PM Modi at Ahmedabad : ಕ್ರಿಕೆಟ್​ ರಾಜತಾಂತ್ರಿಕತೆ; ಮೊಟೆರಾದಲ್ಲಿ ಮೋದಿ, ಆಂಟೋನಿ ಮಿಂಚು - Vistara News

ಕ್ರಿಕೆಟ್

PM Modi at Ahmedabad : ಕ್ರಿಕೆಟ್​ ರಾಜತಾಂತ್ರಿಕತೆ; ಮೊಟೆರಾದಲ್ಲಿ ಮೋದಿ, ಆಂಟೋನಿ ಮಿಂಚು

ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವಿನ ಅಹಮದಾಬಾದ್ ಟೆಸ್ಟ್​ ಪಂದ್ಯವನ್ನು ಪ್ರಧಾನಿ ನರೇಂದ್ರ ಮೋದಿ ಹಾಗೂ ಆಸ್ಟ್ರೇಲಿಯಾ ಪ್ರಧಾನಿ ಆಲ್ಬನೀಸ್ (PM Modi at Ahmedabad)​ ವೀಕ್ಷಿಸಿದರು.

VISTARANEWS.COM


on

Cricket Diplomacy; Modi, Antony in Motera
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಅಹಮದಾಬಾದ್​: ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವಿನ ನಾಲ್ಕನೇ ಹಾಗೂ ಕೊನೇ ಟೆಸ್ಟ್​ ಪಂದ್ಯ ಎರಡೂ ದೇಶಗಳ ಕ್ರಿಕೆಟ್​ ರಾಜತಾಂತ್ರಿಕತೆಗೆ ಸಾಕ್ಷಿಯಾಯಿತು. ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಇದೇ ಮೊದಲ ಬಾರಿಗೆ ಭಾರತಕ್ಕೆ ಆಗಮಿಸಿದ ಆಸ್ಟ್ರೇಲಿಯಾ ಪ್ರಧಾನಿ ಆಂಟೋನಿ ಆಲ್ಬನೀಸ್​ ಪಂದ್ಯದ ಮೊದಲ ದಿನ ಅಹಮದಾಬಾದ್​ನ ಮೊಟೆರಾ ಸ್ಟೇಡಿಯಮ್​ನಲ್ಲಿ ಉಪಸ್ಥಿತರಿದ್ದರು. ಎರಡೂ ದೇಶಗಳ ಗಣ್ಯರು ಹಾಗೂ ಉದ್ಯಮಿಗಳು ತಮ್ಮ ತಮ್ಮ ರಾಷ್ಟ್ರ ನಾಯಕರ ಜತೆ ಹಾಜರಿದ್ದರು.

ಪಂದ್ಯ ಆರಂಭಗೊಳ್ಳುವ ಮೊದಲು ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಆಸ್ಟ್ರೇಲಿಯಾ ಪ್ರಧಾನಿ ಆಲ್ಬನೀಸ್​ ಸ್ಟೇಡಿಯಮ್​ಗೆ ಆಗಮಿಸಿದರು. ಮೈದಾನದಲ್ಲಿ ಬಿಸಿಸಿಐ ಅಧಿಕಾರಿಗಳು ಹಾಗೂ ಸ್ಥಳೀಯ ಗಣ್ಯರಿಂದ ಗೌರವ ಸ್ವೀಕರಿಸಿದ ಅವರು ಬಳಿಕ ನಡೆದ ಕಾರ್ಯಕ್ರಮದಲ್ಲಿ ಕ್ರಿಕೆಟ್​ ತಂಡದ ನಾಯಕರಿಗೆ ಟೋಪಿ ಹಸ್ತಾಂತರಿಸಿದರು. ಪ್ರಧಾನಿ ಮೋದಿ ಅವರು ರೋಹಿತ್​ ಶರ್ಮಗೆ ಟೋಪಿ ನೀಡಿದರೆ, ಆಲ್ಬನೀಸ್​ ಆಸ್ಟ್ರೇಲಿಯಾ ತಂಡದ ನಾಯಕ ಸ್ಟೀವ್​ಸ್ಮಿತ್​ಗೆ ಕ್ಯಾಪ್​ ಕೊಟ್ಟರು.

ಎರಡೂ ದೇಶಗಳ ಪ್ರಧಾನಿಗಳು ಸ್ಮರಣೀಯ ಫೋಟೋಗಳಿಗೆ ಪೋಸ್ ಕೊಟ್ಟರು. ಇದೇ ವೇಳೆ ಮಾಜಿ ಕೋಚ್​ ಹಾಗೂ ವೀಕ್ಷಕ ವಿವರಣೆಗಾರ ರವಿಶಾಸ್ತ್ರಿ ಅವರು ಪ್ರಧಾನಿಗಳ ಉಪಸ್ಥಿತಿಯ ಮಹತ್ವವನ್ನು ವಿವರಿಸಿದರು.

ತಮ್ಮಿಬ್ಬರ ಸೆಲ್ಫಿಯನ್ನು ಸೋಶಿಯಲ್​ ಮೀಡಿಯಾದಲ್ಲಿ ಶೇರ್​ ಮಾಡಿಕೊಂಡ ಆಸ್ಟ್ರೇಲಿಯಾ ಪ್ರಧಾನಿ ಆಲ್ಬನೀಸ್​ ಅವರು, 75 ವರ್ಷಗಳ ಗೆಳೆತನದ ಪ್ರತೀಕ ಎಂದು ಬರೆದುಕೊಂಡಿದ್ದಾರೆ. ಪಂದ್ಯದ ಮೊದಲ ದಿನ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ವೀಕ್ಷಕ ವಿವರಣೆ ನೀಡಿದ್ದು ವಿಶೇಷ.

ಪ್ರಧಾನಿ ಮೋದಿಯ ಭೇಟಿ ಸಂದರ್ಭದ ಚಿತ್ರಗಳು

ಅದಕ್ಕೂ ಮೊದಲು ಎರಡೂ ದೇಶಗಳ ಪ್ರಧಾನಿಗಳು ಗಾಲ್ಫ್​ ಕಾರ್​ ಮೇಲೆ ನಿಂತು ಮೈದಾನಕ್ಕೊಂದು ಸುತ್ತು ಹೊಡೆದರು. ಸಾವಿರಾರ ಪ್ರೇಕ್ಷಕರು ಕರತಾಡನದ ಮೂಲಕ ತಮ್ಮ ದೇಶದ ನಾಯಕರಿಗೆ ಅಭಿನಂದನೆ ಸಲ್ಲಿಸಿದರು. ನಾಯಕರ ಭೇಟಿ ಹಿನ್ನೆಲೆಯಲ್ಲಿ ಮೈದಾನಕ್ಕೆ ಎಸ್​ಪಿಜಿ ಭದ್ರತೆ ಒದಗಿಸಲಾಗಿತ್ತು. ಸುಮಾರು 1 ಲಕ್ಷ ಕ್ರಿಕೆಟ್ ಅಭಿಮಾನಿಗಳು ಮೊದಲ ದಿನ ಪಂದ್ಯ ವೀಕ್ಷಣೆ ಮಾಡಲಿದ್ದಾರೆ.

ಇದನ್ನೂ ಓದಿ : ಪ್ರಧಾನಿ ಮೋದಿ ಪ್ರಕಾರ ಮಹಿಳೆಯರು ಬರೀ ಗೃಹಿಣಿಯರಲ್ಲ, ರಾಷ್ಟ್ರ ನಿರ್ಮಾಣದ ರೂವಾರಿಗಳು; ವಿಡಿಯೊ ಸಂದೇಶ ಕೊಟ್ಟ ರುಚಿರಾ ಕಾಂಬೋಜ್

ಪ್ರಧಾನಿ ಮೋದಿ ಅವರ ಆಹ್ವಾನದ ಮೇರೆಗೆ ಆಸ್ಟ್ರೇಲಿಯಾ ಪ್ರಧಾನಿ ಆಂಟೋನಿ ಆಲ್ಬನೀಸ್​ ಭಾರತಕ್ಕೆ ಭೇಟಿ ಕೊಟ್ಟಿದ್ದಾರೆ. ಸ್ಟೇಡಿಯಮ್​ನಿಂದ ನಿರ್ಗಮಿಸಲಿರುವ ಎರಡೂ ದೇಶಗಳ ನಾಯಕರು ಅಹಮದಾಬಾದ್​ನಲ್ಲಿ ನಡೆಯಲಿರುವ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

IPL 2024 : ನಾಯಕರಾಗಿ ನೀವೇನು ಮಾಡಿದ್ರಿ? ಪಾಂಡ್ಯನನ್ನು ಟೀಕಿಸಿದ್ದ ವಿಲಿಯರ್ಸ್​ಗೆ ತಿರುಗೇಟು ಕೊಟ್ಟ ಗಂಭೀರ್​

IPL 2024: ಕೋಲ್ಕತಾ ನೈಟ್ ರೈಡರ್ಸ್ ತಂಡದ ಮೆಂಟರ್ ಗೌತಮ್ ಗಂಭೀರ್ ಅವರು ಇದೀಗ ಆಲ್​ರೌಂಡರ್​ ಪಾಂಡ್ಯ ಬೆಂಬಲಕ್ಕೆ ನಿಂತಿದ್ದಾರೆ. ಅವರು ಎಬಿ ಡಿವಿಲಿಯರ್ಸ್ ಮತ್ತು ಪೀಟರ್ಸನ್ ವಿರುದ್ಧ ವಾಗ್ದಾಳಿ ನಡೆಸಿದ್ದು, ಅವರಿಬ್ಬರ ಹೇಳಿಕೆಗಳು ಸರಿಯಲ್ಲ ಎಂದು ಹೇಳಿದ್ದಾರೆ. ಆ ರೀತಿ ಹೇಳುವುದಕ್ಕೆ ನಾಯಕರಾಗಿ ಅವರಿಬ್ಬರ ಟ್ರ್ಯಾಕ್ ರೆಕಾರ್ಡ್ ಎಷ್ಟಿದೆ ಎಂಬುದನ್ನು ಪ್ರಶ್ನಿಸಿದ್ದಾರೆ.

VISTARANEWS.COM


on

IPL 2024
Koo

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ 2024 ರಲ್ಲಿ (IPL 2024) ಮುಂಬೈ ಇಂಡಿಯನ್ಸ್ ತಂಡದ ನಾಯಕನಾಗಿ ಹಾರ್ದಿಕ್ ಪಾಂಡ್ಯ (Hardik Pandya) ವಿಫಲಗೊಂಡಿದ್ದಾರೆ. ಪ್ಲೇ ಆಫ್ ರೇಸ್ ನಿಂದ ಹೊರಗುಳಿದ ಮೊದಲ ತಂಡ ಎಂಬ ಕುಖ್ಯಾತಿಗೆ ಮುಂಬಯಿ ತಂಡ ಪಾತ್ರವಾಗಿದೆ. ಹಾರ್ದಿಕ್ ಪಾಂಡ್ಯ ನಾಯಕನಾ ಬಳಿಕದಿಂದ ಅವರು ಸಾಕಷ್ಟು ಅವಮಾನಗಳನ್ನು ಎದುರಿಸಿದ್ದಾರೆ. ಅಭಿಮಾನಿಗಳ ಕೀಟಲೆಗಳ ಜತೆಗೆ ಅನೇಕ ಹಿರಿಯ ಆಟಗಾರರ ಮೂದಲಿಕೆಗಳನ್ನೂ ಕೇಳುವಂತಾಗಿದೆ. ಇಂಗ್ಲೆಂಡ್​ನ ಮಾಜಿ ಆಟಗಾರ ಕೆವಿನ್ ಪೀಟರ್ಸನ್ ಮತ್ತು ದಕ್ಷಿಣ ಆಫ್ರಿಕಾದ ಎಬಿ ಡಿವಿಲಿಯರ್ಸ್ ಹಾರ್ದಿಕ್ ನಾಯಕತ್ವದ ಶೈಲಿಯನ್ನು ಸತತವಾಗಿ ಪ್ರಶ್ನಿಸಿದ್ದರು. ತಮ್ಮ ತಂಡದ ವೈಫಲ್ಯಕ್ಕೆ ಹಾರ್ದಿಕ್ ಕಾರಣ ಎಂದು ಇಬ್ಬರೂ ಷರಾ ಬರೆದಿದ್ದರು.

ಕೋಲ್ಕತಾ ನೈಟ್ ರೈಡರ್ಸ್ ತಂಡದ ಮೆಂಟರ್ ಗೌತಮ್ ಗಂಭೀರ್ ಅವರು ಇದೀಗ ಆಲ್​ರೌಂಡರ್​ ಪಾಂಡ್ಯ ಬೆಂಬಲಕ್ಕೆ ನಿಂತಿದ್ದಾರೆ. ಅವರು ಎಬಿ ಡಿವಿಲಿಯರ್ಸ್ ಮತ್ತು ಪೀಟರ್ಸನ್ ವಿರುದ್ಧ ವಾಗ್ದಾಳಿ ನಡೆಸಿದ್ದು, ಅವರಿಬ್ಬರ ಹೇಳಿಕೆಗಳು ಸರಿಯಲ್ಲ ಎಂದು ಹೇಳಿದ್ದಾರೆ. ಆ ರೀತಿ ಹೇಳುವುದಕ್ಕೆ ನಾಯಕರಾಗಿ ಅವರಿಬ್ಬರ ಟ್ರ್ಯಾಕ್ ರೆಕಾರ್ಡ್ ಎಷ್ಟಿದೆ ಎಂಬುದನ್ನು ಪ್ರಶ್ನಿಸಿದ್ದಾರೆ.

ಈ ಇಬ್ಬರು ನಾಯಕರಾಗಿದ್ದ ವೇಳೆ ಅವರು ಉತ್ತಮ ಪ್ರದರ್ಶನ ನೀಡಿರಲಿಲ್ಲ. ಕೆವಿನ್ ಪೀಟರ್ಸನ್ ಮತ್ತು ಎಬಿ ಡಿವಿಲಿಯರ್ಸ್ ನಾಯಕರಾಗಿ ಗಮನಾರ್ಹವಾಗಿ ಏನನ್ನೂ ಸಾಧಿಸಿಲ್ಲ. ನೀವು ಅವರ ದಾಖಲೆಗಳನ್ನು ಮೊದಲು ನೋಡಿಕೊಳ್ಳಿ. ಅದು ಚೆನ್ನಾಗಿದ್ದರೆ ಉಳಿದವರ ದಾಖಲೆಗಳನ್ನು ವಿಮರ್ಶೆ ಮಾಡುವುದು ಸೂಕ್ತ ಎಂದು ಗಂಭೀರ್ ಟೀಕಿಸಿದ್ದಾರೆ.

ಇದನ್ನೂ ಓದಿ: Team India New Head Coach: ಭಾರತ ತಂಡಕ್ಕೆ ಆಸೀಸ್ ಮಾಜಿ​ ಆಟಗಾರ ಕೋಚ್​ ಆಗುವುದು ನಿಶ್ಚಿತ

ಐಪಿಎಲ್​​ನಲ್ಲಿ ಎಬಿ ಡಿವಿಲಿಯರ್ಸ್ ಎಂದಿಗೂ ನಾಯಕತ್ವ ವಹಿಸಿಲ್ಲ. ಎಬಿಡಿ ಸಾಧನೆ ಎಂದರೆ ಸ್ವಂತ ಸ್ಕೋರ್​ಗಳು. ಅದನ್ನು ಹೊರತುಪಡಿಸಿ ಅವರು ಏನನ್ನೂ ಸಾಧಿಸಿದ್ದಾರೆ ಎಂದು ನಾನು ಭಾವಿಸುವುದಿಲ್ಲ ಎಂದು ಗಂಭೀರ್​ ಹೇಳಿದ್ದಾರೆ.

ಹಾರ್ದಿಕ್ ಪಾಂಡ್ಯ ಐಪಿಎಲ್ ವಿಜೇತ ನಾಯಕ. ಆದ್ದರಿಂದ ನೀವು ಕಿತ್ತಳೆಯನ್ನು ಕಿತ್ತಳೆಗೆ ಹೋಲಿಸಬೇಕು ಮತ್ತು ಕಿತ್ತಳೆಯನ್ನು ಸೇಬುಗಳಿಗೆ ಹೋಲಿಸಬಾರದು ಎಂದು ಗೌತಮ್ ಗಂಭೀರ್ ಹೇಳಿಕೆ ನೀಡಿದ್ದಾರೆ.

Continue Reading

ಕ್ರೀಡೆ

Team India New Head Coach: ಭಾರತ ತಂಡಕ್ಕೆ ಆಸೀಸ್ ಮಾಜಿ​ ಆಟಗಾರ ಕೋಚ್​ ಆಗುವುದು ನಿಶ್ಚಿತ

Team India New Head Coach: ಕ್ರಿಕೆಟ್ ಆಸ್ಟ್ರೇಲಿಯಾ ಕಂಡ ಯಶಸ್ವಿ ಕೋಚ್ ಗಳಲ್ಲಿ ಒಬ್ಬರಾದ ಜಸ್ಟಿನ್ ಲ್ಯಾಂಗರ್ ತಾವಾಗಿಯೇ ಕೋಚಿಂಗ್​ ಬಗ್ಗೆ ಆಸಕ್ತಿ ತೋರಿರುವ ಕಾರಣ ಬಿಸಿಸಿಐ ಅವರಿಗೆ ಮಣೆ ಹಾಕಿದರೂ ಅಚ್ಚರಿಯಿಲ್ಲ. ಲ್ಯಾಂಗರ್ ಮಾರ್ಗದರ್ಶನದಲ್ಲಿ ಆಸೀಸ್ ತಂಡ ಟಿ20 ವಿಶ್ವಕಪ್, ಇಂಗ್ಲೆಂಡ್​ ಎದುರಿನ ಪ್ರತಿಷ್ಠಿತ ಆ್ಯಶಸ್​ ಟೆಸ್ಟ್​ ಸರಣಿ ಗೆದ್ದಿತ್ತು

VISTARANEWS.COM


on

Team India New Head Coach
Koo

ನವದೆಹಲಿ: ಟಿ20 ವಿಶ್ವಕಪ್​ ಬಳಿಕ ಟೀಮ್​ ಇಂಡಿಯಾಕ್ಕೆ ಯಾರಾಗಲಿದ್ದಾರೆ ನೂತನ ಕೋಚ್(Team India New Head Coach) ಎಂಬ ಬಿಸಿ ಬಿಸಿ ಚರ್ಚೆಯ ಮಧ್ಯೆ ಆಸ್ಟ್ರೇಲಿಯಾದ ಮಾಜಿ ಆಟಗಾರ ಹಾಗೂ ಕೋಚ್​, ಪ್ರಸ್ತುತ ಲಕ್ನೋ ಸೂಪರ್​ ಜೈಂಟ್ಸ್​ ತಂಡದ ಕೋಚ್​ ಆಗಿರುವ ಜಸ್ಟಿನ್ ಲ್ಯಾಂಗರ್(Justin Langer) ಅಚ್ಚರಿಯ ಹೇಳಿಕೆಯೊಂದನ್ನು ನೀಡಿದ್ದಾರೆ. ಭಾರತ ತಂಡದ ಮುಖ್ಯ ಕೋಚ್ ಸ್ಥಾನವು ಅಸಾಮಾನ್ಯ ಪಾತ್ರವಾಗಿದೆ ಎಂದು ಹೇಳುವ ಮೂಲಕ ಕೋಚಿಂಗ್​ ಬಗ್ಗೆ ಒಲವು ತೋರಿದ್ದಾರೆ.

ಡೆಲ್ಲಿ ಕ್ಯಾಪಿಟಲ್ಸ್​ ವಿರುದ್ಧದ ಪಂದ್ಯಕ್ಕೂ ಮುನ್ನ ಟೈಮ್ಸ್ ಆಫ್ ಇಂಡಿಯಾದೊಂದಿಗೆ ಮಾತನಾಡಿದ ಲ್ಯಾಂಗರ್, ಭಾರತ ತಂಡ ಕೋಚಿಂಗ್​ ಮಾಡುವುದು ಅಸಾಮಾನ್ಯ ಪಾತ್ರವಾಗಿದೆ. ನನಗೂ ಕೋಚಿಂಗ್​ ಮಾಡಲು ಕುತೂಹಲವಿದೆ. ಇಲ್ಲಿ ಅಪಾರ ಸಂಖ್ಯೆಯ ಕ್ರಿಕೆಟ್ ಪ್ರತಿಭೆಗಳಿದ್ದಾರೆ ಎಂದು ಹೇಳಿದ್ದಾರೆ. ಅವರ ಈ ಹೇಳಿಕೆಯನ್ನು ಗಮನಿಸುವಾಗ ಕೋಚಿಂಗ್​ ಹುದ್ದೆಗೆ ಅರ್ಜಿ ಸಲ್ಲಿಸುವ ಸೂಚನೆಯೊಂದು ಲಭಿಸಿದೆ. ಸೋಮವಾರ ಬಿಸಿಸಿಐ ಕೋಚ್ ಹುದ್ದೆಗಾಗಿ(Team India Coach) ಬಿಸಿಸಿಐ(BCCI) ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ಇದೇ 27ರಂದು ಕೊನೆಯ ದಿನವಾಗಿದೆ.

ಶುಕ್ರವಾರವಷ್ಟೇ ಬಿಸಿಸಿಐ ಕಾರ್ಯದರ್ಶಿ ಜಯ್​ ಶಾ ಅವರು ಮುಖ್ಯ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ನಾವು 3 ವರ್ಷಗಳ ದೀರ್ಘ ಅವಧಿಗಾಗಿ ಕೋಚ್​ ಹುಡುಕಾಟದಲ್ಲಿದ್ದೇವೆ ಎಂದು ಹೇಳಿದ್ದರು. ಜತೆಗೆ ದ್ರಾವಿಡ್ ಅವರಿಗೂ​ ಮರುಅರ್ಜಿ ಸಲ್ಲಿಸಬಹುದು ಎಂದು ಹೇಳಿದ್ದರು. ಆದರೆ, ದ್ರಾವಿಡ್​ ಕೋಚ್​ ಹುದ್ದೆಯಲ್ಲಿ ಮುಂದುವರಿಯಲು ಆಸಕ್ತಿ ಹೊಂದಿಲ್ಲ ಎಂದು ತಿಳಿದುಬಂದಿದೆ. ಹೀಗಾಗಿ ಬಿಸಿಸಿಐ ನೂತನ ಕೋಚ್​ ಹುಡುಕಾಟದಲ್ಲಿದೆ.

ಬಿಸಿಸಿಐ ಕೂಡ ವಿದೇಶಿ ಕೋಚ್​ ಆಯ್ಕೆಯ ಬಗ್ಗೆ ಆಲೋಚನೆ ನಡೆಸುತ್ತಿದೆ ಎನ್ನುವ ಮಾತುಗಳು ಈ ಹಿಂದೆಯೇ ಕೇಳಿ ಬಂದಿತ್ತು. 2011ರಲ್ಲಿ ಗ್ಯಾರಿ ಕಸ್ಟನ್ ಮಾರ್ಗದರ್ಶನದಲ್ಲಿ ಭಾರತ 2ನೇ ಬಾರಿಗೆ ವಿಶ್ವಕಪ್​ ಗೆದ್ದಿತ್ತು. ಬಳಿಕ 2013ರಲ್ಲಿ ಡಂಕನ್​ ಪ್ಲೆಚರ್​ ಮಾರ್ಗದರ್ಶನದಲ್ಲಿ ಭಾರತ ಐಸಿಸಿ ಚಾಂಪಿಯನ್ಸ್​ ಟ್ರೋಫಿ ಜಯಿಸಿತ್ತು. ಇದಾದ ಬಳಿಕ ಭಾರತ ಇದುವರೆಗೂ ಯಾವುದೇ ಐಸಿಸಿ ಟ್ರೋಫಿ ಗೆದ್ದಿಲ್ಲ. ರವಿಶಾಸ್ತ್ರಿ ಮತ್ತು ರಾಹುಲ್​ ದ್ರಾವಿಡ್​ ಮಾರ್ಗದರ್ಶನಲ್ಲಿ 2 ಏಕದಿನ ವಿಶ್ವಕಪ್​ ಆಡಿದರೂ ಭಾರತ ಕಪ್​ ಗೆಲ್ಲಲು ಸಾಧ್ಯವಾಗಿಲ್ಲ. ಹೀಗಾಗಿ ವಿದೇಶಿ ಕೋಚ್​ ಆಯ್ಕೆಯೇ ಉತ್ತಮ ಎಂದು ಬಿಸಿಸಿಐ ಯೋಚಿಸಿದೆ ಎನ್ನಲಾಗಿದೆ.

ಇದನ್ನೂ ಓದಿ Rahul Dravid : ವಿಶ್ವ ಕಪ್​ ಬಳಿಕ ದ್ರಾವಿಡ್​ ಭಾರತದ ಕೋಚ್ ಅಗಿರುವುದಿಲ್ಲ; ಮುಂದೆ ಯಾರು?

ಕ್ರಿಕೆಟ್ ಆಸ್ಟ್ರೇಲಿಯಾ ಕಂಡ ಯಶಸ್ವಿ ಕೋಚ್ ಗಳಲ್ಲಿ ಒಬ್ಬರಾದ ಜಸ್ಟಿನ್ ಲ್ಯಾಂಗರ್ ತಾವಾಗಿಯೇ ಕೋಚಿಂಗ್​ ಬಗ್ಗೆ ಆಸಕ್ತಿ ತೋರಿರುವ ಕಾರಣ ಬಿಸಿಸಿಐ ಅವರಿಗೆ ಮಣೆ ಹಾಕಿದರೂ ಅಚ್ಚರಿಯಿಲ್ಲ. ಲ್ಯಾಂಗರ್ ಮಾರ್ಗದರ್ಶನದಲ್ಲಿ ಆಸೀಸ್ ತಂಡ ಟಿ20 ವಿಶ್ವಕಪ್, ಇಂಗ್ಲೆಂಡ್​ ಎದುರಿನ ಪ್ರತಿಷ್ಠಿತ ಆ್ಯಶಸ್​ ಟೆಸ್ಟ್​ ಸರಣಿ ಗೆದ್ದಿತ್ತು. ಮೂರು ವರ್ಷಗಳ ಕಾಲ ಅವರು ಆಸೀಸ್​ ತಂಡದ ಕೋಚ್​ ಆಗಿ ಕರ್ತವ್ಯ ನಿರ್ವಹಿಸಿದ್ದರು. ಒಟ್ಟಾರೆಯಾಗಿ ಟಿ20 ವಿಶ್ವಕಪ್​ ಮುಗಿದ ಬಳಿಕ ಭಾರತ ತಂಡದ ಕೋಚ್​ ಯಾರಾಗಲಿದ್ದಾರೆ ಎನ್ನುವ ಸ್ಪಷ್ಟ ಚಿತ್ರಣ ಸಿಗಲಿದೆ.

Continue Reading

ಕ್ರೀಡೆ

KL Rahul: ರಾಹುಲ್ ಆರ್​ಸಿಬಿಗೆ ಬರಲ್ಲ; ಔತಣ ಕೂಟಕ್ಕೆ ಕರೆದು ತಬ್ಬಿಕೊಂಡ ಸಂಜೀವ್ ಗೋಯೆಂಕಾ

KL Rahul: ಸಂಜೀವ್ ಗೋಯೆಂಕಾ ಅವರು ರಾಹುಲ್​ ಅವರನ್ನು ಮನೆಗೆ ಡಿನ್ನರ್​ಗೆ ಕರೆದು ತಬ್ಬಿಕೊಂಡಿರುವ ಫೋಟೊ ಒಂದು ವೈರಲ್​ ಆಗಿದೆ. ಇದರ ಬೆನ್ನಲ್ಲೇ ರಾಹುಲ್​ ಪತ್ನಿ ಅಥಿಯಾ ಶೆಟ್ಟಿ ಕೂಡ ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಸ್ಟೋರಿ ಹಾಕಿದ್ದು “ಚಂಡಮಾರುತದ ನಂತರ ಶಾಂತ” ಎಂದು ಬರೆದುಕೊಂಡಿದ್ದಾರೆ.

VISTARANEWS.COM


on

KL Rahul
Koo

ಲಕ್ನೋ: ಸನ್​ರೈಸರ್ಸ್​ ಹೈದರಾಬಾದ್(Sunrisers Hyderabad)​​ ವಿರುದ್ಧ ಲಕ್ನೋ ಸೂಪರ್​ ಜೈಂಟ್ಸ್(Lucknow Super Giants)​ 10 ವಿಕೆಟ್​ಗಳ ಹೀನಾಯ ಸೋಲು ಕಂಡ ಬೇಸರದಲ್ಲಿ ಸಿಟ್ಟಿಗೆದ್ದ ಫ್ರಾಂಚೈಸಿ ಮಾಲಿಕ ಸಂಜೀವ್ ಗೋಯೆಂಕಾ(Sanjiv Goenka) ಮೈದಾನದಲ್ಲೇ ನಾಯಕ ಕೆ.ಎಲ್​ ರಾಹುಲ್(KL Rahul)​ ಜತೆ ಜಗಳವಾಡಿದ್ದರು. ಈ ಘಟನೆ ಬಳಿಕ ಅನೇಕ ಮಾಜಿ ಆಟಗಾರರು ಗೋಯೆಂಕಾ ವರ್ತನೆಗೆ ಆಕ್ರೋಶ ವ್ಯಕ್ತಪಡಿಸಿದ್ದರು. ಘಟನೆಗೆ ಸಂಬಂಧಿಸಿ ರಾಹುಲ್​ ಲಕ್ನೋ ತಂಡ ತೊರೆಯಲಿದ್ದಾರೆ, ಆರ್​ಸಿಬಿ ಸೇರಲಿದ್ದಾರೆ, ತಂಡದ ಆಟಗಾರರೊಂದಿಗೆ ಪ್ರಯಾಣಿಸದೆ ಪ್ರತ್ಯೇಕವಾಗಿ ಪ್ರಯಾಣಿಸಿದ್ದಾರೆ ಹೀಗೆ ಹಲವು ವಿಚಾರಗಳು ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡಿತ್ತು. ಇದೀಗ ಈ ಎಲ್ಲ ಊಹಾಪೋಹಕ್ಕೆ ತೆರೆ ಬಿದ್ದಂತೆ ಕಾಣುತ್ತಿದೆ.

ಸಂಜೀವ್ ಗೋಯೆಂಕಾ ಅವರು ರಾಹುಲ್​ ಅವರನ್ನು ಮನೆಗೆ ಡಿನ್ನರ್​ಗೆ ಕರೆದು ತಬ್ಬಿಕೊಂಡಿರುವ ಫೋಟೊ ಒಂದು ವೈರಲ್​ ಆಗಿದೆ. ಈ ಮೂಲಕ ನಮ್ಮ ಮಧ್ಯೆ ಯಾವುದೇ ಮುನಿಸು ಇಲ್ಲ ಎನ್ನುವ ಸಂದೇಶ ನೀಡಿದಂತಿದೆ. ಸದ್ಯ ವೈರಲ್​ ಆಗುತ್ತಿರುವ ಫೋಟೊದಲ್ಲಿ ರಾಹುಲ್​ ಅವರನ್ನು ಗೋಯೆಂಕಾ ತಬ್ಬಿಕೊಂಡಿರಿವಂತೆ ಕಾಣುತ್ತಿದೆ. ರಾಹುಲ್​ ಕೂಡ ನಗುಮುಗದಿಂದಲೇ ಕಾಣಿಸಿಕೊಂಡಿದ್ದಾರೆ. ಆದರೆ, ಗೋಯೆಂಕಾ ಅವರ ಮುಖ ಮಾತ್ರ ಸ್ಪಷ್ಟವಾಗಿ ಗೋಚರಿಸಿಲ್ಲ. ರಾಹುಲ್​ ಪತ್ನಿ ಅಥಿಯಾ ಶೆಟ್ಟಿ ಕೂಡ ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಸ್ಟೋರಿ ಹಾಕಿದ್ದು “ಚಂಡಮಾರುತದ ನಂತರ ಶಾಂತ” ಎಂದು ಬರೆದುಕೊಂಡಿದ್ದಾರೆ. ಹೀಗಾಗಿ ರಾಹುಲ್​ ಮತ್ತು ಗೋಯೆಂಕಾ ನಡುವಿನ ಮುನಿಸು ಶಮನವಾದಂತೆ ಕಾಣುತ್ತಿದೆ.

ಕಳೆದ ಹೈದರಾಬಾದ್​ ವಿರುದ್ಧದ ಪಂದ್ಯದಲ್ಲಿ ಬ್ಯಾಟಿಂಗ್​ ಮಾತ್ರವಲ್ಲದೆ, ಬೌಲಿಂಗ್​ನಲ್ಲಿಯೂ ಲಕ್ನೋ ಅತ್ಯಂತ ಕಳಪೆ ಪ್ರದರ್ಶನ ತೋರಿತ್ತು. ಕನಿಷ್ಠ 1 ವಿಕೆಟ್​ ಕೂಡ ಕೀಳಲಾಗದ ಘೋರ ವೈಫಲ್ಯ ಕಂಡಿತ್ತು. ಈ ಹೀನಾಯ ಸೋಲಿನಿಂದ ಸಿಟ್ಟಿಗೆದ್ದ ಸಂಜೀವ್ ಗೋಯೆಂಕಾ ನಾಯಕ ರಾಹುಲ್ ಅವರೊಂದಿಗೆ ಕೋಪದಲ್ಲಿ ಮಾತನಾಡುತ್ತಿರುವಂತೆ ಕಂಡುಬಂದಿತ್ತು. ಇವರಿಬ್ಬರ ನಡುವಣ ಮಾತುಕತೆ ಏನು ಎಂಬುದು ಸ್ಪಷ್ಟವಾಗಿ ಕೇಳಿಸಿಲ್ಲವಾಗಿದ್ದರೂ, ಈ ದೃಶ್ಯ ನೋಡುವಾಗ ಇದು ಅಸಮಾಧಾನದ ನುಡಿ ಎಂದು ತಿಳಿದು ಬಂದಿತ್ತು.

ಗೋಯೆಂಕಾ ಮಾತಿಗೆ ರಾಹುಲ್ ಪ್ರತಿಕ್ರಿಯೆ ನೀಡಲು ಮುಂದಾದರೂ ಕೂಡ ಇದನ್ನು ಗೋಯೆಂಕಾ ಒಪ್ಪಿಕೊಳ್ಳದೆ ಏನೋ ಬೈಯುತ್ತಿರುವಂತೆ ದೃಶ್ಯದಲ್ಲಿ ಕಂಡುಬಂದಿತ್ತು. ಈ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುಗಿತ್ತು. ಈ ಘಟನೆಯಿಂದ ರಾಹುಲ್​ ನೊಂದಿದ್ದಾರೆ ಎನ್ನಲಾಗಿತ್ತು. ಪಂದ್ಯದಲ್ಲಿ ಟಾಸ್​ ಗೆದ್ದು ಆಮೆ ಗತಿಯ ಬ್ಯಾಟಿಂಗ್​ ನಡೆಸಿದ ಲಕ್ನೋ ಸೂಪರ್​ ಜೈಂಟ್ಸ್​ ನಿಗದಿತ 20 ಓವರ್​ಗಳಲ್ಲಿ 4 ವಿಕೆಟ್​ಗೆ 165 ರನ್​ ಬಾರಿಸಿತು. ಈ ಮೊತ್ತವನ್ನು ಬೆನ್ನಟ್ಟಿದ ಹೈದರಾಬಾದ್​ ಯಾವುದೇ ವಿಕೆಟ್​ ನಷ್ಟವಿಲ್ಲದೆ ಕೇವಲ 9.4 ಓವರ್​ಗಳಲ್ಲಿ 167 ರನ್​ ಬಾರಿಸಿ ಭರ್ಜರಿ 10 ವಿಕೆಟ್​ ಅಂತರದ ಗೆಲುವು ಸಾಧಿಸಿತು. ಲಕ್ನೋ ಬೌಲರ್​ಗಳನ್ನು ನಿರ್ದಾಕ್ಷಿಣ್ಯವಾಗಿ ಮನಬಂದಂತೆ ದಂಡಿಸಿದ ಹೆಡ್ ಮತ್ತು ಅಭಿಷೇಕ್​​ ಸ್ಟೇಡಿಯಂನ ಮೂಲೆ ಮೂಲೆಗೂ ಚೆಂಡನ್ನು ಬಾರಿಸಿದ್ದರು.

ಇದನ್ನೂ ಓದಿ IPL 2024: ಮಾಲೀಕನ ಜತೆ ಜಗಳ, ತಂಡದ ಬಸ್​ ಬಿಟ್ಟು ಸ್ವಂತ ಖರ್ಚಲ್ಲಿ ಪ್ರಯಾಣಿಸಿದ ಕೆ. ಎಲ್​ ರಾಹುಲ್​

ಇಂದು ನಡೆಯುವ ಪಂದ್ಯದಲ್ಲಿ ಲಕ್ನೋ ಸೂಪರ್​ ಜೈಂಟ್ಸ್​ ತಂಡ ಡೆಲ್ಲಿ ಕ್ಯಾಪಿಟಲ್ಸ್​ ವಿರುದ್ಧ ಆಡಲಿದೆ. ಪ್ಲೇ ಆಫ್​ ರೇಸ್​ನಲ್ಲಿ ಉಳಿಯಬೇಕಿದ್ದರೆ ಲಕ್ನೋಗೆ ಇದು ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ. ಡೆಲ್ಲಿ ವಿರುದ್ಧ ಗೆದ್ದರೆ ಮಾತ್ರ ಸಾಲದು ಅಂತಿಮ ಪಂದ್ಯದಲ್ಲಿ ಮುಂಬೈ ವಿರುದ್ಧವೂ ಗೆಲುವು ಅತ್ಯಗತ್ಯ.

Continue Reading

ಕ್ರೀಡೆ

T20 World Cup 2024: 20 ತಂಡಗಳ ಪೈಕಿ 19 ತಂಡ ಪ್ರಕಟ; ಪಾಕಿಸ್ತಾನ ಮಾತ್ರ ಬಾಕಿ

T20 World Cup 2024: 20 ದೇಶಗಳ ಪೈಕಿ 19 ದೇಶಗಳು ತನ್ನ ಸಂಭಾವ್ಯ 15 ಜನರ ತಂಡವನ್ನು ಪ್ರಕಿಟಿಸಿದೆ. ಆದರೆ, ಪಾಕಿಸ್ತಾನ ಮಾತ್ರ ಇನ್ನೂ ತಂಡ ಪ್ರಕಟಕ್ಕೆ ಮೀನ-ಮೇಷ ಎಣಿಸುತ್ತಿದೆ. ತಂಡ ಪ್ರಕಟಿಸದಿರಲು ಕಾರಣ ಏನೆಂಬುದು ಮಾತ್ರ ಇದುವರೆಗೆ ತಿಳಿದು ಬಂದಿಲ್ಲ.

VISTARANEWS.COM


on

T20 World Cup 2024
Koo

ದುಬೈ: ಮುಂಬರುವ ಪುರುಷರ ಟಿ20 ವಿಶ್ವಕಪ್(T20 World Cup 2024)​ ಟೂರ್ನಿಗೆ ಈಗಾಗಲೇ ಪಾಲ್ಗೊಳ್ಳುವ 20 ದೇಶಗಳ ಪೈಕಿ 19 ದೇಶಗಳು ತನ್ನ ಸಂಭಾವ್ಯ 15 ಜನರ ತಂಡವನ್ನು ಪ್ರಕಿಟಿಸಿದೆ. ಆದರೆ, ಪಾಕಿಸ್ತಾನ ಮಾತ್ರ ಇನ್ನೂ ತಂಡ ಪ್ರಕಟಕ್ಕೆ ಮೀನ-ಮೇಷ ಎಣಿಸುತ್ತಿದೆ. ಸದ್ಯದ ಮೂಲಗಳ ಪ್ರಕಾರ ಮೇ 23 ಅಥವಾ 24ರ ವೇಳೆ ಪಾಕ್​ ತಂಡವನ್ನು ಪ್ರಕಟಿಸುವುದು ಪಿಸಿಬಿ ಯೋಜನೆಯಾಗಿದೆ ಎಂದು ತಿಳಿದುಬಂದಿದೆ. ಸದ್ಯ ಪ್ರಕಟಗೊಂಡ 19 ತಂಡಗಳ ಆಟಗಾರರ ಪಟ್ಟಿ ಇಂತಿದೆ.

ಭಾರತ ತಂಡ

ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್​ ಕೀಪರ್​), ಸಂಜು ಸ್ಯಾಮ್ಸನ್ (ವಿಕೆಟ್​ ಕೀಪರ್​), ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಯುಜ್ವೇಂದ್ರ ಚಾಹಲ್, ಅರ್ಶದೀಪ್​ ಸಿಂಗ್​, ಜಸ್​ಪ್ರೀತ್​ ಬುಮ್ರಾ, ಮೊಹಮ್ಮದ್​ ಸಿರಾಜ್. ಮೀಸಲು ಆಟಗಾರರು ಶುಭಮನ್ ಗಿಲ್, ರಿಂಕು ಸಿಂಗ್, ಖಲೀಲ್ ಅಹ್ಮದ್ ಮತ್ತು ಅವೇಶ್ ಖಾನ್.

ನ್ಯೂಜಿಲ್ಯಾಂಡ್​ ತಂಡ


ಕೇನ್ ವಿಲಿಯಮ್ಸನ್ (ನಾಯಕ), ಫಿನ್ ಅಲೆನ್, ಟ್ರೆಂಟ್ ಬೌಲ್ಟ್, ಮೈಕೆಲ್ ಬ್ರೇಸ್‌ವೆಲ್, ಮಾರ್ಕ್ ಚಾಪ್‌ಮನ್, ಡೆವೊನ್ ಕಾನ್ವೆ, ಲಾಕಿ ಫರ್ಗುಸನ್, ಮ್ಯಾಟ್ ಹೆನ್ರಿ, ಡ್ಯಾರಿಲ್ ಮಿಚೆಲ್, ಜಿಮ್ಮಿ ನೀಶಮ್, ಗ್ಲೆನ್ ಫಿಲಿಪ್ಸ್, ರಚಿನ್ ರವೀಂದ್ರ, ಮಿಚೆಲ್ ಸ್ಯಾಂಟ್ನರ್, ಇಶ್ ಸೋಧಿ, ಟಿಮ್ ಸೌಥಿ. ಮೀಸಲು ಆಟಗಾರ: ಬೆನ್ ಸಿಯರ್ಸ್.


ಆಸ್ಟ್ರೇಲಿಯಾ ತಂಡ

ಮಿಚೆಲ್ ಮಾರ್ಷ್ (ನಾಯಕ), ಆ್ಯಶ್ಟನ್​ ಅಗರ್, ಪ್ಯಾಟ್ ಕಮ್ಮಿನ್ಸ್, ಟಿಮ್ ಡೇವಿಡ್, ನಾಥನ್ ಎಲ್ಲಿಸ್, ಕ್ಯಾಮೆರಾನ್ ಗ್ರೀನ್, ಜೋಶ್ ಹ್ಯಾಜಲ್‌ವುಡ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ಮಿಚೆಲ್ ಸ್ಟಾರ್ಕ್, ಮಾರ್ಕಸ್ ಸ್ಟೊಯಿನಿಸ್, ಮ್ಯಾಥ್ಯೂ ವೇಡ್, ಡೇವಿಡ್ ವಾರ್ನರ್, ಆ್ಯಡಂ ಝಂಪಾ.

ಇಂಗ್ಲೆಂಡ್​ ತಂಡ


ಜೋಸ್ ಬಟ್ಲರ್ (ನಾಯಕ), ಮೊಯಿನ್ ಅಲಿ, ಜೋಫ್ರಾ ಆರ್ಚರ್, ಜಾನಿ ಬೈರ್‌ಸ್ಟೋ, ಹ್ಯಾರಿ ಬ್ರೂಕ್, ಸ್ಯಾಮ್ ಕರ್ರಾನ್, ಬೆನ್ ಡಕೆಟ್, ಟಾಮ್ ಹಾರ್ಟ್ಲಿ, ವಿಲ್ ಜ್ಯಾಕ್ಸ್, ಕ್ರಿಸ್ ಜೋರ್ಡಾನ್, ಲಿಯಾಮ್ ಲಿವಿಂಗ್‌ಸ್ಟೋನ್, ಆದಿಲ್ ರಶೀದ್, ಫಿಲ್ ಸಾಲ್ಟ್, ರೀಸ್ ಟೋಪ್ಲಿ, ಮಾರ್ಕ್ ವುಡ್.

ದಕ್ಷಿಣ ಆಫ್ರಿಕಾ ತಂಡ


ಐಡೆನ್ ಮಾರ್ಕ್ರಾಮ್ (ನಾಯಕ), ಒಟ್ನಿಯೆಲ್ ಬಾರ್ಟ್‌ಮ್ಯಾನ್, ಜೆರಾಲ್ಡ್ ಕೊಡ್ಜಿ, ಕ್ವಿಂಟನ್ ಡಿ ಕಾಕ್, ಜಾರ್ನ್ ಫಾರ್ಟುಯಿನ್, ರೀಜಾ ಹೆಂಡ್ರಿಕ್ಸ್, ಮಾರ್ಕೊ ಜಾನ್ಸೆನ್, ಹೆನ್ರಿಚ್ ಕ್ಲಾಸೆನ್, ಕೇಶವ್ ಮಹಾರಾಜ್, ಡೇವಿಡ್ ಮಿಲ್ಲರ್, ಆನ್ರಿಚ್ ನಾರ್ಜೆ, ಕಗಿಸೊ ರಬಾಡಾ, ರಿಯಾನ್ ರಿಕೆಲ್ಟನ್, ಟ್ರೀಸ್ಟಾನ್ ಸ್ಟಬ್ಸ್​, ತಬ್ರೈಜ್ ಶಂಸಿ. ಮೀಸಲು ಆಟಗಾರು: ಲುಂಗಿ ಎನ್​ಗಿಡಿ, ಬರ್ಗರ್.

ಇದನ್ನೂ ಓದಿ IPL 2024 : ಆರ್​ಸಿಬಿ, ಆರ್​ಆರ್​ಗೆ ಆಘಾತ; ಐಪಿಎಲ್ ಬೇಡ ಎಂದು ಹೊರಟ ಹಲವು ಆಟಗಾರರು

ಅಫಘಾನಿಸ್ಥಾನ ತಂಡ


ರಶೀದ್‌ ಖಾನ್‌ (ನಾಯಕ), ರೆಹಮಾನುಲ್ಲ ಗುರ್ಬಜ್‌, ಇಬ್ರಾಹಿಂ ಜದ್ರಾನ್‌, ಅಜ್ಮತುಲ್ಲ ಒಮರ್‌ಜಾಯ್‌, ನಜೀಬುಲ್ಲ ಜದ್ರಾನ್‌, ಮೊಹಮ್ಮದ್‌ ಇಶಾಖ್‌, ಮೊಹಮ್ಮದ್‌ ನಬಿ, ಗುಲ್ಬದಿನ್‌ ನೈಬ್‌, ಕರೀಂ ಜನ್ನತ್‌, ನಂಗ್ಯಾಲ್‌ ಖರೋಟಿ, ಮುಜೀಬ್‌ ಉರ್‌ ರೆಹಮಾನ್‌, ನೂರ್‌ ಅಹ್ಮದ್‌, ನವೀನ್‌ ಉಲ್‌ ಹಕ್‌, ಫ‌ಜಲ್‌ ಹಕ್‌ ಫಾರೂಖೀ, ಫ‌ರೀದ್‌ ಅಹ್ಮದ್‌ ಮಲಿಕ್‌. ಮೀಸಲು ಆಟಗಾರರು: ಸಾದಿಕ್‌ ಉಲ್ಲ ಅಟಲ್‌, ಹಜ್ರತುಲ್ಲ ಜಜಾಯ್‌, ಮೊಹಮ್ಮದ್‌ ಸಲೀಂ ಸಫಿ.

ಕೆನಡಾ ತಂಡ


ಸಾದ್ ಬಿನ್ ಜಾಫರ್ (ನಾಯಕ), ಆರನ್ ಜಾನ್ಸನ್, ದಿಲೋನ್ ಹೇಲಿಗರ್, ದಿಲ್‌ಪ್ರೀತ್ ಬಜ್ವಾ, ಹರ್ಷ್ ಠಾಕರ್, ಜೆರೆಮಿ ಗಾರ್ಡನ್, ಜುನೈದ್ ಸಿದ್ದಿಕಿ, ಕಲೀಮ್ ಸನಾ, ಕನ್ವರ್‌ಪಾಲ್ ತತ್‌ಗುರ್, ನವನೀತ್ ಧಲಿವಾಲ್, ನಿಕೋಲಸ್ ಕಿರ್ಟನ್, ಪರ್ಗತ್ ಸಿಂಗ್, ರವೀಂದರ್‌ಪಾಲ್ ಸಿಂಗ್, ರಾಯನ್‌ಖಾನ್‌ಸ್ಹಾನ್, ಶ್ವಾಖಾನ್‌ಸ್ಹಾನ್‌ಸ್ಯಾನ್. ಮೀಸಲು ಆಟಗಾರ: ತಜೀಂದರ್ ಸಿಂಗ್, ಆದಿತ್ಯ ವರದರಾಜನ್, ಅಮ್ಮರ್ ಖಾಲಿದ್, ಜತೀಂದರ್ ಮಥಾರು, ಪರ್ವೀನ್ ಕುಮಾರ್.

ಇದನ್ನೂ ಓದಿ T20 World Cup 2024: ಟಿ20 ವಿಶ್ವಕಪ್​ಗೆ ತಂಡ ಪ್ರಕಟಿಸಿದ ಪಪುವಾ ನ್ಯೂಗಿನಿಯಾ, ಐರ್ಲೆಂಡ್

ನೇಪಾಳ ತಂಡ


ರೋಹಿತ್ ಪೌಡೆಲ್ (ನಾಯಕ), ಆಸಿಫ್ ಶೇಖ್, ಅನಿಲ್ ಕುಮಾರ್ ಸಾಹ್, ಕುಶಾಲ್ ಭುರ್ಟೆಲ್, ಕುಶಾಲ್ ಮಲ್ಲಾ, ದೀಪೇಂದ್ರ ಸಿಂಗ್ ಐರಿ, ಲಲಿತ್ ರಾಜಬಂಶಿ, ಕರಣ್ ಕೆಸಿ, ಗುಲ್ಶನ್ ಝಾ, ಸೋಂಪಾಲ್ ಕಾಮಿ, ಪ್ರತಿಸ್ ಜಿಸಿ, ಸಂದೀಪ್ ಜೋರಾ, ಅಬಿನಾಶ್ ಬೋಹರಾ, ಸಾಗರ್ ಧಕಲ್, ಕಮಲ್ ಸಿಂಗ್ ಐರಿ.

ಒಮಾನ್​ ತಂಡ


ಅಕಿಬ್ ಇಲ್ಯಾಸ್ (ನಾಯಕ), ಜೀಶನ್ ಮಕ್ಸೂದ್, ಕಶ್ಯಪ್ ಪ್ರಜಾಪತಿ, ಪ್ರತೀಕ್ ಅಠವಲೆ (ವಿಕಿ), ಅಯಾನ್ ಖಾನ್, ಶೋಯೆಬ್ ಖಾನ್, ಮೊಹಮ್ಮದ್ ನದೀಮ್, ನಸೀಮ್ ಖುಷಿ (ವಿಕಿ), ಮೆಹ್ರಾನ್ ಖಾನ್, ಬಿಲಾಲ್ ಖಾನ್, ರಫಿಯುಲ್ಲಾ, ಕಲೀಮುಲ್ಲಾ, ಫಯಾಜ್ ಬಟ್, ಶಕೀಲ್ ಅಹ್ಮದ್ , ಖಾಲಿದ್ ಕೈಲ್. ಮೀಸಲು ಆಟಗಾರ: ಜತೀಂದರ್ ಸಿಂಗ್, ಸಮಯ್ ಶ್ರೀವಾಸ್ತವ, ಸುಫ್ಯಾನ್ ಮೆಹಮೂದ್, ಜೇ ಒಡೆದ್ರಾ.

ಸ್ಕಾಟ್ಲೆಂಡ್​ ತಂಡ


ರಿಚಿ ಬೆರಿಂಗ್ಟನ್ (ನಾಯಕ), ಮ್ಯಾಥ್ಯೂ ಕ್ರಾಸ್, ಬ್ರಾಡ್ ಕ್ಯೂರಿ, ಕ್ರಿಸ್ ಗ್ರೀವ್ಸ್, ಒಲಿ ಹೇರ್ಸ್, ಜ್ಯಾಕ್ ಜಾರ್ವಿಸ್, ಮೈಕೆಲ್ ಜೋನ್ಸ್, ಮೈಕೆಲ್ ಲೀಸ್ಕ್, ಬ್ರಾಂಡನ್ ಮೆಕ್‌ಮುಲ್ಲೆನ್, ಜಾರ್ಜ್ ಮನ್ಸೆ, ಸಫ್ಯಾನ್ ಷರೀಫ್, ಕ್ರಿಸ್ ಸೋಲ್, ಚಾರ್ಲಿ ಟಿಯರ್, ಮಾರ್ಕ್ ವ್ಯಾಟಲ್.

ಉಗಾಂಡ ತಂಡ

ಬ್ರಿಯಾನ್ ಮಸಾಬಾ (ನಾಯಕ), ಸೈಮನ್ ಸ್ಸೆಸಾಜಿ, ರೋಜರ್ ಮುಕಾಸಾ, ಕಾಸ್ಮಾಸ್ ಕ್ಯೆವುಟಾ, ದಿನೇಶ್ ನಕ್ರಾನಿ, ಫ್ರೆಡ್ ಅಚೆಲಮ್, ಕೆನ್ನೆತ್ ವೈಸ್ವಾ, ಅಲ್ಪೇಶ್ ರಾಮ್‌ಜಾನಿ, ಫ್ರಾಂಕ್ ನ್ಸುಬುಗಾ, ಹೆನ್ರಿ ಸೆನ್ಯೊಂಡೋ, ಬಿಲಾಲ್ ಹಸುನ್, ರಾಬಿನ್ಸನ್ ಒಬುಯಾ, ರಿಯಾಝತ್ ಅಲಿ ಮಿಯಾಜಿ, ರನಾಕ್​ ಪಟೇಲ್. ಪ್ರಯಾಣ ಮೀಸಲು: ಇನೋಸೆಂಟ್ ಮ್ವೆಬಾಜ್, ರೊನಾಲ್ಡ್ ಲುತಾಯಾ​.

ಅಮೆರಿಕ ತಂಡ

ಮೊನಾಂಕ್ ಪಟೇಲ್ (ನಾಯಕ), ಆರನ್ ಜೋನ್ಸ್ (ಉಪನಾಯಕ), ಆಂಡ್ರೀಸ್ ಗೌಸ್, ಕೋರಿ ಆಂಡರ್ಸನ್, ಅಲಿ ಖಾನ್, ಹರ್ಮೀತ್ ಸಿಂಗ್, ಜೆಸ್ಸಿ ಸಿಂಗ್, ಮಿಲಿಂದ್ ಕುಮಾರ್, ನಿಸರ್ಗ್ ಪಟೇಲ್, ನಿತೀಶ್ ಕುಮಾರ್, ನೋಷ್ಟುಶ್ ಕೆಂಜಿಗೆ, ಸೌರಭ್ ನೇತ್ರಲ್ವಾಕರ್, ಶಾಡ್ಲಿ ವ್ಯಾನ್ ಶಾಲ್ಕ್‌ವಿಕ್, ಸ್ಟೀವನ್ ಟೇಯ್ , ಶಯಾನ್ ಜಹಾಂಗೀರ್. ಮೀಸಲು ಆಟಗಾರರು: ಗಜಾನಂದ್ ಸಿಂಗ್, ಜುವಾನೊಯ್ ಡ್ರೈಸ್‌ಡೇಲ್, ಯಾಸಿರ್ ಮೊಹಮ್ಮದ್.

ವೆಸ್ಟ್​ ಇಂಡೀಸ್​ ತಂಡ


ರೋವ್‌ಮನ್ ಪೊವೆಲ್ (ನಾಯಕ), ಅಲ್ಜಾರಿ ಜೋಸೆಫ್, ಜಾನ್ಸನ್ ಚಾರ್ಲ್ಸ್, ರೋಸ್ಟನ್ ಚೇಸ್, ಶಿಮ್ರಾನ್ ಹೆಟ್ಮೆಯರ್, ಜೇಸನ್ ಹೋಲ್ಡರ್, ಶಾಯ್ ಹೋಪ್, ಅಕೇಲ್ ಹೊಸೈನ್, ಶಮರ್ ಜೋಸೆಫ್, ಬ್ರಾಂಡನ್ ಕಿಂಗ್, ಗುಡಾಕೇಶ್ ಮೋಟಿ, ನಿಕೋಲಸ್ ಪೂರನ್, ಆಂಡ್ರೆ ರಸೆಲ್, ಶೆರ್ಫಾನ್ ರೊಥರ್‌ಫೋರ್ಡ್.

ನೆದರ್ಲೆಂಡ್ಸ್‌ ತಂಡ

ಸ್ಕಾಟ್‌ ಎಡ್ವರ್ಡ್ಸ್‌ (ನಾಯಕ), ಆರ್ಯನ್‌ ದತ್ತ, ಬಾಸ್‌ ಡಿ ಲೀಡ್‌, ಡೇನಿಯಲ್‌ ಡೋರಮ್‌, ಫ್ರೆಡ್‌ ಕ್ಲಾಸೆನ್‌, ಕೈಲ್‌ ಕ್ಲೀನ್‌, ಲೋಗನ್‌ ವಾನ್‌ ಬೀಕ್‌, ಮ್ಯಾಕ್ಸ್‌ ಓ’ಡೌಡ್‌, ಮೈಕಲ್‌ ಲೆವಿಟ್‌, ಪಾಲ್‌ ವಾನ್‌ ಮೀಕೆರೆನ್‌, ಸಿಬ್ರಾಂಡ್‌ ಏಂಜೆಲ್‌ಬ್ರೆಟ್‌, ತೇಜ ನಿಡಮನೂರು, ಟಿಮ್‌ ಪ್ರಿಂಗ್ಲ್, ವಿಕ್ರಮ್‌ ಸಿಂಗ್‌, ವೆಸ್ಲಿ ಬರೇಸಿ.

ಐರ್ಲೆಂಡ್ ತಂಡ

ಪಾಲ್ ಸ್ಟರ್ಲಿಂಗ್ (ನಾಯಕ), ಮಾರ್ಕ್ ಅಡೈರ್, ರಾಸ್ ಅಡೈರ್, ಆಂಡ್ರ್ಯೂ ಬಲ್ಬಿರ್ನಿ, ಕರ್ಟಿಸ್ ಕ್ಯಾಂಫರ್, ಗರೆಥ್ ಡೆಲಾನಿ, ಜಾರ್ಜ್ ಡಾಕ್ರೆಲ್, ಗ್ರಹಾಂ ಹ್ಯೂಮ್, ಜೋಶ್ ಲಿಟಲ್, ಬ್ಯಾರಿ ಮೆಕಾರ್ಥಿ, ನೀಲ್ ರಾಕ್ (ವಿಕೆಟ್ ಕೀಪರ್), ಹ್ಯಾರಿ ಟೆಕ್ಟರ್, ಲಾರ್ಕನ್ ಟಕರ್ (ವಿಕೆಟ್ ಕೀಪರ್), ಬೆನ್ ವೈಟ್ ಮತ್ತು ಕ್ರೇಗ್ ಯಂಗ್.

ಪಪುವಾ ನ್ಯೂಗಿನಿಯಾ ತಂಡ


ಅಸ್ಸಾದ್ ವಾಲಾ(ನಾಯಕ),ಸಿಜೆ ಅಮಿನಿ(ಉಪನಾಯಕ),ಅಲೆಯ್ ನಾವೊ, ಚಾಡ್ ಸೋಪರ್, ಹಿಲಾ ವರೇ, ಹಿರಿ ಹಿರಿ, ಜ್ಯಾಕ್ ಗಾರ್ಡ್ನರ್, ಜಾನ್ ಕರಿಕೊ, ಕಬುವಾ ವಾಗಿ ಮೋರಿಯಾ, ಕಿಪ್ಲಿಂಗ್ ಡೊರಿಗಾ, ಲೆಗಾ ಸಿಯಾಕಾ, ನಾರ್ಮನ್ ವನುವಾ, ಸೆಮಾ ಕಾಮಿಯಾ, ಸೆಸೆ ಬೌ, ಟೋನಿ ಉರಾ.

ಶ್ರೀಲಂಕಾ ತಂಡ


ವನಿಂದು ಹಸರಂಗ (ನಾಯಕ), ಚರಿತ್ ಅಸಲಂಕಾ, ಕುಸಲ್ ಮೆಂಡಿಸ್, ಪಾತುಂ ನಿಸ್ಸಂಕ, ಕಮಿಂದು ಮೆಂಡಿಸ್, ಸದೀರ ಸಮರವಿಕ್ರಮ, ಏಂಜೆಲೊ ಮ್ಯಾಥ್ಯೂಸ್, ದಸುನ್ ಶನಕ, ಧನಂಜಯ ಡಿ ಸಿಲ್ವ, ಮಹೇಶ್ ತೀಕ್ಷಣ, ದುನಿತ್ ವೆಲ್ಲಲಾಗೆ, ಮಥೀಷ್ ತೀಕ್ಷಣ, ದುಷ್ಮಂತ ತುಷಾರ ಚಮೀರ, ನುವಾಂತಾ ಚಮೀರ ಮಧುಶಂಕ. ಪ್ರಯಾಣ ಮೀಸಲು: ಅಸಿತ ಫೆರ್ನಾಂಡೋ, ವಿಜಯಕಾಂತ್ ವ್ಯಾಸಕಾಂತ್, ಭಾನುಕಾ ರಾಜಪಕ್ಸೆ, ಜನಿತ್ ಲಿಯಾನಗೆ.

ಬಾಂಗ್ಲಾದೇಶ ತಂಡ


ನಜ್ಮುಲ್ ಹೊಸೈನ್ ಶಾಂಟೊ (ನಾಯಕ), ತಸ್ಕಿನ್ ಅಹ್ಮದ್, ಲಿಟ್ಟನ್ ದಾಸ್, ಸೌಮ್ಯ ಸರ್ಕಾರ್, ತಂಝಿದ್ ಹಸನ್ ತಮೀಮ್, ಶಕೀಬ್ ಅಲ್ ಹಸನ್, ತೌಹಿದ್ ಹೃದಯೋಯ್, ಮಹ್ಮುದುಲ್ಲಾ ರಿಯಾದ್, ಜೇಕರ್ ಅಲಿ ಅನಿಕ್, ತನ್ವಿರ್ ಇಸ್ಲಾಂ, ಶಾಕ್ ಮಹೇದಿ ಹಸನ್, ರಿಶಾದ್ ಹೊಸ್ರಿ ಫುಲ್ ರಹ್ಮಾನ್, ಶೋಝಿನ್, ಇಸ್ಲಾಂ, ತಂಝೀಮ್ ಹಸನ್ ಸಾಕಿಬ್. ಪ್ರಯಾಣ ಮೀಸಲು: ಅಫೀಫ್ ಹೊಸೈನ್, ಹಸನ್ ಮಹಮೂದ್.

ನಮೀಬಿಯಾ ತಂಡ


ಗೆರ್ಹಾರ್ಡ್ ಎರಾಸ್ಮಸ್ (ನಾಯಕ), ಝೇನ್ ಗ್ರೀನ್, ಮೈಕೆಲ್ ವ್ಯಾನ್ ಲಿಂಗೆನ್, ಡೈಲನ್ ಲೀಚರ್, ರೂಬೆನ್ ಟ್ರಂಪೆಲ್ಮನ್, ಜ್ಯಾಕ್ ಬ್ರಾಸೆಲ್, ಬೆನ್ ಶಿಕೊಂಗೊ, ತಂಗೇನಿ ಲುಂಗಮೆನಿ, ನಿಕೊ ಡೇವಿನ್, ಜೆಜೆ ಸ್ಮಿತ್, ಜಾನ್ ಫ್ರಿಲಿಂಕ್, ಜೆಪಿ ಕೋಟ್ಜೆ, ಡೇವಿಡ್ ವೈಸ್, ಮಲನ್ ಸ್ಕೋಲ್ಟ್ಜ್ , ಪಿಡಿ ಬ್ಲಿಗ್ನಾಟ್.

Continue Reading
Advertisement
WhatsApp Update
ತಂತ್ರಜ್ಞಾನ4 mins ago

WhatsApp Update: ಅಪ್‌ಡೇಟ್ ಆಗಲಿದೆ ವಾಟ್ಸ್‌ಆಪ್ ಚಾನೆಲ್; ಹೊಸ ಆಪ್ಶನ್‌ ಏನೇನು?

Spoken Language
Latest11 mins ago

Spoken Language: ವಿಶ್ವದಲ್ಲಿ ಅತೀ ಹೆಚ್ಚು ಮಾತನಾಡುವ ಭಾಷೆಗಳಲ್ಲಿ ಹಿಂದಿ ಯಾವ ಸ್ಥಾನದಲ್ಲಿದೆ ಗೊತ್ತೆ?

Karnataka Weather Forecast
ಮಳೆ19 mins ago

Karnataka Weather : ಭಾರಿ ಗಾಳಿ, ಮಳೆಗೆ ಶೃಂಗೇರಿಯಲ್ಲಿ ವಿದ್ಯುತ್‌ ಕಡಿತ; ಶಿರಸಿಯಲ್ಲಿ ಉರುಳಿ ಬಿದ್ದ ಮರ

Prajwal Revanna Case
ಕರ್ನಾಟಕ25 mins ago

Prajwal Revanna Case: ಪ್ರೀತಂಗೌಡರ ಮತ್ತಿಬ್ಬರು ಆಪ್ತರ ಹೋಟೆಲ್‌, ಬಾರ್‌ ಮೇಲೆ ಎಸ್‌ಐಟಿ ದಾಳಿ

Warning For Android Users
ಗ್ಯಾಜೆಟ್ಸ್27 mins ago

Warning For Android Users: ಆಂಡ್ರಾಯ್ಡ್ ಬಳಕೆದಾರರಿಗೆ ಕಾದಿದೆ ಅಪಾಯ; ಸರ್ಕಾರದಿಂದ ಗಂಭೀರ ಎಚ್ಚರಿಕೆ

Dog Attack
ದೇಶ33 mins ago

Dog Attack : ಮನೆಯಲ್ಲಿ ಮಲಗಿಸಿದ್ದ ಐದು ತಿಂಗಳ ಮಗುವನ್ನು ಕಚ್ಚಿ ಕೊಂದ ಬೀದಿ ನಾಯಿ!

Fashion Trend
ಫ್ಯಾಷನ್35 mins ago

Fashion Trend: ಯುವತಿಯರನ್ನು ಸೆಳೆದಿರುವ 3 ಶೈಲಿಯ ವೈಟ್‌ ಪ್ಯಾಂಟ್‌ಗಳಿವು!

HSRP Number Plate Registration Deadline Near Will the government impose fines
ಬೆಂಗಳೂರು58 mins ago

HSRP Number Plate: ಬಂದೇ ಬಿಡ್ತು ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ನೋಂದಣಿ ಡೆಡ್‌ಲೈನ್‌! ಸರ್ಕಾರದಿಂದ ದಂಡಾಸ್ತ್ರ ಪ್ರಯೋಗ?

kodagu News Woman gives birth to baby in ambulance
ಕೊಡಗು1 hour ago

kodagu News : ಒಮ್ಮಿಂದೊಮ್ಮೆಗೇ ಜೋರಾಯಿತು ನೋವು; ಆಂಬ್ಯುಲೆನ್ಸ್‌ನಲ್ಲೇ ಹೆರಿಗೆ ಮಾಡಿಸಿದ ಸ್ಟಾಫ್‌ ನರ್ಸ್‌

IPL 2024
ಪ್ರಮುಖ ಸುದ್ದಿ1 hour ago

IPL 2024 : ನಾಯಕರಾಗಿ ನೀವೇನು ಮಾಡಿದ್ರಿ? ಪಾಂಡ್ಯನನ್ನು ಟೀಕಿಸಿದ್ದ ವಿಲಿಯರ್ಸ್​ಗೆ ತಿರುಗೇಟು ಕೊಟ್ಟ ಗಂಭೀರ್​

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

CM Siddaramaiah says Our government is stable for 5 years BJP will disintegrate
Lok Sabha Election 20242 hours ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20245 hours ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ6 hours ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು7 hours ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ14 hours ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ24 hours ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ24 hours ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

Prajwal Revanna Case Revanna bail plea to be heard Judge reprimands SIT cops for their behaviour
ಕ್ರೈಂ1 day ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ವಿಚಾರಣೆ; ಎಸ್‌ಐಟಿ ಪೊಲೀಸರ ವರ್ತನೆಗೆ ಜಡ್ಜ್‌ ಗರಂ!

Karnataka Weather Forecast
ಮಳೆ1 day ago

Karnataka Weather : ನಾಳೆ ಮುಕ್ಕಾಲು ಕರ್ನಾಟಕದಲ್ಲಿ ಬಿರುಗಾಳಿ ಜತೆಗೆ ವಿಪರೀತ ಮಳೆ

Modi Roadshow Live
ದೇಶ1 day ago

Modi Roadshow Live: ವಾರಾಣಸಿಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

ಟ್ರೆಂಡಿಂಗ್‌