Site icon Vistara News

ಭಾರತ-ದಕ್ಷಿಣ ಆಫ್ರಿಕಾ ಪಂದ್ಯದ ಟಿಕೆಟ್‌ ಹಿಂದಿರುಗಿಸಿದ ಗವರ್ನರ್; ಕಾರಣ ಏನು?

india vs south africa tickets

ಕೋಲ್ಕೊತಾ: ವಿಶ್ವಕಪ್​ನ ಅತ್ಯಂತ ಬಲಿಷ್ಠ ತಂಡಗಳಾದ ಭಾರತ ಮತ್ತು ದಕ್ಷಿಣ ಆಫ್ರಿಕಾ(IND vs SA) ವಿರುದ್ಧದ ಪಂದ್ಯವನ್ನು ಕಣ್ತುಂಬಿಕೊಳ್ಳಲು ಅಭಿಮಾನಿಗಳು ಕಾತರವಾಗಿದ್ದಾರೆ. ಇತ್ತಂಡಗಳ ಈ ಪಂದ್ಯ ಇನ್ನೇನು ಕೆಲವೇ ಕ್ಷಣದಲ್ಲಿ ಆರಂಭಗೊಳ್ಳಲಿದೆ. ಆದರೆ ಪಶ್ಚಿಮ ಬಂಗಾಳದ ಗವರ್ನರ್(Governor of West Bengal) ಸಿ. ವಿ. ಆನಂದ ಬೋಸ್(C. V. Ananda Bose) ಅವರು ತಮಗೆ ನೀಡಿದ ಪಂದ್ಯದ ನಾಲ್ಕು ಟಿಕೆಟ್​ಗಳನ್ನು ಹಿಂದಿರುಗಿಸಿದ್ದಾರೆ.

ರಾಜಭವನದಲ್ಲಿ ಜನತಾ ಕ್ರೀಡಾಂಗಣ

ಕಾಳಸಂತೆಯಲ್ಲಿ ಟಿಕೆಟ್​ಗಳು ಬಾರಿ ಮೊತ್ತಕ್ಕೆ ಮಾರಾಟವಾಗುತ್ತಿರುವ ಆರೋಪದ ಹಿನ್ನೆಲೆಯಲ್ಲಿ ಗವರ್ನರ್ ಅವರು ಈ ನಿರ್ಧಾರ ಕೈಗೊಂಡಿದ್ದಾರೆ. ರಾಜಭವನದಲ್ಲಿ ಜನತಾ ಕ್ರೀಡಾಂಗಣವನ್ನು ತೆರೆದು ಇಲ್ಲಿ ದೊಡ್ಡ ಪರದೆಯೊಂದನ್ನು ಹಾಕಿ ಜನರೊಂದಿಗೆ ಪಂದ್ಯವನ್ನು ವೀಕ್ಷಿಸಲು ನಿರ್ಧರಿಸಿದ್ದಾರೆ. ಈ ವಿಚಾರವನ್ನು ರಾಜಭವನದ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.

500 ಮಂದಿಗೆ ಅವಕಾಶ

ಪಶ್ಚಿಮ ಬಂಗಾಳ ಕ್ರಿಕೆಟ್ ಮಂಡಳಿಯು ಗವರ್ನರ್ ಸಿ. ವಿ. ಆನಂದ ಬೋಸ್ ಅವರಿಗೆ ನಾಲ್ಕು ಉಚಿತ ಟಿಕೆಟ್‌ಗಳನ್ನು ಒದಗಿಸಿ ಪಂದ್ಯಕ್ಕೆ ಬರುವಂತೆ ವಿಶೇಷ ಆಹ್ವಾನ ನೀಡಿತ್ತು. ಆದರೆ ಗವರ್ನರ್ ಈ ಟಿಕೆಟ್​ಗಳನ್ನು ಹಿಂದಿರುಗಿಸಿ ರಾಜಭವನದಲ್ಲೇ ಪಂದ್ಯ ನೋಡಲು ನಿರ್ಧರಿಸಿದ್ದಾರೆ. 500 ಜನರಿಗೆ ಪಂದ್ಯ ನೋಡುವ ಅವಕಾಶ ಇರಲಿದೆ. ಭದ್ರತಾ ದೃಷ್ಟಿಯಿಂದಾಗಿ 1 ಗಂಟೆಯ ಒಳಗೆ ಬಂದವರಿಗೆ ಮಾತ್ರ ಪ್ರವೇಶ ಇರಲಿದೆ. ಆ ಬಳಿಕ ಬಂದವರಿಗೆ ಅವಕಾಶ ಇರುವುದಿಲ್ಲ ಎಂದು ರಾಜಭವನದ ಅಧಿಕಾರಿ ತಿಳಿಸಿದ್ದಾರೆ.

ಈ ಪಂದ್ಯ ಟಿಕೆಟ್​ಗಳನ್ನು ಕಾನೂನುಬಾಹಿರವಾಗಿ ಮಾರಾಟ ಮಾಡಿದ ಆರೋದಲ್ಲಿ ನವೆಂಬರ್ 1ರಿಂದ ಈವರೆಗೆ 20ಕ್ಕೂ ಅಧಿಕ ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪಂದ್ಯಕ್ಕೆ ಮಳೆ ಭೀತಿ

ಈ ಪಂದ್ಯವನ್ನು ಹೈವೋಲ್ಟೇಜ್​ ಎಂದು ನಿರೀಕ್ಷೆ ಮಾಡಿ ಕಾದು ಕುಳಿತ ಅಭಿಮಾನಿಗಳಿಗೆ ಹವಾಮಾನ ವರದಿ ನಿರಾಸೆಯನ್ನುಂಟುಮಾಡುವ ಸುದ್ದಿಯನ್ನು ನೀಡಿದೆ. ಈ ಪಂದ್ಯಕ್ಕೆ ಮಳೆಯ ಭೀತಿ ಇದೆ ಎಂದು ಮುನ್ಸೂಚನೆ ನೀಡಿದೆ.

ಕೋಲ್ಕೋತಾದಲ್ಲಿ ಭಾನುವಾರ ರಾತ್ರಿಯ ವೇಳೆ ಶೇ 31ರಷ್ಟು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಒಂದು ಇನಿಂಗ್ಸ್​ ನಡೆದರೂ ಇನ್ನೊಂದು ಇನಿಂಗ್ಸ್​ ನಡೆಯುವುದು ಅನುಮಾನ ಎನ್ನಲಾಗಿದೆ. ಅಲ್ಲದೆ ಇಲ್ಲಿ ಮಳೆ ಬಂದರೆ ಆ ಬಳಿಕ ಮಂಜಿನ ಕಾಟ ತಪ್ಪಿದ್ದಲ್ಲ. ಹೀಗಾಗಿ ಮಳೆ ಬಂದರೆ ಪಂದ್ಯ ರದ್ದಾಗುವುದು ಖಚಿತ.

ಇದನ್ನೂ ಓದಿ IND vs SA: ಕೊಹ್ಲಿಯೂ ಬೌಲಿಂಗ್​ ನಡೆಸಲಿದ್ದಾರೆ; ಸುಳಿವು ನೀಡಿದ​ ದ್ರಾವಿಡ್

ಒಂದೊಮ್ಮೆ ಮಳೆಯಿಂದ ಪಂದ್ಯ ರದ್ದಾದರೂ ಉಭಯ ತಂಡಗಳಿಗೆ ಯಾವುದೇ ನಷ್ಟ ಸಂಭವಿಸದು. ಕಾರಣ ಈಗಾಗಲೇ ಇತ್ತಂಡಗಳು ಸೆಮಿಫೈನಲ್ ಪ್ರವೇಶ ಗಿಟ್ಟಿಸಿಕೊಂಡಿದೆ. ದಕ್ಷಿಣ ಆಫ್ರಿಕಾ ತಂಡ ಶನಿವಾರ ಪಾಕಿಸ್ತಾನ ವಿರುದ್ಧ ಕಿವೀಸ್​ ಸೋಲು ಕಂಡ ಕಾರಣದಿಂದ ಸೆಮಿ ಟಿಕೆಟ್​ ಪಡೆಯಿತು.

ಪಿಚ್​ ರಿಪೋರ್ಟ್​

ಈಡನ್‌ ಗಾರ್ಡನ್ಸ್‌ನ(Eden Gardens) ಪಿಚ್​ ಸೀಮರ್‌ಗಳಿಗೆ ನೆರವು ನೀಡುವ ಸಾಧ್ಯತೆ ಇದೆ. ಇಲ್ಲಿ ಚೇಸಿಂಗ್​ ನಡೆಸುವ ತಂಡಕ್ಕೆ ಹೆಚ್ಚಿನ ಅವಕಾಶ ಏಕೆಂದರೆ ರಾತ್ರಿಯ ವೇಳೆ ಇಲ್ಲಿ ಇಬ್ಬನಿ ಸಮಸ್ಯೆ ಕಾಡಲಿದೆ. ಇದು ಬೌಲರ್​ಗಳಿಗೆ ಕಷ್ಟಕರವಾಗಲಿದೆ. ಕೈಯಲ್ಲಿ ಸರಿಯಾಗಿ ಚೆಂಡು ನಿಲ್ಲದೆ ನಿರ್ದಿಷ್ಟ ಗುರಿಗೆ ಬೌಲಿಂಗ್​ ಮಾಡಲು ಸಾಧ್ಯವಾಗುವುದಿಲ್ಲ. ಟಾಸ್​ ಗೆದ್ದ ತಂಡ ಮೊದಲು ಬೌಲಿಂಗ್​ ಆಯ್ಕೆ ಮಾಡಿಕೊಂಡರೆ ಉತ್ತಮ.

ಸಂಭಾವ್ಯ ತಂಡ

ಭಾರತ: ರೋಹಿತ್ ಶರ್ಮಾ​, ಶುಭಮನ್​ ಗಿಲ್​, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆ.ಎಲ್ ರಾಹುಲ್, ಸೂರ್ಯಕುಮಾರ್ ಯಾದವ್​, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಕುಲ್​ದೀಪ್​ ಯಾದವ್, ಜಸ್​ಪ್ರೀತ್​ ಬುಮ್ರಾ, ಮೊಹಮ್ಮದ್​ ಸಿರಾಜ್.

ದಕ್ಷಿಣ ಆಫ್ರಿಕಾ: ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ರಸ್ಸಿ ವಾನ್ ಡರ್​ ಡುಸೆನ್, ಐಡೆನ್ ಮಾರ್ಕ್ರಮ್, ಟೆಂಬ ಬವುಮಾ, ಹೆನ್ರಿಕ್ ಕ್ಲಾಸೆನ್, ಡೇವಿಡ್ ಮಿಲ್ಲರ್, ಮಾರ್ಕೊ ಜಾನ್ಸೆನ್, ಕೇಶವ್ ಮಹಾರಾಜ್, ಕಗಿಸೊ ರಬಾಡಾ, ಲುಂಗಿ ಎನ್​ಗಿಡಿ, ಜೆರಾಲ್ಡ್ ಕೋಟ್ಜಿ.

Exit mobile version