Rishabh Pant: ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ ಪಂತ್​; ಈ ಸರಣಿಯಲ್ಲಿ ಕಣಕ್ಕೆ! - Vistara News

ಕ್ರಿಕೆಟ್

Rishabh Pant: ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ ಪಂತ್​; ಈ ಸರಣಿಯಲ್ಲಿ ಕಣಕ್ಕೆ!

ರಿಷಭ್‌ ಪಂತ್‌(Rishabh Pant) ಅವರು ಕಠಿಣ ಫಿಟ್ನೆಸ್​ ನಡೆಸುವ ವಿಡಿಯೊ ಹಂಚಿಕೊಂಡು ಕ್ರಿಕೆಟ್​ಗೆ ಮರಳುವ ಸೂಚನೆ ನೀಡಿದ್ದಾರೆ.

VISTARANEWS.COM


on

Rishabh Pant
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕಳೆದ ವರ್ಷ ಡಿಸೆಂಬರ್ ಸಂಭವಿಸಿದ​ ಭೀಕರ ಕಾರು ಅಪಘಾತದಲ್ಲಿ ಪವಾಡ ಸದೃಶ ರೀತಿಯಲ್ಲಿ ಪಾರಾದ ಟೀಮ್‌ ಇಂಡಿಯಾದ ಸ್ಟಾರ್‌ ಆಟಗಾರ ರಿಷಭ್‌ ಪಂತ್‌(Rishabh Pant) ಅವರು 2024ರ ಆರಂಭದಲ್ಲೇ ಕ್ರಿಕೆಟ್​ಗೆ ಮರಳುವ ಸೂಚನೆ ನೀಡಿದ್ದಾರೆ. ಕಠಿಣ ಫಿಟ್ನೆಸ್​ ನಡೆಸುವ ವಿಡಿಯೊ ಹಂಚಿಕೊಂಡು ಪಂತ್​ ಈ ಸುಳಿವನ್ನು ನೀಡಿದ್ದಾರೆ.

ಕಳೆದ ತಿಂಗಳಷ್ಟೇ ರಿಷಭ್​ ಪಂತ್​ ಅವರು ಜನವರಿ(2024) 5ರಿಂದ ಆರಂಭಗೊಳ್ಳುವ ರಣಜಿ ಟ್ರೋಫಿಯಲ್ಲಿ ತವರು(Pant likely to play domestic cricket) ರಾಜ್ಯ ದೆಹಲಿ ಪರ ಕಣಕ್ಕಿಳಿಯಲಿದ್ದಾರೆ ಎಂದು ವರದಿಯಾಗಿತ್ತು. ಇದೀಗ ಈ ಸುದ್ದಿ ನಿಜವಾಗವು ಸಾಧ್ಯತೆಯೊಂದು ಕಂಡುಬಂದಿದೆ. ಪಂತ್​ ಅವರು ಜಿಮ್​ನಲ್ಲಿ ಬಾರ ಎತ್ತುವ ಮತ್ತು ಇನ್ನು ಕೆಲ ಕಸರತ್ತು ಮಾಡುವ ವಿಡಿಯೊವನ್ನು ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಹಂಚಿಕೊಂಡಿದ್ದಾರೆ. ಜತೆಗೆ ಎಲ್ಲ ನೋವನ್ನು ಮರೆತು ಮತ್ತೆ ಪುಟಿದೇಳುತ್ತಿದ್ದೇನೆ ಎಂದು ಬರೆದುಕೊಂಡಿದ್ದಾರೆ. ಪಂತ್ ಜಿಮ್‌ನಲ್ಲಿ ಫಿಟ್​ನೆಸ್​ ಮಾಡುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು ಅವರ ಅವರ ಅಭಿಮಾನಿಗಳು ನಿಮ್ಮ ಆಗಮನಕ್ಕೆ ಕಾಯುತ್ತಿದ್ದೇವೆ ಎಂದು ಕಮೆಂಟ್​ ಮಾಡಿದ್ದಾರೆ.

ಐಪಿಎಲ್​ ಆಡುವುದು ಖಚಿತ!

ಇತ್ತೀಚೆಗಷ್ಟೇ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಿರ್ದೇಶಕ ಸೌರವ್ ಗಂಗೂಲಿ ಅವರು ರಿಷಭ್​ ಪಂತ್​ ಸಾರಥ್ಯದಲ್ಲೇ 17ನೇ ಆವೃತ್ತಿಯ ಐಪಿಎಲ್​ನಲ್ಲಿ ತಂಡ ಕಣಕಿಳಿಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದರು. ಅಲ್ಲದೆ ಪಂತ್ ಈಗ ಆರೋಗ್ಯವಾಗಿದ್ದಾರೆ ಮತ್ತು ಅವರು ಐಪಿಎಲ್‌ ಆಡುವುದು ಖಚಿತ ಎಂದು ಪಿಟಿಐಗೆ ತಿಳಿಸಿದ್ದರು.

ಸದ್ಯ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್​ ಅಕಾಡೆಮಿಯಲ್ಲಿ (ಎನ್​ಸಿಎ) ಪುನಶ್ಚೇತನ ಶಿಬಿರದಲ್ಲಿರುವ ಪಂತ್​ ಈಗಾಗಲೆ ಬ್ಯಾಟಿಂಗ್​ ಮತ್ತು ಕೀಪಿಂಗ್​ ಅಭ್ಯಾಸ ನಡೆಸಿದ ವಿಡಿಯೊಗಳು 2 ತಿಂಗಳ ಹಿಂದೆ ವೈರಲ್​ ಆಗಿತ್ತು. ಅಲ್ಲದೆ ಕರ್ನಾಟಕದ JSW ವಿಜಯನಗರದಲ್ಲಿ ನಡೆದ ಕ್ರಿಕೆಟ್​ ಅಭ್ಯಾಸ ಪಂದ್ಯವೊಂದರಲ್ಲಿ ಪಂತ್​ ಬ್ಯಾಟಿಂಗ್​ ನಡೆಸಿದ್ದರು. ತಮ್ಮ ಎಂದಿನ ಶೈಲಿಯಲ್ಲೇ ಸಿಕ್ಸರ್​ ಮತ್ತು ಬೌಂಡರಿ ಕೂಡ ಬಾರಿಸಿ ಮಿಂಚಿದ್ದರು.

ಇದನ್ನೂ ಓದಿ Rishabh Pant : ಸಿಎಸ್​ಕೆ ತಂಡ ಸೇರ್ತಾರಾ ರಿಷಭ್​ ಪಂತ್​?

ಬಹುತೇಕ ಚೇತರಿಕೆ ಕಂಡಿರುವ ಅವರ ಫಿಟ್ನೆಸ್​ ಮೇಲೆ ಬಿಸಿಸಿಐ ವೈದ್ಯಕಿಯ ತಂಡ ನಿಗಾ ಇರಿಸಿದೆ. ಪಂತ್​ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಮರಳ ಬೇಕಾದರ ದೇಶೀಯ ಕ್ರಿಕೆಟ್​ನಲ್ಲಿ ಆಡಿ ತಮ್ಮ ಫಿಟ್​ಸೆನ್​ ಸಾಬೀತುಪಡಿಸಬೇಕಿದೆ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ಹೇಳಿರುವುದಾಗಿ ಇನ್​ಸೈಡ್​ ಸ್ಪೋರ್ಟ್ಸ್​ಗೆ ವರದಿ ಮಾಡಿದೆ.

ಡಿವೈಡರ್​ಗೆ ಡಿಕ್ಕಿಯಾಗಿದ್ದ ಕಾರು

ಕಳೆದ ಡಿಸೆಂಬರ್​ 30ರಂದು(rishabh pant accident date) ರಿಷಭ್​ ಪಂತ್ ಅವರು ಚಲಾಯಿಸಿಕೊಂಡು ಹೋಗುತ್ತಿದ್ದ ಕಾರು ಡಿವೈಡರ್​ಗೆ ಡಿಕ್ಕಿ(rishabh pant accident) ಹೊಡೆದಿತ್ತು. ಘಟನೆಯಲ್ಲಿ ಅವರ ಕಾರು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿತ್ತು. ಸುಟ್ಟ ಗಾಯಗಳು ಹಾಗೂ ಮಂಡಿಯ ಗಾಯಗೊಂಡಿಗೆ ರಿಷಭ್​ ಪಂತ್​ ಪಾರಾಗಿದ್ದರು. ಡೆಹ್ರಾಡೂನ್​ನಲ್ಲಿ ಆರಂಭದಲ್ಲಿ ಚಿಕಿತ್ಸೆ ಪಡೆದಿದ್ದ ಅವರನ್ನು ಬಳಿಕ ಮುಂಬಯಿಯ ಕೋಕಿಲಾ ಬೆನ್ ಆಸ್ಪತ್ರೆಗೆ ದಾಖಲಿಸಿ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

ICC Ban : ಮ್ಯಾಚ್​ ಫಿಕಿ ವೆಸ್ಟ್ ಇಂಡೀಸ್​ ಆಟಗಾರನಿಗೆ ಐದು ವರ್ಷ ಬ್ಯಾನ್​

ICC Ban: ಐಸಿಸಿ ಜನರಲ್ ಮ್ಯಾನೇಜರ್ ಅಲೆಕ್ಸ್ ಮಾರ್ಷಲ್ ಸಾರ್ವಜನಿಕ ಹೇಳಿಕೆಯಲ್ಲಿ, ಡೆವೊನ್ ಹಲವಾರು ಭ್ರಷ್ಟಾಚಾರ ವಿರೋಧಿ ಅರಿವು ಮೂಡಿಸುವ ಅಧಿವೇಶನಗಳಲ್ಲಿ ಭಾಗವಹಿಸಿದ್ದರು. ಸಂಹಿತೆಗಳ ಅಡಿಯಲ್ಲಿ ಅವರ ಬಾಧ್ಯತೆಗಳ ಬಗ್ಗೆ ತಿಳಿದಿದ್ದರು ಎಂದು ಹೇಳಿದ್ದಾರೆ.

VISTARANEWS.COM


on

IPL 2024
Koo

ಬೆಂಗಳೂರು: ವೆಸ್ಟ್ ಇಂಡೀಸ್ ಕ್ರಿಕೆಟಿಗ ಡೆವೊನ್ ಥಾಮಸ್ ಅವರಿಗೆ ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ICC Ban) ಎಲ್ಲಾ ಮಾದರಿಯ ಕ್ರಿಕೆಟ್​ನಿಂದ ಐದು ವರ್ಷಗಳ ನಿಷೇಧ ಹೇರಿದೆ. ಕೆಲವು ಪ್ರಮುಖ ಟಿ 20 ಫ್ರ್ಯಾಂಚೈಸ್ ಲೀಗ್​​ಗಳ ಭ್ರಷ್ಟಾಚಾರ ವಿರೋಧಿ ಸಂಹಿತೆಗಳ ಏಳು ಸಂಹಿತೆಗಳನ್ನು ಉಲ್ಲಂಘಿಸಲು 34 ವರ್ಷದ ಆಟಗಾರ ಒಪ್ಪಿಕೊಂಡ ನಂತರ ಮೇ 2 ರಂದು ಉನ್ನತ ಸಂಸ್ಥೆ ತನ್ನ ನಿರ್ಧಾರ ದೃಢಪಡಿಸಿದೆ.

ಐಸಿಸಿ ಜನರಲ್ ಮ್ಯಾನೇಜರ್ ಅಲೆಕ್ಸ್ ಮಾರ್ಷಲ್ ಸಾರ್ವಜನಿಕ ಹೇಳಿಕೆಯಲ್ಲಿ, ಡೆವೊನ್ ಹಲವಾರು ಭ್ರಷ್ಟಾಚಾರ ವಿರೋಧಿ ಅರಿವು ಮೂಡಿಸುವ ಅಧಿವೇಶನಗಳಲ್ಲಿ ಭಾಗವಹಿಸಿದ್ದರು. ಸಂಹಿತೆಗಳ ಅಡಿಯಲ್ಲಿ ಅವರ ಬಾಧ್ಯತೆಗಳ ಬಗ್ಗೆ ತಿಳಿದಿದ್ದರು. ಆದರೂ ಅವರು ತಪ್ಪು ಮಾಡಿದ್ದಾರೆ ಎಂದು ಹೇಳಿದ್ದಾರೆ. ಲಂಕಾ ಪ್ರೀಮಿಯರ್ ಲೀಗ್ (ಎಲ್​ಪಿಎಲ್), ಅಭಿ ಧಾಬಿ ಟಿ 10 ಮತ್ತು ಕ್ಯಾರಿಬಿಯನ್ ಪ್ರೀಮಿಯರ್ ಲೀಗ್ (ಸಿಪಿಎಲ್) ಎಂಬ ಮೂರು ವಿಭಿನ್ನ ಫ್ರ್ಯಾಂಚೈಸ್ ಲೀಗ್​​ಗಳ ಕ್ರಿಕೆಟಿಗ ತನ್ನ ಬಾಧ್ಯತೆಗಳನ್ನು ಪೂರೈಸಲು ವಿಫಲರಾಗಿದ್ದಾರೆ ಎಂದು ಮಾರ್ಷಲ್ ದೃಢಪಡಿಸಿದರು.

ಥಾಮಸ್ ಅವರನ್ನು ಎಲ್ಲಾ ರೀತಿಯ ಸ್ಪರ್ಧಾತ್ಮಕ ಕ್ರಿಕೆಟ್​​ನಿಂದ ಐದು ವರ್ಷಗಳ ನಿಷೇಧವನ್ನು ವಿಧಿಸಲಾಗಿದೆ ಎಂದು ಐಸಿಸಿ ಗುರುವಾರ ದೃಢಪಡಿಸಿದೆ. ಆಂಟಿಗುವಾ ಬ್ಯಾಟರ್​ 2009 ರಲ್ಲಿ ಬಾಸೆಟೆರೆಯಲ್ಲಿ ಬಾಂಗ್ಲಾದೇಶ ವಿರುದ್ಧದ ಟಿ 20 ಐ ಪಂದ್ಯದ ಮೂಲಕ ವೆಸ್ಟ್ ಇಂಡೀಸ್ ಪರ ಅಂತರರಾಷ್ಟ್ರೀಯ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದ್ದರು. ಅವರು ಒಂದು ಟೆಸ್ಟ್, 21 ಏಕದಿನ ಮತ್ತು 12 ಟಿ 20 ಪಂದ್ಯಗಳಲ್ಲಿ ಕಾಣಿಸಿಕೊಂಡಿದ್ದಾರೆ. ಅವರ 34 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಕೊನೆಯದ್ದು ಡಿಸೆಂಬರ್ 2022 ರಲ್ಲಿ ಅಡಿಲೇಡ್ ಓವಲ್​ನಲ್ಲಿ ನಡೆದಿತ್ತು.

ಇದನ್ನೂ ಓದಿ: India’s Jersey T20 World Cup: ಭಾರತ ತಂಡದ ಹೊಸ ಜೆರ್ಸಿ ಕಂಡು ಟ್ರೋಲ್​ ಮಾಡಿದ ನೆಟ್ಟಿಗರು

ಮೂರು ಫ್ರಾಂಚೈಸಿ ಲೀಗ್​ಗಳ ಮ್ಯಾಚ್ ಫಿಕ್ಸಿಂಗ್ನಲ್ಲಿ ಭಾಗಿಯಾಗಿದ್ದಕ್ಕಾಗಿ ಕ್ರಿಕೆಟಿಗನನ್ನು ಐಸಿಸಿ ಈಗಾಗಲೇ ಮೇ 2023 ರಲ್ಲಿ ಅಮಾನತುಗೊಳಿಸಿತ್ತು. ಎಲ್ಪಿಎಲ್​​ನಲ್ಲಿ 2021 ರ ಆವೃತ್ತಿಯಲ್ಲಿ, ಥಾಮಸ್ ಗಂಭೀರ ಆರೋಪವನ್ನು ಎದುರಿಸಿದ್ದರು.

2021ರ ಅಬುಧಾಬಿ ಟಿ 10 ಲೀಗ್​ನಲ್ಲಿ ಪುಣೆ ಡೆವಿಲ್ಸ್​​ ತಂಡದಲ್ಲಿದ್ದಾಗ ಮಾಡಿದ ವಿಧಾನದ ವಿವರಗಳನ್ನು ವರದಿ ಮಾಡಲು ಅವರು ವಿಫಲರಾಗಿದ್ದಾರೆ.

Continue Reading

ಕ್ರೀಡೆ

Champions Trophy 2025: ಇವರಿಂದ ಒಪ್ಪಿಗೆ ಸಿಕ್ಕರೆ ಪಾಕಿಸ್ತಾನದಲ್ಲಿ ಭಾರತ ಚಾಂಪಿಯನ್ಸ್ ಟ್ರೋಫಿ ಆಡಲು ಸಿದ್ಧ ಎಂದ ಬಿಸಿಸಿಐ ಉಪಾಧ್ಯಕ್ಷ

Champions Trophy 2025: ಚಾಂಪಿಯನ್ ಟ್ರೋಫಿಯ ಸಂದರ್ಭದಲ್ಲಿ, ಭಾರತ ಸರ್ಕಾರ ನಮಗೆ ಏನು ಹೇಳುತ್ತದೆಯೋ ಅದನ್ನು ಮಾಡುತ್ತೇವೆ. ಭಾರತ ಸರ್ಕಾರ ನಮಗೆ ಅನುಮತಿ ನೀಡಿದಾಗ ಮಾತ್ರ ನಾವು ನಮ್ಮ ತಂಡವನ್ನು ಕಳುಹಿಸುತ್ತೇವೆ. ಹಾಗಾಗಿ ಭಾರತ ಸರ್ಕಾರದ ನಿರ್ಧಾರದ ಮೇಲೆ ತಂಡದ ಪ್ರಯಾಣದ ಭವಿಷ್ಯ ಅಡಗಿದೆ” ಎಂದು ಶುಕ್ಲಾ ಹೇಳಿದರು.

VISTARANEWS.COM


on

Champions Trophy 2025
Koo

ನವದೆಹಲಿ: ಪಾಕಿಸ್ತಾನ ಆತಿಥ್ಯದಲ್ಲಿ ಮುಂದಿನ ವರ್ಷ(2025) ನಡೆಯುವ ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ(Champions Trophy 2025) ಕೇಂದ್ರ ಸರ್ಕಾರ ಅನುಮತಿ ನೀಡಿದರೆ ಮಾತ್ರ ಭಾರತ(India Travelling To Pakistan) ತಂಡವನ್ನು ಪಾಕಿಸ್ತಾನಕ್ಕೆ ಕಳುಹಿಸಲಾಗುವುದು ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಉಪಾಧ್ಯಕ್ಷ ರಾಜೀವ್ ಶುಕ್ಲಾ(Rajeev Shukla) ಹೇಳಿದ್ದಾರೆ.

ಐಸಿಸಿ ಚಾಂಪಿಯನ್ಸ್ ಟ್ರೋಫಿ ಮುಂದಿನ ವರ್ಷ ಫೆಬ್ರವರಿಯಿಂದ ಮಾರ್ಚ್ 2025 ರವರೆಗೆ ಪಾಕಿಸ್ತಾನದಲ್ಲಿ ನಡೆಯಲಿದೆ. ಪಂದ್ಯಾವಳಿಗಾಗಿ ಭಾರತವು ಪಾಕಿಸ್ತಾನಕ್ಕೆ ಪ್ರಯಾಣಿಸುವುದಿಲ್ಲ ಎಂಬ ಮಾಧ್ಯಮ ವರದಿಗಳ ಚರ್ಚೆಯ ಮಧ್ಯೆ ರಾಜೀವ್ ಶುಕ್ಲಾ ಅವರ ಈ ಹೇಳಿಕೆಯಿಂದ ಭಾರತ ತಂಡ ಪಾಕ್​ಗೆ ಪ್ರಯಾಣ ಬೆಳೆಸಲಿದೆಯಾ ಎಂಬ ಭಾರೀ ಕುತೂಹಲ ಮೂಡುವಂತೆ ಮಾಡಿದೆ.

ಎಎನ್‌ಐ ಜತೆ ಮಾತನಾಡಿದ ಶುಕ್ಲಾ, “ಚಾಂಪಿಯನ್ ಟ್ರೋಫಿಯ ಸಂದರ್ಭದಲ್ಲಿ, ಭಾರತ ಸರ್ಕಾರ ನಮಗೆ ಏನು ಹೇಳುತ್ತದೆಯೋ ಅದನ್ನು ಮಾಡುತ್ತೇವೆ. ಭಾರತ ಸರ್ಕಾರ ನಮಗೆ ಅನುಮತಿ ನೀಡಿದಾಗ ಮಾತ್ರ ನಾವು ನಮ್ಮ ತಂಡವನ್ನು ಕಳುಹಿಸುತ್ತೇವೆ. ಹಾಗಾಗಿ ಭಾರತ ಸರ್ಕಾರದ ನಿರ್ಧಾರದ ಮೇಲೆ ತಂಡದ ಪ್ರಯಾಣದ ಭವಿಷ್ಯ ಅಡಗಿದೆ” ಎಂದು ಶುಕ್ಲಾ ಹೇಳಿದರು.

ನವೆಂಬರ್ 2008ರ ಮುಂಬೈ ಭಯೋತ್ಪಾದಕ ದಾಳಿಯಲ್ಲಿ 150 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ ನಂತರ ಭಾರತವು ಪಾಕಿಸ್ತಾನದೊಂದಿಗೆ ದ್ವಿಪಕ್ಷೀಯ ಕ್ರಿಕೆಟ್ ಆಡಿಲ್ಲ. ಜೂನ್-ಜುಲೈ 2008 ರಲ್ಲಿ ಏಷ್ಯಾ ಕಪ್ ಸಮಯದಲ್ಲಿ ಭಾರತೀಯ ಕ್ರಿಕೆಟ್ ತಂಡವು ಕೊನೆಯ ಬಾರಿಗೆ ಪಾಕಿಸ್ತಾನಕ್ಕೆ ಪ್ರಯಾಣಿಸಿತ್ತು. ಭಾರತದಲ್ಲಿ ಡಿಸೆಂಬರ್ 2012 ರಿಂದ ಜನವರಿ 2013 ರವರೆಗಿನ ದ್ವಿಪಕ್ಷೀಯ ಸರಣಿಯು ಎರಡು ರಾಷ್ಟ್ರಗಳ ನಡುವಿನ ಅಂತಿಮ ದ್ವಿಪಕ್ಷೀಯ ಸರಣಿಯಾಗಿದೆ. ಇದಾದ ಬಳಿಕ ಉಭಯ ತಂಡಗಳು ಕೇವಲ ಐಸಿಸಿ ಟೂರ್ನಿಗಳಲ್ಲಿ ಮಾತ್ರ ಆಡುತ್ತವೆ.

ಇದನ್ನೂ ಓದಿ Champions Trophy 2025: ಚಾಂಪಿಯನ್ಸ್ ಟ್ರೋಫಿಗೆ ಸ್ಥಳ ನಿಗದಿಪಡಿಸಿದ ಪಾಕಿಸ್ತಾನ

ಕಳೆದ ವರ್ಷ ಪಾಕಿಸ್ತಾನದ ಆತಿಥ್ಯದಲ್ಲಿ ನಡೆದಿದ್ದ ಏಷ್ಯಾಕಪ್​ ಟೂರ್ನಿಯಲ್ಲಿ ಭಾರತ ಪಾಕ್​ಗೆ ಹೋಗಲು ಒಪ್ಪದ ಕಾರಣ ಹೈಬ್ರೀಡ್​ ಮಾದರಿಯಲ್ಲಿ ಪಾಕ್​ ಮತ್ತು ಶ್ರೀಲಂಕಾದಲ್ಲಿ ಆಡಿಸಲಾಗಿತ್ತು. ಭಾರತ ತನ್ನ ಪಂದ್ಯಗಳನ್ನು ಶ್ರೀಲಂಕಾದಲ್ಲಿ ಆಡಿತ್ತು. ಪಾಕಿಸ್ತಾನದಲ್ಲಿ ನಡೆದಿದ್ದ ಪಂದ್ಯವಾವಳಿಗೆ ಬಿಸಿಸಿಐ ಅಧ್ಯಕ್ಷ ರೋಜನ್​ ಬಿನ್ನಿ ಮತ್ತು ಉಪಾಧ್ಯಕ್ಷ ರಾಜೀವ್ ಶುಕ್ಲಾ ಹಾಜರಾಗಿದ್ದರು.

ಪಾಕಿಸ್ತಾನ ಕ್ರಿಕೆಟ್ ಮಂಡಳಿಯು(PCB) ಈಗಾಗಲೇ ಟೂರ್ನಿಯ ಪಂದ್ಯಾವಳಿಗೆ ಸ್ಥಳ ನಿಗದಿಪಡಿಸಿದೆ. ಕರಾಚಿ, ಲಾಹೋರ್ ಮತ್ತು ರಾವಲ್ಪಿಂಡಿಯನ್ನು ಆಯ್ಕೆ ಮಾಡಿಕೊಂಡಿದೆ. ಇದೇ ವೇಳೆ ಪಿಸಿಬಿ ಅಧ್ಯಕ್ಷ ಮೊಹ್ಸಿನ್ ನಖ್ವಿ ಭಾರತ ಈ ಬಾರಿ ಪಾಕ್​ನಲ್ಲಿ ಕ್ರಿಕೆಟ್ ಆಡಲಿದೆ ಎಂದು ಬಲವಾದ ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ರಾಜೀವ್ ಶುಕ್ಲಾ ಕೇಂದ್ರ ಸಮ್ಮತಿ ನೀಡಿದರೆ ಪಾಕ್​ಗೆ ಹೋಗಲು ಸಿದ್ಧ ಎಂದು ಹೇಳಿರುವುದು ಅಚ್ಚರಿ ತಂದಿದೆ. ಭಾರತ, ಆಸ್ಟ್ರೇಲಿಯಾ, ಪಾಕಿಸ್ತಾನ, ಇಂಗ್ಲೆಂಡ್​, ಅಫಘಾನಿಸ್ತಾನ, ದಕ್ಷಿಣ ಆಫ್ರಿಕಾ, ನ್ಯೂಜಿಲ್ಯಾಂಡ್​ ಮತ್ತು ಬಾಂಗ್ಲಾದೇಶ ಟೂರ್ನಿಗೆ ಅರ್ಹತೆ ಪಡೆದ ತಂಡಗಳಾಗಿವೆ.

Continue Reading

ಕ್ರೀಡೆ

India’s Jersey T20 World Cup: ಭಾರತ ತಂಡದ ಹೊಸ ಜೆರ್ಸಿ ಕಂಡು ಟ್ರೋಲ್​ ಮಾಡಿದ ನೆಟ್ಟಿಗರು

India’s Jersey T20 World Cup: ನೀಲಿ ಮತ್ತು ಕಿತ್ತಳೆ ಬಣ್ಣ ಮಿಶ್ರಿತ ಜೆರ್ಸಿಯಲ್ಲಿ ಅಂಗಿಯ ಭುಜಗಳು ಕಿತ್ತಳೆ ಬಣ್ಣದಲ್ಲಿದ್ದು, ಮೂರು ಬಿಳಿ ಬಣ್ಣದ ಪಟ್ಟಿಯನ್ನು ಹೊಂದಿದೆ. ಉಳಿದ ಭಾಗವು ನೀಲಿ ಬಣ್ಣದ್ದಾಗಿದೆ. ಶರ್ಟ್​ನ ಕಾಲರ್​ ಸುತ್ತಲೂ ತ್ರಿವರ್ಣದ ಪಟ್ಟಿ ಹೊಂದಿದೆ. ಬಹುತೇಕ ಭಾರತೀಯ ಕ್ರಿಕೆಟ್​ ಅಭಿಮಾನಿಗಳಿಗೆ ಈ ಜೆರ್ಸಿ ಅಷ್ಟಾಗಿ ಇಷ್ಟವಾಗಿಲ್ಲ.

VISTARANEWS.COM


on

India’s Jersey T20 World Cup
Koo

ಮುಂಬಯಿ: ಮುಂಬರುವ ಟಿ20 ವಿಶ್ವಕಪ್(T20 World Cup 2024)​ ಟೂರ್ನಿಗೆ ಟೀಮ್​ ಇಂಡಿಯಾದ ಹೊಸ ಜೆರ್ಸಿ(India’s Jersey T20 World Cup) ಸೋಮವಾರ ಪ್ರಕಟಗೊಂಡಿತ್ತು. ಇದೀಗ ಈ ನೂತನ ಜೆರ್ಸಿ ಕಂಡು ನೆಟ್ಟಿಗರು ಹಲವು ಮೀಮ್ಸ್​ಗಳ ಮೂಲಕ ಟ್ರೋಲ್​ ಮಾಡಲಾರಂಭಿಸಿದ್ದಾರೆ.

ಭಾರತ ತಂಡದ ಕಿಟ್​ ಪ್ರಯೋಜಕತ್ವ ಪಡೆದಿರುವ ಕ್ರೀಡಾ ಉಡುಪುಗಳ ಅಡಿಡಾಸ್​ ಕಂಪೆನಿ, ಹಿಮಾಚಲ ಪ್ರದೇಶದ ಧರ್ಮಶಾಲಾ ಕ್ರಿಡಾಂಗಣದಲ್ಲಿ ಹೆಲಿಕಾಪ್ಟರ್ ಮೂಲಕ ದೈತ್ಯ ಗಾತ್ರದ ಹೊಸ ಜೆರ್ಸಿಯನ್ನು ಅನಾವರಣ ಮಾಡಲಾಗಿತ್ತು. ರೋಹಿತ್​ ಶರ್ಮ, ರವೀಂದ್ರ ಜಡೇಜಾ ಮತ್ತು ಕುಲ್​ದೀಪ್​ ಯಾದವ್​ ಒಳಗೊಂಡ ವಿಶೇಷ ವಿಡಿಯೊ ಇದಾಗಿತ್ತು.

ಹೊಸ ಜೆರ್ಸಿಯಲ್ಲಿ ರೋಹಿತ್​ ಶರ್ಮ, ವಿರಾಟ್ ಕೊಹ್ಲಿ, ಸೂರ್ಯಕುಮಾರ್​ ಯಾದವ್​, ಉಪನಾಯಕ ಹಾರ್ದಿಕ್​ ಪಾಂಡ್ಯ ಅವರ ಎಡಿಟೆಡ್​ ಫೋಟೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿದೆ. ಈ ಫೊಟೊ ಕಂಡ ಕೆಲ ನೆಟ್ಟಿಗರು ಇದು ಇಂಡಿಯನ್​ ಆಯಿಲ್​ ಕಂಪೆನಿಯ ಡ್ರೆಸ್​ನಂತಿದೆ,, ಹಾರ್ಫಿಕ್​ ಬಾಟಲ್​ ತರಾ ಇದೆ ಎಂದು ಕಮೆಂಟ್​ ಮಾಡಿದ್ದಾರೆ. ಇನ್ನು ಕೆಲವರು ಜೀತಾ​ಲಾಲ್​ ಚಂಪಕ್ಲಾಲ್ ಅವರಿಂದ ಸ್ಫೂರ್ತಿ ಪಡೆದು ಈ ಜೆರ್ಸಿ ಮಾಡಲಾಗಿದೆ ಎಂದು ಹೇಳಿದ್ದಾರೆ.

ನೀಲಿ ಮತ್ತು ಕಿತ್ತಳೆ ಬಣ್ಣ ಮಿಶ್ರಿತ ಜೆರ್ಸಿಯಲ್ಲಿ ಅಂಗಿಯ ಭುಜಗಳು ಕಿತ್ತಳೆ ಬಣ್ಣದಲ್ಲಿದ್ದು, ಮೂರು ಬಿಳಿ ಬಣ್ಣದ ಪಟ್ಟಿಯನ್ನು ಹೊಂದಿದೆ. ಉಳಿದ ಭಾಗವು ನೀಲಿ ಬಣ್ಣದ್ದಾಗಿದೆ. ಶರ್ಟ್​ನ ಕಾಲರ್​ ಸುತ್ತಲೂ ತ್ರಿವರ್ಣದ ಪಟ್ಟಿ ಹೊಂದಿದೆ. ಬಹುತೇಕ ಭಾರತೀಯ ಕ್ರಿಕೆಟ್​ ಅಭಿಮಾನಿಗಳಿಗೆ ಈ ಜೆರ್ಸಿ ಅಷ್ಟಾಗಿ ಇಷ್ಟವಾಗಿಲ್ಲ. ಇದೇ ಕಾರಣದಿಂದ ದಯವಿಟ್ಟು ಈ ಜೆರ್ಸಿಯನ್ನು ಬದಲಿಸಿ ಎಂದು ಬಿಸಿಸಿಐಗೆ ಸಲಹೆಯನ್ನೂ ನೀಡಿದ್ದಾರೆ. ಈ ಜೆರ್ಸಿ ಬದಲು 2019ರ ಏಕದಿನ ವಿಶ್ವಕಪ್​ನಲ್ಲಿ ಇಂಗ್ಲೆಂಡ್​ ವಿರುದ್ಧ ಧರಿಸಿದ್ದ ಜೆರ್ಸಿ ಉತ್ತಮ ಎಂದು ನೆಟ್ಟಿಗರು ಹೇಳಿದ್ದಾರೆ.

ಇದನ್ನೂ ಓದಿ T20 World Cup 2024: ಟಿ20 ವಿಶ್ವಕಪ್​ಗೆ ಪ್ರಕಟಗೊಂಡ ಎಲ್ಲ ತಂಡಗಳ ಆಟಗಾರರ ಪಟ್ಟಿ

ಭಾರತ ತನ್ನ ಮೊದಲ ಪಂದ್ಯವನ್ನು ಜೂನ್‌ 5 ರಂದು ಐರ್ಲೆಂಡ್​ ವಿರುದ್ಧ ಆಡಲಿದೆ. ದ್ವಿತೀಯ ಪಂದ್ಯ ಜೂನ್‌ 9 ರಂದು ಪಾಕ್​ ವಿರುದ್ಧ ಆಡಲಿದ. ಭಾರತ ತನ್ನ ಎಲ್ಲ ಲೀಗ್‌ ಪಂದ್ಯಗಳನ್ನು ಅಮೆರಿಕದಲ್ಲೇ ಆಡಲಿದೆ. ಇದರಲ್ಲಿ ಮೂರು ಪಂದ್ಯಗಳು ನ್ಯೂಯಾರ್ಕ್‌ ಮತ್ತು ಒಂದು ಪಂದ್ಯ ಫ್ಲೋರಿಡಾದಲ್ಲಿ ನಡೆಯಲಿದೆ. ಟೂರ್ನಿಯಲ್ಲಿ ಒಟ್ಟು 55 ಪಂದ್ಯಗಳು ನಡೆಯಲಿವೆ. ಜೂನ್ 1ರಿಂದ 18ರವರೆಗೆ ಗುಂಪು ಹಂತದಲ್ಲಿ 40 ಪಂದ್ಯಗಳು ನಡೆದರೆ, ಜೂನ್ 19 ರಿಂದ 24 ರವರೆಗೆ ಸೂಪರ್ 8 ಪಂದ್ಯಗಳು ನಡೆಯಲಿವೆ. ಜೂನ್​ 29ಕ್ಕೆ ಫೈನಲ್​ ಪಂದ್ಯ ಸಾಗಲಿದೆ.

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್​ ಕೀಪರ್​), ಸಂಜು ಸ್ಯಾಮ್ಸನ್ (ವಿಕೆಟ್​ ಕೀಪರ್​), ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಯುಜ್ವೇಂದ್ರ ಚಾಹಲ್, ಅರ್ಶದೀಪ್​ ಸಿಂಗ್​, ಜಸ್​ಪ್ರೀತ್​ ಬುಮ್ರಾ, ಮೊಹಮ್ಮದ್​ ಸಿರಾಜ್. ಮೀಸಲು ಆಟಗಾರರು ಶುಭಮನ್ ಗಿಲ್, ರಿಂಕು ಸಿಂಗ್, ಖಲೀಲ್ ಅಹ್ಮದ್ ಮತ್ತು ಅವೇಶ್ ಖಾನ್.

Continue Reading

ಕ್ರೀಡೆ

MS Dhoni: ಧೋನಿ 9ನೇ ಕ್ರಮಾಂಕದಲ್ಲಿ ಬ್ಯಾಟಿಂಗ್​ ನಡೆಸಲು ಇದುವೇ ಪ್ರಮುಖ ಕಾರಣ

MS Dhoni: ಧೋನಿ ಸ್ನಾಯು ಸೆಳೆತದಿಂದ ಬಳಲುತ್ತಿದ್ದು ಹೆಚ್ಚು ಒತ್ತು ಬ್ಯಾಟಿಂಗ್​ ನಡೆಸಲು ಸಾಧ್ಯವಾಗದ ಕಾರಣ ಅವರು ಧರ್ಮಶಾಲಾದಲ್ಲಿ ನಡೆದಿದ್ದ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ 9ನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಆಡಿದ್ದಾರೆ ಎಂದು ತಿಳಿದು ಬಂದಿದೆ.

VISTARANEWS.COM


on

MS Dhoni
Koo

ಚೆನ್ನೈ: ಧರ್ಮಶಾಲಾದಲ್ಲಿ ನಡೆದಿದ್ದ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಎಂಎಸ್ ಧೋನಿ(MS Dhoni) 9ನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಬಂದಿದ್ದರು. ಇದೇ ವಿಚಾರವಾಗಿ ಧೋನಿಯನ್ನು ಹಲವು ಮಾಜಿ ಆಟಗಾರರು ಟೀಕೆ ಮಾಡಿದ್ದರು. ಅನುಭವಿ ಆಟಗಾರನಾಗಿ ಈ ಕ್ರಮಾಂಕದಲ್ಲಿ ಆಡುವುದಾದರೆ ಚೆನ್ನೈ(Chennai Super Kings) ತಂಡ ಬೇರೆ ಆಟಗಾರನಿಗೆ ಅವಕಾಶ ನೀಡಿದರೆ ಉತ್ತಮ ಎಂದು ಮಾಜಿ ಆಟಗಾರ ಹರ್ಭಜನ್​ ಸಿಂಗ್​ ಹೇಳಿಕೆ ನೀಡಿದ್ದರು. ಆದರೆ ಧೋನಿ ಈ ಕ್ರಮಾಂಕದಲ್ಲಿ ಆಡಲು ಕಾರಣ ಏನೆಂಬುದು ತಡವಾಗಿ ಬೆಳಕಿಗೆ ಬಂದಿದೆ. ಧೋನಿ ಸ್ನಾಯು(Dhoni Muscle Tear) ನೋವಿನಿಂದ ಬಳಲುತ್ತಿದ್ದು ಹೆಚ್ಚು ಒತ್ತು ಬ್ಯಾಟಿಂಗ್​ ನಡೆಸಲು ಸಾಧ್ಯವಾಗದ ಕಾರಣ ಅವರು ಈ ನಿರ್ಧಾರ ಕೈಗೊಂಡಿದ್ದರು ತಂಡದ ಮೂಲಗಳು ಮಾಹಿತಿ ನೀಡಿದೆ.

ಧೋನಿ ಸ್ನಾಯು ಸೆಳೆತದ ನೋವಿನಿಂದ ಬಳಲುತ್ತಿದ್ದರೂ ಕೂಡ ಈ ನೋವನ್ನು ಮರೆಮಾಚಿ ಆಡುತ್ತಿದ್ದಾರೆ. ಈ ವಿಚಾರ ಯಾರಿಗೂ ತಿಳಿದಿಲ್ಲ. ನಾವು ವಾಸ್ತವಿಕವಾಗಿ ನಮ್ಮ ‘ಬಿ’ ತಂಡದೊಂದಿಗೆ ಆಡುತ್ತಿದ್ದೇವೆ. ಧೋನಿ ಅವರನ್ನು ಟೀಕಿಸುವವರಿಗೆ ಅವರು ಈ ತಂಡಕ್ಕಾಗಿ ಮಾಡುತ್ತಿರುವ ತ್ಯಾಗದ ಬಗ್ಗೆ ತಿಳಿದಿಲ್ಲ ”ಎಂದು ಸಿಎಸ್‌ಕೆ ಮೂಲಗಳು ತಳಿಸಿರುವುದಾಗಿ ಟೈಮ್ಸ್​ ಆಫ್​ ಇಂಡಿಯಾ ವರದಿ ಮಾಡಿದೆ.

ಡೆವೊನ್ ಕಾನ್ವೇ ಲಭ್ಯವಿದ್ದರೆ ಅದು ಧೋನಿಗೆ ವಿಶ್ರಾಂತಿ ಪಡೆಯಲು ಮತ್ತು ಚೇತರಿಸಿಕೊಳ್ಳಲು ಸಹಾಯವಾಗುತ್ತಿತ್ತು. ಏಕೆಂದರೆ ಕಾನ್ವೆ ಅನುಭವಿ ವಿಕೆಟ್​ ಕೀಪರ್​ ಕಮ್​ ಬ್ಯಾಟರ್​ ಆಗಿದ್ದಾರೆ. ದುರಾದೃಷ್ಟವಶಾತ್ ಕಾನ್ವೆ ಹೆಬ್ಬೆರಳಿನ ಗಾಯದಿಂದಾಗಿ ಸಂಪೂರ್ಣವಾಗಿ ಐಪಿಎಲ್ ನಿಂದ ಹೊರಗುಳಿದಿದ್ದಾರೆ. ಹೀಗಾಗಿ ಧೋನಿಗೆ ಪರ್ಯಾಕ ವಿಕೆಟ್​ ಕೀಪರ್​ ಚೆನ್ನೈ ತಂಡದಲ್ಲಿಲ್ಲ. ತಂಡಕ್ಕೆ ಯಾವುದೇ ಹಿನ್ನಡೆಯಾಗಬಾರದೆಂದು ಧೋನಿ ತನ್ನ ನೋವಿನ ಮಧ್ಯೆಯೂ ಆಡುತ್ತಿದ್ದಾರೆ.

ಇದನ್ನೂ ಓದಿ IPL 2024: ಬಸ್‌ ಕಂಡಕ್ಟರ್‌ಗಳಿಗೆ ವಿಶೇಷ ಉಡುಗೊರೆ ನೀಡಿದ ಚೆನ್ನೈ ಸೂಪರ್​ ಕಿಂಗ್ಸ್

ಈ ಬಾರಿಯ ಐಪಿಎಲ್​ನ ಮೊದಲ ಪಂದ್ಯದಲ್ಲಿಯೇ ಧೋನಿ ಗಾಯದ ಸಮಸ್ಯೆಯಿಂದ ಬಳಲುತ್ತಿರುವುದು ಕಂಡು ಬಂದಿತ್ತು. ಪಂದ್ಯದ ಬಳಿಕ ಅವರು ಹಲವು ಬಾರಿ ಕುಂಟುತಾ ನಡೆದ ವಿಡಿಯೊಗಳು ಕೂಡ ವೈರಲ್​ ಆಗಿತ್ತು. ಕಳೆದ ವರ್ಷ ಧೋನಿ ಗಾಯದ ಮಧ್ಯೆಯೇ ಸಂಪೂರ್ಣವಾಗಿ ನೋವು ನಿವಾರಕ ಪ್ಲಾಸ್ಟರ್​ ಸುತ್ತಿ ಟೂರ್ನಿ ಆಡಿದ್ದರು.

ತಂಡವನ್ನು 5 ಬಾರಿ ಚಾಂಪಿಯನ್​ ಮಾಡಿದ ಮಾಜಿ ನಾಯಕ ಮಹೇಂದ್ರ ಸಿಂಗ್​ ಧೋನಿಗೆ ಈ ಬಾರಿಯ ಐಪಿಎಲ್(IPL 2024)​ ಟೂರ್ನಿ ವಿದಾಯದ ಟೂರ್ನಿಯಾಗಲಿದೆ. ಈ ಮೂಲಕ ಧೋನಿ ಎಲ್ಲ ಮಾದರಿಯ ಕ್ರಿಕಟ್​ಗೂ ಗುಡ್​ಬೈ ಹೇಳಲಿದ್ದಾರೆ. ಇದೇ ಕಾರಣದಿಂದ ಅವರು ನಾಯಕತ್ವವನ್ನು ಋತುರಾಜ್​ ಗಾಯಕ್ವಾಡ್​ಗೆ ನೀಡಿದ್ದರು. ಧೋನಿ ಅವರು ಐಪಿಎಲ್​ ನಿವೃತ್ತಿಯಾದರೂ ಕೂಡ ಚೆನ್ನೈ ತಂಡದೊಂದಿಗಿನ ಒಡನಾಟ ಮಾತ್ರ ಮುಂದುವರಿಯುವ ಸಾಧ್ಯತೆ ಅಧಿಕವಾಗಿದೆ. ತಂಡದ ಮೆಂಟರ್​ ಆಗಿ ಅವರು ಕಾರ್ಯ ನಿರ್ವಹಿಸಬಹುದು. ಕಳೆದ ವರ್ಷವೇ ಧೋನಿ ಅವರು ಐಪಿಎಲ್​ಗೆ ವಿದಾಯ ಹೇಳಲು ನಿರ್ಧರಿಸಿದ್ದರು. ಆದರೆ ಅಭಿಮಾನಿಗಳ ಒತ್ತಾಯದ ಮೇರೆಗೆ ತಮ್ಮ ನಿವೃತ್ತಿಯನ್ನು ಮುಂದೆ ಹಾಕಿದ್ದರು.

Continue Reading
Advertisement
IPL 2024
ಕ್ರೀಡೆ3 mins ago

ICC Ban : ಮ್ಯಾಚ್​ ಫಿಕಿ ವೆಸ್ಟ್ ಇಂಡೀಸ್​ ಆಟಗಾರನಿಗೆ ಐದು ವರ್ಷ ಬ್ಯಾನ್​

lok sabha Election 2024
Lok Sabha Election 20248 mins ago

Lok Sabha Election 2024: ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ; ಮತದಾನಕ್ಕೆ ಬಂದು ಟ್ರೀಟ್‌ ಮಾಡಿದ ಡಾಕ್ಟರ್‌

West Bengal
ದೇಶ33 mins ago

West Bengal: ಬಂಗಾಳದಲ್ಲಿ ಮತದಾನದ ವೇಳೆ ಹಿಂಸೆ; ಬಿಜೆಪಿ ಅಭ್ಯರ್ಥಿ ಮೇಲೆ ಟಿಎಂಸಿ ಕಾರ್ಯಕರ್ತರ ದಾಳಿ!

Prajwal Revanna Case Government work against Revanna HD Kumaraswamy gives details of the case
ರಾಜಕೀಯ34 mins ago

Prajwal Revanna Case: ರೇವಣ್ಣರಿಗೆ ಖೆಡ್ಡಾ ತೋಡಿದ್ದು ಸರ್ಕಾರ; ಎಲ್ಲೆಲ್ಲಿ ಏನೇನು ಮಾಡಲಾಯಿತೆಂಬ ಇಂಚಿಂಚು ಡಿಟೇಲ್ಸ್‌ ಕೊಟ್ಟ ಎಚ್‌ಡಿಕೆ!

Champions Trophy 2025
ಕ್ರೀಡೆ36 mins ago

Champions Trophy 2025: ಇವರಿಂದ ಒಪ್ಪಿಗೆ ಸಿಕ್ಕರೆ ಪಾಕಿಸ್ತಾನದಲ್ಲಿ ಭಾರತ ಚಾಂಪಿಯನ್ಸ್ ಟ್ರೋಫಿ ಆಡಲು ಸಿದ್ಧ ಎಂದ ಬಿಸಿಸಿಐ ಉಪಾಧ್ಯಕ್ಷ

Viral News
ವೈರಲ್ ನ್ಯೂಸ್40 mins ago

Viral News: ತಮ್ಮನ ಬದಲು ನೀಟ್‌ ಪರೀಕ್ಷೆ ಬರೆದ ಅಣ್ಣ; ಕೊನೆಯ ಕ್ಷಣದಲ್ಲಿ ಸಹೋದರರ ಕಳ್ಳಾಟ ಬಯಲಾಗಿದ್ದು ಹೇಗೆ?

Car Accident
ಕರ್ನಾಟಕ42 mins ago

Road Accident: ಮಂಜೇಶ್ವರದಲ್ಲಿ ಆಂಬ್ಯುಲೆನ್ಸ್-ಕಾರಿನ ನಡುವೆ ಭೀಕರ ಅಪಘಾತ; ಮೂವರ ದುರ್ಮರಣ

Viral Video
ವೈರಲ್ ನ್ಯೂಸ್49 mins ago

Viral Video: ವಿದ್ಯಾರ್ಥಿಯ ಗುಪ್ತಾಂಗಕ್ಕೆ ಇಟ್ಟಿಗೆ ಕಟ್ಟಿ ಕಿಡಿಗೇಡಿಗಳ ವಿಕೃತಿ; ವಿಡಿಯೋ ವೈರಲ್‌

karnataka rains
ಮಳೆ58 mins ago

Karnataka Rains: ಮಳೆಗೆ ಮರ ಬಿದ್ದು ಮಂಡ್ಯದಲ್ಲಿ ವ್ಯಕ್ತಿ ಸಾವು, ಬೆಂಗಳೂರಲ್ಲಿ ಟೆಕ್ಕಿ ಬೆನ್ನು ಮೂಳೆ ಮುರಿತ

India’s Jersey T20 World Cup
ಕ್ರೀಡೆ1 hour ago

India’s Jersey T20 World Cup: ಭಾರತ ತಂಡದ ಹೊಸ ಜೆರ್ಸಿ ಕಂಡು ಟ್ರೋಲ್​ ಮಾಡಿದ ನೆಟ್ಟಿಗರು

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case Government work against Revanna HD Kumaraswamy gives details of the case
ರಾಜಕೀಯ34 mins ago

Prajwal Revanna Case: ರೇವಣ್ಣರಿಗೆ ಖೆಡ್ಡಾ ತೋಡಿದ್ದು ಸರ್ಕಾರ; ಎಲ್ಲೆಲ್ಲಿ ಏನೇನು ಮಾಡಲಾಯಿತೆಂಬ ಇಂಚಿಂಚು ಡಿಟೇಲ್ಸ್‌ ಕೊಟ್ಟ ಎಚ್‌ಡಿಕೆ!

Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ22 hours ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

karnataka weather forecast
ಮಳೆ22 hours ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ23 hours ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Dina bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ2 days ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ2 days ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ2 days ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ3 days ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

ಟ್ರೆಂಡಿಂಗ್‌