IPL 2024 : ರೆಡ್​ ಆದ ಗ್ರೀನ್​; ಇವರೇ ನೋಡಿ ಐಪಿಎಲ್​ನ ಗರಿಷ್ಠ ಬೆಲೆಯ ಟ್ರೇಡಿಂಗ್​ - Vistara News

ಕ್ರಿಕೆಟ್

IPL 2024 : ರೆಡ್​ ಆದ ಗ್ರೀನ್​; ಇವರೇ ನೋಡಿ ಐಪಿಎಲ್​ನ ಗರಿಷ್ಠ ಬೆಲೆಯ ಟ್ರೇಡಿಂಗ್​

IPL 2024: ಕ್ಯಾಮೆರೂನ್ ಗ್ರೀನ್ ಐಪಿಎಲ್ ಕ್ರಿಕೆಟ್​ ಇತಿಹಾಸದ ಅತ್ಯಂತ ದುಬಾರಿ ಟ್ರೇಡಿಂಗ್ ಎಂಬ ಖ್ಯಾತಿಯನ್ನು ಪಡೆದುಕೊಂಡಿದ್ದಾರೆ.

VISTARANEWS.COM


on

Cameron Green
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಆಸ್ಟ್ರೇಲಿಯಾದ ಆಲ್ರೌಂಡರ್ ಕ್ಯಾಮರೂನ್ ಗ್ರೀನ್ ಈಗ ರೆಡ್ ಆಗಿದ್ದಾರೆ. ಇಂಡಿಯನ್ ಪ್ರೀಮಿಯರ್ ಲೀಗ್ 2024 ರ (IPL 2024) ಹರಾಜಿಗೆ ಮುಂಚಿತವಾಗಿ ಗ್ರೀನ್ ಮುಂಬೈ ಇಂಡಿಯನ್ಸ್ (ಎಂಐ) ನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ಗೆ ಸ್ಥಳಾಂತರಗೊಂಡಿದ್ದಾರೆ. ಕಳೆದ ಋತುವಿನಲ್ಲಿ ನಡೆದ ಹರಾಜಿನಲ್ಲಿ ಎಂಐ ಗ್ರೀನ್ ತಂಡವನ್ನು 17.5 ಕೋಟಿ ರೂ.ಗೆ ಖರೀದಿಸಿತ್ತು. ಅವರನ್ನು ಅದೇ ಬೆಲೆ ಕೊಟ್ಟು ಆರ್​ಸಿಬಿ ಖರೀದಿಸಿದೆ ಎಂದು ಹೇಳಿದೆ. ಈ ಮೂಲಕ ಅವರು ಐಪಿಎಲ್ ಇತಿಹಾಸದ ಅತ್ಯಂತ ಗರಿಷ್ಠ ಬೆಲೆಯ ಟ್ರೇಡಿಂಗ್ (ವ್ಯಾಪಾರ) ಎಂಬ ಖ್ಯಾತಿ ಗಳಿಸಿಕೊಂಡಿದ್ದಾರೆ.

ಗ್ರೀನ್ ಅವರನ್ನು ಕಳೆದ ವರ್ಷ ಎಂಐ ತಂಡ 17.50 ಕೋಟಿ ರೂ.ಗೆ ಖರೀದಿಸಿತ್ತು. ಅವರು ಆ ಋತುವಿನಲ್ಲಿ ಅತ್ಯಂತ ದುಬಾರಿ ಖರೀದಿಗಳಲ್ಲಿ ಒಬ್ಬರಾಗಿದ್ದರು. ಐಪಿಎಲ್ 2023 ರಲ್ಲಿ ಕ್ಯಾಮರೂನ್ ಗ್ರೀನ್ 452 ರನ್ ಮತ್ತು 9.50 ಎಕಾನಮಿಯೊಂದಿಗೆ ಆರು ವಿಕೆಟ್ ಪಡೆದಿದ್ದರು. ಆದರೆ ಹಾರ್ದಿಕ್ ಪಾಂಡ್ಯಗೆ ಅವಕಾಶ ಕಲ್ಪಿಸಲು, ಮುಂಬೈ ಇಂಡಿಯನ್ಸ್ ದೊಡ್ಡ ಮೊತ್ತದ ಆಟಗಾರನನ್ನು ಮಾರಾಟ ಮಾಡಬೇಕಾಗಿತ್ತು. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಐಪಿಎಲ್ 2024 ರ ಹರಾಜಿಗೆ ಮುಂಚಿತವಾಗಿ ಗ್ರಿನ್ ಅವರನ್ನು ತೆಕ್ಕೆಗೆ ಪಡೆದುಕೊಳ್ಳುವ ಅವಕಾಶವನ್ನು ಪಡೆದುಕೊಂಡಿದೆ.

ಇದನ್ನೂ ಓದಿ : Pakistan Cricket Team : ಹಮಾಸ್​ಗೆ ಬೆಂಬಲ ನೀಡಿದ ಪಾಕ್​ ಆಟಗಾರನಿಗೆ ಪಾಕಿಸ್ತಾನದಲ್ಲೇ ಶಿಕ್ಷೆ !

10 ಆಟಗಾರರನ್ನು ಬಿಡುಗಡೆ ಮಾಡಿದ ನಂತರ, ಆರ್​ಸಿಬಿ ಒಟ್ಟು 40.75 ಕೋಟಿ ರೂಪಾಯಿ ಉಳಿದುಕೊಂಡಿತ್ತು. ಆರ್​ಸಿಬಿ ಗ್ರೀನ್​ ಖರೀದಿ ಮಾಡಿದ ಬಳಿಕವೂ ಇನ್ನೂ ಆರು ಸ್ಪಾಟ್​ಗಳು ಉಳಿದುಕೊಂಡಿತ್ತು.

ಆರ್​ಸಿಬಿ ಬಿಡುಗಡೆ ಮಾಡಿದ ಆಟಗಾರರು: ವನಿಂದು ಹಸರಂಗ, ಫಿನ್ ಅಲೆನ್, ಕೇದಾರ್ ಜಾಧವ್, ಹರ್ಷಲ್ ಪಟೇಲ್, ಮಿಚೆಲ್ ಬ್ರೇಸ್ವೆಲ್, ಡೇವಿಡ್ ವಿಲ್ಲಿ, ವೇಯ್ನ್ ಪಾರ್ನೆಲ್, ಸೋನು ಯಾದವ್, ಅವಿನಾಶ್ ಸಿಂಗ್ ಮತ್ತು ಸಿದ್ಧಾರ್ಥ್ ಕೌಲ್.

ಐಪಿಎಲ್ 2024 ಗಾಗಿ ಆರ್ಸಿಬಿ ತಂಡ: ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಸುಯಾಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ , ಮಹಿಪಾಲ್ ಲೊಮ್ರೊರ್, ಗ್ಲೆನ್ ಮ್ಯಾಕ್ಸ್ವೆಲ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಆಕಾಶ್ ದೀಪ್, ಅವಿನಾಶ್ ಸಿಂಗ್, ಮೊಹಮ್ಮದ್ ಸಿರಾಜ್, ರಾಜನ್ ಕುಮಾರ್, ಹಿಮಾಂಶು ಶರ್ಮಾ, ಕರಣ್ ಶರ್ಮಾ, ವಿಜಯ್ ಕುಮಾರ್ ವೈಶಾಕ್.

ಗಿಲ್​ ಜಿಟಿ ನಾಯಕ

2024ರ ಐಪಿಎಲ್‌ ಕ್ರಿಕೆಟ್‌ ಟೂರ್ನಿ (IPL 2024) ಆರಂಭವಾಗುವ ಮೊದಲೇ ತಂಡಗಳಲ್ಲಿ ಭಾರಿ ಬದಲಾವಣೆ ಆಗುತ್ತಿದೆ. ಭಾರತ ಕ್ರಿಕೆಟ್‌ ತಂಡದ ಭರವಸೆಯ ಆಟಗಾರ, ವಿಶ್ವಕಪ್‌ನಲ್ಲೂ ಉತ್ತಮ ಪ್ರದರ್ಶನ ತೋರಿ ಸೈ ಎನಿಸಿಕೊಂಡಿರುವ ಶುಭಮನ್‌ ಗಿಲ್‌ (Shubman Gill) ಅವರು ಗುಜರಾತ್‌ ಟೈಟಾನ್ಸ್‌ ತಂಡದ ನಾಯಕರಾಗಿ ಆಯ್ಕೆಯಾಗಿದ್ದಾರೆ. ಆಲ್‌ರೌಂಡರ್ ಹಾರ್ದಿಕ್‌ ಪಾಂಡ್ಯ (Hardik Pandya) ಅವರು ಮುಂಬೈ ಇಂಡಿಯನ್ಸ್‌ (Mumbai Indians) ತಂಡವನ್ನು ಸೇರಿದ ಹಿನ್ನೆಲೆಯಲ್ಲಿ ಗುಜರಾತ್‌ ಟೈಟಾನ್ಸ್‌ (Gujarat Titans) ತಂಡವು ಶುಭಮನ್‌ ಗಿಲ್‌ ಅವರನ್ನು ನಾಯಕ ಎಂದು ಘೋಷಿಸಿದೆ.

ಕಳೆದ ಐಪಿಎಲ್‌ ಋತುವಿನಲ್ಲಿ 890 ರನ್‌ ಗಳಿಸಿ ಟೂರ್ನಿಯ ಅತ್ಯಧಿಕ ರನ್‌ ಸ್ಕೋರರ್‌ ಎನಿಸಿದ 24 ವರ್ಷದ ಶುಭಮನ್‌, ಏಕದಿನ ಹಾಗೂ ಟಿ-20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಭರವಸೆ ಮೂಡಿಸಿದ್ದಾರೆ. ಕಳೆದ ಮೂರ್ನಾಲ್ಕು ಐಪಿಎಲ್‌ಗಳಲ್ಲಿ ಅವರಿಂದ ರನ್‌ಗಳು ಹರಿದುಬಂದಿವೆ. ಮೇಲಾಗಿ ಯಾವಾಗಲೂ ಸಮಚಿತ್ತತೆಯಿಂದ ಇರುವ ಶುಭಮನ್‌ ಗಿಲ್‌, ತಂಡವನ್ನು ಮುನ್ನಡೆಸಲು ಸಮರ್ಥ ಎಂಬುದನ್ನು ಗುಜರಾತ್‌ ಟೈಟಾನ್ಸ್‌ ತಂಡದ ಮ್ಯಾನೇಜ್‌ಮೆಂಟ್‌, ಅವರನ್ನೇ ನಾಯಕ ಎಂದು ಘೋಷಿಸಿದೆ ಎಂದು ಮೂಲಗಳು ತಿಳಿಸಿವೆ. ಐಪಿಎಲ್‌ನಲ್ಲಿ 91 ಪಂದ್ಯಗಳನ್ನು ಆಡಿರುವ ಶುಭಮನ್‌ ಗಿಲ್‌ 2,790 ರನ್‌ ಗಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

T20 World Cup Final: ಚೋಕರ್ಸ್ ಹಣೆಪಟ್ಟಿ ಕಳಚಿಕೊಳ್ಳುವುದೇ ದಕ್ಷಿಣ ಆಫ್ರಿಕಾ?; ನಾಳೆ ಫೈನಲ್​

T20 World Cup Final: ಈ ಬಾರಿಯ ವಿಶ್ವಕಪ್​ ಟೂರ್ನಿಯಲ್ಲಿ ದಕ್ಷಿಣ ಆಫ್ರಿಕಾದ ಪ್ರದರ್ಶನ ಮತ್ತು ಅದೃಷ್ಟ ನೋಡುವಾಗ ಪ್ರಶಸ್ತಿ ಗೆದ್ದು ಚೋಕರ್ಸ್ ಹಣೆಪಟ್ಟಿಯನ್ನು ಕಳಚುವ ಸಾಧ್ಯತೆಯೊಂದು ಕಂಡುಬಂದಿದೆ. ಸೋಲುವ ಪಂದ್ಯವನ್ನು ಕೂಡ ಅಚ್ಚರಿ ಎಂಬಂತೆ 1 ರನ್​ನಿಂದ ಗೆದ್ದ ನಿದರ್ಶನ ಕೂಡ ಇದೆ.

VISTARANEWS.COM


on

T20 World Cup Final
Koo

ಬಾರ್ಬಡೋಸ್​: ದಕ್ಷಿಣ ಆಫ್ರಿಕಾ ತಂಡ ತನ್ನ ಚೋಕರ್ಸ್ ಹಣೆಪಟ್ಟಿಯನ್ನು ಕಳಚಿಕೊಳ್ಳಲು ಇನ್ನೊಂದೆ ಹೆಜ್ಜೆ ಮಾತ್ರ ಬಾಕಿ ಉಳಿದಿದೆ. ನಾಳೆ ನಡೆಯುವ ಟಿ20 ವಿಶ್ವಕಪ್​ ಟೂರ್ನಿಯ ಫೈನಲ್(T20 World Cup Final)​ ಪಂದ್ಯದಲ್ಲಿ ಭಾರತದ(South Africa vs India Final) ಸವಾಲು ಎದುರಿಸಲಿದೆ. 32 ವರ್ಷಗಳ ಬಳಿಕ ಐಸಿಸಿ ಟೂರ್ನಿಯಲ್ಲಿ ಮೊದಲ ಬಾರಿಗೆ ಅಜೇಯವಾಗಿ ಫೈನಲ್ ಪ್ರವೇಶಿಸಿರುವವ ಹರಿಣ ಪಡೆಗೆ ಈ ಬಾರಿಯಾದರೂ ಕಪ್​ ಗೆಲ್ಲುವ ಭಾಗ್ಯ ಇದೆಯಾ ಎಂದು ಕಾದು ನೋಡಬೇಕಿದೆ. ಈ ಹಿಂದೆ ಆಡಿದ ಎಲ್ಲ 7(ಏಕದಿನ, ಟಿ20) ಸೆಮಿಫೈನಲ್​ ಪಂದ್ಯದಲ್ಲಿಯೂ ಸೋಲು ಕಂಡಿತ್ತು.

ದಕ್ಷಿಣ ಆಫ್ರಿಕಾ ತಂಡ(South Africa) 1992ರಲ್ಲಿ ಸಿಡ್ನಿಯಲ್ಲಿ ನಡೆದ ಏಕದಿನ ವಿಶ್ವಕಪ್​ನಲ್ಲಿ ಮೊದಲ ಬಾರಿಗೆ​ ಸೆಮಿಫೈನಲ್​ ಪ್ರವೇಶಿಸಿತ್ತು. ಇನ್ನೇನು ಪಂದ್ಯ ಗೆಲ್ಲುತ್ತದೆ ಎನ್ನುವಷ್ಟರಲ್ಲಿ ಮಳೆ ಸುರಿದು ಪಂದ್ಯ ಸ್ಥಗಿತಗೊಂಡಿತು. 13 ಎಸೆತಗಳಲ್ಲಿ ಗೆಲುವಿಗೆ 22 ರನ್ ಬೇಕಿತ್ತು.​ ಮತ್ತೆ ಆಟ ಮುಂದುವರಿದಾಗ ಮೊಟ್ಟ ಮೊದಲ ಬಾರಿಗೆ ಪರಿಚವಾಗಿದ್ದ ಡಕ್​ವರ್ತ್​ ಲೂಯಿಸ್​ ನಿಯದ ಪ್ರಕಾರ ಹರಿಣ ಪಡೆಗೆ 1 ಎಸೆತದಲ್ಲಿ 22 ರನ್​ ಗಳಿಸುವ ಗುರಿ ನೀಡಲಾಯಿತು. ಈ ಪಂದ್ಯ ಸೋತ ಬಳಿಕ 1999ರಲ್ಲಿ ಬರ್ಮಿಂಗ್‌ಹ್ಯಾಮ್​ನಲ್ಲಿ ಆಸ್ಟ್ರೇಲಿಯ ವಿರುದ್ದದ ಪಂದ್ಯ ಟೈ ಆಗಿತ್ತು. ಆ ಪಂದ್ಯದಲ್ಲಿ ಆಸ್ಟ್ರೇಲಿಯ ಲೆಕ್ಕಾಚಾರದ ಮೂಲಕ ಫೈನಲ್ ಪ್ರವೇಶಿಸಿ ಕಪ್ ಗೆದ್ದಿತ್ತು. 2007 ರಲ್ಲಿ ಆಸ್ಟ್ರೇಲಿಯ ವಿರುದ್ಧ ಗ್ರಾಸ್‌ ಐಲೆಟ್‌ ನಲ್ಲಿ 7 ವಿಕೆಟ್‌ ಸೋಲು ಅನುಭವಿಸಿ ಆಘಾತಕ್ಕೆ ಗುರಿಯಾಗಿತ್ತು. 2015 ರಲ್ಲಿ ನ್ಯೂಜಿಲ್ಯಾಂಡ್‌ ವಿರುದ್ಧ ಆಕ್ಲೆಂಡ್‌ ನಲ್ಲಿ 4 ವಿಕೆಟ್‌ ಸೋಲು ಅನುಭವಿಸಿ ಚೋಕರ್ಸ್ ಎಂದು ಮತ್ತೆ ಕರೆಸಿಕೊಳ್ಳುವ ಸ್ಥಿತಿ ಹರಿಣಗಳ ಪಾಲಿಗೆ ಬಂದೊದಗಿತ್ತು.

ಆದರೆ, ಈ ಬಾರಿಯ ವಿಶ್ವಕಪ್​ ಟೂರ್ನಿಯಲ್ಲಿ ದಕ್ಷಿಣ ಆಫ್ರಿಕಾದ ಪ್ರದರ್ಶನ ಮತ್ತು ಅದೃಷ್ಟ ನೋಡುವಾಗ ಪ್ರಶಸ್ತಿ ಗೆದ್ದು ಚೋಕರ್ಸ್ ಹಣೆಪಟ್ಟಿಯನ್ನು ಕಳಚುವ ಸಾಧ್ಯತೆಯೊಂದು ಕಂಡುಬಂದಿದೆ. ಏಕೆಂದರೆ ಪ್ರತಿ ಬಾರಿ ಮಳೆಯಿಂದ ಹಿನ್ನಡೆ ಅನುಭವಿಸುವ ದಕ್ಷಿಣ ಆಫ್ರಿಕಾ ಈ ಬಾರಿ ವರದಾನವಾಗಿಯೇ ಪರಿಣಮಿಸಿದೆ. ಜತೆಗೆ ಸೋಲುವ ಪಂದ್ಯವನ್ನು ಕೂಡ ಅಚ್ಚರಿ ಎಂಬಂತೆ 1 ರನ್​ನಿಂದ ಗೆದ್ದ ನಿದರ್ಶನ ಕೂಡ ಇದೆ. ಇದನೆಲ್ಲ ನೋಡುವಾಗ ಐಡೆನ್​ ಮಾರ್ಕ್ರಮ್​ ಐತಿಹಾಸಿಕ ಕಪ್​ ಎತ್ತಿ ಹಿಡಿಯುವ ಸಾಧ್ಯತೆಯೊಂದು ಕಂಡುಬಂದಿದೆ.

ಇದನ್ನೂ ಓದಿ IND Vs SA T20 WC Final: ಫೈನಲ್​ ಪಂದ್ಯಕ್ಕೂ ಮಳೆ ಭೀತಿ; ಪಂದ್ಯ ರದ್ದಾದರೆ ವಿಜೇತರ ನಿರ್ಧಾರ ಹೇಗೆ?

ಡಿ ಕಾಕ್​ ಹೊರತುಪಡಿಸಿ ಉಳಿದ ಯಾವುದೇ ಬ್ಯಾಟರ್​ಗಳು​ ಇದುವರೆಗೂ ನಿರೀಕ್ಷತ ಬ್ಯಾಟಿಂಗ್​ ಪ್ರದರ್ಶನ ತೋರದಿದ್ದರು. ಕೂಡ ಬೌಲಿಂಗ್​ ಮತ್ತು ಫೀಲ್ಡಿಂಗ್​ನಲ್ಲಿ ಉತ್ಕೃಷ್ಟ ಮಟ್ಟದ ಪ್ರದರ್ಶನ ತೋರುವ ಮೂಲಕ ಪಂದ್ಯವನ್ನು ಗೆದ್ದಿದ್ದಾರೆ. ಆದರೆ ಫೈನಲ್​ ಪಂದ್ಯದಲ್ಲಿ ಎಲ್ಲರು ಬ್ಯಾಟಿಂಗ್​ ನಡೆಸುವ ಅಗತ್ಯವಿದೆ. ಏಕೆಂದರೆ ಇಲ್ಲಿ ಸೋತರೆ ಮತ್ತೊಂದು ಪಂದ್ಯವಿಲ್ಲ.

Continue Reading

ಕ್ರೀಡೆ

Ajinkya Rahane: ಕೌಂಟಿ ಕ್ರಿಕೆಟ್​ನತ್ತ ಮುಖ ಮಾಡಿದ ಅಜಿಂಕ್ಯ ರಹಾನೆ

Ajinkya Rahane: ರಹಾನೆ ಭಾರತ ಪರ 85 ಟೆಸ್ಟ್​ ಪಂದ್ಯಗಳನ್ನಾಡಿ 5077 ರನ್​ ಬಾರಿಸಿದ್ದಾರೆ. 12 ಶತಕ ಬಾರಿಸಿದ್ದಾರೆ. 2016ರಲ್ಲಿ ನ್ಯೂಜಿಲ್ಯಾಂಡ್​ ವಿರುದ್ಧ 188 ರನ್‌ ಪೇರಿಸಿರುವುದು ಅವರ ವೈಯಕ್ತಿಕ ಶ್ರೇಷ್ಠ ಇನಿಂಗ್ಸ್‌ ಆಗಿದೆ.

VISTARANEWS.COM


on

Ajinkya Rahane
Koo

ಮುಂಬಯಿ: ಟೀಮ್​ ಇಂಡಿಯಾದ ಟೆಸ್ಟ್​ ಸ್ಪೆಷಲಿಸ್ಟ್‌ ಅಜಿಂಕ್ಯ ರಹಾನೆ(Ajinkya Rahane) ಅವರು ಕೌಂಟಿ ಕ್ರಿಕೆಟ್​ನತ್ತ ಮಖಮಾಡಿದ್ದಾರೆ. ಭಾರತ ತಂಡದಲ್ಲಿ ಅವಕಾಶ ಸಿಗದ ಕಾರಣ ಅವರು ಈ ನಿರ್ಧಾರ ಕೈಗೊಂಡಿದ್ದಾರೆ. ಇಂಗ್ಲಿಷ್‌ ಕೌಂಟಿ ಲೀಸೆಸ್ಟರ್‌ಶೈರ್‌(Leicestershire) ತಂಡದ ಪರ ಆಡಲು ಸಿದ್ಧವಾಗಿದ್ದಾರೆ. ಈ ವಿಚಾರವನ್ನು ಕ್ಲಬ್‌ ತನ್ನ ಪ್ರಕಟಣೆಯಲ್ಲಿ ಹೇಳಿದೆ. ಸದ್ಯ ಸಾಗುತ್ತಿರುವ ಕೌಂಟಿ ಚಾಂಪಿಯನ್‌ಶಿಪ್‌ನ(County Championship) ಕೊನೆಯ ಐದು ಪಂದ್ಯಗಳಲ್ಲಿ ರಹಾನೆ ಬ್ಯಾಟ್​ ಬೀಸಲಿದ್ದಾರೆ.

36ರ ಹರೆಯದ ರಹಾನೆ ಅವರು ವಿಯಾನ್‌ ಮುಲ್ಡರ್‌ ಅವರ ಸ್ಥಾನಕ್ಕೆ ಲೀಸೆಸ್ಟರ್‌ಶೈರ್‌ ತಂಡವನ್ನು ಸೇರಿಕೊಳ್ಳಲಿದ್ದಾರೆ. ಮುಲ್ಡರ್‌ ಅವರು ಮುಂದಿನ ಆಗಸ್ಟ್‌ ವೇಳೆ ದಕ್ಷಿಣ ಆಫ್ರಿಕಾ ತಂಡದ ಪರ ವೆಸ್ಟ್‌ಇಂಡೀಸ್‌ಗೆ ಪ್ರಯಾಣಿಸಲಿದ್ದಾರೆ. ಹೀಗಾಗಿ ಈ ಸ್ಥಾನದಲ್ಲಿ ರಹಾನೆ ಆಡಲಿದ್ದಾರೆ. ವಿಶ್ವದ ಹಲವು ಕ್ರಿಕೆಟ್​ ಆಟಗಾರರು ಕೂಡ ತಮ್ಮ ಕ್ರಿಕೆಟ್​ ಪ್ರದರ್ಶನ ಕುಂಠಿತಗೊಂಡಾಗ ಕೌಂಟಿ ಆಡಿ ಮತ್ತೆ ಫಾರ್ಮ್​ ಕಂಡುಕೊಂಡಿದ್ದಾರೆ.

ರಹಾನೆ ಭಾರತ ಪರ 85 ಟೆಸ್ಟ್​ ಪಂದ್ಯಗಳನ್ನಾಡಿ 5077 ರನ್​ ಬಾರಿಸಿದ್ದಾರೆ. 12 ಶತಕ ಬಾರಿಸಿದ್ದಾರೆ. 2016ರಲ್ಲಿ ನ್ಯೂಜಿಲ್ಯಾಂಡ್​ ವಿರುದ್ಧ 188 ರನ್‌ ಪೇರಿಸಿರುವುದು ಅವರ ವೈಯಕ್ತಿಕ ಶ್ರೇಷ್ಠ ಇನಿಂಗ್ಸ್‌ ಆಗಿದೆ. ಈ ಹಿಂದೆ ಆಸ್ಟ್ರೇಲಿಯ ನೆಲದಲ್ಲಿ ಭಾರತ 36 ರನ್​ಗೆ ಕುಸಿದು ಮುಖಭಂಗ ಅನುಭವಿಸಿದ್ದ ಸಂದರ್ಭದಲ್ಲಿ ಹಂಗಾಮಿಯಾಗಿ ತಂಡದ ನಾಯಕತ್ವ ವಹಿಸಿದ ರಹಾನೆ ಮುಂದಿನ ಪಂದ್ಯದಲ್ಲಿ ಶತಕ ಬಾರಿಸಿ ತಂಡವನ್ನು ಗೆಲುವಿನ ಹಾದಿಗೆ ತಂದು ಬಳಿಕ ಐತಿಹಾಸಿಕ ಸರಣಿ ಗೆಲುವು ತಂದಿತ್ತ ಖ್ಯಾತಿಯನ್ನು ಹೊಂದಿದ್ದಾರೆ. ರಹಾನೆ ಭಾರತ ಪರ ಕೊನೆಯ ಟೆಸ್ಟ್​ ಪಂದ್ಯ ಆಡಿದ್ದು 2023ರ ವಿಂಡೀಸ್​ ಪ್ರವಾಸದಲ್ಲಿ ಇದಾದ ಬಳಿಕ ಅವರಿಗೆ ತಂಡದಲ್ಲಿ ಸ್ಥಾನ ಸಿಗಲಿಲ್ಲ.

ಇದನ್ನೂ ಓದಿ IND vs WI: ಜಿಂಕೆಯಂತೆ ಜಿಗಿದು ಕ್ಯಾಚ್​ ಪಡೆದ ಅಜಿಂಕ್ಯ; ವಿಡಿಯೊ ವೈರಲ್​

ಕೌಂಟಿಯಲ್ಲಿ ಉತ್ತಮ ಪ್ರದರ್ಶನ ತೋರಿದರೆ, ಮುಂಬರುವ ಬಾಂಗ್ಲಾದೇಶ ವಿರುದ್ಧದ ತವರಿನ ಟೆಸ್ಟ್​ ಸರಣಿಯಲ್ಲಿ ರಹಾನೆ ತಂಡಕ್ಕೆ ಆಯ್ಕೆಯಾಗಬಹುದು. ಭಾರತ ಮತ್ತು ಬಾಂಗ್ಲಾ ನಡುವಣ ಟೆಸ್ಟ್​ ಸರಣಿ ಸೆಪ್ಟೆಂಬರ್​ನಲ್ಲಿ ನಡೆಯಲಿದೆ. 2 ಪಂದ್ಯಗಳ ಟೆಸ್ಟ್​ ಸರಣಿ ಇದಾಗಿದೆ.

ಕೊಹ್ಲಿ ಕ್ಲಾಸ್ ಪ್ಲೇಯರ್ ಎಂದ ನಾಯಕ ರೋಹಿತ್​

ಪ್ರೊವಿಡೆನ್ಸ್‌: ಈ ಬಾರಿಯ ಐಪಿಎಲ್‌ನಲ್ಲಿ ರನ್‌ ಪ್ರವಾಹ ಹರಿಸಿದ ವಿರಾಟ್‌ ಕೊಹ್ಲಿ(Virat Kohli) ಅವರು ಹಾಲಿ ಆವೃತ್ತಿಯ ಟಿ20 ವಿಶ್ವಕಪ್‌ನಲ್ಲಿನ್ನೂ(T20 World Cup 2024) ಗುಣಮಟ್ಟದ ಬ್ಯಾಟಿಂಗ್‌ ಪ್ರದರ್ಶಿಸಿಲ್ಲ. ಸಹಜವಾಗಿಯೇ ಇದು ಅಗ್ರ ಕ್ರಮಾಂಕದ ಮೇಲೆ ಒತ್ತಡ ತರುತ್ತಿದೆ. ಇಂಗ್ಲೆಂಡ್​ ವಿರುದ್ಧದ ಸೆಮಿ ಫೈನಲ್​ ಪಂದ್ಯದಲ್ಲಿಯೂ ಕೊಹ್ಲಿ ಒಂದಂಕಿಗೆ ಸೀಮಿತರಾಗಿ ಭಾರೀ ಟೀಕೆಗೆ ಗುರಿಯಾಗಿದ್ದಾರೆ. ಆದರೆ, ತಂಡದ ನಾಯಕ ರೋಹಿತ್​ ಶರ್ಮ(Rohit Sharma) ಅವರು ಕೊಹ್ಲಿ ಬೆಂಬಲಕ್ಕೆ ನಿಂತಿದ್ದಾರೆ.

ಪಂದ್ಯದ ಬಳಿಕ ವಿರಾಟ್​ ಕೊಹ್ಲಿಯ ಬ್ಯಾಟಿಂಗ್​ ವೈಫಲ್ಯದ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ರೋಹಿತ್​, ಖಂಡಿತವಾಗಿಯೂ ವಿರಾಟ್ ಓರ್ವ ಕ್ಲಾಸ್ ಪ್ಲೇಯರ್, ಅವರೊಬ್ಬ ಬಿಗ್ ಮ್ಯಾಚ್ ಪ್ಲೇಯರ್. ಪ್ರತಿಯೊಬ್ಬ ಆಟಗಾರನು ತನ್ನ ವೃತ್ತಿಜೀವನದಲ್ಲಿ ಏರಿಳಿತ ಕಾಣುವುದು ಸಹಜ. ಆದರೆ, ಕೊಹ್ಲಿ ವಿಷಯದಲ್ಲಿ ಫಾರ್ಮ್ ದೊಡ್ಡ ವಿಷಯವಲ್ಲ. ಅವರು ಫೈನಲ್‌ ಪಂದ್ಯಕ್ಕಾಗಿ ಕಾಯುತ್ತಿದ್ದಾರೆ. ನನಗೆ ನಂಬಿಕೆ ಇದೆ ಫೈನಲ್​ನಲ್ಲಿ ಅವರು ಶ್ರೇಷ್ಠ ಬ್ಯಾಟಿಂಗ್​ ತೋರುವ ಮೂಲಕ ಎಲ್ಲ ಟೀಕೆಗಳಿಗೂ ಬ್ಯಾಟ್​ನಿಂದಲೇ ಉತ್ತರಿಸಲಿದ್ದಾರೆ ಎಂದು ಹೇಳುವ ಮೂಲಕ ಕೊಹ್ಲಿಗೆ ಬೆಂಬಲ ಸೂಚಿಸಿದರು.

Continue Reading

ಕ್ರೀಡೆ

IND Vs SA T20 WC Final: ಫೈನಲ್​ ಪಂದ್ಯಕ್ಕೂ ಮಳೆ ಭೀತಿ; ಪಂದ್ಯ ರದ್ದಾದರೆ ವಿಜೇತರ ನಿರ್ಧಾರ ಹೇಗೆ?

IND Vs SA T20 WC Final: ಇಂಗ್ಲೆಂಡ್​ ಮತ್ತು ಭಾರತ ನಡುವಣ ಸೆಮಿ ಫೈನಲ್​ ಪಂದ್ಯಕ್ಕೂ ಮಳೆ ಅಡ್ಡಿಪಡಿಸಿತ್ತು. ಇದೀಗ ಫೈನಲ್​ ಪಂದ್ಯಕ್ಕೂ ಹವಾಮಾನ ಇಲಾಖೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ. ಶೇ.70ರಷ್ಟು ಮಳೆಯಾಗಲಿದೆ ಎಂದು ತನ್ನ ವರದಿಯಲ್ಲಿ ತಿಳಿಸಿದೆ.

VISTARANEWS.COM


on

IND Vs SA T20 WC Final
Koo

ಬಾರ್ಬಡೋಸ್: ಹಾಲಿ ಆವೃತ್ತಿಯ ಟಿ20 ವಿಶ್ವಕಪ್​ ಫೈನಲ್(IND Vs SA T20 WC Final)​ ಪಂದ್ಯಕ್ಕೆ ಕ್ಷಣಗಣನೆ ಶುರುವಾಗಿದೆ. ನಾಳೆ(ಶನಿವಾರ) ಬಾರ್ಬಡೋಸ್​ನಲ್ಲಿ(Barbados Weather Forecast) ಕೂಟದ ಅಜೇಯ ತಂಡಗಳಾದ ದಕ್ಷಿಣ ಆಫ್ರಿಕಾ ಮತ್ತು ಭಾರತ ಪ್ರಶಸ್ತಿಗಾಗಿ ಕಾದಾಟ ನಡೆಸಲಿವೆ. ಆದರೆ, ಈ ಪಂದ್ಯಕ್ಕೂ ಮಳೆ ಭೀತಿ ಎದುರಾಗಿದೆ.

ಶೇ.70ರಷ್ಟು ಮಳೆ ಸಾಧ್ಯತೆ


ಇಂಗ್ಲೆಂಡ್​ ಮತ್ತು ಭಾರತ ನಡುವಣ ಸೆಮಿ ಫೈನಲ್​ ಪಂದ್ಯಕ್ಕೂ ಮಳೆ ಅಡ್ಡಿಪಡಿಸಿತ್ತು. ಇದೀಗ ಫೈನಲ್​ ಪಂದ್ಯಕ್ಕೂ ಹವಾಮಾನ ಇಲಾಖೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ. ಶೇ.70ರಷ್ಟು ಮಳೆಯಾಗಲಿದೆ ಎಂದು ತನ್ನ ವರದಿಯಲ್ಲಿ ತಿಳಿಸಿದೆ. ಒಂದೊಮ್ಮೆ ನಿಗದಿತ ದಿನ ಪಂದ್ಯ ನಡೆಯದೇ ಇದ್ದರೆ, ಮೀಸಲು ದಿನಕ್ಕೆ ಮುಂದುವರಿಯಲಿದೆ. ಸೂಪರ್​ 8 ಹಂತದಲ್ಲಿ ಮತ್ತು ಸೆಮಿಫೈನಲ್​ ಪಂದ್ಯ ಮಳೆಯಿಂದ ಮೀಸಲು ದಿನವೂ ಫಲಿತಾಂಶ ಕಾಣದಿದ್ದರೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಪಡೆದ ಸ್ಥಾನ ಮುಂದಿನ ಹಂತಕ್ಕೇರುತ್ತದೆ. ಆದರೆ ಫೈನಲ್​ ಪಂದ್ಯಕ್ಕೆ ಈ ನಿಯಮ ಅನ್ವಯವಾಗುವುದಿಲ್ಲ.

ಜಂಟಿ ವಿಜೇತರ ಘೋಷಣೆ


ಒಂದು ವೇಳೆ ಫೈನಲ್‌(T20 World Cup 2024) ಪಂದ್ಯ ಮೀಸಲು ದಿನದಲ್ಲಿಯೂ ನಡೆಯದೇ ಹೋದರೆ, ಆಗ ಎರಡೂ ತಂಡಗಳನ್ನು ಜಂಟಿ ವಿಜೇತರು ಎಂದು ಘೋಷಿಸಲಾಗುತ್ತದೆ. 2002ರಲ್ಲಿ ಶ್ರೀಲಂಕಾದಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯ ಮಳೆಯಿಂದ ಪೂರ್ಣಗೊಳಿಸಲು ಸಾಧ್ಯವಾಗದ ಕಾರಣ ಭಾರತ ಮತ್ತು ಆತಿಥೇಯ ಶ್ರೀಲಂಕಾ ಎರಡು ತಂಡಗಳನ್ನು ಜಂಟಿ ವಿಜೇತರನ್ನಾಗಿ ಘೋಷಣೆ ಮಾಡಲಾಗಿತ್ತು.

ಇದನ್ನೂ ಓದಿ IND vs ENG Semi Final: ಇಂಗ್ಲೆಂಡ್​ ಮಣಿಸಿ 10 ವರ್ಷಗಳ ಬಳಿಕ ಫೈನಲ್​ ಪ್ರವೇಶಿಸಿದ ಭಾರತ

ಕೊಲಂಬೊದಲ್ಲಿ ನಡೆದಿದ್ದ ಆ ಫೈನಲ್‌ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್​ ನಡೆಸಿದ ಶ್ರೀಲಂಕಾ 5 ವಿಕೆಟ್​ಗೆ 244 ರನ್ ಗಳಿಸಿತು. ಭಾರತ ವಿಕೆಟ್ ನಷ್ಟವಿಲ್ಲದೆ 14 ರನ್ ಗಳಿದ ವೇಳೆ ಜೋರಾಗಿ ಮಳೆ ಸುರಿಯಿತು. ಮಳೆ ಬಿಡುವು ನೀಡದೆ ಪಂದ್ಯವನ್ನು ಅರ್ಧಕ್ಕೆ ನಿಲ್ಲಿಸಿ ಎರಡೂ ತಂಡಗಳನ್ನು ಜಂಟಿ ವಿಜೇತರು ಎಂದು ಘೋಷಿಸಲಾಯಿತು. ಇದೀಗ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಣ ಪಂದ್ಯ ಕೂಡ ಪೂರ್ಣ ಫಲಿತಾಂಶ ಕಾಣದಿದ್ದರೆ ಇತ್ತಂಡಗಳು ಕೂಡ ಜಂಟಿ ಚಾಂಪಿಯನ್​ ಎನಿಸಿಕೊಳ್ಳಲಿದೆ. ಭಾರತ 2ನೇ ಕಪ್​ ಗೆದ್ದರೆ, ದಕ್ಷಿಣ ಆಫ್ರಿಕಾ ಚೊಚ್ಚಲ ಬಾರಿಗೆ ಚಾಂಪಿಯನ್​ ಪಟ್ಟ ಅಲಂಕರಿಸಿದಂತಾಗುತ್ತದೆ.

ಮುಖಾಮುಖಿ


ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ಇದುವರೆಗೆ 26 ಟಿ20 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ಪೈಕಿ ಭಾರತ 14 ಪಂದ್ಯ ಗೆದ್ದರೆ, ದಕ್ಷಿಣ ಆಫ್ರಿಕಾ 11 ಪಂದ್ಯಗಳನ್ನು ಗೆದ್ದಿದೆ. ಒಂದು ಪಂದ್ಯ ಫಲಿತಾಂಶ ಕಂಡಿಲ್ಲ. ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಒಟ್ಟು 6 ಪಂದ್ಯಗಳಲ್ಲಿ ಆಡಿದ್ದು, ಭಾರತ 4 ಪಂದ್ಯ ಗೆದ್ದಿದೆ. 2 ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಗೆಲುವು ಕಂಡಿದೆ. 2022ರಲ್ಲಿ ನಡೆದಿದ್ದ ವಿಶ್ವಕಪ್​ ಟೂರ್ನಿಯಲ್ಲಿ ರೋಹಿತ್​ ಪಡೆ ದಕ್ಷಿಣ ಆಫ್ರಿಕಾ ವಿರುದ್ಧ 5 ವಿಕೆಟ್​ ಅಂತರದ ಸೋಲು ಕಂಡಿತ್ತು.

Continue Reading

ಕ್ರಿಕೆಟ್

Virat Kohli: ಕೊಹ್ಲಿ ಕ್ಲಾಸ್ ಪ್ಲೇಯರ್, ಫೈನಲ್​ನಲ್ಲಿ ಆಡುತ್ತಾರೆ ಎಂದು ಬೆಂಬಲ ಸೂಚಿಸಿದ ನಾಯಕ ರೋಹಿತ್​

Virat Kohli: ಇಂಗ್ಲೆಂಡ್​ ವಿರುದ್ಧದ ಪಂದ್ಯದಲ್ಲಿ 9 ರನ್​ಗೆ ವಿಕೆಟ್​ ಕಳೆದುಕೊಂಡ ಕೊಹ್ಲಿ ಇದೇ ಬೇಸರದಲ್ಲಿ ಡ್ರೆಸ್ಸಿಂಗ್​ ರೂಮ್​ನಲ್ಲಿ ಕುಳಿತು ತನ್ನ ಬ್ಯಾಟಿಂಗ್​ ಬಗ್ಗೆ ಚಿಂತಿಸಿ ಕಣ್ಣೀರು ಸುರಿಸಿದರು. ಈ ವೇಳೆ ಮುಖ್ಯ ಕೋಚ್​ ರಾಹುಲ್​ ದ್ರಾವಿಡ್​ ಬಂದು ಕೊಹ್ಲಿಯನ್ನು ಸಂತೈಸಿದರು. ಈ ವಿಡಿಯೊ ವೈರಲ್​ ಆಗಿದೆ.

VISTARANEWS.COM


on

Virat Kohli
Koo

ಪ್ರೊವಿಡೆನ್ಸ್‌: ಈ ಬಾರಿಯ ಐಪಿಎಲ್‌ನಲ್ಲಿ ರನ್‌ ಪ್ರವಾಹ ಹರಿಸಿದ ವಿರಾಟ್‌ ಕೊಹ್ಲಿ(Virat Kohli) ಅವರು ಹಾಲಿ ಆವೃತ್ತಿಯ ಟಿ20 ವಿಶ್ವಕಪ್‌ನಲ್ಲಿನ್ನೂ(T20 World Cup 2024) ಗುಣಮಟ್ಟದ ಬ್ಯಾಟಿಂಗ್‌ ಪ್ರದರ್ಶಿಸಿಲ್ಲ. ಸಹಜವಾಗಿಯೇ ಇದು ಅಗ್ರ ಕ್ರಮಾಂಕದ ಮೇಲೆ ಒತ್ತಡ ತರುತ್ತಿದೆ. ಇಂಗ್ಲೆಂಡ್​ ವಿರುದ್ಧದ ಸೆಮಿ ಫೈನಲ್​ ಪಂದ್ಯದಲ್ಲಿಯೂ ಕೊಹ್ಲಿ ಒಂದಂಕಿಗೆ ಸೀಮಿತರಾಗಿ ಭಾರೀ ಟೀಕೆಗೆ ಗುರಿಯಾಗಿದ್ದಾರೆ. ಆದರೆ, ತಂಡದ ನಾಯಕ ರೋಹಿತ್​ ಶರ್ಮ(Rohit Sharma) ಅವರು ಕೊಹ್ಲಿ ಬೆಂಬಲಕ್ಕೆ ನಿಂತಿದ್ದಾರೆ.

ಪಂದ್ಯದ ಬಳಿಕ ವಿರಾಟ್​ ಕೊಹ್ಲಿಯ ಬ್ಯಾಟಿಂಗ್​ ವೈಫಲ್ಯದ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ರೋಹಿತ್​, ಖಂಡಿತವಾಗಿಯೂ ವಿರಾಟ್ ಓರ್ವ ಕ್ಲಾಸ್ ಪ್ಲೇಯರ್, ಅವರೊಬ್ಬ ಬಿಗ್ ಮ್ಯಾಚ್ ಪ್ಲೇಯರ್. ಪ್ರತಿಯೊಬ್ಬ ಆಟಗಾರನು ತನ್ನ ವೃತ್ತಿಜೀವನದಲ್ಲಿ ಏರಿಳಿತ ಕಾಣುವುದು ಸಹಜ. ಆದರೆ, ಕೊಹ್ಲಿ ವಿಷಯದಲ್ಲಿ ಫಾರ್ಮ್ ದೊಡ್ಡ ವಿಷಯವಲ್ಲ. ಅವರು ಫೈನಲ್‌ ಪಂದ್ಯಕ್ಕಾಗಿ ಕಾಯುತ್ತಿದ್ದಾರೆ. ನನಗೆ ನಂಬಿಕೆ ಇದೆ ಫೈನಲ್​ನಲ್ಲಿ ಅವರು ಶ್ರೇಷ್ಠ ಬ್ಯಾಟಿಂಗ್​ ತೋರುವ ಮೂಲಕ ಎಲ್ಲ ಟೀಕೆಗಳಿಗೂ ಬ್ಯಾಟ್​ನಿಂದಲೇ ಉತ್ತರಿಸಲಿದ್ದಾರೆ ಎಂದು ಹೇಳುವ ಮೂಲಕ ಕೊಹ್ಲಿಗೆ ಬೆಂಬಲ ಸೂಚಿಸಿದರು.

ಇಂಗ್ಲೆಂಡ್​ ವಿರುದ್ಧದ ಪಂದ್ಯದಲ್ಲಿ 9 ರನ್​ಗೆ ವಿಕೆಟ್​ ಕಳೆದುಕೊಂಡ ಕೊಹ್ಲಿ ಇದೇ ಬೇಸರದಲ್ಲಿ ಡ್ರೆಸ್ಸಿಂಗ್​ ರೂಮ್​ನಲ್ಲಿ ಕುಳಿತು ತನ್ನ ಬ್ಯಾಟಿಂಗ್​ ಬಗ್ಗೆ ಚಿಂತಿಸಿ ಕಣ್ಣೀರು ಸುರಿಸಿದರು. ಈ ವೇಳೆ ಮುಖ್ಯ ಕೋಚ್​ ರಾಹುಲ್​ ದ್ರಾವಿಡ್​ ಬಂದು ಕೊಹ್ಲಿಯನ್ನು ಸಂತೈಸಿದರು. ಈ ವಿಡಿಯೊ ವೈರಲ್​ ಆಗಿದೆ.

ಇದನ್ನೂ ಓದಿ Rohit Sharma: ಕೊಹ್ಲಿ, ಧೋನಿ ಬಳಿಕ ನಾಯಕನಾಗಿ ವಿಶೇಷ ದಾಖಲೆ ಬರೆದ ರೋಹಿತ್​

2014, 2016, 2022ರಲ್ಲಿ ಭಾರತ ಆಡಿದ ಎಲ್ಲ ಟಿ20 ವಿಶ್ವಕಪ್​ ಸೆಮಿಫೈನಲ್​ ಪಂದ್ಯದಲ್ಲಿ ವಿರಾಟ್​ ಕೊಹ್ಲಿ ಅರ್ಥಶತಕ ಬಾರಿಸಿ ಮಿಂಚಿದ್ದರು. ಆದರೆ, ಈ ಬಾರಿ ಒಂದಂಕಿಗೆ ಸೀಮಿತರಾದರು. ಜತೆಗೆ ಈ ಬಾರಿ ಆಡಿದ ಎಲ್ಲ ಪಂದ್ಯಗಳಲ್ಲಿಯೂ ಕೊಹ್ಲಿ ಬ್ಯಾಟಿಂಗ್​ ವೈಫಲ್ಯ ಕಂಡಂತಾಯಿತು. ಇಂಗ್ಲೆಂಡ್​ ವಿರುದ್ಧ 9 ಎಸೆತಗಳಲ್ಲಿ 9 ರನ್​ ಬಾರಿಸಿ ಟಾಪ್ಲಿ ಎಸೆತಕ್ಕೆ ಕ್ಲೀನ್​ ಬೌಲ್ಡ್​ ಆದರು. ಆಡಿದ 7 ಪಂದ್ಯಗಳ ಪೈಕಿ 2 ಪಂದ್ಯದಲ್ಲಿ ಶೂನ್ಯ ಸುತ್ತಿದ್ದಾರೆ. ಒಟ್ಟಾರೆ ಅವರ ಗಳಿಕೆ 75 ರನ್​.

ಕೊಹ್ಲಿಯನ್ನು ಆರಂಭಿಕನಾಗಿ ಆಡಿಸಿದ್ದು ಕೂಡ ಅವರ ಬ್ಯಾಟಿಂಗ್​ ವೈಫಲ್ಯಕ್ಕೆ ಕಾರಣವಿರಬಹುದು. ಕೆಲ ವರ್ಷಗಳಿಂದ ಐಪಿಎಲ್​ನಲ್ಲಿ ಕೊಹ್ಲಿ ಆರಂಭಿಕನಾಗಿ ಆಡಿದ್ದರೂ ಕೂಡ ಐಸಿಸಿ ಟೂರ್ನಿಯಲ್ಲಿ ಇದುವರೆಗೂ ಆಡಿರಲಿಲ್ಲ. ಶೈನಿಂಗ್​ ಬಾಲ್​ನಲ್ಲಿ ಅವರಿಗೆ ಆಡಿದ ಅನುಭವ ಕೂಡ ಅಷ್ಟಾಗಿ ಇಲ್ಲ. ಏನಿದ್ದರೂ ಮಧ್ಯಮ ಕ್ರಮಾಂಕದಲ್ಲಿಯೇ ಅವರು ಹೆಚ್ಚು ಸಕ್ಸನ್​ ಕಂಡಿರುವುದು. ಟಿ20 ವಿಶ್ವಕಪ್​ಗೆ ತಂಡ ಪ್ರಕಟಿಸುವ ಮುನ್ನ ಅಮೆರಿಕ ಮತ್ತು ವಿಂಡೀಸ್​ ಪಿಚ್​ಗಳು ನಿಧಾನಗತಿಯದ್ದಾಗಿದ್ದು, ಕೊಹ್ಲಿಗೆ ಇದು ಸೂಕ್ತವಲ್ಲ ಎಂದು ಹೇಳಲಾಗಿತ್ತು. ಇದು ಕೂಡ ಅವರ ಬ್ಯಾಟಿಂಗ್​ ಹಿನ್ನಡೆಗೆ ಕಾಣವಾಗಿರಬಹುದು.

Continue Reading
Advertisement
T20 World Cup Final
ಕ್ರೀಡೆ13 mins ago

T20 World Cup Final: ಚೋಕರ್ಸ್ ಹಣೆಪಟ್ಟಿ ಕಳಚಿಕೊಳ್ಳುವುದೇ ದಕ್ಷಿಣ ಆಫ್ರಿಕಾ?; ನಾಳೆ ಫೈನಲ್​

Kannada Serials TRP Lakshmi Baramma in Top 5 new serials not in demand
ಕಿರುತೆರೆ21 mins ago

Kannada Serials TRP: ಟಾಪ್‌ 5ನಲ್ಲಿ ʻಲಕ್ಷ್ಮೀ ಬಾರಮ್ಮʼ; ಹೊಸ ಧಾರಾವಾಹಿಗಿಲ್ಲ ಬೇಡಿಕೆ!

ಕರ್ನಾಟಕ24 mins ago

CM Siddaramaiah: ಮೇಕೆದಾಟು ಯೋಜನೆಗೆ ತಮಿಳುನಾಡಿನ ತಕರಾರಿಲ್ಲ, ಕೇಂದ್ರ ಅನುಮತಿ ನೀಡಬೇಕು: ಸಿಎಂ ಸಿದ್ದರಾಮಯ್ಯ ಆಗ್ರಹ

ವಿದೇಶ45 mins ago

US Presidential Election: ರಂಗೇರುತ್ತಿದೆ ಅಮೆರಿಕ ಅಧ್ಯಕ್ಷೀಯ ಚುನಾವಣೆ; ಬೈಡೆನ್‌-ಟ್ರಂಪ್‌ ಮುಖಾಮುಖಿ; ಭರ್ಜರಿ ಟಾಕ್‌ ವಾರ್‌

NK Bailu victims to get relief soon says Incharge secretary Ritesh Kumar Singh
ಉತ್ತರ ಕನ್ನಡ52 mins ago

Uttara Kannada News: ಕಾರವಾರದ ಎನ್.ಕೆ. ಬೈಲು ಸಂತ್ರಸ್ತರಿಗೆ ತಕ್ಷಣ ಪರಿಹಾರಕ್ಕೆ ಸೂಚನೆ

Viral Video
Latest54 mins ago

Viral Video: ಒಂಟಿ ಯುವತಿಯ ಮೇಲೆ ದುಷ್ಕರ್ಮಿಯ ದಾಳಿ; ಆಕೆ ಪಾರಾಗಿದ್ದು ಹೇಗೆ?

power outage in many parts of Bengaluru on June 29
ಬೆಂಗಳೂರು1 hour ago

Bengaluru Power Cut: ಬೆಂಗಳೂರು ನಿವಾಸಿಗಳೇ ಗಮನಿಸಿ; ಜೂ.29ರಂದು ಈ ಪ್ರದೇಶಗಳಲ್ಲಿ ಕರೆಂಟ್‌ ಇರಲ್ಲ

Actor Darshan In Central Jail remembering mother and son
ಸ್ಯಾಂಡಲ್ ವುಡ್1 hour ago

Actor Darshan: ಜೈಲಿನಲ್ಲಿ ದರ್ಶನ್‌ಗೆ ತಾಯಿ, ತಮ್ಮನ ನೆನಪಾಗ್ತಿದೆಯಂತೆ!

bear attack
ಕೊಪ್ಪಳ1 hour ago

Wild Animals Attack : ಕೊಪ್ಪಳದಲ್ಲಿ ಕಂಡ ಕಂಡಲ್ಲಿ ಕರಡಿಗಳ ಹಾವಳಿ

Haveri Accident
ಕರ್ನಾಟಕ1 hour ago

Haveri Accident: ಹಾವೇರಿ ಅಪಘಾತ ಪ್ರಕರಣ; ಭಾರತ ಅಂಧರ ಪುಟ್‌ಬಾಲ್ ತಂಡದ ಕ್ಯಾಪ್ಟನ್ ಕೂಡ ಸಾವು

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ4 hours ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ20 hours ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ22 hours ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು23 hours ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ1 day ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ4 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ7 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ1 week ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ1 week ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು2 weeks ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

ಟ್ರೆಂಡಿಂಗ್‌