Asia Cup 2023: ಲಂಕಾದಲ್ಲಿ ಕೊರೊನಾ ಅಟ್ಟಹಾಸ; ಆಟಗಾರರಿಗೆ ಪಾಸಿಟಿವ್​, ಏಷ್ಯಾಕಪ್​ ಅನುಮಾನ - Vistara News

ಕ್ರಿಕೆಟ್

Asia Cup 2023: ಲಂಕಾದಲ್ಲಿ ಕೊರೊನಾ ಅಟ್ಟಹಾಸ; ಆಟಗಾರರಿಗೆ ಪಾಸಿಟಿವ್​, ಏಷ್ಯಾಕಪ್​ ಅನುಮಾನ

ಶ್ರೀಲಂಕಾ ತಂಡದ ಆರಂಭಿಕ ಆಟಗಾರ ಅವಿಷ್ಕಾ ಫರ್ನಾಂಡೋ (Avishka Fernando ) ಮತ್ತು ವಿಕೆಟ್ ಕೀಪರ್ ಕುಸಾಲ್ ಪೆರೆರಾ (Kusal Perera) ಅವರು ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ.

VISTARANEWS.COM


on

Avishka Fernando and Kusal Perera
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕೊಲಂಬೊ: ಏಷ್ಯಾ ಕಪ್​ಗೆ ಇನ್ನು ಕೇವಲ 5 ದಿನಗಳು ಮಾತ್ರ ಬಾಕಿ ಉಳಿದಿದೆ. ಈ ಮಧ್ಯೆ ಶ್ರೀಲಂಕಾದಲ್ಲಿ ಕೊರೊನಾ ಅಟ್ಟಹಾಸ ಆರಂಭವಾಗಿದೆ. ಏಷ್ಯಾಕಪ್​ನಲ್ಲಿ(Asia Cup 2023) ಸ್ಥಾನ ಪಡೆದ ಲಂಕಾದ ಒಬ್ಬರು ಆಟಗಾರರಿಗೆ ಕೊರೊನಾ ಸೊಂಕು(COVID-19) ತಗುಲಿದೆ. ಶ್ರೀಲಂಕಾ ತಂಡದ ಆರಂಭಿಕ ಆಟಗಾರ ಅವಿಷ್ಕಾ ಫರ್ನಾಂಡೋ (Avishka Fernando) ಮತ್ತು ವಿಕೆಟ್ ಕೀಪರ್ ಕುಸಾಲ್ ಪೆರೆರಾ (Kusal Perera) ಕೊರೊನಾ ಪಾಸಿಟಿವ್​ ಬಂದ ಆಟಗಾರರು ಎಂದು ತಿಳಿದುಬಂದಿದೆ.

ಈ ಬಾರಿಯ ಏಷ್ಯಾಕಪ್​ಗೆ ಪಾಕಿಸ್ತಾನ ಆತಿಥ್ಯವಹಿಸಿಕೊಂಡರು ಭಾರತ ತಂಡ ಪಾಕಿಸ್ತಾನದಲ್ಲಿ ಆಡುವುದಿಲ್ಲ ಎಂದು ಹೇಳಿ ತಮ್ಮ ಪಂದ್ಯಗಳನ್ನು ತಟಸ್ಥ ತಾಣದಲ್ಲಿ ನಡೆಸಬೇಕೆಂಸು ಪಟ್ಟುಹಿಡಿದಿತ್ತು. ಈ ಕಾರಣದಿಂದ ಟೂರ್ನಿ ಹೈಬ್ರಿಡ್​ ಮಾದರಿಯಲ್ಲಿ ಶ್ರೀಲಂಕಾ ಮತ್ತು ಪಾಕಿಸ್ತಾನದಲ್ಲಿ ಪಂದ್ಯಗಳು ನಡೆಯುತ್ತಿವೆ. ಆಗಸ್ಟ್​ 30ರಿಂದ ಟೂರ್ನಿ ಆರಂಭಗೊಳ್ಳಲಿದೆ. ಒಟ್ಟು 13 ಪಂದ್ಯಗಳ ಪೈಕಿ ಪಾಕಿಸ್ತಾನದಲ್ಲಿ ನಾಲ್ಕು ಮತ್ತು ಉಳಿದ 9 ಪಂದ್ಯಗಳು ಲಂಕಾದಲ್ಲಿ ನಡೆಸಲು ತೀರ್ಮಾನಿಸಲಾಗಿದೆ.

ಮತ್ತೆ ಕೋವಿಡ್​ ಕಂಟಕ

50 ಓವರ್​ ಮಾದರಿಯಲ್ಲಿ ನಡೆಯುವ ಏಷ್ಯಾಕಪ್​ಗೆ ಏಷ್ಯಾದ ಪ್ರಮುಖ ತಂಡಗಳು ಸಿದ್ಧತೆ ನಡೆಸುತ್ತಿರುವಾಗಲೇ ಲಂಕಾದಲ್ಲಿ ಕೊರೊನಾ ಮಾರಿ ಮತ್ತೆ ತನ್ನ ಅಟ್ಟಹಾಸವನ್ನು ಆರಂಭಿಸಿರುವುದು ಎಲ್ಲ ತಂಡಗಳಿಗೂ ಆತಂಕ ಉಂಟು ಮಾಡಿದೆ. ವಿಶ್ವ ಕಪ್​ ಆಟರಂಭಕ್ಕೂ ಇನ್ನು ಕೆಲವೇ ದಿನಗಳು ಬಾಕಿ ಇರುವಾಗ ಕೊರೊನಾ ಸೋಂಕಿಗೆ ತುತ್ತಾದರೆ ಅಭ್ಯಾಸ ನಡೆಸಲು ಸಾಧ್ಯವಾಗದೆ ತಂಡದಿಂದ ದೂರ ಉಳಿಯಬೇಕಾದ ಪರಿಸ್ಥಿತಿ ಎದುರಾಗಬಹುದು ಎಂಬ ಚಿಂತೆ ಕಾಡಲಾರಂಭಿಸಿದೆ.

ಭಾರತಕ್ಕೆ ಮತ್ತಷ್ಟು ಚಿಂತೆ

ಭಾರತಕ್ಕೆ ಹೆಚ್ಚಿನ ಚಿಂತೆ ಕಾಡಲಾಂಬಿಸಿದೆ. ಏಕೆಂದರೆ ಭಾರತ ತನ್ನ ಪಾಲಿನ ಎಲ್ಲ ಪಂದ್ಯಗಳನ್ನು ಶ್ರೀಲಂಕಾದಲ್ಲಿ ಆಡುತ್ತಿದೆ. ಪ್ರಯಾಣದ ವೇಳೆ ಮತ್ತು ಹೊಟೇಲ್​ ವಾಸದ ವೇಳೆ ಕೋವಿಡ್​ ಸೋಂಕು ವಕ್ಕರಿಸುವ ಭೀತಿ ರೋಹಿತ್​ ಶರ್ಮ ಪಡೆಗೆ ಕಾಡಲಾರಂಭಿಸಿದೆ. ಅದರಲ್ಲೂ ಜಸ್​ಪ್ರೀತ್​ ಬುಮ್ರಾ, ಶ್ರೇಯಸ್​ ಅಯ್ಯರ್​ ಮತ್ತು ಕೆ.ಎಲ್​ ರಾಹುಲ್​ ಅವರು ಈಗಾಗಲೇ ಗಾಯದಿಂದ ಚೇತರಿಕೆ ಕಂಡಿದ್ದಾರೆ. ಒಂದೊಮ್ಮೆ ಅವರಿಗೆ ಸೋಂಕು ತಗುಲಿದರೆ ಅವರ ಪ್ರತಿಕಾಯ ಸಾಮರ್ಥ್ಯದಲ್ಲಿ ಕುಸಿತ ಕಂಡು ಚೇತರಿಕೆಗೆ ಮತ್ತಷ್ಟು ಸಮಯ ತೆಗೆದುಕೊಳ್ಳಬೇಕಾದ ಅನಿವಾರ್ಯ ಸ್ಥಿತಿ ಎದುರಾಗಲೂ ಬಹುದು ಹೀಗಾಗಿ ಭಾರತ ಆತಂಕದಲ್ಲೇ ಏಷ್ಯಾಕಪ್​ನಲ್ಲಿ ಕಣಕ್ಕಿಳಿಯಬೇಕಿದೆ.

ಇದನ್ನೂ ಓದಿ Asia Cup 2023: ಯೋ-ಯೋ ಟೆಸ್ಟ್​ ಪಾಸ್​ ಆದ ನಾಯಕ ರೋಹಿತ್​,ಹಾರ್ದಿಕ್​

ಬಯೋಬಬಲ್​ ಸಾಧ್ಯತೆ

ಕೊರೊನಾ ಕಾಲಘಟ್ಟದಲ್ಲಿ ಪಂದ್ಯಗಳನ್ನು ಬಯೋಬನಲ್​ನಲ್ಲಿ ಮಾದರಿಯಲ್ಲಿ ನಡೆಸಿದಂತೆ. ಲಂಕಾದಲ್ಲಿ ನಡೆಯುವ ಪಂದ್ಯಗಳಿಗೂ ಬಯೋಬಬಲ್​ ನಿಯಮ ಜಾರಿಗೆ ತರುವ ಸಾಧ್ಯತೆ ಇದೆ. ಹೀಗಾದರೆ ಪ್ರೇಕ್ಷಕರಿಲ್ಲದೆ ಪಂದ್ಯಗಳು ನಡೆಯಲಿದೆ. ಸದ್ಯಕ್ಕೆ ಆಟಗಾರರಿಗೆ ಸೋಂಕು ತಗಲುವುದನ್ನು ತಪ್ಪಿಸಲು ಇದೊಂದೆ ಪರಿಹಾರವಾಗಿದೆ.

ಕಳೆದ ವರ್ಷವೂ ಉಭಯ ಆಟಗಾರರಿಗೆ ಸೋಂಕು ಬಾಧಿಸಿತ್ತು

ಫೆರ್ನಾಂಡೋ ಮತ್ತು ಪರೆರಾ ಅವರಿಗೆ ಕಳೆದ ವರ್ಷವೂ ಕೊರೊನ ಸೋಂಕು ಬಾಧಿಸಿತ್ತು. ಕಳೆದ ವರ್ಷ ಜಿಂಬಾಬ್ವೆ ವಿರುದ್ಧದ ಏಕದಿನ ಸರಣಿಯ ಆರಂಭಕ್ಕೂ ಮೊದಲು ಫೆರ್ನಾಂಡೋ ಸೋಂಕಿಗೆ ತುತ್ತಾಗಿದ್ದರು. ಅಚ್ಚರಿ ಎಂದರೆ ಅವರು ಬೂಸ್ಟರ್ ಡೋಸ್ ಪಡೆದ ಕೇವಲ ಎರಡು ವಾರಗಳ ಅಂತರದಲ್ಲಿ ಕೊರೊನಾ ಸೋಕಿಗೆ ತುತ್ತಾದಗಿದ್ದರು. ಇದು ಭಾರಿ ಚರ್ಚೆಗೂ ಕಾರಣವಾಗಿತ್ತು. ಪೆರೆರಾ ಕಳೆದ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿ ಆರಂಭಕ್ಕೂ ಮುನ್ನ ಕೋವಿಡ್​ ಪಾಸಿಟಿವ್​ ಬಂದು ಸರಣಿಯಿಂದ ಹೊರಗುಳಿದಿದ್ದರು. ಇದೀಗ ಏಷ್ಯಾಕಪ್​ನ ಆರಂಭಿಕ ಕೆಲ ಪಂದ್ಯಗಳಿಗೆ ಅನುಮಾನ ಎನ್ನಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರಿಕೆಟ್

IND vs PAK T20 Match: 10 ಸೆಕೆಂಡ್‌ ಜಾಹೀರಾತಿಗೆ ಕನಿಷ್ಠ 50 ಲಕ್ಷ ನಿಗದಿ!

IND vs PAK T20 Match: ವರದಿಗಳ ಪ್ರಕಾರ ಈ ವಿಶ್ವಕಪ್‌ನ ಸಾಮಾನ್ಯ ಪಂದ್ಯಗಳ ಜಾಹೀರಾತು ಶುಲ್ಕ 10 ಸೆಕೆಂಡ್‌ಗೆ 6 ಲಕ್ಷ ಇದ್ದು, ಇನ್ನುಳಿದ ಪ್ರಮುಖ ಪಂದ್ಯಗಳಿಗೆ 12ರಿಂದ 15 ಲಕ್ಷದ ವರೆಗೆ ಶುಲ್ಕ ನಿಗದಿಪಡಿಸಲಾಗಿದೆ. ಭಾರತ ನಾಕೌಟ್‌ ಹಂತಕ್ಕೇರಿದರೆ, ಆ ಪಂದ್ಯಗಳ ಜಾಹೀರಾತಿಗೆ ಕನಿಷ್ಠ 26 ಲಕ್ಷ ನಿಗದಿಯಾಗಬಹುದು ಎನ್ನಲಾಗಿದೆ.

VISTARANEWS.COM


on

IND vs PAK T20 Match
Koo

ಮುಂಬಯಿ: ಭಾರತ-ಪಾಕ್‌(IND vs PAK T20 Match) ನಡುವೆ ಪಂದ್ಯ ನಡೆದರೆ, ಜಾಹೀರಾತು ಕಂಪನಿಗಳಿಂದ ಬಿಸಿಸಿಐ, ಪಿಸಿಬಿ ಮತ್ತು ಐಸಿಸಿಗಳಿಗೆ ಹಣ ಹೊಳೆಯೇ ಹರಿದುಹೋಗುತ್ತದೆ. ಎರಡೂ ದೇಶಗಳ ನಡುವೆ ಎಂದಿಗೂ ಮುಗಿಯದಂತೆ ಕಾಣುತ್ತಿರುವ ದ್ವೇಷಗಳ ಜತೆಗೆ ಹಣಕಾಸಿನ ಲೆಕ್ಕಾಚಾರವೂ ಅಲ್ಲಿರುತ್ತವೆ. ಇದೀಗ ಈ ಬಾರಿಯ ಟಿ20 ವಿಶ್ವಕಪ್​ ಟೂರ್ನಿಯಲ್ಲಿ(T20 World Cup 2024) ಉಭಯ ತಂಡಗಳ ಪಂದ್ಯದ ವೇಳೆ ಪ್ರಸಾರಗೊಳ್ಳುವ 10 ಸೆಕೆಂಡ್‌ಗಳ ಜಾಹೀರಾತಿಗೆ ಕನಿಷ್ಠ 50 ಲಕ್ಷ ನಿಗದಿಪಡಿಸಲಾಗಿದೆ ಎಂದು ಹೇಳಲಾಗುತ್ತಿದೆ. ಭಾರತ ಮತ್ತು ಪಾಕ್​ ಪಂದ್ಯ ಜೂನ್​ 9ರಂದು ನಡೆಯಲಿದೆ.

ವರದಿಗಳ ಪ್ರಕಾರ ಈ ವಿಶ್ವಕಪ್‌ನ ಸಾಮಾನ್ಯ ಪಂದ್ಯಗಳ ಜಾಹೀರಾತು ಶುಲ್ಕ 10 ಸೆಕೆಂಡ್‌ಗೆ 6 ಲಕ್ಷ ಇದ್ದು, ಇನ್ನುಳಿದ ಪ್ರಮುಖ ಪಂದ್ಯಗಳಿಗೆ 12ರಿಂದ 15 ಲಕ್ಷದ ವರೆಗೆ ಶುಲ್ಕ ನಿಗದಿಪಡಿಸಲಾಗಿದೆ. ಭಾರತ ನಾಕೌಟ್‌ ಹಂತಕ್ಕೇರಿದರೆ, ಆ ಪಂದ್ಯಗಳ ಜಾಹೀರಾತಿಗೆ ಕನಿಷ್ಠ 26 ಲಕ್ಷ ನಿಗದಿಯಾಗಬಹುದು ಎನ್ನಲಾಗಿದೆ. ವೆಸ್ಟ್​ ಇಂಡೀಸ್​ ಮತ್ತು ಅಮೆರಿಕದಲ್ಲಿ ಪಂದ್ಯಗಳು ಹಗಲು ಮತ್ತು ಬೆಳಗಿನ ಜಾವ ನಡೆಯುವ ಕಾರಣ ಹೆಚ್ಚಿನ ಸಂಖ್ಯೆಯ ಪ್ರೇಕ್ಷರು ಬರುತ್ತಿಲ್ಲ. ಈ ನಷ್ಟವನ್ನೆಲ್ಲ ಆಯೋಜಕರು ಭಾರತ-ಪಾಕ್‌ ಪಂದ್ಯದ ಮೂಲಕ ಭರಿಸುವ ಯೋಜನೆಯಲ್ಲಿದ್ದಾರೆ.

ಪಂದ್ಯ ನೋಡಲು ಅಭಿಮಾನಿಗಳ ನಿರಾಸಕ್ತಿ


ಭಾರತ-ಪಾಕ್​ ಹೈವೋಲ್ಟೇಜ್ ಪಂದ್ಯಕ್ಕೆ ಈ ಬಾರಿ ಪ್ರೇಕ್ಷಕರು ನಿರಾಸಕ್ತಿ ತೋರುತ್ತಿದ್ದಾರೆ ಎಂಬ ವಿಚಾರ ಕೂಡ ಹೊರಬಿದ್ದಿದೆ. ಈ ಪಂದ್ಯದ ಎಲ್ಲಾ ಟಿಕೆಟ್‌ಗಳು ಇನ್ನೂ ಮಾರಾಟವಾಗಿಲ್ಲ. ಈ ಪಂದ್ಯದ ಟಿಕೆಟ್‌ಗಳು ಇನ್ನೂ ಐಸಿಸಿ ವೆಬ್​ಸೈಟ್​ನಲ್ಲಿ ಲಭ್ಯವಿದೆ. ಇದು ಹಲವರಲ್ಲಿ ಅಚ್ಚರಿ ಮೂಡಿಸಿದೆ.

ಇದನ್ನೂ ಓದಿ IND vs PAK: ಭಾರತ ವಿರುದ್ಧ ಶಾಂತ ಚಿತ್ತರಾಗಿ ಆಡುವ ಉಪಾಯ ಮಾಡಿದ ಕುತಂತ್ರಿ ಪಾಕ್​

ಭಾರತ ಮತ್ತು ಪಾಕ್​ ಪಂದ್ಯದ ಟಿಕೆಟ್​ ಸಿಗುವುದೇ ಒಂದು ಅದೃಷ್ಟ. ಮ್ಯಾಚ್​ನ ಟಿಕೆಟ್​ಗಳು ಘೋಷಣೆಯಾದ ಕ್ಷಣಾರ್ಧದಲ್ಲೇ ಮಾರಾಟವಾಗುತ್ತಿದ್ದವು. ಆದರೆ ಈ ಬಾರಿ ಯಾರಿಗೂ ಕೂಡ ಟಿಕೆಟ್​ ಕೊಳ್ಳಲು ಆಸಕ್ತಿಯೇ ಇಲ್ಲದಂತಾಗಿದೆ. ಇದಕ್ಕೆ ಕಾರಣ ಟಿಕೆಟ್​ ಬೆಲೆ ದುಬಾರಿಯಾಗಿರುವುದು. ಈ ಪಂದ್ಯಕ್ಕಾಗಿ ಐಸಿಸಿ ಮೂರು ಪ್ಯಾಕೇಜ್‌ಗಳಲ್ಲಿ ಟಿಕೆಟ್‌ಗಳನ್ನು ಇರಿಸಿದೆ. ಇದರಲ್ಲಿ ಡೈಮಂಡ್ ಕ್ಲಬ್, ಪ್ರೀಮಿಯಂ ಕ್ಲಬ್ ಲಾಂಜ್​​ ಮತ್ತು ಕಾರ್ನರ್ ಕ್ಲಬ್​​ಗಳನ್ನು ಒಳಗೊಂಡಿವೆ. ಡೈಮಂಡ್ ಕ್ಲಬ್ ಟಿಕೆಟ್ ಬೆಲೆ 8.34 ಲಕ್ಷ ರೂ. ಈ ಟಿಕೆಟ್​ ಖರೀದಿಸುವ ಅಭಿಮಾನಿಗಳಿಗೆ ಅತ್ಯುತ್ತಮ ಸೌಲಭ್ಯಗಳು ಸಿಗುತ್ತವೆ. ಪ್ರೀಮಿಯಂ ಕ್ಲಬ್ ಲಾಂಜ್​ ಟಿಕೆಟ್ ಬೆಲೆ 2 ಲಕ್ಷ ರೂ, ಮತ್ತು ಕಾರ್ನರ್ ಕ್ಲಬ್ ಟಿಕೆಟ್ ಬೆಲೆ 2.29 ಲಕ್ಷ ರೂ. ಆಗಿದೆ. ಇದಲ್ಲದೆ ಪಂದ್ಯಕ್ಕೆ ಉಗ್ರರು ಬಾಂಬ್​ ಬೆದರಿಕೆ ಹಾಕಿದ್ದು ಕೂಡ ಅಭಿಮಾನಿಗಳ ಹಿಂದೇಟಿಗೆ ಕಾರಣವಾಗಿರಬಹುದು ಎಂದು ಹೇಳಲಾಗಿದೆ. 

ಹೈವೋಲ್ಟೇಜ್ ಕದನಕ್ಕೆ ನ್ಯೂಯಾರ್ಕ್(NEW YORK) ಹೊರವಲಯದಲ್ಲಿ 34,000 ಆಸನ ಸಾಮರ್ಥ್ಯವುಳ್ಳ ತಾತ್ಕಾಲಿಕ ಕ್ರೀಡಾಂಗಣವನ್ನು ನಿರ್ಮಿಸಲಾಗಿದೆ. ಭಾರತ ಮತ್ತು ಪಾಕ್​ ನಡುವಣ ಪಂದ್ಯ ನ್ಯೂಯಾರ್ಕ್‌ನಲ್ಲಿಯೇ ನಡೆಸಲು ಕಾರಣವೂ ಕೂಡ ಇದೆ. ಏಕೆಂದರೆ ಈ ಪ್ರದೇಶದಲ್ಲಿ 7,11,000 ಭಾರತೀಯ ಮತ್ತು ಸುಮಾರು 1,00,000 ಪಾಕಿಸ್ತಾನ ಮೂಲದ ಜನರು ವಾಸಿಸುತ್ತಿದ್ದಾರೆ ಎನ್ನಲಾಗಿದೆ. ಹೀಗಾಗಿ ಈ ಪಂದ್ಯ ಇಲ್ಲಿ ಏರ್ಪಡಿಸಲಾಗಿದೆ ಎನ್ನಲಾಗಿದೆ.

Continue Reading

ಕ್ರೀಡೆ

Virat Kohli: ‘ಕೊಹ್ಲಿ ಕೊ ಬೌಲಿಂಗ್​ ದೋ’ ನ್ಯೂಯಾರ್ಕ್​ ಸ್ಟೇಡಿಯಂನಲ್ಲಿ ಮೊಳಗಿದ ಅಭಿಮಾನಿಗಳ ಕೂಗು

Virat Kohli: ಅಭಿಮಾನಿಗಳು ವಿರಾಟ್​ ಅವರಿಗೆ ಬೌಲಿಂಗ್​ ನೀಡುವಂತೆ ಆಗ್ರಹಿಸಲು ಒಂದು ಕಾರಣವಿದೆ. ಕಳೆದ ವರ್ಷ ನಡೆದಿದ್ದ ಏಕದಿನ ವಿಶ್ವಕಪ್​ ಪಂದ್ಯದಲ್ಲಿ ಕೊಹ್ಲಿ ಬೌಲಿಂಗ್​ ನಡೆಸಿ ವಿಕೆಟ್​ ಕಿತ್ತು ಮಿಂಚಿದ್ದರು. ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಂ​ನಲ್ಲಿ ನಡೆದ ನೆದರ್ಲ್ಯಾಂಡ್ಸ್ ವಿರುದ್ಧದ ಪಂದ್ಯದಲ್ಲಿ ಕೊಹ್ಲಿ ನಾಯಕ ಸ್ಕಾಟ್ ಎಡ್ವರ್ಡ್ಸ್ ಅವರನ್ನು ಔಟ್ ಮಾಡಿದ್ದರು.

VISTARANEWS.COM


on

Virat Kohli
Koo

ನ್ಯೂಯಾರ್ಕ್​: ಟೀಮ್​ ಇಂಡಿಯಾದ(Team India) ಘಾತಕ ಬೌಲಿಂಗ್​ ದಾಳಿಗೆ ನೆಲಕಚ್ಚಿದ ಐರ್ಲೆಂಡ್(India vs Ireland)​, ಕೇವಲ 96 ರನ್​ಗೆ ಸರ್ವಪತನ ಕಂಡು ಹೀನಾಯ ಸೋಲು ಕಂಡಿತ್ತು. ಇದೇ ಪಂದ್ಯದಲ್ಲಿ ಸ್ಟಾರ್​ ಬ್ಯಾಟರ್​ ವಿರಾಟ್​ ಕೊಹ್ಲಿ(virat kohli) ಅವರಿಗೆ ಬೌಲಿಂಗ್​ ನೀಡುವಂತೆ ಪ್ರೇಕ್ಷಕರು ವಿಶೇಷವಾಗಿ ಮನವಿ ಮಾಡಿದ್ದರು. ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಈಗ ವೈರಲ್(viral video) ಆಗಿದೆ.

ಪಂದ್ಯದಲ್ಲಿ ಮೊದಲು ಬ್ಯಾಟಿಂಗ್​ ನಡೆಸಿದ ಐರ್ಲೆಂಡ್​ ತಂಡದ ಬ್ಯಾಟರ್​ಗಳು ಭಾರತೀಯ ಬೌಲರ್​ಗಳ ಬಿಗಿ ದಾಳಿಗೆ ಸತತವಾಗಿ ವಿಕೆಟ್​ ಕಳೆದುಕೊಳ್ಳುತ್ತಿದ್ದರು. ಇದನ್ನು ಗಮನಿಸಿದ ಭಾರತೀಯ ಅಭಿಮಾನಿಗಳು ಗ್ಯಾಲರಿಯಿಂದ ಜೋರಾಗಿ ಹಿಂದಿಯಲ್ಲಿ “ಕೊಹ್ಲಿ ಕೊ ಬೌಲಿಂಗ್​ ದೋ….ಕೊಹ್ಲಿ ಕೊ ಬೌಲಿಂಗ್​ ದೋ” ಎಂದು ಕೊಹ್ಲಿಗೆ ಬೌಲಿಂಗ್​ ನೀಡುವಂತೆ ಆಗ್ರಹಿಸಿದ್ದಾರೆ. ಇದರ ವಿಡಿಯೊ ವೈರಲ್​ ಆಗಿದೆ.

ಅಭಿಮಾನಿಗಳು ವಿರಾಟ್​ ಅವರಿಗೆ ಬೌಲಿಂಗ್​ ನೀಡುವಂತೆ ಆಗ್ರಹಿಸಲು ಒಂದು ಕಾರಣವಿದೆ. ಕಳೆದ ವರ್ಷ ನಡೆದಿದ್ದ ಏಕದಿನ ವಿಶ್ವಕಪ್​ ಪಂದ್ಯದಲ್ಲಿ ಕೊಹ್ಲಿ ಬೌಲಿಂಗ್​ ನಡೆಸಿ ವಿಕೆಟ್​ ಕಿತ್ತು ಮಿಂಚಿದ್ದರು. ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಂ​ನಲ್ಲಿ ನಡೆದ ನೆದರ್ಲ್ಯಾಂಡ್ಸ್ ವಿರುದ್ಧದ ಪಂದ್ಯದಲ್ಲಿ ಕೊಹ್ಲಿ ನಾಯಕ ಸ್ಕಾಟ್ ಎಡ್ವರ್ಡ್ಸ್ ಅವರನ್ನು ಔಟ್ ಮಾಡಿದ್ದರು. ಇದು 9 ವರ್ಷಗಳ ನಂತರ ಕೊಹ್ಲಿಗೆ ಲಭಿಸಿದ ವಿಕೆಟ್ ಆಗಿತ್ತು.

ಇದನ್ನೂ ಓದಿ Rohit Sharma: ಹಲವು ದಾಖಲೆಗಳ ಸರದಾರನಾದ ಹಿಟ್​ಮ್ಯಾನ್​ ರೋಹಿತ್​

ವಿರಾಟ್​ ಕೊಹ್ಲಿ ಕೂಡ ಬೌಲಿಂಗ್​ ಅನುಭವವನ್ನು ಹೊಂದಿದ್ದಾರೆ. 2015ರ ವಿಶ್ವಕಪ್​ನಲ್ಲಿ ಆಸೀಸ್​ ವಿರುದ್ಧ ಮತ್ತು ಇದಕ್ಕೂ ಮುನ್ನ 2011ರಲ್ಲಿ ನಡೆದಿದ್ದ ವಿಶ್ವಕಪ್ ಫೈನಲ್​ ಪಂದ್ಯದಲ್ಲಿ ಬೌಲಿಂಗ್​ ನಡೆಸಿದ್ದರು. ಇಲ್ಲಿ ತಲಾ ಓವರ್ ಬೌಲಿಂಗ್​ ನಡೆಸಿ ವಿಕೆಟ್​ ಪಡೆಯದಿದ್ದರೂ ಉತ್ತಮ ರನ್​ ಕಂಟ್ರೋಲ್​ ಮಾಡಿದ್ದರು. ಏಕದಿನದಲ್ಲಿ ಕೊಹ್ಲಿ 5 ವಿಕೆಟ್​, ಟಿ20 ಮತ್ತು ಐಪಿಎಲ್​ನಲ್ಲಿಯೂ ತಲಾ 4 ವಿಕಟ್​ ಪಡೆದ ಸಾಧನೆ ಮಾಡಿದ್ದಾರೆ. ಹೀಗಾಗಿ ಕೊಹ್ಲಿಗೆ ಬೌಲಿಂಗ್​ ನೀಡುವಂತೆ ಅಭಿಮಾನಿಗಳು ಆಗ್ರಹಿಸಿದ್ದಾರೆ. ಕಳೆದ ವರ್ಷ ಏಕದಿನ ವಿಶ್ವಕಪ್​ನಲ್ಲಿಯೂ ಅಭಿಮಾನಿಗಳು ಕೊಹ್ಲಿಗೆ ಬೌಲಿಂಗ್ ನೀಡುವಂತೆ ಆಗ್ರಹಿಸಿದ್ದರು.

ಐರ್ಲೆಂಡ್​ ವಿರುದ್ಧದ ಪಂದ್ಯದಲ್ಲಿ ಆರಂಭಿನಾಗಿ ಕಣಕ್ಕಿಳಿದ ಕೊಹ್ಲಿ ಕೇವಲ 1 ರನ್​ ಗಳಿಸಿ ವಿಫಲರಾದರು. ಇದಕ್ಕೂ ಮುನ್ನ ಐಪಿಎಲ್​ನಲ್ಲಿ ಕೊಹ್ಲಿ ಪ್ರಚಂಡ ಬ್ಯಾಟಿಂಗ್​ ನಡೆಸಿ ಟೂರ್ನಿಯಲ್ಲೇ ಅತ್ಯಧಿಕ ರನ್​ ಗಳಿಸಿದ ಆಟಗಾರನಾಗಿ ಹೊರಹೊಮ್ಮಿದ್ದರು. ಭಾರತ ಮುಂದಿನ ಪಂದ್ಯವನ್ನು ಪಾಕಿಸ್ತಾನ ವಿರುದ್ಧ ಆಡಲಿದೆ. ಈ ಪಂದ್ಯದಲ್ಲಿ ಕೊಹ್ಲಿಯ ಮೇಲೆ ಹೆಚ್ಚಿನ ಭರವಸೆ ಇರಿಸಲಾಗಿದೆ. ಕೊಹ್ಲಿ ಪಾಕಿಸ್ತಾನ ವಿರುದ್ಧ ಇದುವರೆಗೂ ಉತ್ತಮ ಪ್ರದರ್ಶನ ತೋರಿದ್ದಾರೆ. 2022ರಲ್ಲಿ ನಡೆದಿದ್ದ ಟಿ20 ವಿಶ್ವಕಪ್​ನಲ್ಲಿ ಕೊಹ್ಲಿ ಏಕಾಂಗಿಯಾಗಿ ಹೋರಾಡಿ ಪಾಕ್​ಗೆ ಸೋಲುಣಿಸಿದ್ದರು.

Continue Reading

ಕ್ರೀಡೆ

David Warner: ಕ್ರಿಸ್​ ಗೇಲ್​ ದಾಖಲೆ ಮುರಿದ ಡೇವಿಡ್​ ವಾರ್ನರ್​

David Warner: ಈಗಾಗಲೇ ಟೆಸ್ಟ್ ಮತ್ತು ಏಕದಿನ ಕ್ರಿಕೆಟ್​ಗೆ ವಿದಾಯ ಹೇಳಿರುವ ವಾರ್ನರ್​ ಟಿ20 ವಿಶ್ವಕಪ್​ ಬಳಿಕ ಮೂರು ಮಾದರಿಯ ಅಂತಾರಾಷ್ಟ್ರೀಯ ಕ್ರಿಕೆಟ್​ನಿಂದ ನಿವೃತ್ತಿಯಾಗಲಿದ್ದಾರೆ.

VISTARANEWS.COM


on

David Warner
Koo

ಬಾರ್ಬಡೋಸ್‌: ಆಸ್ಟ್ರೇಲಿಯಾದ ಆರಂಭಿಕ ಆಟಗಾರ ಡೇವಿಡ್​ ವಾರ್ನರ್​(David Warner) ಅವರು ಇಂದು(ಗುರವಾರ) ನಡೆದ ಒಮಾನ್​ ವಿರುದ್ಧದ ಪಂದ್ಯದಲ್ಲಿ ಅರ್ಧಶತಕ ಬಾರಿಸುವ ಮೂಲಕ ಟಿ20 ಕ್ರಿಕೆಟ್​ನಲ್ಲಿ(T20 World Cup 2024) ದಾಖಲೆಯೊಂದನ್ನು ಬರೆದಿದ್ದಾರೆ. ಈ ಮೂಲಕ ಕ್ರಿಸ್​ ಗೇಲ್(Chris Gayle)​ ದಾಲೆಯನ್ನು ಮುರಿದಿದ್ದಾರೆ.

ಒಮಾನ್​ ವಿರುದ್ಧ ವಾರ್ನರ್​ 51 ಎಸೆತ ಎದುರಿಸಿ 6 ಬೌಂಡರಿ ಮತ್ತು 1 ಸಿಕ್ಸರ್​ ನೆರವಿನಿಂದ 56 ರನ್​ ಬಾರಿಸಿ ಅರ್ಧಶತಕ ಪೂರ್ತಿಗೊಳಿಸಿದರು. ಇದೇ ವೇಳೆ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ಅರ್ಧಶತಕ ಬಾರಿಸಿದ ಆಟಗಾರನಾಗಿ ಹೊರಹೊಮ್ಮಿದರು. ಇದು ವಾರ್ನರ್​ ಅವರ 111ನೇ ಟಿ20 ಅರ್ಧಶತಕ. ಇದಕ್ಕೂ ಮುನ್ನ ಈ ದಾಖಲೆ ವೆಸ್ಟ್​ ಇಂಡೀಸ್​ ತಂಡದ ಮಾಜಿ ಆಟಗಾರ ಕ್ರಿಸ್​ ಗೇಲ್​ ಗೆಸರಿನಲ್ಲಿತ್ತು. ಗೇಲ್​ 110 ಅರ್ಧಶತಕ ಬಾರಿಸಿದ್ದಾರೆ.

ಈಗಾಗಲೇ ಟೆಸ್ಟ್ ಮತ್ತು ಏಕದಿನ ಕ್ರಿಕೆಟ್​ಗೆ ವಿದಾಯ ಹೇಳಿರುವ ವಾರ್ನರ್​ ಟಿ20 ವಿಶ್ವಕಪ್​ ಬಳಿಕ ಮೂರು ಮಾದರಿಯ ಅಂತಾರಾಷ್ಟ್ರೀಯ ಕ್ರಿಕೆಟ್​ನಿಂದ ನಿವೃತ್ತಿಯಾಗಲಿದ್ದಾರೆ. ಇದೇ ವರ್ಷ ನಡೆದಿದ್ದ ಐಪಿಎಲ್​ನಲ್ಲಿ ನಿರೀಕ್ಷಿತ ಪ್ರದರ್ಶನ ಮತ್ತು ಸರಿಯಾಗಿ ಆಡುವ ಅವಕಾಶ ಸಿಗದ ವಾರ್ನರ್​ ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಆಡಿದ ಮೊದಲ ಪಂದ್ಯದಲ್ಲೇ ಅಮೋಘ ಬ್ಯಾಟಿಂಗ್​ ನಡೆಸಿ ಗಮನಸೆಳೆದರು.

ಇದನ್ನೂ ಓದಿ David Warner : ಬಾಹುಬಲಿ ರಾಜಮೌಳಿ ನಿರ್ದೇಶನದಲ್ಲಿ ಕ್ರಿಕೆಟಿಗ ಡೇವಿಡ್​ ವಾರ್ನರ್ ಆ್ಯಕ್ಟಿಂಗ್​; ಇಲ್ಲಿದೆ ವಿಡಿಯೊ

ಡ್ರೆಸ್ಸಿಂಗ್​ ರೂಮ್​ ಮರೆತ ವಾರ್ನರ್​


ಇದೇ ಪಂದ್ಯದಲ್ಲಿ ವಾರ್ನರ್​ ಅವರು ಔಟ್​ ಆಗಿ ತಮ್ಮ ತಂಡದ ಡ್ರೆಸ್ಸಿಂಗ್​ ರೋಮ್​ಗೆ ತೆರಳುವ ಬದಲು ಎದುರಾಳಿ ಒಮಾನ್ ತಂಡದ ಡ್ರೆಸ್ಸಿಂಗ್​ ರೂಮ್​ಗೆ ತೆರಳಿದ ಪ್ರಸಂಗವೂ ನಡೆಯಿತು. ಮೆಟ್ಟಿಲೇರುತ್ತಾ ಒಮಾನ್​ ಡ್ರೆಸ್ಸಿಂಗ್​ ಕೋಣೆಗೆ ತೆರಳುತ್ತಿದ್ದ ವಾರ್ನರ್​ ಅವರನ್ನು ತಮ್ಮ ತಂಡದ ಸಹ ಆಟಗಾರರು ಜೋರಾಗಿ ಕರೆದು ಅದು ನಮ್ಮ ಕೊಠಡಿಯಲ್ಲ ಎಂದು ಹೇಳಿದ್ದಾರೆ. ಬಳಿಕ ವಾರ್ನರ್​ ತಂಡದ ಡ್ರೆಸ್ಸಿಂಗ್​ ರೂಮ್​ಗೆ ತೆರಳಿದರು. ಇದರ ವಿಡಿಯೊ ವೈರಲ್​ ಆಗಿದೆ.

ಪಂದ್ಯ ಗೆದ್ದ ಆಸ್ಟ್ರೇಲಿಯಾ


ಮಾಜಿ ಚಾಂಪಿಯನ್​ ಆಸ್ಟ್ರೇಲಿಯಾ ತಂಡ ಒಮಾನ್​ ವಿರುದ್ಧ 39 ರನ್​ಗಳ ಪ್ರಯಾಸದ ಗೆಲುವು ಸಾಧಿಸಿ ಟೂರ್ನಿಯಲ್ಲಿ ಶುಭಾರಂಭ ಕಂಡಿದೆ. ಟಾಸ್​ ಸೋತು ಬ್ಯಾಟಿಂಗ್​ಗೆ ಇಳಿಸಲ್ಪಟ್ಟ ಆಸ್ಟ್ರೇಲಿಯಾ ನಿಗದಿತ 20 ಓವರ್​ಗಳಲ್ಲಿ 5 ವಿಕೆಟ್​ಗೆ 164 ರನ್​ ಬಾರಿಸಿತು. ಆಸೀಸ್​ ತಂಡದ ಸಾಮರ್ಥ್ಯಕ್ಕೆ ಇದು ಕನಿಷ್ಠ ಮೊತ್ತ. ಜವಾಬಿತ್ತ ಒಮಾನ್​ ಉತ್ತಮ ಪೈಪೋಟಿ ನೀಡಿ 9 ವಿಕೆಟ್​ಗೆ 125 ರನ್​ ಗಳಿಸಿ ಸಣ್ಣ ಅಂತರದ ಸೋಲು ಕಂಡಿತು.

ಒಮಾನ್​ ಉತ್ತಮ ಬೌಲಿಂಗ್​ ದಾಳಿ ನಡೆಸಿದರೂ ಕೂಡ ಬ್ಯಾಟಿಂಗ್​ನಲ್ಲಿ ವಿಫಲವಾಯಿತು. ಸೋಲು ಕಂಡರೂ ಕೂಡ ಬಲಿಷ್ಠ ಆಸ್ಟ್ರೇಲಿಯಾದಂತಹ ತಂಡಕ್ಕೆ ತೀವ್ರ ಪೈಪೋಟಿ ನೀಡಿದನ್ನು ಮಾತ್ರ ಮೆಚ್ಚಲೇ ಬೇಕು. ಒಮಾನ್​ ಪರ ಮೆಹ್ರಾನ್ ಖಾನ್ 2 ವಿಕೆಟ್​ ಕಿತ್ತರು. ಆಸೀಸ್​ ಪರ ಸ್ಪಿನ್ನರ್​ ಝಾಂಪ (20), ಮಾರ್ಕಸ್​ ಸ್ಟೋಯಿನಿಸ್​(3) ಮಿಚೆಲ್​ ಸ್ಟಾರ್ಕ್​(2) ಮತ್ತು ನಥಾನ್​ ಎಲ್ಲಿಸ್​(2) ವಿಕೆಟ್​ ಕಿತ್ತರು.

Continue Reading

ಕ್ರೀಡೆ

T20 World Cup 2024: ನಸೌ ಪಿಚ್​ ಬಗ್ಗೆ ಕಳವಳ ವ್ಯಕ್ತಪಡಿಸಿದ ಟೀಮ್​ ಇಂಡಿಯಾ ಆಟಗಾರರು

T20 World Cup 2024: ಡ್ರಾಪ್​ ಇನ್​ ಪಿಚ್​ ಅಷ್ಟು ಯೋಗ್ಯವಾಗಿಲ್ಲ. ಬಿರುಕುಗಳು ಅಧಿಕವಾಗಿದೆ. ಬೌಲರ್​ಗಳಿಗೆ ಅನುಕೂಲಕರವಾಗಿದ್ದರೂ ಕೂಡ ಬ್ಯಾಟರ್​ಗಳಿಗೆ ಇದು ಸೂಕ್ತವಾಗಿಲ್ಲ. ಚೆಂಡಿನ ಚಲನೆಯನ್ನು ಸರಿಯಾಗಿ ಗ್ರಹಿಸಿಕೊಳ್ಳಲು ಆಗುತ್ತಿಲ್ಲ. ಇದೇ ಕಾರಣಕ್ಕೆ ನಾನು ಗಾಯಗೊಂಡೆ ಎಂದು ರೋಹಿತ್​ ಈ ಪಿಚ್​ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.

VISTARANEWS.COM


on

T20 World Cup 2024
Koo

ನ್ಯೂಯಾರ್ಕ್​: ಐರ್ಲೆಂಡ್​(India vs Ireland) ವಿರುದ್ಧ ಗೆದ್ದು ಶುಭಾರಂಭ ಕಂಡಿರುವ ಭಾರತ ತಂಡ ಮುಂದಿನ ಪಂದ್ಯವನ್ನು ಪಾಕಿಸ್ತಾನ ವಿರುದ್ಧ ಆಡಲಿದೆ. ಆದರೆ, ಈ ಪಂದ್ಯಕ್ಕೂ ಮುನ್ನ ಭಾರತೀಯ ಆಟಗಾರರಿಗೆ(T20 World Cup 2024) ಅಪಾಯಕಾರಿ ನಸೌ ಪಿಚ್​ ಬಗ್ಗೆ ಭೀತಿ ಕಾಡಿದೆ. ಈಗಾಗಲೇ ಈ ಪಿಚ್​ ಬಗ್ಗೆ ಹಲವುರು ಅಸಮಾಧಾನ ಹೊರಹಾಕಿದ್ದರು. ನಿನ್ನೆ(ಬುಧವಾರ) ನಡೆದ ಪಂದ್ಯದಲ್ಲಿ ನಾಯಕ ರೋಹಿತ್(Rohit Sharma) ​ತೋಳಿನ ಮಾಂಸಖಂಡಕ್ಕೆ ಚೆಂಡು ತಗುಲಿ ಅರ್ಧದಲ್ಲೇ ಬ್ಯಾಟಿಂಗ್​ ಮೊಟಕುಗೊಳಿಸಿದ್ದರು. ಸದ್ಯ ಗಾಯದ ಪ್ರಮಾಣ ಸಣ್ಣ ಮಟ್ಟದಿಂದ ಕೂಡಿದ್ದು ಮುಂದಿನ ಪಂದ್ಯಕ್ಕೆ ಕಣಕ್ಕಿಳಿಯಲಿದ್ದಾರೆ.

ಪಂದ್ಯದ ಬಳಿಕ ಮಾತನಾಡಿದ ರೋಹಿತ್​ ಶರ್ಮ, ಇಲ್ಲಿನ ಡ್ರಾಪ್​ ಇನ್​ ಪಿಚ್​ ಅಷ್ಟು ಯೋಗ್ಯವಾಗಿಲ್ಲ. ಬಿರುಕುಗಳು ಅಧಿಕವಾಗಿದೆ. ಬೌಲರ್​ಗಳಿಗೆ ಅನುಕೂಲಕರವಾಗಿದ್ದರೂ ಕೂಡ ಬ್ಯಾಟರ್​ಗಳಿಗೆ ಇದು ಸೂಕ್ತವಾಗಿಲ್ಲ. ಚೆಂಡಿನ ಚಲನೆಯನ್ನು ಸರಿಯಾಗಿ ಗ್ರಹಿಸಿಕೊಳ್ಳಲು ಆಗುತ್ತಿಲ್ಲ. ಇದೇ ಕಾರಣಕ್ಕೆ ನಾನು ಗಾಯಗೊಂಡೆ. ಈಗ ಚೇತರಿಸಿಕೊಂಡಿದ್ದೇನೆ. ಟಾಸ್​ ಗೆದ್ದು ಫೀಲ್ಡಿಂಗ್​ ಆಯ್ದುಕೊಂಡದ್ದು ಕೂಡ ಪಿಚ್​ ವರ್ತನೆಯನ್ನು ಅರಿಯುವ ಉದ್ದೇಶದಿಂದ. ಆದರೆ ಈ ಪಿಚ್​ ವರ್ತನೆ ಅರ್ಥೈಸುವುದು ಅಷ್ಟು ಸುಲಭವಾಗಿಲ್ಲ” ಎಂದರು.

‘ಇದು ಹೊಸ ಪಿಚ್ ಆಗಿದ್ದು, ಉತ್ತಮವಾದ ಹುಲ್ಲಿನ ಹೊದಿಕೆ ಇದೆ. ಆದರೆ, ಅದರೊಂದಿಗೆ ದೊಡ್ಡ ಬಿರುಕುಗಳೂ ಇವೆ. ಇದರಿಂದ ಚೆಂಡಿನ ಬೌನ್ಸ್ ಕುಗ್ಗುತ್ತದೆ. ಈ ರೀತಿಯ ಪಿಚ್‌ಗಳಲ್ಲಿ ಅಭ್ಯಾಸ ಪಂದ್ಯಗಳನ್ನು ನಡೆಸಿ ಇದನ್ನು ಸೆಟ್ ಮಾಡಬೇಕು​. ಬಳಿಕ, ದೊಡ್ಡ ಪಂದ್ಯಗಳನ್ನು ಆಯೋಜಿಸಬೇಕು. ಎಲ್ಲ 4 ಪಿಚ್‌ಗಳು ಇದೇ ರೀತಿ ಆಗಿದ್ದು, ಟಿ-20 ಟೂರ್ನಿಗೆ ಯೋಗ್ಯವಲ್ಲ’ ಎಂದು ಕ್ರಿಕೆಟ್​ ವಿಶ್ಲೇಷಕರೊಬ್ಬರು ಹೇಳಿದ್ದಾರೆ. ಆಸ್ಟ್ರೇಲಿಯಾದಿಂದ ತರಿಸಿದ ಡ್ರಾಪ್ ಇನ್ ಪಿಚ್‌ ಇದಾಗಿದೆ.

ಇದನ್ನೂ ಓದಿ India vs Ireland: ಪಂಜಾಬಿ ಪುಟ್ಟ ಪೋರನಿಂದ ಚಿನ್ನದ ಪದಕ ಪಡೆದ ಮೊಹಮ್ಮದ್​ ಸಿರಾಜ್

ಪಾಕಿಸ್ತಾನ ಮತ್ತು ಭಾರತ ತಂಡದ ಪರ ಘಾತಕ ಬೌಲರ್​ಗಳು ಇರುವ ಕಾರಣ ಉಭಯ ತಂಡಗಳ ಬ್ಯಾಟರ್​ಗಳಿಗೆ ಇಲ್ಲಿ ಆಡುವುದೇ ಸವಾಲಾಗಿ ಪರಿಣಮಿಸಿದೆ. ಬ್ಯಾಟರ್​ಗಳು ಗಾಯಗೊಳ್ಳುವ ಸಾಧ್ಯತೆ ಅಧಿಕವಾಗಿದೆ. ಅದರಲ್ಲೂ ಸ್ಟಾರ್​ ಬ್ಯಾಟರ್​ಗಳು ಗಾಯಗೊಂಡು ಟೂರ್ನಿಯಿಂದ ಹೊರಬಿದ್ದರೆ ತಂಡಕ್ಕೆ ದೊಡ್ಡ ನಷ್ಟವಾಗಲಿದೆ. ಹೀಗಾಗಿ ಎಲ್ಲ ತಂಡದ ಬ್ಯಾಟರ್​ಗಳು ಕೂಡ ಜಾಗರೂಕರಾಗಿ ಆಡಬೇಕಿದೆ. ಈ ಸ್ಟೇಡಿಯಂ ಅನ್ನು ಕೇವಲ ಮೂರು ತಿಂಗಳಲ್ಲಿ ನಿರ್ಮಾಣ ಮಾಡಲಾಗಿತ್ತು.

34 ಸಾವಿರ ಪ್ರೇಕ್ಷಕರು ಕೂರುವಷ್ಟು ಸಾಮರ್ಥ್ಯದ ಸ್ಟೇಡಿಯಂ ಇದಾಗಿದ್ದು. ಭಾರತ-ಪಾಕ್​ ಪಂದ್ಯಕ್ಕಾಗಿಯೇ ಇದನ್ನು ತಾತ್ಕಾಲಿಕವಾಗಿ ನಿರ್ಮಿಸಲಾಗಿದೆ. ಪಂದ್ಯದ ನಂತರ ಇದನ್ನು ಕೆಡವಲಾಗುತ್ತದೆ ಎಂದು ತಿಳಿಸಲಾಗಿದೆ. ಭಾರತ ಮತ್ತು ಪಾಕ್​ ನಡುವಣ ಪಂದ್ಯ ನ್ಯೂಯಾರ್ಕ್‌ನಲ್ಲಿಯೇ ನಡೆಸಲು ಕಾರಣವೂ ಕೂಡ ಇದೆ. ಏಕೆಂದರೆ ಈ ಪ್ರದೇಶದಲ್ಲಿ 7,11,000 ಭಾರತೀಯ ಮತ್ತು ಸುಮಾರು 1,00,000 ಪಾಕಿಸ್ತಾನ ಮೂಲದ ಜನರು ವಾಸಿಸುತ್ತಿದ್ದಾರೆ ಎನ್ನಲಾಗಿದೆ.

Continue Reading
Advertisement
Gadag News
ಕರ್ನಾಟಕ31 mins ago

Gadag News : ಕ್ಷುಲ್ಲಕ ಕಾರಣಕ್ಕೆ ಗಲಾಟೆ, ಮನೆಗಳಿಗೆ ನುಗ್ಗಿ ದೊಣ್ಣೆ, ಬಡಿಗೆಗಳಿಂದ ಹಲ್ಲೆ

Rain News
ಕರ್ನಾಟಕ1 hour ago

Rain News: ಪ್ರತ್ಯೇಕ ಮಳೆ ಅವಘಡ; ಸಿಡಿಲು ಬಡಿದು ಬಾಲಕ, ಮಹಿಳೆ ದುರ್ಮರಣ

Disciplinary action if cases of mother and child deaths recur DC Diwakar warns
ಆರೋಗ್ಯ2 hours ago

Vijayanagara News: ತಾಯಿ, ಶಿಶು ಮರಣ ಪ್ರಕರಣ ಮರುಕಳಿಸಿದರೆ ಶಿಸ್ತು ಕ್ರಮ: ಡಿಸಿ ದಿವಾಕರ್

BJP State Spokesperson Hariprakash konemane pressmeet at yallapura
ಕರ್ನಾಟಕ2 hours ago

Uttara Kannada News: ಉ.ಕ ಜಿಲ್ಲೆ ಬಿಜೆಪಿಯ ಗಟ್ಟಿನೆಲ ಎಂಬುದು ಮತ್ತೊಮ್ಮೆ ಸಾಬೀತು: ಹರಿಪ್ರಕಾಶ್‌ ಕೋಣೆಮನೆ

Trekking tragedy
ಬೆಂಗಳೂರು2 hours ago

Trekking Tragedy: ಉತ್ತರಾಖಂಡ ಚಾರಣ ದುರಂತದಲ್ಲಿ ಪಾರಾದ 13 ಚಾರಣಿಗರು ಬೆಂಗಳೂರಿಗೆ ವಾಪಸ್

Unemployment Rate
ಪ್ರಮುಖ ಸುದ್ದಿ2 hours ago

Unemployment Rate : ಭಾರತದಲ್ಲಿ ನಿರುದ್ಯೋಗ ಸಮಸ್ಯೆ ಒಂದೇ ವರ್ಷದಲ್ಲಿ ಶೇಕಡಾ 4 ಇಳಿಕೆ; ವರದಿ

Lok Sabha Election
ಪ್ರಮುಖ ಸುದ್ದಿ2 hours ago

Lok Sabha Election : ಶತಕ ಬಾರಿಸಿದ ಕಾಂಗ್ರೆಸ್​​; ಪಕ್ಷೇತರನ ಬೆಂಬಲದೊಂದಿಗೆ ಕಾಂಗ್ರೆಸ್​ನ ಸೀಟ್​ಗಳ ಸಂಖ್ಯೆ 100ಕ್ಕೆ ಏರಿಕೆ

Valmiki Corporation Scam
ಕರ್ನಾಟಕ2 hours ago

Valmiki Corporation Scam: ಸಿಎಂ ಸಿದ್ದರಾಮಯ್ಯಗೆ ರಾಜೀನಾಮೆ ಪತ್ರ ಸಲ್ಲಿಸಿದ ಬಿ.ನಾಗೇಂದ್ರ

Kangana Ranaut
ಪ್ರಮುಖ ಸುದ್ದಿ2 hours ago

Kangana Ranaut : ಪಂಜಾಬ್​ನಲ್ಲಿ ಭಯೋತ್ಪಾದನೆ ಹೆಚ್ಚುತ್ತಿದೆ; ತಮ್ಮ ಮೇಲೆ ಹಲ್ಲೆ ನಡೆಸಿದ ಬಗ್ಗೆ ಕಂಗನಾ ಪ್ರತಿಕ್ರಿಯೆ ಹೀಗಿತ್ತು

Kangana Ranaut
ಪ್ರಮುಖ ಸುದ್ದಿ3 hours ago

Kangana Ranaut: ಕಂಗನಾಗೆ ಮಹಿಳಾ ಪೇದೆ ಹೊಡೆಯಲು ಕಾರಣವೇನು? ರೈತರ ಬಗ್ಗೆ ಅವರು ನೀಡಿದ ವಿವಾದಾತ್ಮಕ ಹೇಳಿಕೆ ಏನು?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ10 hours ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ3 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ3 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ3 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ5 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು5 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ1 week ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ1 week ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 week ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ1 week ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

ಟ್ರೆಂಡಿಂಗ್‌