Site icon Vistara News

KCC ಟೂರ್ನಮೆಂಟ್ ಉದ್ಘಾಟಿಸಿದ ಸಿಎಂ ಬೊಮ್ಮಾಯಿ

CM Bommai inaugurated the KCC tournament

CM Bommai inaugurated the KCC tournament

ಬೆಂಗಳೂರು: ಸ್ಯಾಂಡಲ್‌ವುಡ್ ನಟರು ಆಯೋಜಿಸಿರುವ ಮೂರನೇ ಆವೃತ್ತಿಯ ಕನ್ನಡ ಚಲನಚಿತ್ರ ಕಪ್​ ಕ್ರಿಕೆಟ್​ ಟೂರ್ನಿಗೆ(KCC) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚಾಲನೆ ನೀಡಿದ್ದಾರೆ.

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು(ಶುಕ್ರವಾರ ಫೆ.24) ಆರಂಭಗೊಳ್ಳಲಿರುವ ಈ ಟೂರ್ನಿಯನ್ನು ಸಿಎಂ ಬಸವರಾಜ ಬೊಮ್ಮಾಯಿ ಅವರು ಧ್ವಜಾರೋಹಣ ಮಾಡುವ ಮೂಲಕ ಉದ್ಘಾಟಿಸಿದರು. ಈ ವೇಳೆ ಆರೋಗ್ಯ ಸಚಿವ ಡಾ. ಸುಧಾಕರ್​ ನಟರಾದ ಕಿಚ್ಚ ಸುದೀಪ್, ಧನಂಜಯ್, ಗಣೇಶ್​​​​ ಸೇರಿ ಮತ್ತಿತರರು ಉಪಸ್ಥಿತರಿದ್ದರು.

ಕನ್ನಡದ ಸೆಲೆಬ್ರಿಟಿಗಳ ಜತೆ ಮಾಜಿ ಅಂತಾರಾಷ್ಟ್ರೀಯ ಆಟಗಾರರು ಕೂಡ ಈ ಟೂರ್ನಿಯಲ್ಲಿ ಆಡಲಿದ್ದಾರೆ. ಫೆಬ್ರವರಿ 24 ಮತ್ತು 25ರಂದು ಎರಡು ದಿನಗಳ ಕಾಲ ‘ಕನ್ನಡ ಚಲನಚಿತ್ರ ಕಪ್​’ (KCC) ಪಂದ್ಯಗಳು ನಡೆಯಲಿದೆ.

ಇದನ್ನೂ ಓದಿ IND VS AUS: ಮೂರನೇ ಟೆಸ್ಟ್​ ಪಂದ್ಯದಿಂದ ಹೊರಗುಳಿದ ಪ್ಯಾಟ್​ ಕಮಿನ್ಸ್​; ಸ್ಟೀವನ್​ ಸ್ಮಿತ್​ಗೆ​ ನಾಯಕತ್ವ

ಎರಡು ಗ್ರೂಪ್​ನ ಆರು ತಂಡಗಳ ನಡುವೆ ಹಣಾಹಣಿ ನಡೆಯಲಿದೆ. ‘ಎ’ ಗ್ರೂಪ್​ನಲ್ಲಿ ಕದಂಬ ಲಯನ್ಸ್​, ರಾಷ್ಟ್ರಕೂಟ ಪ್ಯಾಂಥರ್ಸ್​, ವಿಜಯನಗರ ಪ್ಯಾಟ್ರಿಯಾಟ್ಸ್​ ತಂಡಗಳಿವೆ. ‘ಬಿ’ ಗ್ರೂಪ್​ನಲ್ಲಿ ಗಂಗಾ ವಾರಿಯರ್ಸ್​, ಹೊಯ್ಸಳ ಈಗಲ್ಸ್​, ಒಡೆಯರ್​ ಚಾರ್ಜಸ್​ ತಂಡಗಳು ಕಾಣಿಸಿಕೊಂಡಿದೆ.

Exit mobile version