FIFA World Cup: ಫಿಫಾ ವಿಶ್ವಕಪ್ ಅರ್ಹತಾ ಪಂದ್ಯಗಳಿಗೆ ಭುವನೇಶ್ವರ, ಗುವಾಹಟಿ ಆತಿಥ್ಯ - Vistara News

ಕ್ರೀಡೆ

FIFA World Cup: ಫಿಫಾ ವಿಶ್ವಕಪ್ ಅರ್ಹತಾ ಪಂದ್ಯಗಳಿಗೆ ಭುವನೇಶ್ವರ, ಗುವಾಹಟಿ ಆತಿಥ್ಯ

ಭಾರತವು ಏಷ್ಯನ್ ಅರ್ಹತಾ ಪಂದ್ಯಗಳ ಎ ಗುಂಪಿನಲ್ಲಿ ಸ್ಥಾನ ಪಡೆದುಕೊಂಡಿದೆ. ಕತಾರ್, ಕುವೈತ್ ಮತ್ತು ಅಫಘಾನಿಸ್ತಾನ ಮತ್ತು ಮಂಗೋಲಿಯಾ ಕೂಡ ಈ ಗುಂಪಿನಲ್ಲಿ ಕಾಣಿಸಿಕೊಂಡಿದೆ.

VISTARANEWS.COM


on

Indian football Team
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: 2026ರ ಫಿಫಾ ವಿಶ್ವಕಪ್(FIFA World Cup 2026 Qualifiers) ಮತ್ತು 2027ರ ಎಎಫ್‌ಸಿ ಏಷ್ಯಕಪ್‌ನ ಪ್ರಾಥಮಿಕ ಜಂಟಿ ಅರ್ಹತಾ ಸುತ್ತಿನ ಭಾರತದ ಮೊದಲ ಎರಡು ಪಂದ್ಯಗಳಿಗೆ ಭುವನೇಶ್ವರ(Bhubaneswar) ಮತ್ತು ಗುವಾಹಟಿ(Guwahati) ಆತಿಥ್ಯ ವಹಿಸಿದೆ. ಈ ವಿಚಾರವನ್ನು ಶನಿವಾರ ಅಖಿಲ ಭಾರತ ಫುಟ್‌ಬಾಲ್ ಫೆಡರೇಷನ್ ತನ್ನ ಅಧಿಕೃತ ಪ್ರಕಟನೆಯಲ್ಲಿ ತಿಳಿಸಿದೆ.

ಎ ಗುಂಪಿನಲ್ಲಿ ಭಾರತ

ಭಾರತವು ಏಷ್ಯನ್ ಅರ್ಹತಾ ಪಂದ್ಯಗಳ ಎ ಗುಂಪಿನಲ್ಲಿ ಸ್ಥಾನ ಪಡೆದುಕೊಂಡಿದೆ. ಕತಾರ್, ಕುವೈತ್ ಮತ್ತು ಅಫಘಾನಿಸ್ತಾನ ಮತ್ತು ಮಂಗೋಲಿಯಾ ಕೂಡ ಈ ಗುಂಪಿನಲ್ಲಿ ಕಾಣಿಸಿಕೊಂಡಿದೆ.

ಕುವೈತ್ ವಿರುದ್ಧದ ಮೊದಲ ಪಂದ್ಯವನ್ನಾಡುವ ಮೂಲಕ ಭಾರತ ತನ್ನ ಅಭಿಯಾನವನ್ನು ಆರಂಭಿಸಲಿದೆ. ಈ ಪಂದ್ಯ ನವೆಂಬರ್ 16 ರಂದು ಭುವನೇಶ್ವರದ ಕಳಿಂಗ ಸ್ಟೇಡಿಯಂನಲ್ಲಿ ನಡೆಯಲಿದೆ. ಇದಾದ ಬಳಿಕ 2024ರಲ್ಲಿ, ಭಾರತ ತಮಡ ಅಫಘಾನಿಸ್ತಾನ ಮತ್ತು ಮಂಗೋಲಿಯಾ ತಂಡದ ವಿರುದ್ಧ ಪಂದ್ಯ ಆಡಲಿದೆ.

ಈ ಪಂದ್ಯಗಳನ್ನು ಆಯೋಜಿಸಿದ್ದಕ್ಕಾಗಿ ಒಡಿಶಾದ ಫುಟ್‌ಬಾಲ್ ಸಂಸ್ಥೆ ಮತ್ತು ಅಸ್ಸಾಂ ಫುಟ್‌ಬಾಲ್ ಸಂಸ್ಥೆಯನ್ನು ಎಐಎಫ್‌ಎಫ್ ಪ್ರಧಾನ ಕಾರ್ಯದರ್ಶಿ ಶಾಜಿ ಪ್ರಭಾಕರನ್ ಅವರು ಅಭಿನಂದಿಸಿದ್ದಾರೆ. ವಿಶ್ವ ದರ್ಜೆಯ ಮಟ್ಟದಲ್ಲಿ ಪಂದ್ಯಗಳನ್ನು ಆಯೋಜಿಸಲು ಮುಂದಾಗಿರುವುದು ಹೆಮ್ಮೆಯ ವಿಚಾರ. ಪಂದ್ಯಕ್ಕೆ ಯಾವುದೇ ಅಡೆತಡೆ ಬಾರದೆ ಯಶಸ್ವಿಯಾಗಿ ನೆರವೇರಲಿ ಎಂದು ಸಂಬಂಧಪಟ್ಟ ರಾಜ್ಯ ಸರ್ಕಾರಗಳಿಗೆ ಹಾರೈಸಿದರು. 2027ರ ಎಎಫ್‌ಸಿ ಏಷ್ಯನ್ ಕಪ್ ಸೌದಿ ಅರೇಬಿಯಾದಲ್ಲಿ ನಡೆಯಲಿದೆ. ಯುನೈಟೆಡ್ ಸ್ಟೇಟ್ಸ್, ಮೆಕ್ಸಿಕೋ ಮತ್ತು ಕೆನಡಾವು 2026ರ ಫಿಫಾ ವಿಶ್ವಕಪ್ ಆಯೋಜಿಸುತ್ತದೆ.

ಇದನ್ನೂ ಓದಿ FIFA: ಆಟಗಾರ್ತಿಗೆ ಚುಂಬಿಸಿದ್ದ ಲೂಯಿಸ್ ರುಬೆಲೆಸ್​ಗೆ ಅಮಾನತು ಶಿಕ್ಷೆ

ಏಷ್ಯಾನ್​ ಗೇಮ್ಸ್​ ಸಜ್ಜಾಗುತ್ತಿರುವ ಚೆಟ್ರಿ ಪಡೆ

ಸೆಪ್ಟೆಂಬರ್ 23ರಿಂದ ಅಕ್ಟೋಬರ್ 08ರ ವರೆಗೆ ಚೀನಾದ ಹ್ಯಾಂಗ್ಝೂನಲ್ಲಿ(Hangzhou, China) ನಡೆಯಲಿರುವ ಪ್ರತಿಷ್ಠಿತ ಏಷ್ಯನ್​ ಗೇಮ್ಸ್​ಗೆ(Asian Games) ಸುನೀಲ್​ ಚೆಟ್ರಿ ಸಾರಥ್ಯದ ಭಾರತ ತಂಡ ಸಜ್ಜಾಗುತ್ತಿದೆ. ಭಾರತ ತಂಡ ‘ಎ’ ಗುಂಪಿನಲ್ಲಿ ಸ್ಥಾನ ಪಡೆದಿದೆ. ಈ ಗುಂಪಿನಲ್ಲಿ ಚೀನಾ, ಬಾಂಗ್ಲಾದೇಶ ಹಾಗೂ ಮ್ಯಾನ್ಮಾರ್‌ ಕೂಡ ಕಾಣಿಸಿಕೊಂಡಿದೆ. 

ಫಿಫಾ ರ್‍ಯಾಂಕಿಂಗ್‌ನಲ್ಲಿ ಬಾಂಗ್ಲಾ ಹಾಗೂ ಮ್ಯಾನ್ಮಾರ್‌ ತಂಡಕ್ಕಿಂತ ಮೇಲಿರುವ ಭಾರತ ತಂಡ ಅಂತಿಮ 16ರ ಸುತ್ತು ಪ್ರವೇಶಿಸುವ ನಿರೀಕ್ಷೆ ಇದೆ. ಕಳೆದ ಒಂದು ವರ್ಷಗಳಿಂದ ಭಾರತದ ಫುಟ್ಬಾಲ್​ ತಂಡ ಆಡಿದ ಎಲ್ಲ ಟೂರ್ನಿಗಳಲ್ಲಿಯೂ ಉತ್ತಮ ಪ್ರದರ್ಶನ ತೋರುತ್ತಲೇ ಬಂದಿದೆ. ಇಚ್ಚೀಚೆಗಷ್ಟೇ ಸ್ಯಾಫ್​ ಟೂರ್ನಿಯಲ್ಲಿಯೂ ಚಾಂಪಿಯನ್​ ಪಟ್ಟ ಅಲಂಕರಿಸಿತ್ತು. ತಂಡದ ಗೆಲುವಿನಲ್ಲಿ ನಾಯಕ ಸುನೀಲ್ ಚೆಟ್ರಿ ಶ್ರೇಷ್ಠ ಸಾಧನೆ ತೋರಿದ್ದರು. ಇದೀಗ ಏಷ್ಯನ್​ ಗೇಮ್ಸ್​ನಲ್ಲಿಯೂ ಅವರು ಕಾಲ್ಚಳಕ ತೋರ್ಪಡಿಸಲು ಸಿದ್ಧರಾಗಿದ್ದಾರೆ.

ಭಾರತ ತಂಡ

ಗೋಲ್‌ಕೀಪರ್: ಗುರುಪ್ರೀತ್‌ ಸಿಂಗ್‌ ಸಂಧು, ಗುರ್ಮೀತ್‌ ಸಿಂಗ್‌, ಧೀರಜ್‌ ಸಿಂಗ್‌.
ಡಿಫೆಂಡರ್: ಸಂದೇಶ್‌ ಜಿಂಗಾನ್‌, ಅನ್ವರ್‌ ಅಲಿ, ನರೇಂದರ್‌ ಗೆಹ್ಲೋಟ್‌, ಲಾಲ್‌ಚುಂಗ್‌ನುಂಗ, ಆಕಾಶ್‌ ಮಿಶ್ರಾ, ರೋಶನ್‌ ಸಿಂಗ್‌, ಆಶಿಷ್‌ ರೈ.
ಮಿಡ್‌ಫಿಲ್ಡರ್: ಜೀಕ್ಸನ್‌ ಸಿಂಗ್‌, ಸುರೇಶ್‌ ಸಿಂಗ್‌, ಅಪಿಯ ರಾಲ್ಟೆ, ಅಮರ್‌ಜೀತ್‌ ಸಿಂಗ್‌, ರಾಹುಲ್‌ ಕೆ.ಪಿ., ಎನ್‌. ಮಹೇಶ್‌ ಸಿಂಗ್‌.
ಫಾರ್ವರ್ಡ್ಸ್‌: ಶಿವಶಕ್ತಿ ನಾರಾಯ ಣನ್‌, ರಹೀಂ ಅಲಿ, ಸುನೀಲ್‌ ಚೆಟ್ರಿ, ಅನಿಕೇತ್‌ ಜಾಧವ್‌, ವಿಕ್ರಮ್‌ ಪ್ರತಾಪ್‌ ಸಿಂಗ್‌, ರೋಹಿತ್‌ ದಾನು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

ICC Men’s Test Team Rankings: ಅಗ್ರಸ್ಥಾನದಿಂದ ಕುಸಿತ ಕಂಡ ಭಾರತ; ವಿಶ್ವ ಚಾಂಪಿಯನ್​ ಆಸೀಸ್​ ನಂ.1

ICC Men’s Test Team Rankings: ಕಳೆದ ವರ್ಷ ಓವಲ್‌ನಲ್ಲಿ ನಡೆದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್​ನಲ್ಲಿ ಭಾರತ ತಂಡ ಆಸ್ಟ್ರೇಲಿಯಾ ವಿರುದ್ಧ ಸೋಲು ಕಂಡಿತ್ತು. ಆಸ್ಟ್ರೇಲಿಯಾ 209 ರನ್‌ಗಳ ಗೆಲುವು ಸಾಧಿಸಿತ್ತು. ಇದೇ ಕಾರಣದಿಂದ ಆಸೀಸ್​ ತಂಡ ಅಗ್ರಸ್ಥಾನಕ್ಕೇರಿದೆ.

VISTARANEWS.COM


on

icc men's test team rankings
Koo

ದುಬೈ: ಟೆಸ್ಟ್ ಕ್ರಿಕೆಟ್ ಶ್ರೇಯಾಂಕದಲ್ಲಿ ಐಸಿಸಿ(ICC Men’s Test Team Rankings) ವಾರ್ಷಿಕ ಪರಿಷ್ಕರಣೆ ಮಾಡಿದ್ದು, ಈ ಮೊದಲು ಅಗ್ರಸ್ಥಾನದಲ್ಲಿದ್ದ ಭಾರತ ಒಂದು ಸ್ಥಾನಗಳ ಕುಸಿತ ಕಂಡು ಎರಡನೇ ಸ್ಥಾನಕ್ಕೆ ಜಾರಿದೆ. ಎರಡನೇ ಸ್ಥಾನದಲ್ಲಿದ್ದ ಆಸ್ಟ್ರೇಲಿಯಾ ಮೊದಲ ಸ್ಥಾನಕ್ಕೇರಿದೆ. ಇಂಗ್ಲೆಂಡ್ (105), ದಕ್ಷಿಣ ಆಫ್ರಿಕಾ (103), ನ್ಯೂಜಿಲ್ಯಾಂಡ್​ (96), ಪಾಕಿಸ್ತಾನ (89), ಶ್ರೀಲಂಕಾ (83), ವೆಸ್ಟ್ ಇಂಡೀಸ್ (82) ಮತ್ತು ಬಾಂಗ್ಲಾದೇಶ (53) ಈ ಹಿಂದಿನ ಸ್ಥಾನದಲ್ಲೇ ಮುಂದುವರಿದೆ.

ನೂತನ ಶ್ರೇಯಾಂಕ ಪಟ್ಟಿ ಪ್ರಕಾರ ಆಸ್ಟ್ರೇಲಿಯಾ 124 ಅಂಕಗಳೊಂದಿಗೆ ಮೊದಲ ಸ್ಥಾನದಲ್ಲಿದ್ದರೆ, ಭಾರತ 120 ಅಂಕದೊಂದಿದೆ 2ನೇ ಸ್ಥಾನಿಯಾಗಿದೆ. ಕಳೆದ ವರ್ಷ ಓವಲ್‌ನಲ್ಲಿ ನಡೆದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್​ನಲ್ಲಿ ಭಾರತ ತಂಡ ಆಸ್ಟ್ರೇಲಿಯಾ ವಿರುದ್ಧ ಸೋಲು ಕಂಡಿತ್ತು. ಆಸ್ಟ್ರೇಲಿಯಾ 209 ರನ್‌ಗಳ ಗೆಲುವು ಸಾಧಿಸಿತ್ತು. ಇದೇ ಕಾರಣದಿಂದ ಆಸೀಸ್​ ತಂಡ ಅಗ್ರಸ್ಥಾನಕ್ಕೇರಿದೆ. ಈ ನೂತನ ಶ್ರೇಯಾಂಕಗಳ ನವೀಕರಣವು ಮೇ 2021 ರ ನಂತರ ತಂಡಗಳ ಪ್ರದರ್ಶನಗಳನ್ನು ಪರಿಗಣಿಸುತ್ತದೆ.


ಟಾಪ್​ 10 ತಂಡಗಳು


1.ಆಸ್ಟ್ರೇಲಿಯಾ- 30 ಪಂದ್ಯ, 124 ರೇಟಿಂಗ್​ ಅಂಕ

2. ಭಾರತ-26 ಪಂದ್ಯ, 120 ರೇಟಿಂಗ್​ ಅಂಕ

3. ಇಂಗ್ಲೆಂಡ್​- 30 ಪಂದ್ಯ, 105 ರೇಟಿಂಗ್​ ಅಂಕ

4. ದಕ್ಷಿಣ ಆಫ್ರಿಕಾ-18 ಪಂದ್ಯ, 103 ರೇಟಿಂಗ್​ ಅಂಕ

5. ನ್ಯೂಜಿಲ್ಯಾಂಡ್​-22 ಪಂದ್ಯ, 96 ರೇಟಿಂಗ್​ ಅಂಕ

6. ಪಾಕಿಸ್ತಾನ-17 ಪಂದ್ಯ, 89 ರೇಟಿಂಗ್​ ಅಂಕ

7. ಶ್ರೀಲಂಕಾ-18 ಪಂದ್ಯ, 83 ರೇಟಿಂಗ್​ ಅಂಕ

8. ವೆಸ್ಟ್​ ಇಂಡೀಸ್​-19 ಪಂದ್ಯ, 82 ರೇಟಿಂಗ್​ ಅಂಕ

9. ಬಾಂಗ್ಲಾದೇಶ-17 ಪಂದ್ಯ, 53 ರೇಟಿಂಗ್​ ಅಂಕ

10. ಜಿಂಬಾಬ್ವೆ-2 ಪಂದ್ಯ, 23 ರೇಟಿಂಗ್​ ಅಂಕ

ಇದನ್ನೂ ಓದಿ IPL 2024 Points Table: ರೋಚಕ 1 ರನ್ ಗೆಲುವು ಸಾಧಿಸಿ ಅಂಕಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಿದ ಹೈದರಾಬಾದ್​

ಅಗ್ರಸ್ಥಾನದಲ್ಲೇ ಮುಂದುವರಿದ ಸೂರ್ಯ


ಬುಧವಾರ ಪ್ರಕಟಗೊಂಡಿದ್ದ ಐಸಿಸಿ ನೂತನ ಟಿ20(T20 Rankings) ಬ್ಯಾಟಿಂಗ್​ ಶ್ರೇಯಾಂಕ ಪಟ್ಟಿಯಲ್ಲಿ ಪಾಕಿಸ್ತಾನ ತಂಡದ ನಾಯಕ ಬಾಬರ್​ ಅಜಂ(babar azam) ಒಂದು ಸ್ಥಾನಗಳ ಪ್ರಗತಿ ಸಾಧಿಸಿದ್ದರು. ಟೀಮ್​ ಇಂಡಿಯಾದ ಸೂರ್ಯಕುಮಾರ್​ ಯಾದವ್(861 ರೇಟಿಂಗ್​ ಅಂಕ)​ ತಮ್ಮ ಅಗ್ರಸ್ಥಾನದಲ್ಲೇ ಮುಂದುವರಿದಿದ್ದಾರೆ.

ಬಾಬರ್​ ನ್ಯೂಜಿಲ್ಯಾಂಡ್​ ವಿರುದ್ಧದ ತವರಿನ ಟಿ20 ಪಂದ್ಯದಲ್ಲಿ ಆಡಿದ ನಾಲ್ಕು ಇನಿಂಗ್ಸ್​ಗಳಿಂದ ಒಂದು ಅರ್ಧಶತಕ ಮತ್ತು ಒಳಗೊಂಡಂತೆ ಒಟ್ಟು 125 ರನ್​ ಬಾರಿಸಿದ್ದರು. ಇದು ಬ್ಯಾಟರ್‌ಗಳಿಗಾಗಿ ನವೀಕರಿಸಿದ ಟಿ20 ಶ್ರೇಯಾಂಕಗಳ ಪಟ್ಟಿಯಲ್ಲಿ ಬಾಬರ್ ಒಂದು ಸ್ಥಾನವನ್ನು ಸುಧಾರಿಸಲು ನೆರವಾಯಿತು. ಬಾಬರ್​ 10 ರೇಟಿಂಗ್​ ಅಂಗಳ ಪ್ರಗತಿಯೊಂದಿಗೆ ಸದ್ಯ 763 ರೇಟಿಂಗ್​ ಅಂಕ ಗಳಿಸಿ ನಾಲ್ಕನೇ ಸ್ಥಾನದಲ್ಲಿದ್ದಾರೆ.

ಸರಿ ಸುಮಾರು ಒಂದು ವರ್ಷಕ್ಕಿಂತಲೂ ಅಧಿಕವಾಗಿ ಟಿ20 ಬ್ಯಾಟಿಂಗ್​ ಶ್ರೇಯಾಂಕದಲ್ಲಿ ನಂ.1 ಸ್ಥಾನ ಕಾಯ್ದುಕೊಂಡಿರುವ ಟೀಮ್​ ಇಂಡಿಯಾದ ಹಾರ್ಡ್​ ಹಿಟ್ಟರ್​ ಸೂರ್ಯಕುಮಾರ್​ ಯಾದವ್​(suryakumar yadav) ಈ ಬಾರಿಯೂ ಅಗ್ರಸ್ಥಾನದಲ್ಲೇ ಮುಂದುವರಿಸಿದ್ದಾರೆ. ಆಸೀಸ್​ ವಿರುದ್ಧದ ಟಿ20 ಸರಣಿಯಲ್ಲಿ ನಾಯಕನಾಗಿ ತಂಡವನ್ನು ಮುನ್ನಡೆಸಿದ ಅವರು ತಮ್ಮ ಚೊಚ್ಚಲ ನಾಯಕತ್ವದಲ್ಲ ಭಾರತಕ್ಕೆ ಟಿ20 ಸರಣಿಯನ್ನು ಗೆದ್ದು ಕೊಟ್ಟ ಸಾಧನೆ ಮಾಡಿದ್ದರು. ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ ಗಾಯಗೊಂಡು ಬಳಿಕ ಯಾವುದೇ ಸರಣಿ ಆಡಿಲ್ಲ. ಇದೇ ಜೂನ್​ನಲ್ಲಿ ನಡೆಯುವ ಟಿ20 ವಿಶ್ವಕಪ್​ ಕಪ್​ ಮೂಲಕ ಮತ್ತೆ ಅಂತಾರಾಷ್ಟ್ರೀಯ ಕ್ರಿಕೆಟ್​ ಆಡಲಿದ್ದಾರೆ.

Continue Reading

ಕ್ರೀಡೆ

Hockey India: ಭಾರತ ಮಹಿಳಾ ಹಾಕಿ ತಂಡಕ್ಕೆ 22 ವರ್ಷದ ಸಲೀಮಾ ನೂತನ ನಾಯಕಿ

Hockey India: ಸಲೀಮಾ ಟೇಟೆ ಇತ್ತೀಚೆಗಷ್ಟೇ ವರ್ಷದ ಆಟಗಾರ್ತಿ ಗೌರವಕ್ಕೆ ಪಾತ್ರರಾಗಿದ್ದರು. ಇದೀಗ ನಾಯಕಿಯಾಗಿ ಅವರಿಗೆ ಎಫ್‌ಐಎಚ್‌ ಪ್ರೊ ಲೀಗ್‌ ಮೊದಲ ಅಗ್ನಿಪರೀಕ್ಷೆಯಾಗಿದೆ.

VISTARANEWS.COM


on

Hockey India
Koo

ನವದೆಹಲಿ: ಮುಂಬರುವ ಬೆಲ್ಜಿಯಂ ಮತ್ತು ಇಂಗ್ಲೆಂಡ್‌ ಲೆಗ್‌ನ ಎಫ್‌ಐಎಚ್‌ ಪ್ರೊ ಲೀಗ್‌ ಹಾಕಿ ಪಂದ್ಯಾವಳಿಗಾಗಿ ಭಾರತ ಮಹಿಳಾ ಹಾಕಿ(Hockey India) ತಂಡ ಪ್ರಕಟಗೊಂಡಿದೆ. ಜತೆಗೆ ನಾಯಕತ್ವದಲ್ಲಿಯೂ ಬದಲಾವಣೆ ಸಂಭವಿಸಿದೆ. ಅನುಭವಿ ಗೋಲ್‌ಕೀಪರ್‌ ಸವಿತಾ ಪುನಿಯಾ(Savita Punia) ಬದಲು 22 ವರ್ಷದ ಮಿಡ್‌ ಫೀಲ್ಡರ್‌ ಸಲೀಮಾ ಟೇಟೆ(Salima Tete) ಅವರಿಗೆ ನಾಯಕತ್ವದ ಜವಾಬ್ದಾರಿ ವಹಿಸಲಾಗಿದೆ. ನವನೀತ್‌ ಕೌರ್‌(Navneet Kaur) ಉಪನಾಯಕಿಯಾಗಿದ್ದಾರೆ.

ರಾಣಿ ರಾಮ್​ಪಾಲ್​ ಅನುಪಸ್ಥಿತಿಯಲ್ಲಿ ಕಳೆದ ಕೆಲ ವರ್ಷಗಳಿಂದ ಸವಿತಾ ಪುನಿಯಾ ಭಾರತ ತಂಡವನ್ನು ಮುನ್ನಡೆಸುತ್ತಿದ್ದರು. ಆದರೆ, ಇವರ ನಾಯಕತ್ವದಲ್ಲಿ ಭಾರತ ಒಲಿಂಪಿಕ್‌ ಅರ್ಹತಾ ಸುತ್ತಿನ ಸ್ಪರ್ಧೆ ಹಾಗೂ ತವರಿನ ಪ್ರೊ ಲೀಗ್‌ ಪಂದ್ಯಗಳಲ್ಲಿ ನಿರಾಶಾದಾಯಕ ಪ್ರದರ್ಶನ ನೀಡಿತ್ತು. ಹೀಗಾಗಿ ಯುವ ಆಟಗಾರ್ತಿಗೆ ನಾಯಕತ್ವದ ಹೊಣೆ ನೀಡಲಾಗಿದೆ. ನಾಯಕತ್ವದಿಂದ ಮುಕ್ತರಾದರೂ ಕೂಡ ಸವಿತಾ ಪುನಿಯಾ ಪ್ರಧಾನ ಗೋಲ್​ ಕೀಪರ್ ಆಗಿ ತಂಡದಲ್ಲಿ ಮುಂದುವರಿದಿದ್ದಾರೆ.

ಸಲೀಮಾ ಟೇಟೆ ಇತ್ತೀಚೆಗಷ್ಟೇ ವರ್ಷದ ಆಟಗಾರ್ತಿ ಗೌರವಕ್ಕೆ ಪಾತ್ರರಾಗಿದ್ದರು. ಇದೀಗ ನಾಯಕಿಯಾಗಿ ಅವರಿಗೆ ಎಫ್‌ಐಎಚ್‌ ಪ್ರೊ ಲೀಗ್‌ ಮೊದಲ ಅಗ್ನಿಪರೀಕ್ಷೆಯಾಗಿದೆ. ನಾಯಕತ್ವದ ಬದಲಾವಣೆ ಮಾತ್ರವಲ್ಲದೆ ಡಿಫೆಂಡರ್‌ ಗುರ್ಜಿತ್‌ ಕೌರ್‌, ಮಿಡ್‌ ಫೀಲ್ಡರ್‌ಗಳಾದ ಸೋನಿಕಾ, ನಿಶಾ, ಸ್ಟ್ರೈಕರ್‌ ಬ್ಯೂಟಿ ಡುಂಗ್‌ಡುಂಗ್‌ ಅವರನ್ನು ಈ ಟೂರ್ನಿಗೆ ಕೈಬಿಡಲಾಗಿದೆ. ಇವರ ಬದಲು ಮಹಿಮಾ ಚೌಧರಿ, ಮನೀಷಾ ಚೌಹಾಣ್‌, ಪ್ರೀತಿ ದುಬೆ ಮತ್ತು ದೀಪಿಕಾ ಸೊರೆಂಗ್‌ ಅವಕಾಶ ಪಡೆದಿದ್ದಾರೆ.

ಇದನ್ನೂ ಓದಿ Hockey India: ಹಾಕಿ ಇಂಡಿಯಾಗೆ ಅತ್ಯುತ್ತಮ ಸಂಘಟಕ ರಾಷ್ಟ್ರ ಪ್ರಶಸ್ತಿ

ಬೆಲ್ಜಿಯಂ ಆವೃತ್ತಿಯ ಪಂದ್ಯಗಳು ಮೇ 22ರಿಂದ ಮೇ 26ರ ತನಕ; ಇಂಗ್ಲೆಂಡ್‌ ಆವೃತ್ತಿಯ ಪಂದ್ಯಗಳು ಜೂನ್​ 1ರಿಂದ ಜೂನ್​ 9ರ ತನಕ ನಡೆಯಲಿದೆ. ಲಂಡನ್‌ನಲ್ಲಿ ಆಡಲಾಗುವ ಪಂದ್ಯಗಳಲ್ಲಿ ಗ್ರೇಟ್‌ ಬ್ರಿಟನ್‌ ಮತ್ತು ಜರ್ಮನಿ ವಿರುದ್ಧ ಭಾರತ ಸೆಣಸಲಿದೆ.

ಭಾರತ ತಂಡ

ಡಿಫೆಂಡರ್: ನಿಕ್ಕಿ ಪ್ರಧಾನ್‌, ಉದಿತಾ, ಇಶಿಕಾ ಚೌಧರಿ, ಮೋನಿಕಾ, ಜ್ಯೋತಿ ಛತ್ರಿ, ಮಹಿಮಾ ಚೌಧರಿ.

ಮಿಡ್‌ ಫೀಲ್ಡರ್: ಸಲೀಮಾ ಟೇಟೆ (ನಾಯಕಿ), ನವನೀತ್‌ ಕೌರ್‌ (ಉಪನಾಯಕಿ), ವೈಷ್ಣವಿ ವಿಠuಲ್‌ ಫಾಲ್ಕೆ, ನೇಹಾ, ಜ್ಯೋತಿ, ಬಲ್‌ಜೀತ್‌ ಕೌರ್‌, ಮನೀಷಾ ಚೌಹಾಣ್‌, ಲಾಲ್ರೆಮಿಯಾಮಿ.

ಫಾರ್ವರ್ಡ್ಸ್‌: ಮುಮ್ತಾಜ್‌ ಖಾನ್‌, ಸಂಗೀತಾ ಕುಮಾರಿ, ದೀಪಿಕಾ, ಶರ್ಮಿಳಾ ದೇವಿ, ಪ್ರೀತಿ ದುಬೆ, ವಂದನಾ ಕಟಾರಿಯಾ, ಸುನೇಲಿಟಾ ಟೋಪೊ, ದೀಪಿಕಾ ಸೊರೆಂಗ್‌.

ಗೋಲ್‌ಕೀಪರ್: ಸವಿತಾ ಪುನಿಯಾ, ಬಿಚು ದೇವಿ ಖರಿಬಾಮ್‌.

Continue Reading

ಕ್ರೀಡೆ

Devon Thomas: ಟಿ20 ವಿಶ್ವಕಪ್​ಗೂ ಮುನ್ನ ವಿಂಡೀಸ್​ ಬ್ಯಾಟರ್​ಗೆ 5 ವರ್ಷ ನಿಷೇಧ ಹೇರಿದ ಐಸಿಸಿ

Devon Thomas: ವಿಂಡೀಸ್​ ಪರ 2009 ರಿಂದ 2022 ರವರೆಗೆ ಮೂರು ಮಾದರಿಯ ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಆಡಿರುವ ಥಾಮಸ್ ಒಟ್ಟು 34(1 ಟೆಸ್ಟ್​, 21 ಏಕದಿನ, 12 ಟಿ20) ಪಂದ್ಯಗಳನ್ನು ಆಡಿ 320 ರನ್​ ಗಳಿಸಿದ್ದಾರೆ. 2022ರಲ್ಲಿ ಆಸ್ಟ್ರೇಲಿಯಾ ಮತ್ತು ನ್ಯೂಜಿಲ್ಯಾಂಡ್​ ವಿರುದ್ಧ ಕೊನೆಯ ಬಾರಿ ಟೆಸ್ಟ್​ ಮತ್ತು ಏಕದಿನ ಪಂದ್ಯಗಳನ್ನಾಡಿದ್ದರು.

VISTARANEWS.COM


on

Devon Thomas
Koo

ದುಬೈ: ವೆಸ್ಟ್​ ಇಂಡೀಸ್​(West Indies) ತಂಡದ ಡೆವೊನ್ ಥಾಮಸ್(Devon Thomas) ಅವರನ್ನು ಐದು ವರ್ಷಗಳ ಕಾಲ ಕ್ರಿಕೆಟ್‌ನಿಂದ ನಿಷೇಧಿಸಲಾಗಿದೆ. ಭ್ರಷ್ಟಾಚಾರ ವಿರೋಧಿ ನಿಯಮಗಳ ಏಳು ಉಲ್ಲಂಘನೆಗಳನ್ನು ಒಪ್ಪಿಕೊಂಡ ಬಳಿಕ ಎಂದು ಅಂತರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್(ICC) ಈ ನಿರ್ಧಾರ ಕೈಗೊಂಡಿದೆ. ಈ ಶಿಕ್ಷೆಯು ಒಂದು ವರ್ಷ ಪೂರ್ವಾನ್ವಯವಾಗಿದೆ ಎಂದು ಪರಿಗಣಿಸಲಾಗಿದೆ ಎಂದು ಐಸಿಸಿ ತಿಳಿಸಿದೆ.

ವಿಂಡೀಸ್​ ಪರ 2009 ರಿಂದ 2022 ರವರೆಗೆ ಮೂರು ಮಾದರಿಯ ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಆಡಿರುವ ಥಾಮಸ್ ಒಟ್ಟು 34(1 ಟೆಸ್ಟ್​, 21 ಏಕದಿನ, 12 ಟಿ20) ಪಂದ್ಯಗಳನ್ನು ಆಡಿ 320 ರನ್​ ಗಳಿಸಿದ್ದಾರೆ. 2022ರಲ್ಲಿ ಆಸ್ಟ್ರೇಲಿಯಾ ಮತ್ತು ನ್ಯೂಜಿಲ್ಯಾಂಡ್​ ವಿರುದ್ಧ ಕೊನೆಯ ಬಾರಿ ಟೆಸ್ಟ್​ ಮತ್ತು ಏಕದಿನ ಪಂದ್ಯಗಳನ್ನಾಡಿದ್ದರು.

34 ವರ್ಷದ ಥಾಮಸ್, ಕೆರಿಬಿಯನ್ ಪ್ರೀಮಿಯರ್ ಲೀಗ್, ಲಂಕಾ ಪ್ರೀಮಿಯರ್ ಲೀಗ್ ಮತ್ತು ಅಬುಧಾಬಿ ಟಿ10 ಎಂಬ ಮೂರು ಪ್ರತ್ಯೇಕ ಪಂದ್ಯಾವಳಿಗಳಲ್ಲಿ ಅಪರಾಧಗಳನ್ನು ಮಾಡಿದ್ದಾರೆ ಎಂದು ತಿಳಿದುಬಂದಿದೆ. ಇದರಲ್ಲಿ ಶ್ರೀಲಂಕಾ ಮೂಲದ ಪಂದ್ಯಾವಳಿಯಲ್ಲಿ ಮ್ಯಾಚ್-ಫಿಕ್ಸಿಂಗ್ ಯತ್ನಗಳಲ್ಲಿ ಭಾಗಿಯಾಗಲು ಸಂಚು ರೂಪಿಸಿದ್ದಕ್ಕಾಗಿ ತಾನು ತಪ್ಪಿತಸ್ಥನೆಂದು ಒಪ್ಪಿಕೊಂಡಿರುವುದು ತಿಳಿದುಬಂದಿದೆ.

ಸ್ಯಾಮುಯೆಲ್ಸ್​ಗೆ 6 ವರ್ಷ ನಿಷೇಧ

ಭ್ರಷ್ಟಾಚಾರ ನಿಗ್ರಹ ನೀತಿ ಸಂಹಿತೆಯನ್ನು ಉಲ್ಲಂಘಿಸಿದ ಆರೋಪದ ಮೇಲೆ ವೆಸ್ಟ್ ಇಂಡೀಸ್​ ತಂಡದ ಮಾಜಿ ಆಟಗಾರ ಮರ್ಲಾನ್ ಸ್ಯಾಮುಯೆಲ್ಸ್(Marlon Samuels) ಅವರನ್ನು ಆರು ವರ್ಷಗಳ ಕಾಲ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಎಲ್ಲ ಮಾದರಿಯ ಕ್ರಿಕೆಟ್‌ನಿಂದ ಕಳೆದ ವರ್ಷ ನಿಷೇಧಿಸಿತ್ತು.

2016ರಲ್ಲಿ ನಡೆದ ಟಿ20 ವಿಶ್ವಕಪ್ ಟೂರ್ನಿಯಲ್ಲಿ ವೆಸ್ಟ್ ಇಂಡೀಸ್ ತಂಡ ಚಾಂಪಿಯನ್​ ಪಟ್ಟ ಅಲಂಕರಿಸುವಲ್ಲಿ ಸ್ಯಾಮುಯೆಲ್ಸ್ ಪ್ರಧಾನ ಪಾತ್ರವಹಿಸಿದ್ದರು. ಬೌಲಿಂಗ್ ಮತ್ತು ಬ್ಯಾಟಿಂಗ್​ ಸಾಹಸದಿಂದ ವಿಂಡೀಸ್​ ಕಪ್​ ಗೆದ್ದಿತ್ತು. ಇದೀಗ ಎಮಿರೇಟ್ಸ್ ಕ್ರಿಕೆಟ್ ಮಂಡಳಿಯ ಭ್ರಷ್ಟಾಚಾರ ವಿರೋಧಿ ಸಂಹಿತೆಯನ್ನು ಉಲ್ಲಂಘಿಸಿದ ಆರೋಪದಡಿಯಲ್ಲಿ ಅವರನ್ನು ಎಲ್ಲ ಮಾದರಿಯ ಕ್ರಿಕೆಟ್‌ನಿಂದ ನಿಷೇಧಿಸಲಾಗಿದೆ. ಸ್ಯಾಮುಯೆಲ್ಸ್ ವಿರುದ್ಧ ಸೆಪ್ಟೆಂಬರ್ 2021 ರಲ್ಲಿ ಒಟ್ಟು ನಾಲ್ಕು ಆರೋಪಗಳನ್ನು ಹೊರಿಸಲಾಗಿತ್ತು. ಈ ವರ್ಷದ ಆಗಸ್ಟ್​ನಲ್ಲಿ ಅಪರಾಧಗಳಲ್ಲಿ ಅವರು ತಪ್ಪಿತಸ್ಥರೆಂದು ಕಂಡುಬಂದಿದೆ. ಹೀಗಾಗಿ ಅವರಿಗೆ 6 ವರ್ಷಗಳ ಕಾಲ ಕ್ರಿಕೆಟ್​ ನಿಷೇಧ ಹೇರಲಾಗಿತ್ತು.

ಇದನ್ನೂ ಓದಿ IPL 2024 Points Table: ರೋಚಕ 1 ರನ್ ಗೆಲುವು ಸಾಧಿಸಿ ಅಂಕಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಿದ ಹೈದರಾಬಾದ್​

2020ರಲ್ಲಿ ಸ್ಯಾಮುಯೆಲ್ಸ್ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದರು. ನಿವೃತ್ತಿ ಘೋಷಿಸಿದ ಬಳಿಕ ಅವರು ಬೇರೆ ದೇಶಗಳಲ್ಲಿ ನಡೆಯುವ ಲೀಗ್​ ಕ್ರಿಕೆಟ್​ಗಳಲ್ಲಿ ಆಟ ಮುಂದುವರಿಸಿದ್ದರು. 43 ವರ್ಷದ ಸ್ಯಾಮುಯೆಲ್ಸ್ ಅವರು 11,000 ಅಂತಾರಾಷ್ಟ್ರೀಯ ರನ್​ಗಳನ್ನು ಗಳಿಸಿದ್ದಾರೆ. ವಿಂಡೀಸ್​ ಪರ 207 ಏಕದಿನ ಪಂದ್ಯಗಳನ್ನು ಆಡಿದ ಅವರು 75.12 ಸ್ಟ್ರೈಕ್​ರೇಟ್​ನಲ್ಲಿ 5606 ರನ್​ ಬಾರಿಸಿದ್ದಾರೆ. ಇದರಲ್ಲಿ 10 ಶತಕ ಮತ್ತು 30 ಅಧರ್ಶತಕ ಒಳಗೊಂಡಿದೆ. 133 ರನ್​ ಗರಿಷ್ಠ ವೈಯಕ್ತಿಕ ಮೊತ್ತವಾಗಿದೆ. 89 ವಿಕೆಟ್​ ಕೂಡ ಪಡೆದಿದ್ದಾರೆ. ಇನ್ನು 71 ಟೆಸ್ಟ್​ ಪಂದ್ಯಗಳಿಂದ 3917, ರನ್​ 7 ಶತಕ, 1 ದ್ವಿಶತಕ ಮತ್ತು 24 ಅರ್ಧಶತಕ ಬಾರಿಸಿದ್ದಾರೆ. 41 ವಿಕೆಟ್​ ಕಲೆಹಾಕಿದ್ದಾರೆ. ಟಿ20 ಕ್ರಿಕೆಟ್​ನಲ್ಲಿ 67 ಪಂದ್ಯ ಆಡಿ 1611 ರನ್​ ಮತ್ತು 22 ವಿಕೆಟ್​ ಉರುಳಿಸಿದ್ದಾರೆ.

Continue Reading

ಕ್ರೀಡೆ

MS Dhoni: ಈಡೇರಿದ ಶತಾಯುಷಿ ಅಭಿಮಾನಿಯ ಆಸೆ; ಧೋನಿ ಭೇಟಿಯಾಗಿ ವಿಶೇಷ ಉಡುಗೊರೆ ಪಡೆದ ರಾಮದಾಸ್

MS Dhoni: ಧೋನಿಯ(MS Dhoni) ಅಪಟ್ಟ ಅಭಿಮಾನಿಯಾಗಿರುವ 103 ವರ್ಷದ(103-year-old CSK fan) ಎಸ್ ರಾಮದಾಸ್(S Ramdas) ಅವರು ಕೊನೆಗೂ ತಮ್ಮ ಬಯಕೆಯಂತೆ ಧೋನಿ ಅವರನ್ನು ಭೇಟಿ ಮಾಡಿದ್ದಾರೆ. ಇದೇ ವೇಳೆ ಧೋನಿ ಈ ಶತಾಯುಷಿ ಅಭಿಮಾನಿಗೆ ವಿಶೇಷ ಉಡುಗೊರೆಯೊಂದನ್ನು ನೀಡಿದ್ದಾರೆ.

VISTARANEWS.COM


on

MS Dhoni
Koo

ಚೆನ್ನೈ: ಚೆನ್ನೈ ಸೂಪರ್​ ಕಿಂಗ್ಸ್(Chennai Super Kings)​ ಹಾಗೂ ಮಹೇಂದ್ರ ಸಿಂಗ್​ ಧೋನಿಯ(MS Dhoni) ಅಪಟ್ಟ ಅಭಿಮಾನಿಯಾಗಿರುವ 103 ವರ್ಷದ(103-year-old CSK fan) ಎಸ್ ರಾಮದಾಸ್(S Ramdas) ಅವರು ಕೊನೆಗೂ ತಮ್ಮ ಬಯಕೆಯಂತೆ ಧೋನಿ ಅವರನ್ನು ಭೇಟಿ ಮಾಡಿದ್ದಾರೆ. ಇದೇ ವೇಳೆ ಧೋನಿ ಈ ಶತಾಯುಷಿ ಅಭಿಮಾನಿಗೆ ವಿಶೇಷ ಉಡುಗೊರೆಯೊಂದನ್ನು ನೀಡಿದ್ದಾರೆ. ಈ ವಿಡಿಯೊವನ್ನು ಚೆನ್ನೈ ಸೂಪರ್​ ಕಿಂಗ್ಸ್​ ಫ್ರಾಂಚೈಸಿ ತನ್ನ ಅಧಿಕೃತ ಟ್ವಿಟರ್​ ಎಕ್ಸ್​ನಲ್ಲಿ ಹಂಚಿಕೊಂಡಿದೆ.

ಕೆಲವು ದಿನಗಳ ಹಿಂದೆ ಎಸ್ ರಾಮದಾಸ್ ಅವರು ಮಗನ ಬಳಿ ಮಾತನಾಡುವ ವೇಳೆ, ಚೆನ್ನೈ ಸೂಪರ್ ಕಿಂಗ್ಸ್​ನ ಪಂದ್ಯ ಮತ್ತು ಧೋನಿಯನ್ನು ನೋಡಲು ರಾಜಧಾನಿ ದೆಹಲಿಯವರೆಗೂ ನಡೆದುಕೊಂಡು ಹೋಗಲು ಸಿದ್ಧ ಎಂದು ಹೇಳಿದ್ದರು. ಧೋನಿಯನ್ನು ಮತ್ತು ಚೆನ್ನೈ ಪಂದ್ಯವನ್ನು ನೋಡುವ ಅಪ್ಪನ ಈ ಬಯಕೆಯನ್ನು ಈಡೇರಿಸುವುದಾಗಿ ಮಗ ಮಾತು ಕೊಟ್ಟಿದ್ದರು. ಚೆನ್ನೈನಲ್ಲಿ ನಡೆಯುವ ಪಂದ್ಯದ ಟಿಕೆಟ್​ ಖರೀದಿಸಿ ಪಂದ್ಯ ತೋರಿಸುತ್ತೇನೆ ಎಂದು ಹೇಳಿದ್ದರು. ಕೊಟ್ಟ ಮಾತಿನಂತೆ ಮಗ ಅಪ್ಪನಿಗೆ ಚೆಪಾಕ್​ನಲ್ಲಿ ನಡೆದ ಚೆನ್ನೈ ಮತ್ತು ಪಂಜಾಬ್​ ವಿರುದ್ಧದ ಪಂದ್ಯಕ್ಕೆ ಕರೆದುಕೊಂಡು ಹೋಗಿದ್ದಾರೆ.

ಪಂದ್ಯ ಮುಕ್ತಾಯಕ ಬಳಿಕ ಈ ವಿಶೇಷ ಅಭಿಮಾನೊಯನ್ನು ಧೋನಿ ಡ್ರೆಸ್ಸಿಂಗ್​ ರೋಮ್​ನಲ್ಲಿ ಭೇಟಿಯಾಗಿದ್ದಾರೆ. ಧೋನಿ ತಮ್ಮ ಜೆರ್ಸಿಯಲ್ಲಿ “ನಿಮ್ಮ ಈ ಬೆಂಬಲಕ್ಕೆ ಧನ್ಯವಾದಗಳು ತಾತ” ಎಂದು ಬರೆದು ತಮ್ಮ ಹಸ್ತಾಕ್ಷರ ಹಾಕಿ ಜೆರ್ಸಿಯನ್ನು ರಾಮದಾಸ್​ಗೆ ನೀಡಿದ್ದಾರೆ. ಇದೇ ವೇಳೆ ರಾಮದಾಸ್ ನಿಮ್ಮನ್ನು ನೋಡಿ ತುಂಬಾ ಖಷಿಯಾಯಿತು. ನೀವೊಬ್ಬರು ಗ್ರೇಟ್​ ಕ್ರಿಕೆಟರ್​ ಎಂದು ಹಾರೈಸಿದರು. ರಾಮ್​ದಾಸ್​ ಜತೆ ಅರ ಪತ್ನಿಯೂ ಜತೆಗಿದ್ದರು. ಚೆನ್ನೈ ಫ್ರಾಂಚೈಸಿ ವತಿಯಿಂದ ರಾಮದಾಸ್ 103 ಎಂದು ಬರೆದ ಚೆನ್ನೈ ತಂಡದ ಜೆರ್ಸಿಯನ್ನು ವಿಶೇಷ ಉಡುಗೊರೆಯಾಗಿ ನೀಡಲಾಯಿತು.

ಇದನ್ನೂ ಓದಿ IPL 2024 Points Table: ರೋಚಕ 1 ರನ್ ಗೆಲುವು ಸಾಧಿಸಿ ಅಂಕಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಿದ ಹೈದರಾಬಾದ್​

ಬ್ರಿಟಿಷ್ ಮಿಲಿಟರಿಯ ಸೈನ್ಯದ ಭಾಗವಾಗಿದ್ದ ರಾಮದಾಸ್ ಕ್ರಿಕೆಟ್ ಆಡಲು ಹೆದರುತ್ತಿದ್ದರಂತೆ. ಆದರೆ ಸಿಎಸ್‌ಕೆ ಜರ್ಸಿ ಧರಿಸಿ ಟಿವಿ ಮುಂದೆ ಕುಳಿತು ಐಪಿಎಲ್ ಆಟವನ್ನು ನೋಡಲು ಇಷ್ಟಪಡುತ್ತೇನೆ. ಒಮ್ಮೆಯಾದರೂ ಧೋನಿಯನ್ನು ಭೇಟಿಯಾಗಬೇಕು ಎಂದು ಹೇಳಿದ್ದ ವಿಡಿಯೊವನ್ನು ಕೂಡ ಚೆನ್ನೈ ಫ್ರಾಂಚೈಸಿ ಟ್ವಿಟರ್​ ಎಕ್ಸ್​ನಲ್ಲಿ ಹಂಚಿಕೊಂಡಿತ್ತು.

ಧೋನಿ ಎಂದರೆ ಅಭಿಮಾನಿಗಳಿಗೊಂದು ಎಮೋಷನ್ (ಭಾವನೆ). ಅವರು ಅಪಾರ ಸಂಖ್ಯೆಯ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಕಳೆದ ವರ್ಷವೇ ಧೋನಿ ಅವರು ಐಪಿಎಲ್​ಗೆ ವಿದಾಯ ಹೇಳಲು ನಿರ್ಧರಿಸಿದ್ದರು. ಆದರೆ ಅಭಿಮಾನಿಗಳ ಒತ್ತಾಯದ ಮೇರೆಗೆ ತಮ್ಮ ನಿವೃತ್ತಿಯನ್ನು ಮುಂದೆ ಹಾಕಿದ್ದರು. ಈ ಬಾರಿಯ ಟೂರ್ನಿ ಅವರಿಗೆ ವಿದಾಯದ ಟೂರ್ನಿಯಾಗಲಿದೆ. ಈ ಮೂಲಕ ಧೋನಿ ಎಲ್ಲ ಮಾದರಿಯ ಕ್ರಿಕಟ್​ಗೂ ಗುಡ್​ಬೈ ಹೇಳಲಿದ್ದಾರೆ. ಹೀಗಾಗಿ ಧೋನಿ ಅವರ ಬ್ಯಾಟಿಂಗ್​ ಕುಣ್ತುಂಬಿಕೊಳ್ಳಲು ಅವರ ಅಭಿಮಾನಿಗಳು ಪ್ರತಿ ಪಂದ್ಯದ ವೇಳೆಯೂ ಬಹಳ ನಿರೀಕ್ಷೆಯಿಂದ ಕಾಯುತ್ತಿರುತ್ತಾರೆ.

Continue Reading
Advertisement
icc men's test team rankings
ಕ್ರೀಡೆ1 min ago

ICC Men’s Test Team Rankings: ಅಗ್ರಸ್ಥಾನದಿಂದ ಕುಸಿತ ಕಂಡ ಭಾರತ; ವಿಶ್ವ ಚಾಂಪಿಯನ್​ ಆಸೀಸ್​ ನಂ.1

Bengaluru Rains
ಮಳೆ5 mins ago

Bengaluru Rains : ಬೆಂಗಳೂರಲ್ಲಿ ಶುರುವಾಯ್ತು ಮಳೆಗಾಲ; ಕವಿದ ಕಾರ್ಮೋಡ, ಭಯಂಕರ ವರ್ಷಧಾರೆ

Press Freedom Day
Latest11 mins ago

Press Freedom Day: ಇಂದು ಪತ್ರಿಕಾ ಸ್ವಾತಂತ್ರ್ಯ ದಿನ; ಏನಿದರ ಮಹತ್ವ?

Job Alert
ಉದ್ಯೋಗ20 mins ago

Job Alert: 76 ಮೋಟಾರ್ ವೆಹಿಕಲ್ ಇನ್ಸ್​ಪೆಕ್ಟರ್ ಹುದ್ದೆಗಳಿಗೆ ಇಂದೇ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ

Prajwal Revanna Case Another case against Revanna transferred to SIT Notice to Bhavani
ಕ್ರೈಂ1 hour ago

Prajwal Revanna Case: ರೇವಣ್ಣ ಮೇಲಿನ ಮತ್ತೊಂದು ಕೇಸ್‌ ಎಸ್‌ಐಟಿಗೆ ವರ್ಗ; ಭವಾನಿಗೂ ನೋಟಿಸ್‌!

Narendra Modi
Lok Sabha Election 20241 hour ago

Narendra Modi: ಅಮೇಥಿ ಬದಲು ರಾಯ್‌ ಬರೇಲಿಯಿಂದ ರಾಹುಲ್‌ ಗಾಂಧಿ ಸ್ಪರ್ಧೆ; ಓಡಬೇಡಿ ಎಂದು ವ್ಯಂಗ್ಯವಾಡಿದ ಮೋದಿ

Helicopter Crash
ದೇಶ1 hour ago

Helicopter Crash: ಶಿವಸೇನೆ ನಾಯಕಿ ಪ್ರಯಾಣಿಸಬೇಕಿದ್ದ ಹೆಲಿಕಾಪ್ಟರ್‌ ಪತನ;ವಿಡಿಯೋ ವೈರಲ್‌

Murder case
ಕ್ರೈಂ2 hours ago

Murder case : ಹುಬ್ಬಳ್ಳಿ, ಬೆಂಗಳೂರಲ್ಲಿ ಅಪರಿಚಿತ ಶವ ಪತ್ತೆ; ಹಂತಕರ ಬೆನ್ನಿಗೆ ಬಿದ್ದ ಖಾಕಿ ಪಡೆ

Hockey India
ಕ್ರೀಡೆ2 hours ago

Hockey India: ಭಾರತ ಮಹಿಳಾ ಹಾಕಿ ತಂಡಕ್ಕೆ 22 ವರ್ಷದ ಸಲೀಮಾ ನೂತನ ನಾಯಕಿ

Prajwal Revanna Case Revanna withdraws anticipatory bail plea
ಕ್ರೈಂ2 hours ago

Prajwal Revanna Case: ನಿರೀಕ್ಷಣಾ ಜಾಮೀನು ಅರ್ಜಿ ಹಿಂಪಡೆದ ರೇವಣ್ಣ; ವಾಪಸ್‌ ಪಡೆಯಲು ಕೋರ್ಟ್‌ ಹೇಳಿದ್ದೇಕೆ?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ10 hours ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ20 hours ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ1 day ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ3 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20244 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20244 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ4 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20245 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20245 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20245 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

ಟ್ರೆಂಡಿಂಗ್‌