Pooja Sihag | ಕಾಮನ್ವೆಲ್ತ್‌ ಗೇಮ್ಸ್‌ ಕಂಚು ವಿಜೇತೆ ಪೂಜಾ ಸಿಹಾಗ್‌ ಪತಿ ಸಾವು, ಡ್ರಗ್ಸ್‌ ಓವರ್‌ಡೋಸ್‌ ಕಾರಣ? Vistara News
Connect with us

ಕ್ರೀಡೆ

Pooja Sihag | ಕಾಮನ್ವೆಲ್ತ್‌ ಗೇಮ್ಸ್‌ ಕಂಚು ವಿಜೇತೆ ಪೂಜಾ ಸಿಹಾಗ್‌ ಪತಿ ಸಾವು, ಡ್ರಗ್ಸ್‌ ಓವರ್‌ಡೋಸ್‌ ಕಾರಣ?

ಇತ್ತೀಚೆಗೆ ಆಸ್ಟ್ರೇಲಿಯಾದಲ್ಲಿ ನಡೆದ ಕಾಮನ್ವೆಲ್ತ್‌ ಗೇಮ್ಸ್‌ನಲ್ಲಿ ಕಂಚಿನ ಪದಕ ಗೆದ್ದ ಪೂಜಾ ಸಿಹಾಗ್‌ (Pooja Sihag) ಅವರ ಪತಿ ಅಜಯ್‌ ನಂದಾಲ್‌ ಶವ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿದೆ. ಡ್ರಗ್ಸ್‌ ಓವರ್‌ಡೋಸ್‌ನಿಂದಾಗಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.

VISTARANEWS.COM


on

Pooja Sihag
Koo

ರೋಹ್ಟಕ್‌: ಇತ್ತೀಚೆಗೆ ಆಸ್ಟ್ರೇಲಿಯಾದಲ್ಲಿ ನಡೆದ ಕಾಮನ್ವೆಲ್ತ್‌ ಗೇಮ್ಸ್‌ನಲ್ಲಿ ಕಂಚಿನ ಪದಕ ಗೆದ್ದ ಪೂಜಾ ಸಿಹಾಗ್‌ (Pooja Sihag) ಅವರ ಪತಿ ಅಜಯ್‌ ನಂದಾಲ್‌ ಶವ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿದೆ. ಹರಿಯಾಣದ ರೋಹ್ಟಕ್‌ನಲ್ಲಿರುವ ಮಹಾರಾಣಿ ಕಿಶೋರಿ ಜಾಟ್‌ ಕನ್ಯಾ ಮಹಾ ವಿದ್ಯಾಲಯದ ಬಳಿ ಶವ ಪತ್ತೆಯಾಗಿದ್ದು, ಮರಣೋತ್ತರ ವರದಿ ಲಭ್ಯವಾದ ಬಳಿಕ ಸಾವಿಗೆ ನಿಖರ ಕಾರಣ ತಿಳಿಯಲಿದೆ.

“ಅಜಯ್‌ ನಂದಾಲ್‌ ಅವರ ಕುಟುಂಬಸ್ಥರು ಅಜಯ್‌ ಗೆಳೆಯ ರವಿ ಎಂಬುವವರ ವಿರುದ್ಧ ಆರೋಪಿಸಿದ್ದಾರೆ. ಡ್ರಗ್ಸ್‌ ಓವರ್‌ಡೋಸ್‌ನಿಂದ ಅಜಯ್‌ ನಂದಾಲ್‌ ಮೃತಪಟ್ಟಿದ್ದು, ಆತನ ಗೆಳೆಯ ರವಿಯೇ ಡ್ರಗ್ಸ್‌ ನೀಡಿದ್ದಾರೆ” ಎಂದು ಆರೋಪಿಸಿದ್ದಾರೆ. ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಿದ್ದಾರೆ.

“ಮಹಾರಾಣಿ ಕಿಶೋರಿ ಜಾಟ್‌ ಕನ್ಯಾ ಮಹಾ ವಿದ್ಯಾಲಯದ ಬಳಿ ಶವ ಪತ್ತೆಯಾಗಿದೆ. ಡ್ರಗ್ಸ್‌ ಓವರ್‌ನಿಂದಾಗಿ ಅಜಯ್‌ ಮೃತಪಟ್ಟಿದ್ದಾರೆ ಎಂದು ಅವರ ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ” ಎಂದು ಡಿಎಸ್‌ಪಿ ಮಹೇಶ್‌ ಕುಮಾರ್‌ ಮಾಹಿತಿ ನೀಡಿದ್ದಾರೆ. ಮಹಾ ವಿದ್ಯಾಲಯದ ಬಳಿ ಅಜಯ್‌, ರವಿ, ಸೋನು ಸೇರಿ ಹಲವರು ಪಾರ್ಟಿ ಮಾಡುತ್ತಿದ್ದರು. ಈ ವೇಳೆ ಡ್ರಗ್ಸ್‌ ಓವರ್‌ಡೋಸ್‌ ಆಗಿರಬಹುದು ಎನ್ನಲಾಗಿದೆ. ಆದಾಗ್ಯೂ, ರವಿ ಹಾಗೂ ಸೋನು ಅವರೂ ಅಸ್ವಸ್ಥಗೊಂಡಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ | Sonali Phogat Death | ಡ್ರಗ್ಸ್‌ ಓವರ್‌ಡೋಸ್‌, ಅತ್ಯಾಚಾರ, ಹತ್ಯೆ, ಹಾರ್ಟ್‌ ಅಟ್ಯಾಕ್‌? ಸೋನಾಲಿ ಸಾವಿಗೆ ಕಾರಣವೇನು?

ಕ್ರಿಕೆಟ್

WPL 2023: ಸೋಲಿನೊಂದಿಗೆ ಅಭಿಯಾನ ಮುಗಿಸಿದ ಆರ್​ಸಿಬಿ

ಮುಂಬೈ ಇಂಡಿಯನ್ಸ್​ ವಿರುದ್ಧದ ಮಂಗಳವಾರದ ಅಂತಿಮ ಲೀಗ್​ ಪಂದ್ಯದಲ್ಲಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡ 4 ವಿಕೆಟ್​ಗಳ ಸೋಲಿಗೆ ತುತ್ತಾಗಿದೆ.

VISTARANEWS.COM


on

Edited by

WPL 2023 RCB ends campaign with defeat
Koo

ಮುಂಬಯಿ: ಚೊಚ್ಚಲ ಆವೃತ್ತಿಯ ಮಹಿಳಾ ಪ್ರೀಮಿಯರ್​ ಲೀಗ್​ನಲ್ಲಿ ಸೋಲಿನೊಂದಿಗೆ ಅಭಿಯಾನ ಆರಂಭಿಸಿದ ಸ್ಮೃತಿ ಮಂಧಾನ ಸಾರಥ್ಯದ ಆರ್​ಸಿಬಿ(Royal Challengers Bangalore) ತಂಡ ಇದೀಗ ಸೋಲಿನೊಂದಿಗೆಯೇ ತನ್ನ ಅಭಿಯಾನವನ್ನು ಮುಗಿಸಿದೆ. ಮಂಗಳವಾರ ನಡೆದ ಮುಂಬೈ ಇಂಡಿಯನ್ಸ್​ ವಿರುದ್ಧದ ಅಂತಿಮ ಲೀಗ್​ ಪಂದ್ಯದಲ್ಲಿ 4 ವಿಕೆಟ್​ಗಳ ಸೋಲು ಕಂಡಿದೆ. ಮುಂಬೈ ಇಂಡಿಯನ್ಸ್​ ಈ ಗೆಲುವಿನೊಂದಿಗೆ ಮತ್ತೆ ಅಂಕಪಟ್ಟಿಯಲ್ಲಿ ಅಗ್ರ ಸ್ಥಾನಕ್ಕೇರಿದೆ.

ಮುಂಬಯಿಯ ಡಿ.ವೈ. ಪಾಟೀಲ್​ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದ ಡಬಲ್ ಹೆಡ್ಡರ್​ ಮುಖಾಮುಖಿಯ ಮೊದಲ ಪಂದ್ಯದಲ್ಲಿ ಟಾಸ್​ ಸೋತು ಮೊದಲು ಬ್ಯಾಟಿಂಗ್​ ನಡೆಸಿದ ಆರ್​ಸಿಬಿ ರಿಚಾ ಘೋಷ್​ ಮತ್ತು ಎಲ್ಲಿಸ್​ ಪೆರ್ರಿ ಅವರ ಸಣ್ಣ ಹೋರಾಟದ ನೆರವಿನಿಂದ ನಿಗದಿತ 20 ಓವರ್​ಗಳಲ್ಲಿ 9 ವಿಕೆಟ್​ ನಷ್ಟಕ್ಕೆ 125 ರನ್​ ಬಾರಿಸಿತು. ಜಬಾಬಿತ್ತ ಮುಂಬೈ ಇಂಡಿಯನ್ಸ್​ 16.3 ಓವರ್​ಗಳಲ್ಲಿ 6 ವಿಕೆಟ್​ ನಷ್ಟಕ್ಕೆ 129 ರನ್​ ಬಾರಿಸಿ ಗೆಲುವು ದಾಖಲಿಸಿತು.

ಸಣ್ಣ ಮೊತ್ತದ ಗುರಿ ಬೆನ್ನಟ್ಟಿದ ಮುಂಬೈಗೆ ಯಾಸ್ತಿಕಾ ಭಾಟಿಯಾ ಮತ್ತು ಹೇಲಿ ಮ್ಯಾಥ್ಯೂಸ್ ಉತ್ತಮ ಆರಂಭ ನೀಡಿದರು. ಈ ಜೋಡಿ ಮೊದಲ ವಿಕೆಟ್​ಗೆ 53 ರನ್​ಗಳ ಜತೆಯಾಟ ನಡೆಸಿತು. ಯಾಸ್ತಿಕಾ 30 ರನ್​ ಗಳಿಸಿದರೆ, ಮ್ಯಾಥ್ಯೂಸ್ 24 ರನ್​ ಬಾರಿಸಿದರು. ಉಭಯ ಆಟಗಾರ್ತಿಯ ವಿಕೆಟ್​ ಪತನದ ಬೆನ್ನಲ್ಲೇ ತಂಡ ನಾಯಕೀಯ ಕುಸಿತ ಕಂಡಿತು. ನಾಯಕಿ ಹರ್ಮನ್​ಪ್ರೀತ್​ ಕೌರ್​(2), ನ್ಯಾಟ್​ ಸ್ಕಿವರ್​-ಬ್ರಂಟ್​ (13) ಅಲ್ಪ ಮೊತ್ತಕ್ಕೆ ಔಟಾದರು. ತಂಡದ ಮೊತ್ತ 74 ಆಗುವಷ್ಟರಲ್ಲಿ ಪ್ರಮುಖ ನಾಲ್ಕು ವಿಕೆಟ್​ ಕಳೆದುಕೊಂಡು ಮುಂಬೈ ಒಂದು ಹಂತದಲ್ಲಿ ಸಂಕಷ್ಟಕ್ಕೆ ಸಿಲುಕಿತು.

ನಾಟಕೀಯ ಕುಸಿತ ಕಂಡ ಮುಂಬೈ ತಂಡಕ್ಕೆ ಬೌಲಿಂಗ್​ನಲ್ಲಿ ಮೂರು ವಿಕೆಟ್​ ಕಿತ್ತು ಪ್ರಮುಖ ಪಾತ್ರ ನಿರ್ವಹಿಸಿದ್ದ ಅಮೇಲಿಯಾ ಕೆರ್​ ಮತ್ತು ಪೂಜಾ ವಸ್ತ್ರಾಕರ್​ ಕೆಳ ಕ್ರಮಾಂಕದಲ್ಲಿ ತಾಳ್ಮೆಯುತ ಬ್ಯಾಟಿಂಗ್​ ನಡೆಸುವ ಮೂಲಕ ತಂಡಕ್ಕೆ ಯಾವುದೇ ಹಾನಿಯಾಗದಂತೆ ನೋಡಿಕೊಂಡರು. ತಂಡದ ಗೆಲುವಿಗೆ 6 ರನ್​ ಅಗತ್ಯವಿದ್ದಾಗ ಪೂಜಾ ವಿಕೆಟ್ ಕೈಚೆಲ್ಲಿದರು. ಅವರು 19 ರನ್ ಗಳಿಸಿದರು.​ ಅಮೇಲಿಯಾ ಕೆರ್​ ಅಜೇಯ ​31 ರನ್​ ಬಾರಿಸಿ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು. ಅವರ ಈ ಅಜೇಯ ಇನಿಂಗ್ಸ್​ ಆಟದ ವೇಳೆ 4 ಬೌಂಡರಿ ಸಿಡಿಯಿತು.

ಮಂದ ಗತಿಯ ಬ್ಯಾಟಿಂಗ್​ ನಡೆಸಿದ ಮಂಧಾನ ಪಡೆ

ಇದಕ್ಕೂ ಮುನ್ನ ಬ್ಯಾಟಿಂಗ್​ ನಡೆಸಿದ ಆರ್​ಸಿಬಿ ಆರಂಭಿಕ ಆಘಾತ ಕಂಡಿತು. ಗುಜರಾತ್​ ಜೈಂಟ್ಸ್​ ವಿರುದ್ಧ ಸಿಡಿಲಬ್ಬರ ಬ್ಯಾಟಿಂಗ್​ ನಡೆಸಿ ನಡುಕ ಹುಟ್ಟಿಸಿದ್ದ ನ್ಯೂಜಿಲ್ಯಾಂಡ್​ನ ಸ್ಟಾರ್​ ಆಲ್​ ರೌಂಡರ್​ ಸೋಫಿ ಡಿವೈನ್​ ಅವರು ಈ ಪಂದ್ಯದಲ್ಲಿ ರನೌಟ್​ ಸಂಕಟಕ್ಕೆ ಸಿಲುಕಿದರು. ಇಲ್ಲದ ರನ್ ಕದಿಯಲೆತ್ನಿಸಿ ಶೂನ್ಯಕ್ಕೆ ಔಟಾಗುವ ಮೂಲಕ ನಿರಾಸೆ ಅನುಭಸಿದರು.

ನಾಯಕಿ ಸ್ಮೃತಿ ಮಂಧಾನ ಅವರ ಆಟ ಈ ಪಂದ್ಯದಲ್ಲಿಯೂ ಮಂದ ಗತಿಯಿಂದ ಕೂಡಿತ್ತು. 25 ಎಸೆತ ಎದುರಿಸಿ 24 ರನ್​ ಗಳಿಸಿದರು. ಇದರೊಂದಿಗೆ ಈ ಬಾರಿಯ ಮಹಿಳಾ ಪ್ರೀಮಿಯರ್​ ಲೀಗ್​ನಲ್ಲಿ ಮಂಧಾನ ಸಂಪೂರ್ಣ ವೈಫಲ್ಯ ಕಂಡಂತಾಯಿತು. ಈ ಮೂಲಕ ಮುಂದಿನ ಬಾರಿಯ ಆವೃತ್ತಿಯಲ್ಲಿ ಅವರು ಆರ್​ಸಿಬಿ ತಂಡದಲ್ಲಿಯೇ ಉಳಿಯಲಿದ್ದಾರಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

ಆರಂಭಿಕ ಆಟಗಾರ್ತಿಯರ ವಿಕೆಟ್​ ಪತನದ ಬಳಿಕ ಆಡಲಿಳಿದ ಆಸ್ಟ್ರೇಲಿಯಾದ ಆಲ್​ರೌಂಡರ್​ ಎಲ್ಲಿಸ್‌ ಪೆರ್ರಿ ತಂಡಕ್ಕೆ ಆಸರೆಯಾದರು. ಪ್ರತಿ ಓವರ್​ನಲ್ಲಿ ಒಂದು ಬೌಂಡರಿ ಬಾರಿಸುವ ಮೂಲಕ ತಂಡದ ಮೊತ್ತವನ್ನು ಹಿಗ್ಗಿಸಲಾರಂಭಿಸಿದರು. ಆದರೆ ಇವರಿಗೆ ಮತ್ತೊಂದು ತುದಿಯಲ್ಲಿ ಯಾರು ಕೂಡ ಉತ್ತಮ ಸಾಥ್​ ನೀಡಲಿಲ್ಲ. ಹೀತರ್​ ನೈಟ್​ ಮತ್ತು ಕನಿಕಾ ಅಹುಜಾ ತಲಾ 12 ರನ್​ಗೆ ಆಟ ಮುಗಿಸಿದರು. ಇದರ ಬೆನ್ನಲ್ಲೇ ಎಲ್ಲಿಸ್‌ ಪೆರ್ರಿ ಕೂಡ ನ್ಯಾಟ್‌ ಸ್ಕಿವರ್‌ ಬ್ರಂಟ್‌ ಎಸೆತದಲ್ಲಿ ಎಲ್​ಬಿಡಬ್ಲ್ಯು ಬಲೆಗೆ ಬಿದ್ದರು. 38 ಎಸೆತ ಎದುರಿಸಿದ ಅವರು ಮೂರು ಬೌಂಡರಿ ನೆರವಿನಿಂದ 29 ರನ್​ ಬಾರಿಸಿದರು. ಸ್ಕಿವರ್‌ ಬ್ರಂಟ್‌ 24 ರನ್​ಗೆ 2 ವಿಕೆಟ್​ ಉರುಳಿಸಿದರು.

ಇದನ್ನೂ ಓದಿ WPL 2023 : ಸೇಡು ತೀರಿಸಿಕೊಂಡ ಡೆಲ್ಲಿ ಪಡೆ, ಮುಂಬಯಿ ವಿರುದ್ಧ 9 ವಿಕೆಟ್​ ಸುಲಭ ಜಯ

ಅಂತಿಮ ಹಂತದಲ್ಲಿ ರಿಚಾ ಘೋಷ್​​ ಬಿರುಸಿನ ಬ್ಯಾಟಿಂಗ್​ ನಡೆಸಿದ ಪರಿಣಾಮ ಆರ್​ಸಿಬಿ 100ರ ಗಡಿ ದಾಟಿತು. ಕ್ರೀಸ್​ ಗಿಳಿದ ಆರಂಭದಿಂದಲೇ ಸಿಕ್ಸರ್​, ಬೌಂಡರಿಗಳ ಮೂಲಕ ಮುಂಬೈ ಬೌಲರ್​ಗಳ ಸಣ್ಣ ಮೊತ್ತದ ಯೋಜನೆಯನ್ನು ತಲೆಕೆಳಗಾಗಿಸಿದರು. ಆದರೆ ಅಂತಿಮ ಓವರ್​ ಮೊದಲ ಎಸೆತದಲ್ಲೇ ದೊಡ್ಡ ಹೊಡೆತಕ್ಕೆ ಮುಂದಾಗಿ ಕ್ಯಾಚ್​ ನೀಡಿದರು. ಅವರ ವಿಕೆಟ್​ ಉರುಳಿದ ಬಳಿಕ ತಂಡದ ಮೊತ್ತವೂ ಕುಸಿಯಿತು. ಒಟ್ಟು 13 ಎಸೆತ ಎದುರಿಸಿದ ಅವರು ಮೂರು ಬೌಂಡರಿ 2 ಸಿಕ್ಸರ್​ ಬಾರಿಸಿ 29 ರನ್​ ಕಲೆಹಾಕಿದರು. ಮುಂಬೈ ಪರ ಅಮೇಲಿಯಾ ಕೆರ್​ 22 ರನ್​ ವೆಚ್ಚದಲ್ಲಿ ಮೂರು ವಿಕೆಟ್​ ಪಡೆದರು. ಸೈಕಾ ಇಶಾಖ್‌ ಒಂದು ವಿಕೆಟ್​ ಪಡೆದರು.

ಸಂಕ್ಷಿಪ್ತ ಸ್ಕೋರ್​: ಆರ್​ಸಿಬಿ; 20 ಓವರ್​ಗಳಲ್ಲಿ 9 ವಿಕೆಟ್​ಗೆ 125( ಎಲ್ಲಿಸ್‌ ಪೆರ್ರಿ 29, ರಿಚಾ ಘೋಷ್​ 29, ಅಮೇಲಿಯಾ ಕೆರ್​ 22ಕ್ಕೆ 3). ಮುಂಬೈ ಇಂಡಿಯನ್ಸ್: 16.3 ಓವರ್​ಗಳಲ್ಲಿ 6 ವಿಕೆಟ್​ಗೆ 129( ಅಕೇಲಿಯಾ ಕೆರ್​ ಅಜೇಯ 31, ಮ್ಯಾಥ್ಯೂಸ್​ 24, ಯಾಸ್ತಿಕಾ ಭಾಟಿಯಾ 30)

Continue Reading

ಕ್ರೀಡೆ

Rani Rampal: ರಾಯ್ ಬರೇಲಿ ಸ್ಟೇಡಿಯಂಗೆ ಹಾಕಿ ಆಟಗಾರ್ತಿ ರಾಣಿ ರಾಂಪಾಲ್ ಹೆಸರು

ಎಂಸಿಎಫ್ ರಾಯ್​ಬರೇಲಿ ಹಾಕಿ ಕ್ರೀಡಾಂಗಣವನ್ನು “ರಾಣಿ ಗರ್ಲ್ಸ್ ಹಾಕಿ ಟರ್ಫ್” ಎಂದು ಮರುನಾಮಕರಣ ಮಾಡಲಾಗಿದೆ.

VISTARANEWS.COM


on

Edited by

Rani Rampal Rae Bareilly Stadium is named after the hockey player Rani Rampal
Koo

ನವದೆಹಲಿ: ಭಾರತ ಮಹಿಳಾ ಹಾಕಿ ತಂಡದ ಸ್ಟಾರ್ ಆಟಗಾರ್ತಿ ರಾಣಿ ರಾಂಪಾಲ್(Rani Rampal) ಅವರ ಹೆಸರನ್ನು ರಾಯ್ ಬರೇಲಿಯಲ್ಲಿರುವ ಕ್ರೀಡಾಂಗಣಕ್ಕೆ ಇಡಲಾಗಿದೆ. ಈ ಮೂಲಕ ಕ್ರೀಡೆಯಲ್ಲಿ ತಮ್ಮ ಹೆಸರಿನ ಕ್ರೀಡಾಂಗಣವನ್ನು ಹೊಂದಿರುವ ಮೊದಲ ಮಹಿಳೆ ಎಂಬ ಕೀರ್ತಿಗೆ ರಾಣಿ ಅವರು ಪಾತ್ರರಾಗಿದ್ದಾರೆ.

ಎಂಸಿಎಫ್ ರಾಯ್ ಬರೇಲಿ ಹಾಕಿ ಸ್ಟೇಡಿಯಮ್ ಇನ್ನು ಮುಂದೆ ‘ರಾಣಿ ಗರ್ಲ್ಸ್ ಹಾಕಿ ಟರ್ಫ್’ ಎಂದು ಮರುನಾಮಕರಣ ಮಾಡಲಾಗಿದೆ. ಈ ವಿಚಾರವನ್ನು ರಾಣಿ ಅವರು ತಮ್ಮ ಅಧಿಕೃತ ಟ್ವಿಟರ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

“ಹಾಕಿ ಕ್ರೀಡೆಗೆ ನಾನು ನೀಡಿದ ಕೊಡುಗೆಯನ್ನು ಪರಿಗಣಿಸಿ ಎಂಸಿಎಫ್ ರಾಯ್​ಬರೇಲಿ ಹಾಕಿ ಕ್ರೀಡಾಂಗಣವನ್ನು ರಾಣಿ ಗರ್ಲ್ಸ್ ಹಾಕಿ ಟರ್ಫ್ ಎಂದು ಮರುನಾಮಕರಣ ಮಾಡಲಾಗಿದೆ. ಇದು ನನಗೆ ಸಂದ ಅತ್ಯಂತ ಶ್ರೇಷ್ಠ ಗೌರವವಾಗಿದೆ” ಎಂದು ರಾಣಿ ರಾಂಪಾಲ್​ ತಮ್ಮ ಟ್ವಿಟರ್​ನಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ Hockey India: ಹಾರ್ದಿಕ್‌, ಸವಿತಾಗೆ ವರ್ಷದ ಹಾಕಿ ಆಟಗಾರ ಪ್ರಶಸ್ತಿ

“ನನ್ನ ಹೆಸರಲ್ಲಿ ಒಂದು ಕ್ರೀಡಾಂಗಣವನ್ನು ಹೊಂದಿರುವ ಮೊದಲ ಮಹಿಳಾ ಹಾಕಿ ಆಟಗಾರ್ತಿಯಾಗಿರುವುದು ನನಗೆ ಹೆಮ್ಮೆಯ ಕ್ಷಣವಾಗಿದೆ. ನಾನು ಇದನ್ನು ಭಾರತೀಯ ಮಹಿಳಾ ಹಾಕಿ ತಂಡಕ್ಕೆ ಅರ್ಪಿಸುತ್ತೇನೆ ಹಾಗೂ ಇದು ಮುಂದಿನ ತಲೆಮಾರಿನ ಹಾಕಿ ಆಟಗಾರ್ತಿಯರಿಗೆ ಸ್ಫೂರ್ತಿ ನೀಡಲಿ” ಎಂದು ರಾಣಿ ಹೇಳಿದರು. ಟೋಕಿಯೊ ಒಲಿಂಪಿಕ್ಸ್​ ಆಡಿದ ಬಳಿಕ ರಾಣಿ ರಾಂಪಾಲ್​ ಗಾಯದ ಕಾರಣದಿಂದ ತಂಡದಿಂದ ಹೊರಗುಳಿದಿದ್ದರು. ಕಾಮನ್ವೆಲ್ತ್‌ ಗೇಮ್ಸ್‌ಗೂ ಅವರು ಅಲಭ್ಯರಾಗಿದ್ದರು. ಭಾರತಕ್ಕಾಗಿ ಸುಮಾರು 250 ಪಂದ್ಯಗಳಲ್ಲಿ ಆಡಿದ್ದಾರೆ.

Continue Reading

ಕ್ರಿಕೆಟ್

WPL 2023: ಮುಂಬೈ ಬೌಲಿಂಗ್​ ದಾಳಿಗೆ ಬೆದರಿ 125ಕ್ಕೆ ಕುಸಿದ ಆರ್​ಸಿಬಿ

ಮುಂಬೈ ಇಂಡಿಯನ್ಸ್​ ವಿರುದ್ಧದ ಮಂಗಳವಾರದ ಮೊದಲ ಪಂದ್ಯದಲ್ಲಿ ಆರ್​ಸಿಬಿ 125 ರನ್​ ಗಳಿಸಿ ಸವಾಲೊಡ್ಡಿದೆ.

VISTARANEWS.COM


on

Edited by

WPL 2023 RCB reduced to 125 under threat of Mumbai bowling attack
Koo

ಮುಂಬಯಿ: ಮುಂಬೈ ಇಂಡಿಯನ್ಸ್​ ತಂಡದ ಸಂಘಟಿತ ಬೌಲಿಂಗ್​ ದಾಳಿಯನ್ನು ಸಮರ್ಥವಾಗಿ ಎದುರಿಸುವಲ್ಲಿ ವಿಫಲವಾದ ರಾಯಲ್​ ಚಾಲೆಂಜರ್ಸ್ ಬೆಂಗಳೂರು ತಂಡ, ಮಂಗಳವಾರದ ಮಹಿಳಾ ಪ್ರೀಮಿಯರ್​ ಲೀಗ್​ನ(WPL 2023) ಹಗಲು ಪಂದ್ಯದಲ್ಲಿ 125 ರನ್​ ಗಳಿಸಿ ಸವಾಲೊಡ್ಡಿದೆ.

ಮುಂಬಯಿಯ ಡಿ.ವೈ. ಪಾಟೀಲ್​ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಮಹಿಳಾ ಪ್ರೀಮಿಯರ್​ ಲೀಗ್​ನ ದಿನದ ಮೊದಲ ಮುಖಾಮುಖಿಯಲ್ಲಿ ಟಾಸ್​ ಸೋತು ಮೊದಲು ಬ್ಯಾಟಿಂಗ್ ನಡೆಸಿದ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡ ನಿಗದಿತ 20 ಓವರ್​ಗಳಲ್ಲಿ 9 ವಿಕೆಟ್​ ನಷ್ಟಕ್ಕೆ 125 ರನ್​ ಬಾರಿಸಿದೆ. ಮುಂಬೈ ಗೆಲುವಿಗೆ 126 ರನ್​ ಬಾರಿಸಬೇಕಿದೆ.

ಗುಜರಾತ್​ ಜೈಂಟ್ಸ್​ ವಿರುದ್ಧ ಸಿಡಿಲಬ್ಬರ ಬ್ಯಾಟಿಂಗ್​ ನಡೆಸಿ ನಡುಕ ಹುಟ್ಟಿಸಿದ್ದ ನ್ಯೂಜಿಲ್ಯಾಂಡ್​ನ ಸ್ಟಾರ್​ ಆಲ್​ ರೌಂಡರ್​ ಸೋಫಿ ಡಿವೈನ್​ ಅವರು ಈ ಪಂದ್ಯದಲ್ಲಿ ರನೌಟ್​ ಸಂಕಟಕ್ಕೆ ಸಿಲುಕಿದರು. ಇಲ್ಲದ ರನ್ ಕದಿಯಲೆತ್ನಿಸಿ ಶೂನ್ಯಕ್ಕೆ ಔಟಾಗುವ ಮೂಲಕ ನಿರಾಸೆ ಅನುಭಸಿದರು.

ನಾಯಕಿ ಸ್ಮೃತಿ ಮಂಧಾನ ಅವರ ಆಟ ಈ ಪಂದ್ಯದಲ್ಲಿಯೂ ಮಂದ ಗತಿಯಿಂದ ಕೂಡಿತ್ತು. 25 ಎಸೆತ ಎದುರಿಸಿ 24 ರನ್​ ಗಳಿಸಿದರು. ಇದರೊಂದಿಗೆ ಈ ಬಾರಿಯ ಮಹಿಳಾ ಪ್ರೀಮಿಯರ್​ ಲೀಗ್​ನಲ್ಲಿ ಮಂಧಾನ ಸಂಪೂರ್ಣ ವೈಫಲ್ಯ ಕಂಡಂತಾಯಿತು. ಈ ಮೂಲಕ ಮುಂದಿನ ಬಾರಿಯ ಆವೃತ್ತಿಯಲ್ಲಿ ಅವರು ಆರ್​ಸಿಬಿ ತಂಡದಲ್ಲಿಯೇ ಉಳಿಯಲಿದ್ದಾರಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

ಆರಂಭಿಕ ಆಟಗಾರ್ತಿಯರ ವಿಕೆಟ್​ ಪತನದ ಬಳಿಕ ಆಡಲಿಳಿದ ಆಸ್ಟ್ರೇಲಿಯಾದ ಆಲ್​ರೌಂಡರ್​ ಎಲ್ಲಿಸ್‌ ಪೆರ್ರಿ ತಂಡಕ್ಕೆ ಆಸರೆಯಾದರು. ಪ್ರತಿ ಓವರ್​ನಲ್ಲಿ ಒಂದು ಬೌಂಡರಿ ಬಾರಿಸುವ ಮೂಲಕ ತಂಡದ ಮೊತ್ತವನ್ನು ಹಿಗ್ಗಿಸಲಾರಂಭಿಸಿದರು. ಆದರೆ ಇವರಿಗೆ ಮತ್ತೊಂದು ತುದಿಯಲ್ಲಿ ಯಾರು ಕೂಡ ಉತ್ತಮ ಸಾಥ್​ ನೀಡಲಿಲ್ಲ. ಹೀತರ್​ ನೈಟ್​ ಮತ್ತು ಕನಿಕಾ ಅಹುಜಾ ತಲಾ 12 ರನ್​ಗೆ ಆಟ ಮುಗಿಸಿದರು. ಇದರ ಬೆನ್ನಲ್ಲೇ ಎಲ್ಲಿಸ್‌ ಪೆರ್ರಿ ಕೂಡ ನ್ಯಾಟ್‌ ಸ್ಕಿವರ್‌ ಬ್ರಂಟ್‌ ಎಸೆತದಲ್ಲಿ ಎಲ್​ಬಿಡಬ್ಲ್ಯು ಬಲೆಗೆ ಬಿದ್ದರು. 38 ಎಸೆತ ಎದುರಿಸಿದ ಅವರು ಮೂರು ಬೌಂಡರಿ ನೆರವಿನಿಂದ 29 ರನ್​ ಬಾರಿಸಿದರು. ಸ್ಕಿವರ್‌ ಬ್ರಂಟ್‌ 24 ರನ್​ಗೆ 2 ವಿಕೆಟ್​ ಉರುಳಿಸಿದರು.

ಇದನ್ನೂ ಓದಿ WPL 2023 : ಸೇಡು ತೀರಿಸಿಕೊಂಡ ಡೆಲ್ಲಿ ಪಡೆ, ಮುಂಬಯಿ ವಿರುದ್ಧ 9 ವಿಕೆಟ್​ ಸುಲಭ ಜಯ

ಅಂತಿಮ ಹಂತದಲ್ಲಿ ರಿಚಾ ಘೋಷ್​​ ಬಿರುಸಿನ ಬ್ಯಾಟಿಂಗ್​ ನಡೆಸಿದ ಪರಿಣಾಮ ಆರ್​ಸಿಬಿ 100ರ ಗಡಿ ದಾಟಿತು. ಕ್ರೀಸ್​ ಗಿಳಿದ ಆರಂಭದಿಂದಲೇ ಸಿಕ್ಸರ್​, ಬೌಂಡರಿಗಳ ಮೂಲಕ ಮುಂಬೈ ಬೌಲರ್​ಗಳ ಸಣ್ಣ ಮೊತ್ತದ ಯೋಜನೆಯನ್ನು ತಲೆಕೆಳಗಾಗಿಸಿದರು. ಆದರೆ ಅಂತಿಮ ಓವರ್​ ಮೊದಲ ಎಸೆತದಲ್ಲೇ ದೊಡ್ಡ ಹೊಡೆತಕ್ಕೆ ಮುಂದಾಗಿ ಕ್ಯಾಚ್​ ನೀಡಿದರು. ಅವರ ವಿಕೆಟ್​ ಉರುಳಿದ ಬಳಿಕ ತಂಡದ ಮೊತ್ತವೂ ಕುಸಿಯಿತು. ಒಟ್ಟು 13 ಎಸೆತ ಎದುರಿಸಿದ ಅವರು ಮೂರು ಬೌಂಡರಿ 2 ಸಿಕ್ಸರ್​ ಬಾರಿಸಿ 29 ರನ್​ ಕಲೆಹಾಕಿದರು. ಮುಂಬೈ ಪರ ಅಮೇಲಿಯಾ ಕೆರ್​ 22 ರನ್​ ವೆಚ್ಚದಲ್ಲಿ ಮೂರು ವಿಕೆಟ್​ ಪಡೆದರು. ಸೈಕಾ ಇಶಾಖ್‌ ಒಂದು ವಿಕೆಟ್​ ಪಡೆದರು.

ಸಂಕ್ಷಿಪ್ತ ಸ್ಕೋರ್​: ಆರ್​ಸಿಬಿ; 20 ಓವರ್​ಗಳಲ್ಲಿ 9 ವಿಕೆಟ್​ಗೆ 125( ಎಲ್ಲಿಸ್‌ ಪೆರ್ರಿ 29, ರಿಚಾ ಘೋಷ್​ 29, ಅಮೇಲಿಯಾ ಕೆರ್​ 22ಕ್ಕೆ 3)

Continue Reading

ಕ್ರೀಡೆ

Swiss Open: ಸ್ವಿಸ್‌ ಓಪನ್ ಬ್ಯಾಡ್ಮಿಂಟನ್; ಪ್ರಶಸ್ತಿ ಉಳಿಸಿಕೊಳ್ಳಲಿದ್ದಾರಾ ಪಿ.ವಿ. ಸಿಂಧು?

ಸ್ವಿಸ್‌ ಓಪನ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಕಣಕ್ಕಿಳಿಯಲು ಭಾರತದ ಪ್ರಮುಖ ಬ್ಯಾಡ್ಮಿಂಟನ್​ ಪಟುಗಳು ಸಜ್ಜಾಗಿದ್ದಾರೆ.

VISTARANEWS.COM


on

Edited by

Swiss Open Swiss Open Badminton Will PV retain the title
Koo

ಬಾಸೆಲ್‌ (ಸ್ವಿಟ್ಜರ್ಲೆಂಡ್‌): ಕಳೆದ ಕೆಲ ಬ್ಯಾಡ್ಮಿಂಟನ್​ ಟೂರ್ನಿಯಲ್ಲಿ ಮೊದಲ ಸುತ್ತಿನಲ್ಲೇ ಸೋಲಿನ ಆಘಾತ ಕಾಣುತ್ತಿರುವ ಭಾರತದ ಅವಳಿ ಒಲಿಂಪಿಕ್ಸ್​ ಪದಕ ವಿಜೇತೆ ಪಿ.ವಿ. ಸಿಂಧು (Sindhu)ಇದೀಗ ಸ್ವಿಸ್‌ ಓಪನ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ(Swiss Open) ಕಣಕ್ಕಿಳಿಯಲು ಸಜ್ಜಾಗಿದ್ದಾರೆ.

ಈ ಟೂರ್ನಿಯಲ್ಲಿ ಕಳೆದ ಬಾರಿಯ ಚಾಂಪಿಯನ್ ಆಗಿರುವ ಸಿಂಧು ಪ್ರಶಸ್ತಿ ಉಳಿಸಿಕೊಳ್ಳಲಿದ್ದಾರಾ ಅಥವಾ ಮೊದಲ ಸುತ್ತಿನಲ್ಲೇ ಸೋತು ಟೂರ್ನಿಯಿಂದ ಹೊರಬೀಳಲಿದ್ದಾರಾ ಎಂದು ಕಾದು ನೋಡಬೇಕಿದೆ. ಸದ್ಯ ಸಿಂಧು ಅವರ ಆಟವನ್ನು ನೋಡುವಾಗ ಅವರು ಪ್ರಶಸ್ತಿ ಗೆಲ್ಲುವುದು ಬಲು ಕಷ್ಟ ಎನ್ನಲಡ್ಡಿಯಿಲ್ಲ. ಏಕೆಂದರೆ ಸಿಂಧು ಶ್ರೇಯಾಂಕ ರಹಿತ ಆಟಗಾರ್ತಿಯರ ಸವಾಲನ್ನು ಮೆಟ್ಟಿನಿಲ್ಲಲು ಸಾಧ್ಯವಾಗುತ್ತಿಲ್ಲ. ಮೊದಲ ಸುತ್ತಿನ ಪಂದ್ಯದಲ್ಲಿ ಸಿಂಧು ಆತಿಥೇಯ ನಾಡಿನ ಜೆಂಜಿರಾ ಸ್ಟೆಡಲ್‌ಮನ್‌ ವಿರುದ್ಧ ಅದೃಷ್ಟ ಪರೀಕ್ಷೆಗೆ ಇಳಿಯಲಿದ್ದಾರೆ.

ಪುರುಷರ ಸಿಂಗಲ್ಸ್ ವಿಭಾಗದ ಮೊದಲ ಸುತ್ತಿನ ಪಂದ್ಯದಲ್ಲಿ ಪ್ರಣಯ್​ಗೆ(Prannoy) ಚೀನಾದ ಶಿ ಯುಕಿ ಅವರ ಸವಾಲು ಎದುರಾಗಿದೆ. ಲಕ್ಷ್ಯ ಸೇನ್ ಅವರು ಹಾಂಗ್‌ಕಾಂಗ್‌ನ ಲೀ ಚೆವುಕ್‌ ಯಿವ್ ಎದುರು, ಕಿದಂಬಿ ಶ್ರೀಕಾಂತ್‌ ಚೀನಾದ ವೆಂಗ್ ಹಾಂಗ್‌ ವಿರುದ್ಧ ಸೆಣಸಾಡಲಿದ್ದಾರೆ.

ಇದನ್ನೂ ಓದಿ All England Badminton: ಮೊದಲ ಸುತ್ತಿನಲ್ಲೇ ಸಿಂಧುಗೆ ಸೋಲಿನ ಆಘಾತ

ಕಳೆದ ವಾರ ಮುಕ್ತಾಯಕಂಡ ಆಲ್​ ಇಂಗ್ಲೆಂಡ್​ ಟೂರ್ನಿಯಲ್ಲಿ ಸೆಮಿಫೈನಲ್​ ಪಂದ್ಯದಲ್ಲಿ ಎಡವಿದ್ದ ಮಹಿಳಾ ಡಬಲ್ಸ್‌ ಜೋಡಿಯಾದ ಗಾಯತ್ರಿ ಗೋಪಿಚಂದ್‌ ಮತ್ತು ತ್ರಿಶಾ ಜೋಲಿ ಅವರು ಮೊದಲ ಸುತ್ತಿನಲ್ಲಿ ಇಂಡೊನೇಷ್ಯಾದ ಅಪ್ರಿಯಾನಿ ರಹಾಯು- ಸಿತಿ ಫದಿಯಾ ಸಿಲ್ವಾ ವಿರುದ್ಧ ಆಡಲಿದ್ದಾರೆ. ಅಲ್ಲಿ ಕೈ ತಪ್ಪಿದ ಪ್ರಶಸ್ತಿಯನ್ನು ಈ ಟೂರ್ನಿಯಲ್ಲಿ ಗೆಲ್ಲುವ ವಿಶ್ವಾಸದಲ್ಲಿದೆ ಈ ಜೋಡಿ. ಇನ್ನು ಪುರುಷರ ಡಬಲ್ಸ್ ವಿಭಾಗದಲ್ಲಿ ಸಾತ್ವಿಕ್ ಸಾಯಿರಾಜ್ ರಾಂಕಿ ರೆಡ್ಡಿ-ಚಿರಾಗ್‌ ಶೆಟ್ಟಿ ಜೋಡಿಗೆ ಚೀನಾದ ಲಿಯಾಂಗ್‌ ವೇ ಕೆಂಗ್‌- ವಾಂಗ್‌ ಸವಾಲು ಎದುರಾಗಲಿದೆ.

Continue Reading
Advertisement
savadatti accident
ಕರ್ನಾಟಕ4 mins ago

Road accident : ಸವದತ್ತಿ ಪಟ್ಟಣದಲ್ಲಿ ಲಾರಿ ಬ್ರೇಕ್‌ ಫೇಲ್‌ ಆಗಿ ಸರಣಿ ಅಪಘಾತ; ಸ್ಥಳದಲ್ಲೇ ಇಬ್ಬರು ಮೃತ್ಯು

HP Pavilion Aero 13 Laptop Launched and Check details
ಗ್ಯಾಜೆಟ್ಸ್6 mins ago

HP Pavilion Aero 13 ಲ್ಯಾಪ್‌ಟಾಪ್ ಲಾಂಚ್, ಏನೆಲ್ಲ ವಿಶೇಷತೆಗಳಿವೆ? ಬೆಲೆ ಎಷ್ಟು?

ಕರ್ನಾಟಕ8 mins ago

Basavaraj Bommai: ವಿಜಯಪುರದಲ್ಲಿ 4.64 ಲಕ್ಷ ಮನೆಗಳಿಗೆ ಕುಡಿಯುವ ನೀರು ಒದಗಿಸುವ ಗುರಿ; ಬೊಮ್ಮಾಯಿ

congress says cm basavraj bommai will not get chance to contest inkarnataka election
ಕರ್ನಾಟಕ19 mins ago

Karnataka Election: ಸಿಎಂ ಬೊಮ್ಮಾಯಿಗೇ ಟಿಕೆಟ್‌ ಸಿಗುವುದು ಡೌಟು ಎಂದ ಕಾಂಗ್ರೆಸ್‌

Azam peer Khadri
ಕರ್ನಾಟಕ30 mins ago

Karnataka Elections : ಶಿಗ್ಗಾಂವಿಯಲ್ಲಿ ಬೊಮ್ಮಾಯಿ ಕಟ್ಟಿ ಹಾಕಲು ಹೊರಟ ಕಾಂಗ್ರೆಸ್‌ಗೆ ಈಗ ಖಾದ್ರಿ ಸಂಕಟ!

ಕಿರುತೆರೆ33 mins ago

Kannada Serial: 900 ಸಂಚಿಕೆ ಪೂರೈಸಿದ ಜೊತೆ ಜೊತೆಯಲಿ ಧಾರಾವಾಹಿ; ಸಂಭ್ರಮದಲ್ಲಿ ತಂಡ

ಕರ್ನಾಟಕ35 mins ago

Murder Case: ಅವಳದ್ದು ಮೋಹ, ಇವನಿಗೆ ಮಧುಮೇಹ; ಕೊಲೆಯಲ್ಲಿ ಅಂತ್ಯವಾಯ್ತು ಕಾಳಜಿ ಕಲಹ

Tejasvi Surya says Rahul Gandhi is dependent on pocket money given by mother
ಕರ್ನಾಟಕ40 mins ago

BJP Yuva Morcha: ಅಮ್ಮ ನೀಡುವ ಪಾಕೆಟ್ ಮನಿ ಮೇಲೆಯೇ ರಾಹುಲ್ ಗಾಂಧಿ ಜೀವನ: ತೇಜಸ್ವಿ ಸೂರ್ಯ

WPL 2023: RCB ends campaign with defeat
ಕ್ರಿಕೆಟ್41 mins ago

WPL 2023: ಸೋಲಿನೊಂದಿಗೆ ಅಭಿಯಾನ ಮುಗಿಸಿದ ಆರ್​ಸಿಬಿ

Bike Rally yallapur ugadi
ಉತ್ತರ ಕನ್ನಡ44 mins ago

Bike Rally: ಯುಗಾದಿ ಪ್ರಯುಕ್ತ ಯಲ್ಲಾಪುರದಲ್ಲಿ ನಡೆದ ಬೈಕ್ ರ‍್ಯಾಲಿಗೆ ಅಭೂತಪೂರ್ವ ಬೆಂಬಲ

7th Pay Commission
ನೌಕರರ ಕಾರ್ನರ್5 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ2 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Govt employees ssociation
ಕರ್ನಾಟಕ1 month ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

Village Accountant Recruitment
ಉದ್ಯೋಗ1 month ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Sphoorti Salu
ಸುವಚನ14 hours ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Paid leave for govt employees involved in the strike
ನೌಕರರ ಕಾರ್ನರ್3 weeks ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ3 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

Teacher Transfer
ನೌಕರರ ಕಾರ್ನರ್5 months ago

ಸೇವಾ ನಿರತ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ; ಸದ್ಯವೇ ಸರ್ಕಾರದಿಂದ ಗುಡ್‌ ನ್ಯೂಸ್‌?

7th Pay Commission
ಕರ್ನಾಟಕ4 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

Land Surveyor Recruitment
ಉದ್ಯೋಗ1 month ago

Land Surveyor Recruitment : 2000 ಭೂಮಾಪಕರ ನೇಮಕಕ್ಕೆ ಅರ್ಜಿ ಆಹ್ವಾನ; ಇಲ್ಲಿದೆ ಸಂಪೂರ್ಣ ಮಾಹಿತಿ

ಕರ್ನಾಟಕ2 hours ago

Halal Ban: ಯುಗಾದಿಗೆ ಹಲಾಲ್‌ ಕಟ್‌ ಬಹಿಷ್ಕರಿಸಿ, ಜಟ್ಕಾ ಮಾಂಸ ಖರೀದಿ; ಮತ್ತೆ ಬೀದಿಗಿಳಿದ ಹಿಂದು ಕಾರ್ಯಕರ್ತರು

Did Dinesh Gundu Rao distribute damaged sarees in Gandhinagar for Ugadi festival?
ಕರ್ನಾಟಕ6 hours ago

Damaged Saree: ಯುಗಾದಿ ಹಬ್ಬಕ್ಕೆ ಗಾಂಧಿನಗರದಲ್ಲಿ ಹರಿದ ಸೀರೆ ಕೊಟ್ಟರಾ ದಿನೇಶ್‌ ಗುಂಡೂರಾವ್‌? ಸೀರೆ ನೀಡಿ ಮಹಿಳೆಯರ ಕಿಡಿ

ಕರ್ನಾಟಕ7 hours ago

Chikkaballapura BMTC: ಬೆಂಗಳೂರಿಂದ ಚಿಕ್ಕಬಳ್ಳಾಪುರಕ್ಕೆ ಬಿಎಂಟಿಸಿ ವೋಲ್ವೋ ಬಸ್‌ ಸಂಚಾರ ಶುರು; ಟೈಮಿಂಗ್‌ ಏನು?

BMTC bus window shattered as police refused to allow auto drivers rally
ಕರ್ನಾಟಕ1 day ago

Auto Strike In Bengaluru: ಆಟೋ ಚಾಲಕರ ರ‍್ಯಾಲಿಗೆ ಅವಕಾಶ ನೀಡದ ಖಾಕಿ ಪಡೆ; ಬಿಎಂಟಿಸಿ ಬಸ್ ಗಾಜು ಒಡೆದು ಆಕ್ರೋಶ

Drivers oppose Rapido bike taxi in bengaluru Extra BMTC buses ply on road, auto stopped plying
ಕರ್ನಾಟಕ1 day ago

Auto Strike: ರ‍್ಯಾಪಿಡೋ ಬೈಕ್‌ ಟ್ಯಾಕ್ಸಿಗೆ ವಿರೋಧ; ಆಟೋ ಓಡಾಟಕ್ಕೆ ಬ್ರೇಕ್‌, ರೋಡಿಗಿಳಿದ ಹೆಚ್ಚುವರಿ ಬಿಎಂಟಿಸಿ ಬಸ್‌

someone cant tell the truth that Tipu used to charge high taxes on Hindus says Hariprakash konemane
ಕರ್ನಾಟಕ2 days ago

ಇತಿಹಾಸ ವಸ್ತುನಿಷ್ಠವಾಗಿರಬೇಕು, ನಿಸ್ವಾರ್ಥದಿಂದ ಬರೆಯುವವರನ್ನು ಗೌರವಿಸಬೇಕು: ಹರಿಪ್ರಕಾಶ್‌ ಕೋಣೆಮನೆ

Auto services to be stopped from Sunday midnight, Drivers protest against whiteboard bike taxi
ಕರ್ನಾಟಕ2 days ago

Bengaluru Auto Bandh: ಬೈಕ್‌ ಟ್ಯಾಕ್ಸಿಗೆ ವಿರೋಧ; ಭಾನುವಾರ ಮಧ್ಯರಾತ್ರಿಯಿಂದಲೇ ಆಟೋ ಸಂಚಾರ ಸ್ಥಗಿತ

Organizing our Power Run Marathon in the name of puneeth rajkumar
ಕರ್ನಾಟಕ2 days ago

Puneeth Rajkumar: ಅಪ್ಪು ಹೆಸರಲ್ಲಿ ನಮ್ಮ ಪವರ್ ರನ್ ಮ್ಯಾರಥಾನ್; ಅಶ್ವಿನಿ ಪುನೀತ್‌ ಚಾಲನೆ

Due to heavy rains, motorists struggle on Bengaluru-Mysuru dashapatha
ಕರ್ನಾಟಕ3 days ago

Karnataka Rain: ಸರಾಗವಾಗಿ ಹರಿಯದ ಮಳೆ ನೀರು, ಕೈಕೊಟ್ಟ ವಾಹನ; ಬೆಂಗಳೂರು-ಮೈಸೂರು ದಶಪಥದಲ್ಲಿ ದಿಕ್ಕೆಟ್ಟ ಪ್ರಯಾಣಿಕರು!

ಕರ್ನಾಟಕ6 days ago

Karnataka Election 2023: ಧ್ರುವನಾರಾಯಣ ಪುತ್ರ ದರ್ಶನ್‌ಗಾಗಿ ನಂಜನಗೂಡು ಟಿಕೆಟ್ ತ್ಯಾಗ ಮಾಡಿದ ಎಚ್.ಸಿ. ಮಹದೇವಪ್ಪ

ಟ್ರೆಂಡಿಂಗ್‌

error: Content is protected !!