ ಆ ಪಂದ್ಯಾವಳಿಗೆ ಸಂಪೂರ್ಣ ಫಿಟ್ ಆಗುವುದು ಕಡ್ಡಾಯ ಎಂದು ಹೇಳಿದರು.

ಇದು ಖಂಡಿತವಾಗಿಯೂ ಸಿಎಸ್​ಕೆಗೆ ದೊಡ್ಡ ಹೊಡೆತವಾಗಿದೆ. ಪಥಿರಾನಾ ನಿಜವಾಗಿಯೂ ಇಡೀ ಐಪಿಎಲ್ 2024 ರಿಂದ ಹೊರಗುಳಿದರೆ ಋತುರಾಜ್ ಗಾಯಕ್ವಾಡ್ ಮತ್ತು ತಂಡವು ತಮ್ಮ ವ್ಯವಹಾರವನ್ನು ಹೇಗೆ ನಡೆಸುತ್ತದೆ ಎಂಬುದನ್ನು ನೋಡಬೇಕಾಗಿದೆ ಎಂದು ಕ್ರಿಕೆಟ್ ಪಂಡಿತರು ಹೇಳಿದ್ದಾರೆ.

Continue Reading

ಆರೋಗ್ಯ

Blood Pressure: ರಕ್ತದೊತ್ತಡ ನಿಯಂತ್ರಿಸಲು ಈ ಆಹಾರಗಳು ಸೂಕ್ತ

Bood Pressure: ಅತ್ಯಂತ ಅಪಾಯಕಾರಿ ಕಾಯಿಲೆಯಾಗಿ ಪ್ರಸ್ತುತ ರಕ್ತದೊತ್ತಡ ಕಾಣಿಸುತ್ತಿದೆ. ಇದನ್ನು ನಿಯಂತ್ರಿಸಲು ಆಹಾರ ಕ್ರಮದೊಂದಿಗೆ ಜೀವನ ಶೈಲಿಯನ್ನೂ ಬದಲಾಯಿಸಬೇಕಿದೆ. ಯಾವ ಆಹಾರಗಳನ್ನು, ತರಕಾರಿಗಳನ್ನು ಸೇವಿಸಿದರೆ ರಕ್ತದೊತ್ತಡ ಕಡಿಮೆ ಮಾಡಬಹುದು? ಈ ಕುರಿತ ಉಪಯುಕ್ತ ಮಾಹಿತಿ ಇಲ್ಲಿದೆ.

VISTARANEWS.COM


on

By

Blood Pressure
Koo

ಇತ್ತೀಚಿನ ದಿನಗಳಲ್ಲಿ ಸಾಮಾನ್ಯವಾಗಿ ಎಲ್ಲರಲ್ಲೂ ಕಂಡು ಬರುತ್ತಿರುವ ಕಾಯಿಲೆ (Illness) ಮಧುಮೇಹ (diabetes) ಮತ್ತು ಅಧಿಕ ರಕ್ತದೊತ್ತಡ (Blood Pressure). ಇವೆರಡನ್ನೂ ನಿರ್ಲಕ್ಷಿಸಿದರೆ ಅಪಾಯ ಹೆಚ್ಚು. ಅದರಲ್ಲೂ ಅಧಿಕ ರಕ್ತದೊತ್ತಡವು (HIGH bp) ಸಾಮಾನ್ಯವಾಗಿ ನಾವು ಯೋಚಿಸುವುದಕ್ಕಿಂತ ಹೆಚ್ಚು ಅಪಾಯಕಾರಿಯಾಗಿರುತ್ತದೆ. ಅನಿಯಂತ್ರಿತ ರಕ್ತದೊತ್ತಡವು ಅಪಧಮನಿಗಳ ಮೇಲೆ ಪರಿಣಾಮ ಬೀರುತ್ತದೆ ಮತ್ತು ಹೃದ್ರೋಗದ ಅಪಾಯವನ್ನು ಹೆಚ್ಚಿಸುತ್ತದೆ.


ಇಂದಿನ ಜೀವನಶೈಲಿ, ಅನಾರೋಗ್ಯಕರ ಆಹಾರ ಪದ್ಧತಿ, ಅತಿಯಾದ ಒತ್ತಡ ಮತ್ತು ದೈಹಿಕ ನಿಷ್ಕ್ರಿಯತೆಯು ಅಧಿಕ ರಕ್ತದೊತ್ತಡಕ್ಕೆ ಮುಖ್ಯ ಕಾರಣವಾಗುತ್ತದೆ. ಆರೋಗ್ಯಕರ ರಕ್ತದೊತ್ತಡದ ಸಂಖ್ಯೆಯನ್ನು ಕಾಪಾಡಿಕೊಳ್ಳಲು ಸಮತೋಲಿತ ಆಹಾರದಿಂದ ಆರೋಗ್ಯಕರ ಜೀವನಶೈಲಿಯನ್ನು ಅನುಸರಿಸುವುದು ಬಹುಮುಖ್ಯ. ಹಲವಾರು ಸರಳ ಬದಲಾವಣೆಗಳು ರಕ್ತದೊತ್ತಡವನ್ನು ನೈಸರ್ಗಿಕವಾಗಿ ನಿಯಂತ್ರಿಸಲು ಸಹಾಯ ಮಾಡುತ್ತದೆ. ಆದರೂ ನೈಸರ್ಗಿಕವಾಗಿ ರಕ್ತದೊತ್ತಡವನ್ನು ಕಡಿಮೆ ಮಾಡಲು ಏನು ತಿನ್ನಬೇಕು ಎನ್ನುವುದು ಹೆಚ್ಚಿನವರಿಗೆ ತಿಳಿದಿಲ್ಲ.

ಹೆಚ್ಚು ಪೌಷ್ಟಿಕಾಂಶವನ್ನು ಹೊಂದಿರುವ ತರಕಾರಿಗಳನ್ನು ನಮ್ಮ ದೈನಂದಿನ ಆಹಾರಕ್ರಮದಲ್ಲಿ ಸೇರಿಸಿಕೊಳ್ಳುವುದರಿಂದ ರಕ್ತದೊತ್ತಡದ ನಿಯಂತ್ರಿಸಿಕೊಳ್ಳಬಹುದು. ಅವುಗಳು ಯಾವುದು ಗೊತ್ತೇ?


ಬೀಟ್ರೂಟ್

ಅಧ್ಯಯನಗಳ ಪ್ರಕಾರ ಬೀಟ್ರೂಟ್ ನಲ್ಲಿರುವ ನೈಟ್ರೇಟ್ ರಕ್ತದೊತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಬೀಟ್ರೂಟ್ ರಸವನ್ನು ಕುಡಿಯುವುದು ಅಥವಾ ಸಲಾಡ್, ಸೂಪ್ ಅಥವಾ ಮೇಲೋಗರಗಳಿಗೆ ಸೇರಿಸುವುದು ರಕ್ತದೊತ್ತಡವನ್ನು ನಿಯಂತ್ರಿಸಲು ಪ್ರಯೋಜನಕಾರಿಯಾಗಿದೆ.


ಹಸಿರು ಸೊಪ್ಪು ತರಕಾರಿಗಳು

ಹಸಿರು ಸೊಪ್ಪು ತರಕಾರಿಗಳು ಹೆಚ್ಚು ಪೌಷ್ಟಿಕಾಂಶವನ್ನು ಹೊಂದಿವೆ. ಸೊಪ್ಪು ರಕ್ತದೊತ್ತಡವನ್ನು ಕಡಿಮೆ ಮಾಡಲು ಮತ್ತು ಒಟ್ಟಾರೆ ಹೃದಯರಕ್ತನಾಳದ ಆರೋಗ್ಯವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ ಎಂದು ಸಂಶೋಧನೆ ತೋರಿಸಿದೆ. ಪಾಲಕ್, ಹಸಿರು ಬಾಳೆ ಮತ್ತು ಸಾಸಿವೆ ಗ್ರೀನ್ಸ್ ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ.


ಬೆಳ್ಳುಳ್ಳಿ

ಆಂಟಿಫಂಗಲ್ ಮತ್ತು ಆ್ಯಂಟಿಬಯೋಟಿಕ್ ಗುಣಗಳಿರುವ ಬೆಳ್ಳುಳ್ಳಿ ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಬೆಳ್ಳುಳ್ಳಿ ಕೂಡ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುತ್ತದೆ.


ಸಿಹಿ ಆಲೂಗಡ್ಡೆ

ಫೈಬರ್, ಪೊಟ್ಯಾಸಿಯಮ್ ಮತ್ತು ಮೆಗ್ನೀಸಿಯಮ್ ಹೇರಳವಾಗಿರುವ ಸಿಹಿ ಆಲೂಗಡ್ಡೆ ರಕ್ತದೊತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.


ಬ್ರೊಕೊಲಿ

ಬ್ರೊಕೊಲಿಯನ್ನು ಆಹಾರದಲ್ಲಿ ಸೇರಿಸುವುದು ಅಧಿಕ ಬಿಪಿಯನ್ನು ನಿಯಂತ್ರಿಸಲು ಪರಿಣಾಮಕಾರಿ ಮಾರ್ಗವಾಗಿದೆ. ಕೋಸುಗಡ್ಡೆಯು ಉತ್ಕರ್ಷಣ ನಿರೋಧಕಗಳು, ವಿಟಮಿನ್ ಸಿ, ಪೊಟ್ಯಾಸಿಯಮ್, ವಿಟಮಿನ್ ಕೆ, ಪ್ರೋಟೀನ್ ಮತ್ತು ಫೈಬರ್‌ನಿಂದ ಕೂಡಿದೆ.


ಆಲೂಗಡ್ಡೆ

ಆಲೂಗಡ್ಡೆ ಪೊಟ್ಯಾಸಿಯಮ್‌ನ ರಕ್ತದೊತ್ತಡ ನಿಯಂತ್ರಿಸಲು ಉತ್ತಮ ಮಾರ್ಗವಾಗಿದೆ. ಆಲೂಗಡ್ಡೆಯನ್ನು ಆಹಾರದಲ್ಲಿ ಹಲವಾರು ವಿಧದಲ್ಲಿ ಸೇರಿಸಿ ರಕ್ತದೊತ್ತಡವನ್ನು ದೂರವಿಡಬಹುದು.


ಇದನ್ನೂ ಓದಿ: Mobile Side Effect: ಅತಿಯಾದ ಮೊಬೈಲ್ ಬಳಕೆ; ಮಕ್ಕಳು ಕಿವುಡರಾಗುತ್ತಿದ್ದಾರೆ!

ಕ್ಯಾರೆಟ್

ದೃಷ್ಟಿಯ ಸಮಸ್ಯೆಯನ್ನು ನಿವಾರಿಸುವ ಕ್ಯಾರೆಟ್ ಹಲವಾರು ಪ್ರಯೋಜನಕಾರಿ ಸಸ್ಯ-ಆಧಾರಿತ ಸಂಯುಕ್ತಗಳನ್ನು ಹೊಂದಿರುತ್ತದೆ. ಇದು ನಿಯಂತ್ರಿತ ರಕ್ತದೊತ್ತಡ ಸೇರಿದಂತೆ ಅನೇಕ ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ.
ಅಧಿಕ ರಕ್ತದೊತ್ತಡ ಹೊಂದಿದ್ದರೆ ಇದಕ್ಕೆ ಕೇವಲ ಆಹಾರ ಮಾತ್ರ ಸಹಾಯ ಮಾಡುವುದಿಲ್ಲ. ದೈಹಿಕವಾಗಿ ಸಕ್ರಿಯವಾಗಿರುವುದು ಕೂಡ ಅಷ್ಟೇ ಅಗತ್ಯವಾಗಿದೆ. ಉಪ್ಪು ಸೇವನೆ, ಕೆಫೀನ್ ಅನ್ನು ಕಡಿಮೆ ಮಾಡುವುದು ಮತ್ತು ಒತ್ತಡದ ಮಟ್ಟವನ್ನು ನಿರ್ವಹಿಸುವುದು ಕೂಡ ಅತ್ಯಗತ್ಯ. ದೀರ್ಘಕಾಲದ ಅಧಿಕ ರಕ್ತದೊತ್ತಡ ಹೊಂದಿದ್ದರೆ ವೈದ್ಯರನ್ನು ಸಂಪರ್ಕಿಸಿ ಸೂಕ್ತ ಚಿಕಿತ್ಸೆ ಪಡೆಯುವುದು ಮುಖ್ಯ.

Continue Reading

ಆಹಾರ/ಅಡುಗೆ

Tips To Prevent Curd: ಮೊಸರು ಹುಳಿಯಾಗದೇ ಇರಲು ಈ ಟಿಪ್ಸ್ ಪಾಲಿಸಿ

Tips To Prevent Curd: ಮೊಸರು ಬೇಗನೆ ಹುಳಿಯಾಗುತ್ತದೆ. ಆದರೆ ಸರಿಯಾಗಿ ಸಂಗ್ರಹಿಸಿದರೆ ಅನೇಕ ದಿನಗಳವರೆಗೆ ಮೊಸರು ಹುಳಿಯಾಗುವುದನ್ನು ತಪ್ಪಿಸಬಹುದು. ಅದಕ್ಕಾಗಿ ಕೆಲವು ಸಲಹೆಗಳು ಇಲ್ಲಿವೆ.

VISTARANEWS.COM


on

By

Tips To Prevent Curd
Koo

ಬೇಸಿಗೆಯ (summer) ಬಿಸಿಲಿನಿಂದ ಪಾರಾಗಲು ದೇಹವನ್ನು ತಂಪು ಮಾಡುವ ಯಾವುದಾದರೂ ಪಾನೀಯ ಸಿಕ್ಕರೆ ಸಾಕು ಎಂದು ಬಯಸುತ್ತೇವೆ. ಆದರೆ ಏನೇನೋ ಕುಡಿದು ಆರೋಗ್ಯ ಹಾಳು ಮಾಡಿಕೊಳ್ಳುವುದಕ್ಕಿಂತ ಮನೆಯಲ್ಲಿ ಸುಲಭವಾಗಿ ಮೊಸರು (curd) ಬೆರೆಸಿ ಮಜ್ಜಿಗೆ (buttermilk) ಮಾಡಿದರೆ ದೇಹಕ್ಕೂ ತಂಪು ಮತ್ತು ಆರೋಗ್ಯಕರವೂ ಆಗಿರುತ್ತದೆ. ಆದರೆ ಬೇಸಗೆಯಲ್ಲಿ ಒಂದೇ ಚಿಂತೆ ಆಹಾರ ಪದಾರ್ಥಗಳು ಬೇಗ ಕೆಡುತ್ತವೆ ಎಂಬುದು. ಅದರಲ್ಲೂ ಮೊಸರು ಬಹುಬೇಗನೆ ಹುಳಿಯಾಗುತ್ತದೆ. ಇದನ್ನು ತಡೆಯಲು ಕೆಲವು ಟಿಪ್ಸ್ ಗಳನ್ನು (Tips To Prevent Curd) ಪಾಲಿಸಿದರೆ ಸಾಕು.


ಬೇಸಿಗೆಯಲ್ಲಿ ವಾತಾವರಣದ ಉಷ್ಣತೆಯ ಹೆಚ್ಚಳದಿಂದಾಗಿ ತೇವಾಂಶವುಳ್ಳ ಸ್ಥಳಗಳಲ್ಲಿ ಬ್ಯಾಕ್ಟೀರಿಯಾಗಳು ವೇಗವಾಗಿ ಬೆಳೆಯುತ್ತದೆ. ಇದರಿಂದ ಆಹಾರ ಪದಾರ್ಥಗಳ ಶೇಖರಣೆಯಲ್ಲಿ ಸ್ವಲ್ಪ ಅಜಾಗರೂಕತೆ ಉಂಟಾದರೂ ಆಹಾರವು ಬಹು ಬೇಗನೆ ಹಾಳಾಗುತ್ತದೆ. ಇದರಲ್ಲಿ ವಿಶೇಷವಾಗಿ ಡೈರಿ ಉತ್ಪನ್ನಗಳು.

ಮೊಸರು ಬೇಗನೆ ಹುಳಿಯಾಗುತ್ತದೆ. ಆದರೆ ಅದನ್ನು ಸರಿಯಾಗಿ ಸಂಗ್ರಹಿಸಿದರೆ ಅನೇಕ ದಿನಗಳವರೆಗೆ ಮೊಸರು ಹುಳಿಯಾಗುವುದನ್ನು ತಪ್ಪಿಸಬಹುದು. ಮಾರುಕಟ್ಟೆಯಲ್ಲಿ ಮೊಸರು ಸುಲಭವಾಗಿ ಸಿಗುತ್ತದೆಯಾದರೂ ಮನೆಯಲ್ಲಿ ತಯಾರಿಸಿದ ಮೊಸರಿಗೆ ಹೆಚ್ಚಿನವರು ಆದ್ಯತೆ ನೀಡುತ್ತಾರೆ. ಹೀಗಾಗಿ ಮನೆಯಲ್ಲಿ ತಯಾರಿಸಿದ ಮೊಸರನ್ನು ಹುಳಿಯಾಗದಂತೆ ರಕ್ಷಿಸಲು ಮತ್ತು ಸುದೀರ್ಘ ಕಾಲ ಅದು ಬಾಳಿಕೆ ಬರಲು ಅನುಸರಿಸಬಹುದಾದ ಕೆಲವು ಸಲಹೆಗಳು ಇಲ್ಲಿವೆ.


ಸಣ್ಣ ಭಾಗ ಮೊಸರು ಸೇರಿಸಿ

ಮೊಸರು ಹುಳಿಯಾಗದಂತೆ ತಡೆಯಲು ಒಂದು ಸುಲಭ ಮತ್ತು ಸರಳವಾದ ಉಪಾಯವೆಂದರೆ ಹಾಲಿಗೆ ಸೇರಿಸುವ ಮೊದಲು ಅದರ ಸ್ವಲ್ಪ ಭಾಗವನ್ನು ತೆಗೆದುಕೊಂಡು ಚೆನ್ನಾಗಿ ಮಿಕ್ಸ್ ಮಾಡಿ. ಬಿಸಿ ಹಾಲಿಗೆ ಮೊಸರು ಹಾಕಬಾರದು. ಹಾಲಿಗೆ ಮೊಸರು ಹಾಕಿದ ಬಳಿಕ ಚೆನ್ನಾಗಿ ಅದನ್ನು ಮಿಕ್ಸ್ ಮಾಡಿ. ಇದರಿಂದ ಹಾಲು ಶೀಘ್ರದಲ್ಲಿ ಮೊಸರಾಗುತ್ತದೆ ಮತ್ತು ಸುದೀರ್ಘ ಅವಧಿಯವರೆಗೆ ಬಾಳಿಕೆ ಬರುತ್ತದೆ.


ಮೊಸರು ಹುಳಿ ಕಡಿಮೆ ಮಾಡಿ

ಮನೆಯಲ್ಲಿ ತಯಾರಿಸಿದ ಮೊಸರಿನ ಹುಳಿಯನ್ನು ಕಡಿಮೆ ಮಾಡಲು ಇನ್ನೊಂದು ವಿಧಾನವೆಂದರೆ ಅದನ್ನು ಸರಿಯಾದ ವಿಧಾನದಲ್ಲಿ ಮಾಡುವುದು. ಮೊಸರಿನ ಮೇಲ್ಭಾಗ ಮತ್ತು ಅಂಚುಗಳಲ್ಲಿ ರೂಪುಗೊಳ್ಳುವ ದ್ರವವನ್ನು ತೆಗೆದುಹಾಕುವುದರಿಂದ ಹುಳಿ ಕಡಿಮೆಯಾಗುತ್ತದೆ. ಮೊಸರನ್ನು ರಾತ್ರಿಯಿಡೀ ಮಸ್ಲಿನ್ ಬಟ್ಟೆಯಲ್ಲಿ ಇಟ್ಟು ಜರಡಿಯಲ್ಲಿ ಸೋಸಿದರೆ ಆಮ್ಲೀಯತೆಯನ್ನು ಕಡಿಮೆ ಮಾಡಲು ಇದು ಸಹಾಯ ಮಾಡುತ್ತದೆ. ಹೀಗೆ ಮಾಡುವುದರಿಂದ ಮೊಸರಿನಲ್ಲಿ ಹಾಲಿನ ಘನಾಂಶಗಳು ಹೆಚ್ಚುತ್ತವೆ ಮತ್ತು ದಪ್ಪವಾಗುತ್ತವೆ. ಈ ಪ್ರಕ್ರಿಯೆಯನ್ನು ಲ್ಯಾಬ್ನೆ, ಗ್ರೀಕ್ ಮೊಸರು ಅದ್ದು ಮಾಡಲು ಬಳಸಲಾಗುತ್ತದೆ. ಇದನ್ನು ಬ್ರೆಡ್ನೊಂದಿಗೆ ತಿನ್ನಲು ರುಚಿಯಾಗಿರುತ್ತದೆ.


ಸರಿಯಾದ ಸಮಯ

ಮೊಸರನ್ನು ಬೆಳಗ್ಗೆ ಫ್ರೀಜ್ ಮಾಡುವುದು ಸರಿಯಲ್ಲ. ಇದರಿಂದ ಅದು ಹೆಚ್ಚು ದಪ್ಪವಾಗುವುದಿಲ್ಲ ಮತ್ತು ನೀರು ಬಿಡುವುದಿಲ್ಲ. ರಾತ್ರಿಯಲ್ಲೇ ಮೊಸರನ್ನು ಫ್ರೀಜ್ ಮಾಡಿದರೆ ಉತ್ತಮ. ಬೆಳಗ್ಗೆ ಅದು ಹೆಪ್ಪುಗಟ್ಟಿದಾಗ ಅದನ್ನು ಕೆಲವು ಗಂಟೆಗಳ ಕಾಲ ರೆಫ್ರಿಜರೇಟರ್ ನಲ್ಲಿ ಇರಿಸಿ. ಇದರಿಂದ ಮೊಸರು ಹೆಚ್ಚು ಹುಳಿಯಾಗುವುದಿಲ್ಲ. ಮತ್ತು ತಿನ್ನಲು ರುಚಿಯಾಗಿರುತ್ತದೆ.

ಇದನ್ನೂ ಓದಿ: Top 10 Puddings: ಭಾರತದ ಫಿರ್ನಿ, ಖೀರು, ಸಿಹಿ ಪೊಂಗಲ್‌ಗೆ ವಿಶ್ವದ ಟಾಪ್‌ 10 ತಿಂಡಿ ಪಟ್ಟಿಯಲ್ಲಿ ಸ್ಥಾನ!

ತಂಪಾದ ಸ್ಥಳದಲ್ಲಿ ಸಂಗ್ರಹಿಸಿ

ಮೊಸರನ್ನು ಬಿಸಿ ಸ್ಥಳದಲ್ಲಿಟ್ಟರೆ ಅದು ಬೇಗನೆ ಹುಳಿಯಾಗಲು ಪ್ರಾರಂಭಿಸುತ್ತದೆ. ಮೊಸರನ್ನು ಯಾವಾಗಲೂ ಕೋಣೆಯ ಉಷ್ಣಾಂಶಕ್ಕಿಂತ ಸ್ವಲ್ಪ ತಂಪಾಗಿರುವ ಸ್ಥಳದಲ್ಲಿ ಅಥವಾ ರೆಫ್ರಿಜರೇಟರ್‌ನಲ್ಲಿ ಇರಿಸಿ. ಅದರಲ್ಲೂ ಮೊಸರಿನ ಪಾತ್ರೆಯನ್ನು ಮಣ್ಣಿನ ಮಡಕೆಯಲ್ಲಿ ಇರಿಸಿ ಅಥವಾ ಎಸಿ ಅಥವಾ ಕೂಲರ್ ಹೊಂದಿರುವ ಕೋಣೆಯಲ್ಲಿ ಇಟ್ಟರೆ ಅದು ಬಹುಬೇಗನೆ ಹಾಳಾಗುವುದಿಲ್ಲ.

Continue Reading

ಆರೋಗ್ಯ

World Laughter Day 2024: ಇಂದು ವಿಶ್ವ ನಗುವಿನ ದಿನ; ನಗುನಗುತ ಬಾಳೋಣ

ನಗುವುದರಿಂದ ಆರೋಗ್ಯ ಎಷ್ಟೊಂದು ಲಾಭವಿದೆ ಗೊತ್ತೇ. ಇದನ್ನು ತಿಳಿಸಲೆಂದೇ ವಿಶ್ವದಾದ್ಯಂತ ಮೇ ತಿಂಗಳ ಮೊದಲ ಭಾನುವಾರ ವಿಶ್ವ ನಗುವಿನ ದಿನವನ್ನು (Laughter Day 2024) ಆಚರಿಸಲಾಗುತ್ತದೆ.

VISTARANEWS.COM


on

By

World Laughter Day
Koo

ಎಲ್ಲ ಕಾಯಿಲೆಗಳನ್ನು (illness) ದೂರ ಮಾಡುವ ಶಕ್ತಿ ನಗುವಿಗೆ ಇದೆ. ನಗು ನಮ್ಮ ದೇಹಾರೋಗ್ಯವನ್ನು ಮಾತ್ರವಲ್ಲ ಮನಸ್ಸಿನ ಆರೋಗ್ಯವನ್ನು (mental health) ಉತ್ತಮ ಗೊಳಿಸುತ್ತದೆ. ಹೀಗಾಗಿಯೇ ನಗುವಿನ ಪ್ರಾಮುಖ್ಯತೆಯನ್ನು ಸಾರಲು ವಿಶ್ವದಾದ್ಯಂತ ಮೇ (may) ತಿಂಗಳ ಮೊದಲ ಭಾನುವಾರ ವಿಶ್ವ ನಗುವಿನ ದಿನವನ್ನು (World Laughter Day) ಆಚರಿಸಲಾಗುತ್ತದೆ.


ಮೇ 5ರಂದು ಈ ಬಾರಿ ವಿಶ್ವ ನಗುವಿನ ದಿನವನ್ನು ಆಚರಿಸಲಾಗುತ್ತಿದೆ. ಈ ದಿನವು ಬಹಳಷ್ಟು ಪ್ರಾಮುಖ್ಯತೆಯನ್ನು ಹೊಂದಿದೆ. ಯಾಕೆಂದರೆ ಇದು ನಗುವಿನ ಅನೇಕ ಪ್ರಯೋಜನಗಳ ಬಗ್ಗೆ ಅರಿವು ಮೂಡಿಸುವ ಗುರಿಯನ್ನು ಹೊಂದಿದೆ.

ವಿಶ್ವ ನಗು ದಿನವನ್ನು ಮೊದಲ ಬಾರಿಗೆ 1998ರಲ್ಲಿ ಡಾ. ಮದನ್ ಕಟಾರಿಯಾ ಅವರು ಆಚರಿಸಬೇಕು ಎನ್ನುವುದನ್ನು ಪ್ರಸ್ತಾಪಿಸಿದರು. ಇದರ ಮುಖ್ಯ ಉದ್ದೇಶ ಜಾಗತಿಕ ಏಕತೆ ಮತ್ತು ಸ್ನೇಹದ ಭಾವವನ್ನು ಬೆಳೆಸುವುದಾಗಿತ್ತು. ಆದರೆ ಇದು ಮಾನಸಿಕ ಒತ್ತಡವನ್ನು ಕಡಿಮೆ ಮಾಡುವುದರಿಂದ ಮಾನಸಿಕ ಮತ್ತು ಭಾವನಾತ್ಮಕ ಆರೋಗ್ಯವನ್ನು ಸುಧಾರಿಸಲು ಪ್ರಯೋಜನಕಾರಿಯಾಗಿದೆ ಎಂಬುದು ಸಂಶೋಧನೆಗಳಿಂದ ಸಾಬೀತಾದ ಬಳಿಕ ವಿಶ್ವ ನಗುವಿನ ದಿನಾಚರಣೆಯ ಮಹತ್ವ ಮತ್ತಷ್ಟು ಹೆಚ್ಚಾಗಿದೆ.

ನಗುವಿನ ಪ್ರಯೋಜನಗಳೇನು?

ದಕ್ಷತೆ ಸುಧಾರಣೆ

ಸಂತೋಷದ ಸ್ವಭಾವ ಮತ್ತು ನಗು ಸರಳತೆಯ ಭಾವನೆಯನ್ನು ಪ್ರೋತ್ಸಾಹಿಸುವ ಮೂಲಕ ಉತ್ತಮ ಕೆಲಸದ ವಾತಾವರಣವನ್ನು ನಿರ್ಮಿಸಿ ಕೆಲಸದ ದಕ್ಷತೆಯನ್ನು ಹೆಚ್ಚಿಸುತ್ತದೆ.

ಪ್ರತಿರಕ್ಷಣಾ ವ್ಯವಸ್ಥೆಯನ್ನು ಬಲಪಡಿಸುತ್ತದೆ

ಒತ್ತಡವನ್ನು ಕಡಿಮೆ ಮಾಡುವ ಮೂಲಕ ನಗುವು ದೇಹದಲ್ಲಿ ಪ್ರತಿರಕ್ಷಣಾ ವ್ಯವಸ್ಥೆಯನ್ನು ಬಲ ಪಡಿಸುತ್ತದೆ. ರೋಗಗಳನ್ನು ದೂರವಿರಿಸುತ್ತದೆ. ಸಂತೋಷವನ್ನು ಸ್ವೀಕರಿಸುವ ಮನಸ್ಥಿತಿ ಇದ್ದರೆ ಜೀವನದ ಕಷ್ಟಗಳನ್ನು ಸುಲಭವಾಗಿ ನಿಭಾಯಿಸಲು ಮಾನಸಿಕವಾಗಿ ನಾವು ಸದೃಢರಾಗುತ್ತೇವೆ.

ಉತ್ತಮ ಹಾರ್ಮೋನು ಬಿಡುಗಡೆ

ನಗು ಎಂಡಾರ್ಫಿನ್‌ಗಳ ಆಗಮನವನ್ನು ಪ್ರಚೋದಿಸುತ್ತದೆ ಮತ್ತು ಅಡ್ರಿನಾಲಿನ್ ಮತ್ತು ಕಾರ್ಟಿಸೋಲ್‌ನಂತಹ ಒತ್ತಡದ ಹಾರ್ಮೋನ್‌ಗಳನ್ನು ಕಡಿಮೆ ಮಾಡುತ್ತದೆ. ಇದು ನೋವನ್ನು ನಿವಾರಿಸುತ್ತದೆ, ಕ್ಯಾಲೊರಿಗಳನ್ನು ಸುಡುತ್ತದೆ ಮತ್ತು ದೇಹದಲ್ಲಿನ ಅಂಗಗಳನ್ನು ಉತ್ತೇಜಿಸಲು ಸಹಾಯ ಮಾಡುತ್ತದೆ.

ಧನಾತ್ಮಕ ಚಿಂತನೆಗೆ ಪ್ರೇರಣೆ

ನಗು ಮನಸ್ಸು ಮತ್ತು ದೇಹವನ್ನು ಧನಾತ್ಮಕವಾಗಿ ಚಿಂತಿಸಲು ಪ್ರೇರಣೆ ನೀಡುತ್ತದೆ. ತೃಪ್ತಿ ಮತ್ತು ಆಸಕ್ತಿಯ ಭಾವನೆಯು ಖಿನ್ನತೆ, ಒತ್ತಡ ಮತ್ತು ಆತಂಕದಂತಹ ಮಾನಸಿಕ ಆರೋಗ್ಯ ಸಮಸ್ಯೆಗಳ ವಿರುದ್ಧ ಹೋರಾಡುತ್ತದೆ. ಇದು ಧನಾತ್ಮಕ ದೈಹಿಕ ಮತ್ತು ಭಾವನಾತ್ಮಕ ಬದಲಾವಣೆಗಳ ಮೇಲೆ ಮನಸ್ಸಿನ ಹಿಡಿತ ಸಾಧಿಸುವಂತೆ ಮಾಡುತ್ತದೆ.


ಆತ್ಮವಿಶ್ವಾಸ ವೃದ್ಧಿ

ನಗುವುದು ಮತ್ತು ಸಂತೋಷವನ್ನು ಅಳವಡಿಸಿಕೊಳ್ಳುವುದು ಸರಳ ಜೀವನಕ್ಕೆ ದಾರಿಯಾಗಿದೆ. ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಇದು ಸಹಾಯ ಮಾಡುತ್ತದೆ. ಪ್ರ ಆತ್ಮವಿಶ್ವಾಸವನ್ನು ವೃದ್ಧಿಸಿ ಶಾಂತ ಮನೋಭಾವವನ್ನು ಬೆಳೆಸುತ್ತದೆ.

ಅಸ್ವಸ್ಥತೆ ದೂರ

ನಗುವಿನಿಂದ ದೇಹದಲ್ಲಿ ಪ್ರತಿರಕ್ಷಣಾ ವ್ಯವಸ್ಥೆ ವೃದ್ಧಿಯಾಗಿ ಮಾನಸಿಕ ಅಸ್ವಸ್ಥತೆಯಿಂದ ನಮ್ಮನ್ನು ದೂರವಿರಿಸುತ್ತದೆ. ಒತ್ತಡದಂತಹ ಋಣಾತ್ಮಕ ಪರಿಣಾಮಗಳಿಂದ ನಮ್ಮನ್ನು ರಕ್ಷಿಸುತ್ತದೆ. ಒಳ್ಳೆಯ ನಗು ನಿಮ್ಮ ಮನಸ್ಸು ಮತ್ತು ದೇಹದ ನಡುವೆ ಸಾಮರಸ್ಯ ಉಂಟು ಮಾಡುತ್ತದೆ.

ಇದನ್ನೂ ಓದಿ: Covaxin: ಕೊವ್ಯಾಕ್ಸಿನ್‌ ಸುರಕ್ಷಿತ ಲಸಿಕೆ ಎಂದ ಭಾರತ್‌ ಬಯೋಟೆಕ್;‌ ಸೈಡ್‌ ಎಫೆಕ್ಟ್‌ ಆರೋಪದ ಬೆನ್ನಲ್ಲೇ ಸ್ಪಷ್ಟನೆ!

ಭಾವನೆಗಳ ಸಮತೋಲನ

ನಗು ನಮ್ಮಲ್ಲಿ ಭರವಸೆಯನ್ನು ಹುಟ್ಟುಹಾಕುತ್ತದೆ. ನಗು ನಮ್ಮನ್ನು ಇತರರೊಂದಿಗೆ ಸುಲಭವಾಗಿ ಹೊಂದಿಕೊಂಡು ಹೋಗಲು ಸಹಾಯ ಮಾಡುತ್ತದೆ. ಇದರಿಂದ ಆಕ್ರೋಶ ಕಡಿಮೆಯಾಗುತ್ತದೆ. ಕ್ಷಮೆಯ ಗುಣವನ್ನು ಉತ್ತೇಜಿಸುತ್ತದೆ.

ಸಂಬಂಧಗಳನ್ನು ಬಲಪಡಿಸುತ್ತದೆ

ನಗು ಸಂಬಂಧಗಳಲ್ಲಿ ಇರುವ ಹಲವಾರು ಸಮಸ್ಯೆಗಳನ್ನು ಪರಿಹರಿಸಲು, ಸಂಬಂಧಗಳನ್ನು ಬಲಪಡಿಸಲು ಮತ್ತು ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಉತ್ತೇಜಿಸಲು ಸಹಾಯ ಮಾಡುತ್ತದೆ.

Continue Reading
Advertisement
Beer Shortage
ಕರ್ನಾಟಕ9 mins ago

Beer Shortage: ಬೇಸಿಗೆಯಲ್ಲಿ ಮದ್ಯ ಪ್ರಿಯರಿಗೆ ಬ್ಯಾಡ್‌ ನ್ಯೂಸ್; ಇನ್ನೆರಡು ತಿಂಗಳು ಬಿಯರ್‌ ಸಿಗೋದು ಕಷ್ಟ!

Torn Jeans Styling Tips
ಫ್ಯಾಷನ್21 mins ago

Torn Jeans Styling Tips: ಟೊರ್ನ್‌ ಜೀನ್ಸ್‌ ಪ್ಯಾಂಟ್‌ ಪ್ರಿಯರು ನೆನಪಿನಲ್ಲಿಟ್ಟುಕೊಳ್ಳಬೇಕಾದ 5 ಪ್ರಮುಖ ಸಂಗತಿಗಳು

lok sabha Election 2024 Bus Fare Hike
Lok Sabha Election 202423 mins ago

Lok Sabha Election 2024 : ಮತದಾನದ ಹಬ್ಬದಲ್ಲೂ ಲೂಟಿಗೆ ಇಳಿದ ಖಾಸಗಿ ಬಸ್‌! ವೋಟ್‌ ಹಾಕಲು ಬಸ್‌ ಏರುವವರಿಗೆ ಟಿಕೆಟ್ ದುಬಾರಿ!‌

IPL 2024
Latest26 mins ago

IPL 2024 : ಚೆನ್ನೈ ತಂಡದ ಮಾರಕ ಬೌಲರ್ ಮಹೀಶ್​ ಪತಿರಾನಾ​ ಐಪಿಎಲ್​ನಿಂದ ಹೊರಕ್ಕೆ

MI vs SRH
ಕ್ರೀಡೆ60 mins ago

MI vs SRH: ಸನ್ ಸ್ಟ್ರೋಕ್​ನಿಂದ ತಪ್ಪಿಸಿಕೊಂಡೀತೇ ಮುಂಬೈ ಇಂಡಿಯನ್ಸ್​​?

Kavitha Gowda chandan expected First Child
ಕಿರುತೆರೆ1 hour ago

Kavitha Gowda: ಮೊದಲ ಮಗುವಿನ ನಿರೀಕ್ಷೆಯಲ್ಲಿʻಲಕ್ಷ್ಮೀಬಾರಮ್ಮʼ ಧಾರಾವಾಹಿ ಖ್ಯಾತಿಯ ಜೋಡಿ

Met Gala 2024 Alia Bhatt attend
ಬಾಲಿವುಡ್1 hour ago

Met Gala 2024: ಮೆಟ್‌ ಗಾಲಾದಲ್ಲಿ ಆಲಿಯಾ ಹಾಜರಿ: ಪ್ರಿಯಾಂಕಾ ಚೋಪ್ರಾ ಗೈರು!

IPL2024
ಕ್ರೀಡೆ1 hour ago

IPL 2024 : ಮ್ಯಾಕ್ಸಿ ಐಪಿಎಲ್​ನಲ್ಲಿ ಬರೀ ಬೂಸಿ; ಮ್ಯಾಕ್ಸ್​ವೆಲ್​ ಆಟಕ್ಕೆ ಅಭಿಮಾನಿಗಳ ಆಕ್ರೋಶ

Job Alert
ಉದ್ಯೋಗ1 hour ago

Job Alert: ನವೋದಯ ವಿದ್ಯಾಲಯ ಸಮಿತಿಯಿಂದ 1,377 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; ಮೇ 7ರೊಳಗೆ ಅಪ್ಲೈ ಮಾಡಿ

Ithichanda Ramesh Uthappaʼs Four books to be released in Mysore on May 9
ಮೈಸೂರು1 hour ago

Book Release: ಮೈಸೂರಿನಲ್ಲಿ ಮೇ 9ರಂದು ಐತಿಚಂಡ ರಮೇಶ ಉತ್ತಪ್ಪ ಅವರ 4 ಪುಸ್ತಕ ಬಿಡುಗಡೆ, ಸಂವಾದ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ12 hours ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ2 days ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ2 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ3 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ3 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ4 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ6 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20246 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20246 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ7 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

ಟ್ರೆಂಡಿಂಗ್‌