Blind Cricket Aus v/s Nz | ಏಕದಿನ ಪಂದ್ಯದಲ್ಲಿ ದಾಖಲೆ ಬರೆದ ಸ್ಟೀಫನ್‌ ನೀರೋ ತ್ರಿಶತಕ - Vistara News

ಕ್ರಿಕೆಟ್

Blind Cricket Aus v/s Nz | ಏಕದಿನ ಪಂದ್ಯದಲ್ಲಿ ದಾಖಲೆ ಬರೆದ ಸ್ಟೀಫನ್‌ ನೀರೋ ತ್ರಿಶತಕ

Blind Cricket Aus v/s Nz | ಆಸ್ಟ್ರೇಲಿಯಾದ ಸ್ಟೀಫನ್‌ ನೀರೋ ಏಕದಿನ ಕ್ರಿಕೆಟ್ ಪಂದ್ಯದಲ್ಲಿ ತ್ರಿಶತಕ ಬಾರಿಸುವ ಮೂಲಕ ವಿಶ್ವ ದಾಖಲೆ ಬರೆದಿದ್ದಾರೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಅಂತಾರಾಷ್ಟ್ರೀಯ ಅಂಧರ ಏಕದಿನ ಕ್ರಿಕೆಟ್‌ (Blind Cricket) ಆಟದಲ್ಲಿ ಆಸ್ಟ್ರೇಲಿಯಾದ ಸ್ಟೀಫನ್‌ ನೀರೋ ತ್ರಿಶತಕ ಬಾರಿಸಿ ವಿಶ್ವ ದಾಖಲೆ ಬರೆದಿದ್ದಾರೆ. ನ್ಯೂಜಿಲೆಂಡ್‌ ಹಾಗೂ ಆಸ್ಟ್ರೇಲಿಯಾ ನಡುವಿನ 3 ಪಂದ್ಯಗಳ ಏಕದಿನ ಸರಣಿಯ ಮೊದಲನೇ ಪಂದ್ಯದಲ್ಲಿ ಸ್ಟೀಫನ್‌ ನೀರೋ ಅಜೇಯ 309 ರನ್‌ ಬಾರಿಸಿ ಹಿಂದಿನ ದಾಖಲೆಗಳನ್ನು ಮುರಿದುಹಾಕಿದ್ದಾರೆ.

2010ರಲ್ಲಿ ಸಚಿನ್‌ ತೆಂಡೂಲ್ಕರ್ ಏಕದಿನ ಪಂದ್ಯದಲ್ಲಿ ದ್ವಿಶತಕ ಬಾರಿಸುವವರೆಗೂ ಅದೊಂದು ಅಸಾಧ್ಯದ ಕೆಲಸವೇ ಎಂಬ ಭಾವನೆಯಿತ್ತು. ಆದರೆ, ಸಚಿನ್‌ ದ್ವಿಶತಕ ಬಾರಿಸಿದ ಬಳಿಕ ವಿರೇಂದ್ರ ಸೆಹ್ವಾಗ್‌, ರೋಹಿತ್‌ ಶರ್ಮಾ, ಮಾರ್ಟಿನ್‌ ಗಪ್ಟಿಲ್‌, ಫಖರ್‌ ಝಮಾನ್‌, ಕ್ರಿಸ್‌ ಗೇಲ್‌ ದ್ವಿಶತಕ ಬಾರಿಸಿ ಅಬ್ಬರಿಸಿದ್ದರು. ಆದರೆ ಈವರೆಗೆ ಯಾರೊಬ್ಬರೂ ತ್ರಿಶತಕ ಬಾರಿಸಿರಲಿಲ್ಲ.

ಕೇವಲ 140 ಎಸೆತಗಳಲ್ಲಿ ಅಜೇಯ 309 ರನ್‌ ಬಾರಿಸಿ ಸ್ಟೀಫನ್‌ ನೀರೋ ಒಂದು ಇತಿಹಾಸವನ್ನೇ ರಚಿಸಿದ್ದಾರೆ. ಈ ಆಟದಲ್ಲಿ ಅವರು ಒಟ್ಟು 49 ಫೋರ್‌ ಹಾಗೂ 1 ಸಿಕ್ಸರ್‌ ಬಾರಿಸಿ ಮಿಂಚಿದ್ದರು. ಆಸ್ಟ್ರೇಲಿಯಾ ತಂಡವು ಒಟ್ಟು 541 ರನ್‌ ಬಾರಿಸಿ ಒಂದು ಬೃಹತ್‌ ಟಾರ್ಗೆಟ್‌ ನೀಡಿತ್ತು. ಇದನ್ನು ಬೆನ್ನಟ್ಟಿದ ನ್ಯೂಜಿಲೆಂಡ್‌ ತಂಡ ಕೇವಲ 272 ರನ್‌ಗೆ ಆಲೌಟ್‌ ಆಯಿತು. ಆಸ್ಟ್ರೇಲಿಯಾ 269 ರನ್‌ಗಳ ಭರ್ಜರಿ ಜಯ ಸಾಧಿಸಿತು. ಅಥವಾ ಸ್ಟೀಫನ್‌ ನೀರೋ ನ್ಯೂಜಿಲೆಂಡ್‌ ವಿರುದ್ಧ 40 ರನ್‌ಗಳಿಂದ ಗೆದ್ದರು ಎಂದು ಕೂಡ ಹೇಳಬಹುದು.

ಈ ಹಿಂದೆ 1998ರಲ್ಲಿ ದಕ್ಷಿಣ ಆಫ್ರಿಕ ವಿರುದ್ಧ ಪಾಕಿಸ್ತಾನದ ಮಸೂದ್‌ ಜಾನ್‌ 262 ರನ್‌ ಗಳಿಸಿದ್ದು ಅಂಧರ ಕ್ರಿಕೆಟ್‌ನ ವಿಶ್ವದಾಖಲೆಯಾಗಿತ್ತು. ಇದೀಗ 309 ರನ್‌ ಬಾರಿಸಿ ಈ ರೆಕಾರ್ಡ್‌ ಬ್ರೇಕ್‌ ಮಾಡಿ ಹೊಸದೊಂದು ದಾಖಲೆ ಸೃಷ್ಟಿಸಿದ್ದಾರೆ.

ಇದನ್ನೂ ಓದಿ: Eng v/s Nz | ಒಂದು ಕ್ಲಾಸಿಕ್‌ ಟೆಸ್ಟ್‌ ಪಂದ್ಯ, ಇಂಗ್ಲೆಂಡ್‌ ಭರ್ಜರಿ ಗೆಲುವು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಕ್ರೀಡೆ

Duleep Trophy: ದುಲೀಪ್​ ಟ್ರೋಫಿಯಿಂದ ಹೊರಬಿದ್ದ ಮೊಹಮ್ಮದ್ ಸಿರಾಜ್

Duleep Trophy: ವೃತ್ತಿಪರ ಕ್ರಿಕೆಟ್​ಗೆ ಮರಳುವ ನಿರೀಕ್ಷೆಯಲ್ಲಿ ಜಮ್ಮ ಕಾಶ್ಮೀರದ ವೇಗಿ ಉಮ್ರಾನ್ ಮಲಿಕ್(Umran Malik) ಕೂಡ ಅನಾರೋಗ್ಯದ ಕಾರಣ ಪಂದ್ಯಾವಳಿಯಿಂದ ಹೊರಗುಳಿದಿದ್ದಾರೆ.

VISTARANEWS.COM


on

Duleep Trophy
Koo

ಮುಂಬಯಿ: ದುಲೀಪ್​ ಟ್ರೋಫಿ(Duleep Trophy) ಆರಂಭಕ್ಕೂ ಮುನ್ನವೇ ಟೀಮ್​ ಇಂಡಿಯಾದ ವೇಗಿ ಮೊಹಮ್ಮದ್ ಸಿರಾಜ್(mohammed siraj) ಅನಾರೋಗ್ಯದ ಕಾರಣ ಟೂರ್ನಿಯಿಂದ ಹೊರಬಿದ್ದಿದ್ದಾರೆ. ಅವರ ಬದಲಿಗೆ ನವದೀಪ್ ಸೈನಿ ಸ್ಥಾನ ಪಡೆದಿದ್ದಾರೆ. ಇದೇ ವೇಳೆ ಹಿರಿಯ ಆಟಗಾರ ರವೀಂದ್ರ ಜಡೇಜಾ(Ravindra Jadeja) ಅವರನ್ನು ಭಾರತ ‘ಬಿ’ ತಂಡದಿಂದ ಬಿಡುಗಡೆ ಮಾಡಲಾಗಿದೆ.

ವೃತ್ತಿಪರ ಕ್ರಿಕೆಟ್​ಗೆ ಮರಳುವ ನಿರೀಕ್ಷೆಯಲ್ಲಿ ಜಮ್ಮ ಕಾಶ್ಮೀರದ ವೇಗಿ ಉಮ್ರಾನ್ ಮಲಿಕ್(Umran Malik) ಕೂಡ ಅನಾರೋಗ್ಯದ ಕಾರಣ ಪಂದ್ಯಾವಳಿಯಿಂದ ಹೊರಗುಳಿದಿದ್ದಾರೆ. ಉಮ್ರಾನ್ ಬದಲಿಗೆ ಮಧ್ಯಪ್ರದೇಶದ ಮಧ್ಯಮ ವೇಗಿ ಗೌರವ್ ಯಾದವ್ ಭಾರತ ‘ಸಿ’ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಜಡೇಜಾ ಸ್ಥಾನಕ್ಕೆ ಬದಲಿ ಆಟಗಾರನನ್ನ ಹೆಸರಿಸಲಾಗಿಲ್ಲ. ಜಡೇಜಾ ದುಲೀಪ್ ಟ್ರೋಫಿಯಲ್ಲಿ ಕೇವಲ ಒಂದು ಪಂದ್ಯವನ್ನು ಆಡಿ ಬಳಿಕ ಬಾಂಗ್ಲಾದೇಶ ಟೆಸ್ಟ್​ ಸರಣಿಗೆ ಮುಂಚಿತವಾಗಿ ಭಾರತ ಶಿಬಿರಕ್ಕೆ ತೆರಳಬೇಕಿತ್ತು. ಆದರೆ ಬಿಸಿಸಿಐ ಅವರಿಗೆ ಕೊನೆಯ ಕ್ಷಣದಲ್ಲಿ ವಿಶ್ರಾಂತಿ ನೀಡಿದೆ. ಭಾರತ ‘ಎ’ ತಂಡವನ್ನು ಶುಭಮನ್ ಗಿಲ್ ಮುನ್ನಡೆಸಿದರೆ, ‘ಡಿ’ತಂಡವನ್ನು ಶ್ರೇಯಸ್‌ ಅಯ್ಯರ್‌ ಮುನ್ನಡೆಸಲಿದ್ದಾರೆ.

ಭಾರತ ‘ಎ’ ತಂಡ


ಶುಭಮನ್ ಗಿಲ್ (ನಾಯಕ), ಮಯಾಂಕ್ ಅಗರ್ವಾಲ್, ರಿಯಾನ್ ಪರಾಗ್, ಧ್ರುವ ಜುರೆಲ್ (ವಿಕೆಟ್‌ ಕೀಪರ್), ಕೆಎಲ್ ರಾಹುಲ್, ತಿಲಕ್ ವರ್ಮಾ, ಶಿವಂ ದುಬೆ, ತನುಷ್ ಕೋಟ್ಯಾನ್, ಕುಲದೀಪ್ ಯಾದವ್, ಆಕಾಶ್ ದೀಪ್, ಪ್ರಸಿದ್ಧ್ ಕೃಷ್ಣ, ಖಲೀಲ್ ಅಹ್ಮದ್, ಅವೇಶ್ ಖಾನ್, ವಿದ್ವತ್ ಕಾವೇರಪ್ಪ, ಕುಮಾರ್ ಕುಶಾಗ್ರ , ಶಾಶ್ವತ್ ರಾವತ್.

ಭಾರತ ‘ಬಿ’ ತಂಡ


ಅಭಿಮನ್ಯು ಈಶ್ವರನ್ (ನಾಯಕ), ಯಶಸ್ವಿ ಜೈಸ್ವಾಲ್, ಸರ್ಫರಾಜ್ ಖಾನ್, ರಿಷಭ್ ಪಂತ್ (ವಿ.ಕೀ), ಮುಷೀರ್ ಖಾನ್, ನಿತೀಶ್ ಕುಮಾರ್ ರೆಡ್ಡಿ (ಫಿಟ್‌ನೆಸ್‌ ಟೆಸ್ಟ್‌ ಅವಲಂಬನೆ), ವಾಷಿಂಗ್ಟನ್ ಸುಂದರ್, ನವದೀಪ್ ಸೈನಿ, ಯಶ್ ದಯಾಳ್, ಮುಖೇಶ್ ಕುಮಾರ್, ರಾಹುಲ್ ಚಹರ್, ಆರ್ ಸಾಯಿ ಕಿಶೋರ್, ಮೋಹಿತ್ ಆವಸ್ತಿ, ಎನ್ ಜಗದೀಸನ್ (ವಿ.ಕೀ)

ಇದನ್ನೂ ಓದಿ Natasa Stankovic: ಪಾಂಡ್ಯ ಜತೆಗಿನ ವಿಚ್ಛೇದನದ ಅಸಲಿ ಸತ್ಯ ಬಿಚ್ಚಿಟ್ಟ ನತಾಶ!

ಭಾರತ ‘ಸಿ’ ತಂಡ


ಋತುರಾಜ್ ಗಾಯಕ್ವಾಡ್​ (ನಾಯಕ), ಸಾಯಿ ಸುದರ್ಶನ್, ರಜತ್ ಪಾಟಿದಾರ್, ಅಭಿಷೇಕ್ ಪೊರೆಲ್ (ವಿ.ಕೀ), ಸೂರ್ಯಕುಮಾರ್ ಯಾದವ್, ಬಿ ಇಂದ್ರಜಿತ್, ಹೃತಿಕ್ ಶೋಕೀನ್, ಮಾನವ್ ಸುತಾರ್, ಗೌರವ್ ಯಾದವ್, ವೈಶಾಕ್ ವಿಜಯ್‌ಕುಮಾರ್, ಅನ್ಶುಲ್ ಖಂಬೋಜ್, ಹಿಮಾಂಶು ಚೌಹಾಣ್, ಮಯಾಂಕ್ ಮಾರ್ಕಂಡೆ, ಆರ್ಯನ್‌ ಜುಯೆಲ್‌ (ವಿ.ಕೀ), ಸಂದೀಪ್ ವಾರಿಯರ್.

ಭಾರತ ‘ಡಿ’ ತಂಡ

ಶ್ರೇಯಸ್ ಅಯ್ಯರ್​ (ನಾಯಕ), ಅಥರ್ವ ಟೈಡೆ, ಯಶ್ ದುಬೆ, ದೇವದತ್ ಪಡಿಕ್ಕಲ್, ಇಶಾನ್ ಕಿಶನ್ (ವಿಕೆಟ್‌ ಕೀಪರ್), ರಿಕಿ ಭುಯಿ, ಸರನ್ಶ್ ಜೈನ್, ಅಕ್ಷರ್ ಪಟೇಲ್, ಅರ್ಷದೀಪ್ ಸಿಂಗ್, ಆದಿತ್ಯ ಠಾಕರೆ, ಹರ್ಷಿತ್ ರಾಣಾ, ತುಷಾರ್ ದೇಶಪಾಂಡೆ, ಆಕಾಶ್ ಸೇನ್‌ಗುಪ್ತ, ಕೆಎಸ್ (ವಿಕೆಟ್‌ ಕೀಪರ್), ಸೌರಭ್ ಕುಮಾರ್.

Continue Reading

ಕ್ರೀಡೆ

IPL 2025: ಮುಂಬೈ ಇಂಡಿಯನ್ಸ್​ಗೆ ನೂತನ ನಾಯಕ; ಪೋಸ್ಟರ್​ ಬಿಡುಗಡೆ ಮಾಡಿದ ಫ್ರಾಂಚೈಸಿ

IPL 2025: ಬುಮ್ರಾ ರೋಹಿತ್​ಗೆ ಬಹಳ ಆತ್ಮಿಯರಾಗಿರುವ ಕಾರಣ ಬುಮ್ರಾ ನಾಯಕನಾದರೆ ರೋಹಿತ್​ ಕೂಡ ಮುಂಬೈ ತೊರೆಯಲು ಹಿಂದೇಟು ಹಾಕಬಹುದು ಎನ್ನುವುದು ಫ್ರಾಂಚೈಸಿಯ ಯೋಜನೆ.

VISTARANEWS.COM


on

Jasprit Bumrah
Koo

ಮುಂಬಯಿ: 5 ಬಾರಿಯ ಚಾಂಪಿಯನ್​ ಮುಂಬೈ ಇಂಡಿಯನ್ಸ್​(Mumbai Indians) ಮುಂಬರುವ ಐಪಿಎಲ್​ ಆವೃತ್ತಿಗೂ ಮುನ್ನ ಮಹತ್ವದ ಘೋಷಣೆಯೊಂದನ್ನು ಮಾಡಲು ಮುಂದಾಗಿದೆ. ಇದರ ಸುಳಿವನ್ನು ಸ್ವತಃ ಫ್ರಾಂಚೈಸಿಯೇ ತನ್ನ ಅಧಿಕೃತ ಸಾಮಾಜಿಕ ಜಾಲತಾಣದಲ್ಲಿ ಬಿಟ್ಟುಕೊಟ್ಟಿದೆ. ಹೌದು, ಪ್ರಧಾನ ವೇಗಿ ಜಸ್​ಪ್ರೀತ್​ ಬುಮ್ರಾ(Jasprit Bumrah) ಅವರನ್ನು ನೂತನ ನಾಯಕನನ್ನಾಗಿ ಮಾಡಲು ನಿರ್ಧರಿಸಿದಂತಿದೆ. ಬುಮ್ರಾ ಅವರು ಜನಗಳ ಮಧ್ಯೆ ಕೈಬೀಸುತ್ತಾ ರ‍್ಯಾಂಪ್ ವಾಕ್ ಮಾಡುತ್ತಿರುವ ಫೋಟೊವನ್ನು ಹಂಚಿಕೊಂಡಿದೆ. ಹೀಗಾಗಿ ಬುಮ್ರಾ ನಾಯಕನಾಗುವುದು ಖಚಿತ ಎನ್ನುವಂತಿದೆ. ಇದಕ್ಕೆ ಅಧಿಕೃತ ಮುದ್ರೆಯೊಂದು ಬೀಳಲು ಮಾತ್ರ ಬಾಕಿ ಇದೆ.

ಕಳೆದ ಬಾರಿ ರೋಹಿತ್​ ಶರ್ಮ ಅವರನ್ನು ನಾಯಕತ್ವದಿಂದ ಕೆಳಗಿಳಿಸಿ ಹಾರ್ದಿಕ್​ ಪಾಂಡ್ಯ(Hardik Pandya)ಗೆ ನಾಯಕತ್ ಪಟ್ಟ ನೀಡಲಾಗಿತ್ತು. ಆದರೆ, ಪಾಂಡ್ಯ ನಾಯಕತ್ವದಲ್ಲಿ ಮುಂಬೈ ತಂಡ ಎಂದೂ ಕಾಣದ ವೈಫಲ್ಯ ಕಂಡಿತ್ತು. ಪಾಂಡ್ಯ ನಾಯಕನಾಗುವ ಬಗ್ಗೆ ಬುಮ್ರಾ ಅಸಮಾಧಾನವನ್ನು ವ್ಯಕ್ತಪಡಿಸಿದ್ದರು. ಬಳಿಕ ಫ್ರಾಂಚೈಸಿಯೇ ಅವರನ್ನು ಸಮಾಧಾನಪಡಿಸಿತ್ತು. ಇದೀಗ ಬುಮ್ರಾ ಅವರನ್ನೇ ನಾಯಕನನ್ನಾಗಿ ಮಾಡಲು ಮುಂದಾಗಿದೆ. ಬುಮ್ರಾ ಕಾರ್ಯವೈಖರಿ ಬಗ್ಗೆಯೂ ಸಹ ಆಟಗಾರರಿಗೆ ಸಮಧಾನವಿದೆ. ಬುಮ್ರಾ ರೋಹಿತ್​ಗೆ ಬಹಳ ಆತ್ಮಿಯರಾಗಿರುವ ಕಾರಣ ಬುಮ್ರಾ ನಾಯಕನಾದರೆ ರೋಹಿತ್​ ಕೂಡ ಮುಂಬೈ ತೊರೆಯಲು ಹಿಂದೇಟು ಹಾಕಬಹುದು ಎನ್ನುವುದು ಫ್ರಾಂಚೈಸಿಯ ಯೋಜನೆ.

ಜಸ್​ಪ್ರೀತ್​ ಬುಮ್ರಾ ಅವರು ಇದುವರೆಗೆ 133 ಐಪಿಎಲ್​ ಆಡಿದ್ದು 165 ವಿಕೆಟ್​ ಕೆಡವಿದ್ದಾರೆ. 2013ರಲ್ಲಿ ಮುಂಬೈ ತಂಡದ ಪರ ಐಪಿಎಲ್​ ಪದಾರ್ಪಣೆ ಮಾಡಿದ್ದ ಬುಮ್ರಾ ಇದುವರೆಗೂ ಮುಂಬೈ ಪರವೇ ಆಡುತ್ತಿದ್ದಾರೆ.

ಇದನ್ನೂ ಓದಿ IPL 2025: ಮುಂಬೈ ಇಂಡಿಯನ್ಸ್​ಗೆ ಶ್ರೇಯಸ್​ ಅಯ್ಯರ್​, ಕೆಕೆಆರ್​ಗೆ ಸೂರ್ಯಕುಮಾರ್​ ನಾಯಕ!​

ಸೂರ್ಯಕುಮಾರ್​ ಯಾದವ್​ಗೆ ಹಾಲಿ ಚಾಂಪಿಯನ್​ ಕೆಕೆಆರ್(KKR)​ ತಂಡದಿಂದ ನಾಯಕತ್ವದ ಆಫರ್​ ಬಂದಿದೆ ಎಂದು ವರದಿಯಾಗಿದೆ. ಸೂರ್ಯಕುಮಾರ್​ ಯಾದವ್​ ಅವರು ಮುಂಬೈ ತಂಡ ಸೇರುವ ಮುನ್ನ ಕೆಕೆಆರ್​ ಪರ ಆಡುತ್ತಿದ್ದರು. 2014 ರ ಐಪಿಎಲ್ ಹರಾಜಿನಲ್ಲಿ ಅವರನ್ನು ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ಖರೀದಿಸಿತ್ತು. ಇದೇ ಆವೃತ್ತಿಯಲ್ಲಿ ಕೆಕೆಆರ್​ ಚಾಂಪಿಯನ್​ ಕೂಡ ಆಗಿತ್ತು. ಗೌತಮ್​ ಗಂಭೀರ್​ ತಂಡದ ನಾಯಕನಾಗಿದ್ದರು. ಸೂರ್ಯಕುಮಾರ್​ ಕೆಕೆಆರ್​ ಪರ ನಾಲ್ಕು ಋತುಗಳಲ್ಲಿ 54 ಪಂದ್ಯಗಳನ್ನಾಡಿ 608 ರನ್​ ಬಾರಿಸಿದ್ದರು. 2018ರಲ್ಲಿ ಸೂರ್ಯ ಮುಂಬೈ ತಂಡ ಸೇರಿದ್ದರು.

ಸೂರ್ಯಕುಮಾರ್​ ಇದುವರೆಗೆ 150 ಐಪಿಎಲ್ ಪಂದ್ಯಗಳಿಂದ 3594 ರನ್​ ಬಾರಿಸಿದ್ದಾರೆ. ಇದರಲ್ಲಿ 2 ಶತಕ ಮತ್ತು 24 ಅರ್ಧಶತಕ ಒಳಗೊಂಡಿದೆ. ರೋಹಿತ್ ಶರ್ಮ ಅವರು ಟಿ20 ಕ್ರಿಕೆಟ್​ಗೆ ನಿವೃತ್ತಿ ಹೇಳಿದ ಕಾರಣ ಭಾರತ ತಂಡದ ಟಿ20 ನಾಯಕತ್ವ ಸೂರ್ಯಕುಮಾರ್​ ಹೆಗಲೇರಿದೆ. ಅವರ ಪೂರ್ಣ ಪ್ರಮಾಣದ ನಾಯಕತ್ವದಲ್ಲಿ ಆಡಿದ್ದ ಕಳೆದ ಲಂಕಾ ವಿರುದ್ಧದ ಟಿ20 ಸರಣಿಯಲ್ಲಿ ಭಾರತ 3-0 ಅಂತರದಿಂದ ಗೆದ್ದು ಬೀಗಿತ್ತು.

Continue Reading

ಕ್ರೀಡೆ

Natasa Stankovic: ಪಾಂಡ್ಯ ಜತೆಗಿನ ವಿಚ್ಛೇದನದ ಅಸಲಿ ಸತ್ಯ ಬಿಚ್ಚಿಟ್ಟ ನತಾಶ!

Natasa Stankovic: ನತಾಶಾ ಅವರ ಈ ಪೋಸ್ಟ್ ನೋಡುವಾಗ ಪಾಂಡ್ಯ ಅವರು ನತಾಶ ಜತೆಗೆ ಸರಿಯಾಗಿ ಸಂವಹನ ಮತ್ತು ಅವರನ್ನು ಕೇರ್​ ಮಾಡುತ್ತಿರಲಿಲ್ಲ ಎನ್ನುವಂತಿದೆ.

VISTARANEWS.COM


on

Natasa Stankovic
Koo

ಲಂಡನ್​: ಜುಲೈನಲ್ಲಿ ಕ್ರಿಕೆಟಿಗ ಹಾರ್ದಿಕ್​ ಪಾಂಡ್ಯ(Hardik Pandya) ಅವರು ತಮ್ಮ ಪತ್ನಿ ನತಾಶಾ ಸ್ಟಾಂಕೋವಿಕ್(Natasa Stankovic) ಅವರಿಗೆ ವಿಚ್ಛೇದನ(Hardik-Natasa Divorce) ನೀಡುವ ಮೂಲಕ 4 ವರ್ಷಗಳ ದಾಂಪತ್ಯ ಜೀವನಕ್ಕೆ ಬ್ರೇಕ್ ಹಾಕಿದ್ದರು. ಆದರೆ, ಈ ಜೋಡಿಯ ವಿಚ್ಛೇದನಕ್ಕೆ ಏನು ಕಾರಣವಿರಬಹುದೆಂದು ಎಂಬ ಬಗ್ಗೆ ನಿರಂತರ ಊಹಾಪೋಹಗಳ ಸುದ್ದಿಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಲೇ ಇದೆ. ಇದೀಗ ನತಾಶ ಅವರೇ ತಮ್ಮ ವಿಚ್ಛೇದನಕ್ಕೆ ಕಾರಣ ಏನೆಂಬುದನ್ನು ಪರೋಕ್ಷವಾಗಿ ತಿಳಿಸಿದ್ದಾರೆ.

ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಪೋಸ್ಟ್​ ಒಂದನ್ನು ಮಾಡಿರುವ ನತಾಶ, “ಪ್ರೀತಿಯು ಇತರರನ್ನು ಎಂದಿಗೂ ಅವಮಾನಿಸುವುದಿಲ್ಲ.. ಪ್ರೀತಿ ಎಂದರೇ ದಯೆ ಮತ್ತು ತಾಳ್ಮೆ, ಇದು ಹೆಮ್ಮೆ ಅಥವಾ ಅಸೂಯೆಯಲ್ಲ. ಪ್ರೀತಿ ಎನ್ನುವುದು ಬೇಡಿಕೆಯ ವಸ್ತು ಆಗಬಾರದು. ಪ್ರೀತಿ ಎನ್ನುವುದು ರಕ್ಷಣೆ ನೀಡಬೇಕು. ನಿಜವಾದ ಪ್ರೀತಿ ಎಂದಿಗೂ ಸುಳ್ಳಾಗುವುದಿಲ್ಲ” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ Natasa Stankovic : ‘ಹೊಸ ಹೆಸರನ್ನು ಪಡೆಯುತ್ತಿದ್ದೇನೆ’; ಕುತೂಹಲ ಮೂಡಿಸಿದ ನತಾಶಾ ಸ್ಟಾಂಕೊವಿಕ್​ ಹೊಸ ಪೋಸ್ಟ್​​​

ನತಾಶಾ ಅವರ ಈ ಪೋಸ್ಟ್ ನೋಡುವಾಗ ಪಾಂಡ್ಯ ಅವರು ನತಾಶ ಜತೆಗೆ ಸರಿಯಾಗಿ ಸಂವಹನ ಮತ್ತು ಅವರನ್ನು ಕೇರ್​ ಮಾಡುತ್ತಿರಲಿಲ್ಲ ಎನ್ನುವಂತಿದೆ. ಅಲ್ಲದೇ ನತಾಶಾಗೆ ಹಾರ್ದಿಕ್‌ ಅವರ ಕೆಲ ನಡುವಳಿಕೆ ಕೂಡ ಇಷ್ಟವಾಗದೇ ಅದನ್ನು ಸರಿಪಡಿಸಿಕೊಳ್ಳಲು ಹೇಳಿದ್ದರೂ ಪಾಂಡ್ಯ ಇದನ್ನು ಪಾಲಿಸಲು ನಿರಾಕರಿಸಿರಬಹುದು ಇದೇ ಕಾರಣಕ್ಕೆ ಇವರಿಬ್ಬರು ಬೇರೆಯಾದರು ಎನ್ನುವಂತಿದೆ.

ಹಾರ್ದಿಕ್​ ಮತ್ತು ನತಾಶಾ ನಡುವಿನ ಬ್ರೇಕಪ್​ಗೆ ಸಂವಹನ ಕೊರತೆಯೇ ಮುಖ್ಯ ಕಾರಣ ಎಂದು ಆಪ್ತ ಮೂಲಗಳು ಮಾಹಿತಿ ನೀಡಿತ್ತು. ಇಬ್ಬರ ನಡುವಿನ ಮನಸ್ತಾಪ ಮತ್ತು ಜಗಳಕ್ಕೆ ಪರಿಹಾರ ಕಂಡುಕೊಳ್ಳುವ ತಾಳ್ಮೆ ಇಬ್ಬರಲ್ಲೂ ಇರಲಿಲ್ಲ. ಹೀಗಾಗಿ ಮನಸ್ತಾಪ ದೊಡ್ಡದಾಗಿ ಡಿವೋರ್ಸ್​ಗೆ ಕಾರಣವಾಯಿತು ಎಂದು ಆಪ್ತ ಮೂಲಗಳು ತಿಳಿಸಿತ್ತು. ಇದೀಗ ನತಾಶ ಕೂಡ ಪ್ರೀತಿಯ ಬಗ್ಗೆ ಬರೆದುಕೊಂಡಿರುವುದನ್ನು ನೋಡುವಾಗ ಆಪ್ತ ಮೂಲಗಳು ನೀಡಿದ ಮಾಹಿತಿ ಸತ್ಯ ಎನ್ನುವಂತಿದೆ.


ಕಳೆದ ವರ್ಷ ಫೆ.14 ರಂದು ರಾಜಸ್ಥಾನದ ಉದಯ್‌ಪುರದಲ್ಲಿ ಕ್ರಿಷ್ಚಿಯನ್‌ ಸಂಪ್ರದಾಯದಂತೆ ಹಾರ್ದಿಕ್‌ ಮತ್ತು ನತಾಶಾ ಮತ್ತೊಮ್ಮೆ ಅದ್ದೂರಿಯಾಗಿ ಪುನರ್‌ ವಿವಾಹವಾಗಿದ್ದರು. ಕುಟುಂಬಸ್ಥರು ಮತ್ತು ಗೆಳೆಯರ ಸಮ್ಮುಖದಲ್ಲಿ ಮತ್ತೊಮ್ಮೆ ವಿವಾಹವಾಗಿದ್ದರು. ಇದಕ್ಕೂ ಮುನ್ನ ಈ ಜೋಡಿ 2020ರಲ್ಲೇ ರಿಜಿಸ್ಟರ್‌ ರೀತಿಯಲ್ಲಿ ವಿವಾಹವಾಗಿದ್ದರು. ವಿಚ್ಛೇದನ ಪಡೆದರೂ ಕೂಡ ಇಬ್ಬರೂ ಪುತ್ರ ಅಗಸ್ತ್ಯನನ್ನು(Agastya) ಸಹ-ಪೋಷಕರಾಗಿ ನೋಡಿಕೊಳ್ಳುತ್ತೇವೆ. ಅವನಿಗೆ ಯಾವುದೇ ಕಾರಣಕ್ಕೂ ಯಾವ ಕೊರತೆಯೂ ಆಗದಂತೆ ನಾವಿಬ್ಬರೂ ಸಮನಾಗಿ ಅವನ ಜವಾಬ್ದಾರಿ ಹಂಚಿಕೊಳ್ಳಲಿದ್ದೇವೆ ಎಂದು ಈಗಾಗಲೇ ಪಾಂಡ್ಯ ಮತ್ತು ನತಾಶ ಜಂಟಿ ಹೇಳಿಯಲ್ಲಿ ಖಚಿತಪಡಿಸಿದ್ದಾರೆ.

Continue Reading

ಕ್ರೀಡೆ

Women’s T20 world Cup: ಭಾರತ ತಂಡ ಪ್ರಕಟ; ಫಿಟ್​ನೆಸ್​ ಪಾಸ್​ ಆದರೆ ಕನ್ನಡತಿ ಶ್ರೇಯಾಂಕಾಗೆ ಅವಕಾಶ

Women’s T20 world Cup: ತಂಡವನ್ನು ಹರ್ಮನ್​ಪ್ರೀತ್​ ಕೌರ್​ ಮುನ್ನಡೆಸಲಿದ್ದಾರೆ. ಸ್ಮೃತಿ ಮಂಧಾನ ಉಪನಾಯಕಿಯಾಗಿದ್ದಾರೆ. ಉಳಿದಂತೆ ತಂಡದಲ್ಲಿ ಶಫಾಲಿ ವರ್ಮಾ, ರಿಚಾ ಘೋಷ್ ಮತ್ತು ರೇಣುಕಾ ಸಿಂಗ್, ದೀಪ್ತಿ ಶರ್ಮಾ, ಜೆಮಿಮಾ ರೋಡ್ರಿಗಸ್​ ಪ್ರಮುಖ ಆಟಗಾರ್ತಿಯರಾಗಿ ಕಾಣಿಸಿಕೊಂಡಿದ್ದಾರೆ.

VISTARANEWS.COM


on

Women's T20 world Cup
Koo

ಮುಂಬಯಿ: ಪ್ರತಿಷ್ಠಿತ ಮಹಿಳಾ ಟಿ20 ವಿಶ್ವಕಪ್(Women’s T20 world Cup)​ ಟೂರ್ನಿಗೆ ಭಾರತದ 15 ಸದಸ್ಯರ ತಂಡ ಪ್ರಕಟಗೊಂಡಿದೆ. ಮಂಗಳವಾರ ಬಿಸಿಸಿಐ ಅಧಿಕೃತ ಟ್ವಿಟರ್​ ಎಕ್ಸ್​ನಲ್ಲಿ ತಂಡವನ್ನು ಪ್ರಕಟಿಸಿತು. ಒಂಬತ್ತನೇ ಆವೃತ್ತಿಯ ಈ ಟೂರ್ನಿ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ನಲ್ಲಿ ಅಕ್ಟೋಬರ್ 3 ರಿಂದ 20 ರವರೆಗೆ ದುಬೈ ಮತ್ತು ಶಾರ್ಜಾದಲ್ಲಿ ನಡೆಯಲಿದೆ.

ತಂಡವನ್ನು ಹರ್ಮನ್​ಪ್ರೀತ್​ ಕೌರ್​ ಮುನ್ನಡೆಸಲಿದ್ದಾರೆ. ಸ್ಮೃತಿ ಮಂಧಾನ ಉಪನಾಯಕಿಯಾಗಿದ್ದಾರೆ. ಉಳಿದಂತೆ ತಂಡದಲ್ಲಿ ಶಫಾಲಿ ವರ್ಮಾ, ರಿಚಾ ಘೋಷ್ ಮತ್ತು ರೇಣುಕಾ ಸಿಂಗ್, ದೀಪ್ತಿ ಶರ್ಮಾ, ಜೆಮಿಮಾ ರೋಡ್ರಿಗಸ್​ ಪ್ರಮುಖ ಆಟಗಾರ್ತಿಯರಾಗಿ ಕಾಣಿಸಿಕೊಂಡಿದ್ದಾರೆ. ಈ ಬಾರಿಯ ಮಹಿಳಾ ಪ್ರೀಮಿಯರ್ ಲೀಗ್‌ನಲ್ಲಿ ಅಮೋಘ ಪ್ರದರ್ಶನ ತೋರಿದ್ದ ಲೆಗ್ ಸ್ಪಿನ್ನರ್ ಆಶಾ ಶೋಭನಾ ಕೂಡ ಸ್ಥಾನ ಪಡೆದಿದ್ದಾರೆ.

ಭಾರತ ತಂಡ ಅಕ್ಟೋಬರ್ 4 ರಂದು ನ್ಯೂಜಿಲ್ಯಾಂಡ್​ ವಿರುದ್ಧ ಆಡುವ ಮೂಲಕ ತಮ್ಮ ಅಭಿಯಾನ ಆರಂಭಿಸಲಿದೆ. ಸಾಂಪ್ರದಾಯಿ ಬದ್ಧ ಎದುರಾಳಿ ಪಾಕಿಸ್ತಾನ ವಿರುದ್ಧ ಅಕ್ಟೋಬರ್ 6 ರಂದು ಪಂದ್ಯವನ್ನಾಡಲಿದೆ. ಅಕ್ಟೋಬರ್ 13 ರಂದು ಆರು ಬಾರಿ ವಿಶ್ವ ಚಾಂಪಿಯನ್ ಆಸ್ಟ್ರೇಲಿಯಾದ ವಿರುದ್ಧ ಆಡಲಿದೆ. ಭಾರತ ತಂಡ ಆಸ್ಟ್ರೇಲಿಯಾ, ನ್ಯೂಜಿಲ್ಯಾಂಡ್, ಶ್ರೀಲಂಕಾ​ ಮತ್ತು ಪಾಕಿಸ್ತಾನ ಜತೆ ‘ಎ’ ಗುಂಪಿನಲ್ಲಿ ಸ್ಥಾನ ಪಡೆದಿದೆ. ಬಾಂಗ್ಲಾದೇಶ, ದಕ್ಷಿಣ ಆಫ್ರಿಕಾ, ಇಂಗ್ಲೆಂಡ್, ವೆಸ್ಟ್ ಇಂಡೀಸ್ ‘ಬಿ’ ಗುಂಪಿನಲ್ಲಿ ಸ್ಥಾನ ಪಡೆದಿದೆ.

ಇದನ್ನೂ ಓದಿ Women’s T20 World Cup 2024: ಟಿ20 ವಿಶ್ವ ಕಪ್‌ಗೆ ನೇರ ಅರ್ಹತೆ ಸಂಪಾದಿಸಿದ ಟೀಮ್‌ ಇಂಡಿಯಾ

ಗಾಯದಿಂದ ಚೇತರಿಕೆ ಕಾಣುತ್ತಿರುವ ಕನ್ನಡತಿ ಶ್ರೇಯಾಂಕಾ ಪಾಟೀಲ್ ಮತ್ತು ಯಾಸ್ತಿಕಾ ಭಾಟಿಯಾ ಅವರ ಲಭ್ಯತೆಯು ಫಿಟ್‌ನೆಸ್ ಸ್ಥಿತಿಯನ್ನು ಅವಲಂಬಿಸಿರುತ್ತದೆ ಎಂದು ಬಿಸಿಸಿಐ ತಿಳಿಸಿದೆ. ಒಂದೊಮ್ಮೆ ಇವರು ಫಿಟ್​ ಆದರೆ ತಂಡದಲ್ಲಿ ಅವಕಾಶ ಪಡೆಯಲಿದ್ದಾರೆ. ಇಲ್ಲವಾದಲ್ಲಿ ಬೇರೆ ಆಟಗಾರ್ತಿಯರ ಆಯ್ಕೆಯಾಗಲಿದೆ.

ಭಾರತ ತಂಡ


ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ (ಉಪನಾಯಕಿ), ಶಫಾಲಿ ವರ್ಮಾ, ದೀಪ್ತಿ ಶರ್ಮಾ, ಜೆಮಿಮಾ ರಾಡ್ರಿಗಸ್, ರಿಚಾ ಘೋಷ್ (ವಿಕೀ), ಯಾಸ್ತಿಕಾ ಭಾಟಿಯಾ(ಫಿಟ್​ನೆಸ್​ ಆಧಾರ), ಪೂಜಾ ವಸ್ತ್ರಾಕರ್, ಅರುಂಧತಿ ರೆಡ್ಡಿ, ರೇಣುಕಾ ಸಿಂಗ್ ಠಾಕೂರ್, ದಯಾಲನ್ ಹೇಮಲತಾ, ಆಶಾ ಶೋಭಾನಾ, ರಾಧಾ ಯಾದವ್, ಶ್ರೇಯಾಂಕಾ ಪಾಟೀಲ್(ಫಿಟ್​ನೆಸ್​ ಆಧಾರ), ಸಜನಾ ಸಜೀವನ್.

ಭಾರತದ ಟಿ20 ವಿಶ್ವಕಪ್ ಪಂದ್ಯಗಳ ವೇಳಾಪಟ್ಟಿ


ಅಕ್ಟೋಬರ್ 4 : ಭಾರತ vs ನ್ಯೂಜಿಲ್ಯಾಂಡ್​, ದುಬೈ

ಅಕ್ಟೋಬರ್ 6: ಭಾರತ vs ಪಾಕಿಸ್ತಾನ, ದುಬೈ

ಅಕ್ಟೋಬರ್ 9: ಭಾರತ vs ಶ್ರೀಲಂಕಾ, ದುಬೈ

ಅಕ್ಟೋಬರ್ 13: ಭಾರತ vs ಆಸ್ಟ್ರೇಲಿಯಾ, ಶಾರ್ಜಾ

Continue Reading
Advertisement
Use nandini ghee compulsorily in temple prasadam Order of the Department of Religious Endowments
ಕರ್ನಾಟಕ11 ಗಂಟೆಗಳು ago

Nandini ghee: ದೇವಸ್ಥಾನಗಳ ಪ್ರಸಾದದಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪವನ್ನೇ ಬಳಸಿ; ಧಾರ್ಮಿಕ ದತ್ತಿ ಇಲಾಖೆ ಆದೇಶ

Temporary additional coaches to be attached to 34 trains for Dasara 2024
ಬೆಂಗಳೂರು12 ಗಂಟೆಗಳು ago

Dasara 2024: ಪ್ರಯಾಣಿಕರಿಗೆ ಗುಡ್‌ನ್ಯೂಸ್‌; ದಸರಾ ಹಬ್ಬಕ್ಕೆ 34 ರೈಲುಗಳಿಗೆ ತಾತ್ಕಾಲಿಕ ಹೆಚ್ಚುವರಿ ಬೋಗಿಗಳ ಜೋಡಣೆ

Theft case
ಬೆಂಗಳೂರು12 ಗಂಟೆಗಳು ago

Theft case : ಮಧ್ಯರಾತ್ರಿಯಲ್ಲಿ ವಕೀಲನಿಗೆ ಚಾಕು ತೋರಿಸಿ ಸುಲಿಗೆ ಮಾಡಿ ಬೆದರಿಕೆ ಹಾಕಿದ ಖದೀಮರು

Also test the prasadam of the holy places of the state Pralhad Joshi urges state government
ಬೆಂಗಳೂರು15 ಗಂಟೆಗಳು ago

Tirupati laddu Row : ತಿರುಪತಿ ಲಡ್ಡು ಬಳಿಕ ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದವನ್ನೂ ಪರೀಕ್ಷೆಗೊಳಪಡಿಸಿ; ರಾಜ್ಯ ಸರ್ಕಾರಕ್ಕೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಗ್ರಹ

Road Accident
ಬೆಂಗಳೂರು16 ಗಂಟೆಗಳು ago

Road Accident : ಚಾಲಕ ಕಾರಿನೊಳಗೆ ಮಲಗಿದ್ದಾಗಲೇ ನಡುರಾತ್ರಿ ಹೊತ್ತಿ ಉರಿದ ಕಾರು! ಅಗ್ನಿ ಅವಘಡಕ್ಕೆ ಕಾರಣ ನಿಗೂಢ!

Road Accident
ಕೋಲಾರ16 ಗಂಟೆಗಳು ago

Road Accident: ಅಪರಿಚಿತ ವಾಹನ ಡಿಕ್ಕಿ ಹೊಡೆದ ರಭಸಕ್ಕೆ ಬೈಕ್‌ ಸವಾರನ ತಲೆಯೇ ಕಟ್‌! ಭೀಕರ ದೃಶ್ಯಕ್ಕೆ ಬೆಚ್ಚಿ ಬಿದ್ದ ಜನರು

Good news for the children of yellow board drivers Do this to get a scholarship under Vidyanidhi
ಬೆಂಗಳೂರು ಟೆಕ್ ಸಮ್ಮಿಟ್17 ಗಂಟೆಗಳು ago

Students Scholarship : ಯೆಲ್ಲೋ ಬೋರ್ಡ್‌ ವಾಹನ ಚಾಲಕರ ಮಕ್ಕಳಿಗೆ ಗುಡ್‌ ನ್ಯೂಸ್‌; ವಿದ್ಯಾನಿಧಿಯಡಿ ಸ್ಕಾಲರ್‌ಶಿಪ್‌ ಪಡೆಯಲು ಹೀಗೆ ಮಾಡಿ

allegations of rape honeytrap Mla Munirathna arrested again by Kaggalipura police as soon as he came out of jail
ರಾಜಕೀಯ17 ಗಂಟೆಗಳು ago

MLA Muniratna: ಅತ್ಯಾಚಾರ, ಹನಿಟ್ರ್ಯಾಪ್‌ ಆರೋಪ; ಜೈಲಿನಿಂದ ಹೊರಬರುತ್ತಿದ್ದಂತೆ ಶಾಸಕ ಮುನಿರತ್ನ ಮತ್ತೆ ಅರೆಸ್ಟ್‌

Dina Bhavishya
ಭವಿಷ್ಯ23 ಗಂಟೆಗಳು ago

Dina Bhavishya : ಈ ರಾಶಿಯವರು ಇಂದು ದೊಡ್ಡ ಯೋಜನೆಯತ್ತ ಗಮನ ಹರಿಸುವಿರಿ

MCC Seat Retention, Opportunity to Cancel KEA Seat Deadline to Cancel Seats by 11 AM on September 20
ಬೆಂಗಳೂರು1 ದಿನ ago

KEA : ಎಂಸಿಸಿ ಸೀಟು ಉಳಿಸಿಕೊಂಡು, ಕೆಇಎ ಸೀಟು ರದ್ದತಿಗೆ ಅವಕಾಶ; ಸೀಟು ರದ್ದು ಪಡಿಸಿಕೊಳ್ಳಲು ನಾಳೆವರೆಗೂ ಗಡುವು

Kannada Serials
ಕಿರುತೆರೆ11 ತಿಂಗಳುಗಳು ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ12 ತಿಂಗಳುಗಳು ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ11 ತಿಂಗಳುಗಳು ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

galipata neetu
ಕಿರುತೆರೆ10 ತಿಂಗಳುಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Bigg Boss' dominates TRP; Sita Rama fell to the sixth position
ಕಿರುತೆರೆ11 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ9 ತಿಂಗಳುಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ10 ತಿಂಗಳುಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Sudeep's birthday location shift
ಸ್ಯಾಂಡಲ್ ವುಡ್3 ವಾರಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್3 ವಾರಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ4 ವಾರಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ1 ತಿಂಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ1 ತಿಂಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ1 ತಿಂಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 ತಿಂಗಳುಗಳು ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

ಟ್ರೆಂಡಿಂಗ್‌