brijbhushan-jadhav-postpones-ayodhya-yatra-for-show-of-strength Wrestlers Protest : ಶಕ್ತಿ ಪ್ರದರ್ಶನಕ್ಕಾಗಿ ಆಯೋಜಿಸಿದ್ದ ಅಯೋಧ್ಯೆ ಯಾತ್ರೆ ಮುಂದೂಡಿದ ಬ್ರಿಜ್​ಭೂಷಣ್​ - Vistara News

ಕ್ರೀಡೆ

Wrestlers Protest : ಶಕ್ತಿ ಪ್ರದರ್ಶನಕ್ಕಾಗಿ ಆಯೋಜಿಸಿದ್ದ ಅಯೋಧ್ಯೆ ಯಾತ್ರೆ ಮುಂದೂಡಿದ ಬ್ರಿಜ್​ಭೂಷಣ್​

ಅಪ್ರಾಪ್ತ ವಯಸ್ಕ ಸೇರಿದಂತೆ ಕುಸ್ತಿಪಟುಗಳ ಮೇಲೆ ಲೈಂಗಿಕ ಕಿರುಕುಳದ ಆರೋಪದ ಮೇಲೆ ತಮ್ಮ ಬಂಧನಕ್ಕೆ ಒತ್ತಡ ಹೆಚ್ಚಾಗಿರುವ ಕಾರಣ ಯಾತ್ರೆಯನ್ನು ರದ್ದು ಮಾಡಿದ್ದಾರೆ ಬ್ರಿಜ್​ಭೂಷಣ್​ ಸಿಂಗ್​.

VISTARANEWS.COM


on

Brijbhushan Singh
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಅಪ್ರಾಪ್ತ ವಯಸ್ಸಿನ ಮಹಿಳಾ ಕುಸ್ತಿಪಟು ಸೇರಿದಂತೆ ಉನ್ನತ ದರ್ಜೆಯ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ತಮ್ಮ ಬಂಧನಕ್ಕೆ ಒತ್ತಡ ಹೆಚ್ಚುತ್ತಿರುವ (Wrestlers Protest) ಹಿನ್ನೆಲೆಯಲ್ಲಿ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರು ಜೂನ್ 5ರಂದು ಅಯೋಧ್ಯೆಯಲ್ಲಿ ಆಯೋಜಿಸಲಾಗಿದ್ದ ಬೃಹತ್​ ಯಾತ್ರೆಯನ್ನು ಮುಂದೂಡಿದ್ದಾರೆ.

ಕುಸ್ತಿಪಟುಗಳನ್ನು ಬೆಂಬಲಿಸಿ ಉತ್ತರ ಪ್ರದೇಶದ ಮುಜಾಫರ್ ನಗರದಲ್ಲಿ ಸುಮಾರು 50 ಕಾಪ್​ ಪಂಚಾಯಿತಿ ಮತ್ತು ಕುಲ ಆಧಾರಿತ ಸಂಘಟನೆಗಳ ಪ್ರತಿನಿಧಿಗಳು ಸಭೆ ಸೇರಿ ಕುಸ್ತಿಪಟುಗಳಿಗೆ ಬೆಂಬಲ ವ್ಯಕ್ತಪಡಿಸಿದ್ದರು. ಬ್ರಿಜ್​ಭೂಷಣ್ ಸಿಂಗ್​ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲು ಅಧ್ಯಕ್ಷ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಲು ನಿರ್ಧರಿಸಿದ್ದರು. ಇವೆಲ್ಲದರ ಹಿನ್ನೆಲೆಯಲ್ಲಿ ಯಾತ್ರೆಯನ್ನು ಬ್ರಿಜ್​ಭೂಷಣ್​ ರದ್ದು ಮಾಡಿದ್ದಾರೆ.

ಫೇಸ್ಬುಕ್ ಪೋಸ್ಟ್​ ಮೂಲಕ ಜೂನ್ 5ರ ಯಾತ್ರೆಯನ್ನು ಮುಂದೂಡುವುದಾಗಿ ಬ್ರಿಜ್​ಭೂಷಣ್ ಘೋಷಿಸಿದ್ದಾರೆ. ಈ ವೇಳೆ ಅವರು ತಮ್ಮ ವಿರುದ್ಧ ನಡೆಯುತ್ತಿರುವ ಪೊಲೀಸ್ ತನಿಖೆ ಮತ್ತು ಸುಪ್ರೀಂ ಕೋರ್ಟ್ ನಿರ್ದೇಶನಗಳನ್ನು ಉಲ್ಲೇಖಿಸಿದ್ದಾರೆ. ಅಯೋಧ್ಯೆಯ ಯಾತ್ರೆಯಲ್ಲಿ ಹಲವಾರು ಸಂತರು ಸಿಂಗ್ ಅವರೊಂದಿಗೆ ವೇದಿಕೆ ಹಂಚಿಕೊಳ್ಳುವ ಸಾಧ್ಯತೆ ಇತ್ತು.

ಇದನ್ನೂ ಓದಿ : ಫೋಟೋ ತೆಗೆಸಿಕೊಳ್ತಿದ್ದವರು ಈಗ ಆರೋಪ ಮಾಡ್ತಿದ್ದಾರೆ, ರಾಜೀನಾಮೆ ಕೊಡೋದಿಲ್ಲ: ಕುಸ್ತಿಪಟುಗಳ ವಿರುದ್ಧ ಬ್ರಿಜ್ ​ಭೂಷಣ್​ ಸಿಂಗ್ ಕಿಡಿ

ಅಯೋಧ್ಯೆಯ ಸಂತರು ಕಳೆದ ವಾರ ಸಿಂಗ್​ಗೆ ಬೆಂಬಲ ಸೂಚಿಸಿ ಪತ್ರಿಕಾಗೋಷ್ಠಿ ನಡೆಸಿದ್ದರು. ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಗೆ ತಿದ್ದುಪಡಿ ತರಬೇಕೆಂದು ಒತ್ತಾಯಿಸಿದ್ದರು. ಪೋಕ್ಸೊ ಕಾಯ್ದೆಯನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ ಮತ್ತು ಬ್ರಿಜ್​ಭೂಷಣ್​ ಸಿಂಗ್​ ಅವರಿಗೆ ಕಿರುಕುಳ ನೀಡಲಾಗುತ್ತಿದೆ ಎಂದು ಅವರು ಆರೋಪಿಸಿದ್ದರು.

ಟೋಕಿಯೊ ಒಲಿಂಪಿಕ್ಸ್ ಕಂಚಿನ ಪದಕ ವಿಜೇತ ಬಜರಂಗ್ ಪೂನಿಯಾ, ರಿಯೋ ಗೇಮ್ಸ್ ಕಂಚಿನ ಪದಕ ವಿಜೇತ ಸಾಕ್ಷಿ ಮಲಿಕ್ ಮತ್ತು ಡಬಲ್ ವಿಶ್ವ ಚಾಂಪಿಯನ್​ಶಿಪ್​ ಪದಕ ವಿಜೇತೆ ವಿನೇಶ್ ಫೋಗಟ್ ಬುಧವಾರ ತಮ್ಮ ಪದಕಗಳನ್ನು ಗಂಗಾ ನದಿಯಲ್ಲಿ ವಿಸರ್ಜಿಸಲು ಮುಂದಾಗಿ ಬಳಿಕ ರೈತ ಸಂಘದ ಒತ್ತಾಯದ ಬಳಿಕ ನಿರ್ಧಾರ ಬದಲಿಸಿದ್ದರು. ಹರಿದ್ವಾರದ ಗಂಗಾ ದಡದಲ್ಲಿ ಕುಸ್ತಿಪಟುಗಳು ಕಣ್ಣೀರಿಟ್ಟರು.

ಕುಸ್ತಿ ಫೆಡರೇಶನ್ ಆಫ್ ಇಂಡಿಯಾ (ಡಬ್ಲ್ಯುಎಫ್ಐ) ಮುಖ್ಯಸ್ಥ ಸ್ಥಾನದಿಂದ ಅಮಾನತಾಗಿರುವ ಸಿಂಗ್ ವಿರುದ್ಧ ಎರಡು ಪ್ರಕರಣಗಳನ್ನು ದಾಖಲಿಸಲಾಗಿದ್ದು, ಅವರನ್ನು ತಕ್ಷಣ ಬಂಧಿಸುವಂತೆ ಕುಸ್ತಿಪಟುಗಳು ಒತ್ತಾಯಿಸಿದ್ದರು. ಆದರೆ ತನ್ನ ವಿರುದ್ಧ ಒಂದೇ ಒಂದು ಆರೋಪ ಸಾಬೀತಾದರೆ ನೇಣು ಹಾಕಿಕೊಳ್ಳುವುದಾಗಿ ಬ್ರಿಜ್​ಭೂಷಣ್ ಸಿಂಗ್ ಬುಧವಾರ ಸವಾಲೆಸೆದಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Sachin Tendulkar Birthday: ಈ ಬಾರಿ ವಿಶೇಷವಾಗಿ ಹುಟ್ಟುಹಬ್ಬ ಆಚರಿಸಿಕೊಂಡ ಸಚಿನ್‌ ತೆಂಡೂಲ್ಕರ್‌; ವಿಡಿಯೊ ವೈರಲ್​

Sachin Tendulkar Birthday: ಸಚಿನ್‌ ಸಾಧನೆ ನಿಜಕ್ಕೂ ಒಂದು ಅದ್ಭುತವೇ ಸರಿ. ಕ್ರಿಕೆಟ್​ ಬಾಳ್ವೆಯ ಆರಂಭದಿಂದ ಹಿಡಿದು ಕಡೇಯ ದಿನದವರೆಗೂ ಯಾವುದೇ ವಿವಾದವಿಲ್ಲದೆ ಸವ್ಯಸಾಚಿಯಾಗಿದ್ದ ಸಚಿನ್​ ಎಲ್ಲ ಕ್ರಿಕೆಟ್​ ಆಟಗಾರರಿಗೂ ಸ್ಫೂರ್ತಿಯಾಗಿದ್ದಾರೆ.

VISTARANEWS.COM


on

Sachin Tendulkar Birthday
Koo

ಮುಂಬಯಿ: ವಿಶ್ವ ಕಂಡ ಶ್ರೇಷ್ಠ ಬ್ಯಾಟ್ಸ್‌ಮನ್‌, ಲೆಜೆಂಡರಿ ಕ್ರಿಕೆಟರ್‌, ಕ್ರಿಕೆಟ್‌ ದೇವರು ಎಂದೆಲ್ಲ ನಾಮಾಂಕಿತರಾದ ಸಚಿನ್‌ ತೆಂಡೂಲ್ಕರ್‌(Sachin Tendulkar Birthday) ಅವರು ಎಪ್ರಿಲ್​ 24ರಂದು ತಮ್ಮ 51ನೇ ವರ್ಷದ ಹುಟ್ಟು ಹಬ್ಬವನ್ನು ‘ಸಚಿನ್​ ತೆಂಡೂಲ್ಕರ್​ ಫೌಂಡೇಶನ್‌’ನ(sachin tendulkar foundation) ಮಕ್ಕಳೊಂದಿಗೆ ಆಚರಿಸಿದ್ದರು. ಇದರ ವಿಡಿಯೊವನ್ನು ಸಚಿನ್(Sachin Tendulkar)​ ತಮ್ಮ ಇನ್​ಸ್ಟಾಗ್ರಾಮ್​ ಮತ್ತು ಟ್ವಿಟರ್​ ಎಕ್ಸ್​ನಲ್ಲಿ ಹಂಚಿಕೊಂಡಿದ್ದಾರೆ. ಸಚಿನ್​ ಅವರಿಗೆ ಕೋಟ್ಯಂತರ ಕ್ರಿಕೆಟ್‌ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಹರಸಿ ಹಾರೈಸಿದ್ದಾರೆ.

ಸಚಿನ್​ ಅವರು ‘ಸಚಿನ್​ ತೆಂಡೂಲ್ಕರ್ ಫೌಂಡೇಶನ್‌’ ಎನ್ನುವ ಹೆಸರಿನ ಪ್ರತಿಷ್ಠಾನದ ಮೂಲಕ ಬಡ ಮಕ್ಕಳಿಗೆ ಶಿಕ್ಷಣ, ಕ್ರಿಡೆ ಮತ್ತು ವೈದ್ಯಕೀಯ ನೆರವನ್ನು ನೀಡುತ್ತಿದ್ದಾರೆ. ಸಮಾಜಮುಖಿ ಕಾರ್ಯವನ್ನು ಮಾಡುವ ಮೂಲಕ ಅನೇಕ ಬಡ ಮಕ್ಕಳ ಕನಸನ್ನು ನನಸು ಮಾಡುವ ಕಾರ್ಯ ಮಾಡುತ್ತಿದ್ದಾರೆ. ಈ ಪ್ರತಿಷ್ಠಾನವು ಮಕ್ಕಳಿಗೆ ಸಮಾನ ಅವಕಾಶವನ್ನು ನೀಡಲು ಮತ್ತು ಉತ್ತಮ ಜಗತ್ತನ್ನು ಸೃಷ್ಟಿಸಲು ಸಹಾಯ ಮಾಡುತ್ತದೆ.

ಸಚಿನ್​ ಅವರು ತಮ್ಮ ಹುಟ್ಟು ಹಬ್ಬವನ್ನು ಈ ಫೌಂಡೇಶನ್​ನ ಮಕ್ಕಳೊಂದಿದೆ ಕೆಲ ಕಾಲ ಫುಟ್ಬಾಲ್​ ಆಡಿ, ಊಟ ಮಾಡುವ ಜತೆಗೆ ಕೇಕ್​ ಕತ್ತರಿಸಿ ಆಚರಿಸಿದ್ದಾರೆ. ಬಳಿಕ ಮಕ್ಕಳಿಗೆ ವಿಶೇಷವಾಗಿ ಹಾರೈಸಿ ಉಜ್ವಲ ಭವಿಷ್ಯ ರೂಪಿಸಿಕೊಳ್ಳುವಂತೆ ಕಿವಿ ಮಾತು ಹೇಳಿದ್ದಾರೆ.

ಇದನ್ನೂ ಓದಿ Sachin Tendulkar : ಕಾಶ್ಮೀರದ ಬಾಲಕಿಯ ಕ್ರಿಕೆಟ್​ ಪ್ರೀತಿ ಸಚಿನ್ ಫಿದಾ; ಇಲ್ಲಿದೆ ವಿಡಿಯೊ

​ಕಳೆದ ವರ್ಷ ಸಚಿನ್​ ಅವರು ತಮ್ಮ 50ನೇ ವರ್ಷದ ಜನ್ಮ ದಿನಾಚರಣೆಯನ್ನು ತಮ್ಮ ಕುಟುಂಬದೊಂದಿಗೆ ಗೋವಾದಲ್ಲಿ ಆಚರಿಸಿದ್ದರು. ಐಷಾರಾಮಿ ಜೀವನಶೈಲಿಗೆ ಹೆಸರುವಾಸಿಯಾದ ಸಚಿನ್​ ಅವರು ತಮ್ಮ ಹುಟ್ಟು ಹಬ್ಬವನ್ನು ಮಾತ್ರ ಹಳ್ಳಿ ಸೊಗಡಿನಲ್ಲಿ ಆಚರಿಸಿದ್ದರು. ಪತ್ನಿ ಅಂಜಲಿ ಮತ್ತು ಮಗಳು ಸಾರಾ ತೆಂಡೂಲ್ಕರ್ ಅವರೊಂದಿಗೆ ಒಲೆಯ ಪಕ್ಕದಲ್ಲಿ ಕುಳಿತು ಸಚಿನ್ ಒಲೆ ಊದುತ್ತಿರುವ ಫೋಟೊವನ್ನು ಹಂಚಿಕೊಂಚಿಕೊಂಡಿದ್ದರು.

2020ರಲ್ಲಿ ಹುಟ್ಟುಹಬ್ಬ ಆಚರಿಸದ ಸಚಿನ್​!

ಪ್ರತಿ ವರ್ಷವೂ ಸಂಭ್ರಮದೊಂದಿಗೆ ಹುಟ್ಟು ಹಬ್ಬ ಆಚರಿಸುತ್ತಿದ್ದ ಸಚಿನ್​ 2020ರಲ್ಲಿ ತಮ್ಮ 47ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಂಡಿರಲಿಲ್ಲ. ಇಡೀ ವಿಶ್ವವನ್ನೇ ತಲ್ಲಣಗೊಳಿಸಿದ್ದ ಕೋವಿಡ್​ ಸಂಕಷ್ಟದಲ್ಲಿ ಸೇವೆ ಸಲ್ಲಿಸಿದ್ದ ಆರೋಗ್ಯ ಸೈನಿಕರಿಗೆ ಗೌರವ ಕೊಡುವ ನಿಟ್ಟಿನಲ್ಲಿ ಅವರು ತಮ್ಮ ಹುಟ್ಟು ಹಬ್ಬವನ್ನು ಆಚರಿಸಿರಲಿಲ್ಲ. ಮನೆಯಲ್ಲಿಯೇ ತಾಯಿ ಕಾಲಿಗೆ ಬಿದ್ದು ಆಶೀರ್ವಾದ ಪಡೆದಿದ್ದರು.

24 ವರ್ಷಗಳ ಕ್ರಿಕೆಟ್‌ ಬಾಳ್ವೆಯಲ್ಲಿ 664 ಪಂದ್ಯ, 34,357 ರನ್‌, 201 ವಿಕೆಟ್‌, 100 ಅಂತಾರಾಷ್ಟ್ರೀಯ ಶತಕ, 164 ಅರ್ಧ ಶತಕ, ಲೆಕ್ಕವಿಲ್ಲದಷ್ಟು ದಾಖಲೆಗಳ ಸರದಾರ, ದೇಶದ ಶ್ರೇಷ್ಠ ಗೌರವ ಭಾರತ ರತ್ನ, ಪದ್ಮ ಪ್ರಶಸ್ತಿಗಳ ಒಡೆಯ, ರಾಜೀವ್‌ ಗಾಂಧಿ ಖೇಲ್‌ರತ್ನ ಪ್ರಶಸ್ತಿಗಳಿಂದೆಲ್ಲ ಪುರಸ್ಕೃತರಾಗಿರುವ ಸಚಿನ್‌ ಸಾಧನೆ ನಿಜಕ್ಕೂ ಒಂದು ಅದ್ಭುತವೇ ಸರಿ. ಕ್ರಿಕೆಟ್​ ಬಾಳ್ವೆಯ ಆರಂಭದಿಂದ ಹಿಡಿದು ಕಡೇಯ ದಿನದವರೆಗೂ ಯಾವುದೇ ವಿವಾದವಿಲ್ಲದೆ ಸವ್ಯಸಾಚಿಯಾಗಿದ್ದ ಸಚಿನ್​ ಎಲ್ಲ ಕ್ರಿಕೆಟ್​ ಆಟಗಾರರಿಗೂ ಸ್ಫೂರ್ತಿಯಾಗಿದ್ದಾರೆ.

Continue Reading

ಕ್ರೀಡೆ

RCB vs SRH: 300 ರನ್​ ಹೊಡೆಸಿಕೊಳ್ಳದಿರಲಿ ಆರ್​ಸಿಬಿ; ನಾಳೆ ಸನ್​ರೈಸರ್ಸ್ ವಿರುದ್ಧ ಕಣಕ್ಕೆ

RCB vs SRH: ಆರ್​ಸಿಬಿ(RCB) ಇದುವರೆಗೆ ಆಡಿದ 8 ಪಂದ್ಯಗಳಲ್ಲಿ 7 ಸೋಲು ಕಂಡು ಪ್ಲೇ ಆಫ್​ ರೇಸ್​ನಿಂದ ಬಹುತೇಕ ಹೊರಬಿದ್ದಿದೆ. ಹೀಗಾಗಿ ಆರ್​ಸಿಬಿ ಸನ್​ರೈಸರ್ಸ್(RCB vs SRH)​ ವಿರುದ್ಧ ಪಂದ್ಯ ಔಪಚಾರಿಕ ಪಂದ್ಯ ಎಂದರೂ ತಪ್ಪಾಗಲಾರದು.

VISTARANEWS.COM


on

RCB vs SRH
Koo

ಹೈದರಾಬಾದ್​: ಮೊದಲ ಮುಖಾಮುಖಿಯಲ್ಲಿ ಸನ್​ರೈಸರ್ಸ್(RCB vs SRH)​ ವಿರುದ್ಧ ದಾಖಲೆಯ 287 ರನ್​ ಚಚ್ಚಿಸಿಕೊಂಡು ಸೋಲು ಕಂಡಿದ್ದ ಆರ್​ಸಿಬಿ ಈ ಸೋಲಿಗೆ ಸೇಡು ತೀರಿಸಿಕೊಳ್ಳುವ ಇರಾದೆಯಲ್ಲಿ ನಾಳೆ ನಡೆಯುವ ಪಂದ್ಯದಲ್ಲಿ ಕಣಕ್ಕಿಳಿಯಲಿದೆ. ಆದರೆ, ಸದ್ಯದ ಆರ್​ಸಿಬಿ ಪರಿಸ್ಥಿತಿ ನೋಡುವಾಗ ಇದು ಅಸಾಧ್ಯವೆನ್ನುವಂತೆ ತೋರುತ್ತಿದೆ. ಏಕೆಂದರೆ ಆರ್​ಸಿಬಿ(RCB) ಇದುವರೆಗೆ ಆಡಿದ 8 ಪಂದ್ಯಗಳಲ್ಲಿ 7 ಸೋಲು ಕಂಡು ಪ್ಲೇ ಆಫ್​ ರೇಸ್​ನಿಂದ ಬಹುತೇಕ ಹೊರಬಿದ್ದಿದೆ. ಹೀಗಾಗಿ ಆರ್​ಸಿಬಿ ಪಾಲಿಗೆ ಇದೊಂದು ಔಪಚಾರಿಕ ಪಂದ್ಯ ಎಂದರೂ ತಪ್ಪಾಗಲಾರದು.

ಪ್ರತಿ ಐಪಿಎಲ್‌(IPL 2024) ಆರಂಭದ ಸಂದರ್ಭದಲ್ಲಿಯೂ ಆರ್‌ಸಿಬಿ ಒಂದು ಕ್ರೇಜ್‌ ಹುಟ್ಟಿಸುತ್ತದೆ. ದುರಾದೃಷ್ಟವಶಾತ್‌ ಈ ಕ್ರೇಜ್‌ ಬಹುಕಾಲ ಉಳಿಯುವುದಿಲ್ಲ. ಈ ಬಾರಿಯೂ ಅದೇ ರಾಗ ಅದೇ ಹಾಡು. ಅದರಲ್ಲಿಯೂ ಈ ಬಾರಿ ಹೊಸ ಅಧ್ಯಾಯ ಎಂದು ಆರ್‌ಸಿಬಿ ಹವಾ ಸೃಷ್ಟಿಸಿತ್ತು. ಆದರೆ ಇದೀಗ ಕ್ಷಮಿಸಿ ನಮ್ಮದು ಮುದಿದು ಹೋದ ಅಧ್ಯಾಯ ಎನ್ನುವ ಹಂತಕ್ಕೆ ತಲುಪಿದೆ. ಹೊಸ ಅಧ್ಯಾಯ ಅಂತ ಆರ್‌ಸಿಬಿ ಆಟಗಾರರು ಹೇಳಿಕೊಂಡಿದ್ದ ವಿಡಿಯೋ ಸಾಕಷ್ಟು ವೈರಲ್‌ ಆಗಿತ್ತು. ಆದರೆ, ಇದೀಗ ಆರ್‌ಸಿಬಿ ನಿರಂತರ ಸೋಲು ಅನುಭವಿಸುತ್ತಿರುವುದರಿಂದ ಸಾಮಾಜಿಕ ಜಾಲತಾಣದಲ್ಲಿ ಇತರ ತಂಡಗಳ ಅಭಿಮಾನಿಗಳು ಟ್ರೋಲ್ ಮಾಡುತ್ತಿದ್ದಾರೆ.

ತವರಿನಲ್ಲೇ ಹೈದರಾಬಾದ್​ ವಿರುದ್ಧ ಸರಿಯಾಗಿ ಚಚ್ಚಿಸಿಕೊಂಡಿದ್ದ ಆರ್​ಸಿಬಿ ಮತ್ತೊಂದು ಪಂದ್ಯ ಆಡುತ್ತದೆ ಎನ್ನುವಾಗಲೇ ಅಭಿಮಾನಿಗಳು ಸೋಲು ಖಚಿತ ಆದರೆ, ಟಾಸ್​ ಗೆದ್ದು ಆರ್​ಸಿಬಿ ಮೊದಲು ಬ್ಯಾಟಿಂಗ್​ ನಡೆಸಲಿ ಎಂದು ಹಾರೈಸಿದ್ದಾರೆ. ಏಕೆಂದರೆ ಹೈದರಾಬಾದ್​ ಮೊದಲು ಬ್ಯಾಟಿಂಗ್​ ನಡೆಸಿದೆ 300 ರನ್​ ಬಾರಿಸುವು ನಿಶ್ಚಿತ ಎಂದು ಸ್ವತಃ ಆರ್​ಸಿಬಿ ಅಭಿಮಾನಿಗಳೇ ಹೇಳತೊಡಗಿದ್ದಾರೆ.

ಹೈದರಾಬಾದ್​ ಬಲಿಷ್ಠ


ಈ ಬಾರಿಯ ಐಪಿಎಲ್​ನಲ್ಲಿ ರನ್​ ಮಳೆಯೇ ಹರಿಸುತ್ತಿರುವ ಸನ್​ರೈಸರ್ಸ್​ ಹೈದರಾಬಾದ್​ ತಂಡಕ್ಕೆ ಇದು ತವರಿನ ಪಂದ್ಯ. ಬಲಿಷ್ಠ ಬ್ಯಾಟಿಂಗ್​ ಲೈನ್​ ಅಪ್​ ಹೊಂದಿರುವ ಹೈದರಾಬಾದ್​ ಪರ ಅಭಿಷೇಕ್​ ಶರ್ಮ ಮತ್ತು ಟ್ರಾವಿಸ್​ ಹೆಡ್​ ಪ್ರಚಂಡ ಬ್ಯಾಟಿಂಗ್​ ಫಾರ್ಮ್​ನಲ್ಲಿದ್ದಾರೆ. 5 ಓವರ್​ನಲ್ಲಿಯೇ 100 ರನ್​ ಬಾರಿಸುವ ಸಾಮರ್ಥ ಇವರಲ್ಲಿದೆ. ಅದರಲ್ಲೂ ಕಳಪೆ ಬೌಲಿಂಗ್​ ಹೊಂದಿರುವ ಆರ್​ಸಿಬಿ ವಿರುದ್ಧ ಮೊದಲು ಬ್ಯಾಟಿಂಗ್​ ನಡೆಸಿದರೆ 300 ರನ್​ ಬಾರಿಸುವ ಸಾಮರ್ಥವೂ ತಂಡಕ್ಕಿದೆ.

ಇದನ್ನೂ ಓದಿ IPL 2024: 13 ವರ್ಷದ ಐಪಿಎಲ್​ ದಾಖಲೆ ಮುರಿದ ಮಾರ್ಕಸ್​ ಸ್ಟೋಯಿನಿಸ್

25 ವರ್ಷದ ಎಡಗೈ ದಾಂಡಿಗ ಅಭಿಷೇಕ್​ ಶರ್ಮ, ಟ್ರಾವಿಸ್​ ಹೆಡ್​​ ಜಿದ್ದಿಗೆ ಬಿದ್ದವತರಂತೆ ಬ್ಯಾಟ್​ ಬೀಸಿ ಉತ್ತಮ ಆರಂಭ ಒದಗಿಸುತ್ತಿದ್ದಾರೆ. ಮಧ್ಯಮ ಕ್ರಮಾಂಕದಲ್ಲಿ ಹೆನ್ರಿಚ್​ ಕ್ಲಾಸೆನ್​, ಐಡೆನ್​ ಮಾರ್ಕ್ರಮ್​ ಸಿಡಿದು ನಿಂತು ಪಂದ್ಯದ ಗತಿಯನ್ನೇ ಬದಲಿಸಬಲ್ಲ ಸಾಮರ್ಥ್ಯ ಹೊಂದಿದ್ದಾರೆ. ಬೌಲಿಂಗ್​ನಲ್ಲಿ ನಾಯಕ ಪ್ಯಾಟ್​ ಕಮಿನ್ಸ್​, ಭುವನೇಶ್ವರ್​ ಕುಮಾರ್​, ಟಿ. ನಟರಾಜನ್​ ಎದುರಾಳಿಗಳನ್ನು ಕಟ್ಟಿ ಹಾಕುವಲ್ಲಿ ಸಮರ್ಥರಿದ್ದಾರೆ.

ಸಂಭಾವ್ಯ ತಂಡಗಳು


ಆರ್​ಸಿಬಿ:
ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ವಿಲ್ ಜ್ಯಾಕ್ಸ್, ರಜತ್ ಪಾಟಿದಾರ್, ಕ್ಯಾಮೆರಾನ್ ಗ್ರೀನ್, ದಿನೇಶ್ ಕಾರ್ತಿಕ್,ಮಹಿಪಾಲ್ ಲೊಮ್ರೋರ್, ಕರ್ಣ್ ಶರ್ಮಾ, ಲಾಕಿ ಫರ್ಗುಸನ್, ಯಶ್ ದಯಾಲ್, ಮೊಹಮ್ಮದ್ ಸಿರಾಜ್.

ಸನ್​ರೈಸರ್ಸ್​ ಹೈದರಾಬಾದ್​: ಅಭಿಷೇಕ್ ಶರ್ಮಾ, ಟ್ರಾವಿಸ್ ಹೆಡ್​, ಐಡೆನ್ ಮಾರ್ಕ್ರಾಮ್, ಹೆನ್ರಿಚ್ ಕ್ಲಾಸೆನ್ , ಅಬ್ದುಲ್ ಸಮದ್, ನಿತೀಶ್ ರೆಡ್ಡಿ, ಶಹಬಾಜ್ ಅಹ್ಮದ್, ಪ್ಯಾಟ್ ಕಮಿನ್ಸ್ (ನಾಯಕ), ಭುವನೇಶ್ವರ್ ಕುಮಾರ್, ಮಯಾಂಕ್ ಮಾರ್ಕಂಡೆ, ಟಿ ನಟರಾಜನ್.

Continue Reading

ಕ್ರೀಡೆ

MS Dhoni: ಸಿಟ್ಟಿನಲ್ಲಿ ಕ್ಯಾಮೆರಾಗೆ ನೀರಿನ ಬಾಟಲ್​ ಎಸೆಯಲು ಮುಂದಾದ ಧೋನಿ; ವಿಡಿಯೊ ವೈರಲ್​

MS Dhoni: ಮೊಣಕಾಲು ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಧೋನಿ ಕಳೆದ ವರ್ಷ ಮುಂಬೈಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಈ ಬಾರಿಯ ಐಪಿಎಲ್​ನ ಮೊದಲ ಪಂದ್ಯದಲ್ಲಿಯೇ ಧೋನಿ ಗಾಯದ ಸಮಸ್ಯೆಯಿಂದ ಬಳಲುತ್ತಿರುವುದು ಕಂಡು ಬಂದಿತ್ತು.

VISTARANEWS.COM


on

MS Dhoni
Koo

ಚೆನ್ನೈ: ವಿದಾಯದ ಐಪಿಎಲ್(IPL 2024)​ ಟೂರ್ನಿ ಆಡುತ್ತಿರುವ ಚೆನ್ನೈ ಸೂಪರ್​ ಕಿಂಗ್ಸ್(CSK)​ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್​ ಧೋನಿ(MS Dhoni) ಅವರ ಬ್ಯಾಟಿಂಗ್​ ಕುಣ್ತುಂಬಿಕೊಳ್ಳಲು ಅವರ ಅಭಿಮಾನಿಗಳು ಪ್ರತಿ ಪಂದ್ಯದ ವೇಳೆಯೂ ಬಹಳ ನಿರೀಕ್ಷೆಯಿಂದ ಕಾಯುತ್ತಿರುತ್ತಾರೆ. ಕ್ಯಾಮೆರಾಮೆನ್​ಗಳು ಧೋನಿಯನ್ನು ಪಂದ್ಯದ ನಡುವೆ ತೋರಿಸಿದಾಗಲೆಲ್ಲವೂ ಸ್ಟೇಡಿಯಂನಲ್ಲಿ ಧೋನಿಯ ಹೆಸರು ಜೋರಾಗಿ ಕೇಳಿ ಬರುತ್ತದೆ. ಮಂಗಳವಾರದ ಲಕ್ನೋ(Lucknow Super Giants) ವಿರುದ್ಧದ ಪಂದ್ಯದ ವೇಳೆಯೂ ಧೋನಿ ಬ್ಯಾಟಿಂಗ್​ಗೆ ರೆಡಿಯಾಗಿ ಡ್ರೆಸ್ಸಿಂಗ್​ ರೂಮ್​ನಲ್ಲಿ ಇರುವುದನ್ನು ದೊಡ್ಡ ಪರದೆಯಲ್ಲಿ ತೋರಿಸಲಾಯಿತು. ಈ ವೇಳೆ ಧೋನಿ ಕೋಪಗೊಂಡು ಕ್ಯಾಮೆರಾಗೆ ನೀರಿನ ಬಾಟಲ್​ ಎಸೆಯಲು ಮುಂದಾಗಿದ್ದಾರೆ. ತಕ್ಷಣ ಕ್ಯಾಮೆರಾಮೆನ್​ ತನ್ನ ಕ್ಯಾಮೆರಾವನ್ನು ಬೇರೆಡೆಗೆ ತಿರುಗಿಸಿದ್ದಾನೆ. ಈ ವಿಡಿಯೊ ವೈರಲ್(viral video)​ ಆಗಿದೆ.

ಎಂ.ಎಸ್.ಧೋನಿ(MS Dhoni), ಕ್ಯಾಪ್ಟನ್‌ ಕೂಲ್‌, ಮಾಹಿ, ತಾಲಾ… ಎಂದೆಲ್ಲ ಪ್ರೀತಿಯಿಂದ ಕರೆಸಿಕೊಳ್ಳುವ ಮಹೇಂದ್ರ ಸಿಂಗ್‌ ಧೋನಿ ಎಂದರೆ ಅಭಿಮಾನಿಗಳಿಗೊಂದು ಎಮೋಷನ್ (ಭಾವನೆ). ಅವರು ಅಪಾರ ಸಂಖ್ಯೆಯ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಕಳೆದ ವರ್ಷವೇ ಧೋನಿ ಅವರು ಐಪಿಎಲ್​ಗೆ ವಿದಾಯ ಹೇಳಲು ನಿರ್ಧರಿಸಿದ್ದರು. ಆದರೆ ಅಭಿಮಾನಿಗಳ ಒತ್ತಾಯದ ಮೇರೆಗೆ ತಮ್ಮ ನಿವೃತ್ತಿಯನ್ನು ಮುಂದೆ ಹಾಕಿದ್ದರು. ಈ ಬಾರಿಯ ಟೂರ್ನಿ ಅವರಿಗೆ ವಿದಾಯದ ಟೂರ್ನಿಯಾಗಲಿದೆ. ಈ ಮೂಲಕ ಧೋನಿ ಎಲ್ಲ ಮಾದರಿಯ ಕ್ರಿಕಟ್​ಗೂ ಗುಡ್​ಬೈ ಹೇಳಲಿದ್ದಾರೆ.

ಮೊಣಕಾಲು ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಧೋನಿ ಕಳೆದ ವರ್ಷ ಮುಂಬೈಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಈ ಬಾರಿಯ ಐಪಿಎಲ್​ನ ಮೊದಲ ಪಂದ್ಯದಲ್ಲಿಯೇ ಧೋನಿ ಗಾಯದ ಸಮಸ್ಯೆಯಿಂದ ಬಳಲುತ್ತಿರುವುದು ಕಂಡು ಬಂದಿತ್ತು. ಕಳೆದ ಮುಂಬೈ ಮತ್ತು ಕೆಕೆಆರ್​ ವಿರುದ್ಧದ ಪಂದ್ಯದಲ್ಲಿ ಬ್ಯಾಟಿಂಗ್​ ನಡೆಸಿದ ವೇಳೆ ಕುಂಟುತಾ ನಡೆದಾಡಿದ ಫೋಟೊ ಮತ್ತು ವಿಡಿಯೊ ವೈರಲ್​ ಆಗಿತ್ತು. ಕಳೆದ ಮುಂಬೈ ವಿರುದ್ಧದ ಪಂದ್ಯದಲ್ಲಿ ಹಾರ್ದಿಕ್​ ಪಾಂಡ್ಯಗೆ ಹ್ಯಾಟ್ರಿಕ್​ ಸಿಕ್ಸರ್​ಗಳ ರುಚಿ ತೋರಿಸಿದ್ದರು. ವಯಸ್ಸು 42 ಆದರೂ, ತಮ್ಮ ಬ್ಯಾಟಿಂಗ್​ ಫಾರ್ಮ್​ ಮಾತ್ರ ಈ ಹಿಂದಿನಂತೆಯೇ ಇದೆ.​

ಇದನ್ನೂ ಓದಿ IPL 2024: 13 ವರ್ಷದ ಐಪಿಎಲ್​ ದಾಖಲೆ ಮುರಿದ ಮಾರ್ಕಸ್​ ಸ್ಟೋಯಿನಿಸ್

ಧೋನಿ ಅವರು ಲಕ್ನೋ ವಿರುದ್ಧ ಕೇವಲ ಒಂದು ಎಸೆತ ಎದುರಿಸಿ ಬೌಂಡರಿ ಮೂಲಕ ಅಜೇಯ 4 ರನ್ ಗಳಿಸಿದರು. ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಇತ್ತಂಡಗಳ ನಡುವಿನ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಚೆನ್ನೈ 20 ಓವರ್‌ಗಳಲ್ಲಿ 4 ವಿಕೆಟ್‌ಗಳಿಗೆ 210 ರನ್‌ ಗಳಿಸಿತು. ಇದನ್ನು ಬೆನ್ನತ್ತಿದ ಲಕ್ನೋ 19.3 ಓವರ್‌ ಗಳಲ್ಲಿ 4 ವಿಕೆಟ್‌ಗೆ 213 ರನ್‌ ಗಳಿಸಿ, 6 ವಿಕೆಟ್‌ ಗಳಿಂದ ಜಯಭೇರಿ ಬಾರಿಸಿತು.

Continue Reading

ಕ್ರಿಕೆಟ್

Shubman Gill: ಶತಕದ ಐಪಿಎಲ್​ ಪಂದ್ಯವನ್ನಾಡಲು ಸಜ್ಜಾದ ಗಿಲ್​; ಸಾಧನೆ ಹೇಗಿದೆ?

shubman gill: 2018ರಲ್ಲಿ ಕೆಕೆಆರ್ ತಂಡದ ಪರ ಕಣಕ್ಕಿಳಿಯುವ ಮೂಲಕ ಐಪಿಎಲ್​ ಜರ್ನಿ ಆರಂಭಿಸಿದ ಶುಭಮನ್​ ಗಿಲ್​ ಇದುವರೆಗೆ 99 ಪಂದ್ಯಗಳನ್ನಾಡಿ ಮೂರು ಶತಕ, 20 ಅರ್ಧಶತಕ ಮತ್ತು ಒಂದು ಬಾರಿ ಆರೆಂಜ್​ ಕ್ಯಾಪ್​ ಗೆದ್ದಿದ್ದಾರೆ. ಜತೆಗೆ ಟ್ರೋಫಿ ಗೆದ್ದ ತಂಡದ ಸದ್ಯಸನೂ ಆಗಿದ್ದಾರೆ.

VISTARANEWS.COM


on

shubman gill
Koo

ನವದೆಹಲಿ: ಇಂದು ನಡೆಯುವ ಐಪಿಎಲ್(IPL 2024) ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್(Delhi Capitals)​ ಮತ್ತು ಗುಜರಾತ್​ ಟೈಟಾನ್ಸ್(Gujarat Titans)​ ಕಣಕ್ಕಿಳಿಯಲಿದೆ. ಈ ಪಂದ್ಯ ಟೀಮ್​ ಇಂಡಿಯಾದ ಯುವ ಆಟಗಾರ, ಗುಜರಾತ್​ ತಂಡದ ನಾಯಕ ಶುಭಮನ್​ ಗಿಲ್(Shubman Gill)​ ಅವರಿಗೆ 100ನೇ ಐಪಿಎಲ್​ ಪಂದ್ಯವಾಗಿದೆ. ಹೀಗಾಗಿ ಅವರ ಮೇಲೆ ಇಂದಿನ ಪಂದ್ಯದಲ್ಲಿ ಅಭಿಮಾನಿಗಳು ಭಾರೀ ನಿರೀಕ್ಷೆ ಇರಿಸಿದ್ದಾರೆ.

2018ರಲ್ಲಿ ಕೆಕೆಆರ್ ತಂಡದ ಪರ ಕಣಕ್ಕಿಳಿಯುವ ಮೂಲಕ ಐಪಿಎಲ್​ ಜರ್ನಿ ಆರಂಭಿಸಿದ ಶುಭಮನ್​ ಗಿಲ್​ ಇದುವರೆಗೆ 99 ಪಂದ್ಯಗಳನ್ನಾಡಿ ಮೂರು ಶತಕ, 20 ಅರ್ಧಶತಕ ಮತ್ತು ಒಂದು ಬಾರಿ ಆರೆಂಜ್​ ಕ್ಯಾಪ್​ ಗೆದ್ದಿದ್ದಾರೆ. ಜತೆಗೆ ಟ್ರೋಫಿ ಗೆದ್ದ ತಂಡದ ಸದ್ಯಸನೂ ಆಗಿದ್ದಾರೆ. ಇದೀಗ ನಾಯಕನಾಗಿ ತಂಡವನ್ನು ಮುನ್ನಡೆಸುತ್ತಿದ್ದಾರೆ. 3088 ರನ್​ ಕೂಡ ಬಾರಿಸಿದ್ದಾರೆ. ಸದ್ಯ ಗುಜರಾತ್‌ ಎಂಟರಲ್ಲಿ 4 ಪಂದ್ಯ ಗೆದ್ದು 6ನೇ ಸ್ಥಾನದಲ್ಲಿದೆ. ಇಂದು ಗೆದ್ದರೆ 10 ಅಂಕದೊಂದಿಗೆ ಅಂಕಪಟ್ಟಿಯಲ್ಲಿ 5ನೇ ಸ್ಥಾನಕ್ಕೇರಬಹುದು.

ಗುಜರಾತ್​ಗೆ ಸೇಡಿನ ಪಂದ್ಯ


ಈ ಪಂದ್ಯ ಗುಜರಾತ್​ಗೆ ಸೇಡಿನ ಪಂದ್ಯವಾಗಿದೆ. ಡೆಲ್ಲಿ ವಿರುದ್ಧದ ಮೊದಲ ಪಂದ್ಯದಲ್ಲಿ ಹೀನಾಯವಾಗಿ ಸೋತಿತ್ತು. ಅದು ಕೂಡ ತವರಿನ ಅಂಗಳದಲ್ಲಿ ಕೇವಲ 89 ರನ್​ಗೆ ಆಲೌಟ್​ ಆಗುವ ಮೂಲಕ ತವರಿನ ಪ್ರೇಕ್ಷಕರ ಮುಂದೆಯೇ ತೀವ್ರ ಮುಜುಗರಕ್ಕೆ ಒಳಗಾಗಿತ್ತು. ಇದೀಗ ಈ ಸೋಲಿಗೆ ಡೆಲ್ಲಿಗೆ ತವರಿನಲ್ಲೇ ಸೋಲುಣಿಸಿ ಸೇಡು ತೀರಿಸುವ ತವಕದಲ್ಲಿದೆ. ಗುಜರಾತ್‌ ಬ್ಯಾಟಿಂಗ್‌ ಸರದಿಯಲ್ಲಿ ಸಾಯಿ ಸುದರ್ಶನ್‌, ಡೇವಿಡ್‌ ಮಿಲ್ಲರ್‌, ಒಮರ್‌ಜಾಯ್‌, ತೆವಾಟಿಯ ಇನ್ನಿಂಗ್ಸ್‌ ಬೆಳೆಸುವ ಜತೆಗೆ ಬಿರುಸಿನ ಆಟ ಆಡಬೇಕಿದೆ.

ಡೆಲ್ಲಿ ಬ್ಯಾಟಿಂಗ್‌ ಸರದಿಯ ಸಮಸ್ಯೆಯೆಂದರೆ ಓಪನಿಂಗ್‌ ವೈಫ‌ಲ್ಯ. ವಾರ್ನರ್‌-ಪೃಥ್ವಿ ಶಾ ಬಡಬಡಣೆ ಒಂದೆರಡು ಬೌಂಡರಿ ಬಾರಿಸಿ ವಿಕೆಟ್​ ಕಳೆದುಕೊಳ್ಳುತ್ತಿದ್ದಾರೆ. ಹೆಚ್ಚು ಹೊತ್ತು ಕ್ರೀಸ್‌ ಆಕ್ರಮಿಸಿಕೊಳ್ಳುವಲ್ಲಿ ವಿಫ‌ಲರಾಗುತ್ತಿದ್ದಾರೆ. ಹೀಗಾಗಿ ಪವರ್‌ ಪ್ಲೇಯಲ್ಲಿ ರನ್‌ ಹರಿದು ಬರುತ್ತಿಲ್ಲ. ಬದಲಿ ಆಟಗಾರನಾಗಿ ತಂಡ ಸೇರಿದ ಆಸ್ಟ್ರೇಲಿಯಾದ ಯುವ ಬ್ಯಾಟರ್​ ಫ್ರೇಜರ್​- ಮೆಕ್‌ಗರ್ಕ್‌, ಇಂಪ್ಯಾಕ್ಟ್​ ಆಟಗಾರ ಅಭಿಷೇಕ್​ ಪೊರೆಲ್‌ ಮತ್ತು ನಾಯಕ ಪಂತ್‌ ಹೊರತುಪಡಿಸಿ ಉಳಿದವರೆಲ್ಲ ರನ್‌ ಬರಗಾಲದಲ್ಲಿದ್ದಾರೆ. ಬೌಲಿಂಗ್​ ಕೂಡ ಅಷ್ಟಕ್ಕಷ್ಟೇ. ಖಲೀಲ್​ ಅಹ್ಮದ್​ ದುಬಾರಿಯಾಗುತ್ತಿದ್ದಾರೆ.

ಇದನ್ನೂ ಓದಿ IPL 2024: 13 ವರ್ಷದ ಐಪಿಎಲ್​ ದಾಖಲೆ ಮುರಿದ ಮಾರ್ಕಸ್​ ಸ್ಟೋಯಿನಿಸ್

ಸಂಭಾವ್ಯ ತಂಡಗಳು


ಗುಜರಾತ್​: ವೃದ್ಧಿಮಾನ್ ಸಹಾ, ಶುಭಮನ್ ಗಿಲ್ (ನಾಯಕ), ಡೇವಿಡ್ ಮಿಲ್ಲರ್, ಅಜ್ಮತುಲ್ಲಾ ಒಮರ್ಜಾಯ್, ಶಾರುಖ್ ಖಾನ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ರವಿಶ್ರೀನಿವಾಸನ್ ಸಾಯಿ ಕಿಶೋರ್, ನೂರ್ ಅಹ್ಮದ್, ಸಂದೀಪ್ ವಾರಿಯರ್, ಮೋಹಿತ್ ಶರ್ಮಾ.

ಡೆಲ್ಲಿ ಕ್ಯಾಪಿಟಲ್ಸ್​: ಡೇವಿಡ್ ವಾರ್ನರ್, ಜೇಕ್ ಫ್ರೇಸರ್-ಮೆಕ್‌ಗುರ್ಕ್, ಅಭಿಷೇಕ್ ಪೊರೆಲ್, ರಿಷಭ್ ಪಂತ್ (ನಾಯಕ), ಟ್ರಿಸ್ಟಾನ್ ಸ್ಟಬ್ಸ್, ಅಕ್ಷರ್ ಪಟೇಲ್, ಲಲಿತ್ ಯಾದವ್, ಕುಲದೀಪ್ ಯಾದವ್, ಅನ್ರಿಚ್ ನಾರ್ಟ್ಜೆ, ಖಲೀಲ್ ಅಹ್ಮದ್, ಮುಖೇಶ್ ಕುಮಾರ್.

Continue Reading
Advertisement
Money Guide
ಮನಿ-ಗೈಡ್6 mins ago

Money Guide: ಕ್ರೆಡಿಟ್‌ ಕಾರ್ಡ್‌ ಹೊಂದಿದ್ದೀರಾ? ವಂಚಕರ ಬಲೆಗೆ ಬೀಳದಿರಲು ಈ ಟಿಪ್ಸ್‌ ಫಾಲೋ ಮಾಡಿ

Karnataka Weather
ಕರ್ನಾಟಕ14 mins ago

Karnataka Weather: ನಾಳೆ ಬೆಳಗಾವಿ, ಕೊಪ್ಪಳ ಸೇರಿ ವಿವಿಧೆಡೆ ಮಳೆ; ಮುಂದಿನ 4 ದಿನ ಶಾಖದ ಅಲೆ ತೀವ್ರತೆ ಹೆಚ್ಚಳ!

Lok Sabha Election 2024 Vote on April 26 and get 10 percent discount on these hotels
Lok Sabha Election 202429 mins ago

Lok Sabha Election 2024: ಏ. 26ಕ್ಕೆ ವೋಟ್‌ ಹಾಕಿ ಈ ಹೋಟೆಲ್‌ಗಳಿಗೆ ಬನ್ನಿ; ಏನೇ ತಿಂದ್ರೂ 10 ಪರ್ಸೆಂಟ್‌ ಡಿಸ್ಕೌಂಟ್‌!

Actress Saree Fashion
ಫ್ಯಾಷನ್38 mins ago

Actress Saree Fashion: ಟ್ರೆಂಡಿ ಸನ್‌ ಶೇಡ್‌ ಸೀರೆಯಲ್ಲಿ ನಟಿ ತೇಜಸ್ವಿನಿ ಶರ್ಮಾ ಸಮ್ಮರ್‌ ಲುಕ್‌

Sachin Tendulkar Birthday
ಕ್ರೀಡೆ39 mins ago

Sachin Tendulkar Birthday: ಈ ಬಾರಿ ವಿಶೇಷವಾಗಿ ಹುಟ್ಟುಹಬ್ಬ ಆಚರಿಸಿಕೊಂಡ ಸಚಿನ್‌ ತೆಂಡೂಲ್ಕರ್‌; ವಿಡಿಯೊ ವೈರಲ್​

Condemns Neha murder case Gangavathi bandh
ಕೊಪ್ಪಳ42 mins ago

Neha Murder Case: ವಿದ್ಯಾರ್ಥಿನಿ ನೇಹಾ ಹತ್ಯೆ ಖಂಡಿಸಿ ಗಂಗಾವತಿ ಬಂದ್; ಉತ್ತಮ ಪ್ರತಿಕ್ರಿಯೆ

Voter Slip
Lok Sabha Election 202444 mins ago

Voter Slip: ಮತದಾನಕ್ಕೆ ಇನ್ನೊಂದೇ ದಿನ ಬಾಕಿ; ವೋಟರ್ ಸ್ಲಿಪ್ ಸಿಕ್ಕಿಲ್ಲವೇ? ಮೊಬೈಲ್‌ನಲ್ಲಿ ಡೌನ್‌ಲೋಡ್‌ ಮಾಡಿಕೊಳ್ಳಿ

Lok Sabha Election 2024
Lok Sabha Election 202445 mins ago

Lok Sabha Election 2024: ಚುನಾವಣಾ ಕಣಕ್ಕೆ ಧುಮುಕಿದ ಖಲಿಸ್ತಾನಿ ನಾಯಕ ಅಮೃತ್​ಪಾಲ್​ ಸಿಂಗ್‌; ಯಾವ ಕ್ಷೇತ್ರ?

ಕರ್ನಾಟಕ1 hour ago

Rapido Bike Taxi: ಏ.26ರಂದು ಬೆಂಗಳೂರು ಸೇರಿ 3 ನಗರಗಳಲ್ಲಿ ಮತದಾರರಿಗೆ ರ‍್ಯಾಪಿಡೋದಿಂದ ಉಚಿತ ರೈಡ್‌ ಆಫರ್‌

Kotak Mahindra Bank
ದೇಶ1 hour ago

Kotak Mahindra Bank: ಹೊಸ ಕ್ರೆಡಿಟ್ ಕಾರ್ಡ್ ನೀಡದಂತೆ ಕೊಟಕ್‌ ಬ್ಯಾಂಕ್‌ಗೆ ಆರ್‌ಬಿಐ ನಿರ್ಬಂಧ; ಕಾರಣ ಇಲ್ಲಿದೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ14 hours ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು2 days ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ2 days ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು2 days ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

CET Exam 2024
ಬೆಂಗಳೂರು2 days ago

CET 2024 Exam : ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ; ಕೈ ಕೈ ಮಿಲಾಯಿಸಿದ ಪೊಲೀಸರು- ಎವಿಬಿಪಿ ಕಾರ್ಯಕರ್ತರು

Dina Bhavishya
ಭವಿಷ್ಯ3 days ago

Dina Bhavishya : ಸಹೋದ್ಯೋಗಿಗಳು ನಿಮ್ಮ ವಿರುದ್ಧ ಪಿತೂರಿ ಮಾಡುವ ಸಾಧ್ಯತೆ; ಈ ರಾಶಿಯವರು ಎಚ್ಚರ

Dina Bhavishya
ಭವಿಷ್ಯ4 days ago

Dina Bhavishya : ಅಮೂಲ್ಯ ವಸ್ತುಗಳು ಕೈ ತಪ್ಪಬಹುದು; ಈ ರಾಶಿಯವರು ಇಂದು ಎಚ್ಚರವಹಿಸಿ

Modi in Karnataka Congress snatches Rs 4000 under Kisan Samman says PM Narendra Modi
ಪ್ರಮುಖ ಸುದ್ದಿ4 days ago

Modi in Karnataka: ಕಿಸಾನ್‌ ಸಮ್ಮಾನ್‌ ಅಡಿ 4 ಸಾವಿರ ರೂಪಾಯಿ ಕಿತ್ತುಕೊಂಡ ರೈತ ವಿರೋಧಿ ಸರ್ಕಾರ ಕಾಂಗ್ರೆಸ್‌: ಮೋದಿ ಕಿಡಿ

Modi in Karnataka HD Deve Gowda attack on Congess
Lok Sabha Election 20244 days ago

Modi in Karnataka: ಲೂಟಿ ಮಾಡಿ ಖಾಲಿ ಚೆಂಬು ಕೊಟ್ಟಿದ್ದು ಕಾಂಗ್ರೆಸ್‌; ಆ ಚೆಂಬನ್ನು ಅಕ್ಷಯ ಪಾತ್ರ ಮಾಡಿದ್ದು ಮೋದಿ: ಎಚ್‌.ಡಿ. ದೇವೇಗೌಡ ಗುಡುಗು

ಟ್ರೆಂಡಿಂಗ್‌