BCCI Selection Committee: ಆಯ್ಕೆ ಸಮಿತಿ ಮುಖ್ಯಸ್ಥ ಸ್ಥಾನದ ರೇಸ್​ನಲ್ಲಿ ವೆಂಕಟೇಶ್ ಪ್ರಸಾದ್, ಶಿವಸುಂದರ್ ದಾಸ್ - Vistara News

ಕ್ರಿಕೆಟ್

BCCI Selection Committee: ಆಯ್ಕೆ ಸಮಿತಿ ಮುಖ್ಯಸ್ಥ ಸ್ಥಾನದ ರೇಸ್​ನಲ್ಲಿ ವೆಂಕಟೇಶ್ ಪ್ರಸಾದ್, ಶಿವಸುಂದರ್ ದಾಸ್

ಬಿಸಿಸಿಐ ಮೂಲಗಳ ಪ್ರಕಾರ ಶಿವಸುಂದರ್ ದಾಸ್ ಅವರು ಭಾರತ ಕ್ರಿಕೆಟ್​ ತಂಡದ ಆಯ್ಕೆ ಸಮಿತಿಯ ಅಧ್ಯಕ್ಷರಾಗಿ ನೆಮಕಗೊಳ್ಳುವುದು ಬಹುತೇಕ ಖಚಿತ ಎಂದು ವರದಿಯಾಗಿದೆ.

VISTARANEWS.COM


on

Shiv Sunder Das
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಖಾಸಗಿ ವಾಹಿನಿಯೊಂದು ನಡೆಸಿದ ರಹಸ್ಯ ಕಾರ್ಯಾಚರಣೆಯಲ್ಲಿ ಟೀಮ್ ಇಂಡಿಯಾದ ಕುರಿತು ಹಲವು ಆಘಾತಕಾರಿ ವಿಚಾರಗಳನ್ನು ಬಹಿರಂಗಪಡಿಸಿದ ಚೇತನ್ ಶರ್ಮಾ(Chetan Sharma) ಭಾರತ ಕ್ರಿಕೆಟ್​ ತಂಡದ ಮುಖ್ಯ ಆಯ್ಕೆಗಾರ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ್ದಾರೆ. ಇದೀಗ ಈ ಸ್ಥಾನಕ್ಕೆ ಶಿವಸುಂದರ್ ದಾಸ್ ಮತ್ತು ವೆಂಕಟೇಶ್ ಪ್ರಸಾದ್ ಹೆಸರು ಕೇಳಿಬಂದಿದೆ.

ಸದ್ಯ ಬಿಸಿಸಿಐ ಆಯ್ಕೆ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಘಟಾನುಘಟಿ ಮಾಜಿ ಆಟಗಾರರ ಹೆಸರು ಕೇಳಿಬಂದಿದ್ದರೂ ಕನ್ನಡಿಗ ಹಾಗೂ ಟೀಮ್​ ಇಂಡಿಯಾ ಮಾಜಿ ಆಟಗಾರ ವೆಂಕಟೇಶ್ ಪ್ರಸಾದ್ ಅಥವಾ ಶಿವಸುಂದರ್ ದಾಸ್ ಹೆಸರು ಮುಂಚೂಣಿಯಲ್ಲಿ ಕಾಣಿಸಿಕೊಂಡಿದೆ.

ಈ ಹಿಂದೆ ಟಿ20 ವಿಶ್ವ ಕಪ್‌ ಮತ್ತು ಏಷ್ಯಾಕಪ್​ನಲ್ಲಿ ಭಾರತ ತಂಡ ನಿರಾಶಾದಾಯಕ ಪ್ರದರ್ಶನ ನೀಡಿದ ಕಾರಣ ತಲೆದಂಡವಾಗಿ ಬಿಸಿಸಿಐ(BCCI ) ಚೇತನ್​ ಶರ್ಮಾ ಅವರನ್ನು ಆಯ್ಕೆ ಮಂಡಳಿಯ ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿತ್ತು. ಈ ಸಮಯದಲ್ಲಿಯೂ ಉಭಯ ಆಟಗಾರರ ಹೆಸರು ಕೇಳಿಬಂದಿತ್ತು. ಆದರೆ ಬಿಸಿಸಿಐ ಮತ್ತೆ ಚೇತನ್​ ಶರ್ಮಾ ಅವರಿಗೆ ಅಧ್ಯಕ್ಷ ಸ್ಥಾನ ನೀಡಿ ಅಚ್ಚರಿ ಮೂಡಿಸಿತ್ತು. ಇದೀಗ ಮತ್ತೆ ಇವರ ಹೆಸರು ಕೇಳಿ ಬಂದಿದೆ.

ಬಿಸಿಸಿಐ ಮೂಲಗಳ ಪ್ರಕಾರ ಶಿವಸುಂದರ್ ದಾಸ್ ಅವರು ಆಯ್ಕೆ ಸಮಿತಿಯ ಅಧ್ಯಕ್ಷರಾಗಿ ನೇಮಕಗೊಳ್ಳುವುದು ಖಚಿತ ಎಂದು ಹೇಳಲಾಗುತ್ತಿದೆ. ಆದರೆ ಈ ಬಗ್ಗೆ ಬಿಸಿಸಿಐ ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ.

ಒಂದು ವೇಳೆ ಆಯ್ಕೆ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ವೆಂಕಟೇಶ್ ಪ್ರಸಾದ್ ಆಯ್ಕೆಯಾದರೆ ಟೀಮ್​ ಇಂಡಿಯಾದಲ್ಲಿ ಮೇಜರ್​ ಸರ್ಜರಿ ಆಗುವುದು ನಿಶ್ಚಿತ. ಏಕೆಂದರೆ ಕಳಪೆ ಬ್ಯಾಟಿಂಗ್​ ಪ್ರದರ್ಶನ ತೋರುತ್ತಿರುವ ಕೆ.ಎಲ್​ ರಾಹುಲ್​ ಬಗ್ಗೆ ಕೆಲ ದಿನಗಳ ಹಿಂದೆ ಕಿಡಿಕಾರಿದ್ದರು.

ಇದನ್ನೂ ಓದಿ Chetan Sharma resign: ಭಾರತೀಯ ಕ್ರಿಕೆಟ್ ಆಯ್ಕೆ ಸಮಿತಿಯ ಮುಖ್ಯಸ್ಥನ ಸ್ಥಾನಕ್ಕೆ ಚೇತನ್ ಶರ್ಮಾ ರಾಜೀನಾಮೆ

ಎಂಟು ವರ್ಷ ಅಂತಾರಾಷ್ಟ್ರೀಯ ಪಂದ್ಯ ಆಡಿದ ಹೊರತಾಗಿಯೂ ಇಷ್ಟೊಂದು ಕಳಪೆ ಪ್ರದರ್ಶನ ನೀಡುವುದು ಸರಿಯಲ್ಲ. ಅಶ್ವಿನ್​ ಅವರಂಥ ನುರಿತ ಆಟಗಾರ ಇರುವ ಹೊರತಾಗಿಯೂ ರಾಹುಲ್​ಗೆ ಟೆಸ್ಟ್​ ತಂಡದಲ್ಲಿ ಉಪನಾಯಕನ ಸ್ಥಾನ ನೀಡಿರುವ ಕ್ರಮವನ್ನು ಪ್ರಶ್ನಿಸಿ ಸರಣಿ ಟ್ವೀಟ್​ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದರು. ಹೀಗಾಗಿ ಅವರು ಒಂದೊಮ್ಮೆ ಆಯ್ಕೆ ಸಮಿತಿ ಮುಖ್ಯಸ್ಥನಾದರೆ ರಾಹುಲ್​ಗೆ ಕಂಟಕವೊಂದು ಕಾದಿದೆ ಎನ್ನಬಹುದು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

MS Dhoni: ಆ ಒಂದು ರನ್​​ ಔಟ್ ನನ್ನ ​​ ಕ್ರಿಕೆಟ್​ ವೃತ್ತಿ ಜೀವನದ ಅತ್ಯಂತ ಕೆಟ್ಟ ಕ್ಷಣ; ವಿಶ್ವ ಕಪ್​ ಆಘಾತವನ್ನು ವಿವರಿಸಿದ ಧೋನಿ

MS Dhoni: 2019ರ ವಿಶ್ವ ಕಪ್​ನಲ್ಲಿ ಪ್ರಬಲ ಪ್ರದರ್ಶನದೊಂದಿಗೆ ಲೀಗ್ ಹಂತದಲ್ಲಿ ಅಗ್ರಸ್ಥಾನದಲ್ಲಿದ್ದ ಭಾರತವು ಹೆಚ್ಚಿನ ಭರವಸೆ ಹೊಂದಿತ್ತು. ಆದಾಗ್ಯೂ, ಮ್ಯಾಂಚೆಸ್ಟರ್ನ ಓಲ್ಡ್ ಟ್ರಾಫರ್ಡ್​ನಲ್ಲಿ ನಡೆದ ಸೆಮಿಫೈನಲ್ ಭಾರತ ಸೋತಿತು. ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ ಗೆ 240 ರನ್ ಗಳ ಟಾರ್ಗೆಟ್ ಭಾರತಕ್ಕೆ ನೀಡಿತ್ತು. ಮಳೆಯಿಂದಾಗಿ ಪಂದ್ಯವನ್ನು ಮೀಸಲು ದಿನಕ್ಕೆ ವಿಸ್ತರಿಸಲಾಗಿತ್ತು. ಭಾರತ ಗೆಲುವಿನ ನೆಚ್ಚಿನ ತಂಡವಾಗಿತ್ತು.

VISTARANEWS.COM


on

MS Dhoni
Koo

ನವದೆಹಲಿ: 2019ರ ಏಕ ದಿನ ವಿಶ್ವ ಕಪ್​ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ವಿರುದ್ಧ ಸೋತಿರುವುದು ತಮ್ಮ ವೃತ್ತಿ ಜೀವನದ ಅತ್ಯಂತ ‘ಹೃದಯ ವಿದ್ರಾವಕ ಕ್ಷಣ’ ಎಂಬುದಾಗಿ ಧೋನಿ (MS Dhoni) ಹೇಳಿದ್ದಾರೆ. 2019 ರಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಏಕದಿನ ವಿಶ್ವಕಪ್ ಸೆಮಿಫೈನಲ್ ಪಂದ್ಯವು ಶತಕೋಟಿ ಭಾರತೀಯ ಕ್ರಿಕೆಟ್ ಅಭಿಮಾನಿಗಳನ್ನು ಬೇಸರಕ್ಕೆ ನೂಕಿತ್ತು. ಜುಲೈ ರಂದು ನಡೆದ ಈ ಪಂದ್ಯವು ಭಾರತೀಯ ಕ್ರಿಕೆಟ್ ಅಭಿಮಾನಿಗಳ ಭಾವನೆಗಳನ್ನು ಕೆರಳಿಸಿತ್ತು. ಭಾರತಕ್ಕೆ ನಾಟಕೀಯ ಸೋಲಾಗಿತ್ತು. ಇದು ಕೇವಲ ನಷ್ಟವಲ್ಲ, ಇದು ಶತಕೋಟಿ ಕನಸುಗಳ ಅಂತ್ಯವಾಗಿತ್ತು. ಯಾಕೆಂದರೆ ಅದು ಧೋನಿ ಆ ಪಂದ್ಯದಲ್ಲಿ ರನ್​ ಔಟ್ ಆಗಿದ್ದು ಸೋಲಿಗೆ ಕಾರಣವಾಗಿತ್ತು.

2004 ರಲ್ಲಿ ಚೊಚ್ಚಲ ಪಂದ್ಯದಲ್ಲೇ ರನ್ ಔಟ್ ಮಾಡುವ ಮೂಲಕ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದ ವಿಕೆಟ್ ಕೀಪರ್-ಬ್ಯಾಟರ್​ ತಮ್ಮ ಏಕದಿನ ವೃತ್ತಿಜೀವನವನ್ನು ರನ್​ಔಟ್​ ಆಗುವ ಮೂಲಕ ಕೊನೆಗೊಳಿಸಿದ್ದರು. ಆ ವಿಶ್ವ ಕಪ್​ ಬಳಿಕ ಧೋನಿ ವಿದಾಯ ಹೇಳಿದ್ದರು.

2019ರ ವಿಶ್ವ ಕಪ್​ನಲ್ಲಿ ಪ್ರಬಲ ಪ್ರದರ್ಶನದೊಂದಿಗೆ ಲೀಗ್ ಹಂತದಲ್ಲಿ ಅಗ್ರಸ್ಥಾನದಲ್ಲಿದ್ದ ಭಾರತವು ಹೆಚ್ಚಿನ ಭರವಸೆ ಹೊಂದಿತ್ತು. ಆದಾಗ್ಯೂ, ಮ್ಯಾಂಚೆಸ್ಟರ್ನ ಓಲ್ಡ್ ಟ್ರಾಫರ್ಡ್​ನಲ್ಲಿ ನಡೆದ ಸೆಮಿಫೈನಲ್ ಭಾರತ ಸೋತಿತು. ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ ಗೆ 240 ರನ್ ಗಳ ಟಾರ್ಗೆಟ್ ಭಾರತಕ್ಕೆ ನೀಡಿತ್ತು. ಮಳೆಯಿಂದಾಗಿ ಪಂದ್ಯವನ್ನು ಮೀಸಲು ದಿನಕ್ಕೆ ವಿಸ್ತರಿಸಲಾಗಿತ್ತು. ಭಾರತ ಗೆಲುವಿನ ನೆಚ್ಚಿನ ತಂಡವಾಗಿತ್ತು.

ಇದನ್ನೂ ಓದಿ: SL vs IND : ಲಂಕಾಗೆ ಗಾಯದ ಸಂಕಟ; ಏಕದಿನ ಸರಣಿಯಿಂದ ದಿಲ್ಶಾನ್ ಮಧುಶಂಕಾ, ಮತೀಶಾ ಪಥಿರಾನಾ ಔಟ್

ಭಾರತದ ಚೇಸಿಂಗ್​ ಕೆಟ್ಟದಾಗಿ ಪ್ರಾರಂಭವಾಯಿತು. ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮತ್ತು ಕೆಎಲ್ ರಾಹುಲ್ ಸೇರಿದಂತೆ ಅಗ್ರ ಕ್ರಮಾಂಕದ ಬ್ಯಾಟರ್​ಗಳು ವಿಫಲಗೊಂಡರು. ಈ ವೇಳೆ ಅಭಿಮಾನಿಗಳಲ್ಲಿ ಅಪನಂಬಿಕೆಯ ಭಾವನೆ ಹರಡಿತು. ನಂತರ ರವೀಂದ್ರ ಜಡೇಜಾ ಮತ್ತು ಎಂಎಸ್ ಧೋನಿ ಇನ್ನಿಂಗ್ಸ್ ಕಟ್ಟುವ ಕೆಲಸ ಆರಂಭಿಸಿದರು. ಇದು ತಂಡದಲ್ಲಿ ಹಾಗೂ ಅಭಿಮಾನಿಗಳಿಗೆ ಭರವಸೆ ಮೂಡಿಸಿತು.

ಜಡೇಜಾ 59 ಎಸೆತಗಳಲ್ಲಿ 77 ರನ್ ಗಳಿಸಿದರು. ಅವರು ಔಟಾದ ನಂತರ ಭಾರತಕ್ಕೆ ಕೊನೆಯ 12 ಎಸೆತಗಳಲ್ಲಿ 31 ರನ್​ಗಳ ಅವಶ್ಯಕತೆಯಿತ್ತು. ಕೂಲ್ ಆಟಗಾರ ಧೋನಿ ರಾಷ್ಟ್ರದ ಭರವಸೆಗಳ ಭಾರವನ್ನು ಹೊತ್ತಿದ್ದರು. ಗೆಲುವಿಗೆ 10 ಎಸೆತಗಳಲ್ಲಿ 25 ರನ್​ಗಳ ಅವಶ್ಯಕತೆಯಿತ್ತು. ಅದು ಕಷ್ಟವಾಗಿರಲಿಲ್ಲ.

ಧೋನಿ ರನೌಟ್

ಮಾರ್ಟಿನ್ ಗಪ್ಟಿಲ್ ಅವರ ಫೀಲ್ಡಿಂಗ್​ ಧೋನಿಯನ್ನು ಕ್ರೀಸ್ ನಿಂದ ಹೊರಗಿಡಿತು. ಧೋನಿಯ ರನೌಟ್ ಭಾರತದ ವಿಶ್ವಕಪ್ ಕನಸನ್ನು ಭಗ್ನಗೊಳಿಸಿತು. ಅವರು ಪೆವಿಲಿಯನ್ ಗೆ ಹಿಂತಿರುಗುತ್ತಿದ್ದಂತೆ ಸ್ಟೇಡಿಯಮ್​ ಮೌನವಾಯಿತು. ಪ್ರಪಂಚದಾದ್ಯಂತದ ಅಭಿಮಾನಿಗಳು ಆಘಾತಕ್ಕೊಳಗಾಗಿದ್ದರು.

ಈ ಸೋಲು ಹೃದಯ ವಿದ್ರಾವಕ ಘಟನೆ ಎಂದು ಧೋನಿ ಒಪ್ಪಿಕೊಂಡಿದ್ದಾರೆ. “ಇದು ಕಷ್ಟಕರವಾಗಿತ್ತು ಏಕೆಂದರೆ ಇದು ನನ್ನ ಕೊನೆಯ ವಿಶ್ವಕಪ್ ಎಂದು ನನಗೆ ತಿಳಿದಿತ್ತು. ಆದ್ದರಿಂದ ಗೆಲುವು ನನಗ ಅನಿವಾರ್ಯವಾಗಿತ್ತು. ಆದರೆ ರನ್​ಔಟ್​​ ಹೃದಯ ವಿದ್ರಾವಕ ಕ್ಷಣವಾಗಿತ್ತು, “ಎಂದು ಧೋನಿ ಕಾರ್ಯಕ್ರಮವೊಂದರಲ್ಲಿ ಹೇಳಿದರು.

ವಿಶ್ವ ಕಪ್​ ಅತ್ಯುತ್ತಮ ಸಮಯವಾಗಿತ್ತು. ಆದರೆ, ರನ್​ಔಟ್ ಬಳಿಕ ಆದ ಸೋಲು ಬೇಸರ ಮೂಡಿತು. ಅದರಿಂದ ಸುಧಾರಿಸಿಕೊಳ್ಳುವುದಕ್ಕೆ ಸ್ವಲ್ಪ ಸಮಯ ತೆಗೆದುಕೊಂಡೆ. ಅದರ ನಂತರ ನಾನು ಅಂತರರಾಷ್ಟ್ರೀಯ ಪಂದ್ಯವನ್ನು ಆಡಿಲ್ಲ, ಆದ್ದರಿಂದ ನನಗೆ ಸಾಕಷ್ಟು ಸಮಯ ಸಿಕ್ಕಿತು ಎಂದು ಧೋನಿ ಹೇಳಿದ್ದಾರೆ.

Continue Reading

ಪ್ರಮುಖ ಸುದ್ದಿ

SL vs IND : ಲಂಕಾಗೆ ಗಾಯದ ಸಂಕಟ; ಏಕದಿನ ಸರಣಿಯಿಂದ ದಿಲ್ಶಾನ್ ಮಧುಶಂಕಾ, ಮತೀಶಾ ಪಥಿರಾನಾ ಔಟ್

SL vs IND :ಫೀಲ್ಡಿಂಗ್ ಅಭ್ಯಾಸದ ಸಮಯದಲ್ಲಿ ಮಧುಶಂಕಾ ಎಡ ಸ್ನಾಯುಸೆಳೆತದ ಗಾಯದಿಂದ (ಗ್ರೇಡ್ 2) ಬಳಲುತ್ತಿದ್ದಾರೆ. ಮೂರನೇ ಟಿ 20 ಐ ಸಮಯದಲ್ಲಿ ಕ್ಯಾಚ್ ಪಡೆಯಲು ಡೈವಿಂಗ್ ಮಾಡುವಾಗ ಪಥಿರಾನಾ ಅವರ ಬಲ ಭುಜದ ಮೇಲೆ ಗಾಯವಾಘಿತ್ತು. ಅವರು ನೋವಿನಿಂದ ಬಳಲುತ್ತಿರುವುದರಿಂದ ಅವರು 50 ಓವರ್​ಗಳ ಸ್ವರೂಪದಲ್ಲಿ ಕಾಣಿಸಿಕೊಳ್ಳುವುದಿಲ್ಲ.

VISTARANEWS.COM


on

Koo

ಬೆಂಗಳೂರು: ರೋಹಿತ್​ ಶರ್ಮಾ (Rohit Sharma) ನೇತೃತ್ವದ ಪ್ರವಾಸಿ ಭಾರತ ವಿರುದ್ಧದ ಏಕದಿನ ಸರಣಿಗೆ (SL vs IND) ಮುಂಚಿತವಾಗಿ ಶ್ರೀಲಂಕಾದ ವೇಗದ ಬೌಲರ್​ಗಳಾದ ದಿಲ್ಶಾನ್ ಮಧುಶಂಕಾ ಮತ್ತು ಮಥೀಶಾ ಪಥಿರಾನಾ ಗಾಯದ ಕಾರಣ ಹೊರಗುಳಿದಿದ್ದಾರೆ. ಮಧುಶಂಕಾ ಮತ್ತು ಪಥಿರಾನಾ ಇಬ್ಬರೂ ಇತ್ತೀಚೆಗೆ ಉಭಯ ತಂಡಗಳ ನಡುವಿನ ಟಿ 20 ಐ ಸರಣಿಯಲ್ಲಿ ಕಾಣಿಸಿಕೊಂಡಿದ್ದರು. ಅವರಿಬ್ಬರೂ ಕ್ರಮವಾಗಿ ಒಂದು ಮತ್ತು ಐದು ವಿಕೆಟ್​ಗಳನ್ನು ಪಡೆದಿದ್ದಾರೆ.

ಫೀಲ್ಡಿಂಗ್ ಅಭ್ಯಾಸದ ಸಮಯದಲ್ಲಿ ಮಧುಶಂಕಾ ಎಡ ಸ್ನಾಯುಸೆಳೆತದ ಗಾಯದಿಂದ (ಗ್ರೇಡ್ 2) ಬಳಲುತ್ತಿದ್ದಾರೆ. ಮೂರನೇ ಟಿ 20 ಐ ಸಮಯದಲ್ಲಿ ಕ್ಯಾಚ್ ಪಡೆಯಲು ಡೈವಿಂಗ್ ಮಾಡುವಾಗ ಪಥಿರಾನಾ ಅವರ ಬಲ ಭುಜದ ಮೇಲೆ ಗಾಯವಾಘಿತ್ತು. ಅವರು ನೋವಿನಿಂದ ಬಳಲುತ್ತಿರುವುದರಿಂದ ಅವರು 50 ಓವರ್​ಗಳ ಸ್ವರೂಪದಲ್ಲಿ ಕಾಣಿಸಿಕೊಳ್ಳುವುದಿಲ್ಲ.

ಬದಲಿ ಆಟಗಾರರಾಗಿ ಮೊಹಮ್ಮದ್ ಶಿರಾಜ್ ಮತ್ತು ಇಶಾನ್ ಮಾಲಿಂಗ ಅವರನ್ನು ಆಯ್ಕೆದಾರರು ಹೆಸರಿಸಿದ್ದಾರೆ. ಇಬ್ಬರೂ ಯುವ ಆಟಗಾರರು ಇನ್ನೂ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಇನ್ನೂ ಪದಾರ್ಪಣೆ ಮಾಡಿಲ್ಲ. ಇವರಲ್ಲದೆ, ಕುಸಾಲ್ ಜನಿತ್, ಪ್ರಮೋದ್ ಮಧುಶನ್ ಮತ್ತು ಜೆಫ್ರಿ ವಾಂಡರ್ಸೆ ಅವರನ್ನು ಸ್ಟ್ಯಾಂಡ್​ಬೈ ಆಟಗಾರರಾಗಿ ತಂಡಕ್ಕೆ ಸೇರಿಕೊಂಡಿದ್ದಾರೆ.

ಇದನ್ನೂ ಓದಿ: MS Dhoni : ಸಿಎಸ್​​ಕೆಗೆ ನ್ಯಾಯ ಸಲ್ಲಿಸುವೆ; ಐಪಿಎಲ್ ನಿವೃತ್ತಿ ಕುರಿತು ಸ್ಪಷ್ಟನೆ ನೀಡಿದ ಎಂಎಸ್​ ಧೋನಿ

ಮಥೀಶಾ ಪಥಿರಾನಾ ಮತ್ತು ದಿಲ್ಶಾನ್ ಮಧುಶಂಕಾ ಅವರು ಗಾಯದ ಕಾರಣ ಏಕದಿನ ಸರಣಿಯಲ್ಲಿ ಭಾಗವಹಿಸುವುದಿಲ್ಲ. ದಿಲ್ಶಾನ್ ಮಧುಶಂಕಾ ಅವರು ಅಭ್ಯಾಸದ ಸಮಯದಲ್ಲಿ ಫೀಲ್ಡಿಂಗ್ ಮಾಡುವಾಗ ಎಡ ಸ್ನಾಯುಸೆಳೆತದ ಗಾಯದಿಂದ (ಗ್ರೇಡ್ 2) ಬಳಲುತ್ತಿದ್ದರು. ಭಾರತ ವಿರುದ್ಧದ ಮೂರನೇ ಟಿ 20 ಪಂದ್ಯದ ವೇಳೆ ಕ್ಯಾಚ್ ಹಿಡಿಯಲು ಡೈವಿಂಗ್ ಮಾಡುವಾಗ ಪಥಿರಾನಾ ಅವರ ಬಲ ಭುಜಕ್ಕೆ ನೋವು ಮಾಡಿಕೊಂಡಿದ್ದರು ಎಂದು ಶ್ರೀಲಂಕಾ ಕ್ರಿಕೆಟ್ ತನ್ನ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದೆ.

ಕ್ರಿಕೆಟ್ ಆಯ್ಕೆದಾರರು ಮೇಲಿನ ಇಬ್ಬರ ಬದಲಿ ಆಟಗಾರರಾಗಿ ಮೊಹಮ್ಮದ್ ಶಿರಾಜ್ ಮತ್ತು ಇಶಾನ್ ಮಾಲಿಂಗ ಅವರನ್ನು ಕರೆತಂದಿದ್ದಾರೆ. ಈ ಮಧ್ಯೆ, ಈ ಕೆಳಗಿನ ಮೂವರು ಆಟಗಾರರನ್ನು ಸ್ಟ್ಯಾಂಡ್ಬೈಗಳಾಗಿ ತಂಡಕ್ಕೆ ಸೇರಿಸಲಾಗಿದೆ.1) ಕುಸಾಲ್ ಜನಿತ್ 2) ಪ್ರಮೋದ್ ಮಧುಶನ್ 3) ಜೆಫ್ರಿ ವಾಂಡರ್ಸೆ, “ಎಂದು ಅವರು ಹೇಳಿದರು.

ಚಮೀರಾ ಮತ್ತು ತುಷಾರ ಅವರ ಸೇವೆಯೂ ಅಲಭ್ಯ

ಭಾರತ ವಿರುದ್ಧದ ಇತ್ತೀಚಿನ ಟಿ 20 ಐ ಸರಣಿಗೆ ಮುಂಚಿತವಾಗಿ ದುಷ್ಮಂತ ಚಮೀರಾ ಮತ್ತು ನುವಾನ್ ತುಷಾರಾ ಅವರ ಸೇವೆಗಳನ್ನು ಕಳೆದುಕೊಂಡ ಶ್ರೀಲಂಕಾ ಇದೀಗ ಮತ್ತೆ ಗಾಯದ ಸಂಕಟಗಳನ್ನು ಎದುರಿಸುತ್ತಿದೆ. ಟಿ 20 ಐ ಸರಣಿಗೆ ಮುಂಚಿತವಾಗಿ ತಂಡದ ಅಭ್ಯಾಸದ ಸಮಯದಲ್ಲಿ ಫೀಲ್ಡಿಂಗ್ ಮಾಡುವಾಗ ತುಷಾರ ಅವರ ಎಡ ಹೆಬ್ಬೆರಳಿಗೆ ಗಾಯವಾಗಿತ್ತು ಮತ್ತು ಉಸಿರಾಟದ ಸೋಂಕಿನಿಂದಾಗಿ ಚಮೀರಾ ಅವರನ್ನು ಹೊರಕ್ಕೆ ಇಡಲಾಗಿತ್ತು.

ಆಗಸ್ಟ್ 2 ರ ಗುರುವಾರದಿಂದ ಪ್ರಾರಂಭವಾಗುವ ಮೂರು ಏಕದಿನ ಪಂದ್ಯಗಳಲ್ಲಿ ಶ್ರೀಲಂಕಾ ಭಾರತವನ್ನು ಎದುರಿಸಲಿದೆ. ಮುಂಬರುವ ಸರಣಿಯಲ್ಲಿ ಭಾರತ ವಿರುದ್ಧದ ಎಲ್ಲಾ ಮೂರು ಸ್ವರೂಪಗಳಲ್ಲಿ ಹತ್ತು ಪಂದ್ಯಗಳ ಸುದೀರ್ಘ ಸೋಲಿನ ಸರಣಿಯನ್ನು ಕೊನೆಗೊಳಿಸಲು ಆತಿಥೇಯರು ಉತ್ಸುಕರಾಗಿದ್ದಾರೆ. ಜುಲೈ 30 ರಂದು ಮುಕ್ತಾಯಗೊಂಡ ಟಿ 20 ಐ ಸರಣಿಯಲ್ಲಿ ಆತಿಥೇಯರು 3-0 ವೈಟ್ವಾಶ್ ಸೋಲು ಅನುಭವಿಸಿದ್ದರು.

Continue Reading

ಕ್ರೀಡೆ

Paris Olympic: ಐತಿಹಾಸಿಕ ಪದಕ ಗೆದ್ದ ಸ್ವಪ್ನಿಲ್‌ ಕುಸಾಲೆಗೆ ರಾಷ್ಟ್ರಪತಿ, ಪ್ರಧಾನಿ ಅಭಿನಂದನೆ

Paris Olympic: ಮಹಾರಾಷ್ಟ್ರದ ಕೊಲ್ಹಾಪುರದ ಕಂಬಳವಾಡಿ ಗ್ರಾಮದ 28 ವರ್ಷದ ಸ್ವಪ್ನಿಲ್ ಕುಶಲೆ ಭಾರತ ಕ್ರಿಕೆಟ್​ ತಂಡದ ಮಾಜಿ ನಾಯಕ ಹಾಗೂ ಆಟಗಾರ ಮಹೇಂದ್ರ ಸಿಂಗ್​ ಅವರ ಅಪಟ್ಟ ಅಭಿಮಾನಿ

VISTARANEWS.COM


on

Paris Olympic
Koo

ಪ್ಯಾರಿಸ್​: ಪ್ಯಾರಿಸ್​ ಒಲಿಂಪಿಕ್ಸ್(Paris Olympic)​ 50 ಮೀಟರ್‌ ರೈಫಲ್ 3 ಪೊಸಿಷನ್‌ನಲ್ಲಿ ಕಂಚಿನ ಪದಕ ಗೆದ್ದು ಈ ವಿಭಾಗದಲ್ಲಿ ಪದಕ ಗೆದ್ದ ಮೊದಲ ಭಾರತೀಯ ಎನ್ನುವ ಇತಿಹಾಸ ನಿರ್ಮಿಸಿದ ಶೂಟರ್​ ಸ್ವಪ್ನಿಲ್‌ ಕುಸಾಲೆ(Swapnil Kusale) ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು(President Droupadi Murmu), ಪ್ರಧಾನಿ ನರೇಂದ್ರ ಮೋದಿ(Narendra Modi) ಸೇರಿ ಹಲವು ಗಣ್ಯರು ಅಭಿನಂದನೆ ಸಲ್ಲಿಸಿದ್ದಾರೆ.

ಗುರುವಾರ ನಡೆದ 50 ಮೀ. ರೈಫ‌ಲ್‌ 3 ಪೊಸಿಶನ್‌ ಫೈನಲ್​ ಪಂದ್ಯದಲ್ಲಿ ಸ್ವಪ್ನಿಲ್ ಅವರು 451.4 ಅಂಕ ಗಳಿಸಿ ಕಂಚಿನ ಪದಕ ತಮ್ಮದಾಗಿಸಿಕೊಂಡರು. ಸ್ವಪ್ನಿಲ್‌ ಫೈನಲ್​ ಪಂದ್ಯದ ಪ್ರೋನ್‌ನಲ್ಲಿ 156.8, ನೀಲಿಂಗ್‌ನಲ್ಲಿ 153.3 ಮತ್ತು ಸ್ಟ್ಯಾಂಡಿಂಗ್‌ನಲ್ಲಿ 195 ಅಂಕಗಳಿಸಿ ಮೂರನೇ ಸ್ಥಾನ ಪಡೆದು ಕಂಚಿನ ಪದಕ್ಕಕೆ ಕೊರಳೊಡ್ಡಿದರು. 463.6 ಅಂಕ ಗಳಿಸಿದ ಚೀನಾದ ಲಿಯು ಯುಕುನ್ ಚಿನ್ನ ಮತ್ತು ಉಕ್ರೇನ್​ನ ಕುಲಿಶ್ ಸೆರ್ಹಿ(461.3) ಬೆಳ್ಳಿ ಪದಕ ಗೆದ್ದರು.

“ಸ್ವಪ್ನಿಲ್ ಕುಸಾಲೆಯವರ ಅಸಾಧಾರಣ ಪ್ರದರ್ಶನ!. ಪುರುಷರ 50 ಮೀಟರ್ ರೈಫಲ್ 3 ಪೊಸಿಷನ್‌ನಲ್ಲಿ ಕಂಚಿನ ಪದಕ ಗೆದ್ದ ಅವರಿಗೆ ಅಭಿನಂದನೆಗಳು. ಅವರು ಈ ವಿಭಾಗದಲ್ಲಿ ಪದಕ ಗೆದ್ದ ಮೊದಲ ಭಾರತೀಯ ಅಥ್ಲೀಟ್ ಕೂಡ. ನಿಮ್ಮ ಈ ಸಾಧನೆ ಪ್ರತಿಯೊಬ್ಬ ಭಾರತೀಯನು ಸಂತೋಷಪಡುವಂತೆ ಮಾಡಿದೆ” ಎಂದು ಮೋದಿ ಟ್ವೀಟ್​ ಮೂಲಕ ಅಭಿನಂದಿಸಿದ್ದಾರೆ.

ಇದನ್ನೂ ಓದಿ Paris Olympics: ಒಲಿಂಪಿಕ್ಸ್​ ಅಭಿಯಾನ ಮುಗಿಸಿದ ಬಾಕ್ಸರ್​ ನಿಖತ್ ಜರೀನ್; ಪ್ರೀ ಕ್ವಾರ್ಟರ್​ನಲ್ಲಿ ಸೋಲು

“ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ಗೆದ್ದಿದ್ದಕ್ಕಾಗಿ ಸ್ವಪ್ನಿಲ್ ಕುಸಾಲೆ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು!. ಒಲಿಂಪಿಕ್ಸ್‌ನಲ್ಲಿ ಶೂಟಿಂಗ್‌ನಲ್ಲಿ ಭಾರತ ಮೂರು ಪದಕ ಗೆದ್ದಿರುವುದು ಇದೇ ಮೊದಲು. ಇಡೀ ಶೂಟಿಂಗ್ ತಂಡ ಭಾರತಕ್ಕೆ ಹೆಮ್ಮೆ ತಂದಿದೆ. ಮುಂಬರುವ ಈವೆಂಟ್‌ಗಳಿಗಾಗಿ ನಾನು ನಮ್ಮ ಎಲ್ಲಾ ಆಟಗಾರರಿಗೆ ನನ್ನ ಶುಭಾಶಯಗಳನ್ನು ತಿಳಿಸುತ್ತೇನೆ. ಸ್ವಪ್ನಿಲ್ ಕುಸಾಲೆ ಅವರು ಭವಿಷ್ಯದಲ್ಲಿ ಇನ್ನಷ್ಟು ಪ್ರಶಸ್ತಿಗಳನ್ನು ಗೆಲ್ಲಲಿ ಎಂದು ಹಾರೈಸುತ್ತೇನೆ” ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಟ್ವೀಟ್​ ಮಾಡಿದ್ದಾರೆ.

ರೈಲ್ವೆ ಟಿಕೆಟ್ ಕಲೆಕ್ಟರ್


ಮಹಾರಾಷ್ಟ್ರದ ಕೊಲ್ಹಾಪುರದ ಕಂಬಳವಾಡಿ ಗ್ರಾಮದ 28 ವರ್ಷದ ಸ್ವಪ್ನಿಲ್ ಕುಶಲೆ ಭಾರತ ಕ್ರಿಕೆಟ್​ ತಂಡದ ಮಾಜಿ ನಾಯಕ ಹಾಗೂ ಆಟಗಾರ ಮಹೇಂದ್ರ ಸಿಂಗ್​ ಅವರ ಅಪಟ್ಟ ಅಭಿಮಾನಿ. ಜತೆಗೆ ಧೋನಿಯಂತೆಯೇ ಇವರು ಕೂಡ ರೇಲ್ವೆ ಟಿಕೆಟ್ ನಿರೀಕ್ಷಕರಾಗಿ ಕಾರ್ಯನಿರ್ವಹಿಸಿದ್ದರು. ಧೋನಿಯವರ ಬಯೋಪಿಕ್ ಸಿನೆಮಾವನ್ನು ಪದೇ ಪದೇ ವೀಕ್ಷಿಸಿದ ಬಳಿಕ ಸ್ವಪ್ನಿಲ್ ಕೂಡ ಪೂರ್ಣಪ್ರಮಾಣದಲ್ಲಿ ಶೂಟಿಂಗ್‌ನಲ್ಲಿ ತೊಡಗಿಕೊಂಡರು. ಧೋನಿಯವರಂತೆ ಶಾಂತ ಸ್ವಾಭಾವದ ಈ ಶೂಟರ್​ ಇದೀಗ ಒಲಿಂಪಿಕ್ಸ್‌ ಪದಕವೊಂದನ್ನು ಗೆದ್ದು ಇತಿಹಾಸದ ಪುಟ ಸೇರಿದ್ದಾರೆ. 2015ರ ಕುವೈತ್​ ಏಷ್ಯನ್‌ ಶೂಟಿಂಗ್‌ ಚಾಂಪಿಯನ್‌ಶಿಪ್‌ ಜೂನಿಯರ್‌ ವಿಭಾಗದಲ್ಲಿ ಚಿನ್ನ, 59ನೇ ಹಾಗೂ 61ನೇ ರಾಷ್ಟ್ರೀಯ ಚಾಂಪಿಯನ್‌ಶಿಪ್‌ನಲ್ಲೂ ಚಿನ್ನ ಗೆದ್ದ ಸಾಧನೆ ಮಾಡಿದ್ದಾರೆ. 

Continue Reading

ಕ್ರೀಡೆ

Rohit Sharma: ಸಚಿನ್​, ಕೊಹ್ಲಿ ಜತೆ ಎಲೈಟ್​ ಪಟ್ಟಿ ಸೇರುವ ನಿರೀಕ್ಷೆಯಲ್ಲಿ ರೋಹಿತ್​

Rohit Sharma: ರೋಹಿತ್ ಏಕದಿನದಲ್ಲಿ 31, ಟೆಸ್ಟ್​ನಲ್ಲಿ 12, ಟಿ20ಯಲ್ಲಿ 5 ಶತಕ ಬಾರಿಸಿದ್ದಾರೆ. ಸಚಿನ್ ತೆಂಡೂಲ್ಕರ್ ಒಟ್ಟು 100 ಶತಕ ಬಾರಿಸಿ ಅಗ್ರಸ್ಥಾನದಲ್ಲಿದ್ದಾರೆ. ವಿರಾಟ್​ ಕೊಹ್ಲಿ 80 ಶತಕ ಬಾರಿಸಿ ದ್ವಿತೀಯ ಸ್ಥಾನಿಯಾಗಿದ್ದಾರೆ.

VISTARANEWS.COM


on

Rohit Sharma
Koo

ಕೊಲಂಬೊ: ಟೀಮ್​ ಇಂಡಿಯಾದ ನಾಯಕ ರೋಹಿತ್​ ಶರ್ಮ(Rohit Sharma) ಅವರು ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯಲ್ಲಿ ವಿಶೇಷ ದಾಖಲೆಯೊಂದನ್ನು ನಿರ್ಮಿಸುವ ಸನಿಹದಲ್ಲಿದ್ದಾರೆ. ರೋಹಿತ್​ ಈ ಸರಣಿಯಲ್ಲಿ 2 ಶತಕ ಬಾರಿಸಿದರೆ, ವಿರಾಟ್​ ಕೊಹ್ಲಿ(Virat Kohli) ಮತ್ತು ಸಚಿನ್ ತೆಂಡೂಲ್ಕರ್(Sachin Tendulkar)​ ಜತೆ ಎಲೈಟ್​ ಪಟ್ಟಿಗೆ ಸೇರ್ಪಡೆಗೊಳ್ಳಲಿದ್ದಾರೆ.

ರೋಹಿತ್​ 2 ಶತಕ ಬಾರಿಸಿದರೆ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 50 ಶತಕ ಪೂರ್ತಿಗೊಳಿಸಿದ ಸಾಧನೆ ಮಾಡಲಿದ್ದಾರೆ. ಈ ಸಾಧನೆ ಮಾಡಿದ ಮೂರನೇ ಕ್ರಿಕೆಟಿಗ ಎನಿಸಿಕೊಳ್ಳಲಿದ್ದಾರೆ. ಸಚಿನ್ ತೆಂಡೂಲ್ಕರ್ ಮತ್ತು ವಿರಾಟ್‌ ಕೊಹ್ಲಿ ಮೊದಲಿಗರು. ರೋಹಿತ್​ ಸದ್ಯ 48 ಶತಕ ಬಾರಿಸಿದ್ದಾರೆ. ಏಕದಿನದಲ್ಲಿ 31, ಟೆಸ್ಟ್​ನಲ್ಲಿ 12, ಟಿ20ಯಲ್ಲಿ 5 ಶತಕ ಬಾರಿಸಿದ್ದಾರೆ. ಸಚಿನ್ ತೆಂಡೂಲ್ಕರ್ ಒಟ್ಟು 100 ಶತಕ ಬಾರಿಸಿ ಅಗ್ರಸ್ಥಾನದಲ್ಲಿದ್ದಾರೆ. ವಿರಾಟ್​ ಕೊಹ್ಲಿ 80 ಶತಕ ಬಾರಿಸಿ ದ್ವಿತೀಯ ಸ್ಥಾನಿಯಾಗಿದ್ದಾರೆ.

ರೋಹಿತ್​ ಶರ್ಮ(Rohit sharma), ವಿರಾಟ್​ ಕೊಹ್ಲಿ(virat kohli) ಮತ್ತು ಜಸ್​ಪ್ರೀತ್​ ಬುಮ್ರಾ(jasprit bumrah) ಕಳೆದ ವರ್ಷ ನಡೆದಿದ್ದ ಏಕದಿನ ವಿಶ್ವಕಪ್​ ಫೈನಲ್​ ಸೋಲಿನ ಬಳಿಕ ಆಡುತ್ತಿರುವ ಮೊದಲ ಪಂದ್ಯ ಇದಾಗಿದೆ. ಕಳೆದ ವರ್ಷ(2023) ನವೆಂಬರ್​ 19ರಂದು ಅಹಮದಾಬಾದ್​ನ ನರೇಂದ್ರ ಮೋದಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದಿದ್ದ ಏಕದಿನ ಫೈನಲ್​ ಪಂದ್ಯದಲ್ಲಿ ಭಾರತ ತಂಡ ಆಸ್ಟ್ರೇಲಿಯಾ ವಿರುದ್ಧ 6 ವಿಕೆಟ್​ ಅಂತರದ ಸೋಲು ಕಂಡು ನಿರಾಸೆ ಅನುಭವಿಸಿತ್ತು. ಇದಾದ ಬಳಿಕ ಈ ಮೂವರು ಕ್ರಿಕೆಟಿಗರು ಯಾವುದೇ ಏಕದಿನ ಪಂದ್ಯವನ್ನಾಡಿರಲಿಲ್ಲ. ಇದೀಗ ಬರೋಬ್ಬರಿ 9 ತಿಂಗಳ ಬಳಿಕ ಏಕದಿನ ಸರಣಿಯನ್ನಾಡಲು ಸಜ್ಜಾಗಿದ್ದಾರೆ.

ಇದನ್ನೂ ಓದಿ Rohit Sharma : ಏಕ ದಿನ ಸರಣಿಗಾಗಿ ಶ್ರೀಲಂಕಾ ತಲುಪಿದ ರೋಹಿತ್, ವಿರಾಟ್​ ಕೊಹ್ಲಿ

ವಿರಾಟ್​ ಕೊಹ್ಲಿಗೆ(Virat Kohli) ಶ್ರೀಲಂಕಾ(India tour of Sri Lanka) ವಿರುದ್ಧದ ಏಕದಿನ ಸರಣಿಯಲ್ಲಿ ವಿಶೇಷ ದಾಖಲೆಯೊಂದನ್ನು ಬರೆಯುವ ಅವಕಾಶವಿದೆ. ಹೌದು, ಕೊಹ್ಲಿ 152 ರನ್ ಗಳಿಸಿದರೆ ಏಕದಿನ ಕ್ರಿಕೆಟ್​ನಲ್ಲಿ 14 ಸಾವಿರ ರನ್ ಪೂರೈಸಲಿದ್ದಾರೆ. ಈ ಸಾಧನೆ ಮಾಡಿದ ವಿಶ್ವದ ಮೂರನೇ ಬ್ಯಾಟರ್​ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.

ಸದ್ಯ 292* ಏಕದಿನ ಪಂದ್ಯಗಳನ್ನಾಡಿರುವ ವಿರಾಟ್​ ಕೊಹ್ಲಿ 13,848* ರನ್(virat kohli odi runs)​ ಬಾರಿಸಿದ್ದಾರೆ. ಲಂಕಾ ವಿರುದ್ಧದ ಮೂರು ಪಂದ್ಯಗಳ ಸರಣಿಯಲ್ಲಿ ಕೊಹ್ಲಿ 152 ರನ್​ ಬಾರಿಸಿದರೆ 14 ಸಾವಿರ ರನ್​ ಮೈಲುಗಲ್ಲು ತಲುಪಲಿದ್ದಾರೆ. ಏಕದಿನ ಕ್ರಿಕೆಟ್‌ನಲ್ಲಿ 14000ಕ್ಕೂ ಹೆಚ್ಚು ರನ್ ಗಳಿಸಿದ ಸಾರ್ವಕಾಲಿದ ದಾಖಲೆ ಸಚಿನ್ ತೆಂಡೂಲ್ಕರ್ ಮತ್ತು ಕುಮಾರ ಸಂಗಕ್ಕಾರ ಹೆಸರಿನಲ್ಲಿದೆ. ಸಚಿನ್ 463 ಏಕದಿನ ಪಂದ್ಯಗಳಲ್ಲಿ 18,426 ರನ್ ಗಳಿಸಿದ್ದರೆ, ಕುಮಾರ ಸಂಗಕ್ಕಾರ 404 ಪಂದ್ಯಗಳನ್ನಾಡಿ 14,234 ರನ್ ಬಾರಿಸಿದ್ದಾರೆ. ಕೊಹ್ಲಿಗೆ ಸಂಗಕ್ಕಾರ ದಾಖಲೆ ಮುರಿಯುವ ಅವಕಾಶವಿದೆ. ಆದರೆ ಸಚಿನ್​ ದಾಖಲೆ ಮುರಿಯುವುದು ಕಷ್ಟ ಸಾಧ್ಯ.

Continue Reading
Advertisement
karnataka Weather Forecast
ಮಳೆ4 mins ago

Karnataka Weather : ಫಲ್ಗುಣಿ ಅಬ್ಬರಕ್ಕೆ ಮುಳುಗಿದ ದೇಗುಲಗಳು; ಆಗಸ್ಟ್‌ 5ರವರೆಗೆ ಭಾರಿ ಮಳೆ ಸಾಧ್ಯತೆ

Paris Olympics
ಕ್ರೀಡೆ9 mins ago

Paris Olympics: ಕ್ವಾರ್ಟರ್‌ ಫೈನಲ್‌ನಲ್ಲಿ ಸಾತ್ವಿಕ್​-ಚಿರಾಗ್​ ಜೋಡಿಗೆ ಆಘಾತಕಾರಿ ಸೋಲು

MS Dhoni
ಪ್ರಮುಖ ಸುದ್ದಿ17 mins ago

MS Dhoni: ಆ ಒಂದು ರನ್​​ ಔಟ್ ನನ್ನ ​​ ಕ್ರಿಕೆಟ್​ ವೃತ್ತಿ ಜೀವನದ ಅತ್ಯಂತ ಕೆಟ್ಟ ಕ್ಷಣ; ವಿಶ್ವ ಕಪ್​ ಆಘಾತವನ್ನು ವಿವರಿಸಿದ ಧೋನಿ

MLA Belur Gopalakrishna visits and inspects flood affected areas in hosanagara taluk
ಶಿವಮೊಗ್ಗ17 mins ago

Hosanagara News: ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ

State Level hasiru nairmalya shala abhyudaya Award for Hadlubailu Government School
ಶಿವಮೊಗ್ಗ18 mins ago

Hosanagara News: ಹಡ್ಲುಬೈಲು ಸರ್ಕಾರಿ ಶಾಲೆಗೆ ರಾಜ್ಯಮಟ್ಟದ ಹಸಿರು ನೈರ್ಮಲ್ಯ ಶಾಲಾ ಅಭ್ಯುದಯ ಪ್ರಶಸ್ತಿ

Viral Video
Latest20 mins ago

Viral Video: ಜಲಾವೃತ ರಸ್ತೆಯಲ್ಲಿ ಬೈಕ್ ಮೇಲೆ ಹೋಗುತ್ತಿದ್ದ ಮಹಿಳೆಗೆ ಪುಂಡರ ಕಿರುಕುಳ; ವಿಡಿಯೊ ನೋಡಿ ಜನಾಕ್ರೋಶ

Viral Video
Latest28 mins ago

Viral Video: ಪ್ರೀತಿಸಿದ ಹುಡುಗಿಗೆ ಹಿಗ್ಗಾಮುಗ್ಗಾ ಥಳಿಸಿದ ಯುವಕ; ಗಾಬರಿಗೊಳಿಸುವ ವಿಡಿಯೊ

New Traffic Rules
ಕರ್ನಾಟಕ33 mins ago

New Traffic Rules: ಹೆದ್ದಾರಿಯಲ್ಲಿ ವೇಗದ ಮಿತಿ 130 ಕಿ.ಮೀ ದಾಟಿದರೆ ದಂಡ, ಜೈಲು ಶಿಕ್ಷೆ; ಇಂದಿನಿಂದಲೇ ಹೊಸ ರೂಲ್ಸ್‌

Wayanad Tragedy
Latest44 mins ago

Wayanad Tragedy: ಈ ಮುದ್ದು ವಿದ್ಯಾರ್ಥಿನಿಯರ ನಗು, ಸೈಕಲ್‌ ಸವಾರಿ ಇನ್ನೆಲ್ಲಿ? ಮಣ್ಣಿನಡಿ ಸಮಾಧಿ; ಕಣ್ಣಂಚಲಿ ನೀರು ತರಿಸುವ ವಿಡಿಯೊ

murder case
ಬೆಂಗಳೂರು47 mins ago

Murder Case : ಬೆಂಗಳೂರಿನ ಶೇಷಾದ್ರಿಪುರಂನಲ್ಲಿ ಹಾಡಹಗಲೇ ಯುವಕನ ಬರ್ಬರ ಹತ್ಯೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ4 hours ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ5 hours ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ5 hours ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ2 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ2 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ3 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ3 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ3 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ4 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

ಟ್ರೆಂಡಿಂಗ್‌