ಜೂನಿಯರ್​ ಮಹಿಳಾ ಹಾಕಿ ವಿಶ್ವ ಕಪ್​ನಲ್ಲಿ ಭಾರತಕ್ಕೆ ಕೆನಡಾ ಮೊದಲ ಎದುರಾಳಿ Vistara News
Connect with us

ಕ್ರೀಡೆ

ಜೂನಿಯರ್​ ಮಹಿಳಾ ಹಾಕಿ ವಿಶ್ವ ಕಪ್​ನಲ್ಲಿ ಭಾರತಕ್ಕೆ ಕೆನಡಾ ಮೊದಲ ಎದುರಾಳಿ

ಜೂನಿಯರ್‌ ಮಹಿಳಾ ವಿಶ್ವಕಪ್‌ ಹಾಕಿ(Junior Women’s Hockey World Cup) ಪಂದ್ಯಾವಳಿಯಲ್ಲಿ ಭಾರತ ತಂಡ ಮೊದಲ ಪಂದ್ಯವನ್ನು ಕೆನಡಾ ವಿರುದ್ಧ ಆಡಲಿದೆ.

VISTARANEWS.COM


on

India Women Jr
Koo

ನವದೆಹಲಿ: ವರ್ಷಾಂತ್ಯ ನಡೆಯಲಿರುವ ಜೂನಿಯರ್‌ ಮಹಿಳಾ ವಿಶ್ವಕಪ್‌ ಹಾಕಿ(Junior Women’s Hockey World Cup) ಪಂದ್ಯಾವಳಿಯ ವೇಳಾಪಟ್ಟಿ ಪ್ರಕಟಗೊಂಡಿದೆ. ಭಾರತ ತನ್ನ ಮೊದಲ ಪಂದ್ಯವನ್ನು ಕೆನಡಾ ವಿರುದ್ಧ ಆಡಲಿದೆ. ಭಾರತ “ಸಿ’ ವಿಭಾಗದಲ್ಲಿ ಸ್ಥಾನ ಪಡೆದಿದೆ. ಬೆಲ್ಜಿಯಂ(Belgium) ಮತ್ತು ಜರ್ಮನಿ(Germany) ಈ ಗ್ರೂಪ್​ನಲ್ಲಿರುವ ಇನ್ನೆರಡು ತಂಡಗಳಾಗಿವೆ.

ಭಾರತ(India) ಮತ್ತು ಕೆನಡಾ(Canada) ವಿರುದ್ಧದ ಪಂದ್ಯ ನವೆಂಬರ್​ 29ರಂದು ನಡೆಯಲಿದೆ. ಈ ಟೂರ್ನಿ ಚಿಲಿಯ ರಾಜಧಾನಿ ಸ್ಯಾಂಟಿಯಾಗೋದಲ್ಲಿ ನಡೆಯಲಿದೆ. ಭಾರತ ಈವರೆಗೆ ಯಾವುದೇ ವಿಶ್ವಕಪ್‌ ಪದಕ ಗೆದ್ದಿಲ್ಲ. ಕಳೆದ ಆವೃತ್ತಿಯಲ್ಲಿ ಕಂಚಿನ ಪದಕ ಗೆಲ್ಲುವ ಸಾಧ್ಯತೆ ಇತ್ತಾದರೂ ಇಂಗ್ಲೆಂಡ್‌ ವಿರುದ್ಧ ಶೂಟೌಟ್‌ನಲ್ಲಿ ಎಡವಿತು. 2-2 ಡ್ರಾ ಸಾಧಿಸುವಲ್ಲಿ ಯಶಸ್ವಿಯಾಗಿದ್ದ ಭಾರತ, ಶೂಟೌಟ್‌ನಲ್ಲಿ 0-3ರಿಂದ ಪರಾಭವಗೊಂಡಿತ್ತು. ಆದರೆ ಈ ಬಾರಿ ಭಾರತದ ಮೇಲೆ ಪದಕ ಬರವಸೆಯೊಂದನ್ನು ಇಡಲಾಗಿದೆ. ಇತ್ತೀಚೆಗೆ ಜಪಾನ್‌ನಲ್ಲಿ ನಡೆದ ಜೂನಿಯರ್‌ ಏಷ್ಯಾ ಕಪ್‌ ಗೆದ್ದು ವಿಶ್ವಕಪ್‌ಗೆ ಅರ್ಹತೆ ಸಂಪಾದಿಸಿದ ಭಾರತ ತಂಡ ಬಲಿಷ್ಠವಾಗಿ ಗೋಚರಿಸಿದೆ. ಜತೆಗೆ ಆತ್ಮವಿಶ್ವಾಸವನ್ನೂ ಹೆಚ್ಚಿಸಿಕೊಂಡಿದೆ. ಹೀಗಾಗಿ ಭಾರತ ಕೂಡ ಟೂರ್ನಿಯ ಫೇವರಿಟ್​ ತಂಡಗಳಲ್ಲಿ ಒಂದಾಗಿದೆ.

ಟೂರ್ನಿ ಆರಂಭಕ್ಕೂ ಮುನ್ನವೇ ತಂಡದ ಸಾಮರ್ಥ್ಯದ ಬಗ್ಗೆ ತಿಳಿಸಿದ ತಂಡದ ನಾಯಕಿ ಪ್ರೀತಿ, “ತಂಡ ಎಲ್ಲ ವಿಭಾಗದಲ್ಲಿಯೂ ಅತ್ಯಂತ ಬಲಿಷ್ಠವಾಗಿದೆ. ನಮ್ಮ ಸಾಮರ್ಥ್ಯದ ಬಗ್ಗೆ ನಮಗೆ ನಂಬಿಕೆ ಇದೆ. ಪ್ರತೀ ಪಂದ್ಯದಲ್ಲೂ ಇದನ್ನು ಪ್ರದರ್ಶಿಸುವುದೇ ನಮ್ಮ ಯೋಜನೆ’ ಎಂಬುದಾಗಿ ಹೇಳಿದ್ದಾರೆ.

ಇದನ್ನೂ ಓದಿ Hockey Asia Cup: ಕೊರಿಯಾವನ್ನು ಮಣಿಸಿ ಚಾಂಪಿಯನ್​ ಪಟ್ಟ ಅಲಂಕರಿಸಿದ ಭಾರತದ ಕಿರಿಯ ಮಹಿಳಾ ತಂಡ

ತಂಡದ ಕೋಚ್​ ಮುಖ್ಯ ಜಾನೆಕ್‌ ಸ್ಕೋಪ್‌ಮನ್‌ ಕೂಡ ತಂಡದ ಬಗ್ಗೆ ಆತ್ಮವಿಶ್ವಾಸದ ಮಾತುಗಳನ್ನಾಡಿದ್ದಾರೆ. “ಏಷ್ಯಾ ಕಪ್‌ ಗೆದ್ದ ಬಳಿಕ ತಂಡದ ಆತ್ಮವಿಶ್ವಾಸ ಹೆಚ್ಚಿದೆ. ಆದರೆ ವಿಶ್ವ ಮಟ್ಟದ ಪಂದ್ಯಾವಳಿಗಳಲ್ಲಿ ಹೆಚ್ಚು ಸವಾಲು ಎದುರಾಗುತ್ತದೆ. ಇಲ್ಲಿ ಜಗತ್ತಿನ ಬಲಿಷ್ಠ ತಂಡಗಳೆಲ್ಲ ಹೋರಾಟ ನಡೆಸುತ್ತವೆ. ಪ್ರತಿಯೊಂದು ಪಂದ್ಯವೂ ಕಠಿಣವಾಗಿರುತ್ತದೆ. ಆದರೆ ನಮ್ಮ ತಂಡ ಈ ಎಲ್ಲ ಸವಾಲನ್ನು ಎದುರಿಸಲು ಬೇಕಾದ ಸಿದ್ಧತೆ ನಡೆಸಲಿದೆ” ಎಂದು ಹೇಳಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News Special Face Book ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
ವೈವಿಧ್ಯಮಯ ಸುದ್ದಿಗಳಿಗಾಗಿ Vistara News Twitter ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

Live News

ind vs Aus : ಮೂರನೇ ಏಕ ದಿನ ಪಂದ್ಯ; ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದಿಂದ ಬ್ಯಾಟಿಂಗ್ ಆಯ್ಕೆ

ಭಾರತ ತಂಡ ಮೊದಲೆರಡು ಪಂದ್ಯಗಳನ್ನು ಗೆದ್ದಿದ್ದು ಸರಣಿಯನ್ನು ಕೈವಶ ಮಾಡಿಕೊಂಡಿದೆ. ಹೀಗಾಗಿ ಈ ಪಂದ್ಯದಲ್ಲಿ ಭಾರತಕ್ಕೆ ಕ್ಲೀನ್​ ಸ್ವೀಪ್​ ಸಾಧನೆ ಮಾಡುವ ಅವಕಾಶವಿದೆ.

VISTARANEWS.COM


on

ODI AUS
Koo

ರಾಜ್​ಕೋಟ್​: ಇಲ್ಲಿನ ಎಸ್​​ಸಿ ಕ್ರೀಡಾಂಗಣದಲ್ಲಿ ಆರಂಭಗೊಂಡಿರುವ ಭಾರತ ವಿರುದ್ಧದ 3 ನೇ ಏಕದಿನ ಪಂದ್ಯದಲ್ಲಿ (ind vs Aus) ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಕಮಿನ್ಸ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. ಎರಡೂ ತಂಡಗಳು ತಲಾ ಐದು ಬದಲಾವಣೆಗಳನ್ನು ಮಾಡಿವೆ.

ಆಸ್ಟ್ರೇಲಿಯಾ ಪರ ಮಿಚೆಲ್ ಸ್ಟಾರ್ಕ್ ಮತ್ತು ಗ್ಲೆನ್ ಮ್ಯಾಕ್ಸ್​ವೆಲ್​ ಪುನರಾಗಮನ ಮಾಡಿದರೆ, ತನ್ವೀರ್ ಸಂಗಾ ಏಕದಿನ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದ್ದಾರೆ. ರೋಹಿತ್ ಶರ್ಮಾ ನಿನ್ನೆ ಪತ್ರಿಕಾಗೋಷ್ಠಿಯಲ್ಲಿ ಉಲ್ಲೇಖಿಸಿದಂತೆ ಭಾರತದಲ್ಲೂ ಬದಲಾವಣೆಗಳು ಸಾಕಷ್ಟಾಗಿವೆ. ನಾಯಕ ಮತ್ತು ವಿರಾಟ್ ಕೊಹ್ಲಿ ಮರಳಿದ್ದಾರೆ ಆದರೆ ಶುಭ್ಮನ್ ಗಿಲ್, ಮೊಹಮ್ಮದ್ ಶಮಿ, ಶಾರ್ದೂಲ್ ಠಾಕೂರ್ ಮತ್ತು ಹಾರ್ದಿಕ್ ಪಾಂಡ್ಯ ಅವರ ಅನುಪಸ್ಥಿತಿಯಲ್ಲಿ ಆಡಲಿದೆ. ಭಾರತವು ವಾಷಿಂಗ್ಟನ್​ ಸುಂದರ್ ಅವರಿಗಾಗಿ ರವಿಚಂದ್ರನ್ ಅಶ್ವಿನ್ ಅವರನ್ನು ಕೈಬಿಟ್ಟಿದೆ. ರಾಜ್ಯದ ನಾಲ್ವರು ಸ್ಥಳೀಯ ಆಟಗಾರರಾದ ಧರ್ಮೇಂದ್ರ ಜಡೇಜಾ, ಪ್ರೇರಕ್ ಮಂಕಡ್, ವಿಶ್ವರಾಜ್ ಜಡೇಜಾ ಮತ್ತು ಹರ್ವಿಕ್ ದೇಸಾಯಿ ಪಂದ್ಯದುದ್ದಕ್ಕೂ ಡ್ರಿಂಕ್ಸ್ ಮತ್ತು ಫೀಲ್ಡಿಂಗ್​ಗಾಗಿ ತಂಡದ ಜತೆಗೆ ಇರಲಿದ್ದಾರೆ.

Continue Reading

ಕ್ರಿಕೆಟ್

World Cup 2023 : ಭಾರತ ವಿರುದ್ಧ ಗೆದ್ದವರು ವಿಶ್ವ ಕಪ್​ ಗೆಲ್ತಾರೆ; ಪಾಕ್​ ತಂಡ ಮಾಜಿ ಆಟಗಾರನ ಭವಿಷ್ಯ

ಹಾಲಿ ವಿಶ್ವ ಕಪ್​ನಲ್ಲಿ (World Cup 2023) ಆಡುವ ತಂಡಗಳಲ್ಲಿ ಭಾರತ ತಂಡ ಅತ್ಯಂತ ಬಲಿಷ್ಠವಾಗಿದೆ ಎಂಬುದಾಗಿ ಪಾಕಿಸ್ತಾನದ ಮಾಜಿ ಆರಂಭಿಕ ಬ್ಯಾಟರ್​ ಅಭಿಪ್ರಾಯಪಟ್ಟಿದ್ದಾರೆ.

VISTARANEWS.COM


on

Team India
Koo

ನವ ದೆಹಲಿ: ಏಕದಿನ ವಿಶ್ವ ಕಪ್​ 2023 ರ (World Cup 2023) ಆವೃತ್ತಿಯು ಎರಡು ವಾರಗಳಿಗಿಂತ ಕಡಿಮೆ ದೂರದಲ್ಲಿದೆ. ಕ್ರಿಕೆಟ್​​ ಅಭಿಮಾನಿಗಳ ಉತ್ಸಾಹದ ಮಟ್ಟವು ಸಾರ್ವಕಾಲಿಕ ಗರಿಷ್ಠ ಮಟ್ಟದಲ್ಲಿದೆ. ತಜ್ಞರು ಅವಿಸ್ಮರಣಿಯ ಈವೆಂಟ್​ನ ಫಲಿತಾಂಶವನ್ನು ಊಹಿಸುವಲ್ಲಿ ನಿರತರಾಗಿದ್ದರೆ, ಕೆಲವರು ತಮ್ಮ ನೆಚ್ಚಿನ ತಂಡಗಳನ್ನು ಹೆಸರಿಸುವಲ್ಲಿ ಬ್ಯುಸಿಯಾಗಿದ್ದಾರೆ. ಇನ್ನೂ ಕೆಲವು ಕ್ರಿಕೆಟ್​ ಪಂಡಿತರ ಎಲ್ಲ ತಂಡಗಳ ಬಲ ಮತ್ತು ದುರ್ಬಲ ಅಂಶಗಳನ್ನು ವಿಶ್ಲೇಷಿಸುವಲ್ಲಿ ನಿರತರಾಗಿದ್ದಾರೆ.

ಇಂಗ್ಲೆಂಡ್​​ ಮಾಜಿ ನಾಯಕ ಮೈಕಲ್ ವಾನ್ ಇತ್ತೀಚೆಗೆ ಟ್ವೀಟ್​​ನಲ್ಲಿ ಆತಿಥೇಯ ಭಾರತವು ಪಂದ್ಯಾವಳಿಯಲ್ಲಿ ಗೆಲ್ಲುವ ತಂಡ ಎಂದು ಹೇಳಿದ್ದರು. ಅದನ್ನು ಹೊರತುಪಡಿಸಿದರೆ ‘ಮೆನ್ ಇನ್ ಬ್ಲೂ’ ಅನ್ನು ಸೋಲಿಸುವ ತಂಡವು ಪ್ರಶಸ್ತಿಯನ್ನು ಗೆಲ್ಲಬಹುದು ಎಂದು ಹೇಳಿದ್ದರು. ಈಗ, ಪಾಕಿಸ್ತಾನದ ಮಾಜಿ ನಾಯಕ ಸಲ್ಮಾನ್ ಬಟ್ ವಾನ್ ಅವರ ಹೇಳಿಕೆಯನ್ನು ಪುನರುಚ್ಚರಿಸಿದ್ದಾರೆ. ಭಾರತವು ತಪ್ಪುಗಳನ್ನು ಮಾಡದಿದ್ದರೆ ಇತರ ತಂಡಗಳಿಗೆ ಅವರನ್ನು ಸೋಲಿಸುವುದು ತುಂಬಾ ಕಷ್ಟ ಎಂದು ಹೇಳಿದ್ದಾರೆ.

ವಿಶ್ವ ಕ್ರಿಕೆಟ್​​ನಲ್ಲಿ ಎಲ್ಲ ರೀತಿಯಲ್ಲಿ ಸಮತೋಲನ ಹೊಂದಿರುವ ಏಕೈಕ ತಂಡ ಭಾರತ. ಮುಂಬರುವ ವಿಶ್ವಕಪ್​​ನಲ್ಲಿ ಗಮನಿಸಬೇಕಾದ ನಾಲ್ಕು ತಂಡಗಳ ಬಗ್ಗೆ ಎಲ್ಲರೂ ಮಾತನಾಡುತ್ತಿದ್ದಾರೆ. ಆದಾಗ್ಯೂ, ಭಾರತವನ್ನು ಸೋಲಿಸುವ ತಂಡವು ವಿಶ್ವಕಪ್ ಗೆಲ್ಲುತ್ತದೆ ಎಂದು ನಾನು ನಂಬುತ್ತೇನೆ. ಭಾರತ ಅತ್ಯುತ್ತಮ ತಂಡ. ಅವರ ಬ್ಯಾಟಿಂಗ್ ಪರಿಪೂರ್ಣವಾಗಿದೆ ಅವರ ಬೌಲಿಂಗ್ ಅಲ್ಲಿನ ಪರಿಸ್ಥಿತಿಗಳಿಗೆ ಹೆಚ್ಚು ಸೂಕ್ತವಾಗಿದೆ. ಅವರು ಸ್ವಯಂ ತಪ್ಪುಗಳನ್ನು ಮಾಡದ ಹೊರತು, ಯಾವುದೇ ತಂಡವು ಅವರ ಹತ್ತಿರವೂ ಹೋಗುವುದು ಅಸಂಭವ ಎಂದು ಬಟ್ ತಮ್ಮ ಯೂಟ್ಯೂಬ್ ಚಾನೆಲ್​​ನಲ್ಲಿ ಹೇಳಿದ್ದಾರೆ.

ಉನ್ನತ ದರ್ಜೆಯ ಕ್ರಿಕೆಟ್​​

ಕಳೆದ ಕೆಲವು ವರ್ಷಗಳಲ್ಲಿ ಭಾರತದಲ್ಲಿ ಕ್ರಿಕೆಟ್ ವಾತಾವರಣವು ಗಣನೀಯವಾಗಿ ಸುಧಾರಿಸಿದೆ. ಆಟಗಾರರು ಫಿಟ್ನೆಸ್​​ಗೆ ಹೆಚ್ಚಿನ ಒತ್ತು ನೀಡುತ್ತಾರೆ. ಫೀಲ್ಡಿಂಗ್ ಗುಣಮಟ್ಟವನ್ನು ಹೆಚ್ಚಿಸುತ್ತಾರೆ ಎಂದು ಬಟ್ ಹೇಳಿದ್ದಾರೆ. ಭಾರತದ ಮೂಲಸೌಕರ್ಯ ಮತ್ತಿತರ ವ್ಯವಸ್ಥೆಗಳನ್ನು ಬಟ್​ ಶ್ಲಾಘಿಸಿದರು.

ಇದನ್ನೂ ಓದಿ : Asian Games 2023 : ಶೂಟಿಂಗ್ ಸ್ಕೀಟ್ ವಿಭಾಗದಲ್ಲಿ ಕಂಚಿನ ಪದಕ ಗೆದ್ದ ಭಾರತ ಪುರುಷರ ತಂಡ

“ಕಳೆದ ಕೆಲವು ವರ್ಷಗಳಲ್ಲಿ ಭಾರತವು ಗಮನಾರ್ಹವಾಗಿ ಸುಧಾರಿಸಿದೆ. ಈ ಆಟಗಾರರ ಫಿಟ್ನೆಸ್ ಮಟ್ಟವು ನಾವು 15 ವರ್ಷಗಳ ಹಿಂದೆ ಹೇಳಿದ್ದಕ್ಕಿಂತ ಉತ್ತಮವಾಗಿದೆ. ಅಂತೆಯೇ, ಫೀಲ್ಡಿಂಗ್ ಗುಣಮಟ್ಟವೂ ಸುಧಾರಿಸಿದೆ. ಮೂಲಸೌಕರ್ಯದಿಂದ ಹಿಡಿದು ವೀಕ್ಷಕವಿವರಣೆಗಾರರು, ತಜ್ಞರು ಸೇರಿದಂತೆ ಭಾರತದಲ್ಲಿ ಕ್ರಿಕೆಟ್​ಗೆ ಸಂಬಂಧಿಸಿದ ಎಲ್ಲವೂ ಉನ್ನತ ದರ್ಜೆಯದ್ದಾಗಿದೆ, “ಎಂದು ಪಾಕಿಸ್ತಾನದ ಮಾಜಿ ನಾಯಕ ಹೇಳಿದರು.

ರೋಹಿತ್ ಶರ್ಮಾ ಮತ್ತು ತಂಡವು ಏಕದಿನ ವಿಶ್ವಕಪ್​​ನ ಎಲ್ಲಾ ಮೂರು ಸ್ವರೂಪಗಳಲ್ಲಿ ನಂ.1 ತಂಡವಾಗಿ ಪ್ರವೇಶಿಸಲಿದೆ. ಅಕ್ಟೋಬರ್ 8 ರಂದು ಚೆನ್ನೈನಲ್ಲಿ ಐದು ಬಾರಿಯ ಚಾಂಪಿಯನ್ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದೊಂದಿಗೆ 10 ತಂಡಗಳ ಟೂರ್ನಿಯಲ್ಲಿ ಅವರ ಅಭಿಯಾನ ಪ್ರಾರಂಭವಾಗುತ್ತದೆ.

Continue Reading

ಕ್ರೀಡೆ

Asian Games 2023 : ಶೂಟಿಂಗ್ ಸ್ಕೀಟ್ ವಿಭಾಗದಲ್ಲಿ ಕಂಚಿನ ಪದಕ ಗೆದ್ದ ಭಾರತ ಪುರುಷರ ತಂಡ

ಈ ಪದಕದೊಂದಿಗೆ ಏಷ್ಯನ್​ ಗೇಮ್ಸ್​ನಲ್ಲಿ (Asian Games 2023) ಭಾರತದ ಪದಕಗಳ ಸಂಖ್ಯೆ 19ಕ್ಕೆ ಏರಿಕೆಯಾಯಿತು.

VISTARANEWS.COM


on

Bronze Medal
Koo

ಹ್ಯಾಂಗ್ಝ್​: ಭಾರತದ ಶೂಟರ್​ಗಳು ಏಷ್ಯನ್ ಗೇಮ್ಸ್​ನಲ್ಲಿ (Asian Games 2023) ಪರಾಕ್ರಮ ಮೆರೆದಿದ್ದಾರೆ. ಮಹಿಳೆಯರು ಎರಡು ಚಿನ್ನ, ಒಂದು ಬೆಳ್ಳಿ ಹಾಗೂ ಒಂದು ಕಂಚಿನ ಪದಕ ಗೆದ್ದ ಬೆನ್ನಲ್ಲೇ ಪುರುಷರ ತಂಡ ಕಂಚಿನ ಪದಕಕ್ಕೆ ಕೊರಳೊಡ್ಡಿದೆ. ಸ್ಕೀಟ್-50 ತಂಡ ಪುರುಷರ ವಿಭಾಗದಲ್ಲಿ ಭಾರತ 355 ಅಂಕಗಳೊಂದಿಗೆ ಕಂಚಿನ ಪದಕ ಗೆದ್ದುಕೊಂಡಿತು. ಈ ತಂಡದಲ್ಲಿ ಅನಂತ್ ಜೀತ್ ಸಿಂಗ್, ಗುರ್ಜೋತ್ ಸಿಂಗ್ ಮತ್ತು ಅಂಗದದದ ವೀರ್ ಸಿಂಗ್ ಬಜ್ವಾ ಇದ್ದರು. ಅನಂತ್ 121 ಅಂಕಗಳೊಂದಿಗೆ ನಾಲ್ಕನೇ ಸ್ಥಾನ ಪಡೆದಿದ್ದು. ಫೈನಲ್​ನಲ್ಲಿ ಅವಕಾಶ ಪಡೆಯಲಿದ್ದಾರೆ. ಉಳಿದಿಬ್ಬರು ಫೈನಲ್ ಅವಕಾಶ ನಷ್ಟ ಮಾಡಿಕೊಂಡಿದ್ದಾರೆ.

ಇದರೊಂದಿಗೆ ಭಾರತಕ್ಕೆ ಏಷ್ಯಾ ಕಪ್​ನ ನಾಲ್ಕನೇ ದಿನ ಸ್ಪರ್ಧೆಯಲ್ಲಿ 4 ಪದಕಗಳು ಲಭಿಸಿವೆ. ಇದೇ ವೇಳೆ ಹಾಲಿ ಆವೃತ್ತಿಯಲ್ಲಿ 19ನೇ ಪದಕ ಲಭಿಸಿದಂತಾಗಿದೆ.

ಭಾರತದ ಪದಕಗಳ ಪಟ್ಟಿ

  • ಚಿನ್ನ: 5
  • ಬೆಳ್ಳಿ: 5
  • ಕಂಚು: 9

4ನೇ ದಿನದಾಟದಲ್ಲಿ ಭಾರತದ ಫಲಿತಾಂಶ ಪ್ರಕಟ

ವುಶು: ಪುರುಷರ ದಾವೋಶು ಫೈನಲ್​​ನಲ್ಲಿ ರೋಹಿತ್ ಜಾಧವ್ 8ನೇ ಸ್ಥಾನ

ಈಜು: ಮಹಿಳೆಯರ 100 ಮೀಟರ್ ಬಟರ್ ಫ್ಲೈ ಹೀಟ್ಸ್ ನಲ್ಲಿ ನೀನಾ ವೆಂಕಟೇಶ್ 1:03:89 ಸಮಯದೊಂದಿಗೆ ಫೈನಲ್ ಗೆ ಅರ್ಹತೆ ಪಡೆಯಲು ವಿಫಲರಾದರು

ಮಹಿಳೆಯರ 100 ಮೀಟರ್ ಬ್ಯಾಕ್​ಸ್ಟ್ರೋಕ್​ ಹೀಟ್ಸ್​​ನಲ್ಲಿ ಮಾನಾ ಪಟೇಲ್ 13ನೇ ಸ್ಥಾನ ಪಡೆದರು.

ಶೂಟಿಂಗ್: ಭಾರತದ ಆಶಿ ಚೌಕ್ಸೆ, ಮನಿನಿ ಕೌಶಿಕ್ ಮತ್ತು ಸಿಫ್ಟ್ ಕೌರ್ ಸಮ್ರಾ 50 ಮೀಟರ್ ರೈಫಲ್ 3 ಸ್ಥಾನಗಳ ಮಹಿಳಾ ತಂಡ ಸ್ಪರ್ಧೆಯಲ್ಲಿ ಬೆಳ್ಳಿ ಗೆದ್ದರು.

ಮಹಿಳೆಯರ 50 ಮೀಟರ್ ರೈಫಲ್ 3 ಸ್ಥಾನಗಳ ವೈಯಕ್ತಿಕ ಸ್ಪರ್ಧೆಯಲ್ಲಿ ಸಿಫ್ಟ್ ಕೌರ್ ಸಮ್ರಾ ಚಿನ್ನ ಗೆದ್ದು ವಿಶ್ವ ದಾಖಲೆ, ಏಷ್ಯನ್ ಗೇಮ್ಸ್ ದಾಖಲೆಯನ್ನು ಮುರಿದರು

ಮಹಿಳೆಯರ 50 ಮೀಟರ್ ರೈಫಲ್ 3 ಸ್ಥಾನಗಳ ವೈಯಕ್ತಿಕ ಸ್ಪರ್ಧೆಯಲ್ಲಿ ಆಶಿ ಚೌಕ್ಸೆ ಕಂಚಿನ ಪದಕ ಗೆದ್ದರು

ಇದನ್ನೂ ಓದಿ : Asian Games 2023 : ವಿಶ್ವ ದಾಖಲೆಯೊಂದಿಗೆ ಶೂಟಿಂಗ್​ನಲ್ಲಿ ಚಿನ್ನದ ಪದಕ ಗೆದ್ದ ಭಾರತದ ಸಿಫ್ಟ್​ ಕೌರ್​

ಮಹಿಳೆಯರ 25 ಮೀಟರ್ ಪಿಸ್ತೂಲ್ ತಂಡ ಸ್ಪರ್ಧೆಯಲ್ಲಿ ಭಾರತ (ಮನು ಭಾಕರ್, ಇಶಾ ಸಿಂಗ್, ರಿದಮ್ ಸಾಂಗ್ವಾನ್) ಚಿನ್ನ ಗೆದ್ದರು

ಮಹಿಳೆಯರ 25 ಮೀಟರ್ ಪಿಸ್ತೂಲ್ ಅರ್ಹತಾ ಸುತ್ತಿನಲ್ಲಿ ಮನು ಭಾಕರ್ ಅಗ್ರಸ್ಥಾನ ಪಡೆದರೆ, ಇಶಾ ಐದನೇ ಸ್ಥಾನ ಮತ್ತು ರಿದಮ್ ಏಳನೇ ಸ್ಥಾನ ಪಡೆದರು

ಸ್ಕೀಟ್-50 ತಂಡ ಪುರುಷರ ವಿಭಾಗದಲ್ಲಿ ಭಾರತದ ಅನಂತ್ ಜೀತ್ ಸಿಂಗ್, ಗುರ್ಜೋತ್ ಸಿಂಗ್ ಮತ್ತು ಅಂಗದ್​ ವೀರ್ ಸಿಂಗ್ ಬಜ್ವಾ ಕಂಚಿನ ಪದಕ ಗೆದ್ದಿದ್ದಾರೆ.

ಫೆನ್ಸಿಂಗ್: 16ನೇ ಸುತ್ತಿನಲ್ಲಿ ಸಿಂಗಾಪುರ ವಿರುದ್ಧ 30-45 ಅಂತರದಲ್ಲಿ ಸೋತ ಭಾರತ ಪುರುಷರ ತಂಡ

ಸೈಕ್ಲಿಂಗ್: ರೊನಾಲ್ಡೊ ಸಿಂಗ್ 16ನೇ ಸುತ್ತಿನಲ್ಲಿ ಜಪಾನ್​​ನ ಶಿಂಜಿ ನಕಾನೊ ವಿರುದ್ಧ ಸೋತರು

ಸ್ಕ್ವಾಷ್: ಕುವೈತ್ ವಿರುದ್ಧ ಭಾರತಕ್ಕೆ 3-0 ಅಂತರದ ಗೆಲುವು

ಮಹಿಳಾ ಪೂಲ್ ಬಿ: ನೇಪಾಳವನ್ನು 3-0 ಅಂತರದಿಂದ ಮಣಿಸಿದ ಭಾರತ

Continue Reading

ಕ್ರೀಡೆ

Asian Games 2023 : ವಿಶ್ವ ದಾಖಲೆಯೊಂದಿಗೆ ಶೂಟಿಂಗ್​ನಲ್ಲಿ ಚಿನ್ನದ ಪದಕ ಗೆದ್ದ ಭಾರತದ ಸಿಫ್ಟ್​ ಕೌರ್​

ಭಾರತದ ಶೂಟರ್ ಸಿಫ್ಟ್ ಕೌರ್ ಸಮ್ರಾ ಈ ಹಿಂದೆ ಏಷ್ಯನ್ ಕ್ರೀಡಾಕೂಟದಲ್ಲಿ (Asian Games 2023) ಮಹಿಳೆಯರ 50 ಮೀಟರ್ 3 ರೈಫಲ್ ಪೊಸಿಷನ್ಸ್ ಟೀಮ್ ಸ್ಪರ್ಧೆಯಲ್ಲಿ ಆಶಿ ಚೌಕ್ಸೆ ಅವರೊಂದಿಗೆ ಬೆಳ್ಳಿ ಪದಕ ಗೆದ್ದಿದ್ದರು

VISTARANEWS.COM


on

Sift Kaur
Koo

ನವದೆಹಲಿ: ಏಷ್ಯನ್ ಗೇಮ್ಸ್ ನ (Asian Games 2023) ಮಹಿಳೆಯರ 50 ಮೀಟರ್ 3 ರೈಫಲ್ ಪೊಸಿಷನ್​ ವಿಭಾಗದ ಫೈನಲ್​ನಲ್ಲಿ 469.6 ಅಂಕಗಳನ್ನು ಗಳಿಸುವ ಮೂಲಕ ಭಾರತದ ಶೂಟರ್ ಸಿಫ್ಟ್ ಕೌರ್ ಸಮ್ರಾ ಭಾರತಕ್ಕೆ ಐದನೇ ಚಿನ್ನದ ಪದಕವನ್ನು ತಂದುಕೊಟ್ಟಿದ್ದಾರೆ. ಈ ಮೂಲಕ ಈ ವರ್ಷದ ಆರಂಭದಲ್ಲಿ ಬಾಕುವಿನಲ್ಲಿ ಗ್ರೇಟ್ ಬ್ರಿಟನ್​​ನ ಸಿಯೋನೈಡ್ ಮೆಕಿಂತೋಷ್ (467) ನಿರ್ಮಿಸಿದ್ದ ವಿಶ್ವ ದಾಖಲೆಯನ್ನು ಮುರಿದರು. ಸಿಫ್ಟ್ ಅವರು ಏಷ್ಯನ್ ದಾಖಲೆ ಮತ್ತು ಏಷ್ಯನ್ ಗೇಮ್ಸ್ ದಾಖಲೆಯನ್ನೂ ಮುರಿದಿದ್ದಾರೆ.

ಫೈನಲ್​​ನ್ಲಿ, ಸಿಫ್ಟ್ ಮತ್ತು ಆಶಿ ಇಬ್ಬರೂ ಬಲವಾದ ಮುನ್ನಡೆಯನ್ನು ಕಾಯ್ದುಕೊಂಡಿದ್ದರು. ಕ್ರಮವಾಗಿ ಚಿನ್ನ ಮತ್ತು ಬೆಳ್ಳಿ ಪದಕದ ಸ್ಥಾನಗಳಲ್ಲಿದ್ದರು. ಮೊಣಕಾಲೂರಿದ ಸುತ್ತಿನಲ್ಲಿ ಸಿಫ್ಟ್ 154.6 ಅಂಕಗಳನ್ನು ಗಳಿಸಿದರೆ, ಅವರ ಸಹವರ್ತಿ 152.5 ಅಂಕಗಳನ್ನು ಗಳಿಸಿದರು. ಇದು ಸಿಫ್ಟ್ ಗೆ ಗುರಿಯಾಗುವ ಕೊನೆಯಲ್ಲಿ 312.5 ಮತ್ತು ಆಶಿಗೆ 311.6 ಆಯಿತು. ಎಲಿಮಿನೇಷನ್ ನಡೆಯುವ ಸ್ಟ್ಯಾಂಡಿಂಗ್ ಪೊಸಿಷನ್​​ ಕೊನೆಯ ಶಾಟ್​​ನಲ್ಲಿ ಆಸಿ ಅವರು ಕಳಪೆ 8.9 ಅಂಕಗಳನ್ನು ಗಳಿಸಿ ಕಂಚಿನ ಪದಕಕ್ಕೆ ತೃಪ್ತಿಪಟ್ಟರು.

ಇದರೊಂದಿಗೆ ಏಷ್ಯನ್ ಗೇಮ್ಸ್​ನ ನಾಲ್ಕನೇ ದಿನವಾದ ಬುಧವಾರ ಬೆಳಗ್ಗಿನಿಂದ ಭಾರತಕ್ಕೆ ಎರಡು ಚಿನ್ನದ ಪದಕ ಹಾಗೂ ಒಂದು ಬೆಳ್ಳಿಯ ಪದಕ ದೊರಕಿದಂತಾಗಿದೆ. ಸಿಫ್ಟ್​ ಕೌರ್ ಅವರಿದ್ದ 3ಪಿ ತಂಡ ಬೆಳ್ಳಿಯ ಪದಕವನ್ನು ಗೆಲ್ಲುವ ಮೂಲಕ ಶುಭಾರಂಭ ಮಾಡಿತ್ತು. ಈ ತಂಡದಲ್ಲಿ ಆಶಿ ಚೌಕ್ಸೆ ಕೂಡ ಇದ್ದರು. ಇದರೊಂದಿಗೆ ಹಾಲಿ ಆವೃತ್ತಿಯ ಏಷ್ಯನ್​ ಗೇಮ್ಸ್​ನಲ್ಲಿ ಭಾರತದ ಒಟ್ಟು ಪದಕಗಳ ಸಂಖ್ಯೆ 18ಕ್ಕೆ ಏರಿಕೆಯಾಗಿದೆ.

  • ಸಿಫ್ಟ್ ಕೌರ್ ಸಮ್ರಾ (ಚಿನ್ನ): 469.6
  • ಕಿಯೊಂಗ್ಯೂ ಜಾಂಗ್ (ಬೆಳ್ಳಿ): 462.3
  • ಆಶಿ ಚೌಕ್ಸೆ (ಕಂಚು): 451.9

ಇದನ್ನೂ ಓದಿ : Asian Games 2023 : ಶೂಟಿಂಗ್​ನಲ್ಲಿ ಭಾರತಕ್ಕೆ ಚಿನ್ನ, 25 ಮೀಟರ್​ ಪಿಸ್ತೂಲ್​ ಸ್ಪರ್ಧೆಯಲ್ಲಿ ಮಹಿಳೆಯರ ಸಾಧನೆ

ಭಾರತದ ಪದಕಗಳ ಪಟ್ಟಿ

  • ಒಟ್ಟು ಪದಕಗಳು- 18
  • ಚಿನ್ನ: 5
    ಬೆಳ್ಳಿ: 5
    ಕಂಚು: 8

4ನೇ ದಿನದಲ್ಲಿ ಭಾರತದ ಫಲಿತಾಂಶಗಳು

ವುಶು: ಪುರುಷರ ದಾವೋಶು ಫೈನಲ್​​ನಲ್ಲಿ ರೋಹಿತ್ ಜಾಧವ್ 8ನೇ ಸ್ಥಾನ

ಈಜು: ಮಹಿಳೆಯರ 100 ಮೀಟರ್ ಬಟರ್ ಫ್ಲೈ ಹೀಟ್ಸ್ ನಲ್ಲಿ ನೀನಾ ವೆಂಕಟೇಶ್ 1:03:89 ಸಮಯದೊಂದಿಗೆ ಫೈನಲ್ ಗೆ ಅರ್ಹತೆ ಪಡೆಯಲು ವಿಫಲರಾದರು

ಈಜು: ಮಹಿಳೆಯರ 100 ಮೀಟರ್ ಬ್ಯಾಕ್​ಸ್ಟ್ರೋಕ್​ ಸ್ಟ್ರೋಕ್ಸ್​ ಹೀಟ್ಸ್​​ನಲ್ಲಿ ಮಾನಾ ಪಟೇಲ್ 13ನೇ ಸ್ಥಾನ ಪಡೆದರು.

ಶೂಟಿಂಗ್: ಭಾರತದ ಆಶಿ ಚೌಕ್ಸೆ, ಮನಿನಿ ಕೌಶಿಕ್ ಮತ್ತು ಸಿಫ್ಟ್ ಕೌರ್ ಸಮ್ರಾ 50 ಮೀಟರ್ ರೈಫಲ್ 3 ಸ್ಥಾನಗಳ ಮಹಿಳಾ ತಂಡ ಸ್ಪರ್ಧೆಯಲ್ಲಿ ಬೆಳ್ಳಿ ಗೆದ್ದರು.

ಮಹಿಳೆಯರ 50 ಮೀಟರ್ ರೈಫಲ್ ಸಿಫ್ಟ್​ ಕೌರ್​ಗೆ ಚಿನ್ನ, ಆಶಿಗೆ ಕಂಚಿನ ಪದಕ.

Continue Reading
Advertisement
Malayalam Film 2018
South Cinema46 seconds ago

Oscars 2024: ‘ಆಸ್ಕರ್‌’ಗೆ ಪ್ರವೇಶ ಪಡೆದ ಮಲಯಾಳಂ ಸಿನಿಮಾ; ನೀವೂ ಇದನ್ನು ನೋಡಿರುತ್ತೀರಿ!

Mulayam Singh Yadav Statue
ದೇಶ7 mins ago

Mulayam Singh Yadav: ಮುಲಾಯಂ ಸಿಂಗ್‌ ಮೂರ್ತಿ ತೆರವು; ಯೋಗಿ ನಾಡಲ್ಲಿ ರೂಲ್ಸ್‌ ಎಂದರೆ ರೂಲ್ಸ್!

Parineeti Chopra with Raghav
ಬಾಲಿವುಡ್9 mins ago

Parineeti Chopra: ‘ಓ ಪ್ರಿಯಾ’; ಪತಿಗಾಗಿ ವಿಶೇಷ ಹಾಡು ರೆಕಾರ್ಡ್‌ ಮಾಡಿದ ಪರಿಣಿತಿ ಚೋಪ್ರಾ!

demat account
ಮನಿ ಗೈಡ್9 mins ago

Demat Account: ಡಿಮ್ಯಾಟ್ ಖಾತೆದಾರರಿಗೆ ಗುಡ್‌ ನ್ಯೂಸ್:‌ ನಾಮಿನಿ ಘೋಷಣೆಗೆ ಸಮಯ ವಿಸ್ತರಣೆ

HD Kumaraswamy Press meet vs congress government
ಕರ್ನಾಟಕ16 mins ago

BJP JDS alliance : ಸೆಕ್ಯುಲರಿಸಂ ಅನ್ನು ನಾಶ ಮಾಡಿದ್ದೇ ಕಾಂಗ್ರೆಸ್‌: ಎಚ್.ಡಿ. ಕುಮಾರಸ್ವಾಮಿ ಕಿಡಿ

ODI AUS
Live News34 mins ago

ind vs Aus : ಮೂರನೇ ಏಕ ದಿನ ಪಂದ್ಯ; ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದಿಂದ ಬ್ಯಾಟಿಂಗ್ ಆಯ್ಕೆ

Madhya Pradesh Rape News
ಕ್ರೈಂ47 mins ago

ಲೈಂಗಿಕ ದೌರ್ಜನ್ಯ; ರಕ್ತಸಿಕ್ತ ಬಾಲಕಿ ಮನೆಮನೆಗೆ ತೆರಳಿ ಗೋಳಾಡಿದರೂ ಸಹಾಯ ಮಾಡದ ನಿರ್ದಯಿಗಳು!

CM siddaramaiah at Chamarajanagar
ಕರ್ನಾಟಕ57 mins ago

CM Siddaramaiah: CWRC ಆದೇಶಕ್ಕೆ ಆಕ್ಷೇಪಣೆ ಸಲ್ಲಿಸಲು ನಿರ್ಧಾರ ಎಂದ ಸಿದ್ದರಾಮಯ್ಯ

Google
EXPLAINER59 mins ago

ವಿಸ್ತಾರ Explainer: Google Birthday: ಗೂಗಲ್‌ನ 25 ವರ್ಷದ ಇತಿಹಾಸ ಹೇಗಿತ್ತು? ಒಂದು ನೋಟ ಇಲ್ಲಿದೆ

HD DeveGowda HD Kumaraswamy and PM Narendra Modi on BJP JDS alliance
ಕರ್ನಾಟಕ1 hour ago

BJP JDS alliance : ವಿಜಯದಶಮಿ ನಂತರ ಜೆಡಿಎಸ್‌ ಸೀಟು ಹಂಚಿಕೆ ಅಂತಿಮ ಮಾತುಕತೆ!

7th Pay Commission
ನೌಕರರ ಕಾರ್ನರ್11 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ8 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Sphoorti Salu
ಸುವಚನ4 months ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Govt employees ssociation
ಕರ್ನಾಟಕ8 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

kpsc recruitment 2023 pdo recruitment 2023
ಉದ್ಯೋಗ2 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Rajendra Singh Gudha
ದೇಶ3 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

Village Accountant Recruitment
ಉದ್ಯೋಗ8 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike; Order from Govt
ನೌಕರರ ಕಾರ್ನರ್7 months ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ9 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

bangalore bandh
ಕರ್ನಾಟಕ1 day ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

dina bhavishya
ಪ್ರಮುಖ ಸುದ್ದಿ9 hours ago

Dina Bhavishya : ನಿಮಗೆ ಆಗದವರು ಪಿತೂರಿ ಮಾಡ್ಬಹುದು ಎಚ್ಚರ!

Dina Bhavishya
ಪ್ರಮುಖ ಸುದ್ದಿ1 day ago

Dina Bhavishya : ಈ ರಾಶಿಯ ಉದ್ಯೋಗ ಆಕಾಂಕ್ಷಿಗಳಿಗೆ ಶುಭ ಸುದ್ದಿ

At the Janata Darshan event MP S Muniswamy MLA SN Narayanaswamy is fighting
ಕರ್ನಾಟಕ2 days ago

Janata Darshan : ವೇದಿಕೆಯಲ್ಲಿ ಭೂ ಗಲಾಟೆ; ಹೊಡೆದಾಟಕ್ಕೆ ಮುಂದಾದ ಶಾಸಕ-ಸಂಸದ

Davanagere bandh
ಕರ್ನಾಟಕ2 days ago

Davanagere bandh : ಭದ್ರಾ ನೀರಿಗಾಗಿ ಬೀದಿಗಿಳಿಯಲಿಲ್ಲ ಭತ್ತ ಬೆಳೆಗಾರರು!

HD Devegowda Press meet
ಕರ್ನಾಟಕ2 days ago

Cauvery water dispute : ಜಲ ಶಕ್ತಿ ಇಲಾಖೆಯಿಂದ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಲಿ, ಮೋದಿ ಮಧ್ಯ ಪ್ರವೇಶಿಸಲಿ: ಎಚ್.ಡಿ. ದೇವೇಗೌಡ

Farmers protest Mundargi bandh
ಕರ್ನಾಟಕ2 days ago

Mundargi Bandh : ಬರ ಪೀಡಿತ ತಾಲೂಕು ಘೋಷಣೆಗೆ ಒತ್ತಾಯಿಸಿ ಮುಂಡರಗಿ ಬಂದ್!

Dina bhavishya
ಪ್ರಮುಖ ಸುದ್ದಿ2 days ago

Dina Bhavishya : ಈ ರಾಶಿಯವರಿಗೆ ಇಂದು ಹೂಡಿಕೆ ಬೇಡ! ಕೆಲ ವಿಷಯದಲ್ಲಿ ಇರಲಿ ಗೌಪ್ಯತೆ

Actor padhmini Kirk
ಕರ್ನಾಟಕ3 days ago

Viral News : ಕಿರುತೆರೆ ನಟಿ ಕಿರಿಕ್‌; ಕೆಲಸ ಕಳೆದುಕೊಂಡ ಓಲಾ ಆಟೋ ಡ್ರೈವರ್‌!

dina bhavishya
ಪ್ರಮುಖ ಸುದ್ದಿ3 days ago

Dina Bhavishya : ಈ ರಾಶಿಯವರಿಗೆ ಕೋಪವೇ ಮುಳುವು!

Dina bhavishya
ಪ್ರಮುಖ ಸುದ್ದಿ4 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಇಂದು ಬಾಸ್‌ನಿಂದ ಕಿರಿಕ್‌!

ಟ್ರೆಂಡಿಂಗ್‌