Bengaluru Open: ಫೈನಲ್​ ಪಂದ್ಯಕ್ಕೆ ಸಜ್ಜಾದ ಅನಿರುದ್ಧ್ -ಪ್ರಶಾಂತ್‌ ಜೋಡಿ - Vistara News

ಕ್ರೀಡೆ

Bengaluru Open: ಫೈನಲ್​ ಪಂದ್ಯಕ್ಕೆ ಸಜ್ಜಾದ ಅನಿರುದ್ಧ್ -ಪ್ರಶಾಂತ್‌ ಜೋಡಿ

5ನೇ ಆವೃತ್ತಿಯ ಬೆಂಗಳೂರು ಓಪನ್‌ ಎಟಿಪಿ ಟೆನಿಸ್‌ ಟೂರ್ನಿಯ ಫೈನಲ್​ ಪಂದ್ಯದಲ್ಲಿ ಭಾರ​ತದ ಅನಿರುದ್ಧ್ ಹಾಗೂ ಪ್ರಶಾಂತ್‌ ಜೋಡಿ ಇಂದು(ಫೆ.25 ಶನಿವಾರ) ಅದೃಷ್ಟ ಪರೀಕ್ಷೆಗೆ ಇಳಿಯಲಿದ್ದಾರೆ.

VISTARANEWS.COM


on

Bengaluru Open: Anirudh-Prashanth pair ready for the final match
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಭಾರ​ತದ ಡಬಲ್ಸ್‌ ಜೋಡಿ ಅನಿರುದ್ಧ್ ಚಂದ್ರಶೇಖರ್‌ ಮತ್ತು ಎನ್‌. ಪ್ರಶಾಂತ್‌(Anirudh-Prashanth) ಇಲ್ಲಿ ನಡೆಯುತ್ತಿರುವ 5ನೇ ಆವೃತ್ತಿಯ ಬೆಂಗಳೂರು ಓಪನ್‌ ಟೆನಿಸ್‌(Bengaluru Open) ಕೂಟದ ಫೈನ​ಲ್‌ ಪಂದ್ಯವನ್ನಾಡಲು ಸಜ್ಜಾಗಿದ್ದಾರೆ.

ಇಂದು(ಶನಿವಾರ ಫೆ.25) ನಡೆಯುವ ಫೈನಲ್​ ಕಾದಾಟದಲ್ಲಿ ಭಾರತ ಜೋಡಿ ದಕ್ಷಿಣ ಕೊ​ರಿ​ಯಾದ ಚುಂಗ್‌ ಯನ್‌​ ಸಿಯಾಂಗ್‌-ಚೈನೀಸ್‌ ತೈಪೆಯ ಯು ಸು ವಿರುದ್ಧ ಅದೃಷ್ಟ ಪರೀಕ್ಷೆಗೆ ಇಳಿಯಲಿದೆ. ಟೂರ್ನಿಯಲ್ಲಿನ ಆಟವನ್ನು ಗಮನಿಸುವಾಗ ಫೈನಲ್​ನಲ್ಲಿಯೂ ಭಾರತ ನೆಚ್ಚಿನ ತಂಡವಾಗಿ ಗುರುತಿಸಿಕೊಂಡಿದೆ.

ಶುಕ್ರ​ವಾರ(ಫೆ.24) ನಡೆದ ಪುರು​ಷರ ಡಬಲ್ಸ್‌ ಸೆಮಿ​ಫೈ​ನ​ಲ್‌ ಪಂದ್ಯದಲ್ಲಿ ಅನಿರುದ್ಧ್ ಚಂದ್ರಶೇಖರ್‌ ಮತ್ತು ಎನ್‌. ಪ್ರಶಾಂತ್‌ ಜೋಡಿ 4ನೇ ಶ್ರೇಯಾಂಕಿತ ಭಾರ​ತದ ಅರ್ಜುನ್‌ ಖಾಡೆ-ಆಸ್ಟ್ರಿ​ಯಾದ ಮ್ಯಾಕ್ಸಿ​ಮಿ​ಲನ್‌ ವಿರುದ್ಧ 7-6, 4-6, 10-2 ಸೆಟ್‌​ಗ​ಳಲ್ಲಿ ಗೆಲುವು ಸಾಧಿ​ಸಿತ್ತು.

ಇದನ್ನೂ ಓದಿ Bengaluru Open: ಸುಮಿತ್​ ನಗಲ್​ಗೆ ಸೋಲು; ಅನಿರುದ್ಧ್ -ಪ್ರಶಾಂತ್‌ ಜೋಡಿ ಸೆಮಿಗೆ ಲಗ್ಗೆ

ದಿನದ ಮತ್ತೊಂದು ಪುರು​ಷರ ಸಿಂಗ​ಲ್ಸ್‌​ ಸೆಮಿಫೈನಲ್​ ಪಂದ್ಯದಲ್ಲಿ​ ಪುರ್ಸೆಲ್‌ ಹಾಗೂ ಕ್ರೊವೇ​ಷಿ​ಯಾದ ಹಮದ್‌ ಮೆಡ್‌​ಜೆ​ಡೋ​ವಿಚ್‌ ಮುಖಾ​ಮುಖಿ​ಯಾ​ಗ​ಲಿ​ದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕ್ರೀಡೆ

T20 World Cup 2024: ಟಿ20 ವಿಶ್ವಕಪ್​ಗೆ ಉಸೇನ್‌ ಬೋಲ್ಟ್ ಬ್ರ್ಯಾಂಡ್‌ ಅಂಬಾಸಿಡರ್

T20 World Cup 2024: ಜಮೈಕಾದ ಉಸೇನ್‌ ಬೋಲ್ಟ್(Usain Bolt) ಅವರನ್ನು ಐಸಿಸಿ ಪುರುಷರ ಟಿ20 ವಿಶ್ವಕಪ್​ ಟೂರ್ನಿಯ(T20 World Cup 2024) ಬ್ರ್ಯಾಂಡ್‌ ಅಂಬಾಸಿಡರ್ ಆಗಿ ನೇಮಕಮಾಡಲಾಗಿದೆ.

VISTARANEWS.COM


on

T20 World Cup 2024
Koo

ದುಬೈ: ಖ್ಯಾತ ಸ್ಟ್ರಿಂಟರ್‌, 8 ಒಲಿಂಪಿಕ್​ ಚಿನ್ನದ ಪದಕ ವಿಜೇತ,​ ಜಮೈಕಾದ ಉಸೇನ್‌ ಬೋಲ್ಟ್(Usain Bolt) ಅವರನ್ನು ಐಸಿಸಿ ಪುರುಷರ ಟಿ20 ವಿಶ್ವಕಪ್​ ಟೂರ್ನಿಯ(T20 World Cup 2024) ಬ್ರ್ಯಾಂಡ್‌ ಅಂಬಾಸಿಡರ್ ಆಗಿ ನೇಮಕಮಾಡಲಾಗಿದೆ. ವಿಶ್ವಕಪ್​ ಟೂರ್ನಿ ಜೂನ್​ 1ರಿಂದ 29ರ ತನಕ ಅಮೆರಿಕ ಮತ್ತು ವೆಸ್ಟ್​ ಇಂಡೀಸ್​ ಜಂಟಿ ಆತಿಥ್ಯದಲ್ಲಿ ನಡೆಯಲಿದೆ. ಒಟ್ಟು 55 ಪಂದ್ಯಗಳು ಇರಲಿದೆ.

‘ಕ್ರಿಕೆಟ್ ಜೀವನದ ಭಾಗವಾಗಿರುವ ಕೆರಿಬಿಯನ್‌ನಿಂದ ಬಂದಿರುವ ಈ ಕ್ರೀಡೆಯು ನನ್ನ ಹೃದಯದಲ್ಲಿ ಯಾವಾಗಲೂ ವಿಶೇಷ ಸ್ಥಾನವನ್ನು ಪಡೆದಿದೆ ಮತ್ತು ಅಂತಹ ಪ್ರತಿಷ್ಠಿತ ಪಂದ್ಯಾವಳಿಯ ಭಾಗವಾಗಿರಲು ನನಗೆ ಗೌರವವಿದೆ’ ಎಂದು ಬೋಲ್ಟ್ ಐಸಿಸಿ ಹೇಳಿಕೆಯಲ್ಲಿ ತಿಳಿಸಿದ್ದಾರೆ. “ವಿಶ್ವಕಪ್‌ಗೆ ನನ್ನ ಶಕ್ತಿ ಮತ್ತು ಉತ್ಸಾಹವನ್ನು ತರಲು ಮತ್ತು ಜಾಗತಿಕವಾಗಿ ಕ್ರಿಕೆಟ್ ಬೆಳವಣಿಗೆಗೆ ಕೊಡುಗೆ ನೀಡಲು ನಾನು ಎದುರು ನೋಡುತ್ತಿದ್ದೇನೆ” ಎಂದಿ ಬೋಲ್ಟ್​ ಹೇಳಿದರು.

ವಿಶ್ವಕಪ್​ಗೆ ಮುನ್ನ ಎಲ್ಲ 20 ತಂಡಗಳು ತಮ್ಮ ಆಗಮನಕ್ಕೆ ತಕ್ಕಂತೆ ತಲಾ 2 ಅಭ್ಯಾಸ ಪಂದ್ಯಗಳನ್ನು ಆಡಲಿವೆ ಎಂದು ಐಸಿಸಿ ತಿಳಿಸಿದೆ. ಟೂರ್ನಿಯ ಲೀಗ್​ ಮತ್ತು ಸೂಪರ್​ 8 ಪಂದ್ಯಗಳಿಗೆ ಯಾವುದೇ ಮೀಸಲು ದಿನ ಇಲ್ಲ. ಈ ಪಂದ್ಯಗಳಿಗೆ ಮಳೆ ಬಂದು ಪಂದ್ಯ ರದ್ದಾದರೆ ಸಮಾನ ಅಂಕ ನೀಡಲಾಗುತ್ತದೆ. ಆದರೆ, ಸೆಮಿಫೈನಲ್​ ಮತ್ತು ಫೈನಲ್​ ಪಂದ್ಯಗಳಿಗೆ ಮೀಸಲು ದಿನ ಇರಲಿದೆ. ಒಂದೊಮ್ಮೆ ಸೆಮಿ ಮತ್ತು ಫೈನಲ್​ ಫೈನಲ್​ ಪಂದ್ಯಗಳು ಕೂಡ ಮೀಸಲು ದಿನವೂ ನಡೆಯದಿದ್ದರೆ ಆಗ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಪಡೆದ ತಂಡಕ್ಕೆ ಲಾಭ ಸಿಗಲಿದೆ.

ಇದನ್ನೂ ಓದಿ T20 World Cup 2024: ಟಿ20 ವಿಶ್ವಕಪ್​ನಲ್ಲಿ ಸ್ಕಾಟ್ಲೆಂಡ್, ಐರ್ಲೆಂಡ್‌ ತಂಡಗಳಿಗೆ KMF ಪ್ರಾಯೋಜಕತ್ವ; ರಣಜಿ ತಂಡ ಕಾಣಲ್ಲವೇ ಎಂದ ಮೋಹನ್‌ದಾಸ್‌ ಪೈ

ಸಾಂಪ್ರದಾಯಿಕ ಬದ್ಧ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ನಡುವಣ ಪಂದ್ಯ ಜೂನ್ 9 ರಂದು ನ್ಯೂಯಾರ್ಕ್‌ನಲ್ಲಿ ನಡೆಯಲ್ಲಿದೆ. ಭಾರತ ತನ್ನ ಮೊದಲ ಪಂದ್ಯವನ್ನು ಜೂನ್‌ 5 ರಂದು ಐರ್ಲೆಂಡ್​ ವಿರುದ್ಧ ಆಡಲಿದೆ.
ಭಾರತವು ತನ್ನ ಗುಂಪು ಹಂತದ ಎಲ್ಲಾ ಪಂದ್ಯಗಳನ್ನು ಅಮೆರಿಕದಲ್ಲೇ ಆಡಲಿದೆ. ಲೀಗ್​ ಮುಕ್ತಾಯದ ಬಳಿಕ ಮುಂದಿನ ಹಂತಕ್ಕೆ ಅರ್ಹತೆ ಪಡೆದರೆ, ಸೂಪರ್ 8 ಪಂದ್ಯಗಳನ್ನು ಸಹ ಇಲ್ಲೇ ಆಡಲಿದೆ. ಟೂರ್ನಿಯಲ್ಲಿ ಒಟ್ಟು 55 ಪಂದ್ಯಗಳು ನಡೆಯಲಿವೆ. ಜೂನ್ 1ರಿಂದ 18ರವರೆಗೆ ಗುಂಪು ಹಂತದಲ್ಲಿ 40 ಪಂದ್ಯಗಳು ನಡೆಯಲಿವೆ. ಜೂನ್ 19 ರಿಂದ 24 ರವರೆಗೆ ಸೂಪರ್ 8 ಪಂದ್ಯಗಳು ನಡೆಯಲಿವೆ.

Continue Reading

ಕ್ರೀಡೆ

Madrid Open 2024: ಫಿಟ್​ನೆಸ್​ ಸಲುವಾಗಿ ಮ್ಯಾಡ್ರಿಡ್ ಓಪನ್‌ನಿಂದ ಹಿಂದೆ ಸರಿದ ಹಾಲೆಪ್‌

Madrid Open 2024: ದುರದೃಷ್ಟವಶಾತ್ ನನ್ನ ದೇಹವು ಸಿದ್ಧವಾಗಲು ಸ್ವಲ್ಪ ಹೆಚ್ಚು ಸಮಯ ಬೇಕಾಗುತ್ತದೆ ಮತ್ತು ಮ್ಯಾಡ್ರಿಡ್‌ನಲ್ಲಿ ಆಡದಿರಲು ನಾನು ಕಠಿಣ ನಿರ್ಧಾರವನ್ನು ತೆಗೆದುಕೊಂಡಿದ್ದೇನೆ” ಎಂದು ಸಿಮೋನಾ ಹಾಲೆಪ್‌(Simona Halep) ಹೇಳಿದ್ದಾರೆ.

VISTARANEWS.COM


on

Madrid Open 2024
Koo

ಬೂಖರೆಸ್ಟ್‌(ರೊಮೇನಿಯಾ): ಡೋಪಿಂಗ್‌ ಪ್ರಕರಣದಿಂದ ಮುಕ್ತರಾಗಿರುವ ರೊಮೇನಿಯಾದ ಟೆನಿಸ್‌ ತಾರೆ, 2 ಗ್ರ್ಯಾನ್‌ ಸ್ಲಾಂ ವಿಜೇತೆ ಸಿಮೋನಾ ಹಾಲೆಪ್‌(Simona Halep) ಮ್ಯಾಡ್ರಿಡ್ ಓಪನ್‌ನಿಂದ(Madrid Open 2024) ಹಿಂದೆ ಸರಿದಿದ್ದಾರೆ. ಫಿಟ್​ನೆಸ್​ ಕಂಡುಕೊಳ್ಳುವ ಸಲುವಾಗಿ ಅವರು ಈ ನಿರ್ಧಾರ ಕೈಗೊಂಡಿರುವುದಾಗಿ ತಿಳಿಸಿಸಿದ್ದಾರೆ.

ಉದ್ದೀಪನ ಮದ್ದು ಸೇವನೆ ನಿಯಮ ಉಲ್ಲಂಘನೆಗಾಗಿ ವಿಶ್ವದ ಮಾಜಿ ಅಗ್ರಮಾನ್ಯ ಟೆನಿಸ್‌ ಆಟಗಾರ್ತಿ ಸಿಮೊನಾ ಹಾಲೆಪ್ ಅವರಿಗೆ 2022ರ ಅಕ್ಟೋಬರ್‌ನಲ್ಲಿ 4 ವರ್ಷಗಳ ನಿಷೇಧ ಹೇರಿಲಾಗಿತ್ತು. ಇಂಟರ್‌ನ್ಯಾಷನಲ್‌ ಟೆನಿಸ್‌ ಇಂಟೆಗ್ರಿಟಿ ಏಜನ್ಸಿಯೂ ಅಂದು ಹಾಲೆಪ್‌ ನಿಷೇಧ ಶಿಕ್ಷೆಯನ್ನು ಪ್ರಕಟಿಸಿತ್ತು. ನಿಷೇಧ ಅವಧಿ ಇಳಿಸಲು ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯಕ್ಕೆ ಹಾಲೆಪ್ ಮನವಿ ಮಾಡಿದ್ದರು. ಅವರ ಕೋರಿಕೆ ಮನ್ನಣೆ ನೀಡಿದ ನ್ಯಾಯಾಲಯ ನಿಷೇಧ ಅವಧಿಯನ್ನು 9 ತಿಂಗಳಿಗೆ ಇಳಿಕೆ ಮಾಡಿದೆ. 2023ರ ಜುಲೈ ವೇಳೆಗಾಗಲೇ 9 ತಿಂಗಳ ನಿಷೇಧ ಅವಧಿ ಮುಕ್ತಾಯಗೊಂಡಿದ್ದರಿಂದ ಹಾಲೆಪ್‌ ಅವರಿಗೆ 2 ತಿಂಗಳ ಹಿಂದಷ್ಟೇ ಅಂತಾರಾಷ್ಟ್ರೀಯ ಟೆನಿಸ್‌ನಲ್ಲಿ ಸ್ಪರ್ಧಿಸಲು ಅವಕಾಶ ನೀಡಲಾಗಿತ್ತು.

32 ವರ್ಷದ ಸಿಮೋನಾ ಹಾಲೆಪ್​ಗೆ ನಿಷೇಧ ಶಿಕ್ಷೆಯಿಂದಾಗಿ ಹಲವು ಟೂರ್ನಿಗಳು ಕೈ ತಪ್ಪಿ ಹೋಗಿತ್ತು. ಸರಿ ಸುಮಾರು 18 ತಿಂಗಳಿನಿಂದ ಟೆನಿಸ್​ ಆಡದ ಕಾರಣ ಮತ್ತೆ ಉನ್ನತ ಮಟ್ಟದಲ್ಲಿ ಸ್ಪರ್ಧಿಸಲು ದೈಹಿಕವಾಗಿ ಸಿದ್ಧರಾಗುವ ನಿಟ್ಟಿನಲ್ಲಿ ಫಿಟ್​ನೆಸ್​ ಮೊರೆ ಹೋಗಲು ನಿರ್ಧರಿಸಿದ್ದಾರೆ. ಇದೇ ಕಾರಣದಿಂದ ಅವರು ಮ್ಯಾಡ್ರಿಡ್ ಓಪನ್‌ನಿಂದ ಹಿಂದೆ ಸರಿದಿರುವುದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ Simona Halep: ನಿಷೇಧ ಮುಕ್ತರಾದ ಹಾಲೆಪ್‌ ಮಿಯಾಮಿ ಓಪನ್​ನಲ್ಲಿ ಕಣಕ್ಕೆ

“ದುರದೃಷ್ಟವಶಾತ್ ನನ್ನ ದೇಹವು ಸಿದ್ಧವಾಗಲು ಸ್ವಲ್ಪ ಹೆಚ್ಚು ಸಮಯ ಬೇಕಾಗುತ್ತದೆ ಮತ್ತು ಮ್ಯಾಡ್ರಿಡ್‌ನಲ್ಲಿ ಆಡದಿರಲು ನಾನು ಕಠಿಣ ನಿರ್ಧಾರವನ್ನು ತೆಗೆದುಕೊಂಡಿದ್ದೇನೆ” ಎಂದು ಅವರು ಎಕ್ಸ್‌ನಲ್ಲಿ ಬರೆದಿದ್ದಾರೆ.

ಟೆನಿಸ್​ಗೆ ವಿದಾಯ ಹೇಳಿದ ಮುಗುರುಜಾ


ಸ್ಪೇನಿನ ಖ್ಯಾತ ಟೆನಿಸ್​ ಆಟಗಾರ್ತಿ, ಎರಡು ಬಾರಿಯ ಗ್ರ್ಯಾನ್‌ಸ್ಲ್ಯಾಮ್ ಚಾಂಪಿಯನ್, ಮಾಜಿ ವಿಶ್ವ ನಂ.1 ಆಟಗಾರ್ತಿ ಗಾರ್ಬಿನ್‌ ಮುಗುರುಜಾ(Garbine Muguruza) ಅವರು ಟೆನಿಸ್​ಗೆ ವಿದಾಯ(Garbine Muguruza retirement) ಹೇಳಿದ್ದಾರೆ. ಗ್ರ್ಯಾನ್ ಸ್ಲ್ಯಾಮ್ ಪ್ರಶಸ್ತಿ ಸುತ್ತಿನ ಪಂದ್ಯದಲ್ಲಿ ಅಮೆರಿಕದ ವಿಲಿಯಮ್ಸ್ ಸಹೋದರಿಯರನ್ನು ಸೋಲಿಸಿದ ಏಕೈಕ ಆಟಗಾರ್ತಿ ಎಂಬ ಹೆಗ್ಗಳಿಕೆ ಅವರದು.

30 ವರ್ಷದ ಗಾರ್ಬಿನ್‌ ಮುಗುರುಜಾ, ಸುದ್ದಿಗೋಷ್ಠಿ ನಡೆಸಿ ತಮ್ಮ ವಿದಾಯವನ್ನು ಪ್ರಕಟಿಸಿದರು. ‘ಇದು ನಿವೃತ್ತಿ ಹೊಂದುವ ಸಮಯ ಮತ್ತು ನನ್ನ ಜೀವನದಲ್ಲಿ ಹೊಸ ಅಧ್ಯಾಯ ತೆರೆಯುವ ಸಮಯ ಎಂದು ಭಾವಿಸುವೆ’ ಎಂದು ಹೇಳುವ ಮೂಲಕ ತನ್ನ ನಿವೃತ್ತಿಯನ್ನು ಪ್ರಕಟಿಸಿದ್ದರು.

2016ರ ಫ್ರೆಂಚ್ ಓಪನ್ ಫೈನಲ್‌ ನಲ್ಲಿ ಸೆರೆನಾ ವಿಲಿಯಮ್ಸ್(Serena Williams) ಮತ್ತು 2017ರ ವಿಂಬಲ್ಡನ್ ಫೈನಲ್‌ನಲ್ಲಿ ವೀನಸ್ ವಿಲಿಯಮ್ಸ್(Venus Williams) ಅವರನ್ನು ಮುಗುರುಜಾ ಸೋಲಿಸಿ ಗ್ರ್ಯಾನ್‌ಸ್ಲ್ಯಾಮ್ ಪ್ರಶಸ್ತಿ ಗೆದ್ದಿದ್ದರು. ತಮ್ಮ ವೃತ್ತಿಜೀವನದಲ್ಲಿ ಒಟ್ಟು 10 ಪ್ರಮುಖ ಪ್ರಶಸ್ತಿ ಗೆದ್ದಿದ್ದಾರೆ. 2015ರ ವಿಂಬಲ್ಡನ್ ಮತ್ತು 2020ರ ಆಸ್ಟ್ರೇಲಿಯನ್ ಓಪನ್‌ ಟೂರ್ನಿಯಲ್ಲಿ ರನ್ನರ್ ಅಪ್ ಸ್ಥಾನ ಪಡೆದಿದ್ದರು. ಕೊನೆಯ ಬಾರಿಗೆ ಅವರು ಗೆಲುವು ಸಾಧಿಸಿದ್ದು, 2021 ರ ಎಟಿಪಿ ಟೂರ್ನಿಯಾಗಿತ್ತು. ಕಳೆದೊಂದು ವರ್ಷದಿಂದ ಅವರು ಯಾವುದೇ ಟೆನಿಸ್​ ಟೂರ್ನಿ ಆಡಿರಲಿಲ್ಲ.

Continue Reading

ಕ್ರೀಡೆ

Narsingh Yadav: ಕುಸ್ತಿ ಫೆಡರೇಷನ್‌ನ ಅಥ್ಲೀಟ್‌ ವಿಭಾಗಕ್ಕೆ ನರಸಿಂಗ್‌ ಯಾದವ್ ಅಧ್ಯಕ್ಷ

Narsingh Yadav: ನರಸಿಂಗ್ 74 ಕೆ.ಜಿ. ವಿಭಾಗದಲ್ಲಿ 2012ರಲ್ಲಿ ನಡೆದ ಲಂಡನ್ ಒಲಿಂಪಿಕ್ಸ್‌ನಲ್ಲಿ ಸ್ಪರ್ಧಿಸಿದ್ದರು. ಆದರೆ ಇಲ್ಲಿ ಮೊದಲ ಸುತ್ತಿನಲ್ಲೇ ಸೋತು ನಿರಾಸೆ ಅನುಭವಿಸಿದ್ದರು. ಅರ್ಜುನ ಪ್ರಶಸ್ತಿ ವಿಜೇತರಾಗಿರುವ ಇವರು 2010ರ ಏಷ್ಯನ್ ಗೇಮ್ಸ್‌ನಲ್ಲಿ ಚಿನ್ನದ ಪದಕ ಗೆದ್ದ ಸಾಧನೆ ಮಾಡಿದ್ದರು.

VISTARANEWS.COM


on

Narsingh Yadav
Koo

ನವದೆಹಲಿ: ಕಾಮನ್‌ವೆಲ್ತ್‌ ಗೇಮ್ಸ್‌ ಚಿನ್ನದ ಪದಕ ವಿಜೇತ, ಮಾಜಿ ಕುಸ್ತಿಪಟು ನರಸಿಂಗ್ ಪಂಚಮ್ ಯಾದವ್(Narsingh Yadav) ಭಾರತೀಯ ಕುಸ್ತಿ ಫೆಡರೇಷನ್‌ನ(WFI) ಏಳು ಸದಸ್ಯರನ್ನು ಒಳಗೊಂಡ ಅಥ್ಲೀಟ್ ವಿಭಾಗದ(WFI’s seven-member athletes’ panel) ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.

ಒಕ್ಕೂಟದ ಏಳು ಹುದ್ದೆಗಳಿಗೆ 8 ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ನರಸಿಂಗ್ ಅವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು. ಸಾಹಿಲ್ (ದೆಹಲಿ), ಎ.ಎಸ್.ಸ್ಮಿತಾ (ಕೇರಳ), ಭಾರತಿ ಭಾಘೀ (ಉತ್ತರಪ್ರದೇಶ), ಖುಷ್ಬೂ ಎಸ್. ಪವಾರ್ (ಗುಜರಾತ್), ನಿಕ್ಕಿ (ಹರಿಯಾಣ) ಹಾಗೂ ಶ್ವೇತಾ ದುಬೇ (ಪಶ್ಚಿಮ ಬಂಗಾಳ) ಸಮಿತಿಗೆ ಆಯ್ಕೆಯಾದ ಇತರ ಸದಸ್ಯರು.

ಬ್ರಿಜ್ ಭೂಷಣ್ ಆಪ್ತ ಸಂಜಯ್ ಸಿಂಗ್ ಅವರು ಕುಸ್ತಿ ಒಕ್ಕೂಟಕ್ಕೆ ಆಯ್ಕೆಯಾದ ನಂತರ, ಸಂಸ್ಥೆ ಮೇಲಿರುವ ಅಮಾನತು ಆದೇಶವನ್ನು ತೆರವುಗೊಳಿಸುವಂತೆ ಅಂತಾರಾಷ್ಟ್ರೀಯ ಒಕ್ಕೂಟಕ್ಕೆ ಮನವಿ ಸಲ್ಲಿಸಿದ್ದರು. ಇದಕ್ಕೆ ಯುನೈಟೆಡ್ ವರ್ಲ್ಡ್‌ ರೆಸ್ಲಿಂಗ್‌ (UWW) ಸಂಸ್ಥೆಯು ಅಥ್ಲೀಟ್ ಆಯೋಗವನ್ನು 2024ರ ಜುಲೈ 1ರೊಳಗಾಗಿ ರಚಿಸಬೇಕು ಎಂಬ ಷರತ್ತು ವಿಧಿಸಿತ್ತು. ಈ ಸಮಿತಿಯು ಕ್ರಿಯಾಶೀಲವಾಗಿರಬೇಕು. ಕಳೆದ ನಾಲ್ಕು ವರ್ಷದೊಳಗೆ ಕ್ರೀಡೆಯಿಂದ ನಿವೃತ್ತಿಪಡೆದ ಕ್ರೀಡಾಪಟುಗಳು ಮಾತ್ರ ಸಮಿತಿಯಲ್ಲಿರಬೇಕು ಎಂಬ ಷರತ್ತು ಕೂಡ ಹಾಕಿತ್ತು. ಅದರಂತೆಯೇ ಈ ಸಮಿತಿಯನ್ನು ಬುಧವಾರ ರಚನೆ ಮಾಡಲಾಗಿದೆ. ಅಂತಾರಾಷ್ಟ್ರೀಯ ಸಂಸ್ಥೆಯು ಭಾರತೀಯ ಕುಸ್ತಿ ಫೆಡರೇಷನ್ ಅನ್ನು ಕಳೆದ ವರ್ಷ ಆಗಸ್ಟ್​ 23ರಿಂದ ಅಮಾನತು ಮಾಡಿತ್ತು.

ಇದ್ನನೂ ಓದಿ WFI Suspension: ನೂತನ ಆಡಳಿತ ಮಂಡಳಿ ಅಮಾನತು ಪ್ರಶ್ನಿಸಿ ಮುಂದಿನ ವಾರ ಕೋರ್ಟ್ ಮೆಟ್ಟಿಲೇರಲಿದೆ ಕುಸ್ತಿ ಒಕ್ಕೂಟ

ನರಸಿಂಗ್ 74 ಕೆ.ಜಿ. ವಿಭಾಗದಲ್ಲಿ 2012ರಲ್ಲಿ ನಡೆದ ಲಂಡನ್ ಒಲಿಂಪಿಕ್ಸ್‌ನಲ್ಲಿ ಸ್ಪರ್ಧಿಸಿದ್ದರು. ಆದರೆ ಇಲ್ಲಿ ಮೊದಲ ಸುತ್ತಿನಲ್ಲೇ ಸೋತು ನಿರಾಸೆ ಅನುಭವಿಸಿದ್ದರು. ಅರ್ಜುನ ಪ್ರಶಸ್ತಿ ವಿಜೇತರಾಗಿರುವ ಇವರು 2010ರ ಏಷ್ಯನ್ ಗೇಮ್ಸ್‌ನಲ್ಲಿ ಚಿನ್ನದ ಪದಕ ಗೆದ್ದ ಸಾಧನೆ ಮಾಡಿದ್ದರು.

4 ವರ್ಷಗಳ ನಿಷೇಧ ಶಿಕ್ಷೆಗೆ ಗುರಿಯಾಗಿದ್ದ ನರಸಿಂಗ್

2016ರ ಒಲಿಂಪಿಕ್ಸ್‌ ಸಂದರ್ಭದಲ್ಲಿ ಎರಡು ಬಾರಿ ಒಲಿಂಪಿಕ್ಸ್‌ ಪದಕ ಗೆದ್ದಿದ್ದ ಸುಶೀಲ್ ಕುಮಾರ್ ಗಾಯದ ಸಮಸ್ಯೆ ಎದುರಿಸುತ್ತಿದ್ದರು. ಈ ವೇಳೆ ನರಸಿಂಗ್ ಅವರಿಗೆ ಅವಕಾಶ ಒದಗಿಬಂದಿತ್ತು. ಇದನ್ನು ಪ್ರಶ್ನಿಸಿ ಸುಶೀಲ್ ಅವರು ದೆಹಲಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಆದರೆ ಅದು ತಿರಸ್ಕೃತಗೊಂಡಿತ್ತು. ಹೀಗಾಗಿ ನರಸಿಂಗ್ ರಿಯೋ ಒಲಿಂಪಿಕ್‌ಗೆ ಪ್ರವೇಶ ಪಡೆದಿದ್ದರು. ಉದ್ದೀಪನಮದ್ದು ಸೇವನೆ ಪರೀಕ್ಷೆಯಲ್ಲಿ ಎರಡು ಬಾರಿ ವಿಫಲರಾಗಿದ್ದ ನರಸಿಂಗ್ 4 ವರ್ಷಗಳ ನಿಷೇಧ ಶಿಕ್ಷೆಗೆ ಗುರಿಯಾಗಿದ್ದರು.

Continue Reading

ಕ್ರೀಡೆ

IPL 2024: ಬ್ಲಾಕ್​ ಟಿಕೆಟ್ ಮಾರಾಟ ಜಾಲ ಭೇದಿಸಿದ ಚೆನ್ನೈ ಪೊಲೀಸರು; 12 ಮಂದಿ ಸೆರೆ

IPL 2024: ಮಂಗಳವಾರ ನಡೆದ ಚೆನ್ನೈ(Chennai Super Kings) ಮತ್ತು ಲಕ್ನೋ(Lucknow Super Giants) ನಡುವಿನ ಪಂದ್ಯದ ಟಿಕೆಟ್​​ಗಳನ್ನು ದುಬಾರಿ ಬೆಲೆಗೆ ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದ 12 ಮಂದಿಯನ್ನು ತಮಿಳುನಾಡು ಪೊಲೀಸರು ಬಂಧಿಸಿದ್ದಾರೆ.

VISTARANEWS.COM


on

IPL 2024
Koo

ಚೆನ್ನೈ: ಸದ್ಯ ಸಾಗುತ್ತಿರುವ ಐಪಿಎಲ್‌ನಲ್ಲಿ(IPL 2024) ಬ್ಲಾಕ್​ ಟಿಕೆಟ್​ ಮಾರಾಟ ಜಾಲವೊಂದನ್ನು ಭೇದಿಸಿರುವ ತಮಿಳುನಾಡು ಪೊಲೀಸರು 12 ಮಂದಿಯನ್ನು ಸೆರೆ ಹಿಡಿದಿದ್ದಾರೆ. ಮಂಗಳವಾರ ನಡೆದ ಚೆನ್ನೈ(Chennai Super Kings) ಮತ್ತು ಲಕ್ನೋ(Lucknow Super Giants) ನಡುವಿನ ಪಂದ್ಯದ ಟಿಕೆಟ್​​ಗಳನ್ನು ದುಬಾರಿ ಬೆಲೆಗೆ ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದ ವೇಳೆ ಇವರನ್ನು ಬಂಧಿಸಲಾಗಿದೆ. ಬಂಧಿತರಿಂದ 1,40,396 ರೂಪಾಯಿ ಮೌಲ್ಯದ 56 ಟಿಕೆಟ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಜತೆಗೆ 12 ಮಂದಿ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಚೆನ್ನೈ ತಂಡ 2 ಪಂದ್ಯಗಳ ಬಳಿಕ ತವರಿನಲ್ಲಿ ಆಡಲಿಳಿದಿತ್ತು. ಹೀಗಾಗಿ ಪಂದ್ಯಕ್ಕೆ ಹೆಚ್ಚುವರಿ ಪ್ರೇಕ್ಷಕರನ್ನು ನಿರೀಕ್ಷಿಸಲಾಗಿತ್ತು. ಇದೇ ಕಾರಣದಿಂದ 12 ಮಂದಿ ಕಾಳಸಂತೆಯಲ್ಲಿ ಟಿಕೆಟ್​ಗಳನ್ನು ದುಬಾರಿ ಬೆಲೆಗೆ ಮಾರಾಟ ಮಾಡಲು ಯೋಜನೆ ಹಾಕಿಕೊಂಡಿದ್ದರು. ಸೂಕ್ತ ಮಾಹಿತಿಯೊಂದಿಗೆ ಬಲೆ ಬೀಸಿದ ಚೆನ್ನೈ ಪೊಲೀಸ್ ಕಮಿಷನರ್ ಸಂದೀಪ್ ರೈ ರಾಥೋಡ್ ಅವರು ಸಿವಿಲ್​ ಡ್ರೆಸ್​ನಲ್ಲಿ ಮೈದಾನದ ಸುತ್ತಮುತ್ತ ಕಣ್ಗಾವಲು ಮತ್ತು ಮೇಲ್ವಿಚಾರಣೆಯಲ್ಲಿ ತೊಡಗಿದ್ದರು. ಈ ವೇಳೆ ಆಂಧ್ರಪ್ರದೇಶದ ಟಿ.ಏಳುಮಲೈ, ಹಯಾತ್ ಬಾಷಾ ನೂರ್ ಮೊಹಮ್ಮದ್, ಎಸ್ .ಶ್ಯಾಮ್ , ಎಸ್ .ಕಿಶೋರ್ ಸೇರಿ ಎಂಟು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ IPL 2024: 13 ವರ್ಷದ ಐಪಿಎಲ್​ ದಾಖಲೆ ಮುರಿದ ಮಾರ್ಕಸ್​ ಸ್ಟೋಯಿನಿಸ್

ಪಂದ್ಯ ಸೋತ ಚೆನ್ನೈ

ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಇತ್ತಂಡಗಳ ನಡುವಿನ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಚೆನ್ನೈ 20 ಓವರ್‌ಗಳಲ್ಲಿ 4 ವಿಕೆಟ್‌ಗಳಿಗೆ 210 ರನ್‌ ಗಳಿಸಿತು. ಇದನ್ನು ಬೆನ್ನತ್ತಿದ ಲಕ್ನೋ 19.3 ಓವರ್‌ ಗಳಲ್ಲಿ 4 ವಿಕೆಟ್‌ಗೆ 213 ರನ್‌ ಗಳಿಸಿ, 6 ವಿಕೆಟ್‌ ಗಳಿಂದ ಜಯಭೇರಿ ಬಾರಿಸಿತು.

ಚೇಸಿಂಗ್​ ವೇಳೆ ಸ್ಫೋಟಕ ಬ್ಯಾಟಿಂಗ್​ ನಡೆಸಿದ ಮಾರ್ಕಸ್‌ ಸ್ಟಾಯಿನಿಸ್‌ 63 ಎಸೆತಗಳಲ್ಲಿ 13 ಬೌಂಡರಿ, 6 ಸಿಕ್ಸರ್‌ಗಳ ಸಮೇತ ಅಜೇಯ 124 ರನ್‌ ಚಚ್ಚಿ ತಂಡಕ್ಕೆ ಸ್ಮರಣೀಯ ಗೆಲುವು ತಂದು ಕೊಟ್ಟರು. ಅಂತಿಮ ಓವರ್​ ತನಕ ಪಂದ್ಯ ಚೆನ್ನೈ ತಂಡದ ಕೈಯಲ್ಲಿತ್ತು.

88 ರನ್​ಗೆ 3 ವಿಕೆಟ್​ ಕಳೆದುಕೊಂಡ ಲಕ್ನೊ ತಂಡ ಅಪಾಯಕ್ಕೆ ಸಿಲುಕಿತು. ಆದರೆ ಈ ವೇಳೆ ಆಡಲು ಬಂದ ನಿಕೋಲಸ್ ಪೂರನ್ ಹಾಗೂ ಸ್ಪೊಯ್ನಿಸ್​ 70 ರನ್​ಗಳ ಜತೆಯಾಟ ಆಡಿದರು. ಆದರೆ, 15 ಎಸೆತಕ್ಕೆ 34 ರನ್ ಬಾರಿಸಿದ ಪೂರನ್​ ಔಟಾದ ಬಳಿಕ ಮತ್ತೆ ತೊಂದರೆ ಎದುರಾಯಿತು. ಆದರೆ ಯಾವುದಕ್ಕೂ ಕ್ಯಾರೆ ಎನ್ನದ ಸ್ಟೊಯ್ನಿಸ್​ 56 ಎಸೆತಕ್ಕೆ ಶತಕ ಪೂರೈಸಿದರು. ಕೊನೇ ತನಕ ನಿಂತು ಆಡಿ ಗೆಲ್ಲಿಸಿದರು. ಕೊನೆಯಲ್ಲಿ ದೀಪಕ್ ಹೂಡಾ 6 ಎಸೆತಕ್ಕೆ 17 ರನ್ ಬಾರಿಸಿದರು. ಚೆನ್ನೈ ಪರ ಋತುರಾಜ್‌ 60 ಎಸೆತ ಎದುರಿಸಿ, 12 ಬೌಂಡರಿ , 3 ಸಿಕ್ಸರ್‌ಗಳೊಂದಿಗೆ 108 ರನ್‌ ಚಚ್ಚಿ ಶತಕ ಬಾರಿಸಿದರು. ಆದರೆ ಸೋಲಿನಿಂದ ಅವರ ಶತಕ ವ್ಯರ್ಥಗೊಂಡಿತು.

Continue Reading
Advertisement
Sunetra Pawar
ದೇಶ14 mins ago

Sunetra Pawar: 25 ಸಾವಿರ ಕೋಟಿ ರೂ. ಹಗರಣ; ಅಜಿತ್‌ ಪವಾರ್‌ ಪತ್ನಿ ಸುನೇತ್ರಾಗೆ ಕ್ಲೀನ್‌ಚಿಟ್!

2nd PUC Exam
ಕರ್ನಾಟಕ14 mins ago

2nd PUC Exam: ಏ.29ರಿಂದ ದ್ವಿತೀಯ ಪಿಯುಸಿ ಪರೀಕ್ಷೆ-2; ಪ್ರವೇಶ ಪತ್ರ ಬಿಡುಗಡೆ

T20 World Cup 2024
ಕ್ರೀಡೆ17 mins ago

T20 World Cup 2024: ಟಿ20 ವಿಶ್ವಕಪ್​ಗೆ ಉಸೇನ್‌ ಬೋಲ್ಟ್ ಬ್ರ್ಯಾಂಡ್‌ ಅಂಬಾಸಿಡರ್

DCM D K Shivakumar visit adichunchanagiri mutt
ಕರ್ನಾಟಕ24 mins ago

Lok Sabha Election 2024: ನನ್ನ ಜೀವ, ನನ್ನ ದೇಹ ಇರುವುದೇ ನಮ್ಮ ಜನರಿಗಾಗಿ: ಡಿ.ಕೆ. ಶಿವಕುಮಾರ್

Road Accident
ಕರ್ನಾಟಕ51 mins ago

Road Accident: ಕಾರು ಟಯರ್‌ ಬ್ಲಾಸ್ಟ್ ಆಗಿ ಬೈಕ್‌ಗೆ ಡಿಕ್ಕಿ; ಇಬ್ಬರು ಸವಾರರ ದುರ್ಮರಣ

Madrid Open 2024
ಕ್ರೀಡೆ1 hour ago

Madrid Open 2024: ಫಿಟ್​ನೆಸ್​ ಸಲುವಾಗಿ ಮ್ಯಾಡ್ರಿಡ್ ಓಪನ್‌ನಿಂದ ಹಿಂದೆ ಸರಿದ ಹಾಲೆಪ್‌

Kotak Bank
ದೇಶ1 hour ago

Kotak Bank: ಕೊಟಕ್‌ ಬ್ಯಾಂಕ್‌ ಕ್ರೆಡಿಟ್‌ ಕಾರ್ಡ್‌ ನಿಷೇಧ; ಹಳೆಯ ಗ್ರಾಹಕರಿಗೆ ಏನು ತೊಂದರೆ? ಇಲ್ಲಿದೆ ಮಾಹಿತಿ

Lok sabha Election
ಪ್ರಮುಖ ಸುದ್ದಿ1 hour ago

Lok Sabha Election 2024: ಲೋಕಸಭಾ ಚುನಾವಣೆ 2ನೇ ಹಂತದ ಬಹಿರಂಗ ಪ್ರಚಾರ ಅಂತ್ಯ, ನಾಳೆ ಮನೆ ಮನೆ ಪ್ರಚಾರ

Narsingh Yadav
ಕ್ರೀಡೆ2 hours ago

Narsingh Yadav: ಕುಸ್ತಿ ಫೆಡರೇಷನ್‌ನ ಅಥ್ಲೀಟ್‌ ವಿಭಾಗಕ್ಕೆ ನರಸಿಂಗ್‌ ಯಾದವ್ ಅಧ್ಯಕ್ಷ

Narendra Modi
ದೇಶ2 hours ago

Narendra Modi: ಕರ್ನಾಟಕದಲ್ಲಿ ಮುಸ್ಲಿಮರಿಗೆ ಒಬಿಸಿ ಮೀಸಲಾತಿ; ಕಾಂಗ್ರೆಸ್‌ ಒಬಿಸಿ ವಿರೋಧಿ ಎಂದ ಮೋದಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ17 hours ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು2 days ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ2 days ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು2 days ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

CET Exam 2024
ಬೆಂಗಳೂರು2 days ago

CET 2024 Exam : ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ; ಕೈ ಕೈ ಮಿಲಾಯಿಸಿದ ಪೊಲೀಸರು- ಎವಿಬಿಪಿ ಕಾರ್ಯಕರ್ತರು

Dina Bhavishya
ಭವಿಷ್ಯ3 days ago

Dina Bhavishya : ಸಹೋದ್ಯೋಗಿಗಳು ನಿಮ್ಮ ವಿರುದ್ಧ ಪಿತೂರಿ ಮಾಡುವ ಸಾಧ್ಯತೆ; ಈ ರಾಶಿಯವರು ಎಚ್ಚರ

Dina Bhavishya
ಭವಿಷ್ಯ4 days ago

Dina Bhavishya : ಅಮೂಲ್ಯ ವಸ್ತುಗಳು ಕೈ ತಪ್ಪಬಹುದು; ಈ ರಾಶಿಯವರು ಇಂದು ಎಚ್ಚರವಹಿಸಿ

Modi in Karnataka Congress snatches Rs 4000 under Kisan Samman says PM Narendra Modi
ಪ್ರಮುಖ ಸುದ್ದಿ4 days ago

Modi in Karnataka: ಕಿಸಾನ್‌ ಸಮ್ಮಾನ್‌ ಅಡಿ 4 ಸಾವಿರ ರೂಪಾಯಿ ಕಿತ್ತುಕೊಂಡ ರೈತ ವಿರೋಧಿ ಸರ್ಕಾರ ಕಾಂಗ್ರೆಸ್‌: ಮೋದಿ ಕಿಡಿ

Modi in Karnataka HD Deve Gowda attack on Congess
Lok Sabha Election 20244 days ago

Modi in Karnataka: ಲೂಟಿ ಮಾಡಿ ಖಾಲಿ ಚೆಂಬು ಕೊಟ್ಟಿದ್ದು ಕಾಂಗ್ರೆಸ್‌; ಆ ಚೆಂಬನ್ನು ಅಕ್ಷಯ ಪಾತ್ರ ಮಾಡಿದ್ದು ಮೋದಿ: ಎಚ್‌.ಡಿ. ದೇವೇಗೌಡ ಗುಡುಗು

ಟ್ರೆಂಡಿಂಗ್‌