Site icon Vistara News

Border Gavaskar Trophy : ಆಲೂರಿನಲ್ಲಿ ಅಭ್ಯಾಸ ಆರಂಭಿಸಿದ ಆಸ್ಟ್ರೇಲಿಯಾ ತಂಡದ ಆಟಗಾರರು

Border gavaskar trophy

#image_title

ಬೆಂಗಳೂರು: ಬಾರ್ಡರ್​ ಗವಾಸ್ಕರ್​ ಟ್ರೋಫಿ (Border Gavaskar Trophy) ಟೆಸ್ಟ್​ ಸರಣಿಗಾಗಿ ಭಾರತಕ್ಕೆ ಆಗಮಿಸಿರುವ ಆಸ್ಟ್ರೇಲಿಯಾ ತಂಡ ಬೆಂಗಳೂರಿನ ಆಲೂರಿನಲ್ಲಿರುವ ಕರ್ನಾಟಕ ಕ್ರಿಕೆಟ್​ ಅಸೋಸಿಯೇಷನ್​ ಗ್ರೌಂಡ್​ನಲ್ಲಿ ಅಭ್ಯಾಸ ಆರಂಭಿಸಿದೆ. ಫೆಬ್ರವರಿ 8ರಂದು ಮೊದಲ ಪಂದ್ಯ ನಡೆಯಲಿದ್ದು, ಒಟ್ಟು ನಾಲ್ಕು ಪಂದ್ಯಗಳು ನಡೆಯಲಿವೆ. ಈ ಸರಣಿ ಭಾರತ ತಂಡಕ್ಕೆ ವಿಶ್ವ ಟೆಸ್ಟ್​ ಚಾಂಪಿಯನ್​ಷಿಪ್​ನ ಕೊನೇ ಸರಣಿಯಾಗಿದೆ. ಸದ್ಯ ಭಾರತ ತಂಡ ಅಂಕಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದು, ಆಸ್ಟ್ರೇಲಿಯಾ ತಂಡ ಮೊದಲ ಸ್ಥಾನದಲ್ಲಿದೆ.

ಪ್ರವಾಸಿ ತಂಡದ ನಾಯಕತ್ವವನ್ನು ವೇಗದ ಬೌಲರ್​ ಪ್ಯಾಟ್‌ ಕಮಿನ್ಸ್‌ ವಹಿಸಿಕೊಂಡಿದ್ದು, ಅನುಭವಿ ಬ್ಯಾಟರ್‌ ಸ್ಟೀವ್‌ ಸ್ಮಿತ್‌ ಉಪನಾಯಕರಾಗಿದ್ದಾರೆ. ಅವರು ತಡವಾಗಿ ತಂಡವನ್ನು ಸೇರಿಕೊಳ್ಳಲಿದ್ದಾರೆ ಎನ್ನಲಾಗಿದೆ. ಆಸ್ಟ್ರೇಲಿಯಾ ತಂಡದ ಸ್ಪಿನ್‌ ಬೌಲಿಂಗ್‌ ಆಲ್‌ರೌಂಡರ್‌ ಆಸ್ಟನ್​ ಅಗರ್​, ಅಭ್ಯಾಸದ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಟೆಸ್ಟ್ ಸರಣಿ ಫೆಬ್ರವರಿ 9ರಿಂದ ಟೆಸ್ಟ್​ ಸರಣಿ ನಡೆಯಲಿದ್ದು, ಅದು ಮುಗಿದ ಬಳಿಕ ಮಾರ್ಚ್​ 17ರಂದು ಏಕ ದಿನ ಪಂದ್ಯಗಳ ಸರಣಿ ಆರಂಭಗೊಳ್ಳಲಿದೆ. ನವ ದೆಹಲಿ, ಹಿಮಾಚಲ ಪ್ರದೇಶದ ಧರ್ಮಶಾಲಾ ಕ್ರಿಕೆಟ್​ ಸ್ಟೇಡಿಯಮ್ ಹಾಗೂ ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಮ್​ನಲ್ಲಿ ಪಂದ್ಯ ನಡೆಯಲಿದೆ. ಮುಂಬಯಿ, ವಿಶಾಖಪಟ್ಟಣಮ್​, ಚೆನ್ನೈನಲ್ಲಿ ಏಕ ದಿನ ಸರಣಿ ನಡೆಯಲಿದೆ.

ಇದನ್ನೂ ಓದಿ : Border Gavaskar Trophy: ಬಾರ್ಡರ್​ ಗವಾಸ್ಕರ್​ ಟ್ರೋಫಿಯಲ್ಲಿ ಗರಿಷ್ಠ ರನ್​ರೇಟ್​ ಹೊಂದಿರುವ ಬ್ಯಾಟರ್​ಗಳು

ಟೆಸ್ಟ್​ ಸರಣಿಗೆ ರವೀಂದ್ರ ಜಡೇಜಾ ಅವರು ಫಿಟ್​ ಎನಿಸಿಕೊಂಡಿದ್ದಾರೆ. ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್​ ಅಕಾಡೆಮಿಯಲ್ಲಿ ರವೀಂದ್ರ ಜಡೇಜಾ ಅವರಿಗೆ ಫಿಟ್​​ನೆಸ್​ ಟೆಸ್ಟ್​ ನಡೆದಿತ್ತು. ಅದರಲ್ಲಿ ಅವರು ಪಾಸ್ ಆಗಿದ್ದಾರೆ. ಇದೇ ವೇಳೆ ಪ್ರಮುಖ ಬ್ಯಾಟರ್‌ ಶ್ರೇಯಸ್ ಅಯ್ಯರ್‌ ಅವರು ಬೆನ್ನು ನೋವಿನಿಂದ ಸಂಪೂರ್ಣವಾಗಿ ಚೇತರಿಸಿಕೊಳ್ಳದ ಹಿನ್ನೆಲೆಯಲ್ಲಿ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್‌ನಿಂದ ಹೊರಗುಳಿಯಲಿದ್ದಾರೆ ಎಂದು ವರದಿಯಾಗಿದೆ.

Exit mobile version