Site icon Vistara News

BCCI Selection Committee: ಆಯ್ಕೆ ಸಮಿತಿ ಮುಖ್ಯಸ್ಥ ಸ್ಥಾನದ ರೇಸ್​ನಲ್ಲಿ ವೆಂಕಟೇಶ್ ಪ್ರಸಾದ್, ಶಿವಸುಂದರ್ ದಾಸ್

Shiv Sunder Das

#image_title

ನವದೆಹಲಿ: ಖಾಸಗಿ ವಾಹಿನಿಯೊಂದು ನಡೆಸಿದ ರಹಸ್ಯ ಕಾರ್ಯಾಚರಣೆಯಲ್ಲಿ ಟೀಮ್ ಇಂಡಿಯಾದ ಕುರಿತು ಹಲವು ಆಘಾತಕಾರಿ ವಿಚಾರಗಳನ್ನು ಬಹಿರಂಗಪಡಿಸಿದ ಚೇತನ್ ಶರ್ಮಾ(Chetan Sharma) ಭಾರತ ಕ್ರಿಕೆಟ್​ ತಂಡದ ಮುಖ್ಯ ಆಯ್ಕೆಗಾರ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ್ದಾರೆ. ಇದೀಗ ಈ ಸ್ಥಾನಕ್ಕೆ ಶಿವಸುಂದರ್ ದಾಸ್ ಮತ್ತು ವೆಂಕಟೇಶ್ ಪ್ರಸಾದ್ ಹೆಸರು ಕೇಳಿಬಂದಿದೆ.

ಸದ್ಯ ಬಿಸಿಸಿಐ ಆಯ್ಕೆ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಘಟಾನುಘಟಿ ಮಾಜಿ ಆಟಗಾರರ ಹೆಸರು ಕೇಳಿಬಂದಿದ್ದರೂ ಕನ್ನಡಿಗ ಹಾಗೂ ಟೀಮ್​ ಇಂಡಿಯಾ ಮಾಜಿ ಆಟಗಾರ ವೆಂಕಟೇಶ್ ಪ್ರಸಾದ್ ಅಥವಾ ಶಿವಸುಂದರ್ ದಾಸ್ ಹೆಸರು ಮುಂಚೂಣಿಯಲ್ಲಿ ಕಾಣಿಸಿಕೊಂಡಿದೆ.

ಈ ಹಿಂದೆ ಟಿ20 ವಿಶ್ವ ಕಪ್‌ ಮತ್ತು ಏಷ್ಯಾಕಪ್​ನಲ್ಲಿ ಭಾರತ ತಂಡ ನಿರಾಶಾದಾಯಕ ಪ್ರದರ್ಶನ ನೀಡಿದ ಕಾರಣ ತಲೆದಂಡವಾಗಿ ಬಿಸಿಸಿಐ(BCCI ) ಚೇತನ್​ ಶರ್ಮಾ ಅವರನ್ನು ಆಯ್ಕೆ ಮಂಡಳಿಯ ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿತ್ತು. ಈ ಸಮಯದಲ್ಲಿಯೂ ಉಭಯ ಆಟಗಾರರ ಹೆಸರು ಕೇಳಿಬಂದಿತ್ತು. ಆದರೆ ಬಿಸಿಸಿಐ ಮತ್ತೆ ಚೇತನ್​ ಶರ್ಮಾ ಅವರಿಗೆ ಅಧ್ಯಕ್ಷ ಸ್ಥಾನ ನೀಡಿ ಅಚ್ಚರಿ ಮೂಡಿಸಿತ್ತು. ಇದೀಗ ಮತ್ತೆ ಇವರ ಹೆಸರು ಕೇಳಿ ಬಂದಿದೆ.

ಬಿಸಿಸಿಐ ಮೂಲಗಳ ಪ್ರಕಾರ ಶಿವಸುಂದರ್ ದಾಸ್ ಅವರು ಆಯ್ಕೆ ಸಮಿತಿಯ ಅಧ್ಯಕ್ಷರಾಗಿ ನೇಮಕಗೊಳ್ಳುವುದು ಖಚಿತ ಎಂದು ಹೇಳಲಾಗುತ್ತಿದೆ. ಆದರೆ ಈ ಬಗ್ಗೆ ಬಿಸಿಸಿಐ ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ.

ಒಂದು ವೇಳೆ ಆಯ್ಕೆ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ವೆಂಕಟೇಶ್ ಪ್ರಸಾದ್ ಆಯ್ಕೆಯಾದರೆ ಟೀಮ್​ ಇಂಡಿಯಾದಲ್ಲಿ ಮೇಜರ್​ ಸರ್ಜರಿ ಆಗುವುದು ನಿಶ್ಚಿತ. ಏಕೆಂದರೆ ಕಳಪೆ ಬ್ಯಾಟಿಂಗ್​ ಪ್ರದರ್ಶನ ತೋರುತ್ತಿರುವ ಕೆ.ಎಲ್​ ರಾಹುಲ್​ ಬಗ್ಗೆ ಕೆಲ ದಿನಗಳ ಹಿಂದೆ ಕಿಡಿಕಾರಿದ್ದರು.

ಇದನ್ನೂ ಓದಿ Chetan Sharma resign: ಭಾರತೀಯ ಕ್ರಿಕೆಟ್ ಆಯ್ಕೆ ಸಮಿತಿಯ ಮುಖ್ಯಸ್ಥನ ಸ್ಥಾನಕ್ಕೆ ಚೇತನ್ ಶರ್ಮಾ ರಾಜೀನಾಮೆ

ಎಂಟು ವರ್ಷ ಅಂತಾರಾಷ್ಟ್ರೀಯ ಪಂದ್ಯ ಆಡಿದ ಹೊರತಾಗಿಯೂ ಇಷ್ಟೊಂದು ಕಳಪೆ ಪ್ರದರ್ಶನ ನೀಡುವುದು ಸರಿಯಲ್ಲ. ಅಶ್ವಿನ್​ ಅವರಂಥ ನುರಿತ ಆಟಗಾರ ಇರುವ ಹೊರತಾಗಿಯೂ ರಾಹುಲ್​ಗೆ ಟೆಸ್ಟ್​ ತಂಡದಲ್ಲಿ ಉಪನಾಯಕನ ಸ್ಥಾನ ನೀಡಿರುವ ಕ್ರಮವನ್ನು ಪ್ರಶ್ನಿಸಿ ಸರಣಿ ಟ್ವೀಟ್​ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದರು. ಹೀಗಾಗಿ ಅವರು ಒಂದೊಮ್ಮೆ ಆಯ್ಕೆ ಸಮಿತಿ ಮುಖ್ಯಸ್ಥನಾದರೆ ರಾಹುಲ್​ಗೆ ಕಂಟಕವೊಂದು ಕಾದಿದೆ ಎನ್ನಬಹುದು.

Exit mobile version