IND vs ENG: 3ನೇ ಟೆಸ್ಟ್​ಗೆ​ ನಾಳೆ ಭಾರತ ತಂಡ ಪ್ರಕಟ ಸಾಧ್ಯತೆ; ಕೊಹ್ಲಿ ಆಗಮನ ಅನುಮಾನ! - Vistara News

ಕ್ರೀಡೆ

IND vs ENG: 3ನೇ ಟೆಸ್ಟ್​ಗೆ​ ನಾಳೆ ಭಾರತ ತಂಡ ಪ್ರಕಟ ಸಾಧ್ಯತೆ; ಕೊಹ್ಲಿ ಆಗಮನ ಅನುಮಾನ!

ತಂಡವು ಬಹುತೇಕ ಒಂದೇ ಆಗಿರುವ ಸಾಧ್ಯತೆಯಿದ್ದರೂ ವಿರಾಟ್ ಕೊಹ್ಲಿ ಮರಳುವ ಬಗ್ಗೆ ದೊಡ್ಡ ಪ್ರಶ್ನಾರ್ಥಕ ಚಿಹ್ನೆ ಇದೆ. ವೈಯಕ್ತಿಕ ಕಾರಣದಿಂದ ಕೊಹ್ಲಿ ಇಂಗ್ಲೆಂಡ್ ವಿರುದ್ಧದ ಮೊದಲ ಎರಡು ಟೆಸ್ಟ್‌ಗಳಿಂದ ಹಿಂದೆ ಸರಿದಿದ್ದರು.

VISTARANEWS.COM


on

Virat Kohli
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬಯಿ: ಗಾಯಗೊಂಡಿರುವ ಕೆ.ಎಲ್ ರಾಹುಲ್(KL Rahul) ಮತ್ತು ರವೀಂದ್ರ ಜಡೇಜಾ(Ravindra Jadeja) ಇಂಗ್ಲೆಂಡ್(IND vs ENG) ವಿರುದ್ಧದ ಎರಡನೇ ಟೆಸ್ಟ್‌ಗೆ ಅಲಭ್ಯರಾಗಿದ್ದಾರೆ. ಇವರ ಸ್ಥಾನಕ್ಕೆ ಬದಲಿ ಆಟಗಾರ ಆಯ್ಕೆಯಾಗಿದೆ. ಇದೀಗ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಮತ್ತು ಆಯ್ಕೆ ಸಮಿತಿ ಉಳಿದ ಮೂರು ಟೆಸ್ಟ್‌ ಪಂದ್ಯಕ್ಕೆ ತಂಡವನ್ನು ಅಂತಿಮಗೊಳಿಸುವ ಸಾಧ್ಯತೆಯಿದೆ.

ಆಯ್ಕೆ ಸಮಿತಿಯು ಇಂದು (ಜನವರಿ 30) ಟೆಸ್ಟ್ ನಿಯೋಜನೆಯ ಉಳಿದ ಪಂದ್ಯಗಳ ಆಯ್ಕೆಯ ಕುರಿತು ಔಪಚಾರಿಕ ಸಭೆಯನ್ನು ನಡೆಸುವ ಸಾಧ್ಯತೆಯಿದೆ. ತಂಡವು ಬಹುತೇಕ ಒಂದೇ ಆಗಿರುವ ಸಾಧ್ಯತೆಯಿದ್ದರೂ ವಿರಾಟ್ ಕೊಹ್ಲಿ ಮರಳುವ ಬಗ್ಗೆ ದೊಡ್ಡ ಪ್ರಶ್ನಾರ್ಥಕ ಚಿಹ್ನೆ ಇದೆ. ವೈಯಕ್ತಿಕ ಕಾರಣದಿಂದ ಕೊಹ್ಲಿ ಇಂಗ್ಲೆಂಡ್ ವಿರುದ್ಧದ ಮೊದಲ ಎರಡು ಟೆಸ್ಟ್‌ಗಳಿಂದ ಹಿಂದೆ ಸರಿದಿದ್ದರು.

ಕೊಹ್ಲಿ ಮೊದಲ ಎರಡು ಪಂದ್ಯಗಳಿಂದ ಹೊರಗುಳಿಯಲಿದ್ದಾರೆ ಎಂದು ಬಿಸಿಸಿಐ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದ್ದರೂ ಕೂಡ ಅವರ ವಾಪಸಾತಿ ಕುರಿತು ಇನ್ನೂ ಯಾವುದೇ ಮಾಹಿತಿ ನಿಡಿಲ್ಲ. ಹೀಗಾಗಿ ಕೊಹ್ಲಿ ಉಳಿದ ಟೆಸ್ಟ್​ ಪಂದ್ಯಗಳಿಗೆ ಲಭ್ಯರಿದ್ದಾರಾ ಎನ್ನುವ ಪ್ರಶ್ನೆ ಸಹಜವಾಗಿಯೇ ಮೂಡಿದೆ. ಕೆ.ಎಲ್ ರಾಹುಲ್ ಮತ್ತು ರವೀಂದ್ರ ಜಡೇಜಾ ಗಾಯಗೊಂಡ ಕಾರಣ ವಿಶಾಖಪಟ್ಟಣಂನಲ್ಲಿ ನಡೆಯುವ ಎರಡನೇ ಪಂದ್ಯಕ್ಕಾಗಿ ಬಿಸಿಸಿಐ ಸರ್ಫರಾಜ್ ಖಾನ್, ಸೌರಭ್ ಕುಮಾರ್ ಮತ್ತು ವಾಷಿಂಗ್ಟನ್ ಸುಂದರ್ ಅವರನ್ನು ಟೆಸ್ಟ್ ತಂಡಕ್ಕೆ ಸೇರಿಸಿದೆ. ಜಡೇಜಾ ಬದಲಿಗೆ ವಾಷಿಂಗ್ಟನ್ ಸುಂದರ್ ಆಡುವ ಬಳಗದಲ್ಲಿ ಅವಕಾಶ ಪಡೆಯಬಹುದು.

ಇದನ್ನೂ ಓದಿ Virat Kohli: ಕೊಹ್ಲಿ ನನ್ನ ಮೇಲೆ ಉಗುಳಿದ್ದರು; ಗಂಭೀರ ಆರೋಪ ಮಾಡಿದ ಡೀನ್​ ಎಲ್ಗರ್​

ಹೈದರಾಬಾದ್‌ನಲ್ಲಿ ನಡೆದ ಮೊದಲ ಟೆಸ್ಟ್‌ನ 4 ನೇ ದಿನದ ಆಟದಲ್ಲಿ ಜಡೇಜಾ ಮಂಡಿರಜ್ಜು ಗಾಯಕ್ಕೊಳಗಾಗಿದ್ದರು, ರಾಹುಲ್ ಬಲ ತೊಡೆಯ ನೋವಿಗೊಳಗಾಗಿದ್ದರು.

ಕೆ.ಎಲ್​ ರಾಹುಲ್ ಅವರ ಗಾಯವು ಗಂಭೀರವಾಗಿಲ್ಲದಿದ್ದರೂ, ಜಡೇಜಾ ಹೆಚ್ಚು ಕಾಲ ಹೊರಗುಳಿಯಬಹುದು ಎಂದು ವರದಿಗಳು ಹೇಳಿದೆ. ಕುಲದೀಪ್ ಯಾದವ್ ಬೆಂಚ್ ಮೇಲೆ ಕಾಯುತ್ತಿರುವ ಕಾರಣ, ಎರಡನೇ ಟೆಸ್ಟ್‌ಗೆ ಸ್ಪಿನ್ನರ್‌ಗಳ ಆಯ್ಕೆ ತಂಡದ ನಿರ್ವಹಣೆಗೆ ಸುಲಭವಲ್ಲ.

ವಿಶಾಖಪಟ್ಟಣದಲ್ಲಿ ಭಾರತದ ಟೆಸ್ಟ್​ ದಾಖಲೆ ಹೇಗಿದೆ?


ವಿಶಾಖಪಟ್ಟಣದ ವೈ.ಎಸ್.ರಾಜಶೇಖರ ರೆಡ್ಡಿ ಮೈದಾನದಲ್ಲಿ ಭಾರತ ತಂಡ ಇದುವರೆಗೆ 2 ಟೆಸ್ಟ್​ ಪಂದ್ಯಗಳನ್ನು ಮಾತ್ರ ಆಡಿದೆ. ಎದುರಾಳಿ ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್​. ಈ 2 ಪಂದ್ಯಗಳನ್ನು ಭಾರತ ಬೃಹತ್​ ಮೊತ್ತದ ಅಂತರದಿಂದ ಗೆದ್ದು ಬೀಗಿದೆ. ಇದೀಗ ಮತ್ತೆ ಇಂಗ್ಲೆಂಡ್​ ವಿರುದ್ಧ ಇಲ್ಲಿ 2ನೇ ಬಾರಿ ಮುಖಾಮುಖಿಯಾಗಲಿದೆ. ಹೈದರಾಬಾದ್​ನಲ್ಲಿ ಅಜೇಯ ದಾಖಲೆ ಹೊಂದಿದ್ದ ಭಾರತಕ್ಕೆ ಸೋಲಿನ ಶಾಕ್​ ನೀಡಿದ್ದ ಇಂಗ್ಲೆಂಡ್​ ಇದೀಗ ಈ ಸ್ಟೇಡುಯಂನಲ್ಲಿಯೂ ಇದೇ ಫಲಿತಾಂಶವನ್ನು ಪುನರಾವರ್ತಿಸುವ ಭರವಸೆಯಲ್ಲಿದೆ.

ದ್ವಿತೀಯ ಟೆಸ್ಟ್​ಗೆ ಭಾರತ ತಂಡ


ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಯಶಸ್ವಿ ಜೈಸ್ವಾಲ್, ಶ್ರೇಯಸ್ ಅಯ್ಯರ್, ಕೆಎಸ್ ಭರತ್ (ವಿಕೆಟ್​ ಕೀಪರ್​), ಧ್ರುವ್ ಜುರೆಲ್ (ವಿಕೆಟ್​ ಕೀಪರ್​), ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಮೊಹಮ್ಮದ್. ಸಿರಾಜ್, ಮುಖೇಶ್ ಕುಮಾರ್, ಜಸ್ಪ್ರೀತ್ ಬುಮ್ರಾ (ವಿಸಿ), ಅವೇಶ್ ಖಾನ್, ರಜತ್ ಪಾಟಿದಾರ್, ಸರ್ಫರಾಜ್ ಖಾನ್, ವಾಷಿಂಗ್ಟನ್ ಸುಂದರ್, ಸೌರಭ್ ಕುಮಾರ್.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Sandeep Lamichhane: ಅತ್ಯಾಚಾರ ಆರೋಪದಲ್ಲಿ 8 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದ ಕ್ರಿಕೆಟಿಗ ಲಮಿಚಾನೆಗೆ ರಿಲೀಫ್; ನಿರಪರಾಧಿ ಎಂದ ಕೋರ್ಟ್​

Sandeep Lamichhane: ಇದೇ ವರ್ಷದ ಜನವರಿಯಲ್ಲಿ ಕಠ್ಮಂಡು ಜಿಲ್ಲಾ ನ್ಯಾಯಾಲಯವು ಲಮಿಚಾನೆಗೆ 8 ವರ್ಷಗಳ ಜೈಲು ಶಿಕ್ಷೆ ಪ್ರಕಟಿಸಿತ್ತು. ಶಿಶಿರ್ ರಾಜ್ ಧಾಕಲ್ ಅವರ ಪೀಠವು ವಿಚಾರಣೆಯ ಬಳಿಕ 8 ವರ್ಷಗಳ ಜೈಲು ಶಿಕ್ಷೆ, ಪರಿಹಾರ ಮತ್ತು ದಂಡದ ತೀರ್ಪು ನೀಡಿತ್ತು. ಈ ತೀರ್ಪಿನ ವಿರುದ್ಧ ಸಂದೀಪ್ ಲಮಿಚಾನೆ ಹೈಕೋರ್ಟ್ ಮೆಟ್ಟಿಲ್ಲೇರಿದ್ದರು. ಇದೀಗ ದೋಷಮುಕ್ತರಾಗಿದ್ದಾರೆ.

VISTARANEWS.COM


on

Sandeep Lamichhane
Koo

ಕಠ್ಮಂಡು: 18 ವರ್ಷದ ಯುವತಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ 8 ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿದ್ದ ನೇಪಾಳ ಕ್ರಿಕೆಟ್ ತಂಡದ ಮಾಜಿ ನಾಯಕ ಸಂದೀಪ್ ಲಮಿಚಾನೆ(Sandeep Lamichhane)ಗೆ ದೊಡ್ಡ ರಿಲೀಫ್​ ಸಿಕ್ಕಿದೆ. ನೇಪಾಳ ಹೈಕೋರ್ಟ್(Nepal High Court) ನಿರಪರಾಧಿ ಎಂದು ಘೋಷಿಸಿದೆ.

ಇದೇ ವರ್ಷದ ಜನವರಿಯಲ್ಲಿ ಕಠ್ಮಂಡು ಜಿಲ್ಲಾ ನ್ಯಾಯಾಲಯವು ಲಮಿಚಾನೆಗೆ 8 ವರ್ಷಗಳ ಜೈಲು ಶಿಕ್ಷೆ ಪ್ರಕಟಿಸಿತ್ತು. ಶಿಶಿರ್ ರಾಜ್ ಧಾಕಲ್ ಅವರ ಪೀಠವು ವಿಚಾರಣೆಯ ಬಳಿಕ 8 ವರ್ಷಗಳ ಜೈಲು ಶಿಕ್ಷೆ, ಪರಿಹಾರ ಮತ್ತು ದಂಡದ ತೀರ್ಪು ನೀಡಿತ್ತು. ಈ ತೀರ್ಪಿನ ವಿರುದ್ಧ ಸಂದೀಪ್ ಲಮಿಚಾನೆ ಹೈಕೋರ್ಟ್ ಮೆಟ್ಟಿಲ್ಲೇರಿದ್ದರು. ಇದೀಗ ದೋಷಮುಕ್ತರಾಗಿದ್ದಾರೆ.

ಮಂಗಳವಾರ ಮತ್ತು ಬುಧವಾರ (ಮೇ 14 ಮತ್ತು 15) ನಡೆದ ಕೋರ್ಟ್ ಕಲಾಪದ ನಂತರ, ನ್ಯಾಯಾಲಯವು ಸಂದೀಪ್ ಲಮಿಚಾನೆ ಅವರ ಹಿಂದಿನ ತೀರ್ಪನ್ನು ರದ್ದುಗೊಳಿಸಿದೆ. ಅಲ್ಲದೆ ಹೈಕೋರ್ಟ್ ನ್ಯಾಯಾಧೀಶರಾದ ಸುದರ್ಶನ್ ದೇವ್ ಭಟ್ಟ ಮತ್ತು ಅಂಜು ಉಪೇತ್ರಿ ಅವರು ಲಮಿಚಾನೆ ಅವರನ್ನು ಎಲ್ಲಾ ಆರೋಪಗಳಿಂದ ಮುಕ್ತಗೊಳಿಸಿದ್ದಾರೆ. ಲಮಿಚಾನೆ ಪರವಾಗಿ ಹಿರಿಯ ವಕೀಲರಾದ ರಾಮ್ ನಾರಾಯಣ ಬಿದರಿ, ರಾಮನ್ ಶ್ರೇಷ್ಠ, ಶಂಬು ಥಾಪಾ, ಮುರಾರಿ ಸಪ್ಕೋಟ ಮತ್ತು ಕೃಷ್ಣ ಸಪ್ಕೋಟ ತಮ್ಮ ವಾದವನ್ನು ಮಂಡಿಸಿದರು.

ಇದನ್ನೂ ಓದಿ 8 ವರ್ಷ ಜೈಲು ಶಿಕ್ಷೆ ಬೆನ್ನಲ್ಲೇ ಲಮಿಚಾನೆ ಅಮಾನತುಗೊಳಿಸಿದ ನೇಪಾಳ ಕ್ರಿಕೆಟ್ ಸಂಸ್ಥೆ

ವಿಶ್ವಕಪ್​ನಲ್ಲಿ ಅವಕಾಶ


ನಿರಪರಾಧಿ ಎಂದು ಸಾಬೀತಾದ ನಂತರ ಸಂದೀಪ್ ಇದೀಗ ಇದೇ ಜೂನ್​ 1ರಿಂದ ಆರಂಭಗೊಳ್ಳಲಿರುವ ಟಿ20 ವಿಶ್ವಕಪ್(T20 World Cup) ತಂಡಕ್ಕೆ ಲಭ್ಯವಾಗಿದ್ದಾರೆ ಎನ್ನಲಾಗಿದೆ. ನೇಪಾಳ ತನ್ನ ತಂಡವನ್ನು ಈಗಾಗಲೇ ಘೋಷಿಸಿದ್ದರೂ ಕೂಡ ಮೇ 25 ರವರೆಗೆ ತಂಡದಲ್ಲಿ ಆಟಗಾರರ ಬದಲಾವಣೆಗೆ ಅವಕಾಶವಿರುವ ಕಾರಣ ಲಾಮಿಚಾನೆ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ.

ಏನಿದು ಪ್ರಕರಣ?

2022ರಲ್ಲಿ ಲಾಮಿಚಾನೆ ವಿರುದ್ಧ ಹದಿಹರೆಯದ ಹುಡುಗಿಯೊಬ್ಬಳು ಅತ್ಯಾಚಾರದ ಆರೋಪ ಮಾಡಿ ಪ್ರಕರಣ ದಾಖಲಿಸಿದ್ದಳು. ಈ ಆರೋಪದ ಬಳಿಕ ಲಾಮಿಚಾನೆ ಬಂಧನ ಕೂಡ ಆಗಿತ್ತು. ಕ್ರಿಮಿನಲ್ ಕೋಡ್ 2074 ರ ಸೆಕ್ಷನ್ 219 ರ ಅಡಿಯಲ್ಲಿ ಕ್ರಿಕೆಟಿಗನ ಮೇಲೆ ಆರೋಪ ಹೊರಿಸಲಾಗಿತ್ತು.

2022ರಲ್ಲಿ ಲಾಮಿಚಾನೆ ಅವರು ವೆಸ್ಟ್​ ಇಂಡೀಸ್​ನಲ್ಲಿ ನಡೆಯುತ್ತಿದ್ದ ಕೆರಿಬಿಯನ್​ ಕ್ರಿಕೆಟ್​ ಲೀಗ್​ನಲ್ಲಿ ಪಾಲ್ಗೊಳ್ಳುತ್ತಿದ್ದರು. ಈ ವೇಳೆ ಅವರ ಮೇಲೆ ಅತ್ಯಾಚಾರದ ದೂರು ದಾಖಲಾಗಿತ್ತು. ತನಿಖೆಗೆ ಹಾಜರಾಗದ ಕಾರಣ ಅವರ ವಿರುದ್ಧ ಕೋರ್ಟ್​ ಜಾಮೀನು ರಹಿತ ವಾರಂಟ್​ ಹೊರಡಿಸಿತ್ತು. ಬಳಿಕ ಅವರು ತವರಿಗೆ ಮರಳಿದ್ದರು. ಅವರನ್ನು ವಿಮಾನ ನಿಲ್ದಾಣದಲ್ಲೇ ಪೊಲೀಸರು ವಶಪಡಿಸಿಕೊಂಡು ಕೋರ್ಟ್​ಗೆ ಹಾಜರುಪಡಿಸಿದ್ದರು.

ಕೆಳ ಹಂತದ ನ್ಯಾಯಾಲಯ ಲಾಮಿಚಾನೆಯನ್ನು ನ್ಯಾಯಾಂಗ ಬಂಧನದಲ್ಲಿ ಇಡುವಂತೆ ಆದೇಶಿಸಿತ್ತು. ಹೀಗಾಗಿ ಮೂರು ತಿಂಗಳಿಂದ ಜೈಲಿನಲ್ಲಿದ್ದರು. ತಮಗೆ ನೀಡಿದ್ದ ಶಿಕ್ಷೆಯನ್ನು ಪ್ರಶ್ನಿಸಿ ಸಂದೀಪ್​ ಮೇಲ್ಮನವಿ ಸಲ್ಲಿಸಿದ್ದರು. ಹೈಕೋರ್ಟ್​ ಅವರಿಗೆ ಜಾಮೀನು ನೀಡಿತ್ತು. ಈ ವೇಳೆ 20 ಲಕ್ಷ ರೂಪಾಯಿ ಬಾಂಡ್​ ಕೂಡ ಪಡೆದುಕೊಂಡಿತ್ತು. ಕಳೆದ ವರ್ಷ ಜನವರಿ 12 ರಿಂದ ಲಾಮಿಚಾನೆ ಜಾಮೀನಿನ ಮೇಲೆ ಹೊರಬಂದಿದ್ದರು. ಅಲ್ಲದೆ ನೇಪಾಳ ಪರ ಕ್ರಿಕೆಟ್​ ಕೂಡ ಆಡುತ್ತಿದ್ದರು.

ಐಪಿಎಲ್​ ಟೂರ್ನಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್​ ಪರ ಆಡಿದ್ದ ಸಂದೀಪ್ ಲಮಿಚಾನೆ ಒಟ್ಟು 9 ಪಂದ್ಯಗಳನ್ನು ಆಡಿ 13 ವಿಕೆಟ್​ ಪಡೆದಿದ್ದಾರೆ. 2018 ಮತ್ತು 2019ರ ಆವೃತ್ತಿಯಲ್ಲಿ ಅವರು ಆಡಿದ್ದರು.

Continue Reading

ಕ್ರೀಡೆ

DP Manu: ಫೆಡರೇಷನ್ ಕಪ್‌ನಲ್ಲಿ ನೀರಜ್​ ಚೋಪ್ರಾಗೆ ಬೆವರಿಳಿಯುವಂತೆ ಮಾಡಿದ ಕನ್ನಡಿಗ ಮನು; ಇವರ ಹಿನ್ನೆಲೆ, ಸಾಧನೆ ಏನೇನು?

DP Manu: ಫೆಡರೇಷನ್ ಕಪ್‌ನಲ್ಲಿ (82.06 ಮೀ) ಭರ್ಜಿ ಎಸೆದು ಭರವಸೆ ಮೂಡಿಸಿರುವ 23 ವರ್ಷದ ಡಿ.ಪಿ. ಮನು ಅವರು ಹಾಸನ(D. P. Manu Hassan) ಜಿಲ್ಲೆ ಬೇಲೂರು ತಾಲೂಕು ಕುಪ್ಪಗೋಡು ಗ್ರಾಮದವರು. ಹೊಯ್ಸಳ ಶಾಲೆಯಲ್ಲಿ ಓದುವಾಗಲೇ ಭರ್ಜಿಯತ್ತ ಆಕರ್ಷಣೆ ಬೆಳೆಸಿಕೊಂಡ ಮನು ಮೂಡುಬಿದಿರೆಯ ಆಳ್ವಾಸ್‌ ಕಾಲೇಜಿನಲ್ಲಿ ಕಠಿಣ ತರಬೇತಿ ಪಡೆದರು. ಇಲ್ಲಿ ತೋರಿದ ಪ್ರದರ್ಶನವು ಇಂದು ಚಿಗುರು ಮೀಸೆ ಹುಡುಗನನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದಿದೆ.

VISTARANEWS.COM


on

DP Manu
Koo

ಬೆಂಗಳೂರು: ಬುಧವಾರ ನಡೆದ ಫೆಡರೇಷನ್ ಕಪ್‌ನಲ್ಲಿ(Federation Cup 2024) ಒಲಿಂಪಿಕ್​ ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾ(Neeraj Chopra) ಅವರಿಗೆ ಬೆವರಿಳಿಸುಂತೆ ಮಾಡಿ ಸಣ್ಣ ಅಂತರದಿಂದ ಚಿನ್ನದ ಪದಕದಿಂದ ವಂಚಿತರಾಗಿ ಬೆಳ್ಳಿ ಪದಕ ಗೆದ್ದ ಡಿ.ಪಿ ಮನು(DP Manu) ಅಪ್ಪಟ ಕನ್ನಡಿಗ. ಇವರ ಪೂರ್ಣ ಹೆಸರು ದೇವರಕೇಶವಿ ಪ್ರಕಾಶ ಮನು (ಡಿ.ಪಿ. ಮನು ಎಂದೇ ಖ್ಯಾತಿ). ಈಗಾಗಲೇ ಇವರು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉತ್ತಮ ಸಾಧನೆಗೈದಿದ್ದಾರೆ. ಇದೇ ರೀತಿಯ ಪ್ರದರ್ಶನ ತೋರಿದರೆ ಮುಂದಿನ ದಿನಗಳಲ್ಲಿ ಜಾಗತಿಕ ಮಟ್ಟದಲ್ಲಿ ಇನ್ನೂ ಉತ್ತಮ ಸಾಧನೆ ಮಾಡುವುದರಲ್ಲಿ ಎರಡು ಮಾತಿಲ್ಲ ಎಂದೇ ವಿಶ್ಲೇಷಿಸಲಾಗುತ್ತಿದೆ. 

ಡಿ.ಪಿ. ಮನು ಹಿನ್ನೆಲೆ


ಫೆಡರೇಷನ್ ಕಪ್‌ನಲ್ಲಿ (82.06 ಮೀ) ಭರ್ಜಿ ಎಸೆದು ಭರವಸೆ ಮೂಡಿಸಿರುವ 23 ವರ್ಷದ ಡಿ.ಪಿ. ಮನು ಅವರು ಹಾಸನ(D. P. Manu Hassan) ಜಿಲ್ಲೆ ಬೇಲೂರು ತಾಲೂಕು ಕುಪ್ಪಗೋಡು ಗ್ರಾಮದವರು. ತಂದೆ ಪ್ರಕಾಶ ಹಾಗೂ ತಾಯಿ ಸುಜಾತಾ. ಹೊಯ್ಸಳ ಶಾಲೆಯಲ್ಲಿ ಓದುವಾಗಲೇ ಭರ್ಜಿಯತ್ತ ಆಕರ್ಷಣೆ ಬೆಳೆಸಿಕೊಂಡ ಮನು ಮೂಡುಬಿದಿರೆಯ ಆಳ್ವಾಸ್‌ ಕಾಲೇಜಿನಲ್ಲಿ ಕಠಿಣ ತರಬೇತಿ ಪಡೆದರು. ಇದೇ ವೇಳೆ ಮನು ಅವರು ಅಂತಾರಾಜ್ಯ, ಜೂನಿಯರ್‌ ರಾಷ್ಟ್ರೀಯ ಕೂಟಗಳಲ್ಲಿ ಭಾಗವಹಿಸಿ ಸೈ ಎನಿಸಿಕೊಂಡರು. ಆಳ್ವಾಸ್‌ ಕಾಲೇಜಿನಲ್ಲಿ ಅವರು ಪಡೆದ ತರಬೇತಿ, ನೀಡಿದ ಪ್ರದರ್ಶನವು ಚಿಗುರು ಮೀಸೆ ಹುಡುಗನನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದಿದೆ.

ಕಳೆದ ವರ್ಷ ನಡೆದಿದ್ದ ವಿಶ್ವ ಆ್ಯತ್ಲೆಟಿಕ್ಸ್‌ ಚಾಂಪಿಯನ್‌ಶಿಪ್‌ನಲ್ಲಿ ಮನು (84.14 ಮೀ.) 6ನೇ ಸ್ಥಾನ ಪಡೆದು ಭಾರೀ ಸಂಚಲನ ಮೂಡಿಸಿದ್ದರು. ಅಲ್ಲದೆ 2023ರಲ್ಲಿ ನಡೆದ ಏಶ್ಯನ್​ ಆ್ಯತ್ಲೆಟಿಕ್ಸ್‌ ಚಾಂಪಿಯನ್‌ಶಿಪ್‌ನಲ್ಲಿ ಬೆಳ್ಳಿ ಪದಕ ಗೆದ್ದ ಸಾಧನೆ ಮಾಡಿದ್ದರು. ಇಂದು ನಡೆದ ಫೆಡರೇಷನ್ ಕಪ್‌ನಲ್ಲಿ (82.06 ಮೀ) ಬೆಳ್ಳಿ ಗೆದ್ದಿದ್ದಾರೆ. ಮೂರನೇ ಸುತ್ತಿನ ವರೆಗೂ ಅಗ್ರಸ್ಥಾನ ಕಾಯ್ದುಕೊಂಡು ಅನುಭವಿ ನೀರಜ್​ಗೆ ಒಂದು ಕ್ಷಣ ಬೆವರಿಳಿಸುವಂತೆ ಮಾಡಿದ್ದು ನಿಜಕ್ಕೂ ಸಣ್ಣ ಮಾತಲ್ಲ. ನೀರಜ್​ ಗೆಲುವಿನ ಅಂತರ 82.27 ಮೀ.

ಇದನ್ನೂ ಓದಿ Federation Cup 2024: ಕನ್ನಡಿಗ ಮನು ಎದುರು ತೀವ್ರ ಪೈಪೋಟಿ ಎದುರಿಸಿ ಚಿನ್ನ ಗೆದ್ದ ನೀರಜ್ ಚೋಪ್ರಾ

ಕಾಶಿನಾಥ ನಾಯ್ಕ್ ಗರಡಿಯಲ್ಲಿ ಬೆಳೆದ ಪ್ರತಿಭೆ


ಮನು ಅವರು ಕಾಶಿನಾಥ ನಾಯ್ಕ್​ ಅವರ ಗರಡಿಯಲ್ಲಿ ಬೆಳೆದು ಬಂದ ಪ್ರತಿಭೆ. 2020ರಲ್ಲಿ ಡಿ.ಪಿ.ಮನು ಅವರಿಗೆ ಮಹತ್ವದ ತಿರುವು ಸಿಕ್ಕಿತು. ಅವರು ಪುಣೆಯಲ್ಲಿರುವ ಆರ್ಮಿ ಸ್ಪೋರ್ಟ್ಸ್‌ ಇನ್‌ಸ್ಟಿಟ್ಯೂಟ್‌ನಲ್ಲಿ ಹವಾಲ್ದಾರ್‌ ಕೆಲಸಕ್ಕೆ ಸೇರಿದರು. ಇದೇ ವೇಳೆ ಕಾಶಿನಾಥ ನಾಯ್ಕ್​ ಅವರ ಪರಿಚಯವಾಯಿತು. ಕಾಶಿನಾಥ ಅವರ ಬಳಿ ಸತತ ತರಬೇತಿ ಪಡೆದ ಮನು, 65 ಮೀಟರ್‌ ದೂರ ಭರ್ಜಿ ಎಸೆತದಿಂದ 80 ಮೀಟರ್‌ ದಾಟುವಂತಾದರು. ಇದೀಗ ವಿಶ್ವ ಚಾಂಪಿಯನ್​ ನೀರಜ್​ಗೆ ತೀವ್ರ ಪೈಪೋಟಿ ನೀಡುವಷ್ಟರ ಮಟ್ಟಿಗೆ ಬೆಳೆದು ನಿಂತಿದ್ದಾರೆ. ನೀರಜ್​ ಕೂಡ ಕಾಶಿನಾಥ ನಾಯ್ಕ್ ಮಾರ್ಗದರ್ಶನದಲ್ಲೇ ಬೆಳೆದು ಬಂದ ಪ್ರತಿಭೆಯಾಗಿದ್ದಾರೆ. ಒಟ್ಟಿನಲ್ಲಿ ಕನ್ನಡಿಗರೊಬ್ಬರು ಜಾವೆಲಿನ್‌ ಥ್ರೋ ಮೂಲಕ ಜಾಗತಿಕ ಮಟ್ಟದಲ್ಲಿ ಹೆಸರು ಮಾಡುತ್ತಿದ್ದು, ಅವರು ಒಲಿಂಪಿಕ್ಸ್‌ಗೂ ಆಯ್ಕೆಯಾಗಲಿ, ಅಲ್ಲೂ ರಾಜ್ಯ, ದೇಶದ ಘನತೆ ಹೆಚ್ಚಿಸಲಿ ಎಂದು ಆಶಿಸೋಣ.


ಮನು ಮಾಡಿದ ಸಾಧನೆಗಳು

  1. 1. 2023ರ ಜುಲೈನಲ್ಲಿ ಬ್ಯಾಂಕಾಕ್‌ನಲ್ಲಿ ನಡೆದ ಏಷ್ಯನ್‌ ಅಥ್ಲೆಟಿಕ್ಸ್‌ ಚಾಂಪಿಯನ್‌ಶಿಪ್ಸ್‌ನಲ್ಲಿ ಬೆಳ್ಳಿ

    2. 2023ರಲ್ಲಿ ನಡೆದಿದ್ದ ವಿಶ್ವ ಆ್ಯತ್ಲೆಟಿಕ್ಸ್‌ ಚಾಂಪಿಯನ್‌ಶಿಪ್‌ನಲ್ಲಿ 6ನೇ ಸ್ಥಾನ
  2. 3. 2024ರಲ್ಲಿ ನಡೆದ ಫೆಡರೇಷನ್ ಕಪ್‌ನಲ್ಲಿ ಬೆಳ್ಳಿ ಪದಕ

    4. 2022ರ ಜೂನ್‌ನಲ್ಲಿ ನಡೆದ ರಾಷ್ಟ್ರೀಯ ಅಂತಾರಾಜ್ಯ ಹಿರಿಯ ಅಥ್ಲೆಟಿಕ್ಸ್‌ ಚಾಂಪಿಯನ್‌ಶಿಪ್ಸ್‌ನಲ್ಲಿ ಚಿನ್ನದ ಪದಕ
  3. 5. 2023ರ ಏಪ್ರಿಲ್‌ನಲ್ಲಿ ಬೆಂಗಳೂರಿನ ಶ್ರೀ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ನಡೆದ ಇಂಡಿಯನ್‌ ಗ್ರ್ಯಾಂಡ್‌ ಪ್ರಿಕ್ಸ್‌ನಲ್ಲಿ ಚಿನ್ನ
  4. 6. 2022ರ ಏಪ್ರಿಲ್‌ನಲ್ಲಿ ಕೇರಳದ ತಿರುವನಂಪುರಂನಲ್ಲಿ ನಡೆದ ಇಂಡಿಯನ್‌ ಗ್ರ್ಯಾಂಡ್‌ ಪ್ರಿಕ್ಸ್‌ನಲ್ಲಿ ಬಂಗಾರದ ಪದಕ
  5. 7. 2022ರ ಆಗಸ್ಟ್‌ನಲ್ಲಿ ನಡೆದ ಬರ್ಮಿಂಗ್‌ಹ್ಯಾಮ್‌ ಕಾಮನ್‌ವೆಲ್ತ್‌ ಗೇಮ್ಸ್‌ನಲ್ಲಿ ಐದನೇ ಸ್ಥಾನಕ್ಕೆ ತೃಪ್ತಿ
  6. 8. 2022ರ ಅಕ್ಟೋಬರ್‌ನಲ್ಲಿ ಗುಜರಾತ್‌ನಲ್ಲಿ ನಡೆದ ಇಂಡಿಯನ್‌ ನ್ಯಾಷನಲ್‌ ಗೇಮ್ಸ್‌ನಲ್ಲಿ ಚಿನ್ನ

Continue Reading

ಕ್ರೀಡೆ

Federation Cup 2024: ಕನ್ನಡಿಗ ಮನು ಎದುರು ತೀವ್ರ ಪೈಪೋಟಿ ಎದುರಿಸಿ ಚಿನ್ನ ಗೆದ್ದ ನೀರಜ್ ಚೋಪ್ರಾ

Federation Cup 2024: ಫೆಡರೇಷನ್ ಕಪ್‌ನಲ್ಲಿ(Federation Cup)ಭಾರತದ ಸ್ಟಾರ್ ಜಾವೆಲಿನ್ ಎಸೆತಗಾರ, ಒಲಿಂಪಿಕ್​ ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾ(Neeraj Chopra) ಕನ್ನಡಿಗ ಡಿಪಿ ಮನು ಅವರಿಂದ ತೀವ್ರ ಪೈಪೋಟಿ ಎದುರಿಸಿ ಕೊನೆಗೂ ಚಿನ್ನದ ಪದಕ ಗೆದ್ದರು

VISTARANEWS.COM


on

Federation Cup 2024
Koo

ಭುವನೇಶ್ವರ: ಮೂರು ವರ್ಷದ ಬಳಿಕ ತವರಿನಲ್ಲಿ ನಡೆದ ಫೆಡರೇಷನ್ ಕಪ್‌ನಲ್ಲಿ(Federation Cup) ಕಣಕ್ಕಿಳಿದ್ದ ಭಾರತದ ಸ್ಟಾರ್ ಜಾವೆಲಿನ್ ಎಸೆತಗಾರ, ಒಲಿಂಪಿಕ್​ ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾ(82.27 ಮೀ.), ಕನ್ನಡಿಗ ಡಿಪಿ ಮನು ಅವರಿಂದ ತೀವ್ರ ಪೈಪೋಟಿ ಎದುರಿಸಿ ಕೊನೆಗೂ ಚಿನ್ನದ ಪದಕ ಗೆದ್ದರು. ಮನು(82.06 ಮೀ) ಬೆಳ್ಳಿ ಪದಕ್ಕೆ ತೃಪ್ತಿಪಟ್ಟರು. ಮತೋರ್ವ ಪದಕ ಭರವಸೆಯ ಕಿಶೋರ್ ಜೆನಾ ಅತ್ಯಂತ ಕಳಪೆ ಪ್ರದರ್ಶನ ತೋರುವ ಮೂಲಕ ಪದಕ ಗೆಲ್ಲುವಲ್ಲಿ ವಿಫಲರಾದರು. ಉತ್ತಮ್ ಪಾಟೀಲ್(78.39 ಮೀ) ಮೂರನೇ ಸ್ಥಾನ ಪಡೆದರು.

ವಿಶ್ವ ಆ್ಯತ್ಲೆಟಿಕ್ಸ್‌ ಚಾಂಪಿಯನ್‌ಶಿಪ್‌ನಲ್ಲಿ (84.14 ಮೀ.) 6ನೇ ಸ್ಥಾನ ಪಡೆದಿದ್ದ ಮನು ಒಲಿಂಪಿಕ್​ ಚಿನ್ನದ ಪದಕ ವಿಜೇತ ನೀರಜ್​ಗೆ ತೀವ್ರ ಪೈಪೋಟಿ ನೀಡಿದರು. ನೀರಜ್ ಚೋಪ್ರಾ ತಮ್ಮ ಮೊದಲ ಪ್ರಯತ್ನದಲ್ಲಿ 82 ಮೀ. ದೂರ ಜಾವೆಲಿನ್​​ ಎಸೆದರೆ, ಡಿಪಿ ಮನು 82.06 ಮೀ ದೂರಕ್ಕೆ ಜಾವೆಲಿನ್ ಎಸೆದು ಮೊದಲ ಸುತ್ತಿನಲ್ಲಿ ಮುನ್ನಡೆ ಕಾಯ್ದುಕೊಂಡರು. ದ್ವಿತೀಯ ಸುತ್ತಿನಲ್ಲಿ ಮನು 77.23 ದೂರ ಎಸೆದರು. ಆದರೆ ಇವರ ಪ್ರತಿಸ್ಪರ್ಧಿ ನೀರಜ್​ ಈ ಎಸೆತವನ್ನು ಉದ್ದೇಶಪೂರ್ವಕವಾಗಿ ಫೌಲ್ ಮಾಡಿದರು. ಈ ಥ್ರೋ ಅಷ್ಟು ಉತ್ತಮವಾಗಿರದ ಕಾರಣ ನೀರಜ್​ ಈ ತಂತ್ರ ಬಳಸಿದರು.

ಮೂರನೇ ಎಸೆತದಲ್ಲಿ ಮನು 81.43 ಮೀ. ದೂರ ದಾಖಲಿಸಿದರೆ, ಮತ್ತೆ ಎಡವಿದ ನೀರಜ್​ 81.29 ಮೀ ದಾಖಲಿಸಿ ಹಿನ್ನಡೆಯಲ್ಲೇ ಉಳಿದರು. ಆದರೆ, ನಾಲ್ಕನೇ ಪ್ರಯತ್ನದಲ್ಲಿ ಪುಟಿದೆದ್ದ ನೀರಜ್​ 82.27 ಮೀ ದೂರ ಜಾವೆಲಿನ್​ ಎಸೆದು ಅಗ್ರಸ್ಥಾನವನ್ನು ವಶಪಡಿಸಿಕೊಂಡರು. ಮನು ಈ ಸುತ್ತಿನಲ್ಲಿ 81.47 ಮೀ. ಎಸೆದರು. 28 ವರ್ಷದ ಕಿಶೋರ್ ಜೆನಾ ತಾವೆಸೆದ 4 ಎಸೆತಗಳ ಪೈಲಿ ಮೂರರಲ್ಲಿ ಫೌಲ್ ಆಗಿ ಅತ್ಯಂತ ಕಳಪೆ ಪ್ರದರ್ಶನ ತೋರಿದರು. ಕನಿಷ್ಠ ಮೂರನೇ ಸ್ಥಾನ ಪಡೆಯುವಲ್ಲಿಯೂ ವಿಫಲರಾದರು.

ಉತ್ತಮವಾಗಿ ಆಡುತ್ತಿದ್ದ ಮನು 5ನೇ ಮತ್ತು ಅಂತಿಮ 6 ಸುತ್ತಿನ ಎಸೆತವನ್ನು ಫೌಲ್ ಮಾಡಿದರು. ಅಂತಿಮವಾಗಿ ದ್ವಿತೀಯ ಸ್ಥಾನಿಯಾಗಿ ಹೊರಹೊಮ್ಮಿದರು. ನೀರಜ್​ ಬಹಳ ಕಷ್ಟಪಟ್ಟು ಚಿನ್ನದ ಪದಕ ತಮ್ಮದಾಗಿಸಿಕೊಂಡರು. ಚೋಪ್ರಾ ಅವರು ಈ ಟೂರ್ನಿಯಲ್ಲಿ ಕೊನೆಯ ಬಾರಿಗೆ ಸ್ಪರ್ಧಿಸಿದ್ದು ಮಾರ್ಚ್ 17, 2021 ರಲ್ಲಿ. ಈ ವೇಳೆ ಅವರು 87.80 ಮೀ ಎಸೆಯುವ ಮೂಲಕ ಚಿನ್ನ ಗೆದಿದ್ದರು. ಈ ಬಾರಿ 82.27 ಮೀ. ಎಸೆದರು. ಕಳೆದ ಕೆಲವು ಟೂರ್ನಿಗೆ ಹೋಲಿಸಿದರೆ ನೀರಜ್​ ಅವರ ಕಳಪೆ ಪ್ರದರ್ಶನ ಇದಾಗಿದೆ.

ಕಾಶಿನಾಥ ನಾಯ್ಕ್ ತರಬೇತಿ

2020ರಲ್ಲಿ ಡಿ.ಪಿ.ಮನು ಅವರಿಗೆ ಮಹತ್ವದ ತಿರುವು ಸಿಕ್ಕಿತು. ಅವರು ಪುಣೆಯಲ್ಲಿರುವ ಆರ್ಮಿ ಸ್ಪೋರ್ಟ್ಸ್‌ ಇನ್‌ಸ್ಟಿಟ್ಯೂಟ್‌ನಲ್ಲಿ ಹವಾಲ್ದಾರ್‌ ಕೆಲಸಕ್ಕೆ ಸೇರಿದರು. ಇದೇ ವೇಳೆ ಕಾಶಿನಾಥ ನಾಯ್ಕ್​ ಎಂಬ ಜಾವೆಲಿನ್‌ ತರಬೇತುದಾರರ ಪರಿಚಯವೂ ಆಯಿತು. ಕಾಶಿನಾಥ ಅವರ ಬಳಿ ಸತತ ತರಬೇತಿ ಪಡೆದ ಡಿ.ಪಿ. ಮನು, 65 ಮೀಟರ್‌ ದೂರ ಭರ್ಜಿ ಎಸೆತದಿಂದ 80 ಮೀಟರ್‌ ದಾಟುವಂತಾದರು.

ನೀರಜ್​ ಮತ್ತು ಕಿಶೋರ್​ ಈಗಾಗಲೇ ಪ್ಯಾರಿಸ್​ ಒಲಿಂಪಿಕ್ಸ್​ ಟಿಕೆಟ್​ ಪಡೆದಿದ್ದರು. ಮನು ಭಾರತದ ಮೂರನೇ ಸ್ಫರ್ಧಿಯಾಗಿ ಒಲಿಂಪಿಕ್ಸ್​ ಅರ್ಹತೆ ಪಡೆಲು ಅವರಿಗೆ ಈ ಟೂರ್ನಿಯಲ್ಲಿ 85.50 ಮೀ. ಎಸೆತದ ಮಾನದಂಡ ನೀಡಲಾಗಿತ್ತು. ಆದರೆ ಈ ಗುರಿಯನ್ನು ತಲುಪಲು ಅವರಿಂದ ಸಾಧ್ಯವಾಗಲಿಲ್ಲ.

ಮನು ಮಾಡಿದ ಸಾಧನೆಗಳು

  1. 2022ರ ಜೂನ್‌ನಲ್ಲಿ ನಡೆದ ರಾಷ್ಟ್ರೀಯ ಅಂತಾರಾಜ್ಯ ಹಿರಿಯ ಅಥ್ಲೆಟಿಕ್ಸ್‌ ಚಾಂಪಿಯನ್‌ಶಿಪ್ಸ್‌ನಲ್ಲಿ ಚಿನ್ನದ ಪದಕ
  2. 2023ರ ಏಪ್ರಿಲ್‌ನಲ್ಲಿ ಬೆಂಗಳೂರಿನ ಶ್ರೀ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ನಡೆದ ಇಂಡಿಯನ್‌ ಗ್ರ್ಯಾಂಡ್‌ ಪ್ರಿಕ್ಸ್‌ನಲ್ಲಿ ಚಿನ್ನ
  3. 2022ರ ಏಪ್ರಿಲ್‌ನಲ್ಲಿ ಕೇರಳದ ತಿರುವನಂಪುರಂನಲ್ಲಿ ನಡೆದ ಇಂಡಿಯನ್‌ ಗ್ರ್ಯಾಂಡ್‌ ಪ್ರಿಕ್ಸ್‌ನಲ್ಲಿ ಬಂಗಾರದ ಪದಕ
  4. 2022ರ ಆಗಸ್ಟ್‌ನಲ್ಲಿ ನಡೆದ ಬರ್ಮಿಂಗ್‌ಹ್ಯಾಮ್‌ ಕಾಮನ್‌ವೆಲ್ತ್‌ ಗೇಮ್ಸ್‌ನಲ್ಲಿ ಐದನೇ ಸ್ಥಾನಕ್ಕೆ ತೃಪ್ತಿ
  5. 2023ರ ಜುಲೈನಲ್ಲಿ ಬ್ಯಾಂಕಾಕ್‌ನಲ್ಲಿ ನಡೆದ ಏಷ್ಯನ್‌ ಅಥ್ಲೆಟಿಕ್ಸ್‌ ಚಾಂಪಿಯನ್‌ಶಿಪ್ಸ್‌ನಲ್ಲಿ ಬೆಳ್ಳಿ
  6. 2022ರ ಅಕ್ಟೋಬರ್‌ನಲ್ಲಿ ಗುಜರಾತ್‌ನಲ್ಲಿ ನಡೆದ ಇಂಡಿಯನ್‌ ನ್ಯಾಷನಲ್‌ ಗೇಮ್ಸ್‌ನಲ್ಲಿ ಚಿನ್ನ

Continue Reading

ಕ್ರೀಡೆ

IPL 2024: ಆರ್​ಸಿಬಿ ಪಂದ್ಯದ ವೇಳೆ ಕಳಪೆ ಆಹಾರ ವಿತರಣೆ: ಕೆಎಸ್​ಸಿಎ ವಿರುದ್ಧ ಎಫ್ಐಆರ್

IPL 2024: ಆರೋಗ್ಯ ಹದಗೆಡಲು ಸ್ಟೇಡಿಯಂನ ಕ್ಯಾಂಟಿನ್​ನಲ್ಲಿ ನೀಡಿದ ಆಹಾರವೇ ಕಾರಣ ಎಂದು ಚೈತನ್ಯ ಕೆಎಸ್​ಸಿಎ ಆಡಳಿತ ಮಂಡಳಿ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ದೂರಿನ ಅನ್ವಯ ಕೆಎಸ್​ಸಿಎ ವಿರುದ್ಧ ಎಫ್ಐಆರ್ ದಾಖಲಾಗಿದೆ

VISTARANEWS.COM


on

IPL 2024
Koo

ಬೆಂಗಳೂರು: 17ನೇ ಆವೃತ್ತಿಯ ಐಪಿಎಲ್​ನಲ್ಲಿ(IPL 2024) ಡೆಲ್ಲಿ ಮತ್ತು ಆರ್​ಸಿಬಿ(DC vs RCB) ನಡುವೆ ಮೇ 12ರಂದು ಎಂ.ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ(M.Chinnaswamy Stadium) ನಡೆದಿದ್ದ ಪಂದ್ಯದ ವೇಳೆ ಪ್ರೇಕ್ಷಕರಿಗೆ ಕಳಪೆ ಆಹಾರ ನೀಡಿದ ಆರೋಪದಡಿ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ(Karnataka State Cricket Association) ಆಡಳಿತ ಮಂಡಳಿ (KSCA) ವಿರುದ್ಧ ಎಫ್ಐಆರ್ ದಾಖಲಾಗಿದೆ. ಕಬ್ಬನ್ ಪಾರ್ಕ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮೇ 12ರಂದು ಐಪಿಎಲ್ ವೀಕ್ಷಣೆ ಬಂದಿದ್ದ 23 ವರ್ಷದ ಚೈತನ್ಯ ಕತಾರ್ ಏರ್ ವೇಸ್ ಫ್ಯಾನ್ಸ್ ಟರೇಸ್ ಸ್ಟ್ಯಾಂಡಿನ ಕ್ಯಾಂಟಿನ್ ನಿಂದ ಊಟ ಸೇವಿಸಿದ್ದ ನಂತರ ಕೆಲವೇ ನಿಮಿಷಗಳಲ್ಲಿ ಆತನಿಗೆ ಹೊಟ್ಟೆ ನೋವು ಕಾಣಿಸಿಕೊಂಡಿತ್ತು. ತಾನು ಕುಳಿತುಕೊಂಡಿದ್ದ ಜಾಗದಲ್ಲಿಯೇ ಚೈತನ್ಯ ಕುಸಿದುಬಿದ್ದಿದ್ದಾನೆ. ತಕ್ಷಣ ಸ್ಟೇಡಿಯಂ ಸಿಬ್ಬಂದಿ ನೆರವಿನಿಂದ ಆತನಿಗೆ ಆ್ಯಂಬುಲೆನ್ಸ್ ನಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿತ್ತು‌. ಬಳಿಕ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿದಾಗ ಚೈತನ್ಯರನ್ನು ಪರೀಕ್ಷಿಸಿದ ವೈದ್ಯರು ಫುಡ್ ಪಾಯಿಸನ್ ಆಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ IPL 2024: ಲಕ್ನೋಗೆ ಸೋಲು; ಪ್ಲೇ ಆಫ್​ ಪ್ರವೇಶಿಸಿದ ರಾಜಸ್ಥಾನ್​ ರಾಯಲ್ಸ್​

ಈ ಸಂಬಂಧ ತಮ್ಮ ಆರೋಗ್ಯ ಹದಗೆಡಲು ಕ್ಯಾಂಟಿನ್​ನಲ್ಲಿ ನೀಡಿದ ಆಹಾರವೇ ಕಾರಣ ಎಂದು ಚೈತನ್ಯ ಕೆಎಸ್​ಸಿಎ ಆಡಳಿತ ಮಂಡಳಿ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ದೂರಿನ ಅನ್ವಯ ಕೆಎಸ್​ಸಿಎ ವಿರುದ್ಧ ಎಫ್ಐಆರ್ ದಾಖಲಾಗಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುವ ಪಂದ್ಯದ ವೇಳೆ ಕಳಪೆ ಆಹಾರ ನೀಡುತ್ತಿರುವ ಆರೋಪ ಕೇಳಿಬರುತ್ತಿರುವುದು ಇದೇ ಮೊದಲೇನಲ್ಲ. ಹಲವು ಬಾರಿ ಇಲ್ಲಿ ಪಂದ್ಯ ವೀಕ್ಷಣೆಗೆ ಬಂದಿದ್ದ ಪ್ರೇಕ್ಷಕರು ಇಲ್ಲಿನ ಆಹಾರ ವಿತರಣೆಯ ಕುರಿತು ಸಾಮಾಜಿಕ ಜಾಲತಾಣದಲ್ಲಿ ಗಂಭೀರ ಆರೋಪ ಮಾಡಿದ್ದರು. ಇನ್ನಾದರೂ ಕೆಎಸ್​ಸಿಎ ಈ ಬಗ್ಗೆ ಎಚ್ಚೆತ್ತುಕೊಂಡು ಉತ್ತಮ ಆಹಾರ ನೀಡುವ ಕೆಲಸವನ್ನು ಮಾಡಬೇಕಿದೆ. ಡೆಲ್ಲಿ ವಿರುದ್ಧದ ಈ ಪಂದ್ಯವನ್ನು ಆರ್​ಸಿಬಿ 47 ರನ್​ ಅಂತರದಿಂದ ಗೆದ್ದು ಬೀಗಿತ್ತು.

ಚಿನ್ನಸ್ವಾಮಿ ಸ್ಟೇಡಿಯಂನ ಎಲ್ಲ ನೀರಿನ ಮೂಲದ ವಿವರ ಕೇಳಿದ ಎನ್‌ಜಿಟಿ!


ಬೆಂಗಳೂರಲ್ಲಿ ನೀರಿನ ಸಮಸ್ಯೆ ತೀವ್ರಗೊಂಡಿದ್ದ ವೇಳೆಯೂ(bangalore water crisis) ಚಿನ್ನಸ್ವಾಮಿ(m chinnaswamy) ಕ್ರೀಡಾಂಗಣದಲ್ಲಿ ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆ (ಕೆಎಸ್‌ಸಿಎ) 17ನೇ ಆವೃತ್ತಿಯ ಐಪಿಎಲ್(IPL 2024) ಟೂರ್ನಿಯ​ ಪಂದ್ಯಾವಳಿಗಳನ್ನು ನಡೆಸಿತ್ತು. ಇದಕ್ಕೆ ಸಾರ್ವಜನಿಕ ವಲಯದಿಂದ ಭಾರೀ ವಿರೋಧ ಕೂಡ ವ್ಯಕ್ತವಾಗಿತ್ತು. 3 ವಾರಗಳ ಹಿಂದೆ ನೀರಿನ ಬಳಕೆ ಕುರಿತು ರಾಷ್ಟ್ರೀಯ ಹಸಿರು ಪ್ರಾಧಿಕಾರ(ಎನ್‌ಜಿಟಿ) ವರದಿ ಕೇಳಿತ್ತು. ಪಂದ್ಯಗಳಿಗೆ ಬಳಸಿರುವ ನೀರಿನ ಮೂಲ ಹಾಗೂ ಕ್ರೀಡಾಂಗಣದಲ್ಲಿರುವ 400 ಅಡಿ ಆಳದ ನಾಲ್ಕು ಕೊಳವೆ ಬಾವಿಗಳ ಬಗ್ಗೆ ವರದಿ ಸಲ್ಲಿಸುವಂತೆ ಸೂಚಿಸಿದೆ. ಎನ್‌ಜಿಟಿ ಮುಖ್ಯಸ್ಥ ನ್ಯಾ. ಪ್ರಕಾಶ್ ಶ್ರೀವಾಸ್ತವ ಅವರಿದ್ದ ಪೀಠವು, ಕ್ರೀಡಾಂಗಣದಲ್ಲಿ ಬಳಕೆಯಾಗುತ್ತಿರುವ ನೀರಿನ ಎಲ್ಲಾ ಮೂಲ, ಕ್ರೀಡಾಂಗಣದಲ್ಲಿರುವ ಬೋರ್‌ವೆಲ್‌, ಒಳಚರಂಡಿ ಸಂಸ್ಕರಣಾ ಘಟಕದ ಬಳಕೆ ಬಗ್ಗೆ 4 ವಾರಗಳಲ್ಲಿ ಉತ್ತರಿಸುವಂತೆ ಸೂಚಿಸಿದೆ. ಮುಂದಿನ ವಿಚಾರಣೆಯನ್ನು ಆಗಸ್ಟ್​ 13ಕ್ಕೆ ನಿಗದಿಪಡಿಸಿದೆ.

Continue Reading
Advertisement
Anjali Murder Case
ಕ್ರೈಂ18 mins ago

Anjali Murder Case: ಅಂಜಲಿ‌ ಕೊಲೆ‌ ಪ್ರಕರಣದಲ್ಲಿ ಕರ್ತವ್ಯ ಲೋಪ; ಇನ್ಸ್‌ಪೆಕ್ಟರ್, ಮಹಿಳಾ ಪೇದೆ ಅಮಾನತು

Participation of young women in science technology information and communication fields should be increased says Isha Ambani
ದೇಶ28 mins ago

Isha Ambani: ಪ್ರಧಾನಿ ನರೇಂದ್ರ ಮೋದಿ ನಾಯಕತ್ವ ಶ್ಲಾಘಿಸಿದ ಇಶಾ ಅಂಬಾನಿ

Retired Teacher G T Bhatt Bommanahalli 80th celebration programme on May 19
ಉತ್ತರ ಕನ್ನಡ35 mins ago

Uttara Kannada News: ಮೇ 19ರಂದು ನಿವೃತ್ತ ಶಿಕ್ಷಕ ಜಿ. ಟಿ. ಭಟ್ ಬೊಮ್ಮನಹಳ್ಳಿ 80ರ ಸಂಭ್ರಮ

Dalita Sangharsha samiti demands that Minister HK Patil should be dismissed from the Cabinet
ರಾಯಚೂರು39 mins ago

Raichur News: 371 ಜೆ ಮೀಸಲಾತಿ ಮುಂದುವರಿಸದಂತೆ ಸಿಎಂಗೆ ಪತ್ರ ಬರೆದ ಎಚ್.ಕೆ. ಪಾಟೀಲ್ ವಜಾಗೆ ದಸಂಸ ಆಗ್ರಹ

Sandeep Lamichhane
ಕ್ರೀಡೆ51 mins ago

Sandeep Lamichhane: ಅತ್ಯಾಚಾರ ಆರೋಪದಲ್ಲಿ 8 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದ ಕ್ರಿಕೆಟಿಗ ಲಮಿಚಾನೆಗೆ ರಿಲೀಫ್; ನಿರಪರಾಧಿ ಎಂದ ಕೋರ್ಟ್​

Shyam Rangeela
ದೇಶ59 mins ago

Shyam Rangeela: ವಾರಾಣಸಿಯಲ್ಲಿ ಮೋದಿ ವಿರುದ್ಧ ಕಣಕ್ಕಿಳಿದ ಕಲಾವಿದನ ನಾಮಪತ್ರ ತಿರಸ್ಕಾರ!

Terrorist Arrested
ಕರ್ನಾಟಕ2 hours ago

Terrorist Arrested: ಬೆಂಗಳೂರಿನ ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಕ್ಕೆ ಸಂಚು ರೂಪಿಸಿದ್ದ ಶಂಕಿತ ಉಗ್ರನ ಬಂಧನ

Monsoon 2024
ದೇಶ2 hours ago

Monsoon 2024: ರೈತರಿಗೆ ಗುಡ್‌ ನ್ಯೂಸ್;‌ ಮುಂಗಾರು ಮಳೆ ಆಗಮನಕ್ಕೆ ಫಿಕ್ಸ್‌ ಆಯ್ತು ದಿನಾಂಕ!

DP Manu
ಕ್ರೀಡೆ2 hours ago

DP Manu: ಫೆಡರೇಷನ್ ಕಪ್‌ನಲ್ಲಿ ನೀರಜ್​ ಚೋಪ್ರಾಗೆ ಬೆವರಿಳಿಯುವಂತೆ ಮಾಡಿದ ಕನ್ನಡಿಗ ಮನು; ಇವರ ಹಿನ್ನೆಲೆ, ಸಾಧನೆ ಏನೇನು?

Davanagere News
ಕರ್ನಾಟಕ3 hours ago

Davanagere News: ದಾವಣಗೆರೆ ಸಮೀಪದ ಕೆರೆಯಲ್ಲಿ ಲಕ್ಷಕ್ಕೂ ಅಧಿಕ ಮೀನುಗಳ ಮಾರಣಹೋಮ; ವಿಷಪ್ರಾಶನ ಶಂಕೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case
ಕರ್ನಾಟಕ16 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ18 hours ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ1 day ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20241 day ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20241 day ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ1 day ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು1 day ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ2 days ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ2 days ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ2 days ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

ಟ್ರೆಂಡಿಂಗ್‌