Pro Kabaddi | ಮತ್ತೆ ಮಿಂಚಿದ ಭರತ್‌, ಪ್ಯಾಂಥರ್ಸ್‌ಗೆ ಸೋಲುಣಿಸಿದ ಬೆಂಗಳೂರು ಬುಲ್ಸ್ - Vistara News

ಕ್ರೀಡೆ

Pro Kabaddi | ಮತ್ತೆ ಮಿಂಚಿದ ಭರತ್‌, ಪ್ಯಾಂಥರ್ಸ್‌ಗೆ ಸೋಲುಣಿಸಿದ ಬೆಂಗಳೂರು ಬುಲ್ಸ್

ಬೆಂಗಳೂರು ಬುಲ್ಸ್‌ ತಂಡ ಜೈಪುರ ಪಿಂಕ್‌ ಪ್ಯಾಂಥರ್ಸ್‌ ವಿರುದ್ಧ 37-31 ಅಂಕಗಳ ಅಂತರದಲ್ಲಿ ಜಯ ಗಳಿಸಿ ಅಂಕ ಪಟ್ಟಿಯಲ್ಲಿ ಅಗ್ರ ಸ್ಥಾನ ಕಾಯ್ದುಕೊಂಡಿದೆ.

VISTARANEWS.COM


on

pro kabaddi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಪುಣೆ: ಇಲ್ಲಿನ ಶ್ರೀಶಿವಛತ್ರಪತಿ ಸ್ಪೋರ್ಟ್ಸ್‌ ಕಾಂಪ್ಲೆಕ್ಸ್‌ನಲ್ಲಿ ನಡೆಯುತ್ತಿರುವ ವಿವೋ ಪ್ರೋ ಕಬಡ್ಡಿ ಲೀಗ್‌ನ (Pro Kabaddi) ಭಾನುವಾರದ ಮೊದಲ ಪಂದ್ಯದಲ್ಲಿ ಬೆಂಗಳೂರು ಬುಲ್ಸ್‌ ತಂಡ ಜೈಪುರ ಪಿಂಕ್‌ ಪ್ಯಾಂಥರ್ಸ್‌ ವಿರುದ್ಧ 37-31 ಅಂಕಗಳ ಅಂತರದಲ್ಲಿ ಜಯ ಗಳಿಸಿ ಅಂಕ ಪಟ್ಟಿಯಲ್ಲಿ ಅಗ್ರ ಸ್ಥಾನ ಕಾಯ್ದುಕೊಂಡಿದೆ.

ಬರ್ತ್‌ಡೇ ಬಾಯ್‌ ಭರತ್‌ ಸೂಪರ್‌ 10 ಸಾಧನೆ ಮಾಡಿ ಜಯದಲ್ಲಿ ಪ್ರಮುಖ ಪಾತ್ರವಹಿಸಿದರು. ವಿಕಾಶ್‌ ಕಂಡೊಲ (9) ಮತ್ತು ನೀರಜ್‌ ನರ್ವಾಲ್‌ (5) ರೈಡಿಂಗ್‌ನಲ್ಲಿ ಉತ್ತಮ ಪ್ರದರ್ಶನ ತೋರಿ ಅದ್ಭುತ ಜಯಕ್ಕೆ ನೆರವಾದರು. ಇತ್ತಂಡಗಳು ಕೊನೆಯ ಕ್ಷಣದವರೆಗೂ ಸಮಬಲದ ಹೋರಾಟ ನೀಡುತ್ತಿದ್ದವು, ಆದರೆ ವಿಕಾಶ್‌ ಕಂಡೋಲ ಕೊನೆಯ ಕ್ಷಣದಲ್ಲಿ ಜೈಪುರ ಪಿಂಕ್‌ ಪ್ಯಾಂಥರ್ಸ್‌ ತಂಡವನ್ನು ಆಲೌಟ್‌ ಮಾಡುವ ಮೂಲಕ ಬೆಂಗಳೂರು ಬುಲ್ಸ್‌ ಮುನ್ನಡೆ ಕಂಡು ಜಯವನ್ನು ಖಚಿತಪಡಿಸಿಕೊಂಡಿತು. ಜೈಪುರ ಪಿಂಕ್‌ ಪ್ಯಾಂಥರ್ಸ್‌ ಪರ ಅರ್ಜುನ್‌ ದೇಸ್ವಾಲ್‌ ಸೂಪರ್‌ ಟೆನ್‌ ಸಾಧನೆ ಮಾಡಿದರೂ ತಂಡವನ್ನು ಸೋಲಿನಿಂದ ಪಾರು ಮಾಡಲಾಗಲಿಲ್ಲ. ಕೊನೆಯ ಕ್ಷಣದಲ್ಲಾದ ಆಲೌಟ್‌ ತಂಡದ ಜಯವನ್ನು ಕಸಿದುಕೊಂಡಿತು.

ಪ್ರಥಮಾರ್ಧದಲ್ಲಿ ಸಮಬಲ

ಒಂದು ಹಂತದಲ್ಲಿ 15-5ರಲ್ಲಿ ಮುನ್ನಡೆ ಕಂಡಿದ್ದ ಬೆಂಗಳೂರು ಬುಲ್ಸ್‌ ಇದ್ದಕ್ಕಿದ್ದಂತೆ ಪಂದ್ಯದ ಮೇಲೆ ಹಿಡಿತ ಸಾಧಿಸಿದುದರ ಪರಿಣಾಮ ಜೈಪುರ ಪಿಂಕ್‌ ಪ್ಯಾಂಥರ್ಸ್‌ ವಿರುದ್ಧದ ಪಂದ್ಯ 19-19ರಲ್ಲಿ ಸಮಬಲಗೊಂಡಿತು. ಭರತ್‌ ಅವರು ರೈಡಿಂಗ್‌ನಲ್ಲಿ 7 ಅಂಕಗಳನ್ನು ಗಳಿಸಿ ಬೆಂಗಳೂರು ಬುಲ್ಸ್‌ ತಂಡಕ್ಕೆ ಉತ್ತಮ ಮುನ್ನಡೆಗೆ ಅವಕಾಶ ನೀಡಿದ್ದರು. ವಿಕಾಶ್‌ ಕಂಡೋಲ 4 ಅಂಕಗಳನ್ನು ಗಳಿಸಿ ಭರತ್‌ಗೆ ಸಾಥ್‌ ನೀಡಿದ್ದರು. ನೀರಜ್‌ ನರ್ವಾಲ್‌ ಟ್ಯಾಕಲ್‌ನಲ್ಲಿ 3 ಅಂಕಗಳನ್ನು ಗಳಿಸಿ ತಂಡಕ್ಕೆ ನೆರವಾದರು. ಜೈಪುರ ಪಿಂಕ್‌ ಪ್ಯಾಂಥರ್ಸ್‌ ಆರಂಭದಲ್ಲಿ ನೀರಸ ಪ್ರದರ್ಶನ ತೋರಿತ್ತು, ಆದರೆ ಕೊನೆಯ ಕ್ಷಣದಲ್ಲಿ ಅರ್ಜುನ್‌ ದೇಶ್ವಾಲ್‌ ಅವರು ರೈಡಿಂಗ್‌ನಲ್ಲಿ 8 ಅಂಕಗಳನ್ನು ಗಳಿಸುವ ಮೂಲಕ ಪಂದ್ಯ 19-19ರಲ್ಲಿ ಸಮಬಲಗೊಂಡಿತು. ರೈಡಿಂಗ್‌ನಲ್ಲಿ ಬೆಂಗಳೂರು 13 ಅಂಕಗಳನ್ನು ಗಳಿಸಿದರೆ, ಜೈಪುರ ಪಿಂಕ್‌ ಪ್ಯಾಂಥರ್ಸ್‌ 12 ಅಂಕಗಳನ್ನು ಗಳಿಸಿತ್ತು. ಇತ್ತಂಡಗಳು ತಲಾ ಒಂದೊಂದು ಬಾರಿ ಆಲೌಟ್‌ ಆದವು. ಟ್ಯಾಕಲ್‌ನಲ್ಲೂ ಸಮಾನ ಅಂಕ ( 4) ಗಳಿಸಿದವು. ಇಂದು ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿರುವ ಬೆಂಗಳೂರು ಬುಲ್ಸ್‌ನ ರೈಡರ್‌ ಭರತ್‌ ಹೂಡಾ ಅವರು ಪ್ರಸಕ್ತ ಲೀಗ್‌ನಲ್ಲಿ 100 ರೈಡಿಂಗ್‌ ಅಂಕಗಳನ್ನು ಗಳಿಸಿದ ಹೆಗ್ಗಳಿಕೆಗೆ ಪಾತ್ರರಾದರು.

ಇದನ್ನೂ ಓದಿ | Pro Kabaddi | ಭರತ್ ಸೂಪರ್‌ ಶೋ; ಡೆಲ್ಲಿಗೆ ಸೋಲುಣಿಸಿ ಅಗ್ರ ಸ್ಥಾನಕ್ಕೇರಿದ ಬೆಂಗಳೂರು ಬುಲ್ಸ್‌

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

IPL 2024 : ಆಟಗಾರರಿಗೆ ಇಂಗ್ಲಿಷ್ ಗೊತ್ತಿಲ್ಲದ್ದು ಆರ್​ಸಿಬಿ ಸೋಲಿಗೆ ಕಾರಣ; ಮಾಜಿ ಆಟಗಾರನ ವಿಭಿನ್ನ ವಿಶ್ಲೇಷಣೆ

IPL 2024: ಕೆಲವರು ಮಾತ್ರ ಅಂತರರಾಷ್ಟ್ರೀಯ ಆಟಗಾರರು. ಉಳಿದವರೆಲ್ಲರೂ ಭಾರತೀಯರು ಮತ್ತು ಅವರಲ್ಲಿ ಅರ್ಧದಷ್ಟು ಜನರಿಗೆ ಇಂಗ್ಲಿಷ್ ಸರಿಯಾಗಿ ಅರ್ಥವಾಗುವುದಿಲ್ಲ. ನೀವು ಅವರನ್ನು ಹೇಗೆ ಪ್ರೇರೇಪಿಸುವಿರಿ? ಅವರೊಂದಿಗೆ ಸಮಯ ಕಳೆಯುವವರು ಯಾರು? ಅವರೊಂದಿಗೆ ಯಾರು ಮಾತನಾಡುತ್ತಾರೆ? ಆ ತಂಡದಲ್ಲಿ ಒಬ್ಬನೇ ಒಬ್ಬ ಭಾರತೀಯ ಸಿಬ್ಬಂದಿ ಇಲ್ಲ. . ಕನಿಷ್ಠ ಆಟಗಾರರು ನಂಬಬಹುದಾದ ಯಾರಾದರೂ ಇರಬೇಕು,” ಎಂದು ಸೆಹ್ವಾಗ್ ಆರ್​ಸಿಬಿ ಮ್ಯಾನೇಜ್ಮೆಂಟ್ ಅನ್ನು ಪ್ರಶ್ನಿಸಿದ್ದಾರೆ.

VISTARANEWS.COM


on

IPL 2024
Koo

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತೊಂದು ನಿರಾಶಾದಾಯಕ ಸೋಲಿಗೆ ಒಳಗಾಗಿದೆ. ಸನ್​ರೈಸರ್ಸ್​ ಹೈದರಾಬಾದ್ ವಿರುದ್ಧ ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) 17ನೇ ಆವೃತ್ತಿಯಲ್ಲಿ ಆಘಾತಕಾರಿ ಫಲಿತಾಂಶ ಎದುರಿಸಿದೆ. ಪ್ರತಿ ಋತುವಿನಲ್ಲಿ, ಫ್ರಾಂಚೈಸಿ ತಮ್ಮ ಅಭಿಮಾನಿಗಳ ಹೃದಯದಲ್ಲಿ ಭರವಸೆಗಳನ್ನು ಮೂಡಿಸುತ್ತದೆ/ ನಂತರ ಕಳಪೆ ಪ್ರದರ್ಶನದಿಂದ ಅವರಿಗೆ ಬೇಸರ ಮೂಡಿಸುತ್ತದೆ. 2024 ರ ಅಭಿಯಾನವು ಅದಕ್ಕಿಂತ ಭಿನ್ನವಾಗಿಲ್ಲ. ಆರ್​ಸಿಬಿ 7 ಪಂದ್ಯಗಳಲ್ಲಿ 6 ಸೋಲುಗಳನ್ನು ಅನುಭವಿಸಿ 10 ತಂಡಗಳ ಪಾಯಿಂಟ್ಸ್​​ ಟೇಬಲ್​ನಲ್ಲಿ ಕೊನೆಯ ಸ್ಥಾನದಲ್ಲಿದೆ. ಪಂಡಿತರು ಆರ್​​ಸಿಬಿಯ ಸೋಲಿಗೆ ಕಾರಣಗಳನ್ನು ಹುಡುಕುತ್ತಲೇ ಇದ್ದಾರೆ. ಅಂತೆಯೇ ಮಾಜಿ ಸ್ಫೋಟಕ ಬ್ಯಾಟರ್​​ ವಿರೇಂದ್ರ ಸೆಹ್ವಾಗ್ ಈ ತಮ್ಮದೇ ಅಭಿಪ್ರಾಯಗಳನ್ನು ನೀಡಿದ್ದಾರೆ. ಅವರ ಪ್ರಕಾರ ಆರ್​ಸಿಬಿಯ ದೊಡ್ಡ ಸಮಸ್ಯೆಯೆಂದರೆ ಭಾರತೀಯ ಸಹಾಯಕ ಸಿಬ್ಬಂದಿಯ ಕೊರತೆ.

ನಿಮ್ಮ ಬಳಿ 12ರಿಂದ 15 ಭಾರತೀಯ ಆಟಗಾರರು ಇದ್ದಾರೆ. ಕೇವಲ 10 ವಿದೇಶಿ ಆಟಗಾರರನ್ನು ಹೊಂದಿದ್ದೀರಿ. ನಿಮ್ಮ ಇಡೀ ಸಹಾಯಕ ಸಿಬ್ಬಂದಿ ವರ್ಗ ವಿದೇಶಿಯರಾಗಿದ್ದರೆ. ಅದುವೇ ಸಮಸ್ಯೆಯಾಗಿದೆ. ಅವರಲ್ಲಿ ಕೆಲವರು ಮಾತ್ರ ಅಂತರರಾಷ್ಟ್ರೀಯ ಆಟಗಾರರು. ಉಳಿದವರೆಲ್ಲರೂ ಭಾರತೀಯರು ಮತ್ತು ಅವರಲ್ಲಿ ಅರ್ಧದಷ್ಟು ಜನರಿಗೆ ಇಂಗ್ಲಿಷ್ ಸರಿಯಾಗಿ ಅರ್ಥವಾಗುವುದಿಲ್ಲ. ನೀವು ಅವರನ್ನು ಹೇಗೆ ಪ್ರೇರೇಪಿಸುವಿರಿ? ಅವರೊಂದಿಗೆ ಸಮಯ ಕಳೆಯುವವರು ಯಾರು? ಅವರೊಂದಿಗೆ ಯಾರು ಮಾತನಾಡುತ್ತಾರೆ? ಆ ತಂಡದಲ್ಲಿ ಒಬ್ಬನೇ ಒಬ್ಬ ಭಾರತೀಯ ಸಿಬ್ಬಂದಿ ಇಲ್ಲ. . ಕನಿಷ್ಠ ಆಟಗಾರರು ನಂಬಬಹುದಾದ ಯಾರಾದರೂ ಇರಬೇಕು,” ಎಂದು ಸೆಹ್ವಾಗ್ ಆರ್​ಸಿಬಿ ಮ್ಯಾನೇಜ್ಮೆಂಟ್ ಅನ್ನು ಪ್ರಶ್ನಿಸಿದ್ದಾರೆ.

ಆಟಗಾರರಿಗೆ ಆರಾಮದಾಯಕ ಪರಿಸ್ಥಿತಿ ಸಿಗಬೇಕು. ನಾಯಕ ಫಾಫ್ ಡು ಪ್ಲೆಸಿಸ್ ಅವರ ಮುಂದೆ ನಿಲ್ಲುವುದೇ ಇಲ್ಲ. ಯಾಕೆಂದರೆ ಅವರಿಗೆ ಭಾಷೆ ಬರುವುದಿಲ್ಲ. ಅವರು ಏನನ್ನಾದರೂ ಕೇಳಿದರೆ, ಅವರು ಉತ್ತರಿಸಬೇಕಾಗುತ್ತದೆ. ನಾಯಕ ಭಾರತೀಯನಾಗಿದ್ದರೆ, ಆಟಗಾರನ ಮನಸ್ಸಿನಲ್ಲಿ ಏನಾಗುತ್ತಿದೆ ಹಂಚಿಕೊಳ್ಳಬಹುದು. ವಿದೇಶಿ ಆಟಗಾರರಿಗೆ ಇದೇ ಪರಿಸ್ಥಿತಿ ಎದುರಾಗಿದ್ದರೆ ಏನು ಮಾಡಬೇಕಾಗಿತ್ತು. ಹೀಗಾಗಿ ಆರ್​ಸಿಬಿಗೆ ಕನಿಷ್ಠ 2-3 ಭಾರತೀಯ ಸಹಾಯಕ ಸಿಬ್ಬಂದಿಯ ಅಗತ್ಯವಿದೆ ಎಂದು ಸೆಹ್ವಾಗ್ ವಿಶ್ಲೇಷಣೆ ಮಾಡಿದ್ದಾರೆ.

ಆಯ್ಕೆಯೇ ಸರಿಲ್ಲಿ

ಭಾರತ ಮತ್ತು ಕೋಲ್ಕತಾ ನೈಟ್ ರೈಡರ್ಸ್​ ತಂಡ ಮಾಜಿ ಬ್ಯಾಟರ್​ ಮನೋಜ್ ತಿವಾರಿ, ಆರ್​ಸಿಬಿಯ ಸಮಸ್ಯೆಗಳು ಭೀಕರವಾಗಿದೆ ಎಂದಿದ್ದಾರೆ. ಹರಾಜು ಟೇಬಲ್​ನಲ್ಲಿಯೇ ಕಳಪೆ ನೇಮಕ ನಡೆಯುತ್ತಿದೆ. ಅದುವೇ ಅವರ ತೊಂದರೆಗಳ ಹಿಂದಿನ ದೊಡ್ಡ ಕಾರಣ ಎಂದ ಹೇಳಿದ್ದಾರೆ.

ಇದನ್ನೂ ಓದಿ: Hardik Pandya : ಹಾರ್ದಿಕ್ ಪಾಂಡ್ಯ ಸಹೋದರನ ಪೊಲೀಸ್​ ಕಸ್ಟಡಿ ವಿಸ್ತರಣೆ; ಏನಿದು ಕೇಸ್​?

“ಸಮಸ್ಯೆ ಎಲ್ಲಿದೆ ಎಂದು ನನಗೆ ತಿಳಿದಿದೆ. ಹರಾಜು ಟೇಬಲ್ ನಿಂದ ನಿರ್ವಹಣೆಯವರೆಗೆ ಎಲ್ಲ ಕಡೆಯೂ ಇದೆ. ಈ ಫ್ರಾಂಚೈಸಿಯ ಎಲ್ಲಾ ಉತ್ತಮ ಆಟಗಾರರು ಇತರ ತಂಡಗಳಿಗಾಗಿ ಹೋಗಿ ಅತ್ಯುತ್ತಮವಾಗಿ ಆಡುತ್ತಾರೆ. ಆ ತಂಡದಲ್ಲಿ ಪ್ರಮುಖ ವಿಕೆಟ್ ಟೇಕಿಂಗ್​ ಬೌಲರ್ (ಯಜುವೇಂದ್ರ ಚಾಹಲ್) ಅವರನ್ನು ಕೈಬಿಡಲಾಗಿದೆ. ಇದೇ ವೇಳೆ ವಿರಾಟ್ ಕೊಹ್ಲಿ ನಾಯಕತ್ವವನ್ನು ಮುಂದುವರಿಸುವುದಿಲ್ಲ. ಅವರು ಅವರನ್ನು 2016ರರ ಫೈನಲ್ ಗೆ ಮುನ್ನಡೆಸಿದವರು. 40 ಕೋಟಿ ರೂ.ಗಿಂತ ಹೆಚ್ಚಿನ ಒಟ್ಟು ಹಣ ಪಡೆದಿರುವ ಫ್ರಾಂಚೈಸಿಯ 4 ದುಬಾರಿ ಆಟಗಾರರು ಬೆಂಚ್ ಕಾಯುತ್ತಿದ್ದಾಋಎ. ಗ್ಲೆನ್ ಮ್ಯಾಕ್ಸ್ವೆಲ್, ಕ್ಯಾಮೆರಾನ್ ಗ್ರೀನ್, ಅಲ್ಜಾರಿ ಜೋಸೆಫ್. ಸಿರಾಜ್​​ಗೆ ವಿಶ್ರಾಂತಿ ನೀಡಲಾಗಿದೆ. ತುಂಬಾ ಹಣವನ್ನು ಖರ್ಚು ಮಾಡಿ ಅವರನ್ನು ಹೊರಗೆ ಕೂರಿಸಲಾಗುತ್ತದೆ. ಇವೆಲ್ಲವೂ ಸಮಸ್ಯೆಯೇ ಎಂದು “ಎಂದು ತಿವಾರಿ ಹೇಳಿದ್ದಾರೆ.

ಬ್ಯಾಟಿಂಗ್ ಅಲ್ಲಿ ಸಮಸ್ಯೆಯಲ್ಲ. ಆ ತಂಡದ ಸಮಸ್ಯೆ ಯಾವಾಗಲೂ ಬೌಲಿಂಗ್ ಆಗಿತ್ತು. ಅವರಲ್ಲಿ ಸ್ಪೆಷಲಿಸ್ಟ್ ಸ್ಪಿನ್ನರ್ ಇಲ್ಲ. ನೀವು ವಿಲ್ ಜಾಕ್ಸ್ ಅವರಿಗೆ ಮೊದಲ ಓವರ್​ ಕೊಡಲಾಗುತ್ತದೆ. ಕೆಲವೊಮ್ಮೆ ಮಹಿಪಾಲ್ ಲೊಮ್ರೊಗೂ ಬೌಲಿಂಗ್​. ಮೈದಾನದಲ್ಲಿನ ಕೆಲವು ನಾಯಕತ್ವದ ನಿರ್ಧಾರಗಳು ಭಯಾನಕವಾಗಿವೆ. ಪ್ರತಿಯೊಂದು ಮೂಲೆಯಿಂದಲೂ ತಪ್ಪಾಗಿದೆ. ಅವರು ಸಂಪೂರ್ಣವಾಗಿ ಮರುಸಂಘಟನೆಗೊಳ್ಳಬೇಕು ಮತ್ತು ದೀರ್ಘಕಾಲೀನ ಯೋಜನೆಯನ್ನು ರೂಪಿಸಬೇಕು ಎಂದು ಹೇಳಿದರು.

ಬೆಂಗಳೂರು ತಂಡಕ್ಕೆ ಇದು ಇನ್ನೂ ಮುಗಿದ ಅಧ್ಯಾಯವಲ್ಲ. ಫಾಫ್ ಡು ಪ್ಲೆಸಿಸ್ ಪಡೆ ಪ್ಲೇಆಫ್ಗೆ ಪ್ರವೇಶಿಸಲು ದೈತ್ಯ ಪ್ರಯತ್ನದ ಅಗತ್ಯವಿದೆ.

Continue Reading

ಕ್ರೀಡೆ

Hardik Pandya : ಹಾರ್ದಿಕ್ ಪಾಂಡ್ಯ ಸಹೋದರನ ಪೊಲೀಸ್​ ಕಸ್ಟಡಿ ವಿಸ್ತರಣೆ; ಏನಿದು ಕೇಸ್​?

Hardik Pandya: ವೈಭವ್ ಪಾಂಡ್ಯ ಅವರ ಹಿಂದಿನ ರಿಮಾಂಡ್ ಅವಧಿ ಮುಗಿದ ನಂತರ ಅವರನ್ನು ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಹೆಚ್ಚಿನ ತನಿಖೆಗಾಗಿ ವೈಭವ್ ಅವರ ಕಸ್ಟಡಿ ವಿಸ್ತರಿಸುವಂತೆ ಮುಂಬೈ ಪೊಲೀಸರ ಆರ್ಥಿಕ ಅಪರಾಧಗಳ ವಿಭಾಗ (ಇಒಡಬ್ಲ್ಯೂ) ನ್ಯಾಯಾಲಯಕ್ಕೆ ಮನವಿ ಮಾಡಿದೆ. ವೈಭವ್ ಪರ ವಕೀಲ ನಿರಂಜನ್ ಮುಂಡರಗಿ ಅವರು ಇಒಡಬ್ಲ್ಯೂ ಮನವಿಯನ್ನು ವಿರೋಧಿಸದ ಕಾರಣ, ನ್ಯಾಯಾಲಯವು ಅವರ ಕಸ್ಟಡಿಯನ್ನು ಶುಕ್ರವಾರದವರೆಗೆ ವಿಸ್ತರಿಸಿತು.

VISTARANEWS.COM


on

Hardik Pandya
Koo

ನವದೆಹಲಿ: ಕ್ರಿಕೆಟಿಗ ಸಹೋದರರಾದ ಹಾರ್ದಿಕ್ ಹಾಗೂ ಕೃಣಾಲ್ ಪಾಂಡ್ಯ (Hardik Pandya) ಅವರಿಗೆ ಜಂಟಿ ವ್ಯವಹಾರ ಮಾಡುವ ನೆಪದಲ್ಲಿ 4 ಕೋಟಿ ರೂ.ಗಳನ್ನು ವಂಚಿಸಿದ ಅವರ ಮಲ ಸಹೋದರ ವೈಭವ್ ಪೊಲೀಸ್ ಕಸ್ಟಡಿಯನ್ನು ನ್ಯಾಯಾಲಯ ಮಂಗಳವಾರ ಏಪ್ರಿಲ್ 19 ರವರೆಗೆ ವಿಸ್ತರಿಸಿದೆ. ಆರೋಪಿ ವೈಭವ್ ಪಾಂಡ್ಯ ಅವರ ಹಿಂದಿನ ರಿಮಾಂಡ್ ಅವಧಿ ಮುಗಿದ ನಂತರ ಅವರನ್ನು ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಹೆಚ್ಚಿನ ತನಿಖೆಗಾಗಿ ವೈಭವ್ ಅವರ ಕಸ್ಟಡಿ ವಿಸ್ತರಿಸುವಂತೆ ಮುಂಬೈ ಪೊಲೀಸರ ಆರ್ಥಿಕ ಅಪರಾಧಗಳ ವಿಭಾಗ (ಇಒಡಬ್ಲ್ಯೂ) ನ್ಯಾಯಾಲಯಕ್ಕೆ ಮನವಿ ಮಾಡಿದೆ. ವೈಭವ್ ಪರ ವಕೀಲ ನಿರಂಜನ್ ಮುಂಡರಗಿ ಅವರು ಇಒಡಬ್ಲ್ಯೂ ಮನವಿಯನ್ನು ವಿರೋಧಿಸದ ಕಾರಣ, ನ್ಯಾಯಾಲಯವು ಅವರ ಕಸ್ಟಡಿಯನ್ನು ಶುಕ್ರವಾರದವರೆಗೆ ವಿಸ್ತರಿಸಿತು. ಕ್ರಿಕೆಟಿಗ ಸಹೋದರರಿಗೆ 4 ಕೋಟಿ ರೂ.ಗಿಂತ ಹೆಚ್ಚು ವಂಚಿಸಿದ ಆರೋಪದ ಮೇಲೆ 37 ವರ್ಷದ ವೈಭವ್ ಏಪ್ರಿಲ್ 8 ರಂದು ಬಂಧನಕ್ಕೆ ಒಳಗಾಗಿದ್ದ.

ಆರಂಭದಲ್ಲಿ ವೈಭವ್ ಅವರು ‘ಇದು ಕೌಟುಂಬಿಕ ವಿಷಯ. ತಪ್ಪು ತಿಳುವಳಿಕೆಯಿಂದಾಗಿ ಪ್ರಕರಣ ದಾಖಲಿಸಲಾಗಿದೆ’ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದರು. ಕ್ರಿಕೆಟಿಗ ಸಹೋದರರು ವೈಭವ್ ಅವರೊಂದಿಗೆ ಮುಂಬೈನಲ್ಲಿ ಪಾಲುದಾರಿಕೆ ಆಧಾರಿತ ಸಂಸ್ಥೆಯನ್ನು ಸ್ಥಾಪಿಸಿದ್ದರು. 2021 ರಲ್ಲಿ ಅವರು ಪಾಲಿಮರ್ ವ್ಯವಹಾರವನ್ನು ಪ್ರಾರಂಭಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಉದ್ಯಮದ ಪಾಲುದಾರಿಕೆಯ ನಿಯಮಗಳ ಪ್ರಕಾರ ಹಾರ್ದಿಕ್ ಹಾಗೂ ಕೃಣಾಳ್​ ತಲಾ 40 ಪ್ರತಿಶತದಷ್ಟು ಮತ್ತು ವೈಭವ್ ಉಳಿದ ಶೇಕಡಾ 20 ಮೊತ್ತವನ್ನು ಬಂಡವಾಳವನ್ನು ಹೂಡಿಕೆ ಮಾಡಿದ್ದ . ನಿಯಮಗಳ ಪ್ರಕಾರ, ವೈಭವ್ ವ್ಯವಹಾರದ ದೈನಂದಿನ ಕಾರ್ಯಾಚರಣೆಗಳನ್ನು ನಿರ್ವಹಿಸಬೇಕಾಗಿತ್ತು. ಲಾಭವನ್ನು ಹೂಡಿಕೆ ಅನುಪಾತದಲ್ಲಿ ವಿತರಿಸಬೇಕಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: T20 World Cup : ವಿಶ್ವ ಕಪ್​ ತಂಡದಲ್ಲಿ ಹಾರ್ದಿಕ್ ಪಾಂಡ್ಯಗೆ ನೋ ಚಾನ್ಸ್​; ಆಯ್ಕೆದಾರರ ಇಂಗಿತ ಬಹಿರಂಗ

ಆದರೆ ಪಾಂಡ್ಯ ಸಹೋದರರಿಗೆ ಮಾಹಿತಿ ನೀಡದೆ ವೈಭವ್ ಅದೇ ವ್ಯವಹಾರದಲ್ಲಿ ಮತ್ತೊಂದು ಸಂಸ್ಥೆಯನ್ನು ಸ್ಥಾಪಿಸಿದ್ದ. ಇದರಿಂದಾಗಿ ಪಾಲುದಾರಿಕೆ ಒಪ್ಪಂದವನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಲಾಗಿತ್ತು. ಹೊಸ ಕಂಪನಿ ಸ್ಥಾಪಿಸುವುದರೊಂದಿಗೆ, ಮೂಲ ಪಾಲುದಾರಿಕೆ ಸಂಸ್ಥೆಯ ಲಾಭವು ಕ್ಷೀಣಿಸಿ ಸುಮಾರು 3 ಕೋಟಿ ರೂ.ಗಳ ನಷ್ಟ ಎದುರಿಸಿತ್ತು.

ಈ ಅವಧಿಯಲ್ಲಿ, ವೈಭವ್ ತನ್ನ ಸ್ವಂತ ಲಾಭವನ್ನು ಶೇಕಡಾ 20 ರಿಂದ 33 ರಷ್ಟು ಹೆಚ್ಚಿಸಿ ಹಾರ್ದಿಕ್ ಪಾಂಡ್ಯ ಮತ್ತು ಅವರ ಸಹೋದರನಿಗೆ ನಷ್ಟವನ್ನುಂಟು ಮಾಡಿದ್ದ ವೈಭವ್ ಪಾಲುದಾರಿಕೆ ಖಾತೆಯಿಂದ ಹಣವನ್ನು ತನ್ನ ಸ್ವಂತಕ್ಕೆ ಬಳಸಿದ್ದ. ಇದು ಸುಮಾರು 1 ಕೋಟಿ ರೂಪಾಯಿ. ಹೀಗಾಗಿ ನಷ್ಟವಾದ 3 ಕೋಟಿ ಹಾಗೂ ದುರ್ಬಳಕೆ ಮಾಡಿಕೊಂಡ 1 ಕೋಟಿ ಸೇರಿ ನಾಲ್ಕು ಕೋಟಿ ರೂಪಾಯಿ ವಂಚನೆ ಪ್ರಕರಣ ಹೂಡಲಾಗಿತ್ತು.

Continue Reading

ಕ್ರೀಡೆ

T20 World Cup : ವಿಶ್ವ ಕಪ್​ ತಂಡದಲ್ಲಿ ಹಾರ್ದಿಕ್ ಪಾಂಡ್ಯಗೆ ನೋ ಚಾನ್ಸ್​; ಆಯ್ಕೆದಾರರ ಇಂಗಿತ ಬಹಿರಂಗ

T20 World Cup: ವರದಿಗಳ ಪ್ರಕಾರ, ಹಾರ್ದಿಕ್ ಪಾಂಡ್ಯ ಬಗ್ಗೆ ಶೀಘ್ರದಲ್ಲೇ ನಿರ್ಧಾರ ತೆಗೆದುಕೊಳ್ಳಬಹುದು. ಆದರೆ ಆಲ್​ರೌಂಡರ್ ಐಸಿಸಿ ಟಿ 20 ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆಯುವ ಉದ್ದೇಶದಿಂದ ಅವರು ನಿಯಮಿತವಾಗಿ ಬೌಲಿಂಗ್ ಮಾಡಿದರೂ ಪ್ರತಿಫಲ ಸಿಗುತ್ತಿಲ್ಲ. ಐಪಿಎಲ್ 2024 ರಲ್ಲಿ ಮುಂಬೈ ಇಂಡಿಯನ್ಸ್​ನ ಹೊಸ ನಾಯಕ ಒಂದೆರಡು ಪಂದ್ಯಗಳಿಗೆ ಬೌಲಿಂಗ್ ಮಾಡಲಿಲ್ಲ. ಇದು ಪಂಡಿತರು ಅವರ ಫಿಟ್ನೆಸ್ ಅನ್ನು ಪ್ರಶ್ನಿಸುವಂತೆ ಮಾಡಿತ್ತು

VISTARANEWS.COM


on

t20 World Cup
Koo

ಮುಂಬಯಿ: ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ (T20 World Cup) ಟೀಂ ಇಂಡಿಯಾ ಭರ್ಜರಿ ತಯಾರಿ ಆರಂಭಿಸಿದೆ. ಇದರ ಪರಿಣಾಮವಾಗಿ ರೋಹಿತ್ ಶರ್ಮಾ ಅವರು ರಾಹುಲ್ ದ್ರಾವಿಡ್ ಮತ್ತು ಬಿಸಿಸಿಐ ಆಯ್ಕೆ ಸಮಿತಿಯ ಅಧ್ಯಕ್ಷ ಅಜಿತ್ ಅಗರ್ಕರ್ ಅವರನ್ನು ಭೇಟಿಯಾಗಿ ಐಸಿಸಿ ಪಂದ್ಯಾವಳಿಗೆ ತಂಡದ ಆಯ್ಕೆಯ ಬಗ್ಗೆ ಚರ್ಚಿಸಿದ್ದಾರೆ. ಸಭೆಯಲ್ಲಿ ಹಾರ್ದಿಕ್ ಪಾಂಡ್ಯ ಅವರ ಆಯ್ಕೆ ಪ್ರಮುಖ ಕಾರ್ಯಸೂಚಿಗಳಲ್ಲಿ ಒಂದಾಗಿತ್ತು. ಆದರೆ, ಫಾರ್ಮ್ ಕಳೆದುಕೊಂಡಿರುವ ಹಾಗೂ ಗಾಯದ ಆತಂಕ ಎದುರಿಸುತ್ತಿರುವ ಅವರು ತಂಡದಲ್ಲಿ ಚಾನ್ಸ್ ಪಡೆಯುವುದು ಬಹುತೇಕ ಕಷ್ಟ ಎನ್ನಲಾಗಿದೆ.

ವರದಿಗಳ ಪ್ರಕಾರ, ಹಾರ್ದಿಕ್ ಪಾಂಡ್ಯ ಬಗ್ಗೆ ಶೀಘ್ರದಲ್ಲೇ ನಿರ್ಧಾರ ತೆಗೆದುಕೊಳ್ಳಬಹುದು. ಆದರೆ ಆಲ್​ರೌಂಡರ್ ಐಸಿಸಿ ಟಿ 20 ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆಯುವ ಉದ್ದೇಶದಿಂದ ಅವರು ನಿಯಮಿತವಾಗಿ ಬೌಲಿಂಗ್ ಮಾಡಿದರೂ ಪ್ರತಿಫಲ ಸಿಗುತ್ತಿಲ್ಲ. ಐಪಿಎಲ್ 2024 ರಲ್ಲಿ ಮುಂಬೈ ಇಂಡಿಯನ್ಸ್​ನ ಹೊಸ ನಾಯಕ ಒಂದೆರಡು ಪಂದ್ಯಗಳಿಗೆ ಬೌಲಿಂಗ್ ಮಾಡಲಿಲ್ಲ. ಇದು ಪಂಡಿತರು ಅವರ ಫಿಟ್ನೆಸ್ ಅನ್ನು ಪ್ರಶ್ನಿಸುವಂತೆ ಮಾಡಿತ್ತು. ಕೆಲವು ಕ್ರಿಕೆಟ್​ ಪಂಡಿತರು ಪಾಂಡ್ಯ ಗಾಯಗೊಂಡಿದ್ದಾರೆ ಎಂದು ಕಾಮೆಂಟ್ ಮಾಡಿದ್ದರು.

ಐಪಿಎಲ್ 2024 ರಲ್ಲಿ, ಹಾರ್ದಿಕ್ ಪಾಂಡ್ಯ ಇಲ್ಲಿಯವರೆಗೆ 6 ಪಂದ್ಯಗಳಲ್ಲಿ 4ರಲ್ಲಿ ಬೌಲಿಂಗ್ ಮಾಡಿದ್ದಾರೆ. ಅವರ ಇತ್ತೀಚಿನ ಬೌಲಿಂಗ್ ಪ್ರದರ್ಶನವು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಬಂದಿತು. ಅವರು ಪಂದ್ಯಾವಳಿಯಲ್ಲಿ ಇಲ್ಲಿಯವರೆಗೆ ಬ್ಯಾಟ್ ಮತ್ತು ಬಾಲ್ ಎರಡರಲ್ಲೂ ಉತ್ತಮ ಪ್ರದರ್ಶನ ನೀಡಿಲ್ಲ. ಸಿಎಸ್ಕೆ ವಿರುದ್ಧ ಅವರು ಕೇವಲ 3 ಓವರ್​ಗಲನ್ನು ಎಸೆಯುವಲ್ಲಿ ಯಶಸ್ವಿಯಾಗಿದ್ದರು. ಅಲ್ಲದೆ 43 ರನ್​ಗಳನ್ನು ಬಿಟ್ಟುಕೊಟ್ಟಿದ್ದರು. ಆದರೆ, 2 ವಿಕೆಟ್​ಗಳನ್ನು ಪಡೆದಿದ್ದರು.

ತಲೆ ನೋವಾಗಿರುವ ಪಾಂಡ್ಯ ಪತನ

ಅವರು ತಮ್ಮ ಮೊದಲ ಓವರ್​ನಲ್ಲಿ 15 ರನ್ ಬಿಟ್ಟುಕೊಟ್ಟಿದ್ದರು. ಆದರೆ ಎಂಎಸ್ ಧೋನಿ ಪಂದ್ಯದ ಕೊನೆಯ ಓವರ್​ನಲ್ಲಿ ಸತತ 3 ಸಿಕ್ಸರ್ಗಳನ್ನು ಬಾರಿಸಿದಾಗ ಅವರ ಬೌಲಿಂಗ್​​ ಚರ್ಚೆಯ ವಿಷಯವಾಯಿತು ಪಾಂಡ್ಯ 12 ಎಕಾನಮಿ ಹೊಂದಿದ್ದು, ಟೂರ್ನಿಯಲ್ಲಿ ಈವರೆಗೆ ಕೇವಲ 3 ವಿಕೆಟ್ ಮಾತ್ರ ಕಬಳಿಸಿದ್ದಾರೆ.

ಇದನ್ನೂ ಓದಿ: IPL 2024 : ನಾವು ಪುಟಿದೆದ್ದು ತಿರುಗೇಟು ನೀಡ್ತೇವೆ; ಆರ್​ಸಿಬಿ ಕೋಚ್​ ಭರವಸೆಯ ನುಡಿ

ಮೊಹಮ್ಮದ್ ಶಮಿ ಅನುಪಸ್ಥಿತಿಯಲ್ಲಿ ಜಸ್ಪ್ರೀತ್ ಬುಮ್ರಾ ತಂಡದಲ್ಲಿ ಏಕೈಕ ಹಿರಿಯ ವೇಗಿಯಾಗಿದ್ದಾರೆ. ಮೊಹಮ್ಮದ್ ಸಿರಾಜ್ ಟಿ 20 ಪಂದ್ಯಗಳಲ್ಲಿ ಕಳಪೆ ಫಾರ್ಮ್​ನಲ್ಲಿದ್ದಾರೆ. ಹೀಗಾಗಿ ವಿಶ್ವಕಪ್​​ಗಾಗಿ ಟೀ ಮ್ ಇಂಡಿಯಾ ತಂಡದಲ್ಲಿ ಅವಕಾಶ ಪಡೆಯಲು ಹಾರ್ದಿಕ್ ನಿಯಮಿತವಾಗಿ ಬೌಲಿಂಗ್ ಮಾಡಬೇಕು. ನಿಯಮಿತವಾಗಿ ವಿಕೆಟ್​ಗಳನ್ನು ಪಡೆಯಬೇಕು ಎಂಬುದು ಅತ್ಯಂತ ಮಹತ್ವದ್ದಾಗಿದೆ.

Continue Reading

ಕ್ರೀಡೆ

IPL 2024: ಮುಂಬೈ ಪಂದ್ಯದ ಟಾಸ್​ ಕಳ್ಳಾಟ ಬಿಚ್ಚಿಟ್ಟ ಆರ್​ಸಿಬಿ ನಾಯಕ; ವಿಡಿಯೊ ವೈರಲ್​

IPL 2024: ಆರ್​ಸಿಬಿ ತಂಡದ ನಾಯಕ ಫಾಫ್​ ಡು ಪ್ಲೆಸಿಸ್(Faf du Plessis) ಸನ್​ರೈಸರ್ಸ್​ ಹೈದರಾಬಾದ್(​Sunrisers Hyderabad) ಪಂದ್ಯದ ವಿರುದ್ಧದ ಟಾಸ್​ ವೇಳೆ​ ಪ್ಯಾಟ್​ ಕಮಿನ್ಸ್(Pat Cummins)​ ಜತೆ ಮುಂಬೈ ಎದುರಿನ ಪಂದ್ಯದ ಟಾಸ್​ ಕಳ್ಳಾಟದ ಘಟನೆಯನ್ನು ತೆರೆದಿಟ್ಟಿದ್ದಾರೆ.

VISTARANEWS.COM


on

IPL 2024
Koo

ಬೆಂಗಳೂರು: ಕಳೆದ ಗುರುವಾರ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದಿದ್ದ ಐಪಿಎಲ್(IPL 2024)​ ಪಂದ್ಯದಲ್ಲಿ ರಾಯಲ್​ ಚಾಲೆಂಜರ್ಸ್​​ ಬೆಂಗಳೂರು(MI vs RCB) ಹಾಗೂ ಮುಂಬೈ ಇಂಡಿಯನ್ಸ್​(Mumbai Indians) ಮುಖಾಮುಖಿಯಾಗಿತ್ತು. ಈ ಪಂದ್ಯದಲ್ಲಿ ಹಾರ್ದಿಕ್​ ಪಾಂಡ್ಯ ಪಡೆ 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತ್ತು. ಆದರೆ, ಪಂದ್ಯದ ಬಳಿಕ ಮುಂಬೈ ಗೆಲುವಿಗೆ ಕಾರಣ ಟಾಸ್​ ಫಿಕ್ಸಿಂಗ್​ ಎಂಬ ಕೂಗು ಜೋರಾಗಿ ಕೇಳಿ ಬಂದಿತ್ತು. ಇದಕ್ಕೆ ಸಂಬಂಧಪಟ್ಟ ಕೆಲ ವಿಡಿಯೊಗಳು ಕೂಡ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿತ್ತು. ಇದೀಗ ಈ ಘಟನೆಯ ನೈಜ ಕಾರಣವನ್ನು ಆರ್​ಸಿಬಿ ತಂಡದ ನಾಯಕ ಫಾಫ್​ ಡು ಪ್ಲೆಸಿಸ್(Faf du Plessis) ಸನ್​ರೈಸರ್ಸ್​ ಹೈದರಾಬಾದ್(​Sunrisers Hyderabad) ಪಂದ್ಯದ ವಿರುದ್ಧದ ಟಾಸ್​ ವೇಳೆ​ ಪ್ಯಾಟ್​ ಕಮಿನ್ಸ್(Pat Cummins)​ ಜತೆ ಚರ್ಚಿಸಿದ್ದಾರೆ. ಇದರ ವಿಡಿಯೊ ವೈರಲ್ ಆಗಿದ್ದು, ಮತ್ತೆ ಟಾಸ್​ ಫಿಕ್ಸ್​ ಚರ್ಚೆ ಮುನ್ನಲೆಗೆ ಬಂದಿದೆ.

ಸೋಮವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಚಿನ್ನಶ್ವಾಮಿ ಸ್ಟೇಡಿಯಂನಲ್ಲಿ ಮುಖಾಮುಖಿಯಾಗಿತ್ತು. ಉಭಯ ತಂಡದ ನಾಯಕರು ಟಾಸ್​ಗೆ ಆಗಮಿಸಿದ ಈ ವೇಳೆ ಪ್ಯಾಟ್​ ಕಮಿನ್ಸ್ ಅವರು ಡು ಪ್ಲೆಸ್​ ಬಳಿಕ​ ಮುಂಬೈ ವಿರುದ್ಧದ ಟಾಸ್​ ಘಟನೆಯ ಬಗ್ಗೆ ಪ್ರಶ್ನಿಸಿದ್ದಾರೆ. ಈ ವೇಳೆ ಡು ಪ್ಲೆಸಿಸ್​ ಪಾಂಡ್ಯ ಹಿಮ್ಮುಖವಾಗಿ ದೂರಕ್ಕೆ ಟಾಸ್​ ಕಾಯಿನ್​ ಚಿಮ್ಮಿಸಿದರು. ಮ್ಯಾಚ್​ ರೆಫ್ರಿಯಾಗಿದ್ದ ಜಾವಗಲ್​ ಶ್ರೀನಾಥ್(Javagal Srinath)​ ಅವರು ಕಾಯಿನ್​ ತಿರುಗಿಸಿ ಹೆಕ್ಕಿ ಪಾಂಡ್ಯ ಬಳಿ ಏನೋ ಕೇಳಿ ಟಾಸ್​ ಗೆದ್ದಿರುವಂತೆ ಹೇಳಿ ತಕ್ಷಣ ಅಲ್ಲಿಂದ ತೆರಳಿದರು ಎಂದು ಅಂದಿನ ಘಟನೆಯನ್ನು ನಟನೆಯ ಮೂಲಕ ತೋರಿಸಿದರು. ಈ ವಿಡಿಯೊ ವೈರಲ್​ ಆಗಿದ್ದು ನಿಜವಾಗಿಯೂ ಟಾಸ್​ ಫಿಕ್ಸಿಂಗ್​ ನಡೆದಿದೆಯಾ? ಎಂಬ ಚರ್ಚೆ ಮತ್ತೆ ಶುರುವಾಗಿದೆ.

ಚೇಸಿಂಗ್​ಗೆ ಯೋಗ್ಯವಾದ ವಾಂಖೆಡೆ ಸ್ಟೇಡಿಯಂನಲ್ಲಿ ಅಂಪೈರ್​ ಟಾಸ್​ ಕಾಯಿನ್​ ಬದಲಿಸಿ ಮುಂಬೈ ತಂಡಕ್ಕೆ ಸಹಕರಿಸಿದ್ದಾರೆ. ಇಲ್ಲವಾದರೆ ಆರ್​ಸಿಬಿ ಗೆಲ್ಲುತ್ತಿತ್ತು ಎಂದು ಅನೇಕ ನೆಟ್ಟಿಗರು ಸಾಮಾಜಿಕ ಜಾಲತಾಣದಲ್ಲಿ ಅಂಬಾನಿ ಮತ್ತು ಐಪಿಎಲ್​ ಆಡಳಿತ ಮಂಡಳಿಯ ವಿರುದ್ಧ ಆಕ್ರೋಶ ಹೊರಹಾಕಿದ್ದರು.

ಇದನ್ನೂ ಓದಿ IPL 2024: ವಿಮಾನ ಚಲಾಯಿಸಿದ ಯಜುವೇಂದ್ರ ಚಹಲ್; ವಿಡಿಯೊ ವೈರಲ್​

ಹೈದರಾಬಾದ್​ ವಿರುದ್ಧ 25 ರನ್​ ಸೋಲು


ಸೋಮವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಆರ್​ಸಿಬಿ ತಂಡ ಹೈದರಾಬಾದ್​ ವಿರುದ್ಧ 25 ರನ್​ಗಳ ಸೋಲು ಕಂಡಿತು. ಟಾಸ್​ ಗೆದ್ದ ಆತಿಥೇಯ ತಂಡ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಅಂತೆಯೇ ಮೊದಲು ಬ್ಯಾಟ್​ ಮಾಡಿದ ಎಸ್​ಆರ್​ಎಚ್​ ತಂಡ ವಿಶ್ವ ದಾಖಲೆಯ 287 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್​ ಮಾಡಿದ ಆರ್​ಸಿಬಿ ತಂಡ ತನ್ನ ಪಾಲಿನ ಓವರ್​ಗಳು ಮುಕ್ತಾಯಗೊಂಡಾಗ 7 ವಿಕೆಟ್​ಗೆ 262 ರನ್​ ಬಾರಿಸಿ ಸೋಲೊಪ್ಪಿಕೊಂಡಿತು.

ಪ್ಲೇ ಆಫ್ ಆಸೆ ಇನ್ನೂ ಜೀವಂತ

ಸದ್ಯದ ಪರಿಸ್ಥಿತಿಯಲ್ಲಿ ಆರ್‌ಸಿಬಿ ಪ್ಲೇ ಆಫ್ ಹಾದಿ ಸಂಪೂರ್ಣ ಮುಚ್ಚಿಲ್ಲ. ಆದರೆ, ಸತತವಾಗಿ ಗೆಲ್ಲಬೇಕಾದ ಒತ್ತಡ ತಂಡದ ಮೇಲಿದೆ. ಈಗಾಗಲೇ 7 ಪಂದ್ಯ ಆಡಿದ್ದು, 1 ಪಂದ್ಯ ಗೆದ್ದು, 6 ಪಂದ್ಯದಲ್ಲಿ ಸೋಲು ಕಂಡಿದೆ. 2 ಅಂಕ ಸಂಪಾದಿಸಿ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಆದರೆ, ಲೀಗ್‌ ಹಂತದಲ್ಲಿ ಇನ್ನೂ 7 ಪಂದ್ಯಗಳ ಬಾಕಿ ಇದೆ. ಹೀಗಾಗಿ ಉಳಿದ ಪಂದ್ಯಗಳಲ್ಲಿ ಗೆಲುವು ಸಾಧಿಸಿದರೆ ಮಾತ್ರ ಪ್ಲೇ ಆಫ್ ಅವಕಾಶ ಇದೆ. ಜತೆಗೆ ಉಳಿದ ತಂಡಗಳ ಪ್ರದರ್ಶನವೂ ಆರ್‌ಸಿಬಿ ಪ್ಲೇಆಫ್ ಹಾದಿಯ ಮೇಲೆ ಪರಿಣಾಮ ಬೀರಲಿದೆ.

Continue Reading
Advertisement
IPL 2024
ಪ್ರಮುಖ ಸುದ್ದಿ25 mins ago

IPL 2024 : ಆಟಗಾರರಿಗೆ ಇಂಗ್ಲಿಷ್ ಗೊತ್ತಿಲ್ಲದ್ದು ಆರ್​ಸಿಬಿ ಸೋಲಿಗೆ ಕಾರಣ; ಮಾಜಿ ಆಟಗಾರನ ವಿಭಿನ್ನ ವಿಶ್ಲೇಷಣೆ

Money Guide
ಮನಿ-ಗೈಡ್26 mins ago

Money Guide: ನಿಮ್ಮ ಷೇರಿನಿಂದಲೂ ಸಾಲ ಪಡೆದುಕೊಳ್ಳಬಹುದು; ಹೇಗೆ ಎನ್ನುವ ವಿವರ ಇಲ್ಲಿದೆ

Lok Sabha Election 2024 Sanganna Karadi resigns from primary membership of BJP
Lok Sabha Election 202432 mins ago

Lok Sabha Election 2024: ಸಂಸತ್‌ ಸ್ಥಾನ, ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ಸಂಗಣ್ಣ ಕರಡಿ ರಾಜೀನಾಮೆ; ನಾಳೆ ಕಾಂಗ್ರೆಸ್‌ ಸೇರ್ಪಡೆ?

BJP and JDS leaders Meeting in shira, Support Govinda Karajola for all round development of Chitradurga says Umesh Karajola
ತುಮಕೂರು32 mins ago

Lok Sabha Election 2024: ಚಿತ್ರದುರ್ಗದ ಸರ್ವತೋಮುಖ ಅಭಿವೃದ್ಧಿಗಾಗಿ ಕಾರಜೋಳಗೆ ಬೆಂಬಲಿಸಲು ಮನವಿ

S S Patil as the new president of Afazalpur Taluk Bar Association
ಕಲಬುರಗಿ35 mins ago

Kalaburagi News: ಅಫಜಲಪುರ ತಾಲೂಕು ವಕೀಲರ ಸಂಘದ ಅಧ್ಯಕ್ಷರಾಗಿ ಎಸ್.ಎಸ್.ಪಾಟೀಲ್‌

union Minister Pralhad joshi statement in hubli
ಹುಬ್ಬಳ್ಳಿ37 mins ago

Lok Sabha Election 2024: ಮೋದಿ ನೇತೃತ್ವದಲ್ಲಿ ಭಾರತ ವಿಶ್ವದ ಹಿರಿಯಣ್ಣ ಆಗಲಿದೆ: ಪ್ರಲ್ಹಾದ್‌ ಜೋಶಿ

Hardik Pandya
ಕ್ರೀಡೆ56 mins ago

Hardik Pandya : ಹಾರ್ದಿಕ್ ಪಾಂಡ್ಯ ಸಹೋದರನ ಪೊಲೀಸ್​ ಕಸ್ಟಡಿ ವಿಸ್ತರಣೆ; ಏನಿದು ಕೇಸ್​?

DK Shivakumar attack on HD Kumaraswamy
ಕರ್ನಾಟಕ1 hour ago

DK Shivakumar: ಕುಮಾರಸ್ವಾಮಿ ನನಗೆ ಮರ್ಯಾದೆ ಕೊಟ್ಟರೆ, ನಾನೂ ಕೊಡುತ್ತೇನೆ: ಡಿ.ಕೆ. ಶಿವಕುಮಾರ್

2nd PUC Exam
ಕರ್ನಾಟಕ1 hour ago

2nd PUC Exam: ದ್ವಿತೀಯ ಪಿಯುಸಿ ಪರೀಕ್ಷೆ-2ಕ್ಕೆ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ; ಏ.18ರವರೆಗೆ ಅವಕಾಶ

Lok Sabha Election
ದೇಶ2 hours ago

Lok Sabah Election : ಹೇಮಮಾಲಿನಿಗೆ ಅವಹೇಳನ; ಕಾಂಗ್ರೆಸ್​ ನಾಯಕ ಸುರ್ಜೇವಾಲಾಗೆ 48 ಗಂಟೆ ನಿಷೇಧ

Sharmitha Gowda in bikini
ಕಿರುತೆರೆ6 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya
ಭವಿಷ್ಯ16 hours ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20241 day ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

Modi in Karnataka Modi roadshow in coastal area Mangalore Watch video
Lok Sabha Election 20242 days ago

Modi in Karnataka: ಕರಾವಳಿಯಲ್ಲಿ ಮೋದಿ ಮೋಡಿ; ಭರ್ಜರಿ ರೋಡ್‌ ಶೋ! ವಿಡಿಯೊ ನೋಡಿ

dina bhavishya
ಭವಿಷ್ಯ3 days ago

Dina Bhavishya: ಸತ್ಯ ಹೇಳಿದ್ರೆ ಈ ರಾಶಿಯವರಿಗೆ ಬಂಧುಗಳಿಂದ ಟೀಕೆಗಳು ಎದುರಾಗುತ್ತವೆ

Dina Bhavishya
ಭವಿಷ್ಯ4 days ago

Dina Bhavishya : ಹಣಕಾಸಿನ ವ್ಯವಹಾರಗಳಲ್ಲಿ ಈ ರಾಶಿಯವರಿಗೆ ಯಶಸ್ಸು ಕಟ್ಟಿಟ್ಟಬುತ್ತಿ

Rameshwaram Cafe Blast Fake IDs created and captured bombers hiding in Kolkata
ಕ್ರೈಂ4 days ago

Rameshwaram Cafe Blast: ನಕಲಿ ಐಡಿ ಸೃಷ್ಟಿಸಿ ಕೋಲ್ಕತ್ತಾದಲ್ಲಿ ಅಡಗಿದ್ದ ಬಾಂಬರ್‌ಗಳನ್ನು ಸೆರೆ ಹಿಡಿದಿದ್ದೇ ರೋಚಕ!

Dina Bhavishya
ಭವಿಷ್ಯ5 days ago

Dina Bhavishya : ಹತಾಶೆಯಲ್ಲಿ ಈ ರಾಶಿಯವರು ಆತುರದ ತೀರ್ಮಾನ ಕೈಗೊಳ್ಳಬೇಡಿ..

Lok Sabha Election 2024 Vokkaliga support us says DK Shivakumar
ಕರ್ನಾಟಕ5 days ago

Lok Sabha Election 2024: ಒಕ್ಕಲಿಗರ ಬೆಂಬಲ ನಮಗೇ; ನಿರ್ಮಲಾನಂದನಾಥ ಶ್ರೀ ಹೆಸರನ್ನು ರಾಜಕೀಯಕ್ಕೆ ಎಳೆದಿಲ್ಲ: ಡಿಕೆಶಿ ಸ್ಪಷ್ಟನೆ

Lok Sabha Election 2024 Rahul Gandhi should apologise for lying demand BS Yediyurappa
Lok Sabha Election 20245 days ago

Lok Sabha Election 2024: ಸುಳ್ಳು ಹೇಳಿದ ರಾಹುಲ್‌ ಗಾಂಧಿ ಕ್ಷಮೆ ಕೋರಲಿ: ಬಿ.ಎಸ್.‌ ಯಡಿಯೂರಪ್ಪ ಆಗ್ರಹ

ಟ್ರೆಂಡಿಂಗ್‌